ಒಟ್ಟು 758 ಕಡೆಗಳಲ್ಲಿ , 75 ದಾಸರು , 638 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀ ಪಾಲಿಸದಿರಲು ನಾ ಪೋಗುವುದು ಎತ್ತ ನೀ ಪೇಳೊ ಪರಮ ಪುರುಷಾ ಅಗಣಿತ ನಾಮ ಸುರ ಪ್ರೇಮ ಸ್ವರ್ಣ ಗಿರಿವಾಸ ನರಕೇಶ ಭೂಷಾ ಪ ಉದರ ಚಿಂತಿಯಲಿ ಉದಯದಲಿ ಯೆದ್ದು ಅವರಿವರ ಸದನದಲ್ಲಿಗೆ ಹೋಗದೆ ಮೃದು ವಾಕ್ಯವಾಡದಲೆ ಮದ ಗರ್ವ ಬಲದಿಂದ ಎದುರಾದವರ ಜರಿದೆ ಮನಸಿನ ಕ್ಲೇಶದ ಪರಸುದತಿಯರನೀಕ್ಷಿಸಿ ವಿದಿತ ಕರ್ಮಗಳ ತೊರೆದೆ ಒದಗಿ ಬಂದ ಪುಣ್ಯ ಬರಿಗೈದು ಪಾಪದ ಹುದಲೊಳಗೆ ಬಿದ್ದು ಸಂಪದವಿಗೆ ದೂರದವನಾ1 ಉತ್ತಮರ ನಿಂದಿಸಿದೆ ಉಚಿತಾರ್ಥ ತಿಳಿಯದಲೆ ಹೆತ್ತವರನ್ನ ಜರಿದೆ ಹತ್ತೆಗರೆದು ಪರಿಪಾಲಿಸಿದ ದಾತರನು ಹೊತ್ತಾಕೆ ಪ್ರೀತಿ ಪೇಳುವೆ ಮತ್ತೆ ಧರ್ಮವೆಯಿಲ್ಲಾ ಮಹಾಕೃಪಣನಾಗಿ ಪರ ವಿತ್ತಾಶೆ ಪೋಗಿ ಮುಳವೆ ಚಿತ್ತಪಲ್ಲಟವಾಗಿ ವಿಷವೆಂಬ ಹಾವಿನ ಹುತ್ತಿನೊಳು ಬಿದ್ದು ಪುನಿತನಾಗದವನಾ 2 ಗುರು ನಿಂದಕರ ನೋಡಿ ಸರವಾಗಿ ಪೋಗಳುವೆನೊ ವೇದ ಸಮ್ಮತವೆ ಬಿಟ್ಟು ಮರೆವೆ ನಿನ್ನಯ ಸ್ಮರಣೆ ಗತಿಗೆ ಸಾಧನವೆಂದು ಅರಿದರಿದು ಬುದ್ಧಿಗೆಟ್ಟು ಹರಿವಾಸರದುಪವಾಸ ಮಾಡುವ ಜನರಿಗೆ ಮುರಳಾಡಿ ಮುಟ್ಟಿಯಲಿಟ್ಟು ಜಾಗರ ತೊರೆದು ಹಿರಿ ಪಾಮರನಾಗಿ ಹರಣ ಸ್ಥಿರವೆಂದು ಮದುಕರಿಯಂತೆ ತಿರುಗುವೆ ನಾ3 ಕಾಸಿಗೆ ಕಾಸು ಘರ್ತಿಸಿ ಗಳಿಸಿ ಬಿಡದೆ ಮೀಸಲಾ ಪದಾರ್ಥವೆಂಬೆ ದೋಷಕ್ಕೆ ಗುರಿಯಾಗಿ ದುರ್ಜನರ ಒಡಗೂಡಿ ರಾಸಿ ದುರನ್ನ ಉಂಬೆ ಆಶೆಯನು ತೊರಿಯದಲೆ ಉಪರಾಗ ಪರ್ವದಲಿ ಕಾಸು ದಾನವನು ಕೊಂಬೆ ಲೇಸಾದರೆ ಹಿಗ್ಗಿ ಹಾರೈಸುವೆನು ಇಷ್ಟು ಕ್ಲೇಶ ಬಂದರೆ ದೈವವೆಂದು ದೂಷಿಸುವೆನಾ4 ಒಂದೇ ಎರಡೇ ಎನ್ನ ಅಪರಾಧ ಪೇಳಿದರೆ ಎಂದೆಗೆಂದಿಗೆ ಸವಿಯದು ನೊಂದು ದುಶ್ಚಿತ್ತದಲಿ ನೀನೆ ಗತಿ ಎಂದು ಬಾಗಿಲ ಕಾಯಿದುದು ಬಂದು ಮಾತುರದಲ್ಲಿ ಬಲು ದಯಾಳು ಎನ್ನ ಸಂದೇಹವನು ತೊಡೆದು ಮುಂದಾದರೂ ಭವದ ಅಂಧ ಕೂಪದೊಳಿಡದೆ ಪೊಂದಿಸುವ ನಿನ್ನವರೊಳಗೆ ವಿಜಯವಿಠ್ಠಲ ಎನಗೆ 5
--------------
ವಿಜಯದಾಸ
ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ ಪ ನೀ ದೇಹದೊಳಗೊ ನಿನ್ನೊಳು ದೇಹವೊ ಹರಿಯೆಅ ಬಯಲೊಳಗೆ ಆಲಯವೊ ಆಲಯದೊಳಗೆ ಬಯಲೊಬಯಲು ಆಲಯವೆರಡು ನಯನದೊಳಗೊನಯನ ಬುದ್ಧಿಯ ಒಳಗೊ ಬುದ್ಧಿ ನಯನದ ಒಳಗೊನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ1 ಸವಿಯು ಸಕ್ಕರೆಯೊಳಗೊ ಸಕ್ಕರೆಯು ಸವಿಯೊಳಗೊಸವಿಯು ಸಕ್ಕರೆ ಎರಡು ಜಿಹ್ವೆಯೊಳಗೊಜಿಹ್ವೆ ಮನಸಿನ ಒಳಗೊ ಮನಸು ಜಿಹ್ವೆಯ ಒಳಗೊಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ 2 ಕುಸುಮದಲಿ ಗಂಧವೋ ಗಂಧದಲಿ ಕುಸುಮವೋಕುಸುಮ ಗಂಧಗಳೆರಡು ಆಘ್ರಾಣದೊಳಗೊಅಸಮಭವ ಕಾಗಿನೆಲೆಯಾದಿಕೇಶವರಾಯಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ ಹರಿಯೆ 3
--------------
ಕನಕದಾಸ
ನೀಚಮತಿ ಎಲೆ ನೀಚಮತಿ ಊಚನೆನಿಸಿಕೊಂಬ ಯೋಚನೆ ಬಿಡುಕಂಡ್ಯ ಪ ತರಿಯದೆ ಕುಟಿಲತ್ವ ಮರೆಯದೆ ದುಶ್ಚಟ ಧರೆಯ ಭೋಗವ ನೆಚ್ಚಿ ಶರಣರ್ವೇಷÀವÀ ತಾಳಿ ಮರವೆ ಮಾಯದಿ ಬಿದ್ದು ಒರಲುವ ನರರಿಗೆ ಬರಿದೆ ಬೋಧಿಪೆನೆಂಬ ಭ್ರಮೆಯಿಂದ ಫಲವೆ 1 ಮಾಯಮೋಹಿಗಳ ಉಪಾಯದಿ ಕೂಡಿಸಿ ಸೇವಿಸದಾಹಾರ ಸೇವಿಸುತನುದಿನ ಕಾಯಬಲಿಸಿ ಕುಣಿವ ಮಾಯಮೋಹಿಯ ಬರಿ ಬಾಯ ಬ್ರಹ್ಮತ್ಯಬಂಧ ಬಯಲಪ್ಪುದೇನೆಲೆ 2 ಧರಿಸಿದ ಲಾಂಛನ ಅರಿಯದೆ ಮೇಲೆ ನೀ ಬರಿದೆ ಕಾವಿಯನ್ಹೊದ್ದು ಕರದಿ ಕಮಂಡಲ ಧರಿಸಿ ಮರುಳರಿಗೆಲ್ಲ ಪರತತ್ತ್ವವರಿಯಲು ಜರೆಮರಣದು:ಖವು ಪರಹಾರಮೆಂತೆಲೆ 3 ಭವಭವದಲಿ ಬಟ್ಟಬವಣೆಯ ಸ್ಮರಿಸಿದೆ ಭವಗೆಲಿಸುವ ಅನುಭವ ತಿಳಿಯದೆ ಸ ದ್ಭವಿಗಳ ನೆರೆಯಿಸಿ ಕವಿತೆ ಬಿಡಿಸಿ ಬಹು ಸವಿಮಾತ್ಹೇಳಲು ಮೂಲಭವಭೀಜಳಿಯುವುದೆ 4 ತನ್ನ ತನ್ನದುಯೆಂಬ ಭಿನ್ನವಿಲ್ಲದೆಸದಾ ತನ್ನ ಸ್ವರೂಪ ಪರರನ್ನು ಬಗೆದು ನಿತ್ಯ ಸನ್ನುತ ಶ್ರೀರಾಮನುನ್ನತಂಘ್ರಿಗೆ ಪೊಂದಿ ಧನ್ಯರಾಗದೆ ನರಕುನ್ನಿಯೆನಿಸುವರೇನೋ5
--------------
ರಾಮದಾಸರು
ನೀತಿವಂತನಾದ: ನೀತಿ ವಂತನಾದ ನಿಗಮಗೋಚರ ದೇವ | ಮಾತಿಗೆ ನಿಜಶೀಲ ಮಾತುಗಳಾಡಿ ಪ ಕೂಸಿನ ಮೊಲೆಯವಳ | ಕೊಸರಿಮುತ್ತನೆ ಇಟ್ಟು | ಚೂಶಿಯ ಮಾಡಿ ಬಲು ಘನವಾಗಿ ಮನಿಯೊಳು 1 ಚದಗತನದಿಯಲ್ಲ | ಚಲುವೆಯರೂಡಗೂಡಿ ಅಧರಾಮೃತ ಸವಿದು ಆನಂದದಲಿ ಇನ್ನು 2 ನೀರಿಗೆ ಹೋಗುವಂಥಹ ನಿಜ ಸ್ತ್ರೀಯರನೆ ಕಂಡು ತೋರಿವಟ್ಟಳ ಹಿಡಿದು ತುಟಿಯನೆ ಕಡಿದು 3 ಕೆಳದೆರು ಜಲದಲ್ಲಿ ಕ್ರೀಡೆನಾಡುವ ವೇಳೆ ಕೆಳಗಿದ್ದ ಶೀರೆಗಳ ಕೊಂಡು ಮರವನೇರಿ 4 ಈ ಪರಿಚರ್ಯಗಳಷ್ಟು ತನ್ನಲಿದ್ದು ಭೂಪ ಹೆನ್ನೆ ವಿಠಲ ಪೂಜಿತನಾÀನು 5
--------------
ಹೆನ್ನೆರಂಗದಾಸರು
ನೀನೆ ಗತಿಯು ಎನಗೆ ಎನ್ನಯ್ಯ ಶ್ರೀ ಪನ್ನಂಗಶಯನ ಕಾಯೋ ಪ ಹೀನ ಸಂಸಾರದೊಳು ಇನ್ನೆಲ್ಲಿತನಕ ನಾ ಬನ್ನಬಡಬೇಕಯ್ಯ ಜಾಹ್ನವೀಜನಕ ಅ.ಪ ಸನುಮತಿವಿನಿತಿಲ್ಲದೆ ಮನಸಿನೊಳು ಘನತರ ಭ್ರಮಿಪೆ ಬರಿದೇ ಶುನಕನ ಕನಸಿದು ಅನಿತ್ಯ ಜಗತ್ಸುಖ ಎನಗ್ಯಾಕೆ ಒಣಭ್ರಾಂತಿಯನು ತೋರ್ವೆ ಶ್ರೀಕಾಂತ 1 ಘಳಿಗೆಸಂತಸವಿಲ್ಲದೆ ಬಳಲುವೆ ಬಲು ಇಳೆ ಸುಖದಿ ಮನ ನಿಲ್ಲಿಸಿ ಘಳಿಗೆ ಮೊಕ್ಕಾಮಿಗಾಗಿ ಕಳವಳಸೀಪರಿ ಬಳಲುವೆನ್ಯಾಕೊ ತಿಳಿಯದಿದು ನಳಿನಾಕ್ಷ 2 ಎತ್ತ ನೋಡಲು ನೀನಿರ್ದು ಮಿಥ್ಯಜಗತ್ತಿನೋಳ್ ವ್ಯರ್ಥ ಬಳಲಿಪರೆ ಎನ್ನ ಭಕ್ತವತ್ಸಲನೆಂಬ ಹೊತ್ತಿರುವಿ ಬಿರುದುಗಳ್ ಚಿತ್ತಕ್ಕೆ ಸತ್ಸುಖವಿತ್ತು ಪೊರೆ ಶ್ರೀರಾಮ 3
--------------
ರಾಮದಾಸರು
ನೀರಜಗಂಧಿಯೇ ಹೇಳೇ ಸುಳಿದವರಾರಮ್ಮಾ | ನೀರಜ ಶರಪತಿ ಕಾಣಮ್ಮಾ ಪ ಅರುಣನಖಾಂಗುಲಿ ಗುಲ್ಫ ಗೆಜ್ಜೆ ಕಾ- ಪುರ ನೂಪುರದ ಲೊಪ್ಪುವನವದಾರಮ್ಮಾ | ಸರಸಿಯೊಳಗಪೊಕ್ಕು ತಮನಸುವ ಬಗೆದು | ವರಶೃತಿ ತಂದವ ಕಾಣಮ್ಮಾ 1 ಕಲಿ ದಶನಂದದಿ ಜಂಘೆ ಪೊಂಬಾಳೆಯ | ಪರಿಯ ತೊಡೆಯುಳ್ಳುವ ದಾರಮ್ಮಾ | ಶರಧಿ ಮಥಿಸುವಂದುಗಿರಿನಿಲ್ಲದಿರೆ ಬಂದು | ಭರದಿ ಬೆನ್ನೆವಿತ್ತವ ಕಾಣಮ್ಮ2 ಕಾಂಚನ ವಸನನಿರಿಯ ಮ್ಯಾಲ ವಡ್ಯಾಣ ಮಿಂಚಿನ ಘಂಟೆಯ ದಾರಮ್ಮಾ | ಕ್ಷಿತಿ ವಯ್ದದನುಜನ ಶೀಳಿ ವಿ | ರಂಚಿ ಗುಳಹಿದವ ಕಾಣಮ್ಮಾ3 ಕಿರಿಡೋಳ್ಳಾತ್ರಿವಳಿಯ ನವರತ್ನ ಪದಕಿಹ | ಉರಸಿನ ವತ್ಸನವ ದಾರಮ್ಮಾ | ನರಹರಿ ರೂಪದಿ ಹಿರಣ್ಯಕನನು ಕೊಂದು | ಶರಣನ ಕಾಯ್ದವ ಕಾಣಮ್ಮಾ4 ಕೌಸ್ತುಭಹಾರ ಮೌಕ್ತಿಕದ ಕೊರಳಲಿಹ | ಹಸ್ತ ಕಡಗದವ ನಾರಮ್ಮಾ | ಸ್ವಸ್ತಿ ಎನುತ ಬಂದು ಬೇಡಿ ಬಲಿಯಾಗರ್ವ | ಸ್ವಸ್ತಿ ಮಾಡಿವನು ಕಾಣಮ್ಮಾ5 ಕ | ಪೋಲ ಹೊಳಹಿನವ ದಾರಮ್ಮಾ | ಏಳು ಮೂರು ಬಾರಿ ಕ್ಷತ್ರಿಯ ರಾಯರ ಸೋಲಿಸಿ ಬಂದವ ಕಾಣಮ್ಮಾ6 ಕರ್ಪೂರ ಕರಡಿಗಿ ಬಾಯಿ ಸಂಪಿಗೆಯಂತೆ | ತೋರ್ಪ ನಾಶಿಕದವ ದಾರಮ್ಮಾ | ದರ್ಪ ಮುರಿದು ರಾವಣನ ತಲಿಯ ಧರೆ | ಗೊಟ್ಟಿಸಿದವ ನಿವ ಕಾಣಮ್ಮಾ7 ಕುಡಿಗಂಗಳ ಭ್ರೂಲತೆಯ ಪೆರೆನೆಣೆಸಲು | ಪೊಡವಿಯೊಳಗ ನಂಬಿದ್ದ ಪಾಂಡವರನು | ಬಿಡದೆ ಸ್ಪಾಪಿಸಿದವ ಕಾಣಮ್ಮಾ8 ಕುರುಳು ಗೂದಲು ತಳಕದ ಮಾಲ್ಯ ಮೌಲಿಕ | ಧರಸಿದ ಮುಕುಟವ ದಾರಮ್ಮಾ | ತರಳನಾಗಿ ಮುಪ್ಪುರ ನಾರಿಯರ ವೃತ | ತ್ವರಿತದಿ ಅಳಿದವ ಕಾಣಮ್ಮಾ9 ನೋಡಲು ಮನಸಿಗೆ ಮೋಹನೆ ಮಾಡುವ | ಪ್ರೌಡದಿ ಮನವವ ದಾರಮ್ಮಾ | ರೂಢಿಲಿ ಕುದುರೆಯ ಏರಿ ಕಲಿಮಲವ | ಝಾಡಿಸಿದವನಿವ ಕಾಣಮ್ಮ10 ಸಹಜದಿ ಸವಿಸವಿ ಮಾತಲಿ ಸೋಲಿಸು | ತಿಹ ಸರ್ವರಿಗಿವ ದಾರಮ್ಮಾ | ಮಹಿಪತಿ ಸುತನ ಹೃದಯದಲಿ ನಿಂತು ತನ್ನ| ಮಹಿಮೆ ಬೀರಿಸುವವ ಕಾಣಮ್ಮಾ11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೂರೆಂಟು ನೆನೆದು ಫಲವೇನು ಈರೇಳು ಜಗದೊಡೆಯಹರಿಯನೊಮ್ಮೆ ನೆನೆ ಮನವೆ ಪ. ಧನದಾಸೆಗಳಲದಿರು ಭವದುಃಖ ಬಳಲದಿರುಜನಾರ್ದನನ ಮರೆಯದಿರು ಈ ತನುವ ಪೊರೆಯದಿರುಅನಘಜನರೊಡನಾಡು ದಿನದಿನ ಶುಭವಕೂಡುಇನಿತು ಜನಮವೆ ಸಾಕು ಇನ್ನು ಮುಕುತಿಯೆ ಬೇಕು 1 ಸಾಕು ದುರ್ಜನÀರಾಟ ಸಾಕು ಸತಿಯರ ಬೇಟಸಾಕು ಸವಿಯನ್ನದೂಟ ಸಾಕು ಘನಕೂಟಸಾಕು ದೇಶಕೆವೋಟ ಸಾಕು ಸಲೆ ಭವನೋಟಸಾಕದೆಲ್ಲ ಖಳಕೂಟ ಸಾಕುಮನೆ[ಮಠ] 2 ಕೇಳು ಹರಿಮಹಿಮೆಯನು ಪೇಳು ಹರಿನಾಮವನುಬಾಳು ಬಂದಷ್ಟರಿಂದ ತಾಳು ಹಸಿತೃಷೆಗಳಶ್ರೀಲಲನೆಯಾಳ್ದ ಹಯವದನ ಸಿರಿನರಹರಿಯಆಳುತನವನು ಬೇಡು ಕೀಳು ಬುದ್ಧಿಯ ದೂಡು 3
--------------
ವಾದಿರಾಜ
ನೆನಿಯಬಾರದೆ ಮನವೆ ಹರಿಯ ನಾಮವ ನೆನವು ಸೆಲೆಗೊಳ್ಳಲಿಕ್ಕೆ ಘನಪದವನೀವ ಸ್ವಾಮಿ ಧ್ರುವ ಅಂತು ಇಂತು ಎಂತು ಎನದೆ ತಂತು ಪಿಡಿದು ತನುವಿನೊಳು ಪಾದ 1 ಶ್ರವಣ ಕೀರ್ತನೆ ಮೊದಲಾದ ನವವಿಧ ಭಕುತಿಯಿಂದ ಸವಿದು ಸವಿದು ಸವಿದುಂಬ ಸಾರವಾದ ದಿವ್ಯನಾಮ 2 ಧನ್ಯ ಧನ್ಯನಾಗೊ ಮನವೆ ನೆನೆದು ಪತಿತಪಾವನನಾಮ ಧನ್ಯಗುರುವಿನ ದಿವ್ಯನಾಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆನೆವೆನನುದಿನ ನೀಲನೀರದವರ್ಣನ ಗುಣರನ್ನನಮುನಿಜನಪ್ರಿಯ ಮುದ್ದು ಉಡುಪಿನ ರಂಗನ ದಯಾಪಾಂಗನ ಪ. ದೇವಕೀ ಜಠÀರೋದಯಾಂಬುಧಿಚಂದ್ರನ ಸುಖಸಾಂದ್ರನಗೋವ್ರಜಕೆ ಘನ ಯಮುನೆಯನು ದಾಟಿ ಬಂದನ ಅಲ್ಲಿ ನಿಂದನಮಾವ ಕಳುಹಿದ ಮಾಯಶಠವಿಯ ಕೊಂದನ ಚಿದಾನಂದನ ದೇವರಿಪು ದೈತ್ಯೇಂದ್ರ ಶಕಟನ ಒದ್ದನ ಶ್ರುತಿಸಿದ್ಧನ 1 ಗೋಕುಲದ ಗೋಪಿಯರ ಸಂಚಿತ್ತ ಚೋರನ ಬಹು ಧೀರನ ಅ-ನೇಕ ನಾರಿಯರ್ವಸನವನು ಕದ್ದೊಯ್ದನ ಪುರಗಾಯ್ದನನಾಕಿಯರ ನೋಯಿಪಧೇನುಕ ವತ್ಸವಿಘಾತ ವಿಖ್ಯಾತನಕಾಕುಮತಿ ಕಾಳಿಂಗನ ಫಣ ತುಳಿದನ ಆವಗೊಲಿದನ 2 ಕರ ಪಿಡಿದನ ಸುಧೆಗುಡಿದನಬಾಲ ಭಾಮೆಯರೊಡನೆ ಜಲಕ್ರೀಡೆಗಿಳಿದನ ಅಲ್ಲಿ ನಲಿದನಲೀಲೆಯಲಿ ಲಲನೆಯರಿಗಿಷ್ಟವ ಕೊಟ್ಟನ ಸಂತುಷ್ಟನ 3 ಕ್ರೂರ ಬಕ ಕೇಶಿಗಳನೆಲ್ಲ ಸೀಳ್ದನ ಸುರರಾಳ್ದನ ಅಕ್ರೂರ ಕರೆಯಲು ಹರುಷದಿಂದಲಿ ಬಂದನ ಸುರವಂದ್ಯನಸಾರಿ ಕುಬ್ಜೆಗೆ ಭೂರಿಸಂತಸವಿತ್ತನ ಅತಿಶಕ್ತನವಾರಣವ ಒದ್ದು ಕೆಡಹಿದಾಪ್ರತಿಮಲ್ಲನ ಅತಿಚೆಲ್ವನ4 ಸುಲಭದಿಂದಲಿ ಶಿವನ ಧನುವನು ಮುರಿದನ ನೆರೆಮೆರೆದನಮಲೆತÀ ಮಲ್ಲರ ಮಡುಹಿರಂಗದಿ ನಿಂತನ ಜಯವಂತನಖಳಕುಲಾಗ್ರಣಿ ಕಂಸನೆಂಬನ ಹೊಡೆದನ ಹುಡಿಗೆಡೆದನಬಲದಿ ತಾಯಿತಂದೆ ಬಂಧನ ಕಡಿದನ ಕೀರ್ತಿ ಪಡೆದನ 5 ಭುವನ ಪಟ್ಟವನುಗ್ರಸೇನಗೆ ಕೊಟ್ಟನ ಅತಿ ದಿಟ್ಟನಯುವತಿಯರಿಗುದ್ಧವನ ಕಳುಹಿದ ಜಾಣನ ಸುಪ್ರವೀಣನವಿವಿಧ ವಿದ್ಯಾ ಕಲೆಗಳನ್ನೆಲ್ಲ ಅರಿತನ ಶುಭಚರಿತನ ಜವನ ಶಿಕ್ಷಿಸಿ ದ್ವಿಜನ ಕಂದನ ತಂದನ ಆನಂದನ 6 ಕುಮತಿ ಖಳ ಮಾಗಧನ ಯುದ್ಧದಿ ಗೆದ್ದನ ಅನವದ್ಯನದ್ಯುಮಣಿಸಮ ದ್ವಾರಕೆಯ ರಚಿಸಿದುದಾರನ ಗಂಭೀರನಸುಮತಿ ಮುಚುಕುಂದನೊದ್ದ ಯವನನ ಸುಟ್ಟನ ಅತಿದಿಟ್ಟನವಿಮಲ ಸುಚರಿತ್ರಾಷ್ಟಮಹಿಷಿಯರಾಳ್ದನ ನೆರೆಬಾಳ್ದನ 7 ಮುರನರಕ ಮುಖ್ಯರನು ಚಕ್ರದಿ ತರಿದನ ಕರಿವರದನಸುರತರುವ ಸತಿಗಾಗಿ ತಂದ ಸಮರ್ಥನÀ ಜಗತ್ಕರ್ತನದುರುಳ ಶಿಶುಪಾಲಾದಿ ದೈತ್ಯ ಸಂಹಾರನ ಬಹು ಶೂರನಕುರುಕುಲಕೆ ಲಯವಿತ್ತ ಪಾಂಡವಪ್ರೀಯನ ಕವಿಗೇಯನ 8 ಸಂತತವೀ ಸಾರÀ ಕತೆಯನು ಕೇಳ್ವರ ನೆರೆ ಬಾಳ್ವರಕಂತುಪಿತ ಕಾರುಣ್ಯದಿಂದಲಿ ಹೊರೆವನು ಸುಖಗರೆವನುಇಂತು ಇಳೆಯ ಸುಜನರ ಸಲಹುವ ಕಾಂತನ ಸಿರಿವಂತನಪಂಥವುಳ್ಳ ಪ್ರಸನ್ನ ಹಯವದನ್ನನಮುನಿಮಾನ್ಯನ 9
--------------
ವಾದಿರಾಜ
ನೊಂದು ಸಂಸಾರದೊಳಗೊಂದಿಸುವೆನೋ ಇಂದು ಮಾಧವ ಯಾದವ ಪ ಕರುಣಬಾರದೆ ನಿನಗೆ ಅಕಟಕಟ ಅಕಟಕಟ ಶರಣ ನಾ ನಿನಗಲ್ಲವೇ ಸ್ವಾಮಿ ನಿನ್ನ ಮೊರೆಹೊಕ್ಕೆ ಸರ್ವಾಂತರ್ಯಾಮಿ-ಎನ್ನ ಎರವು ಮಾಡುವರೇನೋ ಪ್ರೇಮಿ-ಇನ್ನು ಪರಿಹರಿಸು ಸಂಚಿತಾಗಾಮಿ-ಇದೇ ಸರಿಯೇನೊ ಜಗದೊಳಗೆ ಭಕುತವತ್ಸಲನೆಂಬ ಬಿರುದು ಪೊಳ್ಳಾಗದೇನೊ ನಿರುತ ಖ್ಯಾತ1 ಸತತ ಸುಖವುಳ್ಳರೆ ಬಾಯ್ದೆರೆದು ಪಲ್ಗಿರಿದು ನುತಿಸಿ ಬೇಡಿಕೊಂಬೆನೇ ನಿನ್ನ- ಮುಂದೆ ಗತಿಯ ಕಾಣದಲೆ ಚಾಲ್ವರಿದೆ ಭೇದ- ಮತಿ ಕೊಡದೆ ನೋಡುವುದು ಬರಿದೆ-ಸರ್ವ ಕ್ಷಿತಿಯೊಳಗೆ ನೀನೆಂದು ಅರಿದೆ-ವರ- ತತುವ ನಿಯ್ಯಾಮಕರ ಬಳಿ ಪಿಡಿದು ನಿನ್ನಂಘ್ರಿ ಶತಪತ್ರ ತೋರಿಸೈಯ್ಯಾ ಜೀಯಾ 2 ಶೃತಿಶಾಸ್ತ್ರ ಪೌರಾಣ ಭಾರತ ರಾಮಾಯಣ ಇತಿಹಾಸ ಪಾಂಚರಾತ್ರ ನಿಗಮ-ನಿನ್ನ ತುತಿಪ ಭಕುತರಿಗೆ ತಲೆಬಾಗಿ-ಕೊಂಡು ಪ್ರತಿದಿವಸದಲಿ ಚೆನ್ನಾಗಿ-ವಲಿದು ಅತಿಶಯವ ಕೊಡುತ ಲೇಸಾಗಿ-ವಿಘ್ನ ತತಿಕಳೆದು ನೀ ಬಂದು ಸಾರೆ ಬೆರಗಾಗುತಿದೆ ಪತಿತಿ ಪಾವನ ಮೋಹನ-ಚೆನ್ನ3 ತಡವ್ಯಾಕೆ ಗುಣಕಾಲ ಕರ್ಮದೇಶಗಳೆಲ್ಲ ವಡೆಯ ಎನ್ನಾಧೀನವೇ ಪೇಳೊ-ದು:ಖ ಬಿಡಿಸುವುದು ನಿನಗುಚಿತವಲ್ಲ-ಪಾಟು ಸಿರಿ ಲಕುಮಿನಲ್ಲ-ಒಂದು ನುಡಿವೆ ನಾನಾಂತರ್ಯ ಸೊಲ್ಲ-ಇಂತು ಕಡೆಮಾಡಿ ನೋಡದಿರು ದಿವಸ ಹಿಂದಾಗುತಿದೆ ಬಡವರಾಧಾರಿ ಕರುಣೀ-ದಾನಿ4 ಧ್ರುವನು ನಭದೊಳು ಇಲ್ಲಿ ರಾವಣಾನುಜ ಅಧೋ ಭುವನದಲಿ ಬಲಿರಾಯನ ನೋಡಿ, ನಾನು ತವಪಾದ ಗತಿಯೆಂದು ಬಂದೆ-ಮಹಾ ಭವಣೆ ಬಟ್ಟೆನೊ ಕೇಳು ಹಿಂದೆ-ಜಗದಿ ತ್ರಿವಿಧ ತಾಪಗಳಿಂದ ನೊಂದೆ-ಈ ಅವಸರಕೆ ಬಂದೊದಗಿ ನಿನ್ನ ನಾಮಾಮೃತದ ಸವಿದೋರೊ ದ್ವಾರಾವತಿಯ-ಜೀಯ 5 ಅಂಧಕೂಪದಲಿ ಬಿದ್ದವನ ನೋಡಿ ನಿನಗೆ ಚ ಕ್ಕಂದವಾಗಿದೆಯೊ ಕಾಣೆ-ನಾನು ಸಂದೇಹ ದ್ವೇಷದವನಲ್ಲ-ಇದು ಎಂದೆಂದಿಗೂ ಪುಸಿಯು ಅಲ್ಲ-ಹೃದಯ- ಮಂದಿರದೊಳು ಬಲ್ಲೆಯೆಲ್ಲ-ಸ್ವಾಮಿ ನೊಂದು ಕೂಗಿದರೆ ಎಳೆಗಂದಿಯೆಂಬಾ ಮಾತು ಇಂದು ಎತ್ತಲಿ ಪೋಯಿತೋ ತಾತ-ನೀತ 6 ಗುಣವಂತ ಬಲವಂತ ಜಯವಂತ ಸಿರಿವಂತ ಘನವಂತ ಧೈರ್ಯವಂತ ಶ್ರೀಕಾಂತ-ಎನ್ನ ಮನದ ದುಮ್ಮಾನವನೆ ಬಿಡಿಸೊ-ನಿನ್ನ ಅನವರತ ನಾಮವನು ನುಡಿಸೊ-ಮಧ್ವ ಮುನಿ ಕರುಣ ಕವಚವನು ತೊಡಿಸೊ-ಇದೇ ಜನುಮ ಜನುಮಕೆ ಬೇಡಿಕೊಂಬೆ-ಶರಣೆಂಬೆ ಪ್ರಣತ ಹೃದಯಾಬ್ಜ ತುಂಬೆ-ಕಾಂಬೆ 7 ಮಾನಸ್ನಾನವನುಂಡು ಮತಿಗೆಟ್ಟ ಪೂರ್ಣ ವಿ ಜ್ಞಾನಮಯನೆ ನಿನ್ನ ಮರೆದೆ-ಕರ್ಮ ಪ್ರಾಣೇಂದ್ರಿಯಂಗಳು ನಿನ್ನ ವಶವೊ-ಇಂಥ ಜಾಣತನ ಬಹಳ ಸಂತಸವೊ-ಹೀಗೆ ಮಾಣದಲೆ ಇಪ್ಪ ಸಾಹಸವೋ ಚನ್ನ ಜ್ಞಾನ ಭಕುತಿ ವಿರಕುತಿ ಕೊಟ್ಟು ನಿನ್ನವರೊಳಾನಂದದಲಿ ನಿಲ್ಲಿಸೈಯ್ಯ ಜೀಯ 8 ಶಂಖ ಚಕ್ರ ವರಾಭಯ ಹಸ್ತದಲಿ ನಿಂದ ವೆಂಕಟಾಚಲ ನಿವಾಸ ಶ್ರೀಶ-ನಿನ್ನ ಕಿಂಕರನ ಕಿಂಕರನೊ ನಾನು-ಅಕ- ಳಂಕ ಮನುಜನ ಮಾಡೊ ನೀನು-ಭವ ಸಂಕಟವ ಕಳೆಯಾ ಸುರಧೇನು-ಬೊಮ್ಮ ವಿನುತ ವಿಜಯವಿಠ್ಠಲ ಹರಿ- ಣಾಂಕ ಸೌವರ್ಣ ಪೂರ್ಣ ಸಂಪೂರ್ಣ 9
--------------
ವಿಜಯದಾಸ
ನೋಡಬಾರದೆ ಹರಿಯ ಮನವೆ ಧ್ರುವ ಸುಲಲಿತವಾಗಿ ಸುಲ್ಲಭವಾಗ್ಹಾನೆ ನೆಲೆ ನಿಭವಾಗಿ ತನ್ನೊಳು ತುಂಬ್ಹಾನೆ 1 ಹೃದಯಕಮಲದೊಳು (ಕರೆಗುಡು)ತ್ಹಾನೆ ಸದೋದಿತ ಸವಿಸುಖ ಬೀರುತಲ್ಹಾನೆ 2 ಹಲವು ಪರಿಯಲಿ ತಾ ಸಲಹುತಲ್ಹಾನೆ ಕುಲಕೋಟಿ ಬಂಧು ಬಳಗಾಗ್ಹಾನೆ 3 ಕಣ್ಣಿನ ಮುಂದೆವೆ ತಾನೆ ಕಟ್ಹಾನೆ ಬಣ್ಣ ಬಣ್ಣದಲಿ ತಾ ಭಾಸುತಲ್ಹಾನೆ 4 ಸ್ವಹಿತ ಸುಖದ ಸುಮೂರುತಿ ಆಗ್ಹಾನೆ ಮಹಿಪತಿಯೊಳು ಶ್ರೀಪತಿ ಆಗ್ಹಾನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿ ಶ್ರೀ ಹರಿಪೂಜಿ ಮಾಡುದು ಬಿಡಿ ಮನಕೃತ ವಾಜಿ ಧ್ರುವ ಮಂಗಳಕರಸುಖ ಕಂಗಳಗಿದಿರಿಡುತದನೇಕ ಮುಂಸಗುಡಿಯಲಿ ಮೂಡಿ ರಂಗದೋರುವ ಘನಕೌತುಕ 1 ತಾಳ ಮೃದಂಗ ಘನ ಭೇರಿ ಫಳಗುಡುತದೆ ಪರೋಪರಿ ತಿಳಿದವನಧಿಕಾರಿ ಕೇಳಲ್ಹೋಗುದು ಭವಭಯ ಹಾರಿ 2 ಹೇಳಲೆನ್ನಳವಲ್ಲ ಹೊಳೆವುತಿಹುದು ಮೂಜಗವೆಲ್ಲ ಕೇಳಿ ಸವಿಯ ಸೊಲ್ಲ ತಿಳಿದ ಮಹಿಮ ತಾನೆ ಬಲ್ಲ 3 ಅಜಪ ಸುಜಪ ಮಂತ್ರ ರಾಜಿಸುತಿಹುದು ಬಾಹ್ಯಾಂತ್ರ ತ್ರಿಜಗ ಮಾಡುವ ಪವಿತ್ರ ಸುಜನ ನೋಡುವ ಸುಚರಿತ್ರ 4 ಸ್ವಹಿತ ಸುಖದ ಸಾರ ಶ್ರೀಹರಿಪೂಜಿ ನಿರಂತರ ಮಹಿಪತಿ ಮನೋಹರ ಸಾಹ್ಯ ಸಕಲಕಿದೆ ಸಹಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿದ್ಯಾ ಮನವೇ ಪ. ನಾರಿಯರ ಮನವಾ ಸೆಳೆದು ಊದುತಲಿರುವನು ಅ.ಪ. ಇಂದು ಈ ಗೋವಿನ ಆನಂದವ ನೋಡಿದ್ಯಾ ಇಂದಿರೇಶನ ಪಾದಾಮೃತ ಸವಿಯುತಿರುವುದು 1 ಕಾಯ ಜನಕನ ಕೊಳಲ ಧ್ವನಿಯು ಕೇಳುತಲಿರುವುದು 2 ರಮಾವಲ್ಲಭ ವಿಠಲನು ಮುರಳಿಸ್ವರದಿಂದ ಮಾರ ಜನಕ ರಾಗದಿಂದ ಊದುತಲಿರುವನು 3
--------------
ಸರಸಾಬಾಯಿ
ನೋಡಿದ್ರ್ಯಾ ಕಂಡಿದ್ರ್ಯಾ ಶ್ರೀಸುಬ್ಬರಾಯ ದಾಸರ್ಯರಾ ಪ ಕಾಡೂವ ಭವದ ದೂರೋಡಿಪ ಮಾರ್ಗದಜಾಡನೆ ತಿಳಿಸುವಾಗಾಢ ಮಹಿಮರ ಅ.ಪ. ಪುರಂದರ | ದಾಸರ ಪೀಳಿಗೆ ಶರಧಿಗಾಶಶಿಗೊಪ್ಪುವ ದಾಸವರ್ಯರನ 1 ಮುದ್ದು ಮೋಹನ ಗುರು | ಮುದ್ದು ಶಿಷ್ಯರು ತಂದೆಮುದ್ದು ಮೋಹನರು | ಪ್ರಸಿದ್ಧರಾಗಿಹರಾ 2 ಪರ | ಮಾರ್ಥ ಚಂದಿರ ಹರಿಕೀರ್ತನೆ ಗೈವ ಸ | ತ್ಪಂಥ ಬೀರಿದರಾ 3 ಅಂಕಿತರಹಿತ ನಿ | ಷಿದ್ಧ ದೇಹವು ಎಂದುಅಂಕನಗೈಧರಿ | ಲೆಂಕತನವ ಬೀರ್ದರ 4 ಸಹಸ್ರಾರು ಅಂಕಿತ | ವಿಹಿತೋಪದೇಶ ಸ-ನ್ನಿಹಿತರ ಗೈದೂ | ದ್ಧರಿಸಿದ ಗುರುಗಳ5 | ದಾಸಕೂಟಾಬ್ಧಿ ತಾ | ರೇಶನ ಪರಿಯಲಿಭಾಸಿಸಿ ಶರಣರ | ಪೋಷಿಸಿದವರನು 6 ಸಾರ ಶಾಸ್ತ್ರದ ಸವಿ | ಆರು ಮೊಗನ ಪರಿಆರು ಬಗೇಯಲಿ | ಬೀರಿದ ವರನ 7 ಸುಂದರೇಶ ಪ್ರಾಣ | ಅಂದ ಪ್ರತೀಕವಅಂದೇಭ ಗಿರಿಯಲ್ಲಿ | ಚಂದದಿ ನಿಲಿಸಿದರ 8 ಪ್ರಥಮ ಮಾಸವು ವರ | ಸಿತ ನವಮಿ ಮಧ್ಯಾಹ್ನಪೃಥುವಿ ಸಂಬಂಧವ | ಮತಿಯಿಂದ ತ್ಯಜಿಸಿದರ 9 ಇಂದು ಕರಿಗಿರಿಲಿಹರ 10 ಗೋವಿದಾಂಪತಿ ಗುರು ಗೋವಿಂದ ವಿಠಲ ಪರಾವರೇಶನು ಎಂದು | ಓವಿ ತುತಿಸುತ್ತಿಹರ11
--------------
ಗುರುಗೋವಿಂದವಿಠಲರು
ನೋಡುವ ಬನ್ನಿ ಸ್ವಾಮಿಯ ಅಂತರ್ಯಾಮಿಯ ಭಕ್ತಿಯ ದೃಢಯುಕ್ತಿಯ 1 ದೇವದೇವನ ಪೂರ್ಣ ನೋಡುವ ಸೇವೆಮಾಡುವ ಸರ್ವದಾ ಕೊಂಡಾಡುವ ನವವಿಧ ಭಕ್ತಿಯ ಮಾಡುವ ಭಾವವಿಡುವ 2 ತನು ಮನಧನ ಅರ್ಪಿಸಿ ಬಿಡುವ ಮನಗೂಡುವ ಪ್ರಾಣಾಯಾಮ ಮಾಡುವ ಅನುದಿನ ಸಾಧಿಸಿ ನೋಡುವ ಘನಗೂಡುವ 3 ಇಡಾಪಿಂಗಳ ಮಧ್ಯ ನೋಡುವ ನಡೆವಿಡುವ ನಡುಹಾದಿಗೂಡುವ ಒಡನೆ ಸ್ವಸುಖ ಪಡೆವ ಗೂಢ ನೋಡುವ 4 ಸವಿಸುಖಸಾರ ಸುರುತದೆ ದ್ರವಿಸುತದೆ ಠವಠವಿಸುತದೆ ರವಿಕೋಟಿಪ್ರಭೆ ಭಾಸುತದೆ ಆವಾಗಲ್ಯದೆ 5 ಏನೆಂದನಬೇಕನುಭವ ಖೂನದೋರುವ ಘನ ಮಳೆಗರೆವ ಸ್ವಾನುಭವದಲಿ ಸೇವಿಸುವ ಅನುಸರಿಸುವ 6 ಜಾಗಿಸುತ್ತದೆ ವಸ್ತುಮಯ ಬಗೆಬಗೆಯ ಯೋಗ ಇದೆ ನಿಶ್ಚಯ ಸುಗಮಸಾಧನ ಮಹಿಪತಿಯ ಸುಜ್ಞಾನೋದಯ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು