ಒಟ್ಟು 359 ಕಡೆಗಳಲ್ಲಿ , 77 ದಾಸರು , 323 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯಬೇಕೆನ್ನ ಗೋಪಾಲ ಬಂದು |ಪಾಯವನರಿಯೆನು ಭಕುತರ ಪಾಲಪಹಲವು ಜನ್ಮಗಳೆತ್ತಿ ಬಂದೆ-ಮಾಯಾ-|ಮಲವೆಂಬುದರಿಯದೆ ಭವದೊಳು ನೊಂದೆ ||ಬಲು ಭಯವಾಯಿತು ಮುಂದೆ-ನೀನು-|ಸುಲಭನೆಂದುಕೇಳಿಶರಣೆಂದೆ ತಂದೆ1ವಿತ್ತದೊಳಗೆ ಮನವಿಟ್ಟು-ನಿನ್ನ-|ಉತ್ತಮ ನಾಮದ ಸ್ಮರಣೆಯ ಬಿಟ್ಟು ||ಮತ್ತನಾದೆನು ಮತಿಗೆಟ್ಟು-ಇದ-|ಚಿತ್ತದಲಿ ತಿಳಿದಿ ಬಲು ದಯವಿಟ್ಟು 2ಜರುಗಿದ ಪಾಪಂಗಳೆಲ್ಲ-ಅನ್ಯ-|ನರರೇನ ಬಲ್ಲರು ಯಮಧರ್ಮ ಬಲ್ಲ ||ನರಕಕೆ ಒಳಗಾದೆನಲ್ಲ-ಸಿರಿ-|ವರನಾರಾಯಣ ಪುರಂದರವಿಠಲ 3
--------------
ಪುರಂದರದಾಸರು
ಕಾಯಲಾರೆನು ಕೃಷ್ಣಕಂಡವರ ಬಾಗಿಲನು |ನಾಯಿ ಕುನ್ನಿಗಳಂತೆ ಪರರ ಪೀಡಿಸುತೆ ಪಉದಯಕಾಲದಲೆದ್ದು ಸಂಧ್ಯಾವಿಧಿಯ ಬಿಟ್ಟು |ಪದುಮನಾಭನ ಪಾದಸ್ಮರಣೆ ಮೊದಲಿಲ್ಲದೆ ||ಮುದದಿ ನಿನ್ನರ್ಚಿಸದೆ ನರರ ಸದವನ ಪೊಕ್ಕು |ಒದಗಿ ಸೇವೆಯ ಮಾಡಿಅವರಬಾಗಿಲನು1ಕಲ್ಲಕರಗಿಸಬಹುದು ಹುರಿಗಡಲೆಯನು ಅರೆದು |ತೈಲವನು ತೆಗೆದಾದರುಣಲು ಬಹುದು ||ಬಲ್ಲಿದವರಾ ಮನಸು ಮೆಚ್ಚಿಸಲರಿಯೆನೈ |ಹಲ್ಲು ಕಿರಿಯುತಲಿ ಹಂಬಲಿಸಿ ಬಾಯ್ಬಿಡುತ 2ಇಂತು ನಾನಾ ಚಿಂತೆಯಲಿ ನಿನ್ನ ನೆನೆಯದೆ |ಭ್ರಾಂತಿಯೆಂತೆಂಬ ಹೆಬ್ಬಲೆಯೊಳು ಸಿಲುಕಿ |ಅಂತ್ಯವ ನಾ ಕಾಣೆ ಆದರಿಸುವರಿಲ್ಲ |ಚಿಂತೆಯ ಬಿಡಿಸಯ್ಯಪುರಂದರವಿಠಲ3
--------------
ಪುರಂದರದಾಸರು
ಕೂಡಿಕೊಂಡಾಡಲೊಲ್ಲರೊ-ರಂಗಯ್ಯ ನಿನ್ನ |ಕೂಡಿಕೊಂಡಾಡಲೊಲ್ಲರೊ ಪಕೇಡಿಗನಿವ ನಮ್ಮ ಕೆಲಸ ಕೆಡಿಪನೆಂದು ಅ.ಪತನ್ನ ತಾಯ ಒಡಹುಟ್ಟಿದಣ್ಣನ ಕೊಂದವನಿವ |ಅನ್ನಿಗರ ಬಿಡುವನೆ? ಎಂದೆಲ್ಲರು ಮಾತಾಡಿಕೊಂಡು 1ತರಳಪುಟ್ಟನೆಂದು ಕರೆದು ಸಲಹಿದರೆ |ಬೆರಳನೆಣಿಸಿ ಕೊಂದ ಕೊಲೆಗಾರನೆಂದು ನಿನ್ನ 2ಆವ ಕಾಯುತ ಹೋಗಿ ಹಾವಿನ ಮಡುವ ಧುಮುಕಿ |ಠಾವವಿಲ್ಲ ಮಾಡಿದ ಕೇವಲ ಹೀನನೆಂದು 3ಗೊಲ್ಲತಿಯರ ಮನೆ ಪೊಕ್ಕು ಪಾಲ್ಬೆಣ್ಣೆ ಮೊಸರುಗಳು |ನಿಲ್ಲದೆ ತಿಂಬುವನಿವ ಕಳ್ಳ ಕೃಷ್ಣನೆಂದು 4ಕರುಣಾಕರಸಿರಿಪುರಂದರವಿಠಲನೆ |ಧರೆಯ ನರರು ನಿನ್ನಚರಿಯಪರಿಯ ಕಂಡು5
--------------
ಪುರಂದರದಾಸರು
ಕೃಷ್ಣವೇಣಿ164ನಮೋ ನಮೋ ಕೃಷ್ಣವೇಣಿನಮೋ ನಮೋ ಕೃಷ್ಣವೇಣಿ ಕಲ್ಯಾಣಿ ಪ.ಈ ಜನ್ಮದಘವು ನಾನಾ ಜನ್ಮಕೃತದೋಷಆರ್ಜಿತವಾದ ಪಂಚ ಮಹಾಪಾಪವುತ್ರಿಜಗತ್ಪಾವನಿಯೆ ನಿನ್ನ ಕಂಡು ನಾ ಕಳೆದೆರಾಜಿಸುವ ದಿವ್ಯಗತಿಯೀಯೆ ಎನ್ನತಾಯೆ 1ವಿಪ್ರಮುನಿ ಸುರನರರು ಕನ್ಯಕ್ಕೆಗುರುಬರಲುಕ್ಷಿಪ್ರನೆರೆದರು ಉಭಯತೀರವಿಡಿದುಸುಪ್ರಾರ್ಥನೆಯ ಮಾಡಿ ಆನಂದದಿ ಹರಿಯನೆ ಪ್ರಸನ್ನೀಕರಿಸಿಕೊಳ್ಳುವರಮ್ಮ 2ನಿರ್ಮಳಾತ್ಮಕÉ ಗಂಗೆ ಸಂಗೆ ಗುಣೋತ್ತುಂಗೆಹಿಂಗಿಸು ಭವವ ಪಾವನತರಂಗೆಜಂಗಮ ಜಡಾತ್ಮರನುದ್ಧರಿಸುತಿಹೆ ಸದಾಮಂಗಳ ಶ್ರೀಪ್ರಸನ್ವೆಂಕಟನೊಲುಮೆಯಲ್ಲಿ 3
--------------
ಪ್ರಸನ್ನವೆಂಕಟದಾಸರು
ಕೊಡುವಕರ್ತ ಬೇರೆ ಇರುತಿರೆ -<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬಿಡುಬಿಡು ಚಿಂತೆಯನು ಪ.ಒಡೆಯನಾಗಿ ಮೂಜಗವನು ಪಾಲಿಪ |ಬಡವರಾಧಾರಿಯು ಭಕ್ತರ ಪ್ರಿಯನು ಅಪಕಲ್ಲಿನೊಳಗೆ ಇರುವ - ಕಪ್ಪೆಗೆ - |ಅಲ್ಲೆ ಉದಕಕೊಡುವ |ಎಲ್ಲ ಕೋಟಿ ಜೀವರಾಶಿಗಳನೆ ಕಾಯ್ವ |ವಲ್ಲಭಶ್ರೀಹರಿ ಎಲ್ಲಿಯು ಇರುತಿರೆ|1||ಆನೆಗೈದುಮಣದಾ - ಆಹಾರವ |ತಾನೆ ತಂದು ಕೊಡುವ |ದೀನರೊಡೆಯ ಶ್ರೀನಿವಾಸ ದಯಾನಿಧಿ |ಮಾನದಿಂದಲಿ ಕಾಯ್ವ ಭಾನುಕೋಟಿತೇಜ2ಸರಸಿಜಾಕ್ಷ ತನ್ನ - ಸೇರಿದ |ನರರನು ಬಿಡನಣ್ಣ |ಪರಮದಯಾನಿಧಿ ಭಕುತರ ಸಲಹುವ |ಪುರಂದರವಿಠಲನು ಪುಷ್ಪಶರನ ಪಿತ 3
--------------
ಪುರಂದರದಾಸರು
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಗೌರೀವರಶಿವ ನಮೋ ನಮೋ | ಶಿವ |ಗೌರೀವರ ಶಿವ ನಮೋ ನಮೋ |ಈಶಪರಾತ್ಪರದೋಷನಿವಾರ |ಕಾಶೀಪುರವರವಾಸ ವಿಶ್ವೇಶ್ವರ 1ಕರಿಚರ್ಮಾಂಬರ ಕರುಣಾಕರ |ಸ್ಮರಿಸಲು ಸರ್ವರದುರಿತನಿವಾರ 2ಭಸ್ಮಾಲೇಪನ ಶಶಿಶೇಖರವೃಷಭವಾಹನ ಸ್ಮಶಾನ ಸಂಚಾರ 3ಸುರ ಗಂಗಾಧರ | ನರರುಂಡಮಾಲಾ |ಕರದಿ ತ್ರಿಶೂಲವು ಉರಗಕುಂಡಲ 4ಜಟಾಮಕುಟ ನೀಲಕಂಠೇಶ್ವರಾ |ಅಡವಿಯೊಳ್ಕೈರಾತನಟನ ಶಂಕರ 5ಷಣ್ಮುಖ ಭೈರವ ಭೃಂಗಿ ಪ್ರಮಥ |ಗಣನಾಥ ವೀರಭದ್ರ | ನಂದಿವಂ ದಿತ 6ಮಂದರಧರಗೋವಿಂದನ ಸಖನೆ |ವಂದಿಪೆದಾಸನ ಪಾಲಿಸು ಶಿವನೆ 7
--------------
ಗೋವಿಂದದಾಸ
ಜಾÕನವಂತರಿಗೆವಿಧಿ ಕಾಡುವುದು ಸತ್ಯ - ಅಜ್ಞಾನಿ ಮೂಢರಿಗೆಹರಿ ನಿನ್ನ ಬಲವಯ್ಯಪಹಿಂದೆ ಹರಿಶ್ಚಂದ್ರನ ಅರಣ್ಯವನೆ ಸೇರಿಸಿತುಮುಂದಾಗಿ ಕುಳಿತಿತ್ತು ಕರಿರಾಜಗೆ ||ಚೆಂದದಲಿ ಪಾಂಡವರ ಅರಣ್ಯ ಸೇರಿಸಿತುಸುಂದರಿಯ ಸೀತೆಯನು ಲಂಕೆಯೊಳಗಿಟ್ಟಿತು 1ಚಂದ್ರಂಗೆವಿಧಿ ಕಾಡಿ ಸರ್ಪ ತಾ ನುಂಗಿತುಇಂದ್ರಂಗೆವಿಧಿ ಕಾಡಿ ಅಂಗ ಭಂಗವಾಯಿತು ||ಚಂದ್ರಶೇಖರನನ್ನು ಸುಡಗಾಡ ಸೇರಿಸಿತುಇಂದಿದನು ತಿಳಿದರೆ ನರರ ಪಾಡೇನು 2ವಿಧಿ ಕಾಡುವಾ ಕಾಲಕಿಲ್ಲದ್ದೆಲ್ಲವು ಬಂತುವಿಧಿ ಕಳವು ಸುಳ್ಳು ಹಾದರ ಕಲಿಸಿತು ||ವಿಧಿ ಬೇನೆ ಚಳಿಯುರಿಯ ರೋಗಂಗಳನೆತಂತುವಿಧಿಯ ಗೆದ್ದವ ನಮ್ಮಪುರಂದರ ವಿಠಲ3
--------------
ಪುರಂದರದಾಸರು
ಜಾಲಿಯ ಮರದಂತೆ - ದುರ್ಜನರೆಲ್ಲಜಾಲಿಯ ಮರದಂತೆ ಪ.ಬಿಸಿಲಲಿ ಬಳಲಿ ಬಂದವರಿಗೆ ನೆರಳಿಲ್ಲಹಸಿದು ಬಂದವರಿಗೆ ಹಣ್ಣಿಲ್ಲವೊಕುಸುಮವಾಸನೆಯಿಲ್ಲ ಕುಳ್ಳಿರಲು ಸ್ಥಳವಿಲ್ಲವಿಷಮರ ದುಸ್ಸಂಗ ಪಡೆದರೇನುಂಟು 1ಊರ ಹಂದಿಗೆ ಅಲಂಕಾರವ ಮಾಡಲುನಾರುವ ದುರ್ಗಂಧ ಬಿಡಬಲ್ಲುದೆಸಾರ ತತ್ತ್ವಜಾÕನ ಪಾಪಿಗೆ ಹೇಳಲುಕ್ರೂರಬುದ್ಧಿಯ ಬಿಟ್ಟು ಸಜ್ಜನವಪ್ಪಗೆ ? 2ತನ್ನಿಂದ ಉಪಕಾರ ತೊಟಕಾದರೂ ಇಲ್ಲಬಿನ್ನಣ ಮಾತುಗಳು ಮೊದಲೆ ಇಲ್ಲಪನ್ನಗಶಯನ ಪುರಂದರವಿಠಲನಲ್ಲದೆಅನ್ಯದೈವಂಗಳ ಭಜಿಸದೆ ನರರು 3
--------------
ಪುರಂದರದಾಸರು
ತುದಿನಾಲಿಗೆ ಬೆಲ್ಲ ಎದೆಗತ್ತರಿಯವರ ಸಂಗಬೇಡಹೃದಯ ದಾಕ್ಷಿಣ್ಯವನರಿಯದ ಮನುಜರ ಪ್ರಸಂಗಬೇಡ ಪ.ಮುಂದೆ ಭಲಾ ಎಂದು ಹಿಂದಾಡಿಕೊಂಬರ ಸಂಗಬೇಡಕುಂದು - ನಿಂದೆಗಳ ಪ್ರಯೋಗ ಮಾಡುವರಪ್ರಸಂಗ ಬೇಡ 1ಆಡಿ ಅಳುಕದ ಅಜಾÕನಿ ಮನುಜರ ಸಂಗಬೇಡಕೂಡಿ ಕುಮಂತ್ರವ ಎಣಿಸುವ ನರರ ಪ್ರಸಂಗ ಬೇಡ 2ವಿನಯ - ವಿವೇಕವಿಲ್ಲದ ವಿದ್ವಾಂಸರ ಸಂಗಬೇಡತನಗಲ್ಲದಬಂಟ- ನಂಟ - ಮಿತ್ರಾಂಗಳ ಸಂಗಬೇಡ3ತಮ್ಮ ಕಾರ್ಯಕ್ಕಾಗಿ ಪರರ ಕೆಡಿಸುವರ ಸಂಗ ಬೇಡನಮ್ಮ ಪುರಂದರವಿಠಲನಿರಲನ್ಯ ಪ್ರಸಂಗ ಬೇಡ 4
--------------
ಪುರಂದರದಾಸರು
ದಾಸರ ನಿಂದಿಸಬೇಡಲೊ ಪ್ರಾಣಿ -ಹರಿ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ದಾಸರ ನಿಂದಿಸಬೇಡ ಪ.ಮೋಸವಾಯಿತೊ ಮನದೊಳು ಗಾಢ |ಲೇಸಾಗಿ ಇದ ತಿಳಕೊ ಮೂಢ ಅಪರಾಮನ ನಿಂದಿಸಿ ರಾವಣ ಕೆಟ್ಟ |ತಮ್ಮಗಾಯಿತು ಸ್ಥಿರಪಟ್ಟ ||ತಾಮಸದಿಂದಲಿ ಕೌರವ ಕೆಟ್ಟ |ಧರ್ಮಗೆ ರಾಜ್ಯವ ಬಿಟ್ಟ 1ಮನದೊಳಗಿನ ವಿಷಯದ ವಿಷ ಬಿಟ್ಟು |ಅನುದಿನ ಹರಿಯ ನೆನೆಯಿರಣ್ಣ ||ಸನಕಾದಿವಂದ್ಯನ ಪೂಜಿಸಿದರೆ ನೀವ್ |ಘನಪದವಿಯ ಕಾಣುವಿರಣ್ಣ2ಕನಕದಾಸನು ಕಬ್ಬಲಿಗನು ಎಂದು |ಅಣಕಿಸಿ ನುಡಿಬೇಡಿರಣ್ಣ |ಜನರಂತೆ ನರನಲ್ಲ ತುಂಬುರನೀತನು |ಜನಕಜೆರಮಣನ ಪಾದಸೇವಕನು 3ಉಡಿಯ ಒಳಗೆ ಕಿಡಿ ಬಿದ್ದರೆ ಅದು ತಾ |ಸುಡದನಕಾ ಬಿಡದಣ್ಣ ||ಬಡವನಾಗಿ ಕೆಡುಬುದ್ದಿಯ ಬಿಟ್ಟು |ನಡೆಯ ಕಂಡು ಪಡೆದುಕೊಳ್ಳಣ್ಣ 4ದೇವಕಿ ಸೆರೆಯನು ಬಿಡಿಸಿದ ದೇವನ |ಸೇವಕರು ನರರೆ ನಿಮಗವರು ||ಭಾವಜನಯ್ಯನ ಪದವ ನೆನೆದರೆ |ಪಾವನ ಮಾಡುವ ಪುರಂದರವಿಠಲ 5
--------------
ಪುರಂದರದಾಸರು
ನಗಲುಬಹುದು ನಗಲುಬಹುದುನಗು ನಗು ರಂಗಯ್ಯಜಗದ ಮಾತು ಅ‌ಘದ ಧಾತುಬಗೆಯನರಿತು ಮುಗಳುನಗೆಯ ಪ.ಒರೆದು ಒರೆದು ಭಾರತದರ್ಥಅರಿದುಅರಿದುವರಭಾಗವತಪರಿಯ ಪರಿಯ ಪುರಾಣಶ್ರ್ರುತಿಯಪಾರಾಯಣ ಮಾಡಿ ಕುರುಡಬಧಿರನರರ ತೆರದಿಅರಹುಮರಹುಬೆರೆತು ಬೆರೆತು ತರತಮಿಲ್ಲದೆಹರಿಹರಜರು ಬೇರೆಬೇರಿಲ್ಲೆಂಬಪರಮಪಾತಕರಿರವ ನೋಡಿ 1ಮಕ್ಕಳ ಮಡದೇರಕ್ಕರ ಬಡಿಸಿರೊಕ್ಕದ ಮದದಿ ಸೊಕ್ಕಿ ಸಜ್ಜನರಲೆಕ್ಕಿಸದವಗೆ ರಕ್ಕಸರಂತೆನಿಕ್ಕರ ನುಡಿದು ಕಕ್ಕಸದಿಂದಪುಕ್ಕಟೆ ಪುಣ್ಯದ ಲೆಕ್ಕವ ಕಳೆದುಘಕ್ಕನೆ ಜವನೋರಿಕ್ಕಿದ ಬಲೆಗೆಸಿಕ್ಕಿ ಬಳಲುತ ನರ್ಕವನುಂಬಮೂರ್ಖರ ತಾಮಸಮುಖ್ಯರ ನೋಡಿ 2ಸುಂದೋಪಸುಂದ ಜಲಂಧರ ಕೀಚಕಕಂದರದಶಕ ಸೈಂಧವ ಜಟಾದ್ಯರಂದು ಪರಸ್ತ್ರೀಯ ಸೌಂದರ್ಯಕ್ಕೆ ಮತಿಗುಂದಿ ಲಯವಾದರೆಂದುಕೇಳಿಇಂದುಮುಖಿಯರ ಚಂದಕೆ ಹುಚ್ಚಿಟ್ಟುಕಂದರ್ಪವಿಶಿಖವೃಂದ ವಶಾಗಿ ನೂರೊಂದುಕುಲ ಯಮಮಂದಿರ ಹೊಂದಿಪಮಂದರಮದೋನ್ಮತ್ತಾಂಧರ ನೋಡಿ3ಸುರರ ಸಂಪದ ಪರಮಪದಕೆಕಾರಣವಾಗಿರೆ ಸುರೇತರರೆಲ್ಲಇರುಳೆ ಹಗಲೆ ಸೈರಿಸಲಾರದೆಒರಗಿಹೋದ ವಿವರಕೇಳಿದುರುಳಕೌರವರ್ವರ ಪಾಂಡವರಸಿರಿತಮ್ಮದೆಂದ್ಹುರಿದು ಹೋಗಿರೆಪರರ ದ್ರವ್ಯಕ್ಕೆ ಮರುಗಿ ಬಯಸಿನರರು ಕೆಡುವ ಪರಿಯ ನೋಡಿ 4ಪ್ರತಿದಿನ ನಿನ್ನ ಪ್ರತಿಮ ಪೂಜೆ ಸದ್ವ್ರತವ ಮಾಡಿ ಸತ್ಕಥೆಯ ಶ್ರೀಮಧ್ವಮತ ಮಹಿಮೆಯನತಿಕ್ರಮಿಸಿ ಕುತ್ಸಿತವೆನಿಸುವ ಪಥದಲಿಪತಿತರಾಗಿ ಸದ್ಗತಿಯ ಕಾಣದಚತುರ ಪರಿಯ ಅಮಿತ ಭಕ್ಷಕರಸ್ಥಿತಿಯರಿತು ಮಾನಾಥ ಪ್ರಸನ್ವೆಂಕಟಪತಿಯೆ ನೀ ಮಂದಸ್ಮಿತದಲಿ 5
--------------
ಪ್ರಸನ್ನವೆಂಕಟದಾಸರು
ನಮೋ ನಮೋ ರಾಮ ಕಳುಹಿಸಿದನಮ್ಮಾ |ಮಮ ಸ್ವಾಮಿ ಬದುಕಿಹನೆ ಪೇಳೋ ತಮ್ಮ ಪವಾಸುದೇವನು ಜಗದ ಸೃಜಿಸುವನು ಕೆಡಿಸುವನು |ನಾಶವೆಲ್ಲಿಹದು ರಘುವರ್ಯಗಮ್ಮಾ ||ವಾಸವಾಗಿರೆ ವನದಿಮೃಗತರಲು ಪೋಗಿ ಜಗ- |ದೀಶ ನುಡಿದನು ಕಡೆಯ ಮಾತು ತಮ್ಮ 1ಖಳಮಾಯೆಯಲಿ ಬರಲು ರಾಘವನು ಸಂಹರಿಸೆ |ನೆಲಕುರುಳಿ ಕೂಗಿದನು ಅವನೇ ಅಮ್ಮಾ ||ಬಲುವಿಂದ ಲಕ್ಷ್ಮಣನ ಬೈದು ಅಟ್ಟಿದೆ ನಾನು |ಜಲಜಾಕ್ಷನೋರ್ವನಿಹನೇನೋ ತಮ್ಮ 2ಅನುಜಯುಕ್ತದಿ ದೇವ ಕಪಿದಂಡು ನೆರಹಿಹನು |ಹನುಮಂತ ನಾ ರಾಮದೂತನಮ್ಮಾ ||ಇನಿತು ಸತ್ಯವೊ ಅನೃತವೊ ನಂಬಿಗ್ಯಾಗದು |ಮನದ ಅನುಮಾನ ಬಿಡುವಂತೆ ಮಾಡೋ ತಮ್ಮ 3ಸಿರಿಕಾಂತ ಶ್ರೀಮಂತ ಕರುಣದಲಿ ಕೊಟ್ಟಿಹನು |ಗುರುತಿನುಂಗುರವನಿದು ನೋಡಿರಮ್ಮಾ ||ಪರಮಾತ್ಮನಿಗೆ ದೂತನಹುದುಶುಭವಾರ್ತೆಗಳೆ |ಇರುವನೆಲ್ಲೆದು ವಿಸ್ತರಿಸೆಲೊ ತಮ್ಮಾ 4ಕಾನನದೆ ಚರಿಸುತ ರವಿಸುತಗೊಲಿದು ಶುಕ್ರಜನ |ಹಾನಿ ಮಾಡಿದನಲ್ಲೇ ಇರುವನಮ್ಮಾ ||ಜಾನಕಿಯೆಂದೆನ್ನನು ನಿತ್ಯದಲಿ ನೆನೆಸಿ |ಏನು ಮಾಡುವನೊ ಪೇಳುವದೋ ತಮ್ಮ 5ನಿನ್ನಗಲಿ ವ್ಯಾಕುಲದಿ ನರರಂತೆ ಕೇಶವನು |ಅನ್ನ ಉದಕವನೆಲ್ಲಾ ಜರಿದನಮ್ಮಾ ||ಪನ್ನಗಾರಿ ಧ್ವಜನು ದನುಜರ ಗೆಲಿದು |ಯನ್ನ ಕೂಡುವದು ನಾ ಕಾಣೆ ತಮ್ಮ 6ತಾಯೆ ರಾವಣನಳಿದು ನಾನೊಯ್ವೆ ನಿನ್ನೀಗ |ನೋಯಿಸದೆ ಹರಿಗೀಡು ಆವನಮ್ಮಾ ||ನಾಯಕನು ನೀಂ ಭೃತ್ಯರೊಳು ತ್ವರಿತ ಬಹುದೆಂದು |ಕಾಯಜಪಿತನಿಗೆ ಬಿನ್ನೈಸೊ ತಮ್ಮ 7ಪೋಗಿ ಬರುವೆನು ನಿಮ್ಮ ಗುರುತು ಏನಿದೆ ಕೊಟ್ಟು |ಬೇಗನಪ್ಪಣೆಯೆನಗೆ ಈವದಮ್ಮಾ ||ನಾಗಶಯನಗೆ ರಾಗಟೆಯನಿತ್ತು ಪದಕೆ ತಲೆ |ಬಾಗಿರುವಳೇಳದಲೆಯೆನ್ನೋ ತಮ್ಮ 8ನಳಿನಮುಖಿಯೆ ನಮೋ ನಮೋ ದಯೆಯಿರಲಿ ಸ್ವಲ್ಪ ದಿನ |ದೊಳಗೆ ಬರುವೆವು ಚಿಂತೆ ಬೇಡವಮ್ಮ ||ಭಳಿ ಭಳಿರೆ ಪ್ರಾಣೇಶ ವಿಠ್ಠಲನ ಪೂರ್ಣ ದಯೆ |ಗಳಿಸಿ ಅಜಪಟ್ಟವನು ಆಳೋ ತಮ್ಮ 9
--------------
ಪ್ರಾಣೇಶದಾಸರು
ನರರ ಪಾಡಲು ಬೇಡ ನಾಯಿ ಮನವೆಮುರಹರನ ಭಕುತಿನೆಲೆ ಹೊಂದು ಮನವೆ ಪ.ದಾರಿದ್ರ್ಯ ವ್ಯಸನದೊಳು ಮುಳುಗಿ ನರಧನಿಕರನುಆರಾಧನೆಯ ಮಾಡಿ ಬರಿದೆ ಕೆಡುವೆಘೋರನರಕದ ಭಯಗಳನು ನೋಡೈ ತಿಳಿದುನಾರಸಿಂಹನ ನಂಬು ದೃಢದಿ ಮನವೆ 1ಬಲ್ಲಿದರ ಬಳಿವಿಡಿದು ಪೋಗಿ ಭ್ರಮೆಗೊಳ್ಳದಿರುಭುಲ್ಲೈಸಿ ಬಳಲಿಮೃಗತೃಷೆಯಂದದಿಫುಲ್ಲಲೋಚನ ಹರಿಯ ದಾಸರನು ಅನುಸರಿಸಿಸೊಲ್ಲುಸೊಲ್ಲಿಗೆ ಸುಧೆಯ ಸವಿದುಣ್ಣು ಮನವೆ2ಮದದಿ ಮತ್ಸರದಿ ಪ್ರಜ್ವಲಿಸುತಿಹ ದೇಹದಲಿಕುದಿಯದಿರುತ್ರಿವಿಧತಾಪದಲಿ ಉಕ್ಕಿಹದಿನಾಲ್ಕು ಭುವನದೊಡೆಯನ ನಂಬಿದರೆ ನಿನಗೆಪದವಿತ್ತು ಪೊರೆಯನೆ ಪೇಳು ಮನವೆ 3ಮಂದಮತಿಯಾಗಿ ಬಹುವಿಷಯ ಭ್ರಾಂತಿಯಲಿ ಮದಾಂಧರನೋಲೈಸಿ ಕೃಶವಾದರೆಮುಂದುಗಾಣದೆ ಖಳರು ನೋಯಿಸಿ ನುಡಿದರೆಕಂದಿ ಕುಂದಿ ಬಳಲುವೆಯಲಾ ಮರುಳು ಮನವೆ 4ಮುನ್ನಸಂಚಿತಸುಕೃತವೆಂತುಟೊ ತಂದೆ ಪ್ರಸನ್ನವೆಂಕಟಪತಿಯ ಒಲುಮ್ಯಾಯಿತುಇನ್ನಾದರೆಚ್ಚರಿತು ವಿವಿಧ ಭಕುತಿಯ ಗಳಿಸಿಧನ್ಯ ನೀನೆನಿಸಿ ಸಾರ್ಥಕವಾಗು ಮನವೆ 5
--------------
ಪ್ರಸನ್ನವೆಂಕಟದಾಸರು
ನರರ ವಂಚಿಸಿದನೆಂದೆಂಬ | ಪೌರುಷವೇಕೋ |ಹರಿಯ ವಂಚಿಸಲಸಾಧ್ಯವು | ನಿನಗೆ ಮರುಳೆ |ದುರುಳರೊಡನಾಟದಲಿ ದುಷ್ಟ ಕಾರ್ಯವಮಾಡು|ನರಕದಲಿ ಮುಳುಗಿಸುವ ಯಮನುನೋಡುಪಮೂಢ ಮತಿ ಕೇಳ್ ನರಗೆ ನೋಡಲೆರಡೇ ಕಣ್ಣು |ಗಾಢ ನಿದ್ರೆಯೊಳದನು ಮುಚ್ಚಿ ಮಲಗುವನೂ |ಗಾಢಾಂಧಕಾರದಲಿ | ಸೊಡರ ಹೊರತು ಕಾಣದದು |ರೂಢಿಯೊಳು ಸಹಸ್ರಾಕ್ಷ | ನನು ಮೋಸಗೊಳಿಸುವಾ |ಪಾಡೇನ ಬಲ್ಲೆ ಮರುಳೇ1ಎರಡೇಳು ಜಗವನ್ನು ಧರಿಸಿರುವ ಹೃದಯದಲಿ |ಗರುಡ ವಾಹನನಾಗಿ ಧರೆಯೊಳ್ ಚರಿಸುವನು |ತರಣಿಶಶಿನೇತ್ರನೆಂದೆನಿಸಿ ಸರ್ವವನೋಳ್ಪ |ಪರಮಾತ್ಮನಾಗಿ ಪ್ರಾಣಿಗಳ | ಹೃದಯದಲಿ |ಹರಿಯು ನೆಲೆಸಿರ್ಪ ಕೇಳು2ಇಂದೋರ್ವನನು ಮೋಸಗೊಳಿಸಿದಾ ದೋಷವಿದು |ಎಂದೆಂದಿಗೂ ನಿನ್ನ ಬೆನ್ನ ಬಿಡದೂ |ನಿಂದಿಗನು ನರಜನಕೆ ಗೋವಿಂದನಿಗೆ ದ್ರೋಹೀ |ಎಂದೆನಿಸಿ ಯಮನ ಹಂಗಿಗನಾಗಬೇಡ ನಾಳೆ3<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ