ಒಟ್ಟು 4691 ಕಡೆಗಳಲ್ಲಿ , 124 ದಾಸರು , 3091 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರ ಮಕ್ಕಳಾರ ರಾಣಿ ಆರ ಸಂಪದವಾರಿಜಾಕ್ಷನಿಟ್ಟ ತೆರದಿ ಇರು ಎಲೆಲೆ ಆತ್ಮಾ ಪ.ಬೇಡಿದರೆ ಕೊಡ ದೇವ ಬೇಡದಿದ್ದರೀವ ದೇವನೋಡುತಿಹ ಸುಮ್ಮನೆ ತಾನಾಡಿಪ ಜಗವರೂಢಿಯಲ್ಲಿ ಎಳೆ ಮಕ್ಕಳಾಡುವಂತೆ ಕೊಟ್ಟು ಕಳೆದುಓಡಿಸಾಡುತಿಹ ಯಂತ್ರಾರೂಢನ ಬಳಗಿದೆಲ್ಲ 1ಕಂದನ್ನಿಟ್ಟು ತಂದೆ ತಾಯಿ ತಂದೆ ತಾಯಿ ಮುಂದೆ ಕಂದನಹಿಂದೆ ಮುಂದೊಯ್ಯುವನ್ಯಮ ಸಂಬಂಧರಿಗ್ಹೇಳಿಚಂದದಿ ಜಗಜ್ಜೀವರು ದಂದುಗದಿ ತೊಳಲೆ ಕಂಡುಮಂದಸ್ಮಿತದೊಳಿಪ್ಪ ಮುಕುಂದನ ಮಾಯವಲ್ಲದೆ 2ಹಾವು ಹಾರವಕ್ಕು ಮೃತ ಜೀವರು ಸಂಜೀವರಕ್ಕುಪಾವಕತಂಪಕ್ಕು ವಿಷ ಪೀಯೂಷಮಕ್ಕುಆವಕಾಲದಿ ಶ್ರೀ ಪ್ರಸನ್ವೆಂಕಟೇಶನಂಘ್ರಿಯಭಾವದೊಳರ್ಚಿಸು ಕ್ಷುದ್ರ ಜೀವಿಗಳಾಸೆ ಸಲ್ಲ 3
--------------
ಪ್ರಸನ್ನವೆಂಕಟದಾಸರು
ಆರಿಗಾದರು ಪೂರ್ವಕಲ್ಪನೆ ತಪ್ಪದು ಪಬೇರೆ ಬಯಸಿದರೆ ಬರಲರಿಯದಯ್ಯ ಅರಾಮಚಂದ್ರನ ಸೇವೆ ಮಾಡಿ ಮೆಚ್ಚಿಸಿ ಮಹಾತಾಮಸನ ಗರ್ವವನು ಮುರಿದು ಬಂದರೋಮಕೋಟಿ ಲಿಂಗನೆನಿಸಿದ ಹುನುಮನಿಗೆ ಹೊರಗೆಗ್ರಾಮಗಳ ಕಾಯ್ದುಕೊಂಡಿಹುದೆ ಮನೆಯಾಯ್ತು1ಸುರಪತಿಯ ಗೆದ್ದು ಸುಧೆಯನು ತಂದು ಮಾತೆಯಸೆರೆಯ ಪರಿಹರಿಸಿ ಬಹು ಭಕ್ತನೆನಿಸಿಹರಿಗೆ ವಾಹನನಾಗಿ ಹದಿನಾಲ್ಕು ಲೋಕವನುಚರಿಸಿದ ಗರುಡನಿಗೆ ಮನೆ ಮರದ ಮೇಲಾಯ್ತು2ಪೊಡವಿ ಭಾರವ ಪೊತ್ತು ಮೃಡಗೆ ಭೂಷಣನಾಗಿಹೆಡೆಯೊಳಗೆ ಮಾಣಿಕ್ಯವಿಟ್ಟುಕೊಂಡುಬಿಡದೆ ಶ್ರೀಹರಿಗೆ ಹಾಸಿಗೆಯಾದ ಫಣಿಪತಿಗೆಅಡವಿಯೊಳಗಣ ಹುತ್ತು ಮನೆಯಾಯಿತಯ್ಯ3ಮೂರು ಲೋಕದ ಒಡೆಯ ಮುಕ್ಕಣ್ಣನೆಂಬಾತಸಾರುತಿದೆ ಸಟೆಯಲ್ಲ ವೇದವಾಕ್ಯಪಾರ್ವತೀ ಪತಿಯಾದ ಕೈಲಾಸದೊಡೆಯನಿಗೆಊರ ಹೊರಗಣ ಮಸಣ ಮನೆಯಾಯಿತಯ್ಯ4ಮೀರಲಳವಲ್ಲವೋ ಮುನ್ನ ಮಾಡಿದ್ದುದನುಯಾರು ಪರಿಹರಿಸಿಕೊಂಬವರಿಲ್ಲವೊಮಾರಪಿತ ಕಾಗಿನೆಲೆಯಾದಿಕೇಶವರಾಯಕಾರಣಕೆಕರ್ತನೀ ಕಡೆ ಹಾಯಿಸಯ್ಯ5
--------------
ಕನಕದಾಸ
ಆರಿಗೂ ಕೊಟ್ಟು ನಾನ್ಹುಟ್ಟಿಲ್ಲ ಸ್ವಾಮಿಹಾರೈಸಲೆಂತೀಯ್ವಿ ಭಕ್ತಜನ ಪ್ರೇಮಿ ಪವಸನಕಾಣದೆ ಪೋಗಿ ದೆಸೆ ಬತ್ತಲೆ ಬಂದುಬಸವಳಿದು ಬಾಯಾರಿ ದೆಸೆಗೆಟ್ಟು ಬೇಡುವರಕುಶಲಂಗಳರಿಯದೆ ಹಾಸ್ಯಗೈಯುತ ನಕ್ಕೆವಸನನಾಂ ಬಯಸಲೆಂತೊಸೆದು ನೀಂ ಕೊಡುವಿ1ಧನವಂತನಾಗಿ ನಾ ಧನವಿಲ್ಲದವರಿಗೆಶುನಕನಂದದಿ ಕೂಗುತಣಕವಾಡಿದೆನುಕನಸು ಮನಸಿನಲಿ ವಿನುತಧರ್ಮವನರಿಯೆರಿಣಕಳೆದು ಹರಿಯೆನೆ ನಿನಗೆ ಕರುಣೆಂತು 2ಮೂರುದಿನವಾಯಿತು ಘೋರಬಡುವೆನು ತುಸು ಆಹಾರ ಹಾಣದೆ ಕೃಪೆ ದಾರಿಗೆ ಬರದೆನುತಭೋರಿಟ್ಟು ಕೂಗ್ವುದ ಸಾರಿ ಕೇಳುತ ನಾನುದೂರ್ಹೋದೆ ಎನ್ನ ತಪ್ಪು ಕ್ಷಮಿಸು ಶ್ರೀರಾಮ 3
--------------
ರಾಮದಾಸರು
ಆರಿದ್ದರೇನಯ್ಯ ನೀನಲ್ಲದೆನಗಿಲ್ಲಕಾರುಣ್ಯ ನಿಧಿ ಹರಿಯೆ ಕೈಯ ಬೆಡಬೇಡ ಪದುರುಳಕೌರವನಂದು ದ್ರುಪದಜೆಯ ಸೀರೆಯನುಕರದಿಂದ ಸೆಳೆಯುತಿರೆ ಪತಿಗಳೆಲ್ಲ ||ಗರಹೊಯ್ದರಂತಿದ್ದರಲ್ಲದೇ ನರಹರಿಯೆಕರುಣದಿಂ ನೀನಲ್ಲದಾರು ಕಾಯ್ದವರು 1ಅಂದು ನೆಗಳಿನ ಬಾಧೆಯಿಂದ ಗಜರಾಜನನುತಂದೆ ನೀ ವೈಕುಂಠದಿಂದ ಬಂದು ||ಇಂದಿರೇಶನೆ ಚಕ್ರದಿಂದ ನೆಗಳಿನ ಬಾಯಸಂಧಿಯನು ಸೀಳಿ ಪೊರೆದೆಯೆಲೊ ನರಹರಿಯೇ 2ಅಜಮಿಳನು ಕುಲಗೆಟ್ಟು ಕಾಲದೂತರು ಬರಲುನಿಜಸುತನ ಕರೆಯಲವನತಿ ವೇಗದಿ ||ತ್ರಿಜಗದೊಡೆಯನೆಪುರಂದರವಿಠಲ ಕರುಣದಲಿನಿಜದೂತರನು ಕಳುಹಿ ಕಾಯ್ದೆ ಗಡ ಹರಿಯೇ 3
--------------
ಪುರಂದರದಾಸರು
ಆರುಮುನಿದರು ಮುನಿಯಲಿ ಎನ್ನಪಾರು ಮಾಡುವಹರಿನಿನ್ನ ದಯವಿರಲಿಪವಾರಿಜಾಕ್ಷನೆ ನಿನ್ನ ಕರುಣವೆಂಬಾಲಯಸೇರಿ ಕೊಂಡವರಿಗೆ ಆರಂಜಿಕಿನ್ನೇನು ಅ.ಪಬಿರುಗಾಳಿ ಭರದಿಂದ ಬೀಸೆ ಮಹಗಿರಿಯು ನಡುಗಿ ಅದರಿಂದಾಗ್ವುದೆಘಾಸಿನರಿಗಂಜಿ ಹುಲಿ ಸ್ಥಳ ತ್ಯಜಿಸಿಮರೆಯಾಗೋಡುವದೇನರಹರಿ ತವಪಾದ ಸ್ಮರಿಪ ದಾಸರುನರಗುರಿಗಳಿಗ್ಹೆದರುವರೇನು 1ದಿನಕರನಿಗೆ ಕುಂದ್ಹೊರಿಸಿ ಇಂಥಬಿನುಗರು ಜರೆದರೆ ಆಗುವನೆ ಮಸಿವನಜಾಕ್ಷನೊಳು ಮನ ನಿಲಿಸಿದಿನ ದಿನ ಘನವಾಗಿ ನೆನೆವ ಭಕ್ತರಮನ ಮಣಿಯುವುದೇನಯ್ಯಬಿನುಗರ ಕೃತಿಗಿನ್ನು 2ಬರುವುದೆಲ್ಲವು ಬಂದು ಬಿಡಲಿ ಎನ್ನಸರುವರು ಪರಿಪರಿ ಜರಿದುನೋಡಲಿಸಿರಿವರ ನಿನ್ನ ದಯವಿರಲಿಮರಿಯಾದ್ಹಾಳಾಗಲಿ ಸ್ಥಿರಸುಖ ಪ್ರಾಪ್ತಿಸಲಿವರದ ಶ್ರೀರಾಮ ನಿನ್ನಸ್ಮರಣೆಯೊಂದೆನಗಿರಲಿ 3
--------------
ರಾಮದಾಸರು
ಆರೇನ ಮಾಡುವರು ಆರಿಂದಲೇನಹುದುಪೂರ್ವಜನ್ಮದ ಕರ್ಮವಿಧಿ ಬೆನ್ನಬಿಡದು ಪಐದು ವರುಷದತರಳ ತಾನೆತ್ತ ತಪವೆತ್ತ |ಬೈದು ಮಲತಾಯಿ ಅಡವಿಗೆ ನೂಕಲು ||ಸುಯ್ದು ಕೋಪಾಗ್ನಿಯಲಿ ಪೊರಮಟ್ಟು ಪೋಪಾಗ |ಐದೆ ಬಂಧುಗಳಿದ್ದು ಏನ ಮಾಡಿದರು1ನೃಪರೊಳಗೆಅತಿ ಶ್ರೇಷ್ಠ ಬಲವಂತ ರಘುರಾಮ |ಅಪರಿಮಿತ ಶೂರ ಲಕ್ಷ್ಮಣದೇವರು |ಚಪಲಾಕ್ಷಿ ಸೀತೆಯನು ಖಳನು ಕದ್ದೊಯ್ವಾಗ |ವಿಪರೀತ ವೀರರಿದ್ದೇನ ಮಾಡಿದರು ? 2ಪಾಪಿ ದುಶ್ಯಾಸ ದ್ರೌಪದಿಯ ಸೀರೆಯ ಸೆಳೆದು |ಕೋಪದಿಂ ಮಾನಭಂಗವ ಮಾಡಲು ||ಆಪತ್ತು ಬೆನ್ನಟ್ಟಿ ಹಾ ಕೃಷ್ಣ | - ಎನುವಾಗ |ಭೂಪತಿಗಳೈವರಿದ್ದೇನ ಮಾಡಿದರು ? 3ರಣದೊಳಗೆ ಅಭಿಮನ್ಯು ಚಕ್ರವ್ಯೂಹವ ಪೊಕ್ಕು |ಸೆಣಸಿ ಷಡುರಥದೊಡನೆ ಹೊಯ್ದಾಡಲು ||ಅಣಕವಿಲ್ಲದೆ ಕಾದಿ ಅಸುವಳಿದು ಪೋಪಾಗ |ತ್ರಿಣಯಸಖಿ ಪಾರ್ಥರಿದ್ದೇನ ಮಾಡಿದರು 4ಬ್ರಹ್ಮಶಿರ ಕರಕಟ್ಟಿ ಶಿವನ ಪೀಡಿಸುತಿರಲು |ಸುಮ್ಮನೇ ಜಗವನೆಲ್ಲವ ತಿರುಗಿದ ||ಬೊಮ್ಮಮೂರುತಿಯಾದ ಪುರಂದರವಿಠಲನೇನಮ್ಮಅಳವಲ್ಲ ವಿಧಿಮೀರಿ ಬಾಳುವರೆ5
--------------
ಪುರಂದರದಾಸರು
ಆರೋಗಣೆಯ ಮಾಡೇಳಯ್ಯ ಶ್ರೀಮನ್ನಾರಾಯಣಭೋಗ ಸ್ವೀಕರಿಸಯ್ಯಪ.ಸರಸಿಜಭವಾಂಡದ ಮೇರು ಮಂಟಪದಿ ದಿನಕರಕರ ದೀಪ್ತ ಜ್ಯೋತಿಶ್ಚಕ್ರವು ||ತರಣಿ ಮಂಡಲ ಪೋಲುವ ರತುನದ ಹೊನ್ನಹರಿವಾಣದಲಿ ದೇವಿ ಬಿಡಿಸಿಹಳಯ್ಯ 1ಅಲ್ಲ ಹೇರಳೆ ಲಿಂಬೆ ಯಾಲಕ್ಕಿ ಮೆಣಸು ಕಾಯ್ನೆಲ್ಲೆ ಅಂಬಟೆಕಾಯಿ ಚೆಲ್ವ ಮಾಂಗಾಯಿ ||ಬೇಲ ಮಂಗರೋಳಿ ಹುಣಸೆ ಪಾಪಟೆಕಾಯಿಎಲ್ಲ ಧರಾದೇವಿ ಅಣಿಗೊಳಿಸಿಹಳಯ್ಯ 2ಹಪ್ಪಳ ಸಂಡಿಗೆ ವಿವಿಧ ಶಾಕಂಗಳುತುಪ್ಪ ಸಕ್ಕರೆ ಹಣ್ಣು-ಹಂಪಲವು ||ಕರ್ಪೂರ ಕಸ್ತೂರಿ ಬೆರಸಿದ ಸಿಖರಿಣಿಒಪ್ಪದಿ ಶ್ರೀದೇವಿ ಬಡಿಸಿಹಳಯ್ಯ 3ಎಣ್ಣೂರಿಗತಿರಸ ಚೆನ್ನಾದ ಮಂಡಿಗೆಅನ್ನಕ್ಷೀರಾನ್ನ ಪರಮಾನ್ನಗಳು ||ಸಣ್ಣ ಸೇವೆಗೆ ಶಾಲ್ಯನ್ನವ ನಿಮಿಷದಿಚೆನ್ನೆ ದುರ್ಗಾದೇವಿ ಬಡಿಸಿಹಳಯ್ಯ 4ನೀ ನಿತ್ಯತೃಪ್ತನಹುದು ನಿನ್ನ ಉದರದೊಳುನಾನಾ ಜನರು ಬಂದು ಉಣ್ಣಬೇಕೋ ||ಶ್ರೀನಾಥ ಗದುಗಿನ ವೀರನಾರಾಯಣಅನಾಥ ಬಂಧು ಶ್ರೀ ಪುರಂದರವಿಠಲ 5
--------------
ಪುರಂದರದಾಸರು
ಆವಳಂಜಿಸಿದವಳು ಪೇಳು ರಂಗಮ್ಮ ನಾನವಳಗಾರುಮಾಡುವೆ ನಡೆ ಕೃಷ್ಣಮ್ಮಪ.ದೂರುವಿರಾದರೆ ಮಗನ ದಾರಿಗೆ ಹೋಗದಿರಿ ಎಂದುಸಾರಿ ಕೈಯಕಡ್ಡಿಕೊಟ್ಟೆ ಜಾರೆಯರಿಗೆಸಾರಿ ಸಾರಿಗೆ ನಿನ್ನನು ರಟ್ಟು ಮಾಡುವ ಮಾತೇನುಆರಿಗೆ ಮಕ್ಕಳಿಲ್ಲೇನೊ ನಾನೇ ಹಡೆದವಳೇನೊ 1ಇದ್ದರಿರಲಿ ಕೂಸಿನ ಆಡುವಾಟಕೊಪ್ಪಿದರೆಎದ್ದು ಹೋದರೆ ಹೋಗಲಿ ಆವಪಳ್ಳಿಂದಕದ್ದು ತಿಂದನೆಂದಾವಾಗ ಕೂಗುವ ಕಾರಣವೇನೊಮುದ್ದೆ ಬೆಣ್ಣೆ ಕೈಯಲಿತ್ತರೊಲ್ಲದೆ ಚೆಲ್ಲುವೆ ಕಂದ 2ಏಸುಪುಣ್ಯರಾಶಿ ಕೂಡಿತೆಂದು ನಿನ್ನಾಟವ ನೋಡಿಬೀಸಿ ಬಿಗಿದಪ್ಪುವಂಥ ಭಾಗ್ಯವನುಂಡೆಕೂಸೆ ನಿನ್ನ ಕಂಡಸೂಯೆಬಡುವರಳಿಯಲಮ್ಮದಾಸರಿಗೆ ಲೇಸಾಗಲಿ ಪ್ರಸನ್ವೆಂಕಟ ಕೃಷ್ಣ 3
--------------
ಪ್ರಸನ್ನವೆಂಕಟದಾಸರು
ಆಶಾವಿಡಿದು ಬಂದಿಹೆ ದೇಶಿಗ ನಾನು ಅಭಿಲಾಷೆ ಪೂರಿಸೆಮ್ಮಯ್ಯ ಶೇಷಗಿರಿಯ ತಿಮ್ಮ್ಮಯ್ಯ ಪ.ಘೊರ ಭವಾರಣ್ಯದಲ್ಲಿ ದಾರಾಪತ್ಯಬಂಧು ಜನರೆಂಬಕ್ರೂರಮೃಗಾಸ್ಯಕೆ ಸಿಲುಕಿ ದಾರಿವರಿಯೆನಾರಸಿಂಹ ನಿನ್ನವರು ತೋರಿದರು ಶ್ರೀಮಂಗಳಮೂರುತಿಯ ಕಂಡು ಸುಖಸಾರಾಮೃತವುಣ್ಣಲಾಗಿ 1ಒಡಲಿಗೋಸುಗವೃತ್ತಿಹಿಡಿದು ತಡವರಿಸುತಕಡೆಗಾಣದೊರಲಿ ಅಂಜ್ಯೋಡುತಿರಲುಒಡೆಯ ನಿನ್ನಯ ಸಿರಿಸಡಗರ ನಾಮಕೇಳಿಹುಡುಕುತ ನಲಿವಿಂದ ಬಡತನ ಹಿಂಗಲೆಂದು 2ಈಗಿದೆÉೀ ವೈಕುಂಠವೆಂದುಭೋಗಿವಾಸುದೇವನೆಂದುಬಾಗಿಶ್ರುತಿಸ್ಮøತಿಗಳು ಕೂಗುತಲಿವೆಯೋಗಿಪ್ರಸನ್ವೆಂಕಟ ಭಾಗವತರ ಪ್ರಿಯನೆಂದುಹೀಗೆ ಘನಗೋಳಿಡುತ ನಾ ನೀಗುವೆ ಚಿಂತೆಯನೆಂದು 3
--------------
ಪ್ರಸನ್ನವೆಂಕಟದಾಸರು
ಇ. ಶ್ರೀಹರಿ ಲಕ್ಷ್ಮಿಯರುಅಂಗಳದೊಳಗಾಡೋ ರಂಗಪರಹೆಂಗಳ ಮನೆಗ್ಹೋಗ ಬ್ಯಾಡೋ ನೀಲಾಂಗ ಪದಧಿಘೃತಚೋರನೆನ್ನುವರು ನಿನ್ನಬೆದರಿಸಿ ಜರೆವರು ಪದುಮನೇತ್ರೆಯರುವಿಧವಿಧದಲಿ ಬಾಧಿಸುವರು ಕೊರಳಪದಕದ ಸರವನ್ನು ಸೆಳೆದುಕೊಳ್ಳುವರು 1ಕಿರುಕುಳ ....ನಿನ್ನ ಮನಕರಕರಿಸುವದೆನಗಿನಿತು ಕೇಳಣ್ಣಕರುಗಳ ಬಿಡ ಹೇಳಿ ಮುನ್ನಾ ಬಲುಹಗರಣಗೈಯ್ಯುವರೆನ್ನಾ ಸಂಪನ್ನಾ 2ನುಡಿಯಲಾಲಿಸುಮುದ್ದು ಕಂದಾ ನಿನ-ಗಿಡುವೆನಕ್ಷತೆ ವಸ್ತ್ರಾಭರಣ ಸುಗಂಧಾಕೊಡುವೆನುದಧಿಘೃತದಿಂದಾ ಕಾೈದಕಡಬು ಕಜ್ಜಾಯ ಅತಿರಸವಾ ಗೋವಿಂದಾ 3
--------------
ಗೋವಿಂದದಾಸ
ಇಕ್ಕಲಾರೆ ಕೈಯಂಜಲು - ಚಿಕ್ಕಮಕ್ಕಳು ಅಳುತಾವೆ ಹೋಗೋ ದಾಸಯ್ಯ ಪ.ಮಡಿಕೆ ತೊಳೆಯುತೇನೆ ಮನೆಯ ಸಾರಿಸುತ್ತೇನೆಒಡೆಯರಿಲ್ಲ ಕಾಣೋ ಹೋಗೋ ದಾಸಯ್ಯತೊಡೆಯ ಮೇಲಣ ಕೂಸು ಮೊಲೆ ಹಾಲನುಣಿಸುತಿದೆನಡೆನಡೆ ಕರಕರೆ ಮಾಡದೆ ದಾಸಯ್ಯ 1ಅಟ್ಟದ ಮೇಲಿನ ಅಕ್ಕಿ ತೆಗೆಯಲಾರೆಹೊಟ್ಟೆನೋವು ಕಾಣು ಹೋಗೋ ದಾಸಯ್ಯಮುಟ್ಟಾಗಿ ಕುಳಿತೇನೆ ಮನೆಯವರಿಲ್ಲವೊಕಟ್ಟುಗ್ರ ಮಾಡದೆ ಹೋಗೋ ದಾಸಯ್ಯ 2ವೀಸದ ಕಾಸಿದ ದವಸವ ತಂದಾರೆಕೂಸಿಗೆ ಸಾಲದು ಹೇಗೋ ದಾಸಯ್ಯಆಸೆ ಮಾಡಲು ದೋಷಕಾರ್ತಿ ಬೇಡ ನಾನುಶೇೀಷಾದ್ರಿ ಪುರಂದರವಿಠಲದಾಸಯ್ಯ 3
--------------
ಪುರಂದರದಾಸರು
ಇಂಥ ಬುದ್ಧಿಯಲ್ಲಿ ಸೇರಿತೊ ಕೃಷ್ಣ ಗೋಕುಲದೊಳುಎಂಥವರೂ ನಿನ್ನ ದೂರು ಹೇಳುತಿಪ್ಪರೊ ಹೀಗಾದರೆ ನಿಲ್ಲರೋ ಪಗಂಡನುಳ್ಳ ನಾರಿಯರಾ ಮಂದಿಯೆಲ್ಲ ನೋಡ ಬಲು ಉ-ದ್ದಂಡತನದಲ್ಲಿ ಸೀರೆ ಸೆರಗ ಪಿಡಿವರೇ ಇಂಥ ದುಡುಕು ಮಾಡುವರೇ ||ಚಂಡಾಡುವಾಗೆನ್ನವಸನ ಮರೆತೆ ಕೊಂಡು ಪೋಗಲವಳು |ಕಂಡು ಕೊಸರಿಕೊಂಡರಿಂಥ ಸುದ್ದಿ ಹುಟ್ಟಿಸಿ ಪೇಳುವಳಮ್ಮ ಹೊಂದಿಸಿ 1ಹಿರಿಯರುಳ್ಳಾ ಸೊಸೆಯ ಕೂಡ ಒಗೆತನವ ಕೆಡಿಸುವಂತೆ |ಸರಸವಾಡುವದು ನಿನಗೆ ಸಲ್ಲುವದೇನೋ ಯನಗೆ ಭೂಷಣವೇನೋ ||ನಿರುತ ಅವಳ ತಾಯಿ ನಂದಗೋಪಗಣ್ಣಾಯೆಂದು ಕರೆಯ- |ಲರಿತೆನತ್ತೆ ದುಗಳು ನಾದಿನಿಯೆಂದು ಮನಸಿಗೆ ಚರ್ಚೆ ಮಾಡಿದೆನೀ ಬಗೆ2ಕುಲದೇವತೆಯ ಮೀಸಲು ತುಪ್ಪ ನೆಲವಿನ ಮೇಲಿಟ್ಟಿರಲು ಮದ್ದು |ಕಲಶವ ಒಡೆದು ಬಾಹುವದೆಲ್ಲ ಚಿನ್ನಾಟವೇನೋ, ಅವರು ಮುದ್ದಿಸುವರೇನೋ ||ತಿಳಿಯದೆ ನೆಳಲಿದುಯೆಂದು ಕಳ್ಳನ ಒಳಗಿರಿಸಿಹಳೇಕೆಂದು ವಡದೆ |ನೆಲಖರಿಧೋಗುವಘೃತನೋಡಲೆ ತಿಂದೆನಮ್ಮಯ್ಯ ತಪ್ಪಿರೆ ಕಟ್ಹ್ಯಾಕು ಕಯ್ಯ 3ಚಿನ್ನನಂತೆಯಾಗಿಯವರ ಮಗ್ಗುಲೊಳು ಮಲಗಿಯೆಂಥ |ಸಣ್ಣ ಕೃತ್ಯ ಮಾಡಿ ಬಾಹುವೆಂತಲ್ಲೋ ಕಂದ ಕೇಳುವರಿಗೇನುಛಂದ||ನಿನ್ನ ಸಲಿಗೆ ಬಹಳ ಕಂಡು ಇಲ್ಲದ್ದೊಂದೆ ಹುಟ್ಟಿಸುವರು |ಯನ್ನ ದಿಸವಕ್ಕೀ ಜಾರತ್ವ ಕಲಿತಿದ್ದೇನೇನೇ ನಿನಗೇನೂ ತಿಳಿಯದೇನೇ 4ಕದ್ದು ಮೊಲೆಯುಂಡು ಕರು ಬಿಟ್ಟು ಹರಕೊಂಡಿತು ನೋಡಿರಿ ಎಂಬೆಯಂತೆ |ದುಗ್ಧವೆಮಾರಿಬಾಳಿವೆ ಮಾಡುವರೆಂತು ತಾಳುವರೋ ಹೀಗಾದರೆ ನಿಲ್ಲರೋ ||ಇದ್ದಾ ಮನೆಯವರಿಗೆ ನಂಬವು ಅಂಥಾಲಾಳ ಮೊಲೆಯ ನಾನುಂಡರೆ ಮೋರೆಗೆ |ಒದ್ದರೆ ರೋದನ ಮಾಡುತ ನಿನ್ನ ಬಳಿಗೊಂದಿನ ಬಾರೆನೇ ಹುಡುಗರಿಗಂಬುವ ಮಾತೇನೇ 5ಇಡಲುದಕವ ಬೆರಸಿ ಮಜ್ಜನಕೆ ಛಲದಿಂದಲಿ ಚಲ್ಲಿ ಬಾಹುವರೇ |ಬಡಿವೆನೊ ನಾ ತಾಳದೆ, ಮುದ್ದಾದರೆ ಮತ್ತೊಮ್ಮೆಯುಣಬೇಕು ಆಡುತ ಮನೆಯೊಳಗಿರಬೇಕು ||ಹುಡುಗರ ಸಂಗಡ ಅಣ್ಣನೂ ನಾನೂ ಇದ್ದೆವೆ, ಅಲ್ಲಾಕೆಯ ಮೊಮ್ಮಗನು |ಗಡಿಗೆಯ ಉರುಳಿಸೆ ನಾ ಕಂಡವರಿಗೆ ಹೇಳಿದೆನೆ ಇಷ್ಟಾ ಯನ್ನನು ಕಾಡುವದದೃಷ್ಟಾ 6ಎದೆಗಳ ಮುಟ್ಟುವದೇಕೋ ಎರಕೊಂಬುವರಲ್ಲಿಗೆ ಪೋಗಿಯಿನ್ನನ್ನಾ |ಹದದಿಂದಲೆ ಯಿರು ಶಿಕ್ಷೆಯ ಮಾಳ್ಪೆ ಎಚ್ಚರಿಕೆಯಿರಲಿ ಕಾಲ್ಪಡಿದರೆ ಬಿಡೆನೋ ಮರಳಿ ||ಮುದದಿಂದಲಿ ಚಂಡೊಗೆಯಲು ಅವಳಾ ಬಚ್ಚಲಿಯೊಳು ಬಿತ್ತು ತಕ್ಕೊಂಡೇ |ಹದ ತಪ್ಪಿದರೀ ಹೆಂಗಸರೆಲ್ಲಾ ಪ್ರಾಣೇಶ ವಿಠಲನಾಣೇ ಸುಳ್ಳಲ್ಲವು ಕಾಣೇ 7
--------------
ಪ್ರಾಣೇಶದಾಸರು
ಇಂಥ ಹೆಣ್ಣನು ನಾನೆಲ್ಲಿ ಕಾಣೆನೊ |ಹೊಂಚತಾರಿ ಕಾಣಿರೊ ಪಸಂತತ ಸುರರಿಗೆ ಅಮೃತವನುಣಿಸಿದಪಂತಿಯೊಳಗೆ ಪರಪಂತಿಯ ಮಾಡಿದ ಅ.ಪಮಂದರಗಿರಿ ತಂದು ಸಿಂಧುವಿನೊಳಗಿಟ್ಟುಚೆಂದದಿಂದಲಿ ಕಡೆದಮೃತವ ತೆಗೆದು ||ಇಂದುಮುಖಿಯೆ ನೀ ಬಡಿಸೆಂದು ಕೊಟ್ಟರೆ |ದಂಧನೆಯನು ಮಾಡಿ ದೈತ್ಯರ ವಂಚಿಸಿದ 1ವಿಸುವಾಸದಿಂದಲಿ ಅಸುರಗೆ ವರವಿತ್ತು |ತ್ರಿಶುಲಧರನು ಓಡಿ ಬರುತಿರಲು ||ನಸುನಗುತಲಿ ಬಂದು ಭಸುಮಾಸುರನಿಗೆ |ವಿಷಯದಾಸೆಯ ತೋರಿ ಭಸುಮವ ಮಾಡಿದ 2ವಸುಧೆಯೊಳಗೆ ಹೆಣ್ಣು ಒಸಗೆಯಾಗದ ಮುನ್ನ |ಬಸುರಿಲ್ಲದೆ ಬೊಮ್ಮನ ಪಡೆದಿಹಳು ||ಕುಸುಮನಾಭ ನಮ್ಮ ಪುರಂದರವಿಠಲನ |ಪೆಸರ ಪೊತ್ತವಳು ಈ ಹೊಸ ಕನ್ನಿಕೆಯು 3
--------------
ಪುರಂದರದಾಸರು
ಇಂಥಾ ದೂರುವುದೊಳಿತಲ್ಲವರೆಮ್ಮ ರಂಗಯ್ಯನು, ಹಾವಳಿ |ಅಂಥಾದು ಏನು ಮಾಡಿದನಮ್ಮ ಎಂದೆಂದಿಗು ನಮ್ಮ ||ಸಂತತಿಯೊಳು ಗುಣವಂತರೇ ಕೃಷ್ಣ ನಿ-ರಂತರ ಬಡವರನೆಂತು ದಣಿಸುವ ಪಕಣ್ಣೇ ಬಿಡುವನು ಬೆದರಿಸೆ ಮಾತರಿಯ ವನದೊಳಗಡಗಿಹ |ಮಣ್ಣು ತಿಂಬುವ ಬಾಯ್ದೆರೆವನಾರ್ಯ ಹಿತಕರ್ಮಗಳರಿಯ ||ಅನ್ನ ತಿನ್ನಲರಿಯ ಬೆಣ್ಣೆ ಮೆಲುವ ಬಲು |ಹೆಣ್ಣು ನೆರೆದು ಮತ್ತನ್ಯರೊಳು ಕಲಹೆ 1ಎಲ್ಲ್ಯಾಡೊದು ದುರ್ಗಂಧವು ಕಠಿಣಾಂಗ ನೆಲಗೆದರುವ ಶ್ರಿಂಗ |ರಿಲ್ಲದೆ ರಹದೆರೆವರ್ಭಕ ರಂಗ ಪಾಪವರಿಯ, ಮಂಗ- ||ರೊಲ್ಲಭ ಅಹಿಫಣೆಯಲ್ಲಿ ಕುಣಿದು ವಸ- |ನಿಲ್ಲದೆ ತಿರುಗುವಗೆಲ್ಲಿದೊ ವಾಚಿ2ಮೀನ ಕೂರ್ಮದಂತ್ಯುದಕದೊಳಗೆ ಆಡುವ ಕೆಸರೊಳಗೆ |ಶ್ರೀನಾರಸಿಂಹ ಸಣ್ಣವರೊಳಗೆ ಆಡುವ ತನ್ನೊಳಗೆ ||ತಾನೇ ಅಗ್ನಿಯ ನುಂಗಿ ನಭಕೇಶಗೆಮಾನವಕೊಟ್ಟಾನೆ ಪ್ರಾಣೇಶ ವಿಠಲನ 3
--------------
ಪ್ರಾಣೇಶದಾಸರು
ಇಂದುನಾಳ್ಯೊ ಈಗಾವಾಗೊ ಈಕಾಯಸ್ಥಿರವಲ್ಲಇಂದಿರೇಶ ನಿನ್ನ ನೆನೆವ ಮತಿಯ ನೀಡೊ ಮನ್ನಿಸಿ ನೋಡೊ ಪ.ಕುಚ್ಛಿತ ಕರ್ಮವಾಚರಿಸಿ ಕಶ್ಮಲ ಜನ್ಮನುಭವಿಸಿದುಶ್ಚಿತ್ತದಿ ಬಾಳ್ದೆನಯ್ಯ ದೂರಾದೆ ನಿಮಗೆ ದಮ್ಮ್ಮಯ್ಯಅಚ್ಚುತ ನಿನ್ನಿಚ್ಛೆಯಿಂದೆ ಆದಿವರ್ಣದವನಾದೆಸ್ವಚ್ಛಿತ ಭಕ್ತಿಯನಿಲಯ ಸುಜನಬಂಧು ಸುಗುಣಸಿಂಧು 1ಹೊಟ್ಟೆಯ ಹೋರಟೆಗಾಗಿ ಹೊತ್ತಾರೆದ್ದು ತಿರುಗಿ ತಿರುಗಿಕೆಟ್ಟ ವೃತ್ತಿಯನ್ನು ಹಿಡಿದೆ ಕೀಳುಮನುಜರೊಳಾಡಿದೆಬಿಟ್ಟೆ ನಿಮ್ಮ ಪೂಜೆಯನ್ನು ಬಿದ್ದೆ ಭವಾಂಬುಧಿಯನ್ನುವಿಠ್ಠಲ ಎನ್ನುದ್ಧರಿಸೊ ವಿದ್ವದ್ಹøದ್ಯ ವೇದವೇದ್ಯ 2ವೇದಶಾಸ್ತ್ರಾಭ್ಯಾಸವಿಲ್ಲ ವೇದಜÕರರ್ಚಿಸಲಿಲ್ಲಬೋಧವನು ಕೇಳಲಿಲ್ಲ ಬುದ್ಧಿ ಎನ್ನೊಳು ಚೂರಿಲ್ಲಸಾಧನವ ತಿಳಿಯಲಿಲ್ಲ ಸಾಧುಮಾರ್ಗವ ಕಾಣಲಿಲ್ಲಭೇದಜÕರೊಳ್ ಕೂಡಿಸೆನ್ನ ಭೀಮಪಾಲಾಭಿನವಲೀಲ 3ಕಾಂತೇರ ಕುಚೇಷ್ಟೆಗಳಿಗೆ ಕೀಳುಚ್ಚಾರದ ಮಕ್ಕಳಿಗೆಭ್ರಾಂತನಾಗಿ ಸ್ನೇಹ ತೋರ್ದ ಬಲೆಯೊಳ್ ಸಿಲುಕಿದೆಸಂತರಂಘ್ರಿ ಸಖ್ಯವನೊಲ್ಲೆ ಸತ್ಕಥೆಯನಾಲಿಸಲೊಲ್ಲೆಅಂತು ಮದವನಿಳಿಸಿ ಕಾಯೊಅಂಗಜಪಿತನೆ ಅಘರಹಿತನೆ4ಬಳಲಿಸಿದೆ ತನುವನು ಬಯಸಿ ಖಳರಾರ್ಥವನ್ನುನಳಿನಾಕ್ಷ ನಿನ್ನ ಬೇಡದೆ ನಾಸ್ತಿಕರಿಗೆ ಕೈಯನೊಡ್ಡಿದೆಹೊಳೆವ ಸುರಭಿಯ ಬಿಟ್ಟು ಹುಲಿಪಾಲಿಗಾಯಾಸಬಟ್ಟೆಕಳೆದೆನನಘ್ರ್ಯಾಯುಷ್ಯವ ಕುಚೇಲಮಿತ್ರ ಕರುಣನೇತ್ರ 5ವಿಷ್ಣು ತತ್ವವರಿಯದೆ ಧೀರ ವೈಷ್ಣವನೆನಿಸದೆಭ್ರಷ್ಟಮನವ ತೊಳೆಯದೆ ಬಹಿಛ್ಛಿನ್ನದಲ್ಲೆ ಮೆರೆದೆಶಿಷ್ಯ ಗುರುಗಳ ಜರಿದೆ ಶಠರನು ಅನುಸರಿಸಿದೆದುಷ್ಟವೃತ್ತಿಯನು ಬಿಡಿಸೊ ದುರ್ಗುಣಧಾಮನ ದುರಿತಶಮನ 6ಇಂದ್ರಿಯಗ್ರಾಮ ನಿನ್ನದು ಇಷ್ಟ ಬಳಗವು ನಿನ್ನದುಸೌಂದರ್ಯ ಸುಖ ನಿನ್ನದು ಸ್ವರೂಪ ಸ್ವಾತಂತ್ರ್ಯ್ರನಿನ್ನದುಮಂದಮತಿಯಿಂದ ಅಹಂಮತಿಯಲ್ಲಿ ನೊಂದೆ ಬಹುಕುಂದನೋಡದೆನ್ನ ಸಲಹೊ ಕುಂಜರವರದ ಕುಶಲಪದದ7ನಿನ್ನ ಕಥಾಮೃತವು ಕಿವಿಗೆ ನಿನ್ನ [ಕೀರ್ತನೆ ನಾಲಗೆಗೆ]ನಿನ್ನ ಲಾವಣ್ಯವು ಕಣ್ಣಿಗೆ ನಿನ್ನ ಸೇವೆ ಸರ್ವ ಇಂದ್ರಿಯಕ್ಕೆಎನಗೆ ಬೇಗ ಕರುಣಿಸಿ ಎಲ್ಲ ದುರಿಚ್ಛೆಗಳ ನೂಕುಇನ್ನು ದಾಸದಾಸ್ಯವು ಬೇಕೊ ಋಷಿಕುಲೇಶ ಹೃಷಿಕೇಶ 8ಅಚ್ಯುತಾನಂತಗೋವಿಂದ ಆದಿಪುರುಷ ಮುಕುಂದಸಚ್ಚಿದಾನಂದಸರ್ವೇಶ ಸುಚರಿತ್ರ ಕರಿವರದನೆಚ್ಚಿದೆ ತವ ಪಾದಾಂಬುಜ ನಮೊ ಬೊಮ್ಮಾದ್ಯರ ದೇವನಿಚ್ಚಪ್ರಸನ್ವೆಂಕಟ [ನಿನ್ನ ನೆನೆವ ಮ್ಮತಿಯನೀಡೊಮನ್ನಿಸಿ ನೋಡೊ] 9
--------------
ಪ್ರಸನ್ನವೆಂಕಟದಾಸರು