ಒಟ್ಟು 29700 ಕಡೆಗಳಲ್ಲಿ , 137 ದಾಸರು , 8961 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜರಿಯಬೇಡ ಹರಿಯ ಮರೆಯಬೇಡೆಂದೆಂದು |ತಿರಿಯಬೇಡ ಖಳರ ಮನೆಗೆ ಪೋಗಿ ||ಪ||ಒರೆಯಬೇಡನ್ಯರಿಗೆ ರಹಸ್ಯ ತತ್ವಗಳನು |ಬೆರೆಯಬೇಡ ಪರರ ಸತಿಯ ಸ್ವಪ್ನದಲೂ ||ಅ|| ||ಪ|| ಮೂಕವಾರ್ತೆಯ ನಿನ್ನ ಕಿವಿಗೆ ಕೇಳಿಸಬೇಡ |ಶ್ರೀಕಾಂತ ಚರಿತೆಯನು ಕೇಳದಿರಬೇಡ |ಪಾಕವನು ಮಾಡಿ ಏಕಾಂಗಿಯಾಗುಣಬೇಡ|ಭೂಕಾಂತರನುಸರಿಸಿ ಬೆಸಗೊಳ್ಳಬೇಡ || ಪಂಡಿತರು ಪಾಮರರು ಆರಿಗಾದರೂ ನಿನ್ನ |ಕಂಡವರಿಗೆಲ್ಲ ಕೌತುಕವು ತೋರಿದರೂ |ಹೆಂಡಿರು ಮಕ್ಕಳು ಅಳಿಯ ಸೋಸೆ ಮೊಮ್ಮಕ್ಕಳು |ಉಂಡುಟ್ಟು, ದ್ವಿಜರು ಸಹ ಗಂಡುಗಲಿಯಾದರೂ|| ಮಂದಮತಿಗಳ ಕೂಡೆ ಮಾತಾಡಲಿ ಬೇಡ |ನಿಂದಕರ ಕಣ್ಣೆತ್ತಿ ನೋಡಬೇಡ |ಇಂದಿರೆಯರಸ ಶ್ರೀ ವಿಜಯ ವಿಠಲರ ಚರಣ|ದ್ವಂದ್ವದಲಿ ಮಸ್ತಕವನಿಡದಿರಬೇಡ ||
--------------
ವಿಜಯದಾಸ
ಜಲಜಾಕ್ಷ ಯಾಚಿಸುವೆ ಚಲುವ ಚರಣ ತೋರೋ ಸುಲಭದಿ ಹಯವದನ ಪ [ಶಶಿಯೊಲಿರುವದರಿಧರ] ಅಕ್ಷ ಸುಬೋಧ ಪುಸ್ತಕಧರ ವಸುಮತಿ ರಮಣನೆ ನಿನ್ನ ಸಾಸಿರ ನಾಮದಲಿ ಸೋಸಿಲಿ ನಾ ಪ್ರಾರ್ಥಿಸುವೆ 1 ವರವಾದಿ ಜಯದ ವಿಮುಕ್ತಿ ಪ್ರದಾತ ಅನುದಿನ ನಿನ್ನ ಆರೆರಡು ಅ ಕ್ಷರದ ಮಂತ್ರವನೂ ಪ್ರೇಮದಿ ನಾ 2 ಮುಖದೊಳ್ ಸಕಲಾಗಮ ವಿದ್ಯಾ ಸುಘೋಷ ಮಾಡಿ ಆ ಕಮಲಜ ಭವಮುಖರಿಂದ ಅಮೃತದಲಿ [ಸ್ತುತಿಸಿಹ ಅಭಿಷಿಕ್ತನೆ] ನೀನೆನಿಸಿ ನರಹರೆ 3
--------------
ಪ್ರದ್ಯುಮ್ನತೀರ್ಥರು
ಜಲಧಿ | ನಿಮ್ಮ ಮೊರೆಹೊಕ್ಕವರ ಕಾಯ್ದು ಪೊರೆಯುವಿರಿ ದಯದಿ ಪ. ಅರಿಯರು ಜಗದೊಳಗೆ ನರರು ನಿವಿ್ಮೂ ಮಹಿಮೆ ಕರಕರೆಪಡುತಿಹರು ಭವದೊಳಗೆ ಪರಮ ನಮ್ರತೆಯಿಂದ ಚರಣಕೆರಗಲು ಬಂದು ಉರುತರದ ಕಾರುಣ್ಯದಿಂದ ಪೊರೆಯುವಿರಿ 1 ಇಲ್ಲವೊ ಆಸೆ ಆಡಂಬರದ ದ್ರೌವ್ಯದಲಿ ಎಲ್ಲೆಲ್ಲಿ ನೊಡಲು ತತ್ವಬೋಧೆ ಉಲ್ಲಾಸದಿಂದ ಸಜ್ಜನರಿಗರುಹುತ ಮೋದ ಎಲ್ಲೆ ಕಾಣಿಸದಂಥ ಆನಂದವೀವ ಗುರು 2 ತಂದೆ ಮುದ್ದುಮೋಹನವಿಠ್ಠಲನೆಂದೆಂಬ ಬಹು ಚಂದದ ಅಂಕಿತದಿ ಜಗದಿ ಉದಿಸಿ ಮಂದರಿಗೆ ಸುಜ್ಞಾನ ತಂದು ರಕ್ಷಿಸುವಂಥ ಒಂದೊಂದು ಮಹಿಮೆಗಳ ಪೇಳಲೆನ್ನೊಶವೆ 2 ಅನಾದಿಯಿಂದಲಿ ಹೀನ ದೆಸೆಯೊಳಗಿದ್ದು ನಾನಾ ಜನ್ಮದಿ ಬಂದು ಕರ್ಮದಲಿ ತೊಳಲಿ ದೀನತ್ವವೈದುವ ಮಾನವನ ಕರುಣಿಸಿ ಸಾನುರಾಗದಿ ಹರಿಯ ಪದಕೆ ಸೇರಿಸುವಂಥ 3 ಸೃಷ್ಟಿ ಸ್ಥಿತಿ ಲಯಗಳಿಗೆ ಕರ್ತ ಹರಿ ಎಂತೆಂದು ಶ್ರೇಷ್ಠ ಕನಿಷ್ಠದ ಅರ್ಥ ತತ್ವ ತಿಳಿಸಿ ಕಷ್ಟ ಬಿಡಿಸುವ ಜಗತ್ಕರ್ತ ಒಬ್ಬನೆ ಹರಿಯು ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನೆನುವ 5
--------------
ಅಂಬಾಬಾಯಿ
ಜಾಗರ ಮಾಡಿದೆನೇ ಪ ಜಾಗರ ಮಾಡಿದೆ ಸಾಗರನಿಲಯನ ನೀಗದಮಹಿಮೆ ಶಿವ ಯೋಗದಿ ತಿಳಿಸೆಂದು ಅ.ಪ ಲಕ್ಷಪತ್ರರ್ಪಿಸಿ ತ್ರಿಜಗದ್ರಕ್ಷ ನಿನಗೆ ನಮಿಸಿ ಲಕ್ಷದಿಂದ ಸತಿಗಕ್ಷಯವಿತ್ತ ಭಕ್ತ ಪಕ್ಷನ ನಾಮ ಎನ್ನ ಕುಕ್ಷಿಗೆ ನೀಡೆಂದು 1 ಮನವನು ಮಡಿಮಾಡಿ ಹರಹರ ನಿನಗೆ ನಾ ಎಡೆಮಾಡಿ ಮನಸಿಜಜನಕನ ಘನಸಚ್ಚರಿತೆಯನ್ನು ಕೊನೆಯ ನಾಲಗೆ ಮೇಲೆ ನೆನವು ಸ್ಥಾಪಿಸೆಂದು 2 ಪ್ರೇಮ ದೃಷ್ಟಿ ತೆರೆದು ಶಂಭು ಎನ್ನ ಕಾಮಿತಗಳ ಕಡಿದು ಭೂಮಿಗಧಿಕ ಮಮಸ್ವಾಮಿ ಶ್ರೀರಾಮನ ಕೋಮಲ ಪಾದವೆನ್ನ ಮಂಡೆಮೇಲ್ಹೊರಿಸೆಂದು 3
--------------
ರಾಮದಾಸರು
ಜಾಣ ನೀನಹುದೋ ಗುರುಮುಖ್ಯಪ್ರಾಣ ನೀನಹುದೊ ಪ ರಾಣಿ ಭಾರತೀ ರಮಣ ನಿನಗೆಣೆಕಾಣೆ ತ್ರಿಭುವನದೊಳಗೆ ಸರ್ವಪ್ರಾಣಿಗಳ ಹೃದಯದಲಿ ಮುಖ್ಯಪ್ರಾಣನೆಂದೆನಿಸಿದೆಯೊ ಧಿಟ್ಟ ಅ.ಪ ಧೀರ ನೀನಹುದೋ ವಾಯುಕುಮಾರ ನೀನಹುದೊಸಾರಿದವರ ಮನೋರಥಂಗಳಬಾರಿ ಬಾರಿಗೆ ಕೊಡುವೆನೆನುತಲಿಕ್ಷೀರನದಿ ತೀರದಲಿ ನೆಲೆಸಿಹಮಾರುತಾವತಾರ ಹನುಮ 1 ಧಿಟ್ಟ ನೀನಹುದೊ ಬೆಟ್ಟವ ತಂದಿಟ್ಟವ ನೀನಹುದೊರೆಟ್ಟೆ ಹಿಡಿದಕ್ಷಯ ಕುಮಾರನಕುಟ್ಟಿ ದೈತ್ಯರ ಕೆಡಹಿ ಬೇಗದಿಸುಟ್ಟು ಲಂಕೆಯ ಸೀತೆಗುಂಗುರಕೊಟ್ಟೆ ಜಗಜ್ಜಟ್ಟಿ ಹನುಮ2 ದುರಿತ ಮಾರ್ತಾಂಡ ನೀನಹುದೊಕುಂಡಲ ಕಿರಿಘಂಟೆ ಉಡಿಯಲಿಪೆಂಡೆ ನೂಪುರ ಕಾಲಲಂದಿಗೆತಂಡ ತಂಡದಿ ಕೃಷ್ಣನಂಘ್ರಿಪುಂಡರೀಕಕೆ ಕೈಯ ಮುಗಿದ 3
--------------
ವ್ಯಾಸರಾಯರು
ಜಾಣತನದ ಮಾತು ಏನು ಕೆಲಸವಯ್ಯ ಖೂನ ನೋಡಿ ಪ್ರಾಣನಾಯಕನ ತಿಳಿವುದೊಂದೆ ಜ್ಞಾನಾಭ್ಯಾಸ ಮಾಡಿ ಧ್ರುವ ಕರಿಮಣಿ ಒಂದಿಲ್ಲದೆ ಹೆಂಗಸಿಗೆ ಸರಮುತ್ತು ಯಾಕೆ ಸಾರ ಸಂಜೀವನಿಲ್ಲದೆ ನೂರು ಗಿಡಮೂಲಿಕೆ ಯಾಕೆ ನೆರೆ ಇಲ್ಲದೆ ಸಾಧುಸಜ್ಜನರು ಸರ್ವಬಳಗವ್ಯಾಕೆ ಪರಮ ತತ್ವಜ್ಞಾನ ಒಂದಿಲ್ಲದೆ ಸುರಿಯುವ ಮಾತಿನ್ಯಾಕೆ 1 ಪ್ರಾಣವಿಲ್ಲದ ಸುಂದರವಾದ ಶರೀರ್ಯಾಕೆ ಕಾಲ ಬದಕುವುವದ್ಯಾಕೆ ಸ್ವಾನುಭವದ ಸುಖ ನೆಲೆಯುಗೊಳ್ಳದೆ ಒಣ ಡಂಭವ್ಯಾಕೆ ತಾನಾಗಿಹ್ಯ ವಸ್ತು ದೊರಕಿಲ್ಲದೆ ನಾ ನೀನೆಂಬುದ್ಯಾಕೆ 2 ಶ್ರೀ ಹರಿಮಹಿಮೆಯ ಸೋಹ್ಯ ತಿಳಿಯದೆ ದೇಹ್ಯವ್ಯಾಕೆ ಗುಹ್ಯಗುರುತವಿಲ್ಲದೆ ಸಾಯಸಬಡುವದ್ಯಾಕೆ ಸಾಹ್ಯಮಾಡುವ ಸದ್ವಸ್ತು ನೋಡದ ಕಣ್ಣು ನೋಟವ್ಯಾಕೆ ಮಹಿಪತಿಸ್ವಾಮಿ ಸದ್ಗುರುಪಾದ ಕಾಣದ ಜನ್ಮವ್ಯಾಕೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಾಣರಾಯಗೆ ಇಟ್ಟ ಕಾಣಿಕೆಯನು ಕೊಟ್ಟು ಪ ಕಷ್ಟಗಳೆಲ್ಲವು ಬೆನ್ನಟ್ಟಿ ಬರುವಾಗ ಕಟ್ಟಿದ ಹರಕೆಗಳೆಲ್ಲವನು ಸಿಟ್ಟು ಮಾಡುವ ಸ್ವಾಮಿ ಇಟ್ಟುಕೊಂಡರೆ ಇನ್ನು ಮುಟ್ಟಿಸಿಕೊಡಬೇಕಲ್ಲಿ ತಿಮ್ಮಪ್ಪನಲ್ಲಿ 1 ಗಂಡ ಹೆಂಡತಿಯು ಮಕ್ಕಳು ಸಹವಾಗಿ ದಂಡು ಮಾಳ್ಪೆವು ತಾವು ಎನುತಲಿ ಉಂಡೆವು ಸ್ಥಿರವಾರ ಊಟವ ಏಕವ ಕಂಡು ಬಹರೆ ಹೋಗುವ ದಯವಾಗುವ 2 ಕಟ್ಟಿದ ಕಾಣಿಕೆ ಇಟ್ಟು ಚರಣದಲ್ಲಿ ಸಾಷ್ಟಾಂಗವು ಎರಗಿದರೆ ದೃಷ್ಟಿಯಿಂದಲೆ ನೋಡಿ ದಯಮಾಡಿ ಕಳುಹುವ ವರಾಹ ನಮ್ಮಪ್ಪ ತಿಮ್ಮಪ್ಪನು 3
--------------
ವರಹತಿಮ್ಮಪ್ಪ
ಜಾಣಿ ರಂಗಯ್ಯನ ಕಾಣದೆ ನಿಲ್ಲದು ಮನ ವಾಣಿ ರಮಣನ ಪಿತನ ವೇಣದಿ ಕರೆತಾರಮ್ಮ ಪ. ಜರಿಯ ಸುತನು ತಾನು ಜಗಳಕೆ ಬಾಹೋನೆಂದು ಕರೆಸಿದ ವಿಶ್ವಕರ್ಮನ ಕರೆಸಿದ ವಿಶ್ವಕರ್ಮನ ದ್ವಾರಕಾವಿಪುರನಿರ್ಮಿಸೆಂದ ಕ್ಷಣದಾಗೆ ಜಲದೊಳು1 ತಳಿರು ತೋರಣನಿವಹ ಮೇರುವಿಗೆ ಪೊನ್ನ ಕಳಸ ಮೇರುವಿಗೆ ಪೊನ್ನ ಕಳಸ ಕನ್ನಡಿ ಮನೋಹರವಾಗಿದ್ದು ಸಟಿಯಿಲ್ಲ2 ದ್ವಾರಕಾಪುರದ ಶೃಂಗಾರ ವರ್ಣಿಸಲು ಮೂರು ಕಣ್ಣವಗೆ ವಶವಲ್ಲಮೂರು ಕಣ್ಣವಗೆ ವಶವಲ್ಲ ನಾಲ್ಕು ಮುಖದವಗೆ ಬಲುಮಿಗಿಲು3 ಹದಿನಾರು ಸಾವಿರ ಚದುರೆಯರ ಮಂದಿರ ಮದನನಯ್ಯನ ಮನೆಮಧ್ಯಮದನನಯ್ಯನ ಮನೆಮಧ್ಯ ದ್ವಾರಕೆಅದ್ಬುತವಾಗಿ ಬೆಳಗಿದೆ 4 ಶಿಶುಪಾಲ ದಂತವಕ್ತ್ರ ಮೊದಲಾದ ಮಹಾಅಸುರರನ್ನೆಲ್ಲ ಅಳುಹಿದ ಅಸುರರನ್ನೆಲ್ಲ ಅಳಿದು ದ್ವಾರಕೆಯಲ್ಲಿನಸು ನಗುತಿದ್ದ ನರಹರಿ 5 ಸತ್ಯದಿ ರುಕ್ಮಿಣಿ ಸತ್ಯಭಾಮಾದೇವಿ ವಾರಿಜ ಮುಖಿ ಷಣ್ಮಹಿಷೇರಸಹಿತಾಗಿಷಣ್ಮಹಿಷೇರ ಸಹಿತಾಗಿಕಾರುಣ್ಯಸಿಂಧು ರಾಮೇಶ ಕುಳಿತಿದ್ದ 6 ಶ್ರೀ ರಮಾರಮಣನಾದ ಶ್ರೀ ಕೃಷ್ಣನ ಅರಮನೆಗೆಸುಭಧ್ರೆ ಮುಯ್ಯ ತರುತಾಳೆಸುಭಧ್ರೆ ಮುಯ್ಯ ತರುತಾಳೆÀಹಸ್ತಿನಾವತಿಯ ಭೂಸುರರೆಲ್ಲ ಬರತಾರೆ7
--------------
ಗಲಗಲಿಅವ್ವನವರು
ಜಾಣೆ ನಂಬಿದೆ ಇಸ್ಟೇಟರಾಣೀ ನೀನೊಲಿದೆನ್ನ ಪಾಣಿಯೊಳಗೆ ಬಂದು ಕಾಣಿಸಮ್ಮ ಪ ವಾಣಿ ಶ್ರೀಲಕುಮಿಶ ರುದ್ರಾಯಣಿಯರಿಗಿಂತ ಕ್ಷೋಣಿಯೊಳಗೆ ಬಹುಮಾನಿತೆ | ನೀನಮ್ಮ ಅ.ಪ ಜನಕನು ಗಳಿಸಿದ ಧನವೆಲ್ಲಾ ಕಳಕೊಂಡೆ ದನಕರ ಹೊಲಮನೆಯನು ಮಾರಿದೆ ಜನರೊಳಗಪಹಾಸ್ಯಗೊಳಗಾದೆ ಕೇಳಮ್ಮ ವನಿತೆ ಮಕ್ಕಳ ಕೈಲಿ ಕೊನೆಗೆ ಪರಟೆ ಕೊಟ್ಟೆ 1 ಉಣಲು ಅನ್ನವು ಕಾಣೆ | ಉಡಲು ವಸ್ತ್ರವು ಕಾಣೆ ಕಡುಕಷ್ಟ ಕಡಲೋಳು ಮುಳುಗಿದೆ ನೋಡಮ್ಮ ಪೊಡವಿಯೋಳ್ ನಿನ್ಹೊರತು ಕಡೆ ಹಾಯಿಸುವಂಥ ಕಾಣಿ ಕೈಪಿಡಿದು ರಕ್ಷಿಸೊ ರಕ್ಷಿಸೋ ನೀನಮ್ಮ 2 ಎಲ್ಲಾ ಹಾಳಾಯಿತು | ಸಾಲ ಬಹಳಾಯಿತು ಜೋಳಿಗೆ ಬಂದಿತು ಕೂಳಿಗೆ ಮನೆ ಮನೆ ಚಾಲುವರಿದೆನಮ್ಮಾ 3 ಹಾರಿ ಹೋಗುವದಮ್ಮಾ ಪಕ್ಕಾರಂಗು ಧಾರುಣೀಶರ ಮಧ್ಯ ತೋರೀದ ಸಮಯದಿ ಆ ರಾಣಿ ವರ್ಗವ ಥರ ಥರ ನಡುಗಿಸುವಿ 4 ಅಕ್ಕರದಲಿ ಎರಡೆಕ್ಕದೊಳು ಬಂದು ಪಕ್ಕನೆ ನೀ ಎನ್ನ ಕೈಯೊಳು ಬಾರೆ ಮುಕ್ಕಣ ಸಖ ತನ್ನ ಬೊಕ್ಕಸದೊಳಗಿನ ರೊಕ್ಕ ಹಾಕಲು ಅವನ ಲೆಕ್ಕಸೆ ನಮ್ಮ 5 ಕಾಮಿತ ದಾಯಿನಿ ಕಾಮಿನಿ ಶಿರೋಮಣಿ ಶಾಮಸುಂದರ ಸಾರ್ವಭೌಮನ ರಾಣಿ ಶ್ರೀಮಂತ ಜೋಕರನ ಪ್ರೇಮದ ಭಗಿನಿಯೆ ನಾ ಮೊರೆ ಹೊಕ್ಕೆನು ನೀ ದಯಮಾಡು ತಾಯೆ 6
--------------
ಶಾಮಸುಂದರ ವಿಠಲ
ಜಾತಿಭ್ರಷ್ಟ ಹೊಲೆಮಾದಿಗರಿವರಲ್ಲವೇನೋ ನೀತಿಬಾಹಿರರಾಗಿ ಆಚರಿಸುವವರು ಪ ಪನ್ನಂಗಶಯನ ಉನ್ನತ ಕತೆ ಕೀರ್ತ ನ್ಯನ್ನು ಕೇಳೆನೆ ಮುಖವನ್ನು ಹಿಂತಿರುವಿ ಭಿನ್ನ ಬೇಸರಿಲ್ಲದೆ ಅನ್ಯಜನ ಸುದ್ದಿಯೊಳು ಕುನ್ನಿಯಂದದಿ ದಿನಗಳನ್ನು ಕಳೆವವರು 1 ಆಲಯದ ಸತಿಯಳ ತಾಳದೆ ತುಸುತಪ್ಪು ತಾಳಿಯನ್ಹರಕೊಂಡು ದಾಳೀಯ ಹೊಡೆದು ಮೇಲುಜಾತಿಲಿ ಹುಟ್ಟಿ ಕೀಳು ಸೂಳೇರಿಗೊಲಿದು ಹೇಳಿದತೆರ ಕುಣಿದು ಬೀಳುಗಳೆವವರು 2 ಸದ್ಧರ್ಮಕಾರ್ಯಕ್ಕೆ ಇದ್ದುದ ಸಲ್ಲಿಸೆನಲು ಕದ್ದು ತಂದುಕೊಡುವೆವೆಂದಬದ್ಧ ನುಡಿಯುವವರು ಬದ್ಧ್ದ........ಬಂದು ಒದ್ದು ಕೂಡ್ರಿಸಲಾಗ ಸದ್ದಿಲ್ಲದೆ ತಂದು ಬೇಡಿದ್ದು ಕೊಡುವವರು 3 ಜ್ಞಾನಿಗಳು ಬಂದರೆ ಗೋಣೆತ್ತಿನೋಡದೆ ಹೀನಜನರಿಗೆ ಬಹುಮಾನ ಕೊಡುವವರು ಧ್ಯಾನ ದಾಸರ ತರದಿ ಜ್ಞಾನದ ಮಾತ್ಹೇಳಿ ಗೇಣ್ಹೊಟ್ಟಿಗೆ ಪರರ ಗೋಣು ಮುರಿವವರು 4 ತಾಸಿನ ಮೋಜೆಂಬ ನಾಶನ ಜಗಮಾಯ ಮೋಸನರಿಯದೆ ಯಮಪಾಶದೊಳು ಬಿದ್ದು ದಾಸಜನಪ್ರಿಯ ಜಗದೀಶ ಶ್ರೀರಾಮನ ಧ್ಯಾಸಮುರಿದು ದು:ಸ್ಸಹವಾಸದಿರುವವರು 5
--------------
ರಾಮದಾಸರು
ಜಾನಕಿಯು ನಮ್ಮಮ್ಮ ನಮಗೆ ಭಯವೇನು ಪ ಪವಮಾನ ತನಯನು ಪಾಲಿಪ ಗುರುವಯ್ಯಾ ಅ.ಪ ಕಾಲಕಾಲದಿ ತಪ್ಪದೆ | ಭತ್ಯವ ಹಾಕಿ ಬಾಲಲೀಲೆಗಳಾಡಿಸಿ ಮೇಲೆ ತುಡುಗಾಟವಾಡಿದರೆ ಕೆನ್ನೆಯ ಹಿಂಡಿ ಹಾಲ ಕುಡಿಸಿ ಮಕ್ಕಳರ್ಥಿಯ ನೋಡುವ 1 ಇತರ ಮಕ್ಕಳಿಗೆಲ್ಲಾ | ಅವರ ಮಾತಾ ಪಿತರು ವಡವೆಗಳಿಟ್ಟು ಮಿತಿಯಿಲ್ಲದೆ ಬೈದು ಬಲು ಚಿಂತೆಯ ಪಡುವರು 2 ಕಳ್ಳರಿಗೆ ಸಿಕ್ಕದೈಯ್ಯ | ನಮ್ಮೊಡವೆಗಳ್ ಕಳಚುವುದಕೆ ಬಾರದು ಒಳ್ಳೆ ವಸ್ತ್ರವ ಉಡಿಸಿ ಉಚಿತ ತಿಂಡಿಯ ಕೊಡಿಸಿ ಸುಳ್ಳಾಡದಂದದಿ ಸುತ್ತಿಸಿ ನಗುವರು 3 ಓದು ಬರಹವ ಕಲಿಸಿ | ನಮ್ಮನು ಕೆಲವು ಹೊತ್ತು ಆಟಗಳಾಡಿಸಿ ಆದರಿಸುತ ಜನ್ಮ ಜನ್ಮಗಳಲಿ ಬಿಡದೆ ಕಾದು ಕೊಂಡಿರುವರು ಕಡೆಗೂ ನಮ್ಮಗಲರು 4 ಇಂತಹ ನಮ್ಮವರ ಬಿಟ್ಟು | ಬರಿದೇ ಲೋಕ ಸಂತೆಯವರನು ನಂಬುವರೆ ಎಂತಾದರೂ ಗುರುರಾಮ ವಿಠಲನ ನಾಮ ಸ್ವಂತವಾದರೆ ಮುಕ್ತಿ ಸ್ವಾಧೀನವಾಗುವುದು5
--------------
ಗುರುರಾಮವಿಠಲ
ಜಾನಕೀರಮಣನೆ ಮಾನದಿ ಸಲಹೆನ್ನ ಪ ಮಾನಾಪಮಾನ ನಿಂದೋ ದೀನರ ಬಂಧೋ ಅ.ಪ ದಾಸದಾಸರ ದಾಸ ದಾಸನಾಗುವೆನೆಂದು ಬೇಡುವೆ ದಯಸಿಂಧೋ ನೀಡು ವರವ ಬಂಧೊ 1 ನಂದತೀರ್ಥರ ಮತ ಎಂದೊ ಎನಗೆ ಹಿತ ಪೊಂದಿಸಬೇಕೊ ಸೀತಾಪತಿಯೆ ಕೇಳೆಲೊದಾತ 2 ನಾಮಗಿರಿ ಲಕ್ಷ್ಮೀಸ್ವಾಮಿ ಶ್ರೀ ನರಹರೆ ಚರಣ ಕಮಲಯುಗ ಸ್ಮರಣೆ ಸ್ಥಿರಪಡಿಸೊ 3
--------------
ವಿದ್ಯಾರತ್ನಾಕರತೀರ್ಥರು
ಜಾಂಬುವತಿ ಪ್ರಿಯ ವಿಠಲ | ಅಂಬುಜದಳಾಕ್ಷ ಪ ನಂಬಿ ಬಂದಿಹನ ಮನ | ದಂಬಲವ ಸಲಿಸೋ ಅ.ಪ. ಲೌಕಿಕಾನೇಕದಲಿ | ಸಿಲ್ಕಿ ನೊಂದವನಾಗಿಏಕಾಮೇವಾದ್ವಿತೀಯ | ನೀನೇವೆಯಂಬಾವಾಕು ನುಡಿವಾ ಇವಗೆ | ಪ್ರಾಕ್ಕು ಕರ್ಮವ ಕಳೆದುತೋಕನ್ನ ಸಲಹೆಂದು | ಪ್ರಾರ್ಥಿಸುವೆ ಹರಿಯೇ 1 ನೀಚೋಚ್ಛ ಸುಜ್ಞಾನ | ದಾಸ್ಯಕಿದುವೇ ಮೂಲವಾಚಿಸೋ ಇವನಲ್ಲಿ | ಕೀಚಕಾರಿಪ್ರಿಯಾವಾಚಾಮಗೋಚರನೆ | ಖೇಚರೋತ್ತಮಸವ್ಯಸಾಚಿ ಸಖನೇ ಇವನ | ಕಾಪಾಡೊ ಹರಿಯೇ 2 ಸಂಗೀತ ಲೋಲ ಹರಿ | ಮಂಗಳಾಂಗನೆ ಸಾಧುಸಂಗವನು ಇವಗಿತ್ತು | ಕಾಪಾಡೊ ಹರಿಯೇಇಂಗಿತಜ್ಞನೆ ವಿಷಯ | ನಿಸ್ಸಂಗನೆಂದೆನಿಸಿಸಂಗೀತದಲಿ ತವ ಪ್ರ | ಸಂಗವಿತ್ತು ಕಾಯೋ 3 ಮೂರೆರಡು ಭೇದಗಳ | ತಾರತಮ್ಯ ಜ್ಞಾನವಾರವಾರಕೆ ತಿಳಿಸಿ | ಕಾಪಾಡೊ ಇವನಾಸೂರಿಜನ ಸಂಪ್ರೀಯ | ಸೂರಿಸಂಗವನಿತ್ತುಪಾರುಗೈ ಭವದ ಕೂ | ಪಾರ ಹರಿಯೇ 4 ಗರುಡವಾಹನ ಕೃಷ್ಣ | ಗರುವಗಳ ಪರಿಹರಿಸಿಸರ್ವಾಂತರಾತ್ಮಕನೆ | ಕಾಪಾಡೊ ಹರಿಯೇ |ನಿರವಧಿಕ ಗುಣ ಪೂರ್ಣ | ಸರ್ವೇಷ್ಟ ಪ್ರದನಾಗಿಪೊರೆಯ ಬೇಕಿವನ | ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಜಾಹ್ನವಿ ಜಗತ್ರಯ ಪಾವನಿ ಪ್ರಣತಕಾಮದೆ ಪದ್ಮಜಾಂಡ ಸಂಭೂತೆ ಪ ಸೃಷ್ಟೀಶ ಪದಜಾತೆ ವಿಶ್ವಮಂಗಳ ಮಹೋ ತ್ಕøಷ್ಟ ತೀರ್ಥಗಳೊಳುತ್ತಮಳೆನಿಸುವೇ ಕಷ್ಟವರ್ಜಿತವೆನಿಪ ತ್ರಿಪಥಗಾಮಿನಿ ದಯಾ ದೃಷ್ಟಿಯಿಂದಲಿ ನೋಡು ಪ್ರತಿದಿನದಿ ಎನ್ನಾ 1 ಕರ್ಮ ಸಾಕ್ಷಿಯೆನಿಸುತಿಹ ಅರ್ಕದೇವನು ಬಂದ ಸಮಯದಲ್ಲಿ ಶರ್ಕರಾಹ್ವರು ಸ್ನಾನಗೈಯೆ ದುರಿತಗಳು ಸಂ ಪರ್ಕವಾಗದ ತೆರದಿ ಸಂತೈಪೆ ದಯದಿ 2 ಕಾರುಣಿಕ ಬಹಿರಾವರಣದಿಂದ ನೀ ಪೊರಟು ವಾರಾಹಿಯೊಡಗೂಡಿ ಭಕ್ತಜನರ ಪ್ರಾರಬ್ಧ ಕರ್ಮಗಳನುಣಿಸಿ ಮುಕ್ತರನ ಮಾಳ್ಪೆ ದೂರಗೈಸುವೆ ಸಂಚಿತಾಗಾಮಿಗಳನೂ 3 ನಂದಿನೀ ನಳಿನಿ ಸುಸೀತಾ ಮಲಾಪಹರ ಳೆಂದ ಮಾತ್ರದಿ ಪುನೀತರನು ಮಾಳ್ಪೆ ಸಂದರುಶನ ಸ್ವರುಶನ ಸ್ನಾನಗಳ ಫಲ ಪು ರಂದರಾರ್ಯರೆ ಬಲ್ಲರಲ್ಪರು ಅರಿಯರು 4 ಮಾತೆ ವಿಜ್ಞಾಪಿಸುವೆ ಬಿನ್ನಪವ ಕೇಳು ಸಂ ಪ್ರೀತಿಯಿಂದಲಿ ಕರುಣಿಸೆನಗೆ ಇದನೆ ಶ್ರೋತವ್ಯ ವಕ್ತವ್ಯ ಮಂತವ್ಯ ಸ್ತವ್ಯ | ಜಗ ನ್ನಾಥ ವಿಠ್ಠಲನೊಬ್ಬನೆಂದು ತಿಳಿವಂತೇ5
--------------
ಜಗನ್ನಾಥದಾಸರು
ಜಾಹ್ನವಿ ಜನಕ ಮೂಜಗತ್ಪತಿ ಸುರಕುಲ ಸನಕಾ ದೀಜನ ಮನೋಹರ ಮಾಣಿಕ್ಯ ಕನಕಾ ವೈಜಯಂತಿ ಹಾರ ಪಾವನ್ನ ಪದಕ ಪ ಕೇಶಿಭಂಜನ ವ್ಯೋಮಕೇಶ ವಂದಿತ ಪಾದ ಕ್ಲೇಶನಾಶನ ವಾತೇಶನ ಜನಕ ಕೇಶರಿರುಹ ಮುಂಜಿಕೇಶನೆ ಕುಂಕುಮ ಶೌರಿ 1 ವಾರುಣಿ ಪತಿನುತ ವಾರುಣನ ಭಯ ನಿ ವಾರಣಾ ವಾರಣಾಶಿ ಪುರದರಸೆ ವಾರಣ ನಗರಿಯ ವಾರನಹತಪಲ್ಲ ವಾರುಣಿ ಪಾಣಿಯೆ ನಾರಾಯಣನೆ ಜೋ ಜೋ 2 ಮಾದೇವಿ ರಮಣ ಭೂಮಿದೇವಿ ಉದ್ಧಾರ ಮಾಧುರ್ಯ ವಚನ ಉಮಾದೇವಿ ವಿನುತಾ ಮಾಧಾರ ಮಹಶೂರ ಮತ್ಕುಲನೆ ಪ್ರೇ ಮಾಧವ ರಾಯಾ 3 ಗೋವಳಿ ಪರಿಪಾಲ ಗೋವಳೇರಾ ಪ್ರಿಯಾ ಗೋವುಗಳ ಕಾಯಿದ ಗೋವಳರಾಯಾ ವಿಪ್ರ ಸಂರಕ್ಷ ಗೋವಿದಾಂಪತಿ ರಂಗ ಗೋವಿಂದ ನಂದ 4 ಮಧುಕೈಟಭಾಸುರ ಮದಗರ್ವ ಮರ್ದನ ನಿತ್ಯ ಮಧುರನ್ನ ಪಾನಾ ಮಧುರಾಪುರ ಪಾಲ ಮದಗಜ ಹರಣಾ ಶಾ ಮದವರ್ಣ ಶರೀರ ಮಧುಸೂದನನೆ 5 ಇಷ್ಟಭಕ್ತರ ಕುಲ ಇಷ್ಟದೈವವೆ ಸರ್ವ ಇಷ್ಟಾರ್ಥ ಕೊಡುವ ಬಲಿಷ್ಟನು ನಿನ್ನ ಇಷ್ಟ ಅಷ್ಟಯೆಂದು ತಿಳಿಯಲಿ ವಶವಲ್ಲ ವಿಷ್ಣು ಸರ್ವೋತ್ತಮ ವಿಶ್ವನಾಟಕನೆ6 ಅಕ್ರಮದಲಿ ಸ್ವರ್ಗ ಆಕ್ರಮಿಸಿ ಬಲಿ ವಿಕ್ರಮನಾಗಿ ಕಾಲಕ್ರಮಣಿ ಮಾಡೆ ಶಕ್ರಮರ್ಚಿಸೆ ಅನುಕ್ರಮನಾಗಿ ಪ ರಾಕ್ರಮದಲಿ ಬೆಳದೆ ತ್ರಿವಿಕ್ರಮನೆ 7 ವಾಮಲೋಚನೆಯರ ವಾಮನ ಕೆಡಿಸಿದೆ ವಾಮನವಾಶಿಷ್ಟವಾ ಮುನಿವಂದ್ಯ ವಾಮನದಲಿ ದಾನವಾಮನ್ಯಗಳರನ್ನು ಅ ವಮಾನ ಮಾಡಿದೆ ಸಿರಿವಾಮನನೆ 8 ಶ್ರೀಧರ ರಮಣನೆ ಶೃಂಗಾರ ವಾರಿಧಿ ಶ್ರೀಧನ ಸಂಪತ್ತಾಶ್ರಿತ ಜನರಿಗೆ ಶ್ರೀಧೇನು ನೀನಯ್ಯಾ ಶ್ರೀ ಕರುಣಾಕರ ಶ್ರೀದೇವಿ ಉರಭೂಷಾ ಶ್ರೀಧರನಂತಾ 9 ಋಷಿಕೇಶನ ತಾತ ಋಷಿಜನ ಸಂಪ್ರೀತ ಋಷಿಕುಲೋದ್ಭವ ಪುರುಷ ರಾಮ ಮಹಾ ಋಷಿನಾಮಧೇಯನೆ ಋಷಿಪತ್ನಿ ಪಾಲನೆ ಋಷಿಗಳ ಒಡೆಯನೆ ಹೃಷಿಕೇಶ ದೇವ 10 ಪದುಮಜಾಂಡದಲ್ಲಿ ಪದುಮೆ ಮಾತನು ಕೇಳಿ ಪದುಮನಾಭಿಯಲ್ಲಿ ಪದುಮಜನ ಪೆತ್ತ ಪದುಮಾಸ್ಯ ಪದುಮಾಕ್ಷ ಪದುಮಕರನೆ ಪಾದ ಪದುಮ ಮಿಗಲು ಕಾಂತಿ ಪದುಮನಾಭನೆ11 ಧಾಮನಿಧಿಕುಲನು ಧಾಮನೆ ನಿರುತ ತ್ರಿ ಧಾಮನಿವಾಸ ಸುಧಾಮನ ಮಿತ್ರ ಧಾಮ ಪುಣ್ಯಧಾಮ ಭಕ್ತ ಹೃದ್ವನಜ ಧಾಮ ಮಧುಕರನೆ ದಾಮೋದರ ಧರ್ಮಾ 12 ಶಂಖ ಸುರಾಹರಾ ನಿಃಶಂಕ ಚರಿತ ಶಂಖಪಾಣಿ ಶಶಾಂಕ ಸುವದನ ಸಂಖ್ಯೆಯಿಲ್ಲದೆ ತಾಯಿ ಸಂಕಲೆ ಹರಿಗಡಿದೆ ಸಂಕರುಷಣನುವುಜ ಸಂಕರುಷಣನೆ 13 ಪ್ರಧಾನ ಮೂರುತಿ ಪ್ರದ್ವೀಪ ವರ್ಣ ಸುಪ್ರದಾಯಕನೆ ಪ್ರದೇಶ ಪರಿಮಾಣ ವರಪ್ರದ ಸಿದ್ಧನೆ ಪ್ರದ್ಯುಕ್ತ ಅವ್ಯಕ್ತ ಪ್ರದ್ಯುಮ್ನ ವಿಶ್ವ14 ವಾಸುವಾನುಜ ಶ್ರೀನಿವಾಸ ಪುಂಡ್ರೀಕ ವಾಸುದೇವನ ಶಮನಪುರದಲ್ಲಿ ವಾಸಮಾಡಿಸಿದಯ್ಯಾ ವಾಸವಾರ್ಚಿತ ಶ್ರೀ ವಾಸುದೇವ 15 ಅನುಗಾಲವು ನಿನ್ನ ಅನುಸರಿಸಿದೆ ನಾನು ಅನುಕೂಲವಾಗಿ ಎನ್ನನು ಸಾಕುವುದು ಅನುಮಾನವ್ಯಾತಕೆ ಅನಿಮಿತ್ತ ಬಂಧು ಅನಿರುದ್ಧ ಶ್ರೀಶಾ 16 ಪುರುಷ ಪುರುಷ ಶ್ರೇಷ್ಠ ಪುರುಷಾರ್ಥ ಕಾರಣ ಪುರುಷೇಶ್ವರ ತತ್ಪುರುಷಾದಿ ಪುರುಷ ಪುರುಷ ಬೀಜ ವೇದ ಪುರುಷ ಪರಮ ಪುರುಷ ಪುರುಷರು ಮೋಹಿಸುವ ಪುರುಷೋತ್ತಮನೆ 17 ಅಕ್ಷಯ ಬಲ ಸಹಸ್ರಾಕ್ಷ ರಕ್ಷಕ ಅಕ್ಷರಪರ ಬ್ರಹ್ಮ ಗೀರ್ವಾಣಧ್ಯಕ್ಷ ಅಕ್ಷಯ ಪಾತ್ರಿಯ ಶಾಖಾದಳವನ್ನು ಅಕ್ಷಯ ಮಾಡಿದಧೋಕ್ಷಜ ಚಕ್ರಿ 18 ನರಸಖ ನರಹರಿ ನಾರಾಯಣ ವಾ ನರ ದಳನಾಯಕ ನಾರದ ವಿನುತ ನರಕ ಉದ್ಧಾರಕ ನರಕಾಂತಕ ಕಿ ನ್ನರ ಸುರನರೋರಗ ವೃಂದ ನರಸಿಂಹ 19 ಸಚ್ಚಿದಾನಂದಾತ್ಮ ಸಚಲ ವಿಗ್ರಹನೆ ಸಚ್ಚರಾಚರದೊಳೂ ಗುಣಪರಿಪೂರ್ಣ ಸಚ್ಛಾಸ್ತ್ರದಲಿ ನಿನ್ನ ಸಾಮರ್ಥಿ ಪರಿಪೂರ್ತಿ ಸಚ್ಚೂತ ಚುತಿ ದೂರ ಚಿನ್ಮಯ ರೂಪಾ 20 ಜನನ ಮರಣ ನಾಶ ಜನನಾದಿಕರ್ತಾಂ ಜನಸುತಗತಿ ಪ್ರೇಮಾಂಜನ ಗಿರಿಧಾಮ ಜನಕವರದ ಸಜ್ಜನರಘದಹನ ದು ರ್ಜನರ ಕುಲರಾತಿ ಜನಾರ್ದನನೆ 21 ವೀಂದ್ರವಾಹನ ಮಹೇಂದ್ರಧಾರನೆ ಗ ಜೇಂದ್ರನ್ನ ಬಿಡಿಸಿ ನಕ್ಷೇಂದ್ರನ ಸೀಳಿ ನಾ ಗೇಂದ್ರ ಶಯನ ಗುಣಸಾಂದ್ರ ಗೋಕುಲ ಚಂದ್ರ ಇಂದ್ರಮಣಿ ನಿಭ ರಾಮಚಂದ್ರ ಉಪೇಂದ್ರಾ 22 ಹರಿ ಎನುತಾ ಹರಿ ಹರಿದು ಓಡಿ ಬರೆ ಹರಿದು ಪೋಗಿ ಪರಿಹರಿಸಿದ ಖಳನ ಹರಿ ಹರಿಯು ನಲಿವನೆ ಹರಿರೂಪ ಪರಿ ಹರಿನಾಮವೆ ಗತಿ ಹರಿ ಸರ್ವೋತ್ತಮಾ23 ಕೃಷ್ಣದ್ವಯಪಾಯನ ಉತ್ಕøಷ್ಟ ಮುನೇಶ ಕೃಷ್ಟಿಗೆ ಬಂದ ಕಷ್ಟ ಓಡಿಸಿದೆ ಕೃಷ್ಣವತ್ರ್ಮನೆ ಸಂತುಷ್ಟೀಲಿ ಸುಖಬಡುವ ಕೃಷ್ಣಾವತಾರ ಕೃಷ್ಣ ಕಮಲೇಶ 24 ನಿನ್ನ ಮಹಿಮೆಯನ್ನು ಬಣ್ಣಿಸಲಳವಿಲ್ಲ ನಿನ್ನೊಳಗೆ ನೀನು ಬೀಯ ಬೀಜವನು ಎನ್ನ ಪಾಲಿಸುವುದು ವಿಜಯವಿಠ್ಠಲ ಪ್ರಸನ್ನ ಭಕ್ತರ ವರದ ಬಾಲ ಗೋಪಾಲ ಜೋ ಜೋ 25
--------------
ವಿಜಯದಾಸ