ಒಟ್ಟು 14471 ಕಡೆಗಳಲ್ಲಿ , 133 ದಾಸರು , 7276 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರಾಚ ಕೋದಂಡಧರ ಧೀರ ಪಾಹಿ ಪ ಧರಣೀಸುತಾನಂದ ಸುವಿಹಾರಿ ಪಾಹಿ ಅ.ಪ ಸಾಮಿತ್ರಿ ಭರತಾಗ್ರಜಾತ ಮಾಂಪಾಹಿ ಮೌನಿಜನಸಂಪ್ರೀತ ಶ್ರೀಲೋಲ ಪಾಹಿ ಸೇವ್ಯ ಪಾದಾಬ್ಜಪಾಹಿ ಧೀಮಂತ ಘನ ಪುಣ್ಯನಾಮ ಮಾಂಪಾಹಿ 1 ಭುವನಾಭಿರಾಮಾ ತ್ರಿಮುನಿನುತ್ಯಪಾಹಿ ಭವನಾಶ ಸತ್ಕೀರ್ತಿಕಾಮ ಮಾಂಪಾಹಿ ನವಮೋಹನಾಂಗ ರಾವಣವೈರಿ ಪಾಹಿ ಸುವಿಲಾಸದಾತ ಮಾಂಗಿರಿವಾಸ ಪಾಹಿ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾರಾಯಣ ಉದಿಸುವನೆಂದು ಆ ಪೂರ್ವಾಂತರ್ಯಾಮಿ ಅವರ ಸಲಹಲು ಸರ್ವದಾ ಅಪೂರ್ವ ತೇಜೋವಂತನಾಗಿ ಅವರ ಹೃದಯದಿ ಸೂರ್ಯತೇಜದಿ ಮೆರೆಯುತಿರುವ ಸರ್ವದಾ ಎಂದು ಅಪೂರ್ವ ಜ್ಞಾನದಿ ನೆನಯುತಿರಿ ಹರಿಭಕ್ತರು 1 ಎದ್ದು ಮುಖ ತೊಳೆದು ನಿಮ್ಮಲ್ಲಿದ್ದ ಕಲ್ಮಷ ತೊಳೆದು ನಿಮ್ಮ ಶುದ್ಧ ಮನದಲಿ ನೆನೆದು ನಿಲಿಸಿ ಹರಿ ಧ್ಯಾನದಿ ಸ್ನಾನಾನ್ಹೀಕಬದ್ಧಕಂಕಣರಾಗಿ ಬ್ರಾಹ್ಮೀಮುಹೂರ್ತದಲಿ ಗೈಯೆ ನಿಮ್ಮಲ್ಲಿದ್ದ ಕಲ್ಮಶವೆಲ್ಲ ಕಳೆದತಿ ಹರ್ಷವೀವ ನಿಮ್ಮ ಶುದ್ಧಾಚರಣೆಗೆ ಮೆಚ್ಚಿ ನಿಮ್ಮ ಭಕ್ತಿಗೆ ನಿತ್ಯ ಬದ್ಧ ಕಂಕಣರಾಗಿ ಸ್ತುತಿಸೆ ನಿತ್ಯ ಹರಿ ಭಕ್ತರು 2 ಮಾಧ್ಯಾನ್ಹಿಕಾದಿಗಳಾಚರಿಸುತ ಹರಿಯ ಮಧ್ಯವರ್ತಿಯನೆನಿಸಿ ಆ ಸೂರ್ಯನಂತರ್ಯಾಮಿ ನಾರಾಯಣನಿ- - ಗಘ್ರ್ಯಪಾದ್ಯವನಿತ್ತು ಸುಭೋಜನವ ಮಾಡಿ ನಿಮ್ಮ ಪೂರ್ವಜರನುಗ್ರಹದಿ ಮಜ್ಜನ್ಮಸಾರ್ಥಕವೆಂದಾವನರಿವನೋ ಅವನ ಹೃದಯ ಮಧ್ಯವರ್ತಿಯಾಗಿದ್ದು ಕಾವ ಸದ್ಗುಣೋಪೇತ ಭಕ್ತರ ಕೈ ಬಿಡ ಮಧ್ವಾಂತರ್ಗತ ಶ್ರೀ ಶ್ರೀನಿವಾಸ ಅವನ ಮನದಿ ನೆನೆಯಿರಿ ಹರಿ ಭಕ್ತರು 3 ಜವÀನ ಬಾಧೆಯು ಇಲ್ಲ ಹರಿ ಭಕ್ತರಿಗೆ ಯವನ ರೂಪದ ಕಲ್ಕಿ ಹರಿಯ ನೆನೆವರಿಗೆ ಜವದಿ ಯಮನಾಳ್ಗಳು ಮುಟ್ಟಲಂಜುವರು ಹರಿಭಕ್ತರನು ಕವಿ ನಾರಾಯಣನ ಧ್ಯಾನಿಪರಿಗೆ ಅವನಿಯೊಳು ಭಯವಿಲ್ಲ ಅವರಿಗೆ ಸಮನಿಲ್ಲ ಅವರಲ್ಲಿ ಹರಿಯಿದ್ದ ಕಾರಣದಿ ಜವದಿ ಹರಿ ದಾಸರೆಲ್ಲ ಶ್ರೀ ಶ್ರೀನಿವಾಸನ ಭಕ್ತರ ಸಂಗದೊಳಿರಿ ಹರಿಭಕ್ತರು 4 ಯಾರ ಭಯವಿಲ್ಲ ಹರಿ ನಾಮಕೆ ದಾರಿ ಹೋಕರು ಬಾರರಿದಕೆ ಭಾರವಿಲ್ಲವು ಮನಕೆ ಸಂಸಾರಭಯವಿಲ್ಲವರಿಗೆ ಹರಿ ಎಂಬುದನೆ ಸಕಲ ಕಾರ್ಯವ ನಿರ್ವಹಿಸುವನೆಂದರಿತವರಿಗೆ ಯುಕುತಿ ಬುದ್ಧಿಯು ಯಾತಕೆ ಯಾರ ಭಯವೇಕೆ ಹರಿಸಖರಾಗಿರಲವರಿಗೆ ಅಂಜಿಕೆಯಾಕೆ ಯಾರನಾಶ್ರಯಿಸುವ ಶ್ರಮವಿಲ್ಲ ಇದನರಿತು ಹರಿಭಕ್ತರು ಶಕುನ ಅಪಶಕುನವೆನ್ನರು ಮನದಿ ಯುಕುತಿಯ ಮಾಡರು ಪರರ ಬೇಡೆ ಶ್ರೀ ಶ್ರೀನಿವಾಸ ಭಕ್ತರು ಅವರ ಮತ ಹಿಡಿದು ಬದುಕಿ ಹರಿಭಕ್ತರು 5 ಜತೆ ಕರುಣಾಕರ ಹರಿಭಕ್ತರಭಿಮಾನಿ ವರದಭಯ ಹಸ್ತವ ಕೊಡುವ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ನಾರಾಯಣ ಎನ್ನಿರೊ ಸಜ್ಜನರೆಲ್ಲಪ. ಸಾರರಹಿತ ಸಂಸಾರದಲಿ ಪರಸಾರ ಇದು ಎಂದು ಸಂಸಾರಿ ನೀವೆಲ್ಲ ಅ.ಪ. ಇಹಪರ ಸುಖವುಂಟೋ ಇದರ ಫಲಬಹಳ ಕಟ್ಟಿದ ಗಂಟೋ ಘನಮಹಿಮಗೆ ಇದುಮಹಮಹಿಮೆ ಇದಲ್ಲದೆ ಮಹಿಮೆಯೊಳಗಿದುಮಹಾರಸವಾದಂಥ ಮಂತ್ರ ಮಹಭಕುತಿಪೂರ್ವಕವಾಗಿ ಒಮ್ಮೆ 1 ಹಸಿವೆಯ ಶ್ರಮವಿರಲಿ ಹಸಿವಿರದೆ ಹ-ರುಷವು ತಾನಿರಲಿ ರಸಿಕಶ್ರಮ ಕೆರಳಿ ಮಾ-ನಸ ವಶವು ಆಗಲಿ ಆಗದಿರಲಿದೋಷವಾಗಲಿ ಶುದ್ಧವಾಗಲಿ ಶ್ರೀಶನ ಮರೆಯದೆ ಹಾಂಗೆ 2 ಚೋರನೆಂದೆನದೆ ಚಿತ್ತದಲಿಜಾರನೆಂದೆಣಿಸದೆ ಸ್ಮರಣೆ ಮಾತ್ರದಿ ಬಹಳಪಾರರಹಿತ ಅನರ್ಥಸಂಚಿತಹರಣ ಮಾಡುವ ಪವನ ಪ್ರಿಯ ಸರ್ವರಂತÀರ ಹಯವದನ 3
--------------
ವಾದಿರಾಜ
ನಾರಾಯಣ ಕೃಷ್ಣ ಬೆಳಗಾಯಿತೇಳಯ್ಯ ಮೂರು ಲೋಕಂಗಳಿಗೆ ಮಂಗಳವ ಬೀರಯ್ಯ ಪ ಹರಿಹರಿ ಶ್ರೀನಿಲಯ ಪರವಾಸುದೇವ ಅ.ಪ ಬಂದಿರುವರೈ ಬ್ರಹ್ಮ ರುದ್ರೇಂದ್ರರು ತಂದೆ ತಂದಿರುವರೈ ಮಹನಿಧಿ ಕನಡಿ ಧೇನುಗಳ ನಿಂದು ಗಾನವಮಾಡುತಿರುವರಾನಂದದಿ ಗಂಧರ್ವರಪ್ಸರೆಯರಿಂದು ಕುಣಿದಾಡಿ ಕೂಡಿ 1 ದಾಸರೊಡೆ ತುಂಬುರರು ನಾರದರು ಜಯಜಯ ಶ್ರೀಶನೇ ಕೇಶವ ಗಜವರದ ಎಂದು ಆಶ್ರಯಿಸಿ ಚರಣಕ್ಕೆ ಶರಣೆಂದು ಮಣಿಯವರು ದೋಷನಾಶನ ಲೋಕಕಲ್ಯಾಣ ತ್ರಾಣ 2 ಪತಿವ್ರತಾ ಸ್ತ್ರೀಯರುಗಳತಿಶಯ ಮಡಿಯುಟ್ಟು ಹಿತವಾದ ಹುಗ್ಗಿ ಸಜ್ಜಿಗೆಯ ಗೈದು ಪತಿತಪಾವನ ನಿನಗೆ ದಧ್ಯನ್ನ ನೀಡುವರೊ ಕ್ಷಿತಿನಾಥ ನೀನವನು ತೋಷದಿಂ ಭುಜಿಸೊ 3 ರೋಗರುಜಿನಗಳಳಿದು ಆಯುವೃದ್ಧಿಯದಾಗಿ ಭಾಗವತ ಸಕುಟುಂಬ ಸಂತೋಷಗೂಡಿ ಭಾಗವತ ಭಾರತ ರಾಮಾಯಣಗಳ ಹಾಡಿ ಆಗಲೈ ಆಗಮಾರ್ಚನೆ ಆಲಯಗಳೊಳಗೆ 4 ಕಮಲಲೋಚನ ಕೆಟ್ಟ ಸ್ವಪ್ನ ಫಲವಳಿಸಿ ಯಮಕಂಟವಂ ಕಳೆದು ಭ್ರಮೆಗಳನು ನೀಗಿ ಸುಮನಸರ ಕೂಡಿ ಶ್ರೀಹರಿಯ ಗುಣಗಾನ ಮಾಡಿ ಅಮಿತ ಅಮೃತವುಣಿಸೈ 5 ಕ್ಷುಧ್ರಪಾಕೀ-ಚೀನ ಕೊಬ್ಬಿ ಛದ್ರಿಸುತು ಭದ್ರತೆಯನಾಡೊಳಗಸ್ಥಿರತೆಗೈಯುತ್ತ ಆದ್ರಿಅಂಬುಧಿ ಮಧ್ಯೆ ಭಾರತಿಯ ನಲಿಸುತ್ತ ಮುದ್ರೆಯುಂ ಧ್ವಜವನುಂ ನಿನ್ನವಾಗಿರಿಸೈ 6 ಕಾಲಕಾಲಗಳಲ್ಲಿ ಮಳೆಬಿಡದೆ ಸುರಿದು ಶಾಲಿಸಂತರ ಧಾನ್ಯ ಎಲ್ಲೆಲ್ಲು ಬೆಳೆದು ಮಹಿಷಿ ಶ್ರೀಲೋಲ ಕರುಣಿಸೈ ಕನಕವೃಷ್ಟಿಯನು 7 ಎದುರು ನೋಡುತ ನದಿಯು ಹರಿವುದು ಸಾಗರಕೆ ಮುದದಿಂದ ತಾವರೆಯು ಸೂರ್ಯನನ್ನು ವಿಧಿವಶದಿ ಪಾಪಿಗಳು ಯಮಲೋಕವನ್ನು ಸುಧೆಸವಿಯೆ ಭಕ್ತರು ಪರಮಪದವನ್ನು 8 ಮಕ್ಕಳಿಲ್ಲದ ಜನರು ಮಕ್ಕಳನು ಹಡೆದು ಲಕ್ಷ್ಮಿಯೊಲವನು ಹಾಡಿ ಜನರೆಲ್ಲ ದುಡಿದು ಭಕ್ತರಾಗುತ ಸರ್ವ ವಣಿಗೆಗಳು ನಡೆದು ಮುಕ್ತರಪ್ಪಂತೆಲ್ಲರ ಮಾಡು ಜಾಜೀಶ 9
--------------
ಶಾಮಶರ್ಮರು
ನಾರಾಯಣ ಕೃಷ್ಣನಂದ ಮುಕುಂದಾ ಪ ನಿನ್ನೆತ್ತಿ ಆಡಿಸಲು ನಂದ ಯಶೋದೆಯಲ್ಲಾ ನಿನ್ನೆಂತು ಸೇವಿಸುವೆ ಪೇಳು ಇಂದಿರೆರಮಣಾ1 ನಿನ್ನ ಸಹಪಾರಿ ಸುಧಾಮನಾನಲ್ಲಾ ನಿನ್ನೆಂತು ಸೇವಿಸಲೊ ಯದುಕುಲೋತ್ತಮನೇ2 ಅಗರು ಚಂದನ ಪರಿಮಳದ್ರವ್ಯಗಳನೆ ತಂದು ಅರ್ಪಿಸಲು ಕುಬುಜೆಯಲ್ಲಾ ಆದರದಿ ಪಾಲ ನೀಡೆ ವಿದುರನಲ್ಲಾ ಅನಂತ ಗುಣಪೂರ್ಣನೇ ಶ್ರೀ ಹರಿ3 ಗೋವುಪಾಲನು ತಂದು | ನಿನಗ ಭಿಷೇಕ ಮಾಡುವೆನೆ ವಿಧ ವಿಧ ಪುಷ್ಪಗಳ ತಂದು ಅರ್ಚಿಸಲು ಪೊಕ್ಕಳೊಳು ಪುಷ್ಪವನೆಪಡೆದಿರುವೆ ಹರಿಯೆ 4 ಕರಿರಾಜ ನಿನ್ನ ಕರೆಯೆ ಕರುಣದಿಂದ ಬಂದೆ ಪ್ರಹ್ಲಾದಗೋಲಿದು ಕಂಬದಲಿ ನಿಂತೇ ದ್ರೌಪದೀ ದೇವಿಗಕ್ಷಯಾಂಬರ ವಿತ್ತೆ ಅಂತೆ ಎನ್ನಪಾಲಿಸೊ ಲಕ್ಷ್ಮೀಕಾಂತನೇ 5 ಪರಿಪಯಲಿಭಕ್ತರ ಪಾಲಿಸಿದೆಯೊ ದೇವಾ ಪರಮ ದಯಾಳುವೆಂದೆನಿಸಿಕೊಂಡೇ ಪರಮ ಪುರುಷನು ನೀನು ಪಾಮರನು ನಾನಹುದೊ ದಾರಿ ಕಾಣದೆ ಇರುವೆ ದಯೆತೋರು ಮುರಾರಿ6 ಭಕ್ತವತ್ಸಲ ನೀನೆ ಭಯನಿವಾರಣ ನೀನೇ ಭಾಗವತಜನಪ್ರಿಯ ನೀನೆ ಸರ್ವರಕ್ಷಕ ನೀನೆ ಶ್ರೀ ವೇಂಕಟವಿಠಲಾ 7
--------------
ರಾಧಾಬಾಯಿ
ನಾರಾಯಣ ಗೋವಿಂದ ಹರಿ ಹರಿ ನಾರಾಯಣ ಗೋವಿಂದ ಪ ನಾರಾಯಣ ಗೋವಿಂದ ಮುಕುಂದ ಪರತರ ಪರಮಾನಂದಅ.ಪ. ಮಚ್ಛರೂಪಿಲಿ ಹೆಚ್ಚಿದ ದೈತ್ಯರ ತುಚ್ಛಿಸಿ ವೇದವ ತಂದ ಹರಿ 1 ಕಚ್ಛಪ ವೇಷದಿ ನಿಂದಾ ಹರಿ 2 ಸೂಕರ ರೂಪಿಲಿ ಕೊಂದಾ ಹರಿ 3 ಚಕ್ರಧರ ಕಂಬವ ಭೇದಿಸಿ ಬಂದ ಹರಿ4 ವಾಮನ ರೂಪಿಲಿ ನಿಂದಾ ಹರಿ5 ಕ್ಷತ್ರಕುಲವ ನಿಕ್ಷತ್ರಮಾಡಲು ಭೃಗು ಪುತ್ರನಾಗಿ ತಾ ನಿಂದಾ ಹರಿ 6 ತಂದಾ ಹರಿ 7 ತಾ ನಿಂದಾ ಹರಿ 8 ಅಂಗನೆಯರ ವ್ರತಭಂಗ ಮಾಡಲನಂಗ ಜನಕ ತಾ ಬಂದಾ ಹರಿ 9 ಪರಮೇಷ್ಟಿ ಎನಿಸಿ ತಾ ನಿಂದಾ ಹರಿ 10 ಶ್ರೀದವಿಠಲ ಕರುಣದಿಂದಲಿ ನಂದತತಿ ಸಲಹುವೆನೆಂದಾ ಹರಿ 11
--------------
ಶ್ರೀದವಿಠಲರು
ನಾರಾಯಣ ತನ್ನ ನಂಬಿದ ಭಕುತರ ಕಾರುಣ್ಯದಿ ಕಾವ ಪ ಮಾರುತಿ ಸಹಿತನಾಗಿ ತಾನೀ ಶರೀರದೊಳಿಹ ದೇವ ಅ.ಪ ಅನಿರುದ್ಧನು ತಾ ಸಕಲ ಚರಾಚರ ಸೃಷ್ಟಿಯ ಗೈವ ವನಧಿಶಯನ ಪ್ರದ್ಯಮ್ನನು ಬ್ರಹ್ಮಾಂಡವ ಪಾಲಿಸುವ ತ್ರಿನಯನನಂತರ್ಗತ ಸಂಕರ್ಷಣ ತಾನು ಲಯವನು ಗೈವ ವಾಸುದೇವ ಸುಜೀವರಿಗೆ ಮೋಕ್ಷವನೀವ 1 ನರಸಿಂಹ ರೂಪದಿ ಹರಿಯು ಭಕುತ ಪ್ರಹ್ಲಾದನ ಕಾಯ್ದ ಸಿರಿ ರಾಮನು ತಾನಾಗಿ ಬಂದು ದಶಶಿರನ ಭಂಜಿಸಿದ ದುರುಳ ಕಂಸನ ನಿಗ್ರಹಿಸಲು ಯದು ವಂಶದೊಳುದಿಸಿ ಬಂದ ಪರಾಶರಾತ್ಮಜನಾಗಿ ವರವೇದ ವಿಭಾಗವ ಗೈದ 2 ವರಾಹ ನರಹರಿರೂಪವ ತಾ ಕೊಂಡ ಇಚ್ಛೆಯಿಂದಲಿ ವಟುವಾಗಿ ಕೊಡಲಿಯ ಪಿಡಿದ ಪ್ರಚಂಡ ಸಿರಿ ಕೃಷ್ಣ ದಿಗಂಬರನಾಗಿ ಕಂಡ ಸ್ವಚ್ಛ ಅಶ್ವವೇರಿದ ರಂಗೇಶವಿಠಲ ಬಿನಗು ದೈವರ ಗಂಡ 3
--------------
ರಂಗೇಶವಿಠಲದಾಸರು
ನಾರಾಯಣ ನರಸಿಂಹ ಲ- ಕ್ಷ್ಮೀರಮಣನೆ ಪರಬ್ರಹ್ಮ ಪ. ಸಾರಭೋಕ್ತನೆ ಸ್ವತಂತ್ರನೆ ದೋಷವಿ- ದೂರ ಪರಿಪೂರ್ಣಕಾಮ ಅ.ಪ. ಸತ್ವಾದಿಗುಣಾತೀತ ವಿತತ ಸ- ರ್ವೋತ್ತಮ ನಿರುಪಮ ಮಹಿಮ ಪ್ರತ್ಯಗಾತ್ಮ ನಿಗಮಾಗಮವೇದ್ಯ ಸು- ಹೃತ್ತಮ ಮಂಗಲಧಾಮ 1 ವಿಧಿಭವೇಂದ್ರಾದಿ ವಿಬುಧಾಶ್ರಿತಪದ- ಪದುಮ ನೀಲಾಂಬುದಶ್ಯಾಮ ಹೃದಯಾಬ್ಜಮಧ್ಯಸದನ ಸಾಮಜವ- ರದ ಯದುವಂಶಲಲಾಮ 2 ಮಾಯಾತೀತ ಮಹೋನ್ನತ ಸುರಜನ- ಪ್ರಿಯ ದ್ಯೆತ್ಯೇಯನಿರ್ನಾಮ ವಾಯುವಾಹನ ಜನಾರ್ದನ ಲಕ್ಷ್ಮೀನಾ- ರಾಯಣ ತೇ ನಮೋ ನಮಃ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಾರಾಯಣ ನರಹರಿ ನಾರದಪ್ರಿಯ ನರಸುರಮುನಿ ವರದಾಯಕ ಧ್ರುವ ವೇದ ಕದ್ದೊಯ್ದವನ ಮರ್ದಿಸಲಿಕ್ಕೆ ಸಾಧಿಸಿ ಬಂದ್ಯೊ ಮಚ್ಛರೂಪನೆ ಮಾಧವ ನೀ ಬಂದು ಕೂರ್ಮನಾಗಿ ನಿಂದು ಮೇದಿನಿಯ ಭಾರವ ತಾಳಿದೆ 1 ಧರೆಯ ಕದ್ದಸುರನ ಕೋರದಾಡಿಂದ ಸೀಳಿ ವರಾಹರೂಪಬಂದು ದೋರಿದೆ ಹಿರಣ್ಯಕಶ್ಯಪ ವಿದಾರಣ ಮಾಡಿ ನೀ ತರಳ ಪ್ರಲ್ಹಾದನ ರಕ್ಷಿಸಿದೆ 2 ವಾಮನ ರೂಪವದೋರಿದೆ ನೇಮದಿಂದಲಿ ಪಿತನಾಜ್ಞೆಯ ನಡೆಸಲು ಸ್ವಾಮಿ ಭಾರ್ಗವರೂಪ ತಾಳಿದೆ 3 ದೇವತೆಗಳ ಸ್ಥಾಪಿಸಲಿಕ್ಕೆ ಬಂದು ದೈತ್ಯ ರಾವಣನ ಕೊಂದ್ಯೊ ಶ್ರೀರಾಮ ನೀ ದೇವಕಿ ಉದರದಲಿ ಜನಿಸಿ ಬಂದು ಕೃಷ್ಣ ಗೋವಳರನ್ನು ಪ್ರತಿಪಾಲಿಸಿದೆ 4 ಪತಿವ್ರತೆಗಳ ವ್ರತ ಅಳಿಯಲಿಕ್ಕಾಗಿ ಬಂದು ಸುಳಹುದೋರಿದೂ ಬೌದ್ದ್ಯರೂಪನೆ ಹತ್ತಿ ಕುದರಿಯ ಒತ್ತಿ ಆಳಲಿಕ್ಕೆ ಮತ್ತೆ ಬಂದೆಯ ಕಲ್ಕಿರೂಪನೆ 5 ಹತ್ತವತಾರ ಧರಿಸಿ ಬಂದು ಕ್ಷಿತಿಯೊಳ ಪತಿತರ ಪಾವನಗೈಸಿದೆ ಭಕ್ತಜನರುದ್ದರಿಸಲಿಕ್ಕೆ ಬಂದು ಶಕ್ತಿಪರಾಕ್ರಮದೋರಿದೆ 6 ಸಾವಿರ ನಾಮದೊಡೆಯ ಸ್ವಾಮಿ ನೀ ಬಂದು ಭಾವಿಸುವರೊಡನೆ ಕೂಡಿದೆ ಭವಭಂಧನ ತಾರಿಸಿ ಮಹಿಪತಿಯ ಪ್ರಾಣ ಪಾವನ ನೀ ಮಾಡಿದೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾರಾಯಣ ನರಹರಿಯೆ ನರ ಜನ್ಮದಿ ಸಿಲುಕಿದೆನು ಮರಳಿ ಜನಿಸದಂದಲೆನ್ನ ಕರುಣಿಸೋ ಕ್ಷೀರವಾರಿಧಿಶಯನ ಪ ಮುರಹರ ಮಧುಸೂಧನ ಶ್ರೀಹರಿ ಧರಣೀಧರ ವರಾಹ ನಾರಾಯಣ ವಟು ವಾಮನ ಕೇಶವ ವಾರಿಜದಳನಯನ 1 ನಂದನಂದನ ಹರಿಯೆ ನಾರದವಂದಿತ ಸುರ ಸಂಹಾರಿ ಮಂದಜಾಯತನಯನ 2 ಅರಿಗದೆ ಶಂಖಾಬ್ಜ ಕರದೊಳು ಮೆರೆವ ಪೀತಾಂಬರ ಧಾರಿ ಕರಿವದನನೆ ಕಾಳಿಂಗಮರ್ಧನ ಸರಸಿರುಹದಳನಯನ 3 ಮುಳುಗಿದೆನು ಎತ್ತು ಕಮಲನಯನ 4 ಬಲ್ಲುದೇ ಕರು ಎತ್ತಿಕೋ ಹರಿಯೇ 5
--------------
ಕವಿ ಪರಮದೇವದಾಸರು
ನಾರಾಯಣ ನಾರಾಯಣ ನಾರಾಯಣ ನಾರಾಯಣ ನಾರಾಯಣ ಲಕ್ಷುಮಿ ಅರಸನೇ ಪ. ನಾರಾಯಣ ಲಕ್ಷುಮಿಅರಸನೆ ಹಯವದನ ಸ್ವಾಮಿ ನೀ ಒಲಿದು ದಯವಾಗು ಅ.ಪ. ಕೊಂಡ ಕ್ರೋಧವೆಂಬ ಕನ್ನಡಿ (ಕೆಂಗಿಡಿ?) ಲೋಭಮೋಹಗಳನುವಾದೊ ಲೋಭಮೋಹಗಳನುವಾದೊ ಹಯವದನ ಸ್ವಾಮಿ ನೀ ಒಲಿದು ದಯವಾಗು 1 ಮನುಗಳ ಕಾಲದಲ್ಲಿ ಜಲದೊಳಗವತರಿಸಿ ಜಗವೇಳು ಧರೆಯ ನೆಗಹಿದೆ ಜಗವೇಳು ಧರೆಯ ನೆಗಹಿದೆ ಹಯವದನ ಮತ್ಸ್ಯವತಾರ ದಯವಾಗು 2 ಕೂರ್ಮಾವತಾರದಲಿ ಭೂಮಿಯ ನೆಗಹಿದೆ ಕೂಡೆ ಸಜ್ಜನರ ಸಲಹಿದೆ ಕೂಡೆ ಸಜ್ಜನರ ಸಲಹಿದೆ ಹಯವದನ ಕೂರ್ಮಾವತಾರ ದಯವಾಗು 3 ದುರುಳ ದಾನವಗಂಜಿ ಕೋರೆದಾಡೆಯಲಿ ನೆಗಹಿದೆ ಕೋರೆದಾಡೆಯಲಿ ನೆಗಹಿದೆ ಹಯವದನ ವರಾಹಾವತಾರ ದಯವಾಗು 4 ಸೊಕ್ಕಿದ ಅಸುರನ ಕರುಳ ಕುಕ್ಕಿ ಮಾಲೆಯ ಮಾಡಿ ಭಕ್ತನಿಗಭಯ ಸಲಿಸಿದೆ ಭಕ್ತನಿಗಭಯ ಸಲಿಸಿದೆ ಹಯವದನ ಅಪ್ಪ ನರಸಿಂಹ ದಯವಾಗು 5 ವಾಮನನಾಗಿ ನೀ ಭೂಮಿದಾನವ ಬೇಡಿ ಭೂಮಿ ಪಾದದಲಿ ಅಳೆದೆಯೊ ಭೂಮಿ ಪಾದದಲಿ ಅಳೆದೆಯೊ ಹಯವದನ ವಾಮನಾವತಾರ ದಯವಾಗು 6 ಹೆತ್ತವಳ ಶಿರ ಕಡಿದು ಕ್ಷತ್ರಿಯಕುಲ ಸವರಿ ಮತ್ತೆ ಕೊಡಲಿಯ ಪಿಡಿದೆಯೊ ಮತ್ತೆ ಕೊಡಲಿಯ ಪಿಡಿದೆಯೊ ಹಯವದನ ಅಪ್ಪ ಭಾರ್ಗವನೆ ದಯವಾಗು 7 ಸೀತೆಗೋಸ್ಕರವಾಗಿ ಸೇತುವೆ ಕಟ್ಟಿಸಿದೆ ಪಾತಕಿ ರಾವಣನ ಮಡುಹಿದೆ ಪಾತಕಿ ರಾವಣನ ಮಡುಹಿದೆ ಹಯವದನ ಖ್ಯಾತ ರಘುನಾಥ ದಯವಾಗು 8 ಕೃಷ್ಣಾವತಾರದಲಿ ದುಷ್ಟಕಂಸನ ಕೊಂದೆ ಹೆತ್ತವಳ ಬಂಧನ ಬಿಡಿಸಿದೆ ಹೆತ್ತವಳ ಬಂಧನ ಬಿಡಿಸಿದೆ ಹಯವದನ ಕೃಷ್ಣಾವತಾರ ದಯವಾಗು 9 ಉತ್ತಮ ಸತಿಯರ ಹೆಚ್ಚಿನ ವ್ರತ ಸವರಿ ಮತ್ತೆ ಹಯವೇರಿ ಮೆರೆದೆಯೊ ಮತ್ತೆ ಹಯವೇರಿ ಮೆರೆದೆಯೊ ಹಯ[ವದನ ಉತ್ತಮ ಬೌದ್ಧ ಕಲ್ಕಿ ದಯವಾಗು] 10 ಅಂಗಜನಯ್ಯನೆ ಮಂಗಳಮಹಿಮನೆ ಗಂಗೆಯ ಪೆತ್ತ ಗರುವನೆ ಗಂಗೆಯ ಪೆತ್ತ ಗರುವನೆ ಹಯವದನ ಮಂಗಳ ಮಹಿಮ ದಯವಾಗು 11 ವಾದಿರಾಜರಿಗೊಲಿದೆ ಸ್ವಾದೆಪುರದಲಿ ನಿಂತೆ ವೇದಾಂತ ಕಥೆಯ ಹರಹಿದೆ ವೇದಾಂತ ಕಥೆಯ ಹರಹಿದೆ ಹಯವದನ ವೇದಮೂರುತಿಯೆ ದಯವಾಗು 12
--------------
ವಾದಿರಾಜ
ನಾರಾಯಣ ನಾರಾಯಣ ನಾರಾಯಣನಾರಾಯಣ ಪ. ಭಕ್ತಿಬೇಕು ಪರಮ ವಿರಕ್ತಿ ಬೇಕು ಹರಿ ಸ-ರ್ವೋತ್ತಮವೆಂಬೊ ನೆನವಿರಬೇಕು1 ಅರಿಷಡ್ವರ್ಗದ ವಿಜಯ ಬೇಕು ಗುರುಕುಲತಿಲಕಗುರುಮಧ್ವಮತ ಬೇಕು ಗುರುಭಕ್ತಿ ಬೇಕು 2 ಹರಿಯ ಡಿಂಗರಿಗರ ಸಂಗ ಬೇಕು ಶಂಖಚಕ್ರ-ಧರನಾಗಿ ಇರಬೇಕು ಸ್ವರೂಪಯೋಗ್ಯತೆ ಬೇಕು 3 ವೇದದಭ್ಯಾಸವು ಬೇಕು ಅದರರ್ಥ ಹರಿಯೆಂಬಬೋಧವಿರಲುಬೇಕು ಖಳರಳಿಯಲುಬೇಕು4 ವಾದಿರಾಜನೊಡೆಯ ಹಯವದನನ್ನ ದಿವ್ಯ-ಪಾದ ನಂಬಿಯಿರಬೇಕು ವರಾದಿಗಳ ಬಯಸುವೋರು 5
--------------
ವಾದಿರಾಜ
ನಾರಾಯಣ ನಿನ್ನ ಚರಣ ಸೇವೆಯ ಬಿಟ್ಟು ಸಾರಸಾಕ್ಷನೆ ಪ್ರಾಣದಿರಲಾರೆ ಕ್ಷಣವೂ ಪ ದಾರಿಯೆನಗಿದೊಂದೇ ತೊರ್ಪದು ಸುಖನಿಧಿ ಬಾರಿಬಾರಿಗೂ ಹರಿ ದ್ಯಾನಾನಂದದೊಳಿಗೆ ಅ.ಪ ಅನ್ನವಸ್ತ್ರಂಗಳಿಗಾಗಿ ದುಡಿವದೊಂದು ಚೆನ್ನ ಪುತ್ರರ ರಕ್ಷಣೆಯೊಂದೆಡೆ ತನ್ನ ಮರ್ಯಾದೆ ಕುಂದುಗಳೆಂಬೊ ವ್ಯಸನದಿ ಭಿನ್ನಿಸಿ ತಾಪತ್ರಯ ಪಡುತಿರುವಿಲ್ಲಿ 1 ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಪ್ರೇಮ ಬಾಂಧವರಾಗೆನ್ನನಪ್ಪಿಹರೋ ಸ್ವಾಮಿ ನೀಯೆನ್ನನವರ ಧಾಳಿಗಿಡದಂತೆ ಸಾಮಜವರದ ಸಲಹೆಂದು ಸಂತೋಷದಿ 2 ಭಾಗೀರತಿಪಿತ ಭಾಗವತಪ್ರೀತ ಯೋಗಿಜನಂಗಳೊಳತಿ ಹಿತನೇ ಸಾಗರಶಯನನೆ ಭೋಗಿಗಳ ಪುಣ್ಯನೆ ಬಾಗುವ ಶರಣರ ಬಹುಭಾಗ್ಯನೇ 3 ನಾನಿಲ್ಲಿಗೆ ಬಂದ ಕಾರಣ ಕಾಣೆನೋ ದೀನಪಾಲಕ ಕಾರ್ಯಮಾಡಿಸೋಯನ್ನಿಂ ಏನಾದರು ಮಾಡು ತಪ್ಪಹೊರಿಸಬೇಡ ಶ್ರೀನಿಧಿ ಹೆಜ್ಜಾಜಿಕೇಶವ ಪಾಲಿಸು 4
--------------
ಶಾಮಶರ್ಮರು
ನಾರಾಯಣ ನಿನ್ನ ನಂಬಿದೆ ಲಕ್ಷ್ಮೀ-ನಾರಾಯಣ ನಿನ್ಹೊರತು ಪೊರೆವ ದೈವವೆಲ್ಲಿದೆ ಪ ನಾ ಮೀರಿ ದುಷ್ಕರ್ಮವ ಮಾಡಿದೆಅಪಾರಮಹಿಮ ದಯಾನಿಧೇ ಅ.ಪ ನಾನಾ ಯೋನಿಗಳಿಂದ ಬಂದೆನೋಮಾನತಾಳಲಾರದೆ ಬಲು ನೊಂದೆನೋದೀನರಕ್ಷಕ ಎನ್ನ ಗತಿ ಮುಂದೇನೋಮಾನದಿಂದಲಿ ಪಾಲಿಸುವಂಥ ದೊರೆ ನೀನೋ1 ದಾಸರ ಮನ ಉಲ್ಲಾಸನೆಶ್ರೀಶ ಆಶ್ರಿತ ಜನರ ಪೋಷನೆಸಾಸಿರ ಅನಂತಮಹಿಮನೆಕ್ಲೇಶನಾಶ ಮಾಡಿಸೋ ಶ್ರೀನಿವಾಸನೆ 2 ರಂಗನಗರ ಉತ್ತುಂಗನೆಗಂಗಾಜನಕ ಗರುಡತುರಂಗನೆ ಉ-ತ್ತುಂಗ ಗುಣಗಳಂತರಂಗನೆ ಅ-ನಂಗನ ಪೆತ್ತ ರಂಗವಿಠಲನೆ 3
--------------
ಶ್ರೀಪಾದರಾಜರು
ನಾರಾಯಣ ನಿಮ್ಮ ನಾಮ ನಾಲಿಗೆಲಿರಲಿ ನಾರಾಯಣ ಘೋರಪಾತಕವೆಲ್ಲ ಹಾರಿ ಹೋಗುವುದಯ್ಯ ನಾರಾಯಣ 1 ಸಾರ್ಯವಾಗುವುದು ಶ್ರೀಹರಿಯ ಪುರ ಅವರಿಗೆ ನಾರಾಯಣ ಮಾರಜನಕನÀ ಮೊದಲೆ ಮರೆಯದಿರೊ ಮನವೆ ನಾರಾಯಣ 2 ಎಷ್ಟೆಷ್ಟು ದುರಿತಗಳು ನಷ್ಟವಾಗಿ ಹೋಗುವುವು ನಾರಾಯಣ ಎಷ್ಟು ನಾಮವ ಬಿಡದೆ ನೆನೆಕಂಡ್ಯ ಮನವೆ ನಾರಾಯಣ 3 ಅಂತ್ಯಜಸ್ತ್ರೀ ಕೂಡಿ ಭ್ರಾಂತನಾಗ್ಯಜಮಿಳನು ನಾರಾಯಣ ಕಂತುನಯ್ಯನ ಮರೆತು ಕಾಲವನು ಕಳೆಯಲು ನಾರಾಯಣ 4 ಅಂತ್ಯಕಾಲಕೆ ಹರಿಯ ಸ್ಮರಣೆ ಜಿಹ್ವೆಗೆ ಬರಲು ನಾರಾಯಣ ಲಕ್ಷ್ಮೀ- ಕಾಂತ ಕರುಣಿಸಿ ಅವಗೆ ಕರೆದÀು ಮುಕ್ತಿಯ ಕೊಟ್ಟ ನಾರಾಯಣ5 ಲಕ್ಕುಮೀರಮಣನೆ ಸಕಲಗುಣಪರಿಪೂರ್ಣ ನಾರಾಯಣ ಮುಖ್ಯ ನೀ ಎನ ಮನದಿ ಹೊಕ್ಕರ್ಹೊಗಳುವೆನಯ್ಯ ನಾರಾಯಣ 6 ಘೋರ ವೇದವ ಕದ್ದು ನೀರೊಳಗಡಗಲು ನಾರಾಯಣ ಭೇದಿಸವನಕೊಂದು ವೇದವನು ತಂದಿಟ್ಟ ನಾರಾಯಣ 7 ಶ್ರುತಿಯ ಸುತಗೆ ಕೊಟ್ಟಿ ಸ್ತುತ್ಯನಾಗಜನಿಂದ ನಾರಾಯಣ ಮಚ್ಛರೂಪವ ಧರಿಸಿದಚ್ಯುತಗೆ ಶರಣೆಂಬೆ ನಾರಾಯಣ 8 ದೇವದೈತ್ಯರು ಕೂಡಿ ಸಾಗರವ ಕಡೆಯಲು ನಾರಾಯಣ ವಾಸುಕಿ ಸುತ್ತೆ ನಾರಾಯಣ 9 ಆಗ ಸುರರಸುರರಿಬ್ಭಾಗವಾಗಿ ನಿಂತು ನಾರಾಯಣ ಭಾಳ ತುಚ್ಛದಿ ಬಲಬಿಟ್ಟು ಬಾಯಿಂದೆಳೆಯೆ ನಾರಾಯಣ 10 ವಾಸುಕಿ ಬಿಡಲು ಅಸುರಜನ ಮಡಿದ್ಹೋಗೆ ನಾರಾಯಣ ಕುಸಿದು ಹೋಗಲು ಗಿರಿ ಕೂರ್ಮರೂಪಾದಿ ನಾರಾಯಣ11 ಅಮೃತ ದೈತ್ಯರು ಕೊಂಡೋಡಲು ನಾರಾಯಣ ಸೃಷ್ಟಿ ಆದಿಕರ್ತ ಶ್ರೀ (ಸ್ತ್ರೀ?) ರೂಪವನು ಧರಿಸಿದ ನಾರಾಯಣ 12 ಮುಂಚೆ ಮೋಹವ ಮಾಡಿ ವಂಚಿಸಿ ದೈತ್ಯರನೆ ನಾರಾಯಣ ಹಂಚಿ ಸುರರಿಗೆ ಅಮೃತಪಾನ ಮಾಡಿಸಿದಯ್ಯ ನಾರಾಯಣ 13 ದಿತಿಯ ಸುತನು ಬಂದು ಪೃಥಿವಿಯನೆ ಸುತ್ತೊಯ್ಯೆ ನಾರಾಯಣ ಅತಿಬ್ಯಾಗದಿಂದ ರಸಾತಳ ಭೇದಿಸಿ ನಾರಾಯಣ 14 ಕ್ರೂರ ಹಿರಣ್ಯಾಕ್ಷನ್ನ ಕೋರೆದಾಡೆಲಿ ಸೀಳಿ ನಾರಾಯಣ ವರಾಹ ನಾರಾಯಣ 15 ಬ್ರಹ್ಮನಿಂದ್ವರ ಪಡೆದು ಹಮ್ಮಿಂದ ಕÉೂಬ್ಬ್ಯಸುರ ನಾರಾಯಣ ದುರ್ಮತಿಯಿಂದ್ಹರಿಯ ದೂಷಿಸುತಲಿದ್ದ ನಾರಾಯಣ16 ಮತಿಹೀನ ತನ ಸುತಗೆ ಮತಿಯ ಹಿಡಿಸುವೆನೆಂದ ನಾರಾಯಣ ಪಾರ್ವತೀಪತಿ ನಾಮವನು ಹಿತದಿಂದ ಬರೆಯೆಂದ ನಾರಾಯಣ 17 ಹರಿ ಹರಿ ಹರಿಯೆಂದು ಬರೆಯಾ(ಯಲಾ?) ಬಾಲಕನೋಡಿ ನಾರಾಯಣ ಉರಿಯ ಹೊಗಿಸುವೆನೆಂದ ಉಗ್ರಕೋಪಗಳಿಂದ ನಾರಾಯಣ18 ಮೆಟ್ಟಿ ಸಾಗೀಯಿಂದೆ ಬೆಟ್ಟದಿಂದಲಿ ಕೆಡೆವೆ ನಾರಾಯಣ ಕಟ್ಟಿ ಶರಧಿಯಲ್ಲÁ್ಹಕಿ ವಿಷ್ಣುಭಕ್ತನು ಬರಲು ನಾರಾಯಣ19 ಪ್ರಹ್ಲಾದ ನಿನ್ನೊಡೆಯ ಎಲ್ಹಾನೆ ತೋರೆನಗೆ ನಾರಾಯಣ ಮಲ್ಲಮರ್ದನ ಸ್ವಾಮಿ ಇಲ್ಲದೇ ಸ್ಥಳವುಂಟೆ ನಾರಾಯಣ20 ಪೃಥ್ವಿಪರ್ವತದಲ್ಲಿ ಸಪ್ತದ್ವೀಪಗಳಲ್ಲಿ ನಾರಾಯಣ ಸುತ್ತೇಳು ಸಾಗರದಿ ವ್ಯಾಪ್ತನಾಗ್ಹರಿಯಿರುವ ನಾರಾಯಣ21 ಅಣುರೇಣು ತೃಣದಲ್ಲಿ ಇರುವ ಆಕಾಶದಲಿ ನಾರಾಯಣ ರವಿ ಸೋಮ ತಾರಾಮಂಡಲದಲ್ಲಿ ತಾನಿರುವ ನಾರಾಯಣ 22 ಹದಿನಾಲ್ಕು ಲೋಕದಲಿ ಹರಿ ವಿಶ್ವವ್ಯಾಪಕನು ನಾರಾಯಣ ಸರ್ವದಿಕ್ಕುಗಳಲ್ಲಿ ಸನ್ನಿಹಿತನಾಗಿರುವ ನಾರಾಯಣ 23 ಆರಣಿಯೊಳಗಗ್ನಿಯಂದದಿ ಜನಕೆ ತೋರದಿರೆ ನಾರಾಯಣ ಜನನ ಮರಣಿಲ್ಲ ಜಗಜನ್ಮಾದಿಕಾರಣಗೆ ನಾರಾಯಣ 24 ನೀನರಿಯೆ ನಿನ್ನಲ್ಲೆ ಜೀವರಾಶಿಗಳಲ್ಲೆ ನಾರಾಯಣ ಈ ಜಗತ್ತಿಗೊಬ್ಬ ಇದ್ದಾನೆ ಎನ್ನೊಡೆಯ ನಾರಾಯಣ25 ಮಂದಭಾಗ್ಯನೆಯೆನ್ನ ಮಾತು ನಿಜವೆಂದು ತಿಳಿ ನಾರಾಯಣ ಈ ಸ್ತಂಭದಲ್ಲಿದ್ದಾನೆ ಮಂದರೋದ್ಧರ ಸ್ವಾಮಿ ನಾರಾಯಣ26 ಬಂದು ಭರದಿಂದಸುರ ಕಂಬ ಕಾಲಿಂದೊದೆಯೆ ನಾರಾಯಣ ತುಂಬಿತಾ ಘನಘೋಷದಿಂದ ಘುಡಿಘುಡಿಸುತಲಿ ನಾರಾಯಣ27 ಸಿಡಿಲು ಗರ್ಜಿಸಿದಂತೆ ಖಡಿ ಖಡಿ ಕೋಪದಲಿ ನಾರಾಯಣ ಕಿಡಿಗಳ್ಹಾರುತ ಕಂಬವೊಡೆದು ರೋಷದಿ ಬಂದ ನಾರಾಯಣ 28 ಖಳನ ಸೆಳೆದಪ್ಪಳಿಸಿ ದುರುಳನುದರವ ಬಗೆದÀು ನಾರಾಯಣ ಕರುಳ ವನಮಾಲೆ ತನ ಕೊರಳಲ್ಲಿ ಧರಿಸಿದ ನಾರಾಯಣ29 ತಲ್ಲಣಿಸಿ ಸುರರಾಗ ಮಲ್ಲಿಗೆಮಳೆ ಕರೆಯೆ ನಾರಾಯಣ ಪ್ರಹ್ಲಾದಸಹಿತ ಶ್ರೀದೇವಿ ಮುಂದಕೆ ಬರಲು ನಾರಾಯಣ30 ಕರದಿ ಕಂಗಳ ಮುಚ್ಚಿ ಸಿರಿಯ ತೋಳಿಂದಪ್ಪಿ ನಾರಾಯಣ ತೊಡೆಯನÉೀರಿಸಿ ತನ್ನ ತರುಣಿಗಭಯವನಿಟ್ಟ ನಾರಾಯಣ 31 ಸ್ತೋತ್ರವನು ಮಾಡಲಜ ಬಿಟ್ಟುಗ್ರಕÉೂೀಪವನು ನಾರಾಯಣ ಕೊಟ್ಟ ಪ್ರಹ್ಲಾದ(ಗ್ವ)ರಗಳ ಲಕ್ಷ್ಮೀನರಸಿಂಹ ನಾರಾಯಣ32 ಅಜ್ಞಾನದಿಂದ ತಾ ಯಜ್ಞ ಮಾಡುತಲಿರಲು ನಾರಾಯಣ33 ಅದಿತಿಯಲ್ಲವತರಿಸೆ ಅತಿಬ್ಯಾಗ ಕಶ್ಯಪರು ನಾರಾಯಣ ಸುತಗೆ ಉಪನಯನ ಭಾಳ್ಹಿತದಿಂದ ಮಾಡಲು ನಾರಾಯಣ 34 ಯಜÉೂೀಪವೀತ ಕೈಪು ಕೃಷ್ಣಾಂಜಿನ ಧರಿಸಿ ನಾರಾಯಣ ಶೀಘ್ರದಿಂದ ವಟು ವಾಮನ್ಯಜಶಾಲೆಗೆ ಬರಲು ನಾರಾಯಣ35 ಬಲಿಯ ಯಜ್ಞದಿ ಬಂದು ಭಾಳ ಪೂಜಿತನಾಗಿ ನಾರಾಯಣ ಛಲವಿಟ್ಟು ಮನದೊಳಗೆ ಬಲಿಯ ಯಾಚನೆ ಮಾಡೆ ನಾರಾಯಣ 36 ನಾ ಕೊಡುವೆ ಬೇಡು ಬೇಕಾದಷ್ಟು ಅರ್ಥವನು ನಾರಾಯಣ ಸಾಕಾಗದೇನಯ್ಯ ಸಲ್ಲ ಧನದಾಸ್ಯೆನಗೆ ನಾರಾಯಣ 37 ದೃಢಮನಸಿನಲಿ ಭೂಮಿ ಕೊಡು ಮೂರು ಪಾದವನು ನಾರಾಯಣ ಕೊಡುವೆನೆಂದಾಕ್ಷಣದಿ ಎರಡು ಚರಣವ ತೊಳೆದ ನಾರಾಯಣ38 ಒಂದು ಪಾದದಲಿ ಭೂಮಂಡಲವ ವ್ಯಾಪಿಸಿ ನಾರಾಯಣ ಪಾದ ನಾರಾಯಣ 39 ಕಂಡು ಕಮಲಜನು ಕಮಂಡಲೋದಕ(ದಿ) ತೊಳೆಯ ನಾರಾಯಣ ಉಂಗುಷ್ಠ ನಖದಿ ಉತ್ಪನ್ನಳಾದಳು ಗಂಗೆ ನಾರಾಯಣ40 ರಕ್ಕಸಾಂತಕನು ತ್ರಿವಿಕ್ರಮ ರೂಪಾಗಿ ನಾರಾಯಣ ಆಕ್ರಮಿಸಿಕೊಂಡ ಹದಿನಾಲ್ಕು ಲೋಕವ ಸ್ವಾಮಿ ನಾರಾಯಣ41 ಕೊಟ್ಟ ವಚನವ ತಪ್ಪಿ ಭ್ರಷ್ಟÀನಾಗದೆ ಭೂಮಿ ನಾರಾಯಣ ಕೊಟ್ಟರಿನ್ನೀಪಾದಯಿಟ್ಟು ಬಿಡುವೇನೆಂದ ನಾರಾಯಣ 42 ಕಟ್ಟಿ ಪಾಶದಲಿ ಕಂಗೆಟ್ಟಾಗ ಬಲಿರಾಯ ನಾರಾಯಣ ಕೆಟ್ಟೆನೆನ್ನದಲೆ ಮನಮುಟ್ಟಿ ಸ್ತೋತ್ರವ ಮಾಡೆ ನಾರಾಯಣ43 ದುಷ್ಟಜನ ಮರ್ದಕನು ಸೃಷ್ಟಿಸ್ಥಿತಿಲಯ ಕರ್ತೃ ನಾರಾಯಣ ಸೃಷ್ಟಿಗೊಡೆಯಗೆ ದಾನಕೊಟ್ಟರೆಂಬುವರುಂಟೆ ನಾರಾಯಣ 44 ಬಂಧನ ಬಿಡಿಸಿ ಬಲಿರಾಯಗ್ವರಗ¼
--------------
ಹರಪನಹಳ್ಳಿಭೀಮವ್ವ