ಒಟ್ಟು 4652 ಕಡೆಗಳಲ್ಲಿ , 111 ದಾಸರು , 2660 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿದಿನ ಇಂಥ ಹರಿದಿನ ಪ.ಹರಿದಿನದ ಮಹಿಮೆ ಹೊಗಳಲಗಾಧಪರಮಭಾಗವತರಾಚರಣೆಗಾಹ್ಲಾದÀದುರಿತದುಷ್ಕøತ ಪರ್ವತಕೆ ವಜ್ರವಾದಮರುತ ಸದ್ವ್ವ್ರತಕೆಲ್ಲ ಶಿರೋರತ್ನವಾದ ಅ.ಪ.ಭಕ್ತಿಗೆ ಮೊದಲು ವಿರಕ್ತಿ ಬೀಜವೆಂಬಸಕಲ ತಪದೊಳೆಲ್ಲ ಮೇಲೆನಿಸಿಕೊಂಬಮಖಕೋಟಿಗಧಿಕ ಫಲಸ್ಥಿರ ಸ್ತಂಭಮುಕ್ತಿ ಸೋಪಾನ ನಿಧಾನತ್ವವೆಂಬ 1ತ್ವಕ್ ಚರ್ಮ ಅಸ್ತಿ ಮಜ್ಜ ಮಾಂಸರುಧಿರಯುಕ್ತ ಸಪ್ತ ಧಾತುಗಳಿಹ ಶರೀರನಖಕೇಶ ಕಫ ಸ್ವೇದ ಮಲ ಮೂತ್ರಾಗರ ಈನಿಖಿಳಪಾವನ ಮಾಡುವ ನಿರಾಹಾರ2ವರವಿಪ್ರಕ್ಷತ್ರಿಯ ವೈಶ್ಯ ಶೂದ್ರ ಜನರುತರಳಯೌವನ ವೃದ್ಧ ನಾರಿಯರುಕಿರಾತಪುಲತ್ಸ್ಯಾಂದ್ರ ಹೂಣ ಜಾತಿಯವರುಹರಿವ್ರತ ಮಾತ್ರದಿ ಮುಕ್ತಿಯೈದುವರು 3ದ್ವಿಜಗೋವಧ ನೃಪರನು ಕೊಂದ ಪಾಪನಿಜಗುರು ಸತಿಯರ ಸಂಗದ ಪಾಪಅಜಲಪಾನದ ದಿನದುಂಡ ಮಹಾಪಾಪನಿಜನಾಶ ಮೋಕ್ಷ ಪ್ರಾಪ್ತಿಯು ಸತ್ಯಾಲಾಪ 4ಯಾಮಿನಿಯಲಿ ಅನಿಮಿಷದ ಜಾಗರವುಶ್ರೀ ಮದ್ಭಾಗವತ ಶ್ರವಣ ಗೀತಾಪಠಣಪ್ರೇಮವಾರಿಧಿಲಿ ಮುಳುಗಿ ಸಂಕೀರ್ತನೆಯುಧಾಮತ್ರಯದ ಸುಖಕಿದೇ ಕಾರಣವು 5ಅರ್ಧಕೋಟಿ ತೀರ್ಥಸ್ನಾನವೆಲ್ಲ ಅಜಸ್ರಪ್ರಯಾಗ ಕಾಶಿವಾಸವೆಲ್ಲ ಸಹಸ್ರ ಕೋಟಿ ಭೂಪ್ರದಕ್ಷಿಣೆಯೆಲ್ಲಸುಶ್ರದ್ಧೆ ಸಹ ಜಾಗರಕೆ ಸರಿಯಲ್ಲ 6ಪಂಚಮಹಾ ಪಾಪ ಪ್ರಪಾಪವವಗೆವಂಚಕ ಪಿಶುನ ಜನರ ಪಾಪವವಗೆಮಿಂಚುವ ಕ್ಷೇತ್ರವಳಿ ಪಾಪವವಗೆಪಂಚಕವ್ರತ ಪೆತ್ತ ವ್ರತ ಉಲ್ಲಂಘಿಪಗೆ 7ಸರ್ಪಶಯನಗೆ ನೀರಾಜನವೆತ್ತಿ ನೋಡಿಉಪವಾಸದಿ ಭಗವಜ್ಜನ ನೃತ್ಯವಾಡಿಚಪ್ಪಾಳಿಕ್ಕುತ ದಂಡಿಗೆ ಮುಟ್ಟಿ ಪಾಡಿತಪ್ಪೆ ನಾಯಿ ನರಕ ಫಲ ಕೈಗೂಡಿ 8ಶ್ರುತಿಪಂಚರಾತ್ರಾಗಮವು ಸಾರುತಿವೆಯತಿ ಮಧ್ವರಾಯರುಕುತಿ ಪೇಳುತಿವೆಕ್ರತುಪ್ರಸನ್ವೆಂಕಟ ಕೃಷ್ಣ ಮತವೆಕ್ಷಿತಿಪತಿ ಸುರರತಿಶಯದ ಸದ್ವ್ವ್ರತವೆ 9
--------------
ಪ್ರಸನ್ನವೆಂಕಟದಾಸರು
ಹರಿನಮ್ಮೊಗತನ ಮಾಡಲೀಸನೆ ಕೇಳಮ್ಮ ಇವನಚರಿಯವಾರ ಮುಂಧೇಳುವನೆ ಗೋಪ್ಯಮ್ಮ ಪತನ್ನೊಳು ತಾನೇ ರುದಿಸುತ ಬಂದ ಕಾಣಮ್ಮ | ಯಾಕೆನೆಕಣ್ಣಿನ ಬೇನೆ ಅತಿ ಕಠಿಣೆಂದಾ ಅವನಮ್ಮ |ಸಣ್ಣನಳುವಳೆ ಮೊಲೆ ಹಾಲ್ತಾ ಎಂದನಮ್ಮ | ನಿನ ಕ-ಯ್ಯನ್ನು ಮುಟ್ಟಿದಿರೆಂದುಮಾನಕೊಂಡನಮ್ಮ 1ತರುಗಳ ಬಾಲಕೆ ತರಳರ ಕೈ ಕಟ್ಟುವನಮ್ಮ | ಯನ್ನಕರದಲ್ಲಿ ಹಿಡಿ ಹಿಡಿಯೆಂದು ತೇಳಿಕ್ಕುವನಮ್ಮ ||ವರಗುವುದೆಲ್ಲಿ ನೀವೆಂದು ಕೇಳುವನಮ್ಮ | ನಿಮ್ಮಪುರುಷರು ಕಾಂಬುವಯಿಲ್ಲ ಎಲ್ಲೆಂಬುವನಮ್ಮ 2ಜೋಗೀ ರೂಪವ ತಾಳಿ ಮನೆಗೆ ಬಂದನಮ್ಮ | ನಾನುಬಾಗಿ ಸುತರಿಲ್ಲೆಂದವನ ಕೇಳಿದೆನಮ್ಮ ||ಹೋಗಲಿ ಎಲ್ಲರೂ ಮಂತ್ರವ ಕೊಡುವೆನೆಂದಮ್ಮಾ | ಕೃಷ್ಣನಾಗಿ ಇದುರಿಗೆ ನಿಂತ ಭಂಡು ಕೇಳಮ್ಮ3ನಾಕು ಬೆರಳ ತೋರಿ ತಲೆದೂಗುವನಮ್ಮ | ಇಂಥ-ದ್ಯಾಕೊ ಎಂದರೆ ಯೀಸೆ ಹಾಲ್ಕೊಡೆಂದನಮ್ಮ ||ಕಾಕುಬುದ್ಧಿಯೊಂದೆರಡೆ ಮೂರೇನಮ್ಮ | ಶ್ರೀ ಪಿ-ನಾಕಿಯಾಣೆ ಕರೆದು ಕೇಳೆ ಗೋಪ್ಯಮ್ಮ4ಮತಿಗೆಠ್ಠೆಣ್ಹುಡುಗರ ಕರೆದೊಯ್ದೋಣ್ಯೊಳಗಮ್ಮಾ | ನಾವುಸತಿಪುರುಷಾಗ್ಯಾಡುವ ಬಾ ಎಂಬೊನಲ್ಲಮ್ಮ ||ಪೃಥಿವಿಯ ಹುಡುಗರ ತೆರದರೆ ಚಿಂತಿಲ್ಲಮ್ಮ | ಇವನುಸುತರನು ಪಡೆವದು ಬಲ್ಲನೇ ಸುಳ್ಳಮ್ಮ 5ನವನೀತವ ಕೊಳ್ಳೆಂದೊದರುತ ಬಂದನಮ್ಮ | ನಾನುಹವರನ ಕಾಶಿಗೆ ಎಷ್ಟೆಂದು ಕೇಳಿದೆನೆಮ್ಮ ||ಖವ ಖವ ನಗುತಲಿ ಬದಿಬದಿಗೆ ಬಂದನಮ್ಮ | ತಕ್ಕೊಯುವತಿ ಇದರಷ್ಟೆಂದು ಕುಚ ಮುಟ್ಟುವನಮ್ಮ 6ಹಿತ್ತಲ ಕದಕೆ ಶೀ(ಕೀ)ಲ್ಯುಂಟೋ ಇಲ್ಲೆಂಬುವನಮ್ಮ | ನಮ್ಮ-ಅತ್ತೆಯ ಕಣ್ಣು ಹೋಗಲಿ ಎನಬೇಕೇನಮ್ಮ ||ಉತ್ತರ ಕೊಡದಿರೆ ಒಪ್ಪಿದೆ ಇದಕೆಂಬುವನಮ್ಮ | ಇಷ್ಟೊಂ-ದರ್ಥೆ ಪ್ರಾಣೇಶ ವಿಠಲಗೆ ಯಶೋದೆಯಮ್ಮ 7
--------------
ಪ್ರಾಣೇಶದಾಸರು
ಹರಿನಾಮಕೀರ್ತನೆಅನುದಿನಮಾಳ್ಪಗೆ |ನರಕ ಭಯಗಳುಂಟೆ? ಪಕೇಸರಿಗಂಜದ ಮೃಗವುಂಟೆ?-ದಿ-|ನೇಶನಿಗಂಜದ ತನುವುಂಟೆ? ||ವಾಸದೇವ ವೈಕುಂಠ ಜಗನ್ಮಯ |ಕೇಶವ ಕೃಷ್ಣ ನೀನೆಂದುಚ್ಚರಿಸುವ1ಕುಲಿಶವನೆದುರಿಪ ಗಿರಿಯುಂಟೆ?-ಬಲು |ಪ್ರಳಯ ಬಂದಾಗ ಜೀವಿಪರುಂಟೆ?ಜಲಜನಾಭ ಗೋವಿಂದ ಜನಾರ್ಧನ |ಕಲುಷಹರಣಕರಿರಾಜ ರಕ್ಷಕನೆಂಬ 2ಗರುಡಗೆ ಅಂಜದ ಫಣಿಯುಂಟೆ? -ದ-|ಳ್ಳುರಿಯಲಿ ಬೇಯದ ತೃಣವುಂಟೆ? ||ನರಹರಿನಾರಾಯಣ ಕೃಷ್ಣ ಕೇಶವ |ಪುರಂದರವಿಠಲ ನೀನೆಂದುಚ್ಚರಿಸುವ3
--------------
ಪುರಂದರದಾಸರು
ಹರಿಪದಯುಗಲವನಿತ್ಯ ನೆನೆದವೆಗೆ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಪರಮಪದವಿಯೇ ಸಾಕ್ಷಿ ||ಹರಿ -ಗುರು ದೂಷಣ ಮಾಡಿದ ಮನುಜಗೆ |ನರಕರೌರವವೆ ಸಾಕ್ಷಿ ಪ.ಕಡುಭಕ್ತಿಯಲಿ ಕೃಷ್ಣನÀ ನೆನೆದರೆ |ನಡೆಯಲಿ ಸತ್ಯವೆ ಸಾಕ್ಷಿ ||ದೃಡ ಭಕುತಿಯಿಂದ ಉಣಬಡಿಸಿದವಗೆ |ಷಡುರಸಾನ್ನವೇ ಸಾಕ್ಷಿ 1ತಾನೊಂದುಂಡು ಪರರಿಗೊಂದಿಕ್ಕುವಗೆ |ಗುಲ್ಮರೋಗವೇ ಸಾಕ್ಷಿ ||ಹೀನನಾಗಿ ಹಿರಿಯರನು ದೂಷಿಪಗೆ |ಹೀನ ನರಕವೇ ಸಾಕ್ಷಿ 2ಕನ್ಯಾದಾನವ ಮಾಡಿದವಗೆ ದಿವ್ಯ |ಹೆಣ್ಣಿನ ಭೋಗವೆ ಸಾಕ್ಷಿ ||ಕನ್ಯಾದಾನವ ಮಾಡದ ಮನುಜಗೆ |ಹೆಣ್ಣಿನ ದೈನ್ಯವೇ ಸಾಕ್ಷಿ 3ಅನ್ನದಾನ ಮಾಡಿದ ಮನುಜಗೆ ದಿ - |ವ್ಯಾನ್ನವನುಂಬುದೆ ಸಾಕ್ಷಿ ||ಅನ್ನದಾನ ಮಾಡದ ಮನುಜಗೆ ತಿರಿ -ದುಣ್ಣುತಿರುವುದೇ ಸಾಕ್ಷಿ 4ಕ್ಷೇತ್ರದಾನ ಮಾಡಿದ ಮನುಜಗೆ ಏತ - |ಛತ್ರವನಾಳ್ವುವದೆ ಸಾಕ್ಷಿ ||ಪಾತ್ರವರಿತು ಧರ್ಮಮಾಡಿದವಗೆ ಸತ್ -ಪುತ್ರರಾಗುವುದೆ ಸಾಕ್ಷಿ 5ಕಂಡ ಪುರುಷರಿಗೆ ಕಣ್ಣಿಡುವ ನಾರಿಗೆ |ಗಂಡನು ಕೇಳುವುದೆ ಸಾಕ್ಷಿ ||ಪುಂಡನಾಗಿ ಪರಸ್ತ್ರೀಯರ ಸೇರುವಗೆ |ಹೆಂಡಿರ ಕಳೆವುದೆ ಸಾಕ್ಷಿ 6ಭಕ್ತಿಯರಿಯದ ಅಧಮನಿಗೊಂದು |ಕತ್ತಲಮನೆಯೇ ಸಾಕ್ಷಿ ||ಮುಕ್ತಿಪಡೆವುದಕೆ ಪುರಂದರವಿಠಲನ |ಭಕ್ತನಾಗುವದೆ ಸಾಕ್ಷಿ 7
--------------
ಪುರಂದರದಾಸರು
ಹರಿಯಲ್ಲಿ ಧನ್ಯರು ಪೊರೆಯರು ಸತ್ಯಸ್ಥಿರವೀ ಮಾತಿಗೆ ಸದ್ಭಕ್ತರು ಸಾಕ್ಷಿಯಿಹರು ಪಪುಣ್ಯಾತ್ಮ ಪ್ರಿಯ ವೃತ ಸಾಕ್ಷಿ ಜಗನ್ಮಾನ್ಯ ನಾರದ ದೇವ ಋಷಿ ಶ್ರೇಷ್ಠ ಸಾಕ್ಷಿಧನ್ಯ ಧೃವರಾಯನು ಸಾಕ್ಷಿ ಹರಿಯಪೂರ್ಣ ವ್ಯಾಪ್ತಿಯ ತೋರ್ದ ಪ್ರಲ್ಹಾದ ಸಾಕ್ಷಿ 1ದೊರೆ ಅಂಬರೀಷನು ಸಾಕ್ಷಿಹರಿಗುರುಭಕ್ತಿ ನಾಮಕೆ ದ್ರೌಪದಿ ಸಾಕ್ಷಿಸ್ಥಿರ ವಿಭೀಷಣ ರಾಜ ಸಾಕ್ಷಿ ತನ್ನಮರಣ ಕಾಲದಿ ನೆನೆದ ಅಜಮಿಳ ಸಾಕ್ಷಿ 2ದೊರೆ ಧರ್ಮ ದೇವರು ಸಾಕ್ಷಿ ಜಗದ್ಗುರುವಾದ ಮಹ ರುದ್ರದೇವರು ಸಾಕ್ಷಿಗರಳಕಾಳಿಂಗನು ಸಾಕ್ಷಿ ಪ್ರಾಣಾತುರದಿಹರಿಯ ಕರೆದ ಗಜರಾಜ ಸಾಕ್ಷಿ 3ಶಿಲೆಯಾದ ಅಹಲ್ಯೆಯ ಸಾಕ್ಷಿ ಗರ್ವವರ್ತಿಸಿದ ನಹುಷನೃಗರು ಸಾಕ್ಷಿಚೆಲುವೆ ಗಂಡಿಕಾ ವೇಶ್ಯ ಸಾಕ್ಷಿ ಭಕ್ತಿಗೊಲಿದುನಲಿದಜ್ಞಾನಿವಿದುರನು ಸಾಕ್ಷಿ 4ಮೊರೆ ಹೊಕ್ಕ ಸುಗ್ರೀವ ಸಾಕ್ಷಿ ಬಾಲ್ಯಪರಮಮಿತ್ರನಾದ ಕುಚೇಲ ಸಾಕ್ಷಿಶರಬಿಟ್ಟ ಭೃಗುವಾದ ಸಾಕ್ಷಿ ಶ್ರೇಷ್ಠಹರಿದಿನ ವೃತದ ರುಗ್ಮಾಂಗ ಸಾಕ್ಷಿ 5ಪುಂಡಲೀಕ ಋಷಿಸಾಕ್ಷಿ ಆ ಮೃಕಂಡಮುನಿಜ ಮಾರ್ಕಾಂಡೇಯ ಸಾಕ್ಷಿಪಂಡಿತಸಾಂದೀಪ ಸಾಕ್ಷಿ ಕುರುಪಾಂಡವರ ಪಿತಾಮಹ ಭೀಷ್ಮನು ಸಾಕ್ಷಿ 6ಪಿರಿದು ಕಷ್ಟದ ನಳ ಸಾಕ್ಷಿ ಕೃಷ್ಣಕರುಣಿಕೆ ಪಾತ್ರಪರೀಕ್ಷಿತಸಾಕ್ಷಿನಳಕೂಬರು ಸಾಕ್ಷಿ ಸತ್ಯದ್ಹರಿಶ್ಚಂದ್ರಾದಿ ಪುಣ್ಯ ಶ್ಲೋಕರು ಸಾಕ್ಷಿ 7ನಿದ್ದೆಯ ಮುಚುಕುಂದ ಸಾಕ್ಷಿ ಆತ್ಮಬದ್ಧಭಕ್ತಿಯಲರ್ಪಿಸಿದಬಲಿಸಾಕ್ಷಿಶುದ್ಧಜ್ಞಾನಿಶುಕಸಾಕ್ಷಿ ಹರಿಯಸದ್ಯದಣನಾದ ಬಲಭದ್ರ ಸಾಕ್ಷಿ 8ಅರ್ಕಾದಿ ಋಷಿಗಳು ಸಾಕ್ಷಿ ವಿಶ್ವಾಮಿತ್ರದಕ್ಷ ಪ್ರಜೇಶ್ವರೆಲ್ಲ ಸಾಕ್ಷಿಮಿತ್ರೆ ಕುಬ್ಜಾ ತ್ರಿಜಟಿ ಸಾಕ್ಷಿ ಮಹಾಮೈತ್ರೇಯ ಪರಾಶರ ಮುನಿಶರು ಸಾಕ್ಷಿ 9ಇಂದ್ರಾದಿದಿವಿಜರುಸಾಕ್ಷಿ ಕೃಷ್ಣನ್ಹೊಂದಿ ಸೇವಿಸಿದುದ್ಧವಕ್ರೂರ ಸಾಕ್ಷಿಸುಂದರ ಗೋಪಿಯರು ಸಾಕ್ಷಿ ಪಾಪಸಂದೋಹದ್ಯುದೃತ ವಾಲ್ಮೀಕಿ ಸಾಕ್ಷಿ 10ಸರ್ವಮುಕ್ತಜೀವರು ಸಾಕ್ಷಿಯಾ ದೇವರು ವಸುದೇವ ದೇವಕಿಯರು ಸಾಕ್ಷಿಹರಿದಾಸರೆಲ್ಲರು ಸಾಕ್ಷಿ ಫಲಸಿರಿವಿಠಲಗೆ ಕೊಟ್ಟ ಶಬರಿಯ ಸಾಕ್ಷಿ 11
--------------
ಸಿರಿವಿಠಲರು
ಹರಿಯೆ ಗತಿಯೆನ್ನಿರೈ ಶ್ರೀನರಹರಿಯೆ ಶರಣೆನ್ನಿರೈ ಪ.ಹರಿಪಾದಕಮಲವ ನಂಬದ ಮೂಢನು ಮನುಜನಲ್ಲದನುಜಶ್ರೀಹರಿಚರಿತಾಮೃತ ಕೇಳದೆ ಗರ್ವಿಪ ನರನು ಪಾಮರನÀು 1ಹರಿಯ ಬಂಟರ ಅನುಸರಣೆಗಳ ಪರಿತ್ಯಾಗಿ ವೃದ್ಧಗೂಗಿಹರಿಮಹಿಮೆಯ ಹೊಗಳಾಡದ ಮಾತಿನ ಮುಖನು ಮಂಡೂಕನು 2ಕೃಷ್ಣಗೆ ಪ್ರಿಯವ್ರತ ದಾನಕೆ ವಿಮುಖಾದ ಧನಪನವ ಕುಣಪಕೃಷ್ಣಾಕೃತಿಯ ಬಹಿರಂತದಿ ನೋಡದ ಜಾಣನವ ಕೋಣ 3ಕೃಷ್ಣಗೆ ನಮಿಸದೆಸತಿಸುತರೊಳು ಭೂರಿತುಷ್ಟ ಹಿತನಷ್ಟ ಶ್ರೀಕೃಷ್ಣನವರ ಕಂಡೆರಗದ ವಿಷಯದಭೋಗಿಭವರೋಗಿ4ಗೋವಿಂದ ಸರ್ವೋತ್ತಮನಿರೆ ಬೇರೆಂಬಜ್ಞಾನಿ ಮದ್ಯಪಾನಿಗೋವಿಂದನೊಳು ವಿಶ್ವಾಸಿಲ್ಲದ ಭಕ್ತಿಯ ಧೀರ ಶುದ್ಧಜಾರ5ಗೋವಿಂದ ತೀರ್ಥ ಪ್ರಸಾದÀವ ನರಿಯದ ಬಲ್ಲನೆ ಕಳ್ಳನುಗೋವಿಂದನೊಪ್ಪದ ಮತವಿಡಿದವ ಮಹಿಗೆಕಕ್ಕಸರಕ್ಕಸ6ಪ್ರಸನ್ನ ಮೂರುತಿ ವಿಧಿಭವವಂದ್ಯನ ಅರ್ಚಕ ಧನ್ಯರೆ ಮಾನ್ಯರುಪ್ರಸನ್ನವೆಂಕಟಪತಿ ಕಂಡುಂಡಾ ಭಕ್ತಿಯಾಸಕ್ತರೆ ಮುಕ್ತರು 7
--------------
ಪ್ರಸನ್ನವೆಂಕಟದಾಸರು
ಹರಿಯೆಗತಿಸಿರಿವಿರಿಂಚಿ ಶಿವರಿಗೆನರ -|ಹರಿಯೆಗತಿಸುರಪತಿ ಸುರರಿಗೆಪರುಕುಮಣಿದೇವಿಯ ಶಿಶುಪಾಲಗೀವೆನೆಂದು |ರುಕುಮ ಸಂಭ್ರಮಿಸಲು ಕೃಷ್ಣ ಬಂದು ||ಸಕಲ ರಾಯರುಗಳು ಸನ್ನದ್ಧರಾಗಿರೆ |ರುಕುಮಿಣಿದೇವಿಯ ವರಿಸಿ ಆಳಿದನಾಗಿ 1ಹಯ್ಯಾಸನೆಂಬವ ವೇದವ ಕದ್ದೊಯ್ಯೆ |ಹಯಗ್ರೀವನಾಗಿ ಹರಿಯವನ |ಕಾಯವ ಖಂಡಿಸಿ ಅಜಗೆ ವೇದವನಿತ್ತು |ಕಾಯ್ದ ಕರುಣಿ ಕಮಲಾಕ್ಷನೆ ದೈವವೆಂದು 2ಭಸುಮಾಸುರನಿಗೊಂದಸಮದ ವರವಿತ್ತು |ತ್ರಿಸೂಲಧರನು ಓಡಿ ಬಳಲುತಿರೆ |ಬಿಸಜಸಂಭವನಯ್ಯ ಭಸುಮಾಸುರನನು |ಭಸುಮವ ಮಾಡಿ ಭಕ್ತನ ಪಾಲಿಸಿದನಾಗಿ 3ಸುರಪನ ರಾಜ್ಯವ ಬಲಿಯಾಕ್ರಮಿಸಲು |ಹರಿಯೆ ದಾನವ ಬೇಡಿ ನೀನವನ ||ಧರೆಯಈರಡಿ ಮಾಡಿ ಪಾತಾಳಕೆ ಮೆಟ್ಟ |ಸುರಪಗೆ ರಾಜ್ಯವನಿತ್ತು ಸಲಹಿದನಾಗಿ 4ಸುರ - ಭೂಸುರರನು ಅಸುರ ಬಾಧಿಸುತಿರೆ |ಹರಿಯವತರಿಸಿ ನೀನಸುರರನು ||ಶಿರಗಳ ಚಂಡಾಡಿ ಸುರರ ಭೂಸುರರನುಪೊರೆಯುತ್ತಲಿಪ್ಪ ನಮ್ಮ ಪುರಂದರವಿಠಲ 5
--------------
ಪುರಂದರದಾಸರು
ಹಲವು ಜನ್ಮದಲ್ಲಿ ಹರಿಯ ನೆನೆಯಲಿಲ್ಲಕಲಿಗಳು ಆಗಿ ನೀ ಕೆಡಬೇಡ ಮನುಜ 1ನೀಚಜಾತಿಯಲಿ ಪುಟ್ಟಿ ಅಧಮನಾಗಿರಬೇಡಭಜಿಸು ಭಕ್ತಿಗಳಿಂದ ಮಹಾಮಹಿಮ ಕೃಷ್ಣರ 2ನಂದ ಭದ್ರಾ ಜಯರಿಕ್ತ ಪೂರ್ಣ ವೆಂಬೊಚೆಂದುಳ್ಳ ತಿಥಿಯಲ್ಲಿಘೃತನವನೀತದಧಿಕ್ಷೀರ3ನಂದದಿ ಸಕ್ಕರೆಘೃತನವನೀತದಧಿಕ್ಷೀರದಿಂದಲಿ ಅರ್ಚಿಸಿ ಸುಕೃತವಪಡಿ4ಶಯನಾದಿಗಳಿಂದ ಶಾಖಾದಿ ಫಲವ್ರತಭಯದಿಂದ ಮಾಡೋರೆ ಸತತ 5ಅದರಿಂದ ಚಾತುರ್ಮಾಸ ನಾಲ್ಕು ತಿಂಗಳುಉಳಿದಿನ ಬಂತಲ್ಲ ಭವನ ಪಾವಕ(?) ಭೀತಿ 6ಆಷಾಢÀ ಶುದ್ಧ ಏಕಾದಶಿ ಮೊದಲಾಗಿಕಾರ್ತಿಕ ಶುದ್ಧ ದ್ವಾದಶಿ ಪರಿಯಂತ್ರ 7ಶ್ರೀಕಾಂತ ಯೋಗನಿದ್ರೆಲಿ ತಾ ಪವಳಿಸಿಈಕ್ಷಿಸುತಿರುವೋನೆ ಭಕ್ತರ 8ಹರಿಮಲಗ್ಯಾನೆ ಎಂದು ಅಜ್ಞಾನದಲಿ ನೀವ್ ಕೆಡಬೇಡಿಪರಿಪರಿಕಲ್ಪೋಕ್ತದ ಪ್ರಕಾರದ ವ್ರತಗಳ ಮಾಡಿ9ಸ್ನಾನ ಸಂಧ್ಯಾವಂದನೆಯ ಕಾಲಕಾಲದಲಿ ಮಾಡಿಮನದಲ್ಲಿ ವಾಮನನ ನೆನದು ಸುಕೃತವಪಡಿ10ಅತಿಥಿಗಳ ಮನ್ನಿಸಿ ಅನಾಚಾರಗಳ ಬಿಡಿಸತಿಸುತರನೆ ಒಡಗೂಡಿ ವಿಹಿತವ್ರತಗಳ ಮಾಡಿ 11ಆಷಾಡಮಾಸದಲಿ ಶಾಕ ಹದ್ದಿನ ಮಾಂಸಭೂಷಣ ಶ್ರಾವಣದಲಿದಧಿನಾಯಿಶ್ಲೇಷ್ಮ12ಭಾದ್ರಪದ ಮಾಸದಲಿ ಪಾಲು ಸುರಾಪಾನ ಆಶ್ವೀಜಕಾರ್ತೀಕ ಮಾಸದಲಿ ಚಿತ್ರಕ್ರಿಮಿರಾಶಿದ್ವಿದಳಬಹುಬೀಜ13ಮಾಸನಿಷಿದ್ಧ ವಸ್ತುವನು ಕುದಿಸಿ ಬೇಯಿಸಿದರೆಅಸ್ತ್ರವನು ದೇವರ ಅಂಗದೊಳಿಟ್ಟಂತೆ 14ಮಾಸನಿಷಿದ್ಧ ವಸ್ತುವನು ದೇವರಿಗೆ ಸಮರ್ಪಿಸಿದರೆಬಹುಕಲ್ಪ ನರಕದೊಳದ್ದುವಿರಿ ಪಿತೃಗಳ 15ಧರ್ಮಜರು ನಾರದರು ಸ್ತುತಿ ಮಾಡುತಿರುವೋರುಧರ್ಮರಾದರ ಸಂವಾದ ಚಾತುರ್ಮಾಸದ ಸಂಕಲ್ಪ 16ಈ ಕಥೆ ವ್ರತವನೆಲ್ಲ ಅರಿತು ಯೋಚಿಸಿದವರಿಗೆಬೇಕೆಂಬೊ ಮುಕ್ತಿಯನು ಕೊಡುವ ಹಯವದನ 17
--------------
ವಾದಿರಾಜ
ಹಲವು ಬ್ರಾಹ್ಮಣ ಮಂದಿಗಳಿಗಶನವನಿಕ್ಕಿಸಲಹುವೆಯನುದಿನ ತಳೆದು ಖ್ಯಾತಿಯನು1ನಳಿನನೇತ್ರನೆ ನಿನ್ನ ಪಾದದರ್ಶನದಿಂದಹಲವು ಜನ್ಮದ ದೋಷ ನಾಶವಾಯ್ತದೆಂದು2ಅನ್ನಬ್ರಹ್ಮನುಉಡುಪಿಕೃಷ್ಣನೆಂದೆನಿಸಿದೆಸ್ವರ್ಣಬ್ರಹ್ಮನು ತಿರುಪತಿ ಶ್ರೀನಿವಾಸ3ನಾದಬ್ರಹ್ಮನು ಪಂಢರೇಶ ವಿಠಲರಾಯ-ನೆನ್ನಿಸಿ ಮೆರೆªÀಗೋವಿಂದದಾಸರ ಪ್ರೀತ್ಯ4xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಹಿಂದಿನ ಪುಣ್ಯ ಫಲವೆಂತೊಇಂದಿರೇಶಾನಂದದ ಲೀಲೆ ಅರುಹಿದ ಪ.ಚಿತ್ರವಿಚಿತ್ರ ಮಹಿಮೆಯ ತೋರುತಖಳದೈತ್ಯರನೆಲ್ಲ ಮಡುಹಿದದೈತ್ಯರನೆಲ್ಲ ಮಡುಹಿ ಬಳಲ್ದನೆಂದುಕಸ್ತೂರಿ ತೈಲವೆರಸಿ ತಂದು 1ಶಂಕಿನಿ ಪದ್ಮಿನಿಯರೊಂದಾಗಿ ಕೃಷ್ಣನಪಂಕಜಾಸನದಲಿ ಕುಳ್ಳಿರಿಸಿಪಂಕಜಾಸನದಲಿ ಕುಳ್ಳಿರಿಸಿ ತಮ್ಮ ಒಲ್ವಕಂಕಣಗೈಯ ಮೌಳಿಯೊಳಿಟ್ಟು 2ಈರೇಳು ಲೋಕದ ದೊರೆಯಾಗು ಭಕುತರಸಿರಿಯಾಗು ದಿತಿಜರರಿಯಾಗುಸಿರಿಯಾಗು ಭಕ್ತರ ದಿತಿಜಾರಿಯಾಗೆನುತಹರಸಿದರರ್ಥಿ ಮಿಗಿಲಾಗಿ 3ಕುಂಭಕುಚದ ಕಾಮಿನಿಯರು ಹರುಷದಿಅಂಬುಜಾಕ್ಷನ ಪೂಸಿ ಕಿರುಬೆಮರಿಅಂಬುಜಾಕ್ಷನ ಪೂಸಿ ಕಿರುಬೆಮರಿ ದಣಿಯದೆ ಕದಂಬ ಕಡಿದಟಕಾಳಿಯ ತಂದು 4ವಿಕ್ರಮಾನ್ವಿವತವಾದವ್ಯಾಕೃತ ಗಾತ್ರಕೆಅಕ್ಕರಿಂದೆ ತೈಲನಾಶನವಅಕ್ಕರಿಂದಲಿ ತೈಲನಾಶನವ ಪೂಸಿ ಜಗುಳಲುಘಕ್ಕನಂಬರವ ಬಿಗಿದುಟ್ಟ 5ಹದವಾದ ಬಿಸಿನೀರ ಪೊಂಬಂಡೆಯೊಳುತುಂಬಿಪದುಮಗಂಧೆಯರು ನೀರೆರೆದರುಪದುಮಗಂಧೆಯರು ನೀರೆರೆವ ಸಂಭ್ರಮಕ್ಕೆಮುದದಿಸುರರುಹೂಮಳೆಗರೆದರು6ಮುಂಬರಿಯುತ ಬಾಲೆಯರುತಕದಿಂದಅಂಬುಧಾರೆಯ ನಿಲ್ಲಗುಡದೆರೆದುಅಂಬುಧಾರೆಯ ನಿಲ್ಲಗುಡದೆರೆದುಜಾಂಬೂನದಾಂಬರವುಡಿಸಿ ಕರೆತಂದು 7ಚಿತ್ರಮಂಟಪಕೆ ನವರತ್ನ ತೆತ್ತಿಸಿದ ಕಂಭಕಸ್ತೂರಿ ಕಾರಣೆ ರಚನೆಯಕಸ್ತೂರಿ ಕಾರಣೆ ರಚನೆಯ ಮಧ್ಯದಿಮುತ್ತಿನ ಹಸೆಯೊಳು ಕುಳ್ಳಿರಿಸಿ 8ನೀಲಮಾಣಿಕಮೋಘದಿಂದಲೊಪ್ಪುವ ಪದಕಲೋಲನೇತ್ರೆಯರಳವಡಿಸಿದರುಲೋಲನೇತ್ರೆಯರು ಅಳವಡಿಸಿ ಅಂಗುಲಿಗೆಲ್ಲ ಮುದ್ರಿಕೆನಿಟ್ಟು ನಲಿದರು 9ಮುಕುಟಕೌಸ್ತುಭಮಣಿಯುಕುತ ಭೂಷಣವಿಟ್ಟುರುಕುಮಿಣಿ ಸತ್ಯರೆಡಬಲದಿರುಕುಮಿಣಿ ಸತ್ಯರೆಡಬಲದಿ ಕುಳ್ಳಿರೆನಿತ್ಯಮುಕುತಗಾರತಿಯ ಬೆಳಗಲು 10ಚಿನ್ನದ ಹರಿವಾಣದಿ ರನ್ನದಾರತಿಯಿಟ್ಟುಕನ್ನೇರು ಕಿರುನಗೆ ಬೀರಿದರುಕನ್ನೇರು ಕಿರುನಗೆ ಬಿರಿಯುತ ಪಣೆಯೊಳುಪೊನ್ನಿನಾಕ್ಷತೆಯಿಟ್ಟು ಲಲಿತವ 11ಜಯ ರಾಮ ತ್ರೈಧಾಮ ಜಯ ಜೀಮೂತಶಾಮಜಯ ಪೂರ್ಣಕಾಮ ಸಾಸಿರನಾಮಜಯ ಪೂರ್ಣಕಾಮ ಸಾಸಿರನಾಮನೆಂದುಭಯರಹಿತಗಾರತಿಯ ಬೆಳಗಿದರು 12ಚಿತ್ತಜನಯ್ಯಗೆ ಚಿನುಮಯ ದೇಹಗೆಉತ್ತಮಗುಣಗಣ ಭರಿತಗೆಉತ್ತಮಗುಣಗಣ ಭರಿತಗೆ ಪರಮಪವಿತ್ರೇರಾರತಿಯ ಬೆಳಗಿದರು 13ಪನ್ನಗಾದ್ರಿವಾಸ ಪ್ರಸನ್ನವೆಂಕಟೇಶಕನ್ನೆ ಲಕ್ಷ್ಮಿಯ ಕೂಡಿ ಆರೋಗಣೆಯಕನ್ನೆ ಲಕ್ಷ್ಮಿಯ ಕೂಡ ಆರೋಗಣೆಯ ಮಾಡಿತನ್ನ ಭಕ್ತರಿಗೆಲ್ಲ ಸುಖಪ್ರೀತ 14
--------------
ಪ್ರಸನ್ನವೆಂಕಟದಾಸರು
ಹಿಂದಿಲ್ಲಾ ಇನ್ನು ಮುಂದಿಲ್ಲಾ |ಹಿಂದಿಲ್ಲಾ ಮುಂದಿಲ್ಲಾ | ಒಂದಿನ ಸುಖವಿಲ್ಲಾಪನಂದ ಗೋಪನ ಮುದ್ದು | ಕಂದ ನೀನಲ್ಲದೆ ಅ.ಪಉಡುವರಿವೆ ಇಲ್ಲಾ ಉಂಬರನ್ನವು ಇಲ್ಲ |ನಡೆವರೆ ಮುಂದೆ ದಾರಿಯು ಕಾಣೆನಲ್ಲ ||ಪೊಡವಿ ಪಾಲಕ ಶ್ರೀಕೃಷ್ಣ ನೀನಲ್ಲದೇ |ಬಡವನ ಬಾರೆಂದು ಕರೆದು ಮನ್ನಿಪರಿಲ್ಲ1ಕಾಸು ಕೈಯೊಳಗಿಲ್ಲ | ಆಸೆ ದೇಹದೊಳಿಲ್ಲ ||ದೇಶ ದೇಶವ ಸುತ್ತಿ ಬಳಲಿದೆನಲ್ಲಾ ||ಭಾಸುರಾಂಗನೆ ಶ್ರೀನಿವಾಸ ನೀನಲ್ಲದೇ |ಲೇಸನೆಣಿಸುವರ ಕಾಣೆ ರುಕ್ಮಿಣಿನಲ್ಲ2ಸತಿಸುತರೆನಗಿಲ್ಲ |ಗತಿಮುಂದೆ ಶಿವ ಬಲ್ಲ ||ಹಿತದಿಂದಲಿರಲೊಂದು ಮನೆ ತನಗಿಲ್ಲ ||ಪೃಥವಿ ಪಾಲಕ ಸೀತಾರಾಮ ನೀನಲ್ಲದೇ |ಹಿತವ ಬಯಸುವರ ಕಾಣೆ ಜಗದ ನಲ್ಲ3ತಂದೆ ತಾಯಿಗಳಿಲ್ಲ | ಬಂಧು ಬಳಗವಿಲ್ಲ |ಒಂದು ವಿದ್ಯವ ನಾನು | ಕಲಿತವನಲ್ಲಾ ||ಇಂದಿರೆಯರಸ ಗೋವಿಂದ ನೀನಲ್ಲದೇ |ಬಂದ ಭಾಗ್ಯಗಳೊಂದು ನಿಜವಾದುದಲ್ಲಾ4<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಹುಚ್ಚು ಹಿಡಿಯಿತೊ - ಎನಗೆ ಹುಚ್ಚು ಹಿಡಿಯಿತು ಪಅಚ್ಯುತನ ನಾಮವೆಂಬ ಮೆಚ್ಚು ಮದ್ದು ತಲೆಗೆ ಏರಿ ಅ.ಪವಾಸುದೇವನೆಂಬ ನಾಮ ವದನದಲಿ ಒದರುವೆ - ಮಾಯಪಾಶವೆಂಬ ಬಲೆಯ ಹರಿದು ಹರಿದು ಬಿಸುಡುವೆ ||ಕೇಶವನ ಹೂವ ಎನ್ನ ಮುಡಿಗೆ ಮುಡಿಸುವೆ - ಭವದಕ್ಲೇಶವೆಂಬ ಗೋಡೆಯನ್ನು ಕೆದರಿಕೆದರಿ ಬಿಸುಡುವಂಥ 1ಕೃಷ್ಣನಂಘ್ರಿ ಕಮಲಗಳಲಿ ನಲಿದು ನಲಿದು ಬೀಳುವೆ -ಭವಕಷ್ಟವೆಂಬ ಕುಂಭಗಳನು ಒಡೆದು ಒಡೆದು ಹಾಕುವೆ ||ನಿಷ್ಠರನ್ನು ಕಂಡವರ ಹಿಂದೆ ಹಿಂದೆ ತಿರುಗುವೆಭ್ರಷ್ಟ ಮನುಜರನ್ನು ಕಂಡು ಕಲ್ಲು ಕಲ್ಲಿಲಿಕ್ಕುವಂಥ 2ಮಂದಮತಿಗಳನು ಕಂಡರೆ ಮೂಕನಾಗುವೆನು - ಹರಿಯನಿಂದೆ ಮಡುವವರ ಮೇಲೆ ಮಣ್ಣ ಚೆಲ್ಲುವೆ ||ಮಂದರಾದ್ರಿಧರನ ದಿನದೊಳನಶನನಾಗುವೆ ಎನ್ನತಂದೆ ಪುರಂದರವಿಠಲನ ಪೊಗಳಿ ಪಾಡಿ ಆಡುವಂಥ 3
--------------
ಪುರಂದರದಾಸರು
ಹೆಜ್ಜೆಗಳಿವೆ ನೋಡಿರಿ ರಂಗಯ್ಯನಹೆಜ್ಜೆಗಳಿವೆ ನೋಡಿರಿ ಪಹೆಜ್ಜೆಗಳಿವೆ ನೋಡಿರಿ ಮೂರ್ಜಗದÉೂಡೆಯನಅಬ್ಜಭವಾದ್ಯರ ಹೃದ್ಗøಹವಾಸನ ಅ.ಪಮಧುರಾಪುರದಿ ಜನಿಸಿದನ ಬೇಗಮಾವ ಕಂಸನ ಛೇದಿಸಿದನಚದುರೇರಿಗೊಲಿದ ಶ್ರೀಶನ ದಿವ್ಯಮದನಮೋಹನ ಕೃಷ್ಣವಿಧಿಭವಾರಾಧ್ಯನ1ಗೋಕುಲವಾಸನೆಂದೆನಿಪ ದಿವ್ಯನಾಕೇಶವಂದ್ಯ ಸರ್ವೇಶನಭೀಕರ ದೈತ್ಯರ ಸದೆದನ ಸವ್ಯ-ಸಾಚಿಯ ರಥದೊಳು ಏಕಾಂತ ನುಡಿದನ 2ವೇದ ಚೋರನ ಭೇದಿಸಿದನ ಗಿರಿಭಾರಬೆನ್ನಿಲಿ ಪೊತ್ತು ನಿಂತನಆದಿ ದೈತ್ಯನ ಸೀಳಿ ಭೂಮಿಯ ತಂದುಕ್ರೂರ ದೈತ್ಯನ ಕರುಳ್ಹಾರ ಮಾಡಿದ ಹರಿಯ 3ಬಲಿಯ ದಾನವ ಬೇಡಿದನ ಬಲುಛಲದಿ ಕ್ಷತ್ರಿಯರ ಸೋಲಿಸಿದನಲಲನೆಯ ತಂದ ಶ್ರೀವರನಗೊಲ್ಲರ ಕುಲದಲ್ಲಿ ಬೆಳೆದ ಶ್ರೀಚಲುವ ಗೋಪಾಲನ 4ದುಷ್ಟಕಾಳಿಂಗನ ಮದವನಳಿದುಮೆಟ್ಟಿನಾಟ್ಯದಿ ಸಿರದಿ ತುಳಿದನಪುಟ್ಟಪಾದದ ದಿವ್ಯ ಚಲುವನ ಗೋವ್ಗ-ಳಟ್ಟಿ ಹೋಗುವ ನಮ್ಮ ಪುಟ್ಟ ಗೋಪಾಲನ 5ಶಂಖು ಚಕ್ರವು ಗದ ಪದ್ಮವು ಹೊಳೆವÀಕಿಂಕಿಣಿಪೈಜನಿನಾದವುಬಿಂಕದಿ ಊದುವ ಕೊಳಲಗಾನವು ನಿ-ಶ್ಶಂಕೆಯಿಂದಲಿ ಭಕ್ತವೃಂದವ ಪೊರೆದನ 6ಥಳಥಳಿಸುವ ದಿವ್ಯ ತಿಲಕವು ಹೊಳೆಯೆಬರಿಮೈಯ್ಯ ತೋರುತ ನಿಂತನಕುದುರೆಯನೇರುತ್ತ ಬರುವನಸಿರಿಕಮಲನಾಭ ವಿಠ್ಠಲ ಭಕ್ತಪೋಷನ7
--------------
ನಿಡಗುರುಕಿ ಜೀವೂಬಾಯಿ
ಹೇಳಬಾರದೆ ಬುದ್ಧಿಯ - ಮಗನ ಊರ-|ಗೂಳಿಯ ಮಾಡಿದೆನೆ ? ಪಮೇಳದಿ ಓರಗೆಯವರ ಕೂಡಿಕೊಂಡು |ಹಾಳು ಮಾಡುತಾನೆ ಗೋವಳಗೇರಿಯ ಅ.ಪಅಟ್ಟದ ಮೇಲಿಟ್ಟಹ - ಚೆಟ್ಟಿಗೆ ಹಾಲು |ಬಟ್ಟನಿಕ್ಕಿ ಚೀಪುವ ||ದುಷ್ಟತನವ ಮಾಡಬೇಡ ಅಯ್ಯಾ ಎನೆ |ಕಷ್ಟವೇನೆಂಬೆ ಮುದ್ದಿಟ್ಟು ಓಡಿ ಪೋದ 1ಮೊಸರ ಮಥಿಸುತಿರಲು - ಬಂದು ಕುಳಿತ |ಹಸುಗೂಸು ಎನುತಿದ್ದೆನೆ ||ಕುಸುಮನಾಭನು ತನ್ನ ವಶವಾಗು ಎನುತಲಿ |ವಸನೆತೆಗೆದು ಮೊಲೆ ಪಿಡಿದು ಹೋದ ಮೇಲೆ 2ಬೆಣ್ಣೆಯ ಕಂಡರಂತೂ - ಅದರರೂಪ |ಕಣ್ಣಿಗೆ ತೋರನಲೆ ||ಸಣ್ಣವನೆಂದು ಬಗೆದು ನಾ ಕರೆದರೆ |ಬಣ್ಣದ ಮಾತಾಡಿ ಬಾ ಎಂದು ಕರೆವನು 3ಉಡುವ ಸೀರೆಯ ಕಳೆದು - ತಡಿಯಲಿಟ್ಟು |ಮಡುವಿನೊಳ್ ಮೈದೊಳೆಯೆ ||ದಡದಡ ಬಂದೊಯ್ದು ಕಡಹದ ಮರವೇರಿ |ಕೊಡು ಕೃಷ್ಣ ಎನುತಿರೆ ಪಿಡಿ ಜೋಡು ಕೈಯೆಂಬ 4ಎಷ್ಟು ಹೇಳಲಿ ನಿನಗೆ - ಯಶೋದೆ ಒಂ-|ದಿಷ್ಟು ಕರುಣವಿಲ್ಲವೆ |ಸೃಷ್ಟಿಗೊಡೆಯ ನಮ್ಮಪುರಂದರವಿಠಲ-------------------------- 5
--------------
ಪುರಂದರದಾಸರು
ಹೇಳೆಕಾಮಿನಿರಂಗಗೆ ಬುದ್ಧಿಯಹೇಳೆಕಾಮಿನಿರಂಗಗೆಪ.ಹೇಳಿದಂದದಿಕೇಳಿಕಾಲಿಗೆರಗುವಳಮ್ಯಾಲೆ ಕೋಪಿಸಿಕೊಂಡು ಬಾಲೇರ ನೆರೆವಂಗೆ ಅ.ಪ.ತನ್ನ ಮೈಗಂಪು ಕಸ್ತೂರಿಗಿಂದಧಿಕ ಕಂಡೆತನ್ನಧರದ ರಸಾಮೃತಗಿಂತ ಸವಿದುಂಡೆತನ್ನ ದಂತದ ಘಾಯಕೆ ಅಂಜದೆಕರಜನ್ನಟ್ಟಿಸಲು ಕುಚಕ್ಕೆ ಸುಂದರಿಯರನ್ನು ಮೆಚ್ಚಿದ ದಾನಕ್ಕೆ ಇನಿಯಳಿರೆಅನ್ಯರ ಮೋಹಿಪಗೆ ಕಲಿಮಾನವಗೆ 1ಸ್ನೇಹ ನೋಟಕೆ ಮೆಚ್ಚಿ ಸುಖಭಾರ ತನಗಿತ್ತೆಬಾ ಹೆಣ್ಣೆ ಎನಲು ಭಾಗ್ಯಾಂಬುಧಿಗೊಶವಾದೆತಾ ಹೊನ್ನಾಸೆಗೆ ಮಂಚದಿ ಘಾತಿಸಿದರೆನೇಹಿಯ ಬೆರದೆಕೆಲದಿಕರಾಳ ಚೇಷ್ಟೆಗೆನೇಹದಾರದಲೊಪ್ಪಿದೆ ಎನ್ನನು ಬಿಟ್ಟುಬಾಹು ಜೋರಿನಬುದ್ಧವಾಜಿಯಲ್ಲೇರ2ಚಪಲತೆಯಲ್ಲಿಕಪಟವಿದ್ಯದಲಿ ಭೂಪಕುಪಿತಾಶಾಯಿಲ್ಲ ಹೆಜ್ಜೆ ಹೆಜ್ಜೆಗೆ ಕಥೆಯಿಲ್ಲನೃಪಕೃಷ್ಣ ಸಲಹೆಂದರೆ ಎನ್ನಿಂದಾದಅಪರಾಧ ಕ್ಷಮಿಸೆಂದರೆ ಪ್ರಸನ್ವೆಂಕಟಕೃಪಿ ಧರ್ಮಿಯೆಂದರೆ ಇದಕೆ ತಾವಿಪರೀತ ತಿಳುಹನಂತೆ ಹಾಗಲ್ಲಂತೆ 3
--------------
ಪ್ರಸನ್ನವೆಂಕಟದಾಸರು