ಒಟ್ಟು 34031 ಕಡೆಗಳಲ್ಲಿ , 136 ದಾಸರು , 11034 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(39ನೇ ವರ್ಷದ ವರ್ಧಂತಿ) ಭೂವರ ಭಾಗ್ಯದೇವಿಯ ಕೂಡಿ ಶುಭಕಾರಿ ಪ. ಏಕೋನ ಚತ್ವಾರಿಂಶತಿವತ್ಸರವು ಸಂತು ರಾಕುತನದೊಳೆನಗೆ ಬೇಕು ಬೇಕೆಂಬಾಶಾಪಾಶವ ಸುಡಲಾರೆ ಭೀಕರಗೊಳಿಪ ಬಗೆ ಮಾಕಳತ್ರನೆ ಸುಮ್ಮನ್ಯಾಕುಪೇಕ್ಷಿಪೆ ಕರು ಣಾಕರ ಕಡೆಗಣ್ಣಿಂದಲಿ ನೋಡು ಕಮಲಾಕ್ಷ 1 ಹಲವು ಹಂಬಲಿಸುತ ಬಳಲಿದೆ ದಿನದಿನ ಗಳಿತವಾಗಿಹ ದೇಹದಿ ಬಲವು ಕುಂದಿತು ಒಂದು ನೆಲೆಯ ಕಾಣದು ಕಳ- ವಳಿಕೆಯಿಂದಲಿ ಮನವು ಮೊಲೆಯ ಕಂದನೊಳ್ ಫಲ ಸಲುವುದೆ ಮಾತೆಗೆ ನಳಿನನಾಭನೆ ಎನ್ನ ತಪ್ಪೆಣಿಸದಿನ್ನು 2 ನಿನ್ನ ನಾಮವ ನಂಬಿ ನೆನೆವರಿಗಖಿಳಾರ್ಥ ಸನ್ನಹ ಸುಲಭನೆಂದು ಮುನ್ನಿನ ಮುನಿಗಳು ನುಡಿದ ಮಾತನು ಶ್ರುತಿ ಸನ್ನುತ ಮರೆಯಲೆಂದು ಎನ್ನ ಮನೋರಥ ಕೊಡುತ ಕರುಣಾಸಿಂಧು ಪನ್ನಗಾಚಲನಾಥ ಪಾವನಕರ ಬಂಧು 3
--------------
ತುಪಾಕಿ ವೆಂಕಟರಮಣಾಚಾರ್ಯ
(4) ಚನ್ನಾಕೇಶವ ಶರಣು ಶರಣು ಚೆನ್ನಕೇಶವರಾಯ ಚರಣಗಳೇ ಗತಿ ನಂಬಿದೆ ಜೀಯಾ ಪ ತರಳಧ್ರುವನಿಗಿತ್ತೆಯೊ ಬಹುಶ್ರೇಯ ವರದ ವೇಂಕಟ ಶ್ರೀರಂಗ ಚೆಲ್ವರಾಯಾ ಶರಣ ಶ್ರಿತನಭಯಾ ಆನಂದನಿಲಯಾಅ.ಪ ಅಂದುಗೆ ಗೆಜ್ಜೆಯ ಘಲುಘಲು ತುಂದಿಲನಗೆಮೊಸ ಪೀತಾಂಬರದಿಂ ಧಿಂದಿಮಿಕಿಟ ಕುಣಿಗೋವಿಂದಾ ನಿತ್ಯ ಮುಕುಂದ 1 ಕವಿಕುಲಸ್ತುತ್ಯನೆ ದೇವವರೇಣ್ಯ ಭವಸಾಗರ ತಾರಣ ಪ್ರಾವೀಣ್ಯ ಭುವನಗಳೆಲ್ಲಕು ನೀನೇ ಗಣ್ಯ ಪವಿತ್ರಯೋಗಿಯ ಧ್ಯಾನ ಹಿರಣ್ಯ ಪಾವನ ಪುಣ್ಯ ಶ್ರುತಿ ಪ್ರಾಮಾಣ್ಯ 2 ವಿದುರೋದ್ಭವ ಅಕ್ರೂರ ತ್ರಾತ ಮಧುರ ಬಾಂಧವ ಬದರೀನಾಥ ವಿಧಿ ಪಿತನರನಾರಾಯಣ ಪೂತ ಮಧುಕೈಟಭಾರಿ ಬಹುಪ್ರಖ್ಯಾತ ಬುಧಪ್ರೀತ ಭಾಗ್ಯದಾತ 3 ಒಂದೇ ಅಳತೆಗೆ ಜಗವು ಮೂರಡಿ ಚಂದಿರ ಮುಖಿಮಣಿ ಕೊಟ್ಟನು ಕರಡಿ ನಿಂದೆಯಾ ಕಾಳಿಂಗನ ಮೇಲ್ಗಾರುಡಿ ತಂದೆ ಕರೆದನ ಕರುಣದಿ ಕರಪಿಡಿ ಇಂದೆ ಕಡೆಜನ್ಮಮಾಡಿ ಇಡು ನಿನ್ನಪದದಡಿ4 ಹೆಜ್ಜಾಜೀಶ್ವರ ಶಿವ ಶಂಕರನೆ ಸಜ್ಜನ ಮುನಿಗಣ ಹೃದ್ಭಾಸ್ಕರನೆ ದುರ್ಜನಶಿರಹರ ಶಂಖಚಕ್ರಧರ ವಜ್ರಿ ಅಜಹರಗಾಧಾರ ಧೀರ ಸುಜಯ ಭೂಮ್ಯೋದ್ಧಾರಿ ಜಂiು ಶ್ರೀಕರ 5
--------------
ಶಾಮಶರ್ಮರು
(40ನೇ ವರ್ಷದ ವರ್ಧಂತಿ) ಕ್ಷಿಪ್ರ ಪ್ರಸಾದಕರ ದೊರೆಯೆ ಅಜಭವಾ- ದ್ಯ ಪ್ರಮೇಯಾ ಸಂತಸುಗುಣಾಬ್ಧಿ ಹರಿಯೆ ಪ. ಇಳೆಯೊಳಗೆ ನಾ ಬಂದು ಕಳೆದೆ ನಾಲ್ವತ್ವರುಷ ಉಳಿದ ಪರಿಮಿತಿಯರಿಯೆ ಗಳಿತವಾಯಿತು ದೇಹ ಬಳಲಿದೆನು ಬಯಲಾಸೆ ಬಲೆಯೊಳಿಂದಿನವರೆಗು ನಳಿನನಾಭನೆ ನಿನ್ನ ನಂಬಿದೆನು ಮನವರಿತು ಮುಳುಗಲಾರೆನು ಮೋಹ ಕಡಲ ಮಾಧವನೆ ತಿಳಿಯದೆ ನಿನಗೆ ಪೊನ್ನೊಡಲ ಮುಂದಿಂತು ದುರಿತ ಸಿಡಿಲ 1 ದೇವಾಧಿದೇವ ತವ ಸೇವಾನುಕರನ ಹೊ- ನ್ನಾವರದೊಳಿರಿಸಲಿನ್ಯಾವನರಸಲಿ ಕೃಷ್ಣ ಭಾವ ಶುದ್ಧಿಯನರಿತು ಭಜನೆ ಮಾಡುವದೆಂತು ಸಾವಕಾಶವಿದ್ಯಾಕೆ ಸಾಹಿತ್ಯಗಳು ಜೋಕೆ ನಿತ್ಯ ಕೈಗೊಂಬ ಕೀರ್ತಿ ಸಂ- ಭಾವನಾ ಸುಖವ ನಾನುಂಬಾ ತರವ ಸಂ- ಭಾವಿಸು ದಯಾಂಬೋಧಿ ದೀನಾವಲಂಬ 2 ರಕ್ಕಸಾಂತಕ ನೀನೆ ದಿಕ್ಕೆಂದು ನಿನ್ನಿದಿರು ಬಿಕ್ಕಿ ಬಿರಿದಳಲುವೆನು ಸೊಕ್ಕಿ ಕಾಡುವ ದೊಡ್ಡ ಜಕ್ಕಣಿಯ ಕಾಲಿಂದ ತಿಕ್ಕಿ ತೀರಿಸು ನಿನಗ- ಶಕ್ಯವಾವುದು ಸ್ವರ್ಣಪಕ್ಷ್ಯೇಂದ್ರಗಮನಕರ ಚಕ್ರಭೂಷಣ ವೆಂಕಟೇಶದಾಸ ಜನ ಕಕ್ಕರದಿ ತೋರು ಸಂತೋಷ ಭಕ್ತಿಫಲ ದಕ್ಕುವಂದದಿ ಮಾಡು ದುರಿತಾಬ್ಧಿಶೋಷ 3
--------------
ತುಪಾಕಿ ವೆಂಕಟರಮಣಾಚಾರ್ಯ
(41ನೇ ವರ್ಷದ ವರ್ಧಂತಿ) ಸತ್ಯ ಸಂಕಲ್ಪಾನುಸಾರದಿ ನಡೆಸುವುದುತ್ತಮ ಬಿರುದಾದರು ಭೃತ್ಯನ ಬಿಟ್ಟನೆಂಬಪಕೀರ್ತಿ ಬರದಂತೆ ಚಿತ್ತದಲ್ಲಿರಲಾದರು ಪ. ಕಳೆದಿತು ಐದೆಂಟು ಮೇಲೊಂದು ವತ್ಸರ ಬೆಳೆದಿತು ಬಲು ಮತ್ಸರ ನೆಲನ ಮೇಲಡಿಯಿಡಲಿಲ್ಲ ಶಕ್ತಿಯು ಇಂಥ ಛಲದಿ ತೋರುವಿ ತಾತ್ಸಾರ ಬಳುಕಿ ಬಾಡಿದ ದೇಹವುಳುಹಲುತ ಸೇವಾ ಫಲಕೆ ಕಾರಣವೆಂಬೆನು ನಳಿನನಾಭನೆ ನಿನ್ನ ಮನವೆಂತಿರುವುದೆಂದು ತಿಳಿಯದೆ ಬಳಲುವೆನು 1 ವಯಿನು ತಪ್ಪಿದ ಬಳಿ- ಕ್ಯಾತರಗುಣವಪ್ಪುದು ಭೂತಪಂಚಕ ಸನ್ನಿಪಾತ ಸೂಚಿಸುವಂತೆ ಕಾತರತೆಯು ತಪ್ಪದು ಈ ತೆರದಲಿ ದೇಹ ರೀತಿಯಾಗಿರುವುದ ನೀ ತಿಳಿದಿರಲೆನ್ನಯ ಮಾತ ಕೇಳದೆ ಲಕ್ಷ್ಮೀನಾಥ ತಾತ್ಸಾರವಿಂತು ನೀತಿಯಾಗದು ಚಿನ್ಮಯ 2 ಜನನ ಮರಣ ಜೋಡಾಗಿರುವುದೆಂಬ ಸಿದ್ಧ ನಿನಗಿದು ಸುಲಭಸಾಧ್ಯ ಮನೆವಾರ್ತೆ ಮಡದಿ ಮಕ್ಕಳು ಮುಂತಾದುದಕೆಲ್ಲ ವನಜಾಕ್ಷ ನೀನೆ ಬಾಧ್ಯ ಕನಸಿಲಾದರು ನಿನ್ನ ನೆನವ ತಪ್ಪಿಸದಿರು ವಿನಯ ವೆಂಕಟರಾಯನೆ ನಿನಗಿಲ್ಲದಪಕೀರ್ತಿ ಎನಗಿಲ್ಲ ಮಹದಾರ್ತಿ ಘನಕಲ್ಪ ಸುರಭೂಜನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
(5) ದೇವರಹೊಸಹಳ್ಳಿ ಆಂಜನೇಯ (ಕೆಂಗಲ್ಲು ಸಮೀಪ) ಪರಿಪಾಹಿ ಸಂಜೀವರಾಯ ಜೀಯ ಕರವ ಮುಗಿವೆ ವಜ್ರಕಾಯ ಪ ವರ ಜಾಜಿ ಕೇಶವ ಪ್ರೇಮ ಧಾಮ ಅ.ಪ ರಾಮಾವತಾರದಿ ಹರಿಗೇ ನೀನು ನೇಮ ಸೇವಕನಾದೆ ಭರದೇ ಆ ಮಹೀಜಾತೆಗೆ ಮುದ್ರೆ ಸ್ವಾಮಿ ಪೇಳ್ದಂತೆ ನೀನು ಯಿತ್ತೆ 1 ಅಂಜನದೇವಿಕುಮಾರ ಶ್ರೀಮ ದಾಂಜನೇಯ ಗಂಭೀರ ಸಂಜೀವನಾದ್ರಿಯ ತಂದೆ ಪ್ರ ಭಂಜನ ಸೌಮಿತ್ರಿಗಂದೇ 2 ರಾಮನಾಮ ಧ್ಯಾನನಿರತ ಸುಖ ಶ್ಯಾಮನ ಕ್ಷೇಮ ಸುವಾರ್ತ ವ್ಯೋಮದಿ ಭಕುತಗೆ ಪೇಳ್ದೆ ಸುಪಿ ತಾಮಹ ಪದವಿಯ ಪಡೆದೆ 3 ವ್ಯಾಸಯತೀಂದ್ರ ಕರಪೂಜ್ಯಾ ನಿತ್ಯ ದಾಸರಪೊರೆವ ಸಾಮ್ರಾಜ್ಯ ದೋಷ ಶೋಷಣ ಪ್ರಭಾವ ಗುಣ ಭೂಷಣ ಸಜ್ಜನ ಜೀವ 4 ಭೂತ ಪ್ರೇತ ಬ್ರಹ್ಮ ಪಿಶಾಚಂಗ ಳಾತುರದಿಂ ಬಾಧಿತರು ಖ್ಯಾತಿಯ ಮಾರುತಿ ನಾಮಾಮೃತವ ಪ್ರೀತಿಯಿಂ ಸವಿವರೋ ಭೀಮಾ 4 ಹಿಂದಣ ಜನ್ಮದ ಪಾಪದಿಂದ ನೊಂದರು ಪ್ರಾರ್ಥಿಸಿ ತಂದೆ ಭಾವದುರಿತಂಗಳನಂದು ನಿ ರ್ಬಂಧಿಸಿ ಕಳೆಯುವೆ ಬಂಧು 5
--------------
ಶಾಮಶರ್ಮರು
(5) ಶ್ರೀನಿವಾಸ ವಿಪ್ರವಂದಿತ ಪಾಪಕೋಟಿ ಕುಲನಾಶಾ ಶ್ರೀವೆಂಕಟೇಶಾ ಪ ನಿಜನುಡಿಯ ಭೃಗುನುಡಿಯೆ ಮುನಿಮಂಡಲಿಯ ನಡೆಯೆ ತ್ರಿಜಗಾಗ್ರಪೂಜಿತ ಪರಬ್ರಹ್ಮ ನೀನೇ 1 ಪಶುವತ್ಸಗೋಪಾಲ ಸರ್ವವೂ ನೀನಾಗೆ ಬಿಸಜಭವ ಬೆದರುತ್ತ ಪದಕೆರಗಿದ 2 ಮೋಹಿನಿಯವೇಶದಿಂ ರಕ್ಕಸನ ಭಸ್ಮಿಸಿ ಪಾಹಿಮೆನಲಾ ದಕ್ಷ ವೈರಿಯ ರಕ್ಷಿಸಿದೆ 3 ಗಿರಯನೇ ಕೊಡೆವಿಡಿದು ಗೋಕುಲವನೆ ಕಾಯ್ದೆ ಸುರರಾಜ ಗರಿಮುದುರಿ ಶರಣೆಂದು ಬಂದ 4 ವಿಧವರದಿ ಬೆರೆದ ಹಿರಣ್ಯಕಶಿಪುವ ಬಗೆದು ಸದೆದೆ ಶಿವಕಾವಲಿನ ಬಾಣನಂ ಬಿಡವೇ 5 ಸಾಸಿರಗಳರವತ್ತು ಸಗರಸುತರನು ಸುಟ್ಟು ಘಾಸಿಹರಿಸಿದೆ ಜಗದೆ ಜೀವ ಜಂತುಳಿಗೆ 6 ಪಾತಕಿಯ ರಾವಣನು ಕಾರವರ ಕೊಂದೇ 7 ಬಲಿದ ಶಾಪವ ಕಳೆದು ಕಾಯ್ವ ಬಂಧೂ 8 ಸಾವುಂಡ ಶಿಶುವನು ಗುರುವಿಗೆ ನೀ ತಂದಿತ್ತೆ ನೋವುಂಡ ಇಂದ್ರಂಗೆ ಲೋಕಗಳನಳೆದೆ 9 ಅಜಕಪಾಲವ ಬಿಡಿಸಿ ಮೃತ್ಯುಂಜಯನ ಹರಸಿ ಅಜಮಿಳನ ನೀ ಮುಕ್ತಿಸ್ಥಾನಕ್ಕೆ ತಂದೆ 10 ಸರ್ವಕಾಲಗಳಲ್ಲು ಅಪರಾಧಿ ನಾನಯ್ಯ ಗರ್ವಿಯೆನಿಸದೆ ತಪ್ಪು ಕ್ಷಮಿಸಯ್ಯ ತಂದೆ 11 ಆನೆ ಅಳುವುದು ಕೇಳಿ ಮೊಸಳೆಬಾಯನು ಸೀಳ್ದೆ ನೀನೆ ಆಪದ್ಭಂದು ಕಾರುಣ್ಯಸಿಂಧು12 ಅರಗಿನ ಮನೆಯಲ್ಲಿ ಭರದಿಂದ ಬಾಂಧವರಿಗೆ ಉರಿಭಯವ ತಪ್ಪಿಸಿ ಪೊರೆದ ಪ್ರಭುವೇ13 ದ್ರುಪದ ಪುತ್ರಿಗೆ ಮಾನ ಸಂರಕ್ಷಣೆಯನು ಮಾಡಿ ಕೃಪೆತೋರಿಪಾರ್ಥಂಗೆ ಸಾರಥಿಯು ಆದೆ 14 ಕಾಲ ವಾಲಿಪ್ರಾಣಕೆ ಶೂಲ ಲೀಲೆಯಿಂ ಭಕ್ತರಂ ಪಾಲಿಸುವೆ 15 ಪಾವನದ ಪಾದಗಳನಿಂತು ಮುಡಿಯಮೇಲೆ ಭಾವಿಸುವೆ ಭವಕಳೆಯೆ ನಾತಾಳೆ ನಾಳೆ 16 ತಾಪಗಳು ಮೂರನುಂ ಹರಿಪ ಸಂಕಟದೂರ ಕಾಪಾಡು ಶ್ರೀಹರಿ ಬಂಧುಬೇರಿಲ್ಲ ಭಕ್ತಸತ್ರಾ 17 ಶರಣಸಂರಕ್ಷಣ ಬಿರುದು ಧರಸಿಹೆ ನಿತ್ಯ ಭರದಿ ಶಾಂತಿನೀಡೋ ಚರಣಕ್ಕೆ ಶರಣು 18 ಕ್ಷಾಮಡಾಮರ ಕಳೆಯೆ ಸುವೃಷ್ಟಿಯ ಕರೆವೆ ಕಾಮಿತಾರ್ಥದ ಕಾಮಧೇನು ಸ್ವಾಮಿ ತಾಯಿತಂದೆ 19 ಚಕ್ರಧರ ಚಕ್ರಧರ ಭಜಿಪ ಭಕ್ತರ ಪಾಲ ನರಸಿಂಹ ನರಸಿಂಹ 20 ಕ್ಷೇಮಕರಗರುಡನೇ ಧ್ವಜನು ವಾಹನನು ಭೀಮ ಹನುಮ ಪ್ರೇಮ ಹೆಜ್ಜಾಜಿಶ್ಯಾಮ ಸ್ವಾಮಿ21
--------------
ಶಾಮಶರ್ಮರು
(6) ವೀರನಗೆರೆ (ಮೈಸೂರು) ಮೂರುತಿ ಮಾರುತಿರಾಯನೆ ಸಾರಗುಣಾನ್ವಿತ ಶ್ರೀರಘುರಾಮನ ಪ್ರಿಯ ಭಕ್ತ ಪ ಭಂಜನ ಖಿಲಭವ ರಂಜಿಪ ಮಾರುತಿ ಪೊರೆಯೆನ್ನ 1 ಹರಿಪದ ಕಮಲವ ನಿರುತವು ಪೂಜಿಪ ಉರುತರ ಪದವಿಯ ಕೊಡು ನನಗೆ 2 ವೀರನಗೆರೆ ಗುರು ಮಹಾಶೂರದೊರೆ ಸಾರುತ ಮಣಿವೆನು ಮರೆಯದಿರೈ 3 ಜಾಜೀಕೇಶವ ಸನ್ನಿಧಿ ಸೇವಕ ಮೂಜಗದೊಡೆಯಾ ಪೊರೆಯಯ್ಯಾ 4
--------------
ಶಾಮಶರ್ಮರು
(ಅ) ಆತ್ಮನಿವೇದನಾ ಕೃತಿಗಳು ಏನು ಹೇಳಲಯ್ಯ ರಂಗ ಎಲ್ಲಿ ಹೋಗಲಯ್ಯ ನನ್ನಮನಸು ಮಂಗವಾಗಿ ದೂರ ತಳ್ಳಿಹುದಯ್ಯ ಪ ಎಲ್ಲೆಯಿಲ್ಲದ ಎನ್ನವನು ನೀ ಎಂತುನಿಂತಿಹೆ ಸುಮ್ಮನೆ ಎಲ್ಲವಾಗಿಕೂಡಿಕೊಂಡಿಹೆನಿನ್ನಚರಣಭರಿಸುಮಾಪತೇ ಕ- ಮಲಾಪತಿ ನೀ ಕರುಣದಿಂದಲಿ ನಡೆಸಲಾರೆಯಾ ನನ್ನನು ಅ.ಪ ನಡೆಯಲಾರದೆ ಕಾಲುಬಿದ್ದಿದೆ ಕೋಪಗೊಳ್ಳದೆ ಬಂದು ನನ್ನಲಿ ನಿಂತು ಸಲಹೈ ದೇವನೇ ಅಪ್ಪಶೆಲ್ವನೆ ನಿನ್ನ ಬಿಟ್ಟರೆ ಕಾದು ಕುಳಿತಿಹರಾರಯ್ಯ 1
--------------
ಸಂಪತ್ತಯ್ಯಂಗಾರ್
(ಅಃ) ಕಾಮದೇವ ಕರುಣದಿಂದಲಿ ಒಲಿದು ಕಂಡನಾತುರದಲಿ ಪ ಇಂದ್ರಸಮಾನ ದೇವತೆಯೆ ರತಿಪತಿಯೇ | ಮಾರ || ಬಂದು ಕಲ್ಪದಲಿ ಸುಂದರನೆನಿಸಿಕೊಂಡಿರ್ದ | ಬಂಧುವೇ ಅಹಂಕಾರ ಪ್ರಾಣನಿಂದಧಿಕನೆ 1 ವನಜ ಸಂಭವನು ಸೃಷ್ಟಿ ಸೃಜಿಪಗೋಸುಗ | ಮನದಲ್ಲಿ ಪುಟ್ಟಿಸೆ ಚತುರ ಜನರ || ಮುನಿಗಳೊಳಗೆ ನೀ ಸನತ್ಕುಮಾರನಾಗಿ ಜನಿಸಿ | ಯೋಗ ಮಾರ್ಗದಲ್ಲಿ ಚಲಿಸಿದ ಕಾಮಾ 2 ತಾರಕಾಸುರನೆಂಬ ಬಹು ದುರುಳತನದಲ್ಲಿ | ಗಾರುಮಾಡುತಲಿರಲು ಸುರಗಣವನು || ಗೌರಿಮಹೇಶ್ವರರಿಗೆ ಪುತ್ರನಾಗಿ ಪುಟ್ಟಿ | ಧಾರುಣಿಯೊಳಗೆ ಸ್ಕಂದನೆನಿಸಿದೆ 3 ಮತ್ಸ್ಯ ಉದರದಲಿ | ಪೊಕ್ಕು ಶಿಶುವಾಗಿ ಸತಿಯಿಂದ ಬೆಳೆದು || ರಕ್ಕಸ ಶಂಬರನೊಡನೆ ಕಾದಿ ಗೆದ್ದು ಮರಳಿ | ಚಕ್ಕನೆ ಸಾಂಬನೆನಿಸಿದೆ ಜಾಂಬವತಿಯಲ್ಲ 4 ಜನಪ ದಶರಥನಲ್ಲಿ ಭರತನಾಗಿ ಪುಟ್ಟಿದೆ | ಮನೋ ವೈರಾಗ್ಯ ಚಕ್ರಾಭಿಮಾನಿ || ಎನಗೊಲಿದ ವಿಜಯವಿಠ್ಠಲರೇಯನಂಘ್ರಿ | ಅರ್ಚನೆ ಮಾಡುವ ಸುಬ್ರಮಣ್ಯ ಬಲು ಧನ್ಯ 5
--------------
ವಿಜಯದಾಸ
(ಅಂ) ಪಾರ್ವತೀದೇವಿ ಉಮಾ ಕಾತ್ಯಾಯನೀ ಗೌರಿ ದಾಕ್ಷಾಯಣಿ | ಹಿಮವಂತ ಗಿರಿಯ ಕುಮಾರಿ ಪ ನಿತ್ಯ | ಅಮರವಂದಿತೆ ಗಜಗಮನೆ ಭವಾನಿ ಅ. ಪ. ಪನ್ನಗಧರನ ರಾಣಿ ಪರಮಪಾವನಿ | ಪುಣ್ಯಫಲ ಪ್ರದಾಯಿನಿ || ಪನ್ನಗವೇಣಿ ಶರ್ವಾಣಿ ಕೋಕಿಲವಾಣಿ | ಉನ್ನತ ಗುಣಗಣ ಶ್ರೇಣಿ | ಎನ್ನ ಮನದ ಅಭಿಮಾನ ದೇವತೆಯೆ | ಸ್ವರ್ಣಗಿರಿ ಸಂಪನ್ನೆ ಭಾಗ್ಯ ನಿಧಿ || ನಿನ್ನ ಮಹಿಮೆಯನು ಬಿನ್ನಾಣದಲಿ ನಾ | ಬಣ್ಣಿಸಲಳವೆ ಪ್ರಸನ್ನ ವದನಳೆ 1 ಮುತ್ತಿನ ಪದಕ ಹಾರ ಮೋಹನ ಸರ | ಉತ್ತಮಾಂಗದಲಂಕಾರ || ಜೊತ್ಯಾಗಿ ಇಟ್ಟ ಪಂಜರದೋಲೆ ವಯ್ಯಾರ | ರತ್ನಕಂಕಣದುಂಗುರ || ತೆತ್ತೀಸ ಕೋಟಿ ದೇವತೆಗಳ್ ಪೊಗಳುತ | ಸತ್ತಿಗೆ ಚಾಮರವೆತ್ತಿ ಪಿಡಿಯುತಿರೆ || ಸುತ್ತಲು ಆಡುವ ನರ್ತನ ಸಂದಣಿ | ಎತ್ತ ನೋಡಿದರತ್ತ ಕಥ್ಥೈ ವಾದ್ಯ2 ಕಂಚುಕ ತಿಲಕ | ನಾಸಿಕ || ಕಳಿತ ಮಲ್ಲಿಗೆ ಗಂಧಿಕ ಮುಡಿದ ಸೂಸುಕ | ಸಲೆ ಭುಜ ಕೀರ್ತಿಪಾಠಿಕ || ಇಳೆಯೊಳು ಮಧುರಾ ಪೊಳಲೊಳು ವಾಸಳೆ | ಅಳಿಗಿರಿ ವಿಜಯವಿಠ್ಠಲ ಕೊಂಡಾಡುವ || ಸುಲಭ ಜನರಿಗೆಲ್ಲ ಒಲಿದು ಮತಿಯನೀವ | ಗಳಿಕರ ಶೋಭಿತೆ ಪರಮಮಂಗಳ ಹೇ 3
--------------
ವಿಜಯದಾಸ
(ಅ) ಭಗವಂತನ ಸಂಕೀರ್ತನೆ ಅಪ್ರಮೇಯ ಆದರಿಸೋ ಎನ್ನ ಪ ಸ್ವಪ್ರಕಾಶಾನಂದರೂಪನೆ ಅ.ಪ ತಪ್ಪುಗಳೆಣಿಸದೆ ದಾಸನೆಂತೆಂದು 1 ನಿನ್ನದರುಶನದಿಂದಾ ಧನ್ಯರಾಗುವರುಜನರು ಪುಣ್ಯವಂತರಾಗಿಹವರವ ಪಡೆವರು 2 ಮಾರಜನಕ ಗುರುರಾಮ ವಿಠಲ 3
--------------
ಗುರುರಾಮವಿಠಲ
(ಅ) ಶ್ರೀಹತಿಸ್ತುತಿಗಳು ಜಗದುದರನು ಹರಿ ಸೂತ್ರಧಾರಂ ನಗಿಸುವ ಅಳಿಸುವ ಕಾರಕನಿವ ತಾಂ ಪ ಪರಿಪರಿ ಸೃಷ್ಟಿಸುತಾ ಸಲಹುವನು ಅರಿವಿಂದವುಗಳ ಲಯಗೈಸುವನು ಭರಿತನು ಸಕಲ ಚರಾಚರಂಗಳಲಿ ನಿರುತವೆಲ್ಲ ತರತಮದಿಂದಾರಿಸಿ ಇರುವನು ಪರಮಾತ್ಮನು ಸರ್ವೇಶಂ 1 ನಿತ್ಯನಿರ್ಮಲನು ಸತ್ಯಸನಾತನು ಅತ್ಯಂತನು ಗುರುವನಂತನು ಮೃತ್ಯುನಿಯಾಮಕ ಮುಕ್ತಿಪ್ರದನು ಭೃತ್ಯವರ್ಗ ಸಂರಕ್ಷ ಶಕ್ತನು ಮತ್ತೊಂದಕು ಸಹ ಮೂಲನು 2 ಅಣೋರಣೀವನು ಮಹತೋಮಹೀಮನು ಗುಣಗಣಭರಿತನಗಣ್ಯನು ಕ್ಷಣಮಾದಲನು ಕಂಟಕನು ಕಾಲನು ತೃಣಮೊದಲು ಬ್ರಹ್ಮಾಂಡನು ಧೀರನು ಘನಮಹಿಮನು ಶ್ರೀ ಜಾಜೀಶಂ 3
--------------
ಶಾಮಶರ್ಮರು
(ಅ) ಶ್ರೀಹರಿ ಸ್ತುತಿಗಳು ನಾರಿಯರೂಪನು ತಾಳ್ದನೇದೇವಾ ಪ ನಗೆ ಮುಖ ಮಾಗಿಹ ನಾರಾಯಣದೇವಾ 1 ಸತ್ವಗುಣಾಧಿಕನೆಂದೆನಿಸೆನ್ನಾ 2 ಅಂತಕ ದಾಸಜನಾರ್ಚಿತ ದೇವಸುಶೀಲಾ ದಾಸರು ವಂದಿಪೆ ದಾಹವ ನಿಂಗಿಸೋ ದೇಶಿಕ ತುಲಶೀರಾಮದಾಸನೆ ದೇವಾ 3
--------------
ಚನ್ನಪಟ್ಟಣದ ಅಹೋಬಲದಾಸರು
(ಅ) ಶ್ರೀಹರಿಸ್ತುತಿಗಳು ಮಾನಸಗಣ್ಯ ಚಿನ್ಮಯನ ಪ ವನಮಾಲಿಕಾಗಳನ ಮಿಂಚನು ಸೋಲಿಸುತಿಹನ 1 ಹೃದಯಾತಂಕಮೋಚನನ ಜನನೀ ಕುಚಕುಂಕುಮಾಂಕಿತನ 2 ಗುಣವೃಂದಪೂರಿತನ ಚಕೋರಾನಂದ ಚಂದಿರನ 3 ಭೂಷಣನಿಕರ ಭೂಷಿತನ ನಿತ್ಯದಿ ಸುಖದಾಯಕನ 4 ಶರಣೆಂದು ಕರದಿ ತೋರುವನ ಧರಣೀನೀಳೆಯರಿಹ ಕೆಲನ ಪುಲಿಗಿರಿಯೊಳು ನೆಲಸಿಹ ವರದವಿಠಲನ 5
--------------
ವೆಂಕಟವರದಾರ್ಯರು
(ಅಕ್ರೂರನ ಒಸಗೆ) ರಥವೋಗದಾ ಮುನ್ನ ಗೋಕುಲಕೆ ಮನ್ಮನೋ- ರಥ ಹೋಗಿರುವುದೇನೆಂಬೇ ಪ ಅತಿ ಕೌತುಕವದಾಯ್ತು ಖಳರಾಯನೊಲಿದು ಯದು- ಪತಿಯ ಕರೆತರುವುದೆಂದೆನಗೆ ಪೇಳಿರಲಿಕ್ಕೆ ಅ.ಪ. ಪತಿತರ್ಗೆ ನಾಮ ದುರ್ಲಭವಲಾ ಎನಗೆ ಶ್ರೀ- ಪತಿ ಸೇವೆ ತಾನಾಗಿ ದೊರೆತೂ ಶತಸಹಸ್ರಾನಂತ ಜನುಮಗಳ ಸು- ಕೃತಕೆ ಫಲವಾಯಿತೆಂದರಿತೂ ಗತ ಕಿಲ್ಬಿಷನಾದೆನೆಂಬುದಕಿದೇ ಸಾಕ್ಷಿ ಪಥದೊಳಗೆ ತಾವೆ ಮುಂದುವರಿದೂ ಮಿತಿಯಿಲ್ಲದಲೆ ಮಹಾ ಶಕುನಂಗಳಾಗುತಿವೆ ಪ್ರತಿ ಇಲ್ಲವೀ ಶುಭೋದಯಕೆ ಸೂರ್ಯೋದಯಕೆ 1 ಶ್ರೀ ಪದ್ಮಜಾದಿಗಳು ಸೇವಿಸುವ ಚರಣ ಯಮು- ನಾಪುಳಿನದಲಿ ಮೆರೆವ ಚರಣಾ ಗೋಪೀಯರ ಪೀನ ಕುಚಕುಂಕುಮಾಂಕಿತ ಚರಣಾ ತಾಪತ್ರಯಾವಳಿವ ಚರಣಾ ಗೋಪುರದ ಶಿಲತೃಣಾಂಕುರುಹ ತೋರುವ ಚರಣಾ ಆಪದ್ಬಾಂಧವನ ಚರಣಾ ಣಾ ಪೂರ್ಣಾ ಎನಗಭಯಕೊಡುವಾ ಪಿಡಿಲಾ 2 ನೋಡುವೆನು ನೀರದಶ್ಯಾಮಸುಂದರನ ಕೊಂ- ಡಾಡುವೆನು ಕವಿಗೇಯನೆಂದೂ ಮಾಡುವೆನು ಸಾಷ್ಟಾಂಗದಂಡ ಪ್ರಣಾಮ ಕೊಂ- ಡಾಡುವೆನು ಕೈ ಮುಗಿದು ನಿಂದೂ ಬೇಡುವೆನು ಭುವನೈಕದಾತನೆಂದಲ್ಲಿ ಕೊಂ ಡಾಡುವೆನು ದಾಸ್ಯ ಬೇಕೆಂದೂ ಈಡಿಲ್ಲದಿಂದಿನಾ ಮನಕೆನ್ನ ಬಯಕೆ ಕೈ- ಗೂಡುವುದು ನಿಸ್ಸಂದೇಹ ದೈವ ಸಹಾಯ 3 ಇರುವನೋ ಏಕಾಂತದೊಳಗಿರುವ ಕೇಳದಿರು ಬರುವನೋ ಬಂದವನ ಕಂಡೂ ಕರೆವನೋ ಕಿರಿಯಯ್ಯ ಬಾರೆಂದು ಬಿಗಿದಪ್ಪಿ ಬೆರೆವನೋ ಬೆರಸಿಯದನುಂಡೂ ಒರೆವನೋ ಒಡಲ ಧರ್ಮವನೆಲ್ಲ ವರಗಿನೇ ಜರಿಯನೋ ಜಗದೀಶ ಹಗೆಯವನೆನುತ ಬಗೆಯ 4 ಗೋಧೂಳಿಲಗ್ನಕೆ ಗೋಕುಲಕೆ ಬಂದು ಬೆರ- ಗಾಗಿ ಹೆಜ್ಜೆಗಳ ನೋಡಿ ಭೂದೇವಿಗಾಭರಣವೆನುತ ತೇರಿಳಿದು ಶ್ರೀ ಪಾದರಜದೊಳಗೆ ಪೊರಳಾಡೀ ಗೋದೋಹನದೊಳಿದ್ದ ರಾಮಕೃಷ್ಣರ ಕಂಡು ನಾ ಧನ್ಯ ಧನ್ಯನೆಂದಾಡೀ ಶ್ರೀದವಿಠಲ ಎರಗುವನಿತರೊಳು ಬಿಗಿದಪ್ಪಿ ಸಾದರಿಸಿದನು ಇದೆ ಸದನದಲಿ ಸ್ವಪ್ನದಲಿ 5
--------------
ಶ್ರೀದವಿಠಲರು