ಒಟ್ಟು 773 ಕಡೆಗಳಲ್ಲಿ , 95 ದಾಸರು , 684 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನರಸಿಂಹನ್ಯನ ಮನೆಯ ಹರಿಕಥೆ ಸಂದರ್ಭದಲ್ಲಿಆನಂದಮಾನಂದವಾನಂದವಾುತು ಸಾನಂದವಾದ ನಾರಸಿಂಹಯ್ಯಮಂದಿರದಲ್ಲಿ ಪರಾಮಮಹೋತ್ಸವ ಪ್ರೇಮದಿಮಾಡಲುಸ್ವಾ'ುೀಲಕ್ಷ್ಮಣಸೀತ ಸಮೇತರಾಗಿಬರಲು 1ಭಾರತ ರಾಮಾಯಣ ಭಾಗವತಾದಿ ಗ್ರಂಥಪಾರಾಯಣಂಗಳು ಭೂಸುರಾಧಿಪರು ಮಾಡಲು 2ಭಕ್ತಾಜನರು ಹರಿಭಜನೆ ಮಾಡಲು ರಾಗರಕ್ತೀಭಕ್ತೀ ಯುಕ್ತಶಕ್ತೀ ಪರರಾಗಿನಿರಲು 3ಪರಿಪರಿ ತೆರದಿ ವಾದ್ಯಪಂಕ್ತೀ ಮಂಟಪದಲ್ಲಿತಿರುವಾರಾಧನೆ ತೀರ್ಥಪ್ರಸಾದ 'ನಿಯೋಗ 4ಪರಮಭಾಗವತರು ಪಂಡಿತ ನಿಪುಣರುತರುಣೀಮಣಿಯರೆಲ್ಲ ತತ್ಸೇವೆಮಾಡಲು 5ಸಿರಿಶುಕ್ಲವರ್ಷ ಚೈತ್ರಶುದ್ಧ ಬಿದಿಗೆ ಭರಣಿಗುರುತುಲಸೀರಾಮಜನನ ಚಾರಿತ್ರೆನುಡಿಯಲು 6ಶ್ರೀಲಕ್ಷ್ಮೀದೇವಮ್ಮ ಸುಖಪ್ರಸು'ಸಿದಳುತುಲಸೀರಾಮಾಖ್ಯನನ್ನ ತತ್ಕಾಲ ಲಗ್ನದಲ್ಲಿ 7ಶ್ರೀಶಾ ತುಲಸೀರಾಮಸ್ವಾ'ುೀ ಪದಾರ'ಂದಆಶ್ರೀತರಂಗಸ್ವಾ'ುೀದಾಸಾನು ಸೇ'ಸಲು 8
--------------
ಮಳಿಗೆ ರಂಗಸ್ವಾಮಿದಾಸರು
ನರಿಯುವುದಸದಳವು ಪ ಪರಿಪರಿವಿಧದೊಳು| ರೂಪವ ಧರಿಸುತ್ತ || ಧರಣಿ ಭಾರವನ್ನೆಲ್ಲ| ಪರಿಹಾರ ಮಾಡುವ ಅ.ಪ ಕೂರ್ಮರೂಪವ ತಳೆದೆ || ವರಹನು ನೀನಾದೆ | ನರಹರಿಯಾದೆ ನೀ|| ಮೂರಡಿ ಭೂಮಿಯ | ವಟುವಾಗಿ ಬೇಡಿದೆ 1 ಕಾಕುಸ್ಥ ರಾಮನಾದೆ || ಕಲ್ಕಿರೂಪದಿ ಬಂದು | ಧರೆಂiÀiನುದ್ಧರಿಸಿದೆ 2 ಜಗದಾದಿ ದೇವ ನೀನು | ಏನನ್ನುವೆ | ಜಗದೇಕನಾಯಕನು || ಜಗವನÀುದ್ಧರಿಸುವ | ಜಗನ್ನಿಯಾಮಕ ನೀನು || ಅಗಣಿತ ಮಹಿಮನು 3 ಪ್ರಣವ ಸ್ವರೂಪ ನೀನು || ಅಣುರೇಣು ತೃಣಕಾಷ್ಠ | ಭರಿತನಾಗಿಹ ನೀನು || ಜನನಮರಣವಿರ | ಹಿತನಾದ ದೇವನು 4
--------------
ವೆಂಕಟ್‍ರಾವ್
ನಲಿದೈತಾರೆಂಬೆ ಹೇ ಜಗದಂಬೆ ನಾಂ ಬೇಡಿಕೊಂಬೆ ಪ. ಒಲಿದೈತರೆ ನೀ ನಲವೇರುತ ನಾ ನಲಿದಾರಾಧಿಪೆ ಎನ್ನೊಲಿದಂಬೇ ಅ.ಪ. ಸಿಂಧುನಂದನೆ ಅರವಿಂದನಯನೆ ಇಂದುಸೋದರಿ ಸಿಂಧುರಗಮನೆ ಸುಗುಣಾಭರಣೆ ವಂದಿಪೆ ಶರದಿಂದುವದನೆ ಸುರ ವಂದಿತಚರಣೆ 1 ಅಂದಿಗೆ ಕಾಲುಂಗುರ ಘಲಿರೆನೆ ಇಂದಿರೆ ತವಪದದ್ವಂದ್ವವ ತೋರಿ ವಂದಿಸುವೆನ್ನೀಮಂದಿರ ಮಧ್ಯದಿ ಎಂದೆಂದಿಗು ನೆಲೆಸಿರು ನಂದಿನೀ ಜನನೀ 2 ಕ್ಷೀರಾಂಬುಧಿ ತನಯೆ ಸೌಭಾಗ್ಯದ ನಿಧಿಯೆ ಕ್ಷೀರಾಬ್ಧಿಶಯನನ ಜಾಯೆ ಸಾರಸನಿಲಯೆ ವಂದಿಪೆ ತಾಯೆ ಬಾರೆಂದು ಕೈಪಿಡಿದೆಮ್ಮನು ಕಾಯಿ 3 ಸರಸಿಜಾಸನೆ ಸ್ಮರಮುಖ ಜನನಿಯೆ ಸುರನರಪೂಜಿತೆ ನಾರದ ಗೇಯೆ ಸಾರಗುಣಭರಿತೆ ಸರಸಿಜಪಾಣಿಯೆ ಶ್ರೀರಮಣೀ ಪರಿಪಾಲಿಸು ಜನನಿ 4 ಸೆರಗೊಡ್ಡಿ ಬೇಡುವೆ ಶ್ರೀನಾರೀ ನಿನ್ನೆಡೆ ಸಾರೀ ಪರತರ ಸುಖ ಸಂಪದವನು ಕೋರೀ ಪೊರೆ ಮೈದೋರಿ 5 ಪರಿಪರಿ ವಿಧದಾ ಸಿರಿಸಂಪತ್ತಿಯೋಳ್ ಗುರುದೈವಂಗಳ ಸೇವಾವೃತ್ತಿಯೋಳಿರೆ ಕರುಣಿಸು ದೃಢತರ ಭಕ್ತಿಯನೆಮಗೀಗಳ್ ವರಶೇಷಗಿರೀಶನ ಮಡದಿಯೆ ಮುದದೋಳ್ 6
--------------
ನಂಜನಗೂಡು ತಿರುಮಲಾಂಬಾ
ನಾ ನೋಡಿ ಬಂದೆ ಕೇಳಮ್ಮ ಗೆಳತಿ ಪ ನಾನಿಲ್ಲ ನೀನಿಲ್ಲ ಏನಂದರೇನಿಲ್ಲ ಕಾಣುವ ಮಾತಲ್ಲ ಜಾಣೆ ಸುಳ್ಳಲ್ಲ ಅ.ಪ ಹಸುರಿಲ್ಲ ಕೆಂಪಿಲ್ಲ ಪಶುವಿಲ್ಲ ಪಕ್ಷಿಲ್ಲ ವಸುಧಿಲ್ಲ ಉದಧಿಲ್ಲ ವ್ಯಸನಿಲ್ಲ ಬಂಧವಿಲ್ಲ ಹಸಿವಿಲ್ಲ ತೃಷೆಯಿಲ್ಲ ದೆಸೆಯಿಲ್ಲ ದಿಕ್ಕಿಲ್ಲ ನಿಶೆಯಿಲ್ಲ ದಿವಯಿಲ್ಲ ಕುಸುಮಾಕ್ಷಿ ಸುಳ್ಳಲ್ಲ 1 ಜಲವಿಲ್ಲ ಗಗನಿಲ್ಲ ನೆಲವಿಲ್ಲ ಗಿರಿಯಿಲ್ಲ ಕುಲವಿಲ್ಲ ಚಲವಿಲ್ಲ ಮಲಿನಿಲ್ಲ ಶೀಲಿಲ್ಲ ಜಳಕಿಲ್ಲ ಊಟಿಲ್ಲ ಬೆಳಕಿಲ್ಲ ಕಾಳಿಲ್ಲ ತಳಿಯಿಲ್ಲ ತಮಯಿಲ್ಲ ಲಲನೆ ಸುಳ್ಳಲ್ಲ 2 ಕೃಪೆಯಿಲ್ಲ ಕಪಟಿಲ್ಲ ಜಪವಿಲ್ಲ ತಪವಿಲ್ಲ ಗುಪಿತಿಲ್ಲ ಬೈಲಿಲ್ಲ ನೆಪ್ಪಿಲ್ಲ ಮರೆವಿಲ್ಲ ವಿಪಿನಿಲ್ಲ ಸದನಿಲ್ಲ ರಿಪುವಿಲ್ಲ ಸ್ನೇಹವಿಲ್ಲ ಅಪ್ಪಯಿಲ್ಲ ಅವ್ವಯಿಲ್ಲ ನಿಪುಣೆ ಸುಳ್ಳಲ್ಲ 3 ರಾಗಿಲ್ಲ ರಚನಿಲ್ಲ ಯಾಗಿಲ್ಲ ಯಜ್ಞಿಲ್ಲ ತ್ಯಾಗಿಲ್ಲ ತ್ಯಜನಿಲ್ಲ ಭೋಗಿಲ್ಲ ಭಾಗ್ಗ್ಯಿಲ್ಲ ರೋಗಿಲ್ಲ ಶ್ರಮವಿಲ್ಲ ಬೈಗಿಲ್ಲ ಬೆಳಗಿಲ್ಲ ಯಾಗಿಲ್ಲ ಪಾಪವಿಲ್ಲ ಭಗಿನಿ ಸುಳ್ಳಲ್ಲ 4 ಹೋಮವಿಲ್ಲ ವಿಪ್ರಿಲ್ಲ ಧೂಮವಿಲ್ಲ ಧೂಳಿಲ್ಲ ಭೂಮಿಲ್ಲ ಜನನಿಲ್ಲ ಕಾಮಿಲ್ಲ ಮರಣಿಲ್ಲ ನೇಮಿಲ್ಲ ಕ್ರಿಯವಿಲ್ಲ ನಾಮಿಲ್ಲ ರೂಪಿಲ್ಲ ಸ್ವಾಮಿ ಶ್ರೀರಾಮ ಬಲ್ಲ ಭಾಮೆ ಸುಳ್ಳಲ್ಲ 5
--------------
ರಾಮದಾಸರು
ನಾಟಕ ರಂಗದಲಿ ನಟಶಿರೋಮಣಿಯೊಬ್ಬ ಪಟುತನದಿ ವಿಧವಿಧನ ನಟನೆಗಳ ತೋರುವನು ಪ ಅಘಟನಾಘಟನ ಶಕ್ತನ ಕಪಟನಾಟಕವು ಘಟಕರಲ್ಲದ ಜನಕೆ ಎಟುಕದಾನೋಟ ಅ.ಪ ಮುಖ್ಯಪಾತ್ರವು ನಮ್ಮ ರುಕ್ಮಿಣಿ ರಮಣನದು ಮುಖ್ಯತಾರೆಯು ಲೋಕ ಜನನಿ ಲಕುಮಿ ಇಕ್ಕಿದನು ಗೋರೂಪ ಚತುರಾನನನು ಮುದದಿ ಮುಖ್ಯಪ್ರಾಣನೆ ತುರಗ ಮುಕ್ಕಣ್ಣ ಕರುವಾದ 1 ಸುಖಸಾರನನು ಪಡೆದು ಧನ್ಯಳಾದ ಯಶೋದೆ ಬಕುಳೆಯೆ ತಾನಾದಳೀ ನಾಟಕದಲಿ ಅಕಳಂಕ ಮಹಿಮನನು ಅಗಲದಿದ್ದ ಸತಿಯು ಮುಖನೋಡಿ ಕೋಪದಲಿ ಕಲ್ಲುಗಳನೆಸೆದಳು 2 ಸರ್ವತ್ರ ವ್ಯಾಪ್ತನಿಗೆ ಇರಲು ಜಗವು ಸಿಗದೆ ಕಿರಿದ ತಾ ಹಲ್ಲುಗಳ ವರಹನಲ್ಲಿ ಹರನ ತಾತನು ತಾನು ಸ್ಮರನ ಬಾಣದಿ ನೊಂದ ಸುರಮೋಹಿನಿಯು ಇಂಥ ಕೊರವಂಜಿಯಾದಳು3 ಹುಟ್ಟಿಸುವ ಬೊಮ್ಮನನು ಪುಟ್ಟಶಿಶುವನೆ ಮಾಡಿ ಹೊಟ್ಟೆಗಿಲ್ಲದೆ ಬಹಳ ಬಾಡಿ ಇರಲು ಮೃಷ್ಟಾನ್ನವನು ಚಿನ್ನ ತಟ್ಟೆಯಲಿ ತಂದಿಡಲು ಶ್ರೇಷ್ಠವಿದು ಜನನಿಗೆನ್ನುತ ತಿಂದು ತೇಗಿದಳು 4 ಬಡುಕನೆದೆಗೊದೆಯಲವನಡಿಗಳಿಗೆ ಶರಣೆಂದ ಕಡು ಕೋಪಿ ಗೋವಳನ ಕೊಡಲಿಗೊಡ್ಡಿದ ಶಿರವ ಹಿಡಿ ಮಣ್ಣು ಪಿಂಡಗಳನಿತ್ತ ಚಂಡಾಲನಿಗೆ ಸಡಗರದಿ ಲಕುಮಿಯನೇ ಕರದಲಿತ್ತ ಪ್ರಸನ್ನ 5
--------------
ವಿದ್ಯಾಪ್ರಸನ್ನತೀರ್ಥರು
ನಾನು ಸಜ್ಜನನಾದೊಡೆಹೀನವಿಷಯಂಗಳಿಗೆ ಎರಗುವೆನೇನಯ್ಯ ಪ. ಚಿತ್ತವÀ ಪುರುಷೋತ್ತಮನಲ್ಲಿಡದೆಉತ್ತಮರಾದವರೊಡನಾಡದೆತತ್ವವಿಚಾರವೊಂದರಿಯದೆ ನಾನು-ನ್ಮತ್ತರಸಂಗವ ಮಾಡುವೆನೇನಯ್ಯ1 ನಿರುತವು ಪರನಿಂದೆಗಳ ಮಾಡುತಲಿಗುರುಹಿರಿಯರನು ವಿಚಾರಿಸದೆಗುರುವೆ ದೈವವೆಂದರಿಯದೆ ನಾನುಪರರ ಒಡವೆಯನು ಬಯಸುವೆನೇನಯ್ಯ 2 ಹೇಯಶರೀರವ ಪೋಷಿಸುವೆನೆಂದು-ಪಾಯವನು ಮಾಡಿ ನಾ ಬಳಲುತಿಹೆರಾಯರು ಮಾಡಿದ ಶರಣರ ಹೊರೆವಹಯವದನ ನಿನ್ನ ನಾ ಮರೆತಿಹೆನೇನಯ್ಯ 3
--------------
ವಾದಿರಾಜ
ನಾನೆಲ್ಲಿ ಜ್ಞಾನಿಯು ನಾನೆಲ್ಲಿ ಸುಜನನು ಹೀನ ವಿಷಯಗಳುಂಬ ಶ್ವಾನನಂತಿರುವೆ ಪ ಗಾತ್ರ ಬಳಲಿಸಿ ಮದನಸೂತ್ರ ಬೊಂಬೆಯು ಎನಿಸಿ ನೇತ್ರದಿಂದಪಾತ್ರದವರನು ನೋಡಿ ಸ್ತೋತ್ರಮಾಡುತ ಹಿಗ್ಗಿರಾತ್ರೆ ಹಗಲು ಕೆಟ್ಟ ವಾರ್ತೆಯಲ್ಲಿರುವೆ 1 ಧನದಾಸೆ ಘನವಾಗಿ ಅಣು ಮಹತ್ಕಾರ್ಯದೊಳುತಣಿಸಿ ದಣಿಯಲು ತೃಣವು ದೊರೆಯದಿರಲುಮನೆ ಮನೆಗೆ ಬಾಯ್ದೆರೆದು ಶುನಕನಂತೆ ದಿನಗಳೆವೆಮನುಜ ಪಶುವಿಗೆ ಇನ್ನು ಮುನಿಯೆಂಬಿರೆಂತೋ2 ನಾಲಗೆಯ ರುಚಿಯಿಂದ ಸಾಲದಾಯಿತು ಬಯಕೆಕಾಲ ಕಾಲಕೆ ನೆನಸಿ ಹಾಳಾದರೂಶೀಲಗಳ ಕಳಕೊಂಡು ಚಾಲುವರಿಯುತ ಪರರಆಲಯದ ಉಚ್ಚಿಷ್ಠ ಮೇಲಾದ ಸವಿಯ3 ಸ್ನಾನಧ್ಯಾನವನರಿಯೆ ಸಾನುರಾಗದಿ ಭಕ್ತಿಕೂನ(ಗುರುತು)ವಿಲ್ಲದೆ ಡಂಭ ಮೌನಿಯೆನಿಸಿನಾನಾ ವಿಷಯ ಮನದಿ ನಾ ನೆನೆಸುವೆ ನಿತ್ಯಏನಾದರೂ ಕಷ್ಟ ಕಾಣದಂತಿರುತಿಪ್ಪೆ 4 ಪತಿತರೊಳು ಎನ್ನಂಥ ಪತಿತರೊಬ್ಬರ ಕಾಣೆಗತಿಯು ನೀನಲ್ಲದೆ ಅನ್ಯರಿಲ್ಲಪತಿತ ಪಾವನನೆಂಬೊ ಬಿರುದುಂಟುಮಾಡುವಕ್ಷಿತಿಪತಿ ಶ್ರೀಕೃಷ್ಣರಾಯ ನೀನಹುದೋ5
--------------
ವ್ಯಾಸರಾಯರು
ನಾನೇ ಸಜ್ಜನನಾದಡೆ ಇಂಥ ಹೀನ ವಿಷಯಗಳಿಗೆರಗುವೆನೇನಯ್ಯ ಪ. ನಿರುತದಿ ಪರರ ನಿಂದಿಸುತಿಹೆನೆಗುರುಹಿರಿಯರು ಸಜ್ಜನರೆನ್ನದೆಹರಿ ಪರದೈವವೆಂದರಿತು ಭಜಿಸದೆಪರರ ವಡವೆಗಳ ಬಯಸುವೆನೇನಯ್ಯ 1 ಚಿತ್ತವ ಪುರುಷೋತ್ತಮನ ಮನದಲ್ಲಿಡದೆಉತ್ತಮರಾದವರೊಡನಾಡದೆತತ್ವ ವಿಚಾರವ ಮಾಡದೆ ನಾನು ನ್ಮತ್ತರ ಸಂಗವ ಮಾಡುವೆನೇನಯ್ಯ 2 ಹೇಯ ಶರೀರವ ಪೋಷಿಸಿಕೊಂಡುಪಾಯವ ಚಿಂತಿಸಿ ಬಳಲುವೆನುರಾಯರ ಶರಣರ ಸಲಹುವರಂಗವಿಠಲನ ಬಿಡುವೆನೇನಯ್ಯ 3
--------------
ಶ್ರೀಪಾದರಾಜರು
ನಾನ್ಯಾರೋ | ಶ್ರೀಹರಿ ಪೇಳೋ ನಾನ್ಯಾರೋ ಪ ನಾನ್ಯಾರೆಂಬುದ ಪೇಳಿ ನೀನ್ಯಾರೆಂಬುದ ತಿಳುಹಿ ಸಾನುರಾಗದಿ ಪೊರೆವ ಪ್ರಭು ನೀನೆ ಬೇರಿಲ್ಲಅ.ಪ. ಎಲ್ಲಿಂದ ಬಂದೆ ನಾನಿಲ್ಲಿಗೆ ಮುಂದೆಲ್ಲಿಗೆ ಪಯಣ ಕೊಂಡೊಯ್ಯುವುದೇನೆಂಬುದರಿಯೆ1 ಜನನಗೊಂಡು ಮಾನುಷ ದೇಹ ತಳೆದನಾ ನೆನಗೆ ಹಿತವಹ ಕಾರ್ಯವನೇನನೆಸಗಿದೆ 2 ದೇಹವೆ ಮನಸೆ ಬುದ್ಧಿಯೇ ನಾನೆಂಬುದನಾರೆಂದರಿಯೆ ನೇಹದಿಂದಿರುವಂತರಾತ್ಮ ತೊಲಗಲು ಮುಂದೀ ದೇಹವು ಕಸಕಿಂತ ಕಡೆಯೆನಿಪುದ ಬಲ್ಲೆ 3 ಕರ್ಮಿ ಜೀವನು ನೀ ಸಾಕ್ಷಿ ನಿರ್ಲಿಪ್ತನು 4 ಏನರಿಯದಲ್ಪನ ಕೈಬಿಡದಿರು ನೀನೆ ಗತಿ ರಘುರಾಮವಿಠಲ ತಂದೆ 5
--------------
ರಘುರಾಮವಿಠಲದಾಸರು
ನಾರಸಿಂಹನೆ ಧೀರ | ನಂಬಿದೆನೊ ಪೊರೆಯೊ ಶ್ರೀ ರಮಾಪತಿ ವೀರ | ಕರಿಗಿರಿ ವಿಹಾರ ಪ. ಸಾರಿದೆನೊ ನಿನ್ನ ಪದವ ಅನುದಿನ ಸೇರಿಸೆನ್ನನು ಭಕ್ತಕೂಟದಿ ಗಾರು ಮಾಡುವುದುಚಿತವೇ ಹರಿ ಭವ ಸಮುದ್ರದಿ ಅ.ಪ. ತಾಪ | ನಾನಾರಿಗುಸುರಲೊ ಒಡಲ ದುಃಖವ ಭೂಪ | ನೀನಲ್ಲದಿಲ್ಲವೊ ಭವ ಶ್ರೀಪ | ತೋರದಿರು ಕೋಪ ಘುಡು ಘುಡುಸಿ ನೀ ಎನ್ನ ಬೆದರಿಸೆ ತಡೆವೆನೇ ನಿನ್ನ ಕೋಪದಗ್ನಿಗೆ ಬಿಂಕ ಎನ್ನೊಳು ತಡೆಯೊ ಎನ್ನ ದುರುಳತನಗಳ ಕಡುಕರುಣಿ ನೀನಲ್ಲವೆ ಹರಿ ಒಡಲೊಳಗೆ ಪ್ರೇರಕನು ನೀನೆ ನಡಸಿದಂದದಿ ನಡೆವೆನಲ್ಲದೆ ಒಡೆಯ ಎನ್ನ ಸ್ವತಂತ್ರವೇನೊ? 1 ದುರುಳತನದಲಿ ದೈತ್ಯ | ಭೂವಲಯವೆಲ್ಲವ ಉರವಣಿಸಿ ದುಷ್ಕುತ್ಯ | ಎಸಗುತಿರೆ ದುಃಖದಿ ಸುರರು ಮೊರೆಯಿಡೆ ಸತ್ಯ | ದೃಢಮನದಿ ಭೃತ್ಯ ಕರಕರೆ ಪಿತ ಬಡಿಸುತಿರಲು ದೊರೆಯೆ ನೀ ಪೊರೆ ಎಂದು ಮೊರೆಯಿಡೆ ಸರ್ವವ್ಯಾಪಕನೆಂದು ತೋರಲು ತ್ವರಿತದಲಿ ಕಂಭದಲಿ ಬಂದು ಸರಸಿಜವು ಕಂಗೆಡುವೊ ಕಾಲದಿ ಧರಿಸಿ ತೊಡೆಯ ಮೇಲಸುರ ಕಾಯವ ಕರುಳ ಬಗೆದು ಮಾಲೆ ಧರಿಸಿ ಪೊರೆದೆಯೊ ಸ್ತುತಿ ಕೇಳಿ ಬಾಲನ 2 ಅಜಭವಾದಿಗಳೆಲ್ಲ | ಸ್ತುತಿಸಿದರೆ ಮಣಿಯದ ಭುಜಗಶಾಯಿ ಶ್ರೀ ನಲ್ಲ | ನಾ ನಿನ್ನ ಸ್ತುತಿಸಿ ಭಜಿಸಲಾಪೆನೆ ಕ್ಷುಲ್ಲ | ಮಾನವನ ಸೊಲ್ಲ ನಿಜಮನವ ನೀ ತಿಳಿದು ಸಲಹೊ ಕಮಲ ತೋರಿ ಕುಜನನಲ್ಲವೊ ಹಿರಿಯರೆನಗೆ ಪಥ ತೋರುತಿಹರೊ ರಜ ತಮವ ದೂರಟ್ಟಿ ಶುದ್ಧದಿ ಭಜಿಸುವಂದದಿ ಕೃಪೆಯ ಮಾಡಿ ಸುಜನರೆನ್ನನು ಪಾಲಿಸುತ್ತಿರೆ ನಿಜದಿ ಗೋಪಾಲಕೃಷ್ಣವಿಠ್ಠಲ3
--------------
ಅಂಬಾಬಾಯಿ
ನಾರಾಯಣ ನಿಮ್ಮ ನಾಮ ನಾಲಿಗೆಲಿರಲಿ ನಾರಾಯಣ ಘೋರಪಾತಕವೆಲ್ಲ ಹಾರಿ ಹೋಗುವುದಯ್ಯ ನಾರಾಯಣ 1 ಸಾರ್ಯವಾಗುವುದು ಶ್ರೀಹರಿಯ ಪುರ ಅವರಿಗೆ ನಾರಾಯಣ ಮಾರಜನಕನÀ ಮೊದಲೆ ಮರೆಯದಿರೊ ಮನವೆ ನಾರಾಯಣ 2 ಎಷ್ಟೆಷ್ಟು ದುರಿತಗಳು ನಷ್ಟವಾಗಿ ಹೋಗುವುವು ನಾರಾಯಣ ಎಷ್ಟು ನಾಮವ ಬಿಡದೆ ನೆನೆಕಂಡ್ಯ ಮನವೆ ನಾರಾಯಣ 3 ಅಂತ್ಯಜಸ್ತ್ರೀ ಕೂಡಿ ಭ್ರಾಂತನಾಗ್ಯಜಮಿಳನು ನಾರಾಯಣ ಕಂತುನಯ್ಯನ ಮರೆತು ಕಾಲವನು ಕಳೆಯಲು ನಾರಾಯಣ 4 ಅಂತ್ಯಕಾಲಕೆ ಹರಿಯ ಸ್ಮರಣೆ ಜಿಹ್ವೆಗೆ ಬರಲು ನಾರಾಯಣ ಲಕ್ಷ್ಮೀ- ಕಾಂತ ಕರುಣಿಸಿ ಅವಗೆ ಕರೆದÀು ಮುಕ್ತಿಯ ಕೊಟ್ಟ ನಾರಾಯಣ5 ಲಕ್ಕುಮೀರಮಣನೆ ಸಕಲಗುಣಪರಿಪೂರ್ಣ ನಾರಾಯಣ ಮುಖ್ಯ ನೀ ಎನ ಮನದಿ ಹೊಕ್ಕರ್ಹೊಗಳುವೆನಯ್ಯ ನಾರಾಯಣ 6 ಘೋರ ವೇದವ ಕದ್ದು ನೀರೊಳಗಡಗಲು ನಾರಾಯಣ ಭೇದಿಸವನಕೊಂದು ವೇದವನು ತಂದಿಟ್ಟ ನಾರಾಯಣ 7 ಶ್ರುತಿಯ ಸುತಗೆ ಕೊಟ್ಟಿ ಸ್ತುತ್ಯನಾಗಜನಿಂದ ನಾರಾಯಣ ಮಚ್ಛರೂಪವ ಧರಿಸಿದಚ್ಯುತಗೆ ಶರಣೆಂಬೆ ನಾರಾಯಣ 8 ದೇವದೈತ್ಯರು ಕೂಡಿ ಸಾಗರವ ಕಡೆಯಲು ನಾರಾಯಣ ವಾಸುಕಿ ಸುತ್ತೆ ನಾರಾಯಣ 9 ಆಗ ಸುರರಸುರರಿಬ್ಭಾಗವಾಗಿ ನಿಂತು ನಾರಾಯಣ ಭಾಳ ತುಚ್ಛದಿ ಬಲಬಿಟ್ಟು ಬಾಯಿಂದೆಳೆಯೆ ನಾರಾಯಣ 10 ವಾಸುಕಿ ಬಿಡಲು ಅಸುರಜನ ಮಡಿದ್ಹೋಗೆ ನಾರಾಯಣ ಕುಸಿದು ಹೋಗಲು ಗಿರಿ ಕೂರ್ಮರೂಪಾದಿ ನಾರಾಯಣ11 ಅಮೃತ ದೈತ್ಯರು ಕೊಂಡೋಡಲು ನಾರಾಯಣ ಸೃಷ್ಟಿ ಆದಿಕರ್ತ ಶ್ರೀ (ಸ್ತ್ರೀ?) ರೂಪವನು ಧರಿಸಿದ ನಾರಾಯಣ 12 ಮುಂಚೆ ಮೋಹವ ಮಾಡಿ ವಂಚಿಸಿ ದೈತ್ಯರನೆ ನಾರಾಯಣ ಹಂಚಿ ಸುರರಿಗೆ ಅಮೃತಪಾನ ಮಾಡಿಸಿದಯ್ಯ ನಾರಾಯಣ 13 ದಿತಿಯ ಸುತನು ಬಂದು ಪೃಥಿವಿಯನೆ ಸುತ್ತೊಯ್ಯೆ ನಾರಾಯಣ ಅತಿಬ್ಯಾಗದಿಂದ ರಸಾತಳ ಭೇದಿಸಿ ನಾರಾಯಣ 14 ಕ್ರೂರ ಹಿರಣ್ಯಾಕ್ಷನ್ನ ಕೋರೆದಾಡೆಲಿ ಸೀಳಿ ನಾರಾಯಣ ವರಾಹ ನಾರಾಯಣ 15 ಬ್ರಹ್ಮನಿಂದ್ವರ ಪಡೆದು ಹಮ್ಮಿಂದ ಕÉೂಬ್ಬ್ಯಸುರ ನಾರಾಯಣ ದುರ್ಮತಿಯಿಂದ್ಹರಿಯ ದೂಷಿಸುತಲಿದ್ದ ನಾರಾಯಣ16 ಮತಿಹೀನ ತನ ಸುತಗೆ ಮತಿಯ ಹಿಡಿಸುವೆನೆಂದ ನಾರಾಯಣ ಪಾರ್ವತೀಪತಿ ನಾಮವನು ಹಿತದಿಂದ ಬರೆಯೆಂದ ನಾರಾಯಣ 17 ಹರಿ ಹರಿ ಹರಿಯೆಂದು ಬರೆಯಾ(ಯಲಾ?) ಬಾಲಕನೋಡಿ ನಾರಾಯಣ ಉರಿಯ ಹೊಗಿಸುವೆನೆಂದ ಉಗ್ರಕೋಪಗಳಿಂದ ನಾರಾಯಣ18 ಮೆಟ್ಟಿ ಸಾಗೀಯಿಂದೆ ಬೆಟ್ಟದಿಂದಲಿ ಕೆಡೆವೆ ನಾರಾಯಣ ಕಟ್ಟಿ ಶರಧಿಯಲ್ಲÁ್ಹಕಿ ವಿಷ್ಣುಭಕ್ತನು ಬರಲು ನಾರಾಯಣ19 ಪ್ರಹ್ಲಾದ ನಿನ್ನೊಡೆಯ ಎಲ್ಹಾನೆ ತೋರೆನಗೆ ನಾರಾಯಣ ಮಲ್ಲಮರ್ದನ ಸ್ವಾಮಿ ಇಲ್ಲದೇ ಸ್ಥಳವುಂಟೆ ನಾರಾಯಣ20 ಪೃಥ್ವಿಪರ್ವತದಲ್ಲಿ ಸಪ್ತದ್ವೀಪಗಳಲ್ಲಿ ನಾರಾಯಣ ಸುತ್ತೇಳು ಸಾಗರದಿ ವ್ಯಾಪ್ತನಾಗ್ಹರಿಯಿರುವ ನಾರಾಯಣ21 ಅಣುರೇಣು ತೃಣದಲ್ಲಿ ಇರುವ ಆಕಾಶದಲಿ ನಾರಾಯಣ ರವಿ ಸೋಮ ತಾರಾಮಂಡಲದಲ್ಲಿ ತಾನಿರುವ ನಾರಾಯಣ 22 ಹದಿನಾಲ್ಕು ಲೋಕದಲಿ ಹರಿ ವಿಶ್ವವ್ಯಾಪಕನು ನಾರಾಯಣ ಸರ್ವದಿಕ್ಕುಗಳಲ್ಲಿ ಸನ್ನಿಹಿತನಾಗಿರುವ ನಾರಾಯಣ 23 ಆರಣಿಯೊಳಗಗ್ನಿಯಂದದಿ ಜನಕೆ ತೋರದಿರೆ ನಾರಾಯಣ ಜನನ ಮರಣಿಲ್ಲ ಜಗಜನ್ಮಾದಿಕಾರಣಗೆ ನಾರಾಯಣ 24 ನೀನರಿಯೆ ನಿನ್ನಲ್ಲೆ ಜೀವರಾಶಿಗಳಲ್ಲೆ ನಾರಾಯಣ ಈ ಜಗತ್ತಿಗೊಬ್ಬ ಇದ್ದಾನೆ ಎನ್ನೊಡೆಯ ನಾರಾಯಣ25 ಮಂದಭಾಗ್ಯನೆಯೆನ್ನ ಮಾತು ನಿಜವೆಂದು ತಿಳಿ ನಾರಾಯಣ ಈ ಸ್ತಂಭದಲ್ಲಿದ್ದಾನೆ ಮಂದರೋದ್ಧರ ಸ್ವಾಮಿ ನಾರಾಯಣ26 ಬಂದು ಭರದಿಂದಸುರ ಕಂಬ ಕಾಲಿಂದೊದೆಯೆ ನಾರಾಯಣ ತುಂಬಿತಾ ಘನಘೋಷದಿಂದ ಘುಡಿಘುಡಿಸುತಲಿ ನಾರಾಯಣ27 ಸಿಡಿಲು ಗರ್ಜಿಸಿದಂತೆ ಖಡಿ ಖಡಿ ಕೋಪದಲಿ ನಾರಾಯಣ ಕಿಡಿಗಳ್ಹಾರುತ ಕಂಬವೊಡೆದು ರೋಷದಿ ಬಂದ ನಾರಾಯಣ 28 ಖಳನ ಸೆಳೆದಪ್ಪಳಿಸಿ ದುರುಳನುದರವ ಬಗೆದÀು ನಾರಾಯಣ ಕರುಳ ವನಮಾಲೆ ತನ ಕೊರಳಲ್ಲಿ ಧರಿಸಿದ ನಾರಾಯಣ29 ತಲ್ಲಣಿಸಿ ಸುರರಾಗ ಮಲ್ಲಿಗೆಮಳೆ ಕರೆಯೆ ನಾರಾಯಣ ಪ್ರಹ್ಲಾದಸಹಿತ ಶ್ರೀದೇವಿ ಮುಂದಕೆ ಬರಲು ನಾರಾಯಣ30 ಕರದಿ ಕಂಗಳ ಮುಚ್ಚಿ ಸಿರಿಯ ತೋಳಿಂದಪ್ಪಿ ನಾರಾಯಣ ತೊಡೆಯನÉೀರಿಸಿ ತನ್ನ ತರುಣಿಗಭಯವನಿಟ್ಟ ನಾರಾಯಣ 31 ಸ್ತೋತ್ರವನು ಮಾಡಲಜ ಬಿಟ್ಟುಗ್ರಕÉೂೀಪವನು ನಾರಾಯಣ ಕೊಟ್ಟ ಪ್ರಹ್ಲಾದ(ಗ್ವ)ರಗಳ ಲಕ್ಷ್ಮೀನರಸಿಂಹ ನಾರಾಯಣ32 ಅಜ್ಞಾನದಿಂದ ತಾ ಯಜ್ಞ ಮಾಡುತಲಿರಲು ನಾರಾಯಣ33 ಅದಿತಿಯಲ್ಲವತರಿಸೆ ಅತಿಬ್ಯಾಗ ಕಶ್ಯಪರು ನಾರಾಯಣ ಸುತಗೆ ಉಪನಯನ ಭಾಳ್ಹಿತದಿಂದ ಮಾಡಲು ನಾರಾಯಣ 34 ಯಜÉೂೀಪವೀತ ಕೈಪು ಕೃಷ್ಣಾಂಜಿನ ಧರಿಸಿ ನಾರಾಯಣ ಶೀಘ್ರದಿಂದ ವಟು ವಾಮನ್ಯಜಶಾಲೆಗೆ ಬರಲು ನಾರಾಯಣ35 ಬಲಿಯ ಯಜ್ಞದಿ ಬಂದು ಭಾಳ ಪೂಜಿತನಾಗಿ ನಾರಾಯಣ ಛಲವಿಟ್ಟು ಮನದೊಳಗೆ ಬಲಿಯ ಯಾಚನೆ ಮಾಡೆ ನಾರಾಯಣ 36 ನಾ ಕೊಡುವೆ ಬೇಡು ಬೇಕಾದಷ್ಟು ಅರ್ಥವನು ನಾರಾಯಣ ಸಾಕಾಗದೇನಯ್ಯ ಸಲ್ಲ ಧನದಾಸ್ಯೆನಗೆ ನಾರಾಯಣ 37 ದೃಢಮನಸಿನಲಿ ಭೂಮಿ ಕೊಡು ಮೂರು ಪಾದವನು ನಾರಾಯಣ ಕೊಡುವೆನೆಂದಾಕ್ಷಣದಿ ಎರಡು ಚರಣವ ತೊಳೆದ ನಾರಾಯಣ38 ಒಂದು ಪಾದದಲಿ ಭೂಮಂಡಲವ ವ್ಯಾಪಿಸಿ ನಾರಾಯಣ ಪಾದ ನಾರಾಯಣ 39 ಕಂಡು ಕಮಲಜನು ಕಮಂಡಲೋದಕ(ದಿ) ತೊಳೆಯ ನಾರಾಯಣ ಉಂಗುಷ್ಠ ನಖದಿ ಉತ್ಪನ್ನಳಾದಳು ಗಂಗೆ ನಾರಾಯಣ40 ರಕ್ಕಸಾಂತಕನು ತ್ರಿವಿಕ್ರಮ ರೂಪಾಗಿ ನಾರಾಯಣ ಆಕ್ರಮಿಸಿಕೊಂಡ ಹದಿನಾಲ್ಕು ಲೋಕವ ಸ್ವಾಮಿ ನಾರಾಯಣ41 ಕೊಟ್ಟ ವಚನವ ತಪ್ಪಿ ಭ್ರಷ್ಟÀನಾಗದೆ ಭೂಮಿ ನಾರಾಯಣ ಕೊಟ್ಟರಿನ್ನೀಪಾದಯಿಟ್ಟು ಬಿಡುವೇನೆಂದ ನಾರಾಯಣ 42 ಕಟ್ಟಿ ಪಾಶದಲಿ ಕಂಗೆಟ್ಟಾಗ ಬಲಿರಾಯ ನಾರಾಯಣ ಕೆಟ್ಟೆನೆನ್ನದಲೆ ಮನಮುಟ್ಟಿ ಸ್ತೋತ್ರವ ಮಾಡೆ ನಾರಾಯಣ43 ದುಷ್ಟಜನ ಮರ್ದಕನು ಸೃಷ್ಟಿಸ್ಥಿತಿಲಯ ಕರ್ತೃ ನಾರಾಯಣ ಸೃಷ್ಟಿಗೊಡೆಯಗೆ ದಾನಕೊಟ್ಟರೆಂಬುವರುಂಟೆ ನಾರಾಯಣ 44 ಬಂಧನ ಬಿಡಿಸಿ ಬಲಿರಾಯಗ್ವರಗ¼
--------------
ಹರಪನಹಳ್ಳಿಭೀಮವ್ವ
ನಾರಾಯಣಯೆಂಬೊ ನಾಮವನು ನೆನೆದರೆ ಹಾರಿ ಹೋಹುದು ಜನ್ಮಜನ್ಮದ ಪಾಪಗಳು ಮುಕ್ತಿದೋರಿಸು ಮುರಾರಿ ಪ. ಸಕಲವೇದ ಪುರಾಣ ಶಾಸ್ತ್ರಗಳ ತಿಳಿದೋದಿ ಭಕ್ತಿಯಲಿ ತಾಯತಂದೆಯ ಚಿತ್ತವಿಡಿದವರ ಸುಕುಮಾರನೆನಿಸಿಕೊಂಡು ಪ್ರಕೃತಿಯಲಿ ಹೋಮಕ್ಕೋಸ್ಕರ ಸಮಿದೆ ತರಹೋಗಿ ದುಷ್ಕøತ್ಯದ ಫಲದಿಂದ ಅಂತ್ಯಜಳನು ಕಂಡು ಕಾ- ಅರಿತರಿಯದೆ 1 ನಿಲ್ಲು ನಿಲ್ಲೆಲೆ ಕಾಂತೆ ನಿನಗೊಲಿದೆ ನೀನಾರು ಸೊಲ್ಲಿಸೆನ್ನೊಡನೆ ಸತಿಯರ ಕುಲಕೆ ಕಟ್ಟಾಣಿ ಹುಲ್ಲೆನೋಟದ ಭಾವಕಿ ಸಲ್ಲಿಲಿತ ಗಾತ್ರೆ ಸೊಕ್ಕಾನೆ ಮೆಲ್ಲಡಿಯವಳೆ ಮಲ್ಲಿಗೆಗಂಧಿ ಮದನನ ಕೈಯ ಮಸೆದಲಗೆ ಸೆರಗ ಪಿಡಿದ 2 ವಿಪ್ರ ಕೇಳು ನಾವು ಕುಲಹೀನರೆಮ್ಮನೆಯ ಹೊಲಸಿನ ಮಾಂಸ ಗೋವಿನ ಚರ್ಮದ್ಹಾಸಿಕೆಯು ಹಿಂಡು ಬಲು ಘೋರ ಎನಿಸಿಪ್ಪುದು ಬಲೆಗೆ ಸಿಕ್ಕಿದ ಪಕ್ಷಿ ಬೇಂಟೆಯವಗಲ್ಲದೆ ಕುಲವ ಕೂಡುವದೆ ಕಾಮಿನಿ ಕೇಳು ನಿನ್ನೊಡನೆ ಛಲವೊಂದೆ ಎನಗೆ ಎಂದ3 ವ್ಯರ್ಥ ಎನ್ನೊಡನೆ ಮಾತ್ಯಾಕೆಲೊ ವಿಪ್ರ ಚಿತ್ತವೆನ್ನಲ್ಲಿ ಇದ್ದರೆ ಹೋಗಿ ನೀ ಎನ್ನ ನಿನಗೊಲಿವೆನೆಂ[ದಳು] ಅತ್ತ ಕಾಮಿನಿಯ ಒಡಗೂಡಿ ಆಕೆಯ ಪಿತನ ಹತ್ತಿರಕೆ ಹೋಗಿ ಕೇಳಿದರಾತನಿಂತೆಂದ ಇಂಥ ಮೊತ್ತಕೊಳಗಾಗದಿರೊ 4 ಆಗದಾಗದು ಎನ್ನ ಕುಲಬಂಧು ಬಳಗವÀನು ನೀಗಿ ನಿಮ್ಮೊಡನೆ ಕೂಡುವೆನೆಂಬ ಮತವೆನಗೆ ನಾಗಭೂಷಣನ ಪಣೆಗಣ್ಣಿಂದ [ಲುರಿದನ] ಬಾಣತಾಗಿತೆನ್ನೆದೆಯನೆಂದ ಕೂಗಿ ಹೇಳಿದೆ ನಿನ್ನ ಕುಲವಳಿಯದಿರೆಂದು ಹೋಗಿ ಕೂಡೊ ಹೆತ್ತ ತಾಯಿತಂದೆಗಳ ಅದು ಆಗದಿದ್ದರೆ ಆಚೆ ಮನೆಯೊಳಗೆ ನೀವಿಬ್ಬರಲ್ಲಿರಿ ಹೋಗ್ಯೆಂದನು 5 ಹಾಲಂತ ಕುಲವ ನೀರೊಳಗದ್ದಿಪೂರ್ವದ ಶೀಲವನಳಿದು ಸತಿಯೊಡಗೂಡಿ ತಾನು ಚಾಂ- ಡಾಲತಿಗೆ ಹತ್ತುಮಕ್ಕಳ ಪಡೆದು ತಾನವರ ಲೀಲೆಯನು ನೋಡಿ ಹಿಗ್ಗಿ ಆಲಂಬನದಲಿ ಅಜಾಮಿಳನು ಇರುತಿರಲಾಗ ಕಾಲ ಬಂದೊದಗಿ ಕರೆಯಿರೊ ಪಾತಕಿಯನೆಂದು ಯಮನಾಳುಗಳು ಇಳಿದರಾಗ 6 ಎಡೆಗೈಯ ಪಾಶಗಳು ಹಿಡಿದ ಚಮ್ಮಟಿಗಳು ಒಡನೊಡನೆ ಚವುರಿಗಳು ವಜ್ರದ ಮೋತಿಯ [ಕಾಗಡಿ] ಘುಡು‌ಘುಡಿಸುತಲಿ ನಿಂತರು ಕಡುಹಸುಳೆ ಕಂದನಿವನೆಷ್ಟು ಅಂಜುವನೆಂದು ಗಡಗಡನೆ ನಡುಗಿ ಕಂಗೆಟ್ಟು ಅಜಾಮಿಳ ತಾನು ಲಾಲಿಸಿದ ಸ್ವಾಮಿ 7 ಮರಣಕಾಲದಿ ಶ್ರೀಹರಿಯೆಂಬ ನಾಮವನು ಹರಿವುದಾಕ್ಷಣದಲ್ಲಿ ಕರುಣದಿಂದಜಮಿಳನ ಕರೆತನ್ನಿರಿಲ್ಲಿಗೆಂದ ಉರದೊಳೊಪ್ಪುವ ತುಳಸಿದಂಡೆ ಪೀತಾಂ- ಬರವು ಗದೆ ಶಂಖ ಚಕ್ರ ದ್ವಾದಶನಾಮವನು ಧರಿಸಿ ಕರವೆತ್ತಿ ಅಂಜ ಬ್ಯಾಡೆಲೊ ಎಂದು ಹರಿದಾಸರೈ ತಂದರು 8 ಪುಂಡರೀಕಾಕ್ಷನ ಭೃತ್ಯನ ಭಾಧಿಸುವ ಲಂಡರಿವರ್ಯಾರು ನೂಕಿ ನೂಕಿರೊ ಎಂದು ಯಮನ ದಂಡವನು ಮುರಿದು ಬಿಸಾಡಿ ನಿಮ್ಮಸುವ ಹಿಂಡುವೆವು ಎಂದರಾಗ ಕಂಡ ಹರಿದೂತರಿಗೆ ಯಮನಾಳುಗಳೆರಗಿ ಭೂ- ಮಂಡಲದೊಳಗೆ ಎಮ್ಮೊಡೆಯ ಯಮಧರ್ಮನ ಉದ್ದಂಡರಹುದೆಂದರಾಗ 9 ತಂದೆ ಕೇಳೆಮ್ಮ ಬಿನ್ನಪವ ಲಾಲಿಸಿ ನೀವು ಒಂದು ದಿನ ಹರಿಯೆಂಬ ಧ್ಯಾನವನರಿಯನು ನಾವು ಬಂದೆಳೆಯಲಾತ್ಮಜನ ನಾರಗಾ ಎನಲು ಕುಂದಿತೆ ಇವನ ಪಾಪ ಹಂದಿಕುರಿಗಳಿರ ನಿಮಗಿಷ್ಟು ಮಾತುಗಳ್ಯಾಕೆ ನಿಂದಿರದೆ ಹೋಗ್ಯೆಂದು ನೂಕಿ ಯಮನಾಳ್ಗಳನು ತಂದಪೆವು ದಿವ್ಯ ಪುಷ್ಪಕವನೆಂದೆನುತ ಬಂದರಾ ವೈಕುಂಠಕೆ 10 ಎದ್ದು ಅಜಾಮಿಳನು ಮೂರ್ಛೆಯ ತಿಳಿದು ಎಚ್ಚೆತ್ತು ಬಿದ್ದ ಕಾಯವನು ಭಾದಿಸಿದವರ್ಯಾರು ಉ- ಪದ್ರವನು ಬಿಡಿಸಿದ ದಿವ್ಯ ಸ್ವರೂಪ[ದ] ಸುಧಾತ್ಮರಾರು ಎಂದ ಮದ್ಯಪಾನವ ಮಾಳ್ಪ ಹೆಂಗಸಿನ ಒಡನಾಡಿ ಅದ್ದಿದೆ ನೂರೊಂದು ಕುಲವ ನರಕದೊಳೆಂದು ತಾನತಿ ಮರುಗುತ 11 ವಿಪ್ರ ಕುಲದಲ್ಲಿ ಪುಟ್ಟಿ ವೇದಶಾಸ್ತ್ರವನೋದಿ ಮುಪ್ಪಾದ ತಾಯಿ-ತಂದೆಯ ಬಿಟ್ಟು ಬುಧÀ ಜನರು ಮದನ ಬಾಧೆಗೆ ಸಿಲುಕಿ ದುಷ್ಟ ತಾಪವ ಪೊತ್ತೆ ಜನನಿಂದಕನಾದೆ ಅಪ್ರತಿಮ ಅನಂತಪಾತಕಿ ಭುವನದಲಿ ತಪ್ಪಲಿಲ್ಲವೆ ಪಣೆಯ ಬರದ ಬರಹಗಳು ಇನ್ನು ಭಾಪುರೆ ವಿಧಿ ಎಂದನು 12 ಇಷ್ಟು ದಿನ ಹರಿಯೆಂಬೊ ನಾಮವರಿಯೆನು ನಾನು ದುಷ್ಟಯವÀುದೂತರನು ಕಂಡು ಚಂಡಾಲತಿಗೆ ಪುಟ್ಟಿದ ಮಗನ ನಾರಗನೆಂದು ಕರೆದರೆ ಮುಟ್ಟಿದವೆ ನಿಮಗೆ ದೂರು ಇಷ್ಟು ಅವಗುಣಗಳನು ಎಣಿಸಲಿಲ್ಲವೆ ಸ್ವಾಮಿ ಎಷ್ಟು ಕರುಣಾಕರನೊ ಎಂದು ಸ್ನಾನವ ಮಾಡಿ ಬಿಟ್ಟು ತಾಪತ್ರಯವ ಭಯ ನಿವಾರಣ ಹರಿಯ ಗಟ್ಯಾಗಿ ಧ್ಯಾನಿಸಿದನು 13 ತನ್ನ ನಾಮವ ನೆನೆವ ಭಕ್ತರಾದವರೆಲ್ಲ ಧನ್ಯರಿವರಹುದೆಂದು ಜಗವರಿಯಬೇಕೆಂದು ಉನ್ನತವಾದ ಪುಷ್ಪಕವ ತಾ ಕಳುಹಿದ ಪನ್ನಗಾರಿವಾಹನ ಅನ್ಯಾಯ ಇವಗಿಲ್ಲ ಅವನಿಯೊಳಗುತ್ತಮನು ಎನ್ನಯ್ಯ ಏಳೆಂದು ಕೈಲಾಗವÀನು ಕೊಡಲು ಉನ್ನತವಾದ ಪುಷ್ಪಕವೇರಿ ಅಜಮಿಳನು ಹರಿಯ . ಸನ್ನಿಧಿಗೆ ನಡೆದ 14 ಜಲಜನಾಭನ ದಿವ್ಯನಾಮವನು ನೆನೆದರೆ ಕುಲಕೋಟಿ ದೋಷಗಳಿಲ್ಲ ಕುಂದುಗಿಂದುಗಳಿಲ್ಲ ಸಲುವರಲ್ಲೆಂದ ಯಮನು ನಲವಿಂದ ಹೆಳವನಕಟ್ಟೆ ಶ್ರೀ ವೆಂಕಟನ ನೆಲೆಯರಿತು ನೆನೆದವರ್ಗೆಮನ ಭಾದೆಗಳಿಲ್ಲ ಸಾಯುಜ್ಯ ಪದವೀವ ಬಲು ನಂಬಿ ಭಜಿಸಿ ಜನರು 15
--------------
ಹೆಳವನಕಟ್ಟೆ ಗಿರಿಯಮ್ಮ
ನಿಜವೆಂದು ತಿಳಿದು ಪೂಜಿಸೋ ಗುರುಚರಣ ಮಾಯಾ ಪ್ರಪಂಚದ ಸ್ಮರಣಾ ಪ ರಮಣೀಯರ್ಮೋಹವೆಂಬುದು ದೊಡ್ಡಶರಧಿ ಭ್ರಮಿಸಿ ನೀ ಮುಳುಗುತ್ತೇಳುವೆ ವ್ಯರ್ಥಭರದಿ ನಿಜ ಸತ್ತು ಹುಟ್ಟುವ ದೇಹ ಸಾಧ್ಯವ ಮಾಡಾ ಅ ನಿತ್ಯ ಪ್ರಪಂಚ ದೊಳ್ಕೆಡಬೇಡ ಮೂಢಾನಿಜ ನೀರ ಮೇಲಣ ಗುಳ್ಳೆಯಂತೆ ಶರೀರಾ ಬಾರಿಬಾರಿಗೆ ಸತ್ತು ಜನಿಪ ವಿಚಾರ ನಿಜ ಎಂದಿಗೂ ಮರಣತಪ್ಪದು ಕೇಳುಮರುಳೆ ಚಂದ್ರಶೇಖರನಾ ಧ್ಯಾನಿಸು ಹಗಲಿರುಳೆ ನಿಜ ಗುರುವಿಮಲಾನಂದ ಸ್ಮರಣೆಯ ಮಾಡೋ ಜನನ ಮರಣದ ಭಯವ ನೀಗಾಡೋ ನಿಜ
--------------
ಭಟಕಳ ಅಪ್ಪಯ್ಯ
ನಿಂತು ಫುಗಡಿ ಹಾಕ ಭ್ರಾಂತತನವ್ಯಾಕ ಸಂತ ಜನನಿಯರು ನೋಡಿ ತಲೆಯ ದೂಗಬೇಕ ಪ ಆಶೆಯಲಿ ತಾನು ಕುಳಿತು ಹಾಕುದೇನು | ಘಾಸಿಯಾಗುವ ಆರುಮಂದಿಯಾ ಕೂಡಿದರೇ ನೀನು 1 ಗರುವ ತನ ಬಿಟ್ಟು ತಿರುಗಣೆಯಾ ನುಟ್ಟು | ಆರಹು ಶರಗಿನಿಂದ ಬಿಗಿದು ಹಾಕ ಮಲಕ ಗಂಟು 2 ಲಜ್ಜೆ ವಳಿದು ನೋಡೇ ಹರಿಯಸ್ತುತಿ ಮಾಡಿ | ಘಜ್ಜಿಗೆ ಬಂಡಮ್ಯಾಲ ಯಚ್ಚರ ಮೈಯ್ಯ ಮರೆಯಿಬ್ಯಾಡೇ 3 ಎರಡು ಸವೆ ನಿನೆಹಾ ಜ್ಞಾನ ಸಖೀ ಕೈಯ್ಯಾ | ಜರಿಯದಂತೆ ಹಿಡಿದು ತಿರುಗು ನಡವಿಧ ಪರಿಯಾ 4 ಫುಗಡಿ ಇದೇ ಆಡೀ ಪ್ರೇಮಭಾವ ಕೂಡೀ | ಮುಗುತಿ ಕೊಡುವ ತಂದೆ ಮಹಿಪತಿ ಸ್ವಾಮಿ ದಯಮಾಡಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿಂತು ಲಾಲಿಸಲಿ ರಾಧಾ ಕಂತುಪಿತನ ಪದನಾದ ಪ ಬಲದ ಕಾಲೆಡದೊಳಿಟ್ಟು ಇಳೆಗೆ ಎಡದ ಪದ ಕೊಟ್ಟು ಒಲಿದು ಮುರಲಿ ಮುಖವಿಟ್ಟು ಉಲಿಯೆ ಮಧುರ ರವ ಪುಟ್ಟಿ ಬಲಬಾಲರೆಲ್ಲ ನಲಿಯುತಲಿಗೋ ಪೂರ್ವ ಮಳೆಗರೆವುತಲಿ ನಾನೆಂತು ಬಣ್ಣಿಸಲಿ ಹರಿಯ ಲೀಲೆಗಳ ಉಲಿಯುವ ಶ್ರುತಿನಾದ ಬಲದ ಸಿಂಹದ ನಾದ ಸಲೆ ವಟುವಿನ ನಾದ ಬಲವಾದ ಪರಶುವಿನತಿನಾದವು ಯಶೋಜಿತ ನಾದವು ಬಲು ವಾಜಿನಾದಗಳ್ ಕೊಳಲಲಿ ಕೇಳುತ ನಿಂದು 1 ಪಾಲು ಮೊಸರುಗಳನುಂಡು ಲೀಲೆಯಾಡುತಿರೆ ಕಂಡು ಬಾಲೆಯರತಿ ಖತಿಗೊಂಡು ಗೋಳಿಡುತಲೆ ಹಿಂಡಿಂಡು ಎಮ್ಮಾಲಯದೊಳು ಬೆಣ್ಣೆ ಮೆಲುತಲಿ ಸಣ್ಣ ಬಾಲೆರಿಟ್ಟ ಪಾಲ್ ಕುಡಿವುತಲಿ ಕೆಳಮೇಲಾಗಿ ಧದಿಯನು ಸುರಿವುತಲಿ ಜಲದೊಳು ಧುಮುಕಿದ ಕಲಕದ ಚಲವಿಡಿದ ಬಲುಬೇರ ಕೋರೆಯಿಂದಗಿದು ತಿಂದಾ ಒಲಿದು ಕಂಬವ ನೋಡಿದಾ ಬಲಿಗೆ ಬಾಯಿ ತೆರೆದಾ ಮೊಲೆ ಕೊಟ್ಟ ಜನನಿಯ ಶಿರಕಡಿದಾ ಕುಲಹೀನೆಂಜಲ ತಿಂದಾ ಖಳಪೂತನಿಯಳಿದಾ ತಿಳಿಗೆಟ್ಟು ಮೈಬಟ್ಟೆ ಕಳೆದೊಗೆದಾ ಬಲು ಮಿಂದೇರಿ ವಾಜಿ ಭಟರ ಬೆನ್ನಟ್ಟಿದಾ ನಿಂತು 2 ಸುರಿವುತಿರಲು ಮಳೆ ಭಾರಿ ಚರಿವಾವ್ಗಳು ಹೌಹಾರಿ ಮರೆಯ ಕಾಣದೆಲೆ ಹೋರಿ ಕರವುತಿರಲು ಮುರವೈರಿ ಕಿರಿಬೆರಳಲಿ ಕೊಡೆವಿಡಿವುತಲಿ ಸಣ್ಣ ಕರಗಳಾವುಗಳ್ ಸಲಹುತಲಿ ಮುದ ಗೋವುಗಳ ನೋಡುತಲಿ ನಾನೆಂತು ಬಣ್ಣಿಸಲಿ ಶಿರಿವರನಾನಂದ ಭರದಿ ವೇದವ ತಂದ ನೆರೆಶೈಲನೆಗಹಿದ ಧರಾಲಲನೀಯ ನಾಸದಿ ಪಿಡಿದ ಸುರನದಿ ದ್ವಿಜರಿಗೆ ದಾನವ ಮಾಡಿದಾ ಹರಿಗೆ ಯಜಪದ ನೀಡ್ದಾ ಗುರುಪುತ್ರರನೆ ಪಡಿದಾ ಹರಿಯೇರಿ ಮೆರೆವುದು ನಿಂತು 3
--------------
ನರಸಿಂಹವಿಠಲರು