ಒಟ್ಟು 603 ಕಡೆಗಳಲ್ಲಿ , 86 ದಾಸರು , 478 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಭು ಪಾಂಡುರಂಗ ವಿಠಲ | ಅಭಯಪ್ರದಾತಾ ಪ ಇಭವರದ ನೀನಾಗಿ | ಪೊರೆಯ ಬೇಕಿವನಾ ಅ.ಪ. ಮರ್ಮಗಳ ನರಿಯದಲೆ | ಕರ್ಮೂನುಭವದೊಳಗೆಪೇರ್ಮೆಯಲಿ ಸಿಲ್ಕಿ ಬಲು | ನೊಂದಿಹನೊ ಬಹಳಾಧರ್ಮಕೃದ್ಧರ್ಮಿ ಹರಿ | ಧರ್ಮಸೂಕ್ಷ್ಮವ ತಿಳಿಸಿನಿರ್ಮಮನ ಮಾಡಿವನ | ಕರ್ಮನಾಮಕನೇ 1 ಮಧ್ವರಾಯರ ಕರುಣ | ಬದ್ಧ ನಿರುವನು ಈತಸಿದ್ದಾಂತ ತತ್ವಗಳು | ಬುದ್ದಿಗೇ ನಿಲುಕೀಅದ್ವಯನು ನೀನೆಂಬ | ಶುದ್ಧಬುದ್ಧಿಯನಿತ್ತುಉದ್ಧಾರಮಾಡೊ ಹರಿ | ಕೃದ್ಧಖಳಹಾರೀ 2 ನಾನು ನನ್ನದು ಎಂಬ | ಹೀನಮತಿಯನು ಕಳೆದುನೀನು ನೀನೇ ಎಂಬ | ಸುಜ್ಞಾನವಿತ್ತುದಾನವಾರಣ್ಯ ಕೃ | ಶಾನು ಶ್ರೀ ಹರಿಯೇಸಾನುರಾಗದಿ ಪೊರೆಯೊ | ದೀನವತ್ಸಲ್ಲಾ 3 ಹರಿ ನಾಮ ವೆಂತೆಂಬೊ | ವಜ್ರಕವಚವತೊಡಿಸಿದುರಿತಾಳಿ ಅಟ್ಟುಳಿಯ | ದೂರಗೈ ಹರಿಯೇಸರುವ ಕಾರ್ಯಗಳಲ್ಲಿ | ಹರಿಯು ಓತಪ್ರೋತನಿರುವ ನೆಂಬುದ ತಿಳಿಸಿ | ಪೊರೆಯ ಬೇಕಿವನಾ 4 ಪಾದನಾತ್ಮಕನೆನಸಿ | ಪಾವ ಮಾನಿಯ ಪ್ರೀಯಧೀವರನೆ ಶ್ರೀವರನೆ | ಕಾವ ಕರುಣಾಳುಗೋವುಗಳ ಕಾವ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಿಲ್ಲ | ದೇವ ದೇವೇಶಾ 5
--------------
ಗುರುಗೋವಿಂದವಿಠಲರು
ಪ್ರಸನ್ನ ಶ್ರೀ ಬುದ್ಧ ಜ್ಞಾನಸುಖ ಬಲಪೂರ್ಣ ಅನಘ ಲಕ್ಷ್ಮೀರಮಣ ಅನುಪಮಾದ್ಭುತ ಶಿಶುರೂಪ ನಿರವಧಿಕ ಅಮಿತ ಕಲ್ಯಾಣಗುಣಧಾಮ ಬುದ್ಧ ಶರಣು ಮಾಂಪಾಹಿ ಪ ಮಾಧವ ಗೋವಿಂದ ಶ್ರೀಶ ವಿಷ್ಣೋ ಮಧುಸೂಧನ ತ್ರಿವಿಕ್ರಮ ಈಶ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭ ದಾಮೋದರ1 ವಾಸುದೇವ ಪ್ರದ್ಯುಮ್ನ ನಮೋ ಅನಿರುದ್ಧ ಪುರುಷೋತ್ತಮ ಅಧೋಕ್ಷಜ ನರಸಿಂಹ ಅಚ್ಯುತ ಶ್ರೀಕರ ಜನಾರ್ಧನ ಉಪೇಂದ್ರ ಹರಿ ಕೃಷ್ಣ 2 ಈಜಿ ನಿಂತು ಪೊತ್ತು ಮಣ್ಣೆತ್ತಿ ಎಲ್ಲರನು ಅಂಜಿಸಿ ಬೇಡಿ ಸುತ್ತಾಡಿ ಕಡಲ್‍ದಾಟಿ ರಂಜಿಸಿ ಮೋಹಿಸಿ ಬೋಧಿಸಿದ ವಿಪ್ರಸುತ ತ್ರಿಜಗದೀಶನೇ ಶ್ರೀಶ ಶರಣು ಮಾಂಪಾಹಿ 3 ವಿಶ್ವ ವಿಷ್ಣು ವಷಟ್ಕಾರ ಈಶಾವಾಸ್ಯವು ಸರ್ವ ಈ ಹದಿನಾಲ್ಕು ಭುವನಂಗಳು ಶ್ರೀವರನೇ ನೀ ಪರಮ ಮುಖ್ಯ ನಿಯಾಮಕನು ಸರ್ವದಾ ಅಚಿತ್ ವಸ್ತುಗಳಿಗೆ 4 ಜೀವರುಗಳ ಸತ್ತಾ ಪ್ರವೃತ್ತಿ ಪ್ರತೀತಿಗಳು ಸರ್ವೇಶ್ವರ ನಿನ್ನ ಅಧೀನವು ಸ್ವಾಮಿ ಸರ್ವಪಾಲಕತ್ವ ಗುಣ ನಿನ್ನದೇ ಆದುದರಿಂದ ಸರ್ವಜೀವರುಗಳ ಸ್ವರೂಪ ರಕ್ಷಿಸುತಿ 5 ಜೀವನ ಸ್ವರೂಪಾನುಸಾರದಿ ಮೂರು ವಿಧವು ಸರ್ವ ಹರಿಭಕ್ತರು ಮುಕ್ತಿಸುಖ ಯೋಗ್ಯರು ಸರ್ವ ಹರಿದ್ವೇಷಿಗಳು ತಮೋ ದುಃಖ ಯೋಗ್ಯರು ಸರ್ವದಾ ಸುಖದುಃಖ ಮಿಶ್ರ ಸಂಸಾರಿಗಳು 6 ಬೇವಿನ ಬೀಜಕ್ಕೆ ಸಕ್ಕರೆ ಲೇಪಿಸಲು ಬೇವು ದ್ರಾಕ್ಷಿಗೆ ಸಮ ಆಗುವುದು ಇಲ್ಲ ಬೇವು ಬೀಜವ ಸಕ್ಕರೆ ಪಾತ್ರೆಯಲಿ ಕಂಡ ಯಾವನೂ ಸ್ವೀಕರಿಸ ಎತ್ತಿ ಎಸೆವ 7 ತ್ರಯೀಪುರ ಬೇವುಗಳು ಸತ್ಯಧರ್ಮ ಸಕ್ಕರೆ - ಯೋಳೂ ಪೊಕ್ಕು ದ್ರಾಕ್ಷಿಯಾ ಪೋಲು ಇರೆ ಕಂಡು ಶ್ರೀಪ ನಿನ್ನ ಪಾಲಸಾಗರತಟ ಬಂದು ಶಂಭು ಶಿವ ಶಕ್ರಾದಿಗಳು ಪ್ರಾರ್ಥಿಸಿದರು 8 ಅದ್ರಿ ಚಾಪವನಿತ್ತಿ ತ್ರಿಪುರವ ಸುಟ್ಟ ಸನ್ನುತ ಇವಗೆ ನೀ ಪ್ರಭಂಜನ ಸಹ ಸಹಾಯ ಮಾಡಿದಿಯೋ 9 ಅಂದು ಭಸ್ಮವು ಆದ ತ್ರಿಪುರ ದೈತ್ಯರುಗಳು ಬಂದು ಪುನರ್‍ಜನಿಸಿ ವೈದಿಕ ಸದ್ಧರ್ಮದಲ್ಲಿ ಮುಕ್ತಿ ಯೋಗ್ಯರು ತಿಳಿವ ಬ್ರಹ್ಮ ವಿದ್ಯೆಯ ಕಲಿಯೆ ಸುರರು ನಿನ್ನಲ್ಲಿ ಪೇಳಿದರು 10 ಕಲಿಯುಗದಿ ಈ ತಮೋಯೋಗ್ಯ ದೈತ್ಯರಿಗೆ ಬೆಳೆಯುವುದು ಮೋಹವು ದ್ವೇಷ ಪರಿಪಾಕ ಮಿಳಿತವಾಗಲಿ ಕೂಡದು ಮುಕ್ತಿ ಯೋಗ್ಯರ ಸಹ ಒಳ್ಳೇ ಮುತ್ತಿನ ಸರದೋಳ್ ಮುಳ್ಳ ಬೀಜಗಳೇ ? 11 ಆ ತ್ರಿಪುರ ದೈತ್ಯರ ಪ್ರಮುಖನೂ ತಮೋಯೋಗ್ಯ ಧಾತ್ರಿಯಲಿ ಸೌದ್ಧೋದನ ಜಿನನೆಂದು ಪರಿವಾರ ಸಹ ಜನಿಸಿ ಮುಕ್ತಿಯೋಗ್ಯರ ತೆರದಿ ಚರಿಸಿದರು ಸ್ವಸ್ವ ಯೋಗ್ಯತೆ ಅತಿಕ್ರಮಿಸಿ 12 ದೇವವೃಂದದ ಪ್ರಾರ್ಥನೆ ಅರಿಕೆಯನು ಕೇಳಿ ದೇವವರೇಣ್ಯ ನೀ ಅಭಯವನಿತ್ತಿ ದಿವ್ಯ ಶಿಶುರೂಪವ ಪ್ರಕಟಿಸಿ ಆಗಲೇ ತ್ವರಿತ ಪೋದೆಯೋ ಆ ಜಿನನ ಮಂದಿರಕೆ 13 ಆಗಲೇ ಜಿನನಿಗೆ ಮಗು ಒಂದು ಹುಟ್ಟಿತ್ತು ಪೋಗಿ ನೀ ಆ ಮಗುವ ಮರೆಯಾಗಿಸಲು ಬೇಗನೆ ತೊಟ್ಟಿಲಲಿ ಮಲಗಿದಿಯೋ ವಿಭುವೇ ಜಗನ್ಮೋಹನ ಶಿಶುರೂಪ ಚಿನ್ಮಾತ್ರ 14 ಇದನ್ನರಿಯದೇ ಜಿನಾದಿಗಳು ನಿನ್ನನ್ನೇ ಜಾತವಾದ ತಮ್ಮ ಮಗುವೆಂದು ನೆನೆದು ಬಂಧು ಮಿತ್ರರ ಗುಂಪು ಸ್ತ್ರೀಯರೂ ಪುರುಷರೂ ಮುದದಿ ಕೊಂಡಾಡಿದರು ಪುತ್ರೋತ್ಸವವ 15 ಕದಳೀ ತೆಂಗು ಪೂಗಿ ಮಾವು ತೋರಣವು ವಾದ್ಯಂಗಳ ಅರ್ಭಟ ವೇದ ಘೋಷಗಳು ದೈತ್ಯ ವಿದ್ವಾಂಸರ ವಾದ ಮೀಮಾಂಸವು ಸುಧ್ವನಿಯಲಿ ಪಕಪಕಾ ಎಂದು ನಕ್ಕಿ ನೀನು 16 ಆಶ್ಚರ್ಯ ಏನಿದು ಹಸಿಮಗು ನಗುತಿದೆ ಹೇ ಚಿನ್ನ ನೀನ್ಯಾಕೆ ನಗುತಿ ಎಂದು ಕೇಳೆ ಬುದ್ಧ ನಿನ್ನ ಹೆಸರೆಂದು ಮೆಚ್ಚಲಾರೆನು ವೈದಿಕಕರ್ಮ ಎಂದಿ 17 ವೇದ ಅಪ್ರಾಮಣ್ಯ ಬೋಧಕವೆಂದು ತೋರುವ ಬೌದ್ಧಮತ ಪೇಳಿದಿ ದೈತ್ಯರ ಮೋಹಿಸಲು ಬೋಧಿಸಿದ ಮೋಹಕ ಮಾತು ಜಿನಾದಿಗಳು ಅದರಿಸದಿರೆ ಹರೇ ನೀ ಸುರರನ್ನ ಕರೆದಿ 18 ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ನೀನು ವೇದೋಕ್ತ ಸುರರನ್ನ ಸ್ಮರಿಸಿದಾಕ್ಷಣವೇ ಬಂದರು ಆ ಜಿನಾದಿಗಳಿಗೆ ಕಾಣಿಸುತ ಯುದ್ದಕ್ಕೆ ನಿಂತರು ನೀನು ಪ್ರೇರಿಸಲು 19 ವೇದ ವಿರುದ್ಧ ಮಾತುಗಳಾಡುತ ನೀನು ವೇದ ಅಪ್ರಾಮಣ್ಯ ವಾದಿಸುತ್ತಿ ಸದೆದು ಹಾಕುವೆವು ಎಂದು ಕೂಗುತ್ತ ಆಯುಧಗಳ ಪ್ರಯೋಗಿಸಿದರು ವಿಡಂಬನದಿ 20 ಮೋದಮಯ ಶಿಶುರೂಪ ಅಚ್ಯುತನೇ ನೀನು ಆ ದೇವತೆಗಳು ಪ್ರಯೋಗಿಸಿದ ಆಯುಧ ಒಂದನ್ನೂ ಬಿಡದೇ ನುಂಗಿ ನಗುತ ಎಲ್ಲಿ ಮಧುಸೂಧನ ವಿಷ್ಣು ಬರಲೀ ಅವ ಎಂದಿ 21 ಲೀಲಾ ವಿನೋದದಿ ಮತ್ತೊಂದು ರೂಪದಿ ನೀ ಪೊಳೆವ ಚಕ್ರವ ಪಿಡಿದು ಬಂದು ನಿಲ್ಲೆ ಸೊಲ್ಲು ಹೆಚ್ಚಾಡದೆ ಚಕ್ರವ ಕಿತ್ತುಗೊಂಡು ಒಳ್ಳೆ ಆಸನವೆಂದು ಅದರಮೇಲ್ ಕುಳಿತಿ22 ಸ್ವತಂತ್ರ ಪರಮಾತ್ಮ ನೀ ಸ್ವಸ್ವಯೋಗ್ಯ ಸಾಧನ ಪ್ರವರ್ತಕ ದೈತ್ಯರ ಮೋಹಕ್ಕೆ ಈ ಲೀಲೆ ಸಾಧು ನೀ ಪೇಳಿದ ಶಾಸ್ತ್ರ ಎನ್ನುತ ನಮಿಸಿ ಸುರರು ತಮ್ಮ ತಮ್ಮ ಸ್ಥಳಕೆ 23 ಎಲ್ಲೂ ಕಂಡಿಲ್ಲವು ಇಂಥಾ ಮಹಾತ್ಮನ ಎಲ್ಲ ದೇವತೆಗಳು ಸೋತು ಓಡಿ ಹೋದರು ಬಲಿಷ್ಟ ತತ್ವವು ಶಿಶುರೂಪ ಬುದ್ಧನದೇ ಎಲ್ಲ ದೈತ್ಯರು ಹೀಗೆ ನಿಶ್ಚೈಯಿಸಿಕೊಂಡರು 24 ಅಭಾವ ಕ್ಷಣಿಕ ಶೂನ್ಯವಾದ ಮೋಹಿತರಾಗಿ ಸ್ವಭಾವ ಯೋಗ್ಯತೆಯಂತೆ ವೈದಿಕವ ತೊರೆದು ಬುದ್ಧ ಆ ಜಿನಾದಿ ದೈತ್ಯರ ಸಮೂಹವು ತಬ್ಬಿಕೊಂಡರು ತಮಸ್ ಸಾಧನ ಮತಿಯ 25 ಜಿನಾದಿ ದೈತ್ಯರು ಮೇಲ್ವಾರಿ ಅರ್ಥವ ಮನದಲ್ಲಿ ನಿಶ್ಚಯಿಸಿ ಮೋಹ ವಶರಾಗೇ ನಿನ್ನಲ್ಲಿ ಸ್ವರೂಪತಹ ಭಕ್ತಿಯುತ ಸುರರು ಧನ್ಯರಾದರು ಕೇಳಿ ಯಥಾರ್ಥ ತಿಳಕೊಂಡು 26 ಏನೆಂದು ವರ್ಣಿಪೆ ಪ್ರಶಾಂತ ವಿದ್ಯೆಯ ಸೊಬಗು ಆನಂದ ಸೌಭಾಗ್ಯ ಸಮೃದ್ಧಿ ಸಿದ್ಧಿಪುದು ಮನ ಪುಳಕವಾಗುತ್ತೆ ಜ್ಞಾನ ತೇಜಃಪುಂಜ ನಿನ್ನ ದಯದಿಂದ ಸುಖ ಅನುಭವಕೆ ಸುಲಭ 27 ಅದೋಷನು ನೀನು ದೋಷ ಅಭಾವವಾನ್ ಸದಾ ನೀನು ಭಿನ್ನನು ಜಡ ಜೀವರಿಂದ ಮೋದಮಯ ಅನಂತಕಲ್ಯಾಣಗುಣಪೂರ್ಣ ನೀ ಆದುದರಿಂ ಅ ಎಂದು ನೀನೇವೇ ಜÉ್ಞೀಯ 28 ಭವ್ಯವಾಗಿರುವುದು 'ಅ' ಯಿಂದ ಜಗತ್ತು ಭವ್ಯ ಎಂದರೆ ಉತ್ಪಾದ್ಯ ಎಂಬುವುದು ಅ ಎಂಬ ನಿನ್ನಿಂದ ಉತ್ಪಾದ್ಯ ಜಗತ್ತನ್ನ ಅಭಾವವೆಂದಿ ವಿಭುವೇ ಸತ್ಯಜ್ಞಾನ 29 ಕಾಲ ಅವಯವ ಕ್ಷಣಕ್ಕೆ ಕ್ಷೋಣಿಯು ಸ್ಥಿರವಾಗಿ ಇರುತಿದೆ ಅದರೂ ಕ್ಷಣ ಸ್ಥಾಯಿಯಾಗಿರುವ ಕ್ಷಣದ ಸಂ¨ಂಧದಿ ಜಗತ್ ಕ್ಷಣಿಕವು ಎಂದು ನೀ ಪೇಳಿದಿಯೋ ಧೀರ 30 ಶಂ ಎಂದರೆ ಸುಖವು ಉ ಉತ್ತಮತ್ವವು ಶಂ ಸಹ ಉ ಸೇರಿ ಶೂ ಆಯಿತು ಶೂ ಎಂಬ ಸುಖರೂಪ ಅನುತ್ತಮೋತ್ತಮ ನೀನೇ ಶೂ ವಾಚ್ಯ ನೀನೇವೇ ಅನ್ಯರು ಅಲ್ಲ 31 ಶೂನ್ಯ ಎಂಬುವರು ಜ್ಞಾನವಂತರು ಹೀಗೆ ವಿಗ್ರಹ ಮಾಡುವರು ಆನಂದಮಯನಾದ ಅನುತ್ತಮೋತ್ತಮ ನಿನ್ನ ಅನುಗ್ರಹದಿಂದ ಜಗತ್ ರಕ್ಷಣೆ ನಿಯಮನವು 32 ಜ್ಞಾನಪೂರಿತ ಅರ್ಥ ಪೇಳಿದ ನಿನಗೆ ನಮೋ ಅನ್ಯ ವಸ್ತುಗಳಿಗಿಂತ ಅತ್ಯಂತ ಪ್ರಿಯತಮನೇ ಜನ್ಮಾದಿಕರ್ತನೇ ಪೂಷ ಪೋಷಕನೇ ನಮಸ್ತೇ 33 ದೇವವೃಂದಕ್ಕೆ ನೀ ಪ್ರಶಾಂತವಿದ್ಯೆಯ ಪೇಳಿ ಅವರುಗಳ ಸಹ ನಿಂತು ಮತ್ತೊಂದು ರೂಪದಿಂದ ದಿವಪರ ಸ್ವಸ್ಥಾನ ಸೇರಿದಿಯೋ ಸುಖಮಯನೇ ಭಾವಕರು ಸ್ಮರಿಸೆ ಸರ್ವವಿಧದಲಿ ಒಲಿವಿ 34 ಬುದ್ಧಾವತಾರ ಪರಮಾತ್ಮ ಚಿದಾನಂದಮಯ ಶ್ರೀಶ ದೇವತಾ ವೃಂದಕ್ಕೆ ಸುಬೋಧ ಮಾಡಿದ್ದು ಸಾಕಲ್ಯ ತಿಳಿಯಲಸಖ್ಯ ಶ್ರೀವೇದವ್ಯಾಸ ಶ್ರೀಶ ಶ್ರೀಮಧ್ವ ಆನಂದತೀರ್ಥರ ಅನುಗ್ರಹದಿಂದಲೇ ಯಥಾಯೋಗ್ಯ ತಿಳುವಳಿಕೆ ಉಂಟಾಗುವುದು 35 ವೇದಾರ್ಥ ನಿರ್ಣಾಯಕ ಸೂತ್ರಗಳ ಮಾಡಿ ಇತಿಹಾಸ ಪುರಾಣಾದಿಗಳ ನಮಗಿತ್ತ ವೇದವ್ಯಾಸ ಸುಹೃತ್ ಬುದ್ಧನು ನೀನೇವೇ ಸತ್ಯಧರ್ಮರಿಗೆ ಸೌಭಾಗ್ಯ ಸುಖದಾತ 36 ಜ್ಞಾನಭಕ್ತ ಆಯುರಾರೋಗ್ಯ ಐಶ್ವರ್ಯ ಶ್ರೀಮಧ್ವ ಹನುಮಸ್ಥ ವನಜಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಅನಿಮಿತ್ತ ಬಂಧು ಹರೇ ಕೃಷ್ಣ ರಾಮ ವೇದವ್ಯಾಸ ಬುದ್ಧಾವತಾರ ಮೋದಮಯ ಕರುಣಾಳು 37 -ಇತಿ ಶ್ರೀ ಬುಧ್ಧ ಪ್ರಾದುರ್ಭಾವ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣರಾಯನೆ ನಿನಗೆಣೆಯುಂಟೆ ಪಾಲಿಪ ಕ ರುಣಾಶಾಲಿಗಳನ್ನು ಪಣೆಗಣ್ಣ ಮೊದಲಾದಮರ ಗಣದೊಳು ಇನ್ನು ನಾ ಕಾಣೆ ಮುನ್ನ ಪ ಗುಣನಿಧಿಯೆ ಎಣಿಯಿಲ್ಲ ನಿನ್ನಯ ಅಣು ಮಹಘನರೂಪ ಕ್ರಿಯಗಳು ಕ್ಷಣಬಿಡದೆ ನೀನಖಿಳಜೀವರ ತ್ರಿ- ಗುಣ ಕಾರ್ಯವ ಗೈವೆ ಮುಖ್ಯ ಅ.ಪ ಕರ್ಮ ಜೀವರೊಳು ನೀನೆಸಗಿ ತೋರ್ಪುದೆ ಧರ್ಮ ನಾನರಿಯೆ ಪ್ರತಿ ಕರ್ಮ ಎನ್ನನುಭವಕೆ ತಂದಿಡುವುದೇ ನಿನ್ನ ಧರ್ಮ ನಾ ಕಾಣೆ ಮರ್ಮ ಜನುಮ ಕೋಟಿಗಳಿಂದಲಿ ಅನುಸರಿಸಿ ಬಂದಿಹ ಎನ್ನ ಕರ್ಮವ ಅನಿಲದೇವ ನಿನ್ನಿಂದ ಅಲ್ಲದೆ ಎನಿತು ಇತರನಿಮಿಷರು ಮಾಳ್ವರು ಜ್ಞಾನದಾಯಕ ನೀನೆ ಎನ್ನಯ ಮನದಲಿಹ ಜಂಜಡವ ಕಳೆದು ಹೀನಕರ್ತನು ತಾನು ಅಲ್ಲದೆ ನೀನೆ ಸರ್ವರ ಕರ್ತನೆಂಬುವ ಜ್ಞಾನಿ ಧ್ಯಾನ ಸ್ಮರಣೆಯನು ಸಾನುರಾಗದಿ ಇತ್ತು ನಿನ್ನ ಮತಾನುಗರಲ್ಲನವರತ ಇಡು ಅನೇಕ ಜನುಮಜನುಮಾಂತರದೊಳು 1 ಶ್ವಾಸನಾಮಕ ನೀನು ಜಗದೀಶ ನೀ ಜೀ- ವೇಶ ಸರ್ವಶಕ್ತಾನು ನೀ ತಾಸಿಗೊಂಭೈನೂರು ಶ್ವಾಸಗಳನ್ನು ಈ ಶರೀರದಿ ಜೀವರಿಂ ದೆಸಗುವೆಯೊ ನೀನು ಉಸುರಲೇನಿನ್ನು ವಾಸುದೇವಗೆ ಪ್ರೀತನಾಗಿ ಅ- ಶೇಷತತ್ತ್ವಕ್ಕೀಶನಾಗಿಹೆ ವಾಸವಾದಿಗಳೆಲ್ಲರೊಳು ಇನ್ನು ಈಸುಭಾಗ್ಯವು ಕಾಣಲಿಲ್ಲ ಏಸುಕಾಲಕು ನೀನೇ ಗತಿಯೆಂದು ಈಶ ಶೇಷ ಖಗೇಶ ಪ್ರಮುಖರು ದಾಸರಾಗಿಹಗರಯ್ಯ ಬಿಡದೆ ದೇಶಕಾಲಗಳಲ್ಲಿ ನಿನ್ನೊಳು ಸೂಸುವಾ ಅತಿಭಕುತಿಯಿಂದಲಿ ಈಶ ತಪದಲಿ ನಿನ್ನ ಮೆಚ್ಚಿಸೆ ಶೇಷಪದವಿಯ ಕೊಟ್ಟು ಶ್ರೀಶ- ನ ಶಯನಸೇವೆ ಸಂಪದವನಿತ್ತೆ 2 ಭಕುತ ಜನರ ಬಂಧೂ ಶ್ರೀಹರಿಗೆ ನೀ ಪ್ರಥ- ಮಾಂಗನಹುದೆಂದೂ ಈ ಸಕಲ ಜಗದಾ ಚೇಷ್ಟಪ್ರದನೆಂತೆಂದೂ ನೀನೆ ಭಗವತ್ಕಾರ್ಯಸಾಧಕನೆಂದೂ ಸಾರುತಿದೆ ಶ್ರುತಿ ಇಂದೂ ಲೋಕಮಾತೆಗೆ ನಮಿಸಿ ದಶಶಿರ ನಂದನನ ಸಂಹರಿಸಿ ಮಹದಾನಂದ ನೀ ವನವ ಭಂಗಿಸಿ ರಘುನಂದನಗೆ ಮುದದಿಂದ ವಂದಿಸಿ ನೊಂದ ದೃ- ಪದನಂದನೇಯಳಾ- ನಂದಪಡಿಸಲು ಕೊಂದೆ ಕೌರವ ವೃಂದವೆಲ್ಲವ ಸವರಿ ನಂದನಂದನಿಗಾನಂದ ಪಡಿಸಿದೆ ಇಂದಿರೇಶ ಶ್ರೀ ವೇಂಕಟೇಶನೆ ಎಂದಿಗೂ ಪರದೈವವೆಂದು ಬಂದು ಬೋಧೆಯನಿತ್ತ ಆ- ನಂದತೀರ್ಥ ನೀ ಸಮರ್ಥಾ3
--------------
ಉರಗಾದ್ರಿವಾಸವಿಠಲದಾಸರು
ಪ್ರಾಣಲಿಂಗ ಲಕ್ಷ್ಮಣನ ಮಂಗೀಶಾ ಪುಣ್ಯ ಸ್ಥಾಣು ಸರ್ವಾತ್ಮಕ ನೀನೆ ಮಂಗೀಶಾ ಮಾಣದೆನ್ನ ಕೈಪಿಡಿದು ಮಂಗೀಶಾ ಇನ್ಯಾ ರ್ಕಾಣೆ ನಿನಗೆ ಸಮನಾಗಿ ಮಂಗೀಶಾ ಪ ಆದಿಗನಾಗಿ ಸಿದ್ಧ ಮಂಗೀಶಾ ನಿನ್ನ ಶೋಧಿಸಿ ಕಂಡವರುಂಟೆ ಮಂಗೀಶಾ ವೇದ ಉಪನಿಷದ ನೀನೇ ಮಂಗೀಶಾ ನಿನ್ನ ಪಾದವ ನೆರೆನಂಬಿರುವೆ ಮಂಗೀಶಾ 1 ರಾಮನ ವಂಶವನೊಲಿದು ಮಂಗೀಶಾ ಬಹು ಪ್ರೇಮದಿಂದ ಸಲಹಿದಯ್ಯಾ ಮಂಗೀಶಾ ನಾಮಕ್ಕೆ ಲಕ್ಷ್ಮಣ ಎನ್ನ ಮಂಗೀಶಾ ನೀನೇ ಸ್ವಾಮಿಯೆಂದು ನಂಬಿದೆನು ಮಂಗೀಶಾ 2 ನಿನ್ನ ಬಲದಿಂದ ಸರ್ವ ಮಂಗೀಶಾ ಸುಖ ವನ್ನು ಪಡೆದೆನು ನಾನು ಮಂಗೀಶಾ ಇನ್ನು ನಿನ್ನೊಳು ಕೂಡಿಸಿಕೊ ಮಂಗೀಶಾ ಮುಂದೆ ಬೆನ್ನನು ರಕ್ಷಿಸಿ ಕಾಯೋ ಮಂಗೀಶ 3 ಯಾರಿಗುಸುರಲಿ ನಾನು ಮಂಗೀಶಾ ಸರ್ವ ಭಾರಕರ್ತೃ ನೀ ಸಲಹೋ ಮಂಗೀಶಾ ದಾರಿಯ ತೋರಿಸೋ ಎನಗೆ ಮಂಗೀಶಾ ನಿನ್ನ ಸೇರಿ ಬದುಕುವೆ ನಾನು ಮಂಗೀಶಾ 4 ಏನೇನರಿಯೆನೆಲೊ ನಾನು ಮಂಗೀಶಾ ನಿನ್ನ ಧ್ಯಾನಿಸಲೊಂದೆ ಬಲ್ಲೆ ಮಂಗೀಶಾ ಹಾನಿ ವೃದ್ಧಿನಿನ್ನದು ಶ್ರೀ ಮಂಗೀಶಾ ಎನ್ನ ಮಾನಾಭಿಮಾನದ ಕರ್ತೃ ಮಂಗೀಶಾ 5 ಅರಿಕೆ ಇಲ್ಲದುಂಟೆ ನಿನಗೆ ಮಂಗೀಶಾ ದುಷ್ಟ ಅರಿಗಳ ಮಾಯಾಜಾಲವು ಮಂಗೀಶಾ ಸ್ಮರನ ದಹಿಸಿದಂತೆ ನೀನು ಮಂಗೀಶಾ ಅವರ ನುರುಹಿ ತೋರೋ ಎನ್ನೊಡೆಯ ಮಂಗೀಶಾ 6 ಬರದು ಬಿನ್ನವಿಸಿದೆ ನಾನು ಮಂಗೀಶಾ ಚಿತ್ತ ವಿರಲಿ ಅಣುಗನ ಮೇಲೆ ಮಂಗೀಶಾ ಸ್ಥಿರದಿ ಕುಶಸ್ಥಲವಾಸಿ ಮಂಗೀಶಾ ಶ್ರೀ ಗುರು ವಿಮಲಾನಂದ ಚೆಲುವ ಮಂಗೀಶಾ 7
--------------
ಭಟಕಳ ಅಪ್ಪಯ್ಯ
ಬಂದೊದಗಿತು ಪುಣ್ಯಫಲವು ಮುಚುಕುಂದವರದ ವಾಸುದೇವಾರ್ಯರೊಲವು ಪಸಂಚಿತಾಗಾಮಿಪ್ರಾರಬ್ಧವೆಂಬ ಕಂಚುಕಿಯಾದ ಕರ್ಮದ ಬಹುಬದ್ದದಂಚುಗಾಣುವುದಾವ ಸಿದ್ಧ ಇದು ಕಿಂಚಿದಾದುದು ಗುರುಚರಣರೇಣಿಂದ 1ಏನು ಸುಕೃತವ ಮಾಡಿದೆನೊ ನಿನಗಾನತ ನಾನಾದ ಬಗೆಯು ತಾನೇನೊನೀನೆ ಕರುಣವಿತ್ತುದೇನೊ ನಾನು ಜ್ಞಾನವೆಂತೆಂಬ ಸ್ವರೂಪವನರಿಯೆನೊ 2ಪರಿಹರಿಸಿತು ಜನ್ಮ ಮರಣ ದುಃಖ ದುರವಣೆ ದಹಿಸಿತು ಲಕ್ಷ್ಮಿಯರಮಣತಿರುಪತಿ ವೆಂಕಟರಮಣ ನೀನೆ ಗುರು ವಾಸುದೇವರೂಪಿನಲಿತ್ತೆ ಕರುಣ3ಓಂ ನರನಾರಾಯಣಾತ್ಮಕಾಯ ನಮಃಕಂ||ಭೃಗುವಾರದರ್ಚನೆಯನಿದನಿಗಮಾಗಮವೇದ್ಯ ಗ್ರಹಿಸಿ ಸಿರಿ ಧರಣಿಯು ಸಹಭಗವಂತ ನಿನ್ನ ಭಕ್ತರೊಳಗಲದೆ ನಾನಿಹುದ ಮಾಡು ವೆಂಕಟರಮಣಾ
--------------
ತಿಮ್ಮಪ್ಪದಾಸರು
ಬಂದೊದಗಿತು ಪುಣ್ಯಫಲವೂ ಮುಚುಕುಂದ ವರದ ವಾಸುದೇವಾರ್ಯರೊಲವು ಪಸಂಚಿತಾಗಾ'ು ಪ್ರಾರಬ್ಧವೆಂಬಕಂಚುಕಿಯಾದ ಕರ್ಮದ ಬಹು ಬದ್ಧದಂಚುಗಾಣುವುದಾವ ಸಿದ್ಧ ಇದುಕಿಂಚಿದಾದುದು ಗುರುಚರಣರೇಣಿಂದಾ 1ಏನು ಸುಕೃತವ ಮಾಡಿದೆನೊ ನಿನಗಾನತ ನಾನಾದ ಬಗೆಯು ತಾನೇನೋನೀನೆ ಕರುಣ'ತ್ತುದೇನೋ ನಾನುಜ್ಞಾನವೆಂತೆಂಬ ಸ್ವರೂಪವನರಿಯೆನೊ3ಪರಿಹರಿಸಿತು ಜನ್ಮ ಮರಣ ದು:ಖದುರವಣೆ ದ'ಸಿತು ಲಕ್ಷ್ಮಿಯ ರಮಣತಿರುಪತಿ ವೆಂಕಟರಮಣ ನೀನೆಗುರು ವಾಸುದೇವ ರೂಪಿನಲಿತ್ತೆ ಕರುಣ 3
--------------
ತಿಮ್ಮಪ್ಪದಾಸರು
ಬರಡು ಕಣ್ಗಳಿದ್ದರೇನು ಮನದ ಕಣ್ಣ ತೆರೆಯದ ಪ. ತರಳಗೊಲಿದ ವರದರಾಜದೊರೆಯ ನಿಜವನರಿಯದ ಅ.ಪ. ನಾರದಾದಿ ಮೌನಿವರರು ಸಾರಿಬಂದು ಸೇವಿಸಿ ಸಾರಸಾಕ್ಷನ ಮನವನೊಲಿಸಿ ಸಾರಭೂತರೆನಿಸಿದರು ಮನದ ಕಣ್ಣ ತೆರೆಯದಿಂತು 1 ತರಳಗೊಲಿದು ಕಂಬದಿಂದ ಬಂದು ಹಿರಣ್ಯನುರವ ಬಗೆದು ಕರುಳಮಾಲೆ ಧರಿಸಿ ಮೆರೆವ ನರಹರಿಯ ಕಾಣದ 2 ಈ ಕಳಂಕವೆಲ್ಲ ತೊಳೆದು ಶ್ರೀಕಟಾಕ್ಷಕೆ ಪಾತ್ರನಾಗಲು 3 ಶರಧಿಶಯನ ಪರಮಪಾವನೆ ಶರಣರಕ್ಷಕನೀತನ ವರದ ಶೇಷಶೈಲಧಾಮನ ವರದಿ ಪಡೆವೆ ಮನದಕಣ್ಗಳಂ 4
--------------
ನಂಜನಗೂಡು ತಿರುಮಲಾಂಬಾ
ಬರಿದೆ ಚಿಂತಿಸಬೇಡ ಮನವೆ ಭಯಗೊಂಡು ಹರಿಯೊಲುಮೆ ನಮ್ಮಲ್ಲಿ ಸ್ಥಿರವಾಗಿ ಉಂಟು ಪ ಕೊಲ್ಲುವನೊ ಕಾವನೋ ನಿಲ್ಲುವನೊ ಪೋಗುವನೋ ಬಲ್ಲನೊ ಅರಿಯನೋ ಇದನೆಲ್ಲವೆನುತ ಸೊಲ್ಲುಸೊಲ್ಲಿಗೆ ಕರೆದು ಎಲ್ಲವನು ತಿಳುಹಿದರೆ ಕಲ್ಲಾಗುವನೆ ಸ್ವಾಮಿ ಜಗದ ವಲ್ಲಭನು 1 ಕರಿರಾಜ ಧ್ರುವನು ಪ್ರಹ್ಲಾದ ದ್ರೌಪದಿ ದೇವಿ ಮರೆವಿನೊಳಜಾಮಿಳನು ಕರೆಯಲಾಗಿ ಮೊರೆಯ ಲಾಲಿಸಿ ತಾಯಿ ಕರುವನರಸುವ ತೆರದಿ ಉರಗ ಗಿರಿವಾಸ 2 ಗರ್ಭದೊಳಗಿರುವಾಗ ಹಬ್ಬಿರುವ ಮಾಂಸಲತೆ ಉಬ್ಬಸವ ಬಿಡುತಿರಲು ಅಬ್ಬೆ ಸಲಹಿದಳೆ ಉಬ್ಬರದ ನೋವಿನೊಳು ಒಬ್ಬನೇ ಬರುವಾಗ ಹೆಬ್ಬಾಗಿಲನು ಮುಂದೆ ತೋರಿದ (ರಾ)ರೊ ನಿನಗೆ 3 ಮಡದಿ ಮಕ್ಕಳನೆಲ್ಲ ಒಡಗೊಂಡು ಮಲಗಿರಲು ಕಡಸಾರ ಬಂದವಳು ಕಾಲು ಸುತ್ತಿ ನಡುವಿರುಳು ಹಿಡಿದಿರ್ದ ಹಿಡಿತಲೆಯ ಮೃತ್ಯುವನು ಬಿಡಿಸಿ ಸಲಹಿದರಾರು ಜಡನಾದ ಮನವೆ 4 ಹರಿಯನರಿಯದೆ ಮನದಿ ಮರುಗಿ ಕರಗಲು ಬೇಡ ಎರವು ಮಾಡದೆ ಸ್ವಾಮಿ ಪರಿಪರಿಯ ಸೌಖ್ಯವನು ಕರೆದು ಈವನು ನಮಗೆ ವರಾಹತಿಮ್ಮಪ್ಪ 5
--------------
ವರಹತಿಮ್ಮಪ್ಪ
ಬರಿದೆ ಬಿಡದೆನ್ನ ಹರುಬೆಂಬೆಯೋತೆರಹುಗೊಡದು ಹರಿಸ್ಮರಣೆಗೆಂಬೆಯೊ ಪಒಲ್ಲೆನೆಂದರೆ ನಿನ್ನ ಕೊಲ್ಲುವುದೆ ಬರಿದುಸೊಲ್ಲಿಸದಿರೆ ನಿನ್ನನೀಯುವದೆತಲ್ಲಣಗೊಳದಿರೆ ವಟಯನೊಡೆಯುವದೆಬಲ್ಲೆನೆನ್ನಲಿದಾರಲು ಬಾಯಬಡಿವದೇನೊ 1ಪರರೊಳಿಪ್ಪುದೊ ನಿನ್ನ ಕರಣದೊಳಿಪ್ಪುದೊಹರುಬುತಿಂ ಬೀದಿಯಲಿರುತಿಪ್ಪುದೊತಿರುಗುತಿಪ್ಪುದೊ ಬೆಂಬಿಡದೆ ಸಾಲವಕೊಂಡಿಹುದೊಬರಿದೆ ಪತ್ರವೊ ಪೇಳು ಮರುಳೆ 2ಪರರು ನುಡಿಯುತಿರೆ ಮರುನುಡಿಯುವೆ ನೀನೆಕರೆಯದಿದ್ದರು ಪೋಗಿ ಬೆರೆಯುತಿಹೆತೊರೆದು ಬಿಡುವ ಬುದ್ಧಿ ಬರದಾದ ಕಾರಣಾಉರುಳಿಗೆ ಸಿಕ್ಕಿದುರುಗನಂತೆ ಹೊರಳುವೆ 3ಆಶಾ ಪಿಶಾಚಿ 'ಡಿದ ಕಾರಣ ನೀನುಮೋಸ ಹೋಗಿಯೆ ನೀನೆ ಮುಂಬರಿದುಹೇಸದೆ 'ೀನಾಯಗೆ ಮೈಗೊಡುವೆ ಬಪ್ಪನಾಶವನರಿಯೆ 'ರತಿುರುವುದಾ 4ಬೆರೆದು ಸಂಸಾರದೊಳಿರುವಂತೆ ಚಿಕ್ಕನಾಗಪುರವಾಸಿ ಗುರುವಾಸುದೇವಾರ್ಯನಾಚರಣ ಸೇವೆಯೊಳ್ಮನ'ರಿಸಿ ಬಾಳ್ದರೆ ಸುಖಶರಧಿಯಾಗುವೆ ದುಃಖವರುಗಸಿರದು ನಿನ್ನ 5
--------------
ವೆಂಕಟದಾಸರು
ಬರುತಾದೋ ಪದ ಬರುತಾದೋ ಪ ಪದುಮನಾಭನ ದಿವ್ಯಸದಮಲಪಾದದ ವಿಧವಿಧ ಮಹಿಮೆಯಯ ಪೊಗಳಿ ಬಾಳುವ ಪದ ಅ.ಪ ಛಂದಸ್ಸು ಮೀಮಾಂಸೆ ಅಂದದ ಯತಿಗಣ ಒಂದು ನಾನರಿಯದೆ ಸಂದೇಹಮಿಲ್ಲದೆ ಮಂದರಧರನಡಿ ಒಂದೇ ತ್ರಿಭುವಿಗೆ ಮಿಗಿ ಲೆಂದು ಪಾಡುತಲಾನಂದ ಪಡೆಯುವ ಪದ 1 ಸಕಲರು ತೆಗೆದಿಟ್ಟ ಅಕತಪಚಟಯೆಂಬ ವಖಿಲಮಂ ಗಣಸದೆ ಪ್ರಕಟಮಿನಿತಿಲ್ಲದೆ ಅಕಟಕಟೆನ್ನುತ ನಿಖಿಲವ್ಯಾಪಕನಂಘ್ರಿ ಭಕುತಿಯಿಂ ಭಜಿಸುತ ಮುಕುತಿ ಪಡೆಯುವ ಪದ 2 ಅಳುಕದೆ ಲೌಕಿಕ ತಿಳೆಸುಖಕೆಳಸದೆ ಮಲಿನದಿ ಸಿಲ್ಕದೆ ಚಲನವಲನಿಲ್ಲದೆ ಜಲಜಾಕ್ಷ ಭಕ್ತರ ಸುಲಭ ಶ್ರೀರಾಮನಂ ಒಲಿಸಿ ಪ್ರಾರಬ್ಧವ ಗೆಲಿದು ನಲಿಯುವ ಪದ 3
--------------
ರಾಮದಾಸರು
ಬಲ್ಲೆನೆಂದರೆ ನಾನೇನೇನರಿಯೆ ಅರಿಯೆನಂದರೆ ಸ್ವಲ್ಪ ತಿಳಿದಷ್ಟು ಬಲ್ಲೆ ಪ ಗುರುಚರಣದ ಸ್ಮರಣೆಯ ಮಾಡಿ ಬಲ್ಲೆ ಪರ ಕಡಿಸಿ ಹೊಟ್ಟೆ ಹೊರವುದನರಿಯೆ ಕೊರಳ ಕೊಯ್ವರ ಕಪಟವು ನಾನರಿಯೆ 1 ಸಾಧು ಸಮಾಗಮ ಸುಖವೆಂದು ಬಲ್ಲೆ ವಾದಿಸುವರ ಕೂಡ ಕಾದಾಡಲರಿಯೆ ಬೋಧಾಮೃತರಸಸ್ವಾದವು ಬಲ್ಲೆ ವೇದ ಶಾಸ್ತ್ರಂಗಳ ಓದಿ ನಾನರಿಯೆ 2 ಶರೀರ ಸುಖವು ನಶ್ವರವೆಂದು ಬಲ್ಲೆ ಪರಮಾತ್ಮ ತೊಲಗುವ ಪರಿಯ ನಾನರಿಯೆ ಗುರು ವಿಮಲಾನಂದಗೆ ಹಿಂಗಲರಿಯೆ 3
--------------
ಭಟಕಳ ಅಪ್ಪಯ್ಯ
ಬಾಗಿ ಬೇಡುವೆ ಪ್ರಾಣರಾಯ ಭಕ್ತಪ್ರಿಯ ಪ ಭಾಗವತ ಜನಪ್ರಿಯ ಅ.ಪ ಚಿತ್ರಾವತಿಯ ತೀರವಾಸ ಭಕ್ತಪೋಷ ಗಾತ್ರ ಮರೆದು ನಿನ್ನ ಸ್ತೋತ್ರ ಮಾಡುತಲಿ1 ಬಂದೆ ನೀನೇ ಗತಿಯೆಂದು ಎನ್ನ ತಂದೆ ಮುಂದಿನಾಗಮಗಳ ಒಂದು ನಾನರಿಯೆ 2 ಅನಾಥ ರಕ್ಷಕನೆಂದು ಎನ್ನಬಂಧು ಪ್ರಾಣನಾಥವಿಠಲ ಸರ್ವರಿಗೆ ಬಂಧು ಎಂದು 3
--------------
ಬಾಗೇಪಲ್ಲಿ ಶೇಷದಾಸರು
ಬಾರನ್ಯಾತಕ ಯದು ವೀರಾ|ಪದಾಂಬು ಜವದೋರಾ| ದಯರಸವಾಬೀರಾ| ಸಾರಿದವರಿಗಿನ್ನುದರಾವಾಗಿರಾ ಧೀರಾ ಪ ಮಂದ ಮುಗುದೆಯು ನಾನೆಂದು ಅರಿತು ಮೊದಲಿಂದು| ಕೈಯ್ಯ ಪಿಡಿದು ಬಂದು| ಕುಂದಾಲಿಸುವ ದಯಸಿಂಧು|ಉಚಿತ ವೇನಿಂದು 1 ಎನ್ನ ಬಿನ್ನಹ ಹೇಳಲೇ ಜಾಣೇ| ತಾಪಕೌಷಧಕಾಣೆ| ಕ್ಷಣಯುಗವ ನಿನ್ನಾಣೆ| ಮನ್ನಿಸಿ ತಂದು ತೋರಿನ್ನೆನೆ ಬಾರೇ ಪ್ರವೀಣೇ 2 ಶರಣ ಹೊಕ್ಕವರೆಂದು ಮರೆಯಾ|ನೆಂಬ ಮಾತಿದು ಖರೆಯಾ ಬಂದು ಕೂಡಿದ ತ್ವರಿಯಾ| ಗುರು ಮಹಿಪತಿ ಸ್ವಾಮಿಚರಿಯಾ ಬೊಮ್ಮತಾನರಿಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಿಜಯಂಗೈವುದು ತ್ರಿಜಗನ್ಮಾತೆಯೆ ದ್ವಿಜರಾಜಾನನೆಯೇ ಅಜರಾಜಾತ್ಮಜಸುತನರಸಿಯೇ ಶ್ರೀ ಜಾನಕಿಯೇ ಪ. ಪವನಜ ಗರುಡರ ಬಗೆಯಿಂ ನಿನ್ನಂ ಸೇವಿಸಲಾನರಿಯೆ ಕವಿಕುಲ ಚೂಡಾಮಣಿಯೋಲ್ ನಿನ್ನನು ಭಾವಿಸಲೆನಗಳವೇ 1 ನೆಲದೊಳು ನಿನ್ನೀ ನೆಲೆಯಂ ತಿಳಿಯಲ್ ಬಲುಮೆಯದಾರೊಳು ಪೇಳ್ ಚಲದಿಂ ಪೇಳ್ವರು ಕೆಲವರು ನಿನ್ನಂ ಚಂಚಲೆಯನುವೋಲ್ 2 ಎಂತಾದರು ಸುಸ್ವಾಂತದಿ ನಿನ್ನೀ ಸಂತಾನದೊಳನಿಶಂ ಶಾಂತ್ಯೌದಾರ್ಯ ಗುಣಾನ್ವಿತೆ ನೀ ಮೆರೆ ಸಂತತಮುಂ ನಲವಿಂ3 ಎಣಿಸಲ್ಕರಿಯದ ಋಣತಾಪದೊಳಕಟಾ ಹೆಣಗಾಡುತಲಿರುವೀ ಅಣುಗರ ನೋಡಿ ಕ್ಷಣದೊಳೂ ನಿನ್ನ ಘನತೆ ತೋರಿಸು ದೇವಿ 4 ತಳುವುದಿದೇತಕೆ ನಳಿನÀದಳಂಬಕೆ ಗಳಿಲನೆ ಬಾರೆಂಬೆ ಜಲಜಲೋಚನ ಶೇಷಗಿರೀಶನ ಲಲನಾಮಣಿ ಜಗದಂಬೆ 5
--------------
ನಂಜನಗೂಡು ತಿರುಮಲಾಂಬಾ
ಬಿಡಬೇಡ ಕೈಯ ಪ ಕಡಲಶಯನ ನಿನ್ನಡಿಗೆರಗಿ ಬೇಡುವೆ ಅ.ಪ ಏನೊಂದನರಿಯದ ಮೂಢನಾಗಿರುವನ 1 ಮತಿಹೀನನಾದೆನು ಪತಿತ ಪಾವನ ಕಾಯೊ 2 ಮರೆಯಹೊಕ್ಕೆನು ಕಾಯೊ ಕರುಣಿಗಳರಸನೆ 3 ಮಕರಕುಂಡಲ ಧಾರಿ 4 ಕಾವ ಕರ್ತನೆ ಕುಲದೇವ ಸದಾನಂದ 5
--------------
ಸದಾನಂದರು