ಒಟ್ಟು 704 ಕಡೆಗಳಲ್ಲಿ , 90 ದಾಸರು , 552 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸೊ ಪರಮ ಪಾವನ್ನ ಕಮ ಲಾಲಯ ನಂಬಿದೆ ನಿನ್ನ ಆಹ ನಖ ತೇಜ ಮೂರ್ಲೋಕದರಸೆ ನೀನಾಲಯ ಬಿಡದಲೆ ಅ.ಪ ಹಿಂದೆ ಪ್ರಹ್ಲಾದನ ಮೊರೆಯ ಕೇಳಿ ಬಂದು ಕಾಯಿದೆ ಭಕ್ತ ಪ್ರಿಯ ಸುಖ ಸಂದೋಹ ಮೂರುತಿ ಆಯ ತಾಕ್ಷ ಎಂದೆಂದು ಬಿಡದಿರು ಕೈಯ ಆಹ ವೃಂದಾರ ಕೇಂದ್ರಗೆ ಬಂದ ದುರಿತಂಗಳ ಹಿಂದೆ ಮಾಡಿ ಕಾಯ್ದೆ ಇಂದಿರಾರಮಣನೆ 1 ಹರಣದಲ್ಲಿ ನಿನ್ನ ರೂಪ ತೋರಿ ಪರಿಹರಿಸೊ ಎನ್ನ ಪಾಪ ದೂರ ದಿರದಿರು ಹರಿಸಪ್ತ ದ್ವೀಪಾಧಿಪ ಸಿರಿಪತಿ ಭಕ್ತ ಸಲ್ಲಾಪ ಆಹ ಕರಣಶುದ್ಧನ ಮಾಡಿ ಕರೆಯೊ ನಿನ್ನ ಬಳಿಗೆ ನರಕಂಠೀರವ ದೇವ ಚರಣ ಆಶ್ರೈಸಿದೆ 2 ಶರಣ ಪಾಲಕನೆಂಬೊ ಬಿರುದು ಕೇಳಿ ತ್ವರಿತದಿ ಬಂದೆನೊ ಅರಿದು ಇನ್ನು ಪರಿ ಅಪರಾಧ ಜರಿದು ಪರತರನೆ ನೋಡೆನ್ನ ಕಣ್ತೆರೆದು ಆಹ ಮರಣ ಜನನಂಗಳ ತರಿದು ಬಿಸುಟು ನಿನ್ನ ಶರಣರ ಸಂಗದಲ್ಲಿರಿಸಿ ಉದ್ಧರಿಸೆನ್ನ 3 ಸಂಸಾರ ಸಾಗರ ದೊಳಗೆ ಎನ್ನ ಹಿಂಸೆ ಮಾಡುವರೇನೊ ಹೀಂಗೆ ನಾನು ಕಂಸಾರಿ ಅನ್ಯರಿಗೆ ಬಾಗೆ ಮತ್ತೆ ಸಂಶಯವಿಲ್ಲ ಮಾತಿಗೆ ಆಹ ಹಂಸ ಡಿಬಿಕರನ್ನು ಧ್ವಂಸ ಮಾಡಿದ ಶೌರಿ ಮೂರ್ತಿ ದಿವಸ ದಿವಸದಲ್ಲಿ 4 ಭವ ಶಕ್ರಾದ್ಯಮರ ಕೈಯ ನಿರುತ ತುತಿಸಿಕೊಂಬ ಧೀರ ಶುಭ ಪರಿಪೂರ್ಣ ಗುಣ ಪಾರಾವರ ಭಕ್ತ ವಾರಿನಿಧಿಗೆ ಚಂದಿರ ಆಹ ಸ್ಮರನ ಕಾಂತಿಯ ನಿರಾಕರಿಸುವ ತೇಜನೆ ಎರವು ಮಾಡದೆ ಹೃತ್ಸರಸಿಜದೊಳು ತೋರಿ 5 ಮೊದಲು ಮತ್ಸ್ಯಾವತಾರದಿ ವೇದ ವಿಧಿಗೆ ತಂದಿತ್ತ ವಿನೋದಿ ಶ ರಧಿಯೊಳು ಸುರರಿಗೋಸ್ಕರದಿ ನೀನು ಸುಧೆಯ ಸಾಧಿಸಿ ಉಣಿಸಿದೆ ಆಹ ಅದುಭೂತ ಭೂಮಿಯ ತೆಗೆದೊಯ್ದುವನ ಕೊಂಡು ಮುದದಿ ಹಿರಣ್ಯಕನುದರ ಬಗಿದ ಧೀರ 6 ಬಲಿಯ ಮನೆಗೆ ಪೋಗಿ ದಾನ ಬೇಡಿ ತುಳಿದೆ ಪಾತಾಳಕ್ಕೆ ಅವನ ಪೆತ್ತ ವಳ ಶಿರ ತರಿದ ಪ್ರವೀಣ ನಿನ್ನ ಬಲಕೆಣೆಗಾಣೆ ರಾವಣನ ಆಹ ತಲೆಯನಿಳುಹಿ ಯದುಕುಲದಿ ಜನಿಸಿ ನೀನು ಲಲನೇರ ವ್ರÀ್ರತವಳಿದಾಶ್ವಾರೂಢನೆ 7 ಮಾನಸ ಪೂಜೆಯ ನೀ ದಯದಿ ಇತ್ತು ಶ್ರೀನಾಥ ಕಳೆ ಭವವ್ಯಾಧಿ ಕಾಯೋ ಅನಾಥ ಬಂಧು ಸುಮೋದಿ ಚತುರಾ ನನಪಿತ ಕೃಪಾಂಬುಧಿ ಆಹ ತಾನೊಬ್ಬರನರಿಯೆ ದಾನ ವಿಲೋಲನೆ ಏನು ಮಾಡುವ ಸಾಧನ ನಿನ್ನದೊ ಹರಿ8 ನಿನ್ನ ಸಂಕಲ್ಪವಲ್ಲದೆ ಇನ್ನು ಅನ್ಯಥಾವಾಗಬಲ್ಲುದೆ ಹೀಂಗೆ ಚೆನ್ನಾಗಿ ನಾ ತಿಳಿಯದೆ ಮಂದ ಮಾನವನಾಗಿ ಬಾಳಿದೆ ಆಹ ಎನ್ನಪರಾಧವ ಇನ್ನು ನೀ ನೋಡದೆ ಮನ್ನಿಸಿ ಕಾಯೋ ಜಗನ್ನಾಥ ವಿಠಲ 9
--------------
ಜಗನ್ನಾಥದಾಸರು
ಪಾಲಿಸೊ ಶ್ರೀನಿವಾಸ ಜಗದೀಶ ಪ ಮೇಲುಗಿರೀಶ ಹೃತ್ಕುಮುದನಿವಾಸ ಸತೀಶ ನೀನೆ ಅವಿನಾಶನೆ ಅನಿಶ ಅ.ಪ ಅನಿಮಿತ್ತ ಬಂಧು ನೀ ನಿನ್ಹೊರತು ಅನ್ಯರುಂಟೇ ಅನಪೇಕ್ಷನು ನೀ ದೀನರಕ್ಷನೆ ನಾನೇನರ್ಪಿಸಬಲ್ಲೆ ನೀ ಬಲ್ಲೆ ಅನುದಿನ ಮನೋವಾಚಕಾಯದಿ ನಾನೆಸಗುವುದು ಬಲ್ಲೆ ಅಲ್ಲಲ್ಲೇ ಘನಮಹಿಮನೆ ಎನ್ನ ಮನದಲ್ಲಿ ಅನುದಿನ ನಿನ್ನ ನೆನೆಯುವುದನೆ ಇತ್ತು ಕೊನೆಗಾಣಿಸು ಇನ್ನು 1 ಸತ್ಯಸಂಕಲ್ಪ ನೀ ನಿತ್ಯನೂತನಪ್ರಭುವೇ ಅತ್ಯಧಿಕದಿ ಭಕ್ತೋತ್ತಮರು ನಿತ್ಯ ಸೇವಿಸುತಿಹರೋ ಅವರ ಭೃತ್ಯನೆನಿಪ ಸಂ- ಪತ್ತನಿತ್ತು ಆಪತ್ತು ಹರಿಸಿ ಭಕ್ತಿಯ ನೀಡಯ್ಯ ಕರ್ಮ ಬೆನ್ಹತ್ತಿ ಹತ್ತಿ ಆಸೆ ಪೊತ್ತು ಕೊನೆಗೆ ನಾ ಉನ್ಮತ್ತನಾದೆ 2 ಪ್ರಣವಸ್ತಗೆ ದೇವಾ ನೀ ಪ್ರಣತ ಕಾಮದ ಕಾವಾ ಪ್ರಣತ ಜನರ ಮುಖ್ಯಪ್ರಾಣಾಂತರ್ಗತ ಫಣಿರಾಜಶಯ್ಯ ಹೇ ಜೀಯ್ಯ ಗುಣಮಣಿ ಶ್ರೀ ವೇಂಕಟೇಶ ಕ- ರುಣಾಕರ ಇನ್ನು ನಿನಗೆಣೆಯ ದೊರೆಯೆ ಮಣಿದು ಬೇಡುವೆ ನಿನ್ನ ದಣಿಸಲಾಗದು ಇನ್ನೂ ಧಣಿಯು ನೀ ಉರಗಾದ್ರಿವಾಸ ವಿಠಲ 3
--------------
ಉರಗಾದ್ರಿವಾಸವಿಠಲದಾಸರು
ಪಾಲಿಸೋ ಶ್ರೀ ಗುರುರಾಯಾ ಪ ಕಾಯ - ಭವ ಜಾಲ ತಪ್ಪಿಸೊ ಮಹರಾಯ - ಆಹಾ ಪಾಲಗು ಜನರ ಸು - ಪಾಲಕ ಹರಿಪಾದ ಭವ - ತೂಲಕಾನಲನೆ ಅ.ಪ ಶೇಷಾಂಶ ಪ್ರಹ್ಲಾದ ವ್ಯಾಸಾ - ಮುನಿ ವೇಷ ತಾಳಿದೆಯೊ ಯತೀಶಾ - ಜಾಗು ಪೋಷಣೆ ಗೈಯ್ಯೊ ಮನೀಷಾ - ಎನ್ನಾ - ಶೇಷ ಕ್ಲೇಶವಳಿದೀಶಾ - ಆಹಾ ಭವ ನಿ - ಸ್ಸೇಷ ಮಾಡಿ ಎನ್ನ ಪೋಷಿಸೊ ನಿರುತ ಧೃ - ತಾಷಾಢ ಗುರುವರ 1 ಕಾಮಧೇನು ಕಲ್ಪವೃಕ್ಷಾ - ನಿನ್ನ ಈ ಮಹಮಹಿಮೆ ನಿರೀಕ್ಷಾ - ಮಾಡಿ ಈ ಮಹಿ ಯಾಕೆಂದುಪೇಕ್ಷಾ - ಮಾಡಿ ಧಾಮ ಸೇರಿದವೊ ಭಕ್ತಪಕ್ಷಾ - ಆಹಾ ಸಾಮಜನಾಥನ ಪ್ರೇಮ ಪಾತ್ರನೆ ನಿನ್ನ ಈ ಮಹ ಮಹಿಮೆಗೆ ನಾಮಾಳ್ಪೆ ನಮೊ ನಮೊ 2 ಆಸೇತು ಹಿಮಾದ್ರಿ ತನಕಾ - ನಿನ್ನ ಆಸೆಯ ಮಾಳ್ಪರನೇಕಾ - ಅಂಥ ದಾಸಜನರಿಗೆ ಅನೇಕಾ - ಫಲ ರಾಶಿಯ ಕೊಡುವಿ ಮಜ್ಜನಕಾ - ಆಹಾ ಮಾನವ ಜನ್ಮ ಈಸೆ ಸಾಕೆಲೊ ಸ್ವಾಮಿ ಎಸು ಪೇಳಲಿ ನಿನ್ನ ದಾಸರ ದಾಸನೋ 3 ಎಲ್ಲಿ ಪೋದರು ಕಾಯ್ವರಿಲ್ಲ - ಜಗ - ದ್ವಲ್ಲಭ ಬಲ್ಲಿ ನಿನೆಲ್ಲಾ - ಬಹು ಬಲ್ಲಿದನೆಂಬುವರೆಲ್ಲಾ - ಜನ ಸೊಲ್ಲು ಕೇಳಿಬಂದೆನಲ್ಲಾ - ಆಹಾ ಪುಲ್ಲಲೋಚನ ನೀ - ನಲ್ಲದೆ ಎನ ಭವ ಣೆಲ್ಲ ಮಾತ್ರವು ಕಳೆಯೊ - ರಿಲ್ಲವೊ ಎನ್ನಜೀಯಾ 4 ನಾಥ ನಿನ್ನೊಳು ಜಗಕೆಲ್ಲ - ಮಹ ಪ್ರೀತಿಯು ಇರುತಿಹುದಲ್ಲ - ಸದ - ತಾತ ನೀನಾಗಿ ಜಗಕೆಲ್ಲಾ - ಮತ್ತೆ ಪೂತ ಫಲ ಕೊಡುವಿಯಲ್ಲಾ - ಆಹಾ ದಾತ ಗುರುಜಗ - ನ್ನಾಥವಿಠಲ ಸದಾ ಪ್ರೀತಿಂದ ಇರುವೊನು5
--------------
ಗುರುಜಗನ್ನಾಥದಾಸರು
ಪಾಹಿಮಾಂ ರಾಮಚಂದ್ರ ಅಚಲಾಂ ಭಕ್ತಿಂ ದೇಹಿ ಕಲ್ಯಾಣಸಾಂದ್ರ ಪ. ಶ್ರೀಹರಿ ನಾಗಾರಿವಾಹನ ಶ್ಯಾಮಲ- ದೇಹ ರಾಕ್ಷಸ ಸಮೂಹ ವಿದಾರಕ ಅ.ಪ. ಸಜ್ಜನ ಕಲ್ಪವೃಕ್ಷ ಪಾಪಾಂಕುರ- ಭರ್ಜನ ವಿಬುಧಪಕ್ಷ ಧೂರ್ಜಟಿಸಖ ದೂಷಣಾರಿ ದ್ಯುಮಣಿಕೋಟಿ- ಪ್ರಜ್ವಲಿಪ ಪರಮ ಜಗಜ್ಜೀವನಧಾಮ ಪೂರ್ಣಬ್ರಹ್ಮ ರಘುವಂ- ಜಯಾಕಾಂತ ಪ್ರಭುವೆ 1 ವರಾಹ ಪ್ರ- ಹ್ಲಾದವರದ ಗುಣಧಾಮ ಸಾಧುವಟುವೇಷವಿನೋದ ಭಾರ್ಗವ ಬಹು ಕ್ರೋಧಿ ಕ್ಷತ್ರಿಯಕುಲ ಭೇದಿ ರಾವಣಾಂತಕ ಕುವಾದಿಜನದುರ್ಬೋಧಬದ್ಧವಿ- ಶ್ರೀಧರ ರಮಾಮೋದಮಾನಸ 2 ಕಾಶಿಮಠಸ್ಥ ಯತಿ ಪರಂಪರ್ಯ- ಭೂಷಣ ಶುದ್ಧಮತಿ ಶ್ರೀ ಸುಕೃತೇಂದ್ರ ಸನ್ಯಾಸಿ ಪೂಜಿತಪಾದ ವಾಸುದೇವ ತವ ದಾಸ್ಯವ ಪಾಲಿಸು ಸುಭದ್ರ ಶ್ರವಣ ಪ- ಭವ ರುಗ್ಭೇಷಜನೆ ನರಕೇಸರಿಯೆ ಶ್ರೀ ವ್ಯಾಸ ರಘುಪತಿ 3 ಪಾರಗಾಣರು ನಿನ್ನಯ ಬ್ರಹ್ಮಾದ್ಯರು ಭೂರಿಗುಣದ ಮಹಿಮೆಯ ಸೂರಿಜನಪ್ರೀತ ಸೀತಾನಯನ ಚ- ಕೋರಚಂದ್ರನು ಮಹೋದಾರ ಶಾಙ್ರ್ಗಧರ ಮೀರಣಾತ್ಮಜವರದ ನತಮಂದಾರ ಕೈರವಶ್ಯಾಮ ರಾಮನ 4 ಪ್ರಣವರೂಪ ನಿರ್ಲೇಪ ನಿತ್ಯಾತ್ಮದು- ರ್ಜನವನೋದ್ದಹನೋದ್ದೀಪ ಮನುಕುಲಮಣಿ ಮುನಿಗಣ ಸಮಾಹಿತ ಜನಾ- ರ್ದನ ಬ್ರಹ್ಮಾದ್ಯಖಿಳ ಚೇತನರು ನಿನ್ನಾಧೀನ ಚಿದಾನಂದೈಕ ದೇಹನೆ ಭಕುತಿ ಭಾಗ್ಯವನು ಪಾಲಿಸು 5
--------------
ತುಪಾಕಿ ವೆಂಕಟರಮಣಾಚಾರ್ಯ
ಪಿಡಿ ಎನ್ನ ಕೈಯ್ಯ ರಂಗಯ್ಯ ಪ ಪಿಡಿ ಎನ್ನ ಕೈಯ ಪಾಲ್ಗಡಲ ಶಯನ ಮೋಹ ಮಡುವಿನೋಳ್ ಬಿದ್ದು ಬಾಯ್ಬಿಡುವೆ ಬೇಗದಿ ಅ ನೀರಜನಾಭಾ ನಂಬಿದೆ ನಿನ್ನ ನೀರಪ್ರದಾಭಾ ಕಾರುÀಣ್ಯ ನಿಧಿ ಲಕ್ಷ್ಮೀನಾರಸಿಂಹನ ಪರಿ ವಾರಸಹಿತ ಈ ಶರೀರದೊಳಡಗಿರ್ದು ಘೋರತರ ಸಂಸಾರ ಪಂಕದಿ ಚಾರು ವರಿವನ ದೂರ ನೋಡುವ ರೇ ರಮಾಪತೆ ಗಾರುಮಾಡದೆ ಚಾರುವಿಮಲ ಕರಾರವಿಂದದಿ 1 ಅನಿಮಿತ್ತ ಬಂಧೋ ನೀನೇ ಗತಿ ಗುಣ ಗಣಸಿಂಧೋ ವಿಧಿ ಭವಸಂಕ್ರಂ ದನ ಮುಖ್ಯ ವೇದ ಸನ್ಮುನಿ ಗಣಾರ್ಚಿತ ಪಾದಾ ಅನುಜ ತನುಜಾಪ್ತಾನುಗ ಜನನೀ ಸದನ ಸಂ ಹನÀನ ಮೊದಲಾದಿನಿತು ಸಾಕುವ ಘನತೆ ನಿನ್ನದು ಜನುಮ ಜನುಮದಿ 2 ಶ್ರೀ ಜಗನ್ನಾಥವಿಠ್ಠಲ ದ್ವಿಜರಾಜ ವರೂಥ ಓಜಕಾಮಿಕ ಕಲ್ಪ ಭೂಜ ಭಾಸ್ಕರ ಕೋಟಿ ತೇಜ ಮನ್ಮನದಿ ವಿರಾಜಿಸು ಪ್ರತಿದಿನ ಈ ಜಗತ್ರಯ ಭಂಜನನೆ ಬಹು ಸೋಜಿಗವಲಾ ನೈಜ ನಿಜನಿ ವ್ರ್ಯಾಜದಿಂದಲಿ ನೀ ಜಯಪ್ರದ ನೈಜ ಜನರಿಗೆ ಹೇ ಜಗತ್ಪತೇ 3
--------------
ಜಗನ್ನಾಥದಾಸರು
ಪುಂಡರೀಕನಯನ ಕೃಷ್ಣ ಪ ಕಂಡೆನಿಂದು ನಿನ್ನ ಬಹುದಿನ ಬಳಿಕ ಬ್ರ ಉದ್ದಂಡ ಮಹಿಮನೆ ಅ.ಪ ಪುಟ್ಟಿದಂದಿನಿಂದಾ ಕಷ್ಟವಪಟ್ಟೆನು ಗೋವಿಂದ ಸೃಷ್ಟಿಯೊಳಗೆ ನಾ ಪುಟ್ಟಿದನೇತಕೆ ಜಿಷ್ಣುಸಖನೇ ಎನ್ನ ಕೊನೆಗಾಣೆ 1 ಕರಿಗಿರೀಶ ನಿನ್ನ ಚರಣವ ನೆರೆ ನಂಬಿಹರನ್ನ ಪರಿ ಪೊರೆ ಕಂಸಾರಿಯೆ ಸ್ಥಿರ ಸಂಕಲ್ಪನೆ ಕರುಣಾಶರಧಿಯೆ 2
--------------
ವರಾವಾಣಿರಾಮರಾಯದಾಸರು
ಪುರುಷಾರ್ಥ ಪ ವರದ ಅಭೀಷ್ಟೆಯ ಕರದು ಎನಗೆ ನೀ ವರದನೆಂಬೊ ನಿನ್ನ ಬಿರುದನ ರಕ್ಷಿಸು ಅ.ಪ ಅಜನ ಜನಕನÀಲ್ಲಿ ಇರುವಿಯೊ ವಿಜನ ದೇಶದಲ್ಲೀ ಸುಜನರು ಇದ್ದಲ್ಲಿ ಬರುವೆಯೊ ಭಜನೆಮಾಡುವಲ್ಲೀ ಸುಜನರ ತಾಪಕೆ ವ್ಯಜನನು ನೀನೂ ಸುಜನಕಲ್ಪತರು ಕುಜನಕುಠಾರಾ 1 ನಂದನಂದನನೂ ಅವನಿನ್ನ ಬಂಧನದೊಳಗಿಹನೂ ಅಂಧನಾಗಿ ನಾನೂ ಸಂಸೃತಿ ಬಂಧನದೊಳಗಿನ್ನೂ ನೊಂದೆನು ಬೆಂದೆನು ಬಂದೆನು ನಿನ್ನಲಿ ಕಂದನ ಲಾಲಿಸು ಒಂದಿನ ಬಿಡದೆ 2 ಮರೆತೆನು ನಾನಿನ್ನಾ ಅವಗುಣ ಮರೆತು ಪಾಲಿಸು ಮುನ್ನಾ ಪರತರಗುರು ನಿನ್ನಾ ಹೊರತು ಗತಿ ಗುರುತತಿಲ್ಲ ಮುನ್ನಾ ಅರಿತು ಅನಂತಾದ್ರಿ ನಿರತನ ತೋರಿಸು ಮೋದ ಪುರನಿರತ ಸದ್ಗುರುವೆ 3
--------------
ಅನಂತಾದ್ರೀಶರು
ಪುಷ್ಯೋತ್ಸವ ಗೀತೆ ಮಕರಪುಷ್ಯದ ಶುದ್ಧ ಷಷ್ಟಿಯಲಿ ನಗರಶೋಧನೆ ಮಾಡಿ ಮಂತ್ರಿಯು 1 ಮೊದಲು ದಿವಸದಿ ಧ್ವಜವನೇರಿಸಿ ಭೇರಿಯಿಡೆ ಸುರರ ಕರೆದರು 2 ಯಾಗಶಾಲೆಯ ಪೊಕ್ಕು ರಂಗನು ಯಾಗಪೂರ್ತಿಯಾ ಮಾಡಿ ನಿಂದನು 3 ಯಾತ್ರದಾನವ ಬೇಡಿ ಹರುಷದಿ ಸೂತ್ರ ಧರಿಸಿದಾ ಧಾತ್ರಿಗೊಡೆಯನು 4 ಕಂದರ್ಪನಾಪಿತ ದರ್ಪಣಾಗ್ರದಿ ಹ ನ್ನೊಂದು ದಿನದಲಿ ನಿಂದ ಹರುಷದಿ 5 ಸೂರ್ಯಚಂದ್ರರು ಹಂಸಯಾಳಿ[ಸಹಿತ] ಏರಿ ಬಂದನು ಸಿಂಹ ಶರಭವ 6 ಸರ್ಪವಾಹನ ಕಲ್ಪವೃಕ್ಷವು [ಗರು ಡ] ಪಕ್ಷಿ ಹನುಮನ ಏರಿ ಬಂದನು 7 ಏಳು ದಿವಸದಿ ಚೂರ್ಣಾಭಿಷೇಕವ ಸೀಳೆಸಹಿತಲೆ ಗ್ರಹಿಸಿ ಮಿಂದನು 8 ಎಂಟು ದಿವಸದಿ ಏರಿ ತೇಜಿಯ ಬಿಟ್ಟನು ಪೇರಿ ತೇರಿನಿದಿರಲಿ 9 ಒಂಬತ್ತು ದಿನದಲಿ ಶೃಂಗರಿಸಿದಾರು ಸಂಭ್ರಮದಿಂದಲೆ ಬೊಂಬೆರಥವನು 10 ಪುನರ್ವಸುವಿನಲ್ಲಿ ಪುರುಷೋತ್ತಮನು ರಥ ವನೇರಲು ಪೊರಟುಬಂದನು11 ಸಿಂಧುಶಯನನ ಹಿಂದೆಬಂದರು 12 ಅಷ್ಟಪತಿಯನು ಅಷ್ಟು ಕೇಳುತಾ ಸೃಷ್ಟಿಗೀಶ್ವರ ರಥವನೇರಿದ 13 ಪತ್ನಿ ಸಹಿತಲೇ ಹತ್ತಿ ರಥವನು ಉತ್ತರಬೀದಿಯ ಸುತ್ತಿಬಂದನು 14 ಇಂದಿರಾಪತಿ ಇಳಿದು ರಥವನು ಚಂದ್ರಪುಷ್ಕರಿಣಿಯಲಿ ತೀರ್ಥವಿತ್ತನು 15 ಕರೆತಂದರು ಕರಿಯಮೇಲಿಟ್ಟು ಚ ದುರಂಗಗೆ ನಜರು ಕೊಟ್ಟರು 16 ಸಪ್ತಾವರಣವ ಶಬ್ದವಿಲ್ಲದೆ ಸುತ್ತಿಬಂದನು ಭಕ್ತವತ್ಸಲ 17 ಸುತ್ತಿ ಲಕ್ಷ್ಮೀಗೆ ಇತ್ತು ಸೇವೆಯ ಭಕ್ತ ಭಾಷ್ಯಕಾರರಿಗೆ ಒಲಿದು ನಿಂದನು 18 ತನ್ನ ಚರಿತೆಗಳನು ಕೇಳುತ ಪನ್ನಗಶಯನನು ಪರಮ ಹರುಷದಿ 19 ಬಂದ ಸುರರ ಆನಂದದಿಂದಲೇ ಮಂದಿರಕ್ಕೆ ತಾ ಕಳುಹಿ ರಂಗನು 20 ಬಿಚ್ಚಿ ಕಂಕಣ ನಿಂದ ಹರುಷದಿ ಅರ್ಥಿಯಿಂದಲೆ ಅಚ್ಚುತಾನಂತ 21 ಏರಿ ಆಳಂಪಲ್ಲಕ್ಕಿ ಹರುಷದಿ ಒ ಯ್ಯಾರದಿಂದ ಬಂದ ರಂಗನು 22 [ಮೋಕ್ಷ] ಕೊಡುವನು ಮುದ್ದುವೆಂಕಟರಂಗನು 23
--------------
ಯದುಗಿರಿಯಮ್ಮ
ಪೂಜಾನುಷ್ಠಾನವ ಯೋಚಿಸಿ ಮನದೊಳುಪೂಜೆ ಷೋಡಶಗಳ ಮಾಜದೆ ಮಾಡಿರೋ ಪ ಉಷಃ ಕಾಲದಲೆದ್ದು | ಝಷಕೇತು ಪಿತ ನಾಮಉಸುರು ತಿಪ್ಪುದೇ ಪೂಜೆಯೋ 1 ಶೌಚ ಬಾಹ್ಯವು ಮೃತ್ತು ಶೌಚ ಮಾಡಿಕೊಂಡುಶುಚಿಷತ್ತು ನಿನ ನಾಮ ಉಚ್ಚರಿಪುದೆ ಪೂಜೆಯೋ2 ತುಲಸಿ ಮೃತ್ತಿಕೆ ಹಚ್ಚಿ | ತುಲಸಿ ವಂದನೆ ಮಾಡಿಅಲಸಾದೆ ಕೃಷ್ಣನ ವಲಿಸೂವುದೇ ಪೂಜೆಯೋ 3 ಗೋವನೆ ಬಳಸುತ್ತ ಗೋಪುಚ್ಛ ಪಿಡಿಯುತ್ತಗೋವ ವಂದಿಪುದೆಲ್ಲ ಗೋಪಾಲ ನಿನ ಪೂಜೆಯೋ4 ಸ್ನಾನ ಸಂಧ್ಯಾನ ಮೇಣೂಧ್ರ್ವ ಪುಂಡ್ರವ ಧರಿಸಿಭಾನುಗಘ್ರ್ಯವ ನೀಯೆ ಶ್ರೀನಿವಾಸ ಪೂಜೆಯೋ 5 ಪಾದ ತೀರ್ಥ ಸೇವನೆ ಪೂಜೆಯೋ 6 ಅಷ್ಟ ಮಹಾಮಂತ್ರ ಶಿಷ್ಪನಾಗುತ ಹೃದಯಅಷ್ಟ ಕಮಲದಲ್ಲಿ ಧ್ಯಾನ ಮಾಳ್ಪುದೆ ಪೂಜೆಯೋ 7 ಮಂಟಪೋತ್ತಮ ಪೂಜೆ ಸುಷ್ಠು ಕಲಶ ಪೂಜೆಶ್ರೇಷ್ಠ ಪಂಚಾಮೃತ ಪೀಠ ಶಂಖ ಪೂಜೆಯೋ 8 ಘಂಟನಾದಾ ಅಖಂಡ ಶ್ರೇಷ್ಠ ದೀವಿಗೆ ಪೂಜೆಪೀಠಾವರಣ ಹೃತ್ಪೀಠ ಚಿಂತನೆ ಪೂಜೆಯೋ 9 ಮೂರ್ತಿ ಗುರುಮೂತ್ರ್ವೆಕ್ಯವೆ ಪೂಜೆಯೋ || ಚಿಂತಿಸಿ ಸ್ವಾಂತಸ್ಥ ಬಿಂಬನೋಳೈಕ್ಯವಚಿಂತಿಸುತ್ತಾನೇಕ ಗೈವ ವೈಭವ ಪೂಜೆಯೋ 11 ಹೃತ್ಪುಂಡರೀಕಗೆ ಕಲ್ಪ ತರುವನೆ ಬೇಡುತ್ತಪ್ರೀತ್ಯಾದ ಮಾನಸ ಪದಾರ್ಥಗಳ ಪೂಜೆಯೋ 12 ಪೂರ್ಣ ಶೃತಿಯ ಭಾವ ಚೆನ್ನಾಗಿ ಗ್ರಹಿಸುತ್ತಪೂರ್ಣನ ಕಳೆಯೊಂದು ಪ್ರತಿಮಾದಲ್ಲಿರಿಸೋ 13 ನಿಷುಸೀದ ಶ್ರುತಿಯಂತೆ ವಸುದೇವ ಕೃಷ್ಣನೆಅಸಮ ಪೂಜಕ ಪೂಜ್ಯ ಅವನೇವೆ ತಿಳಿಯೊ 14 ಬಾಹ್ಯದರ್ಚನೆಗಳು ಶ್ರೀ ಹಸ್ತದಿಂದಲಿವ್ಯಾಹರಣೆಂಬೋದೆ ಹರಿ ಪೂಜೆಯೋ 15 ಆವಾಹನಭಿಷೇಕ ನೈವೇದ್ಯಾದಿ ಪೂಜೆದೇವಗಾರುತಿ ಶಂಖ ಭ್ರಮಣಾದಿ ಪೂಜೆಯೋ 16 ಸರ್ವವನರ್ಪಿಸಿ ಅಸ್ವಾತಂತ್ರ್ಯವ ಗ್ರಹಿಸಿಶರ್ವಾದಿ ವಂದ್ಯ ಬಿಂಬಗೆ ಸರ್ವ ಪೂಜೆಯೋ 17 ಸರ್ವಾಪರಾಧವ ಸರ್ವೇಶನಲಿ ಪೇಳಿವೈಶ್ವ ದೇವಾದಿಗಳ್ ಸತ್ಕರ್ಮಗಳೆ ಪೂಜೆಯೋ 18 ಯತಿಗಳರ್ಚನೆಯನ್ನು ಮತಿಯಿಂದ ಗೈಯುತ್ತಸುತ ವಿಪ್ರಾದಿಯ ಸಹ ಹುತಶೇಷ ಮೆಲ್ಲೋದೆ ಪೂಜೆಯೋ 19 ಪ್ರಾಣಾಗ್ನಿ ಹೋತ್ರಾನು ಸಂಧಾನದಲಿ ಮದ್ದುಪ್ರಾಣನ ಪ್ರಾಣ ವೈಶ್ವಾನರಗೀಯೋದೆ ಪೂಜೇ 20 ಅಂತರಂಗದ ಪೂಜೆಗೊಲಿದ ಸಂತತ ಹರಿಕಂತು ಪಿತನು ಗುರು ಗೋವಿಂದ ವಿಠಲಾ 21
--------------
ಗುರುಗೋವಿಂದವಿಠಲರು
ಪೂಜಿಸುವೆನು ದೇವಿಯ ಶ್ರೀನಿತ್ಯ ಗೌರಿಯ ಪ ಪರಶಕ್ತಿರೂಪೆಯ ಪರತತ್ವಮೂರ್ತಿಯ ಪರಮಮಂಗಳ ದೇವಿಯ ಪರಮಾನುರಾಗದಿ 1 ಮೃಗಧರಮೌಳಿಯ ಜಗದುದ್ಧಾರಾಂಬೆಯ ಮಿಗೆ ಮನದಲಿ ಧ್ಯಾನಿಸಿ ಅವಾಹಿಸುತ್ತಲಿ 2 ಸರ್ವಲೋಕೇಶ್ವರಿಯ ಸರ್ವಾಲಂಕಾರೆಯ ಸರ್ವಾಂಗ ಸುಂದರಿಯ ಆಸನವನಿತ್ತು 3 ವಿದ್ಯಾಧಿದೇವಿಯ ಶುದ್ಧಚಿದ್ರೂಪೆಯ ಪಾದ್ಯಾಘ್ರ್ಯಾಚ ಮನದಿಂದ ಪರಿಶುದ್ಧ ಹೃದಯದಿ 4 ಪಂಚಮವಾಣಿಯ ಚಂಚರಿಕಾಂಬೆಯ ಪಂಚಾಮೃತವ ಜಲವ ಮುದದಿಂದ ತಳಿಯುತ 5 ಸುಂದರ ಹಾಸೆಯ ಸೌಂದರ್ಯ ಶರದಿಯ ಚಂದ್ರಗಾವಿಯ ನುಡಿಸಿ ಕಂಚುಕವ ಗೊಡಿಸಿ 6 ಚಂದ್ರ ಬಿಂಬಾಸ್ಯೆಯ ಸಿಂಧುರ ಗಮನೆಯ ಇಂದು ತಿಲಕವ ತಿದ್ದುತ ಗಂಧವನೆ ತೊಡೆದು 7 ಮಂಗಳ ಮಾತೆಯ ಮಂಗಳ ಮೂರ್ತಿಯ ಮಂಗಳ ದ್ರವ್ಯದಿಂದ ಶೃಂಗಾರ ವೆಸಗಿ8 ಲೀಲಾವಿನೋದೆಯ ಬಾಲ ಕುಚಾಂಬೆಯ ಮಾಲೆಯ ನರ್ಪಿಸುತ ಕುಸುಮಗಳ ನಿಚಯದಿ 9 ಪಾಪನಿಹಂಶ್ರಿಯ ಶ್ರೀಪತಿ ಸೋದರಿಯ ಧೂಪ ದೀಪವ ಕಲ್ಪಿಸಿ ಅಚಮನವಿತ್ತು 10 ಸತ್ಯಸಂಕಲ್ಪೆಯ ನಿತ್ಯಸಂತುಷ್ಟೆಯ ಉತ್ತಮ ಫಲಭಕ್ಷ್ಯದಿಂ ನೈವೇದ್ಯ ವೆಸಗಿ 11 ಕಂಬುಸುಕಂಠಿಯ ಬಿಂಬಫಲಾಧರೆಯ ತಾಂಬೂಲ ದಕ್ಷಿಣೆಯಂ ಭಕ್ತಿಯೊಳಗರ್ಪಿಸಿ 12 ಮಂಗಳ ಮೂರ್ತಿಯ ಮಂಗಳ ಗೌರಿಯ ಮಂಗಳಾರತಿಯ ಗೈದು ಆಚಮನವಿತ್ತು 13 ಕಲಕೀರವಾಣಿಯ ಕಲಹಂಸಗಮನೆಯ ಲಲನಾಶಿರೋಮಣಿಯ ಬಲವಂದುನಮಿಸಿ 14 ಜಯ ಜಯ ಗೌರಿಯೆ ಜಯ ಜಯ ಮಾತೆಯೆ ಜಯದೇವಿ ಕರುಣಿಸು ನೀಂ ವರ ಸುಪ್ರಸಾದವ 15 ಮಾನಿನಿ ದೇವಿಯು ಮೌನಿ ಸುವಂದ್ಯೆಯು ಧೇನುಪುರೀಶ್ವರಿಯು ಸುಪ್ರೀತೆಯಾಗಲಿ 16
--------------
ಬೇಟೆರಾಯ ದೀಕ್ಷಿತರು
ಪೇಳಲೇನು ವಿಧಿಯ ಲೀಲೆಯ ಮಹಿಮೆ ಪ ವ್ಯಾಳಶಯನನ ಸಂಕಲ್ಪದಂತಿಹುದು ಅ.ಪ. ಮೂರ್ತಿ ನೋಡುವ ಕಂಗಳು ಅಂಗನೆಯರ ರೂಪ ನೋಡಲೆಳಸಿದವು 1 ಶ್ರೀ ರಮಣನ ಕಥೆ ಕೇಳುವ ಕರ್ಣಗಳು ವಾರನಾರಿಯರ ವಾರ್ತೆಗೆ ಸೋತವು 2 ಮಂಧರಧರನ ನಿರ್ಮಾಲ್ಯವನೊಲ್ಲದೆ ಸುಂದರಿಯರ ಮೈ ಗಂಧ ಬಯಸಿತು ಘ್ರಾಣ 3 ಹರಿಯ ಪ್ರಸಾದವು ಭುಜಿಸದೆ ಜಿಹ್ವೆಯು ಪರಮ ನಿಷಿದ್ಧ ಪಾನ ಭೋಜನ ಬಯಸಿತು 4 ರಂಗನ ಭಕ್ತರ ಸಂಗವ ಬಿಟ್ಟು ಸ್ಪರ್ಶ ಅಂಗನೆಯ ದೇಹಾಲಿಂಗನ ಬಯಸಿತು 5 ಶ್ರೀನಿಕೇತನ ನಾಮ ನುಡಿಯುವ ನಾಲಿಗೆ ದೀನ ಕಾಮಾತುರ ನುಡಿಯಲಿ ನಲಿಯಿತು 6 ಪಾದ ಸ್ಮರಣೆಯ ಬಿಟ್ಟಾ ಮನ ತರುಣಿಯರು ಸದಾ ನೆನೆಸಿತು ಅಕಟಾ 7
--------------
ವರಾವಾಣಿರಾಮರಾಯದಾಸರು
ಪ್ರಣವ ಪ್ರತಿಪಾದ್ಯ ಪ್ರಹ್ಲಾದವರದಾ ಪ ಪ್ರಣತಕಾಮದನೆ ಪ್ರಾರ್ಥಿಸುವೆ ಪ್ರಭುವೆಂದು ಅ.ಪ. ಸಕಲ ಜೀವ ಜಡಾತ್ಮಕ ಜಗತ್ತಿನೊಳಗಿದ್ದು ಅಕಳಂಕ ನಾಮರೂಪದಲಿ ಕರೆಸಿ ಪ್ರಕಟನಾಗದಲೆ ಮಾಡಿಸಿ ಸರ್ವ ವ್ಯಾಪಾರ ಸುಖ ದುಃಖಗಳಿಗೆ ಗುರಿಮಾಡಿ ಎಮ್ಮನು ನೋಳ್ಪೆ 1 ಏನೆಂಬೆ ನಿನ್ನ ಮಹಿಮೆಗೆ ರಮಾಪತಿ ನಿನ್ನ ಸುರರು ದೀನರುದ್ಧರಿಸುವುದು ದಯದಿಂದ ನಿರುತಾ 2 ಸರ್ವ ಸ್ವತಂತ್ರ ನೀನಾದ ಕಾರಣ ಬ್ರಹ್ಮ ಶರ್ವಾದಿಸುರರು ಪ್ರಾರ್ಥಿಸುತಿಪ್ಪರು ದುರ್ವಿಭಾವ್ಯನೆ ಸುರಗಮೃತ ಪಾನವ ಗೈಸಿ ಗರ್ವಿಸಿದ ದಾನವರ ಗಣವ ಸಂಹರಿಪೆ 3 ಬುಧ್ಯಾದಿ ಇಂದ್ರಿಯಗಳೊಳಗೆ ತತ್ಪತಿಗಳೊಳ ಗಿದ್ದು ಬಹುವಿಧ ಚೇಷ್ಟೆಗಳನೆ ಮಾಡಿ ಬದ್ಧರನ ಮಾಳ್ಪೆ ಭವದೊಳಗೆ ಜೀವರನ ಅನಿ ರುದ್ಧರೆಂದೆನಿಪೆ ಎಲ್ಲರೊಳು ವ್ಯಾಪಕನಾಗಿ 4 ದಾಶರಥಿ ನೀನೆ ಗತಿಯೆಂದು ಮೊರೆಹೊಕ್ಕೆ ವಿ ಭೀಷಣಗೆ ಲಂಕಾಧಿಪತ್ಯವಿತ್ತೇ ವಾಸವಾನುಜ ಜಗನ್ನಾಥ ವಿಠ್ಠಲ ಭಕ್ತ ಪೋಷಕನು ನೀನಹುದು ಕಲ್ಪ ಕಲ್ಪಗಳಲ್ಲಿ 5
--------------
ಜಗನ್ನಾಥದಾಸರು
ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣನ ನೋಡಿರೈ ಮುಖ್ಯಪ್ರ್ರಾಣನ ಪಾಡಿರೈ ಪ. ಕ್ಷೋಣಿಯೊಳಗೆ ಎಣೆರಹಿತ ಪಾವನಚರಿತ ಸದ್ಗುಣಭರಿತಅ.ಪ. ಅಂಜನೆ ಸುತನೊ ಮಹಾ ಅದ್ಭ್ಭುತನೊತರÀಣಿ ಮಂಡಲಕೆ ಮುಟ್ಟಿಹಾರಿದ ಬಲದ ಶ್ರುತಿಯೊ ವಿಕ್ರಮಗತಿಯೊಸುರರಾಯುಧ ನೆಗ್ಗಿಸಿದ ಕಪಿಯಗ್ರಣಿಯೊ ವಜ್ರದ ಖಣಿಯೊಶರಣ ವಂದಿತ ಚರಿತ ಮೂರ್ಲೋಕ ಗುರುವೊ ಕಲ್ಪತರುವೊ1 ರಾಮ ಪದಾಂಬುಜ ಬಿಂಬಪರಾಗ ಮಧುಪನೊ ದೇವಾಧಿಪನೊತಾಮಸ ರಾವಣನೆದೆಗೊತ್ತಿದ ಈ ಕರವೊ ಸಿಡಿಲಬ್ಬರವೊಪ್ರೇಮದಿ ರಣದೊಳಗ್ಹಾರಿ ರಥವನೊದ್ದ ಮಾರುತಿಯೊ ಪುಣ್ಯ ಮೂರುತಿಯೊರೋಮಕೆ ಸಿಲ್ಕದ ಹನುಮನ ಬಾಲದ ಸರಳೊ ದೈತ್ಯರಿಗುರುಳೊ 2 ಪಾದ ಪಡೆದಂಥ ಪದವೊ ಸಾಗರ ಮದವೊನೆನೆಯಲು ದುರಿತನಿವಾರಣ ಕರುಣಾವಾರಿಧಿಯೊ ಭಕ್ತರ ಸುಧೆಯೊಅನುದಿನದಲಿ ಹಯವದನನ ನೆನೆಯುವ ದಯವೊ ಗತಿ ಆಶ್ರಯವೊ3
--------------
ವಾದಿರಾಜ
ಪ್ರಾಣನ್ನೋಡೀರೇ ಮುಖ್ಯ ಪ್ರಾಣನ್ನೋಡಿರೇ ಪ ಕ್ಷೋಣಿಯೊಳಗ ಸುಖ ಬೀರುವ ಪಾದನ ಚರಿತಾ ಸದ್ಗುಣ ಭರಿತಾ ಅ.ಪ. ನರಲೀಲೆಯಲವ - ತರಿಸದ ಅಂಜನಿ ಸುತ-ನೊ ಮಹಾದ್ಬುತನೋ ಮಲೆಯೊ ವಿಕ್ರಮ ಸ್ಥಿತಿಯೋ 1 ಸುರರಾಯುಧವನೆ ಲೆಕ್ಕಿಸ ಕಪಿ ಯಾಗ್ರಣಿಯೊ ವಜ್ರದ ಖಣಿಯೋ ಶರಣರ ವಾಂಛಿತ ಪೂರಿಪ ಮೂಲೋಕ ಗುರುವೋ ಕಲ್ಪ ತರುವೋ2 ರಾಮ ಪದಾಂಬುಜ ಕೊಂಬ ಪರಾಗ ಮಧುಪನೋ ದೇವಾಧಿ ಪನೋ ಪ್ರೇಮದಿ ರಣದಲಿ ಹರಿರಥವಾದ ಮೂರುತಿಯೋ ಪುಣ್ಯ ಮೂರುತಿಯೋ3 ತಾಮಸ ರಾವಣ ನೆದಿಗೊತ್ತದ ಕರಮೋ ಸಿಡಿಲದ ಧರಮೋ ಮ್ಯೋಮಕ ಮೀರುವ ಹನುಮನ ಬಾಲದ ಸರುಳೋ ದೈತ್ಯರ ಉರುಳೋ4 ಕ್ಷಣದಲಿ ಸಂಜೀವನ ಗಿರಿ ತಂದಿಹ ಪದವೋ ಸಾಧುರ ಮುದಮೋ ವನಜ ಭವನ ಪದವಿಯ ಪಡಕೊಂಡಾ ತಪಮೋ ತಾ ಅಪರೂಪಮೋ 5 ದುರಿತ ನಿವಾರಿಪ ಕರುಣಾ ನಿಧಿಯೋ ಭಕ್ತರ ಸುಧೆಯೋ ಅನುದಿನ ಮಹಿಪತಿ ನಂದನ ಸಲಹುವ ದಯಮೋ ಗತಿ ಆಶ್ರಯಮೋ ||6
--------------
ಕಾಖಂಡಕಿ ಶ್ರೀ ಕೃಷ್ಣದಾಸರು