ಒಟ್ಟು 5094 ಕಡೆಗಳಲ್ಲಿ , 122 ದಾಸರು , 3288 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಲವು ಹಂಬಲಿಸಿದಲ್ಲೇನೂ ಇಲ್ಲ ಜಲಜನಾಭನ ಕರುಣÉೂೀದಯವು ತಪ್ಪಿದ ವೇಳ್ಯಾ ಪ ಬರಿಗಂಟು ಅಪೇಕ್ಷೆ ಬಯಸುವುದೆಲ್ಲಾ ಪೂರ್ವಾಕೃತ ಇದ್ದದ್ದು ಬಿಟ್ಟದ್ದೆ ಇಲ್ಲ ಬಿರುದು ಬಾವಲಿ ದೇಹಾಭಂಗ ಬಡುವಾದೊಂದೆ ಪರಿ ವ್ಯಥೆಯಿಂದ ಫಲವೇನೊ ಇಲ್ಲ ಮುಂದಾ 1 ಬಿತ್ತಿದ ಬೀಜ ಎಷ್ಟು ಬೆಳೆಯ----ಲಿನೂ ಸುತ್ತಾ ದೇಶವು ತಿರುಗಿ ಸೂಸಿದರೇನೂ ಪತ್ರ ಬರೆದ ಬ್ರಹ್ಮ ಫಣಿಯ ಲಿಖಿತವಲ್ಲದೆ ಪ್ರತ್ಯೇಕ ನಿನಗೊಂದು ಬಾಹೋದು ಇನ್ನುಂಟೆ 2 ಅನುಭವ ಇದ್ದವಲ್ಲಾ ------ಇಲ್ಲಾ ಮನದಿ ತಿಳಿದು ಇನ್ನು ಮರಿಯದು ಎಲ್ಲಾ ಘನ್ನ 'ಹೊನ್ನೆ ವಿಠ್ಠಲ ನಾ ಕರುಣಾವಿಲ್ಲ ----- ಮನಸಿನೊಳಗೆ ಸ್ಮರಿಸಿ ಮುಕುತನಾಗೋದು ಬಿಟ್ಟು 3
--------------
ಹೆನ್ನೆರಂಗದಾಸರು
ಹವಣಿಕಿಲಿ ನೀ ಮಾಡು ಸುವಿಚಾರ ಸಾಧನ ಪ ಬಟ್ಟೆ ಬಹುಕ್ಲೇಶವನುಪರಸಿ ಕುವರನ ಕರುಣಾ..........ನಿನ್ನ ನೀನರಿತುಕೋ ...................................................................................ಶ್ವೇತಾ ವಿಮೋರ್ಛಿತಕಿನ್ನುನಿದ್ರಿತ ಕಿಮರ ಮಾತಾಭೂಮಿ ನೀ ಪತಿತ |ರುಕ್ಮವಿಭೂಷಣ ರಹಿತ ಶಾಂತಾ ದಾಂತವಿವಸ್ವಾಂತಬೌದ್ಧೇಯ ಮುನಿಕಾಂತ ||
--------------
ರುಕ್ಮಾಂಗದರು
ಹಂಸವಾಹನಪಿತನೆ _ ಹಂಸಾ ಢಿಭಿಕವೈರಿ ಶೌರಿ _ ಬಾ ಬಾ ಬಾ ಪ ಸಾಸಿರನಾಮದೊಡೆಯ ವಾಸವವಿನುತನೆ ಲೇಸಾಗಿಸ್ತುತಿಸುವೆ _ಬಾ ಬಾ ಬಾ ಅ ವೇದಾವಕದ್ದಂಥ ಉದ್ದಂಡ ದೈತ್ಯನ ಮರ್ಧಿಸಿ ವೇದವ ತಂದು ವೇಧನ ಸಲಹಿದ ಮತ್ಸ್ಯ ಬಾ ಬಾ ಬಾ 1 ಸಿಂಧು ವಿನೊಳಗಿದ್ದ ಮಂದರಗಿರಿಯನ್ನು ಬಂದು ಬೆನ್ನಿಲಿಪೊತ್ತು ತಂದು ಪೀಯೂಷವ ಚಂದದಿ ಸಲಹಿದ ಕೂರ್ಮಸ್ವರೂಪನೆ _ ಬಾ ಬಾ ಬಾ 2 ಕನಕನೇತ್ರನ ಕೊಂದು ಕಾಂತೆಯಹಿಡಿದೆತ್ತಿ ಕನಕಗರ್ಭನಿಗೊಲಿದ ಕಾರುಣ್ಯನಿಧಿಚಂದ್ರ ಕ್ರೋಢ ಯಜ್ಞ ಸ್ವರೂಪನೆ _ ಬಾ ಬಾ ಬಾ 3 ತರುಳನಮೊರೆಕೇಳಿ ದುರುಳನ ಕರುಳನೆ ಬಗೆದು ಕೊರಳೊಳು ಕರುಳ ಧರಿಸಿ ಸುರರನ್ನು ಪೊರೆದಂಥ ಸರ್ವವ್ಯಾಪಿ ಕರುಣಿಯೆ ಮೂರ್ತಿ _ ಬಾ ಬಾ ಬಾ 4 ಅನುಜನ ಪೊರೆಯಲು ತನುವನು ಮರೆಸಿಕೊಂಡು ದಾನವನು ಬೇಡುತ ಬಲಿ ಯನು ತುಳಿದು ಪೊರೆದ ಘನ್ನ ಮಹಿಮ ವಟು ವಾ ಮನ ರೂಪಿಯೆ _ ಬಾ ಬಾ ಬಾ 5 ಕೊಡಲಿಯ ಪಿಡಿಯುತ ಒಡೆಯರ ತರಿದು ಕಡಿದು ಮಾತೆಯ ಪಿತ ನುಡಿಯನು ಸಲಿಸಿದ ಚಂಡವಿಕ್ರಮ ಮಹಿಮ ಭಾರ್ಗವ ಮೂರುತಿ _ ಬಾ ಬಾ ಬಾ 6 ಕಾಂತೆಯನೆಪದಿಂದ ಕದನವ ಹೂಡಿಕೊಂಡು ಅಂತಕಸದನಕೆ ಅರಿಗಳ ತಳ್ಳುತ ಶಾಂತತೆ ಬೀರಿಪೊರೆದ ದಶರಥ ರಾಮನೆ _ ಬಾ ಬಾ ಬಾ 7 ಚೋರತನದಿ ಬಲು ಬೆಣ್ಣೆಯ ಮೆಲ್ಲುತ ಜಾರತನದಿ ಋಷಿ ಸ್ತ್ರೀಯರಿಗೊಲಿದಂಥ ಮಾರಜನಕ ಶ್ರೀ ರುಕ್ಮಿಣಿ ಕೃಷ್ಣ _ ಬಾ ಬಾ ಬಾ 8 ವೇದಗೋಚರ ವಿಶ್ವ ವೇದ ಬಾಹ್ಯರಿಗೆಲ್ಲ ವೇದ ವಿರುದ್ಧವಾದ ವಾದಗಳ ತೋರಿ ನಿಂದು ಬೆತ್ತಲೆ ಮೆರದ ಬೌದ್ಧ ಸ್ವರೂಪನೆ _ ಬಾ ಬಾ ಬಾ 9 ಕಲಿಬಾಧೆ ಹೆಚ್ಚಾಗೆ ಕಲಿಯುಗ ಕೊನೆಯಲ್ಲಿ ಮಲಿನಾರ ಮರ್ಧಿಸಿ ಉಳಿಸಲು ಧರ್ಮವ ಚಲುವ ರಾಹುತನಾದ ಕಲ್ಕಿ ಸ್ವರೂಪನೆ _ ಬಾ ಬಾ ಬಾ 10 ಸತ್ಯಸಂಕಲ್ಪನೆ ನಿತ್ಯಸ್ವರೂಪನೆ ಉತ್ತಮನೀನೆಂದು ಒತ್ತೊತ್ತಿ ಪೊಗಳುವೆ ಭೃತ್ಯನು ನಿನ್ನವನು ಕಣ್ಣೆತ್ತಿ ನೋಡುತ _ ಬಾ ಬಾ ಬಾ11 ಏಕರೂಪನೆ ನಿನ್ನನೇಕ ರೂಪಂಗಳ ಸಾಕಲ್ಯದಿಂದಲಿ ಶ್ರೀಕಾಂತೆ ಅರಿಯಳು ಕಾಕುಮತಿಯು ನಾನು ಎಂತು ವರ್ಣಿಸಲಯ್ಯ _ ಬಾ ಬಾ ಬಾ12 ಪೂರ್ಣಸ್ವರೂಪನೆ _ ಪೂರ್ಣ ಗುಣಾಬ್ಧಿಯೆ ಪೂರ್ಣನಂದಾನೆ ಪೂರ್ಣ ಸ್ವತಂತ್ರನೆ ಪೂರ್ಣಬೋಧರ ಪೂರ್ಣ ಕರುಣಾವ ಬೀರಿಸು _ ಬಾ ಬಾ ಬಾ 13 ಮಾತುಮಾತಿಗೆ ನಿನ್ನ ನಾಮದಸ್ಮರಣೆಯ ನಿತ್ತು ಪಾಲಿಸು ಎನ್ನ ಮೃತ್ಯೋಪಮೃತ್ಯುವೆ ದೇವ ಭಕ್ತಿಭಾಗ್ಯವನಿತ್ತು ಮನ್ನಿಸಿ ಸಲಹುತ _ ಬಾ ಬಾ ಬಾ 14 ದೋಷದೂರನೆ ನಿನ್ನ ದಾಸನುನಾನಯ್ಯ ವಾಸವ ಜಯಮುನಿ ವಾತನೊಳ್ವಾಸಿಪ ಈಶ ಸಿರಿಕೃಷ್ಣ ವಿಠಲರಾಯನೆ ಬೇಗ ಬಾ ಬಾ ಬಾ 15
--------------
ಕೃಷ್ಣವಿಠಲದಾಸರು
ಹಸೆಗೆ ಬಾರೆ ಶುಭಾಂಗಿವಿಭಾವ ಪ ಸಿರಿ ಅ.ಪ ಜೀವರ ಸ್ವಭಾವಗಳಂತೆಯೆ ಮಾನಿನಿ ಜನನಿಯೆ ಬೇಗದಿ 1 ಭಾಸುರಾಂಗಿಯೇ ಬಾರೇ ರಮಾ ನೀ ಸಲಹಬೇಕು ನಮ್ಮಮ್ಮ ವಂದಿಸುವೆನೂ 2 ಗುರುರಾಮ ವಿಠಲನ ಪ್ರಿಯೆ ಕರುಣಾಬ್ಧಿಯೆ ಕಾಯೆ ಮಾಯೆ ವರಗಳ ನೀ ಕೊಡು ತಾಯೆ ಮಹಾಲಕ್ಷ್ಮಿಯೇ 3
--------------
ಗುರುರಾಮವಿಠಲ
ಹಸೆಗೆ ಬಾರೈರಾಮಾ ಪ ಬಿಸಜಾಪ್ತ ವಂಶಲಲಾಮ ಅ.ಪ ಮಾನಸ ಪೀಠಕೆ ಜಾನಕಿದೇವಿ ಸಹಿತಾ ಆನತರಿಗೆ ಸೌಖ್ಯವ ಬೀರುತಲಿ 1 ಬ್ರಹ್ಮಮಹೇಶ್ವರ ಸುಮ್ಮಾನದಿ ಕೈಕೊಡಲು ಧರ್ಮಸ್ಥಾಪಿಸೆ ಧರಣಿ ಮಂಡಲದಿ 2 ಹನುಮಂತ ಜಾಂಬವ ಇನತನಯಾಂಗದಾದಿ ಘನಕಪಿವೀರರು ಕಾದುಕೊಂಡಿರುವರು 3 ನೀಮನವಲಿದನುಗ್ರಹಿಸಿ ಬೇಗದಿ4 ಅಂತಃಕರುಣಾಸಿದ್ಧಿಯಂ ತವಕದಿ ಕೊಟ್ಟು ಅಂತರಾತ್ಮಕ ಗುರುರಾಮ ವಿಠಲನೆ 5
--------------
ಗುರುರಾಮವಿಠಲ
ಹಾಕುವೆ ಸುಮಾಲಾ ಸುಶೀಲಾ ಸ್ವೀಕರಿಸೈ ಕರುಣಾಕರ ಕಂಠದಿ ಪ ಅರಳಿದ ಮಲ್ಲಿಗೆ ಸುರಸು ಶಾವಂತಿಗೆ ಪರಿಮಳ ಪುಷ್ಪದ ಸರವನು ಶಾವಂತಿಗೆ ಪರಿಮಳ ಪುಷ್ಪದ ಸರವನು ವಿರಚಿಸಿ 1 ಜೀವದೊಡೆಯ ಪರದೇವತೆ ನೀನೆಂಬೊ ಭಾವಕುಸುಮ ಭಕ್ತಿ ಸೂತ್ರದಿ ಬಂಧಿಸಿ 2 ಶಾಮಸುಂದರ ನಿನ್ನ ನೇಮದಿ ನೆನೆವೆನು ಭಾಮೆಯನಗಲದೆ ಪ್ರೇಮದಿ ಪೊರೆ ಎಂದು 3
--------------
ಶಾಮಸುಂದರ ವಿಠಲ
ಹಾಸ್ಯದ ಮಾತಿದು ಮಾನವಗೆ ವಿಷಯೇಚ್ಛೆಯ ಜೀವನವೆಂಬುದು ಶಾಶ್ವತ ಶಾಂತಿಯ ನೀಡುವ ನಿನ್ನಯ ಪದವನೆ ಮೆರೆತಿಹದು ಗುರುವೇ ಈಶ್ವರನೀತನೆಂದು ಸಾರಿತು ಶೃತಿ ಇದ ಕೇಳುತ ನಾ ಕರುಣಾ ನಿಧಿಯೇ ನಿನ್ನ ಹೊರತಿ ನ್ನನ್ಯರು ಗತಿಯಿಲ್ಲೆನ್ನುತ ನಾ ಚರಣಕಮಲಕೆ ಮೊರೆಹೊಕ್ಕೆ ಪರಮಾನಂದಾತ್ಮ ಸ್ವರೂಪದಾ ಅರಿವನು ನೀಡಿ ಪೊರೆವುದು ಎನ್ನಶಂಕರ ಗುರುದೇವಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಹಿಂಗಾಯಿತಲ್ಲಾ ಏನಿದು ಹರಿಹರಿಪ ಮಂಗನ ತೆರ ಈ ಅಂಗವ ವಿಷಯತ ರಂಗೆ ವಡ್ಡುತ ರಂಗನ ಮರೆತಿಹೆ ಅ.ಪ. ಬರಿದೆಯೆ ಹೋಗುತ್ತಿರುವುದು ಹೊತ್ತು ಹರಿಧ್ಯಾನಕೆ ಸಾಲದು ಪುರಸೊತ್ತು ತಿರುಗಲು ಮನೆಮನೆ ಸಾಲದು ಹೊತ್ತು ಸರಸಿಜನಾಭನೆ ಇದಕ್ಕೇನು ಮದ್ದು 1 ಶ್ರೀ ಕಮಲೇಶನ ಪೂಜೆಯ ಮಾಡನೆ ಆಕಳಿಸುತ ಮೈ ಕೈ ಮುರಿಯುವೆನು ಸ್ವೀಕರಿಸಲು ಸವಿ ಪಾನೀಯಂಗಳ ಮುಖಸಹತೊಳೆಯದೆನೂಕುತ ಮುಖ ಪ್ರಕ್ಷಾಳನೆ ಬಿಡುವೆ2 ಸ್ನಾನವ ಮಾಡೆನು ಸಂಧ್ಯಾ ತಿಳಿಯೆನು ಧ್ಯಾನವು ಯೆಂತೆನೆ ಕೂಳಿನ ಚಿಂತೆಯು ಆನನ ಮುಸುಕುತ ಬರಿಪಿಚಿಯೆಂದು ನಿ ಧಾನದಿ ಜಪಸರ ನೂಕುವೆನಲ್ಲಾ 3 ಮಂತ್ರವು ಬಾರದು ಸ್ತ್ರೋತವು ಬಾರದು ತಂತ್ರದಿ ನೂಕುವೆ ದೇವರ ಪೂಜೆಯ ವಿಧಿಗಳ ಮೌನದಿ ಕರ್ಮಗಳೆಲ್ಲವ ಮಂತ್ರಿಯ ಮಡಿದಿಯು ಪೇಳಿದ ತೆರದೂಳು ಯಂತ್ರ ವಿಧಾನದಿ ನುಡಿಯುವೆ ದಿನವಹಿ4 ಹೀನಕ ವೃತ್ತಿಗಳಿಂದಲಿ ಜೀವನ ವರ್ಣವಿವೇಕವ ನಡಿಸಲಸಾಧ್ಯವು ಜನ್ಮದಿ ವಿಪ್ರನು ನಾನಿಹೆ ಬರಿಸರಿ ತಿನ್ನುತ ಕುಡಿಯುತ ತಳ್ಳುವೆ ಆಯುಷ್ಯ5 ಊಟದ ಚಪಲವು ತಿಂಡಿಯ ಚಪಲವು ನೋಟದ ಚಪಲವು ಚಪಲ ಕಂದರ್ಪನ ಕಾಟದಿ ಸಿಲುಕಿಹೆ ಕೈಟಭಮರ್ದನ ದಾಟುವೆದೆಂತೋ ಭವವನು ಕಾಣೇ 6 ಏರಿದೆ ಬಹುನಿತ್ರಾಣವು ಗಾತ್ರದಿ ಮೀರಿದವಯ ಶಾಸ್ತ್ರಾಭ್ಯಾಸಕೆ ಕಾರುವರೈ ವಿಷ ಬಾಂಧವರೆಲ್ಲರು ಆ ರವಿಸುತನಾಳ್ಗಳಗು ನಾನಿಹೆ 7 ಮಡದೀ ಮಕ್ಕಳ ಪಾಶದಿ ಬಿದ್ದಿಹೆ ದುಡಿಯದ ಕಾರಣ ದುಗುಡವ ತೋರ್ಪರು ನಡೆಯದು ತುಸನನ್ನ ಮಾತೇನಿಲ್ಲ ಮಿಡುಕುತ ಮಿಡುಕುವೆ ಮುಪ್ಪಿನ ಹಿಡಿತದಿ 8 ತೋಡಿದರೂ ಎದೆ ಕಾಣೆನು ಭಕ್ತಿಯ ಕಾಡನು ಸೇರಲೊ ಬಾವಿಗೆ ಬೀಳಲೋ ಜೋಡಿಯು ಆಗಲೊ ಜೋಳಿಗೆ ಪಿಡಿಯಲೊ ಓಡದು ಬುದ್ಧಿಯು ತೋರಿಸು ಹಾದಿ 9 ಕರುಣಾಮಯ ನೀನೆಂಬುವ ಬಿರುದನು ಹಿರಿಯರ ಮುಖದಿಂ ಕೇಳಿಹೆ ಸ್ವಾಮಿಯೆ ಭರವಸೆ ಎನಗಿಹದೊಂದೇ ನಿಶ್ಚಯ ಶರಣನ ಬಿಡದಿರು ಆಪದ್ಬಾಂಧವ 10 ಪಾಮರ ನಿಹೆಬಹು ಕಲುಷಿತ ಚಿತ್ತನು ಭೀಮಾರ್ಚಿತ ಪದಯಗ ನಂಬಿಹೆ ಪ್ರೇಮವ ಸುರಿಸುತ ಕಾಯೈ ಬೇಗನೆ ಸಾಮನೆ ಶರಣೈ “ಶ್ರೀ ಕೃಷ್ಣವಿಠಲಾ” 11
--------------
ಕೃಷ್ಣವಿಠಲದಾಸರು
ಹಿಡಿ ಮನವೇ ಸಂತರ ಸಂಗ ಪ ಹಿಡಿಮನವೇ ಸಂತರ ಸಂಗಾ | ಭವ ಭಯ ಭಂಗಾ | ಅಡಿಗಳಗೆರಗುತ ಸಾಷ್ಟಾಂಗಾ | ಪಡಕೋ ಚಿತ್ಸುಖದಂಗಾ 1 ಸಿಕ್ಕಿದು ಭಾಗವತರಣ | ಶರಣಾ | ಸಿಕ್ಕಲು ದಕ್ಕಿಸಿಕೋ ಕರುಣಾ | ಉಕ್ಕಲು ಜ್ಞಾನದಾ ನಿಜ ಸ್ಪರಣಾ | 2 ಗುಕ್ಕದವನೇ ತಾ ಹರಿಶರಣಾ | ಶರಣೆಂಬುದು ಸು¯ಭವಲ್ಲಾ | ಹರಿಮಯ ಕಾಂಬನು ಜಗವೆಲ್ಲಾ | ನೆರೆ ಹಮ್ಮ ಮಾತುಗಳುಳದಿಲ್ಳಾ | ಸರಿ ಸ್ತುತಿ ನಿಂದೆಗೆ ಬಗಿಬಲ್ಲಾ 3 ಎಲ್ಲರ ಮನದಂತಾನಾಗಿ | ನಿಲ್ಲುವ ಜನದೊಳು ನಿಜಯೋಗಿ | ಫುಲ್ಲನಾಭನ ಭಕುತಿಲಿ ಮುಣುಗಿ | ಬಲ್ಲವಿಕೆಯ ದೋರನು ಬಾಗೇ 4 ಏನೋ ಜ್ಞಾನಿಗಳಾನಂದಾ | ತಾನೇ ಬಲ್ಲನು ಶ್ರೀ ಗೋವಿಂದಾ | ಖೂನಕ ಸಾರಿದ ನುಡಿವಂದಾ | ಸ್ವಾನುಭವದೀ ಮಹಿಪತಿ ಕಂದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿಂಡು ಉದ್ದಂಡ ನರಸಿಂಹನ ಕಂಡೆನಯ್ಯ ಪ ಘುಡುಘುಡಿಸಿ ಕಂಬದಲಿ ಧಡಧಡ ಸಿಡಿಲು ಸಿಡಿಯೆಕಿಡಿಕಿಡಿಸೆ ನುಡಿಯಡಗಲೊಡನೆ ಮುಡಿವಿಡಿದುಘಡಘಡನೆ ನಡುನಡುಗೆ ಘುಡುಘುಡಿಸಿ ಸಭೆ ಬೆದರೆಹಿಡಿ ಹಿಡಿದು ಹಿರಣ್ಯಕನ ತೊಡೆ ಮೇಲೆ ಕೆಡಹಿದನ1 ಅರಿ ಶೋಣಿತ ಸುರಿಯೆಹರಿಹರಿದು ಕರುಳ ಕೊರಳೊಳಿಟ್ಟವನ2 ಸುರರು ಹೂಮಳೆಗರೆಯೆತರತರದ ವಾದ್ಯ ಸಂಭ್ರಮಗಳಿಂದಹರಿಹರಿ ಶರಣೆಂದು ಸ್ತುತಿಸಿ ಶಿಶು ಮೊರೆಯಿಡುವಕರುಣಾಳು ಕಾಗಿನೆಲೆಯಾದಿಕೇಶವನ3
--------------
ಕನಕದಾಸ
ಹಿತ ನೋಡಿ ಸಂತರ ಕೂಡೀ ಪ ಹಿತ ನೋಡಿ ಸಂತರ ಕೂಡೀ | ಮತಿ ನಿಜ ಮಾಡಿ | ಶ್ರೀ ಪತಿಯ ಕೊಂಡಾಡಿ 1 ದುರಿತ ವಿಭಂಗಾ | ನೆರೆ ಕರುಣಾಂಗದಿ | ಹೊರೆವನು ರಂಗಾ 2 ಪರಿ | ರಂಜಿಸುತಿಹ ತೇಜಃ | ಪುಂಜನ ನೋಡಿ 3 ಕಂಡಪದಕ ಹರಿದಂಡಲಿಯದೆ ನೆಲೆ | ಗೊಂಡ ವಿವೇಕದ | ಪಂಡಿತರಾಗಿ 4 ತಂದೆ ಮಹಿಪತಿನಂದನು ಸಾರಿದಾ | ಬಂದ ಜನುಮಕಿದು | ಛಂದದು ನೋಡಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿಮಾಚಲೇಂದ್ರನ ಕುಮಾರಿ ಶಂಕರಿ ಉಮಾಂಬೆ ಬಾರಮ್ಮ ಪ ಕುಮಾರ ಶಕ್ರಾದಿ ಸಮಸ್ತ ಸುರಗಣ ಸಮರ್ಚಿತಾಂಘ್ರಿಯೆ ನಮೋನಮೋ ಎಂಬೆ ಅ.ಪ. ಬುದ್ಧ್ಯಾಭಿಮಾನಿಯೆ ಸದ್ಯೋಜಾತನ ರಾಣಿ ಹೃದ್ಧ್ಯೋಮದಲಿ ಪೊಳೆದು ವಿದ್ಯಾ ಬುದ್ಧಿಯನಿತ್ತು ಶುದ್ಧಾತ್ಮನನು ಮಾಡಿ ಸದ್ಭಕ್ತಿ ಪಂಥದ ಸಿದ್ಧಾಂತ ತಿಳಿಸಮ್ಮ 1 ಘೋರ ಭವಾಬ್ಧಿಯ ತಾರಿಪ ಸುಲಭದ ದಾರಿಯ ತೋರೆನುತ ಮುರಾರಿಯನು ಬೇಡಿ ಶ್ರೀ ರಾಮ ನಾಮದ ರುಚಿ ಬೀರಿದೆ ಜಗದೊಳು 2 ಲಕ್ಷಾಘ ಧ್ವಂಸಿನಿ ದಾಕ್ಷಾಯಿಣೀ ಗಣಾ ಧಕ್ಷನ ವರ ಜನನಿ ಲಕ್ಷ್ಮೀಕಾಂತನ ಅಪರೋಕ್ಷದಿ ಕಾಂಬುವ ಸೂಕ್ಷ್ಮವನೊರೆದೆನ್ನ ರಕ್ಷಿಸು ಅಮ್ಮಯ್ಯ 3
--------------
ಲಕ್ಷ್ಮೀನಾರಯಣರಾಯರು
ಹೀಗಿದ್ದವನೇ ತಿಳಿದವನು | ನಿಜ | ಯೋಗದ ಮಾರ್ಗಕ ಬೇಗ ಹೊಂದುವನು ಪ ನೆಂಟರಿಷ್ಟರೊಳು ದಾಕ್ಷಿಣ್ಯಾ | ತನ್ನ | ಬಂಟ ಜನರ ಮ್ಯಾಲ ಘನ ಕಾರುಣ್ಯಾ | ಶುಂಠ ಶಠರೊಳು ಕಾಠಿಣ್ಯಾ | ತನ | ಗುಂಟಾದ ಸಾಧುಗಳೊಳು ಪ್ರೀತಿ ಬಣ್ಣಾ 1 ಅರಸುಗಳಲಿ ನಮ್ರ ಸ್ಥಿತಿ | ಸರ್ವ | ವರಿತ ವಿದ್ವತ್ತರೋಳರ್ಜಿವ ವೃತ್ತಿ | ಅರಿಗಳೊಳಗೆ ಶೌರ್ಯ ಖ್ಯಾತಿ | ತನ್ನ | ಗುರುಗಳೊಳಗ ಭೆಜ್ಜರಂಜಿಕೆ ನೀತಿ 2 ಹೆಂಗಳೆಯರೊಳು ಧೂರ್ತತನಾ | ತಾನು | ಹಿಂಗದೆ ಮಾಡುವ ಶ್ರವಣ ಮನನಾ | ತುಂಗ ಮಹಿಪತಿ ಸುತ ಪ್ರಿಯನಾ | ಮಂಗ | ಳಂಗುಟ ನೆನೆವನು ಬಿಡದನು ದಿನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೀಗೆ ನಿರ್ದಯ ಮಾಡುವರೆ ಶ್ರೀಮನೃಹರೇ ಪ ಹೀಗೆ ನಿರ್ದಯ ಮಾಡುವರೆ ಕರುಣಾಂಬುಧೆ ಪಾಲನ ಅ.ಪ ನಿರ್ಜರ ಪೋಷಿತ ಘೋರದೈತ್ಯೇಯ ಸಂಹಾರ ಕೌಸ್ತುಭರತ್ನಹಾರ ಭೂಷಿತ ಯದುವೀರ ಮಾರಮಣನೇ 1 ಶಶಿವದನ ನೀರದ ಸಂಕಾಶ ಮಧು ಮುರಾಂತಕ ಕುಂದರದನ ಸುಂದರಗಾತ್ರ ಸದಮಲ ತೇಜ ಕಂಜದಲ ಲೋಚನ ಹರೇ 2 ಗರುಡವಾಹನ ಶ್ರೀಲೋಲ ಕರಿರಾಜವರದ ಸುಸ್ಥಿರ ಕೀರ್ತಿಸಾಂದ್ರಮಂ ದರಧರ ವರ ಹೆನ್ನೆಪುರ ಲಕ್ಷ್ಮೀನರಸಿಂಹ 3
--------------
ಹೆನ್ನೆರಂಗದಾಸರು
ಹುಚ್ಚಾದೇನಣ್ಣಾ | ಮುಚ್ಚುಗೊಂಡು ನಾನು ಪ ಮರುಳು ಬೀಜಾಕ್ಷರನು1 ಕುಣಿದು ಕೂಗುವೆ ಹರಿನಾಮವನು 2 ಹಿಂದಾದಾ ನೆನೆಯದೆ ಮುಂದ ಹಂಬಲಿಸದೇ | ಬಂದದನುಂಡು ಕುಳ್ಳಿರುವೆನು 3 ಗಂಡು | ಜರಿದು ಬಲ್ಲವಿಕೆ ಹಮ್ಮವನು 4 ಗುರು ಮಹಿಪತಿ ಬೋಧಾ | ಹರಿಸೀ ಸಂಶಯ ಬಾಧಾ | ಮರೆಸಿತು ಅನ್ಯ ದಾರಿಯನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು