ಒಟ್ಟು 1005 ಕಡೆಗಳಲ್ಲಿ , 92 ದಾಸರು , 788 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸನಾಗೋ ಭವಪಾಶನೀಗೋ - ವಿಶೇಷನಾಗೋ ಪ ಏಸೊ ಕಾಯಂಗಳ ಕಳೆದು ಎಂಬತ್ತ್ನಾಲ್ಕು ಲಕ್ಷ ಜೀವರಾಶಿಯನ್ನು ದಾಟಿ ಬಂದೆ ಈ ಶರೀರ ತಾನಲ್ಲ ತನ್ನದಲ್ಲಆಶೆಯು ತರವಲ್ಲ ಸ್ಥಿರವಲ್ಲ ಮುಂದೆ ಬಾಹೋದಲ್ಲಆಶಾಕ್ಲೇಶ ದೋಷವೆಂಬ ಅಬ್ಧಿಯೊಳು ಮುಳುಗಿ ಯಮನಪಾಶಕ್ಕೊಳಗಾಗದೆ ನಿರ್ದೋಷಿಯಾಗೊ - ಸಂತೋಷಿಯಾಗೊಅ ಕಾಶಿ ವಾರಣಾಸಿ ಕಂಚಿ ಕಾಳಹಸ್ತಿ ರಾಮೇಶ್ವರಏಸು ದೇಶ ತಿರುಗಿದರೆ ಬಾಹೋದೇನೊ - ಅಲ್ಲಿ ಆಹೋದೇನೊದೋಷನಾಶೆ ಕೃಷ್ಣವೇಣಿ ಗಂಗೆ ಗೋದಾವರಿ ಭವನಾಶಿ ತುಂಗಭದ್ರೆ ಯಮುನೆ ವಾಸದಲ್ಲಿ - ಉಪವಾಸದಲ್ಲಿಮೀಸಲಾಗಿ ಮಿಂದು ಜಪತಪ ಹೋಮನೇಮಗಳಏಸು ಬಾರಿ ಮಾಡಿದರೂ ಫಲವೇನೊ - ಇದು ಚೆಲುವೇನೊವಾಸುದೇವನೆಂಬ ಒಳಗಿಹ ಹಂಸನ ಸೇರಿಲೇಸನುಂಡು ಮೋಸಗೊಳದೆ ಮುಕ್ತನಾಗೊ - ನೀ ಶಕ್ತನಾಗೊ1 ಅತ್ತಲೋ ಇತ್ತಲೋ - ಎತ್ತಲೋ ಈ ಸಂಸಾರಬತ್ತಲೆಗೆ ಬತ್ತಲೆ ನಿತ್ಯವಲ್ಲ - ಪರಿಮಿತಿ ಇಲ್ಲಕತ್ತಲೆ ಕಾವಳದೊಳು ಕಾಣಲಾರದೆ ನೀನುಸತ್ಯವೆಂಬ ದಾರಿಯನು ಸೇರಲಿಲ್ಲ - ಲೇಸು ತೋರಲಿಲ್ಲಉತ್ತಮ ಅ ಉ ಮ ಎಂಬ ಓಂಕಾರ ಬೀಜಾಕ್ಷರಚಿತ್ತದಲಿ ಗ್ರಹಿಸು ನೀ ಬಿಡಬೇಡ - ಬಿಟ್ಟು ಕೆಡಬೇಡಹೊತ್ತಾರೆಯಲೊ ಬೈಗಿನಲೊ ಆಗಲೊ ಈಗಲೊ ಕಾಯನಿತ್ಯವೆಂದು ಸ್ಥಿರವೆಂದು ನಂಬಬೇಡ - ನಿನಗೆ ಡಂಬ ಬೇಡ 2 ಆಯಿತೊ ಹೋಯಿತೊ ಏನಾಯಿತೊ ಈ ದೇಹಕ್ಕೆತಾಯಿ ಯಾರೊ ತಂದೆ ಯಾರೊ ಮಡದಿ ಯಾರೊ ಮಕ್ಕಳ್ಯಾರೊಮಾಯದೊಳು ಸಿಲುಕಿ ಬಲು ಕಾಲದಿಂದ ಶ್ರೀರಘುರಾಯನೆಂಬ ವಸ್ತುವಿನ ಸ್ಮರಣೆ ಬಿಟ್ಟು - ಭವದಿ ಮಮತೆ ಇಟ್ಟುನಾಯ ಬಾಯ ಅರಿವೆಯಂತೆ ನಾನಾ ಕೋಟಲೆಯಲಿ ಬಿದ್ದುಬಾಯಿ ಬಾಯಿ ಬಿಡುತಲಿ ಸಾವುದೇನೊ - ನೀ ನೋವುದೇನೊತ್ರಾಯಿ ತ್ರಾಯಿ ತ್ರಾಯಿಯೆಂದು ತ್ರೈಲೋಕ್ಯದೊಡೆಯ ಪುಣ್ಯದಾಯಕನ ಹೊಂದಿ ನೀ ಧನ್ಯನಾಗೊ - ಮುಕ್ತ ಮಾನ್ಯನಾಗೊ 3 ಸಿರಿ ಕಮಲೇಶನನ್ನುಒಂದು ಬಾರಿ ಅರುಹಿಂದ ನೆನೆಯಲಿಲ್ಲ - ಮನ ತಣಿಯಲಿಲ್ಲಬಂದು ಬಂದು ಭ್ರಮೆಗೊಂಡು ಮಾಯಾಮೋಹಕೆ ಸಿಕ್ಕಿನೊಂದು ಬೆಂದು ಒಂದರಿಂದ ಉಳಿಯಲಿಲ್ಲ - ಬಂಧ ಕಳೆಯಲಿಲ್ಲಸಂದೇಹವ ಮಾಡದಿರು ಅರಿವು ಎಂಬ ದೀಪ ಹಿಡಿದುಇಂದು ಕಾಣು ದೇಹದಲಿ ಪಿಂಡಾಂಡ - ಹಾಗೆ ಬ್ರಹ್ಮಾಂಡಇಂದಿರಾ ರಮಣನ ಧ್ಯಾನವನ್ನು ಮಾಡಿ ವಿವೇಕದಿ ಮುಕುಂದನಿಂದ ಮುಕುತಿಯ ಬೇಡು ಕಂಡ್ಯ - ನೀ ನೋಡು ಕಂಡ್ಯ 4 ತುಂಬಿ ಲಂಡ
--------------
ಕನಕದಾಸ
ದಾಸನಾದ ಮೇಲೆ ಈಶ ದೂರುಂಟೆ ಆಸೆನೀಗಲು ಸುಖದ ರಾಶಿ ಬೇರುಂಟೆ ಪ ದೋಷಕ್ಕಂಜಿದಮೇಲೆ ಸನ್ಮಾರ್ಗ ಬೇರುಂಟೆ ಕ್ಲೇಶ ನೀಗಿದಮೇಲೆ ಪುಣ್ಯ ಇನ್ನುಂಟೆ ಹೇಸಲು ಪ್ರಪಂಚಕೆ ಸತ್ಸಂಗ ಬೇರುಂಟೆ ವಾಸನ್ಹಿಂಗಿದಮೇಲೆ ವೈರಾಗ್ಯವುಂಟೆ 1 ಜ್ಞಾನಗೂಡಿದಮೇಲೆ ಮತ್ತೆ ತೀರ್ಥಗಳುಂಟೆ ಧ್ಯಾನವಿಡಿದಮೇಲೆ ಅನ್ಯಮೌನುಂಟೆ ಹೀನಗುಣ ತೊಳೆದಮೇಲಿನ್ನು ಸ್ನಾನಗಳುಂಟೆ ಮಾನಸವು ಶುದ್ಧಿರಲು ಬೇರೆ ಮಡಿಯುಂಟೆ 2 ಕೈವಲ್ಯ ಇನ್ನುಂಟೆ ಶರಣು ಪೊಂದಿದಮೇಲೆ ಪರಮಾರ್ಥ ಬೇರುಂಟೆ ಅರಿವನರಿತರೆ ಬೇರೆ ಪರಲೋಕ ಇರುಲುಂಟೆ ಶರಣರೊಲಿದಮೇಲ್ಹರಿಚರಣ ಹೊರತುಂಟೆ 3 ಸಫಲನಾದಮೇಲೆ ವ್ರತನೇಮ ಬೇರುಂಟೆ ಗುಪಿತವರಿತಮೇಲೆ ಪರತತ್ವವುಂಟೆ ಅಪರೂಪ ಧ್ಯಾನಿರಲು ತಪ ಬೇರೆ ಇರಲುಂಟೆ ಅಪರೋಕ್ಷಜ್ಞಾನ್ಯಾದ ಮೇಲೆ ಮಿಕ್ಕಸಾಧನುಂಟೆ 4 ಮಾನಹೋದಮೇಲೆ ಮರಣ ಬೇರಿರಲುಂಟೆ ನಾನತ್ವ ಪೋದಮೇಲೆ ಸತ್ಕರ್ಮವುಂಟೇ ಧ್ಯಾನದಾಯಕ ಮಮಪ್ರಾಣ ಶ್ರೀರಾಮನಡಿ ಖೂನ ತಿಳಿದ ಮೇಲೆ ಮುಕ್ತಿ ಬೇರುಂಟೆ 5
--------------
ರಾಮದಾಸರು
ದಾಸನಾದವನಿಗೆ ಭವಭೀತಿಯುಂಟೆ ಆಸೆಬಿಟ್ಟವನಿಗೆ ಘಾಸಿಯಿನ್ನುಂಟೆ ಪ ವನಿತೆಯರಾಸ್ಯಳಿದವಗೆ ಮನಸಿಜನರ ಭೀತಿಯೆ ಮಣ್ಣಿನಾಸೆ ಪೋದವಗೆ ಅವನಿಪರ ಭಯವೆ ಧನದಾಸೆ ಪೋದವಗೆ ಬಿನುಗುಜನರಂಜಿಕೆಯೆ ತನುಮೋಹ ಬಿಟ್ಟವಗೆ ಮರಣದ ಭಯವೆ 1 ನಿಂದೆಯನು ಬಿಟ್ಟವಗೆ ಬಂಧಸೋಂಕುವ ಭಯವೆ ಸಂದೇಹವಳಿದವಗೆ ಕರ್ಮಗಳ ಭಯವೆ ಮಂದಿಗೋಷ್ಠಿಯಿಲ್ಲದವಗೆ ಅಪವಾದ ಭೀತಿಯೆ ಸಿಂಧುಶಯನನರ್ಚಕಗೆ ಕಾಲನ ಭಯವೆ 2 ಪರಮ ಧಾರ್ಮಿಕನಿಗೆ ಬಡತನದ ಭೀತಿಯೆ ಪರವ ಸಾಧಿಪನಿಗೆ ಕಷ್ಟಗಳ ಭಯವೆ ಅರಿವಿಟ್ಟು ನಡೆವವಗೆ ದುರಿತದ ಭಯವಿಹುದೆ ಶರಣರೊಳಾಡುವಗೆ ನರಕಂದಜಿಕೆಯೆ 3 ತತ್ವದರ್ಥಿಕನಿಗೆ ಮಿಥ್ಯಶಾಸ್ತ್ರದ ಭಯವೆ ನಿತ್ಯನಿರ್ಮಲನಿಗೆ ಮಡಿ ಮುಟ್ಟು ಭಯವೆ ಸತ್ಯಸನ್ಮಾರ್ಗಿಕಗೆ ಮತ್ರ್ಯದವರಂಜಿಕೆಯೆ ಸತ್ಯರೊಳಾಡುವಗೆ ಮೃತ್ಯುವಿನ ಭಯವೆ 4 ಕೊಟ್ಟು ಹುಟ್ಟಿದವಗೆ ಹೊಟ್ಟೆ ಬಟ್ಟೆಯ ಭಯವೆ ಇಟ್ಟು ಹಂಗಿಸದವಗೆ ಹೊಟ್ಟೆ ಬೇನೆ ಭಯವೆ ಸೃಷ್ಟಿಯೊಳಗೆ ನಮ್ಮ ದಿಟ್ಟ ಶ್ರೀರಾಮನಡಿ ಮುಟ್ಟಿ ಭಜಿಪಗೆ ಮತ್ತೆ ಹುಟ್ಟುವ ಭಯವೆ 5
--------------
ರಾಮದಾಸರು
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ದುರಿತ ಬ್ರಹ್ಮಾಸ್ತ್ರಜಯಜಯ ಜಯತು ಪ್ರತಿಯಿಲ್ಲದಸ್ತ್ರಾ ಪ ಉಟ್ಟಿಹ ಕಾಶಿಯ ಉಡಿಗೆತೊಟ್ಟಿಹ ಎದೆ ಕಟ್ಟುಕಟ್ಟಿದ ಖಡ್ಗ ಕಠಾರಿರಕ್ತದ ತಿಲಕವಿಟ್ಟುಮುಷ್ಠಿಯಲಿ ಮುದ್ಗರ ಶೂಲಧನು ಶರವಳವಟ್ಟುಬಿಟ್ಟ ಕಂಗಳ ಕಿಡಿಯುಛಟಛಟ ಛಟವಿಟ್ಟು 1 ಏರಿಸಿ ಪಟ್ಟೆಯ ಹಲಗೆಎಡಬಲ ನೋಡದೆಹರಿಯ ಘನ ಶತ್ರುವಿನನಾಲಗೆ ಹಿಡಿದೆಳೆಯೆವೀರ ಮಂಡಿಯ ಹೂಡಿಅವುಡನೇ ಕಡಿಕಡಿದೇಹಾರಿಸಿದೆ ತಲೆಗಳನುಹಾ ಎನುತಲಿ ಬಿಡದೆ 2 ಮುಕುಟ ಕಾಂತಿಯಮಿಹಿರಕೋಟೆಯ ಕಳೆಯು ಹಳಿಯೆಲಕಲಕನೆ ಬೆಳಗುತಿಹಕುಂಡಲ ಸರಪಳಿಯೆಚಕಚಕನೆ ಮೂಗುತಿಯಮುತ್ತು ಹೊಳೆಹೊಳೆ ಹೊಳೆಯೇಸಬಲೆ ಎನಿಪ ಚಿದಾನಂದಬಗಳಾಂಬ ತಿಳಿಯೆ3
--------------
ಚಿದಾನಂದ ಅವಧೂತರು
ದುರಿತ ದುರ್ಗತಿಗೆ ಆವಾನಂಜನೊ ಹರಿಯ ಕರುಣವೆಂಬ ಕವಚ ತೊಟ್ಟಿರಲಿಕ್ಕೆ ಪ ಮಲಗಿ ಹೊರಳನೇಕೆ ಕುಳಿತುಕೊಂಡಿರನೇಕೆ ಬಲುದೂರ ತಿರುಗಾಡಿ ಬಪ್ಪನೇಕೆ ಮಲಿನ ವಸನವ ಪೊದ್ದು ಮೋರೆ ತೊಳಿಯನೇಕೆ ಪಾದ ನೆಳಲು ಸೇರಿದವ 1 ಸ್ನಾನ ಸಂಧ್ಯಾ ಮೌನ ಮಾಡದೆ ಇರನೇಕೆ ಕಾನÀನದಲಿ ಬಂದು ಸೇರನೇಕೆ ದಾನ ಧರ್ಮಂಗಳ ಮಾಡದೆ ಇರನೇಕೆ ದಾನವಾರಿಯ ಕಾಣುತಲಿಪ್ಪವ 2 ಮಡಿ ಉಡದೆ ಉಣನೇಕೆ ಅಡಿಗೆ ನೇಮನವೇಕೆ ಅಡಿಗಡಿಗೆ ಜಪಮಣಿ ಎಣಿಸನೇಕೆ ನಡೆಯುತ ಪಥದೊಳು ತಿನ್ನಲ್ಲಾ ಮೆಲ್ಲನೇಕೆ ಪೊಡವೀಶ ಶ್ರೀ ಹರಿಯ ಅಡಿಗಳ ಬಲ್ಲವಾ 3 ಓದದೆ ಇರನೇಕೆ ವೇದ ಪಠಿಸನೇಕೆ ವೇದಮಂತ್ರ ರಚಿಸದರನೇತಕೆ ಓದನವೀಯದೆ ಬಾಳುತಲಿ ಇರನೇಕೆ ಮಾಧವನ ಚರಣಾರಾಧನೆ ಮಾಳ್ಪ 4 ತೀರ್ಥ ತಿರುಗನೇಕೆ ಯಾತ್ರಿ ಚರಿಸನೇಕೆ ವ್ಯರ್ಥ ದಿವಸವೆಂದು ಅನಿಸಲೇಕೆ ಆರ್ಥಿಯನ್ನು ನೋಡಿ ಆಟ ಆಡುವನೇಕೆ ತೀರ್ಥಪದನ ದಿವ್ಯತೀರ್ಥ ಬಯಸುವವ 5 ವ್ರತವು ಮಾಡನೇಕೆ ಕಥಿಯ ಕೇಳನೇಕೆ ಸತಿಯ ಸಂಗಡ ನಿತ್ಯರಮಿಸನೇಕೆ ಚತುರ ಸಾರೆ ಉಂಡು ಹಾಗೇ ಇರನೇಕೆ ಪತಿತಪಾವನನಂಘ್ರಿ ಮತಿಯಲ್ಲಿ ನೋಳ್ಪನಾ6 ದುರಿತವೆಂಬೋದೆಂತು ಬಿಳಿದೊ ಹಸರೊ ಕೆಂಪೊ ಕರದೊ ಮತ್ತಾವದೋ ಅದರ ವರ್ಣಾ ದುರಿತಾರಿ ವಿಜಯವಿಠ್ಠಲನ್ನದಾಸಗೆ ತನ್ನ- ತೊರೆದು ಕಾಣೊ ಹಣೆ ನೋಡದೆ ಮಹಾ 7
--------------
ವಿಜಯದಾಸ
ದೂರ ಕೇಳೊ ದೊರೆಯೆ ಥಟ್ಟನೆ ಬಾರೊ ಭಕ್ತ ಸಿರಿಯೆ ಗತಿ ಹರಿಯೆ ಪ. ಖುಲ್ಲ ವೈರಿಯು ಮೊದಲನೆಯ ಕಳ್ಳ ಸನ್ನಿಧಿಯಲಿ ಬಂಧಿಸಿ 1 ಕ್ರೋಧನನೆಂಬವನಿವನು ಮಾನಸ ಬೋಧವ ಕೆಡಿಸುವನು ಮಾಧವ ಮಧುವತ್ಕರಿದಿ ನಿವಾರಿಸಿ 2 ತುದಿ ನಡು ಮೊದಲಿಲ್ಲ ಲೋಭ ತಡೆಯುವವರ್ಯಾರಿಲ್ಲ ಶ್ರೀಮಡದಿಯ ನಲ್ಲ 3 ಬಾಹ ಬಾಧೆಗಳನು ತಿಳಿಸದೆ ಚೋಹದಿ ಕೆಡಹುವನು ಮಹಿಮೆಯ ಮಾರ್ಗವ ತಿಳಿಸುತ 4 ಅಷ್ಟವೇಷವುಳ್ಳ ಐದನೆ ದುಷ್ಟನು ಬಿಡಲೊಲ್ಲ ಮುರಿದಟ್ಟು ದಯಾಪರ 5 ಮತ್ಸ್ಯಘಾತಿಯಂತೆ ಕುತ್ಸಿತ ಮತ್ಸರನೆಂಬುವನು ಸತ್ಸಂಗಗತಿಗಳನುತ್ತರಿಪನು ಶ್ರೀವತ್ಸ ಬೆನ್ಹನೀ ತಾತ್ಸಾರಗೊಳದಲೆ 6 ಈ ಶತ್ರುಗಳಿರಲು ತತ್ವ ವಿಲಾಸಗಳೆಂತಹವು ಶೇಷಗಿರೀಶ ಕೃಪಾಂಬುಧಿ7
--------------
ತುಪಾಕಿ ವೆಂಕಟರಮಣಾಚಾರ್ಯ
ದೂರ ನೋಡದಿರೆಲೊ ರಂಗಯ್ಯಾ ಪ. ಭವ ಮಡುವಿನೊಳಗಿರುವೆನೋ ಪಿಡಿಯೆನ್ನ ಕೈಯ ತಡಮಾಡ ಬ್ಯಾಡಯ್ಯ ಅ.ಪ. ಹಿಂದೇಸು ಜನ್ಮಂಗಳು ಬಂದು ಪೋದಾವಯ್ಯ ಮುಂದಿನಾಗತಿಯು ತೋರದಯ್ಯಾ ತಂದೆ ತಾಯಿ ಸರ್ವ ಬಂಧು ಬಾಂದವಾ ಕಂದರ್ಪ ಪಿತನೆ1 ಆರು ಕಾಯುವರಿಲ್ಲಾ ಮುರಾರಿ ನಿನಗೆ ಸಾರಿದೆನಲ್ಲಾ ಸೇರಿಸೋ ಸಾಧು ಜನರ ಸಹವಾಸಾ ಹರಿ ನಿನ್ನಲ್ಲಿ ಮನಸು ನಿಲ್ಲಿಸು ಶ್ರೀಶಾ ಶ್ರೀನಿವಾಸಾ 2 ಯೆಷ್ಟು ಹೇಳಲಿ ಯನ್ನ ಕಷ್ಟ ಕೇಳುವರಿಲ್ಲ ಅರಿಷ್ಟ ಸಂಸಾರದೊಳೂ ಕೆಟ್ಟು ಪೋಗುವೆನು ದೃಷ್ಟಿಯಿಂದಲಿ ನೋಡೆನ್ನ ಕಾಳಿಮರ್ಧನಕೃಷ್ಣವಾ 3
--------------
ಕಳಸದ ಸುಂದರಮ್ಮ
ದೂರು ಯಾತಕ್ಕೆ ತರಲ್ಯಮ್ಮಾ | ಯಶೋದಮ್ಮ || ವಾರಿಜ ಮುಖಿಯರು ಶೇರದೆ ಹೇಳ್ವರು ಪ ವಂದು ದಿನ ನಾ ಮನಿಯ ಬಿಟ್ಟು ಹೋಗುವೆನೆಯಲ್ಲ್ಯೊ | ಬಂದು ಹೇಳುವರೆಲ್ಲ ಕೇಳು ಗೋಕುಲದೊಳು | ಸಂದು ಸಂದನೆ ತಿರುಗಿ ಮಂದಗಮನಿಯರು | ಹೊಂದಿ ಒದಗಿ ಬಾಯಂದದ್ದು ನಿಜಮಾತು 1 ಯನ್ನ ಮಾತನ್ನು ಸುಳ್ಳಾದರೆ | ಗೋವಳ್ಹಾರೇ ಮನ್ನಿಸಿ ಬದಿಗೆ ಕರೆದುಕೇಳು | ಅವರಿಗೆ ಹೇಳು ಕನ್ಯೆಯರೆಲ್ಲಾ ಬಂದು ಬೆಣ್ಣೆಗಳ್ಳನೆಂದು ಕಣ್ಣಿಲಿ ನೋಡದೆಯನ್ನ ದಂಡಿಸುವರೇ2 ಪರರ ಮನೆಯೊಳಗಿರುವ ಮಡಿಕೆ ಪಾತ್ರೆ ನಿನಗ್ಯಾಕೆ | ಸ್ಥಿರ ಕ್ಷೀರಾಂ ಬುಧಿಶಯನನಾಗಿ | ಇರವದು ಆಗಿ | ಪುರದ ಸ್ತ್ರೀಯರು ಯಲ್ಲ ದೊರೆ ಹೆನ್ನೆ ವಿಠಲನೆಂದು ಮರೆತು ಹೇಳಲಿ ಬಹು ಸ್ಥಿರವಾಗಿ ಮಾಡುವರೇನೆ 3
--------------
ಹೆನ್ನೆರಂಗದಾಸರು
ದೃಢಚಿತ್ತದೊಳಗೆನ್ನ ಒಡೆಯನೀತಗೆ ಮುನ್ನ ಪಡಿಯೆನಿಪರಿನ್ನುಂಟೆ ಪೊಡವಿಯಲ್ಲಿ ಜನವಾರ್ತೆಯನೆ ಕೇಳಿ ವನಿತೆಯೊಳು ಖತಿತಾಳಿ ಇನಿತು ಕಾಡಿದ ಚಾಳಿಯೊರೆವೆ ಕೇಳಿ ಮಡಿವಳನ ನುಡಿಗಾಗಿ ಕಡುಮೂರ್ಖ ತಾನಾಗಿ ಅಡವಿಗಟ್ಟುವರೇನೆ ಮಡದಿಯನ್ನೆ ಧರ್ಮಪತ್ನಿಯುಮಂತು ಪೂರ್ಣಗರ್ಭವನಾಂತ ಅರ್ಧಾಂಗಿಯನ್ನುಳಿದ ನಿರ್ದಯಾತ್ಮ ದಯೆಯೆಂಬುದಿವನಲ್ಲಿ ತೋರದಿಲ್ಲಿ ಪ್ರಿಯರಾರು ಮತ್ತಿವಗೆ ಧಾತ್ರಿಯಲ್ಲಿ ಭಯವಿಲ್ಲ ಮಾತಿನೊಳು ನಯವದಿಲ್ಲ
--------------
ನಂಜನಗೂಡು ತಿರುಮಲಾಂಬಾ
ದೇವ ದೇವತೆಗಳ ಸ್ತುತಿ ಆವ ಕಾರ್ಯಕೂ ಮುಂಚಿನ ಪೂಜೆ ನಿಮ್ಮತಾಯಿ ತಂದೆಯು ಕಲಿಸಿದ ಪೂಜೆ ಪ ಜಾತಕರ್ಮಕೆ ನಾಮಕರಣಕೆ ಚೌಲಕೆಸಾತಿಶಯಾಕ್ಷರ ಪ್ರಾರಂಭಕೆನೂತನ ವಿದ್ಯಾರಂಭಕೆ ಮುಂಜಿಗೆಯಾತಕೂ ಶ್ರೀ ಗಣಪತಿ ಜಯ ಜಯವೆಂದೂ 1 ಮದುವೆಗೆ ಋತುಶಾಂತಿಗೆ ಸೀಮಂತಕೆಮುದದಿಂದ ಜನನವ ಬರೆವುದಕೆಸದಮಲ ಯಜ್ಞಾರಂಭಕೆ ಸಮರಕೆಮೊದಲೇ ಶ್ರೀ ವಿಘ್ನೇಶ್ವರ ಜಯ ಜಯವೆಂದೂ2 ಪರ ಉಪಕಾರಕೆಜ್ಞಾನಮಾರ್ಗಕೆ ಗಾನಕೆ ಗೀತೆಗೆನಾನಾವಿಧ ಸುವ್ರತ ತೀರ್ಥಯಾತ್ರೆಗೆನೀನೆ ಗತಿ ಗಣಪತಿ ಜಯ ಜಯವೆಂದೂ 3 ಕೆರೆ ಕಾಲುವೆ ಕೂಪಗಳ ವಿಸ್ತಾರಕೆಸುರಗೃಹ ರಥ ಉತ್ಸವ ಪೂಜೆಗೆಸರಸ ಸರೋವರಗಳ ನಿರ್ಮಾಣಕೆಸಿರಿ ಗಣಪತಿ ಪಾವನಮೂರ್ತಿ ಜಯವೆಂದೂ 4 ಹರ ನಿಮ್ಮ ಪೂಜಿಸಿ ಪುರಮೂರ ಜಯಿಸಿದಗರುಡಗೆ ಅಮೃತವು ಸಿದ್ಧಿಸಿತುವರರಾಮಚಂದ್ರ ನಿಮ್ಮಡಿಯ ಪೂಜಿಸಿ ದಶಶಿರನ ಗೆಲಿದನೆನೆ ಗಣಪತಿ ಜಯವೆಂದೂ 5 ದ್ವಾಪರಯುಗದಲಿ ಧರ್ಮರಾಯನು ನಿಮ್ಮನೇ ಪೂಜಿಸಿ ಕೌರವರ ಗೆಲಿದಾಭೂಪರ ಜೈಸಿ ತುರಗವ ತಂದ ಸಾಂಬನುಶ್ರೀಪತಿನುತ ಗಣಪತಿ ಜಯ ಜಯವೆಂದೂ6 ವರದಾನದಿಯ ತೀರವಾಸ ಶ್ರೀ ಕೆಳದಿಯಪುರವರಾಧೀಶ ರಾಮೇಶ್ವರನಪರಮಮೋಹದ ಪುತ್ರ ಪಾವನತರಗಾತ್ರವರದ ಶ್ರೀ ಗಣಪತಿ ಜಯ ಜಯ ಜಯವೆಂದೂ 7
--------------
ಕೆಳದಿ ವೆಂಕಣ್ಣ ಕವಿ
ದೇವ ನೀನಹುದೋ ದೇವರದೇವ ನೀನಹುದೋ ಪ ದೇವ ರಿಪುವನದಾವ ದುರಿತಾಖ್ಯನಾವ ನಮಿತರ ಕಾವ ಕರುಣಸಂಜೀವ ಜಿತಪೂರ್ಣಕಾಮ ಅ.ಪ ದೇವಕಿಯಲ್ಲವತರಿಸಿ ಗೋಕುಲವನ್ನು ಪಾವನವನ್ನು ಮಾಡಿ ಮಡುಹಿ ಮಾವನ ಮಧು- ರಾವನಿಯನುಗ್ರಸೇನಗಿತ್ತು ದೈತ್ಯಾಳಿಯ ಸವರಿ ಜೀವ ಸಖನಾಗಿ ಪಾಂಡವರಿಗೆ, ಪಾರ್ಥ ಸೇವೆಯಲಿ ಸಂದು ಕೀಲಿಸಿ ಕೌರವರನ್ನು ಭೂವರನ ಹಯಮೇಧಕೊಲಿದು ಬಂದಾ 1 ಧರ್ಮರಾಜನ ಯಜ್ಞತುರಗ ರಕ್ಷೆಗೆ ಕೃತ- ವರ್ಮಜರು ಕೂಡಿ ನಡಸಿ ನೀಲಾಂಕನ ಮರ್ಮವರಿತು ಸೋಲಿಸಿ ಹಂಸಧ್ವಜರನ್ನು ಮಾಮಳಿದಡರಿ ಕರ್ಮವಶದಿಂದ ಬಭ್ರುವಾಹನನ ಕೈಯ ದುರ್ಮರಣವಾದ ವಿಜಯ ಕರ್ಣರನು ನಿತ್ಯ ನಿರ್ಮಳಿಕನಹುದೊ 2 ಮುಂತೆ ನಡೆದರ್ಜುನಿಯ ಗೂಡಿ ತಾಮ್ರಧ್ವ ಜಂ ತುಡುಕಿ ಬರೆ ದ್ವಿಜನಾಗಿ ಶಿಖಿ ದಂತಿಪುರಕೆ ಬಂದರಸನ ಹಯಮೇಧ- ಮಂ ಪಾಲಿಸಿ ತ್ರಿಜಗವನು ಪಾಂಡವರಿ- ಗಿತ್ತೊಲಿದು ಸುರಪುರವ ಪೊರೆವ ಲಕ್ಷ್ಮೀಕಾಂತ ನೀನಹುದೋ 3
--------------
ಕವಿ ಲಕ್ಷ್ಮೀಶ
ದೇವತಾಸ್ತುತಿಗಳು ಅಂಧನೋ ನಾ ಬಲು ಅಂಧನೊ ಪ ಸುಂದರವಾದ ಹೃನ್ಮಂದಿರದಲಿ ನಿನ್ನಸುಂದರಮೂರ್ತಿಯ ಕಣ್ದೆರದು ಕಾಣದ ಅ.ಪ. ಕುಹಕ ಚಿಂತಿಸುವಅಹುದು ಸಜ್ಜನನೆಂದು ಬಹುಜನ ನುಡಿಯಲುಮಹಮೋದ ಮಡುವಿನೊಳ್ ಮಹದಜ್ಞನೆನಿಸಿದ 1 ವಿಷಮ ದುರ್ವಿಷಯಗಳಲಿ ಮನ ಹೊಗಿಸೀವಿಷವೆಂದು ತಿಳಿದು ವಿಷಯ ಸೇವಿಸೀಅಸಮ ಮಹಿಮ ನಮ್ಮ ಝಷಕೇತು ಜನಕನವಿಷಯಗಳ ಬಹು ವಿಷಯೀಕರಿಸಿದಂಥ 2 ಮಾನವ ನಾ3
--------------
ಗುರುಗೋವಿಂದವಿಠಲರು
ದೇವಾ ಬಾರಯ್ಯಾ ವೈಭವದಿ ರಥವನೇರಿ ಸೇವಿಸುವೆನು ಮಧ್ಭಾವದಿ ನೆಲಸೆಂದು ಪಾವನ ಮಣಿಪುರ ಠಾವಿನೊಳಿಹ ಭೂದೇವ ವರ್ಯ ಸಂಶೇವಿತ ಕೇಶವ ಪ ದೇವಗಂಗೆಯಪೆತ್ತ ಪಾವನಗಾತ್ರಧ್ರುವ ಭೂವರೋÀಪಾಸಿತನಾಗಿ ಈ ವಸುಧಿಗೆ ಬಂದು ಪಾವಮಾನ ಶಾಸ್ತ್ರದಿ ಕೋವಿದಯತಿ ವರ ಶ್ರೀ ವಿದ್ಯಾನಿಧಿ ತೀರ್ಥ ಸೇವಿತ ಸಂಸ್ಥಾಪಿತ ಸೇವಕ ಜನ ಸಂಭಾವಿತ ಕಾಮಿತ ವೀವ ಕಾವ ಸದಶಾವತಾರ ನಮೋ ಶ್ರಿವಿರಂಚಿಮುಖ ದೇವನ ಮಿತ ಕಂಚೀವರದನೆ ಪೊರೆ ಶ್ರೀ ವರಕೇಶವ 1 ಕಡು ಶೋಭಿಸುವ ಬಿಳಿಗೊಡೆ ಚಾಮರಾದಿಗಳ ಪಿಡಿದು ಶೇವಿಪ ಜನರೆಡಬಲದಿ ಬರೆ ಸುರರು ಪಂಥsÀವಿಡಿದು ವೇದಪಠಣ ಬಿಡದೆ ಮಾಡುತ ಬರೆ ನುಡಿವ ವಾದ್ಯಗಳಿಂದ ಸಡಗರದಲಿ ದ್ವಿಜಮಡದಿಯರಾರುತಿ ಪಿಡಿದು ಬೆಳಗುತಿರೆ ಕಡು ವೈಭವದಲಿ ಅಡಿಗೆರಗುವೆ ಪಾಲ್ಗಡಲ ಶಯನ ಮೂ- ರಡಿ ರೂಪನೆ ಜಗದೊಡೆಯ ಕೇಶವ 2 ನಂದ ತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರರೆನಿಪಯತೀಂದ್ರ ಸತ್ಯ ಪ್ರಮೋದ ರಿಂದ ಪೂಜಿತ ಪದ ದ್ವಂದ್ವ ಮಧ್ಯದೊಳಿಹ ಮಂದಾಕಿನಿಗೆ ಪಿತನೆಂದು ತೋರಿಸಿದಂಥ ಇಂದಿರೆಯರಸನೆ ಮಂದರಧರ ಗೋ ವಿಂದ ಪಾಹಿ ಮುಕುಂದನೆ ಬಾಬಾ- ರೆಂದು ಕರೆವ ದ್ವಿಜ ವೃಂದಮಧ್ಯದಲಿ ಶ್ಯಂದನ ವೇರಿದ ಸುಂದರ ಕೇಶವ 3 ಅಂಬುಜನಾಭನೆ ನಿತಂಬದಿ ಪೊಳೆವ ಪೀ- ತಾಂಬರ ಧೃತ ಶಾತಕುಂಭ ಮಕುಟವದ- ನಾಂಬೋಜವನು ತೋರೋಕುಂಭೀನಸ ಪರಿಯಂಕ ಶಂಭ್ವಾದಿನಮಿತ ನೀಲಾಂಬುಧ ನಿಭಗಾತ್ರ ಕಂಬುಚಕ್ರಸುತ- ದಾಂಬುಜಧರ ಬಲು ಸಂಭ್ರಮದಲಿ ಮುನಿಕುಂಭಜ ಪೂಜಿತ ಕದಂಬ ದುರಿತ ಕಾದಂಬನಿ ಪವನ ಕೃ ಪಾಂಬುಧೆ ಕೇಶವ 4 ಗರುಡ ಮಾರುತರಿಂದ ಪರಶೇವಿತನೆ ಬಾರೊ ಶರಣು ಜನರ ಸುರತರುವೆ ಚನ್ನಕೇಶವ ಧರೆಯೊಳಧಿಕ ಮಣಿಪುರ ಪಂಡಿತಾಗ್ರಣಿ ಸನ್ನುತ ಸರಸಿಜಾಸನ ಪಿತ ಸಿರಿದೇವಿಯು ಈರೆರಡು ರೂಪದಲಿ ಕರದೊಳಗಾರುತಿ ವರಚಾಮರಗಳ ಧರಿಸಿ ಸಿರಿ ' ಕಾರ್ಪರ ನರಹರಿ ' ರೂಪನೆ ಮಾಂ ಪೊರೆವುದು ಕೇಶವ 5
--------------
ಕಾರ್ಪರ ನರಹರಿದಾಸರು
ದೇಶ ತಿರುಗಿಸಿ ಪರದೇಶಿ ಮಾಡಲು ಬೇಡೋ ಈಶ ನೀ ಘನ್ನಾ ಸಂಪನ್ನಾ ಪ ಜನಕನಂಶದಿ ಧ್ರುವನು ಸನುಮತವ ಮಂಡಿಸಲು ಘನರೋಷ ತಾಳಿ ಮಲಜನನಿ ಧೂರ್ತೆ ದೂಡಲು ವನವಾಸ ಲೇಸೆಂದು ತಿಳಿದು ನಿನ್ನ ನೆನೆಯೆ ತಾ ನಡೆದ ಘನಮಹಿಮ ಶ್ರೀಮನ್ನಾರಾಯಣ ಸ್ಥಿರಪಟ್ಟವ ನಾಡಿದ 1 ಖಳ ಕುರುಪಗೊಡೆತನವು ಭಲೆ ಧರ್ಮಗೆ ವನವಾಸವು ಬಲು ಮಾನವಂತೆ ದ್ರೌಪದಿಯು ಜಲಜನಾಭನೆ ನೀನೆ ಗತಿಯೆನಲು ಒಲಿದು ಬೆಂಬಲನಾಗಿ ಪಾಂಡವರ ಪೊರೆದೆ 2 ವರಮುನಿಯ ಶಾಪದಿಂದರಸನಿಂ ಪ್ರದ್ಯುಮ್ನ ಕರಿರಾಜನಾಗಿ ಮಡುವೊಳು ಕ್ರೀಡಿಸೆ ಭರದಿ ನೆಗಳಿಯು ಪೀಡಿಸೆ ಶ್ರೀ- ಹರಿಯೆಂದು ಮೊರೆಯಿಡÀಲು ಶ್ರೀ- ಕರದಿಯುದ್ಧರಿಸಿದೆ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು