ಒಟ್ಟು 5714 ಕಡೆಗಳಲ್ಲಿ , 131 ದಾಸರು , 3405 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹನುಮಂತ ನಿನ್ನನು ನಂಬಿದೆ ಪ ಯನು ಜಾನಕೀಗಿತ್ತನೆ ಲೋಕವೀರ ಅ.ಪ ಹಿತದಿವನವ ಕೀಳುತ ರಾವಣಿಯಸ್ತ್ರ ಹತಮಾಡಿ ಸುರರಿನ್ನುತಿಗೊಂಡೆ ವೀರ 1 ತೃಣಿ ಕರಿಸಿ ರಾವಣನಂ ಕೋಪದಿ ಅನಲಂಗೆ ತತ್‍ಪಟ್ಟಣ ಯನುಗೈಸಿ ಮಣಿಯ ವನಜಾಕ್ಷಿಗಿತ್ತೆ2 ವಜ್ರ ಕಾಯ ಮೌನಿ ಗೇಯ ಪ್ರಿಯದೂತನೆ ಅಣುಪ್ರಸ್ಥಪುರಿನಿಲಯ 3
--------------
ಗುರುರಾಮವಿಠಲ
ಹನುಮಂತ ನೀ ಬಲು ಜಯವಂತನಯ್ಯ ಪ. ಅನುಮಾನವಿಲ್ಲವೊ ಆನಂದತೀರ್ಥಾರ್ಯ ಅ.ಪ. ರಾಮಸೇವಕನಾಗಿ ರಾವಣನ ಪುರವ ನಿ-ರ್ಧೂಮಮಾಡಿದ್ಯೊ ನಿಮಿಷದೊಳಗೆಭೂಮಿಪುತ್ರಿಗೆ ಮುದ್ರೆಯುಂಗುರವನಿತ್ತು ನೀಪ್ರೇಮಕುಶಲವ ರಾಮಪಾದÀಕÀರ್ಪಿಸಿದೆ 1 ಕೃಷ್ಣಾವತಾರದಲ್ಲಿ ಭೀಮನಾಗ್ಯವತರಿಸಿದುಷ್ಟ ದೈತ್ಯರನ್ನೆಲ್ಲ ಸಂಹರಿಸಿದೆದೃಷ್ಟಿಹೀನನಾದ ಧೃತರಾಷ್ಟ್ರವಂಶವನ್ನುಕಷ್ಟವಿಲ್ಲದೆ ಕೊಂದು ಶ್ರೀಕೃಷ್ಣಗರ್ಪಿಸಿದೆ 2 ಪತಿತ ಸಂಕರ ಪುಟ್ಟಿ ಮತವೆಲ್ಲ ಕೆಡಿಸಲುಮತಿಹೀನರಾಗೆ ಸಜ್ಜನರೆಲ್ಲಅತಿ ವೇಗದಲಿ ಮಧ್ವಯತಿಯಾಗಿ ಅವತರಿಸಿಗತಿಯ ತೋರಿಸಿದೆ ಹಯವದನ ನಿಜದಾಸ 3
--------------
ವಾದಿರಾಜ
ಹನುಮಂತ ಹನುಮಂತ ಹನುಮಂತ ಪ ಜನರ ಪೊರೆಯುತ ತತುವರೊಳು ಪ್ರೇರಿತ ಅ.ಪ ಪವಮಾನ ಪವಮಾನ ಪವಮಾನ ಪವಮಾನ ಪರಮ ಪಾವನ ಅಣುಮಹದ್ಘನ ವನಧಿಲಂಘನ ವೀತಿಹೋತ್ರನ ಪಡಿಸಿತೃಪ್ತನ ರಾಮವಂದನ ಮಾಡುತ ಮನದಿ ಆನಂದ ಆನಂದ ಆನಂದ ಆನಂದದಿಂದ ತ್ವರಿಯಾ ಹಾರಿ ಶರಧಿಯಾ ಸೀತಾಕೃತಿಯಾ ಕುಶಲವಾರ್ತೆಯ ಪೇಳಲು ಜೀಯಾ ರಾಮಾಲಿಂಗನದಿಂದ ಆನಂದ ತಾ ನಿಂದಾ ತಾ ನಿಂದ ತಾ ನಿಂದ ನೆರಹಿ ಆನಂದ ರಣಮುಖಕೆಂದಾ ಮಾಡಿಸಿ ನಿಂದಾ ರಾವಣವಧೆಗೆಂದಾ 1 ತ್ರಿಜಗ ಖ್ಯಾತ ಅತಿ ಮಹಾರಥ ಯದುಪತಿ ಪ್ರೀತಾ ಸುರರ ಸೇವಿತಾ ಗರಳಭುಂಜಿತಾ ಸತಿಗೆ ಪೂವಿತ್ತ ಭುಜಬಲಯುತಾ ಧೀಮಂತಾ ಧೀಮಂತಾ ಧೀಮಂತಾ ಧೀಮಂತಾ ಭಾರತೀಕಾಂತಾ ದುರಳ ಮಣಿಮಂತಾ ಸೆಣಸಿಬರೆ ನಿಂತಾ ಹರಣ ಮಾಡಿ ಪಂಥಗೆಲಿದು ತಾ ನಿಂದಾ ಪ್ರಣಯನಾಗಿ ನಿಂತಾ ಕೀಚಕನ ಧ್ವಾಂತದೊಳು ತಾ ನೋಡಿ ತಾ ನೋಡಿ ತಾ ನೋಡಿ ತಾ ನೋಡಿ ಅವನೊಳು ಕೂಡಿ ಕೈಯ ಹಿಡಿದಾಡಿ ಕೇಳಿಯೊಳು ಕೂಡಿ ಉರದಿಶಿರ ನೆಲಕೆ ಈಡಾಡಿ ನಲಿದು ತೋರಿದಾ 2 ಆನಂದ ಆನಂದ ಆನಂದ ಆನಂದ ತಾ ನಿಂದ ಶ್ರೀಮ ದಾನಂದ ಆನಂದ ಬುಧಜನಕ್ಲೇಶದಿಹ ಮನ ನೋಡಿ ಜೀ ಸೂತ್ರ ವ್ಯಾಖ್ಯಾನ ಮಾಡಿ ಪಾವನ ವಾದಿಭಂಜನ ಬಾದರಾಯಣ ಪ್ರೀತಿಪಾತ್ರ ಏಕಾಂತ ಭಕ್ತ ತಾನಿತ್ತ ತಾನಿತ್ತ ತಾನಿತ್ತ ತಾನಿತ್ತ ಜಗಕತಿಮೋದ ಶಾಸ್ತ್ರ ತ್ರಿವಿಧ ತರತಮಭೇದ ನಿತ್ಯ ಕಾರಣ ನಿತ್ಯ ಕಾರ್ಯ ಅನಿತ್ಯ ಪ್ರಕೃತಿ ಸತ್ಯ ಸುಗುಣವೆ ನಿತ್ಯ ನಿತ್ಯ ದ್ವೈತವು ಸತ್ಯವೆಂದ ಶ್ರೀವೇಂಕಟೇಶನ ನಿಜದೂತ 3
--------------
ಉರಗಾದ್ರಿವಾಸವಿಠಲದಾಸರು
ಹನುಮಂತದೇವರ ಸ್ತೋತ್ರ ಬಿಡುವೇನೇನಯ್ಯಾ ಹನುಮ ನಿನ್ನಬಿಡುವೇನೇನಯ್ಯಾ ಪ ಬಿಡುವೆನೇನೋ ಹನುಮ ನಿನ್ನಅಡಿಗಳಿಗೆ ಶಿರವ ಕಟ್ಟಿ (ಎರಗುವೆ ನಾನು)ದೃಢ ಭಕ್ತಿ ಸುಜ್ಞಾನವನ್ನುತಡಮಾಡದಲೆ ಕೊಡುವೋ ತನಕ ಅ.ಪ ಹಸ್ತವ ಮ್ಯಾಲಕೆ ಎತ್ತಿದರೇನುಹಾರಗಾಲ ಹಾಕಿದರೇನುಭೃತ್ಯನು ನಿನ್ನವನು ನಾನುಹಸ್ತಿ ವರದನ ತೋರೋ ತನಕ 1 ಹಲ್ಲು ಮುಡಿಯ ಕಟ್ಟಿದರೇನು ಗುಲ್ಲು ಮಾಡಿದರಂಜುವನಲ್ಲಫುಲ್ಲನಾಭ ಲಕುಮೀಲೋಲನಇಲ್ಲಿಗೆ ತಂದು ತೋರುವ ತನಕ 2 ಡೊಂಕು ಮೋರೆ ಬಾಲವ ತಿದ್ದಿಹುಂಕರಿಸಿದರೆ ಅಂಜುವನಲ್ಲಕಿಂಕರನು ನಿನ್ನವನೋ ನಾನುವೆಂಕಟವಿಠಲನ ತೋರುವ ತನಕ 3
--------------
ವೆಂಕಟೇಶವಿಟ್ಠಲ
ಹಂಬಲ ಮರೆವುದುಂಟೆ ಪ ಬೆಂಬಲವಾಗಿಯೆ ಇಂಬುದೋರದ ನೀನು ಡೊಂಬಿಗಾರರ ಮುಂದೆ ಕಂಬದಂದದಿ ನಿಂದೆ ಅ.ಪ ತೃಣವಾದ ಕಾಯಗಳು ಮನದೊಳಗೆ ಘನವಾಗಿ ತೋರುತಿದೆ ಗುಣವಿಲ್ಲ ಬದುಕಿನೊಳು ಅಣಿತಪ್ಪಿ ಹೋಯಿತು ಪ್ರಣವರೂಪನೆ ಕೇಳು ಕ್ಷಣ ಜೀವ ನಿಲ್ಲದು 1 ಆಯ ತಪ್ಪಿದ ಮಾತನು ಆಡುತ ಎನ್ನ ಬಾಯನು ಹೊಯ್ಪವರ ಸಾಯ ಬಡಿದು ಮುಂದೆ ನ್ಯಾಯ ತೋರದ ಹಾಗೆ ಕಾಯಬೇಕೆನ್ನ ಉಪಾಯದಿಂದಲೆ ಜೀಯ 2 ಎರವು ಮಾಡಿದ ಕಾಲದೊಳಗೆ ಸೂರೆಗೊಂಡವರನೆಲ್ಲ ವಾರಿಜಾಕ್ಷನೆ ನೀ ವಿಚಾರವ ಮಾಡದೆ ದೂರುಗಳೆಲ್ಲವ ಪಾರು ಮಾಡಿದೆ ನಿನ್ನ 3 ಹಸ್ತ ಬಲಿದ ಕಾಲದಿ ಮಸ್ತಕದೊಳು ಹಸ್ತಿಯಂದದಿ ಹೊತ್ತೆನು ಸ್ವಸ್ಥವಿಲ್ಲದ ನರನಸ್ಥಿ ಚರ್ಮದ ಮೇಲೆ ಕಷ್ಟಾಗಿ ಕರುಣವ ನಾಸ್ತಿ ಮಾಳ್ಪೆಯ ಎನ್ನ 4 ಎನ್ನ ಸರ್ವಸ್ವವನು ತಿಂದವರೀಗ ಇನ್ನೇನು ಸುಕೃತಿಗಳೊ ನಿನ್ನ ಮನಸಿಗದು ಚನ್ನವಾದರೆ ಮೇಲೆ ಇನ್ನಾರು ಕೇಳ್ವರು ವರಾಹತಿಮ್ಮಪ್ಪ ನಿನ್ನ 5
--------------
ವರಹತಿಮ್ಮಪ್ಪ
ಹಬ್ಬವನು ಮಾಡಿದನು ಗುರುರಾಯ ಇಬ್ಬರೊಡಗೂಡಿಸುವದಿಂಗಿತದ ನೆಲೆಯರಿದು ಪ ಶ್ರವಣದಕ್ಷತೆ ಕೊಟ್ಟು ಪರಮಾರ್ಥ ದೌತಣದಿ | ಅವನಿಯೊಳು ಪರಮ ಕರುಣ ಸ್ನೇಹದಿ | ಸುವಿವೇಕ ವೈರಾಗ್ಯ ವೆಂಬ ಜಲ ಸಮಬೆರಸಿ | ತವಕದಲಿ ಮಜ್ಜನವ ಗೈಸಿದನು ಮುದದಿ 1 ಸ್ಥಿರ ಚಿತ್ತ ದಾಸನದಿ ಕುಳ್ಳಿರಿಸಿ ಸದ್ಭಾವ ಬೋಧ ಸುಧೆಯಾ ಪರಿ ಪರಿಯಲುಣಿಸಿ ಅಪರೋಕ್ಷದನುಭವ ಕಲಶ ನೆರೆವಿಡಿಸಿ ಕೈದೊಳಿಸಿ ಭವದೆಂಜಲ ಗೆಳಸೀ 2 ಸಹಜಾವಸ್ಥೆ ತಾಂಬೂಲವನು ಕರದಿತ್ತು | ವಿಹರಿಸುತ ನಿರ್ವಿಕಲ್ಪ ಸಮಾಧಿಯಾ | ವಿಹಿತದುಡುಗೊರೆ ಹೆಗಲಲಿಪೊದಿಸಿ ಪಾಲಿಸಿದ | ಮಹಿಪತಿ ಸ್ವಾಮಿ ನಂದನಗ ದಯ ಬೀರಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಯ ಮುಖ ಪದಾಬ್ಜ ಮಧುಪಾ | ದುರ್ಭವಭಯವ ತಾರಿಸು ಮುನಿಪಾ ಪ ವ್ರಯವಾಯಿತು ಮಮ | ಆಯುವು ಎಲ್ಲವುಪ್ರಿಯ ನೀನಲ್ಲವೆ | ಭಯ ಪರಿಹರಿಸೈ ಅ.ಪ. ರಜತ ಪುರಿಲಿ ನಿಂದೂ | ವಿಧಿಸಿದಿಅಜಪಿತ ಭಜನೆಯ ನಂದೂ |ಋಜಗಣದಲಿ ಬಹು | ರಾಜಿಪ ಗುರುವೇಅಜನ ಸುಪದವಿಗೆ | ನಿಜದಿ ಬರುವ ಯತಿ 1 ಸೋದೆ ಪುರದಿ ವಾಸಾ | ಭಕ್ತರ$ಗಾಧ ದೋಷ ನಾಶಾ ||ವಾದಿ ಜನರ ಮದ | ಛೇದನ ದಶಮತಿಬೋಧಪ್ರೀಯ ಗುರು | ಮೋದವ ಪಾಲಿಸು 2 ಪಂಚ ವೃಂದಾವನವಾ | ರಚಿಸುತಪಂಚರೂಪಿ ಹರಿಯಾ ||ಸಂಚಿಂತಿಸಿ ಭಕ್ತ | ವಾಂಛಿತ ಗರೆಯಲುಸಂಚುಗೊಳಿಸಿ ಪ್ರ | ಪಂಚವ ತೊರೆದೇ 3 ಅಮರೇಂದ್ರ ನಾಳ್ಬರಲೂ | ತ್ರೈವಿಕ್ರಮ ದುತ್ಸವದೋಳೂ ||ಸಮಯವಲ್ಲವಿದು | ನಿಮಗೆಂದೆನುತಲಿಕ್ರಮಿಸುವ ತೆರ ನೀ | ಮಾಡಿದೆ ಯತಿವರ 4 ಪೂವಿಲ್ಲನ ಪಿತನಾ | ಗುರುಗೋವಿಂದ ವಿಠ್ಠಲನಾ ||ಭಾವದಿ ಕಾಣುತ ಮೈಮರೆದ್ಹಿಗ್ಗುವಈ ವಿಧ ಸುಖ ಯಾವಾಗಲೂ ಕಾಣುವ 5
--------------
ಗುರುಗೋವಿಂದವಿಠಲರು
ಹಯವದನನ ಪಾದದ್ವಯವ ನೆನೆಯದವ ಜಯಿಸುವನೆಂತೋ ಸಂಸ್ಮøತಿ ಫಲವ ಪ. ಕಾಗೆಯಂತಾದರು ಬಿದ್ದರು ಎದ್ದರು ಯೋಗದೊಳಿದ್ದರು ಬಿದ್ದವನೆ ಆಗಮವನು ತಂದು ಅಜನಿಗೆ ಬೋಧಿಸಿ- ದಾ ಗುಣನಿಧಿಯನರ್ಚಿಸದವನು 1 ಬೂದಿಗೆ ವಾದಿಸಿ ಮಣ್ಣಮೇಲುಣ್ಣಲು ಸಾಧಿಪುದೇನವ ಶ್ರವ ಶ್ರಾವಕ ವ್ರತವ ಬೂದಿಯ ಮಾಡಿದ ಮಣ್ಣಿನ ಗಂಡನ ಹಾದಿಯನೊಲ್ಲದ ಹಂಚುನರ2 ಉಟ್ಟದ ಬಿಟ್ಟು ತನ್ನಟ್ಟಲು ಬಟ್ಟೆಯ ಕಷ್ಟ ತಾ ಬಟ್ಟು ಕಂಗೆಟ್ಟನೈಸೆ ಸೃಷ್ಟಿಸಿ ಸಲಹುವ ಹಯವದನನ ಪರಿ- ತುಷ್ಟಿಗೆ ಪುಟ್ಟದ ದುಷ್ಟಪಶು3
--------------
ವಾದಿರಾಜ
ಹರಕೆಯ ಮಾಡಿಕೊಳ್ಳೀ ಕೇಶವನಿಗೆ ಹರಕೆಯ ಕಟ್ಟಿಕೊಳ್ಳೀ ಪ ಹರಕೆಯ ತೀರಿಸಿಷ್ಟಾರ್ಥವ ಪಡಕೊಳ್ಳೀ ಹರುಷದಿ ಹರಿಗಾತ್ಮವರ್ಪಿಸಿಕೊಳ್ಳೀ ಅ.ಪ. ಭಜನೆಯ ಮಾಳ್ಪೆನೆಂದೂ ಕೇಶವನಿಗೆ ಭಜನೆಯರ್ಪಿಸುವೆನೆಂದೂ ಅಜಪಿತ ಶ್ರೀಹರಿದಾತನಾಗಿರುವಾಗ ಭಜಕರು ಕೊಡುವ ಭೋಜನ ಭಕ್ಷವ್ಯಾಕೇ 1 ಸ್ಮರಣೆಯ ಮಾಳ್ಪೆನೆಂದು ಕೇಶವನಿಗೆ ಸ್ಮರಣೆಯರ್ಪಿಸುವೆನೆಂದೂ ನಿತ್ಯ ತೃಪ್ತನುಯಿರೆ ಬರಿದೆ ನೈವೇದ್ಯವ ಸಲಿಸುವುದ್ಯಾಕೇ 2 ಸೇವೆಯ ಮಾಳ್ಪೆನೆಂದು ಕೇಶವನಿಗೆ ಸೇವೆಯರ್ಪಿಸುವೆನೆಂದೂ ಭಾವಜನಯ್ಯನೆ ತ್ರಿಜಗಪಾಲಕನಾಗಿ ದೇವತಾನಿರುತಿರೆ ಭವಭಯವ್ಯಾಕೇ 3 ವಂದನೆ ಮಾಳ್ಪೆನೆಂದು ಕೇಶವನಿಗೆ ವಂದನೆ ಕೊಡುವೆನೆಂದೂ ಚಂದದಿ ಹರಿತಾನೇ ಸೃಷ್ಟಿಗೀಶನುಯಿರೆ ಅಂದದಿ ಕೊಡುವ ದಾನಗಳವಾಗ್ಯಾಕೇ 4 ಆತ್ಮವ ಕೊಡುವೆನೆಂದೂ ಕೇಶವನಿಗೆ ಅತ್ಮವರ್ಪಿಸುವೆನೆಂದೂ ಸಾತ್ವಿಕ ಜನವಂದ್ಯ ದೂರ್ವಾಪುರದೊಳಿರೆ ಮತ್ಯಾಕೆ ಯೋಚನೆ ಭಕ್ತಿಯುಳ್ಳವಗೇ 5
--------------
ಕರ್ಕಿ ಕೇಶವದಾಸ
ಹರಲಿ ಮಾಡಿದರಲ್ಲೊ ನಿನ್ನಮುರಲಿಧರ ಚೆನ್ನ ಕೃಷ್ಣ ಸಂಪನ್ನ ಪ ತುಂಟ ಕಾಮನು ಕೇವಲೆಂಟು ವರ್ಷದ ಬಾಲಗಂಟಿದ್ದು ಹ್ಯಾಗೆಯದ ಗಂಟೊಡೆಯದ ಮುನ್ನ 1 ಜಾರನೆಂದು ಕಡು ಶಿಶುಪಾಲನುದೂರಲಿಲ್ಲೆಂಬುದನಾಹದನಾ ಯಾರು ಅರಿಯದೆ ಘನಾ 2 ಪಾವನ ಪರಮಾತ್ಮಾ ಜೀವರೇಕಾಗುವ ಭಾವದ ಮರ್ಮವನಾತಾವರಿಯದಾ ಠೀವಿಯಲಿ ಕುಜನಾ 3 ಅತಿಶಯೋಕ್ತಿಯು ಮತ್ತು ಉತುಪ್ರೇಕ್ಷಾಲಂಕಾರಮತಿ ಕೊಟ್ಟ ಕಾವ್ಯವನಾ ಅರ್ಥವನಾ ಮಥಿಸದೆ ಚೆನ್ನಾ4 ಸದ್ಧರ್ಮವನು ಬೀರಿ ಉದ್ಧರಿಸಲು ಬಂದಸಿದ್ಧ ಗದುಗಿನ ವೀರನಾರಾಯಣ ಪದ್ದುಮನಯನೇ 5
--------------
ವೀರನಾರಾಯಣ
ಹರಿ ಗೋರಸ ಕುಡಿವುದು ನೋಡಿರೋ |ಪರಿ ಪರಿಯ ಸಂಭ್ರಮ ಮಾಡಿರೋ ಪ ಕಾರಣ ಒರಳಲಿ ವೃತ್ತಿಗುಣದಿ ತಾ |ಇದ್ದು ಯಶೋದೆಯು ಕಟ್ಟಿರಿಸಿ ||ಸ್ತನವನುಣಿಸುತಿರಲು ನಿಜಕರ್ಮದ |ಬಲದಿ ಬಿಡಿಸಿಕೊಂಡಾಡುತಲಿ 1 ನಾ ನಾ ಎನುತಾಡುವಾ ಗೋಪಾಲರ |ನೆರೆಸುವರಂತೆ ಕುಣಿವುತಲಿ ||ನಾನಾ ದ್ವಾರಗಳಿಂದ ಧುಮುಕಿ |ಮುಚ್ಚಿದ ಮಡಿಕೆಗಳ ನೋಡುತಲಿ 2 ರಾಗ ಪೀಠದಲಿ ಮೋಹದ ಹೆಗಲಲಿ |ನಿಲ್ಲಲು ನೆಲವು ನಿಲುಕುತಿರಲು ||ಯೋಗ ರುಕ್ಮ ಘಟಿಯನಾ ಛೇದಿಸಿ |ವಿರತಿ ಗೊಲ್ಲತಿಗತಿ ಕಾಡುತಲಿ 3
--------------
ರುಕ್ಮಾಂಗದರು
ಹರಿ ನಿನ್ನ ದಾಸರ ಸೇವೆಯ ಕರುಣಿಸೆನಗೆ ಸುರಪತಿಯ ನಾನೊಲ್ಲೆನೈ ಪ ಸ್ಮರನ ಹಾವಳಿ ಬಿಡಿಸಿ ಗುರುಭಕ್ತಿಯನು ಕೊಟ್ಟು ನಿರುತವು ನಿನ್ನ ನಾ ಸ್ಮರಿಸುವಂದದಿ ಮಾಡು ಅ.ಪ ಎಷ್ಟು ಸ್ಥಿರ ಮಾಡಿದಾಗ್ಯು ಎನ್ನ ಮನ ಬಟ್ಟ ಕುಚೆಯರ ಬಲೆಗೆ ಸಿಲುಕುತಲಿ ಬಿಟ್ಟು ನಿನ್ನಯ ಧ್ಯಾನ ಕೆಟ್ಟುಪೋಗುತಲಿದೆ ದಿಟ್ಟ ನಿನ್ನ ಮಗನ ಬಲುಹಿನ್ನೆಷ್ಟೆಂದು ಪೇಳಲೊ 1 ಕುಸುಮಗಂಧಿಯರ ಓರೆನೋಟವೆಂಬ ಮಸೆದ ಕಣೆಯ ತಾನು ಪೂಡುತಲಿ ಎಸೆ ಮೋಹತಿಗೆ ನಾ ಸೈರಿಸಲಾರೆನೋ ಬಿಸಜನಾಭನೆ ನಿನ್ನ ಸುತಗೆ ಪೇಳೋ ಬುದ್ಧಿ 2 ಅಂಗನೆಯರ ಸವಿ ನುಡಿಗಳಿಗೆ ನಾ ಮರುಗಿ ಭೃಂಗದಂತವರ ಬಲೆಗೆ ಬೀಳದಂತೆ ಸಂಗ ಸುಜನರಲ್ಲಿ ಇತ್ತು ಕಾಯೊ ದೇವ ಅಂಗಜಪಿತ ಶ್ರೀ ರಂಗೇಶವಿಠಲನೇ 3
--------------
ರಂಗೇಶವಿಠಲದಾಸರು
ಹರಿ ನೀನೆವೆ ಸರ್ವ ಚೇತನ ಧೃತಿಯ ಸಕಲವೇ | ಧರಿಯೊಳು ನಾನೆಂಬುವ ಗುಣವೇ ವರಶೃತಿ ನೇಹನಾ ನಾಸ್ತಿಯಂದು | ಸಾರುವದಿದಕನು ಮಾನವೇ ಪ ಬಯಲೊಳು ಪುಟ್ಟದ ಪರಿಪರಿನಾದದ | ಹೊಯಿಲಿನ ಮಂಜುಳ ಶಬ್ದವಾ | ಬಯಲದಿ ಕೇಳಿತಲ್ಲಿನವ ಹೊಂದುವಾ | ಬಯಲಾಧಾರ ನೀನಲ್ಲವೇ 1 ಸೃಷ್ಟಿಯೊಳಗ ಕಮನೀಯ ಲಾವಣ್ಯದು | ತ್ಕøಷ್ಟತರ ಮೋಹನ ರೂಪವಾ | ದೃಷ್ಟಿಲಿ ಕಾಣುತ ಸುಖದೋಳಗಾಗುವ | ದೃಷ್ಟಸ್ವ ತೇಜ ನೀನಲ್ಲವೆ 2 ಕಮಲ ಪಾರಿಜಾತ ಮಲ್ಲಿಗೆ ಮಕ | ರಂಗದೊಳಗ ಸುಳಿದಾಡುತ | ಮಂದ ಮಾರುತ ಬಂದು ಸೋಕಲು ನಲಿವಾ | ಸುಂದರ ರೂಪನು ನೀನಲ್ಲವೆ 3 ರಸಭರಿತ ಬೇರೆ ಬೇರೆ ದೋರುತಲಿಹಾ | ಅಸಮತೆರೆದ ಪದರ್ಥವನು | ರಸನಾದಿ ಕೊಂಡು ಸವಿಗೆ ತಲೆದೂಗುವಾ | ಕುಶಲ ಭೋಕ್ತನುನೀನಲ್ಲವೇ 4 ಚೆನ್ನಾಗಿ ಕಸ್ತೂರಿ ಪುಳಕವ ಕೂಡಿಸಿ | ಪನ್ನೀರವನು ಮೇಲೆದಳಿದು | ಉನ್ನತ ಚಂದನ ಲೇಪಿಸೆ ಸುವಾ | ಸನೆ ಕೊಂಬುವ ನೀನಲ್ಲವೇ 5 ಅಷ್ಟದಳ ಕಮಲದಳ ಗದ್ದುಗಿಯೊಳು ನಿಂದು | ಅಷ್ಟಮ ಸ್ಥಳಗಳ ಮುಟ್ಟಿಸಿ | ನೆಟ್ಟಿನೆ ಮುಖದೊಳು ಸವಿಸವಿ ಮಾತವ | ಸ್ಪಷ್ಟದಿ ನುಡಿಪ ನೀನಲ್ಲವೇ 6 ಭಜಕನ ಮಾಡಿ ಸೌಮ್ಯತನದಿ ಕರದಿಂದ | ರಜತಮ ವಿರಹಿತ ದಾನವನಾ | ದ್ವಿಜರಿಗೆ ಕುಡಿಸಿ ಅದರಶ್ರಯ ಕೊಂಬುವ | ನಿಜಶಯ ಕರ್ತನು ನೀನಲ್ಲವೇ 7 ಪವನಭ್ರವ ನಡೆಸುವಪರಿಚರಣದಿ | ಜವದಿ ಸುಕೇತ್ರ ಯಾತ್ರೆಯಾ | ಬವರದಿ ಮಾಡಿ ಪುಣ್ಯ ಅರ್ಪಿಸಿ ಕೊಂಬಾ | ಭುವನ ಪಾವನ ನೀನಲ್ಲವೇ 8 ರಸನುಂಡು ಕಬ್ಬ ಹಿಪ್ಪಿಯುಗುಳುವಂತೆ | ಅಸಮತೆ ರಚಿಸಿ ಸರ್ವಾಂಗರ | ರಸವಿತ್ತು ಮಲವಘ ಮುಖದಿಂದ ಪವನದಿ | ಬಿಡಸುವನು ನೀನಲ್ಲವೇ 9 ಅಂಗನೆಯರ ಧೃಡಾಲಿಂಗನವನು ಮನ| ದಿಂಗಿತದಂದದಿ ಗೈಯ್ಯಲು | ಅಂಗಸಂಗದ ಲೋದಗುವ ಭೋಗಿಪ | ಅಂಗಜ ಜನಕ ನೀನಲ್ಲವೇ 10 ಯಂತ್ರವಾಹಕ ನಂದದಿ ಜಗನಿರ್ಮಿಸಿ | ಚಿತ್ರ ವಿಚಿತ್ರವ ದೋರುವಾ | ಅಂತ್ರ ಬಾಹ್ಯವ್ಯಾಪಕ ಮಹಿಪತಿ ಸುತ ಪ್ರಭು | ಸೂತ್ರಧಾರಿ ನೀನಲ್ಲವೆ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಮಾಡ್ದ ಮರ್ಯಾದೆ ಅನುಭವಿಸಲೀ ಬೇಕು ಸರಸಿಜಭವಾದ್ಯರಿಗೆ ಬಿಡದು ಪ ವರಕಲ್ಪ ಕಲ್ಪದಲಿ ಮೀರಿದವರುಂಟೆ ನಿಂ ದಿರದಾವ ಜನುಮವಾಗೆ ಪ್ರಾಣಿ ಅ.ಪ. ವಾರಿಜಭವನ ನೋಡು ಮುನಿಶಾಪದಿಂ ಧಾರುಣಿಯೊಳು ಪೂಜೆ ತೊರೆದ ಪ್ರಾರಬ್ಧ ನಿರ್ದೋಷಿಗಾದರೂ ತಪ್ಪದವ- ತಾರವಿಲ್ಲದವನಾದನೋ ಪ್ರಾಣಿ1 ಜಗಕೆ ಗುರುವೆಂದೆನಿಸಿಕೊಂಡ ಪ್ರಾಣನ ನೋಡು ಯುಗದೊಳಗೆ ಕೋತ್ಯಾದನಲ್ಲೋ ಮಗುಳೆ ಮಾತನು ಕೇಳು ಕಚ್ಚುಟವ ಧರಿಸಿದ ಅಗಣಿತ ಸತ್ವನಿಗೆ ಈ ಪರಿಯೆ ಪ್ರಾಣಿ 2 ಶಿವನ ನೋಡೋ ಮರುಳೆ ದೂರ್ವಾಸ ಮುನಿಯಾಗಿ ಅವನಿಪತಿ ಮೊರೆ ಹೊಕ್ಕನಲ್ಲೊ ಭುವನದೊಳಗೆಂದೆಂದು ವ್ರಣದಿಂದ ದುರ್ಗಂಧ ಸ್ರವಿಸುವುದು ಶಿರಸಿನಲ್ಲೀ ಪ್ರಾಣಿ 3 ಇಂದ್ರ ತರ್ಕವನೋದಿ ನರಿಯಾದ ಪರಸತಿ- ಯಿಂದ ಮೇಷ ವೃಷಣನಾಭ ಕಂದರ್ಪ ಶರೀರದಿಂದ ನಾಶನನಾಗಿ ಬಂದ ಮೀನಿನ ಗರ್ಭದಿಂದ ಪ್ರಾಣಿ4 ಸೂರ್ಯ ಚಂದ್ರರ ನೋಡು ಮೂಲ ರೂಪದಿ ಪರ ಭಾರ್ಯರಿಗೆ ಶಿಲುಕಿ ತಮ್ಮಾ ವೀರ್ಯವನು ಕಳಕೊಂಡು ಬರಿದಾದರೋ ಕರ್ಮ- ಕಾರ್ಯ ವಾರಿಗು ಬಿಡದೆಲೋ ಪ್ರಾಣಿ 5 ಪಾವಕನು ಸರ್ವಭಕ್ಷಕನಾದ ಮಿಕ್ಕಾದ ಅವಾವ ಸುರರ ಕರ್ಮಂಗಳ ಯಾವತ್ತು ವರ್ಣಿಸಲಳವಲ್ಲ ಎಚ್ಚತ್ತು ಪಾವನ್ನ ನೀನಾಗೆಲೋ ಪ್ರಾಣಿ 6 ಆವಾವ ಸ್ಥಳದಲ್ಲಿ ಜನನ ಸ್ಥಿತಿಗತಿ ಮತ್ತೆ ಸಾವು ಸಾಕಲ್ಯದಿ ಮರೆಯದಲೆ ಕ್ಲುಪ್ತ ಮಾಡಿಪ್ಪನೋ ಅದನು ಆವನಾದರು ಮೀರಲೊಳÀವೇ ಪ್ರಾಣಿ 7 ಉಣಬೇಕು ಉಣಬೇಕು ಮತ್ತೆ ಉಣಲೀಬೇಕು ತ್ರಿ-ಗುಣ ಕಾರ್ಯರ ಭವಣೆ ಮನುಜ ತೃಣ ಜನ್ಮ ಬಂದ ಕಾಲಕ್ಕು ತ್ರೈತಾಪಗಳು ಅಣುಮಾತ್ರವೂ ತಪ್ಪವೋ ಪ್ರಾಣಿ 8 ಧೀರನಾಗಲಿ ಮಹಾಶೂರನಾಗಲಿ ಮತ್ತೆ ಧಾರುಣೀಪತಿ ಭಾಗ್ಯನಾಗೆ ಆರಿಗಾದರು ಬಿಡದು ಪರೀಕ್ಷಿತರಾಯನು ನೀರೊಳಗಿದ್ದ ತಿಳಿಯೋ ಪ್ರಾಣಿ 9 ಜಲಗಿರಿವನ ಪೊದೆ ಹೊದರು ಗಹ್ವರ ಹುತ್ತ- ಬಿಲ ಸಪ್ತದ್ವೀಪ ಪಾತಾಳದಿ ನಭ ಸ್ವರ್ಗಾದಿಲೋಕ ಜನನಿಯ ಜಠರ- ದೊಳಗಿರೆ ತಪ್ಪುವುದೆ ಬರಹಾ ಪ್ರಾಣಿ 10 ಅಣಿಮಾದಿ ಅಷ್ಟಾಂಗ ಯೋಗ ಮಾಡಲು ಮಹಾ ಗುಣವಂತ ಜನರು ಒಂದು ಕ್ಷಣವ ಮೀರಲುಬಹುದೆ ಮೃತ್ಯು ಬಂದೆದುರಾಗಿ ಸೆಣಸುತಿರೆ ಬೇರುಂಟೆ ಕಾರ್ಯ ಪ್ರಾಣಿ 11 ಎಲ್ಲೆಲ್ಲೆ ಅನ್ನ ಮತ್ತೆಲ್ಲೆಲ್ಲಿ ಉದಕ ಇ- ನ್ನೆಲ್ಲೆಲ್ಲಿ ನಿದ್ರೆ ಜಾಗರಣಿಯೊ ಎಲ್ಲೆಲ್ಲಿ ಹೆಜ್ಜೆಗಳನಿಡುವ ಪರಿಮಿತಿಯುಂಟೊ ಅಲ್ಲಿಲ್ಲಿಗೊಯ್ಯುವುದೊ ಬಿಡದೆ ಪ್ರಾಣಿ 12 ಧಿಕ್ಕಾರ ಸತ್ಕಾರ ನಿಂದೆ ವಂದನೆಗಳು ರೊಕ್ಕಾ ಸುಖ ದುಃಖ ಕಾರಣಗಳು ಉಕ್ಕೇರಿದಂತೆ ಬರುತಿಹುದೊ ನಮ್ಮ ದೇ- ವಕ್ಕಿ ಕಂದನ ಆಜ್ಞಯಿಂದ ಪ್ರಾಣಿ 13 ಕಾಶಿಯಲ್ಲಿರೆ ಮರಣ ಆವಲ್ಲಿ ಇಪ್ಪುದಾ- ದೇಶಕ್ಕೆ ಒಯ್ಯುವುದು ಕಾಲ ಕಾಶಿರಾಯನ ನೋಡು ಒಡನೆ ಅಪಮೃತ್ಯು ವೇದ- ವ್ಯಾಸರಿದ್ದರು ತಪ್ಪಲಿಲ್ಲ ಪ್ರಾಣಿ 14 ಮಾರುತ ಭಾರತಿ ಶೇಷ ಶಿವ ಪಾರ್ವತಿ- ಸರಸಿಜ ಬಾಂಧವಾಗ್ನಿ ಧರ್ಮ ಕಾಲ ಮೃತ್ಯು ಕಾಲನ ದೂತರು ಅರಸುತಿಪ್ಪರು ಲವ ತೃಟಿಯ ಪ್ರಾಣಿ 15 ಇವರಿವರಿಗುತ್ತಮರು ಇವರಿವರಗಧಮರು ಇವರೆಲ್ಲರಿಗೆ ಶ್ರೀ ಭೂಮಿ ದುರ್ಗಾ ಅವಳಿಗೆ ಶ್ರೀ ಹರಿಯು ತಾನೆ ನಿಯಾಮಕನು ವಿವರದಲಿ ತಿಳಿ ತಾರತಮ್ಯ ಪ್ರಾಣಿ 16 ಲಕುಮಿ ಮೊದಲು ಮಾಡಿ ಇವರೆಲ್ಲರಿಗೆ ಲೇಶ ಶಕುತಿಯಿಲ್ಲವೊ ಕಾಣೊ ಮರುಳೆ ಅಕಟಕಟ ಗುಣಪೂರ್ಣ ಸರ್ವ ಸ್ವಾತಂತ್ರ ವ್ಯಾ- ಪಕ ಸರ್ವಾಂತರ್ಯಾಮಿಯೆನ್ನೋ ಪ್ರಾಣಿ 17 ಕರುಣಾ ಕಟಾಕ್ಷವುಳ್ಳನಕ ಸುರ ನರೋರಗ ಯಕ್ಷಲೋಕದಲ್ಲಿದ್ದವರು ಬರಿದೆ ಕೂಗಿದರೇನು ಆಹುದೋ ಪ್ರಾಣಿ 18 ಕಾಲ ತಪ್ಪಿಸಿ ಕಾವ ಹರಿತಾನು ಸಾವ ಕಾಲವ ಮಾತ್ರ ತಪ್ಪಿಸನೋ ಕಾವ ಕೊಲ್ಲುವ ಸ್ವಾಮಿ ಕಾಲನಾಮಕ ಪುರುಷ ಜೀವಿಗಳು ಮುಖ್ಯವಲ್ಲ ಕಾಣೋ ಪ್ರಾಣಿ 19 ಭಗವವÀಸ್ವತಂತ್ರವನು ತಿಳಿಯದೆ ಮರುಳಾಗಿ ಜಗದೊಳಗೆ ಚರಿಸದಿರೊ ಮಾನವ ಅಘ ದೂರನಾಗೊ ನಾನಾ ಬಗೆಯಿಂದಲ- ನ್ಯಗರ ಚಿಂತೆಗಳಲ್ಲಿ ಬಿಟ್ಟು ಪ್ರಾಣಿ 20 ಹಲವು ಮಾತೇನಿನ್ನು ದಾಸಭಾವವ ವಹಿಸಿ ಕಲಿಯುಗದೊಳಗೆ ಸಂಚರಿಸೆಲೊ ಬಲವಂತ ವಿಜಯವಿಠ್ಠಲನ ಪಾದಾಂಬುಜವ ನಿಲಿಸಿ ವಲಿಸಿಕೊ ಮನಸಿನಲ್ಲಿ ಪ್ರಾಣಿ 21
--------------
ವಿಜಯದಾಸ
ಹರಿ ಸಂಕಲ್ಪದ ಕೃಪೆಯಲ್ಲದೆ ಬೇರಿನ್ನಿಲ್ಲವಯ್ಯ ಪ. ಈ ನರವೆಂಬ ದೇಹಕ್ಕೆ ದೃಢ ಭಕುತಿ ಬರಲಿಕೆ ಅ.ಪ. ಸುಕೃತ ಚನ್ನಿಗ ಹರಿ ಬನ್ನ ಬಡಿಸಿ ಅಜಮಿಳನ ತನ್ನ ಸುತನ ನಾರಗನೆಂದು ಕರೆಸಿ ಉನ್ನಂತ ಪದವಿತ್ತ ಚನ್ನಕೇಶವ ಹರಿ1 ರುಕ್ಮಾಂಗದನೇಕಾದಶಿ ವ್ರತವನ್ನು ಚಕ್ರಧರನು ನೇಮದಿ ಮಾಡಿಶಿ ತಕ್ಕ ,ಮಾನಿನಿ ಗಂಟಿಕ್ಕೆ ಜಗದಲವನ ಪ್ರಖ್ಯಾತಿಗೊಳಿಸಿದ ಲಕ್ಕುಮಿರಮಣ ಹರಿ 2 ಮಾನುನಿ ದ್ರೌಪದಿಯನು ಸಭೆಗೆಳಸಿ ಕೃಷ್ಣಾ ನೀನೇ ಗತಿಯೆಂದಾ ತರುಣಿಯೊಳ್ ನುಡಿಸಿ ಅನುಮಾನವಿಲ್ಲದೆ ಜಗದಿ ಪಾಂಡವರಕ್ಷ ನಾನೆಂದಕ್ಷಯವಿತ್ತ ಶ್ರೀ ಶ್ರೀನಿವಾಸ ಹರಿ3
--------------
ಸರಸ್ವತಿ ಬಾಯಿ