ಒಟ್ಟು 7932 ಕಡೆಗಳಲ್ಲಿ , 127 ದಾಸರು , 4530 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಧ್ವೇಶಾರ್ಪಣ ಮಧ್ವೇಶಾರ್ಪಣ ಮಧ್ವೇಶಾರ್ಪಣಮಸ್ತುಶುದ್ಧ ಶ್ರುತಿ ಪದ್ಧತಿ ನಡೆಸುವೆ ಮಧ್ವೇಶಾರ್ಪಣಮಸ್ತು 1 ವಂದಿಸುವೆನು ಗೋವಿಂದನ ಚರಣಕೆ ಮಧ್ವೇಶಾರ್ಪಣಮಸ್ತುನಿಂದು ಕರಂಗಳ ವಂದಿಸಿ ಪ್ರಾರ್ಥನೆ ಮಧ್ವೇಶಾರ್ಪಣಮಸ್ತು 2 ಅಂಬುಜನಾಭನ ನಿತಂಬಿನಿ ಕಮಲಕೆ ಮಧ್ವೇಶಾರ್ಪಣ ಮತ್ತುಡಿಂಗರಿಗನು ನಾಜಗದಂಟೆಯ ಪ್ರಾರ್ಥನೆ ಮಧ್ವೇಶಾರ್ಪಣಮಸ್ತು 3 ಸಂಧ್ಯಾದೇವಿಗೆ ವಂದಿಸುತಿರುವೆನು ಮಧ್ವೇಶಾರ್ಪಣಮಸ್ತುಒಂದಿನ ಬಿಡದೆ ತ್ರಿಕಾಲದಿ ಮಧ್ವೇಶಾರ್ಪಣಮಸ್ತು 4 ಚಾಮರ ಹಾಕುವೆ ಶ್ರೀಮನೋಹರಗೆ ಮಧ್ವೇಶಾರ್ಪಣಮಸ್ತುಕೋಮಲ ಶಯನದಿ ಮಲಗಿಸುವೆನು ಮಧ್ವೇಶಾರ್ಪಣಮಸ್ತು 5 ಕೃಷ್ಣನ ಮಲಗಿಸಿ ತೊಟ್ಟಿಲ ತೂಗುವೆ ಮಧ್ವೇಶಾರ್ಪಣಮಸ್ತುಬಿಟ್ಟು ಅಭಿಮತ ಘಟ್ಟಿಸಿ ಪಾಡುವೆ ಮಧ್ವೇಶಾರ್ಪಣಮಸ್ತು 6 ಪರಿ ತೂಗುವೆ ಮಧ್ವೇಶಾರ್ಪಣಮಸ್ತುಗುರು ಪುಷ್ಕರ ಮುನಿ ಸುರದ್ವಾರದಿ ಮಧ್ವೇಶಾರ್ಪಣಮಸ್ತು 7 ಕರ್ಮವು ಸಿರಿಯಂದು ಹರಿಗರ್ಪಿಸುವೆ ಮಧ್ವೇಶಾರ್ಪಣಮಸ್ತುದಾಸರ ಚರಣಕೆ ಶಿರಬಾಗುವೆ ನಾ ಮಧ್ವೇಶಾರ್ಪಣಮಸ್ತು 8 ಕೃತಿ ಇಂದಿರೇಶಗರ್ಪಿಸುವೆ ಮಧ್ವೇಶಾರ್ಪಣಮಸ್ತು ಮಧ್ವೇಶಾರ್ಪಣ ಮಧ್ವೇಶಾರ್ಪಣ ಮಧ್ವೇಶಾರ್ಪಣಮಸ್ತು 9
--------------
ಇಂದಿರೇಶರು
ಮನ ಬಲಿಯದನಕ ಅನುಕೂಲಾಗದನುಭವ ಧ್ರುವ ಮನವೇ ಮರೆಯ ಮಾಡೇದೆ ನೆನವಿಗೆ ತಾಂ ತಂದು ತೋರದೆ ಹೆಣ್ಣ ಹೊನ್ನದಾಶೆ ಹಚ್ಚ್ಯಾದೆ ಘನತನಗರಸದೆ 1 ಹುಚ್ಚಮಾಡಿಬಿಟ್ಟದೆ ಎಚ್ಚರ ಎಡಿಯಗೊಡದೆ ಕಚ್ಚಿ ವಿಷಯಕೆ ಬಿದ್ದದೆ ಬೆಚ್ಚಿ ಬೆದರದೆ 2 ಮನಸಿಗೆ ಮನಸಿನಿಂದ ಅನುಭವವಾಗಬೇಕಾನಂದ ಘನ ಗುರುವಿನ ಕೃಪೆಯಿಂದ ಮನ ಬಲಿವುದು ಚೆಂದ 3 ಮನೋನ್ಮನವಾಗಿ ತಾ ಘನ ಬೆರೆದು ಸ್ವಹಿತ ಙÁ್ಞನಕಿದೇ ತಾ ಸನ್ಮತ ಮುನಿಜನರ ಸುಪಥ 4 ಮನಬಲಿದು ನೀ ನೋಡೋ ಘನಸುಖ ಮಹಿಪತಿಗೊಡೊ ಅನುಭವಾಮೃತ ಸೂರ್ಯಾಡೊ ಅನುಮಾನೀಡ್ಯಾಡೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನದಣಿ ನೋಡಿದೆನೊ ಸನಕಾದಿನಮಿತ ಮನದಣಿ ನೋಡಿದೆನು ದೃಢದಿ ಪ ನಿನಗೆ ಸರಿಯಿಲ್ಲ ಭುವನತ್ರಯದಿ ಮನಕೆ ಬೇಸರವಿಲ್ಲದನುದಿನ ತನುವನಪ್ಪಿಹಿಡಿದು ಭಕುತರ ಮನದ ವರಗಳನಡೆಸಿ ಸಲಹುವ ಕನಿಕರಾರ್ಣವ ವಿಠಲ ನಿನ್ನಡಿ ಅ.ಪ ಒಂದು ದಿನ ಆ ತ್ರೇತಾಯುಗದಲ್ಲಿ ಋಷಿಗಡಣ ಕೂಡಿ ಬಂದು ನಿಮ್ಮಯ ಚರಣಸನ್ನಿಧಿಲಿ ಭಯಭಕುತಿಯಿಂದ ವಂದಿಸಾಲಿಂಗನೆಯ ಕೋರುತಲಿ ಅಭಯ ಬೇಡುತಲಿ ನಿಂದ ಋಷಿಗಳಿಗ್ಹಲವು ಪರಿಯಲಿ ತಂದೆ ನೀ ಸಮ್ಮತವ ಪೇಳಿ ಬಂದು ದ್ವಾಪರಾಂತ್ಯಯುಗದಲಿ ಒಂದು ಅರಲವ ಅಗಲದಲೆ ನಿಮ್ಮ ಪೊಂದಿ ಆಲಿಂಗನವನೀಯುವೆ ನೆಂದು ವರವಿತ್ತ ವಿಠಲ ನಿಮ್ಮಡಿ 1 ಅಪಾರಮಹಿಮಜಾಲ ಅವತರಿತಿಸಿದಿ ದ್ವಾಪರಯುಗದಿ ಬಾಲಕೃಷ್ಣ ನೀನಾಗಿ ಶ್ರೀಪತಿ ಸುಜನಪಾಲ ದನುಜಕುಲಕಾಲ ಪಾಪಸಂಹಿತ ಅಮಿತಲೀಲ ಶಾಪಪರಿಹಾರ ವೇಣುಲೋಲ ತಾಪಸೋತ್ತಮರಿಷ್ಟ ನೀಡಲು ಗೋಪಿಕಾಸ್ತ್ರೀಯರೆನಿಸಿ ಪುಟ್ಟಿಸಿ ಗೌಪ್ಯದಾಲಿಂಗನವನಿತ್ತ ಭೂಪ ಭೂಪತಿ ವಿಠಲ ನಿಮ್ಮಡಿ 2 ಸುಗುಣ ಸಂತರಹೃದಯಸಂಚಾರ ದಾಸಾನುದಾಸರು ಪೊಗಳಿ ಭಜಿಸುವ ಗಾನಪ್ರಿಯಕರ ಮೌಲಕೌಸ್ತುಭ ಜಗದಜೀವನ ಪಾವನಾಕಾರ ಪರಮಸುಖಕರ ಅಗಣಿತಾಗಣಿತಮಹಿಮಭರಿತ ಪೊಗಳಲಳವೆ ನಿಮ್ಮ ಚರಿತ ತ್ರಿ ಜಗನಾಟಕ ಸುಲಭದಲಿ ನೀ ಅಗಲದನವರತಸಮ ಈ ಕಲಿ ಯುಗದಿ ಭಕ್ತರಿಗಾಲಿಂಗನೀಯುವ ನಿಗಮಗೋಚರ ವಿಠಲ ನಿನ್ನಡಿ 3 ಮಂದಹಾಸ ಮಂದರೋದ್ಧಾರ ಸುರಕಲ್ಪಧೇನು ಇಂದಿರೆಯರ ಪ್ರಾಣ ಮನೋಹರ ಹೇ ದೀನಬಂಧು ಸುಂದರಾಂಗ ಸುಗುಣಗುಣಹಾರ ಬಂಧನಿವಾರ ಸಿಂಧುಕಲಕಿದಪಾರ ಶೂರ ಕುಂದದೆ ಮೊರೆಕಾಯ್ದ ಸುರರ ಹೊಂದಿಭಜಿಸುವ ಭಕುತಜನಕಾ ನಂದ ನೀಡುತ ಚಂದನೋಡುತ ಸಿಂಧುನಿಲಯ ಮುಕ್ಕುಂದ ಮುರಹರಿ ಅಂದಮಾದ ವಿಠಲ ನಿಮ್ಮಡಿ 4 ಸುತ್ತಮುತ್ತ ಭಕ್ತರಾಲಯವು ಹಿಂಭಾಗದಲ್ಲಿ ಸತ್ಯಭಾಮ ರುಕ್ಮಿಣೀಕಾಂತನು ಮುಂಭಾಗದಲಿ ನಿತ್ಯನಿರ್ಮಲ ಚಂದ್ರಭಾಗಿನಿಯು ನಡುಮಧ್ಯ ರಂಗವು ಭಕ್ತಗೊಲಿದು ಭೂವೈಕುಂಠವ ಸತ್ಯವೆನಿಸಿ ಮೀರಿ ಮೆರೆವ ಭಕ್ತಜನರ ಕೈಯೆತ್ತಿ ಸಾರುವ ಪೃಥ್ವಿಗಧಿಕ ಮಹ ಪಂಢರಾಪುರ ಮುಕ್ತಿ ತವರೆಂಬ ಮಂದಿರದಲ್ಲಿ ಕರ್ತುಶ್ರೀರಾಮ ವಿಠಲ ನಿನ್ನಡಿ5
--------------
ರಾಮದಾಸರು
ಮನದಧಿಪ ಮಹದೇವ ಮೊರೆಯೆ ಕೇಳೊ ಪ ತಿಮಿರ ಸ್ಥಿತಿಯಲ್ಲಿ ಎದೆ ಒಡೆದು ನಿಂದಿಹೆನು ಅ.ಪ. ಮನಕರಣಗಳು ಎನ್ನ ತಮ್ಮ ಸೆರೆಯಲಿ ಇಟ್ಟು ಘನ ಯಾತನೆಯ ಪಡಿಸಿ ಮೂರ್ಛೆಗೊಳಿಸಿ ಕ್ಷಣ ಬಿಡದೆ ದಣಿಸುವುವು ಮೊರೆ ಇಡಲು ಮುಖವಿಲ್ಲ ಪ್ರಣಿತ ಪಾಲಕರಲ್ಲಿ ಸರಿ ಇಲ್ಲ ನಿನಗೆಂದು 1 ಪವಮಾನ ಪದಕಮಲ ಮಧು ಮತ್ತ ಮಹಭೃಂಗ ಹರಿದಾಸ ಶಿರೋರತ್ನ ಅಭಯದಾಯಿ ಶಿವತಮನೆ ನಿನ್ನಂಘ್ರಿ ರಜಲಕ್ಷ್ಮಿಯನ್ನು ಶಿರ ನಿತ್ಯ ಮಾಡೆನ್ನ ಕೃತಕೃತ್ಯ 2 ಗೌರೀಶ ಗುಣನಿಧಿಯೆ ಗುಪ್ತ ಮಂಗಳ ಮಹಿಮ ಶೌರಿ ಜಯೇಶವಿಠಲ ಧ್ಯಾನಲೋಲ ತಾರಕನೆ ಭವಸಿಂಧು ದಾಟಿಸುವ ಅಂಬಿಗನೆ ಕಾರುಣ್ಯಗರೆದೆನ್ನ ಹರಿಪಾದ ದಡಕೊಯ್ಯೊ 3
--------------
ಜಯೇಶವಿಠಲ
ಮನದೊಳಗಿರು ಹರಿಯೆ ಮೂರ್ಲೋಕ ದೊರೆಯೆ ಪ. ಮನೆದೊಳಿ(?)ಗಿರು ಬಹು ಜನರು ಪೇಳುವ ದೂರು ಎಣಿಸಲು ಶಕ್ತನಾರು ಮುಖಾಬ್ಜ ತೋರು ಅ.ಪ. ಮೂರ್ತಿ ನೀನು ಪ್ರಾಕೃತ ಗುಣಸರ್ಗದಿ ಬರುವುದೇನು ಸರ್ಗರಕ್ಷಣ ಪಾಪವರ್ಗವೆಲ್ಲವನು ನಿಸರ್ಗ ಮೀರದೆ ಮಾಳ್ಪ ದುರ್ಗಮದ್ಭುತಕರ್ಮ ದೀರ್ಘದರ್ಶಿ ಮುನಿವರ್ಗಕೊಲಿದು ನಿಜ ಮಾರ್ಗ ತೋರ್ಪ ಶ್ರೀ ಭಾರ್ಗವೀ ರಮಣಾ 1 ಜಲದೊಳಗಾಡಿದನು ಬೇರನು ಕಿತ್ತಿ ಖಳರನು ಸೀಳಿದನು ನೆಲನನಳೆದು ತಾಯಿ ತಲೆಯ ತರಿದು ನಿಜಲಲನೆಗೋಸುಗ ದೈತ್ಯ ಕುಲವ ಸಂಹರಿಸಿದ ಶಿಲೆಯನು ರಕ್ಷಿಸಿ ಕಳವಳಿಸಿದ ಕಪಿ ತಿಲಕನ ಸ್ನೇಹವ ಬಳಸಿದನೆಂಬುದು 2 ಬಾಗಿಲ ಮುಚ್ಚಿದರೆ ಗೋಡೆಯ ಹಾರಿ ಹೋಗಿ ಮನೆಯ ಒಳಗೆ ಬಾಗಿಲ ಮರೆಯಲಿ ಬಾಗಿನೋಡುತ ಮೆಲ್ಲಗಾಗಿ ಬೆಣ್ಣೆಯ ಮೆದ್ದು ಸಾಗಿ ಬರುತಲಿರೆ ನಾಗವೇಣಿಯರು ಹಿಡಿಯಲು ನೀವಿಯ ನೀಗಿ ಪುರುಷರನು ಕೂಗಿದನೆಂಬರು3 ತೊಟ್ಟಿಲೊಳಗೆ ಮಲಗಿ ನಿದ್ರೆಯಗೈವ ಪುಟ್ಟ ಶಿಶುಗಳನೆಲ್ಲ ತಟ್ಟಿ ಎಬ್ಬಿಸಿ ಕಣ್ಣಾಕಟ್ಟಿ ವಸ್ತ್ರದಿ ತಾನೆ ಚಿಟ್ಟನೆ ಚೀರಿ ಒ- ತ್ತಟ್ಟು ಎಲ್ಲರು ಕೂಡಿ ಕಟ್ಟಿದ ಕರುಗಳ ಬಿಟ್ಟ ಮೊಲೆಗೆ ಒಳ- ಗಿಟ್ಟ ಹಾಲು ಮೊಸರೊಟ್ಟಿಲಿ ಸವಿವುದೆ 4 ವಿದ್ಯೆಯ ಕಲಿಯೆಂದರೆ ಅಮ್ಮಯ್ಯ ಎನಗೆ ನಿದ್ದೆ ಬರುವುದೆಂಬುವಿ ಹೊದ್ದಿಸಿ ತಟ್ಟಿದರೆದ್ದು ಓಡುವಿ ಗೋಪೆರಿದ್ದ ಠಾವಿಗೆ ನಾನಾ ಬದ್ಧವನು ಸುರುವಿ ಸಿದ್ಧವಾಗಿ ಕಾದಿರೆ ಕೈಗೆ ಸಿಕ್ಕದೆ ಉದ್ಧವ ಗೃಹದೊಳು ಬೌದ್ಧನಂತಿರುವಿ 5 ಕುದುರೆಯ ಹತ್ತಿದರೆ ಯಾರಾದರೂ ಕದನವ ಮಾಡಲಿಹರೆ ಹೃದಯ ಮಂಟಪದಿ ನೀ ಸದರವಾಡುತಲಿರೆ ಮದನ ಜನನಿವರ ಮದಮತ್ಸರಗಳ ಒದೆದು ತೀವ್ರದಲಿ ಪದಯುಗ ಪಾಲಿಸುವುದಯ್ಯ ಗಿರೀಶ 6
--------------
ತುಪಾಕಿ ವೆಂಕಟರಮಣಾಚಾರ್ಯ
ಮನರಥದಿಂದಲಿ ಘನರಥಕೀಗಲೆ ಬೇಗನೆ ಬಾರೊ ಪ. ಶ್ರೀ ಶ್ರೀನಿವಾಸ ಶ್ರೀ ವೆಂಕಟೇಶ ದನುಜದಲ್ಲಣ ಬೇಗ ಬಾರೋ ಕೃಷ್ಣ ಅ.ಪ. ಮುತ್ತಿನ ತೋರಣ ಸುತ್ತು ಛತ್ತರಿಗೆಯು ಬೇಗನೆ ಬಾರೊ ಸಿರಿ ಸಹ ಬೇಗನೆ ಬಾರೊ ಉತ್ತಮ ಭಕ್ತರು ಎತ್ತಿ ಕೈ ಕರೆವರು ಬೇಗನೆ ಬಾರೊ ನಿತ್ಯ ಮಂಗಳ ನಿನ್ನ ಉತ್ತಮ ರೂಪವ ಚಿತ್ತದಿ ತೋರುತ ಸತ್ಯ ಸಂಕಲ್ಪನೆ 1 ಗಡಗಡ ನಡೆಯುವ ಘನರಥದಲಿ ನಿಂದು ಬೇಗನೆ ಬಾರೊ ಎಡಬಲದಲಿ ಶ್ರೀ ಭೂಮಿಯರೊಡಗೂಡಿ ಬೇಗನೆ ಬಾರೊ ಧಡಧಡ ನಡೆಯುತ ದೈತ್ಯದಲ್ಲಣನೆ ಬೇಗನೆ ಬಾರೊ ನುಡಿಸುವ ವಾದ್ಯಗಳ್ ಪಿಡಿದಿಹ ಚಾಮರ ಕಡೆಗಣ್ಣೊಳು ಭಕ್ತರನೀಕ್ಷಿಸುತಲಿ 2 ನಾರದ ತುಂಬುರ ನಾಟ್ಯವನಾಡ್ವರು ಬೇಗನೆ ಬಾರೊ ಬಾರಿ ಬಾರಿಗೆ ಭಕ್ತರು ನುತಿಗೈವರು ಬೇಗನೆ ಬಾರೊ ವಾರಿಜಾಸನ ವಂದ್ಯ ಶ್ರೀನಿವಾಸ ದೊರಿ ಬೇಗನೆ ಬಾರೊ ತೋರುತ ರೂಪವ ಬೀರುತ ಕರುಣವ ಮಾರಜನಕ ಅಪಾರ ಮಹಿಮನೆ 3 ವಂದಿಸಿ ಕರೆವರೊ ನಿಂದು ಭಕ್ತರೆಲ್ಲ ಬೇಗನೆ ಬಾರೊ ಇಂದಿರೆಯರಸನೆ ಮಂದರೋದ್ಧರ ಕೃಷ್ಣ ಬೇಗನೆ ಬಾರೊ ಇಂದು ಸ್ಥಿರವಾರ ಸ್ಥಿರವಾಗಿ ಸಲಹಲು ಬೇಗನೆ ಬಾರೊ ಹಿಂದೆ ಮುಂದೆ ಭಕ್ತ ಸಂದಣಿಯೊಳು ಗುರು ವೃಂದ ಬಿಂಬ ಮನ್ಮನ ಬಿಂಬನೆ ರಥಕೆ 4 ಅಪಾರ ಕರುಣದಿ ಭಕ್ತರ ಪೊರೆಯಲು ಬೇಗನೆ ಬಾರೊ ಶ್ರೀಪತಿ ಶೇಷಾಚಲನಿಲಯನೆ ಹರಿ ಬೇಗನೆ ಬಾರೊ ಗೋಪಾಲಕೃಷ್ಣವಿಠ್ಠಲನೆ ತ್ವರಿತದಿ ಬೇಗನೆ ಬಾರೊ ಭೂಪರೈವರ ಕಾಯ್ದ ಗೋಪಕುವರ ಕೃಷ್ಣ ಈ ಪರಿಯಿಂದಲಿ ಭಕ್ತರ ಪೊರೆಯಲು 5
--------------
ಅಂಬಾಬಾಯಿ
ಮನವ ಶೋಧಿಸದೆಲೆ ಡಂಭದಿ ದಿನದಿನದಲಿ ಕರ್ಮಮಾಡೆ ತನುವಿಗೆ ಬಲು ಕ್ಲೇಶವಲ್ಲದೆ ಅನುಕೂಲವೇನು ಪ ಕಾಮಕ್ರೋಧ ಲೋಭಮೋಹ ಮದ ಮತ್ಸರಗಳನು ಬಿಡದೆ ನಾಮಗಳನು ಬಳೆದು ಮರೆದರೆ ಶ್ರೀ ರಾಮನರಿಯನೆ 1 ಈಶ ಸೇವೆಗೆಂದು ಬಹಳ ಮೋಸದಿಂದ ಧನವ ಗಳಿಸಿ ಈಶನನ್ನು ಮರೆವ ನರನನು ಜಗದೀಶನರಿಯನೆ 2 ಪರಸತಿಯರ ಸರಸಗಳಿಗೆ ಜರಿದು ಮನವ ಮರುಳು ಮಾಡೆ ಸರಳತನದಿ ದಾನ ಮಾಡಲು ನರಹರಿಯು ಅರಿಯನೆ3 ಒಡಲು ಪೊರೆಯೆ ಸಡಗರದಲಿ ಮಡಿ ಮಡಿಯೆಂದು ನುಡಿವ ಮೂಢನ ಪೊಡವೀಶನರಿಯನೆ4 ಪನ್ನಗಾರಿವಾಹನ ಪ್ರಸನ್ನವದನ ಕೃಷ್ಣಮೂರ್ತಿಯ ಉನ್ನತ ಮಹಿಮೆಗಳನರಿತಗೆ ಇನ್ನೇನು ಬೇಕು 5
--------------
ವಿದ್ಯಾಪ್ರಸನ್ನತೀರ್ಥರು
ಮನವೆ ಪೇಳುವೆ ಪ ಅಂತರಂಗದಲಿ ಚಿಂತಿಪರಘಶುಲಧ್ವಾಂತ ದಿವಾಕರನಾ ಶ್ರೀವರನಾ ಅ.ಪ ಎಂತು ಸುಕೃತವೂ ಸಿರಿಕಾಂತನುಯನ್ನೊಳು ನಿಂತಿರುವನು ಎನುತ ಪರ್ವತ ಸಂತೋಷದಲಿರುವಂತೆ ತೋರುವದು ಸು- ಕಾಂತ ಶಿಖರದಿಂದ ಛಂದ 1 ವರಶಿಲೆಯೊಳಿರುವ ಹರಿಯ ಶೇವಿಸಲು ಹರುಷದಿ ಸುರನಿಕರ ಭಾಸುರ ತರುಲತೆರೂಪದಿ ಇರುತಿಹರೆನ್ನುತ ಮೆರೆವನು ಗಿರಿರಾಜಾ ಸುತೇಜಾ2 ಗಿರಿನಾಥಾ ತೋರುತ ಅರಳಿದ ಪೂವಿನ ಪರಿಮಳ ಬೀರುವ ಸುರಚಿರ ತರುವ್ರಾತಾ ಶೋಭಿತ3 ಪವನ ಶೇವಿತನು ಭುವನೋದರ ತಾ ದಿವಿಜರಿಂದ ಸಹಿತ ಸೇವಿತ ಅವನಿಧರನು ಮಾಧವನ ತೆರದಿ ತೋ ರು ವೆನೆಂಬುಗರ್ವಾದಿಂದಿರುವ 4 ಸಿದ್ಧಚಾರಣ ತಪೋವೃದ್ಧರಿದೇ ಸ್ಥಳ ಸಿದ್ಧಿದಾಯಕವೆಂದೂ ಬಂದೂ ಪದ್ಮಾಕ್ಷನ ಪದಪದ್ಮವ ಧ್ಯಾನಿಸು- ತಿದ್ದರು ಗುಹೆಗಳಲಿ ಪೂರ್ವದಲಿ5 ಮುನಿ ಮಾರ್ಕಾಂಡೇಯನು ಬಹುದಿನದಲಿ ಘನ ತಪವಾಚರಿಸಿ ಸೇವಿಸಿ ವನಜನಾಭನ ಪದವನಜ ಮಧುಪ ನೆಂ ದೆನಿಸುತಲಿರೆ ಗುಹದಿ ತಪೋನಿಧಿ6 ಗಿರಿಯ ಬಲದಿ ಅಹೋಬಲ ನರಸಿಂಹನ ದರ್ಶನವನು ಕೊಳುತ ನಿರುತ ಇರುತಿರಲೊಂದಿನ ಬರಲಾಷಾಢದ ಹರಿವಾಸರ ವೃತವಾ ಚರಿಸುವ 7 ದ್ವಾದಶಿ ಸಾಧನೆ ಬರಲು ಪ್ರತಿದಿನದಿ ಶ್ರೀದನ ದರ್ಶನದಾ ನೇಮದ ಸಾಧನೆ ವಿಷಯದಿ ಯೋಚಿಸುತಿರೆ ಹರಿ ಮೋದದಿ ಮುನಿಗೊಲಿದಾ ಸೂಚಿಸಿದಾ 8 ಅರುಣೋದಯದಲಿ ಸುರಗಂಗೆಯು ತಾ ವರ ಪುಷ್ಕರಣಿಯೊಳು ಬರುವಳು ತರುರೂಪದಿ ನಾ ಬರುವೆನು ಬಿಡದಿರು ಮರುದಿನದಾ ಚರಣೆ ಪಾರಣೆ9 ಎಂತು ಕರುಣವೊ ನಿರಂತರ ಭಜಿಪರ ಚಿಂತಿತ ಫಲವೀವ ಕೇಶವ ಇಂತು ಹರಿಯ ಗುಣ ಚಿಂತಿಸುತಿರಲು ನಿ ಶಾಂತದಿ ಸರೋವರದಿ ವೇಗದಿ10 ಭಾಗೀರಥಿ ಜಲದಾಗಮ ವೀಕ್ಷಿಸಿ ರಾಗದಿ ವಂದಿಸಿದ ತುತಿಸಿದ ಯೋಗಿವರನುತ ಸ್ನಾನವಮಾಡಿ ಬರುವಾಗಲೆ ಧ್ಯಾನಿಸಿದ ಹರಿಪದ11 ಆ ತರುವಾಯದಿ ಪಾರಿಜಾತ ತರು ವ್ರಾತವ ನೋಡಿದನು ವಂದಿಸಿದನು ಈತನೆ ನರಮೃಗನಾಥನೆನುತ ಮುನಿ ಪ್ರಾತ:ಪಾರಣವ ಮಾಡಿದ ಜವ12 ಮೀಸಲು ಮನದಲಿ ಶೇಷಶಯನಗಾ- ವಾಸಗಿರಿಯ ಸೇವಾ ಮಾಡುವ ಭೂಸುರ ಗಣದಭಿಲಾಷೆಗಳನು ಪೂರೈಸಿ ಪೊರೆವನೀತಾ ಪ್ರಖ್ಯಾತಾ 13 ಶ್ರೀಯುತ ಮಾರ್ಕಾಂಡೇಯರ ಚರಿತೆಯ ಗಾಯನ ಫಲವಿದನು ಪೇಳುವೆನು ಶ್ರೇಯಸ್ಸಾದನ ಕಾಯದಿ ಬಲದೀ- ಮಾನವ 14 ಸುರತರು ಕಾರ್ಪರ ಶಿರಿ ನರಸಿಂಹನೆ ಈತ ಎನ್ನುತ ನಿರುತ ಅನಂತನ ಗಿರಿಯ ಮಹಿಮೆಯನು ಸ್ಮರಿಸುವ ನರಧನ್ಯಾ ಸನ್ಮಾನ್ಯ 15
--------------
ಕಾರ್ಪರ ನರಹರಿದಾಸರು
ಮನವೆ ಮಾನ್ಯನ ಮನ್ನಿಸು ಶ್ರೀವ್ಯಾಸ ಮುನಿಗೆ ಒಲಿದಿಹ ವಾಯು ನಾ ಪ ಪ್ರತಿ ಸಂಚರ ಕಾಲದಿ ಅವಿಲೀನ ಮತಿಯುಳ್ಳ ದೇವನಿವನು ಸುತ ಜಯಾದೇವಿಗೀತ ತನ್ನ ಸರಿ ಚತುರಾಸ್ಯ ದೇಹದೊಳಿಹ 1 ಚತುರವಿಂಶತಿ ತತ್ವಕೆ ಅಭಿಮಾನಿ ಮತಿಯುಳ್ಳ ಸೂತ್ರನಾಮ ಹರಿರೂಪ ಮಿತಿ ಇಲ್ಲದಲೆ ಕಾಂಬನೊ 2 ಯತಿಯಾಗಿ ಬಂದು ಹರಿಯ ಕಾರ್ಯಗಳ ಕೃತಿಸಿ ತಾ ನಿಂದು ವ್ಯಾಸ ವ್ರತಿಯಿಂದ ಮಾಡಿಸಿದ ಈತಗೆ ಪತಿ ವಾಸುದೇವವಿಠಲ3
--------------
ವ್ಯಾಸತತ್ವಜ್ಞದಾಸರು
ಮನವೇ ಸುಮ್ಮನೆ ಇರಬೇಡ ಅರೆನಿಮಿಷವಾದರುಮನವೇ ಸುಮ್ಮನೆ ಇರಬೇಡಪ ಕನಸಿನಂತಿಹ ಸಂಸಾರವ ನೆಚ್ಚಿಘನತರ ಪಾಪಕೆ ಗುರಿಯಾಗಬೇಡ ಅ ರೊಕ್ಕದಾಸೆಯ ಬಿಡಬೇಕು ಸ್ತ್ರೀ ಮೋಹಕೆಸಿಕ್ಕದೆ ನಡಕೊಳಬೇಕುಅಕ್ಕರು ದೇಹದೊಳಿರದಿರಬೇಕುಶಕ್ತಿಯ ಮೀರಿ ಧರ್ಮವ ಮಾಡಬೇಕುಮುಕ್ಕಣ್ಣ ಹರನ ಪೂಜಿಸಬೇಕುಮುಕ್ತಿ ಮಾರ್ಗವ ಪಡಕೊಳಬೇಕು 1 ಸರ್ವನಿಸ್ಪøಹನಾಗಬೇಕು ಸಂಸಾರದಿಚರಿಸುತಲೂ ಇರಬೇಕುಗುರುಹಿರಿಯರ ಕಂಡು ನಡೆಯಲು ಬೇಕುಪರರ ನಿಂದಿಸಿ ನುಡಿಯದೆ ಇರಬೇಕುಬರೆ ಸುಖ ದುಃಖವು ಸಮಗಾಣಬೇಕುಇರುಳು ಹಗಲು ಶಿವ ಶಿವ ಎನ್ನಬೇಕು2 ತನ್ನ ತಾನೆ ತಿಳಿಯಬೇಕು ತೋರುವ ಲೋಕವನ್ನು ದೃಶ್ಯವೆಂದಿರಬೇಕುತನ್ನಂತೆ ಸಕಲರ ನೋಡಲು ಬೇಕುಮಾನ್ಯರ ಕಂಡರೆ ಮನ್ನಿಸಬೇಕುಅನ್ಯನಾದರು ಹಿತವನೆ ಮಾಡಬೇಕುಪ್ರಸನ್ನ ರಾಮೇಶನನೆನಹಿರಬೇಕು 3 ವಣಗಿದ ಕಂಭದೊಳೊಗೆದುಬಣಗು ದಾನವನ ಗೆಲಿದುಕುಣಿಕುಣಿದಾಡಿದೆಯಂತೆ ಯಾಕಯ್ಯ ಶ್ರೀಕೃಷ್ಣಸೆಣಸಿದ ರಾಕ್ಷಸನ ಗೆಲಿದುವಿನಯದೆ ಪ್ರಹ್ಲಾದಗೊಲಿದುಅಣಿಯರ ಲೋಕವ ಕಾಯ್ದೆ ಎಲೆಸತ್ಯಭಾಮೆ 4 ಬಲು ಚಂದವಾಯಿತಯ್ಯ ಲೋಕಾ-ವಳಿಯೊಳು ದೊಡ್ಡವನಯ್ಯಬಲಿಯ ಕೂಡೆ ದಾನವ ಬೇಡುವರೆ ಕೃಷ್ಣಬಲಿಯ ದಾನವನ್ನೇ ಬೇಡಿಇಳೆಯ ಮೂರಡಿಯ ಮಾಡಿಸಲಹಿದೆ ಸರ್ವಸುರರ ಎಲೆ ಸತ್ಯಭಾಮೆ 5 ಧರಣೀಪಾಲಕರ ಗೆಲಿದಗರ್ವವಿರಲಿ ಹೆತ್ತತಾಯಶಿರವನರಿದ ದುರುಳರುಂಟೆ ಹೇಳಯ್ಯ ಕೃಷ್ಣಗುರುವಚನವನ್ನು ಮೀರೆನರಕಲೋಕವೆಂದು ಕಾಯಶಿರವನರಿದು ಮರಳಿ ಪಡೆದ ಎಲೆ ಸತ್ಯಭಾಮೆ6 ಮೂರು ಲೋಕವರಿಯೆ ಸೀತಾನಾರಿಯ ಕಳೆದುಕೊಂಡುಊರೂರ ತಿರುಗಿದೆಯಂತೆ ಯಾಕಯ್ಯಾ ಕೃಷ್ಣನೀರೊಳು ಸೇತುವ ನಿಲಿಸಿವೀರ ರಾವಣನ ಜಯಿಸಿವಾರಿಜಾಕ್ಷಿಯ ತಂದೆನೆ ಎಲೆ ಸತ್ಯಭಾಮೆ 7 ದುರುಳ ಪರಮಹಂಸರಂತೆಕರದಿ ನೇಗಿಲ ಹಿಡಿದೆಶರಖಡ್ಗಗಳಿಲ್ಲವೇನೋ ಶ್ರೀಕೃಷ್ಣರಾಯಸುರರಿಪು ಪ್ರಲಂಬಾದಿಗಳಶಿರವನರಿದು ಜೈಸಿದಂಥಾಗುರುತಿನ ಆಯುಧ ಕಾಣೆ ಎಲೆ ಸತ್ಯಭಾಮೆ8 ಮಂದಿಯ ಮುಂದೆ ಬತ್ತಲೆನಿಂದು ಓಡಾಡಿದೆಯಂತೆಚಂದವಾಯ್ತು ನಿನ್ನ ನಡತೆ ಹೇಳೆಲೋ ಕೃಷ್ಣಹಿಂದೆ ತ್ರಿಪುರದ ನಾರೀವೃಂದವ ಮೋಹಿಸಿ ಸರ್ವವೃಂದಾರಕರ ಪೊರದೆ ಎಲೆ ಸತ್ಯಭಾಮೆ 9 ದೊರೆತನವು ನಿನ್ನದೆಂದುಧರಣೀದೇವತೆಯು ಬಂದುಮೊರೆಯಿಟ್ಟಳದೇಕೋ ಪೇಳೋ ಶ್ರೀಕೃಷ್ಣರಾಯತುರಗವನೇರಿ ಖಡ್ಗವಧರಿಸಿ ಯವನ ಸೈನ್ಯವನ್ನುಮುರಿದು ಧರೆಯ ಪೊರೆದೆ ಕಾಣೆ ಎಲೆ ಸತ್ಯಭಾಮೆ 10 ಇಂತು ಕೇಳ್ದ ಸತ್ಯಭಾಮಾಕಾಂತೆಯ ಮಾತಿಗೆ ಮೆಚ್ಚಿಕಾಂತೆಯರೊಳು ಕಟ್ಟಾಣಿ ಬಾರೆಂದು ಕರೆದುಕಂತುಜನಕ ಕೆಳದಿಪುರದಕಾಂತ ಗೋಪಾಲಕೃಷ್ಣನುಸಂತಸವ ಮಾಡಿದನಿನ್ನೆಂತು ಪೇಳ್ವೆನೆ11
--------------
ಕೆಳದಿ ವೆಂಕಣ್ಣ ಕವಿ
ಮನಸಿನ ಮಲಿನವ ಮನಸೀಜನೈಯನೆ ಹನನ ವೈದಿಸದಿರೆ ಬದುಕುವ ದೆಂತೊ ಪ ವನಜ ಸಂಭವ ಜನಕ ತನುಮನ ಪ್ರೇರಕ ಮಾನವ ನಾನು ಶರಣುಹೊಕ್ಕೆನೈಯ ಅ.ಪ ಸ್ನಾನ ಸಂಧ್ಯಾನುಷ್ಠಾನ ವೇನು ಗೈದವನಲ್ಲ ಹೀನ ಸ್ತ್ರೀಯರ ಧ್ಯಾನ ಘಳಿಗೆ ಬಿಟ್ಟವನಲ್ಲ ಧಾನ ಧರ್ಮಗಳೊಂದು ಮಾಡಿಕೊಂಡವನಲ್ಲ ಗಾನದಿಂದಲಿ ಹರಿನಾಮವಾದರು ಪಾಡಲಿಲ್ಲ ದೀನಜನಮಂದಾರ ಕರುಣೋದಾರ ಮಹಿಮನೆ ಮಾನಮತ್ತವಮಾನ ನಿನ್ನಾಧೀನ ವಲ್ಲವೆ ತನುಮನೇಂದ್ರಿಯ ನಾಥ ನಾಯಕ ನೀನೇ ಆಗಿರೆ ಎನ್ನ ದೇನಿದೆಬರಿದೆ ದೂರದೆ ಸಾನುರಾಗದಿ 1 ನೋಡಬಾರದ ನೋಟ ನೋಡಿ ಆಯಿತು ಜೀಯ ಮಾಡಬಾರದ ಬಯಕೆ ಮಾಡಿದ್ದಾಯಿತು ಸ್ವಾಮಿ ಕೂಡಬಾರದ ಕೂಟ ಕೂಡಿದ್ದಾಯಿತು ತಂದೆ ಈಡುಕಾಣೆನು ನನ್ನ ಕೇಡು ಕರ್ಮಕೆ ಇಂದು ಗಾಡಿಕಾರ ನಿಗೂಢ ಹೃದಯಗ ಬೇಡಿ ಕೊಂಬೆನು ಪ್ರೌಡ ಭಕ್ತರಗಾಢ ಪ್ರೇಮದಿ ಕೂಡಿಸುತ ತಿಳಿ ಗೇಡಿಯೆನಿಸದೆ ವೇದ ಸಮ್ಮತ ಗಾನ ಜೋಡಿಸಿ ಹಾಡಿ ಹಾಡಿಸೆ ಭಾಢ ಮಹಿಮೆ ವಿಶೇಷ ನಿನ್ನದು 2 ಮುಂದು ಮಾಡುತ ಹಿಂದೆ ಇಂದು ಕಂದನಲ್ಲವೆ ನಾನು ಎಂದೆಂದು ನಿನಗೆ ಇಂದಿರೇಶನೆ ನಿನ್ನಮೀರಿಕರ್ಮವಮಾಡೆ ಎಂದಿಗಾದರು ಸಾಧ್ಯವಾಹುದೆ ನನಗೆ ತಂದೆ ಜಯಮುನಿವಾಯು ಹೃದಯಗ ನಂದಮಯ ಶ್ರೀ ಕೃಷ್ಣವಿಠಲ ನಿಖಿಳ ವಿಶ್ವಕೆ ಕುಂದುಮಯ ಅಭಿಮಾನ ಮನಸಿಗೆ ತಂದಿಡದೆಯೆಂದೆಂದು ಸಲಹುತ ಕುಂದು ಗೈದವನೆಂದು ನುಡಿಯದೆ ಪಥ 3
--------------
ಕೃಷ್ಣವಿಠಲದಾಸರು
ಮನಸಿನನುತಾಪವನು _ ಪರಿಹರಿಸು _ ಹರಿಯೇ ಪ ವನಜ ನಾಭನು ನೀನೇ ಮನದ ಪ್ರೇರಕನಲ್ಲವೇ ಅ.ಪ. ಅನುದಿನದಿ ಧನವನಿತೆ _ ಎಂತೆಂಬ ಕಾನನದಿ ಮನಸು ಮಾಡೀ ಬಹಳ _ ಶ್ವಾನನಂದದಿ ತಿರಿದೇ ಕನಸಿಲಾದರು ನಿನ್ನ _ ಧ್ಯಾನವನು ಮಾಡದೆಲೆ ಮನುಜ ಪಶುವೆನಿಸಿದೆನು _ ದೀನವತ್ಸಲ ಸ್ವಾಮಿ 1 ಸಂಸಾರ ವೆಂಬುವುದು _ ಹಿಂಸೆರೂಪವೆಸಿದ್ಧ ಹಂಸರೂಪಿಯ ಮರೆತ _ ಸಂಶಯಾತತಜನಕೆ ಧ್ವಂಸ ಗೈಸಿ ವಿಷಯ _ ವಾಸನೆಯ ತರಣಿಯನು ಶೌರಿ _ ದಾಸನೆನ್ನನು ಮಾಡಿ2 ಜ್ಞಾನ ತಿರುಳನು ತಿಳುಹಿ _ ಧ್ಯಾನಬಗೆಯನು ಅರುಹಿ ಮಾನಾಭಿಮಾನವನು _ ನಿನಗೆ ಸಮರ್ಪಿಸಿ ಸು ಜ್ಞಾನಿಗಳ ಸಹ ಶ್ರೀ ಕೃಷ್ಣವಿಠಲನ ನಿತ್ಯ ಗಾನದಲಿ ಮೆಚ್ಚಿಸುವ ಭಾಗ್ಯ ಶೀಲನ ಮಾಡೀ 3
--------------
ಕೃಷ್ಣವಿಠಲದಾಸರು
ಮನಿ ಮನಿಗೆಲ್ಲಾ | ಸಂತರು ಲಕ್ಷ ಕೊಬ್ಬರಿಹರಲ್ಲಾ ಪ ಹಲವು ಗಿಡದಿ ಸಂಜೀವಿನಿ ಸಸಿಯಂತೆ | ಕೆಲವು ವಿರಕ್ತರಲಿ ರಸಕ್ರಿಯನಂತೆ 1 ಮೃಗತತಿಯಲಿ ಕೃಷ್ಣಾಮೃಗ ದೋರುವಂತೆ ಮುಗುದೆಯರಲಿ ಪತಿವೃತೆ ನಲಿವಂತೆ 2 ಗುರು ಮಹಿಪತಿಸುತ ಪ್ರಭು ಪದ ಕಂಡು ವಿರಳಾಗತಲಿಹನು ಸವಿ | ಸುಖನುಂಡು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನೆಗೆ ಬಾರೋ ಕೃಷ್ಣ ಬೇಗನೆ ಪ ವನಿತೆಯರಕೋ ಓಡಿ ಬರುತಿಹರು ಅ.ಪ. ಕೊಳಲಿನ ಧನಿ ಕೇಳಿ ಹೆಂ_ಗಳು ನಲಿದು ಮೋಹತಾಳಿಸುಳಿದು ನಿನ್ನೆತ್ತಿಕೊಳುತಲೊಯ್ವರುಗಲ್ಲವ ಚುಂಬಿಸಿ ನುಗ್ಗು ಮಾಡುವರೊ 1 ಘಾಸಿ ಮಾಡಿ 2 ಚೆನ್ನಿಗ ಹೇಳುವೆನು ಎಂದುಗುನಿನ್ನನು ಬಿಟ್ಟರೇನುಉನ್ನತ ಗದುಗಿನ ವೀರನಾರಾಯಣಚೆನ್ನಾಗಿ ದಢದಢ ಹೆಜ್ಜೆಯನಿಕ್ಕುತಾ 3
--------------
ವೀರನಾರಾಯಣ
ಮನೆಗೆ ಬಾರೋ ರಂಗ ಮನಸಿಜಯ್ಯನೆ ನೆನವು ಬಿಡದು ಎನ್ನ ಕಣ್ಣಿನೊಳಗೂ ನಿನ್ನ ಪ ಮನಗೆ ಬಾರೋ ರಂಗ ಮನೆಗೆ ಬಾರೋ ಕೃಷ್ಣ ಮನಗೆ ಬಾರೋ ರಾಮ ಅ.ಪ ಮನಗೆ ಬಂದರೆ ನಿನ್ನ ಮಹಿಮೆಯ ಪಾಡುತ ಮನ ದಣಿವಂದದಿ ಕುಣಿದೇನೊ ರಂಗಯ್ಯ 1 ಮನೆಯು ನಿನ್ನದು ಎನ್ನ ತನುವು ನಿನ್ನದು ಮುನ್ನ ಧನವು ನಿನ್ನದು ಎನ್ನ ಘನವು ನಿನ್ನದು ರನ್ನ 2 ದರಹತಿತಾನನ ಸರಸಿಜನಯನ ವರದವಿಠಲ ಪುಲಿಗಿರಿ ವರಸದನ 3
--------------
ವೆಂಕಟವರದಾರ್ಯರು