ಒಟ್ಟು 745 ಕಡೆಗಳಲ್ಲಿ , 89 ದಾಸರು , 668 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಿ ಮರುಳಾಗದಿರು ಪರಸತಿಯರ ಪ ನಾಡೊಳಗೆ ಕೆಟ್ಟವರ ಪರಿಯ ನೀನರಿತು ಅ ಶತಮಖವ ಮಾಡಿ ಸುರಸಭೆಗೈದ ನಹುಷ ತಾನಾತುರದಿ ಶಚಿಗೆ ಮನಸೋತು ಭ್ರಮಿಸಿಅತಿ ಬೇಗ ಚಲಿಸೆಂದು ಬೆಸಸಲಾ ಮುನಿಯಿಂದಗತಿಗೆಟ್ಟು ಉರಗನಾಗಿದ್ದ ಪರಿಯರಿತು 1 ಸುರಪತಿಯು ಗೌತಮನ ಸತಿಗಾಗಿ ಕಪಟದಿಂಧರೆಗೆ ಮಾಯಾವೇಷ ಧರಿಸಿ ಬಂದುಪರಮ ಮುನಿಯ ಶಾಪದಿಂದಂಗದೊಳು ಸಾ-ಸಿರ ಕಣ್ಗಳಾಗಿರ್ದ ಪರಿಯ ನೀನರಿತು 2 ಸ್ಮರನ ಶರತಾಪವನು ಪರಿಹರಿಸಲರಿಯದೆದುರುಳ ಕೀಚಕನು ದ್ರೌಪದಿಯ ತುಡುಕಿಮರುತ ಸುತ ಭೀಮನಿಂದಿರುಳೊಳಗೆ ಹತನಾಗೆನರಗುರಿಯೆ ನಿನ್ನ ಪಾಡೇನು ಧರೆಯೊಳಗೆ3 ಶರಧಿ ಮಧ್ಯದೊಳಿದ್ದುದುರುಳ ದಶಶಿರನು ಜಾನಕಿಯನೊಯ್ಯೆಧುರದೊಳಗೆ ರಘುವರನ ಶರದಿಂದ ಈರೈದುಶಿರಗಳನೆ ಹೋಗಾಡಿಸಿದ ಪರಿಯನರಿತು 4 ಇಂತಿಂಥವರು ಕೆಟ್ಟು ಹೋದರೆಂಬುದನರಿತುಭ್ರಾಂತಿಯನೆ ಬಿಟ್ಟು ಭಯಭಕ್ತಿಯಿಂದಕಂತುಪಿತ ಕಾಗಿನೆಲೆಯಾದಿಕೇಶವನ ನಿ-ರಂತರದಿ ಭಜಿಸಿ ನೀ ನಿತ್ಯಸುಖಿಯಾಗು 5
--------------
ಕನಕದಾಸ
ನೋಡಿದೆನು ಯಾದವ ಕೃಷ್ಣನ | ಪಾಡಿದೆನೊ ಮನದಣಿಯ ವರಗಳ | ಬೇಡಿದಾಕ್ಷಣ ಕೊಡುವ ಜಗತ್ರಯ | ವಾಡಿಸುವ ವಾಗೀಶ ಜನಕನ ಪ ಮೇದಿನಿ ಪ್ರ | ಹ್ಲಾದ ಸುರಪನ ಕಾದ ವಂಶವ | ಛೇದ ಸಾಗರ | ಹಾದಿ ಬಿಗಿದ ಗೋಯಿದ ಬತ್ತಲೆ | ಯಾದ ತುರಗವ | ಬೀದಿ ವದಿಸಿದನೀತ ಹಯಮೊಗ | ಬಾದರಾಯಣ ದತ್ತ ವೈಕುಂಠ | ಬೋಧ ಮೂರುತಿ ಕಪಿಲ ನಾನಾ ವಿ | ನೋದ ರೂಪದ ಆದಿ ದೈವವ 1 ಜನನಿಗಾಟವ ತೋರಿ ಕಡಗೋ | ಲನು ನೇಣರು ಕರದಲಿ ಪಿಡಿದು | ರು ಕ್ಮಿಣಿಯ ಕೈಯಿಂದ ಪೂಜೆಗೊಂಡರ್ಜು | ಗೋಪಿ ಚಂ | ದನದೊಳಡಗಿ ಅಲ್ಲಿಂದ ಆನಂದ | ಮುನಿಗೊಲಿದು ಬಲು ವೇಗ ಪಡುವಣ | ವನಧಿ ತೀರದಲಿಪ್ಪನಂತಾಸನ ಬಳಿಯ ನಿಂದಿದ್ದ ಚಲುವ 2 ಸುತ್ತ ಯೋಜನ ಕ್ಷೇತ್ರವಿದರೊಳು | ಉತ್ತಮ ವಿಮಾನ ವೇದ ಪ | ರ್ವತಗಳು ಅಲ್ಲೆಲ್ಲಿ ಸರೋವರ | ಕತ್ತಲಿಗಭಿಮಾನಿನಿ ದುರ್ಗಾ | ದುರಿತ ಪರಿಹರ | ಸೋತ್ತಮರಿಗಿದು ಸಿದ್ಧ ಸರ್ವದ | ತತ್ತಳಿಪ ಪರತತ್ವ ಹರಿಯ3 ತಂತ್ರ ಸಾರೋಕ್ತದಲಿ ಪೂಜೆ ನಿ | ರಂತರದಿ ಕೈಗೊಂಬ ಬಲು ಗುಣ | ವಂತ ನೀತನ ಹೊಳವು ಪೊಗಳಿದ | ರಂತ ಗಾಣವು ಶ್ರುತಿ ಪುರಾಣಗ | ಳೆಂತು ಪೇಳಲಿ ಮೆರೆವ ವೈಭವ | ಸಂತರಿಗೆ ಅತಿ ಪ್ರಿಯನಾಗಿಪ್ಪ | ನಿತ್ಯ ಸ್ವಾತಂತ್ರ ಪುರುಷನ 4 ಮಕರ ತಿಂಗಳು ಮೊದಲು ಪಕ್ಷದ | ಲಕುಮಿರಮಣನ ದಿವಸದಲ್ಲೀಗ | ಭಕುತಿಯಿಂದಲಿ ಬಂದು ವಂದಿಸಿ | ಅಕುಟಿಲರ ವೊಡಗೊಡಿ | ನಿಂದು ಗೋ | ಳಕವ ಚಿಂತಿಸಿ ಸ್ನಾನ ಒಂದೆ | ಸುಖ ತೀರ್ಥ ಸರೋವರದಲಿ ಮಾಡೆ | ಮುಕುತರೊಳು ಪೊಂದಿಸುವ ದಾತನ 5 ಶುಕ್ರವಾರದ ಪೂಜೆ ನೋಡಲು | ವಕ್ರಗತಿಗಳು ಮುಟ್ಟಲಂಜೊವು | ಚಕ್ರವರ್ತಿ ತಾನಾಗಿ | ಸಕಲ ಪರಾಕ್ರಮದಲಿ ಚರಿಸಿ ಜಗದೊಳು | ಶುಕ್ರ ದೇವಸ್ಥಾನದೊಳು ಕಾ | ಲಕ್ರಮಣ ಮಾಡೆ | ಗೋತ್ರದೊಡನೆ ಪೂ ರ್ಣ ಕ್ರೀಡೆÀಯಾಡಿಸುತ ಸಲಹುವ | ಚಕ್ರಧರ ಅಕ್ರೂರ ವರದನ 6 ಕಣಿಸಿ ಉಡಿಸುವ ಕುಣಿಸಿ ನೋಡುವ | ಕನಸಿನೊಳಗಾವಾಗ ತನ್ನನು | ಮನಸಿನಲಿ ಕ್ಷಣ ಬಿಡದೆ ಗುಣಗಳ | ಎಣಿಸಿ ಮೈ ಮರೆದಡಿಗಡಿಗೆ ಈ | ತನುವೆ ನಿನ್ನಾಧೀನವೆಂದಾ | ಜನರಿಗಪವಾದ ಬರಲೀಸನು | ದನುಜದಲ್ಲಣ ವಿಜಯವಿಠ್ಠಲನ್ನ 7
--------------
ವಿಜಯದಾಸ
ಪಂಢರಿಯ ಬಿಟ್ಟಲ್ಲಿ ಹೆಂಡತಿಯ ಕರಕೊಂಡುಬಂದ ಕಾರಣ ತಿಳಿಯದೋಹೆಂಡತಿಯ ಕಾಟವೊ ಇದು ನಿನ್ನ ಆಟವೊಭಕ್ತಭೂ'ುಗೆ ಓಟವೊಪಂಢರಿಯ ಬಿಟ್ಟಿಲ್ಲಿ ಬಂದ ಕಾರಣವೇನುಪೇಶಯ್ಯ ಪಾಂಡುರಂಗಾsಚಂದ್ರಭಾಗಾ ತೀರ ಸುಂದರ ಮಂದಿರವುಇಂದಿರಾರಮಣ ನಿನಗಲ್ಲಿ 1ಅರುಣೋದಯಕೆ ನಿತ್ಯ ಪಂಚಾಮೃತದ ಸ್ನಾನನವನೀತ ಬಾು ತುಂಬಾsಜರತಾರಿ ಮುಂಡಾಸು ಭರ್ಜರಿ ನಿಲುವಂಗಿಸೊಂಪಿನಂಚಿನ ಮಡಿಯು ನನಗೆತರತರದ ಪುಷ್ಪಗಳು ಎಳೆ ತುಳಸಿ ವನಮಾಲಿಕೊರಳೊಳಗೆ ವೈಜಯಂತಿಪರಿಮಳದ ಗಂಧ ಕಸ್ತೂರಿ ಫಣಿಯಲಿಟ್ಟುವೈಭವದಿ ಪೂಜಿಸುವರು 2ಅಂದಚೆಂದದ ರತ್ನ ಮುತ್ತಿನಾಭರಣಗಳುತರತರದ ಸೊಗಸಾದ ಪಂಚಪಕ್ವಾನ್ನಗಳುಸರಿಯಾಗಿ ಮಧ್ಯಾಹ್ನ ಮಾಪೂಜೆ ನಡೆಯುವದುಭಕ್ತರಿಗೆ ಲೆಕ್ಕ'ಲ್ಲಾ sಪಾದಕ್ಕೆ ಹಣೆ ಹಚ್ಚಿ ತಿಕ್ಕುವರು ಮೇಲೆದ್ದುನಿಂತುಬಿಡುವರು ಅಲ್ಲಿ ದಬ್ಬಿದರು ಎಚ್ಚರಿಲ್ಲಾಇಂಥ ಭಕ್ತಿಯ ಭಾವ ಇನ್ನೆಲ್ಲಿಯೂ ಕಾಣೆಭಕ್ತವತ್ಸಲ 'ಠ್ಠಲಾs 3ಗೋಧೂಳಿ ಕಾಲಕ್ಕೆ ಪಾದಪೂಜೆಯು ಮಹಾಧೂಪ ದೀಪೋತ್ಸವಗಳುsಆಪಾದಮೌಳಿ ಪರ್ಯಂತ ದರ್ಶನ ಪಾದಸ್ಪರ್ಶದಾ ಆನಂದವೋsರಾತ್ರಿ ಹತ್ತಕ್ಕೆ ಶಯನೋತ್ಸವದ ವೈಭವವುನೋಡಿದವರೇ ಧನ್ಯರುsಸಚ್ಚಿದಾನಂದಮೂರ್ತಿ ಅಲ್ಲಿ ಪ್ರತ್ಯಕ್ಷಭಕ್ತರಿಗೆ ಕಾಣುತಿಹನು 4ಸತ್ಯವಾದೀ ಜಗಕೆ ಪಂಚಭೇದವು ನಿತ್ಯಸರ್ವತ್ರ ತಾರತಮ್ಯಸೃಷ್ಟ್ಯಾದಿ ಅಷ್ಟ ಕರ್ತೃತ್ವ 'ಠ್ಠಲಗುಂಟು'ಠ್ಠಲನೆ ಸವೋತ್ತಮಾsಹರಿಯು ಸರ್ವೋತ್ತಮನು ವಾಯು ಜೀವೋತ್ತಮನುಮೂಲಗುರು ಮುಖ್ಯ ಪ್ರಾಣನುಮಧ್ವಮತವೇ ಮತವು ಸಕಲಶ್ರುತಿಸಮ್ಮತವುನಿತ್ಯ ತತ್ತ್ವಜ್ಞಾನವುs 5ಅಣುರೇಣು ಪರಿಪೂರ್ಣ ಸರ್ವಗುಣ ಸಂಪನ್ನನಿರ್ದೋಷ ನಿರ್'ಕಾರಾsಸರ್ವತಂತ್ರ ಸ್ವತಂತ್ರ ಸರ್ವಾಂತರ್ಯಾ'ುಸರ್ವಜ್ಞ ಸರ್ವಸ್ವಾ'ುsಸಚ್ಚಿದಾನಂದಾತ್ಮ ಪೂರ್ಣಾತ್ಮ ಪರಮಾತ್ಮನಿತ್ಯತೃಪ್ತನು ಶ್ರೀಹರಿsನಿರ್ಗುಣ ನಿರಾಕಾರ ಅ'ುತಗುಣ ಆಕಾರತ್ರಿಗುಣವರ್ಜಿತ ತ್ರಿಧಾಮಾs 6ಕಾರ್ಯಕಾರಣ ಅಂಶಿ ಅಂಶಾವತಾರಅಂತರ್ಯಾ'ುಯಾಗಿ ಇಹನುsಪ್ರೇರ್ಯಪ್ರೇರಕನಾಗಿ ಬಾದ್ಯ ಬಾಧಕನಾಗಿವ್ಯಾಪ್ಯ ವ್ಯಾಪಕನು ತಾನುsಯಾರು ತನ್ನನೆ ನಂಬಿ ಸರ್ವಸ್ವವನು ನೀಡಿದಾಸರಾಗುವರೊ ಅವರನ್ನುsಕ್ಲೇಶಗಳ ಕಳೆದು ಭವಪಾಶ ಬಂಧವ ಬಿಡಿಸಿಶ್ರೀಶ ಕೈಪಿಡಿದು ಪೊರೆವಾs 7'ಷ್ಣು ಸರ್ವೋತ್ತಮತ್ವ ತಿಳಿಯದ ಜ್ಞಾನಶೂನ್ಯರಿಗೆಬೇಸತ್ತು ಇಲ್ಲಿ ಬಂದ್ಯಾ sಭಕ್ತ ಪ್ರಹ್ಲಾದನವತಾರ ರಾಯರು ಇಲ್ಲಿಬಂದದ್ದು ಕೇಳಿ ಬಂದ್ಯಾ sಮಧ್ವಸಿದ್ಧಾಂತ ಪದ್ಧತಿಗೆ ಅನುಸರಿಸಿಪೂಜೆಗೊಂಬಲು ಬಂದೆಯಾsಮುದ್ದುಭೂಪತಿ'ಠಲ ಬಿದ್ದೆ ನಿನಪಾದಕ್ಕೆಉದ್ಧಾರ ಮಾಡೊ ಸ್ವಾ'ು 8ಫಲಶ್ರುತಿಚಿತ್ತನಿರ್ಮಲರಾಗಿ ಭಕ್ತಿಭಾವದಿ ನಿತ್ಯ'ಠ್ಠಲಾಷ್ಟಕ ಪಠಿಸಲು'ಠ್ಠಲನು ಕೈಪಿಡಿದು ಕಷ್ಟಗಳ ಪರಿಹರಿಸಿಇಷ್ಟಾರ್ಥಗಳ ಕೊಡುವನುsಸತ್ಯ'ೀ ಮಾತಿದಕೆ ಸಾಕ್ಷಿ ಬೇಕಾದರೆಪ್ರತ್ಯಕ್ಷ ಪಾಂಡುರಂಗಾsಕಾವೇರಿ ಶ್ರೀರಂಗ ಕಂಬೆವರದರಾಜಗಲಗಲಿಯ ನರಸಿಂಗನೋs 9
--------------
ಭೂಪತಿ ವಿಠಲರು
ಪತಿ | ನೀನಿವನ ಕಾಯೋ ಪ ಮಂದ ಜನರುದ್ಧಾರಿ | ತಂದೆ ಮುದ್ದು ಮೋಹನ್ನನಂದನರ ದ್ವಾರದಿಂ | ಪೊಂದಿ ಅಂಕಿತವಾಅಂದ ಸತ್ಸಾಧನವು | ಮುಂದುವರಿವಲಿಕಾಂಕ್ಷೆ |ಯಿಂದ ಸತ್ಕಾರ್ಯ | ಪ್ರತಿಬಂಧ ಪರಿಹರಿಸೊ 1 ಪಾದ | ವನಜ ಆಶ್ರಿತಗೇ 2 ಭಾವಜಾರಿಯ ಮಿತ್ರ | ಭಾವುಕರ ಪರಿಪಾಲಗೋವಿದಾಂ ಪತಿಯೆ ಗುರು | ಗೋವಿಂದ ವಿಠಲಾ |ಪಾವಮಾನಿಯ ಪ್ರೀಯ | ನೀ ವೊಲಿದು ಭಕ್ತನ್ನತೀವರುದ್ದರಿಸೆಂದು | ದೇವ ಬಿನ್ನವಿಪೇ 3
--------------
ಗುರುಗೋವಿಂದವಿಠಲರು
ಪತಿ ಗೋಪಾಲ | ವಿಠಲ ಕಾರುಣಿಕಾ ಪ ನೀನಾಗಿ ಒಲಿದಿವನ | ಪೊರೆಯೆ ಪ್ರಾರ್ಥಿಸುವೇ ಅ.ಪ. ಉತ್ತಮ ಸುಸಂಸ್ಕøತಿಯ | ಪೊತ್ತು ಜನಿಸುತ ಸರ್ವಕರ್ತೃ ನಿನ್ನಯ ಸೇವೆ | ಅರ್ಥಿಯಂ ಗೈವೆ |ಅರ್ಥಿಸುವ ನಿನ್ನ ದಾಸತ್ವ ದೀಕ್ಷೆಯನೂಸುಪ್ರೀಶ ತೋರ್ದಪರಿ | ಇತ್ತಿಹೆನೊ ಅದಗೇ 1 ಕರ್ಮನಾಮಕನೆ ದುಷ್ಕರ್ಮಗಳ ಪರಿಹರಿಸಿನಿರ್ಮಲ ಸುಸಾಧನಕೆ | ಸನ್ಮಾರ್ಗ ತೋರೋ |ಮನ್ಮಥನ ಜನಕ ತವ | ನಾಮಸ್ಮರಣೆಯ ಕವಚಪೇರ್ಮೆಯಿ ತೊಡಿಸಿ ಸ | ದ್ಧರ್ಮರಥನೆನಿಸೋ 2 ವೃದ್ಧ ಜನಗಳ ಸೇವೆ | ಬುದ್ಧಿಪೂರ್ವಕಗೈದುಮಧ್ವಮತ ಸಚ್ಛಾಸ್ತ್ರ | ತಿದ್ದಿ ಪೇಳುವಲೀ |ಶುದ್ಧಬುದ್ದಿಯನಿತ್ತು | ಉದ್ದರಿಸಬೇಕಿವನಹದ್ದುವಾಹನದೇವ | ಮಧ್ವಾಂತರಾತ್ಮಾ 3 ಅಧಿಭೂತ ಅಧ್ಯಾತ್ಮ | ಅದಿದೈವದೊಳು ನಿನ್ನಅದುಭೂತ ವ್ಯಾಪ್ತಿಯನೆ | ವದಗಿಸಿ ಮನಕೇ |ಬುಧ ಜನೇಢ್ಯನೆ ದೇವ | ಸದಯದೀ ತರಳಂಗೆಹೃದಯದಲಿ ಮೈದೋರಿ | ಮುದವನೇ ಬೀರೋ 4 ದೀರವನು ಎಂದೆನಿಪ | ಪಾವಮಾನೀಯ ಪ್ರಿಯಕೇವಲಾನಂದಮಯ | ಮಾವಿನೋಧೀಸಾವಧಾನದಿ ತರಳ | ಭಾವುಕಗೆ ಒಲಿಯೆಂದುಓದಿ ಭಿನ್ನವಿಪೆ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪತಿ ತನುಜ ಕರುಣಿಸೋ ಹರಿ ನಿನ್ನವ ನೆನಿಸೋ | ಸಿರಿಪತಿ ತವ ನಾಮಾಮೃತ ಫಲನುಣಿಸೋ ಪ ನಿನ್ನ ದಾಸರ ಸಂಗವನುದಿನ ಬಲಿಸೋ | ಘನ ವಿಚಾರಕ ಮನವೆನ್ನ ನಿಲಿಸೋ 1 ಮಂಗಳಂಘ್ರಿಯ ಕುಂಬ ಕಂಗಳದೆರಿಸೋ | ರಂಗಭಕುತಿ ಅಂತರಂಗ ದೆಚ್ಚರಿಸೋ 2 ಜನುಮಕ ಬಹಭವ ಪರಿಹರಿಸೋ | .........................................3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪತಿತಪಾವನ ನಾಮ ಪೂರ್ಣಕಾಮಾ | ಗತಿಯ ಪಾಲಿಸೊ ಎನಗೆ ಗುರುಸಾರ್ವಭೌಮಾ ಪ ಹದಿನಾರು ಸಾವಿರ ಸುದತಿಯರೆಲ್ಲರು | ತ್ರಿದಶವಿರೋಧಿಯ ಸದನದಲ್ಲಿ || ಮದದಿಂದ ಸೆರೆಬಿದ್ದು ಹದುಳ ಕಾಣದೆ | ಸುತ್ತಿಸಿದರು ಮನದೆ ನಾರದನಿಂದ ನಲಿದಾಡಿ1 ಕಾರ್ತಿಕ ಮಾಸದಲಿ ಕಾಂತೆಯ ಒಡಗೂಡಿ | ಕಾರ್ತರಥವನೇರಿ ಕೀರ್ತಿಪುರುಷಾ || ಧೂರ್ತನ ಕೊಂದು ಬಾಲೆಯರಾರ್ತವ ಪರಿಹರಿಸೆ | ತೀರ್ಥಧರಾದಿಗಳು ನರ್ತನದಲಿ ಪೊಗಳೆ 2 ಇಂದುಮುಖಿಯರ ಬಂಧನ ತರಿದವರು | ಅಂದು ಉತ್ಸಾಹದಿಂದ ದ್ವಾರಾವತಿಗೆ || ಮಜ್ಜನ ಮಾಡೆ | ಮಂದಾರ ಮಳೆ ನಭದಿಂದ ಸುರಿಯೆ 3 ದೇವ ಶೃಂಗಾರವಾಗೆ ವೇದಾದಿಗಳು ನಿಂದು | ತಾವೆಲ್ಲ ಮಣಿಭೂಷಣಾವಳಿಯಿಟ್ಟು || ನೋವ ಪೋಗಾಡಿಸಿ ಪಾವನರಾಗಿ ಸುಖ- | ವನಧಿಯೊಳು ಮೀಯುತ್ತ ಕೊಂಡಾಡೆ 4 ನರಕಾಸುರನ ಕೊಂದು ಇರಳು ಈ ಪರಿಯಲ್ಲಿ | ಹರಿಮಾಡಿದ ಚರಿತೆ ತಿಳಿದುದನು- || ಚ್ಚರಿಸಿದವನ ಕುಲ ನರಕದಿಂದುದ್ಧಾರ | ಮೊರೆಹೊಕ್ಕೆ ಇದÀಕೇಳಿ ವಿಜಯವಿಠ್ಠಲರೇಯಾ 5
--------------
ವಿಜಯದಾಸ
ಪಂಥ ಬೇಡವೊ ಲಕ್ಷ್ಮಿಕಾಂತ ಎನ್ನಯ ಮನದ ಚಿಂತಿತಾರ್ಥವನೀಯೊ ಸಂತತಂ ಕಾಯೊ ಪ ಚರಣ ಕಮಲವ ಕಂಡು ಶರಣು ಹೊಕ್ಕೆನು ನಾನು ಕರುಣದಿಂದನುದಿನವು ಕಾಯಬೇಕೆನುತ ಸ್ಮರಣೆಪೂರ್ವಕವಾಗಿ ಹರಣವನೆ ಹರಸಿಹೆನು ಹರಿಣನೊಳು ಬಿಲುಗಾರ ಕರುಣ ಬಿಟ್ಟಂತೆ 1 ನರಜನ್ಮವೆಂಬುದಿದು ಕರಕಷ್ಟವಾಗಿರುವ ಉರಿಯ ಮನೆಯನು ಹೊಗುವ ತೆರನಲ್ಲವೆ ಪರಿಪರಿಯ ದುಃಖಗಳು ಬರುವ ಸಮಯಾಂತರದಿ ಮರೆಯಾಗದಿರು ಎನ್ನಸ್ಥಿರದಿ ಮೈದೋರು 2 ತಪ್ಪುಗಳು ಹೊರತಾಗಿ ಅಪ್ಪ ಸೇರುವುದುಂಟೆ ಒಪ್ಪುಗೊಂಬವರಾರು ಸರ್ಪಶಯನ ಬೊಪ್ಪ ಬಹ ದುರಿತಗಳ ತಪ್ಪಿಸಿಯೆ ಕಳೆದೆನ್ನ ಮುಪ್ಪುಗಳ ಪರಿಹರಿಸೊ ಅಪ್ಪಗಿರಿವಾಸ 3 ಉರಗ ಗಿರಿವಾಸ ನಿನ್ಸೆರಗವಿಡಿವೆನು ನಾನು ಕರಗಿ ಹೋಯಿತು ಇರವು ಕಾವರಿಲ್ಲ ಮರುಗಿದರೆ ಧೈರ್ಯವನು ತಿರುಗಿ ಹೇಳುವರಿಲ್ಲ ಕುರಿ(ಗಾ)ಯ್ವ ತೆರನಂತೆ ಕೈಗೆ ಸಿಲುಕಿದೆನು 4 ಇಹಪರದ ಸೌಖ್ಯಗಳ ಕರೆದಿತ್ತು ಕರವಿಡಿದು ಸಹವಾಸವಾಗಿರ್ದು ಸಲಹಿಕೊಂಡು ವಹಿಲದಲಿ ವರವೀವ ವರಾಹತಿಮ್ಮಪ್ಪ ಬಹುಭಾರವನು ತಾಳ್ದು ಸಲಹೆನಿಸೊ ನೀನು 5
--------------
ವರಹತಿಮ್ಮಪ್ಪ
ಪದ್ಮನಾಭ ಮುದ್ದು ಪದ್ಮನಾಭ ಸಿರಿ ಪದ್ಮನಾಭಪ ನಾನಾಯೋನಿಗಳಲ್ಲಿ ಜನಿಸಿ ಪದ್ಮನಾಭ ನಾನಾಕ್ಲೇಶಗಳಿಂದ ಬಳಲಿ ಪದ್ಮನಾಭ ನಾ ನಿನ್ನನು ಸ್ಮರಿಸದ್ಹೋದೆ ಪದ್ಮನಾಭ ಪದ್ಮನಾಭ 1 ಪದ್ಮನಾಭ ನಿನ್ನ ನಂಬಿದ ಭಕ್ತರೊಳಿರಿಸಿ ಪದ್ಮನಾಭ ಪದ್ಮನಾಭ ಪೀ- ಪದ್ಮನಾಭ 2 ಪದ್ಮನಾಭ ಅ- ಪಾವಕ ಪದ್ಮನಾಭ ಶ್ರೀಕಾಂತನೀ ಸಲಹಬೇಕೊ ಪದ್ಮನಾಭ ಪದ್ಮನಾಭ 3 ಪದ್ಮನಾಭ ಗೋ- ವಿಂದ ರಕ್ಷಿಸೆಂದು ಸ್ಮರಿಸೆ ಪದ್ಮನಾಭ ಪದ್ಮನಾಭ ಮು- ಪದ್ಮನಾಭ 4 ಮಡುವಿನಲ್ಲಿ ಗಜವ ಕಾಯ್ದೆ ಪದ್ಮನಾಭ ದೃಢ ಪ್ರಹ್ಲಾದಗೆ ಅಭಯವಿತ್ತೆ ಪದ್ಮನಾಭ ಮಡದಿ ನುಡಿಯ ಕೇಳಿ ತ್ವರದಿ ಪದ್ಮನಾಭ ಅಡವಿಯಲ್ಲಿ ಅಭಿಮಾನವ ಕಾಯ್ದೆ ಪದ್ಮನಾಭ5 ವಂದಿಪೆ ಮುಚುಕುಂದ ವರದ ಪದ್ಮನಾಭ ವಂದಿಪೆ ಗಜರಾಜ ವರದ ಪದ್ಮನಾಭ ವಂದಿಪೆ ಉರಗಾದ್ರಿವಾಸ ಪದ್ಮನಾಭ ಪದ್ಮನಾಭ 6 ಪದ್ಮನಾಭ ಶ್ರಮ ಪರಿಹರಿಸು ನಮಿಪೆ ದೇವ ಪದ್ಮನಾಭ ಕಮಲ ಸಂಭವನನ್ನು ಪಡೆದ ಪದ್ಮನಾಭಕಮಲನಾಭ ವಿಠ್ಠಲ ಕಾಯೋ ಪದ್ಮನಾಭ7
--------------
ನಿಡಗುರುಕಿ ಜೀವೂಬಾಯಿ
ಪಂಪಾಪುರನಿವಾಸ ಪ್ರಮಥರೇಶಾ ಪ ತ್ವಂ ಪಾಹಿ ಪಾಹಿ ತ್ರಿಪುರಾರಿ ತ್ರಿನೇತ್ರ ಅ.ಪ. ಕೈಲಾಸಸದ್ಮ ಚಿತಿಚೇಲ ಭೂಷಣ ಮನೋ ಮೈಲಿಗೆಯ ಪರಿಹರಿಸೊ ನೀಲಕಂಠ ಕಾಲ ಕಾಲಗಳಲ್ಲಿ ಕಾಲನಿಯಾಮಕನ ಲೀಲೆಗಳ ತುತಿಪ ಸುಖ ನಾಲಿಗೆಗೆ ಕೊಡು ಸತತ 1 ಪಾರ್ವತೀರಮಣ ನೀ ಮೋಹಶಾಸ್ತ್ರವ ರಚಿಸಿ ಶಾರ್ವರೀಚರರ ಮೋಹಿಸಿದೆ ಹಿಂದೆ ಶುಕ ವ್ಯಾಧ ಜೈಗೀಷ ರೂಪದಲಿ ಈರ್ವಗೆ ಚರಿಯದಲಿ ಹರಿಯ ಮೆಚ್ಚಿಸಿದೆ 2 ಸುರನದೀಧರ ನಿನ್ನ ಚರಿತೆಗಳ ವರ್ಣಿಸಲು ಸುರಪಮುಖ ಸುಮನಸಾದ್ಯರಿಗಸದಳಾ ಸ್ಮರನಪಿತ ಶ್ರೀ ಜಗನ್ನಾಥ ವಿಠ್ಠಲನ ಸಂ ಸ್ಮರಣೆಯನು ಕೊಟ್ಟು ಉದ್ಧರಿಸು ದಯದಿಂದ 3
--------------
ಜಗನ್ನಾಥದಾಸರು
ಪರಮ ಪಾವನಕಾಯ ಗುರುರಾಯ ಜೀಯ ವರ ಭಾಗವತರ ಪ್ರಿಯ ಸುರರ ಸಹಾಯ ಪ. ಶ್ರೀ ತಂದೆ ಮುದ್ದುಮೋಹನ ದಾಸರೆಂದೆನಿಸಿ ವಾತ ಜನಕನ ಒಲಿಸಿ ವೈರಾಗ್ಯ ಧರಿಸಿ ಖ್ಯಾತಿಯನು ಪಡೆದ ಅನಾಥ ರಕ್ಷಕ ಸ್ವಾಮಿ ನೀತ ಗುರು ನಿಮ್ಮ ಪದಕೆ ನಾ ತುತಿಸಿ ನಮಿಪೆ 1 ಘನ ಅಂಶದಲಿ ನೆಲಸಿ ಅನವರತ ಸಲಹುವೊ ಮನವ ಮಾಡಿರಬಲೆ ಅಂಜಿ ಬೆದರೆ ಘನ ಜ್ಯೋತಿ ಸ್ವೀಕರಿಸಿ ತನುವಿಗಭಯ ತೋರಿ ಮನದಿ ಪದವನೆ ನಂಬೆ ರಕ್ಷಿಸಿದ ಗುರುವೆ 2 ಅಪಮೃತ್ಯು ಬಂದು ಬಹು ಅಪರಿಮಿತ ಭಯಪಡಿಸಿ ಸುಪಥ ಕಾಣದೆ ನಿಮ್ಮ ಪದವ ನಂಬಿರಲು ಸ್ವಪ್ನದಲಿ ನಿಜರೂಪ ಗುಪ್ತದಿಂದಲಿ ತೋರಿ ಆಪತ್ತು ಪರಿಹರಿಪೆನೆಂದಭಯವಿತ್ತ 3 ಪರಿಪರಿ ಅಪಮೃತ್ಯು ಪರಿಹಾರವನೆಗೈದು ಪರಮ ಹರುಷದಿ ಕಾಯ್ದು ಆಯುವನೆ ಇತ್ತು ಕರಕರೆಯ ಬಿಡಿಸಿ ಕಾಯ್ದಂಥ ಘನ ಚರಿತೆಯನು ಅರಿತು ವರ್ಣಿಸಲರಿಯೆ ಪರಮ ಪ್ರಿಯ ದೊರೆಯೆ 4 ಆಪನ್ನ ರಕ್ಷಕರೆ ಶ್ರೀ ಪತಿಯ ತೋರುವ ಘನಶಕ್ತರೆ ಕಾಪಾಡುವೋ ಕರ್ತರೆಂದು ನಾ ನಂಬಿರುವೆ ಗೋಪಾಲಕೃಷ್ಣವಿಠ್ಠಲನ ನಿಜ ಪ್ರಿಯರೆ 5
--------------
ಅಂಬಾಬಾಯಿ
ಪರಮ ಪುರಷಾ ರಾಘವ ಪಾಲಿಸೊ ಸುರಮುನಿವರ ಪೂಜಿತ ಪ ಸರಸಿಜಾಪ್ತವಂಶಾಬ್ಧಿ ಚಂದ್ರಮ ನಿನ್ನ ಹೊರತು ಪೊರೆವರನ್ಯರ ಕಾಣೆನೊ ಅ.ಪ ಆಂಜನೇಯ ಪ್ರಿಯ ಆದರಿಸೈ 1 ಮೃತ್ಯಪರಿಹರಿಸೆನುತ್ತ ಬೇಡಲು ನಿನ್ನ ಭಕ್ತಜನರಿಗಭಯ ಕೊಡುವನೆ 2 ಸಾಮಜವರದ ಮಹಾಮಹಿಮನೆ ನಮ್ಮ ಸ್ವಾಮಿ ನೀನೆ ಗುರುರಾಮ ವಿಠಲ 3
--------------
ಗುರುರಾಮವಿಠಲ
ಪರಮ ಸಂಜೀವನವು ಗುರು ನಿಮ್ಮನಾಮ ಸರುಮುನಿಯು ಸೇವಿಸುವ ದಿವ್ಯನಾಮ ಧ್ರುವ ದುರಿತ ಹರಿಸಿದ ನಾಮ ಮೊರೆಯ ಹೊಕ್ಕವರ ಸ್ಥಿರ ಹೊರೆವ ನಾಮ ತರಳ ಪ್ರಲ್ಹಾದನವಸರಕೆ ಒಲಿದಿಹ ನಾಮ ಸ್ಮರಿಸುವರ ವಜ್ರಪಂಜರ ನಿಮ್ಮ ನಾಮ 1 ಧರೆಯೊಳಗೆ ದ್ರೌಪದಿಯ ಸ್ಮರಣಿಗೊದಗಿದ ನಾಮ ಕರುಣದಿಂದಭಿಮಾನಗಾಯ್ದ ನಾಮ ದಾರಿದ್ರ್ಯವನು ಸುಧಾಮನಿಗಿಂಗಿಸಿದ ನಾಮ ಸಿರಿ ಸಂಪತ್ತವು ಅಯಿತೀ ನಾಮ 2 ಹರುಷಕರವಿತ್ತು ಉಪಮನ್ಯಗೊಲಿದ ನಾಮ ಕ್ಷೀರಸಾಗರದ ನಾಮ ಶರಣುಹೊಕ್ಕವರ ಪರಿಪರಿ ಕಾಯ್ದ ನಾಮ ಧೀರ ಧ್ರುವಗಚಳ ಪದವಿತ್ತ ನಾಮ3 ಕರೆದು ನಾರಗ ನೆಂದವನ ತಾರಿಸಿದ ನಾಮ ಪರಮಪಾತಕ ಪರಿಹರಿಸಿದ ನಾಮ ವರ ಮುನಿಜನರ ತೃಪ್ತಿಗೈಸುವ ನಾಮ ಪರಮ ಭಕ್ತರ ಪ್ರಾಣಪ್ರಿಯ ನಾಮ 4 ದುರಿತ ದಾರಿದ್ರ್ಯ ವಿಧ್ವಂಸಗೈಸುವ ನಾಮ ಕರುಣಸಾಗರ ಪರಿಪೂರ್ಣ ನಾಮ ನರಕೀಟಕ ಮಹಿಪತಿಯ ತಾರಕ ನಾಮ ಪರಮ ಸಾಯೋಜ್ಯ ಗುರು ದಿವ್ಯ ನಾಮ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪರಿ ಏನೋ ಬಾಲ ಹನುಮ ಪ. ಬಂಧಿಸಿದರಾರಿಲ್ಲಿ ನಿನ್ನ ಹನುಮ ಅ.ಪ. ಒಂದು ಸಲ ನೋಡುವೆನೆ ಬ್ರಹ್ಮಾಸ್ತ್ರವಲ್ಲವಿದು ಒಂದು ಸಲ ನೋಡುವೆನೆ ಅಜಗರವಿದಲ್ಲ ಒಂದು ಸಲ ನೋಡುವೆನೆ ಕಳ್ಳ ಗುಂಪಲ್ಲವಿದು ಒಂದೆರಡು ಕೋಣವೆರಡರ ಮಧ್ಯೆ ಇರುವ 1 ಕ್ಷಣಕೆ ಪರಿಹರವಾಯ್ತು ಹಿಂದೆ ಆ ಬಂಧಗಳು ಕ್ಷಣಕ್ಷಣಕು ಇದ್ದಂತೆ ಇರುವುದೀ ತೊಡಕು ಗುಣದಂತೆ ಆವರಣ ವರ್ತುಳಾಕಾರದಲಿ ತೆನೆಗಳಲಿ ಕೋತಿಗಳ ಕಾವಲಿನ ಕಟ್ಟು 2 ಬೀಸಿದೀ ಬಲೆ ತೆಗೆಯೆ ಶ್ರೀ ಶನಿಗು ಅಳವಲ್ಲ ವಾಸುದೇವನೆÀ ಬಲ್ಲ ಈ ಮರ್ಮವ ದಾಸಜನ ಪ್ರಿಯ ಶ್ರೀಗೋಪಾಲಕೃಷ್ಣವಿಠ್ಠಲ ವ್ಯಾಸರಿಂದಲಿ ನಿನಗೆ ಮೋಸಗೈಸಿದನೋ 3
--------------
ಅಂಬಾಬಾಯಿ
ಪರಿಹರಿಸು ದಯಾನಿಧಿ ಶರಣರ ಸಂಕಟವಾ ಧರೆಯ ತಳದಿ ನಾ ಪರಮಧೀನನು ಮರೆಯದಿಯೋ ಪದವಾ ಪ ಜಲದೊಳಗೆ ಪೊಕ್ಕರೂ ನಿನ್ನ ಬಿಡುವನಲ್ಲಾ ಬಲುಬೆಟ್ಟದ ಬುಡದೊಳು ಕುಳಿತರು ಪಿಡಿವೆನಲ್ಲಾ ನೆಲವಿಡಿದು ಕೋರೆಯಲಿ ತೋರ್ದರು ಅರಿವೆನಲ್ಲಾ ಗಲವರೆಗೆ ಸಿಂಹಮೊಗ ಧರಿಸಿದರೂ ಸರಿ ಬೆಚ್ಚಿ ಬೆವರೋನಲ್ಲಾ 1 ಸರಿ ತಿರಕನಂತೆ ನೀ ತಿಳಿದರೂ ಬಿಡುವನಲ್ಲಾ ಕರತಳದಿ ಕೊಡಲಿಯ ಪಿಡಿದರೂ ಸರಿವನಲ್ಲಾ ನೆರೆ ಧರಿಸಿ ಜಟವನ ಪೊಕ್ಕರೂ ಬಿಡುವನಲ್ಲಾ ಕರದಿ ಚಕ್ರವ ಪಿಡಿದು ತೋರಲೆಂದೆಂದಿಗುಜ್ವಲನಲ್ಲಾ 2 ವಸನಗಳಿಲ್ಲದೆ ನುಸುಳನರಿದೆನಲ್ಲಾ ಎಸೆವ ಸಮತುರಗವೇರಿ ಪೋಗಲು ಬಿಡುವನಲ್ಲಾ ದಶರೂಪಿ ನಿನ್ನನು ಬಿಡುವ ಶರಣನಲ್ಲಾ ಕುಸುಮನಾಭ ಶಿರಿ ನರಸಿಂಹವಿಠ್ಠಲ ಆಲಿಸೆನ್ನ ಸೊಲ್ಲಾ 3
--------------
ನರಸಿಂಹವಿಠಲರು