ಒಟ್ಟು 455 ಕಡೆಗಳಲ್ಲಿ , 66 ದಾಸರು , 378 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವರಕವಿಗಳ ಮುಂದೆ ನರಕವಿಗಳ ವಿದ್ಯೆ ತೋರಬಾರದು - ಈಧರಣಿಯ ಕಲ್ಲಿಗೆ ಶರಣೆಂದು ಪೂಜೆಯ ಮಾಡಬಾರದು ಪ ಪಾಪಿಗಳಿದ್ದಲ್ಲಿ ರೂಪುಳ್ಳ ವಸ್ತುವ ತೋರಬಾರದು - ಬಹುಕೋಪಿಗಳಿದ್ದಲ್ಲಿ ಅನುಭವಗೋಷ್ಠಿಯ ಮಾಡಬಾರದು1 ಅಡಿ ಸತ್ತ ಮಡಕೆಗೆ ಜೋಡಿಸಿ ಒಲೆಗುಂಡು ಹೂಡಬಾರದು - ಬಹುಬಡತನ ಬಂದಾಗ ನೆಂಟರ ಬಾಗಿಲ ಸೇರಬಾರದು2 ಹರಿಯ ನಿಂದಿಸಿ ಹರ ಘನನೆಂದು ನರಕಕ್ಕೆ ಬೀಳಬಾರದು - ತಾಪರರನು ಬೈದು ಪಾತಕಕೆ ಮುನ್ನೊಳಗಾಗಬಾರದು 3 ಮಡದಿ ನುಡಿಯ ಕೇಳಿ ಜಗಳಕೊಬ್ಬರ ಕೂಡೆ ಹೋಗಬಾರದು - ಬಾ-ಯ್ಬಡಿಕರು ಇದ್ದಲ್ಲಿ ವಸ್ತಿ ಬಿಡಾರವ ಮಾಡಬಾರದು 4 ಮುಂದೆ ಭಲಾ ಎಂದು ಹಿಂದೆ ನಿಂದಿಪರನ್ನು ಕೂಡಬಾರದು - ನಮ್ಮತಂದೆ ಬಾಡದಾದಿಕೇಶವನ ಸ್ಮರಣೆಯ ಬಿಡಬಾರದು5
--------------
ಕನಕದಾಸ
ವಸ್ತು ಒಂದೆ ಅದೆ ಅನಾದಿಯಿಂದ ಸ್ವಸ್ತ ಮಾಡಿಕೊಳ್ಳಿ ಗುರುಮುಖದಿಂದ ಧ್ರುವ ಹೂವಿಲ್ಲದೆ ಫಲವಾಗುವ ಕಾಯಿ ಠಾವಿಲ್ಲದೆ ಮ್ಯಾಲೆ ಮುಚ್ಯಾದೆ ಮಾಯಿ ಭಾವಿಕರಿಗಾದೆವು ಪಾಯಿ ಠಾವಿಕಿ ಮಾಡಿಕೊಬೇಕು ತಾಯಿ 1 ಬೀಜಿಲ್ಲದೆ ಫಲ ನಿಜವಾಗ್ಯದೆ ಮೂಜಗದೊಳು ರಾಜಿಸುತ್ತದೆ ಸೂಜಿಮೊನೆಗಿಂತ ಸಣ್ಣವ್ಯಾಗದೆ ವಾಜಿಹೀನರ ವರ್ಜಿಸುತದೆ 2 ನೋಡೇನೆಂದರೆ ನೋಟಕತೀತ ಹಿಡಿದೇನಂದರೆ ಸಿಕ್ಕದು ಸ್ವಸ್ಥ ಪಡೆದುಕೊಂಡವರಿಗೈದೆ ಆಯಿತ ಮೂಢ ಮಹಿಮತಿ ಗುರು ನಿಜಹಿತ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವಸ್ತು ಕಂಡೆನು ಒಂದು ಕರ್ತೃ ಸದ್ಗುರುವಿನ ಕೃಪೆಯಿಂದ ಧ್ರುವ ತೇಜ:ಪುಂಜದ ರೂಪ ಮೂಜಗದೊಳಗಿದು ಅಪರೂಪ ನಿಜ ನಿರ್ವಿಕಲ್ಪ ಸುಜನರ ಹೃದಯಕ ಸದ್ಛನದೀಪ 1 ರೂಪಕ ನೆಲೆಇಲ್ಲ ವ್ಯಾಪಕವಿದು ಜಗದೊಳಗೆಲ್ಲ ಗುಪಿತಜ್ಞಾನಿಯು ಬಲ್ಲ ಜಪತಪಕಿದು ಸಿಲ್ಕುವದಲ್ಲ 2 ಙÁ್ಞನಕ ಸಾಹೀತ ಮುನಿಜನ ಹೃದಯದಿ ಸದೋದಿತ ಧ್ಯಾನಕೆ ಆಯಿತು ಮನಕಾಮನವಿದು ಪೂರಿತ 3 ಮೂರಕೆ ವಿರಹಿತ ಮೂರುಲೋಕವು ವಂದಿತ ಪರಮ ಸಾಯೋಜ್ಯತ ತಾರಕವಸ್ತು ಸಾಕ್ಷಾತ 4 ಬೈಲಿಗೆ ನಿರ್ಬೈಲ ಭಾವಿಕ ಬಲ್ಲನು ಇದರ್ಹೊಯಿಲ ಮಹಿಪತಿಗನುಕೂಲ ಜೀವನ್ಮುಕ್ತಿಗೆ ಇದು ಮೂಲ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವಸ್ತು ತಾ ಬೇರೆ ಅದೆ | ನಿಜವಸ್ತು ಅರಿತವ ಬಲ್ಲಾ ಪ ಮಣಿ ಎಣಿಸುವದಲ್ಲ ||ಹೊನ್ನು ಹೆಣ್ಣಿಗೆ ಮೆಚ್ಚಿ ಬಣ್ಣದ ಮಾತಾಡಿ |ಚೆನ್ನಿಗ ತನದಿಂದ ತಿರುಗುವದಲ್ಲ 1 ಮಾನ ಮನ್ನಣೆಗಾಗಿ ಜ್ಞಾನದ ಮಾತುಗಳಾಡಿ |ಧ್ಯಾನ ಮೌನವನು ತೋರುವರು |ಮನ್ನಣೆಯಾಗದಿರೆ ಛಾನಸತನದಿಂದ ಜನರ ದೂರುವರಲ್ಲ 2 ಮನವ ಸ್ವಸ್ಥವ ಮಾಡದೆಅನೇಕ ವ್ಯಥೆ ಕೂಡಿ ಕನಕದಾಶೆಗಾಗಿ ಕೆಡಬೇಡ |ಬಲ್ಲ ರಾಯರ ಪ್ರಭು ರುಕ್ಮಭೂಷಣ ಕೂಡಿಕ್ಷುಲ್ಲಕ ತನವ ಬಿಟ್ಟು ಸುಖಿಸಿರಯ್ಯ 3
--------------
ರುಕ್ಮಾಂಗದರು
ವಾರಿಧಿ ಸುತಿಗೆ ಸಾರ ಸಂಗೀತದಿಂದಲಿ ಪ ಸಕಲ ವಸ್ತುವೆನಿಸಿ ಮುಕುತಿದಾಯಕ ಹರಿಗೆ ಭಕುತಿಯಿಂದಲಿ ಬಿಡದೆ | ಸದಾಪೂಜಿಪ ಸಿರಿಗೆ ವಿಖನ ಸಾದ್ಯಮರ ಗಣಕೆ | ಸುಖ ಕೊಡುವಳಿಗೆ ಮಕರಧ್ವಜನ ಮಾಲೆಯಾದ ರುಕುಮನನುಜಗೆ 1 ಚಾರುಶ್ರಾವಣ ಭಾರ್ಗವ ಶುಭವಾರದ ದಿನದಿ ಭೂರಿ ಭಕ್ತಿ ಭರಿತಳಾಗಿ ನಮಿಸುತ ಮನದಿ ನೀ ಆರಾಧಿಸೆ ಘೋಡಶ ಉಪಚಾರದಿ ಮುದದಿ ಕೋರಿಕೆಯನು ಗರೆಯುವ ವರಲಕ್ಷ್ಮಿಗೆ ಜಯದಿ2 ತಾಮರಸ ಸುಧಾಮಳಾದ ಸೋಮವದನಿಗೆ ಗೋಮಿನಿ ಸೌದಾಮಿನಿ ಸಮ ಕೋಮಲಾಂಗಿಗೆ ಶಾಮಸುಂದರ ಸ್ವಾಮಿಯ ಸುಪ್ರೇಮದ ಸತಿಗೆ ಕಾಮಿತ ಫಲದಾಯಿನಿ ಶ್ರೀ ಭೂಮಿಜೆ ರಮಗೆ3
--------------
ಶಾಮಸುಂದರ ವಿಠಲ
ವಾಸುದೇವನನಾ ಶ್ರೈಸದಿಹ ಉಪಾಸನ್ಯಾತಕೆ ಧ್ಯಾಸ ಬಲಿಯದಿಹ ಮಿಗಿಲಭ್ಯಾಸವ್ಯಾತಕೆ ಧ್ರುವ ಹೃದಯ ಶುದ್ಧವಾಗದೆ ಉದಯಸ್ನಾನವ್ಯಾತಕೆ ಬದಿಯಲೀಹ್ಯ ವಸ್ತುಗಾಣದ ಜ್ಞಾನವ್ಯಾತಕೆ ಉದರ ಕುದಿಯು ಶಾಂತ ಹೊಂದದ ಸಾಧನ್ಯಾತಕೆ ಬುಧರ ಸೇವೆಗೊದಗದೀಹ ಸ್ವಧನವ್ಯಾತಕೆ 1 ಭಾವ ನೆಲಿಯುಗೊಳ್ಳ ದೀಹ್ಯ ಭಕುತಿದ್ಯಾತಕೆ ಕಾವನಯ್ಯನ ಕಾಣದೀಹ್ಯ ಯುಕತದ್ಯಾತಕೆ ದೇವದೇವನ ಸೇವೆಗಲ್ಲದ ಶಕುತ್ಯದ್ಯಾತಕೆ ಹ್ಯಾವ ಹೆಮ್ಮೆ ಅಳಿಯದೀಹ್ಯ ವಿರುಕಿತ್ಯಾತಕೆ 2 ತತ್ವ ತಿಳಿಯದಿಹದೀ ವಿದ್ವತ್ವವ್ಯಾತಕೆ ಸತ್ವಗುಣದ ಲಾಚರಿಸದಿಹ್ಯ ಕವಿತ್ಯವ್ಯಾತಕೆ ಚಿತ್ತಶುದ್ಧವಾಗದಿಹ ಮಹತ್ವವ್ಯಾತಕೆ ವಿತ್ತ ಆಶೆಯು ಅಳಿಯದಿಹ ಸಿದ್ಧತ್ವವ್ಯಾತಕೆ 3 ನೀತಿಮಾರ್ಗವರಿಯದೀ ಹ ರೀತ್ಯದ್ಯಾತಕೆ ಮಾತುಮಿತಿಗಳಿಲ್ಲದವನು ಧಾತುವ್ಯಾತಕೆ ಅಮೃತ ಊಟವ್ಯಾತಕೆ ಜ್ಯೋತಿ ತನ್ನೊಳರಿಯದಲೆ ಉತ್ತಮದ್ಯಾತಕೆ 4 ನಿತ್ಯ ಶ್ರವಣವ್ಯಾತಕೆ ನೆನವು ನೆಲೆಯಾಗೊಳ್ಳದಿಹ ಮನನವ್ಯಾತಕೆ ತನುವಿನಲ್ಲಿ ಘನವು ಕಾಣದನುಭವ್ಯಾತಕೆ ದೀನಮಹಿಪತಿಸ್ವಾಮಿಗಾಣದ ಜನಮವ್ಯಾತಕೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವಿಜಯರಾಯರ ದಿನದಿ ವಿಜಯ ಪಯಣವ ಮಾಳ್ಪೆ ನಿಜದಾಸಕೂಟ ಪಥದಿ ಪ. ವಿಜಯಸಖಪ್ರಿಯ ತಂದೆ ಮುದ್ದುಮೋಹನ ಗುರು ವಿಜಯವಿತ್ತುದ್ಧರಿಸಲಿ ದಯದಿ ಅ.ಪ. ಧರೆಯಲ್ಲಿ ಪುಟ್ಟಿ ಮುವ್ವತ್ತಾರು ವತ್ಸರವು ಸರಿದುದೀ ಬಹುಧಾನ್ಯಕೆ ವರಗುರು ಉಪದೇಶ ಅಂಕಿತವು ಲಭಿಸಿ ಎಂ ಟೊರುಷವಾಗಲಿಂದಿಗೆ ಪರಮಕೃಪೆಯಿಂದ ದಾಸತ್ವ ಸಿದ್ಧಿಸಲೆಂಬ ಕಾಲ ಒದಗೆ ನರಹರಿಯೆ ನಿನ್ನ ಚರಣವೆ ಎನಗೆ ಗತಿ ಎಂದು ನೆರೆ ನಂಬಿ ಪೊರಟೆನೀಗ ಬೇಗ 1 ಸರುವ ವಸ್ತುಗಳಲ್ಲಿ ಇರುವ ಅಭಿಮಾನ ಶ್ರೀ ಹರಿ ನಿನ್ನ ಪದದಲಿರಿಸು ವರ ಗುರು ಚರಣದಲಿ ಸದ್ಭಕ್ತಿ ಸರ್ವದಾ ಸ್ಥಿರವಾಗಿ ನೆಲೆಯಗೊಳಿಸು ಹೊರಗೊಳಗೆ ಹಿಂದುಮುಂದರಘಳಿಗೆ ಬಿಡದೆ ನೀ ನಿರುತದಲಿ ಸಂರಕ್ಷಿಸು ಹರಿದಾಸ ಮಾರ್ಗದಲಿ ಹರುಷದಲಿ ನಲಿವಂತೆ ವರಮತಿಯ ದಯಪಾಲಿಸು ಹರಿಯೆ 2 ಗುರುಕರುಣ ಕವಚ ತೊಟ್ಟಿರುವ ಎನಗಿನ್ನಾವ ಪರಿಯ ಭಯವಿಲ್ಲವೆಂದು ಸ್ಥಿರವಾಗಿ ನಂಬಿ ಪೊರಮಡುವೆನೀ ಶುಭದಿನದಿ ಗುರುವಾರ ಗುರು ಕೃಪೆಯಲಿ ಪರಿಪರಿಯ ದುಷ್ಕರ್ಮ ಪರಿಹರಿಸಿ ಕಾಯುವೊ ಗುರುಚರಣ ಧ್ಯಾನಬಲದಿ ಮರುತಾಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ಕರುಣದಲಿ ಒಲಿದು ಪೊರೆಯೊ ಹರಿಯೆ 3
--------------
ಅಂಬಾಬಾಯಿ
ವಿಶ್ವ 50 ವಿಶ್ವ ರಮೇಶ | ಪಾಲಿಸೆನ್ನನು ದಕ್ಷಿಣಾಕ್ಷಿನಿವಾಸ | ರೂಪಾಂತರದಿ ನೀ | ವಾಮನಯನದಿ ಕಾಶ | ಶರಣು ಶರಣು | ಸರ್ವೇಶ | ಜಾಗೃತ ಕಾಲದಿ ಸರ್ವ ವ್ಯಾಪಾರಗಳ ಮಾಡಿಸುವಂಥ ಸೌಭಾಗ್ಯ ದಾತನೇ ಪ ಯಾಜ್ಯ ಸ್ವರೂಪದಿಂದ ನೀ ಯರ್ಜು ನಾಮ | ಉತ್ಥಾಪಕೊತ್ತ ನಾಮ ಸರ್ವಪಾಪೋಜ್ಜಿತ ಉನ್ನಾಮನೇ ದೀಪ್ತ ಇಂಧನ ವಾಮ ಮಂಗಳ | ಸರ್ವ ವೇದಗಳಿಂದ ಸರ್ವದಾ ವಾಣಿ ಪ್ರಾಣ ಸಂಸ್ತುತ್ಯ ಶ್ರೀಶನೇ ದಿವ್ಯದೃಷ್ಟಿ ಗೋಚರ ವಿರಾಜನೇ ಶ್ರೀ ರಮಾ ಸಮೇತನಾಗಿಹ ಅಮೃತ ಜಯ ಜಯ 1 ಭಯ ವಿವರ್ಜಿತ ಅಭಯ | ಗುಣಪೂರ್ಣ ಬ್ರಹ್ಮ ಪುರುಷ ಸರ್ವ ಉದಕಾದ್ಯ ಅಖಿಳವಸ್ತು ಅಸಂಗವಾಗಿವೆ ಎನ್ನ ಕಂಣ್ಗಳು | ಸರ್ವದಾ ಸೌಂದರ್ಯ ರೂಪ ಶ್ರೀವಾಮನನೆ ಎನ್ನ ಎಡದ ಕಣ್ಣಲಿ ಸರ್ವ ನಿಜ ಸದ್ಭÀ್ಭಕ್ತಭಾಮನ ದಕ್ಷಿಣಾಕ್ಷಿಗತ ನಿಯಾಮಕ | 2 ವಿಶ್ವ ಶರಣು ಶುಭಾಂಗ | ಎರಡು ಪಾದವು ನಾಲ್ಕು ಹಸ್ತವು ಏಕ | ಕುಂಡಾದಂಡ ಹೀಗೆ ಜ್ಞಾನ ಸುಖ ಸಪ್ತಾಂಗ ಪಾಹಿಮಾಂ ಮಂಗಳಾಂಗ ಹತ್ತು ಮೇಲೊಂಬತ್ತು ಮುಖಗಳು ಮಧ್ಯ ಗಜಮುಖ ಮಂಗಳಪ್ರದ | ಮೋದಮಯ ನರಮುಖ ಒಂಬತ್ತು ಬಲದ ಪಾಶ್ರ್ವದಿ ಹಾಗೂ ಎಡದಿ | ವಿಶ್ವ ಚಕ್ಷುಸ | ಪದ್ಮಜನ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ವಿಶ್ವನೇ ಶರಣು ಸಂತತ | 3
--------------
ಪ್ರಸನ್ನ ಶ್ರೀನಿವಾಸದಾಸರು
ವಿಷಯ ಸುಖ ಇನ್ನೂ ವಿಷವಾಗಲಿಲ್ಲ | ನಿರ್ವಿಷಯಬೋಧಾನಂದ ದೊರೆಯಲೇ ಇಲ್ಲ ಪ ತನುವ ಧರಿಸಿ ಬಂದು ತನುವ ಕಳೆಯಲಿಲ್ಲ | ಮನದಿ ವಿಚಾರಿಸಿ ಮನವಳಿಯಲೇ ಇಲ್ಲ | ನೆನಹು ನೆಲೆಗೊಂಡು ನಿಜಕೆ ನಿಲ್ಲಲಿಲ್ಲ | ಚಿನುಮಯಾತ್ಮಕನಾಗಿ ಚರಿಸಲೇ ಇಲ್ಲ1 ಪರ ವಸ್ತುವು ಗೋಚರಿಸಲೇ ಇಲ್ಲ 2 ಮಾಯಾ ಬಲಿ ಹಬ್ಬಿತಲ್ಲ 3
--------------
ಭಾವತರಕರು
ವೆಂಕಟ ಬಾರೋ ರಿಪುಸಂಕಟ ಬಾರೊ ಕಿಂಕರಿಗೊಲಿದ ನಿಶ್ಶಂಕ ಬಾರೋ ಪ ಪೊಂದೇರಿನೊಳಗೆ ಭೂಮಿ ಇಂದಿರೆಗೂಡಿ ಚೆಂದದಿಂದಲೊಪ್ಪುತಿಹ ಇಂದುವದÀನ ಮಂದರೋದ್ಧಾರನೆ ಮಹಾನಂದ ಮೂರುತಿ ಪಾದ ವಂದಿಪನೆಂದು 1 ಲೌಕೀಕ ವಿಲಕ್ಷಣ ಅನೇಕ ಏಕ ಸಾಕಾರ ವಿಗ್ರಹ ಪುಣ್ಯಶ್ಲೋಕ ವಿಭುವೆ ಪ್ರಾಕೃತ ರಹಿತಗಾತ್ರ ಲೋಕಪಾವನ ಶೋಕ ಮೂಲ ನಾಶನ ವಿಶೋಕ ಜನಕ 2 ಅಂಗ ಅಂಗೀ ಭಾವದಿಂದ ಅಂಗದೊಳಿದ್ದು ಸಂಗಡ ತಿರುಗುವೊ ನೀಲಾಂಗ ನಿಸ್ಸಂಗ ಭೃಂಗ ಜಗದಂತೆ- ರಂಗ ರಂಗರಾಜ ಸುಖಸಂಗ ಅನಂಗ 3 ಆಪ್ತಕಾಮ ಅಮೃತಾಂಗ ಗುಪ್ತಮಹಿಮ ತಪ್ತಕಾಂಚನ ಸನ್ನಿಭ ವ್ಯಾಪ್ತ ನಿತ್ಯಾ ತೃಪ್ತ ತೃಣ ಬೊಮ್ಮಾದಿ ನಿರ್ಲಿಪ್ತವಾಸ ಸಪ್ತ ಸಪ್ತ ಲೋಕೇಶ ಅತೃಪ್ತ ಲೀಲ 4 ಅಗಣಿತ ಬಂಧು ಅಗನಾಗ ಧಾರಕನೆ ನಾಗ ಭಂಜನ ಆಗಸದಂಗಾಂಗುಷ್ಟದಿಂದ ಪೆತ್ತನೆ ಆಗಲೀಗಲೆನ್ನದಲೆ ಸಾಗಿ ಬೇಗದಿ5 ನಿರ್ದೋಷ ವಸ್ತು ನೀನೆಂದು ನಿರ್ಧಾರ ಮಾಡೆ ಪೊದ್ದಿಪ್ಪವು ನಿನ್ನಲಿ ನಾಲ್ಕು ನಿರ್ದೋಷಂಗಳು ಭದ್ರ ಫಲದಾಯಕ ಸಮುದ್ರಶಯನ ಮಧ್ಯಜೀವಿ ವಂದ್ಯ ಸುಪ್ರಸನ್ನ ಮೋಹನ್ನ 6 ಜೀವಾಭಿಮಾನಿ ಗಿರೀಶ ದೇವ ದೇವೇಶ ಜೀವರಾಶಿಗಳ ಸ್ವಾಭಾವ ಪ್ರೇರಕ ಜೀವನನಾಗಿ ನಮ್ಮ ಕಾವುತಲಿಪ್ಪ ರಾ- ಜೀವ ನಯನ ವಿಜಯ ವಿಠ್ಠಲ ಪೂರ್ಣ 7
--------------
ವಿಜಯದಾಸ
ವೆಂಕಟಾಚಲನೆ ಬಾರೊ ಶಂಕರಾಭರಣ ಶಾಯಿ | ಕಿಂಕರರಿಗೊಲಿದ ನಿಃಶಂಕ ಬಾರೊ ಪ ಇಂದಿರೆ ಕೂಡ | ಚಂದದಿಂದಲೊಪ್ಪುತಿಹ ಇಂದುವದನಾ || ಮಂದರೋದ್ಧಾರನೆ ಮಹನಂದ ಮೂರುತಿ | ವೃಂದಾರಕ ವಂದ್ಯಪಾಲ ವಂದಿಪೆ ನಿಂದು 1 ಲೌಕಿಕ ವಿಲಕ್ಷಣ ಅನೇಕ ಏಕಾ | ಸಾಕಾರ ವಿಗ್ರಹ ಪುಣ್ಯಶ್ಲೋಕ ವಿಭುವೆ || ಪ್ರಾಕೃತ ರಹಿತಗಾತ್ರ ಲೋಕಪಾವನ | ಶೋಕ ಮೂಲನಾಶನ ಅಶೋಕ ಜನಕಾ 2 ಮಣಿ ಅಗಣಿತ ಬಂಧು | ಆಗನಾಗಧಾರಕನೆ ನಾಗ ಭಂಜನಾ || ಆಕಾಶ ಗಂಗೆಯ ಅಂಗುಷ್ಟದಿ ಪೆತ್ತನೆ | ಆಗಲೀಗಲೆನ್ನದಲೆ ಸಾಗಿ ವೇಗದಿ 3 ಅಂಗ ಅಂಗಿ ಭಾವದಿಂದ ಅಂಗದೊಳಿದ್ದು | ಸಂಗಡ ತಿರುಗುವ ನೀಲಾಂಗ ನಿಃಸಂಗಾ || ಭೃಂಗ ಜಗದಂತ | ರಂಗ ರಂಗರಾಜ ಸುಖಸಂಗ ನಿಸ್ಸಂಗಾ 4 ಆಪ್ತಕಾಮಿ ಅಮೃತಾಂಗ ಗುಪ್ತ ಮಹಿಮ | ತಪ್ತ ಕಾಂಚನ ಸನ್ನಿಭ ವ್ಯಾಪ್ತ ನಿತ್ಯಾ || ತೃಪ್ತ ತೃಣ ಬೊಮ್ಮದಿ ನಿರ್ಲಿಪ್ತ ವ್ಯಾಪ್ತಾ | ಸಪ್ತ ಸಪ್ತ ಲೋಕೇಶ ಅತೃಪ್ತ ಲೀಲಾ 5 ನಿರ್ದೋಷ ವಸ್ತುವಿನಿಂದ ನಿರ್ಧರ ಮಾಡೆ | ಪೊಂದಿಪ್ಪವು ನಿನ್ನಲಿ ನಾಲ್ಕು ನಿರ್ದೋಷಂಗಳೂ || ಭದ್ರ ಫಲದಾಯಕ ಸಮುದ್ರಶಯನಾ | ಮಧ್ಯಜೀವಿ ವಂದ್ಯ ಸುಪ್ರಸಿದ್ಧ ಮೋಹನ 6 ಜೀವಾಭಿಮಾನಿ ಗಿರೀಶ ದೇವ ದೇವೇಶಾ | ಜೀವ ರಾಶಿಗಳ ಸ್ವಭಾವ ಪ್ರೇರಕಾ || ಜೀವನವಾಗಿ ನಮ್ಮನು ಕಾವುತಿಪ್ಪ | ರಾಜೀವ ನಯನ ವಿಜಯವಿಠ್ಠಲ ಪೂರ್ಣಾ 7
--------------
ವಿಜಯದಾಸ
ವೆಂಕಟಾಚಲವಾಸ ಪಂಕಜಪ್ರಿಯಭಾಸ ಶಂಕರಾರ್ಚಿತ ಚರಣ ಪಂಕಜಾಸನ ಪಿತ ಪಂಕಜಲೋಚನ ಕಿಂಕರಜನ ಶರಣ ಪ ಪರಮಾತ್ಮ ನಿನ್ನ ಶ್ರೀಪದಸೇವಕನಾಗಿಪರರನನುಸರಿಸುವೆನೆ ಸಿರಿರಮಣನೆ ನಿನ್ನ ಕರುಣೆಯುಳ್ಳೆ ಪರಸಿರಿಯ ಬಯಸುವೆನೆ 1 ಧರಣಿಯನಾಳುವ ದೊರೆಯ ಕುಮಾರನು ತಿರಿಕೆಯ ಬೇಡುವನೆ ಸುರತರುವಿನ ತಂಪುನೆರಳೊಳು ಕುಳಿತು ತಾ ಗರಿಕೆಯನರಸುವನೆ 2 ಸಾರನಿಗಮ ವಿಚಾರವುಳ್ಳವ ನಿಸ್ಸಾರದಿ ಬೆರೆಯುವನೆ ವಾರಿಧಿಲಂಘಿಪಧೀರನುಕೊಳಚೆಯನೀರಿಗೆಜರಿಯುವನೆ 3 ಕ್ಷೀರಾಬ್ಧಿ ಮಥಿಸಿದ ಶೂರನಿನ್ನವನಿಗೆ ನೀರು ಮಜ್ಜಿಗೆ ಗಣನೆ ನಾರಸಿಂಹನ ಪದ ಸಾರಿದರವನು ಮದವಾರಣಕ್ಕಂಜುವನೆ 4 ಗರುಡಗಮನ ನಿನ್ನ ಶರಣಾದವನಿಗೆ ತರಳನ ಹಾವಳಿಯೆ ನರಕಾಂತಕ ನಿನ್ನ ಸ್ಮರಿಸುವ ನರನಿಗೆ ದುರಿತಂಗಳಟ್ಟುಳಿಯೆ 5 ಹೊಳೆಯೊಳು ನೆನೆಯದ ಬಲುಗಟ್ಟಿಕಲ್ಲು ತಾ ಮಳೆಯೊಳು ನೆನೆಯುವದೆ ಇಳೆಯೊಳು ಪುಲಿಗಿರಿನಿಲಯನ ದಾಸರ ಬಲುಹು ಕುಂದಕವಹುದೆ 6 ಇಷ್ಟದಿ ಮನೆಯೊಳು ಮೃಷ್ಟಾನ್ನವುಂಡವ ಪಿಷ್ಟವ ಬಯಸುವನೆ ಸೃಷ್ಟೀಶ ನಿನ್ನೊಳಗಿಟ್ಟು ದುರ್ದೈವದ ದೃಷ್ಟಿಯನರಸುವನೆ 7 ನಿಗಮಗೋಚರ ಕೇಳು ಜಗವ ತೂಗುವನಿಗೆ ಮಗುವತಿ ಘನವಹುದೆ ಜಗದಘಹರಣ ಎನ್ನಘವ ನೀಗಲು ನಿನ್ನ ಬಗೆಗೆ ದುರ್ಘಟವಹುದೆ 8 ಪರಮಾತ್ಮ ಪರಿಪೂರ್ಣ ಪರವಸ್ತು ನೀನೆಂದು ಮರೆಹೊಕ್ಕೆ ಕಾಯೊ ಎನ್ನ ವರಸುಗುಣಾಕರವರದವಿಠಲಪುಲಿಗಿರಿದೊರೆಸುಪ್ರಸನ್ನಾ 9
--------------
ವೆಂಕಟವರದಾರ್ಯರು
ವೆಂಕಟೇಶ ನಿನ್ನ ನಂಬಿದೆ ಎನ್ನ ಸಂಕಟವನು ಪರಿಹರಿಸಯ್ಯ ನೀನು ಪ ಒಡಲೆಂಬ ಕಡಲೆಡೆಗೊಂಡಿಹ ಹಡಗು ಕಡೆಯ ಕಾಣ ಬಹು ಜಡದಿಂದ ಗುಡುಗು ಜಡಿಯುತ್ತ ಬರುತಿಹ ಮಳೆ ಮುಂದೆ ತೊಡಗು ದಡವ ಸೇರಿಸೊ ಎನ್ನ ಒಡೆಯ ನೀ ಕಡೆಗು 1 ಅಣುರೇಣು ತೃಣಕಾಷ್ಠದೊಳಗಿದ್ದು ನೀನು ಕ್ಷಣ ಕ್ಷಣ ಆರೈವ ಗುಣ ನಿನ್ನದೇನು ಪ್ರಣವ ರೂಪನೇ ನಿನ್ನ ಚರಣಕ್ಕೆ ನಾನು ಮಣಿವೆನು ಮನ್ನಿಸು ವರ ಕಾಮಧೇನು 2 ನಾರಾಯಣ ನರಹರಿ ಜಗನ್ನಾಥ ದಾರಿದ್ರ್ಯ ದುಃಖ ನಿರ್ಮುಕ್ತ ನೀ ತಾತ ಸಾರಿದವರ ಸಂಸಾರದ ದಾತ ಮಾರಿದ ಮನವಕೊಂಬರೆ ನೀನೆ ಪ್ರೀತ 3 ಉತ್ತಮವಾದ ಶ್ರೀಶೈಲ ನಿವಾಸ ಭಕ್ತರ ಸಲಹುವ ಬಿರುದುಳ್ಳ ಈಶ ಚಿತ್ತವು ತಿಳಿದೆನ್ನ ಕಾಯೊ ಸರ್ವೇಶ ನಿತ್ಯ ಮಂಗಲವೀವ ವಸ್ತು ಲಕ್ಷ್ಮೀಶ 4 ವರಾಹತಿಮ್ಮಪ್ಪನು ಒಲಿದೆನ್ನ ಕರೆದು ಆರಿದ ಬÁಯೊಳು ಅಮೃತವನೆರೆದು ದೂರವಾಗದೆ ಅಡಿಗಡಿಗೆನ್ನ ಹೊರೆದು ಏರುಗಂಡಪರಾಧ ಎಲ್ಲವ ಮರೆದು 5
--------------
ವರಹತಿಮ್ಮಪ್ಪ
ಶರಣಾಗತನಾದೆನು ಶಂಕರ ನಿನ್ನ ಚರಣವ ಮರೆಹೊಕ್ಕೆನು ಪ. ಕರುಣಿಸೈ ಕರಿವದನಜನಕಾ- ವರಕದಂಬಪೂಜ್ಯ ಗಿರಿವರ- ಶರಸದಾನಂದೈಕವಿಗ್ರಹ ದುರಿತಧ್ವಾಂತವಿದೂರ ದಿನಕರ ಅ.ಪ. ಹಸ್ತಿವಾಹನವಂದಿತ ವಿಧುಮಂಡಲ- ಮಸ್ತಕ ಗುಣನಂದಿತ ಸ್ವಸ್ತಿದಾಯಕ ಸಾವiಗಾನಪ್ರ- ಶಸ್ತ ಪಾವನಚರಿತ ಮುನಿಹೃದ- ಯಸ್ಥಧನಪತಿಮಿತ್ರ ಪರತರ- ವಸ್ತು ಗುರುವರ ಶಾಸ್ತಾವೇಶ್ವರ 1 ಮಂದಾಕಿನೀ ಮಕುಟ ಶಿವ ಶಿವ ನಿತ್ಯಾ- ನಂದಮ್ನಾಯ ಕೂಟ ಚಂದ್ರಸೂರ್ಯಾಗ್ನಿತ್ರಿಲೋಚನ ಸಿಂಧುರಾಸುರಮಥನ ಸ್ಥಿರಚರ- ವಂದಿತಾಂಘ್ರಿಸರೋಜ ಉದಿತಾ- ರ್ಕೇಂದುಶತನಿಭ ನಂದಿವಾಹನ 2 ನೀಲಕಂಧರ ಸುಂದರ ಸದ್ಗುಣವರು- ಣಾಲಯ ಪರಮೇಶ್ವರ ಕಾಲ ಕಪಾಲಧರ ಮುನಿ- ಪಾಲ ಪದ್ಮಜವಂದಿತಾಮಲ- ಲೀಲ ಡಮರು ತ್ರಿಶೂಲಪಾಣಿ ವಿ- ಶಾಲಮತಿವರ ಭಾಳಲೋಚನ 3 ಮಾರಸುಂದರ ಸಂಕರ ಶ್ರೀಲಕ್ಷ್ಮೀ- ನಾರಾಯಣಕಿಂಕರ ಮಾರಹರ ಮಹನೀಯ ಶ್ರುತಿಸ್ಮøತಿ- ಸಾರ ವಿಗತಾಮಯ ಮಹೋನ್ನತ ವೀರ ರಾವಣಮದನಿಭಂಜನ ಪುರಹರ 4
--------------
ತುಪಾಕಿ ವೆಂಕಟರಮಣಾಚಾರ್ಯ
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು