ಒಟ್ಟು 4540 ಕಡೆಗಳಲ್ಲಿ , 127 ದಾಸರು , 2949 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭೇರಿಬಾರಿಸುತಿದೆಭೂರಿದ್ವಾರಕೆ ಅರಸನಾಗರ ದ್ವಾರದ ಮುಂದೆಕ್ರೂರ ಖಳರ ಎದೆ ದಾರಿಸುವುದು ಯದುವೀರರಭೇರಿಮುರಾರಿಯ ಪಾಳೆಯಭೇರಿಪ.ಅನಂತಾಸನವಿದೇ ಅನಾದಿ ಶ್ರೀವೈಕುಂಠಅನಂತಶ್ವೇತದ್ವೀಪಸ್ಥಾನಈ ನಂದನಸೂನುಆನಂದಮಯಬ್ರಹ್ಮಮೌನಿ ಸುರನಿಕರ ಧ್ಯಾನಗೋಚರನೆಂದು 1ಬ್ರಹ್ಮ ರುದ್ರೇಂದ್ರಾದಿ ಸುಮ್ಮನಸರನಾಳ್ವರಮ್ಮೆಯರಸ ಸರ್ವೋತ್ತಮಧರ್ಮೋದ್ಧಾರ ಅಧರ್ಮಸಂಹರಪರಬ್ರಹ್ಮವಾಸುದೇವಬ್ರಹ್ಮಣ್ಯದೇವನೆಂದು2ಸೂತ್ರರಾಮಾಯಣ ಪವಿತ್ರೋಪನಿಷದ್ವೇದಗೋತ್ರಭಾರತ ಪಂಚರಾತ್ರಶಾಸ್ತ್ರೌಘ ಸನ್ಯಾಯಶಾಸ್ತ್ರ ಸ್ಮøತಿನಿಕರಸ್ತೋತ್ರಕ ಯಜÕ ಗೋಪೀ ಪುತ್ರ ಶ್ರೀಕೃಷ್ಣನೆಂದು 3ಮಂಗಳಾನಂತ ಗುಣಂಗಳಬುಧಿ ತ್ರಿಗುಣಂಗಳಿಂದೆಂದಿಗಸಂಗಗಂಗೆಯರ್ಚಿತ ಗಂಗಾನ್ವಿತಪದತುಂಗವಿಕ್ರಮಯಜ್ಞಾಂಗಾಚ್ಯುತನೆಂದು4ನೂರೆಂಟುವೆಗ್ಗಳಹದಿನಾರು ಸಾವಿರ ದಿವ್ಯನಾರಿಯರಾಳುವಶೌರಿನಾರದನಿದರ ವಿಚಾರ ಮಾಡಲಿ ಬರೆಮೂರುತಿ ಅನಂತ ತೋರಿ ಬೆರೆತರೆಂದು 5ಸೃಷ್ಟ್ಯಾದಿ ಕಾರಣ ಶಿಷ್ಟ ಸಂರಕ್ಷಣದುಷ್ಟಮಥನ ಪೂರ್ಣತುಷ್ಟಕಷ್ಟ ಜರಾಮೃತ್ಯು ನಷ್ಟಕರ ಏಕೌವಿಷ್ಣು ವರಿಷ್ಠ ವಿಶಿಷ್ಠ ಸುಖದನೆಂದು 6ವೇದೋದ್ಧಾರ ಕ್ಷೀರೋದಧಿಮಥನ ಧರಾಧರ ಹಿರಣ್ಯಕಸೂದನಪಾದತ್ರಯ ಖಳಛೇದಕ ಯಶೋಧರಮಾಧವಬುದ್ಧಕಲಿರೋಧ ಕಾರಣನೆಂದು7ಪಾಂಡವ ಸ್ಥಾಪಕ ಲೆಂಡಕೌರವ ಹರ್ತಗಾಂಡೀವಿಸಖಸುರಶೌಂಡಚಂಡ ಚಂದ್ರ್ರಾನಂತಾಖಂಡ ಪ್ರಕಾಶಮತಪೌಂಡ್ರಕ ಸಾಲ್ವಮತ ಖಂಡಾನಂತನೆಂದು 8ಧಾಂ ಧಾಂ ಧಿಮಿಕಿಟ ಧಾಂದಂದಳ ದಂದಳ ಧಿಮಿಕಿಟಧಾಂತಾಂಧಿ ಮದಾಂಧರಿಗೆ ಅಂಧಂತಾಮರ ಸಧಾಂಧೊಂದೊಂದೊಂತು ಪ್ರಸನ್ನವೆಂಕಟಮಂದಿರಾನಂದನಿಲಯಭಕ್ತವತ್ಸಲನೆಂದು9
--------------
ಪ್ರಸನ್ನವೆಂಕಟದಾಸರು
ಮಕ್ಕಳ ಮಾಣಿಕ ಮನೋಹರ ನಿಧಿ-ವೈರಿ-|ರಕ್ಕಸ ಶಕಟನ ತುಳಿದು ದೀಪಾದವೆ ಪಬಲಿಯ ದಾನವ ಬೇಡಿ ನೆಲವಈರಡಿಮಾಡಿ |ಜಲಧಿಯ ಪಡೆದದ್ದು ಈ ಪಾದವೆ ||ಹಲವು ಕಾಲಗಳಿಂದಶಿಲೆಶಾಪವಡೆದಿರಲು |ಫಲಕಾಲಕ್ಕೊದಗಿದುದೀ ಪಾದವೆ 1ಕಡುಕೋಪದಿ ಕಾಳಿಂಗನ ಮಡುವ ಕಲಕಿ |ಹೆಡೆಯನು ತುಳಿದುದು ಈ ಪಾದವೆ ||ಸಡಗರದಿಂದ ಕೌರವನ ಸಿಂಹಾಸನವ |ಹೊಡೆಮಗುಚಿ ಕೆಡಹಿದುದೀ ಪಾದವೆ 2ಶೃಂಗಾರದಿಂದ ಹೆಂಗಳು ಲಕ್ಷುಮಿಯ ಸಹಿತ |ಅಂಗನೆಯರೊತ್ತುವುದೀ ಪಾದವೆ ||ಸಂಗಸುಖದಿಂದ ಶ್ರೀ ಪುರಂದರವಿಠಲನ |ಅಂಗದೊಳಡಗಿದ್ದುದೀ ಪಾದವೆ 3
--------------
ಪುರಂದರದಾಸರು
ಮಂಗಲಾ ಸ್ವಸಿದ್ದ ಸಿದ್ಧಗೆ ಮಂಗಲಾ ಸ್ವಶುದ್ಧ ಶುದ್ಧಗೆ |ಮಂಗಲಾ ಸ್ವಬುದ್ಧ ಬುದ್ಧಗೆ ಸದ್ಗುರೇಂದ್ರನಿಗೆಜಯ ಮಂಗಲಾಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆದಿಮಧ್ಯಾವಸಾನವಿಲ್ಲದೆ ನಾದ ಬಿಂದು ಕಳಾ ವಿಹೀನಗೆ |ವೇದ ವೇದಾಂತದ ವಿಚಾರವ ತಿಳಿದ ನಿಶ್ಚಲಗೆ |ಸಾಧು ಸಂತ ಮಹಾನುಭವಿಗಳು ಸಾಧಿಸುವವರಬೋಧ ಬೋಧಗೆ | ವಾದ ಮನಬುದ್ಧ್ಯಾದಿ ಉದಯಾದಿಕವ ಲಕ್ಷಿಪಗೆ1ವಿಶ್ವತೋ ಮುಖ ವಿಶ್ವನೇತ್ರನು ವಿಶ್ವಪಾಣಿಪಾದಶೀರಿಷ | ವಿಶ್ವದೊಳಹೊರಗೇಕ |ಮಯನಾ ಸೂತ್ರನು ಮಣಿಯಂತೆ | ವಿಶ್ವವನ್ನುದ್ಧರಿಸ-ಲೋಸುಗ ವಿಶ್ವದೊಳಗವತರಿಸಿ ಸಾಕ್ಷಾದೀಶ್ವರನುಕಲಿಯುಗದಿ ವಿಶ್ವಾಮಿತ್ರ ಗೋತ್ರದೊಳು2ಪರಮಪುರುಷನು ಸ್ವಪ್ರಕಾಶನು ನರಾಕೃತಿಗೆತಾ ಬಂದು ಶಿಂಧಾಪುರದಿ ಗುರುನಾಥನು-ದರದಿ ಕರಣಿಕನ್ವಯದಿ | ಸರಸ ಲೀಲಾ ನಟನೆನಟಿಸುತ ತೆರಳಿ ಭ್ರಮರಾಪುರಕೆ ಸದ್ಗುರುವರಕೃಪೆಯತಾ ಪಡೆದು ಜಗದೊಳು ಖ್ಯಾತಿ ಪಡೆದಂಗೆ3ಅಂತು ಇಂತೆನಬಾರದಾ ನಿಶ್ಚಿಂತ ರೂಪನು ಬಳಿಕ | ಸಂತಮಹಾಂತನು ಸ್ತುತಿಸಲಾತ್ಮ ಸುಬೋಧ ಬೋಧಿಯಲಿ ||ಅಂತರಂಗದ ಭ್ರಮೆಯನಳಿದೇಕಾಂತ ಭಾವಿಕ ಭಕ್ತರಿಗೆ ವಿ-ಶ್ರಾಂತವಾದ ಸ್ವ-ಪದದೊಳುದ್ಧರಿಸಿದಾತಂಗೆ4ಸ್ಪರ್ಶ ದರ್ಶನದಿಂದೆ ಝಗ ಝಗ ಧರಿಸುತಲಿ ನಾನಾ ವಿ-ಚಿತ್ರಾಚರಣವನು ಚರಿಸುತ್ತ ಸದ್ಗುರು ರಾಯ ಕಡೆಯಲ್ಲಿ,ಪರಮಹಂಸಾಶ್ರಮವ ಕೈಕೊಂಡಿನಿತುಕೆಲಕಾಲದಲಿ ಶಿಂಧಾಪುರದಿಸ್ವ-ಸ್ಥಾನ ದೊಳು ಸಹಜಸಮಾಧಿಸ್ಥಳದಲ್ಲಿ5ಶಾಲಿವಾಹನ ಶಕೆಯ ಶತಕತಿ ಮೇಲೆ ಐವತ್ತಾಗೆ ಮೂರನು |ಕಾಲು ದಕ್ಷಿಣ ಅಯನ ಸಂವತ್ಸರ ವಿರೋಧಿಕೃತು |ಕಾಳ ದ್ವಿತಿಯಾಮಾಸ ಆಶ್ವೀನ ಮೇಲೆ ಶಿವ ಬುಧವಾರಕರ್ಣವಿಶಾಲಿ ಗರ್ಜಾ ಭರಣೆ ಪ್ರಥಮಪ್ರಹರಸಮಯದೊಳು6ಆ ಸುದಿನದೊಳಗಾ ಮಹಾ ಸಂತೋಷ ಕಾಲದಿಸುರರುಪೂಮಳೆ ಸೂಸುತಿರೆ ಬ್ರಹ್ಮಾದಿಕರು ಸ್ವಸುಖದಿನಲಿದಾಡಿ |ಏಸುಕಾಲದಸುಕೃತಫಲವಿದು ವಸ್ತುಕಣ್ಣಲಿ ಕಂಡೆವೈ ಉಲ್ಲಾಸವೆನುತ ಸಮಸ್ತ ಸುರಜಯ ಘೋಷ ಮಾಡುತಲಿ7ನಿಜ ಪರಂಧಾಮಕ್ಕೆ ಸದ್ಗುರು ಬಿಜಯಮಾಡಿದನೆಂಬ ಮಹಾಶಯ | ಸುಜನರೆಲ್ಲರುಬಲ್ಲರಿದನು ಲೋಕಕಿದು ಸತ್ಯ || ತ್ರಿಜಗವೇಪುಸಿಯೆಂಬ ಮಹಾತ್ಮಗೆ ತ್ಯಜನವೆಲ್ಲಿ ಉದಾರ ಮಹಿಮಗೆ |ನಿಜವು ಜಲ ದೊರೆತಿಲ್ಲ ತೋರಲು ಕರಗಲೆರಡಹುದೇ8ನಿರಾಕಾರಾಕಾರ ವ್ಯಕ್ತಿಗೆಚರಣಒಂದೆ ಭೇದ ಮಿಥ್ಯೆಯು |ಚರಣಯುಗಕೆರಡುಂಟೆ ಈಪರಿಶರೀರ ಶರಣಂಗೆ ||ಹಿರಿದ ಕಿರಿದ ದರದರ ಹಂಗನು ಹರಿದು ಬಿಸುಟುವಶ್ರೀ ಮಹಾಶಂಕರಾನಂದ ಸರಸ್ವತೀ ಯತಿವರ್ಯ ಗುರುವರಗೆಜಯ ಜಯ ಮಂಗಲಾ ಜಯ ಜಯ ಮಂಗಲಾ9
--------------
ಜಕ್ಕಪ್ಪಯ್ಯನವರು
ಮಂಗಳ ಪದಗಳು391ಕೋಲು ಕೋಲೆನ್ನಿರೆ ರನ್ನದ ಕೋಲು ಕೋಲೆನ್ನಿರೇಕೋಲು ಕೋಲೆಂದು ರನ್ನದಕೋಲಧರಿಸಿನಿಂದುಲೋಲಾಕ್ಷಿ ದೇವಿ ಚರಿತೆಯ ಸ್ಮರಿಸುತ್ತ ರನ್ನದಾಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಲೋಲಾಕ್ಷಿ ದೇವಿ ಚರಿತೆ ಸ್ಮರಿಸುತ್ತ ನಲಿದಾಡಿಪಾಲಿಸೆ ಧರೆಗೆ ವರವ ಕರದೀಗಳ್ ರನ್ನದಾ1ಆದಿದೇವಿಯು ಚತುರ್ವೇದ ಗರ್ಭನನಿತ್ಯಪಾದಸೇವೆಯ ಗೈವಳ್ ಮೋದದಿ ರನ್ನದಿಕೋಲು ಪಾದಸೇವೆಯ ಗೈವಳ್ಮೋದದಿ ಮಾಧವನ ಪೂಜಿಸಿ ನಮಿಸಿಕ್ಷೀರಾಬ್ಧಿಯೊಳ್ ರನ್ನದಾ2ಘೋರದಾನವರೆಲ್ಲ ಧಾರಿಣಿ ಬಾಧಿಸಲುವಾರಿಜೋದ್ಭವನಾರದಾದ್ಯರು ರನ್ನದಾವಾರಿಜೋದ್ಭವನಾರದಾದ್ಯರು ದೇವಿಯೊಳುದೂರಿಡೆಕೇಳಿಅಭಯವಿತ್ತಳು ರನ್ನದಾ3ಸುರರುದಾನವರೆಲ್ಲ ಶರಧಿಯ ಮಥಿಸಲುಅರವಿಂದಮುಖಿ ಲಕ್ಷ್ಮಿ ಜನಿಸಿದಳೆ ರನ್ನದಅರವಿಂದ ಮುಖಿಲಕ್ಷ್ಮಿ ಜನಿಸಲು ನಾರಾಯಣನರಸಿಯೆಂದೆನಿಸಿ ಮೆರೆದಳು ರನ್ನದಾ4ಅಘವಿನಾಶಿನಿ ಜಗದಾಂಬಿಕೆ ಕೀರವಾಣಿಸುಗುಣೆ ಸುಂದರಿ ಸುಶೀಲೆಯು ಫಣಿವೇಣಿನಗುವ ಮೊಗದ ಚಂದ್ರವದನೆಯು ರನ್ನದಾ5ದುಷ್ಟ ನಿಗ್ರಹರೆಂದು ಸೃಷ್ಟಿಗೆ ನಡೆತಂದುಶ್ರೇಷ್ಠಾದಿ ನೂರೊಂದು ರೂಪಾದಳ್ ರನ್ನದಾಶ್ರೇಷ್ಠಾದಿ ನೂರೊಂದು ರೂಪಾಗಿ ಶಿಕ್ಷಾ ರಕ್ಷಾಧ್ಯಕ್ಷಳೆನಿಸಿ ಖಡುಗ ಧರಿಸಿದಳ್ ರನ್ನದಾ6ಘೋರಮಹಿಷನ ಸಂಹಾರಕೆಂದು ಬಂದುಮಾರಾಂತು ರಣದಿ ದುರುಳನ ರನ್ನದಾಮಾರಾಂತು ರಣದಿ ದುರುಳನ ಮರ್ದಿಸಿಈರೇಳು ಜಗವಾ ಪೊರೆದಳು ರನ್ನದಾ7ಶುಂಭಾ ನಿಶುಂಭ ಖಳರೆಂಬ ದೈತ್ಯರ ಗೆಲಿದುಅಂಬುಜಾಲಯದಿ ನೆಲಸಿದಳ್ ರನ್ನದಾಅಂಬುಜಾಲಯದಿ ನೆಲೆಸಲು ಪೂಜಿಸಿದಕುಂಭಿನಿಸುರರಿಗೊಲಿದಾಳು ರನ್ನದಾ8ಚಂಡ ಮುಂಡಕರೆಂಬಘೋರದೈತ್ಯರನೆಲ್ಲತುಂಡು ತುಂಡಾಗಿ ಶಿರ ಖಂಡೀಸಿ ರನ್ನದಾತುಂಡು ತುಂಡಾಗಿ ಶಿರ ಖಂಡೀಸಿ ಮೆರೆದಳುಚಂಡಿ ಕರಾಳಿ ಚಾಮುಂಡಿಗೇ ರನ್ನದಾ9ರಕ್ತ ಬೀಜನಘೋರಶಕ್ತಿಯ ಪರೀಕ್ಷಿಸಿಮುಕ್ತಿ ಪಥವ ತೋರೆ ಮಾಂಕಾಳಿ ರನ್ನದಾಮುಕ್ತಿ ಪಥವ ತೋರೆ ಮಾಂಕಾಳಿ ಅರ್ಚಿಸಿದಭಕ್ತರಿಗೊಲಿದು ನಲಿದಳ್ ರನ್ನದಾ10ದೇವರಾಮನ ಸತಿಯಾಗಿ ಲಂಕೆಗೆ ಪೋಗಿರಾವಣಾದ್ಯರನೆಲ್ಲ ಕೊಲಿಸೀದಳ್ ರನ್ನದಾರಾವಣಾದ್ಯರನೆಲ್ಲ ಕೊಲಿಸೀದಳ್ ಸೀತೆಯು ತಾಪಾವಕನುರಿ ಹೊಕ್ಕಿ ಪೊರಟಳ್ ರನ್ನದಾ11ಸೃಷ್ಟೀಶ ಭೀಷ್ಮಕನ ತನುಜೆ ರುಕ್ಮಿಣೀದೇವಿಕೃಷ್ಣಮೂರ್ತಿಗೆ ಓಲೆ ಬರೆದಾಳು ರನ್ನದಾಕೃಷ್ಣಮೂರ್ತಿಗೆ ಓಲೆ ಬರೆದು ಒಲಿಸಿಕೊಂಡುಪಟ್ಟದರಸಿಯಾಗಿ ಬಾಳಿದಳು ರನ್ನದಾ12ಮಾನಿನೀಮಣಿಪದ್ಮಾವತಿಯು ಜಲಕೇಳಿಗೈದುಶ್ರೀನಿವಾಸನ ಕಂಡು ಸ್ಮರಿಸೀದಳ್ ರನ್ನದಾಶ್ರೀನಿವಾಸನ ಕಂಡು ಸ್ಮರಿಸಿ ಕಲ್ಯಾಣವೆಸಗಿತಾನೆ ವಿಷ್ಣುವ ಪೂಜೆಗೈದಳ್ ರನ್ನದಾ13ನವರಾತ್ರಿ ದಿನದಲಿ ನವದುರ್ಗಿ ರೂಪಿನಲಿನವಗಂಧ ಕುಂಕುಮಚಂದನಪುಷ್ಪಗಳಿಂದನವವಿಧ ಪೂಜೆ ಕೊಂಬಳ್ ರನ್ನದಾ14ಮಾರಿಪೂಜೆಯ ರಕ್ತ ಹಾರಕ್ಕೆ ಮನಗೊಂಬಾಕ್ರೂರಗಣಗಳೊಡ ಸೇರಿದಳ್ ರನ್ನದಾಕ್ರೂರಗಣಗಳೊಡ ಸೇರಿ ಧಾರುಣಿಯೊಳುಚಾರುವರ್ಣ ಪೂಜೆ ಕೈಕೊಂಬಳ್ ರನ್ನದಾ15ಸರ್ವಮಂಗಲ ಮಾತೆ ಸರ್ವಸಜ್ಜನ ಪ್ರೀತೆಸರ್ವ ಆಭರಣ ಭರಿತೇಯು ರನ್ನದಾಸರ್ವ ಆಭರಣ ಭರಿತೇಯು ಪೀತಾಂಬರನೆರಿಹಿಡಿದುಟ್ಟು ರನ್ನದಾ16ಹದಿನೆಂಟು ಪೌರಾಣದಿ ಮೆರೆವ ಈ ದೇವಿ ಚರಿತೆಹದಿನೆಂಟು ಪದವಾಗಿ ನುಡಿಸೀದಳ್ ರನ್ನದಾಹದಿನೆಂಟು ಪದದಿ ತಪ್ಪಿರಲು ತಿದ್ಯೋದಿದವರವಿಧವಿಧ ಮನದ ಬಯಕೆ ಒದಗುವಾದೆ ರನ್ನದಾ17ಮಂದಗಮನೆಧರಣಿಭಾರತಗ್ಗಿಸಿ ಬಂದುನಿಂದಾಳು ವಿಷ್ಣು ವಕ್ಷಸ್ಥಲದಲಿ ರನ್ನದಾನಿಂದಿರ್ದ ವಿಷ್ಣು ವಕ್ಷಸ್ಥಲದ ರಮೆಗೆ ಗೋವಿಂದದಾಸನು ಸರಿಸಿ ನಮಿಸೂವೆ ರನ್ನದಾ18
--------------
ಗೋವಿಂದದಾಸ
ಮಂಗಳಂಮಕರಕುಂಡಲಮಂಡಿತಾದವಗೆಪ.ಮಂಗಳಂ ಮಾರಪಿತ ಮಾರಮಣಗೆಮಂಗಳಂ ಮಿತ್ರಕೋಟಿ ಮಹಾಕಾಶಗೆಮಂಗಳಂ ಪನ್ನಗಾಚಲನಿಲಯಗೆ ಜಯಮಂಗಳಂ ಮತ್ತೆ ಶುಭಮಂಗಳಂ ಅ.ಪ.ಕಣ್ಣನೋಟದಿ ಚೆಲುವ ಕಮಠರೂಪಾದವಗೆಹೆಣ್ಣ ನೆಗಪಿದ ಹಿರಣ್ಯಕ ಮರ್ದಗೆಚಿನ್ನವಟು ಭಾಗ್ರ್ವಾಂಧಚರಹರ ಗೋವ್ರಜಚರಗೆಕನ್ನೆಯರ ವ್ರತಗೇಡಿ ಕಲಿಮಥÀನಗೆ 1ನೀರಚರನಗಧರಕನಕನೇತ್ರನೊರಸಿದಗೆಕ್ರೂರವದನಾಂಕಿತ ಕುಬುಜ ವಿಪ್ರಗೆವೀರಕುನೃಪಾರಿ ರಘುವಿಜಯಸಖನಾದವಗೆಚಾರುಮೋಹನಚಟುಲಹಯರೂಢಗೆ2ಆಗಮೋದ್ಧರ ಕಚ್ಛಪಅವನಿಧರಹರಿಮೊಗಗೆತ್ಯಾಗ ಬೇಡಿದ ತಾಯಿ ತಲೆಗಡಿದಗೆಯಾಗಪಾಲಹಿಮರ್ದ ಯೋಗೇಶಜೋದ್ಧರಗೆನಾಗಾದ್ರಿ ಪ್ರಸನ್ವೆಂಕಟನಾಥಗೆ 3
--------------
ಪ್ರಸನ್ನವೆಂಕಟದಾಸರು
ಮಂಗಳಾರತಿಯ ತಂದೆತ್ತಿರೆ ಹೇಮಾಂಗನೆಯರು ವೆಂಕಟಪತಿಗೆ ಪ.ಪೊಂಗಿಂಡಿಯುದಕ ಕಂಗಳಿಗೊತ್ತಿ ಪೊಸಬಗೆರಂಗು ಮಾಣಿಕದಕ್ಷತೆಯನಿಟ್ಟುಪೊಂಗಂಕಣ ಪೊಳೆವಿನ ಪ್ರಭೆಯಲಿ ಮರಿಭೃಂಗಕುಂತಳೆಯರೆಡಬಲದಿ 1ಅನುದಿನಮಂಗಳ ಮನಸಿಜನಯ್ಯಗೆವನಮಾಲಿ ಕೌಸ್ತುಭಹಾರನಿಗೆಘನಮಹಿಮೆಯ ಜಗ( ದ?) ವರಿಗೆ ತೋರುವನಿಗೆಮುನಿ ಸನಕಾದಿ ವಂದಿತ ಪಾದಗೆ 2ವಿಕ್ರಮಕೆ ಎದುರಾರಿಲ್ಲವೆಂದುಬಲಿಚಕ್ರನು ಸುರರ ಬಾಧಿಸುತಿರಲುಶಕ್ರನ ಪೊರೆದವನುಕ್ಕ ತಗ್ಗಿಸಿ ತ್ರಿವಿಕ್ರಮನೆನಿಸಿದ ದೇವನಿಗೆ 3ವ್ರಜದ ಗೋಪಾಂಗನೆಯರ ಮನೋಹರಗೆಭುಜಗಶಾಯಿ ಭಕ್ತ ಭಯದೂರಗೆನಿಜ ಭಕ್ತ ಪಾರ್ಥರ ಪಥಿಕರಿಸಿದವನಿಗೆಗಜವನುದ್ಧರಿಸಿದ ದನುಜಾರಿಗೆ 4ಕಡುಮೂರ್ಖ ಸೀತಾಕೃತಿಯನೊಯ್ದಸುರನಬಿಡದೆ ಮರ್ದಿಸಿದ ಶ್ರೀ ರಘುಪತಿಗೆಸಡಗರದಲಿ ಶೇಷಾದ್ರಿಲಿ ನಿಂತ ಎನ್ನೊಡೆಯ ಪ್ರಸನ್ನವೆಂಕಟಪತಿಗೆ 5
--------------
ಪ್ರಸನ್ನವೆಂಕಟದಾಸರು
ಮಗಳೆ ಜಾನಕಿ ನಿನ್ನ ಸುಗುಣಸನ್ಮೋಹನ್ನಖಗಕುಲರನ್ನ ಮನೋರಮಣಮನೋರಮಣ ಕಾಂತ ಶ್ರೀರಾಮನಅಗಲದಿರು ಕಾಣೆ ಮರಿಯಾನೆ ಶೋಭಾನೆ 1ಪತಿಯೇಳ್ವ ಮೊದಲು ಜಾಗ್ರತೆಯಾಗಿ ಯೆದ್ದು ಗೃಹ-ಕೃತ್ಯಕೆಲ್ಲಕ್ಕನುಸರಿಸಿಅನುಸರಿಸಿ ನಡೆ ನೀ ಮಗಳೆಹಿತವಾಗಿ ಬಾಳು ಪತಿಯೊಳು ಶೋಭಾನೆ 2ಗಂಡನ ಮಾತಿಗೆ ದುರ್ಚಂಡಿಸದಿರು ಮಗಳೆಗಂಡನುಣ್ಣದ ಮೊದಲು ನೀಮೊದಲು ನೀನುಣ್ಣದಿರುಪುಂಡರೀಕಾಕ್ಷಿ ಪುಣ್ಯರಾಶಿ ಶೋಭಾನೆ 3ಮುಗುಳು ನಗೆಯ ಬೀರು ಜಗಳವ ಮಾಡದಿರುಜಗದೊಳು ಕೀರ್ತಿಯುತಳಾಗುಯುತಳಾಗು ಬಂಧುಗಳಲಿ ನೀಹಗೆಯ ಮಾಡದಿರು ಕೃಪೆದೋರು ಶೋಭಾನೆ 4ವೃದ್ಧ ಮಾವನಪಾದಹೊದ್ದಿ ಸೇವೆಯಮಾಡುಸುದ್ಧ ಭಾವದೊಳು ನಡೆ ಮಗಳೆನಡೆ ಮಗಳೆ ನಿತ್ಯಸುಮಂಗಲೆಮುದ್ದಾಗು ಬಂಧು ಬಳಗಕ್ಕೆ ಶೋಭಾನೆ 5ಅತ್ತೆಯ ಮಾತಿಗೆ ಪ್ರತ್ಯುತ್ತರ ಕೊಡದಿರುಪ್ರತ್ಯೊಬ್ಬಳೆ ಸ್ಥಳದಿ ನಿಲದಿರುನಿಲದಿರು ನೀರಜಗಂಧಿಸತ್ಯ ವಚನವನೆ ಸವಿಮಾಡು ಶೋಭಾನೆ 6ಮೈದುನರನ್ನು ತನ್ನ ಮಕ್ಕಳೆಂಬಂತೆನೋಡುಸಾಧುಭಾವದದಲಿ ನಡೆ ಮಗಳೆನಡೆ ಮಗಳೆ ಪಂಕ್ತಿಯಲಿಭೇದ ಮಾಡದಿರು ಕೃಪೆದೋರು ಶೋಭಾನೆ 7ಕಂಡರೆ ಶಿಷ್ಟರ ದಂಡ ನಮಸ್ಕರಿಸುಹಿಂಡುದಾಸಿಯರ ದಣಿಸದಿರುದಣಿಸದಿರು ಉತ್ತಮಳೆಂದು ಭೂ-ಮಂಡಲದಿ ಕೀರ್ತಿಪಡು ಪೂರ್ತಿ ಶೋಭಾನೆ 8ಚಂಡಿತನವ ನಿನ್ನ ಗಂಡನೊಳ್ಮಾಡದಿರುಗಂಡಸರ ಮುಂದೆ ಸುಳಿಯದಿರುಸುಳಿಯದಿರು ಸಂತತ ಸೌಖ್ಯ-ಗೊಂಡು ಬಾಳಮ್ಮ ಸೀತಾಭಾಮಾ ಶೋಭಾನೆ 9ಕ್ಷಮೆಯಲ್ಲಿ ಧಾತ್ರಿಯುಂಬ ಕ್ರಮದಲ್ಲಿ ಮಾತೆಸುರತಸಮಯದಿ ವೇಶ್ಯಾ ತರುಣಿಯಳತರುಣಿಯಳ ತೆರದಿ ರಾಮನ ಸತಿಯಂ-ತೆ ಮಾಡವ್ವ ಸುಖಂ ಜೀವಾ ಶೋಭಾನೆ 10ಲಕ್ಷ್ಮೀನಾರಾಯಣರಂತೆ ಸೀತಾರಾಮರು ನೀವುಕುಕ್ಷಿಈರೇಳು ಜಗವನ್ನುಜಗವನ್ನು ನಮ್ಮನ್ನು ಸರ್ವರರಕ್ಷಣ್ಯ ಮಾಡಿ ಸುಖಿಯಾಗಿ ಶೋಭಾನೆ 11
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಂದಗಮನೆ, ಇವನಾರೆ ಪೇಳಮ್ಮ |ಮಂದರಧರಗೋವಿಂದ ಕಾಣಮ್ಮಪಕೆಂದಳಿದನಖಶಶಿಬಿಂಬ ಪಾದಪದ್ಮ |ಅಂದುಗೆಯಿಟ್ಟವನಾರು ಪೇಳಮ್ಮ ||ಅಂದು ಕಾಳಿಂಗನ ಪೆಡೆಯ ತುಳಿದ ದಿಟ್ಟ |ನಂದನ ಕಂದ ಮುಕುಂದ ಕಾಣಮ್ಮ 1ಉಡುಗೆ ಪೀತಾಂಬರ ನಡುವೀಣೆ ಉಡುದಾರ |ಕಡಗ-ಕಂಕಣವಿಟ್ಟವನಾರಮ್ಮ ||ಮಡದಿ ಕೇಳ್ ಸಕಲಲೋಕಂಗಳ ಕುಕ್ಷಿಯೊಳ್ |ಒಡನೆ ತೋರಿದ ಜಗದೊಡೆಯ ಕಾಣಮ್ಮ 2ನೀರದನೀಲದಂತೆಸೆವ ವಕ್ಷದಿ ಕೇ-|ಯೂರ-ಹಾರಗಳನಿಟ್ಟವನಾರಮ್ಮ ||ನೀರೆ ಕೇಳು ನಿರ್ಜರರಾದವರಿಗೆ |ಪ್ರೇರಿಸಿ ಫಲವಿತ್ತು ದಾರಿ ಕಾಣಮ್ಮ 3ಶಂಖ ಚಕ್ರವ, ಗದೆ-ಪದ್ಮ ಕೈಯೊಳಗಿಟ್ಟ-|ಲಂಕೃತನಹನೀತನಾರಮ್ಮ ||ಪಂಕಜಮುಖಿಶ್ರೀಭೂದೇವಿಯರರಸನು |ಶಂಕೆಇಲ್ಲದೆ ಗೋಪೀತನಯ ಕಾಣಮ್ಮ4ಕಂಬುಕಂಧರಕರ್ಣಾಲಂಬಿತಕುಂಡಲ|ಅಂಬುಜಮುಖದವನಾರೆ ಪೇಳಮ್ಮ ||ರಂಭೆ ಕೇಳೀತ ಪುರಂದರವಿಠಲ |ನಂಬಿದ ಭಕ್ತಕುಟುಂಬಿ ಕೇಳಮ್ಮ 5
--------------
ಪುರಂದರದಾಸರು
ಮಂದರಧರ ದೇವ ಮೊರೆಹೊಕ್ಕವರ ಕಾಯ್ವಪಮಂದಾಕಿನಿಯ ಪಿತ ಮಾವ ಕಂಸನ ಹೃತ |ಸುಂದರ ಶಶಿವದನ ರಂಗಯ್ಯ ಅ.ಪಕಣ್ಣು ನೋಟದಿ ಚೆಲುವ, ಕಮಠರೂಪದಿ ನಲಿವ |ಹೆಣ್ಣ ಮೊರೆಯಕೇಳಿ ಹಿರಣ್ಯನುದರ ಸೀಳಿ ||ಮಣ್ಣು ಬೇಡಿ ಬೆಳೆದೆ - ಕೃಷ್ಣಯ್ಯ ||ಹೊನ್ನ ಕೊಡಲಿಯ ಪಿಡಿದು ಹತ್ತು ಗ್ರೀವನ ಕಡಿದು |ಚಿಣ್ಣರ ಒಡಗೂಡಿ ಚಪಲೆಯರ ವ್ರತಗೆಡಿಸಿ |ಚೆನ್ನರಾವುತನಾದೆಯೊ - ರಂಗಯ್ಯ 1ಗೋಚರನಂದದಲಿ - ಗಿರಿಯ ತಾಳಿದೆ ಬೆನ್ನಿನಲಿ |ಭೂಚೋರನ ಕೊಂದು ಬಾಲ ಕರೆಯಲು ಬಂದು |ಯಾಚಕ ನೀನಾದೆ - ರಂಗಯ್ಯ ||ಸೂಚತನ ಸುತಗೊಲಿದು ಶರಧಿಯಕಟ್ಟಿ ಮೆರೆದೆ |ಕೀಚಕಹತಪೋಷ ಖೇಚರಪುರವಾಸ |ನೀಚಜನರ ತರಿದೆ - ರಂಗಯ್ಯ 2ವನವನಲೆದು ಬಂದ - ವನಿತೆರತ್ನವ ತಂದ |ಘನಕಂಭದಿಂದ ಬಂದುಗರುವ ಮುರಿದು ಬಲಿಯ |ಜನನಿಯ ಶಿರವರಿದೆ - ರಂಗಯ್ಯ ||ಹನುಮವಂದಿತಪಾದ ಹರುಷ ಪಾಂಡುವವರದ |ಮನಸಿಜ ವೈರಿಗೊಲಿದು ಮಹಾಕಲಿಕಿಯಾದೆ |ಘನಪುರಂದರ ವಿಠಲ - ರಂಗಯ್ಯ 3
--------------
ಪುರಂದರದಾಸರು
ಮಂದಿಯಗೊಡವೆ ಇನ್ನೇನು ಮಗಳೆ |ಮುಂದೆ ನೋಡಿ ಹಂಜಿ ನೂಲವ್ವ............ ಪ.ಕಣ್ಣ ಮುಂದಿನ ಕಸವನು ತೆಗೆದು |ಸಣ್ಣಗೆ ನೀ ನೂಲವ್ವ............... ಅಪವಸುಧೆಯ ದೊಡ್ಡ ಮಣೆಯಮಾಡಿ |ಶಶಿರವಿಗಳೆರಡು ಕಂಬವ ಹೂಡಿ ||ಆ ಸಿರಿರಂಗರ ಎರಡು ಚಕ್ರವ ಮಾಡಿ |ದರ್ಶನವೆಂಬುವ ನುಲಿಯನು ಬಿಗಿದು 1ಪರಬ್ರಹ್ಮನಅಳವು ಮಾಡಿ |ಕುರುಡು ನಾಶಿಕ ಬೆನಕದಿ ತಿಕ್ಕಿ ||ಹರಿ ನೀನೆ ಎಂಬ ದಾರವಕಟ್ಟಿ |ವಿರತಿವಿಚಾರದ ಬೆಲ್ಲಗಳಿಕ್ಕಿ2ಜಾÕನವೆಂಬುವ ಕದರನ್ನಿಕ್ಕಿ |ಮಾನಮದವೆಂಬ ಹಂಜಿಯ ಹಿಡಿದು ||ಧ್ಯಾನವೆಂಬ ಎಳೆಯನು ತೆಗೆದು |ಮೌನದಿಂದಲಿ ನೂಲವ್ವ 3ಕಕ್ಕುಲಾತಿ ಕಾಂಕ್ಷೆಗಳೆಂಬ |ಸಿಕ್ಕುದೊಡಕುಗಳನೆ ಬಿಡಿಸಿ ||ಒಕ್ಕುಡಿತೆಯ ಮಾಡಿದ ಮನದಿ |ಕುಕ್ಕಡಿನೂಲು ಕೂಡಿ ಹಾಕಮ್ಮ 4ಇಪ್ಪತ್ತೊಂದು ಸಾವಿರದ ಮೇ -ಲಿಪ್ಪ ನೂರು ಎಳೆಯನು ಹೊಡೆದು ||ತಪ್ಪದೆ ಹುಂಜವಕಟ್ಟಿ ನೀನು |ಒಪ್ಪದಿ ಸೀಳು ಇಳುವಮ್ಮ 5ಸದ್ಯದಿ ನೀ ಜಾಡರಲ್ಲಿ |ಸಿದ್ಧಬದ್ಧ ಸೀಳುಗಳ ಹಾಕಿ ||ವಿದ್ಯೆಯೆಂಬುವ ಹಚ್ಚಡವನ್ನು |ಬುದ್ಧಿಯಿಂದಲಿ ನೇಯಿಸಮ್ಮ 6ಒಪ್ಪುವಾತ್ಮ ಪರಮಾತ್ಮನೆಂಬ |ಒಪ್ಪ ಎರಡು ಹೋಳುಗಳಹಚ್ಚಿ ||ತಪ್ಪದೆ ಪುರಂದರವಿಠಲನ ಪಾದಕೆ |ಒಪ್ಪಿಸಿ ಕಾಲವ ಕಳೆಯಮ್ಮ 7
--------------
ಪುರಂದರದಾಸರು
ಮನವ ಶೋಧಿಸಬೇಕುನಿಚ್ಚ - ದಿನ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ದಿನದಿ ಮಾಡುವ ಪಾಪ ಪುಣ್ಯದ ವೆಚ್ಚ ಪಧರ್ಮ ಅಧರ್ಮ ವಿಂಗಡಿಸಿ - ದು - |ಷ್ಕರ್ಮಕೆ ಏರಿದ ಬೇರ ಕತ್ತರಿಸಿ ||ನಿರ್ಮಲಾಚಾರದಿ ಚರಿಸಿ -ಪರ - |ಬೊಮ್ಮಮೂರುತಿ ಪಾದಕಮಲವ ಭಜಿಸಿ1ತನುವ ದಂಡಿಸಿ ಒಮ್ಮೆ ಮಾಣೊ - ನಿನ್ನ - |ಮನವ ಶೋಧಿಸಿ ಪರಮಾತ್ಮನ ಕಾಣೊ ||ನೀನು ನಿನ್ನೊಳಗೆ ಜಾಣನೊ - ಮುಕುತಿ - |ಯೇನೂ ದೂರಿಲ್ಲವೊ ಒಂದೇ ಗೇಣೊ 2ಆತನ ಭಕ್ತರಿಗೆ ಕೇಡಿಲ್ಲ - ಅವ - |ಪಾತಕ - ಪತಿತಸಂಗವ ಮಾಡ ಸಲ್ಲ ||ನೀತಿವಂತರು ಕೇಳಿರೆಲ್ಲ - ನಮ -|ಗೀತನೆ ಗತಿಯೀವ ಪುರಂದರವಿಠಲ 3
--------------
ಪುರಂದರದಾಸರು
ಮನವೆ ಚಂಚಲ ಮತಿಯ ಬಿಡು - ನಮ್ಮ |ವನಜನಾಭನ ಪಾದಭಜನೆಯಮಾಡುಪ.ಬಡಮನುಜಗೆ ಬಾಯಬಿಡುವ ದೈನ್ಯದಲವನ |ಅಡಿಗಳಿಗೆರಗಲು ಕೊಡುವನೇನೊ ||ಕಡಲಶಯನ ಜಗದೊಡೆಯನ ನೆನೆಯಕ್ಕೆ - |ಪಿಡಿದು ತಾ ಸಲಹುವ ಬಿಡದಲೆಅನುಗಾಲ1ಬಲ್ಲಿದ ಭಕುತರ ಬಲ್ಲವ ಬಹುಸಿರಿ |ಯುಳ್ಳ ಕರುಣಿ ಲಕ್ಷ್ಮೀನಲ್ಲನಿರೆ ||ಕ್ಷುಲ್ಲಕರನು ಕಾಯಸಲ್ಲದೆಂದೆಂದಿಗುನಿಲ್ಲು ಹರಿಯ ಪಾದದಲ್ಲಿ ತಲ್ಲಣಿಸದೆ 2ಮುಗಿಲು ಮೇಲದೆಗಡೆ ಅಗಣಿತವಾದಾಪ - |ತ್ತುಗಳು ಬಂದಡರಲು ನಗುತಲಿರು ||ಜಗದಧೀಶನ ಮಹಿಮೆಗೆ ನಮೋ ನಮೋ ಎಂದು |ಪೊಗಳುತ ಬಾಳು ನೀ ಅಘಗಳ ಗಣಿಸದೆ 3ಆವಾವ ಕಾಲಕೆ ದೇವನಿಚ್ಛೆಯಿಂದ |ಆವಾವುದು ಬರೆ ನಿಜಸುಖವೆನ್ನು ||ಶ್ರೀವರ ಅನಾದಿಜೀವರ ಕ್ಲಪ್ತದಂತೆ |ಈವನು ನಿಜಸ್ವಭಾವ ಬಿಡದೆನಿತ್ಯ4ಕೇಶವಾಚ್ಯುತ ಶ್ರೀನಿವಾಸ ಮುರಾರೇ |ದೋಷರಹಿತ ದೀನ ಪೋಷಕನೆನ್ನು ||ಮೋಸಗೊಳಿಪ ಭವಪಾಶವ ಖಂಡಿಪ |ಶ್ರೀಶ ಪುರಂದರವಿಠಲನು ಜಗಕಿರೆ 5
--------------
ಪುರಂದರದಾಸರು
ಮನುಜ ವಿಶ್ವಾಸ ಬೇಡ ವನಿತೇರೊಳ್ಮನುಜ ವಿಶ್ವಾಸ ಬೇಡ ತಿಳಿದು ಪ.ನಗೆಮೊಗದಬಲೇರ ಬೆಗಡು ಸ್ನೇಹದಕಿಂತಹೆಗಲ ಶೂಲವೆ ಸುಖವುಸುಗುಣವಿಲ್ಲದ ನರ್ಕಸೌಖ್ಯ ಬೇಕಾದರೆವಿಗಡೆಯರ್ಸಖ್ಯವೆ ಸಾಕು ತಿಳಿದು 1ಮಹಪ್ರೇಕ್ಷರಾದರ ಅಹಿತಕಾರಿಣಿಮಾಯೆಸಹಜ ತಾಮಸರೂಪಿಯಐಹಿಕಾಮುಷ್ಮಿಕದ ಬಹು ಪುಣ್ಯ ಕೆಡಿಸುವಕುಹಕಕೃತ್ರಿಮಶೀಲೆಯ ತಿಳಿದು2ಗುರುಹಿರಿಯರ ಭಕ್ತ್ಯಾಚರಣೆಗೆ ಪ್ರತಿಕೂಲೆತ್ವರಿತ ಕಾಮುಕಿ ಮೋಹಿಯಧರೆಯೊಳಭಿಜÕರ ಮರುಳು ಮಾಡುವ ಬುದ್ಧಿಭರಿತೆ ನಿಷ್ಠುರೆ ನೀಚೆಯ ತಿಳಿದು 3ಎನಿತಿಲ್ಲ ಪತಿವ್ರತೆ ವನಿತೇರವರೆ ನಾಕಾವನಿಯ ಪಾವನ ಮಾಳ್ಪರುಅನುದಿನವರ ನಾಮ ನೆನವಿಗಿರಲಿ ಮಿಕ್ಕಬಿನುಗುನಾರೇರ ನೆಚ್ಚದೆ ತಿಳಿದು4ಪ್ರಸನ್ವೆಂಕಟೇಶಪಾದಬಿಸಜಾರ್ಚನಾನುಕೂಲೆಯಾದಸಿಯಳೆ ಶುಭಗುಣಳುಹುಸಿಢೌಳಿಕಾರ್ತಿ ದುವ್ರ್ಯಸನಿಯನಾಳ್ವಮಾನಿಸಗೆ ಸುಖವೆ ಸ್ವಪ್ನವು ತಿಳಿದು 5
--------------
ಪ್ರಸನ್ನವೆಂಕಟದಾಸರು
ಮರುಳಾಟವ್ಯಾಕೆ ಮನುಜಗೆ ಮರುಳಾಟವ್ಯಾಕೆಹರಿಭಕ್ತನಲ್ಲದವಗೆ ಹಲವಂಗವ್ಯಾಕೆ ಪ.ಮೃತ್ತಿಕಾಶೌಚವಿಲ್ಲದೆ ಮತ್ತೆ ಸ್ನಾನ ಜಪವ್ಯಾಕೆಹತ್ತು ಕಟ್ಟದವಗೆ ಅಗ್ನಿಹೋತ್ರವ್ಯಾತಕೆತೊತ್ತುಬಡಕಗೆ ಬಹು ತತ್ವವಿಚಾರವ್ಯಾಕೆಕರ್ತಕೃಷ್ಣನ್ನೊಪ್ಪದ ವಿದ್ವತ್ತವ್ಯಾತಕೆ1ಹಸಿವೆತೃಷೆತಾಳದವಗೆಹುಸಿವೈರಾಗ್ಯವ್ಯಾತಕೆವಿಷಮ ಚಿತ್ತಗೆ ಪರರ ಕುಶಲ ಬಯಕ್ಯಾಕೆದಶ ಜಪ ಮಾಡಲಾರ ಮುಸುಕಿನ ಡಂಬವ್ಯಾಕೆಕುಶಶಾಯಿಗರ್ಪಿಸದ ಅಶನವ್ಯಾತಕೆ 2ಮೂಲಮಂತ್ರವರಿಯದ ಮೇಲೆ ದೇವಾರ್ಚನೆ ಯಾಕೆಸಾಲಿಗ್ರಾಮವಿಲ್ಲದ ತೀರ್ಥವ್ಯಾತಕೆಸೂಳೆಗಾರಗೆ ತುಳಸಿಮಾಲೆ ಶೃಂಗಾರವ್ಯಾಕೆಮೇಲೆ ಮೇಲೆ ಹರಿಯೆನ್ನದ ನಾಲಿಗ್ಯಾತಕೆ 3ಊಧ್ರ್ವಪುಂಡ್ರಿಲ್ಲದಾಸ್ಯ ತಿದ್ದಿನೋಡಬೇಕ್ಯಾಕೆಶುದ್ಧ ಸಾತ್ವಿಕವಲ್ಲದ ಬುದ್ಧಿ ಯಾತಕೆಕದ್ದು ಹೊಟ್ಟೆ ಹೊರೆವವಗೆ ಸಿದ್ಧ ಶೀಲವೃತ್ತಿಯಾತಕೆಮಧ್ವ ಮತವÀ ಬಿಟ್ಟಿತರ ಪದ್ಧತ್ಯಾತಕೆ 4ಕಂಡ ನಾರೇರಿಚ್ಛೈಸುವ ಲೆಂಡಗೆ ಪುರಾಣವ್ಯಾಕೆಭಂಡು ಮಾತಿನ ಕವಿತ್ವ ಪಾಂಡಿತ್ಯಾತಕೆಕುಂಡಲಿಪ್ರಸನ್ವೆಂಕಟ ಮಂಡಲೇಶನ ಶ್ರೀಪಾದಪುಂಡರೀಕಬಿಟ್ಟವನ ವಿತಂಡವ್ಯಾತಕೆ5
--------------
ಪ್ರಸನ್ನವೆಂಕಟದಾಸರು
ಮರೆಯದಿರು ಮನವೆ ಮಾಧವನ ನಮ್ಮದುರಿತದಾರಿದ್ರ್ರ್ಯವನು ಹರಿಸಿ ಹೊರೆವವನಪ.ಆಳರಿತು ಊಳಿಗವ ಕೊಂಡುಂಡು ದಣಿವಂತೆಮೇಲಾಗಿ ಜೀವವನು ಕೊಡುವ ದೇವನಕಾಲಕಾಲಕೆ ಮಾಳ್ಪ ನಡೆತಪ್ಪು ನುಡಿತಪ್ಪುಆಲೋಚಿಸದೆ ಕರುಣಿಸುವ ಕರುಣನ 1ಮೂಢನಾಗಲಿ ಮತಿಯುಳ್ಳ ನರನಾಗಲಿಪಾಡಿದಾಕ್ಷಣ ಭೃತ್ಯನೆಂದು ಒಲಿದುಕೂಡಿಕೊಂಬುವ ದೊರೆಗಳಿಲ್ಲ ಹರಿಯಲ್ಲದಾನಾಡಾಡಿಬಣಗುಕಲ್ಲುಗಳ ಬೇಡಿ2ಮುನ್ನಾರು ಅನ್ಯದೇವರ ಭಜಿಸಿ ಭವಗೆದ್ದರಿನ್ನಾರು ಹರಿಯೊಲುಮೆಯಲಿ ದಣಿದರುನಿನ್ನ ಗುರುಗಳಿಂದರಿತು ನೆರೆನಂಬು ಪ್ರಸನ್ನ ವೆಂಕಟಪತಿಯ ಪಾದವನಜವ 3
--------------
ಪ್ರಸನ್ನವೆಂಕಟದಾಸರು