ಒಟ್ಟು 556 ಕಡೆಗಳಲ್ಲಿ , 77 ದಾಸರು , 506 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭ್ರಷ್ಟ ಸಂಕಲ್ಪನ್ನ | ಮಾಡದಿರೆಲೋ |ಇಷ್ಟ ದೈವವೆ ಎನ್ನ | ಕಷ್ಟದೊಳು ಹಾಕಿ ಪ ಖಗ ವರಧ್ವಜ ದಾಸಮಿಗಿಲಾಗಿ ಪೇಳ್ವೆನೆಂದ | ವಘಡಿಸೀ ನುಡಿಸೀಹಗರಣದಿ ಹರಿದಿನದಿ | ಸುಗುಣ ತಾ ಬರದಿರಲುಖಗಗಮನ ನಿನ್ವಚನ | ಲಘುವಾಗಲಿಲ್ಲೇ 1 ಅಪ್ಪ ವಿಜಯಾರ್ಯ ಪದ | ವಪ್ಪಿ ಪೂಜಿಸಿ ಪೋಗಿಚಿಪ್ಪಗಿರಿಯಲಿ ನೋಡೆ | ಒಪ್ಪಿದವ ಬರದೇಅಪ್ಪಾರ ಮನನೊಂದು | ಅರ್ಪಿಸಿಹೆ ನಿನ್ನಡಿಗೆಕೃಪ್ಪೆಯಿಂ ಬರಮಾಡೊ | ಗೊಪ್ಪ ಶಿಷ್ಯನ್ನಾ 2 ಮಾನಾಪಮಾನಗಳು | ಯೇನೊಂದು ನಿನ್ನೊಳಗೊಮಾನನಿಧಿಯೆ ಕೇಳೊ | ಮೌನಿ ವರದಾದೀನ ಜನಪಾಲ ಗುರು | ಗೋವಿಂದ ವಿಠ್ಠಲನೆಮಾನ್ಯ ಮಾನದನೆಂಬ | ಸೂನೃತವ ಸಲಿಸೋ 3
--------------
ಗುರುಗೋವಿಂದವಿಠಲರು
ಮಂಗಲಂ ಜಯ ಶುಭಮಂಗಲಂ ಪ. ಶ್ರೀಗೌರೀಸುಕುಮಾರನಿಗೆ ಯೋಗಿವರೇಣ್ಯ ಶುಭಾಕರಗೆ ರಾಗ ಲೋಭ ರಹಿತಗೆ ರಜತೇಶಗೆ ಭಾಗೀರಥಿಸುತ ಭವಹರಗೆ 1 ಪಾಶಾಂಕುಶ ವಿವಿಧಾಯುಧಗೆ ಪಾಶದರಾರ್ಚಿತ ಪಾವನಗೆ ವಾಸರಮಣಿಶತಭಾಸಗೆ ಈಶಗೆ ಭಾಸುರ ತನಕ ವಿಭೂಷಣನಿಗೆ2 ಶೀಲ ಸುಗುಣಗಣ ವಾರಿಧಿಗೆ ನೀಲೇಂದೀವರಲೋಚನೆಗೆ ಲೋಲ ಲಕ್ಷ್ಮೀನಾರಾಯಣ ರೂಪಗೆ ಶಾಲಿ ಪುರೇಶ ಷಡಾನನಗೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಂಗಲಂ ಮಂಗಲಂ ಕುಮಾರಗೆ ಮಂಗಲಂ ಪ ವಾಹನ ಗುಣಸಾರ ಕುಮಾರಗೆ1 ಅಂಬರ ಮಣಿ ಸುಗುಣಾಂಬುಧಿ ಗುಹನಿಗೆ 2 ಕೋವಿದನಿಗೆ ದಾಸ ಜನರ ರಕ್ಷಕಗೇ 3
--------------
ಬೆಳ್ಳೆ ದಾಸಪ್ಪಯ್ಯ
ಮಂಗಳಂ ದಯಾನಿಧೆ ಮಂಗಳಂ ಗುಣನಿಧೆ ಪ ಶ್ರೀ ರಂಜಿತಾಂಗನೆ ಪಾರಂಗ ತಾಖಿಲ ಸುರೇಂದ್ರ ಸುನ್ನುತನೆ 1 ನಿಖಿಲಸುರದಾಮ ಸುಗುಣನೆ2 ನಿರಂಜನ ನಿರ್ಜಿತ ಸುರವೈರಿಹರೆ 3 ಧೇನುಪುರಾಧಿಪ ಸೂನಾಸ್ಯವಂದಿತ ಗಾನವಿನೋದ ಶ್ರೀಹರಿಯೆ 4
--------------
ಬೇಟೆರಾಯ ದೀಕ್ಷಿತರು
ಮಂಗಳ ಪದ್ಯಗಳು ಇಂದಿರಾ ಮನೋವಿಹಾರಿ ಮಂಗಳಂ ಸಕಲೋದ್ಧಾರ ಕಾರ ನರಹರೆ ಪ ಪಾಪಹಾರಿ ದೀಪಸುಜನ ತಾಪಹಾರಕ ವನಮಾಲಾಧಾರಿ ಶ್ರೀಹರೀ 1 ವಿಮಲ ಸುಗುಣ ಕಮಲನೇತ್ರ ಪಾಲಿಸೈ ಹರೆ ಸೇವ್ಯವಿನುತ ಭೂಪತೆ 2 ದುಷ್ಟ ಹೃದಯ ದೂರಭಾವ ಕಷ್ಟನಾಶಕ ವಿಹಿತ ಪಾಲ ಕಮಲಲೋಚನ 3
--------------
ಬೇಟೆರಾಯ ದೀಕ್ಷಿತರು
ಮಂಗಳಂ ಮಾರುತಿಯೆ ಸತತಮಸ್ತು ಮಂಗಳಂ ಶ್ರೀಮತಿಯೆ ಶರಣರಕ್ಷಕ ರಾಮದೂತನೆ ಪ ಭಾರ ನಿವೃತ ದೇವ 1 ಕಾನನಸಂಪ್ರಿಯ ಮಾನಿರಾಮದೂತ 2 ಮೃತ್ಯು ಪಶುಪತಿರೂಪನೆ 3 ಶ್ರೀ ಹನುಮಂತ ಜ್ಞಾನಿ ಸುಗುಣವಂತ 4
--------------
ಬೇಟೆರಾಯ ದೀಕ್ಷಿತರು
ಮಂಗಳಂ ಶ್ರೀ ರಾಮಚಂದ್ರನಿಗೆ ಕಂಗೊಳಿಪ ದೇವಗೆ ಪ. ಬಿಟ್ಟು ಪಟ್ಟ ತೊಟ್ಟು ವ್ರತವ ಮೆಟ್ಟಿ ವನವನೂ ದುಷ್ಟರನ್ನು ಕುಟ್ಟಿ ಬಂದು ಪಟ್ಟವಾಳ್ದ ಶ್ರೇಷ್ಠ ಮೂರ್ತಿಗೆ 1 ಸೀತೆ ಅನುಜರೊಡನೆ ವೆರಸಿ ವಾತತನಯನ ಪ್ರೀತಿ ಸೇವೆ ಕೊಳುತ ರಾಜ್ಯ ನೀತಿಯಿಂದ ನಡೆಸಿದವಗೆ 2 ಶ್ರೇಷ್ಠ ಭಕ್ತರೊಡನೆ ವೆರಸಿ ದಿಟ್ಟತನದಲಿ ಪಟ್ಟವಾಳಿ ಪ್ರಜರ ಪೊರೆದು ಇಷ್ಟ ಸಲಿಸಿ ಮುದವಿತ್ತವಗೆ 3 ರಾಮನಾಮ ಪಠಿಪ ಜನರ ಕಾಮಿತಾರ್ಥವ ಪ್ರೇಮದಿಂದ ಕೊಟ್ಟು ಪೊರೆವ ಸ್ವಾಮಿ ಸುಗುಣಧಾಮ ಹರಿಗೆ4 ಭೂಪರೊಳಗೆ ಶ್ರೇಷ್ಠ ರಾಮರೂಪ ಮಂಗಳಂಗೋಪಾಲಕೃಷ್ಣವಿಠ್ಠಲಗೆ ದೀಪದಾರತೀಯ ಬೆಳಗಿ 5
--------------
ಅಂಬಾಬಾಯಿ
ಮಂಗಳಂ ಸುಗುಣಾಭಿರಾಮಗೆ ಮಂಗಳಂ ಶ್ರೀರಾಮಗೆ ಪ ಮಂಗಳಂ ಲೋಕಾಭಿರಾಮಗೆ ಮಂಗಳಂ ಗುಣಧಾಮಗೆ ಅ.ಪ. ದಶರಥನ ಸುತನಾಗಿ ಮುನಿವರ ಕುಶಿಕಯಜ್ಞವ ಪಾಲಿಸಿ ಶಶಿಮುಖಿಯ ಸೀತೆಯನು ಒಲಿಸಿದ ದಿಶಿಸುಭಾಸುರ ನಾಮಗೆ 1 ತಂದೆಯಾಜÉ್ಞಯ ಪೊಂದುತಾಗಲೆ ಬಂದು ವನದಲಿ ನೆಲಸಿದ ಛಂದದಿಂದಲಿ ಕಂದಭರತನಿಗಂದು ಪಾದುಕೆ ಇತ್ತಗೆ 2 ದಂಡಕಾವನದಲ್ಲಿ ನೆಲಸುತ ಖಂಡಿಸುತ ರಾಕ್ಷಸರನು ಭಂಡರಾವಣ ಹರಿಸೆ ಸೀತೆಯ ಚಂಡ ಹನುಮನ ಕಂಡಗೆ 3 ವೀರ ವಾಲಿಯ ಕೊಂದು ರಾಜ್ಯವ ಸೂರ್ಯಸುತನಿಗೆ ಪಾಲಿಸಿ ವಾರಿಜಾಕ್ಷಿಯ ಪುಡುಕಲೋಸುಗ ವೀರರನು ಕಳುಹಿಸಿದಗೆ 4 ಮಾರುತಾತ್ಮಜನಿಂದ ಸೀತಾ ನೀರಜಾಕ್ಷಿಯ ವಾರ್ತೆಯಂ ಸಾರಿ ಮದನು ಪೊಂದಿ ದಯದಿಂ ವೀರ ಕಪಿವರಗೊಲಿದಗೆ 5 ಧೀರರಾವಣನನ್ನು ಕೊಂದು ನಾರಿ ಸೀತೆಯನೊಲಿಸುತ ಸಾರಿ ಸಾಕೇತವನು ಮುದದಿಂ ವೀರ ಪಟ್ಟವನಾಳ್ದಗೆ 6 ಜಾನಕೀ ಲಕ್ಷ್ಮೀ ಸಮೇತಗೆ ಮೌನಿವರಗಣ ಸೇವ್ಯಗೆ ಮಾನವಾಂಬುಧಿ ಪೂರ್ಣ ಚಂದ್ರಗೆ ಧೇನುಪುರ ಶ್ರೀರಾಮಗೆ 7
--------------
ಬೇಟೆರಾಯ ದೀಕ್ಷಿತರು
ಮಂಗಳಾರತಿ ಮಾಡಿರೇ ಶೃಂಗಾರದ ಸಿರಿಗೇ ಪ ಮಂಗಳ ಮುಖಪದದಿಂದ ಪಾಡುತಲೆಪೊಂಗೊಳಲೂದುವನಂಗ ಜನಕಗೇ ಅ.ಪ. ವೈರಿ ಭೃಂಗ ಕೂಪ ಜಂಗುಳೇಂದ್ರಯದೋಪಾಂಗ ವೇದ ಮದಗಂಗ ಜನಕ ವೃಜಭಂಗ ಮಾತುಳನ ಮುಂಗುರುಳ್ಹಿಡಿದೆಳೆದನು ಸಂಗರದೊಳಗೇ 1 ಮಣಿ ಕರ್ಣ ನಾಸಿಕ ಧರ ಉಪವಳ ಗೋಕುಲಧರಗಿಳಿಗೇ 2 ವಿನುತ ನಾರದ ಮುನಿನುತಗಂಧರ್ವರಪ್ಸರದಿಂದ ನರ್ತನಾದಿಂದ ಸಂಸ್ಕøತಮಂದ ಸುಗುಣಸಿಂಧು ಪಾಂಡವರ ಗೋ-ವಿಂದ ಸಚ್ಚಿದಾನಂದಮೂರ್ತಿ ಮುಚುಕುಂದ ವರದಗೇ 3
--------------
ಇಂದಿರೇಶರು
ಮಗಳೆ ಜಾನಕಿ ನಿನ್ನ ಸುಗುಣಸನ್ಮೋಹನ್ನ ಖಗಕುಲರನ್ನ ಮನೋರಮಣ ಮನೋರಮಣ ಕಾಂತ ಶ್ರೀರಾಮನ ಅಗಲದಿರು ಕಾಣೆ ಮರಿಯಾನೆ ಶೋಭಾನೆ 1 ಪತಿಯೇಳ್ವ ಮೊದಲು ಜಾಗ್ರತೆಯಾಗಿ ಯೆದ್ದು ಗೃಹ- ಕೃತ್ಯಕೆಲ್ಲಕ್ಕನುಸರಿಸಿ ಅನುಸರಿಸಿ ನಡೆ ನೀ ಮಗಳೆ ಹಿತವಾಗಿ ಬಾಳು ಪತಿಯೊಳು ಶೋಭಾನೆ 2 ಗಂಡನ ಮಾತಿಗೆ ದುರ್ಚಂಡಿಸದಿರು ಮಗಳೆ ಗಂಡನುಣ್ಣದ ಮೊದಲು ನೀ ಮೊದಲು ನೀನುಣ್ಣದಿರು ಪುಂಡರೀಕಾಕ್ಷಿ ಪುಣ್ಯರಾಶಿ ಶೋಭಾನೆ 3 ಮುಗುಳು ನಗೆಯ ಬೀರು ಜಗಳವ ಮಾಡದಿರು ಜಗದೊಳು ಕೀರ್ತಿಯುತಳಾಗು ಯುತಳಾಗು ಬಂಧುಗಳಲಿ ನೀ ಹಗೆಯ ಮಾಡದಿರು ಕೃಪೆದೋರು ಶೋಭಾನೆ 4 ಪಾದ ಹೊದ್ದಿ ಸೇವೆಯ ಮಾಡು ಸುದ್ಧ ಭಾವದೊಳು ನಡೆ ಮಗಳೆ ನಡೆ ಮಗಳೆ ನಿತ್ಯಸುಮಂಗಲೆ ಮುದ್ದಾಗು ಬಂಧು ಬಳಗಕ್ಕೆ ಶೋಭಾನೆ 5 ಅತ್ತೆಯ ಮಾತಿಗೆ ಪ್ರತ್ಯುತ್ತರ ಕೊಡದಿರು ಪ್ರತ್ಯೊಬ್ಬಳೆ ಸ್ಥಳದಿ ನಿಲದಿರು ನಿಲದಿರು ನೀರಜಗಂಧಿ ಸತ್ಯ ವಚನವನೆ ಸವಿಮಾಡು ಶೋಭಾನೆ 6 ಮೈದುನರನ್ನು ತನ್ನ ಮಕ್ಕಳೆಂಬಂತೆ ನೋಡು ಸಾಧುಭಾವದದಲಿ ನಡೆ ಮಗಳೆ ನಡೆ ಮಗಳೆ ಪಂಕ್ತಿಯಲಿ ಭೇದ ಮಾಡದಿರು ಕೃಪೆದೋರು ಶೋಭಾನೆ 7 ಕಂಡರೆ ಶಿಷ್ಟರ ದಂಡ ನಮಸ್ಕರಿಸು ಹಿಂಡು ದಾಸಿಯರ ದಣಿಸದಿರು ದಣಿಸದಿರು ಉತ್ತಮಳೆಂದು ಭೂ- ಮಂಡಲದಿ ಕೀರ್ತಿಪಡು ಪೂರ್ತಿ ಶೋಭಾನೆ8 ಚಂಡಿತನವ ನಿನ್ನ ಗಂಡನೊಳ್ಮಾಡದಿರು ಗಂಡಸರ ಮುಂದೆ ಸುಳಿಯದಿರು ಸುಳಿಯದಿರು ಸಂತತ ಸೌಖ್ಯ- ಗೊಂಡು ಬಾಳಮ್ಮ ಸೀತಾಭಾಮಾ ಶೋಭಾನೆ 9 ಕ್ಷಮೆಯಲ್ಲಿ ಧಾತ್ರಿಯುಂಬ ಕ್ರಮದಲ್ಲಿ ಮಾತೆ ಸುರತ ಸಮಯದಿ ವೇಶ್ಯಾ ತರುಣಿಯಳ ತರುಣಿಯಳ ತೆರದಿ ರಾಮನ ಸತಿಯಂ- ತೆ ಮಾಡವ್ವ ಸುಖಂ ಜೀವಾ ಶೋಭಾನೆ 10 ಲಕ್ಷ್ಮೀನಾರಾಯಣರಂತೆ ಸೀತಾರಾಮರು ನೀವು ಕುಕ್ಷಿ ಈರೇಳು ಜಗವನ್ನು ಜಗವನ್ನು ನಮ್ಮನ್ನು ಸರ್ವರ ರಕ್ಷಣ್ಯ ಮಾಡಿ ಸುಖಿಯಾಗಿ ಶೋಭಾನೆ 11
--------------
ತುಪಾಕಿ ವೆಂಕಟರಮಣಾಚಾರ್ಯ
ಮಂಗಳೆನ್ನಿರೆ ಉಮಾ ಮನೋಹರಗೆ ದಿವಾಂಗನೆಯರು ಬಂದು ಬೇಗನೆ ಪ ಛಂದದಾರುತಿ ತಂದು ಬೆಳಗಿರೆ ಇಂದುಧರಸುತ ಮಂದಜಾಸನಗೆ ಅ.ಪ. ಮೋದಬಡುತಲಿ ಮೋದಪುರ ನಿವಾಸ ಜನರಭಿಲಾಷೆ ಸಲಿಸುವ ಚಾರುನವಕುಶ ತೀರನದಿ ಧರ ಧೀರ ಸುಗುಣ ಸುಶಾಸ್ತ್ರ ಪೇಳ್ವಸುತನಾರ್ಯರಿಗೆ ಬಂದು ಬೇಗನೆ 1 ಸನ್ನುತ ಬ್ರಹ್ಮೇಶತಂದೆವರದಗೋಪಾಲವಿಠ್ಠಲನ ದಾಸನೆನಿಪಗೆ ಬಂದು ಬೇಗನೆ 2
--------------
ತಂದೆವರದಗೋಪಾಲವಿಠಲರು
ಮಗುವ ತಡೆಯಬಾರದೆ ಮಾನಿನಿಯರುಸುಗುಣ ಚೆನ್ನಿಗನೆಂಬ ಸೊಬಗುಳ್ಳ ಮಗುವ ಪ ನೀರೊಳಗೆ ಪೊಕ್ಕು ತಾ ಬೀರುತಿದೆ ಮಾತುಗಳಧರಣಿಧರ ತಳಕಿಳಿದು ಬಾರದಿದೆಕೊಘೋರ ಪಾತಕವೆಂಬ ಬೇರ ಮೆಲ್ಲುತಲಿದೆಕೊಬಾರಯ್ಯ ಎನೆ ಕೋಪವೇರುತಿಹ ಮಗುವ 1 ಬೇಡುತಿದೆ ದಾನವನು ನೀಡುತಿದೆ ಪಾದವನುರೂಢಿಪಾಲರ ಕಂಡು ಕೊಲ್ಲುತಿದೆಕೊಓಡುತಿದೆ ಮೃಗದೊಡನೆ ಆಡುತಿದೆ ಕಪಿಗಳೊಳುನೋಡಲ್ಕರಿನಾಗರ ಹಾವ ತುಳಿಯುತಿದೆಕೊ 2 ಇತ್ತ ಬಾರೆಂದೆನಲು ಬತ್ತಲೆ ನಿಲ್ಲುತಿದೆಕೊಮತ್ತೆ ತೇಜಿಯನೇರಿ ನಲಿಯುತಿದೆಕೊಹತ್ತೆ ಬಂದವರಿಗೆ ಅರ್ತಿಯನು ನೀಡುತಿಹನಿತ್ಯ ವೈಕುಂಠದಲಿ ನಲಿವ ಮಗುವ 3
--------------
ಕನಕದಾಸ
ಮಗುವು ಕಾಣಯ್ಯ ಮಾಯದ ಮಗುವು ಕಾಣಯ್ಯ ಸುಗುಣಾ ವಾದಿರಾಜರೆ ಮೂಜಗವಾನುದರದೊಳಿಟ್ಟ ಪ ಏಕಾರ್ಣವಾಗಿ ಸಕಲ ಲೋಕವಾಕಾರವಳಿಯಲೂ ಏಕಮೇವಾದ್ವಿತೀಯವೆಂಬಾಗಮಕೆ ಸಮವಾಗೀ ಶ್ರೀಕರಾಂಬುಜದಿಂ ಪಾದಾಂಗುಲಿಯ ಪಿಡಿದು ಬಾಯೊಳಿಟ್ಟು ಶ್ರೀಕಾಂತ ವಟದೆಲೆಯ ಮೇಲ್ಮಲಗಿ ಬ್ರಹ್ಮನ ಪಡೆದಾ 1 ಮಾಯಾಪೂತನೀಯ ಕೊಂದು ಕಾಯವ ಕೆಡಹಿ ಶಕಟನನು ಸಾಯಬಡಿದು ವತ್ಸನ ಧೇನುಕನ ವೃಷಭನ ನೊಯ್ಯನೊದ್ದು ಯಮಳಾರ್ಜುನರಿಗೆ ಸಾಯುಜ್ಯವನಿತ್ತು ತನ್ನ ತಾಯಿಗೆ ತಾ ಮಣ್ಣುಮೆದ್ದು ಬಾಯಿ ಬಿಚ್ಚಿ ತೋರಿಸಿದಾ 2 ಕಡಹದಾ ಮರವನೇರಿ ಸಂಗಡಿಗರೊಂದಿಗೆ ಕಾಳಂದಿಯ ಮಡುವಲಿ ಧುಮುಕಿ ಕಲಕಿ ಜಲವಾ ಆ ಕಾಳಿಂಗನಾ ಪೆಡೆಯ ತುಳಿದು ಜಡಿಯಲವನಾ ಮಡದಿಯರು ಬೇಡಿಕೊಳ್ಳೆ ಕಡಲಿಗಟ್ಟಿ ಬಂದು ಎನ್ನ ತೊಡೆಯ ಮೇಲೆ ಮಂಡಿಸಿದ 3 ಬಳ್ಳಿಗಟ್ಟದುಡಿಯಲ್ಲಿ ಗುಲ್ಲಿಯ ಚೀಲಾವ ಸಿಕ್ಕಿಸಿ ಕಲ್ಲಿಗಟ್ಟ್ಯೊಗರ ಕಂಬಳಿಯ ಕೋಲು ತುದಿಯೊಳು ನಿಲ್ಲಿಸಿ ಹೆಗಲೊಳು ಕೊಂಬು ಕೊಳಲನು ಪಿಡಿದೂದುತ್ತ ಗೊಲ್ಲರೊಡಗೂಡಿ ಆಡುತೆಲ್ಲ ಗೋವುಗಳ ಕಾಯ್ದಾ 4 ಶ್ರುತಿತತಿಗಗೋಚರನು ಚುತಿದೂರನಾದಿಮೂರ್ತಿ ಚತುರ್ಮುಖಾದಿಶೇಷ ದೇವಾರಾಧ್ಯ ದೇವನು ಪತಿ ವೈಕುಂಠಕೇಶವನು ಯತಿಯೆ ನೀ ನೋಡಲು ಶರಣಾಗತನ ತೊಡೆಯೊಳು 5
--------------
ಬೇಲೂರು ವೈಕುಂಠದಾಸರು
ಮಗುವು ಕಾಣಿರಯ್ಯ | ಮಾಯದ | ಮಗುವು ಕಾಣಿರಯ್ಯ ಪ ಸುಗುಣ ವಾದಿರಾಜರೆ ಮೂಜಗವನು ತನ್ನುದರದೊಳಿಟ್ಟಅ ಮಾಯಾ ಪೂತನಿಯ ಕೊಂದು ಕಾಯವ ಕೆಡಹಿ ಶಕಟನ್ನಸಾಯಬಡಿದು ಧೇನುಕನ ವೃಷಭಾಸುರನನೋಯ ನೋಡದ್ಯಮಳಾರ್ಜುನಂಗೆ ಸಾಯುಜ್ಯವನೆ ಇತ್ತು ತನ್ನತಾಯಿಗೆ ತಾ ಮಣ್ಣ ಮೆದ್ದು ಬಾಯ ಬಿಟ್ಟು ತೋರಿಸಿದ1 ಏಕವರ್ಣವಾಗಿಯೆ ಸಕಲಲೋಕವು ಆಕಾರವಳಿಯೆಏಕಮೇವಾದ್ವಿತೀಯನೆಂಬಾಗಮಕೆ ಸರಿಯಾಗಿಶ್ರೀಕರಾಂಬುಜದಿಂ ಪಾದಾಂಗುಲಿಯಂ ಪಿಡಿದು ಬಾಯೊಳಿಟ್ಟುಶ್ರೀಕಾಂತ ವಟಪತ್ರದ ಮೇಲೊರಗಿ ಬ್ರಹ್ಮನ ಪಡೆದ2 ಕಡಹದ ಮರನೇರಿ ಸಂಗಡಿಗರೊಡನೆ ಕಾಳಿಂದಿಯಮಡುವ ಧುಮುಕಿ ಧುಮುಕಿ ಕಲಕಿ ಆ ಕಾಳಿಂಗನಪೆಡೆಯ ತುಳಿದು ಜಡಿಯಲವನ ಮಡದಿಯರು ಬೇಡಿಕೊಳ್ಳೆಕಡಲಿಗಟ್ಟಿ ಬಂದು ತಾಯ ತೊಡೆಯ ಮೇಲೆ ಮಲಗಿದಂಥ 3 ಕಲ್ಲಿಗಟ್ಟಿ ಗೂಡೆಯಲಿ ಗೋಲಿಯ ಚೀಲವನಿಕ್ಕಿಹಿಲ್ಲಿ ಕಟ್ಟೋಗರ ಕಡಕಲಕ್ಕಳೆಯಾ ತುದಿಯಲಿನಿಲ್ಲಿಸಿ ಪೆಗಲೊಳು ಕೊಂಬು ಕೋಲನೆ ಪಿಡಿದುಗೊಲ್ಲರೊಡಗೂಡಿ ನಮ್ಮೆಲ್ಲರ ಗೋವುಗಳ ಕಾಯ್ದ 4 ಪತಿ ವೈಕುಂಠ ಕೇಶವನುಯತಿಯೆ ನೀ ನೋಡಯ್ಯ ಶರಣಾಗತನ ತೊಡೆಯಿಂ ಮಾಯವಾದ 5
--------------
ಕನಕದಾಸ
ಮಡದಿ ಭಾಗ್ಯ ಎಂಬುವಿಯಾಕೊ ರಂಗಯ್ಯನಿನ್ನ ಬಡಿವಾರವ ಹೇಳಿಕೊಂಬೆ ಸಾಕೊ ಕೃಷ್ಣಯ್ಯ ಪ. ಬಿಡು ಬಿಡು ಸಣ್ಣ ಮಾರಿಯನ್ನು ನೀ ಮಾಡಬ್ಯಾಡ ಬಡಿವಾರವ ಹೇಳಿಕೊಂಬುವುದೇನೊಕಡುಭಾಗ್ಯ ಪುರುಷನಾಗೊ ನೀನು ಎತ್ತಿಕೊಂಡ್ಹೋಗಿ ಮಡುವು ಸೇರಿಕೊಂಡಿ ಮತ್ತೇನೊ1 ದೊರೆತನ ಹೇಳಿಕೊಂಬೆ ಸಾಕೊ ರಂಗಯ್ಯನಿನ್ನ ಕರಕರ ಹಲ್ಲು ತಿಂಬೊ ಸಿಟ್ಟು ಕೃಷ್ಣಯ್ಯಬಿರುಗಣ್ಣು ಬಿಡವೋದ್ಯಾಕಿಷ್ಟು ರಂಗಯ್ಯನಿನ್ನ ಉರಿಮಾರಿಗೆ ಅಂಜೋರೆಲ್ಲೊ ಅಷ್ಟು 2 ಧರೆ ಮ್ಯಾಲೆ ರಾಜ್ಯ ಹ್ಯಾಂಗ ರಂಗಯ್ಯನಿನ್ನ ತಗಿ ತಗಿ ಬಲುಲೀಲಾ ಕೈಯ್ಯ ಕೃಷ್ಣಯ್ಯಸುಗುಣನೆಂತೆಂಬೊ ಮತಿಯಾದುದಕ್ಕೆಜನರು ನಗದೆ ಸೈ ಸೈ ಎಂದಾರು ಬರಿಯ ಕೃಷ್ಣಯ್ಯ3 ಧೀರ ಧನವಂತನಲ್ಲೊ ಸಾಕೊ ರಂಗಯ್ಯಆದರೆ ವನದಿನಾರು ವಸ್ತ್ರವನುಟ್ಟುಕೊಂಡಿ ಯಾಕೊ ಕೃಷ್ಣಯ್ಯಚೋರನಂತಾಡಿಕೊಂಬಿ ಸಾಕೊ ರಂಗಯ್ಯಇದ ಕೇಳಿದ ವೀರರೆಂಬವರು ನಗತಾರೊ ಕೃಷ್ಣಯ್ಯ 4 ವಸ್ತ್ರವಿಲ್ಲೆಂಬೊ ಎಚ್ಚರಿಕಿಲ್ಲೊ ರಂಗಯ್ಯತೇಜಿ ಹತ್ತೇನು ಎಂದು ಬರುವಿಯಲ್ಲೊ ಕೃಷ್ಣಯ್ಯಕತ್ತಿ ಕೈ ಶೂರನೆಂಬೊದೆಲ್ಲೊ ರಂಗಯ್ಯರಾಮೇಶ ನಿನ್ನ ಹತ್ತಿಲ್ಲಿದ್ದರೆಲ್ಲ ನಗುವರೊ ಕೃಷ್ಣಯ್ಯ5
--------------
ಗಲಗಲಿಅವ್ವನವರು