ಒಟ್ಟು 6126 ಕಡೆಗಳಲ್ಲಿ , 131 ದಾಸರು , 3704 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೆಂಕಟೇಶ ನಿನ್ನ ನಂಬಿದೆ ಎನ್ನ ಸಂಕಟವನು ಪರಿಹರಿಸಯ್ಯ ನೀನು ಪ ಒಡಲೆಂಬ ಕಡಲೆಡೆಗೊಂಡಿಹ ಹಡಗು ಕಡೆಯ ಕಾಣ ಬಹು ಜಡದಿಂದ ಗುಡುಗು ಜಡಿಯುತ್ತ ಬರುತಿಹ ಮಳೆ ಮುಂದೆ ತೊಡಗು ದಡವ ಸೇರಿಸೊ ಎನ್ನ ಒಡೆಯ ನೀ ಕಡೆಗು 1 ಅಣುರೇಣು ತೃಣಕಾಷ್ಠದೊಳಗಿದ್ದು ನೀನು ಕ್ಷಣ ಕ್ಷಣ ಆರೈವ ಗುಣ ನಿನ್ನದೇನು ಪ್ರಣವ ರೂಪನೇ ನಿನ್ನ ಚರಣಕ್ಕೆ ನಾನು ಮಣಿವೆನು ಮನ್ನಿಸು ವರ ಕಾಮಧೇನು 2 ನಾರಾಯಣ ನರಹರಿ ಜಗನ್ನಾಥ ದಾರಿದ್ರ್ಯ ದುಃಖ ನಿರ್ಮುಕ್ತ ನೀ ತಾತ ಸಾರಿದವರ ಸಂಸಾರದ ದಾತ ಮಾರಿದ ಮನವಕೊಂಬರೆ ನೀನೆ ಪ್ರೀತ 3 ಉತ್ತಮವಾದ ಶ್ರೀಶೈಲ ನಿವಾಸ ಭಕ್ತರ ಸಲಹುವ ಬಿರುದುಳ್ಳ ಈಶ ಚಿತ್ತವು ತಿಳಿದೆನ್ನ ಕಾಯೊ ಸರ್ವೇಶ ನಿತ್ಯ ಮಂಗಲವೀವ ವಸ್ತು ಲಕ್ಷ್ಮೀಶ 4 ವರಾಹತಿಮ್ಮಪ್ಪನು ಒಲಿದೆನ್ನ ಕರೆದು ಆರಿದ ಬÁಯೊಳು ಅಮೃತವನೆರೆದು ದೂರವಾಗದೆ ಅಡಿಗಡಿಗೆನ್ನ ಹೊರೆದು ಏರುಗಂಡಪರಾಧ ಎಲ್ಲವ ಮರೆದು 5
--------------
ವರಹತಿಮ್ಮಪ್ಪ
ವೆಂಕಟೇಶನೆ ಶ್ರೀ ವೆಂಕಟೇಶನೆ ಪ. ಶಂಖ ಚಕ್ರಗಳನೆ ಪಿಡಿದುಬಿಂಕದಿಂದ ಮೆರೆಯುತಿರುವ ಅ.ಪ. ಮೀನನಾಗಿ ಬಂದು ಘೋರ ದಾನವನೆ ಕೊಂದುಯನ್ನೇ ಎತ್ತಿದಂಥ ಜಾಣ ಕೂರ್ಮಾವತಾರ1 ಧರಣಿದೇವಿಯನ್ನು ಕದ್ದ ಹಿರಣ್ಯಾಕ್ಷನೆ ತರಿದುಕರುಳಮಾಲೆಯನ್ನೆ ಧರಿಸಿ ವರ ಪ್ರಹ್ಲಾದನ ಕಾಯ್ದ 2 ಬಲಿಯ ದಾನವನ್ನೆ ಬೇಡಿ ನೆಲವ ಮೂರಡಿ ಮಾಡಿಛಲದಿ ಕ್ಷತ್ರಿಯನಳಿದ ಚಲುವ ಪರಶುರಾಮ3 ಹತ್ತುರಥನ ತನಯನೆನಿಸಿ ಹತ್ತುಶಿರನ ಸಂಹರಿಸಿಮತ್ತೆ ಕಂಸಾದಿ ಖಳರ ಹತ್ಯಮಾಡಿದಂಥ ಶ್ರೀ 4 ಚಾರು ಬುದ್ಧರೂಪವಾಗಿ ನಾರಿಯರ ವ್ರತವ ಕೆಡಿಸಿತುರಗವೇರಿ ಚರಿಪ ತಂದೆವರದವಿಠಲ ಕಲ್ಕಿ 5
--------------
ಸಿರಿಗುರುತಂದೆವರದವಿಠಲರು
ವೆಂಕಟೇಶಾಯ ನಮೊ ವಿಜಯವಿಠ್ಠಲನೆ ನಮೊ | ಪಶುಪತಿ ಗುರು ನಮಿತ ಪಾದಾ | ಪಂಕಜವ ಪೊಗುಳವೆನು ಪರಿಪಾಲಿಸೆನ್ನ | ಕಿಂಕರನ ಕಿಂಕರರಿಗೆ ಕಿಂಕರನೆಂದೆನಿಸೊ ಪ ಕಾರ್ಯವಾಕಾರ್ಯವನು ತಿಳಿಯಲೊಲ್ಲದ ಕಾಮಾ | ತೂರ್ಯದಲಿ ಪಾಪಗಳೆ ರಚಿಸಿ | ಬೆಂಬಿಡದದೆ ಬಲು | ಧೈರ್ಯವಂತನು ನೀನಾಗಿ | ಧೈರ್ಯವಾಗಿದ್ದಾಗ ಜಡಜೀವ ಜಂತುಗಳು | ವೀರ್ಯದಲಿ ಪೊಕ್ಕು ದುಃಖಾತಿಶಯದಲಿ | ದುರ್ಯೋನಿ ಮುಖದಿಂದ ಜನನ ಜನಿತನಾದೆ | ಮರ್ಯಾದೆಗಳು ಇಲ್ಲದೆ ಹರಿಯೇ 1 ಕ್ಷಿತಿಯೊಳಗೆ ಬಂದು ಕಾಮ ಕ್ರೋಧ ಸಂಮೋಹ ಶ್ರುತಿ ವಿಭ್ರಮ ಬುಧ್ಧಿನಾಶ ರಾಗದ್ವೇಷ | ಪಥದಲಿ ವಿಷಯೇಂದ್ರಿಗಳು ಆತ್ಮವಶವಾಗಿ ಹಿತದ ಪ್ರಸಾದದಿಂದ | ಗತಿ ಅದರಿಂದ ಈ ಸಂಖ್ಯೆಯಿಂದಲಿ | ಹತವಾಗಿ ಪೋಗಿ ಮರಳೆ ದೇಹವನು | ತೆತ್ತು ಗತಿ ಪುಣ್ಯವಂತನೈದೆ 2 ಇಂದಿಗಾ ಇವನ ಮನೆ ತಂದೆ ತಾಯಿಯ ದಿವಸ | ಇಂದಿಗಾ ಇವನ ಮನೆ ಹತ್ತ ಹತ್ತನೆ ದಿವಸ | ಹವ್ಯ ಕವ್ಯ ಜಾವಳ | ಇಂದಿಗಾ ಮದುವೆ ಮುಂಜಿ | ಇಂದು ನಿಮ್ಮನೆ ಪ್ರಸ್ತವೆಂದು ಕೇಳುತಾ ಪೋಗಿ | ಬಂದವರನನ್ನುಸರಿಸೆ ಬಾಗಿಲಾ ಮುಂದೆ ಕುಳಿತು | ನೊಂದೆ | ಬಂದೆನೊ ಕೊನೆಯಲಿ 3 ಆರಾದರೂ ಬಂದು ಕಾಸು ಕೊಡದಿದ್ದರೆ | ದೂರುವೆನೊ ನೂರಾರು ಕೇರಿ ಕೇರಿಯ ತಿರಗಿ | ಸಾರೆ ಅವರಲ್ಲಿದ್ದ ಅವಗುಣಂಗಳ ಎತ್ತೆ | ಬೀರುವೆನು ಬೀದಿಯೊಳಗೆ | ವಾರಣದಿಂದಲಿ ಕರೆದು ಆವನಾದರು ಬಂದು | ಶಾರೆ ಭತ್ತವ ಕೊಡಲು ಕೊಂಡಾಡುವೆ ಕುಲ ಉ | ಪೋರ ಬುದ್ಧಿಗಳ ಬಿಡದೆ4 ಪರವಣಿ ಪುಣ್ಯಕಾಲಾ ದಿವಸ ಬಂದರೆ ತಿಳಿದು | ಪರಮಾರ್ಥವೆಂದರಿದು ಉತ್ತಮರ ಬಾ ಎಂದು | ಕರೆದು ತುತ್ತನ್ನ ಮೇಲೊಂದು ದಕ್ಷಿಣೆ ಕಾಸು | ಹರುಷದಿಂದಲಿ ಕೊಡದಲೆ ಪರರ ಹಳಿಯುತ್ತ ಏನೇನು | ಇಟ್ಟುಕೊಂಡು ಮನಿಗೆ ಬಂದು | ಪರರರಿಯದಂತೆ ಮಂಚದ ಕೆಳಗೆ ಹೂಳಿ ಈ | ಪರಿಯಿಂದ ದಿನ ಹಾಕಿದೆ5 ತೊತ್ತು ಓರ್ವೆಯಲ್ಲಿ ಈ ಹೊತ್ತು ಪೋಗಾಡಿಸಿದೆ | ಉತ್ತಮರ ಬಳಿಯಲಿ ಕುಳಿತು ಸತ್ಕಥೆಗೆ ಕಿವಿ ಇತ್ತು ಕೇಳದಲೆ ಕೆಲಸಾರೆ ಬೇಸರಿಕೆಯಲಿ | ಅತ್ತಲಿತ್ತಲು ವ್ಯರ್ಥ ಸುತ್ತಿ ಸುಮ್ಮನೆ ಸುದ್ದಿ ಬರಿಗಂಟುಸಟೆ | ಮಾತು ಎತ್ತುವನೊ ಅನ್ನಿಗರನ ನ | ಎಣಿಕೆ ಮಾಡದಲೆ | ಉನ್ಮತ್ತದಲಿ ಕೆಟ್ಟೆನಯ್ಯಾ6 ಪರಿಯಂತ | ವೇದೆನೆ ಬಟ್ಟೆನೊ ದುಷ್ಟ ಹಾದಿಯಲಿ ಸಿಗಬಿದ್ದು | ಈ ದುರಾಚಾರಗಳ ಗಣನೆ ಮಾಡದೆ ಇನ್ನು | ಕಾದುಕೊ ಕಮಲನಾಭಾ | ಹೋದಪರಾಧಗಳ ನೋಡದಲೆ ದಯದಿಂದ | ಆದರಿಸಿ ನಿನ್ನ ದಾಸರ ಸಂಗತಿಯನಿತ್ತು | ಪಾದವನು ಕಾಣಿಸಯ್ಯಾ7
--------------
ವಿಜಯದಾಸ
ವೆಂದೆನುತ ಬಂದೆನು ನಾ ಪ ಬಂದಾ ಬಂದಜನಕಾನಂದ ಕೊಡುತಲಿ ವಂದಿಸಿ ಭಜಿಪರಘಂಗಳ ಕಳೆದು ಸಲಹುವಿಯೋ ಸದ್ಗುರು ರಾಘವೇಂದ್ರಾ 1 ಭೀತರಾಗುತ ನಿನ್ನಡಿಗಳ ಸೇವಿಸಲು ಆದರದಿಂದಲವರ ಭವ-ಭಯವ ಪರಿಹರಿಸಿ ಸಲಹಿ ಉದ್ಧರಿಸುವೆ ಗುರುರಾಘವೇಂದ್ರಾ 2 ದುಷ್ಟ ಜನರು ಕೂಡಿ ಕೆಟ್ಟಯೋಚನೆ ಮಾಡಿ ಗುಟ್ಟಾಗಿ ನಿಮ್ಮ ಪರೀಕ್ಷಿಸ ಬೇಕೆಂಧು ಜೀವ ವಿದ್ದವನ ನಿರ್ಜೀವನೆನುತ ತರಲು ಸತ್ಯದಿ ನಿರ್ಜೀವನನ್ನಾಗಿ ಮಾಡಿದೆ ಪ್ರಭವೆ 3 ಕುಹಕಿ ಜನರು ಎಲ್ಲಿ ವನಕೆತುಂಡನು ತಂದು ಚಿಗುರಿಸ ಬೇಕೆನುತಲಿ ಕೇಳಲು ಕಮುಂಡದೊಳಿದ್ದ ದಿವ್ಯೋದಕ ಪ್ರೋಕ್ಷಿಸಿ ಚಿಗುರಿಸಿ ಫಲ ಮಾಡ್ದೆ ಅದ್ಭುತ ಮಹಿಮಾ 4 ಮಾವಿನರಸದೊಳು ಮುಳುಗಿ ಮೃತನಾದಾ ಬಾಲಕನಿಗೆ ಪ್ರಾಣಗಳನಿತ್ತೆ ದಯದೀ ಭುವಿಯೊಳು ನಿಮ್ಮ ಮಹಿಮೆಗೆಣೆಕಾಣೆ ಮಂತ್ರಾಲಯದೊರೆ ಗುರು ರಾಘವೇಂದ್ರಾ 5 ``ಶ್ರೀರಾಘವೇಂದ್ರಾಯ ನಮಃ'' ಎಂಬ ದಿವ್ಯನಾಮವ ಮನುಜನು ಪ್ರತಿದಿನ ಭಜಿಸುತ್ತಲಿರಲು ಘೋರ ದುರಿತಗಳೆಲ್ಲ ದೂರವ ಮಾಡಿ ನಿನ್ನ ಚರಣಸೇವಕರನ್ನು ಸಲಹುವಿಯೋಗುರುವೇ6 ಶ್ರೀ ರಘುರಾಮನ ಪ್ರಿಯಭಕ್ತನಾದ ಶ್ರೀ ಗುರು ರಾಘವೇಂದ್ರರ ಚರಣ ಭಜಿಸಿರೊ ನಂಬಿದ ಭಕ್ತರ ಬೆಂಬಿಡದೆ ಸಲಹುವ ಘನ್ನಕೃಪಾನಿಧಿ ನಮ್ಮ ಗುರು ರಾಘವೇಂದ್ರಾ 7
--------------
ರಾಧಾಬಾಯಿ
ವೇಣು ಗೋಪಾಲವಿಠ್ಠಲರೇಯ ನಿನ್ನ ಪದ ರೇಣು ನಂಬಿದ ಮಾನವ ಏನು ಅರಿಯದಲಿಪ್ಪ ನೀನೊಲಿದು ಕರುಣದಲಿ ಜ್ಞಾನ ಭಕುತಿಯ ಕೊಡುವುದು ಸ್ವಾಮಿ ಪ ಪರದೈವ ನೀನೆಂದು ಮೂಢಮತಿಯಾದವನು | ಪರಿಪೂರ್ಣವಾಗಿ ನಿರುತ | ನೆರೆ ನಂಬಿದೆನು ನಾನಾ ಪ್ರಕಾರದಲಿ ಸ್ಮರಣೆ ಮಾಡುತ ಮನದಲಿ | ತರತಮ್ಯ ಭಾವದಲಿ ಮಾರ್ಗವನೆ ತೋರಿ ವಿ ಸ್ತರ ಮಾಡು ಇವನ ಕೀರ್ತಿ ಕರುಣಾಕರನೆ ನಿನ್ನ ಮೊರೆಹೊಕ್ಕ ಶರಣನ್ನ ಕರಪಿಡಿದು ಪಾಲಿಸುವುದು ಸ್ವಾಮಿ1 ಲೌಕಿಕವೆಲ್ಲಿನಗೆ ವೈದಿಕವೆಂದೆನಿಸಿ | ಸಾಕುವುದು ಸಾಕಾರನೆ ನೂಕು ದುರಳದಿಂದ ಬಂದ ವಿಪತ್ತುಗಳ ತಾಕಗೊಡದಂತೆ ವೇಗ ಶುಭ | ವಾಕು ನೇಮಿಪುದು ಸತತ ನಾಕಜನ ಬಲವಾಗಿ ರಕ್ಷಿಸಲಿ ಸುರತರುವೆ ಶ್ರೀ ಕಾಂತ ನಿನ್ನಿಂದಲಿ ಸ್ವಾಮಿ 2 ಓರ್ವನ ಪೆಸರುಗೊಂಡು ಪೇಳಲೇತಕೆ ಇನ್ನು | ಸರ್ವರನು ಈ ವಿಧದಲಿ | ಊರ್ವಿಯೊಳಗೆ ಇಟ್ಟು ಉದ್ಧರಿಸಿ ಉರುಕಾಲ ನಿವ್ರ್ಯಾಜದವನ ಮಾಡಿ ಸರ್ವರಗೋಸುಗ ತುತಿಸುತಲಿ ಯೋಗ್ಯರಿಗೆ ಸರ್ವದಾ ಕೃಪೆಮಾಡು ಎಂಬೆ ಸಿರಿ ವಿಜಯವಿಠ್ಠಲ ನಿನ್ನ ಶರ್ವ ತುತಿಸಿ ಕಾಣ ನಾನೊಬ್ಬ ಪೊಗಳುವನೆ 3
--------------
ವಿಜಯದಾಸ
ವೇದವ ತಂದು ವಿಧಿಗೀವಂದೆ ನೀಸಾಧು ಜನರ ಸಲಹಲಿ ಬಂದೆ ಪ. ಮೋದದಿಂದೆಮ್ಮ ಮನದಿ ನಿಂದೆ ನೀಬಾಧಿಪ ದುರಿತತತಿಯ ಕೊಂದೆ ಅ.ಪ. ಸಕಲ ಸುರರಿಗೆ ಶಿರೋರನ್ನ ನೀಅಕಳಂಕಾಶ್ರಿತಜನಮಾನ್ಯನಿಖಿಲ ನಿಗಮನಿಕರದಿ ವಣ್ರ್ಯ ನಿನ್ನಕರುಣಾಕಟಾಕ್ಷದಿ ನೋಡೆನ್ನ 1 ಕೈವಲ್ಯಪದವಿಯ ಕೊಡಬಲ್ಲ ನಿನ್ನಸೇವಿಪ ಸುಜನರಿಗೆಣೆಯಿಲ್ಲಭಾವಜಕೋಟಿಯಿಂದಚೆಲ್ವ ನೀಶ್ರೀವನಿತೆಗೆ ಸಿಲುಕುವನಲ್ಲ 2 ಹಯವದನ ಹೃದಯಸದನಜಯ ಶಶಿವರ್ಣ ಜಗತಿಪೂರ್ಣಭಯಹರ ಭಾಸುರ ಸಿರಿಚರಣ ನಿನ್ನದಯಪಾತ್ರಾನುದ್ಧರಿಸೆನ್ನ 3
--------------
ವಾದಿರಾಜ
ವೇದವ್ಯಾಸ ಮೂರುತೀ ಬದರಿಯೊಳಗಿರುತಿ ಮೇದಿನಿಯೊಳ್ ನಿನ್ನ ಕೀರುತಿ ಪಸರಿಸುತಿರುತಿ ಪ ಮಧ್ವಮುನಿಗಾನಂದದಿ ವೇದ ಶಾಸ್ತ್ರಾಂಬುಧಿಯೊಳು ಇಂದಿಗಾಯ್ತೊಂಭತ್ತು ಶತವು ಚಂದದಿಂ ವತ್ಸರಗಳು 1 ಕೀಟದಿಂದ ರಾಜ್ಯಭಾರ- ವಾಟದಂತೆ ನಡೆಸಿದಿ | ಪುಟ್ಟತನದಿ ಮಾತೆಗೊಲಿದು ಶ್ರೇಷ್ಠ ನೀನೆಂದೆನಿಸಿದಿ 2 ರಾಜಸೂಯ ನಡೆಸಿದಿ | ರಾಜನಾಥ ಹಯಮುಖ ನೀ ಮೂಜಗದಿ ಮೆರೆಯುತಿ3
--------------
ವಿಶ್ವೇಂದ್ರತೀರ್ಥ
ವೇದವ್ಯಾಸರ ದಿವ್ಯಪಾದ ಪದುಮಯುಗಲ ಆರಾಧಿಸುತಿರು ಮನುಜಾ ಪ ವೇದಗಳಿಗೆ ಸಮ್ಮತವಾದ ಪುರಾಣಗಳ ಸಾದರದಲಿ ರಚಿಸಿ ಮೋದವ ಬೀರಿದ ಅ.ಪ ಧರಿಯೊಳು ಸುಜನರಿಗೆ ವರಧರ್ಮ ತಿಳಿಸೆಂದು ಸುರಮುನಿ ಪ್ರಾರ್ಥನದಿ ಭಾಗವತ ಗ್ರಂಥ ವಿರಚಿಸಿ ಶುಕಮುನಿಗೆ ಕರುಣದಿಂದರುಹಿದ 1 ವಾಸಿಪ ಮುನಿಗುಣ ಭೂಷಿತ ಬದರಿಯೋಳ್ ತೋಷ ತೀರ್ಥರ ಕರೆದು ಭೂಸುರ ಜನರಿಗೆ ಮೋಕ್ಷದಾಯಕ ಸೂತ್ರ ಭಾಷ್ಯವರಚಿಸೆಂದಾದೇಶವ ನೀಡಿದ2 ಅರಿದರಾದ್ಯಯುಧ ಧರಿಸಿ ಷೋಡಶಸಂಖ್ಯ ಕರಗಳಿಂದಲಿ ಶೋಭಿತ ಸುರತರು ವೆನಿಸಿ ಧರೆಯೊಳು ಮೆರೆವ ಕಾರ್ಪರ ನರಹರಿ ರೂಪಾತ್ಮಕನಾದ 3
--------------
ಕಾರ್ಪರ ನರಹರಿದಾಸರು
ವೈಕುಂಠ ವಿಠ್ಠಲನೆ ನೀನಿವನ ಸಾಕಬೇಕಯ್ಯ ಶ್ರೀ ಹರಿಯೆ ಪ ನಾಕಪತಿಯೆ ನಿನ್ನ ತೋಕನೆಂದೆನಿಸಿ ಕೃಪಾಕರುಣೆ ಕಾಪಾಡ ಬೇಕೊ ಹರಿಯೆ ಅ.ಪ. ಪುಂಡಲೀಕ ವರದ ಪಾಂಡುರಂಗನೆ ನಿನ್ನತೊಂಡನಾಗಿಹನ ಕೈಗೊಂಡು ಕಾಪಾಡೊ ಹರಿಯೆ |ಅಂಡಜಸುವಾಹನನೆ ಮಾರ್ತಾಂಡ ಶತತೇಜಭಾಂಡ ಕಾರಕ ಭೀಮ ಗೊಲಿದಂತೆ ಒಲಿಯಬೇಕು 1 ಇಹಪರಗಳೆರಡಕ್ಕೂ ಅಹಿಶಯ್ಯ ನಿನ ಪಾದವಹಿಸೆ ಸೇವಿಪನಯ್ಯ ಸಹಜ ಭಕ್ತಿಯಲಿವಿಹಗೇಂದ್ರ ವಾಹನನೆ ಐಹಿಕದ ಭಯಹರಿಸಿವಿಹಿತ (ಕರುಣ)ದಿಂದಿವನ ಕಾಪಾಡು ಬೇಕು ಹರಿಯೇ 2 ವಿಘ್ನಹರ ನಿನ್ನಲ್ಲಿ | ಲಗ್ನ ಗೈಸಿಹಮನವ ನಿ-ರ್ವಿಘ್ನತೆಯ ನೀಡಯ್ಯ ಸರ್ವಕಾಲದಲಿಯಜ್ಞೇಶ ಯಜ್ಞ ಭುಗ್ ಯಜ್ಞಸಾಧನ ಯಜ್ಞಯಜ್ಞಾನು ಸಂಧಾನ ಸರ್ವಕಾರ್ಯದಲೀಯೊ 3 ವೃಂದಾರ ಕೇಂದ್ರ ರಿಂ | ವಂದ್ಯ ಹಯಮುಖ ಪಾದಭೃಂಗರೆಂದೆನಿಸುವ ಭಾವಿ ಮರುತರ ಚರಣದೀಸಂಧಿಸುತ ಧೃಡಭಕ್ತಿ ವೃಂದಾವನಾಖ್ಯಾನಸಂದೋಹ ಸುಜ್ಞಾನ ನೀನಿತ್ತು ಸಲಹೊ ಹರಿಯೇ 4 ಪತಿ ನಿನ್ನ ಹಂಬಲಿಸಿ ಬೇಡುವೆನುಇಂಬಿಟ್ಟು ತವ ಪಾದದ್ಹಂಬಲವ ನೀಯೋಉಂಬುಡುವ ಕ್ರಿಯೆಗಳಲಿ ಬಿಂಬ ಕ್ರಿಯೆಗಳ ತಿಳಿಸಿಬಿಂಬ ತವರೂಪ ಹೃದಯಾಂಬರದಿ ತೋರಿ ಸಲಹೋ 5 ಪಂಚಪಂಚಸುತತ್ವ | ಪಂಚ ಭೇದದಜ್ಞಾನಸಂಚಿಂತೆಯ ನೀಯೋ ವಾಂಛಿತಾರ್ಥದನೇಪಂಚ ಅವಿದ್ಯೆಯ ಕಳೆದು ಪಂಚಸು ಪರ್ವದಲಿಪಂಚಾಸ್ಯನಲಿ ನಿನ್ನ ಪಂಚರೂಪವ ತೋರಿಸೋ 6 ದಿವಿಜ ವಂದ್ಯಮಧ್ವಾಂತರಾತ್ಮ ಗುರು ಗೋವಿಂದ ವಿಠಲ ತವದಿವ್ಯ ರೂಪವ ತೋರಿ ಕಾಪಾಡೊ ಹರಿಯೆ 7
--------------
ಗುರುಗೋವಿಂದವಿಠಲರು
ವೈಕುಂಠಗಿರಿಯವಾಸನ ಮಹಿಮೆ ಸ್ಮರಿಸು ಜೋಕೆಯಿಂದಲಿ ಪೊರೆವ ಶ್ರೀಹರಿಯ ಭಜಿಸು ಪ. ಭಕ್ತ ರಕ್ಷಕ ಹರಿಯು ಭಾಗ್ಯೋದಯದ ಸಿರಿಯು ಮುಕ್ತಿದಾಯಕ ದೇವ ಮುನಿವರದ ಕಾವ ಮುಕ್ತಿಯೋಗ್ಯರ ಸಂಗ ಮುದದಿಂದ ನೀಡೆಂದು ಭಕ್ತಿಯಿಂದಲಿ ಭಜಿಸೆ ಬಂದು ಪೊರೆಯುವನು 1 ಭಾರ ಬೆನ್ನೊಳು ವಹಿಸಿ ಕೋರೆ ಹಲ್ಲನು ತೆರೆದು ಕಂಭದಲಿ ಬಂದ ಮೂರಡಿಯ ಭೂ ಬೇಡಿ ಕ್ಷತ್ರಿಯ ಕುಲವನೆ ಸವರಿ ವೀರ ರಾವಣನಸುವ ಹೀರಿದ ಹರಿಯು 2 ಶ್ರೇಷ್ಠ ಯದುಕುಲದಲ್ಲಿ ಪುಟ್ಟಿ ಬತ್ತಲೆ ಕಲಿಯ ಕುಟ್ಟಿ ಜಗ ರಕ್ಷಿಸಿದ ಸೃಷ್ಟಿಕರ್ತ ದಿಟ್ಟ ಮೂರುತಿ ಸತತ ಕಾಯ್ವ ಶ್ರೀ ಗೋಪಾಲ- ಕೃಷ್ಣವಿಠಲ ಶ್ರೀನಿವಾಸ ಜಗದೊಡೆಯ 3
--------------
ಅಂಬಾಬಾಯಿ
ವೈಕುಂಠನಾಯಕನೂ ಈ ಮಹಾತ್ಮನು ವೈಕುಂಠನಾಯಕನು ಪ. ಪಾಕಶಾಸನತ, ನಾಕಪಾಲಕ ಸರ್ವಲೋಕನಾಯಕ ಭಕ್ತರಕ್ಷಕ ಶ್ರೀಕಳತ್ರ ಸುಪವಿತ್ರನೀತನು ಅ.ಪ. ವೆಂಕಟಗಿರಿಯಿಂದ ಅಂಕನಶೆಟ್ಟಿಪುರಕೆ ಬಿಂಕದಿಂದೈತಂದ ಕಾಂಕ್ಷಿತಾರ್ಥವನೀವನು ಭಕ್ತರಮನಶಂಕೆಯ ಕಳೆಯುವನು ಕಂಕಣಕರ ಬದ್ಧನಾಗಿಹ ಪಂಕಜಾಸನ ಜನಕ ಲಕ್ಷ್ಮೀಕಾಂತ ಸರ್ವಾಂತರ್ಯಾಮಿಯಾಗಿಹ 1 ಬಂದವರೆಲ್ಲ ತಾವು ಬಂದಂತೆ ಮನನೊಂದು ಹಿಂದಿರುಗಿ ಪೋಗುವರೆಂಬ ಮಾತಿಲ್ಲ ಬಂದು ಬಂದವರಿಗೆಲ್ಲ ಬೇಡಿದುದಿತ್ತಾನಂದ ದಿಂದವರೀಯುವ ಕಾಣಿಕೆಗಳ ಚೆಂದದಿಂ ಸುರೇಂದ್ರ ವಂದ್ಯ ಕರೀಂದ್ರಪೂಜಿತ ನಂದ ಕಂದ ಮುಚುಕುಂದ ವರದನು 2 ಅಂಗವಿಹೀನರಿಗಂಗವ ಸರಿಗೈದು ಇಂಗದ ಭೋಗಭಾಗ್ಯಂಗಳ ನೀವನು ಕಂಗೆಟ್ಟಿಹರಕಾಯ್ವನು - ಬೇಡುತ್ತಿಹ ಬಂಜೆಗೆ ಮಕ್ಕಳನು ನೀಡುವನು ತನ್ನ ನಂಬಿದವರ ಕೈಬಿಡನು ಸತ್ಯಾತ್ಮನು ಮಂಗಳಾಂಗ ಯದುಪುಂಗವ ಸದಯಾಪಾಂಗ ಶ್ರೀ ರಂಗ ತುಂಗವಿಕ್ರಮ ಶೇಷಗಿರಿವರ 3
--------------
ನಂಜನಗೂಡು ತಿರುಮಲಾಂಬಾ
ವೈದೇಹಿ ಪಾಲಿಸೆನ್ನಂ ನಂಬಿದೆ ನಿನ್ನಂ ಪ. ವೇದವಿದಿತೇ ತವಪಾದವ ಸ್ಮರಿಸುವ ಕರವ ಅ.ಪ. ಕಾಮಿತಾರ್ಥವ ನೀಡುವಳೆಂಬುವ ಬಿರುದಾಂಕಿತೆಯಾಗಿರುವ ಕಾಮಜನನೀ ನಿನ್ನ ನಾಮ ಮಂತ್ರಗಳನ್ನು ನೇಮನಿಷ್ಠೆಯೋಳ್ ಜಪಿಸುವಂದದಿ ಸು ಪ್ರೇಮದಿಂದಲಿ ವಿಮಲಮತಿಕೊಡು 1 ಜಾನಕಿನಾಮವ ಧರಿಸಿ ದಾನವಕುಲವೆಂಬ ಕಾನನಂಗಳಿಗಂತು ಹವ್ಯ ವಾಹನನೆನಿಪ ರಾಮನ ಕೈಯಪಿಡಿದ ಪರಮಪಾವನೆ 2 ಶಮದಮಾದಿಗಳಿಂದ ಮೆರೆಯುತಲಿರ್ಪ ಕ್ಷಮೆಗೆ ನೀ ನೆಲೆಯೆಂದು ಯಮಿಕುಲವರ್ಯರು ನಮಿಸಿ ಸ್ತುತಿಸುತ್ತಿಹರು ವಿಮಲ ಶೇಷಾದ್ರಿನಾಥನ ರಮಣಿ ನಿನ್ನಡಿ ಮಣಿದು ಬೇಡುವೆ 3
--------------
ನಂಜನಗೂಡು ತಿರುಮಲಾಂಬಾ
ವೈಶಾಖದುತ್ಸವ ಗೀತೆ ವರ್ಣಿಸಲಳವೆ ವೈಶಾಖದುತ್ಸವವಾ ಪ. ವೃಷಭಸೇರಿದ ವೈಶಾಖಮಾಸದ ಶುಕ್ಲ ಪಕ್ಷದ ಷಷ್ಠಿಯಲಿ ಕಂಕಣವ ಕಟ್ಟಿ ಪಟ್ಟದರಸಿ ಯರ್ಸಹಿತ ದಿಟ್ಟತನದಲಿ ಪೊರಟು ಶ್ರೇಷ್ಠವಾದ ಮಧ್ಯಮಂಟಪಕೆ ನಡೆತಂದ 1 ಮುದ್ದುಮೊಖ ಮುಗುಳ್ನಗೆಯು ವಜ್ರದ ಕಿರೀಟವು ತಿದ್ದಿದ ಕಸ್ತೂರಿತಿಲಕ ಹೊಳೆವ ವಜ್ರದ ಪದಕಗಳು ನಾಲ್ಕು ಮೂರನೆ ಧರಿಸಿ ಪ್ರಜ್ವಲಿಸುತ ಬಂದ ಅರ್ಜುನ ಸಾರಥಿಯು 2 ಶಿರದಿ ಪುಷ್ಪವ ಧರಿಸಿ ಪರಮಪುರುಷನು ತಾನು ಕೊರಳಲ್ಲಿ ವೈಜಯಂತಿಮಾಲೆಯನು ಧರಿಸಿ ಕರದಲ್ಲಿ ಪರಿಮಳದ ಗಂಧವನು ಧರಿಸಿ ಪರಮ ಪುರುಷನು ಬರುವ ಪರಿಯನೇನೆಂಬೆ 3 ದಂತದ ಉಯ್ಯಾಲೆಮಂಟಪದಲಿ ನಿಂದು ಕಂತುಪಿತ ಕರ್ಪೂರದಚೂರ್ಣದಲಿ ಮಿಂದು ಅಂತರಂಗದಿ ಭಕ್ತರಿತ್ತ ನೈವೇದ್ಯ ಉಂಡ ಲಕ್ಷ್ಮೀ ಕಾಂತನು ನಡೆತರುವ ಪರಿಯನೇನೆಂಬೆ 4 ಮುಂದೆ ದ್ರಾವಿಡವೇದ ಹಿಂದೆ ವೇದಘೋಷಗಳು ಆ ನಂದದಿಂ ಭಕ್ತರೆಲ್ಲ ಮುಂದೆ ಬರುತಿರಲು ಛಂದದಿಂ ರಂಭೆಯರ ಕೋಲಾಟಗಳ ನೋಡಿ ಇಂದಿರೆಯಿದಿರು ಮಂಟಪಕೆ ನಡೆತಂದ 5 ಸೃಷ್ಟಿಪತಿ ರಂಗನಿಗೆ ದೃಷ್ಟಿ ತಾಕುವುದೆಂದು ಹಿಟ್ಟಿನಾರತಿಯಿಂದ ದೃಷ್ಟಿಯನು ತೆಗೆದು ಶ್ರೇಷ್ಠವಾದ ಕರ್ಪೂರದ ಆರತಿಯನೆತ್ತಲು ಥಟ್ಟನೆ ತಿರುಗಿದನು ಕೃಷ್ಣಮೂರುತಿ ತಾನು 6 ಸಪ್ತದಿನದಲಿ ರಂಗ ರತ್ನಮೌಳಿಯ ಧರಿಸಿ ಮುತ್ತಿನಾ ಹಾರವನು ಹಾಕಿ ರತ್ನದ ಉಡದಾರ ಉಡಗೆಜ್ಜೆಯನು ಧರಿಸಿ ಪತ್ನಿ ಸಹಿತಲೆ ಬಂದು ಭತ್ತವನಳಿಸುವ ಸೊಬಗ 7 ಮುತ್ತಿನ ಕಿರೀಟವಿಟ್ಟು ಮುದದಿ ನಿಲುವಂಗಿ ತೊಟ್ಟು ರತ್ನದಾ ಹಸ್ತದಲಿ ಅಭಯವನು ಕೊಟ್ಟು ಕತ್ತಿ ಈಟಿ ಗುರಾಣಿ ಬತ್ತಳಿಕೆ ಅಳವಟ್ಟು ಹಸ್ತದಲಿ ಕಡಿವಾಣವಿಟ್ಟು ಬರುವ ಸೊಬಗ 8 ಹತ್ತಿ ಹಯವನು ರಂಗ ಒಂಭತ್ತು ದಿನದಲಿ ಮತ್ತೆ ಪುಷ್ಕರಣಿಯ ತೀರ್ಥದಲ್ಲಿ ಮಿಂದು ಅರ್ತಿಯಿಂ ಬಂದ ನೀರಾಳಿಮಂಟಪಕೆ 9 ಮಿಂದು ಮಡಿಯನೆ ವುಟ್ಟು ಛಂದದಿಂದಲೆ ರಂಗ ಬಂದು ಕಂಕಣವನ್ನು ಬಿಚ್ಚಿ ಆ ಘೃತ ಚೂತಫಲಗಳ ಸವಿದು ನಿಂದ ವೆಂಕಟರಂಗ [ಕರುಣಾಂತರಂಗ] 10
--------------
ಯದುಗಿರಿಯಮ್ಮ
ವ್ಯರ್ಥ ಹೋರಾಟವಲ್ಲದೆ ಇದು ನಿಜವಲ್ಲಾ ಕರ್ತೃ ಶ್ರೀಹರಿ ಮಾಡಿದರ್ಥವೆ ಸರಿ ಅಲ್ಲದೆ ಪ ಪುರಾಕೃತ ಸಂಚಿತಾರ್ಥ ಪುಣ್ಯ ಪಾಪಗಳಿಂದ ಪರಿ ಅನುಭವ ಬಡುತಾ ಇನ್ನೂ ಇರುವೆಯಲ್ಲದೆ ಘಣಿಯಲಿ ವಿರಂಚಿ ಬರೆದ ಭಂಗ ಬಡುತಲಿಷ್ಟು 1 ಎಂದೆಂದೂ ನಿನ್ನ ಹಿಂದೆ ಒಂದೂ ಬರುವುದಿಲ್ಲ ಮುಂದುಗಾಣದೆ ಇನ್ನು ಮೋಹಕೆ ಸಿಲುಕಿ ನಂದೆಂದು ಪರಿಯಿಂದ ಘಳಿಸಿದ ದ್ರವ್ಯದ ಬಿಂದಿಗೆ ದಾರೋ ನೀದಾರೋ ಪಾಮರ ಮೂಢಾ 2 ನನ್ನ ಹೆಂಡತಿ ಮಕ್ಕಳು ನನ್ನ ಮನೆ ಬಾಗಿಲು ನನ್ನ----ಯು ವೃತ್ತಿ ನನ್ನದೆಂದೂ ನಿತ್ಯ ಒಂದಾಡುವೆ ನೀದಾರೋ ಮೂಢಾ 3 ತಂದೆ ತಾಯಿಯ ಗರ್ಭದಿಂದ ಪುಟ್ಟಿರುವಂದೇ ತಂದೆಲ್ಲೊ ತಾಯೆಲ್ಲೊ ತಾನೆಲ್ಲೊ ಮರುಳೆ ಹಿಂದೆ ಆದವರ ಚರ್ಯವ ವಿವರಿಸಿ ನೋಡಿನೋಡಿ ಕುಂದು ಇಲ್ಲದೆ ಮುಕ್ಕುಂದನ ಸ್ಮರಿಸು ಗಾಢಾ 4 ಮಾಯಾ ಪ್ರಪಂಚದೋಳ್ ಮಗ್ನನಾಗಿ ಇನ್ನು ಕಾಯಾ ಅಸ್ಥಿರವೆಂದು ಕಾಣೋ----- ಶ್ರೀಯರಸ 'ಹೆನ್ನ ವಿಠ್ಠಲ’ರಾಯನ ಕರ್ಮ ಧ್ಯಾನವು ಬಿಟ್ಟು 5
--------------
ಹೆನ್ನೆರಂಗದಾಸರು
ವ್ಯರ್ಥವಲ್ಲವÉ ಜನ್ಮ ವ್ಯರ್ಥವಲ್ಲವÉ ಪ ತೀರ್ಥಪಾದರ ಭಜಿಸಿ ಕೃತಾರ್ಥನಾಗದವನ ಜನ್ಮಅ.ಪ. ಅರುಣ ಉದಯದಲ್ಲಿ ಎದ್ದು ಸರಿತದಲಿ ಸ್ನಾನವ ಮಾಡಿಅರಳುಮಲ್ಲಿಗೆ ಮಾಲೆ ಹರಿಯ ಚರಣಕರ್ಪಿಸದವನ ಜನ್ಮ1 ಒಂದು ಶಂಖ ಉದಕ ತಂದು ಚಂದದಿಂದ ಹರಿಗೆ ಎರೆದುಗಂಧ ಪುಷ್ಪದಿಂದ ಹರಿಯ ವಂದನೆ ಮಾಡದವನ ಜನ್ಮ 2 ಕರವ ಮುಗಿದು ಸ್ತುತಿಸದವನ ಜನ್ಮ 3 ಭೋಗಿಶಯನನ ದಿನದಿ ಸಕಲ ಭೋಗಗಳನು ತಾನು ತೊರೆದುಭಾಗವತರ ಮ್ಯಾಳದಿಂದ ಜಾಗರಣೆ ಮಾಡದವನ ಜನ್ಮ 4 ಜಂಗಮರೊಳಗಧಿಕವೆನಿಪ ಭಂಗುರ ಮನುಷ್ಯದೇಹ ಪಡೆದುರಂಗವಿಠಲನೆನಿಪ ಪಶ್ಚಿಮರಂಗಗರ್ಪಿಸದವನ ಜನ್ಮ 5
--------------
ಶ್ರೀಪಾದರಾಜರು