ಒಟ್ಟು 7419 ಕಡೆಗಳಲ್ಲಿ , 132 ದಾಸರು , 3991 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರವಿದೂರನೆ ತವ ಮಹಿಮೆಯು ಘನ್ನ ಪ ಬಂಡಿಕಾಲನು ಪಿಡಿದೆಯಂತೆ | ಹತ್ತು ಬಂಡಿರಾಯಗೆ ಸುತ ನೀನಾದಿಯಂತೆ ಬಂಡಿ ಅಸುರನ ಕೊಂದಿಯಂತೆ | ಧುರದಿ ಬಂಡಿ ನಡಸಿ ನರನ ಸಲಹಿದೆಯಣತೆ 1 ತಂದೆ ತಂದೆಗೆ ತಂದೆಯಂತೆ | ಜಗದ ತಂದೆ ನಿನಗೆ ತಂದೆ ತಾಯಿಗಳಂತೆ ತಂದೆ ನೃಪಾಲನ ಸುತೆಗೀಶನಂತೆ 2 ಸಿಂಧೂರದ್ವಯ ವರದನಂತೆ | ಮಧ್ಯ ಸಿಂಧೂರವದನವು ನಿನಗಿಹುದಂತೆ ಸಿಂಧು ಮಂದಿರ ನಿನಗಂತೆ ಶಾಮ ಸುಂದರ ನಿನಗೆ ಭಕ್ತರ ಚಿಂತೆಯಂತೆ 3
--------------
ಶಾಮಸುಂದರ ವಿಠಲ
ಅರಸಕೇಳಲೈ ಸರಸಿಯೊಳಗೆ ತಾ ಸರಸವಾಡುತಾ ಕರಿವರನಿರೆÉ ಪರಮ ಭೀಕರ ಪ್ರಬಲ ನಕ್ರವು ಕರಿಯ ಕಾಲನು ಪಿಡಿದು ಸೆಳೆಯಿತು 1 ಚಕಿತನಾಗುತ ಚತುರ ದ್ವಿಪವರ ಮಕರಿ ವದನದಿಂ ಮುಕ್ತನಾಗಲು ಸಕಲ ಸಾಹಸಗೈದನಕ್ಕಟ ವಿಕಲವಾಯಿತಾ ಯತ್ನವೆಲ್ಲವು 2 ನಕ್ರ ಸೆಳೆತವು ಪ್ರಬಲವಾಗಲು ದಿಕ್ಕು ತೋರದೆ ಕೂಗಿಕೊಂಡನು ಮಿಕ್ಕ ಗಜಗಳು ಕೂಡಿ ಬಿಡಿಸಲು ಶಕ್ತಿಮೀರಿ ಸಾಹಸಗೈದುವು 3 ಆನೆಗಳು ಒಂದೆಡೆ ಎಳೆಯಲು ನೆಗಳು ಒಂದೆಡೆ ಎಳೆಯಲು ಏನನೆಂಬೆ ಹೋರಾಟವೀ ಪರಿ ಏನು ನಡೆದರೂ ವಿಫಲವಾಯಿತು 4 ಹಿಂಡು ಬಳಗಗಳೆಲ್ಲ ನೋಡುತ ದಂಡೆ ಮೇಲೆ ತಾವ್ ನಿಂತುಬಿಟ್ಟವು ಜೊಂಡು ಹುಲ್ಲು ತಾ ಪಿಡಿದು ತನ್ನಯ ಶುಂಡಾಲ ಗೆದ್ದನು 5 ನಕ್ರಬಾಧೆಯು ಬಿಡಿಸಲಾರಿಗೂ ಶಕ್ಯವಾಗದೆ ಹೋಯಿತಕ್ಕಟ ದಿಕ್ಕುಗೆಟ್ಟು ತಾ ದೈನ್ಯದಿಂದಲೇ ದುಃಖಪಡುತ ಭೋರಿಟ್ಟು ಕೂಗಿದ 6 ಉದಿಸಿತಾಗ ಸುಜ್ಞಾನವವನೊಳು ಸುದತಿ ಮಕ್ಕಳು ಸಲಹರೆಂಬುದು ಬದಲು ಬಯಸದ ಬಂಧು ಕರಿಗಿರಿ ಸದನನೆಂದು ತಾನಂಬಿ ನೆನೆದನು 7
--------------
ವರಾವಾಣಿರಾಮರಾಯದಾಸರು
ಅರಿ ನೀನೆ ವೇಲಾಪುರಿ ಶ್ರೀ ಚನ್ನರಾಯಾ ಪ ಪೊಳೆವ ನಂದನವನದಲಲರ್ದ ಮಾವಿನ ನೆಳಲ ಲಲರುವಾ ಸಿರಿತೋಳ ತಲೆಗಿಂಬನೊರಗೀ ಅಳಿಯ ಮೃದುಗಾನಕ್ಕೆ ತಲೆದೂಗುತಲೆ ನುಡಿದ ವಿಲಸಿತದ ಸರಸ ವಚನವ ಚೆನ್ನರಾಯಾ 1 ಬೆಳದಿಂಗಳೆರಕದಂದದ ಸಾರದ್ಹಂದರದಿ ಪೊಳೆವಿಂದುಕಾಂತದ ಜಗುಲಿಯೊಳೆನ್ನ ತಲೆಯ ಮಗ್ಗಲನೊರಗಿ ಸುಳಿವೆಲರಗಾಳಿಗಂಜಿಸುತ ಕಲೆಯರಿತು ಮೈಮರಸಿದುದ ಚನ್ನರಾಯಾ 2 ತನುಮಿಸುಕೆ ಬಹುವಿಧದಿ ಧ್ವನಿಗೈವ ಶಕುನಿ ಪೆಸ- ರಿನ ಮಂಚದಲಿ ಹಂಸತೂಲ ತಲ್ಪದಲಿ ಮನಸಿಜಾಗಮವರಿತು ಮನವ ಮೆಚ್ಚಿಸಿದೆ ಎ- ನ್ನಿನಿಯ ಶ್ರೀ ವೈಕುಂಠಪತಿ ಚೆನ್ನರಾಯಾ 3
--------------
ಬೇಲೂರು ವೈಕುಂಠದಾಸರು
ಅರಿವರಾರೆಲೋ ನಿನ್ನ ಅಗಮ್ಯ ಚರಿತ ಚರಣದಾಸರ ಪರಮ ಆನಂದಭರಿತ ಪ ದೇವರುಂಟೆಂಬ ಕೆಲವಾಧಾರಪುಟ್ಟಿಸಿದಿ ದೇವರಿಲ್ಲೆಂಬ ಹಲವು ಆಧಾರ ತೋರಿಸಿದಿ ಜೀವಬ್ರಹ್ವೈಕ್ಯೆಂಬುಪಾಯಗಳ ಸ್ಥಾಪಿಸಿದಿ ಆವರೀತಿಗು ಕಾವದೇವ ನಾನೆಂದಿ 1 ಜೀವವೆ ಮಾಯೆಯೆಂದು ಕಾಯವೆ ಕರ್ಮವೆಂದು ಭಾವಿಗಳ ಕೈಯಿಂದ ಬರೆಸಿದೆಯೋ ನಿಂದು ಜೀವಜೀವರಲಿ ಜಡ ಜೀವ ಬೇರೆನಿಸಿದಿ ಜೀವಜೀವರ ಜೀವ ಚೈತನ್ಯರೂಪ 2 ವೇದ ಸುಳ್ಳೆಂಬ್ಹಲವು ವಾದಿಗಳ ನಿರ್ಮಿಸಿದಿ ವೇದ ಅಹುದೆಂಬ ನಿಜವಾದಿಗಳ ಪುಟ್ಟಿಸಿದಿ ನಾದಬ್ರಹ್ಮವುಯೆಂಬ ಹಾದಿ ರಚಿಸಿದಿ ಸರ್ವಸಾಧನಕೆ ಒಲಿದು ಪ್ರಸನ್ನ ನೀನಾದಿ 3 ಬಗೆಬಗೆಯ ವಚನದಿಂ ಬಗೆಬಗೆಯ ನಿಗಮದಿಂ ಬಗೆಬಗೆಯ ರೂಪದಿಂ ನಿಗವಿಟ್ಟು ಸರ್ವರನು ಬಗೆಗೊಂಡು ಬೆಳಗುವೆಯೊ ಜಗಭರಿತನಾಗಿ 4 ಅವಸಾಧನವೊಲ್ಲೆ ಜಾವಜಾವಕೆ ನಿಮ್ಮ ದಿವ್ಯಸ್ಮರಣೆಯ ಎನ್ನ ಭಾವದೊಳು ನಿಲಿಸಿ ದೇವದೇವರ ದೇವ ದೇವ ಶ್ರೀರಾಮ ತವ ಸೇವಕನೆನಿಸೆನ್ನ ಕಾಯೊ ಕೈಪಿಡಿದು 5
--------------
ರಾಮದಾಸರು
ಅರುಣೋದಯಕೆ ಮುಂಚೆ ಬಲು ಕತ್ತಲಂತೆ ಪ ಸಿರಿ ಬರುವುದಕೆ ಮುಂಚೆ ಮುಖ ಸುತ್ತು ಜನಕೆ ಅ.ಪ ಹೊಟ್ಟಿ ಹಸಿದರೆ ಅನ್ನ ಬಹಳ ರುಚಿಯಂತೆ ಕೆಟ್ಟು ಬದುಕುವ ಮನುಜ ಬಲು ಘಟ್ಟಿಯಂತೆ ಸಿಟ್ಟು ಮಾಡುವ ಮನುಜ ಕೊನೆಗೆ ಕುರಿಯಂತೆ ಬಿಟ್ಟಿ ಬಯಸುವ ನರನು ಬಲು ಮೋಸವಂತೆ 1 ಸುಳ್ಳು ಹೇಳುವ ನರಗೆ ಪರದಾಟವಂತೆ ಜಳ್ಳುರಾಶಿಯ ನೋಡೆ ದೊಡ್ಡಗಿರಿಯಂತೆ ಕಳ್ಳ ಒಳಗಿರಲಲ್ಲಿ ಶಾಂತಿಯಿಲ್ಲಂತೆ ಕುಳ್ಳ ಹೋರಾಡಿದರೆ ಜಯವಿಲ್ಲವಂತೆ 2 ಭಾರಿ ಮಳೆ ಸುರಿಯಲಿರೆ ಬಹಳ ಬಿಸಿಲಂತೆ ಊರು ಸೇರುವ ಮುನ್ನ ಬಹಳ ದಣಿಯಂತೆ ಕೀರುತಿಯ ಪಡೆಯುವಗೆ ಬಹು ಶತ್ರುವಂತೆ ಮೂರು ಜ್ಞಾನಿಗಳಿರಲು ಭಾರಿ ಸಭೆಯಂತೆ 3 ಮುಳ್ಳಿರುವ ಗಿಡಗಳಲಿ ಬಹು ಪುಷ್ಪವಂತೆ ಹಳ್ಳದಲಿ ಸಿಗುವ ಜಲ ಬಹಳ ರುಚಿಯಂತೆ ಹಳ್ಳಿಗಾರನ ಸತ್ಯ ಬಹಳ ಒರಟಂತೆ ಎಳ್ಳು ಕಾಳುಗಳು ಶನಿಯ ಓಡಿಸುವುದಂತೆ 4 ಮುಟ್ಟಲಾಗದ ನಾಯಿ ದಾಸಾನುದಾಸ ಶ್ರೇಷ್ಠರೆಂದರಿತಿರುವರೆಲ್ಲ ಬಲು ಮೋಸ ಧಟ್ಟನೆ ಹೊಳೆಯುವಗೆ ಬಲು ಮನವಿಕಾಸ ಬಿಟ್ಟಿರುವ ಮನುಜನಿಗೆ ಜಗದಿ ಸುಖವಾಸ 5 ಮುದಿತನವು ಭೂಷಣವು ಸ್ಥಾನವಿರುವವರಿಗೆ ಕುದಿಯುವುದೆ ಭೂಷಣವು ಕ್ಷೀರಜಲದಲ್ಲಿ ಹೆದರುವುದೆ ಭೂಷಣವು ದುಷ್ಟಸಂಗದಲಿ ಗದಗದವೆ ಭೂಷಣವು ಭಕ್ತಿರಸದಲ್ಲಿ 6 ತನ್ನ ತಾ ಶೋಧಿಸಲು ಬಲು ದುಃಖವಂತೆ ಅನ್ಯರನು ಶೋಧಿಸಲು ಸಂತೋಷವಂತೆ ಕನ್ನಡಿಯ ನೋಡದಿರೆ ಬಲು ಚೆಲುವನಂತೆ ಕನ್ನಡಿಯ ನೋಡಿದರೆ ತಾನಳುವನಂತೆ 7 ನಗರ ಸುಂದರಲ್ಲಂತೆ ಬಚ್ಚಿಟ್ಟ ಧನವು ತಾ ಕದ್ದವನಿಗಂತೆ ಸ್ವಚ್ಛ ಬಡತನದವಗೆ ಬಲು ಭಕುತಿಯಂತೆ ಬಿಚ್ಚೊಲೆ ಗಿರಿಜೆಗತಿ ಪ್ರಿಯವಸ್ತುವಂತೆ 8 ಗುಂಡು ಬ್ರಾಹ್ಮಣ ಬರಲು ಅಪಶಕುನವಂತೆ ಹೆಂಡದಾ ಪೀಪಾಯಿ ಬಲು ಶಕುನವಂತೆ ಮಂಡೆ ಬೋಳಿರುವವಳು ಬರಬಾರದಂತೆ ತೊಂಡು ಸೂಳೆಯು ಬರಲು ಬಹಳ ಶಕುನವಂತೆ 9 ಖ್ಯಾತಿ ಬಾರದು ನರಗೆ ಬದುಕಿರುವ ತನಕ ಗೋತ ಹೊಡೆದವನು ಬಲು ಗುಣಶಾಲಿಯಂತೆ ನೀತಿ ಹೇಳುವ ಸ್ಥಳದಲೊಬ್ಬರಿಲ್ಲಂತೆ ಕೋತಿ ಕುಣಿಯುತಿರಲು ನೂರು ಜನರಂತೆ 10 ಬಹು ಧನಿಕ ಬಲು ಬಲಗೆ ಮಕ್ಕಳಿಲ್ಲಂತೆ ದಹಿಸುತಿಹ ದಾರಿದ್ರಗೆ ವರ್ಷಕೊಂದಂತೆ ಅಮೃತ ಸಮವಂತೆ ಸಿಹಿಯಾದ ಕ್ಷೀರ ಮಕ್ಕಳಿಗೆ ಬೇಡಂತೆ 11 ಸಾಲಿಗ್ರಾಮ ತೊಳೆಯಲತಿ ಬೇಸರಂತೆ ಸಾಲು ಎಮ್ಮೆಯ ತೊಳೆಯಲಿ ಉತ್ಸಾಹವಂತೆ ಶೀಲವಾಡುವ ನುಡಿಗೆ ಸಂದೇಹವಂತೆ ಗಾಳಿ ಸುದ್ದಿಗಳೆಲ್ಲ ಬಲು ಸತ್ಯವಂತೆ 12 ಒಳಿತವನು ಜಗದಲ್ಲಿ ತಲೆ ಎತ್ತನಂತೆ ಕಲಿಪುರುಷನಂಥವನು ಬಲು ಮೇಲೆಯಂತೆ ಹುಲಿ ಚಿರತೆ ಕರಡಿಗಳ ಬಲಿಯ ಕೊಡರಂತೆ ಗೆಳತಿ ಮಾರಿಗೆ ಕುರಿಯ ಬಲಿಯೆ ಬೇಕಂತೆ 13 ಅತಿ ಚೆಲುವೆ ಸತಿಯಲ್ಲಿ ಹಿತವಿಲ್ಲವಂತೆ ಗತಿಗೆಟ್ಟ ನಾರಿಯಲಿ ಅತಿ ಮೋಹವಂತೆ ಇತರ ಜನರೇಳಿಗೆಗೆ ಹೊಟ್ಟಿಯುರಿಯಂತೆ ಪ್ರತಿಕ್ಷಣವು ತನಗಾಗಿ ಹಂಬಲಕೆಯಂತೆ 14 ಭೂಮಿ ಎಲ್ಲವು ಇನ್ನು ಉಳುವಾತಗಂತೆ ಭೂಮಿಯೊಡೆಯಗೆ ದೊಡ್ಡನಾಮ ಬಿತ್ತಂತೆ ರಾಮರಾಜ್ಯದಿ ಕಾರು ಓಡಿಸುವವಗಂತೆ ಆ ಮದುವೆ ಕನ್ಯೆಯು ಪುರೋಹಿತಗಂತೆ 15 ಬಕಳಿಸುವ ನಾಯಕರೆ ಸರಕಾರವಂತೆ ಪ್ರಕೃತಿ ನಡೆನುಡಿ ನೀತಿಗೆ ಧಿಕ್ಕಾರವಂತೆ ಸುಖದ ಅನುಭವ ಜನಕೆ ಕುದುರೆ ಕೊಂಬಂತೆ ಮುಖವಿಲ್ಲ ಕಣ್ಣಿಲ್ಲ ಸುಖರಾಜ್ಯವಂತೆ 16 ಚಂದ್ರಲೋಕಕೆ ಪಯಣ ಕಾದಿರುವುದಂತೆ ಮುಂದಲ್ಲಿ ನೆಲಕೆ ಬಲು ಕಟ್ಟು ನಿಟ್ಟಂತೆ ಮುಂದರಿದ ಜನಕಲ್ಲಿ ಸ್ಥಾನವಿಹುದಂತೆ ಹಿಂದುಳಿದ ಗುಂಪಿಗವಕಾಶವಿಲ್ಲಂತೆ 17 ಪುಷ್ಪಾಕ್ಷತೆಯ ಪೂಜೆ ಗೋಮಾತೆಗಂತೆ ಶುಷ್ಕ ತೃಣವನಕೆಲ್ಲ ಮಳೆಗಳ ಕಂತೆ ನಿಷ್ಫಲದ ಗಿಡಬಳ್ಳಿ ತೋಟದಲ್ಲಂತೆ ಪುಷ್ಕಳದ ಫಲ ವೃಕ್ಷಗಳು ಸೌದೆಗಂತೆ 18 ಬರಿಯ ಪಾತ್ರೆಗಳಲಿ ಬಹಳ ಸದ್ದಂತೆ ಅರಿಯುವಜ್ಞಾನಿಗಳು ತಲೆಹರಟೆಯಂತೆ ಅರಿತವನು ನುರಿತನಾದರು ಬೇಡವಂತೆ ಬದಿಯ ಬಹು ದಡ್ಡನಿಗೆ ಮಾರ್ಯಾದೆಯಂತೆ19 ರೈಲು ಉರುಳಿಸೆ ರಾಜ್ಯಕಧಿಕಾರಿಯಂತೆ ಥೈಲಿಯಿದ್ದರೆ ಖೂನಿ ಮಾಡಬಹುದಂತೆ ಶೈಲವೇರುವ ನರನು ಮೇಧಾವಿಯಂತೆ 20 ನರಬಲಿಯ ಕೊಡುವವರು ಹಿರಿಯ ಜನರಂತೆ ಹಿರಿಯ ಮಾರ್ಗದ ಜನರು ಧರೆ ಭಾರವಂತೆ ಗುರುಗಳಿಗೆ ತಿರುಮಂತ್ರ ಹೇಳಬೇಕಂತೆ ಸುರಿಸುವರು ಧನಧಾನ್ಯ ಸುರಿಮಳೆಗಳಂತೆ21 ಮಂತ್ರವಾದಿಯು ನೋಡಿ ಗ್ರಹಭಯವಿದೆಂದ ಯಂತ್ರದಲಿ ನೋಡಿದವ ಹೃದಯರೋಗೆಂದ ಚಿಂತಿಸುತ ಪಂಡಿತನು ಮೋಹಿನಿಯಿದೆಂದ ಅಂತ್ಯದಲಿ ರೋಗಿ ತನಗೊಂದಿಲ್ಲವೆಂದ 22 ಶಿಂಗಪ್ಪ ಕದ್ದು ತಾ ಜೈಲು ಸೇರಿದನು ಕಾಂಗ್ರಪ್ಪ ಜೈಲಿನಿಂದ ಬಂದು ಕುಳತಿಹನು ಹೇಂಗ್ರಪ್ಪ ಬದುಕುವುದು ಎಂದು ಫಲವೇನು ನುಂಗ್ರಪ್ಪ ಸುಖ ದು:ಖಗಳನು ಸಹಿಸುತಲಿ 23 ವೇದಾಂತಿಯಾಗೆನಲು ಹೊಟ್ಟೆಗಿಲ್ಲಂತೆ ಕಾದಾಡಿ ಬದುಕಲನುಭವವಿಲ್ಲವಂತೆ ಓದು ಬದುಕೆಂದರವಕಾಶವಿಲ್ಲಂತೆ ಆದುದಾಯಿತು ಹರಿಗೆ ಶರಣು ಹೊಡಿ ತಮ್ಮ25 ಯಮನು ತಲ್ಲಣಿಸುವನು ಸ್ಥಳವಿಲ್ಲವಂತೆ ಸುಮನಸರು ಆಳುತಿಹರು ಜನವಿಲ್ಲವಂತೆ ಕಮಲೆರಮಣಗೆ ಬಂತು ಪೀಕ್ಲಾಟವಂತೆ ಎಮಗೆಂಥ ಕಷ್ಟವು ಪ್ರಸನ್ನ ಹರಿಯಿರಲು26
--------------
ವಿದ್ಯಾಪ್ರಸನ್ನತೀರ್ಥರು
ಅರ್ಚನೆ ಬಗೆ ಕೇಳಿ ಲೋಕ ಪ ಕಣ್ಣು ಮುಚ್ಚಿ ಕುಳಿತರೆ ಕೊಡ ಹರಿ ಮುಕ್ತಿಲೋಕಾ ಅ.ಪ ಜಡವ ಪೂಜಿಸಿದರಲ್ಲೇನೊ ತಾನು | ಜಡ ತುಲ್ಯ | ನಾಗಿದ್ದಕೆ ಸಮವೇನು || ಕೆಡದಿರು ಇದರೊಳಗೆ ನೀನು ತಿಳಿ | ಒಡನೆ ಕರ್ಮಗಳೆಲ್ಲೇನುಂಟು ಕಾಣೋ 1 ಏಕಾಂತದಲಿ ನಿನ್ನ ಮನಸು ಅ | ನೇಕವಾಗುವುದು ನಿರಂತರ ಗುಣಿಸು || ನೀ ಕೇಳು ಯೋಚಿಸಿ ಗಣಿಸು | ಸರ್ವ ಆಕಾರದಲ್ಲಿ ಶ್ರೀ ಹರಿಯನ್ನೆ ನೆನಸು 2 ತ್ರಿವಿಧ ಜೀವರು ಮಾಡುವಂಥ ನಡತಿ | ಹವಣವ ನೋಡಿದು ಬಿಡು ನಿನ್ನ ಪಂಥ || ಕವಿಗಳೊಡನೆ ಸುಪಂಥದಿಂದ | ಪವಮಾನಮತ ಪೊಂದಿ ಭಜಿಪುದು ಇಂಥ 3 ದ್ಯುಣುಕ ಪಿಡಿದು ಬಹುಕಾಲತನಕ | ನಿತ್ಯ ಸುಶೀಲ || ಗುಣವಂತನಾಗೊ ನೀ ಬಹುಳ ಸುಖ- | ವನಧಿ ರಂಗನ ವ್ಯಾಪಾರವೆನ್ನೊ ಬಾಲ 4 ಆವಾಗ ಮರೆಯದಿರು ಹರಿಯ ಕಂಡ | ಠಾವಿನಲಿ ಯೋಚಿಸು ಅರಗಳಿಗೆ ಬಯಸದಿರು ಸಿರಿಯ || ದೇವ ವಿಜಯವಿಠ್ಠಲ ದೊರೆಯ ನಿನ್ನ ಭಾವದಲಿ ತಿಳಿಯೊ ಆತನ ಚರಿಯಾ 5
--------------
ವಿಜಯದಾಸ
ಅರ್ತರಿಯದ್ಹಾಂಗೆ ಇರಬೇಕು ಮತ್ರ್ಯದೊಳಗೆ ಧ್ರುವ ಬಡಿವಾರ ಸಲ್ಲದು ತಾ ಅಹಂಕಾರ ಬಲುಸೂಕ್ಷ್ಮ ಗುರುಪಾರಾವಾರ ತಿಳಿಯಲು ವಿಚಾರ 1 ತರ್ಕತೆ ದೋರಲು ಖೂನ ಅತ್ರ್ಯುಳ್ಳವರ ನಿಧಾನ ಸರ್ಕನೆ ತಿಳಿವದು ಖೂನ ತಾರ್ಕಣ್ಯದ ಧನ 2 ಹಲವು ಮಾತಾಡಿದಂತೆ ಬಲುವಾ ಭಾವದೋರಿತು ನೆಲೆಯು ಗೊಳಬೇಕು ತಿಳುವಂತೆ ಎಲಿಮರಿಕಾಯಂತೆ 3 ಬಲ್ಲತನಕೆ ದೂರ ಸುಲಭ ಸುಜ್ಞಾನ ಸಾರಾ ಅಲ್ಲಹುದೇನು ತಾ ವಿಚಾರ ಬಲು ತುಂಬ್ಯಾದ ಸ್ಥಿರ 4 ಬೆರ್ತು ಮಹಿಪತಿ ನಿಜಹೊಂದು ಅರ್ಥಿ ನಿನಗೊಂದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅರ್ಥಿಯಾಗಿದೆ ಬನ್ನಿ ಅರ್ತು ನೋಡುವ ಗುರುಮೂರ್ತಿಯಿಂದ ನಿರ್ತವಾಗಿ ಪೂರ್ಣಬೆರ್ತು ಕೂಡುವಾ ಬನ್ನಿ ಗುರ್ತದಿಂದ ಧ್ರುವ ಸೂರ್ಯನಿಲ್ಲದ ಸೂಪ್ರಕಾಶ ತುಂಬೇದ ಹೇಳಲೇನ ತೂರ್ಯಾವಸ್ಥೆಯೊಳು ಬೆರೆದು ಕೂಡಿದ ಜ್ಞಾನಿಬಲ್ಲ ಖೂನ ಬರಿಯ ಮಾತನಾಡಿ ಹೊರಿಯ ಹೇಳುವದಲ್ಲ ಅರುವ್ಹೆಸ್ಥಾನ ಪರಿಯಾಯದಿಂದ ಪರಿಣಿಮಿಸಿ ನೋಡಿ ಪರಮ ಪ್ರಾಣ 1 ಚಂದ್ರನಿಲ್ಲದೆ ಬೆಳದಿಂಗಲು ಬಿದ್ದದ ಬಲು ಬಹಳ ಇಂದ್ರಾದಿಕರೆಲ್ಲ ಹರುಷದಿ ನೋಡುವರು ಸರ್ವಕಾಲ ಸುಂದ್ರವಾದ ಸುವಸ್ತುವಳಗೊಂದದೆ ಅಚಲ ಸಾಂದ್ರವಾದ ಸುಖತುಂಬಿ ತುಳುಕತದೆ ಥಳ ಥಳ 2 ಮನದ ಕೊನೆಯಲಿದ್ದ ಘನಸುಖ ನೋಡಿರೋ ನೆನೆದು ಬ್ಯಾಗ ಸ್ವಾನುಭವದಲನುಭವಿಸುವದು ಬ್ರಹ್ಮಭೋಗ ನಾ ನೀನೆಂಬುವ ಮಾತು ಏನು ತಾಳುವದಲ್ಲ ರಾಜಯೋಗ ದೀನ ಮಹಿಪತಿಗೆ ತಾನೆತಾನಾದ ಸದ್ಗುರುವೀಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅಲ್ಲೆ ನೋಡಿದರೀಹ್ಯ ಇಲ್ಲೆ ನೋಡಿದರೀಹ್ಯ ಎಲ್ಲಾ ಕಡೆಯಲ್ಲೇಕೋಮಯವೋ 1 ಸುಲ್ಲಭವಾಗಿ ನಮ್ಮ ಫುಲ್ಲಲೋಚನ ಕೃಷ್ಣ ಬಲ್ಲ ಮಹಿಮರಿಗೆ ಭಾಸುವನು 2 ಭೇದಿಸಿ ನೋಡಿರಯ್ಯ ಸಾಧು ಜನರೆಲ್ಲ ಮೇದಿನಿಯೊಳು ಘನತುಂಬಿಹುದು 3 ಕಣ್ಣಾರೆ ಕಂಡೆವಯ್ಯ ಪುಣ್ಯಚರಣಮಹಿಮೆ ಸಣ್ಣ ದೊಡ್ಡದರೊಳು ಸಾಕ್ಷಾತವೊ 4 ನಂಬಿನಡಿಯಲಿಕೆ ಅಂಜುಜಾಕ್ಷನ ಪಾದ ಗುಂಭಗುರುತವಾಗಿದೋರುವದು 5 ಗುರುಕೃಪೆಯಿಂದ ನೋಡಿ ಹರುಷವಾಯಿತು ಜೀವ ಬೆರತುಕೂಡಿತು ಸಮರಸವೊ 6 ಬೆರೆದು ಕೊಡುವದು ಹರಿಯ ಕಟಾಕ್ಷವಿದು ಮರುಳ ಮಂಕಗಳಿದು ಅರಿಯಾವೊ 7 ವದಗಿ ಬಂದತಿದರಿಟ್ಟು ಸದಮಲಬ್ರಹ್ಮಸುಖಾ ಮೊದಲಿನ ಪುಣ್ಯ ಪೂರ್ವಾರ್ಜಿತವೊ 8 ಧನ್ಯವಾಯಿತು ಮೂಢ ಮಹಿಪತಿ ಪ್ರಾಣಜೀವ ಮನವು ಆಯಿತು ಉನ್ಮನವೊ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅಲ್ಲೇ ನಿಲ್ಲೇನು | ಯೋಗಿಗೆ | ಅಲ್ಲೇ ನಿಲ್ಲೇನು ಪ ಎಲ್ಲಿ ನೋಡಿದರಲ್ಲಿ ಘುಲ್ಲನಾಭನೇ ಇಹ | ಅಲ್ಲೇ ನೀಲ್ಲೇನು | ನಿಲ್ಲದ ಮನಸಿನ ಕಾಲಾಟ ಒದಗಿತು | ಅಲ್ಲೇ ನಿಲ್ಲೇನು 1 ನೀರೊಳಗಾನಂದಲ್ಯಾಡುವ ಮೀನಕ | ಅಲ್ಲೇ ನಿಲ್ಲೇನು | ಕಾನನ ತಿರುಗವ ಎರಳೆಗೆ | ಅಲ್ಲೇ ನಿಲ್ಲೇನು 2 ತಳಿತಿಹ ಬನದೊಳು ತಿರುಗುವ ಪಕ್ಷಿಗೆ | ಅಲ್ಲೇ ನಿಲ್ಲೇನು | ನೆನೆನುಡಿ ಸಾರಿದ ಮಹಿಪತಿ ನಂದನ | ಅಲ್ಲೇ ನಿಲ್ಲೇನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅವತಾರ ಸಿರಿವರ ಘನ ಕರುಣಾಕರ ಪೊರೆಯೈ ಪ. ನಿಗಮಚೋರನನ್ನು ಕೊಂದು ನಗವಪೊತ್ತನೆ ವಿಗಡದೈತ್ಯನನ್ನ ಸೀಳಿ ಜಗವನಾಂತನೇ 1 ಘುಡುಘುಡಿಸಿ ಕಂಬವನು ಒಡೆದುಬಂದನೆ ಪಿಡಿದು ಖಳನ ಕರುಳಬಗೆದು ಕೊರಳೊಳಾಂತನೆ2 ಇಂದ್ರಗನುಜನಾಗಿ ದಾನವೇಂದ್ರ ಗೊಲಿದು ನೀಂ ನಿಂದು ಬಾಗಿಲಕಾವ ಗೊಲ್ಲನಂದಮೇನಿದೈ 3 ಹಡೆದತಾಯ ಶಿರವಪಿಡಿದು ಕಡೆದ ಭಾರ್ಗವ ಮಡದಿಚೋರನನ್ನು ಕೊಂದ ಒಡೆಯ ರಾಘವ 4 ಮಾವ ಕಂಸನ ಕೊಂದ ವಸುದೇವನಂದನ ಮಾಧವ 5 ಮತ್ತೆ ತ್ರಿಪುರ ಸತಿಯರ ಚಿತ್ತಕಲಕಿದ ಉತ್ತಮಾಶ್ವವನ್ನೆ ಹತ್ತಿ ಕಲ್ಕಿಯೆನಿಸಿದ 6 ಉರಗಶಯನ ಗರುಡಗಮನ ಪರಮಪಾವನ ವರದ ಶೇಷಶಿಖರಧಾಮ ಶ್ರೀನಿಕೇತನ 7
--------------
ನಂಜನಗೂಡು ತಿರುಮಲಾಂಬಾ
ಅಶ್ವಧಾಟೀ ಕೃಷ್ಣನೆ ಎಮ್ಮನು ಪ ಕಾಯ ನಂಬಿದೆ ನಿನ್ನನುಅ.ಪ ಸಾರ ಮಾರ್ಗದ ದಾರಿ ಕಾಣದೆ ಸಾರಿ ಬೇಡುವೆ ನಿನ್ನನು ನೀರಜಾಕ್ಷನೆ ಘೋರಭವದಿ ಪಾರುಗಾಣಿಸೊ ಎಮ್ಮನು 1 ದುಷ್ಟನಾಶಕ ಶಿಷ್ಟಪಾಲಕ ಶ್ರೇಷ್ಠಮೂರುತಿದೇವನೆ ಕಷ್ಟಓಡಿಸಿ ಇಷ್ಟಪಾಲಿಸೊ ಅಷ್ಟಕರ್ತನೆ ಬೇಗನೆ 2 ವೇದಗೋಚರ ಯಾದವೇಂದ್ರ ಸುಧಾಮ ರಕ್ಷಕ ಕೃಷ್ಣನೆ ನಂದಗೋಪ ಸುಕಂದ ನಾಮಕ ರಾಧೆವಂದಿತ ಚರಣನೆ 3 ಗೋಪಿ ಮೋಹಕ ಪಾಪಮೋಚಕ ತಾಪಸ ಪ್ರಿಯರೂಪನೆ ಕೋಪಮಾಡದೆ ಪಾಪಿ ಎನಗೆ ರೂಪ ತೋರಿಸೊ ಬೇಗನೆ 4 ದೋಷದೂರ ವಿನಾಶವರ್ಜಿತ ಕೇಶಿ ಸೂದನ ಶೂರನೆ ಕ್ಲೇಶ ಓಡಿಸಿ ದಾಸನೆನಿಸೊ ಬಿಂಬನೆ 5 ವೇಣುನಾದ ವಿನೋದ ಸುಂದರ ಜಾಣೆ ರುಕ್ಮಿಣಿ ಅರಸನೆ ಸಾನುರಾಗದಿ ಜ್ಞಾನದಂಬಕ ದಾನ ಮಾಡೊ ದಾನಿಯೆ6 ಶ್ಯಾಮಸುಂದರ ಮಾಮನೋಹರ ಭೀಮ ವಿಕ್ರಮ ಭೂತಿಯೆ ಸಾಮಸನ್ನುತ ರಾಮಚಂದಿರ ಕಾಮಜನಕನೆ ಕಲ್ಕಿಯೆ 7 ಸಿಂಧು ಶಯನನೇ ಬಂಧಮೋಚಕ ಮಂದರಾದ್ರಿಧಾರನೇ ಬಿಂಧುಮಾಧವ ಮಂದಹಾಸದ ಸುಂದರಾಂಗ ರೂಪನೆ8 ಲಕ್ಷ್ಮಣಾಗ್ರಜ ಪಕ್ಷಿವಾಹನ ಅಕ್ಷರೇಡ್ಯ ಸುಲಕ್ಷಣ ಮೋಕ್ಷದಾಯಕ ಲಕ್ಷ್ಮಿರಮಣನೆ ರಕ್ಷಿಸಯ್ಯ ಸರ್ವದಾ 9 ವಾರಿಜನೇತ್ರ ವಾರಿಜನಾಭ ವಾರಿಜಾಸನ ವಂದ್ಯನೆ ಸೂರಿ ಶೇಖರ ಮೇರೆಗಾಣದ ಮಹಿಮನೆ 10 ಸರ್ವವ್ಯಾಪ್ತನೆ ಸರ್ವವಂದ್ಯನೆ ಸರ್ವವಾಚ್ಯದ ಈಶನೆ 11 ಪೂರ್ಣಗುಣನೆ ಪೂರ್ಣಶಕ್ತನೆ ಪೂರ್ಣಭೋಧರ ಪ್ರಿಯನೆ ಪೂರ್ಣರೂಪನೆ ಪೂರ್ಣಪೂರ್ಣನೆ ಪೂರ್ಣ ತಂತ್ರ ಸ್ವತಂತ್ರನೆ12 ಬಾಲ ಲೀಲ ಕಲಾವಿಭೂಷಿತ ಲೀಲ ಮಾನುಷ ವಿಗ್ರಹ ಲೋಲ ಸುಂದರ ಜಾಲ ಮೋಹಕ ಕಾಲನಾಮಕ ಪುರುಷ 13 ಕಾಳಿಮರ್ಧನ ಕಾಳಿವರದ ಕಾಳಿಯನುಜ ಕೇವಲ ಮೌಳಿಯಿಂದಲಿ ಕಾಲಿಗೆರಗುವೆ ಪಾಲಿಸಯ್ಯ ಈಗಲೇ 14 ಭಂಜನ ನಿಕಟ ಸರ್ವರ ಕುಟಿಲ ವರ್ಜಿತ ಶ್ರೇಷ್ಟನೆ ನಕ್ರತರಿದ ಚಕ್ರಪಾಣಿಯೆ ಫಕ್ಕನೊಲಿಯೊ ಶುಕ್ರನೇ 15 ವಿಪ್ರಸತಿಯರ ಕ್ಷಿಪ್ರದಿಂದಲಿ ತಪ್ಪದೆ ಪೊರೆದಾತನೆ ತಪ್ಪುನೋಡದೆ ಒಪ್ಪಿಕೊಂಡು ಅಪ್ಪ ಒಲಿಯೊ ವೆಂಕಟ 16 ಪಾಂಡವ ಪ್ರಿಯ ಪುಂಡಮರ್ದನ ಅಂಡಜಾಧಿಪ ಅಂಡಗ ಭಂಡನೆನಿಸದೆ ತೊಂಡನೆನಿಸೊ ಪಾಂಡುರಂಗ ವಿಠ್ಠಲಾ 17 ಸೋಮಶೇಖರ ಭಾಮೆ ಪೂಜಿತ ಕಾಮಿತ ಪ್ರದಸಾಮನೆ ತಾಮಸಾರಿಯ ನೇಮದಿಂದಲಿ ನಾಮನುಡಿಸೊ ಶೀಲನೆ 18 ಸೋಮಕಾಂತಕ ಭಾಮ ರೂಪದಿ ಸೋಮಹಂಚಿದ ಜಾಣನೆ ವಾಮದೇವಗೆ ಭ್ರಮೆಯ ಮಾಡಿದ ಶ್ರೀಮನೋಹರವಾಮನ 19 ಇಂದ್ರಗೊಲಿದ ವೀಂದ್ರವಾಹನ ನಂದಗೋಕುಲ ಚಂದ್ರನೆ ಬಂಧನಪ್ರದ ಬಂಧು ಸರ್ವರ ತಂದೆ ಕಾಯೋ ಬೇಗನೆ 20 ವಿಜಯಸಾರಥಿ ವೃಜಿಜನಾರ್ದನ ಅಜಭವಾದಿ ಪೂಜಿತ ತ್ರಿಜಗವಂದಿತ ಭುಜಗಶಯನನೆ ಅಜಿತ ಶಾಶ್ವತ ವಿಷ್ಣುವೆ 21 ಕಳತ್ರ ಅನೀಕನೆ ವಾಕು ಲಾಲಿಸು ನೂಕುಭವವನು ಏಕರೀತಿಲಿಮೆರೆವನೆ 22 ಜೀವ ಪ್ರೇರಕ ಜೀವಭಾಸರ ಜೀವರಾಶ್ರಯ ಭಿನ್ನನೇ ದೇವದೇವನೆ ಕಾವುದೆಮ್ಮನು ಕೋವಿದಪ್ರಿಯ ಕಪಿಲನೆ 23 ಅನ್ನನಾಮಕ ಅನ್ನದಾಯಕ ಅನ್ನುಉಂಬುವ ಅತಿಥಿಯೆ ಮಾನ್ಯಮಾನದ ಜ್ಞಾನಿಗಮ್ಯನೆ ಬೆನ್ನುಬಿದ್ದೆ ಅನಂತನೆ 24 ಸಾರ ಉಣ್ಣುವ ಗಾರು ಉಣ್ಣದ ಮಾರುತೀಶನೆ ಸ್ವರತನೆ ಧೀರ ಜಯಮುನಿ ವಾಯು ಅಂತರ ಮೆರೆವ ಸಿರಿಪತಿ ಕೃಷ್ಣವಿಠಲನೆ ಬಿಂಬನೆ 25
--------------
ಕೃಷ್ಣವಿಠಲದಾಸರು
ಅಸುರ ಬಾಧಿಸುತಿರಲು ಋಷಿಗಳು ಸ್ತುತಿ ಮಾಡೆ ದಶರಥನ ಗರ್ಭದಲಿ ಜನಿಸಿ ಬಂದೆ 1 ಶಿಶುವಾಗಿ ಕೌಸಲೆಗೆ ಬಾಲಲೀಲೆಯ ತೋರ್ದು ಕುಶಲದಿಂ ನಾಲ್ವರ ಕೂಡೆ ಬೆಳೆದೆ 2 ಅಸುರರನೆ ಬಡಿದಟ್ಟಿ ಋಷಿಯ ಯಾಗವ ಕಾಯ್ದು ವಸುಧೆಯೊಳು ಶಿಲೆಯನ್ನು ಸತಿಯ ಮಾಡಿ 3 ಮಿಥಿಲ ಪಟ್ಟಣಕೈದಿ ಮೃಡನ ಧನುವನೆ ಮುರಿದು ಕರವ ಪಿಡಿದು 4 ಪಥದೊಳಗೆ ಬರುತ ಭಾರ್ಗವರೊಡನೆ ಹೋರಾಡಿ ದಶರಥಗೆ ಏಕೀಭಾವವನೆ ತೋರಿ 5 ಪರಮ ಹರುಷದಲಿ ಸಾಕೇತನಗರಿಗೆ ಬಂದು ಕಿರಿಯ ಮಾತೆಯ ಕಠಿಣ ನುಡಿ ಕೇಳಿ 6 ಚಿತ್ರಕೂಟಕೆ ಬಂದು ಕೃತ್ಯವೆಲ್ಲವ ನಡೆಸಿ ಭ್ರಾತೃ ಭರತನಿಗೆ ಪಾದುಕೆಯನಿತ್ತು 7 ವನದೊಳಗೆ ಸಂಚರಿಸಿ ಘನ ಕಾರ್ಯಗಳ ಮಾಡಿ ಹನುಮನ ಕಳುಹಿ ಮುದ್ರಿಕೆಯ ಕೊಡಲು 8 ಮಿತ್ರೆ ಜಾನಕಿಗರುಹಿ ರತ್ನ ಕೊಂಡು ಬರಲು ಶರಧಿ ಕಟ್ಟಿ 9 ದುಷ್ಟ ರಾಕ್ಷಸ ಕುಲವ ಕುಟ್ಟಿ ಬೇರನೆ ಸವರಿ ಸೃಷ್ಟಿಸುತೆ ಜಾನಕಿಯ ಅಗ್ನಿ ಹೊಗಿಸಿ 10 ಪಟ್ಟಣಕೆ ಬಂದು ಭರತನಿಗೆ ಪೇಳೆ ಅಷ್ಟಗಂಗೆ ಉದಕವನೆ ತಂದು 11 ಅಷ್ಟಋಷಿಗಳು ಎಲ್ಲ ಕೂಡಿ ಕೊಂಡು ಪಟ್ಟಾಭಿಷೇಕವನು ಮಾಡುತಿರಲಂದು 12 ಸೃಷ್ಟಿಯೊಳು ಜಗನ್ನಾಥವಿಠಲನಿಗೆ ಪುಷ್ಪ ವೃಷ್ಟಿಗಳನ್ನು ಕರೆದರಾಗ13
--------------
ಜಗನ್ನಾಥದಾಸರು
ಅಸುರರ ತಾಯಿಯು ದೊಡ್ಡಮ್ಮಾ ಸುಮ ನಸರಿಗೆ ಮಾತೆಯು ಚಿಕ್ಕಮ್ಮಾ ಪ ನೋಡಿದದು ಬಯಸುವುದು ದೊಡ್ಡಮ್ಮಾ ಬೇಡವೆಂದದ್ದು ಬಿಡುವುದು ಚಿಕ್ಕಮ್ಮಾ 1 ಹೇಳಿದಂತೆ ಕೇಳುವುದಿಲ್ಲ ದೊಡ್ಡಮ್ಮಾ ಆಳಿನಂತೆ ನಡೆದುಕೊಂಬವದು ಚಿಕ್ಕಮ್ಮ 2 ಅನಾರೋಗ್ಯ ವಸ್ತುಗಳು ದೊಡ್ಡಮ್ಮಾ ದಿವ್ಯಾರೋಗ್ಯ ಪದಾರ್ಥಗಳು ಚಿಕ್ಕಮ್ಮ 3 ಕ್ಷುಕ್ಷಿಂಬರ ಯೋಚನೆ ದೊಡ್ಡಮ್ಮಾ ಅಕ್ಷರಾಭ್ಯಾಸಸಕ್ತಿ ಚಿಕ್ಕಮ್ಮ 4 ಒಬ್ಬನೆ ತಿನ್ನುವುದು ದೊಡ್ಡಮ್ಮಾ ಹಬ್ಬ ಮಾಡಿ ಇತರರಿಗಿಡುವುದು ಚಿಕ್ಕಮ್ಮ 5 ಸಿಟ್ಟು ಮಾಡಿ ಬಯ್ಯುವುದು ದೊಡ್ಡಮ್ಮಾ ಜ್ಞಾನಿಗಳ ಸೇವಿಸುವುದು ಚಿಕ್ಕಮ್ಮ7 ಅಪಕಾರ ಮಾಡುವುದು ದೊಡ್ಡಮ್ಮಾ ಉಪಕಾರ ವೆಣಿಸುವುದು ಚಿಕ್ಕಮ್ಮ 8 ಉಸುರೆಂದು ಅಳುವುದು ದೊಡ್ಡಮ್ಮಾ ಹಸನ್ಮುಖರಾಗಿರುವುದು ಚಿಕ್ಕಮ್ಮ 9 ನೆರೆ ಜ್ಞಾಪಕ ಶಕ್ತಿ ಚಿಕ್ಕಮ್ಮ 10 ಅರರೆ ಕಲಿಯ ಪತ್ನಿ ದೊಡ್ಡಮ್ಮಾ ಗುರುರಾಮ ವಿಠಲನರಸಿ ಚಿಕ್ಕಮ್ಮ 11
--------------
ಗುರುರಾಮವಿಠಲ
ಅಸುರಾಂತಕನರಸಿಯೆ ನೀಬೇಗ ಪ ಕುಸುಮಾಕ್ಷತೆ ಲಾಜಗಳಿಂದಲಿ ಮೇ- ಲೆ ಸುರಾರ್ಚೆಲ್ಲಿ ಪ್ರಾರ್ಥಿಸುವರು ನಿನ್ನ ಅ.ಪ ಸುರರು ಮೋದದಿಂದ ತಾವು ಪೊಗಳುತಿಪ್ಪರು ಪಾದನೂಪುರವಲುಗದಂತೆ ನೀ ಸಂ- ಮೋದವ ಬೀರುತ್ತ ಸುಜನರಿಗೆಲ್ಲ 1 ಗಿರಿಜಾವಾಣೀಯಾರ್ಕರವ ಕೊಡಲು ಅರುಂಧತಿ ಮುಖರೆಚ್ಚರಿಕೆ ಪೇಳಲು ಕರುಣಾರಸವ ಸುರಿಸುತ್ತ ನೀ ಭ- ಕ್ತರು ಬೇಡಿದಿಷ್ಟಾವರವ ನೀಡಲು2 ಇಂದಿರೆ 3
--------------
ಗುರುರಾಮವಿಠಲ