ಒಟ್ಟು 6414 ಕಡೆಗಳಲ್ಲಿ , 131 ದಾಸರು , 4170 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವರವ ಕೊಡೆ ತಾಯೆ ವರವ ಕೊಡೆ ಪ. ಶರಧಿಯ ಕನ್ನೆ ನೀ ಕೇಳೈ ಸಂಪನ್ನಳೆ ಸೆರಗೊಡ್ಡಿ ಬೇಡುವೆನಮ್ಮ ವರವ ಕೊಡೆ ನೆರೆ ನಂಬಿದೆನು ನಿನ್ನ ಚರಣಕಮಲವನು ಪರಿಹರಿಸೆಮ್ಮ ದಾರಿದ್ರ್ಯ ಕಷ್ಟವ ತಾಯೆ1 ಹೊಳೆವಂಥ ಅರಸಿನ ಹೊಳೆವ ಕರಿಯ ಮಣಿ ಸ್ಥಿರವಾಗಿ ಕಟ್ಟುವಂಥ ವರವ ಕೊಡೆ ತಾಳೋಲೆ ಹೊನ್ನೋಲೆ ತೊಳೆದೊಯ್ದ ಬಿಚ್ಚೋಲೆ ಯಾವಾಗಲಿರುವಂಥ ವರವ ಕೊಡೆ 2 ಬಾಗಿಲ ತೋರಣ ಮದುವೆ ಮುಂಜಿ ನಾಮಕರಣ ಯಾವಾಗಲಾಗುವಂಥ ವರವ ಕೊಡೆ ಬಂಧುಬಳಗ ಹೆಚ್ಚಿ ಹೆಸರುಳ್ಳ ಮನೆ ಕಟ್ಟಿ ಉಂಡಿಟ್ಟಿಡುವಂಥ ವರವ ಕೊಡೆ 3 ಹಾಲ ಕರೆಯುವ ಮೇಲಾದ ಸರಳೆಮ್ಮೆ ಸಾಲಾಗಿ ಕಟ್ಟುವಂಥ ವರವ ಕೊಡೆ ಕಂಡಕಂಡವರಿಗೆ ಕರೆದು ಮೃಷ್ಟಾನ್ನವ ತಿಳಿ ನೀರು ಕೊಡುವಂಥ ವರವ ಕೊಡೆ 4 ಲಕ್ಷ್ಮೀನಾರಾಯಣನ ವಕ್ಷಸ್ಥಳದಲ್ಲಿ ಲಕ್ಷ್ಮಣವಾಗಿರುವಂಥ ಮಹಾಲಕ್ಷ್ಮಿ ಅಷ್ಟೈಶ್ವರ್ಯವು ಪುತ್ರಸಂತಾನವ ಕೊಟ್ಟು ರಕ್ಷಿಸುವವಮ್ಮ ವರವ ಕೊಡೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ವರವಾಮನಾಕಾರ ಪರಮಕರುಣಾಸಾರ ಶರಣಜನಮಂದಾರ ಭಯವಿದೂರ ಶತಯಾಗ ಸಹಜಾತ ದಿತಿಜಾಳಿ ಘನವಾತ ಶತಪತ್ರದಳನೇತ್ರ ಚಾರುಗಾತ್ರ ಕಶ್ಯಪಾತ್ಮಜಯೋಗ ವಶ್ಯ ಸದ್ಗುಣಭೂಷ ನಿತ್ಯ ಮಾಧುರ್ಯವಾಗ್ವಿಹಿತ ಭೇದರಹಿತ ಅನಂತ ಕಲ್ಯಾಣಗುಣಾಪ್ರಮೇಯ ಸನಕಾದಿ ಮುನಿನಿಕರವಂದ್ಯ ಚರಣ ಮನ್ಮೋಹನಾಂಗ ಪರಿಪಾಹಿರಂಗ
--------------
ನಂಜನಗೂಡು ತಿರುಮಲಾಂಬಾ
ವರಾಹಾವತಾರ ಜಯ ಜಯ ಯಜ್ಞವರಾಹ ಚಿನ್ಮಯ ಮೋದಾತ್ಮಕ ದೇಹ ಭಯವ ಪರಿಹರಿಸೀಗ ಆಲಯವನು ನಿಲಿಸುವ ರಾಗ ಪ. ಬ್ರಹ್ಮನ ನಾಸಿಕದಿಂದ ಪರಬೊಮ್ಮನು ಕಿಟಿಯಾದಂದ ಹಮ್ಮಿನ ದೈತ್ಯನ ಕೊಂದ ಈ ಕ್ಷಮ್ಮೆಯ ಸುಲಭದಿ ತಂದ 1 ಶಿಖಾಮಣಿ ರನ್ನ ಶ್ರೀ ಯಜ್ಞವರಾಹನೆ ನಿನ್ನ ಸುಜ್ಞತೆ ನಂಬಿದೆ ಮುನ್ನ ಸನ್ನøಗ್ಯನೆ(?) ನೀ ಸಲಹೆನ್ನ 2 ಶ್ರೀಪತಿ ವೆಂಕಟರಮಣ ಮಹದಾಪದ್ಗಣ ಹರಚರಣ ಭೂಪತಿ ತೋರಿಸು ಕರುಣ ಸಂತಾಪ ಬಿಡಿಸು ಸಚ್ಚರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ವರ್ಣಿಸಲಳವೆ ಕರುಣಾಳು ಗುರುವರ ನಿಮ್ಮ ವರ್ಣವರ್ಣದ ಚರಿತೆ ಗುಣಗಣಗಳ ಪ. ವರ್ಣಪ್ರತಿಪಾದ್ಯ ದೇವತೆಗಳಿಗೆ ಅಳವಲ್ಲ ಇನ್ನಿದನು ಪಾಮರರು ಅರಿಯುವರೆ ಜಗದಿ ಅ.ಪ. ಪ್ರತಿಪ್ರತಿ ಕಲ್ಪದಲಿ ಅತಿಶಯದ ತಪಚರಿಸಿ ಪತಿತಪಾವನ ಹರಿಯ ಮನ ಮೆಚ್ಚಿಸಿ ಕ್ಷಿತಿಯೊಳಗೆ ಅವತರಿಸಿ ದೇವಾಂಶರೆಂದೆನಿಸಿ ಪತಿತರನು ಪಾವನವಗೊಳಿಪ ಘನಮಹಿಮ 1 ಭಕ್ತರು ಕರೆದಲ್ಲಿ ಆಸಕ್ತಿಯಿಂ ಬಂದು ಯುಕ್ತಯುಕ್ತಗಳಿಂದ ತತ್ವಗಳನರುಹಿ ಮುಕ್ತಿಗೊಡೆಯನ ಮಾರ್ಗ ಮುಕ್ತಾರ್ಥ ಜನಕರುಹಿ ಮುಕ್ತಿಪಥ ಸವಿತೋರ್ವ ಶಕ್ತಿ ಮಹಿಮೆಗಳ 2 ಪಾದ ಪದ್ಮಸುತ ತಂದೆ ಮುದ್ದು ಮೋಹನದಾಸರಾಯರೆಂದೆನಿಸಿ ಮಧ್ವಮತಸಾರಗಳ ಹೀರಿ ಮಕರಂದವನು ಸಿದ್ಧಿಗೊಳಿಸಿ ಸುಜನಕೀವ ಶ್ರೀ ಗುರುವೆ3 ಕರಿಗಿರಿ ನರಹರಿಯ ಚರಣಕಮಲ ಧ್ಯಾನ ಅರಘಳಿಗೆ ಬಿಡದೆ ಮನಮಂದಿರದಿ ಸ್ಮರಿಪ ಕರುಣಜಲನಿಧಿಯೆ ನಿಮ್ಮ ಮೊರೆಹೊಕ್ಕವರ ಕಾಯ್ವ ಪರಮಪ್ರಿಯರೆಂತೆಂಬ ಬಿರುದುಳ್ಳ ಗುರುವೇ 4 ಕಮಲಾಂತ ಪ್ರೀತ ಶ್ರೀ ಕಮಲನಾಭನ ಪಾದ ಕಮಲ ಮನದಲಿ ಸ್ಮರಿಪ ಕಮನೀಯ ಗಾತ್ರ ಕಮಲಾಕ್ಷ ಗೋಪಾಲಕೃಷ್ಣವಿಠ್ಠಲನ ಪದ ಕಮಲ ಮನದಲಿ ತೋರಿ ಕೃಪೆಯಗೈಯ್ಯುವುದು 5
--------------
ಅಂಬಾಬಾಯಿ
ವರ್ಣಿಸಲಳವೆ ಸುಗುಣಸಾಂದ್ರನ ಪ ಕರ್ಣಜನಕಕೋಟಿ ತೇಜಶ್ರೀಶ ಭಜಕ ಜಯ ಮುನೀಂದ್ರನ ಅ.ಪ ಸೂತ್ರ ನೇತ್ರದಿಂದಬದ್ಧಮಾಡಿ ಪಿಡಿದು ಕಡೆದುಶುದ್ಧ ಯುಕುತಿ ಸುಧೆಯ ತೆಗೆದನ ಶಿಷ್ಯ ಜನಕೆಶ್ರದ್ಧೆಯಿಂದಲದನು ಎರೆದನ ಕ್ರೋಧದಿಂದಕೃದ್ಧವಾದಿಗಳನು ಗೆಲಿದನ-ಜಯ ಮುನೀಂದ್ರನ 1 ಮಾನನೀಯ ಶೀಲರಾದಮಾನವರನು ಕರೆದು ಹರಿಯಧ್ಯಾನದಲ್ಲಿ ನಿಲಿಸಿ ಒಲಿಸಿಹಾನಿಯಿಲ್ಲದ ಮುಕುತಿ ಪಡೆದಜ್ಞಾನಮತವ ಜನಕೆ ಸಾರ್ದನ, ಶಿಷ್ಯಜನಕೆಸಾನುರಾಗದಿ ತತ್ವಪೇಳ್ದನಜಯ ಮುನೀಂದ್ರನ2 ಸರಸದಿಂದ ಮೂರ್ಯೋಳುವಿರಸ ದುಷ್ಟ ಭಾಷ್ಯಗಳನುಮುರಿದಕ್ಷೋಭ್ಯ ತೀರ್ಥಯತಿಪಕರಸಂಜಾತ ರಮ್ಯಚರಿತಶರಣ ಜನರ ಪೊರೆವ ಯತಿಪನ, ಶಿಷ್ಯಜನರಮರುಳ ಮೋಹತಿಮಿರ ದಿನಪನ, ನಮ್ಮ ಪರಮಗುರು ಶ್ರೀಕೃಷ್ಣ ಪಾದಭಜಕನಜಯ ಮುನೀಂದ್ರನ3
--------------
ವ್ಯಾಸರಾಯರು
ವರ್ಣಿಸಲು ಸಾಧ್ಯವೇ ಧರೆಯೊಳಿನ್ನ ವರದೇಂದ್ರಗುರು ನಿನ್ನವರ ಮಹಿಮೆಯ ಪ ದಶಪ್ರಮತಿ ಸುಮತಾಖ್ಯ | ಬಿಸಜನಿಧಿಗೆ ಉಡುನಾಥ ವಸುಧಿ ಸುಮನಸವ್ರಾತ | ನಮಿತ ಖಾತ | ವಸುಧೀಂದ್ರ ಕರಜಾತ | ಸುಶರಣರ ಸುಖದಾತ | ವಸುಧೀಶ ಪಸರಿಸಿದ | ಅಸಮ ತವ ಚರಿತೆಯನು 1 ಸಾರ ಕನ್ನಡದಲಿ ನೀರಚಿಸುತಲಿ ತಂತ್ರ | ಸಾರ ಮಂತ್ರವ ಪರಮ ಕಾರುಣ್ಯದಿ || ಶ್ರೀರಂಗನೋಲಿಸಿದ ಧಾರುಣಿಪ ದಾಸರಿಗೆ ಸಾರಿ ಪೇಳಿದ ಪರಮೋಧಾರ ಜಿತಮಾರ 2 ಗುಣನಿಧಿ ಪ್ರಾಣೇಶದಾಸಾರ್ಯರ ಮನೆಯ ಹಿತ್ತಲದೊಳಗೆ ಬಣವಿ ಬುಡದಲಿ ಬಂದು ಘನ ತುಲಸಿ ರೂಪದಲಿ ಜನಕೆ ತೋರಿಸಿ ಚಿತ್ರ 3 ವಾದದಲಿ ರಾಮಾಖ್ಯ ವಾದಿಯಪ ಜಯ ಪೊಂದಿ ಗಜ ಭೂಷಣಾದಿಗಳನು || ಮೋದ ಬಡಿಸಿ ನಿನ್ನ ಔದಾರ್ಯ ಗುಣವ 4 ಶಾಮಸುಂದರ ಮೂಲ ರಾಮಚಂದ್ರನ ಚರಣ ತಾಮರಸ ಷಡ್ಜಪರಮ ಸುಗಣ ಧೀಮಂತ ಶ್ರೀಮಂತ್ರಧಾಮ ನಿಲಯರ ಪೂರ್ಣ ಪ್ರೆಮ ಸತ್ವಾತ್ರ ಮಮ ಸ್ವಾಮಿ ಸುಚರಿತ್ರ 5
--------------
ಶಾಮಸುಂದರ ವಿಠಲ
ವಸುದೇವ ಸುತನ ಶಶಿ ಮುಖವನುತಂದು ತೋರಿಸೆ ಸಖಿ ತಂದು ತೋರಿಸೆ ಪ ಹೊಸಬೆಣ್ಣೆ ಬುತ್ತಿಯ ಪಶುಪಾಲಗಿತ್ತುಪೊಗಳುವೆ ಕೇಳವನ ಚರಿತೆಯ ಅ.ಪ. ಫುಲ್ಲಾಕ್ಷಿ ಇಟ್ಟ ಮನವನು ಅವನಲ್ಲಿ ತೆಗಿಯೆನೆ ಗೋ-ವಲ್ಲಭ ಬೆನ್ನು ಬಾಗಿ ಮೋಹಿಸುತ ಪೋದನೆ 1 ಸಖಿಕೇಳು ಮತಿಯು ಭ್ರಮಿಸಿತು ಅವನಲ್ಲಿ ಅತಿಶಯಸುಖದಿಂದ ಸ್ಮರಿಸುವೆ ಕೇಳವನ ಚರಿತೆಯ 2 ಸುಕೃತ ಇದ್ದರೀತ ನಾ ಸಖೀತಂದು ತೋರೆ ನೋಡುವೆನಾ ಇಂದಿರೇಶನಾ 3
--------------
ಇಂದಿರೇಶರು
ವಸುಧೀಂದ್ರ ತೀರ್ಥರು ಶ್ರೀ ವಸುಧೀಂದ್ರ ರಾಯಾ | ಪಾವನಕಾಯಾ ಕೋವಿದ ಜನ ಪ್ರೀಯಾ ಪ ಭೂವಲಯದೊಳತಿ | ತೀವಿದ ಅಘವನ ದಾವಕ ನತಜನ ದೇವತರು ಎನಿಪ ಅ ಜಿತಕ್ರೋಧ ಜಯಶೀಲಾ | ದುವ್ರ್ಯಸನ ಪ ವಜ್ರ ಹರಿಲೋಲಾ ಮಾರ್ಗಣ | ಮಥನ ಮೌನೀಶ ವಾಂ ಛಿತಫಲವಿತ್ತು ಸಂ | ತತ ಪಾಲಿಸುವುದೆಮ್ಮ ಪತಿತ ಪಾವನ ವಿತತ ಕರುಣಾ ಮೃತರತಾನತ ಹಿತಕರಾಗಮ ತತಿ ಪಯೋಜಾರ್ಕ ಅತಿಮುದಾ1 ಭೂದೇವಾನುತ ಮಹಿಮಾ |ಶಾತವಾನು ಭೀಮ ವೇದಪೂಜಿತರಾಮಾ ಪಾದ | ಸಾದರದಲಿ ನಿತ್ಯಾ ರಾಧಿಸುತಿಹ ಸುವಿ | ನೋದಚರಿತ ಗುರು ಮೋದತೀರ್ಥ ಮತಾಬ್ಧಿ ಸೋಮ ಕು ವಾದಿ ಮತ ಮತ್ತೇಭಕುಂಭಧ ರಾಧರಾತಟವಾನುಗರೊಳೆ ನ್ನಾದರಿಸುವುದಖಿಳಗುಣಾಂಬುಧೇ 2 ಸರಸಭಾಷೋಹ್ಲಾಸಾ | ವರ್ಚಿತ ದೋಷಾ ಹರಿನಿಭಸಂಕಾಶಾ ಶರೀರಾ ಸಜ್ಜನಗೇಯಾ | ಗುರುವಾದೀಂದ್ರಕರ ಸರಸೀರುಹ ಸಂಜಾತ | ನಿರುಪಮ ನಿರ್ಭೀತಾ ಸುರುಚಿರಹಿಮ ಕಿರಣ ತೇಜ ಸ್ಫುರುಣ ಶ್ರೀ ಜಗನ್ನಾಥವಿಠಲನ ಚರಣ ಪಂಕೇರುಹ ಯುಗಳ ಮಧು ಕರದುರಿತಘನ ಮಾರುತಾ 3
--------------
ಜಗನ್ನಾಥದಾಸರು
ವಸುಮತೀಶ ವಿಠ್ಠಲನೇ ನೀನಿವಗೆ | ಎಸೆವ ಜ್ಞಾನವನಿತ್ತುಹಸನಾಗಿ ಕಾಪಾಡಬೇಕೊ ಹರಿಯೆ ಪ ಕುಸುಮ ಸಂಭವ ಪಿತನೆ | ವಾಸುದೇವನೆ ಕೃಷ್ಣನಸು ನಗೆಯಲೀ ನಿನ್ನ ಉಪಾಸನವ ಕೊಡೊ ಹರಿಯೆ ಅ.ಪ. ತರತಮವು ಪಂಚಭೇದದ ಜ್ಞಾನ | ನಿರತಿಶಯ ಹರಿಭಕ್ತಿಗುರುಭಕ್ತಿಗಳ ಕರುಣಿಸೀ ಕಾಪಾಡಬೇಕೊ ಹರಿಯೇ |ವರ ಪ್ರದಾಯಕ ಸ್ವಾಮಿ ವೈರಾಗ್ಯ ಭಾಗ್ಯಗಳ ನೀನಿವರಿಗಿತ್ತುಕರುಣದಿಂ ಕಾಪಾಡಬೇಕೊ ಹರಿಯೇ 1 ನಿನ್ನ ಮೊರೆ ಹೊಕ್ಕವನ | ಇನ್ನು ಕೈ ಪಿಡಿಯುವುದುನಿನ್ನ ಧರ್ಮವಲ್ಲವೆ ಸ್ವಾಮಿ ರಾಮಚಂದ್ರ |ನನ್ನೆಯಿಂದಲಿ ಇವನ ಪಾಪಗಳ ಪರಿಹರಿಸಿನಿನ್ನ ಪದ ಸೇವಕನ ಮಾಡೊ ವೈಕುಂಠ ಪತಿಯೇ 2 ಖಗವರಧ್ವಜ ದೇವ ಜಗಜ್ಜನ್ಮಾದಿ ಕಾರಣನೆಬಗೆಬಗೆಯ ಮಹಿಮೆಗಳ ತೋರಿ ಕಾಪಾಡೊ ಹರಿಯೇ |ಸುಗುಣ ಮೂರುತಿ ದೇವ ತ್ರಿಗುಣ ವರ್ಜಿತ ಸ್ವಾಮಿಹಗರಣಗಳೀಯದಲೆ ಕಾಪಾಡೊ ಹರಿಯೇ 3 ಇಷ್ಟಮೂರುತಿ ದೇವ ಸೃಷ್ಟ್ಯಾದಿ ಕಾರ್ಯಗಳದೃಷ್ಟಿಯಿಂದಲಿ ಮಾಳ್ಪ ಮಹಮಹಿಮ ಹರಿಯೇ |ಕೃಷ್ಣಮೂರುತಿ ಹೃದಯ ಅಷ್ಟದಳ ಮಧ್ಯದಲಿದೃಷ್ಟಿಗೋಚರನಾಗಿ ಕಾಪಾಡೊ ಹರಿಯೇ 4 ಮೂರ್ತಿ ಹಯ ಮೊಗಾತ್ಮಕನೇ |ವೇದಾಣಿ ವಂದ್ಯ ಗುರುಗೋವಿಂದ ವಿಠ್ಠಲನೇನೀ ದಯದಿ ಕೈ ಪಿಡಿದು ಕಾಪಾಡೊ ಹರಿಯೇ 5
--------------
ಗುರುಗೋವಿಂದವಿಠಲರು
ವಾಗ್ದೇವಿ ಪ ವಾಗ್ದೇವಿ ಅ.ಪ. ಹಿತದಿ ಸನ್ಮತಿಯ ಶ್ರೀಮತಿದೇವಿ ನೀಡೆ ವ್ರತತಿಜನೇತ್ರೆ ಭಾರತಿ ನೀ ದಯಮಾಡೆ 1 ಸುಮುಖೀ ತ್ವಚ್ಚರಣಾಬ್ಜದ್ರುಮಛಾಯಾಶ್ರಿತರ ಸುಮತಿಗಳೊಳಗಿಟ್ಟು ಮಮತೆಯಿಂ ಸಲಹೆ 2 ಜಗನ್ನಾಥವಿಠಲನಂಘ್ರಿಗಳ ಸೇವೆಯೊಳು ಸುಗುಣೆ ಸನ್ಮತಿಗೊಟ್ಟು ಬೇಗೆನ್ನ ಸಲಹೆ 3
--------------
ಜಗನ್ನಾಥದಾಸರು
ವಾಗ್ದೇವಿ - ನಿಮ್ಮಚರಣ ಕಮಲಂಗಳ ದಯಮಾಡು ದೇವಿ ಪ ಶಶಿ ಮುಖದ ನಸುನಗೆಯ ಬಾಲೆಎಸೆವ ಕರ್ಣದ ಮುತ್ತಿನೋಲೆನಸುನಗುವ ಸುಪಲ್ಲ ಗುಣಶೀಲೆ - ದೇವಿಬಿಸಜಾಕ್ಷಿ ಎನ್ನ ಹೃದಯದೊಳು ನಿಂದವಳೆ 1 ಇಂಪು ಸೊಂಪಿನ ಚಂದ್ರ ಬಿಂಬೆಕೆಂಪು ತುಟಿಗಳ ನಾಸಿಕದ ರಂಭೆಜೊಂಪು ಮದನನ ಪೂರ್ಣ ಶಕ್ತಿ ಬೊಂಬೆ - ಒಳ್ಳೆಸಂಪಗೆ ಮುಡಿಗಿಟ್ಟು ರಾಜಿಪ ಶಾರದಾಂಬೆ2 ಸನ್ನುತ ರಾಣಿವಾಸೆ 3
--------------
ಕನಕದಾಸ
ವಾಗ್ದೇವಿ ಭಾರತಿ ನೀಡೆನಗೆ ಸುಮತಿ ನಂದಸುತನ ಪದದಿ ಕೊಡು ರತಿ ಪ ಕಳೆದು ಮನದಿ- ಗರಿಯೆ ಬಂದು ಬೇಗ ಅ.ಪ ಇಂದು ಮೌಲಿ ಮುಖ್ಯ ಸುರಗಣ ವಂದಿತಳೆ ಎನ್ನ ಅನುದಿನ ನಂದ ಮುನಿಯ ಶಾಸ್ತ್ರವಚನ ಛಂದದಿಂದ ಪಠಣ ಶ್ರವಣಾನಂದವಾಗುವಂದದಿ ಗುರು ಗಂಧ ವಾಹನರಾಣಿ ನಿನಗೆ1 ಪೇಳಲಳವೆ ನಿಮ್ಮ ಮಹಿಮೆಯ ಕಾಲಭಿಮಾನಿ ಕೇಳುವೆ ಸುಜ್ಞಾನ ಭಕುತಿಯ ಕಾಲಕಾಲಗಳಲ್ಲಿ ಎನ್ನ ಶುಭ ಲೀಲೆಗಳನು ಪಾಡಿ ಪೊಗಳುವಂತೆ ಜನನಿ 2 ಚಾರು ಕೃಷ್ಣಾತೀರಸಂಸ್ಥಿತಾ ಉದಾರ ಚರಿತ ನೀರಜಾಸನಾದಿಸುರನುತಾÀ ಶೇರಿದ ಭಕುತರಿಗೆ ತ್ರಿದಶ ಭೂರುಹ ವೆಂದೆನಿಸಿದಂಥಾ ಪಾರ ಮಹಿಮ ಕಾರ್ಪರಸಿರಿ ನಾರಸಿಂಹನ ಸೊಸೆಯೆ ನಿನಗೆ 3
--------------
ಕಾರ್ಪರ ನರಹರಿದಾಸರು
ವಾಜಿವದನಾರ್ಚಕ ಶ್ರೀ ವಾದಿರಾಜ ಪ ರಾಜೀವನಯನ ಶ್ರೀ ಕೃಷ್ಣನಲಿ ಬಿಡು ಎನ್ನ ಅ.ಪ. ದೇವದೇವೇಶನ ಪರಮ ಒಲುಮೆಗೆ ಪಾತ್ರ ಪಾವನ್ನತಮಚರಿಯ ಪತಿತಪಾಲ ಸಾವಧಾನದಿ ಎನ್ನ ಆದಿರೋಗವನಳಿದು ಕೇವಲ ಸದ್ಭಕ್ತಿ ಶೀಲನ ಮಾಡಯ್ಯ 1 ಭಾರತೀಪತಿ ಪದವನೈದುವ ಮಹಾತ್ಮ ಮಾರಾರಿಸುರ ಪೂಜ್ಯ ಕರುಣಿಸಿ ಕಾಯೊ ಸಾರಿದೆನು ತವ ಚರಣ ಸರಸಿಜಯುಗ್ಮಗಳ ದೂರ ಮಾಡದೆ ಹರಿಯ ಕರುಣಪಾತ್ರನ ಮಾಡು 2 ಭಾಗವತ ಶಿರೋರತುನರಿಂದರ್ಚಿತನೆ ಶಿರಿ ವೇಣುಗೋಪಾಲ ವೇದ ವೇದ್ಯ ಜಯೇಶವಿಠಲನ ಮನದಲ್ಲಿ ಬಿಡದಿಪ್ಪ ಪರಮಕೃಪೆ ಬೇಡುವೆನು ಕರುಣಾಬ್ಧಿ ಕೃಪೆ ಮಾಡು 3
--------------
ಜಯೇಶವಿಠಲ
ವಾಣಿ ಬ್ರಹ್ಮನ ರಾಣಿ ಕಲ್ಯಾಣೀ| ಫಣಿವೇಣಿ ಸದ್ಗುಣ | ಶ್ರೇಣಿ ವೀಣಾ ಪುಸ್ತಕ ಪಾಣಿ ಪ ಜಾಣೆ ಶ್ರೀ ಜಗತ್ರಾಣಿ ಶಾಸ್ತ್ರ ಪ್ರ- ವೀಣೆ ವೇದ ಪ್ರಮಾಣಿ ನಿನಗೆಣೆ | ಗಾಣೆ ಸಂತತಕೇಣವಿಡದೆನ್ನಾಣೆ | ನೆಲಸಿರು ಮಾಣದೆನ್ನೊಳು ಅ.ಪ. ತ್ರಿಜಗ ಶುಭ ಕಾಯೇ | ಓಂಕಾರರೂಪಿಣಿ | ಮಾಯೆ ಮುನಿಜನಗೇಯೆ ಸುಖದಾಯೇ || ತೋಯಜಾಂಬಕಿ ಶ್ರೀಯರ ಸೊಸೆ | ಆಯದಿಂದಲಿ ಶ್ರೇಯಸ್ಸುಖಪದ - ವೀಯೆ ಸಂತತ ಕಾಯೆ ಶತಧೃತಿ ಪ್ರೀಯೆ | ನೀನೆನಗೀಯೆ ವಾಕ್ಸುಧೆü 1 ಅಕ್ಷರ ಸ್ವರೂಪೆ ನಿರ್ಲೇಪೇ | ಮೌನಿಜನ ಮಾನಸ | ಪಕ್ಷ ಸಕಲಾಧ್ಯಕ್ಷೆ ಶುಭಚರಿತೇ | ಸೂಕ್ಷ್ಮ ಸ್ಥೂಲ ಸುಲಕ್ಷಣಾನ್ವಿತೆ | ಮುಮುಕ್ಷು ಜನ ನಿಜ | ಭಕ್ತಿ ಭುಕ್ತಿವರ ಪ್ರದಾಯಕಿ | ಮುಕ್ತಿ ಸುಖ ಸೌಖ್ಯ ಪ್ರದಾಯಕಿ 2 ಸುಂದರಾಂಗಿ ಆನಂದ ಗುಣ ಭರಿತೇ | ವಂದಿಸುವೆ ತವಪದ -| ದ್ವಂದಕಾನತನಾಗಿ ಸಚ್ಚರಿತೇ | ಯೆಂದು ಮದ್‍ಹ್ವನ್ ಮಂದಿರದಿ ನೀ | ನಿಂದು ಆಪದ್ ಬಂಧು ಕರುಣಾ | ಸಿಂಧುವನು ನಾನೆಂದು ಪೊಗಳ್ವಾ -| ನಂದವರ ಸದಾನಂದ ಪಾಲಿಸೇ 3
--------------
ಸದಾನಂದರು
ವಾಣಿ ವರದೆ ಶಾರದೆ ನಿನ್ನ ಚರಣವ ಸೇರಿದೆ ಪ. ಎನ್ನ ನಾಲಿಗೆಯೊಳ್ನೆಲಸು ಹರಿಲೀಲೆಯನ್ನು ನುಡಿಸು 1 ಅತಿರೋಹಿತ ವಿಜ್ಞಾನಿ ವೇದವ್ಯೂ ಹಕಭಿಮಾನಿ 2 ಲಕ್ಷ್ಮೀನಾರಾಯಣನ ಸೊಸೆ ಸರ್ವಾಧಾರ ಭಕ್ತಿವಿಲಾಸೆ3
--------------
ತುಪಾಕಿ ವೆಂಕಟರಮಣಾಚಾರ್ಯ