ಒಟ್ಟು 1683 ಕಡೆಗಳಲ್ಲಿ , 104 ದಾಸರು , 1261 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಡು ಕೊಡು ಕೊಡು ಹರಿಯೆ ಕೆಡದಂಥ ಪದವಿಯ ಒಡನೆ ನಿಮ್ಮಂಘ್ರಿಯ ಕಡುದೃಢ ಭಕುತಿಯ ಪ ತ್ರಿಜಗ ಪರಿಪಾಲಕ ಭಜಿಸಿಬೇಡುವೆ ನಿಮ್ಮ ಭಜನೆಸವಿಸುಖಲಾಭ 1 ಪರಕೆ ಪರತರವೆನಿಪ ಪರಮಪಾವನ ನಿಮ್ಮ ಚರಿತ ಪೊಗಳಿ ಬಾಳ್ವ ಪರಮಾನಂದದ ಜೋಕು 2 ಯತಿತತಿಗಳು ಬಿಡದೆ ಅತಿ ಭಕ್ತಿಯಿಂ ಬೇಡ್ವ ಪತಿತ ತವಸೇವೆಯಭಿರುಚಿ ಎನ್ನೊಡಲಿಗೆ ಸತತ 3 ಪರಿಭವ ಶರಧಿಯ ಕಿರಿಯಾಗಿ ತೋರಿಪ ಪರಮಪುರುಷ ನಿಮ್ಮ ಕರುಣ ಚರಣ ಮೊರೆ 4 ದುಷ್ಟ ಭ್ರಷ್ಟತೆಯಳಿದು ಶಿಷ್ಟರೊಲುಮೆಯಿತ್ತು ಅಷ್ಟಮೂರುತಿ ನಿಮ್ಮ ಶಿಷ್ಟಪಾದದ ನಿಷ್ಠೆ 5 ಕನಸು ಮನಸಿನೊಳೆನ್ನ ಕೊನೆಯ ನಾಲಗೆ ಮೇಲೆ ನೆನಹು ನಿಲ್ಲಿಸಿ ನಿಮ್ಮ ಕರುಣಘನ ಕೃಪೆ 6 ನಾಶನಸಂಸಾರದಾಸೆಯಳಿದು ನಿಜ ಸಿರಿ 7 ಮೂರ್ಹತ್ತು ಮೂರುಕೋಟಿ ವಾರಿಜಾಸನ ಸುರರು ಸೇರಿ ಭಜಿಪ ನಿಮ್ಮ ಮೂರುಕಾಲದ ನೆನಪು 8 ಅಂತರ ಶೋಧಿಸಿ ಅಂತರಾತ್ಮನ ಕಂಡು ಸಂತಸದ್ಹಿಗ್ಗುವ ಸಂತರ ಮತವರ್ಣ 9 ಸರ್ವಜ್ಞರೆನಿಸಿದವರ ಶರಣರ ಸಂಗಕರುಣಿಸಿ ಕರುಣದಿ ಪರಮ ಜ್ಞಾನೆನುವ ಪದವಿ 10 ಮಿಗಿಲಾಗಿ ನಿರ್ಧರಿಸಿ ಸಿರಿವರನಂಘ್ರಿಯೇ ಜಗಮೂರಧಿಕೆಂಬ ಸುಗುಣಗುಣಾಶ್ರಮ11 ಧರೆಮೂರು ತಲೆಬಾಗಿ ಪರಮಾದರದಿ ಪಾಡ್ವ ಹರಿನಾಮ ಕೀರ್ತನೆ ಪರಮಾದರದಿ ಪಾಡ್ವ 12 ಶಮೆಶಾಂತಿದಯೆಭಕ್ತಿ ವಿಮಲಗುಣಭೂಷಣತೆ ಸುಮನಸಸಮನಿಷ್ಠೆ ಅಮಿತಮತಿವರ ಶ್ರೀ 13 ಮಿಥ್ಯೆವರ್ಜಿತವಖಿಲ ಸತ್ಯತೆ ಸದಮಲ ನಿತ್ಯ ನಿರ್ಮಲವೆನಿಪ ತತ್ವದರ್ಥದ ವಿವರ 14 ತನುನಿತ್ಯ ಸ್ವಸ್ಥತೆ ಘನಕೆ ಘನತರವಾಗಿಮಿನುಗುವ ಘನಮುಕ್ತಿ ಮನುಮುನಿಗಳ ಪ್ರೇಮ ಶ್ರೀರಾಮ15
--------------
ರಾಮದಾಸರು
ಕೊಡು ಬೇಡುವೆನೊಂದ ಚಿದಾನಂದಕೊಡು ಬೇಡುವೆನೊಂದಕೊಡು ಬೇಡುವೆನೊಂದಕಡೆ ಹಾಯ್ದು ಹೋಗಿ ಮೆಲ್ಲಡಿಯಾದ ನಿಮ್ಮ ಪಾದದಡಿಯೊಳಡಗುವುದಾ ಪ ನಿತ್ಯ ನಿರಂಜನ ಕರ್ಮ ನಿರ್ಮಾಯವಾದ ಷ-ಡೂರ್ಮೆ ವಿರಹಿತೆಂಬ ಪೆರ್ಮೆಯೊಳಡಗುವುದ 1 ವಿಶ್ವಾತ್ಮ ವಿಶ್ವಾಧಾರ ವಿಶ್ವಹರ ವಿಶ್ವವಿಶ್ವದಾಕಾರ ಸ್ವಸ್ವ ನಿಸ್ವನದ ಸ್ವಸ್ವಪೂರಿತ ಮ-ಹಾಸ್ವಯಂ ಜ್ಯೋತಿಯೆ ಭಾಸ್ವ ಮೂರುತಿ ಈಗ 2 ಶತಕೊಟಿ ಸೂರ್ಯರಾಕಾರ ಶತಾಶತ ಶತವಿಂದು ಪ್ರಭಾವಕಾರಸ್ತುತಿಗೆ ಮೀರಿದ ದೊರೆಯೋಗಿ ಚಿದಾನಂದಪತಿಯ ಪಾದಪದ್ಮನುತಿಸಿ ಕೊಡುವುದೀಗ 3
--------------
ಚಿದಾನಂದ ಅವಧೂತರು
ಕೊಡುವವನು ನೀನು ಕೊಂಬುವನು ನಾನು ಪ ಬಡಮನದ ಮನುಜನ ಬೇಡಿ ಫಲವೇನುಅ.ಪ ಹದಿನಾರು ಹಲ್ಲುಗಳ ಬಾಯ್ದೆರದು ಬೇಡಿದರೆ ಇದು ಸಮಯವಲ್ಲೆಂದು ಪೇಳಿ ತಾನು ಮದನ ಕೇಳಿಗೆ ನೂರನೊಂದಾಗಿ ನೋಡುವನು ಮದಡ ಮಾನವನೇನು ಕೊಡಬಲ್ಲ ಹರಿಯೆ 1 ಗತಿಯಲ್ಲವೆಂತೆಂದು ನಾನಾ ಪ್ರಕಾರದಲಿ ಮತಿಗೆಟ್ಟು ಪೊಗಳಿದರೆ ಅವನು ತನ್ನ ಸತಿಸುತರ ಕೇಳಬೇಕೆಂದು ಮೊಗ ತಿರುಹುವ ದುರುಳ ಮತ್ತೇನು ಕೊಡಬಲ್ಲ ಹರಿಯೆ 2 ಹೀನ ವೃತ್ತಿಯ ಜನರಿಗಾಸೆಯನು ಬಡುವದು ಗಾಣದೆತ್ತು ತಿರುಗಿ ಬಳಲಿದಂತೆ ಭಾನು ಕೋಟಿ ತೇಜ ವಿಜಯವಿಠ್ಠಲರೇಯ ನೀನಲ್ಲದನ್ಯತ್ರ ಕೊಡುಕೊಂಬುರಂಟೆ 3
--------------
ವಿಜಯದಾಸ
ಕೋಟಿ ಪೂಜೆಗೆ ಸಮವು ಸ್ತೋತ್ರವು ಸಾಟಿಯಿಲ್ಲ ಮನಾಲಯಕ್ಕೆ ಭ ವಾಟವಿಯ ದಾಟುವರು ಸುಲಭದಿ ಪರಮ ವೈಷ್ಣವರು 1 ಕರಿ ಕನಕಕಶಿಪುಸುತಜಾಮಿಳ ನರಪ ರುಕ್ಮಾಂಗದನು ದ್ರೌಪದಿ ದುರುಳ ರಾವಣನನುಜ ಮನು ಪೌತ್ರನು ವಶಿಷ್ಠ ಮುನಿ ಸುರನದೀಸುತ ಶುಕನು ಶೌನುಕ ಬಲಿ ಕಿರೀಟಿಗಳು 2 ಇವರು ಮೊದಲಾದವರು ಭಕ್ತ ತವಕದಲಿ ಸಂಪಾದಿಸಿದರಿವರಂಘ್ರಿಯ ಸ್ಮರಣೆ ತವತವಗೆ ಕೊಡುತಿಹುದು ನಿತ್ಯದಿ ಕವಿವಿನುತ ಗುರುರಾಮ ವಿಠಲನ ದಯೆ ಪಡೆಯಬಹುದು 3
--------------
ಗುರುರಾಮವಿಠಲ
ಕೋಲ ಕೋಲನ್ನ ಕೋಲ ಕೋಲ ಕೋಲನ್ನ ಕೋಲಕೋಲ ಹೊಯ್ದುಪಾಡಿ ನಮ್ಮ ಜಾಣರಂಗಗೆ ಪ. ಲೋಕನಾಯಕ ವ್ಯಾಸ ಮುನಿಗಳಿಗೆ ಏಕೋ ಭಾವದಿಂದ ನಮಿಸಿಹಾಕಿರೆಮ್ಮ ಕೋಲ ಹೊಯ್ದುವಾಕ್ಯಗೆಲಿಸೆಂದು1 ಮಿತ್ರೆ ರುಕ್ಮಿಣಿದೇವಿ ಕರೆದುಮಿತ್ರಾದಿಗಳಿಗೆ ಹೇಳಿದಳುಮುತ್ತಿನ ಕೋಲ ತೊಳಿಯಿರವ್ವಉತ್ತಮ ಜಲದೊಳು 2 ರಾಸ ಕ್ರೀಡೆಯಲ್ಲಿ ವನಿತೆಯರುವಾಸುದೇವ ಪಿಡಿದ ಕೋಲ ಸೋಸಿಲೆ ಪೂಜಿಸಿರಮ್ಮಲೇಸು ಕೊಡಲೆಂದು 3 ಮಂದಗಮನೆಯರೆಲ್ಲ ಕೋಲಿಗೆ ಗಂಧ ಅಕ್ಷತೆ ಏರಿಸಿರೆ ಮುಂದಾಗಿ ಬಲಗೊಳ್ಳಿರೆಲ್ಲವೃಂದಾರಕರನ್ನ4 ನಲ್ಲೆಯರು ಮುತ್ತಿನ ಕೋಲಿಗೆ ಮಲ್ಲಿಗೆ ಸಂಪಿಗೆ ಏರಿಸಿರೆಎಲ್ಲಾ ಫಲಗಳಿಟ್ಟು ಕೈಯ್ಯನಲ್ಲೆಯರು ಮುಗಿದಿರೆ 5 ಜಾಣೆಯರು ನೀವೆಲ್ಲ ಮೊದಲೆವಾಣಿಯ ಬಲಗೊಳ್ಳಿರೆ ಕಲ್ಯಾಣವಾಗಲೆಂದು ಕೈಯ್ಯಮಾಣಗೆ ಮುಗಿದಿರೆ 6 ಮೃಡನ ಮಗನ ಮೊದಲೆ ನೆನೆದುಪಿಡಿಯಿರಮ್ಮ ಕೋಲ ನಿಮ್ಮನುಡಿಯಗೆಲಿಸಲೆಂದು ದ್ರವ್ಯವಕೊಡಿರೆ ದಾನವ 7 ಇಂದು ಗೆಲಿಸೆಂದು 8
--------------
ಗಲಗಲಿಅವ್ವನವರು
ಕ್ಷಣತೋರಿ ಇಲ್ಲದಂತಾಗುವ ವಿಷಮ ಮಹ ಕನಸಿನ ಮೋಹದಿಂ ಕೆಡಬೇಡ ಮನುಜ ಪ ಹಲವು ಜನಮದಿ ಬಿದ್ದು ತಿಳಿಯದೆ ಇಹ್ಯಪರಕೆ ತೊಳಲುತ ಬಳಲುತ ತಿರುತಿರುಗಿ ಗಳಿಸಿದ ನರಜನುಮ ವಿವರಿಸಿ ನೋಡದೆ ಕಳಕೊಂಡು ಬಳಿಕಿನ್ನು ಸುಲಭವಲ್ಲೆಲೆ ಖೋಡಿ 1 ನೀರಮೇಲಣ ಗುರುಳೆಯಂತೆ ಕಾಂಬುವ ಈ ನರಕ ಮೂತ್ರದ ತನುಭಾಂಡವಿದು ಅರಿಯದೆ ಮೋಹಿಸಿ ಪರಿಪರಿ ಕುಣಿಕುಣಿದು ಪರಮ ರೌರವ ನರಕಕ್ಹೋಗ ಬೇಡೆಲೆ ಖೋಡಿ 2 ಜವನÀದೂತರು ಬಂದು ಕವಿದುಕೊಳ್ಳಲು ಆಗ ಕಾಯುವರಾರಿಲ್ಲ ಕೈಪಿಡಿದು ದಿವನಿಶೆಯೆನ್ನದೆ ಭವಹರ ಶ್ರೀರಾಮ ದೇವನ ನೆರೆನಂಬಿ ಭವಮಾಲೆ ಗೆಲಿಯೊ 3
--------------
ರಾಮದಾಸರು
ಕ್ಷಮಿಸೆನ್ನ ದೋಷಗಳ ಕ್ಷಿಪ್ರದಿ ಹರಿ ಪ ಕ್ಷಮೆಯನ್ನು ಧರಿಸಿದ ಕಮಲಾನಿವಾಸನೆ ಅ.ಪ ಕರಣತ್ರಯದಿಕಾಲಹರಣವಿಲ್ಲದೆ ಪಾಪಾ ಚರಣೆಯಿಂ ದೋಷದ ಭರಣಿಯಾದೆನು ಹರಿ 1 ಮಾಡಬಾರದ ಪಾಪ ಮಾಡುವೆನನುದಿನಸ ಮೂಢನ ಸುಕೃತವನಾಡಿ ತೋರಿಸಲೇಕೆ 2 ಹರಿಗುರುಹಿರಿಯರ ಜರಿದು ಸಜ್ಜನರನು ತೊರೆದು ದುರ್ಜನರೊಳು ಬೆರೆದು ಪಾಮರನಾದೆ3 ಸರ್ವಸಹಾಧಿಪ ಸರ್ವಚೇತನದೀಪ ಸರ್ವಾಪರಾಧವ ನಿರ್ವಹಿಸುವ ಭೂಪ 4 ದುರಿತವೈರಿಯೆ ನಿನ್ನ ಮರೆಹೊಕ್ಕ ಮನುಜಗೆ ದುರಿತ ದುಃಖಗಳುಂಟೆ ವರದವಿಠಲರಾಯ 5
--------------
ವೆಂಕಟವರದಾರ್ಯರು
ಕ್ಷಮಿಸೆನ್ನ ದೋಷಗಳ-ಕ್ಷಿಪ್ರದಿ ಹರಿ ಪ ಕ್ಷಮೆಯನ್ನು ಧರಿಸಿದ ಕಮಲಾ ನಿವಾಸನೆ ಅ.ಪ. ಕರಣ ತ್ರಯದಿ ಕಾಲ-ಹರಣವಿಲ್ಲದೆ ಪಾಪಾ ಚರಣೆಯಿಂದೋಷದ ಭರಣಿಯಾದೆನು ಹರಿ 1 ಮಾಡಬಾರದ ಪಾಪ ಮಾಡುವೆನನುದಿನ ಮೂಢನ ಸುಕೃತವ ನಾಡಿ ತೋರಿಸಲೇಕೆ 2 ಹರಿಗುರುಹಿರಿಯರ-ಜರಿದು ಸಜ್ಜನರನು ತೊರೆದು ದುರ್ಜನರೊಳು ಬೆರೆದು ಪಾಮರನಾದೆ 3 ಸರ್ವಂಸಹಾಧಿಪ ಸರ್ವಚೇತನ ದೀಪ ಸರ್ವಾಪರಾಧವ ನಿರ್ವಹಿಸುವ ಭೂಪ 4 ದುರಿತ ವೈರಿಯೆ ನಿನ್ನ-ಮೊರೆಹೊಕ್ಕಮನುಜಗೆ ದುರಿತದುಃಖಗಳುಂಟೆ-ವರದ ವಿಠಲರಾಯ 5
--------------
ಸರಗೂರು ವೆಂಕಟವರದಾರ್ಯರು
ಖಗಗಮನ ಜಗದ ಜೀವನ ರಘುವಂಶೋದ್ಧಾರಣ ನಗಧರನೆ ನಿಗಮಗೋಚರ ನಾಗಶಯನ ಮುರಮರ್ದನ ಪ ವನಜಸಂಭವವಿನುತ ಮನುಮುನಿವಂದಿತ ಜನಕಜೆಯ ಪ್ರಾಣಪ್ರಿಯ ವನಮಾ ಲನೆ ಭವಮೋಚನ ಜಯವಾಮನ ಸುಖಧಾಮನೆ ಇನಕೋಟಿಪ್ರಭಾಮಯ ವನಜಾಕ್ಷನೆ 1 ಸತಿಯ ಪಾಷಾಣಸ್ಥಿತಿವಿಮೋಚನ ಪತಿತಪಾವನ ಸತ್ಯಭಾಮೆರಮೆಯ ನಾಥ ನುತಕಿಂಕರ ಹಿತಮಂದಿರ ಜಿತದಶಶಿರ ಹತಮುಪ್ಪುರ ನತಿಹಿತ ರತಿ ಪತಿಪಿತ ಕ್ಷಿತಿಧವ 2 ದಾಮೋದರ ಶ್ರೀರಾಮ ಭಕುತಪ್ರೇಮ ನಿಸ್ಸೀಮ ಸ್ವಾಮಿ ನೀಲಮೇಘಶ್ಯಾಮ ಭೂಮಿಜ ವರಸ್ಮರಣೀಕರ ಕಾಮಿತ ವರವೀಯುವ ಸ್ಥಿರವಿಮಲಚರಿತ ಕರುಣಾಕರ 3
--------------
ರಾಮದಾಸರು
ಖಗವರನೇ ಪಾಲಿಸೋ ಪ ಪೆಗಲೊಳು ಹರಿಯನು | ಮಿಗೆ ಭಕುತಿಲಿ ಪೊತ್ತುನಗಧರ ಬಿಂಬವ | ನಗುತ ನಖದಿ ನೋಳ್ಪ ಅ.ಪ. ವೇದೋದಿತ ಕ್ರಿಯ | ಕಾದ್ಯಭಿಮಾನಿಯೆವೇದಮಯನೆ ಹರಿ | ಗಾದೆಯೊ ವಾಹನಸಾಧಿಸಿ ಶ್ರೀಹರಿ | ಪಾದಾಂಬುಜಗಳಹಾದಿಯ ತೋರೊ ಅ | ಗಾಧ ಮಹಾತ್ಮಾ 1 ಸಾಸಿರ ಬೃಹತಿಯ | ಸೂಸಿ ನೀ ಪೊಗಳುತಸಾಸಿರ ನಾಮನು | ಕೇಶವ ನೊಲಿಮೆಯಪೋಷಿತ ನಾಗಿಹೆ | ಆಶುಗ ಹೃದಯಾಕಾಶದೊಳಿರುತಿಹ | ಶ್ರೀಶನ ತೋರಿಸಿ 2 ಪಾವಮಾನಿಸುತ | ಪಾವಿಸಿ ಮನ್ಮನಭಾ5¥5 | ಗೋವಿಂದ ವಿಠಲನ |ಪಾವನ ನಾಮ ಸು | ಭಾವನ ಉಣಿಸುತಕೋವಿದ ಸಂಗತಿ | ಈವುದು ನೀ ಸದ 3
--------------
ಗುರುಗೋವಿಂದವಿಠಲರು
ಗಂಗೆ ಮಂಗಲ ತರಂಗೆ ಪಾಹಿ ಪಾಪಭಂಗೆ ಹರಿಪಾದಸಂಗೆ ಪ ನಿತ್ಯ ನೆಲಸಿದೆ ಮತ್ತೆ ಸ್ಮರಿಪರ ಚಿತ್ತದೊಳ್ ವಾಸಿಸಿದೆ 1 ಸಗರಪುತ್ರರ ಪವಿತ್ರಿಸಿದೆ ಜಗವರಿಯೆ ಜಹ್ನುತನಯೆಯಾದೆ 2 ರಾಜೇಶ ಹಯಮುಖ ತನಯೆ ರಾಜಧರ್ಮನು ನಿನ್ನ ತಟದಲ್ಲಿ ಮೂಜಗವು ತಾ ಪೊಗಳುವಂದದಿ ವಾಜಿಮೇಧನ ಗೈದನಾದರದಿ 3
--------------
ವಿಶ್ವೇಂದ್ರತೀರ್ಥ
ಗಜಮುಖ ಗಣನಾಥಾ | ಬೇಡುವೆಸುಜನರ ಪೊರೆ ಎಂದೂ ಪ ಅಜನಯ್ಯನು ಶ್ರೀರಾಮನು ನಿನ್ನನುಪೂಜಿಸಿ ಪ್ರಥಮದಿ ಜಗಕೆ ತೋರಿದನುಅ.ಪ. ದಶಮುಖ ರಾವಣನು ನಿನ್ನಹಸನಾಗಿ ಪೂಜಿಸದೇ |ವಶನಾದ ಮರಣಕೆ ರಣರಂಗದೊಳುಬಿಸಜ ಸಂಭವವರ ಬಹುವಾಗಿದ್ದರೂ 1 ಯಮಸುತ ಮೊದಲಾಗಿ ನಿನ್ನನಮಿಸಲು ಅಧ್ವರದೀ |ಅಮಮ ಪಾಪಾತ್ಮಕರ ಮಿತರಸವರುತಸ್ವಾಮಿ ಎನಿಸಿದನು ಅಪಾರ ರಾಜ್ಯಕೆ 2 ಗುರುಗೋವಿಂದ ವಿಠಲನಾ | ಕರುಣಭರಣವಮಿತ ಪಡೆದಾ |ವರದಾಯಕ ವಿಘ್ನವ ಕಳೆಯುತಅರವಿದೂರ ಪದರಜವನೆ ಕಾಣಿಸೋ 3
--------------
ಗುರುಗೋವಿಂದವಿಠಲರು
ಗಣಪತಿ ಶಾರದೆಗೆರಗಿದೆ ಇಂದೇ | ಇಬ್ಬರ ಹೃದಯದಿ ಕರುಣದಿ ಬಂದೆ | ನುಡಿಸಿದರ್ವಚನವ ಒಂದೊಂದು ತಂದೆ | ಕೇಳಿರಿ ಜನರೆಲ್ಲಾ ಕಿವಿಗೊಟ್ಟು ಬಂದೆ 1 ನರನಾಗಿ ಬಂದು ನೀ ಮಾಡಿದಿ ಏನಾ | ತಿಳಿಯದೆ ಬೊಗಳುವಿಯಾತಕೆ ಶ್ವಾನಾ | ಎಳ್ಳಷ್ಟು ಇಲ್ಲದೆ ಹೋಯಿತು ಜ್ಞಾನಾ | ಇನ್ನಾದರೂ ಮಾಡೊ ಸದ್ಗುರುವಿನ ಧ್ಯಾನಾ2 ಮಾಡಲಿಲ್ಲಾ ಪುಟ್ಟಿ ನೀ ದಾನ ಧರ್ಮಾ | ಮಾಡಿದಿ ತಿಳಿಯದೆ ನೀ ಕೆಟ್ಟ ಕರ್ಮಾ | ಆಡಿದಿ ನೀ ಸಾಧುಸಂತರಿಗೊರ್ಮಾ | ನೋಡಿಕೊ ನಿನಗಿಲ್ಲದಾಯ್ತು ಶರ್ಮಾ 3 ಮಾಡಿದ ಬದುಕನು ಸುಮ್ಮನೆ ಕಳೆದೆ | ಮಾಡುವಾಗ ಬಹು ನಿಜವೆಂದು ತಿಳಿದೆ | ನೋಡದೆ ಪೂರ್ವದ ಸುಕೃತವನಳಿದೆ | ರೂಢಿಯೊಳಗೆ ಪಾಮರನಾಗಿ ಬೆಳೆದೆ 4 ಮಾಡುವ ಕರ್ಮಕೆ ಮನವೇ ಸಾಕ್ಷೀ | ಮಾಡುವಿ ಜಪ ನಿನಗ್ಯಾಕೀ ರುದ್ರಾಕ್ಷೀ | ಮಾಡಿದನೇ ಗುರು ಹೀಗೆಂದು ದೀಕ್ಷಾ | ಆಡಲ್ಯಾತಕೊ ನಾಳೆ ಆದೀತೋ ಶಿಕ್ಷಾ 5 ಹುಣಶಿ ಹಣ್ಣ ಹಚ್ಚಿ ಬೆಳಗಿದಿ ಗಿಂಡೀ | ಎಣಕೀ ಶರಣ ಮಾಡಿ ಅಲ್ಲೇನು ಕಂಡೀ | ಸಂತರ ನಿಂದಾ ಬಲು ಮಾಡಿ ಉಂಡೀ | ಅಂತರಂಗದಿ ಇರು ಛೇ ಹುಚ್ಚ ಮುಂಡೀ 6 ಹಗಲೂ ಇರುಳೂ ಎದ್ದುಂಬುವಿ ಕೂಳೂ | ಕೂಳಿಗೆ ಆದಿ ನೀ ಒಬ್ಬರ ಆಳೂ | ಬಲು ಮಂದಿ ಮನೆಯನು ಮಾಡಿದಿ ಹಾಳೂ |ಏನು ಪುಣ್ಯ ಬಂದದ ಅದನಾರ ಹೇಳು 7 ಹಗಲೂ ಇರುಳೂ ಎದ್ದು ಮಾಡಿದಿ ಬದಕಾ | ಮಾಡುತ ಮಾಡುತ ಆದೆಲ್ಲೊ ಮುದುಕಾ | ಸಾಯುವ ತನಕಾ ಬಿಡಲಿಲ್ಲೊ ಚುದಕಾ | ಸತ್ತಮೇಲೆ ನೀ ಆಗುವಿ ಶುನಕಾ 8 ಏನೇನಿಲ್ಲದೆ ಹೋಯಿತು ಬುದ್ಧೀ | ಶಾಸ್ತ್ರ ಪುರಾಣದಿ ಕೇಳಿಲ್ಲ ಸುದ್ದೀ | ಇರುಳ ಕಂಡ ಕುಣಿ ಹಗಲ್ಯಾಕೆ ಬಿದ್ದೀ | ಮರುಳಾದ್ಯಾ ಯಮ ನಾಳೆ ಕೊಂದಾನೊ ಗುದ್ದೀ 9 ಸಂಸಾರ ನಂಬಿದಿ ನಿಜದಲಿ ಹ್ಯಾಂಗ | ಸದ್ಗುರು ಪಾದವ ನಂಬೋ ನೀ ಹಾಂಗ || ಸಂಶಯಾ ಅದಕಂಜಿ ಬಿಟ್ಟರೆ ಈಗ |ಕಾಂಶಿಲಿ ಬಡಿದಾರು ತಿಳಿದೀತು ಆಗ 10 ಬೆಳಕಿನೊಳಗ ಒಂದು ನೋಡುವ ಕಣ್ಣು | ಕತ್ತಲಿಯೊಳ ಗೊಂದು ಕಾಂಬುವ ಕಣ್ಣು | ಕತ್ತಲಿ ಬೆಳಕನ್ನು ನೋಡುವ ಕಣ್ಣು | ಅದ ಬಿಟ್ಟು ಏನ ನೋಡುತಿ ಮಣ್ಣು 11 ಅನುದಿನ ಶಾಸ್ತ್ರ ಪುರಾಣಾ | ಅದರೊಳಗಿನ ಮಾತ ತಿಳಿಯದೆ ಕೋಣಾ || ಅರ್ಥವ ಹೇಳುವಿ ಮಂದಿಗೆ ಜಾಣಾ | ರುವ್ವಿಯ ಬೇಡಲು ಹೋಯಿತು ಪ್ರಾಣಾ12 ಕಂಡರೆ ನೋಡುವಿ ಹೆರವರ ಹೆಣ್ಣು | ಚೆಲುವೆಂದೂ ಇಟ್ಟೆಲ್ಲೊ ಆಕೆಗೆ ಕಣ್ಣೂ | ಆದರೆ ಹತ್ತ್ಯಾವೊ ಆಕೆಯ ಹುಣ್ಣು | ಕಡೆಯಲಿ ಬಿದ್ದಿತು ಬಾಯಲಿ ಮಣ್ಣು 13 ನಿತ್ಯ ತೆಗೆದುಕೊಳ್ಳುವಿ ದೇವರ ತೀರ್ಥಾ | ಮತ್ತಿನ್ನು ಬಿಡಲಿಲ್ಲ ಮನದ ಸ್ವಾರ್ಥಾ || ಕತ್ತೆಯ ಹಾಂಗ ನೀನೊದರುವಿ ವ್ಯರ್ಥಾ | ಎಂದೆಂದಿಗೂ ದೊರೆಯದು ಆ ಪರಮಾರ್ಥಾ 14 ತನುವು ನಾನೆಂಬುವಿ ತನುವಿದು ತೊಗಲು | ತನುವಿಗೆ ಅವ ನೋಡು ಒಂಬತ್ತು ಹುಗಲು | ಚಿಂತಿ ಮಾಡುವದ್ಯಾಕೊ ಹಗಲೂ ಇರುಳೂ | ನಿನ್ನಾಧೀನವು ಹೀಗೆಂದು ಇರಲು 15 ದೂರ ಹೋಗದಿನ್ನು ಆಗದು ಕಾಶೀ | ದೂರ ಮಾಡಿ ಕಳಿ ನೀನು ಮೂರಾಶಿ | ತೀರದು ಶಿವಯೋಗ ಪುಣ್ಯ ರಾಶಿ | ಸೇರುವಿ ಸಾಯುಜ್ಯದಲಿ ಮಿರಾಶಿ 16 ಮಾಯಾ ಮಾಯಾ ಮಾಯಾ | ದುಡ್ಡಿನಂತೆ ಮಾಡೊ ಮನಕೆ ನಿರ್ಮಾಯಾ 17 ಮೀಶಿಯ ಹುರಿ ಮಾಡಿ ಮೇಲಕೆ ನೋಡಿ | ಕಾಲಾಗ ಸಿಕ್ಕವು ಮೋಹದ ಬೇಡಿ || ಮಾಡಬಾರದಂಥ ಕೆಲ್ಸವ ಮಾಡಿ | ಸಿಕ್ಕಿದೆಲ್ಲೊ ಗಾಂಡೂ ಇನ್ನೆತ್ತ ಓಡೀ 18 ಪಾದ ದೊರೆವುದಿನ್ನೆಲ್ಲಿ 19 ಕಾಮನ ಸುಡುವುದು ನೋಡು ಹೀಂಗಲ್ಲಾ | ಕಾಮನ ಶಿವ ಸುಟ್ಟರವ ಸಾಯಲಿಲ್ಲ || ಕಾಮನು ಸುಡುವ ಮೂರು ಲೋಕವನೆಲ್ಲ | ಕಾಮರಹಿತ ಭವತಾರಕ ಬಲ್ಲ 20 ಕಟ್ಟಿದಿ ಮನೆಯನು ನೀ ಬಲು ಛಂದಾ | ಬಿಟ್ಟು ಹೋಗುತಿ ಇದದಾವಂದಾ || ತೊಟ್ಟಿಲೊಳಗೆ ಇದ್ದ ಹೇಳಿದ ಕಂದಾ | ಎಷ್ಟಂತ ಹೇಳಲಿ ನೀ ಮತಿಮಂದಾ 21 ಪಾತಕ ಬರುವದು ಬಿಡಬ್ಯಾಡ ವಾಜಿ | ನೀತಿಯಿಂದಲಿ ಮಾಡು ನೀ ಗುರು ಪೂಜಿ | ಯಾತನ ಬಡಿಸುವ ನಾಳಿನ ಪಾಜಿ 22 ಒದರುವಿ ಯಾತಕೆ ಬಾಯನು ಕಿಸ್ತು | ಬೆದರ ಬೇಡಾದುದಕೆನ್ನು ಅಸ್ತು || ಚತುರ ತನದಲಿ ಸಾಧಿಸು ನೀ ವಸ್ತು |ಆದರಿಂದಲಾಗುವದು ಆ ಮನ ಸ್ವಸ್ತು 23 ಪಾತಕ ಬರುವದು ತಿಳಿಯದೆ ಕೋಳಿ || ನೀತಿಯಿಂದಲಿ ತತ್ತ್ವ್ವ ಮಾತನು ಕೇಳಿ | ಘಾತಕ ಯಮ ನಾಳೆ ಬರುವನು ದಾಳಿ 24 ಭವ ಬಿಟ್ಟಿ | ಮಾಡದೆ ದಾನ ಧರ್ಮವ ಕೆಟ್ಟೀ || ಮಾಡಿದುದೆಲ್ಲಾ ನೀ ಜೋಕಿಲಿ ಇಟ್ಟಿ | ಮಾಡಲು ಬಾಧೆಯ ನೀ ಬಾಯ ಬಿಟ್ಟಿ 25 ನೆನೆದರೆ ದೃಢದಲಿ ರಾಮ ನಾಮ | ತನುವಿದು ಮುಂದೆ ಬಾರದು ನೇಮ || ಮನದೊಳು ಪುಟ್ಟಿತು ತಾನೆ ನಿಷ್ಕಾಮ | ಘನಸುಖ ತೋರಿತು ಅದು ಸಾರ್ವಭೌಮ 26 ಹುಟ್ಟಿ ಹುಟ್ಟಿ ನೀ ಯಾತಕೆ ಸತ್ತೀ | ಹುಟ್ಟುತ ಸಾವುತ ನಿತ್ಯದಿ ಅತ್ತೀ || ಹುಟ್ಟು ಸಾವನ್ನು ಕಳೆಯಲೊ ಕತ್ತೀ | ಕೆಟ್ಟಿಯೊ ಇನ್ನಾರ ಬೆಳಿ ಧರ್ಮಾ ಬಿತ್ತೀ 27 ಶಾಸ್ತ್ರ ಪುರಾಣವ ಓದುವಿ ಬರಿದೇ | ಉತ್ತಮ ಸ್ತ್ರೀಯರ ಕಂಡು ನೀ ಕರೆದೆ || ನಿನ್ನೊಳು ತಿಳಿದು ನೀ ನೋಡುದು ಮರೆದೇ | ಸಾಧು ಸಂತರುಗಳ ಸೇವೆಗೆ ಮರೆದೆ 28 ಪಡಿ ಜೋಳಕೊಬ್ಬರ ಅಡಿಗಳ ಹಿಡಿವೆ | ಕೊಡುವದಿಲ್ಲೆಂದರೆ ದವಡಿಯ ಕಡಿವೆ || ಕೊಟ್ಟರೆ ಮನದೊಳು ಸಂತೋಷ ಪಡುವೆ | ಕೆಟ್ಟ ಮಾರ್ಗದಿಂದ ಕಡೆ ತನಕಾ ನಡಿವೆ 29 ಭವ ಪರಿಹರಿಸುವದಿದು ಏನು ಅರಿದು || ಭವದೊಳು ಬಿಟ್ಟರು ನಾಮವ ಮರೆದು | ಭವಕಿನ್ನು ಕರಸ್ಯಾರೊ ಆತನ ಬರದು 30 ಮಾಡಿದೆ ಏನು ಬದುಕನು ಹೇಳು | ಮಾಡಿದುದೆಲ್ಲಾ ತಿಂದೆಲ್ಲಾ ಕೂಳು || ಕೂಳಿಗಾಗಿ ಆದಿ ಒಬ್ಬರ ಆಳು | ನೋಡಿ ಏನು ಸದ್ಗತಿಯ ಹೇಳು 31 ಮನದೊಳು ಗಳಿಸಿದಿ ಕೆಂಚೀ ಹೊನ್ನು | ಗಳಿಸಿದವರು ಏನು ಒಯ್ದಾರು ಇನ್ನು || ಬಿಟ್ಟು ಹೋದರು ಹ್ಯಾಂಗ ಬಲ್ಲೆಲ್ಲಾ ನೀನು | ನಿಷ್ಠೆಯಿಂದಲಿ ಒಮ್ಮೆ ಹರಗುರು ಎನ್ನು 32 ಮಾಡಲಿಲ್ಲ ಒಂದು ನರನಾಗಿ ಯೋಗಾ | ಮಾಡುವಿ ಸುಖವೆಂದು ಸ್ತ್ರೀಯರ ಭೋೀಗಾ | ಆಡಲ್ಯಾಕೆ ಆಯುಷ್ಯ ಹಾರಿತು ಬೇಗಾ | ನೋಡಿಕೊಳ್ಳೊ ಇನ್ನು ತಿಳಿದೀತು ಈಗಾ 33 ಪರಿ ಸಂಸಾರ ಯುಕ್ತಿ | ಮಾಡಲು ಒಲ್ಲ್ಯೋ ಶ್ರೀ ಗುರು ಭಕ್ತಿ || ಹೋಯಿತೊ ದೇಹದೋಳ್ ನಿನ್ನ ಶಕ್ತಿ | ಸಾಧಿಸಲರಿಯೊ ನೀ ಜೀವನ್ಮುಕ್ತಿ 34 ಅನುದಿನ ವೇದಾ | ಸಾಧಿಸಿ ತಿಳಿಯದೆ ಜೀವಶಿವ ಭೇದಾ || ಕಾದಾಡಿ ಕೊಂಬುವದು ಸುಮ್ಮನೆ ವಾದಾ |ಬ್ಯಾಡಿನ್ನು ಶೋಧಿಸು ನಿನ್ನೊಳು ಬೋಧಾ 35 ಭವ ಬೀಜವ ಕೊಂಬೆ 36 ಮಾಯಾ ಮರವನು ತ್ಯಜಿಸು || ಧ್ಯಾನ ಮುದ್ರೆಯೋಳ್ ಮನವನು ನಿಲಿಸು | ಜಗವಿದು ನಿಜವೇ ನೋಡೆಲು ಕನಸು 37 ರೂಪದೊಳಗಿಲ್ಲಾ ಗುಣವೊಂದು ತೃಣವು | ಗುಣದೊಳಗಿಲ್ಲವು ರೂಪದ ಅಣುವು || ರೂಪ ನಾಮಕ್ರಿಯಾ ಆದೀತು ಹೆಣವು | ಆ ಪರಬ್ರಹ್ಮನೆ ತಿಳಿಯಿನ್ನು ಪ್ರಣವು 38 ಪಾದ | ಅರಿತು ಪೂಜಿಸಿದವ ಪರಶಿವನಾದ || ಅನುಭವಿ ಬಲ್ಲನು ಆ ಸುಖ ಸ್ವಾದ | ತನ್ನೊಳು ಆಲಿಸುತಲಿ ನಿಂತ ನಾದ 39
--------------
ಭಾವತರಕರು
ಗಣಪಾ ನೀ ಪಾಲಿಸೊ ಗಜಮುಖನೆ ವೋ ಪ ತ್ರಿಣಿಯಸತಿ ಗಿರಿಜಾಸುತನೆ ಕೇಳ್ ಮನುಮುನಿ ಸನಕಾದಿ ವಂದಿತ ಅಣಿದು ನೀ ರಕ್ಷಿಸಲು ನಿನಗಿ ನ್ನೆಣೆಯುಗಾಣೆನು ಸರ್ವಸಿದ್ಧಿ ವೋ 1 ವೇದಶಾಸ್ತ್ರ ಪುರಾಣ ವಿದ್ವ ಕ್ಕಾದಿ ರೂಪನೆ ದಿವ್ಯಪ್ರಣನಾ ನಾದರೂಪನೆ ಸರ್ವಮಂಗಳ ಸಾಧು ಶಿಖರನೆ ಸರ್ವಸಿದ್ಧಿ ವೋ 2 ಏಕದಂತನೆ ಷಣ್ಮುಖಾಗ್ರಜ ವಾಕ್ಕು ಶುದ್ಧಿಯೊಳಾಡಿಸೆನ್ನನೂ ಬೇಕು ನಿನ್ನಯ ಕರುಣಯಿತರವು 3 ವಾಸವಾರ್ಚಿತ ಶ್ರೀಗುರು ಹಿರಿ ದಾಸ ತುಲಸೀರಾಮ ನಿನ್ನಯ ದೋಷ ಅಂತಕನಾಮ ಯತಿಗಣ ಪ್ರಾಸು ಹೊಂದಿಸೊ ಯೀಶಪುತ್ರನೇ 4
--------------
ಚನ್ನಪಟ್ಟಣದ ಅಹೋಬಲದಾಸರು
ಗಣೇಶಸ್ತುತಿ ಭೂರಿ ಸುಂದರಾಂಗನೆ ಚಾರುಹಾಸ ಪಾಲಿಸೆನ್ನ ನೀರಜಭವ ಮಾಧವನುತ ಪ ಅಜಮುಖಾಮರೇಂದ್ರರು ಭಜಿಸಿ ಸಿದ್ಧಿಗೊಂಬರು ಕಮಲ ವಿಧೃತ ತ್ರಿಜಗವಿನುತ 1 ತ್ರಿಪುರ ದಹನಕಾಲದಿ ರಿಪುದವಾಗ್ನಿ ನಿಮ್ಮನು ಕರುಣಿದೆಯೊ ವಿಭು 2 ಸಾಮಜಾಸೈ ಪಾಲಿಸೆನ್ನ ಕಾಮಿತಗಳ ಕರುಣಿಸುತಲಿ3
--------------
ಬೇಟೆರಾಯ ದೀಕ್ಷಿತರು