ಒಟ್ಟು 1111 ಕಡೆಗಳಲ್ಲಿ , 98 ದಾಸರು , 882 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಿಂತೆಯಾತಕೆ ಮನವೆ ಗುರುಗಳ ಪಾದ ಚಿಂತನೆಯನು ಮಾಡದೆಪ ಸಂತತ ಬಿಡದಲೆ ಚಿಂತನೆ ಮಾಳ್ಪರ ಅಂತರಂಗವ ತಿಳಿವರು ಗುರುವರರು ಅ.ಪ ಉದಯ ಕಾಲದಲಿವರ ಧ್ಯಾನವ ಮಾಡೆ ಮದಗರ್ವ ಪರಿಹರವು ಮುದದಿಂದ ಮೂರು ವೇಳೆಗಳಲ್ಲಿ ಸ್ಮರಿಸಲು ಹೃದಯ ತಾಪವ ಕಳೆವರು ಗುರುವರರು1 ದೇಶದೇಶವ ತಿರುಗಿ ತನುಮನಗಳ ಬೇಸರಗೊಳಿಸಲೇಕೆ ಪೋಷಿಪ ಗುರುಗಳಪಾದ ನಂಬಿದ ಮೇಲೆ ವಾಸುದೇವನೆ ನಲಿವ ಮುಂದೊಲಿವ 2 ವೇದವಾದಿಗಳೆಲ್ಲರೂ ವಾದವ ಮಾಡಿ ಮಾಧವನನು ಕಾಣಿರೊ ಮೋದತೀರ್ಥರ ಮತಬೋಧನೆ ಮಾಡುವ ಸಾಧು ಗುರುಗಳನೆ ಕೂಡು ಸಂಶಯಬಿಡು3 ಚಿತ್ತದಿ ಸ್ಮರಿಸುವರು ಹರಿ ಮಹಿಮೆಯ ಭಕ್ತಿಲಿ ನಲಿಯುವರು ಚಿತ್ರಗಾಯನ ನೃತ್ಯಗಾನಗಳಿಂ ಪುರು- ಷೋತ್ತಮನನೊಲಿಸುವರು ಹರುಷಿತರು4 ಕತ್ತಲೆ ಮನೆಗಳಲ್ಲಿ ಅಡಗಿಹ ವಸ್ತು ಲಕ್ಷಪರಿಮಿತಿ ಇದ್ದರು ಹಸ್ತದಿ ಜ್ಯೋತಿಯನೆತ್ತಿ ತೋರುವ ಪರಿ ಭಕ್ತರ ಸಲಹುವರು ಗುರುವರರು 5 ಸರಸೀಜಾಕ್ಷನ ನಾಮವು ಹಗಲಿರುಳು ಬಿಡದೆ ಧ್ಯಾನಿಸುತಿರ್ಪರು ಸಿರಿನಾರಾಯಣನನ್ನು ಸ್ಮರಿಸುತ್ತ ಮನದೊಳು ಪರಮಸಂಭ್ರಮ ಪಡುವರು ಗುರುವರರು 6 ಕರುಣದಿ ಸಲಹುವರು ಶಿಷ್ಯರ ಮನ ವರಿತು ವರಗಳನೀವರು ವರ ಕಮಲನಾಭವಿಠ್ಠಲನ ಧ್ಯಾನಿಪಉರಗಾದ್ರಿವಾಸ ವಿಠ್ಠಲದಾಸರನೆ ನಂಬು7
--------------
ನಿಡಗುರುಕಿ ಜೀವೂಬಾಯಿ
ಚಿಂತೆಯಿಲ್ಲದ ನರನು ಧರೆಯೊಳಗಿಹನೇ ಅಂತರಂಗದಿ ನಮ್ಮ ರಂಗನಿಲ್ಲದಿರೆ ಪ ಅಂತರಂಗದಿ ಶುದ್ಧಿ ಇಲ್ಲದಿರೆ ರಂಗಯ್ಯ ಎಂತು ನೀನಿಹೆಯಯ್ಯ ಮಾನಸದಿ ಸ್ವಾಮಿ ಅ.ಪ ಧನಧಾನ್ಯಗಳ ಚಿಂತೆ ಕನಕದೊಡವೆಯ ಚಿಂತೆ ತನುಜ ತನುಜೆಯರನ್ನು ಪಡೆವ ಚಿಂತೆ ಅನಿಶ ಯೌವ್ವನವಾಂತು ಕನಸು ನನಸುಗಳಲ್ಲಿ ವನಿತೆಯರನೊಡಗೂಡಿ ಭೋಗಿಸುವ ಚಿಂತೆ 1 ಉಡಿಗೆ ತೊಡಿಗೆಯ ಚಿಂತೆ ಉಡುವೆನೆಂಬಾ ಚಿಂತೆ ಒಡಲ ಪೋಷಿಪ ಚಿಂತೆ ಕಡಲಲೆಗಳಂತೆ ಪಿಡಿದೆನ್ನ ಬಾಧಿಪುವು ಬಿಡಿಸೆಲ್ಲ ಚಿಂತೆಗಳ ಕೊಡು ನಿನ್ನ ಸೇವೆಯನು ಮಾಂಗಿರಿಯರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಚೌತಿಯ ದಿವಸ ರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ- ಮೌರಿ ರಭಸದಿ ಲಕ್ಷ್ಮೀಕಾಂತ ಭೂರಿ ವೈಭವದಿ ಪೊರಟನೆತ್ತ ಯಾವ ಕಾರಣವೆಂದು ಪೇಳೆಲೆ ಸತ್ಯ 1 ಊರ್ವಶಿ : ದೇವಿ ಕೇಳೆಲೆ ಸುಮ್ಮಾನದಿಂದ ಕುಲ- ದೇವರ ಪೂಜೆಗೋಸುಗ ಬಂದ ಪಾವನಮೂರ್ತಿಯಾದುದರಿಂದ ನಮ್ಮ ಕಾವನು ಕರುಣಾಕಟಾಕ್ಷದಿಂದ2 ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ- ನ್ನಾಥನಿಗ್ಯಾವ ಕುಲವು ಕಾಣೆ ರೀತಿಯನರುಹಬೇಕೆಲೆ ಬಾಲೆ ಸರ್ವ ಚೇತನಾತ್ಮನ ನಾಟಕದ ಲೀಲೆ3 ಊರ್ವಶಿ : ಪಾಂಡವರಾಯುಧಗಳನ್ನೆಲ್ಲ ಪೊತ್ತು- ಕೊಂಡ ಕಾರಣದಿ ಪೂಜೆಗಳೆಲ್ಲ ಕಂಡು ಪೊಗಳಲು ಕವಿಗು ಸಲ್ಲ ಇನ್ನು ಪುಂಡರೀಕಾಕ್ಷನವನೆ ಬಲ್ಲ4 ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ- ಭೋಜನಾಭನು ತಾಕ್ಷ್ರ್ಯನ ಮೇಲೆ ರಾಜಬೀದಿಯೊಳ್ ಬರುವದೇನೆ ಇಂಥ ಸೋಜಿಗವೇನು ಪೇಳೆಲೆ ಜಾಣೆ5 ಊರ್ವಶಿ : ಪಟಹ ಡಿಂಡಿಮವಾದ್ಯರವದಿಂದ ತಂ- ಬಟೆನಿಸ್ಸಾಳರವದಿ ಬರುವ ಚಂದ ಸಟೆಯಲ್ಲ ಕೇಳು ಕರುಣದಿಂದ ನಮ್ಮ ಕಟಕ ರಕ್ಷಿಸಲು ಬರುವ ಗೋವಿಂದ6 ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ- ಗಲಭೆಗಳಿಂದ ಪೋಗುವದೇನೆ ನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ- ಜಲಜನಾಭನ ಮಹಿಮೆಯ ಜಾಣೆ7 ಊರ್ವಶಿ :ಚಾಪಲನೇತ್ರೆ ಚೌತಿದಿನದಿ ಕೆರೆ- ದೀಪವೆಂದೆನುತ ಭಕ್ತರು ಮುದದಿ ಶ್ರೀಪರಮಾತ್ಮ ವಿಲಾಸದಿ ಭಕ್ತ- ರಾಪೇಕ್ಷೆಗಳನು ಸಲ್ಲಿಸುವಂದದಿ8 ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ- ಸ್ತೋಮ ಜೇನುಂಡೆ ಬಿರುಸು ಮಿಗಿಲು ವ್ಯೋಮಕೇಶಗಳ ಪೊಗಳತೀರದು ಸರಿ ಭೂಮಿಯೊಳ್ ಕಾಣೆನೆಂಬಂತಾದುದು9 ಅಮಮ ಇದೇನೆ ಇಂದಿನ ಲೀಲೆ ಜನ- ರಮರಿಕೊಂಡಿಹರೇನಿದು ಬಾಲೆ ಸಮವಿಲ್ಲ ಇಂತೀ ವೈಭೋಗಕ್ಕೆಲೆ ನ- ಮ್ಮಮರಾವತಿಗಿಂತಧಿಕ ಬಾಲೆ10 ಊರ್ವಶಿ : ಸಾರ್ಥಕಾಗುವದು ಜನ್ಮವು ಕಾಣೆ ಸಕ- ಲಾರ್ತಿ ಹರಣವಾಗ್ವದು ಜಾಣೆ ಕೀರ್ತಿತರಂಗಮಾಗಿಹುದೇನೆ ಶೇಷ- ತೀರ್ಥವೆಂದರೆ ಕೇಳಿದು ಪ್ರವೀಣೆ11 ರಂಭೆ : ಏಸು ದೊಡ್ಡಿತೆ ಕೇಳಲೆ ಬಾಲೆ ಅನಂ- ತಾಸನದಂತೆ ಮರೆವುದಲ್ಲೇ ನಾಸಿರ ದೀಪಸೋಪಾನದಲೆ ಮಹಾ- ಶೇಷನಿಹನು ಮಧ್ಯದೊಳಿಲ್ಲೇ12 ಊರ್ವಶಿ : ಕರುಣಾಕರನು ನಮ್ಮೆಲ್ಲರನು ನಿತ್ಯ ಪೊರೆಯಲೋಸುಗ ಬಂದನು ತಾನು ಸುರುಚಿರ ಮಂಟಪವೇರಿದನು ಭೂ- ಸುರರಿಂದ ವೇದಘೋಷವ ಕೇಳ್ವನು13 ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮ ಸೃಷ್ಟಿಗೆ ಪೊಸತಾಗಿಹುದು ಕಾಣೆ ಕಟ್ಟಿಸಿದವನು ಪುಣ್ಯೋತ್ತಮನು ಪರ- ಮೇಷ್ಠಿ ಜನಕನ ಕೃಪೆಯಿನ್ನೇನು14 ಭಜಕರ ಮುಖದಿಂದೆಲ್ಲ ತಾನು ಭೂ- ಭುಜನಾಗಿ ನಡೆಸುವನಿದನೆಲ್ಲನು ನಿತ್ಯ ಸಾಕಾರವನು ತೋರಿ ತ್ರಿಜಗವನೆಲ್ಲ ರಕ್ಷಿಸುತಿಹನು15 ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ- ದೊಡೆಯ ಪೊರಡುವ ಕಾಲದಿ ಭಾರಿ ಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥ ಕಡು ಬೆಡಗನು ಉಸುರೆಲೆ ಬಾಲೆ16 ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮ ತನುವಿಗೆ ಸೋಂಕಲದನೆಲ್ಲವ ಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ- ಧ್ವನಿಯೆಸಗಿದರು ಕೇಳಿದರಂದವ17 ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು- ಬರುವನು ವೇದನಿನಾದದಲಿ ವರರತ್ನ ಖಚಿತ ಮಂಟಪದಲ್ಲಿ ನಿಂತ ನಿರವದಿ ಸುಖದಾಯಕನಲ್ಲಿ18 ಶರಣರ ಪಾಪ ಮನಕೆ ತಾರ ದುಡಿದ ವರ ಭೇರಿಗೆರೆವ ಬಿಸಿನೀರ ವರಲಕ್ಷ್ಮೀನಾರಾಯಣಧೀರ ಸುರು- ಚಿರ ಸಿಂಹಾಸನವೇರಿದ ವೀರ19
--------------
ತುಪಾಕಿ ವೆಂಕಟರಮಣಾಚಾರ್ಯ
ಛಲಾವ್ಯಾಕೊ ನಿನಗೆ ಎನ್ನಲಿ ಪ ಛಲಾವ್ಯಾಕೊ ಕೋಲಾಚಲವೇಂಕಟ ಫಲಾ ನೀಡಿ ನೀ ಭಲಾನೆನಿಸೊ ದೇವಾ ಅ.ಪ ಧರಾತಳದಿ ಭೂಧರಾಗ್ರಮಂದಿರ ಪರಾವರೇಶನೆ ದರಾರಿಕರಶೂರ 1 ರಮಾವರನೆ ತವ ಸಮಾನರಾಗಿಹ ಸುಮಾನಸಾರ್ಕರ ಕ್ಷಮಾತಳದಿ ಕಾಣೆ 2 ಕುಲಾಲಕೃತ ಮೃತ್ ಕಲಾಪಧರಮಹಾ ಉಲಾಯುಗಾತ್ಮಜ ಬಲಾರಿಸುತಸುಖ 3 ಶತ್ರುಬವರದೊಳು ವೃತ್ರಾರಿತನಯನ ಮಿತ್ರಾನ ತೋರಿ ಪೊರೆದ್ಯೊ ಶತ್ರುಹನನದೇವ 4 ತಕ್ಷಣದಲಿ ಸಾಸಿರಾಕ್ಷ ತನಯನ ಪೊರೆದಿ 5 ಭರ್ಮಾನಸ್ತ್ರದ ನಿಜ ಮರ್ಮವರಿತು ನೀ ಧರ್ಮಾಪೌತ್ರನ ಕಾಯ್ದಿ ಸುಧರ್ಮನಾಮಕ ನಿನಗೆ 6 ದಶಾಸ್ಯ ಮುಖಮಹನಿಶಾಚರೇಶರ ದಶಾಕಳದ ಮಹಾ ದಶಾವತಾರನೆ 7 ವಟಾದ ಎಲೆಸಂಪುಟಾದಲೊರಗುಂ - ಗುಟಾವ ನುಂಬುವ ದಿಟಾ ವಿಶ್ವೋದರ 8 ದಾತಾ ಗುರುಜಗನ್ನಾಥ ವಿಠಲ ನಿಜ ದೂತಾಪಾಲಕನೆಂದು ಖ್ಯಾತಾನಾಗಿಹ ನಿನಗೆ 9
--------------
ಗುರುಜಗನ್ನಾಥದಾಸರು
ಛಳಿಸದಿರು ಚಂಡಿ ತನುವೆ ನೀನುಒಳಗಾಗದೊರಟುತನವೆ ತರವೆ ಪಗರ್ಭವಾಸವಗಳಿಸಿದೆ ಹಾಗೆ ನೀನರ್ಭಕತ್ವದಲಾಡಿದೆ ಬಿಡದೆನಿರ್ಭಯದಿ ನೀ ಬದುಕಿದೆ ಭೋಗದಲಿದುರ್ಭಗರ ದಾರಿಗೊಲಿದೆ ನಲಿದೆ 1ಕಾಮಾಂಧಕಾರಕೆಳೆದೆ ನನ್ನ ನಿಷ್ಕಾಮದಲಿ ನಿಲಿಲೀಸದೆ ಕಳದೆನೇಮಕ್ಕೆ ನೀನಲಸಿದೆ ಶೀತೋಷ್ಣಭೀಮಕ್ಕೆ ನೀ ಬೆದರಿದೆ ಬರಿದೆ 2ಕಾಲಗಳ ಬಹು ಕಳಸಿದೆ ವ್ಯರ್ಥದಲಿಶ್ರೀಲೋಲನನುಸರಿಸದೇ ಹೋದೆಮೂಲವನೆವರೆ ಮಾಡಿದೆ ದೋಷಗಳಕೀಲುಗಳಿಗಳಿಕಾಲ್ನೀಡಿದೆ ಜಡಿದೆ 3ಮನವೀಗ ಮಾಡಿತಿನಿತಾ ನಾನಿದಕೆಮನೆ ಮಾತ್ರವಾಗೆ ಮಾತನಿಡುತಾತನುವಿನಲಿ ತಪ್ಪಿಡಿಯುತಾ ಯಾಕೆ ನೀನೆನುವೆಯನೆ ನೀನೆ ಚಿತ್ತವ್ರಾತಾ 4ಮನ ನೀನೆ ನೀನೆ ಮನವೂ ಕ್ರಿಯೆಯಮನ ಮಾಡೆ ಮೂಡ್ದೆತನುವೂ ಘನವೂನೆನೆಯಲೆರಡಿಲ್ಲ ನೀವು ಏಕತ್ವವೆನುತೆಂದೆನಿರೆ ಬಂಧವೂ ದಿಟವೂ 5ಕಾರಣವೆ ಮನವಾದರೆ ಅದರೊಡನೆಹೋರುವೆನು ನಾನು ಹೆದರೆನದರೆತೋರೆ ನೀ ಮುಂದೆ ಬೇರೆ ಬಂಧನವೂಬೀರಿತಿದು ನೀ ಕಯ್ಯಾರೆ ತಾರೆ 6ನೀ ಬಾರದಿರುವೆಯಲ್ಲ ುೀಮಾತನಾ ಬಾಯಲೆನ್ನೆನಲ್ಲಾ ಸೊಲ್ಲಾಆ ಬಗೆಯ ಮೂಡಿತಿಲ್ಲ ಇದಿರಾಗಿನೀ ಬಂದು ನಿಲಲು ಸಲ್ಲಾ ಹೊಲ್ಲಾ 7ನನಗುಂಟು ಮನಸಿಗುಂಟು ವ್ಯವಹಾರನಿನಗಾಗಬಾರದಂಟೂ ನಂಟುಜನಿಸಿಬರೆ ಬಂತುಗಂಟು ಆವರಣವೆನಗಾುತು ಪದರವೆಂಟೂ ಬಂಟೂ 8ಅನುಮಾನವಿಲ್ಲವಿಸಿದಕೆ ಪ್ರತ್ಯಕ್ಷವನುಭವಿಸಿ ಪೇಳ್ದೆನದಕೆ ಅಳುಕೆಜಿನುಗದಿರು ಮುಂದೆ ಜೋಕೆ ಹರಿಯಂಘಿü್ರಯನುಸರಿಸದಂದವೇಕೆ ಬೇಕೆ 9ಹರಿಪಾದಪದ್ಮವನ್ನು ನಾನುಬೆರೆವೆ ನೀ ಬಳಲಿಕೆಯನೂ ುನ್ನೂತರಬೇಡ ತಥ್ಯವನ್ನು ಪಡೆವದಕೆಬರೆ ಮುಂದೆ ಬಹುಮಿತ್ರನೂ ನೀನು 10ಶರೀರವಿರೆ ಶ್ರಮವು ನಿನಗೆ ಜನ್ಮಗಳಧರಿಸುತ್ತ ದಣಿವು ನಿನಗೆ ಹೀಗೆಸರಿಯಾಯ್ತು ದುಃಖ ನಮಗೆ ಇದಕಂಡುಇರುವ ಬಗೆ ವಿಶ್ವದೊಳಗೆ ಹೇಗೆ 11ಅದರಿಂದ ನೀನು ನಾನು ಒಂದಾಗಿಹುದುಗಲಾದಿಯನೀಶನೂ ತಾನುಪದವಿಯನು ಪಾಲಿಸುವನು ಬಳಿಕಲಿನ್ನುದುಸುವಕಷ್ಟಗಳನೂ ಕೊಡನೂ 12ಬರುವದಾನಂದ ನಮಗೆ ತಿರುಪತಿಯವರದ ವೆಂಕಟರಮಣಗೆ ಎರಗೆಭರಿತಾತ್ಮಗಾವು ಹೊರಗೆ ಹೀಗೆ ನಾವಿರಲುಂಟು ದೇವನೊಳಗೆ ಸಲುಗೆ 13ಕಂ||ಛಂದಾನುವೃತ್ತಿ ಮೂರ್ಖರಿಗೆಂದಾಡಿದ ನುಡಿಯು ಸತ್ಯವಾುತೀ ದೇಹವುಮುಂದೊರದೆ ಪೇಳಲುತ್ತರನೀಂದೊಡಬಡಿಸುತ್ತ ಕೇಳಿಕೊಳುತಿಹದೊಲವಿಂ
--------------
ತಿಮ್ಮಪ್ಪದಾಸರು
ಜಗಕ್ಕಿಂತ ಭಾರವೇನೊ ನಮ್ಮ ರಂಗ ನಗಕ್ಕಿಂತ ಗಾತ್ರನೇನೋ ಪ ಜಗಕ್ಕಿಂತ ಭಾರವೇನೋ | ಖಗಪೊತ್ತು ತಿರುಗಲೆ[ೀಕೆ] ನಗದ ಮೇಲೇ ಕುಳಿತಿಹ ಭಾರ ಜಗಂಗಳ ಹೊರುತಲಿ ನಲಿವವನಿವನೇ ನಗಗಳ ಬೆರಳಲಿ ಎತ್ತಿದನಿವನೇ ಖಗಮೃಗಗಳಿಗೆ ಒಲಿದವನಿವನೇ1 ತೃಣಕ್ಕಿಂತ ಹಗುರನೇನೋ ರಣದೆ ರಾವಣನ ಕೊಂದೆ ಮಣಿಗಿಂತ ಸಣ್ಣನೇನೋ ಧರಣಿಯನಳೆದೈತಂದೆ ತೃಣಕ್ಕೆಲ್ಲಾ ತೃಣರೂಪಾಗಿಹನು ಮಣಿಗೆಲ್ಲಾ ಶ್ರೀಮಣಿಯಾಗಿರುವ ಸ ದ್ಗುಣಿಗಳಿಗೆ ಕರುಣಿಯು ಇವನು 2 ಎಲ್ಲೆಲ್ಲು ಇರುವನೇನೋ ನಮ್ಮ ರಂಗ ಎಲ್ಲಿಯೂ ಇರುವನೇನೇ ಅಲ್ಲಲ್ಲಿ ಇರುವ ರಂಗ ಎಲ್ಲೆಲ್ಲು ಇಲ್ಲವೇನೇ ಅಲ್ಲಲ್ಲಿ ಅಂತರಂಗ 7 ಬಲ್ಲಿದರೆಲ್ಲ ಬಲ್ಲರು ಇವನ ಕಲ್ಲೆಂಬುವರಿಗೆ ಇವನು ಇಲ್ಲದ ತಾಣವೊಂದಿಲ್ಲವು ಭಕ್ತಿಯ ಸೊಲ್ಲಿಗೆ ಸೋಲುವ ಮಾಂಗಿರಿರಂಗ 8
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಗದಂತರ್ಯಾಮಿಯೆಂದೆನುತ ನಿನ್ನನಿಗಮ ಸಾರುವ ಮಾತು ಪುಸಿಯೆ ರಂಗ ಪ ಸಿರಿ ಸಂಪತ್ತುಗಳನೀವಶ್ರೀದೇವಿ ನಿನ್ನ ಹಿರಿಯರಸಿಯೋ ದೇವ 1 ಎಂಬತ್ತುನಾಲ್ಕು ಲಕ್ಷ ಜೀವರಾಶಿಗಳನ್ನುಬೊಂಬೆಗಳ ಮಾಡಿ ಭವರಂಗದಲಿತುಂಬಿ ಕಲೆಗಳನೊತ್ತಿ ನೊಸಲ ಬರೆಹವ ಬರೆವಅಂಬುಜೋದ್ಭವ ನಿನ್ನ ಹೆಮ್ಮಗನು ದೇವ 2 ಸಕಲ ಜೀವರಾಶಿಗಳನು ಕಲ್ಪಿಸುವ ಬೀಜಸುಖದಿಂದ ಮಾಯಾಂಗನೆಯರೊಡಲೊಳುಅಕ್ಕರದಿ ಪಿಂಡಾಂಡಗಳ ಕಟ್ಟಿ ಬಲಿಸುವಮಕರಾಂಕ ನಿನ್ನ ಕಿರಿಮಗ ದೇವ 3 ರಾಮನಾಮವ ಜಪಿಸಿ ಪರಮ ವೈಷ್ಣವನಾಗಿಹೇಮಗಿರಿ ಸನಿಹ ಸಾಹಸ್ರನಾಮಪ್ರೇಮದಲಿ ಜಪಿಸುತ್ತ ವೈರಾಗ್ಯನಿಧಿಯಾದಸೋಮಶೇಖರನು ನಿನ್ನ ಮೊಮ್ಮಗನು 4 ಜಂಗಮ ಸ್ಥಾವರಕಾಧಾರವಾಗಿಹಳುಭಂಗಪಡುವ ಜನರ ಕರ್ಮವ ಕಳೆವಳುಹಿಂಗದೆ ಜಗವ ಪಾವನವ ಮಾಡುವ ಪುಣ್ಯಗಂಗೆಯೆಂಬಾಕೆ ನಿಮ್ಮಯ ಮಗಳು ದೇವ 5 ಶುದ್ಧ ಬುದ್ಧಿಯನುಳ್ಳ ಪ್ರದ್ಯುಮ್ನನಾ ಮಗಳುಶ್ರದ್ಧೆಯೆನಿಸಿಕೊಂಡು ಸೂತ್ರಗೆ ಸತಿಯಾಗಿಸದ್ಯೋಜಾತನ ಪಡೆದು ಪ್ರಸಿದ್ಧವಹ ದೇವಿ ಈ ಧರೆಯೊಳು ಪುಟ್ಟಿ ನಿನ್ನ ದಾಸಿಯಾದಳು 6 ಇಂತು ಅಣುರೇಣು ತೃಣ ಕಾಷ್ಠದೊಳಗೆಲ್ಲಸಂತೋಷವಾಗಿಹುದು ನಿನ್ನ ಸ್ಮರಣೆಯಂತ್ರವಾಹಕನೆಂಬ ಬಿರುದು ಸಲುವುದು ನಿನಗೆಕಂತುಪಿತ ಕಾಗಿನೆಲೆಯಾದಿಕೇಶವನೆ 7
--------------
ಕನಕದಾಸ
ಜಗದೊಳಗ | ಸಾಧುರ ಮಹಿಮೆಯ ನೋಡಿ | ಸಾದರದಿಂದಲಿದೇ ಸಾಧನವೇ ಮಾಡಿ ಪ ಸಾಧುರ ನೋಡಿ | ಬಾರದ ಬಯಸುವರಲ್ಲಾ | ತಾನಾಗಿ ಬಂದ | ದಾರಿಯ ತ್ಯಜಿಸಲಿಕ್ಕಿಲ್ಲಾ ಬರುದೆ ಕಂಡಾ | ದುರಾಶೆ ಸೇರುವರಲ್ಲೆ | ದೊರಕಿದನಿತೆ ಲಾಭ | ಸಂತುಷ್ಟರಾಗಿಹರೆಲ್ಲಾ 1 ಸಾಧುರ ನೋಡಿ | ಬ್ರಹ್ಮಭಾವನೆ ಸಮತಾಳಿ | ಸಕಳಿಲ್ಲಿ | ಹಮ್ಮಿನ ಮೊಳಿಕೆಯ ಕೇಳಿ | ಸಿದ್ಧಾಂತದಿಂದ ತಮ್ಮನು ಭವದಲಿ ಬಾಳಿ | ಮುಮ್ಮುಳಿ | ಬಿಡಿಸುವರೊಂದೊಂದೇ ನುಡಿಹೇಳಿ 2 ಸಾಧುರ ನೋಡಿ | ಭಕ್ತಿಯ ಆಶ್ರಯ ಮಾಡೀ | ಬಂದವರಿಗೆ | ಮುಕ್ತಿಯ ಅನ್ನ ಸತ್ರ ನೀಡೀ | ಸದ್ಭೋಧದ | ಯುಕ್ತಿಯಾನಂದದೊಳಗಾಡೀ | ಉಕ್ತವಾದ ಗುರು ಮಹಿಪತಿಸ್ವಾಮಿ ಕೂಡೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಂಗಮನು ಇಂತಿವನು ಸರ್ವಸಂಗ ದೂರಾದವನೀಗ ಜಂಗಮ ಪ ತನ್ನ ತಿಳಿದು ತಾನಾದವ ಜಂಗಮ ಜಗವಭಿನ್ನವೆಂದು ಕಾಣದವ ಜಂಗಮಹೊನ್ನು ಹೆಣ್ಣು ಬಿಟ್ಟವನು ಜಂಗಮ ಸಂ-ಪನ್ನ ಸಾಧು ಸಂಗವಿಹ ಜಂಗಮ 1 ಒಳಗೆ ಹೊರಗೆ ಒಂದಾದವ ಜಂಗಮ ಎಲ್ಲಹೊಳೆವುದೊಂದೆ ಜ್ಯೋತಿಯು ಎಂಬುವ ಜಂಗಮಹೊಲೆಯು ಶುದ್ಧವ ಕಳೆದವ ಜಂಗಮ ಎನಗೆಕುಲವು ಛಲವು ಇಲ್ಲವೆಂಬುವ ಜಂಗಮ 2 ಅಂಗ ಲಿಂಗವಾಗಿಹ ಜಂಗಮಲಿಂಗ ಅಂಗ ಏಕವಾಗಿಹ ಜಂಗಮಮಂಗಳವೇ ನಿತ್ಯವಿಹ ಜಂಗಮ ಗುರುಲಿಂಗವಾದ ಚಿದಾನಂದ ಜಂಗಮ 3
--------------
ಚಿದಾನಂದ ಅವಧೂತರು
ಜಗವಿದು ಪುಸಿಯೈ ಬಗೆವೊಡೆ ಮನುಜಾ ತೋರುತಿಹ ಕನಸಿನಂತೆ ಇರುವೆ ಪ ನನಸಿನ ಅರಿವದು ದೊರಕುವ ತನಕ ಕನಸಿದು ಎನ್ನುವ ಕಲ್ಪನೆ ಇಹುದೆ ? ನನಸಿನ ನನಸಾಗಿಹ ಪರವಸ್ತುವೆ ತಾನೆ ನಿಜವು ಎಂಬರಿವಾಗುತಲಿರೆ 1 ನಿರುತದಿ ಸಮನಾಗಿರಲರಿಯದ ಈ ತೋರಿಕೆ ಅನಿಸಿಕೆಗಳು ನಿಜವಲ್ಲವು ಪರಿಕಿಸೆ ಸತತದಿ ಸಮನಾಗಿರುತಿಹ ಪರಮ ಪದವೆ ತಾನೆಂದರಿಯುತಲಿರೆ 2 ಅಳಿಯುವ ಜಗವಿದು ಬೆದರುವಿ ಏತಕೆ ತಿಳಿಯುತಲೀಪರಿ ನಿಜವಸ್ತುವನು ಗಳಿಸಿಕೊಂಡು ನೀ ನಿನ್ನಯ ಮುಕುತಿಯ ಕಲುಷರಹಿತಶಂಕರನಡಿಯರಿಯಲು 3
--------------
ಶಂಕರಭಟ್ಟ ಅಗ್ನಿಹೋತ್ರಿ
ಜನಕನೇನೆನುತೆನ್ನ ಘನವಂತನಿವೆನೆಂದು ಮನದÀಂದು ಬಳಿಸಂದು ಕೊಟ್ಟನಿಂದು ವೇಷವನು ನೋಡಿದೊಡೆ ಋಷಿಯಂದಮಾಗಿಹುದೆ ಭಾಷೆಯಿಂ ಭಾವೆಯೊಲು ಭಾಸಮಹುದೆ ಚರ್ಯೆಯಿಂ ಭೂಭುಜನ ಪರ್ಯಾಯದಿಂದಿಹನೆ ವನಿತೆಯನು ಸಂತವಿಸ ಲರಿಯದವನು ವನಮೂಲ ಫಲವತಿಂದು ವಾಸಿಪಂಥದೊಳಾನೆ ಶೂರನೆಂದು ಘೋಷಿಸುವ ಶೇಷಗಿರಿವಾಸನೆಂದು
--------------
ನಂಜನಗೂಡು ತಿರುಮಲಾಂಬಾ
ಜನರ ಪಾಲಿಸುವ ಷಣ್ಮುಖನ ನಾಮಾ ಪ ಪರಕೆ ಪರತತ್ವವಾಗಿಹ ದಿವ್ಯನಾಮ 1 ತಾರಕ ಬ್ರಹ್ಮವಾಗಿಹ ದಿವ್ಯನಾಮ 2 ಶಂಭುಪುತ್ರನೆ ನಿನ್ನ ದಿವ್ಯನಾಮ 3 ನಿಚ್ಚ ಸಚ್ಚಿದಾನಂದ ಚಿನ್ಮಯ ನಿನ್ನ ನಾಮ 4 ಅನುದಿನ ಅಘ ಕಳೆವ ನಾಮ ||5||
--------------
ಬೆಳ್ಳೆ ದಾಸಪ್ಪಯ್ಯ
ಜನ್ಮ ಸಫಲ ಕಾಣಿರೋ ನಮ್ಮ ಗುರು ವಾದಿರಾಜರಾಯರ ಕಂಡು ಜನ್ಮ ಸಫಲ ಕಾಣಿರೋ ಪ ಯುಕ್ತಿ ಮಲ್ಲಿಕೆಯೆಂಬ ಗ್ರಂಥ ಮಾಡಿಹರು ಮತ್ತೆ ಮುತ್ತಿನ ಸಿಂಹಾಸನವನೇರಿಹರು ಮತ್ತೆ ದುರ್ವಾದೀಭಗಳಿಗೆ ಮೃಗೇಂದ್ರರು ಸೂತ್ರನಾಮದಿ ಮುಂದೆ ಮೆರೆವರು 1 ದಾಸಕೂಟಗಳಲ್ಲಿ ರತ್ನದಂತಿಹರು ಭಾಸುರಕಾಯದಿ ನೂರ ಇಪ್ಪತ್ತು ವರ್ಷಗಳೊಳಗಿದ್ದು ಮೆರೆದವರು 2 ಮೂಜಗದೊಳಗಿಂಥ ಗುರುಗಳೆಲ್ಲಿಹರು ಕಂಜಸುತನ ಪದವೇರುವವರು ರಾಜೇಶ ಹಯಮುಖ ಕಿಂಕರಾಗ್ರಣಿಗಳು ರಾಜಿಪ ಶ್ರೀಸೋದಾಪುರದೊಳಗಿಹರು 3
--------------
ವಿಶ್ವೇಂದ್ರತೀರ್ಥ
ಜಯ ಜಯ ಜ್ಯೋತಿರ್ಮಯಾನಂದ ಶ್ರೀನಾಥಗೆ ಜಯ ಜಯಾನಂದ ಸದೋದಿತಗೆ ಧ್ರುವ ಭೋಕ್ತ ಸದ್ಗುರುನಾಥಗೆ ಸದ್ಗೈಸುವ ಸದಾ ಸುಶ್ಯಾಂತಿಗೆ 1 ಸದ್ಗೈಸುವ ಸದಾ ಶ್ಯಾಂತ ಶ್ರೀನಿಧಿಗೆ ಸದ್ಭಕ್ತಿಲಿ ಎನ್ನಿ ಸನ್ನಿಧಿಗೆ 2 ಸ್ವಾನುಭವದ ಕಂದ ಅನಂದೋ ಬ್ರಹ್ಮಗೆ ಜ್ಞಾನÀ ಜ್ಞಾನಕನುಪಮಗೆ 3 ಜ್ಞಾನ ವಿಜ್ಞಾನÀಕನುಪಮಾಗಿಹಗೆ ಜಯ ಜಯವೆನ್ನಿ ಶ್ರೀ ಮಹಿಪತಿಸ್ವಾಮಿಗೆ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯ ನಿಮಗೆ ಜಯವಣ್ಣ ಭಯವಿಲ್ಲೀನುಡಿ ಕೇಳ್ ಚಿಣ್ಣ ಪ ಶ್ರೀ ಮನೋಹರನ ಲೀಲೆಯಿದು ಸು ಕ್ಷೇಮವಹುದು ಸತ್ಪುರುಷರಿಗೆ1 ಈ ಜಗತ್ತನೂ ಈಶ್ವರನೂ ತಾ ರಾಜನಾಗಿ ಕಾಪಾಡುವನು 2 ಕುರುಡರು ತಾವ್ ಕೆಡುವರು ಕೊನೆಗೆ 3 ಇದರೊಳುಂಟು ಬಹುವಿಧ ಭೇದ ವದರುತಿಪ್ಪದು ಸಕಲವೇದ4 ಅಂತ್ಯವಿಲ್ಲದಿಹ ಕಾರಣದಿ ಅ ನಂತ್ಯವೆಂದು ಪೇಳ್ವರು ಭರದಿ 5 ಮನುಜ ಜನ್ಮ ಬಹುದುರ್ಲಭವು ಮನನಶೀಲರಿಗಹುದು ಶುಭವು 6 ಮರೆಯಬೇಡಿ ಜನರೆ ನೀವು ಅರಿತು ಅರಿಯದವರಿಗೆ ನೋವು 7 ಕತ್ತಲೆ ಕೊನೆಯಿಲ್ಲದ ಘೋರ 8 ವುಳಿಯದು ನಿಮಗದು ಕೇಳ್ ಜನರೆ 6 ಧರ್ಮವೆಂಬ ಮೂಟೆಯ ಕಟ್ಟೆ ಬಟ್ಟೆ 10 ಗುರುವಾಜ್ಞೆಯ ಮೀರುವುದು ಸಲ್ಲ ಈ ದುರುಳತನ ನಿಮಗೆ ಸರಿಯಲ್ಲ 11 ನಾನೇ ಶ್ರೇಷ್ಠನೆಂಬುವ ಮಾತು ಶಾನೆ ವಡಕು ಗಡಿಗೆಯು ತೂತು 12 ಹಿಂದಿನವರ ಕಷ್ಟವ ನೋಡಿ ಮುಂದಕೆ ಸತ್ ಸಾಧನೆ ಮಾಡಿ 13 ಮೂರು ಕರಣ ಶುದ್ಧಿಯು ಬೇಕು ಧೀರ ಜನರಿಗಿಷ್ಟೇ ಸಾಕು 14 ಜನರ ನೋಡಿ ನಡೆಯಲಿಬೇಡಿ ಕೊನೆಗೆ ನಿಮಗೆ ಕಾಲಿಗೆ ಬೇಡಿ 15 ಹೆಚ್ಚಪೇಕ್ಷಿಸೆ ಬರುವುದಿಲ್ಲ ಮೆಚ್ಚನು ನಿಮಗೆ ಸಿರಿಯನಲ್ಲ 16 ನಿರ್ಮಲ ಮಾರ್ಗ ಹುಡುಕಿದಿರಾ 17 ಜ್ಞಾನರತ್ನ ಸಂಪಾದನೆಯು ಹೀನ ಜನರಿಗಾಗದು ಕೊನೆಯು 18 ದುರಾಸೆಯಲಿ ಕೆಡುವರು ಕೆಲರು ನರಾಧಮರು ಎಂದೆನಿಸುವರು 19 ಪರಿಯಂತ ತಂ ತಮ್ಮಟ್ಟಿಗಿಹುದು ಅಂತ 20 ಗೂಡಿನ ಮೇಲೆ ದುರಭಿಮಾನ ಮಾಡಿ ಮಾಡಿ ಕೆಡುತಿಹರು ಜನ 21 ಯೀಗೂಡಿಗೆವೊಂದಾಧಾರ ಯೋಗಿಗಳರಿವರಿದರಸಾರ 22 ವರ ರಸಗಳು ನಾಲ್ಕು ತೊಗರು 23 ಹಂಚೇಳರಿಂ ಮಾಡಿಹದೇವ 24 ಘಟಿಸಿರುವುದು ಪತ್ತಲೆಯಿದರೊಳ್ 25 ಮರನಿದೆಂದು ಶಾಸ್ತ್ರದ ಮೂಲ ಅರಿಯದೆ ನಾನೆಂಬೆನು ಬಾಲ 26 ಪಕ್ಷಿಗಳೆರಡೀ ಮರದಲ್ಲಿ ಸಾಕ್ಷಿ ಒಂದು ಒಂದಕೆ ಅಲ್ಲಿ 27 ಮರದ ಪಣ್ಣು ತಿಂಬುವದೊಂದು ನಿರುತವು ನೋಡುತಿರುವದೊಂದು 28 ದ್ವಾಸುಪರ್ಣ ಶೃತಿ ಇದರರ್ಥ ದಾಸನಾಗದಿರುವನು ವ್ಯರ್ಥ 29 ಅಧ್ಯಾತ್ಮ ವಿದ್ಯದಲಿ ತೋರುವುದೇ 30 ಜೀವನಾಮ ಆತ್ಮನಿಗುಂಟು ದೇವತಾನು ತಬ್ಬಿದ ಗಂಟು 31 ಅಭೇದ ಶೃತಿಗಳೇನಕ ವಿಧ ಸ್ವಭಾವದಿರುನಡೆ ತೋರುವದ32 ಸುರರುತ್ತಮರು ನರರಾನಿತ್ಯ ಸುರೇತರರು ನೀಚರು ಸತ್ಯ 33 ನೂರು ವರುಷ ಬದುಕುವರೆಂದು ಮೀರಿ ಮನದಿ ಯೋಚಿಸಿ ಮುಂದು 34 ಬಹು ಧನಾರ್ಜನೆಯ ವೂಹೆಯಲಿ 35 ಮೊದಲು ಅನ್ನಕಿಲ್ಲೆಂದು ಮತಿ ವಿಧ ವಿಧ ವಸ್ತ್ರಗಳಲಿ ಪ್ರೀತಿ 36 ನಾಬಡವನು ಎಂದಗಲಿರುಳು 37 ತನಗೆ ಬೇಕಂತ ಚಿಂತೆಯೊಳು 38 ಇತರರ ನೋಡಿ ತನಗಪೇಕ್ಷೆ ಗತಿ ಇಲ್ಲದೆ ಇರುವುದೆ ಶಿಕ್ಷೆ 39 ತಾವ್ ಸಮಂಜಸದಿ ಪೇಳಿದರು 40 ಪ್ರವೃತ್ತಿ ಮಾರ್ಗದ ಸಂಪತ್ತು ಭವಾಂಬುಧಿ ಸುಳಿಯು ವಿಪತ್ತು 41 ಫಲವ ಕೋರಿ ಕರ್ಮವ ಮಾಡಿ ಹಲವು ಯೋನಿಗಳೊಳೋಡಾಡಿ42 ಮರಳಿ ಮರಳಿ ಜನನ ಮರಣದೆ ದರಿಯ ಕಾಂಬ ಬಗೆ ದಾರಿಯದೆ 43 ಇದುವೆ ದೊಡ್ಡ ಸಂಸೃತಿ ವೃಕ್ಷ ತುದಿ ಮೊದಲಿಗು ದೊರಕದು ಮೋಕ್ಷ 44 ಇನ್ನು ಅಕ್ಕ ತಂಗಿಯು ಮೊದಲು 45 ಸತಿ ಸುತರು ಬಳಗಗಳು 46 ಇವರು ತನ್ನವರಿತರರಲ್ಲ ಭವ ಜಲಧಿಯ ಜಂತುಗಳೆಲ್ಲ 47 ಕೊಡದಿದ್ದರೆ ಕೋಪವು ಬಹಳ 48 ವಿತ್ತವಿರಲು ಬಂಧುಗಳೆಲ್ಲ ಹತ್ತಿ ಇವನ ಬಾಧಿಪರೆಲ್ಲ 49 ಸುಳ್ಳುಹೇಳಿದರೆ ಬಹುನಂಬಿಕೆ 50 ಹಿತೋಪದೇಶದಿ ಬಹುಕೋಪ ಪತಿತ ಜನರಿಗೆ ಇದು ಪಾಪ 51 ಒಬ್ಬ ದೈವಲೋಕಕೆ ಸತ್ಯ ಹಬ್ಬವವನ ಭಜಿಪುದಗತ್ಯ 52 ಕಾಮುಕರಿಗೆ ಕಡೆಗೂ ದುಃಖ ನೇಮವದಕೆ ಮೂಲವುರೊಕ್ಕ 53 ಸ್ಪøಹದಿಂದಲೆ ಕೋಪವು ಬಹುದು ವಿಹಿತವೆಂದು ನಗುವನೆ ಸಾಧು 54 ಲೋಭದಿಂದ ಮೂಲಕೆ ನಾಶ ಸ್ವಾಭಾವ್ಯದಿ ದುರ್ಜನಕಾಶಾ 55 ರಾಶಿ ಧನವ ಕೊಳ್ಳೆಯು ಕೊಡುವ 56 ದಾನಕೆಂದರಿಲ್ಲವು ಕಾಸು ದಂಡಕೊಡುವುದಕೆ ಬಹುಲೇಸು 57 ನಷ್ಟವಾದರೂ ಮನಕಿಷ್ಟ ದುಷ್ಟಾತ್ಮರು ಪಡುವರು ಕಷ್ಟ 58 ಆರ್ಯರುಕ್ತಿ ಕೇಳುವುದಿಲ್ಲ ಕಾರ್ಯದಲಿ ವಿಘಾತವೆ ಎಲ್ಲ 59 ಧನವಿದ್ದರು ಸೌಖ್ಯವು ಕಾಣೆ ಘನದುರಾಸೆ ಕುಜನರಿಗೆ ಆಣೆ 60 ಭೂಮಿ ಉಂಟು ತನಗೆಂಬುವರು ನೇಮದಿ ದಂಡವ ತೆರುತಿಹರು 61 ಮಳೆಬೆಳೆಯನು ನಿಂದಿಪರು ಕೆಲರು ಖಳರು ಸುಮನಸರ ದೂಷಿಪರು62 ಮೊದಲು ತುದಿಯಲಿ ದುರಭಿಮಾನ 63 ವ್ಯಾಪಾರದಿ ಧನ ಕಳಕೊಂಡು ಕೋಪ ವ್ಯಾಜ್ಯಕೆಳೆವದೆ ಫಂಡು 64 ಬಲುಧನವ ಕೂಡಿಸುತಲಿ ಮುಂದು 65 ಮುಖದಾಕ್ಷಿಣ್ಯದಿ ಮಾತಾಡಿ ವಿಕಲರನರ ಸ್ನೇಹದಿ ಕೂಡಿ66 ದೊಡ್ಡದಾಗಿ ಮನೆಯನು ಕಟ್ಟಿ ದುಷ್ಟತನದಿ ವಾದಿಸಿ ಬಿಟ್ಟಿ 67 ಕೂಲಿಯವರ ಹೊಟ್ಟೆಗೆ ಕೊಡದೆ ಲೋಲನಾಗಿ ವಂಚನೆ ಬಿಡದೆ 68 ಸಂಸಾರವಿದೆ ಸ್ಥಿರವೆಂದು ಹಿಂಸೆಪಡುತಲಿ ಸದಾನೊಂದು 69 ಚತುರ ಶೀತಿ ಲಕ್ಷಯೋನಿಗಳೊಳ್ ಮತಿಹೀನರಾಗಿ ಜನಿಸುತಲೂ 70 ಭದ್ರವು ತಮಗೆಂದು ಪ್ರಾಣಿಗಳು 71 ಇದಕ್ಕಾಗಿ ಪರಾಧೀನದಲಿ ಪದೇ ಪದೆಗೆ ತಾವು ನೋಯುತಲಿ 72 ಮನುಜ ಜನ್ಮ ಬರುವುದೆ ಕಷ್ಟ ಮಾನಿತನಾದವನೆ ಅತಿ ಶ್ರೇಷ್ಠ 73 ಭೋಧಿಸುವಾತನೆ ಶುಭತಮನು 74 ಸುಜನರಿಲ್ಲವವರದೆ ಪಂಥ 75 ಕರ್ಮಾರ್ಥ ಶೃತಿ ಗಹನದಲಿ ನಿರ್ಮಲರಾಗದೆ ಚಿಂತೆಯಲಿ&ಟಿbsಠಿ
--------------
ಗುರುರಾಮವಿಠಲ