ಒಟ್ಟು 391 ಕಡೆಗಳಲ್ಲಿ , 77 ದಾಸರು , 342 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೋಭಾನವೆನ್ನಿರೆ ಸಕಲ ಗುಣನಿಧಿಗೆ ಶೋಭಾನವೆನ್ನಿ ಸಮೀರ ಪಿತನಿಗೆ ಶೋಭಾನವೆನ್ನಿ ಸರೋಜಸದನ ಮನೋಭಿರಾಮನಿಗೆ ಶೋಭಾನವೆನ್ನಿ ಪ ಕಪಟ ಕಮಠಗೆ ತಪ ನಿಯಾಂಬಕನಸುಪರಿಹರಿಸಿದಗೆ ಕೃಪಣ ಪ್ರಹ್ಲಾದನ ವಿಪತ್ತು ಕಳೆದವಗೆ ಚಪಲಾಕ್ಷಿಯರಾರುತಿ ಬೆಳಗಿರೆ 1 ಕೊಡಲಿ ಕೋದಂಡವ ಪಿಡಿವ ಪಂಡಿತಗೆ ಕಡಲ ಕಟ್ಟಿಸಿ ಖಳರೊಡಲ ಬಗೆದಗೆ ಫಣಿ ಮೃಡನ ಗೆಲಿಸಿ ಕೀರ್ತಿ ಒಡನೆ ತಂದಿತ್ತಗೆ ಮಡದೇರಾರುತಿಯ ಬೆಳಗೀರೆ 2 ಹರಿಗಿ ಸುರಿಗಿ ಪಿಡಿದರವಿಂದಾಂಬಕಗೆ ಶರಧಿಯೊಳಾಡ್ದಗೆ ಗಿರಿಮಹಿಧರಗೆ ನರಹರಿ ರೂಪಗೆ ಧರಣಿಯಾಳ್ದಗೆ ಧುರದೊಳು ರಾಯರ ತರಿದ ಸಮರ್ಥಗೆ ಗರತೇರಾರುತಿಯ ಬೆಳಗೀರೆ3 ದಶರಥ ತನಯಗೆ ವಸುದೇವ ಸುತಗೆ ಕೂರ್ಮ ರೂಪಗೆ ವಸುಧಿ ವಾಹಕಗೆ ಮಿಸುನಿ ಕಶ್ಯಪಗೆ ಹೆಬ್ಬಸಿರ ಬಗೆದವಗೆ ಶಶಿಮುಖಿಯರಾರುತಿ ಬೆಳಗೀರೆ 4 ವಟು ಭೃಗುರಾಮಗೆ ಜಟಲ ಮಸ್ತಕಗೆ ಕಠಿಣ ಕಂಸನ ತಳ ಪಟವ ಮಾಡಿದಗೆ ಕಪಟ ಭೀಕರಗೆ ವಟಪತ್ರಶಯನ ನಿಷ್ಕುಟಿಲ ಜಗನ್ನಾಥ ವಿಠಲಗಾರುತಿಯ ಬೆಳಗೀರೆ 5
--------------
ಜಗನ್ನಾಥದಾಸರು
ಶೌರಿ ವಿಮಲಾಂಬರಧರ ಪಾಹಿ ಮುರಾರಿ ಪ ಸುಮನಸನುತ ಪದದನುಜ ಸಂಹಾರಿ ಅ.ಪ ಸರಸಿಜಲೋಚನ ಶರಣಸಂಜೀವನ ಸುರಮುನಿಸೇವನ ಕರುಣಾಸದನ ಅರವಿಂದಾನನ ವರಮಣಿರದನ ದುರಿತವಿಮೋಚನ ನಿರುಪಮ ಗಾನ 1 ಪುರಹರ ವಿನಮಿತ ಪಾವನಚರಿತ ಧರಣಿರಮಾಯುತ ಸುರಮುನಿವಿನುತ ಫಣಿ ಫಣಿಭೂಷಿತ ಮುರಳೀಧರ ಮಾಂಗಿರಿ ಶೃಂಗಸ್ಥಿತ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ಪಾಂಡುರಂಗ ಪ್ರಾರ್ಥನೆ ಪಾದ ಅಮಿತ ನೀಲಮೇಘಶ್ಯಾಮ ವಿಠಲನ್ನ 1 ಶಿಲೆಯನುದ್ಧರಿಸಿರ್ಪ ಪಾದಕೆ ಬಲಿಯ ಮೆಚ್ಚಿದ ಪಾದಕಮಲಕೆ ನಲಿವಿನಿಂದಲಿ ನಮಿಸಿ ಪೊಗಳುವೆಕಲಿಮಲಂಗಳನೆಲ್ಲ ತರಿಯುತತಲೆಯೊಳಾಶೀರ್ವಾದವೀಯಲು ಬಿದ್ದು ಬೇಡುವೆನು 2 ಕ್ರೂರ ರಕ್ಕಸರುಪಟಳಂಗಳ ವೀರತನದಿಂ ಚಕ್ರದಡಗಿಸಿ ಮಾರಪಿತ ಭವದೂರ ಕಂಸರಲಿ ದಣಿಯುತಲಿ ಯಾರ ಗೊಡವೆ ನಮಗೇನು ಎನ್ನುತ ಶ್ರೀ ರಮಾವರ ದೇವಿ ಸಹಿತೀ ದಾರಿಯೋಳ್ಮಿಜ ಭಕ್ತಗಾಶ್ರಯನಾಗಿ ನಿಂತಿಹನೆ 3 ಕಾಯ ಧರಿಸಿದ ಭಕ್ತವರ್ಯನ ಮಾಯೆಯಿಂದಲಿ ನೋಡಿ ನಲಿಯಲು ಬಂದ ವಿಠ್ಠಲನೆತೋಯಜಾಕ್ಷಿಯಳಾದ ಲಕುಮಿಯರಾಯ ಶ್ರೀಹರಿ ನಿನಗೆ ಇಟ್ಟಿಗೆ ಯಾಯಿತೇ ಬಲು ಸಂಖ್ಯದಂಸನ ನಿಂತುಕೊಳ್ಳಿಲ್ಕೆ 4 ತಾತನಂಘ್ರಿಯ ಸೇವೆಗೆಯ್ದಿರು-ವಾತ ಬರ¯ಂದನಿಮಿಷಾಗ್ರಣಿ ತಾತ ನಿಂತೆಯ ಸೊಂಟದ ಮೇಲೆ ಕೈಯಿಟ್ಟುಮಾತೆಯಾದವರು ಹಾಗೆ ಸಂಗಡ ಪ್ರೀತಿಯಿಂದಲೆ ನಿಂತುಕೊಂಡಳು ಖ್ಯಾತಿಯಾಯಿತು ಪಾಂಡುರಂಗನ ಲೀಲೆ ಭಕ್ತರಲಿ 5 ಸತ್ತು ಹುಟ್ಟುವ ಬಾಧೆಯಿಲ್ಲದಸತ್ಯವಂತನೆ ಕೊಟ್ಟ ಇಟ್ಟಿಗೆ ಮೆತ್ತಗಿಹುದೆÉೀನಷ್ಟು ದಿವಸವು ನಿಂತುಕೊಂಡಿರುವೆಮತ್ತೆ ಪೇಳುವುದೇನು ದೇವನೆ ಸುತ್ತು ಮುತ್ತಿನ ಜಗಕೆ ಆಸರವಿತ್ತೆ ನಿನಗಾಸರವು ಯಾವುದು ಭಕ್ತವತ್ಸಲನೆ 6 ಹೇ ದಯಾನಿಧೆ ಯಾದವಾಗ್ರಣಿ ಮಂದವಾಖ್ಯನೆ ಭೀಮತಡೆಯೊಳು ಆದರಮ್ಮಿಗೆ ತೋರಿ ಕರೆದನೆ ನಿಮ್ಮನೀರ್ವರನು ಬಾಧೆಬಡುತೀ ನಿಂತ ಕಾಲಿಗೆಹಾದಿನೋಡುವವೆಷ್ಟೊ ಬೆಳೆಯುಚೋದ್ಯವಲ್ಲವೆ ನಿನ್ನ ಲೀಲೆಯು ದಿವ್ಯವಿಗ್ರಹನೇ 7 ಆದಿಮೂರುತಿ ನಿನ್ನ ಹುಡುಕಲುವೇದ ಶಾಸ್ತ್ರ ಪುರಾಣವೆಂಬವು ಹಾದಿ ಕಾಣದೆ ನಿಂತವಲ್ಲೈ ನೀನೆ ಬಂದೀಗಮೇದಿನೀ ತಳದಲ್ಲಿ ಭಕ್ತರಹಾದಿ ನೋಡುತ ನಿಂತುಕೊಂಡಿರೆಹೋದವೆಷ್ಟೋ ದಿವಸ ಶ್ರೀಹರಿ ನಿನ್ನ ಲೀಲೆಯಲಿ 8 ನೀಲಮೇಘ ಶ್ಯಾಮ ಕೀರ್ತಿಯ ಜಾಲವನ್ನುರೆ ಭಜನೆ ಮಾಡುತತಾಳಹಾಕುತ ಸಂತಮಂಡಳಿ ಕುಣಿದು ಬರುತಿರಲುಧೂಳವೇಳುವದನ್ನು ಕಣ್ಣಲಿವೇಳೆಗಳೆಯದೆ ನೋಡಿ ನಲಿವುದುಲೀಲೆಯಲ್ಲವೆ ಪಾಂಡುರಂಗನೆ ವಿಶ್ವಚಾಲಕನೆ9 ಸರಸಿಜಾಕ್ಷನೆ ಕರಗಳೆರಡನುಇರಿಸಿ ಟೊಂಕದೊಳೇನು ನೋಡುವಿಪರಮ ಭಕುತನ ತಂದೆ ತಾಯ್ಗಳ ಸೇವೆ ಮಾಡುವುದುದೊರೆಯಲಾರದೆ ಕಲಿಯ ಕಾಲದೆ ದುರಿತ ನೀಗಿಸಿಕೊಂಡನಲ್ಲವೆ ಆರುಗಿಯಾದರು ನೋಡಲೊಲ್ಲನು ಭಕ್ತಿಬಲದಿಂದ 10 ಚಿನ್ನದರಸನೆÉ ನಿನ್ನ ಕೈಯನುಘನ್ನ ಟೊಂಕದ ಮೇಲೆ ಇರಿಸುತನನ್ನಿಯಿಂ ಭರವಸೆಯ ಕೊಡುವಿಯೊ ಭವದ ಸಾಗರವುತನ್ನ ನಂಬುತ ದಾಟಿ ಹೋಗುವಸನ್ನುತಾತ್ಮರಿಗಿಷ್ಟಯೆಂಬುದ ಚೆನ್ನವಾಗಿಯೆ ತಿಳಿಸಲೋಸುಗ ಹೀಗೆ ನಿಂತಿಹೆಯಾ 11 ನಾನು ನಿನ್ನನು ಕರೆಯದಿದ್ದರು ನೀನೆ ಬಂದಿಲ್ಲೇಕೆ ನಿಂತೆಯೊ ದೀನಪಾಲಕನೆಂಬ ಬಿರುದನೆ ಕಾಯಲೋಸುಗವೇಶಾನೆ ಸಂಪದವಿದ್ದ ದ್ವಾರಕೆ ಯಾನೆ ಕುದುರೆಗಳಿಂದ ಶೋಭಿಪ ದಾನವಾಂತಕ ಕೃಷ್ಣರಾಯನೆ ಈಗ ಪಂಡರದೀ 12 ಕರ್ಮ ಮುಗಿದಿಹುದೇಮಿಕ್ಕಿದವರೇನನ್ಯಯ ಪುತ್ರರೆ ತಕ್ಕ ಯೋಚನೆಗೆಯ್ದು ನಂತರತೆಕ್ಕೆಯೋಳ್ಸಲಹುವದು ಲೇಸೈ ಭಕ್ತವತ್ಸಲನೆ 13 ಹಾಲು ಮೊಸರಾ ಬೆಣ್ಣೆಯುಂಡೆಯ |ಲೀಲೆಯಿಂದಲೆ ಕದ್ದ ಕಳ್ಳನೆಚ್ಯಾಳಿಬಲಿತಾ ಬಳಿಕ ಬಿಡುವೆಯಾ ಭಕ್ತರಂತಹರಗಾಳಿ ಸೋಂಕಿದ ನೆವ ಮಾತ್ರಕೆಜಾಲಬೀಸುತ ಕದ್ದು ಕೊಳ್ಳುವಿಹೇಳಲೇನೈ ಹಿಂದಿನೆಷ್ಟೊ ಜನ್ಮದಘನಿದನಾ 14 ನಿನ್ನನೇ ನೆರೆ ನಂಬಿ ಭಜಿಸುವಪುಣ್ಯವಂತರ ಹೃದಯಮಂದಿರ-ವನ್ನೆಮಾಡಿದ ಪಾಂಡುರಂಗನೆ ನೀನು ಜಗದೊಳಗೆಘನ್ನ ಪಾಪದಿ ಬಳಲುತಿರುವವ-ರನ್ನುಸಲುಹಲು ಬಂದೆಯೇನೈಸನ್ನುತಾಂಗನೆ ಭಜನಿಗೊಲೆಯುವ ದಿವ್ಯ ವಿಠ್ಠಲನೆ 15 ವೇದಗಳ್ಳನ ಸದೆದು ಬ್ರಹ್ಮಗೆ ಮೋದದಿಂದಲಿ ಕೊಟ್ಟ ಮತ್ಸ್ಯನೆಆದಿಕೂರ್ಮನೆಯಾಗಿ ಮಂದರನೆಗಹಿ ನಿಂದವನೇಬಾಧೆÉ ಬಿಡಿಸುವ ಕ್ರೂರ ರಕ್ಕಸಭೇದಿಯಾಗುತ ಧರಣಿ ಮಂಡಲಸೇದಿ ತಂದನ ನೀನೆಯಲ್ಲದೆ ದಿವ್ಯ ವಿಠ್ಠಲನೆ 16 ಒಂದೆ ಮನದೊಳು ನೆನೆದ ಕುವರಗೆಬಂದೆ ಕಂಬದೆ ನಾರಸಿಂಹನೆನಿಂದ ಮಾತ್ರಕೆ ಮೂರು ಪಾದದ ಭೂಮಿದಾನದಲೀತಂದು ಪಾತಾಳದಲಿ ಬಲಿಯನುಚಂದದಿಂದಲಿ ಇಟ್ಟ ವಾಮನತಂದೆಯಾಡಿದ ನುಡಿಯ ನಡಿಸಿದ ಭಾರ್ಗವತ್ತೀ 17 ಸೀತೆಗೋಸುಗ ರಾಮನಾಗುತಖ್ಯಾತಿಗೋಸುಗ ಕೃಷ್ಣನಾದೆಯಲೇಪ್ರೀತಿಗೋಸುಗ ಬಾಧ್ಯನಾಗುತ ಜಗವ ಪಾಲಿಸಿದ್ಯಾಜಾತಿಯಶ್ವವನೇರಿ ರಿಪುಗಳÁತ ಮಾಡಿದ ಕಲ್ಕ್ಯರೂಪನೇಯಾತಕೀಪರಿ ಚಂದ್ರಭಾಗದಿ ನಿಂತೆ ಬೆರಗಾಗಿ 18 ನಿನ್ನ ನಾಮಗಳಮಿತವಿದ್ದರುನನ್ನ ನಾಲಿಗೆಗಷ್ಟು ಬರುವವೆ ?ಸನ್ನುತಾಂಗನೆ ಪಾಂಡುರಂಗನೆ ದಿವ್ಯ ವಿಠ್ಠಲನೆನ್ನುತಿಷ್ಟೇ ನಾಮಗರೆವೆನುಚಿನ್ನದರಸನೆ ಭಕ್ತಸಂಘದೊಳೆನ್ನ ಕೂಡಿಸಿ ಕಾಯಬೇಕೈ ಪರಮ ಭಗವಂತಾ 19 ಕಾಲಕಾಲಕೆ ನೇಮನಿತ್ಯಗ-ಳಾಲಯಂಗಳ ಮಧ್ಯದೆಸಗದೆಜಾಲಿಯಂತೇಗೆಲ್ಲ ಜನರಿಗೆ ಬೆಳೆದೆ ಬಾಧಿಸುತಬಾಲ ಯೌವನ ವಾರ್ಧಿಕತ್ವದೆಕಾಲಪೋಯಿತು ನಿನ್ನ ನೆನೆಯದೇ ಹೇಳಲೇನೈ ಕಾಲನೆಳೆಯುವನು 20 ಕಂತು ಜನಕನೆ ನಿನ್ನ ನಾಮದಮಂತ್ರವೆನಗಿನ್ನೆಲ್ಲಿ ಬರುವುದು ಶುದ್ಧ ಪಶುವಾದೇಅಂತರಾತ್ಮನೆ ನೀನು ಈ ತೆರನಿಂತುಕೊಂಡರೆ ನನ್ನ ಗತಿಯೇ-ನೆಂತ ಹೇಳಲಿ ಸಂತೆ ತೀರಿತು ಸಲಹೊ ವಿಠ್ಠಲನೇ 21 ಕಾಲ ಬಂದಿದೆಸದ್ಯಕಾರೂ ಕಾವರಿಲ್ಲವುದ್ಧಪಾಶದಿ ಬಿಡಿಸಬಾರೈ ದೀನ ಬಾಂಧವನೇ 22 ಕಾಯಕಿರುವದ ಬಂಧು ಬಳಗವು ಹೇಯ ದುಡ್ಡನೆ ಶಳಯಲೋಸುಗಜೀಯ ನಿನ್ನಂತಾರು ಇಲ್ಲವು ಜೀವಕನು ಸರಿಸೀತಾಯ ತಂದೆಯ ಜಗಕೆ ಲಕ್ಷ್ಮೀರಾಯ ನೀನೇ ಅಲ್ಲವೇನೈ ಬಾಯ ಬಿಡುವೆ ಅಜ್ಞಬಾಲರ ಕಾಯೊ ವಿಠ್ಠಲನೇ 23 ಅಣ್ಣನಾಗುತ ದ್ರುಪದ ಸುತೆಗಾಬಣ್ಣದಂಚಿನ ಸೀರೆ ಉಡಿಸಿದೆನಿನ್ನ ಬಾಲ್ಯದ ಸುಖ ಸುಧಾಮಗೆ ಕೊಟ್ಟಿಯ್ಯೆಸಿರಿಯಹಣ್ಣಿನಾಶೆಗೆ ಶಬರಿ....ಗೊಲಿದೈಬೆಣ್ಣೆಯಾಶೆಗೆ ಗೋಪಿಗೊಲಿದೈಮಣ್ಣಿನಾಶೆಗೆ ಬಲಿಯ ಬಾಗಿಲ ಕಾಯ್ದ ವಿಠ್ಠಲನೇ 24 ನಿನ್ನ ನೆಂದು ಕಾಣದಿದ್ದವಕುನ್ನಿ ಪಾಮರನಣ್ಣನೆಂಬೆನೆಹಣ್ಣು ಹಂಪಲವೆನಗೆ ಸಾಲವು ನಿನಗೆ ಕೊಡಬಹುದೇನನ್ನ ತೆರದಾಚಾರ ಹೀನರೆಇನ್ನು ಗೆಳೆಯರು ನನಗೆ ಆದರುಮುನ್ನ ಮಾಡಿದ ಪಾಪ ಬಹಳಿದೆ ಕೊಳ್ಳೊ ನೀನದನೂ 25 ಹಿರಿಯರೆಸಗಿದ ಪುಣ್ಯದಿಂದಲೆದೊರಕಿತಲ್ಲವೆ ನಿನ್ನ ನೆನೆವುದುಪರಮ ಸುಂದರ ಪಾಂಡುರಂಗನೆ ಬಾರೊ ಮಾನಸದೀತರಳರಾಟದಿ ತನ್ನ ತಾಯಿಯಮರೆತ ತೆರದಿಂ ಬಿಟ್ಟು ಕೆಟ್ಟೆನುಕರಗದೇನೈ ನನ್ನ ಮನವದು ನಿನ್ನ ದೆಶೆಯಿಂದ 26 ಕೂಸು ಆಟದೊಳಿದ್ದರೇನೈಹೇಸಿ ಕೆಲಸಹೊಳಿದ್ದರೇನೈದೋಷಗಳೆಯುತ ಪೊರೆವಳಲ್ಲಿದೆ ಪಡೆದ ತಾಯವ್ವಶ್ರೀಶ ವಿಠ್ಠಲ ಪಾಂಡುರಂಗನೆಘಾಸಿಗೊಳಿಸುವ ಮುನ್ನಯವನರುಪಾಶ ಬಿಡಿಸೈ ಭಕ್ತವತ್ಸಲ ದಿವ್ಯ ವಿಠ್ಠಲನೇ 27 ಕಾಮನಯ್ಯ ಸುಧಾಮ ಸಖ ಶ್ರೀರಾಮ ವಿಠ್ಠಲ ದಿವ್ಯ ರೂಪನೆಪ್ರೇಮವೆನ್ನಲ್ಲಿಟ್ಟು ಸಲಹೊ ಪುಣ್ಯವರ್ಜಿತನೆತಾಮಸತ್ವದ ಕೆಲಸವೆಲ್ಲವನೇಮದಿಂದಲೆ ಮಾಡಿ ನಾ ನಿ-ಸ್ಸೀಮನಾಗಿಹೆ ಕಾಯೆಯೊ ವಿಶ್ವವ್ಯಾಪಿ ವಿಠ್ಠಲನೇ 28 ನಾನು ಹೇಳುವುದೇನು ದೇವನೆನೀನೆ ತಿಳಕೊಂಡಿರ್ಪೆ ಎನ್ನಯಮಾನಕುಚಿತಪ್ಪಂತೆ ಸತ್ಫಲ ಕೊಡು ದಯಾಂಬುಧಿಯೇನೀನು ನಿಂvಡೆÉಗೆನ್ನ ಜಗ್ಗುತಸಾನುರಾಗದೆ ಪೊರೆಯೊ ವಿಠ್ಠಲನೀನೆಯಾದರು ಬಾರೊ ಭಕ್ತರ ಹೃದಯ ಮಂದಿರಕೆ 29 ಮಂಗಳಂ ಮಧುಕೈಟಭಾರಿಗೆಮಂಗಳಂ ಶ್ರೀವತ್ಸಧಾರಿಗೆಮಂಗಳಂ ಬ್ರಹ್ಮಾಂಡ ಪಾಲಕ ಪಾಂಡುರಂಗನಿಗೆಮಂಗಳಂ ಶ್ರೀ ಲಕುಮಿದೇವಿಗೆಮಂಗಳಂ ಭೀಮಾತಟಾಕಿಗೆಮಂಗಳಂ ಸದ್ಭಕ್ತ ಮಂಡಳಿಗೆಗಳ ಭೂತಳಕೆ 30
--------------
ಪಾಂಡುರಂಗ
ಶ್ರೀ ಮಧ್ವಾಚಾರ್ಯರ ಸ್ತೋತ್ರ ಪದ ನಮೋ ನಮೋ ಹರಿಪ್ರೀಯ ನಮೋ ನಮೋ ಸುರಗೇಯನಮೋ ನಮೋ ಗುರುರಾಯ ಮಧ್ವ ಮುನಿ ಜೀಯಾ ಪ ಧರೆಗೆ ಭಾರವಾಗಿ ಚರಿಸುತಿರೆ ಮಾಯಿಗಳುಧರಿಸಲಾರದೆ ಧರಣಿ ಸರಸಿಜೋದ್ಭವಗೆಮೊರೆಯಿಡಲು ಅಜನಾಗ ಹರಸುರರ ಸಹವಾಗಿಹರಿಯ ಸದನವ ಸಾರಿ ಅರುಹಿದನು ಇದನೆಲ್ಲ 1 ಕಾವನಯ್ಯನು ವಸುಧೆ ಭಾವವನು ತಿಳಿದನಿಲದೇವನೇ ನಿನಗೆ ಆಜ್ಞೆಯನೀಯಲುದೇವ ನೀ ನವತರಿಸಿ ಪಾವನವ ಮಾಡಿ ಸ-ಜ್ಜೀವಿಗಳ ಪೊರೆದರ ದುರ್ಜೀವಿಗಳ ನೀ ಮುರಿದೆ 2 ಕಾಮವನು ಕಡಿದು ಸನ್ನೇಮವನೆ ಹಿಡಿದು ಬಹುಸೀಮೆಯೊಳು ವಾದಿಗಳ ಸ್ತೋಮ ತರಿದುಹೇಮಕಚ್ಚುಲ ವೇಣುಗೋಪಾಲ ವಿಠಲನನಾಮಸುಧೆ ಸುಜನರಿಗೆ ಪ್ರೇಮದಲಿ ಸಮಿಯಿತ್ತೆ 3
--------------
ವೇಣುಗೋಪಾಲದಾಸರು
ಶ್ರೀ ರಘೂತ್ತಮ ಗುರು ಸ್ತೋತ್ರ ಗುರುರಾಜ ರಘೂತ್ತಮ ಗುರುರಾಜ ಗುರುರಾಜ ನಮೋ ನಮೋ ನಿನ್ನ ಪಾದ ಸರಸಿಜಯುಗಳದಿ ನಾ ಶರಣು ಅಹ ಧರಣಿಜಾಪತಿ ರಾಮ ಭದ್ರಗೆ ಪ್ರಿಯ ನೀನು ಕರುಣದಿ ಸಲಹೆನ್ನ ದುರಿತಗಳಳಿದು ಪ ನಿವ್ರ್ಯಾಜ ಕರುಣಿ ರಘುವರ್ಯ ಗುರು ವರ್ಯ ಸುಮೇಧರ ದಿವ್ಯ ಚಾರು ತೋಯಜ ಕರದಿಂದ ಉದಯನಾಗಿ ನಿಗಮ ಸಾಮ್ರಾಜ್ಯ ಅಹ ಮಾಯೇಶ ಕಾಳೀಶ ಗುರುಗಳ ಪ್ರಿಯ ಬಾಲ ವಯಸ್ಸಲ್ಲೇ ಉದ್ದಾಮ ಪಂಡಿತನಾದಿಯೋ 1 ಬದರೀಶ ನಿರ್ಣೀತತತ್ವ ಅರ್ಥ ವಿಸ್ತಾರ ಮಾಡಿದ ಮಧ್ವ ಟೀಕೆ ಜಯತೀರ್ಥ ಬರೆದ ತದ್ಭಾವ ಪೇಳಿ ಒದಗಿಸಿದೆಯೊ ಜ್ಞಾನ ಸುಖವ ಅಹ ಮುದ ಜ್ಞಾನ ಸೌಭಾಗ್ಯ ಸಾಧು ವೈಷ್ಣವತನ ಇತ್ತು ಪಾಲಿಪುದೆನ್ನ ಕುಂದುಗಳೆಣಿಸದೆ 2 ಧರೆಯಲ್ಲಿ ದಕ್ಷಿಣಕಾಶಿ ಸ್ವರ್ಗ ಧರೆಯಳದವನ ಸೇವಿಸಿ ಗಂಗಾ ಧರಷಡಾನನ ಇಲ್ಲಿ ವಾಸಿಸುವ ಈ ಕ್ಷೇತ್ರ ವೃಂದಾವನ ವಾಸಿ ಅಹ ಪರಮೇಶ ಕೇಶವ ಪ್ರಿಯಾ ಪಿನಾಕಿನಿಯಿಂದ್ರಾ ತೀರ ಮಧ್ಯದಿ ತಪಗೈದು ಭಕ್ತರ ಕಾಯ್ವಿ 3 ಸುರವೃಂದ ಶ್ರೇಷ್ಠ ನೀನಹುದು ಎನ್ನ ಪರಿ ಬಾಧೆಯ ತರಿದು ಸರ್ವ ಸಿರಿ ಇತ್ತು ಹರಿ ಗುರು ಭಕ್ತಿ ಬೆಳೆಸಿ ಪಾಲಿಪುದು ಅಹ ಹರ ಸಮೀಪಕೆ ಒಳ್ಳೆ ಸಾಧನ ಸರ್ವದಾ ಕಾರುಣ್ಯದಲಿ ಎನ್ನೊಳ್ ನಿಂತು ಮಾಡಿಸೋ ಗುರೋ 4 ರಾಮನೃಕೇಸರಿ ವ್ಯಾಸ ಸತ್ಯ ಭಾಮ ರುಕ್ಮೀಣಿ ದೇವಿ ಅರಸ ಭೂಮ ಶ್ರೀಮಂತ ಕ್ಷೀರಾಬ್ಧಿವಾಸ ಮಧ್ವ ಭೀಮಹನುಮ ವಂದ್ಯ ಶ್ರೀಶ ಅಹ ಹೇಮಗರ್ಭನ ತಾತ `ಪ್ರಸನ್ನ ಶ್ರೀನಿವಾಸ' ರಮೆಯರಸನ ಪ್ರಿಯತಮ ಜೀಯ 5 || ಶ್ರೀ ಕೃಷ್ಣಾರ್ಪಣಮಸ್ತು ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27
--------------
ಅಂಬಾಬಾಯಿ
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ 15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ 23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27 ಸೀತಾಪತಿವಿಠಲ ದಾಸಳ ನಿರ್ಯಾಣ ಪದ 266 ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ 3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ 22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36
--------------
ಅಂಬಾಬಾಯಿ
ಶ್ರೀ ಶ್ರೀನಿವಾಸ ಕಲ್ಯಾಣ ಲಾವಣಿ ಮಾಧವ ಪ ಮುದಮೋದ ಘನ ಸುಖ ಭಕ್ತರಿಗೀಯಲು ಅ.ಪ. ದೇವ ದೇವೇಶನು ಯಾರೆಂತೆಂದು ಕೋವಿದ ಭೃಗುಮುನಿ ಹುಡುಕುತ ಬಂದು ಪಾರ್ವತಿ ಪತಿಹರ ವಿಧಿಗಳ ಜರಿದು ಧಾವಿಸಿ ಹರಿಯೆಡೆ ಬರ್ಪುದ ಕಂಡು ಭಾವಜ ಪಿತರತಿ ಸೋಗನು ಹಾಕೆ ದೇವನ ಮಾಯೆಯು ಮುಸುಕಲು ಮುನಿಗೆ ಈ ವಿಧ ಸಲ್ಲದು ಹರಿಗೆಂತೆಂದು ಪಾವನ ನೆದೆಯನು ವದ್ದನು ದುಡುಕಿ1 ಮಾಧವ ಚರಣವ ತೊಳೆದು ಹರಿಸುತ ದುಗುಡವ ಭಕ್ತನಿಗಂದು ಕರದಿಂ ದೊತ್ತುತ ಚರಣದ ಕಣ್ಣು ತರಿಯಲು ಹೆಚ್ಚಿನ ಸಾಧನೆ ಮುನಿಗೆ ಹರುಷದಿ ತೆರಳಿದ ಋಷಿವರ ತಾನು ಅರಿಯುತ ಕಾಂತನ ಮನವಂ ಸಿರಿಯು ಸರಸರ ಕೋಪವ ನಟಿಸುತ ತಾನು ಬಿರುಸಿನ ನುಡಿಗಳ ಆಡಿದಳಂದು 2 ಏನಿದು ಮುನಿ ವಿಪರೀತವು ಥರವೆ ನಾನಿಹ ಸ್ಥಳವನು ವದೆಯುವದೆಂದು ಮಾನಿನಿ ಗೌರವ ಕಾಯದೆ ಕ್ಷಮಿಸಿಹೆ ನಾನಿಹೆ ಬರಿಸತಿ ಭಕ್ತರೆ ಹೆಚ್ಚು ಕಾನನ ಸೇರುವೆ ನನಗೇಕೀ ಮನೆ ಮಾನವು ಹೊಯಿತು ಯನ್ನಲು ಸತಿಯು ಮೌನವ ಧರಿಸಲು ಗಂಡನು ನಗುತ ದೀನರ ಪೊರೆಯಲು ಬಂದಳು ಭುವಿಗೆ 3 ಗಂಡನ ಬಿಡುವಳೆ ಲಕ್ಷ್ಮೀದೇವಿ ಪುಂಡರ ಮಾತಿದು ನಂಬಿಲುಬೇಡಿ ಗಂಡನ ಮನತೆರ ನಟಿಸಿದಳಷ್ಟೆ ಗಂಡನು ಹಾಗೆಯೆ ತೊರೆಯುತ ಧಾಮ ಕುಂಡಿಲಿ ಗಿಳಿಯುತ ಅಲೆಯುತ ಹೊರಟ ಕಂಡಲ ಗಿರಿಯೆಡೆ ನಡೆತಾತಂದ ಕಂಡನು ಹುತ್ತವ ಒಂದೆಡೆ ತಾನು ಕುಂಡಲಿಗೊಡೆಯನು ನೆಲಸಿದನಲ್ಲಿ 4 ಪಾವನ ಗಿರಿಯದು ಕೇಳಿರಿ ಎಲ್ಲ ದೇವನ ಖಗಮೃಗ ಬಳ್ಳಿಗಳಾಗಿ ದೇವ ಸಮೂಹವು ಸೇವಿಪರಲ್ಲಿ ಕೋವಿದ ಋಷಿಗಳು ಧ್ಯಾನಿಪರೈಯ ಭಾವಸು ಭಕ್ತಿಲಿ ನೋಡಲು ಗಿರಿಯ ಜೀವರ ಪಾಪಗಲೆಲ್ಲಾ ನಾಶ ನೋವನು ಕಾಣರು ಹರಿಕೃಪೆ ಮುಂದೆ ದೇವನು ಇರೆ ಇದೆ ಭೂವೈಕುಂಠ 5 ಕೃತಯುಗದಲ್ಲಿದು ವೃಷಭಾಚಲವು ಗತಿಸಿದ ರಕ್ಕಸ ಹರಿಯಿಂತೆಂದು ಸುತನಂ ಪಡೆಯಲು ಅಂಜಿಲಿದೇವಿ ಅತಿ ತಪಗೈದಳು ತ್ರೇತೆಯಲೆಂದು ಉತ್ತಮ ನೆಂಬುವ ಗರ್ವವ ನೀಗಿ ಸ್ತುತಿಸಿದ ಶ್ವಾಸನ ಶೇಷನು ಎಂದು ಇತ್ತರು ಮೂರಲಿ ಶೇಷನ ನಾಮ 6 ವೆಂಕಟ ಗಿರಿಯಿದು ಕಲಿಯುಗದಲ್ಲಿ ಸಂಕಟ ನೀಗಿದ ಮಾಧವನಿಲ್ಲಿ ಸಂಕಟ ನೀಡುವ ಪಾಪಗಳನ್ನು ಶಂಕರ ಹರಿತಾ ಕಡಿಯುವನೆಂದು ವೆಂಕಟ ನೆನಿಸುತ ಮೆರೆಯುವ ನಿಲ್ಲಿ ಶಂಕೆಯ ಮಾಡದೆ ಶರಣೆಂದಲ್ಲಿ ಪಂಕಜ ನೇತ್ರನು ಪೊರೆಯುವನಿಲ್ಲಿ ಮಂಕುಗಳಾಗದೆ ಭಜಿಸಿರಿ ಬೇಗ 7 ಇಂದಿರೆ ಕೆರಳೆ ತಂದೆಯು ತೊರೆದನೆ ನಿಜ ವೈಕುಂಠ ಪೊಂದಿಹ ಹುತ್ತವ ಏನಿದು ಛಂದ ಕಂದನು ನಾನಿಹೆಎನ್ನುತ ಬೊಮ್ಮ ತಂದೆಗೆ ಕ್ಷೀರವ ಕರೆಯಲುನಿತ್ಯ ಛಂದದ ಗೋತನು ಧರಿಸುತ ಶಿವನ ಕಂದನ ಗೈಯುತ ಮಾತೆಯ ಸಹಿತ ಬಂದನು ಚೋಳನ ಅರಮನೆಯೆಡೆಗೆ 8 ಕೊಳ್ಳಲು ರಾಣಿಯು ಸೇರುತ ಗೋಷ್ಠಿ ನಲ್ಲಗೆ ಪ್ರತಿದಿನ ಕ್ಷೀರವ ಸುರಿಸೆ ಇಲ್ಲವೆ ಆಗಲು ರಾಣಿಗೆ ಹಾಲು ಗೊಲ್ಲನ ಶಿಕ್ಷಿಸಿ ಬೈಯಲು ಬಹಳ ಗೊಲ್ಲನು ಪತ್ತೆಯ ಹಚ್ಚುತ ಚರ್ಯೆ ಕೊಲ್ಲಲು ಗೋವನು ಕೊಡಲಿಯನೆತ್ತೆ ಬಲ್ಲಿದ ತಡೆಯಲು ಶಿರವನು ಒಡ್ಡೆ ನಿಲ್ಲದೆ ಗಗನದಿ ಚಿಮ್ಮಿತು ರಕ್ತ 9 ನೋಡುತ ಮಡಿಯಲು ಗೊಲ್ಲನು ಅಲ್ಲೆ ಓಡುತ ಗೋಗಣ ಹಟ್ಟಿಯ ಸೇರೆ ಜಾಡನು ಪಿಡಿಯುತ ಚೋಳನು ಬರಲು ಕೇಡಿಗ ನೃಪನೆ ಪಿಚಾಚಿಯು ಆಗೆನೆ ಬೇಡಲು ಕ್ಷಮೆಯನು ಬಹುಪರಿಹರಿಯ ನೀಡಿವಿಶಾಪವ ವೆಂಕಟ ಕರುಣಿ ಆಡಲು ತೊಡಗಿದ ಈ ವಿಧ ಮುಂದೆ 10 ಆದುದು ಆಯಿತು ಚೋಳನೆ ಕೇಳು ಭುಂಜಿಸು ಕರ್ಮ ಪದ್ಮಾವತಿ ಯೆಂಬಾಕೆಯ ಮುಂದೆ ಮೋದದಿ ಮುದುವೆಯ ನಾಗುವೆ ಆಗ ಭೂಧವ ಮಾವನು ನೀಡುತ ಮಕುಟ ಕವಿ ವಾರ ನಾಧರಿಸುವಾಗಿಲ್ಲದೆ ಬಾಧೆ ಪೊಂದುವಿ ಕಲಿಕೊನೆ ಪೂರ್ವಾವಸ್ಥೆ 11 ಪೇಳತ ಲೀಪರಿ ಚೋಳಗೆ ದೇವ ಲೀಲೆಯ ತೊರಲು ಘಾಯವ ಪಿಡಿದು ಕೇಳಲು ಔಷಧ ಗುರುವನು ಸ್ಮರಿಸಿ ಆಲಸ್ಯಗೈಯದೆ ಬಂದವ ನುಡಿಯೆ ಮೂಲಿಕೆ ಹುಡುಕುತ ಗಿರಿಯಲಿ ಅಲೆಯೆ ಶೈಲದ ಸ್ವಾಮಿ ವರಾಹನು ಸಿಗುತ ಕೇಳಲು ವೆಂಕಟ ಕಥೆ ವಿಸ್ತಾರ ಪೇಳಲು ತಬ್ಬಿದ ಕ್ರೋಡನ ಚತುರ 12 ಏನಿದು ಬಹು ವಿಪರೀತವು ಪೇಳಿ ಸತಿ ಬಿಟ್ಟಲೆಯುವುದೆಂತು ಪೂರ್ಣಾನಂದಗೆ ಗೊಲ್ಲನ ಪೆಟ್ಟೆ ಚಿನ್ಮಯ ನೆತ್ತರು ಚಿಮ್ಮುವದುಂಟೆ ಕ್ಷುಧೆ ತೃಷೆ ದೂರಗೆ ಹಾಲು ಅನ್ಯರು ವೈದ್ಯರೆ ಧನ್ವಂತ್ರೀಗೆ ಕಾಣನೆ ಔಷಧಿ ಪೂರ್ಣಪ್ರಜ್ಞ ತಾನಿರೆ ವೆಂಕಟ ತಿಳಿಯನೆ ಕ್ರೋಡ 13 ಲೀಲೆ ಇದೆಲ್ಲವು ಕೊಡುವದವಗೆ ಬೀಳಿಸಿ ಮೋಹದಿ ಕುಜನರ ತರಿವ ಪಾಲಿಪ ಸುಜನರ ಬೀರುತ ಜ್ಞಾನ ಲೀಲಾಮಯನವ ಸರಿಯೆಂತೆನ್ನಿ ಕೇಳಲು ಕ್ರೋಡನ ವಾಸಿಸೆ ಜಾಗ ಕೇಳುವರಾರೈ ನೀನಿರೆ ಯನ್ನ ಬೀಳುವರೆಲ್ಲರು ನಿನ್ನಡಿಭರದಿ ಧಾಳಿಯೆ ನನ್ನಯ ಪ್ರಭುತನವೆಂದ 14 ಮುಂದೆಯೆ ನೀನಿರು ನಾಹಿಂದಿರುವೆ ಬಂದವರೆಲ್ಲರು ನಿನಗೊಂದಿಸುತ ವಂದಿಸಲೆನ್ನದು ವಲಿಯುವೆನಾಗ ಮುಂದಿಹ ನಿನಗೇ ಮೊದಲಲಿ ಪೂಜೆ ಛಂದದಿ ಶಾಸನ ಹೀಗೇ ಬರದು ಮಂದಿರ ಕೆಡೆ ಕೊಡು ಎನ್ನಲು ನಗುತ ನಂದದಿ ನೀಡುತ ಹಾಗೆಯೆ ಎಲ್ಲ ಕಂದನ ಸೇವಿಸೆ ಬಕುಳೆಯ ಕೊಟ್ಟ 15 ತಗ್ಗಿರೆ ಸಾಧನ ವೆಗ್ಗಳಗೈವ ವೆಗ್ಗಳ ಸಾಧನೆ ತಗ್ಗಿಪ ದೈವ ಹಗ್ಗವು ಸರಿಇವ ನಿಚ್ಚೆಯು ಕೇಳಿ ಅಗ್ಗದ ಪ್ರಭುವರ ಇವತಾನಲ್ಲ ತಗ್ಗಿಸಿ ವಿಷಯ ಬಗ್ಗಿಸಿ ಮನವನು ಹಿಗ್ಗುತ ಭಜಿಸಲು ಚರಣ ಸರೋಜವ ತಗ್ಗದ ಸೌಖ್ಯವ ನೀಡುತ ಕಾವ ಮುಗ್ಗದೆ ಭವದಲಿ ಭಜಿಸಿರಿ ಬೇಗ 16 ಬಕುಳೆ ಯಶೋದೆಯು ಪೂರ್ವದಿ ಕೇಳಿ ರುಕ್ಮಿಣಿ ಮುದುವೆಯ ನೋಡದಲಾಕೆ ಉಕ್ಕಿದ ಮೋಹದಿ ಬಯಸಲು ನೋಡೆ ಭಕ್ತಳ ಬಯಕೆಯ ಸಿದ್ಧಿಸೆ ದೇವ ಬಕುಳೆಯ ಜನ್ಮದಿ ನಿಂದಿಹಳೆಂದು ಅಕ್ಕರೆಯಿಂದಲಿ ತಾ ಕರತಂದು ಚೊಕ್ಕಸುಕಂದನ ತೆರದಲಿ ನಿಂದ ಭಕ್ತಿಲಿ ಸೇವೆಯ ಗೈದಳು ಬಕುಳೆ 17 ನಾರಾಯಣ ಪುರ ನಾಮದ ನಗರಕೆ ದೊರೆಯೆನಿಸಿದ್ದನು ಆಕಾಶರಾಯ ಕೊರಗುತ ಬಹುದಿನ ಸುತರಿಲ್ಲೆಂದು ಧರಣಿಯ ಶೋಧಿಸೆ ಯಾಗಕ್ಕೆಂದು ದೊರಕಲು ಕಮಲವು ದೊಡ್ಡದು ಒಂದು ತೆರೆಯುತ ನೋಡಲು ಶಿಶು ತಾನೊಂದು ಬೀರುತ ಕಾಂತಿಯ ಕಾಣಿಸಲಂದು ದೊರಕಿತು ಕನ್ಯಾಮಣಿಯೆಂತೆಂದು 18 ಅರಮನೆ ಗಾ ಶಿಶು ಹರುಷದಿ ತಂದು ಸರಸಿಜಮುಖಿ ಪದ್ಮಾವತಿಯೆಂದು ಕರೆಯುತ ರಾಣಿಯು ಸಾಕುತ ಬಂದು ವರುಷಗಳುರುಳಲು ಕಾಲದಿ ಕನ್ಯೆ ಸಿರಿತೆರ ಲಕ್ಷಣ ಗಣದಿಂ ಬೆಳೆಯೆ ವರಿಸಲು ಈಕೆಯ ನರರಿಂದಾಗದು ಹರಿಯೇ ಸರಿವರವೆನ್ನುತ ಮನದಿ ಅರಸುತ ವರನಂ ಬಳಲಿದ ಧೊರೆಯು 19 ವೇದವತೀ ಈಕೆಯು ತ್ರೇತೆಯಲೆನ್ನಿ ಮಾಧವ ಮನತೆರ ತೆರಳುವ ಸೀತೆ ಮೋದದಿ ಸೇರಲ್ ಗಿರಿ ಕೈಲಾಸ ಖÉೀದಗಳುಣ್ಣುತ ಲಂಕೆಯಲಿದ್ದು ಸಾಧಿಸಿ ಖಳರವಿನಾಶವನಲ್ಲಿ ಮೇದಿನಿ ಸುತೆಯಳ ಸೇವಿಸಿ ಬಹಳ ಮೋದದಲಾಗಲಿಯಂದಳು ಸೀತೆ 20 ಶಕ್ರನು ಶಿಖಿಸಹ ಇದ್ದಹಾಗೆ ಲೋಕಕೆ ತೋರಲು ಸೀತೆಯ ರಾಮ ಚೊಕ್ಕ ಪರೀಕ್ಷೆಯ ನಡಿಸಲು ಶಿಖಿಯಲಿ ತಕ್ಕಣ ಬಂದರು ಸೀತೆಯರಿಬ್ಬರು ಅಕ್ಕರೆಯಿಂದಲಿ ನುಡಿಯುತ ಕಥೆಯು ಸಕ್ಕದಿ ನಿಂತಿಹ ಈಕೆಯ ನೀನು ಈಕ್ಷಿಸಿ ಪಿಡಿಕೈಯೆನ್ನಲು ಸೀತೆ ರಕ್ಕಸ ವೈರಿಯು ಮಡದಿಗೆ ನುಡಿದ 21 ಒಂದೇ ಬಾಣವು ಒಂದೇ ವಚನವು ಒಂದೇ ನಡತೆಯು ಒಬ್ಬಳುಮಡದಿ ಇಂದೆನಗೆಂಬುದು ತಿಳಿಯದೆ ನಿನಗೆ ಛಂದದಿ ಕಲಿಯಲಿ ನಡಿಸುವೆ ಬಯಕೆ ಇಂದ್ರನು ಅಗ್ನಿಯ ಪುಟ್ಟಲಿ ವಡಲಲಿ ಇಂದಿನ ಯುಗದಲಿಯನ್ನಲು ರಾಮ ವಂದಿಸಿ ನಡೆದರು ಎಲ್ಲರು ಆಗ ಹಿಂದಿನ ವರತೆರ ಬಂದಿಹಳೀಗ 22 ಭೂಸುರ ಪೊಟ್ಟಿಲಿ ಪುಟ್ಟುತ ಹಿಂದೆ ಶ್ರೀಶನ ಮಡದಿಯ ತಪದಿಂ ಮೆಚ್ಚಿಸಿ ಭಾಷೆಯ ಪಡದಿರೆ ಸವತಿಯ ಪಟ್ಟಕೆ ಘಾಸಿಯ ನೀಡುತ ರಾವಣ ಬಂದು ಆಶಿಸಿ ಸಂಗವ ದುಡುಕುತ ನುಡಿಯೆ ರೋಷದಿ ಶಾಪವ ನೀಡಿದಳೀಕೆ ನಾಶಕೆ ಕಾರಣಳಾಗುವೆ ನಾನೆ ಭ್ರಷ್ಟನೆಯೆನ್ನುತ ಶಿಖಿ ಸೇರಿದಳು 23 ಲಕ್ಷ್ಮೀ ವಿಭೂತಿಯೆ ಇವಳೆಂತೆನ್ನಿ ಲಕ್ಷಣ ನಿಭಿಡಿತಳಾಗಿಹ ಕನ್ಯೆ ಕುಕ್ಷಿಯು ತೆಳ್ಳಗೆ ಸಿಂಹಸುಮಧ್ಯಮೆ ಪಂಕಜ ನೇತ್ರೆಯು ಪಂಕಜವದನೆಯು ಪಂಕಜ ಗಂಧಿ ಭುಜಂಗ ಸುವೇಣಿ ಶಂಕರ ನಗೆನುಡಿ ಗುರುಲಾವಣ್ಯ ಶಂಖ ಸುಪದ್ಮಾರೇಖೆಗಳಿಂದ ಲಂಕೃತ ಅಂಗೈ ಪಾದಗಳ್ಹಾಗೆ 24 ಕಾಮನ ಬಿಲ್ಲನು ಹಳಿಯುವ ಹುಬ್ಬು ಸೋಮನ ಮೀರಿಪ ಯುಗಯುಗ ಕಾಂತಿ ಸಾಮಜಗಮನೆ ರಂಭೋರುಗಳು ಕೋಮಲ ಚಂಪಕ ನಾಶಿಕ ತುಟಿಗಳು ಕಾಮದ ಪೀವರ ಕುಚಯುಗಹಾಗೆ ಸು ನೇಮದಿ ಬೆಳದಿಹ ಪಲ್ಗಳ ರಾಜಿ ವಾಮನಿತಂಬಜಘನದ್ವಯವ ಭಾಮೆ ಸಫಾಲದಿ ಮೆರೆದಳು ತಾನು 25 ಈಕೆಯು ಕಮಲೆಯ ತೆರೆದಿಂ ಬೆಳೆದು ಸಾಕಲು ಕರೆದಳು ಕನಕಸುವೃಷ್ಟಿ ಕಾಕನು ಕಾಣದೆ ರಾಜನು ಮೆರೆದ ನಾಕವೆ ಎನಿಸಿತು ರಾಜನಮನೆಯು ಜೋಕೆಯಲೊಂದಿನ ಸಖಿಯರ ಕೂಡಿ ಈಕ್ಷಿಸೆ ಪುರವುದ್ಯಾನವ ಕುವರಿ ಸೌಖ್ಯದಿ ತೆರಳುತೆಯಿರುತಿರುವಲ್ಲಿ ನಾಕದ ನಾರದ ವದಗಿದನಲ್ಲಿ 26 ಹರಿಕಾರ್ಯಾಂಗನು ಬಂದನು ಎನ್ನುತ ಗುರು ಸತ್ಕಾರಂಗಳಗೈದು-ಆ ತುರ ತೋರಲು ತಿಳಿಯೆ ಭವಿಷ್ಯ ಕರಗಳ ನೋಡುತ ತೂಗುತ ತಲೆಯು ಸಿರಿತೆರ ಲಕ್ಷಣ ಕಾಣುವೆನಮ್ಮ ಹರಿಯೇ ಸರಿ ವರಿಸಲ್ ನಿನ್ನ ಅರಸುತ ಬರುವನು ತಾನೆ ನಿನ್ನ ಬರಿ ಮಾತಲ್ಲವು ನೋಡೆಂತೆಂದ 27 ಪರಿ ಹೊರಡಲ್ ಮುನಿಯು ಲಾಲಿಸಿ ª
--------------
ಕೃಷ್ಣವಿಠಲದಾಸರು
ಶ್ರೀಮದನಂತನೀತಾ ಶ್ರೀಮದನಂತನೀತಾ | ಸೀಮರಹಿತಾ ಮಹಿಮನೀತಾ | ನಾಮ ನೆನೆಯೆ ಒಲಿದು ನಿಷ್ಕಾಮ ಫಲವ ನೀವಾನೀತ ಶ್ರೀಮದಾನಂತನೀತನು ಪ ಆದಿದೈವನೀತಾ ಜೀವಾದಿಗಳಿಗಭಯದಾನೀತಾ | ಶ್ರೀಧರಣಿ ದುರ್ಗಾರಮಣನಾದಾತನೊದಾನೀತಾ | ವೇದಪಾಲಕನೀತಾ ಸನಕಾದಿಗಳಿಗೆ ಪ್ರೀತಾನೀತಾ | ನಿತ್ಯ ಸಾಧುಗಳ ಕಾಯಿದನೀತಾ1 ಗಜವರದನೀತಾ ಗಂಗಜನ ಮನೋಭೀಷ್ಟನೀತಾ | ಗಜ ರಜಕ ಬಿಲ್ಲು ಮಲ್ಲರ ವ್ರಜನನಾಳಿದ ದಿಟ್ಟಿನೀತಾ | ತ್ರಿಜಗ ವಂದಿತಾನೀತಾ ಅಂಗಜನ ಪೆತ್ತ ಪ್ರೇಮನೀತಾ | ಪಂಕಜ ಬಾಂಧವನ ಭಾಸನೀತಾ2 ಕಪಟನಾಟಕನೀತಾ ಕರಡಿ ಕಪಿಗಳನಾಳಿದನೀತಾ | ಕಪಿಲಮುನಿಯಾಗಿ ತಾಯಿಗೆ ಉಪದೇಶವ ಪೇಳಿದನೀತಾ | ದ್ರುಪದಸುತೆಯ ಕಾಯದನೀತಾ ಸ್ವಪ್ನ ಸುಷುಪ್ತಿ ಜಾಗ್ರದಾವಸ್ಥೆಗೆ ಗುಪುತವ್ಯಾಪಕ ಗುಣನೀತಾ3 ಪರಮ ಪುರುಷನೀತಾ ದಶಶಿರನ ಕುಲವನಳಿದನೀತಾ | ಗಿರಿಯಲಿ ಧರಿಸಿ ಲೋಕವ ಪೊರೆವ ವಿಶ್ವಾಧಾರನೀತಾ | ಹರನ ವೈರಿಯ ಕೊಂದನೀತಾ | ನಿರುಪಮ ಮೂರುತಿನೀತಾ | ಸುರರಿಗೆ ಉಣಿಸಿದನೀತಾ | ತರಳ ಲೀಲೆಯ ತೋರಿದನೀತಾ4 ನಿತ್ಯ ಜಪತಪಾದಿಗೆ ನೇಮಪ್ರಕಾರ ಚೇಷ್ಟಕನೀತಾ | ಸಾಮ ಲೋಲ ವಿಜಯವಿಠ್ಠಲ ತಾಮರಸನಾಭನೀತಾ 5
--------------
ವಿಜಯದಾಸ
ಶ್ರೀರಾಮ ಎನ್ನಿರೊ ಮೂಜಗದವರೆಲ್ಲಈರೇಳು ಭುವನ ತನ್ನುದರದೊಳಿಟ್ಟನ ಪ ಅನಿಮಿಷರಂದದಿ ವನವಾಸಕೆ ಹೋದವನ _ ಶ್ರೀರಾಮ ಎನ್ನಿರೊಮನಸಿಜ ನಾರಿಯ ಪಿತನ ಕೊಂದನ ಪಿತನ ಪೊತ್ತವನ _ ಶ್ರೀರಾಮ ಎನ್ನಿರೊಘನ ಕೋಡ ಕೊನೆಯಿಂದ ಧರಣಿಯ ತಾಳ್ದವನ _ ಶ್ರೀರಾಮ ಎನ್ನಿರೊದಿನಕರನಳಿವಿನಲಿ ಪಗೆಯ ಗೆದ್ದಾತನ _ ಶ್ರೀರಾಮ ಎನ್ನಿರೊ1 ಗಜವನೇರಿದವನ ತಂದೆಯ ತಾಯನಳೆದವನ _ ಶ್ರೀರಾಮ ಎನ್ನಿರೊಭುಜಬಲದಿಂದ ಭೂಪಾಲರ ಗೆದ್ದವನ _ ಶ್ರೀರಾಮ ಎನ್ನಿರೊನಿಜಮುನಿಗಳ ವನದಿಂದ ತನಯರ ತಂದವನ _ ಶ್ರೀರಾಮ ಎನ್ನಿರೊಭುಜಗಧರನ ಕೈಯ ಆಯುಧವನು ತಂದವನ _ ಶ್ರೀರಾಮ ಎನ್ನಿರೊ 2 ವಾಸವ ಹೊಕ್ಕವನ _ ಶ್ರೀರಾಮ ಎನ್ನಿರೊತೃಣಕೆ ಬಾಯಿತ್ತನ ಮೇಲೇರಿ ಬಪ್ಪನ _ ಶ್ರೀರಾಮ ಎನ್ನಿರೊ ಅಣುರೇಣು ತೃಣದೊಳು ಪರಿಪೂರ್ಣನಾದನ _ ಶ್ರೀರಾಮ ಎನ್ನಿರೊಪ್ರಣವಗೋಚರ ಕಾಗಿನೆಲೆಯಾದಿಕೇಶವನ _ ಶ್ರೀರಾಮ ಎನ್ನಿರೊ 3
--------------
ಕನಕದಾಸ
ಶ್ರೀಲೋಲನೆ ಪರಿಪಾಲಿಪುದೆಮ್ಮನು ಕಾಲವಿಳಂಬಿಸದೇ ಪ. ಪೇಳಲೆಮಗೀ ನಾಲಿಗೆ ಸಾಲದು ಅ.ಪ ಅನಿಮಿಷರೂಪದಿಂದಾಗಮವನು ನೀನಜನಿಗೆ ತಂದಿತ್ತೆ ಪೂರ್ವದಿ ಘನ ಕಚ್ಛಪರೂಪದೊಳಾಗಿರಿಯನು ಬೆನ್ನೊಳಗಾಂತೇ ಅನಿಮಿಷರೊಡೆಯನ ಮನವನು ತಣಿಸಿದ ಫನಮಹಿಮನೆ ಶ್ರೀ ವನಜಜ ಜನಕನೆ ಶ್ರೀಲೋಲನೆ 1 ದುರುಳನ ಕರದಲಿ ಧರಣಿಯು ಸಿಲುಕುತ ಕರೆಕರೆಗೊಳ್ಳುತಿರೆ ವರಸೂಕರನಾಗುತ ದುರುಳನ ಛೇದಿಸಿ ಧರಣಿಯ ಕೈಪಿಡಿದೆ ಮತ್ತೆ ತರಳನ ಪೊರೆಯಲು ನರಕೇಸರಿ ರೂಪದಿ ಹಿರಣ್ಯಕನುದರದ ಕರುಳನು ಕಿತ್ತೆಸೆದೆÉೀ ಶ್ರೀಲೋಲನೆ 2 ಕಪಟತನದಲಿ ವಟುವಂದದಿ ಬಂದು ನೆಲವದಾನವ ಬೇಡಿ ಕಪಟವನರಿಯದೆ ದಾನವ ಕೊಟ್ಟನ ಪಾತಾಳಕೆ ಗುರಿ ಮಾಡಿ ಅಪರಿಮಿತಾನಂದದಿ ಮೆಚ್ಚಿ ಬಲೀಂದ್ರನ ಮನೆಬಾಗಿಲ ಕಾಯುವ ಗೊಲ್ಲ ನೀನೆನಿಸಿದೆ 3 ವರಮುನಿ ಜಮದಗ್ನಿಯ ರೇಣುಕಾಸುತ ಭಾರ್ಗವ ನೀನಾಗಿ ವರಪರಶುದರನೆಂದೆನ್ನಿಸಿ ಭೂಭುಜರನು ತರಿದಟ್ಟಿ ಧರಣೀಸುರರಿಗೆ ಸುರತರುವೆನಿಸಿದ 4 ಹರವಿರಂಚಿಯರ ವರಗಳ ಗರ್ವದೆ ದಶಶಿರದೈತ್ಯನು ಮೆರೆದು ಪರಿಪರಿ ವಿಧದಿಂ ಸುರಭೂಸುರರನು ಕರೆಕರೆಗೊಳಿಸುತಿರೆ ಧರಣಿಪ ದಶರಥ ತನುಭ ವರೆನ್ನಿಸಿ ನಿಶಿಚರ ಕುಲವನೇ ಸವರಿದ ರಾಘವ 5 ಅಷ್ಟಮದಂಗಳ ದಟ್ಟಣೆಯಿಂದತಿ ಅಟ್ಟಹಾಸದಿ ಮೆರೆದಾ ದುಷ್ಟ ಕಂಸನ ಮರ್ಧಿಸಿ ಧರಣಿಯ ಶಿಷ್ಟರ ಪಾಲಿಸಲು ವೃಷ್ಟಿವಂಶದಿ ಬಂದು ಕೃಷ್ಣನೆನಿಸಿ ತನ್ನ ಇಷ್ಟರಾದ ಪಾಂಡುಪುತ್ರರ ಸಲಹಿದ6 ಸಿದ್ದಿ ಸಂಕಲ್ಪದಿ ಬಲಭದ್ರನೆನ್ನಿಸಿ ಭವಬದ್ಧ ಜೀವಿಗಳಂ ಶುದ್ಧ ಮಾರ್ಗದಿ ಸಂಸ್ಕರಿಸಿ ಜಗವನು ಉದ್ಧರಿಸಲ್ಕಂಡು ಬುದ್ಧನೆಂದೊಳಿಸಿ ಮೆರೆದ ಸಂಕರ್ಷಣ ಭದ್ರಮಂಗಳ ಭವ್ಯಸ್ವರೂಪನೆ7 ಕಲಿಮಲದೋಷವ ತೊಳೆಯಲು ಪುನರಪಿ ಕಳೆಯೆ ನೀನೈತರುವೆ ಫಲತೆರದಲಿ ಭಕ್ತರ ಸಲಹಲು ಫಲರೂಪಗಳ ಕೈಕೊಳುವೆ ಹಲುಬುವ ಕಂದನ ಸಲಹೈ ಸಿರಿದೊರೆ 8
--------------
ನಂಜನಗೂಡು ತಿರುಮಲಾಂಬಾ
ಶ್ರೀಶ ಬ್ರಹ್ಮ ಸದಾಶಿವಾದಿ ಸುರಾರ್ಚಿತ ದಾಶರಥಿ ತವ ದಾಸರೊಳಗಿಟ್ಟು ನೀ ಸಲಹೊ ವಿಷಯಾಶೆಗಳ ಬಿಡಿಸಿ ಪ ಲೋಕನೀಯ ವಿಶೋಕ ಭಕ್ತರ ಶೋಕ ಮೋಹವ ನೀ ಕಳೆದು ಸುಖ ವೇ ಕರುಣಿಸು ಕೃಪಕಟಾಕ್ಷದಿ ಅಕೂತಿತನಯ ವಾಕುಮನ್ನಿಸನೇಕ ಮಹಿಮ ವಿ ವೇಕ ಬುದ್ದಿಯ ನೀ ಕೊಡೆನೆಗೆ ಪಿ ನಾಕಿಸುತ ಪರಲೋಕದಾಯಕ ಲೌಕಿಕವ ಬಿಡಿಸೊ1 ವೈರಿವರ್ಗಗಳಾರು ಇಂದ್ರಿಯ ದ್ವಾರದೊಳು ಪೊಕ್ಕು ಚಾರುಧರ್ಮದ ದಾರಿ ಮನಸಿಗೆ ತೋರ ಗೊಡದಲೆ ನಾರಿ ಧರಣಿ ಧನಾ ಹಾರಯಿಸುತಿದ್ದು ಘೋರಿಸುತಿವೆ ಮುರಾರಿ ತವಚರ ಣಾರವಿಂದವ ತೋರಿ ಮನದಿ ಸಂ ಸಾರ ಶರಧಿಯ ತಾರಿಸನುದಿನ2 ತರಣಿ ನವ ಪೋತ ಕಾಲವ ಭೀತಿ ಬಿಡಿಸು ಪುರು ಹೂತನ ಪ್ರಿಯ ಮಾತುಳಾಂತಕ ಮಾತುಗಳನೆ ಮನ್ನಿಸಿ ಶ್ವೇತವಾಹನ ಸೂತಸುಖಮಯ ವಾತಪಿತ ಜಗನ್ನಾಥವಿಠ್ಠಲ ಪಾತಕಾರಣ್ಯ ವೀತಿಹೋತ್ರ ನಾ ತುತಿಪೆನೆ ನಿನ್ನಾ 3
--------------
ಜಗನ್ನಾಥದಾಸರು
ಶ್ರೀಶ ಮುಕುಂದಾ ಜಗದಾನಂದಾ ಪ ಸುರಮುನಿ ಬೃಂದಾ ನಾದಾನಂದಾ ಅ.ಪ ನೀರಜನೇತ್ರಾ | ಸುರನುತಿಪಾತ್ರಾ ದಾನವವೇತ್ರಾ | ನೀರದಗಾತ್ರಾ ತ್ರಿಭುವನಸೂತ್ರಾ | ಪುಣ್ಯಚರಿತ್ರಾ ಧರಣಿಕಳತ್ರಾ ಶ್ರೀಗೋತ್ರಾ ಜಯಾ 1 ಮನಿಜನಪ್ರೇಮ ಅಗಣಿತನಾಮ ದಾನವ ಭೀಮಾ ಶ್ರೀ ರಘುರಾಮಾ ಕುವಲಯಶ್ಯಾಮ ಜಗದಭಿರಾಮ ಮಾಂಗಿರಿಧಾಮಾ ಶ್ರೀರಾಮ ಜಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀಶ್ರೀಪ್ರಾಣೇಶದಾಸರಾಯರ ಸ್ತೋತ್ರ ದಾಸರಾಯರ ದಿವ್ಯ ಚರಣ ಭಜಿಸಿ ಶ್ರೀ ಪ್ರಾಣೇಶದಾಸಾರ್ಯ ಗುರುವರ್ಯಾ ಪ ಪಾದ ಭಜಿಪ ಸದ್ಭಕ್ತರ ಏಸುಜನುಮದ ಪಾಪರಾಶಿ ಪರಿಹರವು ಲೇಶ ಸಂಶಯವಿಲ್ಲ ಆಲಸವು ಸಲ್ಲ 1 ಮರುತಮತ ತತ್ವದ ತೆರೆಗಳಿಂ ಸೂಸುತ ಧರಣಿಸುರರಿಗೆ ರಾಮನಾಮಾಮೃತ ನಿರುತಭಜಿಸಲು ಙÁ್ಞನವೈರಾಗ್ಯ ತರುಮಣಿಯ ಹರಿಭಕುತಿ ಧೇನುವನ್ನೀವÀ ಪಾಲ್ಗಡಲೆನಿಪ 2 ಸುಜ್ಞಾನವೆಂಬಂಥ ಕಿರಣಗಳ ಪಸರಿಸುವ ಅಜ್ಞಾನತಿಮಿರವನು ದೂರೋಡಿಪ ಸೂಜ್ಞರೆಂಬುವ ತಾವರೆಗಳರಳಿಸುವಂಥ ಅಜ್ಞಕುಮುದುಗಳ ಬಾಡಿಸುವ ಭಾಸ್ಕರನೆನಿಪ 3 ನಮಿಪಜನ ಭವತಾಪಕಳೆದು ಸದ್ಭಕ್ತಿಯಂ - ಬಮಿತ ಅಹ್ಲಾದವನು ಬೀರುವಂಥ ಶಮದಮಾದಿಗಳ ಚಂದ್ರಿಕೆಯಿಂದ ಶೋಭಿಸುವ ವಿಮಲ ಹರಿಜನ ಚಕೋರಕೆ ಚಂದ್ರನೆಂದೆನಿಪ 4 ದಾಸಕುಲತಿಲಕ ಪ್ರಾಣೇಶರಾಯನ ಕವನ ಶ್ರೀಶಕಥೆಗಳ ರಾಶಿಮೀಸಲಾಗಿರಲು ಆ ಸುಭಕ್ತರಿಗೆ ಸಂತೋಷಗೊಳಿಸುಲು ಸರ್ವ ದೇಶದಲಿ ಮೆರೆಸಿ ಸತ್ಕೀರ್ತಿಯನು ಪಡೆದಂಥ5 ಈ ಗುರುಗಳ ಪಾದಕೆರಗಿದ್ದ ಶಿರಧನ್ಯ ಈ ಗುರುಗಳೀಕ್ಷಿಸಿದ ನೇತ್ರ ಧನ್ಯ ಈ ಗುರುಗಳ ವಾಣಿ ಕೇಳಿದ್ದ ಕಿವಿ ಧನ್ಯ ಈ ಗುರುಗಳನು ಮನದಿ ನೆನೆವÀನರ ಧನ್ಯ 6 ರಾಗದ್ವೇಷಾದಿಗಳ ಗೆದ್ದು ಸದ್ಭಕ್ತಿಯಿಂ ಶ್ರೀಗುರುಪ್ರಾಣೇಶ ಭಜಕರೆನಿಪ ನಾಗಪರಿಯಂತ ವರದೇಶ ವಿಠಲನ ಪ್ರೀಯ ಪಾದ ಭೃಂಗ 7
--------------
ವರದೇಶವಿಠಲ
ಸಚ್ಚಿದಾನಂದಾತ್ಮ ಪರಿಪಾಹಿ ಪಾಹಿ ಪರಮಾತ್ಮ ಪ ಸಚ್ಚಿದಾನಂದಾತ್ಮ ಮುಕುಂದ ಅಚ್ಯುತಾನಂತ ಗೋವಿಂದ ಆನಂದಾ ಅ.ಪ ಜನರುದ್ಧಾರ ನೀರಜಾಂಡ- ಚರ ಬಾಹಿರಾಂತರ ನಿರುತ ಚರಾಚರದೊಳಗೆ ಸಂಚಾರಾ ಗಂಭೀರ ಗಂಭೀರ ಗಂಭೀರ ವಾರಿವಿಹಾರ ಮಂದರೋದ್ಧಾರಾ ಧರಣಿಸೂಕರ ನರಮೃಗಾಕಾರ ಯಾಚಕ ಧೀರ ನರಪರ ಶಿರತರಿದೆತ್ತಿ ಬಿಲ್ಲನು ದಶಕತ್ತನು ಕ್ಷಣದೊಳು ಕ- ತ್ತರಿಸಿ ತುರುಗಳ ಕಾಯ್ದ ಬತ್ತಲೆ ನಿಂದ ತೊರೆಯುತ ಬಂದ ಗೋವಿಂದಾ ಈ ಭೂ- ಧರದೊಳು ನಲವಿಂದ ಕ್ರೀಡಿಪ ಪರಿಪರಿಯಿಂದ ಸುರಮುನಿಗಣ ಸಂಸ್ತುತಿಯಿಂದ ಗೋವಿಂದ ಗೋವಿಂದ 1 ಕಾಂತಾ ಕಾಂತಾ ಕಾಂತಾ ಕಾಂತಾ ಜಗದಾ- ದ್ಯಂತ ನಿರುತ ನಿಶ್ಚಿಂತ ಗುಣಗಣಭರಿತ ಸಂತತ ನಿನ್ನ ವಾಕ್ ತಂತಿನಾಮ ಧಾಮದಿ ಈ ಜಗ ಬಂಧಿಸಿಹುದು ಆದ್ಯಂತ ಶ್ರೀಕಾಂತ ಶ್ರೀಕಾಂತ ಶ್ರೀಕಾಂತ ಶ್ರೀಕಾಂತ ಶ್ರೀಕಾಂತಾ ಶ್ರೀಕರಾರ್ಚಿತತ್ರಿಗುಣವರ್ಜಿತ ಅನುಪಮಚರಿತ ಆದ್ಯಂತರಹಿತ ಸ್ವರಸಸುಭೋಕ್ತ ಸ್ವಗತಭೇದವಿವರ್ಜಿತ ಅಚ್ಯುತ ಮಚ್ಛಕಚ್ಛಪಾದ್ಯಜಿತಾದಿರೂಪನಿ- ನ್ನಿಚ್ಚೆಯಂತೆ ಸಿರಿಮೆಚ್ಚಿಸಿ ನಿನ್ನ ವಿಚಿತ್ರಕರ್ಮಗಳ ನಿಚ್ಚದಿ ನೋಡಿ ನಲವಿಂದ ಈ ಸೃಷ್ಟಿಲೀಲೆ- ಯ ಚಂದಾ ಚತುಷ್ಟಾತು ನಿನ್ನಯ ದಯದಿಂದ ಈ ಜಗಬಂಧಕ ಶಕುತಿ ನಿನ್ನಿಂದ ಗೋವಿಂದ 2 ದೇವ ದೇವ ದೇವ ದೇವಾದಿವಿಜಯವಂದ್ಯಸ್ವಭಾವ ದೇವ ನಿಜಸದ್ಭಾವ ಭಜಕರ ಕಾವ ಅಭಯವ- ನೀವ ವಿಶ್ವಾದಿ ರೂಪದಿಂದ ಜೀವರ ಭೋ- ಗಾವಸ್ಥಾತ್ರಯದಲಿ ನಡೆಸುತ್ತಿರುವ ಭೂ ದೇವ ಶ್ರೀ- ದೇವ ಭೂದೇವ ದುರ್ಗಾಧವ-ದುರ್ಗಾಧವಾ ನೀವ್ಯಾಪ್ತನು ಸರ್ವ-ತತುವರ ಕ್ರಿ- ಯವಾ ಪ್ರೇರಿಸಿ ನಡೆವ ದೇವ ವ್ಯಾಪಾ ರವ ಮಾಡಿ ಮಾಡಿಸಿ ಎತ್ತಲು ಚೇತನಚಿ- ತ್ತವಿತ್ತು ಪ್ರವೃತ್ತಿಗೈಸಿ ಫಲವಿತ್ತು ಜನು- ಮವ ಸುತ್ತಿಸುತ್ತಿಸಿತಂದಿತ್ತಪೆ ಶ್ರೀಪುರುಷೋತ್ತಮ ನೀನಿರ್ಲಿಪ್ತ ನೀನಂಚಿತ್ಯ ಅನಂತ ಶ್ರೀ ವೇಂಕಟೇಶ ನಿನ್ನಂಥ ಪೊರೆವರಕಾಣೆ ಉನ್ನಂತ ಉರಗಾದ್ರಿವಾಸವಿಠಲ ಶಾಂತ ಮಹಂತ3
--------------
ಉರಗಾದ್ರಿವಾಸವಿಠಲದಾಸರು