ಒಟ್ಟು 2899 ಕಡೆಗಳಲ್ಲಿ , 126 ದಾಸರು , 2242 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈತ ಶ್ರೀಗುರು ಪರಬ್ರಹ್ಮನೆನ್ನಿ ಅತೀತವಾದ ಗುಣತ್ರಯ ಪರಮಾತ್ಮನೆನ್ನಿ ಧ್ರುವ ನಿರ್ಗುಣಾಂದನೆನ್ನಿ ನಿಗಮಗೋಚರನೆನ್ನಿ ಅಗಣಿತಗುಣ ಪರಿಪೂರ್ಣನೆನ್ನಿ 1 ಯೋಗಾನಂದಾತ್ಮನೆನ್ನಿ ಯೋಗಿವಂದಿತನೆನ್ನಿ ಯೋಗಿಹೃದಯವಾಸ ಯೋಗನಿಧಾನನೆನ್ನಿ 2 ಸಾಧುಸಹಕಾರನೆನ್ನಿ ಸದಾನಂದಾತ್ಮನೆನ್ನಿ ಸದ್ಬ್ರಹ್ಮಾನಂದ ಸದೋದಿತನೆನ್ನಿ 3 ಙÁ್ಞನಸಾಗರನೆನ್ನಿ ಙÁ್ಞನಾನಂದಾತ್ಮನೆನ್ನಿ ಙÁ್ಞನಿಗಳೊಂದಿಹ ಸುಙÁ್ಞನಸ್ವರೂಪನೆನ್ನಿ 4 ಪರಮಪುರಷನೆನ್ನಿ ಪರಮಪ್ರಕಾಶನೆನ್ನಿ ಪರಮಾನಂದಸ್ವರೂಪ ಪರಾತ್ಪರ ಪೂರ್ಣನೆನ್ನಿ 5 ಇಹಪರನೀತನೆನ್ನಿ ಗುಹ್ಯಗುಪಿತನೆನ್ನಿ ಬಾಹ್ಯಾಂತ್ರಪರಿಪೂರ್ಣ ತ್ರೈಲೋಕ್ಯನಾಥನೆನ್ನಿ 6 ಕಾವಕರುಣನೆನ್ನಿ ಭವಭಂಜನನೆನ್ನಿ ಜೀವಸಂಜೀವ ಮಹಿಪತಿ ಗುರುಮೂರ್ತಿಯೆನ್ನಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಈತನೀಗ ವಾತಜಾತನು ತನ್ನ ಪ ತÁತಗಾಗಿ ದನುಜಕುಲವಘಾತಿಸಿದ ವನೌಕಸಾರ್ಯಅ.ಪ. ಅಂಬುಧಿಯ ಲಂಘಿಸಿ ಭರದಿಲಂಬ ಶಿಖರದಲ್ಲಿ ಧುಮುಕಿಸಂಭ್ರಮದಿಂದ ಲಂಕೆಗೆ ಪೋಗಿಅಂಬುಜಾಕ್ಷಿಯನರಸಿದಾತ1 ಧರಣಿಸುತೆಯ ಚರಣಕೆರಗಿಕರುಣಿ ರಾಮನುಂಗುರವಿತ್ತುಕರದಿ ದಾನವರನು ಸವರಿಶರಧಿಯನುತ್ತರಿಸಿದಾತ 2 ಕಡಲ ತಡಿಯೊಳಿರ್ದ ಕಪಿಗ-ಳೊಡನೆ ರಾಮನಂಘ್ರಿಗೆರಗಿಮಡದಿ ಚೂಡಾರತುನವಿತ್ತುಕಡು ಕೃತಾರ್ಥನೆನಿಸಿಕೊಂಡ 3 ದುರುಳ ಕೌರವನನುಜನುರವಕರದಿ ಸೀಳಿ ರಕ್ತವ ಸುರಿದುನರಸಿಂಹನಿಗೆ ಅರ್ಪಿಸಿದಧರೆಗೆ ಭೀಮನೆನಿಸಿದಾತ 4 ಇಳೆಯೊಳಿದ್ದ ಮಧ್ಯಗೇಹನಕುಲದಿ ಜನಿಸಿ ಶುದ್ಧವಾದನಳಿನನಾಭನ ಒಲುಮೆಯಿಂದಮಲಿನರನ್ನು ಅಳಿದ ಧೀರ 5 ಇಪ್ಪತೊಂದು ಕುಮತಗಳನುಒಪ್ಪದಿಂದ ಗೆಲಿದು ಭಕ್ತಕಲ್ಪವೃಕ್ಷನೆನಿಸಿ ಮೆರೆದಸರ್ಪಶಯನನ ನಿಜವ ತೋರ್ದ6 ಧರಣಿ ಮಂಡಲದೊಳಗೆ ಭೂಮಿಸುರರ ಗಣಕೆ ಶಾಸ್ತ್ರಾಮೃತವಎರೆದು ಕೃಷ್ಣನ ಇರವ ತೋರಿವರ ಬದರಿಯೊಳ್ ನಿಂದ ಧೀರ7
--------------
ವ್ಯಾಸರಾಯರು
ಈತನೀಗಚಿದ್ವಿಲಾಸನು ಪ ಈತನೀಗ ಸರ್ವಭೂತ ಜಾತಚೇತನರ್ಗೆ ಸೌಖ್ಯ ದಾತವೇದ ಶಾಸ್ತ್ರ ವಿಖ್ಯಾತ ಲೋಕೈಕನಾಥ ಅ.ಪ. ಬ್ರಹ್ಮರೂಪನಿಂದ ಜಗವ ನಿರ್ಮಿಸುತ್ತತಾನೆ ಸರ್ವ ಕರ್ಮಫಲಗಳನ್ನೆ ಕೊಟ್ಟು ಶರ್ಮಪಡಿಸುವ ಚರ್ಮವಸ್ತ್ರವುಟ್ಟು ರೌದ್ರ ಕರ್ಮಿಯಾಗಿ ಕಡೆಗೆ ಕಾಲ ಧರ್ಮವನ್ನು ತೋರಿ ಜಲದೊಳೊಮ್ಮೆ ಮಲಗಿ ತೇಲುತಿರುವ 1 ರಮೆಯನಾಳ್ವ ಭಾಗ್ಯವಂತ ಕ್ಷಮೆಯನಾಳ್ವರಾಜ್ಯಕರ್ತ ಕಮಲಭವನ ಪಡೆದ ಹಿರಿಯನಮರರೊಡೆಯ ಸುಮಶರನಪೆತ್ತ ಚೆಲುವ ನಮಲಗಂಗೆಯಿತ್ತು ನಲಿವ ವಾಸುದೇವ 2 ಉರಗಶಯನ ಗರುಡಗಮನ ಪರಮಪದವನುಳಿದುಶೇಷ ಗಿರಿಯೊಳಿರ್ದುಬಂದ ವ್ಯಾಘ್ರಗಿರಿಯ ಶಿಖರಕೆ ಭರದಿ ನಿತ್ಯಮುಕ್ತರೊಡನೆ ಕರದಿ ಶಂಖಚಕ್ರಪಿಡಿದು ಕರುಣದಿಂದ ಚರಣ ಸೇವಕರನು ಪೊರೆವ ವರದವಿಠಲ 3
--------------
ಸರಗೂರು ವೆಂಕಟವರದಾರ್ಯರು
ಈತನೀತನೆ ರಮಾನಿವಾಸನು ಕೇಳಿ ಜನರು ಈತನೀಗ ಚಿದ್ವಿಲಾಸನು ಪ ಈತನೀಗ ಸರ್ವಭೂತ ಜಾತಚೇತನರ್ಗೆ ಸೌಖ್ಯ ದಾತವೇದಶಾಸ್ತ್ರ ವಿಖ್ಯಾತ ಲೋಕೈಕನಾಥ ಅ.ಪ ಬ್ರಹ್ಮರೂಪನಿಂದ ಜಗವ ನಿರ್ಮಿಸುತ್ತತಾನೆ ಸರ್ವ ಕರ್ಮಫಲಗಳನ್ನೆಕೊಟ್ಟು ಶಮನಪಡಿಸುವ ಚರ್ಮವಸ್ತ್ರವುಟ್ಟು ರೌದ್ರ ಕರ್ಮಿಯಾಗಿ ಕಡೆಗೆ ಕಾಲ ಧರ್ಮವನ್ನು ತೋರಿ ಜಲದೊಳೊಮ್ಮೆ ಮಲಗಿತೇಲುತಿರುವ 1 ರಮೆಯನಾಳ್ವ ಭಾಗ್ಯವಂತ ಕ್ಷಮೆಯನಾಳ್ವ ರಾಜ್ಯ ಕರ್ತ ಕಮಲಭವನ ಪಡೆದ ಹಿರಿಯನಮರರೊಡೆಯ ಸುಮಶರನ ಪೆತ್ತ ಚೆಲುವನಮಲ ಗಂಗೆಯಿತ್ತು ನಲಿವ ನಮರ ವೈರಿಗಳನು ಕೊಲುವ ಕಮಲನಾಭ ವಾಸುದೇವ2 ಉರಗಶಯನ ಗರುಡಗಮನ ಪರಮಪದನುಳದು ಶೇಷ ಗಿರಿಯೊಳಿರ್ದು ಬಂದ ವ್ಯಾಘ್ರಗಿರಿಯ ಶಿಖರಕೆ ಭರದಿನಿತ್ಯಮುಕ್ತರೊಡನೆ ಕರದಿ ಶಂಕ ಚಕ್ರ ಪಿಡಿದು ಕರುಣದಿಂದ ಚರಣ ಸೇವಕರನು ಪೊರೆವ ವರದ ವಿಠಲ 3
--------------
ವೆಂಕಟವರದಾರ್ಯರು
ಈತನೆ ಕಾಣಿರೊ ಮಧ್ವಮುನಿ ಪ. ಪರಿಪರಿ ಶ್ರುತಿಗಳೆಂಬ ಗುಹೆಗಳಲಿ ಕೇ-ಸರಿಯಂತೆ ಚರಿಸುತ್ತಹರಿಯೆ ಸರ್ವೋತ್ತಮನೆಂಬ ಘೋಷಗಳಿಂದದುರುಳ ವಾದಿಗಳೆಂಬ ನರಿಗಳೋಡಿಸಿದಾತ 1 ಸಕಲಾಗಮಗಳೆಂಬ ಶರಧಿಯೊಳಗೆಯುಕುತಿಯಿಂದಲಿ ಮಥಿಸಿಅಕಳಂಕ ಶ್ರೀಹರಿಯೆಂಬ ರತ್ನವ ಕಂಡುಮಕುಟದೊಳಿಟ್ಟು ಲೋಕದಿ ಮೆರೆಸಿದಾತ 2 ವೇದಸಾರವೆಂಬ ಈಶತತ್ವವಾದಸುಧೆಯ ಕಲ್ಪಿಸಿಕೊಂಡುಆದಿಮೂರುತಿ ಶ್ರೀ ಹಯವದನನ ದಿವ್ಯಪಾದ ಸೇವಕನಾದ ಮಧ್ವಮುನಿಯೆಂಬಾತ 3
--------------
ವಾದಿರಾಜ
ಈತನೇ ಲೋಕಗುರು ವೇದವಿಖ್ಯಾತ ಪ. ಭೂತಳದಿ ಶ್ರೀರಾಮದೂತನೆಂಬಾತಅ.ಪ. ಅಖಿಳ ಉದಧಿ ಲಂಘಿಸಿದಇಂದೀವರಾಕ್ಷಿಗೆ ವಂದಿಸಿ ಮುದ್ರಿಕೆಯನಿತ್ತುಬಂದು ರಾಮರ ಪಾದಕೆರಗಿ ನಿಂದಾತ 1 ಅರ್ಜುನಗೆ ಅಣ್ಣನಾಗಿ ಅಂದು ದುರ್ಯೋಧನನಲಜ್ಜೆಯನೆ ಕೆಡಿಸಿ ಷಡ್ರಥಿüಕರನು ಗೆಲಿದಮೂಜ್ಜಗವು ಮೆಚ್ಚಲು ಮುನ್ನ ಮಾಗಧನ ಸೀಳಿದಸಜ್ಜನಪ್ರಿಯ ಭೀಮಸೇನನೆಂಬಾತ2 ಮೂರಾರು ಎರಡೊಂದು ಮೂಢಮತಗಳ ಜರಿದುಸಾರ ಮಧ್ವಶಾಸ್ತ್ರವನು ಸಜ್ಜನರಿಗೊರೆದುಕೂರ್ಮ ಶ್ರೀ ಹಯವದನನ ಪೂರ್ಣ ಸೇವಕನಾದಧೀರ ಮಧ್ವಾಚಾರ್ಯ ಲೋಕದೊಳು ಮೆರೆದ 3
--------------
ವಾದಿರಾಜ
ಈರೇಳು ಲೋಕದೊಳಗೆ ಇವಗೆಣೆಗಾಣೆ ಗೋವಿಂದರಾಯನಿಗೆಮಾರನ್ನ ಪೆತ್ತ ಮನೋಹರ ಮೂರುತಿ ಗೋವಿಂದರಾಯನಿಗೆ ಪ. ನೀಲನೀರದನಿಭ ನಿರ್ಮಲಕಾಯ ಗೋವಿಂದರಾಯನಿಗೆಪಾಲಸಾಗರದಲ್ಲಿ ಪಡಿಸಿ ಪಾಲಿಪ ಗೋವಿಂದರಾಯನಿಗೆ1 ಕೂರ್ಮ ವರಾಹ ನಾರಸಿಂಹ ವಾಮನ ಗೋವಿಂದರಾಯನಿಗೆಕುತ್ಸಿತರಾಯರ ಕೊಂದÀ ಕೊಡಲಿಯ ಗೋವಿಂದರಾಯನಿಗೆ2 ಕಳೆವ ಶ್ರೀ ಗೋವಿಂದರಾಯನಿಗೆ 3ಕಡೆಗೋಲ ಪಿಡಿದು ನಮ್ಮುಡುಪಿಲಿ ನೆಲೆಸಿದ ಗೋವಿಂದರಾಯನಿಗೆಬಡನಡುವಿನ ಭಾವಕಿಯರೊಡನಾಡುವ ಗೋವಿಂದರಾಯನಿಗೆ 4 ವರ್ಣಿಸಿ ಪೊಗಳುವ ವಾದಿರಾಜಗೊಲಿದÀ ಗೋವಿಂದರಾಯನಿಗೆಚಿನ್ನದ ಚೆಲುವನೆ ಜಯ ಹಯವದನ ಶ್ರೀ ಗೋವಿಂದರಾಯನಿಗೆ 5
--------------
ವಾದಿರಾಜ
ಈಶನೀನೆ ದಯಾಸಿಂಧು ದಾಸಜನರ ಪ್ರೇಮಬಂಧು ಪ ಹೇವವಿಲ್ಲದೆ ಕಾಸಾರಕೈದಿ ಬೋವನಾಗಿ ಬಂಡಿ ಹೊಡಿದಿ ಕೇವಲ ಮಾನಕಾಯ್ದಿ ಸತಿಯ ಸೇವಕಜನರ ಬೆಂಬಲನೆ 1 ನಿನ್ನ ಭಜಿಸಿ ಬೇಡುವವರ ಭಿನ್ನವಿಲ್ಲದೆ ದಯದಿ ಒದಗಿ ಸಾವುಹುಟ್ಟು ಬಂಧಗೆಲ್ಲಿಸಿ ಧನ್ಯರೆನಿಸಿ ಸಲಹುವಿ 2 ಕಾಮಿತಾರ್ಥಪೂರ್ಣ ಭಕ್ತ ಕಾಮಧೇನು ಕಲ್ಪತರು ಸ್ವಾಮಿ ಶ್ರೀರಾಮ ನಿಮ್ಮ ವಿಮಲ ನಾಮ ಎನ್ನ ಜಿಹ್ವೆಗೆ ನೀಡೊ 3
--------------
ರಾಮದಾಸರು
ಈಸಲು ಬಿಡು ನನ್ನ ಹರಿ ಘನ್ನ ಪ ಮೀಸಲು ಭಕುತಿಯ ರಸಜಲ ನಿಧಿಯಲಿ ಅ.ಪ. ಏನು ತಿಳಿಯದವನಾಗಿ ನೀಗುಟ್ವುಜ್ಞಾನದ ಸಿಂಗಡಿ ಸಂಗಡ ಕೊಟ್ಟುಧ್ಯಾನದ ಪಾಶದ ಬಿಗಿಲಿಯಲಿ ಕಟ್ಟುಶ್ರೀನಿವಾಸನೇ ನೀ ದಯವಿಟ್ಟು 1 ಭವಸಾಗರವನು ದಾಟಿಸಬಲ್ಲನಾವಿಕ ನೀನಿಲ್ಲದೆ ಯಾರಿಲ್ಲಹವಣಿಸಿ ನಿನ್ನನೆ ನಂಬಿಹೆನಲ್ಲತವಕದಿ ಮನ್ನಿಸಿ ದೀನನ ಸೊಲ್ಲ 2 ಬಿನ್ನಪ ನನ್ನನು ದಯದಿಂದಾಲಿಸುಸನ್ನುತ ಗದುಗಿನ ವೀರನಾರಾಯಣಎನ್ನೊಳು ನೀ ದಯಪಾಲಿಸು 3
--------------
ವೀರನಾರಾಯಣ
ಉಗಾಭೋಗ ವಿಕ್ರಮ ಸಂವತ್ಸರದಲ್ಲಿ ನಿನ್ನ ನಿಜ ದಾಸಕೂಟ ಜನಕೆ ಪ- ರಾಕ್ರಮ ಹೆಚ್ಚಲಿ ಅಚ್ಚುತಾನಂತ ಕೃಷ್ಣ ಶಕ್ರಾನುಜನೆ ನಿನ್ನ ದೂತ ಹನುಮನ ಸೇವೆ ವಕ್ರವಿಲ್ಲದೆ ನಡೆದು ನಿನ್ನ ಕೃಪೆಯಾಗಲಿ ಅಕ್ರೂರವರದ ತಂದೆ ಮುದ್ದುಮೋಹನ್ನರ ವಿಕ್ರಮೌದಾರ್ಯ ದಶ ದಿಕ್ಕುಗಳ ಬೆಳಗಲಿ ಶಕ್ರಾನುಜನೆ ಉದರ ಬಗೆದು ತರಳನ ಕಾಯ್ದ ವಕ್ರನಖನೆ ನಮ್ಮ ನೀತ ಶ್ರೀ ಗುರುಗಳಿಗೆ ವಿಕ್ರಮ ಶಾಂತಿ ಆಯುರಾರೋಗ್ಯ ಭಾಗ್ಯವಿತ್ತು ಚಕ್ರಧರನೆ ನಿನ್ನ ಸೇವೆ ಕೈಕೊಂಡೆಮ್ಮ ಭವ- ಚಕ್ರ ತೊಡಕು ಬಿಡಿಸಿ ದಾಸ ಜನರ ಕಾಯೋ ಉ- ರು ಕ್ರಮದೇವ ಜಗಚ್ಚಕ್ರವರ್ತಿಯೆ ನಮೋ ಶಕ್ತಾದ್ಯಮರ ನುತ ಗೋಪಾಲಕೃಷ್ಣವಿಠಲಾ
--------------
ಅಂಬಾಬಾಯಿ
ಉಡಪಿಯ ಕೃಷ್ಣ ಯನ್ನ ನುಡಿ ಲಾಲಿಸೋ ಪ ಸಡಗರದಲಿ ನೀನು ಮಡದಿವೃಂದ ಬಿಟ್ಟು ಕಡಲಪಯಣದಿಂದಲಿ ವಂದು ಬಿಡದೆ ಭಕ್ತರಿಗೆಲ್ಲ ವಡೆಯನಾಗಿ ನೀನು ಷಡುರಸ ಅನ್ನವ ಕೊಡುತನಿಂತಿಹೆ 1 ಪ್ರಾಣಪತಿಯು ಅತಿ ಜಾಣನೆಂದೆನಿಶಿÉ ನೀ ಕಾಣಿಸುವಿ ನರಪ್ರಾಣಿಗೆ ಮಾಣವಕನೆ ನೀ ಜಾಣನೆಂದೆನುತಲಿ ಧ್ಯಾನಮಾಡಿ ಮೋದಿಸುವರು 2 ಧರೆಯೊಳು ರಜತಪೀಠ ಪುರದೊಳೂ ನೆಲೆಸಿಪ್ಪ ಸುರವೃಂದನುತ ಬೇಗ ಸಲಹೆನ್ನ ವರಮಧ್ವ ಮುನಿನುತ ಸರಸಿಜಭವ ವಂದ್ಯ ಶ್ರೀವತ್ಸಾಂಕಿತ ವೆಂಕಟಪತಿಯೇ 3
--------------
ಸಿರಿವತ್ಸಾಂಕಿತರು
ಉಡಿಯ ತುಂಬಿರೆ ಕಡಲೊಡೆಯನ ಮಡದಿಗ್ಹರುಷದಿ ಪ ಬಿಡಿಯ ಮುತ್ತು ಬಿಗಿದ ತಟ್ಟೆಯ ಪಿಡಿದು ಬೇಗದಿಅ.ಪ ಅಚ್ಚ ಜರಿಪೀತಾಂಬ್ರನುಟ್ಟ ಅಚ್ಚುತನರಸಿಗೆ ಹೆಚ್ಚಿನ ಆಭರಣ ಧರಿಸಿ ಮೆರೆವ ದೇವಿಗೆ ಅಚ್ಚುತನ ವಕ್ಷಸ್ಥಳದಿ ವಾಸಿಪ ಲಕುಮಿಗೆ ಅಚ್ಚಮುತ್ತು ಅರಿಶಿನಡಿಕೆ ಉತ್ತತ್ತಿ ಫಲಗಳು 1 ಕದಳಿ ಫಲಗಳಿಂ ಅಂಬುಜಾಕ್ಷನರಸಿಗೆ ದಾಳಿಂಬೆ ತೆಂಗು ಸಹಿತದಿ ಅಂಬುಧಿಯೊಳು ಜನಿಸಿದ ಮುಕುಂದನರಸಿಗೆ ಅಂಬುಜಾಕ್ಷಿಯರೆಲ್ಲ ನೆರೆದು ಸಂಭ್ರಮಪಡುತಲಿ2 ಮಾದಳದ ಫಲವು ಮಾವು ಪನೆÀ್ನರಿಲ ಫಲಗಳ ಮಾಧವನ ಮಡದಿಗೀಗ ಮಾನಿನಿಮಣಿಯರು ಕ್ರೋಧಿನಾಮ ಸಂವತ್ಸರದಿ ಸಾಧು ಜನಗಳ ಆದರಿಸಿ ಕಾವ ಕಮಲನಾಭ ವಿಠ್ಠಲನರಸಿಗೆ 3
--------------
ನಿಡಗುರುಕಿ ಜೀವೂಬಾಯಿ
ಉಡುಪಿ ಪರಿಸರದ ದೇವತೆಗಳು ಕಣ್ವ ಋಷಿ ತಪಗೈದ ಅಜ್ಜರ್ಕಾಡೆಂಬಲ್ಲಿ ಅವನಿಗೊಲಿದಿರುವ ದುರ್ಗೆ ವಾಸವಾಗಿಹಳು ಒಳಕಾಡು ಎಂಬ ತಾನವೆ ಚಂದ್ರನ ತಪೋ ಭೂಮಿ ಇಲ್ಲಿಯೇ ಸಕಲ ವಿದ್ಯಾಲಯವಾಯ್ತು 132 ಬೆಳ್ಳಿ ಮಂಚದ ಕಾಲುಗಳು ನಾಲ್ಕು ಎಂಬಂತೆ ಆರ್ಮೊಗನ ರೂಪಗಳು ನಾಲ್ಕು ದೆಸೆಗಳಲಿ ಮಾಂಗೋಡು ತಾಂಗೋಡು ಆರಿತೋಡು ಮುಚ್ಲಿಕೋಡು ನಾಮದಿಂ ಬೆಳಗುವವು ಷಷ್ಠಿದಿನದಂದು 133 ಕಡಿಯಾಳಿ ಎಂಬಲ್ಲಿ ಮಹಿಷಮರ್ದಿನಿಯಾಗಿ ದುರ್ಗಾಲಯವು ಉಡುಪಿ ಪೂರ್ವದ್ವಾರದಲ್ಲಿ ಪುತ್ತೂರು ಬೈಲೂರು ಬಡಗು ತೆಂಕು ದೆಸೆಯಲ್ಲಿ ಕೃಷ್ಣ ಸೇವೆಗೆ ದುರ್ಗೆ ಕಟಿಬದ್ಧಳಿಹಳು 134 ಸತ್ಯ ನುಡಿಯಲ್ಲಿರಲಿ ಧರ್ಮ ನಡೆಯಲ್ಲಿರಲಿ ಸ್ವಾಧ್ಯಾಯದಲಿ ಎನಗೆ ಎಚ್ಚರವದಿರಲಿ ಅಜ್ಞಾನದಂಧಕಾರದ ದಿಕ್ಕಿನಿಂದೆನ್ನ ನಿನ್ನ ಬೆಳಕಿನ ಕಡೆಗೆ ಕರೆದೊಯ್ಯು ದೇವಾ 135 ಪರಶುರಾಮಕ್ಷೇತ್ರ ಹುಟ್ಟುಭೂಮಿಯು ಎನಗೆ ಪರಶುರಾಮನು ನೀನೆ ನಿನ್ನ ಕ್ಷೇತ್ರವಿದು ಪರಮಹಂಸಾಖ್ಯಯತಿಗಳ ಮಾನಸಹಂಸ ಸೋಹಂ ಎನ್ನುವ ಬ್ರಹ್ಮ ಎನ್ನೊಳಗೆ ಇರುವೆ 136 ಕೃಷ್ಣಾರ್ಪಣವದಿಲ್ಲದಾವುದು ಫಲ ಕೊಡದು ಅದರಿಂದ ಕೃಷ್ಣನಿಗೆ ಕೃತಿಯನರ್ಪಿಸುತ ಸಾಲೋಕ್ಯ ಸಾಮೀಪ್ಯವನ್ನು ಬಯಸುವೆ ನಾನು ಯೋಗ್ಯತಾನುಗುಣವಾಗಿ ಫಲವ ಕೊಡು ಹರಿಯೆ137 ಪರಶುರಾಮನು ರಾಮ ಪರಶು ರಾಮನು ಕೃಷ್ಣ ರಾಮದಾಸನು ನಾನು ಕೃಷ್ಣದಾಸನಿಹೆ ಬರೆದ ಕೃತಿಯಿಂದ ನೀನ್ ಸುಪ್ರಸನ್ನತೆ ಪಡೆದು ಭಕ್ತಿ ಮುಕ್ತಿಗಳ ಕೊಟ್ಟು ರಕ್ಷಿಸು ಶ್ರೀಶ 138 ಉಡುಪಾನ್ವಯಜ ನಾನು ಉಡುಪಾನ್ವಯದ ನೀನು ಉಡುಪಿ ಹುಟ್ಟೂರೆನಗೆ ನೀನುಡುಪಿಗತಿಥಿ ಮಧ್ವ ಹೃದಯವು ನಿನಗೆ ವಾಸದ ಸ್ಥಾನವಿರೆ ಮಾಧ್ವಕೋಟಿಗಳಲ್ಲಿ ಕೀಟನಾಗಿಹೆ ನಾನು 139 ವಿಷ್ಣು ಪದದೊಳಗಿರುವ ಜ್ಯೋತಿಲೋಕದ ಒಡೆಯ ಆ ಜ್ಯೋತಿಲೋಕಕ್ಕೆ ಕರೆದೊಯ್ಯುತ ನನ್ನ ಭಕುತರಿಗೆ ಮುಕುತಿ ಕೊಡುವುದೆ ನಿನ್ನ ಸಂಕಲ್ಪ ಅದರಿಂದ ನಿನ್ನನ್ನು ಶರಣು ಶರಣೆಂಬೆ 140 ಚಾಂದ್ರಮಾನದ ಪಿಂಗಳಾಖ್ಯ ಸಂವತ್ಸರದಿ ಚೈತ್ರ ಮಾಸದ ನವಮಿಯ ದಿನದಲ್ಲಿ ಕಾಲ ಇದನರ್ಪಿಸುತ ನಾನು ಕೃತಕೃತ್ಯನಾದೆ ಶ್ರೀಕೃಷ್ಣ ಕಾಪಾಡು 141
--------------
ನಿಡಂಬೂರು ರಾಮದಾಸ
ಉಡುಪಿಯ ಶ್ರೀಕೃಷ್ಣ ನುಡಿಯ ಲಾಲಿಸು ಮಾಧವ ನುಡಿಯ ಲಾಲಿಸು ಪಾಲಕಡಲಶಯನ ದೇವ ಕಡಗೋಲ ಪಿಡಿದ ನಮ್ಮುಡುಪಿಯ ಶ್ರೀಕೃಷ್ಣ ಪ. ಮಾನವ ಮದವನ್ನು ಮಸರಂತೆ ಮಥಿಸಿದ ಭಾವನ ತೋರುವಿಯೊ ಹಾಗಲ್ಲದಿದ್ದರೆ ದೇವತಗಳಿಗಮೃತವನುಣಿಸಿದನೆಂಬ ಸೋವನು ಸೂಚಿಪೆಯೊ ಸೌಭಾಗ್ಯ ಸಿರಿಯೊ ಸೇವಕರ ಸೇವಾನುಗುಣಫಲ ನೀವ ತರತಮ ಭಾವವೊ ಭವ ನಾವ ನಡೆಸುವ ನಿಪುಣತೆಯೊ ದುರಿ ತಾವಳಿಯ ದೂರೋಡಿಸುವೆಯೊ1 ಕಲಿಯ ಬಲದಿ ಜ್ಞಾನಕಲೆಯಡಗಲು ದೇವ- ರ್ಕಳು ಬಂದು ಸ್ತುತಿಸಲಂದು ಸಕಲಸುರ ತಿಲಕ ವಾಯುವಿನ ಭೂವಲಯದೊಳವ- ಗೊಳುವರೆ ಪೇಳ್ವೆನೆಂದು ನೀ ಮನಕೆ ತಂದು ಹಲವು ಭವದಲಿ ಭಜಿಪೆ ಸಜ್ಜನ ಕುಲಕೆ ಮೋಕ್ಷಾಂತದ ಚತುರ್ವಿಧ ಫಲವ ನೀಡುವೆನೆಂದು ಪವನನಿ- ಗೊಲಿದು ಬಂದೀ ನಿಲಯದೊಳಗಿಹೆ 2 ಸರ್ವಜ್ಞ ಮುನಿಕೃತ ಸಕಲ ಪೂಜೆಗಳನ್ನು ನಿವ್ರ್ಯಾಜದಲಿ ಕೊಳ್ಳುತ ನಿರ್ವಾಹಗೊಳುತ ದುರ್ವಾದಿಪಟಲಾದ್ರಿ ಗರ್ವಾಪಹರ ಶತ ಪರ್ವ ಶಾಸ್ತ್ರವ ಕೇಳುತ ಸಂತೋಷಪಡುತಾ ಪೂರ್ವಸುಪರ್ವ ರಿಪುಗಳ ನಿರ್ವಿಯೊಳಗಡಿಯಿಡಗೊಡದ ಸುರ ಸಾರ್ವಭೌಮ ಶುಭೋನ್ನತಿ ಪ್ರದ 3 ಶ್ರೀನಿಕೇತನ ಸರ್ವ ಪುರುಷಾರ್ಥದಾಯಿಯೆ ನೀನೆಲ್ಲೆ ನೆಲೆಯದೋರಿ ಇರಲಿನ್ನು ಭಜಿಸದೆ ನಾನಾ ದೈವಗಳ ಸೇರಿ ಹಲ್ಲುಗಳ ತೋರಿ ಏನನುಸುರುವೆ ಕೃಷ್ಣ ಬುದ್ಧಿ ವಿ- ಹೀನತೆಯನದನೊ ಮಾನಿಸೆನ್ನ ಕಡಪಾನಿಧಿಯೆ ಪವ- ಪಾದ ಪಲ್ಲವ 4 ದ್ವಾರಾವತಿಯೊಳು ಸಂಸಾರಿ ಭಾವವನೆಲ್ಲ ತೋರಿದ ಕಾರಣದಿ ಅಲ್ಲಿಂದ ಭರದೀ ವಾರುಧಿ ಮಾರ್ಗದ ಸ್ವಾರಿಯ ನೆವನದಿ ಪಾರಿವ್ರಾಜರ ಸೇರಿದಿ ತದ್ಭಕ್ತಿಗೊಲಿದಿ ದೂರ ಭಯದಲಿ ವೆಂಕಟಾದ್ರಿಗೆ ಬಾರದಿಹ ಸಜ್ಜನರ ಮೇಲ್ಕರು- ಣಾರಸಾಮೃತ ಸೂಸುತ್ತಿಲ್ಲಿ ಸರೋರುಹಸ್ಮಿತ ಮುಖ ತೋರುವಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಉತ್ತಮೋತ್ತಮ ದೈವ ನಿತ್ಯನೀನಾಗಿರಲಿಕ್ಕೆ ಮತ್ತೆ ಅನ್ಯ ದೈವನಾರಿಸಲ್ಯಾತಕೆ ಧ್ರುವ ಸತ್ಯಸನಾತನನೆಂದು ಶ್ರುತಿಸಾರುತಿರಲಿಕ್ಕೆ ಎತ್ತ ನೋಡಿದರತ್ತ ಪ್ರತ್ಯಕ್ಷ ನೀ ದೋರಲಿಕ್ಕೆ ಮತ್ತೆ ಆವ್ಹಾನ ವಿಸರ್ಜನವ್ಯಾತಕೆ 1 ವಾಸವಾಗಿ ಎನ್ನಾತ್ಮದೊಳು ನೀನೆ ಇರಲಿಕ್ಕೆ ವಾಸುವೇವನೆ ನೀನೆ ಎನ್ನ ಈಶನಾಗಿರಲಿಕ್ಕೆ ಸೋಶಿಲೆ ಅನೇಕ ವೇಷ ದೋರುವದ್ಯಾತಕೆ 2 ಭಾನುಕೋಟಿತೇಜ ಎನ್ನೊಡಿಯನಾಗಿರಲಿಕ್ಕೆ ಬಿನುಗುದೈವದ್ಹಂಗು ತಾಇನ್ನೊಂದು ಯಾತಕೆ ಮನದ ಮಂಗಳಾಗಿ ನೀ ಮಹಿಪತಿಗೆ ಭಾಸುತಿರಲಿಕ್ಕೆ ಅನುಭವಕ್ಕನುಮಾನ ಮಾಡುವುದ್ಯಾತಕೆ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು