ಒಟ್ಟು 1128 ಕಡೆಗಳಲ್ಲಿ , 96 ದಾಸರು , 854 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋಜೋ ಜೋಜೋ ಲಾಲಿ ಗೋವಿಂದ ಜೋಜೋ ಜೋಜೋ ಲಾಲಿ ಮುಕುಂದ ಜೋಜೋ ಜೋಜೋ ಲಾಲಿ ಆನಂದ ಜೋಜೋ ಜೋಜೋ ಲಾಲಿ ಗೋಪಿಯ ಕಂದ ಪ ಚಿನ್ನದ ತೊಟ್ಳಿಗೆ ರನ್ನದ ಮಲುಕು ಕನ್ನಡಿ ಹೊಳೆವೊ ಮೇಲ್ಕಟ್ಟಿನ ಬೆಳಕು ಸ್ವರ್ಣ ಮಂಟಪದಿ ರಾಜಿಪದಿವ್ಯ ಹೊಳಪು ಕರ್ನೇರಲಂಕರಿಸಿ ನಲಿಯುವ ಕುಲುಕು ಜೋ ಜೋ1 ಅರಿಶಿನ ಕುಂಕುಮ ಗಂಧ ಪುಷ್ಪಗಳು ಸರಸೀಜಾಕ್ಷಗೆ ಮುತ್ತಿನ್ಹಾರ ಪದಕಗಳು ಸುರರೊಡೆಯಗೆ ಪಟ್ಟೆ ಪೀತಾಂಬರಗಳು ಹರುಷದಿಂದಿರಿಸಿ ನಲಿವ ಸ್ತ್ರೀಯರುಗಳು ಜೋ ಜೋ2 ಮುತ್ತೈದೆಯರೆಲ್ಲ ಬಂದು ನೆರೆದರು ಉತ್ತಮ ಸ್ವರ್ಗ ಕಲಶವ ಪೂಜಿಸುವರು ಚಿತ್ತಜನಯ್ಯನ ಎತ್ತಿಕೊಂಡಿಹರು ಜೋ ಜೋ3 ಕೇಶವನನ್ನು ತನ್ನಿ ನಾರಾಯಣನ್ನ ಮಾಧವ ಗೋವಿಂದನನ್ನ ಸಾಸಿರ ನಾಮದ ವಿಷ್ಣು ಮಧುಸೂದನನ್ನ ಸೋಸಿಲಿ ತ್ರಿವಿಕ್ರಮ ವಾಮನನ್ನ ಜೋ ಜೋ 4 ಶ್ರದ್ಧೆಯಲಿ ಶ್ರೀಧರ ಹೃಷಿಕೇಶನನ್ನ ಪದ್ಮನಾಭನ ಕೊಳ್ಳಿ ದಾಮೋದರನ್ನ ಶುದ್ಧ ಮನದಿ ಸಂಕರ್ಷಣ ವಾಸುದೇವನನ್ನ ಪ್ರದ್ಯುಮ್ನನನು ತನ್ನಿ ಅನಿರುದ್ಧನನ್ನ ಜೋ ಜೋ5 ಪುರುಷೋತ್ತಮನ ಕೊಳ್ಳಿ ಅದೋಕ್ಷಜನನ್ನ ನಾರಸಿಂಹನ ತನ್ನಿ ಅಚ್ಚುತನನ್ನ ಸರಸದಿ ಜನಾರ್ದನ ಉಪೇಂದ್ರನನ್ನ ಹರುಷದಿಂದಲಿ ಕೊಳ್ಳಿ ಹರಿ ಶ್ರೀಕೃಷ್ಣನನ್ನ ಜೋ ಜೋ 6 ಹೀಗೆಂದು ತೂಗುತ ಜೋಗುಳ ಹಾಡಿ ನಾಗವೇಣಿಯರು ಸಂಭ್ರಮದಿಂದ ಕೂಡಿ ಆಗ ಕಮಲನಾಭ ವಿಠ್ಠಲನ್ನ ನೋಡೀ ಬೇಗ ರಕ್ಷೆಗಳನಿತ್ತರು ತ್ವರೆ ಮಾಡಿ ಜೋ ಜೋ 7
--------------
ನಿಡಗುರುಕಿ ಜೀವೂಬಾಯಿ
ಜ್ಞಾನ ಸಖೀಕೇಳೆ ಜ್ಞಾನಿಗಳಾರಾಧಿಸುವಾ | ಶ್ರೀನಿವಾಸನಾ ತಂದುತೋರೆ ತನುವಿನೋಳು ಪ ಹಲವು ಸಾದಿನದಿಂದ ಬಳಲಿ ಹಂಬಲಿಸಿದೆ | ಜಲ ಜಾಕ್ಷ ಮೈಯ್ಯ ದೋರನೇ 1 ಕಣ್ಣಿಗೆ ಕಣ್ಣಾಗದನಕಾ ಬಣ್ಣ ಬಣ್ಣದ ಚಿತ್ಸುಖಾ | ಕನ್ನಿಕಾ ರನ್ನಳೆ ತಂದು ತೋರೇ 2 ಸೋಹ್ಯ ಸೊನ್ನಿಯ ದೋರಿಸಿ ಬಾಹ್ಯರಂಗ ಮರೆಸಿ | ಸಹ ಜಾನಂದದ ಕೂಡಿಸೇ 3 ಗುರು ಮಹಿಪತಿ ಸ್ವಾಮಿ ಸ್ಮರಿಸುವರಂತರ್ಯಾಮಿ | ನೆರೆದು ತಾನೇ ತಾನಾದನೇ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜ್ಞಾನವಾವುದು ಅಜ್ಞಾನವಾವುದು ಮಾನವಾವುದು ದುಮ್ಮಾನವಾವುದು ಪ ಹರಿಯ ಸ್ಮರಣೆಯಿರಲದೊಂದು ಜ್ಞಾನವಲ್ಲವೆ ಕೊರಳ ಸೆರೆಯ ಕಾಣದಿಪ್ಪುದಜ್ಞಾನವಲ್ಲವೆ ಪರರ ಸತಿಯ ತೊರೆವುದೊಂದು ಮಾನವಲ್ಲವೆ ಪರರ ಸೇವೆಗಿರುವದವಮಾನವಲ್ಲವೆ 1 ಧನ್ಯರನ್ನು ಮನ್ನಿಸುವುದು ಜ್ಞಾನವಲ್ಲವೆ ಹೊನ್ನ ಹುದಿದು ಅನ್ನ ತೊರೆವುದಜ್ಞಾನವಲ್ಲವೆ ಅನ್ಯರೊಡವೆ ಕಳುವುದವಮಾನವಲ್ಲವೆ 2 ಹಸಿದವರನು ಕಂಡು ಯಿಕ್ಕಲು ಜ್ಞಾನವಲ್ಲವೆ ಹುಸಿಕನಾಗಿ ಅಸತ್ಯ ಮಾಳ್ಪುದು ಅಜ್ಞಾನವಲ್ಲವೆ ಹಸನವಾಗಿ ನಡೆವ ಕೃತ್ಯ ಮಾನವಲ್ಲವೆ ಎಸೆವ ಜೂಜು ತಪ್ಪಲವಮಾನವಲ್ಲವೆ 3 ಸ್ಥಿರವಿದಲ್ಲವೆಂಬ ಜೀವಿ ಜ್ಞಾನಿಯಲ್ಲವೆ ನರಕ ಭಯವ ಮರೆವ ಜಡನಜ್ಞಾನಿಯಲ್ಲವೆ ಹಿರಿಯರಿಂದ ಅನಿಸಿಕೊಂಬುದು ಮಾನವಲ್ಲವೆ ಬರಿಯ ಕ್ಷುದ್ರವೆಸಗಲವಮಾನವಲ್ಲವೆ 4 ಕ್ರೋಧವನ್ನು ತೊರೆದ ಮನುಜ ಜ್ಞಾನಿಯಲ್ಲವೆ ವೇದವನ್ನು ಜರೆದ ನರನಜ್ಞಾನಿಯಲ್ಲವೆ ಸೋದರರು ಕೂಡಿಯಿರಲು ಮಾನವಲ್ಲವೆ ಮಾದಿಗರ ಸಂಗವದವಮಾನವಲ್ಲವೆ 5 ಗುರು-ಹಿರಿಯರನುಸರಿಸೆ ಜ್ಞಾನವಲ್ಲವೆ ಸಿರಿಯ ವೇಶ್ಯಸ್ತ್ರೀಗೆ ಕೊಡಲಜ್ಞಾನವಲ್ಲವೆ ದೊರೆಯು ಕರೆದು ಉಚಿತವೀಯೆ ಮಾನವಲ್ಲವೆ ತಿರುಕರಂತೆ ತಿರಿವುದು ಅವಮಾನವಲ್ಲವೆ 6 ವರಾಹತಿಮ್ಮಪ್ಪ ಒಲಿದರದು ಜ್ಞಾನವಲ್ಲವೆ ಮರೆದು ಕ್ಲೇಶಕೆರಗುವುದಜ್ಞಾನವಲ್ಲವೆ ಕರೆದು ಪರರಿಗಿಕ್ಕುವುದು ಮಾನವಲ್ಲವೆ ಕರೆಕರೆಯ ಮಾತು ಅವಮಾನವಲ್ಲವೆ 7
--------------
ವರಹತಿಮ್ಮಪ್ಪ
ಡಂಕವ ಸಾರಿದನೋ ಯಮ ತನ್ನ ನಗರದಿ ಘಂಟೆಯ ನುಡಿಸಿದನು ಪ ಡಂಕಸಾರಿದ ತನ್ನ ತುಂಟದೂತರಿಗ್ವೊ ಯ್ಕುಂಠನ ದಾಸರ ತಂಟೆಯು ಬೇಡೆಂದು ಅ.ಪ ಕಾಲಕಾಲದಿ ಹರಿಯಕಥೆ ಕೀರ್ತ ನಾಲಿಸುವರ ನೆರೆಯು ತಾಳದಮ್ಮಡಿ ಸಮ್ಮೇಳದೊಡನೆ ಆ ನೀಲಶ್ಯಾಮನ ಭಜಿಪರಾಳಿನಾಳನುಕಂಡು ಕಾಲನಾಲುಗಳೆಂದ್ಹೇಳದೆ ಬನ್ನಿರೆಂದು 1 ಮಂದಿರಂಗಳದಿ ವೃಂದಾವನ ದಂದ ಕಂಡಾಕ್ಷಣದಿ ಸಿಂಧುಶಯನ ಬಂಧುಭಕ್ತರ ಮಂದಿರವಿದೆಂದು ಹಿಂದಕ್ಕೆ ನೋಡದೆ ಸಂದ್ಹಿಡಿದೋಡಿ ಪುರ ಬಂದು ಸೇರಿರೆಂದು 2 ಪರರಂಗನೆಯರ ಸ್ಮರಿಸುವ ಪರಮ ನೀಚರನ್ನು ನರಹರಿ ಸ್ಮರಣೆಯ ಅರಿಯದ ಆಧಮರ ಕರುಣಿಸದೆ ತುಸುಮುರಿದು ಮುಸುಕಿಕಟ್ಟಿ ದರದರನೆಳೆತಂದು ಉರಿಯೊಳ್ಪೊಯಿರೆಂದು 3 ಪರದ್ರವ್ಯವಪಹರಿಸಿ ಲಂಚದಿಂದ ಸರುವ ತನ್ನದೆನಿಸಿ ನಿರುತ ಮಡದಿಮಕ್ಕಳೊರೆವ ದುರಾತ್ಮನರ ಗುರುತಳನೆಳತಂದು ಕರಿಗಿದಸೀಸಬಾಯೊಳ್ ವೆರಸಿ ಜನಕಕೊಂಡದುರುಳಿಸಿಬಿಡಿರೆಂದು 4 ವೇಣು ಕರದಿ ಪಿಡಿದು ಬಾಣಾರಿ ಧ್ಯಾನದೊಳಗೆ ಬರೆದು ಜಾನಕೀಶನ ಲೀಲೆ ಗಾನದಿಂ ಪಾಡುತ ಆನಂದಿಪ ಮಹಜ್ಞಾನಿಗಳನು ಕಂಡು ಕಾಣದಂತೆ ಸಿಕ್ಕ ಜಾಣ್ಣುಡಿದೋಡಿರೆಂದು 5 ಇಂದಿರೇಶನದಿನದಿ ಅನ್ನವನು ತಿಂದ ಮೂಢರ ಭರದಿ ತಂದು ಒದೆದು ಮಹಗಂಧಮದು ರ್ಗಂಧನಾರುವ ಮಲತಿಂದು ಬದುಕಿರೆಲೊ ಎಂದು ಮನೆಹೊರಗಿನ ಮಂದಿರದಿಡಿರೆಂದು 6 ವಿಮಲ ತುಳಸೀಮಣಿಯ ಧರಿಸಿ ಅಮಿತ ಮಹಿಮನ ಚರಿಯ ವಿಮಲಮನಸರಾಗಿ ಕ್ರಮದಿ ಬರುವ ಶ್ರೀ ರಾಮದಾಸರ ಪಾದಕಮಲಗಳನು ಕಂಡು ಯಮದೂತರೆನ್ನದೆ ನಮಿಸಿ ಬನ್ನಿರೆಂದು 7
--------------
ರಾಮದಾಸರು
ತಂಗಳೊಡೆಯರು ತಂಗಳೊಡೆಯರೇ ನಿಮ್ಮ | ಮಹಿಮೆಗೇನೆಂಬೆಅಂಗವನೆ ಮರೆಮಾಚಿ | ಮಂಗಳವಕೊಂಡಾ ಪ. ನಾಮ ನಿರ್ದೇಶ ಜನ | ಸ್ತೋಮಕಾಕರವೆಂದುನಾಮವನೆ ತೊರೆಯುತ್ತ | ಗೂಢಭಾವದಲೀ |ಭೀಮ ತೀರದಿ ನಿಂದು | ತಪವ ಗೈಯ್ಯುತಲಿರುವೆಸೀಮೆ ಮೀರಿದ ಮಹಿಮ | ದಯೆದೋರೊ ಎನಗೆ 1 ಬೋಧ | ಮೋದದಿಂ ತಿಳಿಸುತ್ತಸಾಧನವ ಗೈಸೆನಗೆ | ಹೇದಯಾ ಪೂರ್ಣ 2 ವೈರಾಗ್ಯ ಹರಿ ಭಕುತಿ | ವೀರಮೂರುತಿ ಎನಿಸಿಮಾರನ್ನ ನೀ ಗೆಲಿದು | ಮೋಕ್ಷಕಾಮೀಸಾರತಮನೂ ಗುರೂ | ಗೋವಿಂದ ವಿಠಲೆಂದುಬಾರಿಬಾರಿಗೆ ಸ್ಮರಿಸಿ ಆನಂದ ಗೊಳ್ವಾ 3
--------------
ಗುರುಗೋವಿಂದವಿಠಲರು
ತಂಗಿ ಮೊಸರ ಸುತ್ತ ಚೆಲ್ಲಿದ ಮುದ್ದುರಂಗ ಬೆಣ್ಣೆಯ ಮೆದ್ದ ಬಲ್ಲಿದ ಪ. ಪುಟ್ಟ್ಟಿದಾಗಲೆ ಮೂಲರೂಪವ ತೋರಿಅಟ್ಟಿದ ಸುಜನರ ತಾಪವಕೊಟ್ಟ ನಮಗೆ ಜ್ಞಾನದೀಪವ ಕೃಷ್ಣತೊಟ್ಟ ದುರ್ಜನರೊಳು ಕೋಪವ1 ಯಶೋದೆಯ ಮೊಲೆವಾಲನುಂಬಾಗ ನಸುಬಿಸಿನೀರನೆ ಎರೆಸಿಕೊಂಡಾಗಶಿಶುವು ಪೂತಣಿಯ ಕೊಂದಿತೆಂಬಾಗ ರ-ಕ್ಕಸರಿಗೆ ಇವ ಬಲುದಿಮ್ಮಿಗ 2 ಇಂದಿರೆಯನು ಬಿಗಿದಪ್ಪಿದ ಸಖವೃಂದಾರಕರೊಳಗೊಪ್ಪಿದಕಂದರ ಕಲ್ಲಿಂದ ಜಪ್ಪಿದ ತಾಯಿಹಿಂದಟ್ಟಿ ಬರಲೋಡಿ ತಪ್ಪಿದ3 ಪುಟ್ಟ ಕೃಷ್ಣನ ಕಟ್ಟಬೇಕೆಂದು ತಂ-ದೊಟ್ಟಿ ಹಗ್ಗಗಳ ತಂದುಬೆಟ್ಟವಾಗಿರಲು ದುರ್ಜನರ ಕೊಂದು ಈಗಗಟ್ಟಿಮಾಡಿದಳಿವ ಹರಿಯೆಂದು4 ಒರಳನೆಳೆದ ಬಲುಮತ್ತಿಯ ದೊಡ್ಡಮರನ ಕಿತ್ತಿದ ನೋಡಿವನರ್ಥಿಯತರಳಾಕ್ಷಿ ಕೃಷ್ಣನ ನೆತ್ತಿಯ ಬೆಣ್ಣೆಸುರಿಯೆ ಪಾಡಿದಳವನ ಕೀರ್ತಿಯ5 ಗಗನಕೆ ಏರಿ ವಾತನ ಕೊಂದ ನೀರೊ-ಳಗೆ ಪೊಕ್ಕು ತಂದೆಯ ಕರೆತಂದಖಗನಂತೆ ಕಡಹದಮರದಿಂದ ಹಾರಿವಿಗಡ ಸರ್ಪನ ಹೆಡೆಯೇರಿ ನಿಂದ6 ತುಳಿದಹಿತಲೆಯನು ಬಿಚ್ಚಿದನಾಗಲಲನೆಯರುಕ್ತಿಗೆ ಮೆಚ್ಚಿದ ಅಲರು ಮಳೆಯ ಸುರಿಯ ಹಚ್ಚಿದ ಕೃಷ್ಣಖಳರಳಕೆಗಳ ಕೊಚ್ಚಿದ 7 ನಂದನ ರಾಣಿಗೆ ಮೆಚ್ಚಿದ ತಾಯಚಂದದ ಕೈಗಳಿಂದುಚ್ಚಿದಇಂದೆನ್ನ ಮನೆಯೊಳು ಸಚ್ಚಿದಾ-ನಂದ ಹಿಡಿಯೆ ಕೈಯ್ಯ ಕಚ್ಚಿದ 8 ಕಣ್ಣೊಳು ಪಾಲನುಗುಳಿ ಪೋದ ಈಚಿಣ್ಣಗೆ ನೋಡಿದೆ ವಿನೋದಮಣ್ಣಮೆದ್ದಖಿಳವ ತೋರಿದ ಕೃಷ್ಣಸಣ್ಣ ಬಾಯನು ಮುಚ್ಚಿ ಮಗುವಾದ 9 ಕುಸುಮವೆತ್ತ ಖಡುಗ ವೆತ್ತ ಈಹಸುಗೂಸು ಎತ್ತ ಪರ್ವತವೆತ್ತಹಸಿವು ತೃಷೆಯ ಬಿಟ್ಟು ಗಿರಿಯ ಪೊತ್ತ ಈಶಶಿಮುಖಿ ಜನಕಿವನು ಸುಖವಿತ್ತ10 ಮೂರು ಲೋಕವಾಳುವ ಸಖಿಯರ ಗಂಡ ನೀಲ-ವರ್ಣನು ತೊಂಡರತೊಂಡ ಬಾಲಕನೀತಸರ್ವೇಶ ಕಂಡಾ ಇವಕೀಳೆಂದವ ಜಗದಲಿ ಭಂಡ 11 ಅರಳೆಲೆ ಮಾಗಾಯಿ ಮುಂಗೈಯ್ಯಲಿಟ್ಟುಸರಭಂಗಿ ಕೂಡಿ ತ್ರಿಭಂಗಿಯವರವೇಣುವನು ತನ್ನಂಗೈಯಲಿಟ್ಟ-ಧರದಲ್ಲೂದಿದ ನಮ್ಮ ರಂಗಯ್ಯ12 ಪಶುಪಕ್ಷ್ಷಿಗಳು ತರತರದಲ್ಲಿಎಸೆವ ಗೀತವ ಕೇಳಿ ವನದಲ್ಲಿಹಸುಳೆಯ ನೆನೆಯುತ್ತ ಮನದಲ್ಲಿ ಪರ-ವಶವಾದುವು ಆಕ್ಷಣದಲ್ಲಿ13 ಕೊಳಲೂದಿ ಸುರರನ್ನು ಸೋಲಿಸಿದ ರಾಗಕಲೆಗಳಿಂದೆಲ್ಲವ ಒಲಿಸಿದಇಳೆಯೊಳು ಗೀತವ ಕಲಿಸಿದ ಇಂತುಒಲಿದು ವಿಠಲ ನಮ್ಮ ಪಾಲಿಸಿದ14 ತÀರುಲತೆಗಳು ಪುಳಕಿತವಾಗೆ ಈಚರ ಪ್ರಾಣಿಗಳೆಲ್ಲ ಸ್ಥಿರವಾಗೆಹರಿಯ ವೇಣುನಾದ ಹೊಸಬಗೆ ಅತಿಹರುಷವ ನೋಡಲೈದಿದೆವೀಗ 15 ಚೆಲ್ಲಿದ ಕೈಯಿಂದಮಲ ನೀರ ನಮ್ಮೆಲ್ಲರ ನೀರಿಗಂಜನು ಧೀರನಲ್ಲ ನಾವಂದ ಮಾತನು ಮೀರನಿವಸುಲಭನೊಮ್ಮೆ ಮೊಗವ ತೋರ 16 ಪಾಲನೊಲೆಯೊಳಿಟ್ಟು ಪೋದೆವು ಈಕಾಲಭೂಷಣ ಕೈಗಾದವುಬಾಲರ ಕೆಲರು ಮರೆತು ಪೋದೆವು ಗೋ-ಪಾಲ ಸಂಗಕ್ಕೆ ಮರುಳಾದೆವು 17 ಉಂಬುವರಿಗೆ ಬಡಿಸಲಿಲ್ಲ ಪತಿಎಂಬುವನಾಜ್ಞೆಯೊಳಗೆ ನಿಲ್ಲದೆನಂಬಿದೆವು ನಾವು ಹರಿಯಲ್ಲದೆ ಅನ್ಯರೆಂಬುದು ಭಕ್ತ ವರ್ಗಕೆ ಸಲ್ಲದೆ18 ಧೇನು ಮಾತ್ರದಿಂದ ಫಲವೇನು ಕಾಮ-ಧೇನು ಶ್ರೀಕೃಷ್ಣನ್ನ ಕರೆದೆನುಮಾನಿನಿ ಮೊದಲು ಕರೆವಧೇನು ಬಿಟ್ಟುಜಾಣೆ ಸೇರಿದಳು ಕೃಷ್ಣನ ಪದವನು 19 ಶಿಶುವ ಬಿಟ್ಟೊಬ್ಬಳು ನಿಜಕನ್ಯೆತನದೆಸೆಯ ತೋರಿಸಬಂದಳಚ್ಚುತನ್ನಎಸೆವ ಶ್ರೀಪತಿ ತನ್ನ ರಮಣನು ಎಂದುಸುಟಳು ಮೊದಲಾಳ್ದ ಗಂಡನ 20 ಲಲನೆ ಕಣ್ಣಂಜನವಬಿಟ್ಟಳು ಜ್ಞಾನಚೆಲುವನಂಜನಕೊಡಂಬಟ್ಟಳುಒಲೆಯಪಾಲಗ್ನಿಗೆ ಕೊಟ್ಟಳು ಕೃಷ್ಣ-ಗೊಲಿದಧರ ಮನವಿಟ್ಟಳು21 ಇಂತು ತೊರೆದು ವಿಷಯಂಗಳ ಆ ಶ್ರೀ -ಕಾಂತನೆ ಕಾವ ಜಗಂಗಳಚಿಂತೆಯ ತೊರೆದೆವು ಮಂಗಳ ಲಕ್ಷ್ಮೀ -ಕಾಂತನೆ ಕಾಯೊ ಜಗಂಗಳ 22 ಕೇಶಿಯೆಂಬ ದೈತ್ಯನ ಕೊಂದ ಖಳನಾಶದಲಿ ಸದಾ ಮುಕುಂದಆ ಸಮಯದಲಿ ಅಕ್ರೂರ ಬಂದ ಅವಂಗೆಲೇಸÀಪಾಲಿಸಿ ಕೃಷ್ಣ ನಡೆತಂದ 23 ಮಧುರೆಯಲಿ ಮಲ್ಲರ ಸೋಲಿಸಿದ ತನ-ಗಿದಿರಾದ ಕಂಸÀನನೊರೆಸಿದಕದನಕೋಲಾಹನೆನಿಸಿದ ನಮ್ಮಮದನಶರಕೆ ಗುರಿಮಾಡಿದ24 ಎಲ್ಲ ದೇವರನಿವ ಮೀರಿದ ಸಖಿಬಲ್ಲವರಿಷ್ಟವ ಬೀರಿದಕಲ್ಲಕಂಬದಿ ಬಂದು ತೋರಿದ ಖಳರೆÉಲ್ಲಿದ್ದರಲ್ಲಿಗೆ ಹಾರಿದ 25 ದಯದಿಂದ ಸಖನಮಗಾದವ ಚೆಲ್ವಹಯವದನ್ನ ಕೃಪೆಯಾದವನಯದಿ ಜಲವ ಪೊಕ್ಕು ಪೋದವ ವೈ-ರಿಯ ಕೊಂದು ವೇದವ ಕಾಯ್ದವ 26
--------------
ವಾದಿರಾಜ
ತಡೆಯುವುದ್ಯಾಕಯ್ಯಾ ಹರಿಯೆನ್ನ ಕಯ್ಯಾ ಬಿಡು ಬಿಡು ಹರಿಪಾದ ಸೇರುವೆನಯ್ಯಾ ಪ ಅರಿಗಳನೆಲ್ಲರ ಕಡಿದು ನಾ ಬಂದೇ ಇಂದು ನಾ ಬಂದೇ 1 ತುಂಟರೆಲ್ಲರನ್ನು ಗೆದ್ದು ನಾ ಬಂದೇ ಇಂದು ಶರಣೆಂದು ಬಂದೇ 2 ಸನ್ನುತ ಹರಿಸೇವೆ ಮಾಡಲು ಬಂದೆ ಚನ್ನಕೇಶವ ಸ್ವಾಮಿ ಶರಣೆಂದು ತಂದೇ 3
--------------
ಕರ್ಕಿ ಕೇಶವದಾಸ
ತದಿಗೆಯ ದಿವಸ (ಶೇಷ ದೇವರನ್ನು ಕುರಿತು) ರಂಭೆ : ನಾರೀಮಣೀ ನೀ ಕೇಳೆ ಈತ- ನ್ಯಾರೆಂಬುದನೆನಗೆ ಪೇಳೆ ಕ್ರೂರತನದಿ ತಾ ತೋರುವನೀಗ ಮ- ಹೋರಗನೆನ್ನುತ ಕೋರಿಕೆ ಬರುವದು1 ಒಂದೆರಡು ಶಿರವಲ್ಲ ಬಹು ಹೊಂದಿಹವು ಸಟೆಯಲ್ಲ ಕಂಧರದಲಿ ಕಪ್ಪಂದದಿ ತೋರ್ಪವು ಚಂದಿರಮುಖಿ ಯಾರೆಂದೆನಗರುಹೆಲೆ 2 ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ- ಸಾಮಾನ್ಯನೆ ಕಾಣೆ ಭೂಮಿಯ ಪೊತ್ತ ನಿರಾಮಯನಾದ ಸುಧೀಮನಿವನು ಜಾಣೆ 1 ವಾಸುದೇವಗೆ ಈತ ಹಾಸಿಗೆಯವ ನಿ- ರ್ದೋಷನಿವನು ಜಾಣೆ ಸಾಸಿರಮುಖದ ವಿಲಾಸನಾಗಿಹ ಮಹಾ- ಶೇಷನಿವನು ಕಾಣೆ 2 ಅದರಿಂದಲಿ ಕೇಳ್ ತದಿಗೆಯ ದಿವಸದಿ ಮಧುಸೂದನನಿವನ ಅಧಿಕಾನಂದದಿ ಒದಗಿಸಿ ಬರುವನು ಇದೆಯಿಂದಿನ ಹದನ 3 ಎಂದಿನಂತೆ ಪುರಂದರವಂದ್ಯ ಮು ಕುಂದ ಸಾನಂದದಲಿ ಅಂದಣವೇರಿ ಗೋವಿಂದ ಬರುವನೊಲ- ವಿಂದತಿ ಚಂದದಲಿ4 ಕಂಟಕಗಳು ಎಲ್ಲುಂಟೆಂಬಂತೆ ನೃಪ- ಕಂಠೀರವಗೈದ ಘಂಟಾನಾದದಿ ಮಂಟಪದೊಳು ವೈ- ಕುಂಠನು ಮಂಡಿಸಿದಾ 5 ಕಾಂತಾಮಣಿ ಕೇಳಿಂತೀಪರಿ ಶ್ರೀ- ಕಾಂತ ನತತಂಡ ಸಂತವಿಸುತ ಮಹಾಂತಮಹಿಮನೇ- ಕಾಂತಸೇವೆಯಗೊಂಡ 6 * * * ಪರಶಿವನನ್ನು ಕುರಿತು ರಂಭೆ :ಯಾರಮ್ಮಾ ಮಹಾವೀರನಂತಿರುವನು ಯಾರಮ್ಮಾ ಇವನ್ಯಾವ ಶೂರ ಯಾವ ಊರಿಂದ ಬಂದ ಪ್ರವೀರ ಆಹಾ ಮಾರಜನಕನ ವಿಸ್ತಾರಪೂಜೆಯ ವೇಳ್ಯ ಧೀರನಂದದಿ ತಾ ವಿಚಾರ ಮಾಡುವನೀತ1 ಕರದಿ ತ್ರಿಶೂಲವ ಧರಿಸಿ ಮತ್ತೆ ವರ ಕೃಷ್ಣಾಜಿನವನುಕರಿಸಿ ಹರಿ ಚರಣಸನ್ನಿಧಿಗೆ ಸತ್ಕರಿಸಿ ಆಹಾ ಜರಿಯ ದುಕೂಲವ ನಿರಿದುಟ್ಟುಕೊಂಡು ವಿ- ಸ್ತರವಾದ ತೋಷದಿ ಮೆರದು ನಲಿವ ಕಾಣೆ 2 ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ. ಈತನೀಗ ಪೂರ್ವದೊಳಗೆ ಭೂತನಾಥ ಸೇವೆಯೊಲಿದ ಓತು ವಿಷ್ಣುಭಕ್ತಿಯಿಂದ ಪೂತನಾದ ಪುಣ್ಯಪುರುಷಅ.ಪ. ತೀರವಾಯ್ತು ವೇಣು ತಾ ವಿ- ಉದಾರತನದಿ ರಾಮೇಶ್ವರಕೆ ಸಾರಗ್ರಹಿತ ಮುಕ್ತಿ ಪಥವನು ಕರುಣದಿಂದ ತೋರಿಸುವನು ವಿಷ್ಣುವೆಂದೆನುತ ಗಿರಿಯ ಪದಾರವಿಂದಸೇವೆಗೈದು ನಲಿವ ಚಾರುಚರಿತ 1 ಬರುವ ಕಾಲದಲ್ಲಿ ಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತ ಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆ ಚರಿಸುವ ತ್ರಿಕಾಲಪ್ರಜ್ಞನು ಇವನ ಗುಣವ- ಮಹತ್‍ಕಾರಣೀಕ ಕರುಣವುಳ್ಳ ವಿಷ್ಣುಭಕ್ತ 2 ಪ್ರಧಾನಿಯೆಂದು ನಡೆಸಿಕೊಡುವ ತೋಷಪಟ್ಟು ಇರುವ ಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತ ನಾನಾ ಉಪದ್ರವಗಳ ಬಿಡಿಸುವ ಧನಿಯ ಆಜ್ಞೆ ಬಂದು ಪೇಳಿ ಜನರ ಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ತುಪಾಕಿ ವೆಂಕಟರಮಣಾಚಾರ್ಯ
ತನುವೆಂಬ ಭವನದಲಿ ಮನವೆಂಬ ಮಂಟಪದಿ ವನರುಹಾಸನ ವಿಹುದು ನಿನಗಾಗಿ ಕೃಷ್ಣಾ ಪ ಅನವರತ ಸ್ವಾಗತವ ಇನಿದಾಗಿ ಪೇಳುತಲಿ ಸನುಮತದೊಳೀರೈದು ಮುನಿವರರು ನಿಂದಿಹರು ಅ.ಪ ಎನಗೆ ತನಗೆಂದಿಬ್ಬರನುವಾಗಿ ಕಾದಿಹರು ಘನ ಮೌನಿಯಂತೊಬ್ಬ ಮಣಿಯುತಿಹನು ವನಜ ಸಂಭವ ಜನಕ ಮುನಿಯೊಡನೆ ನೀ ಬಂದು ಕನಕಮಂಟಪವೇರು ಅವರಿಬ್ಬರೋಡುವರು 1 ಕರಿಯ ಮೈಯವನೊಬ್ಬ ದುರದುರನೆ ನೊಡುವನು ಪರಿವಾರದವರನ್ನು ತೋರುತಿಹನೊಬ್ಬ ಕರದಿ ಸನ್ನೆಯ ಮಾಡುತಿಬ್ಬರೂ ಬರುತಿಹರು ತರಿದವರ ಮಂಟಪವನೇರೊ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನ್ನ ಸ್ಮರಣೆ ತಾನರಿಯದ ಮನವು ಚಿನುಮಯ ರೂಪನ ಬೆನ್ನವಿಡಿವುದುಂಟೆ ಪ ಹಾವಿನ ಹೆಜ್ಜೆಯ ಹಾವರಿವಂದದಿ ಭಾವಿಸಿಕೊಳ್ಳದೆ ತಗ್ಗು ಮುಗ್ಗುಗಳ ಗೋವಳನಿಲ್ಲದ ಗೋವಿನ ತೆರನಂತೆ ಜೀವನುಂಗುವ ವ್ಯಾಘ್ರನಗ್ರಕೆ ಸುಳಿಯಲು 1 ಕನ್ನಡಿ ಶುದ್ಧವಾಗಿಯೆ ಕಾಣದ ದೃಷ್ಟಿ ಚಿನ್ನವಾರಿಕೆಯನ್ನು ಮಾಡುವ ಪರಿಯು ನಗದ ಮನ ಮನ್ನಣೆಯಿಲ್ಲದ ಮನೆಯೊಳುಂಬರೆ ಹೇಸ2 ಹೇಳಿದ ಮಾತನು ಕೇಳಿ ಮಾನಸದೊಳು ಮೇಳವಾಗುವೆನೆಂದು ಖೂಳತನದಿ ಪೋಗಿ ಕೇಳಿದ ಉತ್ತರಕುತ್ತರ ಹರಿಸದೆ ಆಳು ಬಾವಿಯ ಹಾರಿ ಹೊಳಚುವ ತೆರನಂತೆ 3 ಕಾಗೆಯು ಗರುಡನ ಸರಿಯೆಂದು ಜೂಜಾಡಿ ಸಾಗರವನು ಹಾರಿ ನಡುವೆ ಬಿದ್ದಂದದಿ ಯೋಗಿಯ ಪರಿಯಂತೆ ತಪವೆಂದು ತನ್ನಯ ಮೂಗ ಮುಚ್ಚಲು ಭವರೋಗ ಹಾರುವುದಂತೆ 4 ಮೀಸಲಿಗೊದಗುವ ಶೇಷಗಿರೀಶನ ಆಸೆಯಗ್ರಾಸವ ಬೇಡಿಕೊಳ್ಳದ ಮನ ಸಾಸಿರ ವೆಗಡದ ಭಾಂಡದೊಳೋಗರ ಬೇಯಿಸಿ ಭುಂಜಿಪೆಯೆಂದು ಮೋಸ ಮಾಡುವದಿಂದು 5 ಚಿತ್ರಿಕ ರಚಿಸಿದ ಸೇನೆ ಸೇನೆಗಳಲ್ಲ ಪ್ರಸ್ತುತಕೊದಗುವದೆನುತಿಹ ರಾಯನ ಮುತ್ತಿಕೊಂಡಿಹ ಪರಸೇನೆಯ ಇದಿರೊಳು ಮೃತ್ಯುದೇವತೆ ಬಂದು ಮೂದಲಿಸುವಳೆಂದು6 ಮೊಸರನ್ನ ತನ್ನ ಕೈಯೊಳಗಿದ್ದಂತೆ ಹಸಿವಾದ ವೇಳ್ಯದಿ ಹಸಿಯ ಮೆಲ್ಲುವದೇಕೆ ಕುಶಲದಿ ನೆನೆಯಲು ಹಸನದಿ ಸಲುಹುವ 7
--------------
ವರಹತಿಮ್ಮಪ್ಪ
ತಪ್ಪು ಮಾಡುವದು ಮನುಜ ಧರ್ಮ | ನಮ್ಮದು ಬೇಡುವದು ಕಾಡುವದು ಪ ನಡೆ ನುಡಿಗೆ ತಪ್ಪು ನೋಡುವದು ನ್ಯಾಯವೇ ನಿನಗೆ ||ಬಡವರಾಟಗಳೆಂದು ಸಲುಹಯ್ಯ | ಮಾಡಲಬೇಡ ತಡವ |ಕಡಿದ್ಹಾಕು ಕಮಳಲೋಚನಾ | ಎನ್ನ ನಿನ್ನಡಿಗೆಸೇರಿಸು | ಕಡಲಶಯನ ಮೋಹನ್ನಾ 1 ಮಡಹಿ ಮಲ್ಲನ ಕೆಡವಿ | ಜೋಡು ಮತ್ತಿಯ ಮರವ ತಡವಿ | ಮಧು ಮೊದಲಾದವರನ್ನು | ಅಡವಿ ಕಿಚ್ಚವ ನುಂಗಿ | ಕಡುವಿ ಮಡುವ ಧುಮುಕಿ | ಬಡವಿ ಕುಬ್ಜಿಯ ಕೈಪಿಡಿದು ಯಶವ ಪಡೆದಿ 2 ನಡೆವವನು ಎಡವುವನೆಂದು | ಅಪರಾಧಗಳನುಬಡಿದಾಡದೆ ಒಡಲೊಳಗೆ ಹಿಡಿವ | ಮಡದಿಯನುನಿಮ್ಮ ಜಡೆಯಲಿರಿಸಿದ ಮನೆಯಲಿ ಎನ್ನ |ಸಡಗರದ ರುಕ್ಮದಿಂದಿಡಿದು ಲಾಲಿಸು 3
--------------
ರುಕ್ಮಾಂಗದರು
ತಾಮರಸ ನೆರೆ ನಂಬಿದೆ ಪ ಕಾಮಕ್ರೋಧವ ಕಳೆದು ನಿನ್ನ ನಾಮಾಮೃತವ ಪ್ರೇಮದಲಿ ಎನಗುಣಿಸೋ ಸ್ವಾಮಿ ಅ.ಪ. ಉಪರಾಗ ದಶಮಿ ದ್ವಾದಶಿ ದಿವಸ ಮೊದಲಾದ ಉಪೇಕ್ಷೆ ಮಾಡಿ ಕಳೆದೆ ಉಪಕಾರಯೆಂದು ನಿಜ ಉಕ್ತಿ ಪೇಳಿದರೆನಗೆ ಅಪಕಾರ ಕಾಣುತಿದೆಕೋ ನಿಪುಣನೆನಿಸುವೆನೆಂದು ಅಜ್ಞಾನಿಗಳ ಮುಂದೆ ತಪ ವೃದ್ಧರನ್ನು ಹಳಿವೆ ಸ್ವಪನದೊಳಗಾದರೊ ವೈರಾಗ್ಯ ಬಯಸದಲೆ ಕಪಟ ಮನುಜರೊಳಾಡಿ ನಿನ್ನ ಮರೆದೆ ಸ್ವಾಮೀ 1 ಮಾರನ ಉಪಟಳಾಕಾರದಲಿ ನಾ ಬಲು ಪೋರ ಬುದ್ಧಿಯನು ಮಾಡಿ ಆರು ಇಲ್ಲದ ಸಮಯದೊಳವಳು ಕಣ್ಣು ಸನ್ನೆಯ ಮಾಡಿ ಕೋರಿದ್ದು ಇತ್ತು ನೀಡಿ ಕ್ರೂರಮಾನವರೊಳಗೆ ಆಡಿ ವಾರಿಜನಾಭ ನಿನ್ನ ಆರಾಧನೆಯ ಮರೆದು ಧಾರಿಣೀ ಭಾರದೆ ಪರಲೋಕ ಮರೆದೆ 2 ಭೂಸುರರು ಚಂಡಾಲ ಜಾತಿಯೆನ್ನದೆ ಬಲು ಹೇಸಿಕಿಲ್ಲದೆ ತಿರುಗುವೆ ಪರಿ ವೇಷವನು ಧರಿಸಿ ಮೆರೆದೇ ಆಶೆಯುಳ್ಳ ಮಹಪಿಶಾಚಿಗೊಳಗಾಗಿ ಹರಿ ದಾಸ ಸಹವಾಸ ಜರೆದೆ ವಾಸುಕೀಶಯನ ವಸುದೇವತನಯನೆ ನಿನ್ನ ದಾಸನೆನ್ನಿಸದೆ ಅಪಹಾಸ ಮಾನವನಾದೆ 3 ಹರಿದಾಸರ ಬಳಿ ಅರಘಳಿಗೆ ಕೂತರೆ ಶಿರವ್ಯಾಧಿಯೆಂದೇಳುವೇ ದುರುಳ ದುರ್ವಾರ್ತೆಗಳ ಪೇಳಲು ಹಸಿವು ತೃಷೆ ಮರೆದು ಲಾಲಿಸಿ ಕೇಳುವೆ ತರುಣಿ ಮಕ್ಕಳು ಎನ್ನ ಪರಿಪರಿ ಬೈದರೆ ಪರಮ ಹರುಷವ ತಾಳುವೆ ಗುರುಹಿರಿಯರೊಂದುತ್ತರವನಾಡಲು ಕೇಳಿ ಧರಿಸಲಾರದೆ ನಾನು ಮತ್ಸರಿಪೆನವರೊಡನೇ 4 ನಾ ಮಾಡಿದಪರಾಧ ಎಣಿಸಿ ಬರೆದರೆ ಈ ಭೂಮಂಡಲವು ಸಾಲದಿಹುದೊ ಕ್ಷಮೆಯೊಳಗುಳ್ಳ ದುರ್ಮತಿ ಕೂಡಿಡಲು ಈ ಮತಿಯ ಅದು ಪೋಲದು ಹೋಮ ಜಪತಪಗಳನು ಎಷ್ಟು ಮಾಡಲು ಪಾಪ ಸ್ತೋಮ ಎಂದಿಗು ಪೋಗದೊ ಸಾಮಜವರದ ಜಗನ್ನಾಥ ವಿಠಲ ನಿನ್ನ ಕಾಣಿ 5
--------------
ಜಗನ್ನಾಥದಾಸರು
ತಾರಿಸಬೇಕೋ ಎನ್ನಾ|ಯಾದವ ರನ್ನಾ ಪ ತಾರಿಸಬೇಕೋ ಎನ್ನಾ | ಯಾದವ ರನ್ನಾ| ಸಾರಿದೆ ನಾನು ನಿನ್ನಾ|ಘೋರ ಭವಾಂಬುಧಿಯಾ| ಪಾರಗಾಣೆನೋ ಜೀಯಾ | ವಾರೆ ಕಂಗಳೆನ್ನಾ ನೋಡಿ| ದಯಮಾಡಿ ಒಡಮೂಡಿ ಅಭಯವ ನೀಡಿ1 ತಾನಾರೆಂಬುದು ನೋಡದೇ ತನುವಿನೊಳು| ನಾ ನನ್ನದೆಂದು ಪಾಡಿದೇ| ಶ್ರೀನಾಥ ನಿನ್ನ ನಾಮಾ|ನೆನೆಯದೆ ಮನದೊಳೊಮ್ಮಾ| ನಾನಾ ವಿಷಯದೊಳು ಬೆರೆದು|ಮೈಮುರಿದು| ಹಿತಜರಿದು ಕೆಡುವಾದೇನರಿದು 2 ಶರಣರಾ ಸಂಗದೋರಿಸಿ|ಸ್ವರೂಪವಾ| ಮರೆದ ವಿಭ್ರಮ ಹಾರಿಸೀ| ಗುರುಮೂರ್ತಿ ಪ್ರಭು|ಅರಹು ನೀಡೋ ಭಕ್ತಿಯಾ| ಸುರಸಾ ಸಾರಾಯದ|ಸುಖನುಂಬೆ|ಬಲಗೊಂಬೆ| ನಮೋಯೆಂಬೆ ಎನ್ನಿಂಬ ಬಿಂಬವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಿರುಪತಿ ಯಾತ್ರೆಯ ಮಾಡಿ ತಿರುಪತಿ ಪ ತಿರುಪತಿಯಾತ್ರೆಯ ಮಾಡಿ ಮನದ ದುರಿತಪಾಪಗಳನೀಡಾಡಿ ಆಹ ಸ್ಮರಕೋಟಿ ತೇಜನ ದರುಶನಲಾಭವು ದೊರಕಿದ ಸುಜನರ ಚರಿತೆಯ ಕೇಳುತ್ತ ಅ.ಪ ಸುಟ್ಟು ಹೋಗುವದಿದು ಚಂದ ಮೆಟ್ಟು ಮೆಟ್ಟಿಲನೇರುವ ವೃಂದ ಜನ ಸೃಷ್ಟಿಗೊಡೆಯ ಗೋವಿಂದ ಆಹಾ ದಿಟ್ಟಮನದಿ ಪರಮೇಷ್ಠಿಪಿತನ ಪಾಡಿ ಗಟ್ಯಾಗಿ ಗೋವಿಂದ ಗೋವಿಂದನೆನುವರು1 ಗಾಳಿಗೋಪುರವನ್ನೆ ದಾಟಿ ಭಕ್ತ- ರಾ ಮಂಟಪಕೆ ಉಂಟೆ ಸಾಟಿ ತಾಳ ಮೇಳದವರ ಗಲಾಟೀಯಿಂದ ಶೋಭಿಪ ಪವನನಕೋಟಿ ಕೇಳಿ ನೋಡುತ್ತ ಭಕುತಿಸೂರ್ಯಾಡುತ್ತ ಮಹಿಮೆ ಕೊಂ- ಡಾಡುತ್ತ ಪಾಡುತ್ತ ಕುಣಿವ ಸಜ್ಜನರೆಲ್ಲ 2 ಸ್ವಾಮಿ ಪುಷ್ಕರಣಿಯ ಸ್ನಾನ ಮಾಡಿ ಆ ಮಹವರಹದೇವರನ್ನ ಕಾಮ- ಧೇನೆಂಬ ಶ್ರೀ ಗುರುಗಳನ್ನ ನೋಡಿ ಆ ಮಹಾ ಅಶ್ವತ್ಥರಾಜನ್ನ ಸ್ತುತಿಸಿ ನೇಮದಿ ದಿಗ್ಗಾವಿ ಆಚಾರ್ಯರಿಗೆ ನಮಿಸಿ ಶ್ರೀಧರನಾಲಯ ದ್ವಾರಕ್ಕೆ ಪೋಗಲು 3 ಮೂರು ದ್ವಾರಗಳನ್ನೆ ದಾಟಿ ಮು- ರಾರಿಯ ಗುಡಿಸುತ್ತ ಕೋಟೆಯಲ್ಲಿ ಸಾರುವ ಭಕುತರ ಭೇಟಿಯಿಂದ ಅ- ಪಾರ ಜನುಮದ ಪಾಪಮೂಟೆ ಪೋಗಿ ಬೇಗದಿ ವಿಮಾನ ಶ್ರೀನಿವಾಸನ ನೋಡಿ ಸಾಗರಶಯನನ ದರುಶನ ಕೊಡುಕೊಡು ಎಂದು 4 ಕೊಪ್ಪರಿಗೆಯು ಮನೆಯಂತೆ ಹಣ ತಪ್ಪದೆ ಸುರಿಯುವರಂತೆ ನ- ಮ್ಮಪ್ಪ ವೆಂಕಟಸ್ವಾಮಿಯಂತೆ ತಪ್ಪನಾಡುವರ ಶಿಕ್ಷಿಪನಂತೆ ಆಹಾ ಕ್ಷಿಪ್ರದಿ ಶ್ರೀಧರನಪ್ಪಣೆಯಂದದಿ ಅಪ್ರಮೇಯನ ಸೇವೆಗೊಪ್ಪುವ ಸುಜನರು 5 ಹೇಮದ್ವಾರದಿ ನಿಂತ ಜನರು ನಮ್ಮ ಸ್ವಾಮಿ ಶೃಂಗಾರ ನೋಡುವರು ಶ್ರೀನಿ- ವಾಸನೆ ಸಲಹು ಎಂಬುವರು ಪಾಹಿ ಪಾಹಿ ಶ್ರೀಪತಿ ಎನ್ನುತಿಹರು ಶ್ರೀಶ ಗೋವಿಂದ ಗೋವಿಂದ ಗೋವಿಂದ ಮಾಧವ ಮಾತುಳಾಂತಕ ದೇವ ಮಾತು ಲಾಲಿಸು ಎಂದು6 ಚರಣದಂದಿಗೆ ಗೆಜ್ಜೆವಲಿಯೆ ಪೊನ್ನ ಸರಪಳಿ ಪಾಡಗ ನಲಿಯೆ ಒಳ್ಳೆ ಜರದ ಪೀತಾಂಬರ ಹೊಳೆಯೆ ಪಟ್ಟೆ ವರವಲ್ಲಿ ಹೊಳೆಯುತ್ತ ಮೆರೆಯೆ ಆಹ ಸರಗಳು ವಲಿಯುತ್ತ ಪದಕಂಗಳ್ಹೊಳೆಯುತ್ತ ಉರದಲ್ಲಿ ಶ್ರೀದೇವಿ ಇರುವ ವೈಭವ ನೋಡಿ7 ವರಶಂಖು ಚಕ್ರ ಹಸ್ತದಲಿ ದಿವ್ಯ ಸಿರದಿ ಕಿರೀಟ ಮೆರೆಯುತಲಿ ಪಟ್ಟೆ ತಿಲುಕ ಕಸ್ತೂರಿ ಹೊಳೆಯುತಲಿ ಥಳ ಥಳ ಹೊಳೆವ ಮುಖಕಾಂತಿಯಲಿ ಅಹ ಕಡೆಗಣ್ಣ ನೋಟದಿ ಜಗವಮೋಹನ ಮಾಳ್ಪ ಅಗಣಿತ ಮಹಿಮನ ಸುಗುಣವ ಪಾಡುತ್ತ 8 ಕರುಣಿಗಳರಸನೆ ದೇವ ತನ್ನ ಶರಣು ಹೊಕ್ಕವರನ್ನೆ ಕಾವ ತನ್ನ ಭಜಕರಿಗಭಯವ ನೀವ ಇನ್ನು ಸರಿಯುಂಟೆ ಶ್ರೀರಮಾದೇವ ಅಹ ಪರಿಸರನೊಡೆಯನ ನಿರುತದಿ ಧ್ಯಾನಿಸಿ ದುರಿತಗಳಳಿದು ಸದ್ಗತಿಯ ಪಡೆವರೆಲ್ಲ 9 ಕಾಲಹರಣ ಮಾಡದಂತೆ ತ್ರಿ- ಧಾಮನ ಸ್ಮರಿಸುವ ಚಿಂತೆಯಲ್ಲಿ ಆಲಸ್ಯ ತೊರೆದಿಹರಂತೆ ಶ್ರೀನಿ- ವಾಸನೆ ಇದಕ್ಹೊಣೆಯಂತೆ ಅಹ ಕಾಲಕಾಲಕೆ ತಕ್ಕ ಲೀಲೆಯ ತೋರುವ ಪಾದ ಧ್ಯಾನಿಪ ಸುಜನರು 10 ಹತ್ತವತಾರದ ಹರಿಯು ತನ್ನ ಭಕ್ತರು ಸ್ತುತಿಸುವ ಧ್ವನಿಯ ಕೇಳಿ ಚಿತ್ತದಿ ನಲಿಯುವ ಪರಿಯು ಸುರರು ವಿಸ್ತರಿಸುವ ದಿನಚರಿಯು ಅಹ ಭಕ್ತರ ಸ್ತುತಿಸಲು ಮತ್ತವರಿಗೊಲಿಯುವ 11
--------------
ನಿಡಗುರುಕಿ ಜೀವೂಬಾಯಿ
ತಿರುಪತಿಯ ಶ್ರೀ ವೆಂಕಟೇಶ ಕಮಲ ಪ ಹೇಮಮುಖದೀ ನದಿಯ ಕಂಡೇ ಗೋಮಿನೀ ಪದ್ಮಾವತಿ ಕಂಡೆಭೂಮಿಸುರರ ಮೇಳವ ಕಂಡೆ ಆ ಮಹಾ ಗಾಳಿಗೋಪುರ ಕಂಡೆ 1 ಸ್ವಾಮಿ ಪುಷ್ಕರಿಣೀಯ ಕಂಡೆ ಭೂಮಿ ವರಹಾ ದೇವರ ಕಂಡೆರಾಮದೂತನ ಪಾದವ ಕಂಡೆ ಸ್ವಾಮಿಯ ಮಹಾದ್ವಾರವ ಕಂಡೆ 2 ಹರಿಯು ಅಡಗಿದ ಹುತ್ತನು ಕಂಡೆ ಹರಿಯಧ್ವಜದ ಸ್ತಂಭವ ಕಂಡೆಪರಿಪರಿ ವೈಭವವನು ಕಂಡೆ ಪರಮಪುರುಷನಾ ಮೂರ್ತಿಯ ಕಂಡೆ 3 ಹರಿಹರಿ ಎನ್ನುವರನು ಕಂಡೆ ಹರಿದು ಒಳ ಪೋಗುವರನು ಕಂಡೆಹರಿಣಾಂಜನದ ತಾಡನ ಕಂಡೆ ಮಣಿಮಯಿಮುಕುಟವನು ಕಂಡೆ 4 ಹಣೆಯಲ್ಲಿಯ ನಾಮವ ಕಂಡೆ ಅನುಪಮಾದಂಗವನೂ ಕಂಡೆಕೊರಳ ಸರಗೀ ಸರಗಳ ಕಂಡೆ ಹರಳು ರತ್ನದಾಭರಣಗಳನು ಕಂಡೆ 5 ಉರದಿ ಶ್ರೀ ಭೂದೇವಿಯರ ಕಂಡೆ ಕರದಿ ಶುಭಶಂಖ ಚಕ್ರಗಳ ಕಂಡೆಗುರು ಶ್ರೀವಾದಿರಾಜರ್ಪಿಸಿದ ವರ ಶಾಲಿಗ್ರಾಮ ಹಾರವ ಕಂಡೆ 6 ಉದಗಿ ಪೀತಾಂಬರವ ಕಂಡೆ ನಡುವಿನೊಡ್ಯಾಣವನು ಕಂಡೆಜಡಿದ ಮಣಿಗಣ ಭೂಷಣನ ಕಂಡೆ ಜಡಜನಾಭನ ಮೂರ್ತಿಯ ಕಂಡೆ 7 ಅಂದದೀ ಕಾಲ್ಗಡಗವ ಕಂಡೆ ಸುಂದರ ಪಾದಗಳ ಕಂಡೆಮಂದಹಾಸ ಮುಖಾಬ್ಜ ಕಂಡೆ ಇಂದಿರೆಯ ರಮಣನ ಕಂಡೆ 8 ಆಗಮ ಶೃತಿ ಘೋಷವ ಕಂಡೆ ಭಾಗವತರಾ ಮೇಳವ ಕಂಡೆಬಾಗಿಲಾ ಬಲ ಹಸ್ತವ ಕಂಡೆ ಭಾಗೀರಥಿಯಾ ಪಿತನವ ಕಂಡೆ 9 ಚಿನ್ನದ ಕೂಪವನೂ ಕಂಡೆ ಅನ್ನಪೂರ್ಣಾದೇವಿಯ ಕಂಡೆರನ್ನದ ಹರಿವಾಣವ ಕಂಡೆ ಉಂಬುವ ವೈಭವವನು ಕಂಡೆ 10 ಕಪ್ಪದ ಕಣಜವನೂ ಕಂಡೆ ತಪ್ಪದೇಹಾರುವವರನು ಕಂಡೆಇಪ್ಪತ್ತು ದುಡ್ಡಿಗೆ ತೀರ್ಥ ಒಪ್ಪಿಲೇಮಾರುದನುರನು ಕಂಡೆ 11 ಸಾಸಿರ ನಾಮಗಳ ಒಡೆಯಾ ವಾಸುದೇವಾಚ್ಯುತನ ಕಂಡೆಕಾಸಿಗೆ ಕೈಚಾಚುವಂಥ ಕೇಸಕ್ಕ ತಿಮ್ಮಪ್ಪನ ಕಂಡೆ 12 ಆವ ಜನುಮದ ಸುಕೃತವೋ ಎನಗೆ ಭೂವೈಕುಂಠವನ್ನೇ ಕಂಡೆಶ್ರೀವಿಧಿಭವಾದಿ ವಂದ್ಯ ಐಹೊಳಿ ವೆಂಕಟೇಶನ ಕಂಡೆ 13 ಶುಭ ಮಂಗಲಂ ಸಿರಿಗೆಜಯ ಪುದವೀ ಪದ ಕೇಳಿ ಪೇಳಿದರೆ ಒಲಿದು ಫಲವೀವ ಕುಲಸ್ವಾಮಿ ಅವರೀಗೆ 14
--------------
ಐಹೊಳೆ ವೆಂಕಟೇಶ