ಒಟ್ಟು 365 ಕಡೆಗಳಲ್ಲಿ , 62 ದಾಸರು , 313 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಹರಿಶರಣರು ನಮ್ಮವರು ಭವ ಶರಧಿಯ ಜಿಗಿದರು ನಮ್ಮವರು ಪ ಪರಮನ ಚರಣದಿ ಅರಿವಿಟ್ಟುರತರ ದುರಿತದಿಂದುಳಿದರು ನಮ್ಮವರು ಅ.ಪ ನಿತ್ಯತೃಪ್ತರು ನಮ್ಮವರು ಜಗ ಮಿಥ್ಯೆಂದರಿತರು ನಮ್ಮವರು ನಿತ್ಯ ಸರ್ವೋತ್ತಮ ಹರಿಯೆಂಬ ವೃತ್ತಿ ಬಲಿಸಿದರು ನಮ್ಮವರು 1 ಸತ್ತು ಚಿತ್ತರು ನಮ್ಮವರು ಮಹ ನಿತ್ಯ ಮುಕ್ತರು ನಮ್ಮವರು ಮುಕ್ತಿದಾಯಕನಂ ಗುರ್ತಿಟ್ಟರಿಯುವ ಸತ್ವ ಕಾಲಗಳು ನಮ್ಮವರು 2 ನಿರ್ಮಲಾತ್ಮಕರು ನಮ್ಮವರು ನಿಜ ಧರ್ಮ ನಿರತರೈ ನಮ್ಮವರು ಬೊಮ್ಮನಯ್ಯನ ಮರ್ಮ ತಿಳಿದು ದು ಷ್ಕರ್ಮವ ಗೆಲಿದರು ನಮ್ಮವರು 3 ದೋಷದೂರರು ನಮ್ಮವರು ನಿ ರಾಸೆ ತಾರರು ನಮ್ಮವರು ಹೇಸಿದೈವಗಳ ಆಶಿಸಿ ಬೇಡದ ಕೇಶವನ ದಾಸರು ನಮ್ಮವರು 4 ಭಜನಾನಂದರು ನಮ್ಮವರು ಸ್ಥಿರ ನಿಜ ಪದವರಿದರು ನಮ್ಮವರು ಕುಜನ ಕುಹಕಿಗಳ ಗಜಿಬಿಜಿಗಳುಕದೆ ಸುಜನರೆನಿಸಿದರು ನಮ್ಮವರು 5 ಭೂರಿ ಶೀಲರು ನಮ್ಮವರು ದುಷ್ಟ ಕೇರಿಯ ಮೆಟ್ಟರು ನಮ್ಮವರು ಸಾರಸಾಕ್ಷನ ಸವಿಸಾರವರಿದು ಪಾದ ಸೇರಿಕೊಂಡಿರುವರು ನಮ್ಮವರು 6 ಸದಮಲಾನಂದರು ನಮ್ಮವರು ದು ರ್ಮದವ ನೂಕಿದರು ನಮ್ಮವರು ಅಧಮತನದಲಿಂದೊದರುವ ಹೊಲೆಯರ ಎದೆಯ ತುಳಿವರೈ ನಮ್ಮವರು 7 ಮೋಸಕೆ ಸಿಲ್ಕರು ನಮ್ಮವರು ಯಮ ಪಾಶವ ಗೆಲಿದರು ನಮ್ಮವರು ಈಶನ ತಿಳಿದರು ನಮ್ಮವರು 8 ಸುಗಣ ಸಂತರು ನಮ್ಮವರು ಮಹ ಭಗವದ್ಭಕ್ತರು ನಮ್ಮವರು ರಘು ಶ್ರೀರಾಮ ಜಗಸರ್ವೋತ್ತಮೆಂದು ಪೊಗಳುತ ನಲಿವರು ನಮ್ಮವರು 9
--------------
ರಾಮದಾಸರು
ಸಖಿ ಕೇಳೇ ಇನ್ನು ಹರುಷದ ಮಾತಾ| ಸಕಲ ಜನರಿಗೆ ಆನಂದ ವೀವಾ| ಪ ಇಂತೆಂದು ಹರಿಯು ನಾನಾಪರಿ ವಿರಹದ| ಸಂತಾಪ ಮಾತವ ನುಡಿಯಲು ಕೇಳಿ| ಅಂತರಂಗದ ಕೋಪವಬಿಟ್ಟು ಎದ್ದು|ಅ| ನಂತನ ಬಿಗಿದಪ್ಪಿದಳು ಅಂಬುಜಾಕ್ಷಿ 1 ಲಲಿತಾಂಗಿ ಆಲಿಂಗನವ ನೀಯೇ ಹರಿಗಾಗಾ| ಒಲಿದು ಉಕ್ಕೇರಿತು ಆನಂದ ಉದಧಿ| ಸತಿ ಮಾತಾಡುವ ದೇವ ಶ್ರೀ| ಲಲನೇಯಾ ಸದ್ಬುವನೆಯಾ ಪೂರಿಸಿದನು 2 ಈ ಪರಿಯಾಡಿದ ಶ್ರೀ ಹರಿ ಚರಿತೆಯಾ| ನಾ ಪೇಳಿದುದು ಭಾವ ಭಕುತಿಯಲಿಂದಾ| ಆ ಪದಿಂದಲಿ ಕೊಂಡಾಡುವ ಮನುಜನ| ತಾ ಪಾಲಿಸುವಾ ಮಹಿಪತಿ ಸುತ ಪ್ರೀಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸತ್ಸಂಗದಿಹುದು ನೇಮ ಧ್ರುವ ಸಾಧು ಸಮಾಗಮ ಸಮಾಗಮ ಛೇದಿಸುವದು ಭವಭ್ರಮ 1 ತರಣೋಪಾಯಿದು ಒಂದೆ ಇದು ಒಂದೆ ನಿರ್ಣೈಸದೆ ಮೊದಲಿಂದೆ 2 ಸಾಧನಿದೆ ಸ್ವಹಿತ ಇದೆ ಸ್ವಹಿತ ನವನೀತ 3 ಸರಿ ಈ ಸಾಧನಕಿಲ್ಲ ಸಾಧನಕಿಲ್ಲ ಗುರು ಶರಣಾಗತ ಬಲ್ಲ 4 ಸಾಧನದಿ ಸುವಸ್ತ ಸುವಸ್ತ ಸಾಧಿಸಿತು ಮಹಿಪತಿಗೆ ಸಾಭ್ಯಸ್ತ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸರಸೀಔಂಬಕಿ ನೀರೇ ಎನಗ|ತ್ವರತದಿ ತೋರೆ| ಸರಸಿರುಹ ವಂದ್ಯನಾ ಪ ಪಲ್ಲವಧರದಲಿಂದಾ|ಕೊಳಲು ನಾನಾ ಪರಿಯಾ| ಬಲ್ಲತನದಲಿ ಊದಲು| ಹುಲ್ಲೆಯಂದದಿ ಮನಸು|ಮರಳು ಗೊಂಡಾಥನಿಗೆ| ಭುಲ್ಲವಿಸುತಿಹುದಮ್ಮಾ ನಮ್ಮಾ 1 ಕೈರವ ಸರ್ವೋದಯವ ಕಂಡು|ಮುದದಿಂದ| ಚಕೋರ ಸಂತೋಷಿಸುವಂತೆ| ನೀರಜಾನನ ನೋಡ ಲಕ್ಷಣದಿ ನೋಟಕ| ಪಾರಣೆ ಯಾಗುದಮ್ಮಾ ನಮ್ಮಾ 2 ಪರಮ ಜ್ಞಾನಾಂಗನೆಒಂದೊಂದು ಘಳಿಗೆ ವತ್ಸರ| ದಂತೆ ಪೋಗುತಿಹುದು| ತರಿತ ಮಹಿಪತಿ ನಂದ|ನೋಡಿ ಯನನು ತೋರೆದಡೆ| ಹರನ ನಿಲ್ಲದಮ್ಮಾ ನಮ್ಮಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸರ್ಪಭೂಷಣನ ಸುತನ ಭಕ್ತಿಯಿಂದ ಬಲಗೊಂಡು ಮತ್ತೆ ಅಜನಸತಿಯ ಪಾದಕ್ಕೆ ಎರಗುವೆ 1 ಎಲ್ಲ ದೇವತೆಗಳಿಗೆ ಎರಗಿ ಭಕ್ತಿಯಿಂದ ಲಕ್ಷ್ಮೀ- ವಲ್ಲಭನ ಕತೆಗಳ ವರ್ಣಿಸುವೆನು 2 ಸ್ವಾಮಿ ಶ್ರೀಕೃಷ್ಣನ ಪ್ರೇಮವನ್ನು ಪಡೆದ ಸು- ದಾಮನೆಂಬೊ ಭಕ್ತ ಬಡವ ಬ್ರಾಹ್ಮಣಿದ್ದನು 3 ಸ್ನಾನ ಹೋಮ ಜಪವಮಾಡಿ ನೇಮ ನಿಷ್ಠೆಲಿಂದ ಉಪ್ಪು ಕಾಲ ಕಳೆಯುತಿದ್ದನು 4 ಅಶನವಿಲ್ಲ ವಸನವಿಲ್ಲ ಹಸಿದ ಮಕ್ಕಳನ್ನು ನೋಡಿ ವ್ಯಸನದಿಂದ ಪತಿಯ ಪಾದಕ್ಕೆರಗಿ ನಿಂತಳು 5 ತಂದೆ ತಾಯಿಗಳ ಕಡೆಯ ಬಂಧು ಬಳಗ ಯಾರು ಹತ್ತಿ ದ್ಹೊಂದಿದವರುಯಿಲ್ಲೆ ನಿಮಗೆ ಎಂದು ನುಡಿದಳು 6 ಪತ್ನಿ ಮಾತು ಕೇಳಿ ಪರಮ ಭಕ್ತಿಯಿಂದ ನುಡಿದ ಧ- ರ್ಮಾರ್ಥ ಕಾಮ್ಯಗಳನೆ ಕೊಡುವೋ ಮೋಕ್ಷದಾಯಕ 7 ಆದಿಮೂರುತಿ ಕೃಷ್ಣ ಓದಿಕೊಂಡ ಗೆಳೆಯನೊಬ್ಬ ಮಾಧವನ ಬಿಟ್ಟು ಮತ್ತೊಬ್ಬರಿಲ್ಲವು8 ಆತನ ಕಂಡು ಬಂದರ್ಯಾತರ ದಾರಿದ್ರ್ಯ ನಮಗೆ ಪ್ರೀತಿಯಿಂದ ಹೋಗಿಬನ್ನಿರೆಂದು ನುಡಿದಳು 9 ವರಮಾಲಕ್ಷ್ಮಿ ಅರಸು ಕೃಷ್ಣನರಮನೆಗೆ ಪೋಗಲಿಕ್ಕೆ ನ- ದರ ಏನುವೊಯ್ಲೆ ನರಹರಿಗೆ ಎಂದನು 10 ಲಕ್ಕುಮೀಶನ್ನ ದರ್ಶನಕ್ಕೆ ಒಯ್ಯಲಿಕ್ಕೆ ಮೂರು ಮುಕ್ಕು ಅವಲಕ್ಕಿ ತಿರಿದು ತಂದುಕೊಟ್ಟಳು 11 ಅದನು ಗಂಟು ಕಟ್ಟಿ ತನ್ನ ಹೆಗಲಮ್ಯಾಲೆ ಇಟ್ಟುಕೊಂಡು ನ- ಗಧರನ್ನ ನಗರಕ್ಕಾಗ ಬರುತಲಿದ್ದನು 12 ಲಕ್ಷಣಾದ ಶಕುನವ ಆ ಕ್ಷಣದಿ ಕಂಡು ವಿಪ್ರ ಲಕ್ಷ್ಮೀಪತಿಯ ದಯವು ನಮಗೆ ಆಗೋದೆಂದನು 13 ಹಾದಿಲ್ಹರಿವೊ ಜಲವ ಕಂಡು ಸ್ನಾನವನ್ನು ಮಾಡಿಕೊಂಡು ವೇದ ಪುಸ್ತಕವ ಹಿಡಿದು ಓದಿಕೊಳುತಲಿ 14 ಮಲ್ಲೆ ಮಲ್ಲಿಗೆ ದವನ ಅಲ್ಲೆಯಿದ್ದ ಫಲಗಳು ಲಕ್ಷ್ಮೀ- ವಲ್ಲಭಗೆ ಅರ್ಪಿತವೆಂದು ನಡೆದನು 15 ಗೋಪುರವ ಕಂಡು ದ್ವಾರಕಾಪುರಕ್ಕೆ ಕೈಯಮುಗಿದು ಶ್ರೀಪತಿಯ ಬಾಗಿಲಲಿ ಬಂದು ನಿಂತನು 16 ದ್ವಾರದಲ್ಲಿ ನಿಂತವರು ದಾರುಯೆಂದ್ವಿಚಾರಿಸಲು ನಾರಾಯಣನ ಸಖನು ನಾನೆಂದ್ಹೇಳುತಿದ್ದನು 17 ನುಡಿದ ನುಡಿಯ ಕೇಳುತ ನಡೆದು ಬಂದು ಚಾರಕರು ಒಡೆಯ ನಿಮ್ಮ ಗೆಳೆಯನಂತೆ ಬಡವ ಬ್ರಾಹ್ಮಣ 18 ಹುಟ್ಟ ಮೊದಲೆ ಅನ್ನ ತನ್ನ ಹೊಟ್ಟೆಗುಂಡ ಮನುಜನಲ್ಲ ಗಟ್ಟಿಗಾಳಿ ಬರಲೀಗ್ಹಾರುವಂತೆ ತೋರುವ 19 ಅಸ್ಥಿ ಚರ್ಮ ಆತನಂಗಕ್ಹತ್ತಿಕೊಂಡ ಹೊಟ್ಟೆಬೆನ್ನು ಮತ್ತೆ ನಡೆಯಲಾರ ಮಾತನಾಡಲಾರನು 20 ಒಡೆದ ಗುಂಡುತಂಬಿಗೆ ಬಡಿದನದರ ಸುತ್ತ ಮ್ಯಾಣ ಹಿಡಿದ ಗಂಟ ಬಿಡದಲ್ಹೊತ್ತು ನಡೆದು ಬಂದನು 21 ಮರದ ಗುಂಡು ಸರದಗುದ್ದಿ ಕೊರಳೊಳಗೆ ಹಾಕಿಕೊಂಡು ಎರಳೆ ಚರ್ಮ ಸುತ್ತಿ ಎಡದ ಬಗಲಲ್ಲಿಟ್ಟನು22 ದೊಡ್ಡನಾಮ ಹಚ್ಚಿಕೊಂಡು ಮುದ್ರೆಮಯ್ಯಲೊತ್ತಿಕೊಂಡು ಶುದ್ಧ ಚಂದ್ರಮನ ಕಾಂತಿ ತೋರುತಿದ್ದನು 23 ಛಿದ್ರವಾದ ಬಟ್ಟೆನುಟ್ಟು ಚಿಗುರು ತುಳಸಿ ಕಿವಿಯಲ್ಲಿಟ್ಟು ಪದ್ಮನಾಭ ಪಾಲಿಸೆನುತ ಕೂಗುತಿದ್ದನು24 ನಾಮಾಂಕಿತÀವ ಕೇಳಲು ಸುದಾಮನೆಂದು ಹೇಳುವ ನಾನಾ ಪರಿಯಲ್ನಿಮ್ಮ ಸ್ತುತಿಯ ಮಾಡುತಿದ್ದನು 25 ಅಪ್ಪುಣಾದರಾತನ ಇತ್ತ ಕರೆದು ತಾವೆನೆನಲು ಭಕ್ತರೊಡೆಯ ಭಾಳ ಸಂಭ್ರಮದಿ ಎದ್ದನು 26 ಕರವ ಪಿಡಿದು ಕುಳ್ಳಿರಿಸಿ ದಿವ್ಯಾಸನದ ಮ್ಯಾಲೆ ತರಿಸಿ ಚಾಮರದ ಗಾಳಿ ಹಾಕುತಿದ್ದನು 27 ಪನ್ನೀರು ತಂದು ಪಾದತೊಳೆದು ದ್ರಾಕ್ಷಿ ಕಿತ್ತಳೆ- ಹಣ್ಣು ಎಳನೀರು ತಂದು ಮೆಲಲು ಕೊಟ್ಟನು 28 ಮದುವೆ ಆಯಿತೇನೊ ಸಖನೆ ಎಂದು ಕೇಳಿದ 29 ಸೋಳಸಾವಿರ ಸತಿಯರಾಳುವೊ ಶ್ರೀರಮಣ ಕೇಳೊ ರಾಣಿವೊಬ್ಬಳಿರುವೊಳಯ್ಯ ನಮಗೆಯೆಂದನು 30 ಇಷ್ಟುದಿವಸ ಇಲ್ಲಿಗೆ ಬಾರದಿದ್ದ ಕಾರಣೇನು ಚಿಕ್ಕಂದಿನ ಸ್ನೇಹವೆಲ್ಲ ಮರೆತ್ಯ ಎಂದನು 31 ಬರದಲಿದ್ದೆ ನಾನು ಪಾಮರನೂ ಆದಕಾರಣ ಕಳುಹಿಕೊಟ್ಟಳೆನ್ನ ಭಾರ್ಯಳೀಗ ಎಂದನು 32 ಅಣ್ಣ ನಮ್ಮತ್ತಿಗೆ ನಮಗೇನು ಕಳಿಸಿದಳು ನಿನ್ನ ಹೆಗಲ ಗಂಟು ಬಿಚ್ಚಿ ತೋರಿಸೆಂದನು 33 ವಿಪ್ರ ನಾಚಿ ನೆಲನ ನೋಡುತಿರಲು ಕೃಷ್ಣ ಸಲಿಗೆಲಿಂದ ಗಂಟನೆಳೆದು ಬಿಚ್ಚಿಸಿದನು 34 ಸುಜನ ಜನರು ಮಾಡುವಂಥ ಭಜನೆಯೊಂದೆ ಸಾಕುಯೆನೆಗೆ ಹೇಮ ರತ್ನಾಭರಣವ್ಯಾತಕೆಂದನು 35 ಕುಂದಣದ ಪಾತ್ರೆಯೊಳಗೆ ತಂದು ಸುರುವೆ ಪ್ರತಕವನ್ನು ಮಂದರೋದ್ಧರನು ಮುಷ್ಟಿ ತೆಗೆದುಕೊಂಡನು36 ಮುಷ್ಟ್ಟಿಗೊಂದು ಬಾರಿ ಶ್ರೀಕೃಷ್ಣ ತೆಗೆದು ಮೆಲ್ಲುತಿರಲು ಕಷ್ಟ ದಾರಿದ್ರ್ಯವೆಲ್ಲ ಹರಿದು ಹೋಯಿತು 37 ಎರಡನೇ ಮುಷ್ಟಿ ಪಾಲ್ಗಡಲಶಯನ ಮುಕ್ಕುತಿರಲು ಸಡ- ಸಡಗರ ವೈಕುಂಠಪದವಿ ಮುಕ್ತಿ ಆಯಿತು 38 ಮೂರನೇ ಮುಷ್ಟಿಗೆ ನಾರಿ ರುಕ್ಮಿಣಿ ಬಂದು ಕೃಷ್ಣಯೇನು ಕೊಡುವಿ ಕರವ ಪಿಡಿದಳು 39 ಭಾವನವರು ತಂದುಕೊಟ್ಟ ದೂರದ ಪದಾರ್ಥವನ್ನು ನೀವೆ ಸವಿಯ ನೋಡುವೋದು ದಾವ ನೀತಿಯು40 ಅಕ್ಕ ಕಳಿಸಿದ್ದು ಅವಲಕ್ಕಿ ನಮಗಿಲ್ಲದ್ಹಾಗೆ ಮುಕ್ಕಿ ಬಿಡುವರೇನೊ ಎಂದು ನÀಕ್ಕಳಾಗಲೆ41 ಇಷ್ಟು ಮಂದಿಯೊಳಗೆ ಎನ್ನ ಮುಷ್ಟಿ ಹಿಡಿದು ನಿಲ್ಲುವಂಥ ದಿಟ್ಟತನಗಳೆಲ್ಲ್ಲಿ ಕಲಿತೆ ಹೇಳೆಯೆಂದನು 42 ಚಿಕ್ಕ ಸತ್ಯಭಾಮೆ ನೋಡಿ ನಕ್ಕಾಳೆಂಬೊ ನಾಚಿಕಿಲ್ಲ ಮುಕ್ಕು ಅವಲಕ್ಕಿಗೆನ್ನ ಕÀರವ ಪಿಡಿವೋರೆ 43 ಸರ್ವರೊಳಗೆ ಅಧಿಕಳೆಂಬೊ ಗರುವಿನ ರುಕ್ಮಿಣಿಗೆ ಬುದ್ಧಿ ಕರೆದು ಹೇಳಬಾರೆ ಸತ್ಯಭಾಮೆಯೆಂದನು 44 ಎನ್ನ ಭಕ್ತರಲ್ಲಿ ಪ್ರೇಮ ನಿನಗೆ ಉಂಟಾದರೆ ಇನ್ನೂ ಒಂದು ಮುಕ್ಕು ನಿನಗೆ ಕೊಡುವೆನೆಂದನು45 ಅಕ್ಕಗಾಡೋ ಮಾತಕೇಳಿ ಚಿಕ್ಕ ಸತ್ಯಭಾಮೆ ತಾನು ಅಕ್ಕರದಿ ಬಂದು ಕೃಷ್ಣನೆದುರು ನಿಂತಳು 46 ರಂಗ ನಿನ್ನ ಪಟ್ಟದರ್ಧಾಂಗಿಯಾದ ರುಕ್ಮಿಣಿಗೆ ಮುಂಗೈ ಹಿಡಿವೋದಕ್ಕೆ ದಾರಭಯವೇನೆಂದಳು47 <ಈಔಓಖಿ ಜಿಚಿಛಿe='ಓuಜ
--------------
ಹರಪನಹಳ್ಳಿಭೀಮವ್ವ
ಸಾರಿರೊ ಡಂಗುರವ ನಮ್ಮ ಪ ಭಾರತಿರಮಣ ವಾಯುವೆ ಜಗದ್ಗುರುವೆಂದು ಅ.ಪ ಭೋರಿಡುತಲಿಪ್ಪ ಸಮುದ್ರವ ಲಂಘಿಸಿಧಾರುಣಿಸುತೆಯ ದುಃಖವ ಕಳೆದುಚೋರರಾವಣ ವನವನಲಗಾಹುತಿಯಿತ್ತುಶ್ರೀರಾಮಗೆರಗಿದಾತನೆ ಪ್ರಸಿದ್ಧನೆಂದು 1 ಕುಶಲದಿ ಕುಂತಿಗೆ ಮಗನಾಗಿ ಭೀಮನೆ-ನಿಸಿ ಆ ಕೌರವ ಕಪಟದಲಿ ಕೊಟ್ಟವಿಷದ ಕಜ್ಹಾಯವ ತಿಂದು ಜೀರ್ಣಿಸಿಕೊಂಡಅಸಮ ಬಲಾಢ್ಯ ಮೂರುತಿಯೆ ಬದ್ಧವೆಂದು 2 ಕಲಿಯುಗದÀಲಿ ಮಧ್ಯಗೇಹಾಭಿಧಾನದತುಳುವ ಬ್ರಾಹ್ಮಣನಲಿ ಅವತರಿಸಿಒಲಿದು ಶ್ರೀ ಅಚ್ಯುತಪ್ರೇಕ್ಷಾಚಾರ್ಯರಿಂ-ದಲಿ ಆಶ್ರಮಗೊಂಡ ಪೂರ್ಣಪ್ರಜ್ಞನೆಂದು 3 ಕಾಲ ಪ್ರಳಯದ ಸಿಡಿಲು ಬಂದೆರಗಿದಂತೆಕಾಲಿಂದ ತುಳಿದವನಸುವಗೊಂಡನು ಎಂದನು 4 ಬಳಿಕ ಇಪ್ಪತ್ತೊಂದು ದುರ್ಭಾಷ್ಯಂಗಳಹಳಿದು ವೇದಾಂತ ಶಾಸ್ತ್ರಂಗಳಲಿಉಳುಹಿ ವೈಷ್ಣವ ಮತವವನಿಯೊಳಗೆ ನಮ್ಮಸಲಹುವ ಮಧ್ವೇಶ ಕೃಷ್ಣ ಪ್ರಿಯನೆಂದು5
--------------
ವ್ಯಾಸರಾಯರು
ಸೀತಾಪತಿವಿಠಲ ದಾಸಳ ನಿರ್ಯಾಣ ಪದ ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36 ತೊರೆದೈದು ದಿನ ಅನ್ನ ಹರಿಧ್ಯಾನಂಗತಳಾಗಿ ವರ ಗಂಗೆ ವದನದಿ ಪ್ರಾಶನಗೈದು ಅಭಿಮಾನ ತೊರೆದು ಭ್ರಾಂತಿಯ ಮೆರೆದು 37 ವರಹಜೆ ತುಂಗ ತೀರದಿ ಪ್ರಾಣನಾಥನ ಚರಣಮೂಲದಿ ಶಿವಮೊಗ್ಗ ಕ್ಷೇತ್ರದಲಿ ಹರಿಸ್ಮರಣೆಯಲಿ ಪ್ರಾಣ ಸಲಿಸುತಲಿ 38 ಸ್ವಭಾನುವತ್ಸರ ಭಾದ್ರಪದ ಬಹುಳ ಇದ್ದ ದಶಮಿ ದಿನ ಗುರುವಾರದಲ್ಲಿ ಮಧ್ಯರಾತ್ರಿಯಲಿ ತನು ತೊರೆದಿಲ್ಲಿ 39 ಕೇಶವದೂತರು ಮೀಸಲಿಂದಲಿ ನಿನ್ನ ಘಾಸಿಗೊಳಿಸದೆ ಕರೆದೊಯ್ದರೇನಮ್ಮ ಪೇಳೆ ಎನ್ನಮ್ಮ ಎಲ್ಲಿ ಪೋದ್ಯಮ್ಮ 40 ಹೆತ್ತಮ್ಮಗಿಂತಲೂ ಹೆಚ್ಚಾಗಿ ನಮ್ಮನ್ನು ಅರ್ಥಿಯಿಂ ಬೆಳೆಸಿದೆ ಅಭಿಮಾನದಿಂದ ಅನುರಾಗದಿಂದ ಬಹುಮಾನದಿಂದ 41 ಮೊಮಕ್ಕಳೆಂದರೆ ಬಹು ಪ್ರೀತಿ ನಿನಗಲ್ಲೆ ಒಮ್ಮೆ ನಾಲ್ವರು ಬಂದು ಇರುವೆವು ನಾವು ಆಲ್ಪರಿಯುವೆವು ಅಗಲಿ ಸೈರಿಸೆವು 42 ಅರ್ಥಿಲಿ ರಮಾಕಾಂತ ವಿಠಲಾಂಕಿತ ಕೃಷ್ಣ ಮೂರ್ತಿಯು ಪುತ್ರಗಿಂತಧಿಕದಿ ನಿನ್ನ ಅಂತ್ಯಕ್ರಿಯವನ್ನ ಮಾಡಿದ ಧನ್ಯ 43 ಶ್ರದ್ಧೆಯಿಂದಗ್ರಜನಿಂದ ಕೂಡುತ ನಿನ್ನ ಶುದ್ಧಭಾವದಿಗೈದ ಅಂತ್ಯಸೇವೆಯನು ಸ್ವೀಕರಿಸಿ ನೀನು ಹರಸಿ ಹಿತವನ್ನು 44 ತಿಳಿದು ತಿಳಿಯದೆ ನಾನು ಗೈದಪರಾಧವ ನಲವಿಂದ ಕ್ಷಮಿಸಿ ನಮ್ಮನು ಮನ್ನಿಸಿದೆ ಸಹನವ ತಳದೆ ಬಹು ಪ್ರೀತಿಗೈದೆ 45 ಎಲ್ಲ ಪರಿಯಲಿ ನಮ್ಮ ಕ್ಷಮಿಸಿ ಕಾಪಾಡಮ್ಮ ಬಲ್ಲಿದಳು ನೀನು ಆಶೀರ್ವದಿಸುವುದು ಸುಖವ ತೋರುವುದು ಕೃಪೆಯ ಮಾಡುವುದು 46 ಅಂಜನೆಕಂದ ನಿನ್ನವನೆಂಬ ಅಭಿಮಾನ ರಂಜಿಸೆ ಸಹಜದಿ ನಿನ್ನೊಳು ಮಾತೆ ಜಗದಿ ವಿಖ್ಯಾತೆ ಹರಿಗತಿಪ್ರೀತೆ 47 ಪತಿಗುರು ಪವನ ಹೃದ್ಗತಮೂರ್ತಿ ಚಿಂತನ ರತಳೆ ನಿನ್ನಯ ಚರಿತೆ ಪೇಳ್ದೆ ತಿಳಿದನಿತು ತಪ್ಪನು ಮರೆತು ಲಾಲಿಸು ಮಾತು 48 ಗೋಪಾಲಕೃಷ್ಣವಿಠಲನ ಸದ್ಭಕ್ತಳೆ ಶ್ರೀ ಪಾದಕ್ಕೆರಗಿ ನಾ ಜಯವ ಪಾಡುವೆನು ಧನ್ಯಳೇ ನೀನು ಮಾನ್ಯಳೆ ನೀನು 49
--------------
ಅಂಬಾಬಾಯಿ
ಸುಖ ಪೂರ್ಣ ವಿಠಲನೆ | ಸಲಹ ಬೇಕಿವಳಾ ಪ ವಿಖನ ಸಾಂಡವ ಬಾಹ್ಯ | ಒಳಗೆಲ್ಲಾ ವ್ಯಾಪ್ತ ಅ.ಪ. ನಾರಿಮಣಿ ಪತಿಸೇವೆ | ಸಾರತರದಲಿಗೈದುಭೂರಿಭಕ್ತಿಯಲಿಂದ | ಸಂತಾನಕಾಗೀಶ್ರೀ ರಮಣ ತವಪಾದ | ದಾರಾಧನೆಯಗೈದುಭೋರಿಟ್ಟು ಪ್ರಾರ್ಥಿಪಳು ಕಾರುಣ್ಯ ಮೂರ್ತೇ 1 ಭಕುತರ್ಗಭೀಷ್ಟಗಳ | ನೀ ಕೊಡುವಿ ಎಂತೆಂಬಉಕುತಿಯನೆ ನಾ ಕೇಳಿ | ಅರಿಕೆಯನೆ ಮಾಳ್ವೇಈಕೆಯ ಮನೋರಥವ | ನೀ ಕೊಟ್ಟು ಸಾಧನವವೈಖರಿಯಲಿಂದೆಸಗೊ | ರುಕುಮಿಣೀ ಪತಿಯೇ 2 ಉಚ್ಛನೀಚಾದಿಗಳು | ಸ್ವಚ್ಛ ತಿಳಿಸಿವಳೀಗೆಅಚ್ಛ ಕನ್ನಿಕೆ ರಮಣ | ಅಚ್ಯುತಾನಂತಾಮುಚ್ಚು ಕಾಣಿಕೆಗೊಂಡು | ಇಚ್ಛೆ ಪೂರೈಸುವುದುಸಚ್ಚದಾನಂದಾತ್ಮ | ಚಿತ್ಸುಖಪ್ರದನೇ3 ಹರಿಗುರು ಸದ್ಭಕ್ತಿ | ದುರ್ವಿಷಯ ವೀರಕ್ತಿಹರಿಯ ವಿಷಯಕ ಜ್ಞಾನ | ಕರೋಣಿಸೋ ದೇವಾನಿರುತನಾಮ ಸ್ಮರಣೆ | ಇರಲಿವಳ ಮುಖದಲ್ಲಿಮರುತಾಂತರಾತ್ಮಕನೆ | ಶಿರಿ ರಮಣ ಹರಿಯೇ 4 ಶ್ರೀವತ್ಸಲಾಂಚನನೇ | ಭಾವುಕರ ಪರಿಪಾಲಗೋವತ್ಸದನಿ ನಾವು | ತೀವ್ರ ಬರುವಂತೇಶ್ರೀವರ ಶ್ರೀಗುರೂ | ಗೋವಿಂದ ವಿಠಲನೆನೀವೊಲಿಯ ಬೇಕೆಂದು ಬೇಡ್ವೆ ಗೋಪಾಲ 5
--------------
ಗುರುಗೋವಿಂದವಿಠಲರು
ಸುತೀರ್ಥರು ಸಾರಲೆನ್ನಳವಲ್ಲ ಗುಣಶಾಲಿ ಸುರಪ ಸುತೀರ್ಥ ಯತಿವರ ಪ ತವ ಸಂಚಾರ ಚರಣ ಸಮೀರಯುತ ವಿಸ್ತಾರ ಮಹಿಮೆಯ ಅ.ಪ. ಇಂದು ದಾರಿಯಲಿಂದ ಬರುತಿರೆ ಸುಂದರಂದಣವೇರಿ ಯದರಿಗೆ ಬಂದು ಶರಣರ ಸೇವೆಗೊಂಡು ಶೃಂಗಾರ ಕವಚವನಿತ್ತು ನವಸುಖ ಮಾರಮರ್ಮನ ಬಯಸಿ ದ್ಯುತಿವರನಂಘ್ರಿಕಮಲವ 1 ಧನ್ಯನಾದೆನೊ ನಿನ್ನ ನೋಡಿ ಮಾನ್ಯನಾಗುವೆ ಮೌನಿ ಜನರೊಳು ಗಾನ ಮಾಡುವೆ ಜ್ಞಾನಗಯ್ಯನ ಧ್ಯಾನ ಮಾಡಭಿಮಾನ ತೊರೆಯುತ ನಂಬಿ ನಿನ್ನಯ 2 ಸಂಗಮಾಡಿಸು ಡಿಂಗಿಯರ ಕಡೆ ಕಂಗಳಿಂಗದಲಿ ಶೋಭಿಪಡುವ ಸುಶಾಮಗೊರಳನ ಪೊಡದ ತಂದೆವರದಗೋಪಾಲವಿಠಲನ ಪ್ರೇಮಗುರುಮಣ 3
--------------
ತಂದೆವರದಗೋಪಾಲವಿಠಲರು
ಸುಮ್ಮನೆಲ್ಯದ ತಾ ನೋಡಿ | ನಮ್ಮಯ್ಯನ ಕೃಪೆ | ಸುಮ್ಮನೆಲ್ಲ್ಯದ ತಾ ನೋಡಿ ವಮ್ಮನಾಗದೇ ಪ ಅಂದಿಗಿಂದಿಗೇ ಒಂದೆರಡಲ್ಲದೆ | ಸಂಧಿಸಿ ಬಂದಿಹ ಜನ್ಮಗಳಲ್ಲಿ | ಕುಂದದೆ ಪುಣ್ಯದ ವೃಂದದ ಪಡೆದಾ | ನಂದದ ಛಂದದಿ ನಿಂದವರಲ್ಲದೆ 1 ಗಾಧವ ಸೂಸುವೆ ಸಾಧಕನಾಗಿ | ಸದರದಲಿ ಗುರು ಬೋಧದ ಲಿಂದಾ | ಸಾಧಿಸಿ ಸಾಧಿಸಿ ಬೇಧಿಸಿ ತನ್ನೊಳು | ವೇದಾಂತರಿ-ತಿಹ ಸಾಧುರಿಗಲ್ಲದೆ 2 ಬಂದದ ನುಂಡು ಬಾರದ ಬಯಸದೆ | ನಿಂದಿಸಿ ಲೊಂದಿಸಿ ಕುಂದದೆ ಹಿಗ್ಗದೆ | ತಂದೆ ಮಹಿಪತಿ ನಂದನ ನುಡಿ ನಿಜ | ವೆಂದನುಭವಕೆ ತಂದವಗಲ್ಲದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸೋಜಿಗವಾಯಿತು ಸದ್ಗುರುವಿನ ಕೃಪೆ ಹೇಳಲೇನು ನಿಜಗುಹ್ಯದ ಮಾತು ಗುರುತವಾಗಿ ಹ್ಯ ಸಾಧು ಬಲ್ಲ ಖೂನ ಧ್ರುವ ನೀಗದ ನೀಗಿತು ಹೋಗದ ಹೋಯಿತು ತ್ಯಾಗಲ್ಯೊಂದು ಬಾಗದ ಬಾಗಿತು ಸಾಗದ ಸಾಗಿತು ಯೋಗಲ್ಯೊಂದು ಆಗದ ಆಯಿತು ಕೂಗದ ಕೂಗಿತು ಈಗಲ್ಯೊಂದು ತೂಗದ ತೂಗಿತು ಸುಗಮ ತಾ ತೋರಿತು ಜಗದೊಳೊಂದು 1 ಹುರಿಯಲೊಂದು ಅರಿಯಿತು ಅರಿವಿಲೊಂದು ಸುರಿಯದ ಸುರಿಯಿತು ಗರೆಯದ ಗರಿಯಿತು ತ್ಯರಿಯಲೊಂದು ಜರಿಯದ ಜರಿಯಿತು ಬೆರಿಯದೆ ಬೆರಿಯಿತು ಕುರಿವಿಲೊಂದು 2 ಜಾರದ ಜಾರಿತು ಮೀರದ ಮೀರಿತು ಹಾರಲೊಂದು ತೋರದ ತೋರಿತು ಸೇರದ ಸೇರಿತು ಸಾರಲೊಂದು ಬೀರದ ಬೀರಿತು ಸಾರಸದೋರಿತು ಕರದಲೊಂದು ತರಳ ಮಹಿಪತಿಗ್ಹರುಷವಾಯಿತು ಗುರುಕರುಣಲಿಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ಮರಿಸಿದದರಘನನಾಶನ ಸ್ಮರಿಸಿದವರಘನಾಶಸ್ಮರನಯ್ಯನಂಘ್ರಿ ಯುಗ ಸರಸಿಜವ ಪೂಜಿಸುವಗುರು ವಿಜಯರಾಯರ ಚರಣಾಬ್ಜ ಸಾರಿದವದುರಿತಾಬ್ಧಿ ಮೀರಿದವ ಹರಿಪುರವ ಸೇರಿದವನೊ ಪ ಅಘ ಬಂಧ ಪರಿಹರ ಮಾಡುತಾ ಜನರು 1 ಇನಿತು ಜನಸಮುದಾಯದೊಳು ಯಿರುತಿರ್ದ ಇಭವರದ ನನುದಿನವು ಗಾಯನದಿ ಕೊಂಡಾಡಿ ಮನಮುಟ್ಟಿವಿನಯಾತಿಶಯದಲ್ಲಿ ಗುರುವರ್ಯರಾ ಸೇವೆ ಘನವಾಗಿ ಮಾಡಿ ಮುದದಿ ||ತನುವೆತ್ತಿ ವರಸರಿತ ತೀರದಾ ಅಣು ಬದರಿಜನ ಶ್ರೇಷ್ಠರೊಳು ಹರಿಯ ದಾಸ ಪೆಸರಲಿ ಬಂದುಘನ ಯಾದವಾದ್ರಿ ಪಟ್ಟಣದೊಳಗೆ ಯಿದ್ದು ಬಗೆ ಜನನಿ ಅನುಜಾತಿ ಸಹಿತ 2 ಕೆಲವು ದಿನ ಸಂಸಾರ ಗಲಭಿಯೊಳು ಯಿರುತಿರ್ದುಜಲದೊಳಗೆ ಅಂಬುಜವು ಮಿಳಿತವಾಗಿದ್ದ ತೆರಹಳಿದು ದುಷ್ಟಾಸಿಯನು ಕಳೆದು ಕಡು ಮಮತೆಯನು ಪುಳಕೋತ್ಸ ಮನದಿ ತಾಳಿ ||ಜಲದೊಳುತ್ತಮವಾದ ಭಾಗೀರಥೀ ಯಾತ್ರಿಛಲ ಭಕುತಿಯಿಂದಲಿ ಮಾಡಿ ಮೋದದಿ ಹರಿಯಹಲವು ಬಗೆ ಲೀಲೆಯನು ಹರುಷದಿಂದಲಿ ಯಿನ್ನು ತಿಳಿದು ಗುರು ಕರುಣ ಬಲದಿ 3 ಮೂರ್ತಿ ಮನದೊಳು ಕಂಡು ಸುಖವನಧಿಯಲ್ಲಿ ಲೋಲ್ಯಾಡಿಕೊಳುತ ||ಅಲ್ಲಿಂದ ತೆರಳಿ ಗಿರಿಯಲ್ಲಿದ್ದ ವೆಂಕಟನಸಲ್ಲುವಾ ಭಕುತರೊಳು ಸಲೆ ಶ್ರೇಷ್ಠನೆಂದೆನಿಸಿಮಲ್ಲ ಮರ್ದನನಾದ ಮುರಹರನ ಮಹಿಮೆ ಮನ ಬಲ್ಲನಿತು ವಿಸ್ತರಿಸುತ ಜನರು 4 ಈ ತೆರದಿ ಇಭವರದನಾತುಮದೊಳಗೆ ತಂದುಭೂತಳದ ಬಲು ವಿಧದ ತೀರ್ಥಕ್ಷೇತ್ರಗಳಲ್ಲಿಪ್ರೀತಿಯಿಂದಲಿ ಪರಮ ಪುರುಷನ್ನ ಧೇನಿಸುತ ಖ್ಯಾತಿ ಮಹಿಯೊಳಗೆ ಮೆರದು ||ವಾತಜಾತನ ಮತದ ವೊಳಗಿಪ್ಪ ವೈಷ್ಣವರತಾತನೆಂದೆನಿಸಿ ಸುಖವ್ರಾತದೊಳಗಿಡುವಲ್ಲಿಚಾತುರ್ಯದಿಂದ ಬಲುದಾತನೆನಿಸುತಲಿ ಭವತೀತರನ ಮಾಡಿ ಪೊರವ ಜನರು 5 ಆ ಬಗೆಯಲೀ ಕಮಲನಾಭ ಕರುಣಿಸಿ ಯಿವರಈ ಭುವನದೊಳು ಯಿಟ್ಟು ಜನರ ವುದ್ಧರಿಸುವಲೋಭದಿಂದಲಿ ಸಕಲ ಸಜ್ಜನರ ಸನ್ಮಾರ್ಗ ಲಾಭದೊಳು ಸೇರಿಸಿದನೊ ||ತ್ರ್ರಿಭುವನದೊಡೆಯನ್ನ ಕಥೆಯ ತಿಳಿಸುವ ಜನಕೆಶೋಭಿಸುವ ಗಾಯನದ ಸೊಬಗಿನಿಂದಲಿ ಕೇಳಿಶ್ರೀಭೂರಮಣ ವೊಲಿದು ಪಾಲಿಸುವನಾಮೇಲೆ ಶೋಭನ ಗತಿಯ ನೀವನೊ 6 ಕಲುಷ ವಾಕು ವುಪಜೀವರಿಗೆ ಏಕ ಮನದಿಂದಿರುವದೇ ಈ ಕಲಿಯುಗದಲಿಸಾಕಾರ ಗುಣಪೂರ್ಣ ಶ್ರೀನಿವಾಸನು ಬಿಡದೆ ಸಾಕುವನು ಸಮ್ಮೊಗದಲಿ ಜನರು 7 ದೇವಮುನಿ ನಾರದನು ಜೀವಿಗಳನುದ್ಧರಿಪಭಾವದಲಿ ಯಮಪುರಿಯ ದೇವನಲ್ಲಿಗೆ ಪೋಗಿಸಾವಧಾನದಿ ಸಕಲ ಸತ್ಕಾರಕೊಳಗಾಗಿ ನೋವು ಬಡವರನೀಕ್ಷಿಸಿ || ಸಾವಧಾನದಿ ಕೇಳಿ ಕಲಶಾರುಣೀ ಭಕ್ತ- ರಾವಳಿಯ ಸಲಹುವ ದೇವ ದೇವೇಶನನುತಾ ವದರಿ ಕೂಗಲಾ ಜೀವರೆಲ್ಲರು ಕೇಳಿ ಪಾವಿತ್ರವನೆಗೈದರೊ ಜನರು 8 ಭವ ಸಿರಿ ಚರಣಕೆ ಜನರು 9 ಸಿರಿ ತರಣಿ ಶರಧಿ ಶಯನನ ತೋರುವ ಜನರು 10 ದಾನವಾಂತಕ ದನುಜರನ್ನು ಸಂಹರಿಸುವಾಜ್ಞಾನಪೂರ್ಣನು ಗುಪ್ತ ತಾನಾಗಿ ಜಗದೊಳಗೆಹಾನಿ ವೃದ್ಧಿಂಗಳಿಗೆ ಹೊರಗಾಗಿ ಜೀವಿಗಳ ಮಾಣದಲೆ ಪರಿಪಾಲಿಪ ||ಕ್ಷೋಣಿಯೊಳು ಭಕುತರಘ ಹಾನಿಗೈಸುವ ಬಗಿಗೆಈ ನಿರುದ್ಧಕೆ ಯಿವರಧೀನ ಮಾಡಿದ ನಮಗೆವೇಣುಗೋಪಾಲ ವಿಠಲರೇಯ ತಾನೊಲಿದು ಸ್ವಾನಂದವನೆ ವುಣಿಸುವ ಜನರು 11
--------------
ವೇಣುಗೋಪಾಲದಾಸರು
ಸ್ವಾಗತವು ಸ್ವಾಗತವು ಯೋಗಿವರ್ಯರಿಗೆ ||ವಿಶ್ವೇಶ ತೀರ್ಥ ಶ್ರೀ ವಿದ್ಯ ಮಾನ್ಯರಿಗೇ ಪ ಪ್ರೊದಟೂರು ಜನನಿಮ್ಮ | ಮೋದಮಯ ಆಗಮಕೆಆದರದಿ ಕಾದಿಹರು | ವೇದ ಘೋಷಿಸುತ |ಹೇದಯಾ ಪರಿಪೂರ್ಣ | ಸಾದುಗಳೆ ನಮಿಸುವೆವುಮೋದ ಪ್ರಮೋದ ಗುಣ | ಬೋಧಿಪುದು ನಮಗೇ 1 ಸಿರಿ ಮೂರ್ತಿ | ಗುರುರಾಘವೇಂದ್ರಾ |ವರಸು ಬೃಂದಾವನವ | ಸ್ಥಿರ ಪಡಿಸಿ ನಿಮ್ಮಾಮೃತಕರದಿಂದಲಿಂದೀಗ | ವರ ಮಹೂರ್ತದಲೀ 2 ವತ್ಸರವು ಆನಂದ | ವೈಶಾಖ ಸ್ಥಿತ ದಶಮಿವಾತ್ಸಲ್ಯ ಯತಿಗಳು | ಸುಸ್ಥಿರವು ಆಗೀ |ವತ್ಸಾರಿ ಹರಿಭೃತ್ಯ | ವತ್ಸಲತಯಿಂನಿಂದುಸುಸ್ಥಿರವು ಆಗಿಹುದು | ಭೃತ್ಯರಿಗೆ ವರದಾ 3 ಪತಿ ಮಹಿಮೆ | ಈಂಟಿ ಮುದ ಹೊಂದೇ 4 ಪಾದ | ಪಾಂಸುಗಳ ಧರಿಸೀಕೇವಲಾನಂದಮಯ | ಭಾವದೊಳು ಇಹೆವುಗುರುಗೋವಿಂದ ವಿಠಲ ಪವ ತಾವರ್ಯಾ ಶ್ರೀತರೇ 5
--------------
ಗುರುಗೋವಿಂದವಿಠಲರು
ಹರತನ್ನ ಕರದಲಿ ಪ್ರಾಣಲಿಂಗವನು ಧರಿಸಿಪ್ಪನೆಂಬುದ ಕೇಳಿ ರಾವಣನು ತರುವೆನೆನುತ ಪೋಗಿ ಭಜಿಸೆ ಶಂಕರನ ಕರುಣಿಸಲಾತನ ಮನದಭೀಷ್ಟವನು ದುರುಳ ಖಳತಾ ಕೊಂಡು ಲಿಂಗವ ಪುರಕೆ ಗಮಿಸುವ ವ್ಯಾಳ್ಯದಲಿ ವಿಧಿ ಸುರಪ ಮುಖ್ಯ ಅಮರರು ನಿಮ್ಮಯ ಸ್ಮರಿಸೆ ಮೆಚ್ಚಿದ ಪಾರ ಮಹಿಮನೆ ಮೊರೆ ಹೊಕ್ಕೆ ನಿಮ್ಮ ಪಾದವನು ವಿಘ್ನೇಶ 1 ಕರುಣಿಸೋ ಎನ್ನ ವಾಂಛಿತವ ಸರ್ವೇಶ ಪರಮ ಪಾವನ ವೇಷ ಮುನಿ ಜನರ ಪೋಷಾ ನಿರುತ ಭಕ್ತ ವಿಲಾಸ ನಿರೂಪ ಮಹೇಶ ಹರಿ ಮುಂತಾದವರೆಲ್ಲ ನುತಿ ಸುತ್ತಲಿಂದು ಕರಿವಕ್ತ್ರ ನೀ ಕೇಳು ಪರಮೇಶನಂದು ಕರದ ಲಿಂಗವ ನಿತ್ತನಾ ದಶಶಿರಗೆ ವರ ದೈವ ದ್ರೋಹಿ ರಕ್ಕಸನಾತನಿಂಗೆ ವರ ಮಹಾಲಿಂಗವದು ಸೇರಲು ತಿರುಗಿಡುವಯತ್ನವನು ಪೇಳಿಯೋ ಪೊರೆಯ ಬೇಕೆನಲ ಭಯನಿತ್ತ ನಾ ಮೊರೆಹೊಕ್ಕೆ 2 ಇವಗೆ ಚಕ್ರವನಾಗಹರಿ ಪಿಡಿದಿರಲು ಧನುಜೇಶ ಸಂಧ್ಯಾವಂದನೆಗೆ ಯೋಚಿಸಲು ಘನ ಮಹಿಮನೆ ನೀನು ವಟುರೂಪಿನಿಂದ ಮಣಗುತ್ತಿರಲು ಕಂಡು ಖಳ ಕರದಿಂದ ಅಣುಗನಿಮ್ಮಯ ಮಹಿಮೆಯರಿಯದೆ ಪೇಳೆ ವಿನಯದಿಂ ಲಿಂಗವನು ಖಳಬರುವ ತನಕ ಕರದಲಿ ಪಿಡಿದಂತಹ ಪರಮ ಮಹಿಮನೆ 3
--------------
ಕವಿ ಪರಮದೇವದಾಸರು
ಹರಿಸೇವೆ ಕೈಂಕರ್ಯ ಪರಮ ನಿಷಾತೆ |ಪರಿಹರಿಸು ಭವತಾಪ ಜಾಂಬುವತಿ ಮಾತೇ |5 ಭೃತ್ಯ ಜಾಂಬುವಂತನ ತನುಜೆಶ್ರೀ ಮಹಿಳೆಯಂದದಲಿ ಕೃಷ್ಣ ಪ್ರಿಯಳಾದೇ 1 ಮಿಕ್ಕ ಮಹಿಳೆಯರಿಂದ ಲಕ್ಕುಮಿಯ ಆವೇಶಪೊಕ್ಕು ನಿನ್ನಲಿ ಅಧಿಕ ಸರ್ವಕಾಲದಲೀ |ಅಕ್ಕರದಿ ಇದಕೆ ಮಿಗೆ ಲಕ್ಕುಮಿಯು ಇರಲಾಗಚೊಕ್ಕ ಮಾತೆಯು ನೀನು ಶೇಷ ಸಮಳೆನಿಪೇ 2 ಆವೇಶ ನಿನ್ನಲ್ಲಿ ಇಲ್ಲದಿಹ ಸಮಯದಲಿದೇವಿಯರು ಮಿಕ್ಕೈದು ಮಂದಿ ಸಮ ನೀನು |ದೇವಿ ಶಿರಿ ಆವೇಶ ಅಲ್ಪವಿಹ ಸಮಯದಲಿದೇವ ಕಾಮಾದಿಗಳಿಗಧಿಕ ವಿಂಶತಿ ಗುಣದೀ 3 ನಿರ್ಮಲೈ ಕಾಂತಿತ್ವ ವಿಮಲ ಭಕ್ತ್ಯಾದಿಗುಣಅಮಮ ನಿನ್ನಲಿ ಇಹುದು ನೈಜರೂಪಾ |ವಿಮಲ ಸಚ್ಚಾರಿತ್ರೆ ಈ ಮಹಿಯ ಸಂಚಾರನಿರ್ಮಮದಿ ಗೈದಿರ್ಪೆ ಬಧಿರಾಂಧರಂತೇ 4 ದೇಹ ಮಮತೆಯಲಿಂದ ಮನಸೋತು ಕಷ್ಟಕ್ಕೆವಾಹನಾದಿಗಳೇರಿ ತೀರ್ಥಯಾತ್ರೆಗಳಾ |ಬಹುವಾಗಿ ಗೈದಾಗ್ಯು ಪುಣ್ಯ ಹೀನವು ಎಂದುಮಹಿಳೆ ನೀ ವರ್ಣಿಸಿಹೆ ಭಕುತರುಪಕಾರೀ 5 ಪಾದ ದರ್ಶನವೆಂದುಸಾರ್ವಕಾಲದಿ ನೀನು ಚಿಂತಿಸುತಲಿರಲೂ 6 ಕಂಡು ಶ್ರೀಹರಿಯನ್ನು ಅಪರೋಕ್ಷದಲಿ ನೀನುಬಂಡುಣಿಯು ಹರಿಪಾದ ಕಮಲಕ್ಕೆ ಆಗೀ |ಹಿಂಡು ದೈವರ ಗಂಡ ಪಾಂಡುರಂಗನೆ ಎಂದುಮಂಡಿಸಿದೆ ಪರತತ್ವ ತೊಂಡರುಪಕಾರೀ 7 ಕರದಲ್ಲಿ ಧನ್ವಂತ್ರಿ ಪಿಡಿದಮೃತ ಕಲಶದಲಿಹರಿನಯನ ಆನಂದ ಜಲಬಿಂದು ಉದರೇ |ತುರರೂಪಿಯಾದ ಶ್ರೀ ತುಳಸಿಯಲಿ ನೀನರಲುಹರಿ ನಿನ್ನ ಅಗಲದಿಹ ಸರ್ವ ಪೂಜೆಯಲೀ 8 ಶಾಂಭವಿಯುನುತೆ ದೇವಿ ಜಾಂಬುವತಿ ಶ್ರೀ ಹರಿಯಕಾಂಭಂಥ ಸುಜ್ಞಾನ ಭಕುತಿ ವೈರಾಗ್ಯ |ಹಂಬಲದಿ ನಿನ್ನಂಘ್ರಿ ನಮಿಪೆ ತೋರ್ವುದು ಹೃದಯಅಂಬರದಲಿಹ ಗುರು ಗೋವಿಂದ ವಿಠ್ಠಲನ 9
--------------
ಗುರುಗೋವಿಂದವಿಠಲರು