ಒಟ್ಟು 32405 ಕಡೆಗಳಲ್ಲಿ , 137 ದಾಸರು , 8458 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಶಾವತಾರದ ನಿಂದಾಸ್ತುತಿಗಳು ವರನ ಚಂದಮದೇನ ವರ್ಣಿಸುವೆನೆಲೆ ಸಖಿಯೆ ಪರಮಸುಂದರಗಾತ್ರನಿರವ ಕೇಳೆ ಬಿಚ್ಚಿರುವ ಕಣ್ಗಳಂ ಮುಚ್ಚಲಾರದ ವರಗೆ ಪಚ್ಚಕರ್ಪೂರದಾ ಕಪ್ಪಿದೇಕೆ ಕೊಳೆತುನಾರುತಲಿಹಗೆ ಲಲಿತವಸ್ತ್ರಗಳೇಕೆ ಹೊಲಸು ಮಯ್ಯಿಗೆ ಗಂಧ ಬಳಿಯಲೇಕೆ ಜಲಧಿಯಲಿ ವಾಸಿಪಗೆ ಪÀಲವಿಧದ ತೊಡವುಗಳೆ ನೆಲೆಯಿಲ್ಲದಾತಂಗೆ ಲಲನೆ ಸುತರೆ ಅಜ್ಞಾತಪಾದಕ್ಕೆ ಗೆಜೆ ಗೊಲಸೆ ವಿಜ್ಞಾನಮಯಗೆ ವಿವಿಧ ಸಿಂಗರವೆ ಯಜ್ಞಭೋಕ್ತಗೆ ಮತ್ತೆ ಭಕ್ಷ್ಯದೆಡೆಯೆ
--------------
ನಂಜನಗೂಡು ತಿರುಮಲಾಂಬಾ
ದಾತ ದೀನನಾಥ ಧ್ಯಾನದಾಯಕ ಜಾನಕೀ ಪ್ರೀತ ಪ ಬಹುಕುಂದುನಿಂದೆ ಸರ್ವ ಅಹುದು ಅಲ್ಲ ನಿನ್ನದಭವ ಅಹಿತಸುಖದ ಪ್ರೇಮಬಿಡಿಸಿ ದಹಿಪ ಭವದ ಬಾಧೆ ಗೆಲಿಸು 1 ಬಂದ ಬಂಧ ಬಯಲುಮಾಡಿ ಕಂದನೆಂದು ಕರಪಿಡಿದು ತಂದೆ ನಿನ್ನ ಪರಮಧ್ಯಾನಾನಂದ ಪಾಲಿಸಿ ಪೋಷಿಸೆನ್ನ 2 ಕಾವದೇವ ನೀನೆ ಪತಿತಪಾವನ ತ್ರಿಜಗಸೂತ್ರಧಾರಿ ಭಾವಜಪಿತ ಶ್ರೀರಾಮ ನಿಮ್ಮ ಸೇವಕನೆನಿಸಿ ಸಲಹು ಸತತ 3
--------------
ರಾಮದಾಸರು
ದಾತ ಅಂಬುಜಾಸನ ತಾತ ಕುಂಭಿಣಿಯೊಳು ಪುಟ್ಟಿ ಜನನಿಯ ಮೊಲೆ ಪಾಲು ಉಂಬೋದು ಬಿಡಿಸೊ ಜನನವ ಕೆಡಿಸೊ ಪ ರಸಿಕೆ ಮುಹಕದಲಿ ನಿಶಿದಿನದಲಿ ಹೊರಳಿ ಅಸುರುಸುರೆನುತಲಿ ಹಸಗೇಡಿಯಾದೆನೊ ಪರಿ ನೊಂದು 1 ಹಲವು ಲಂಪಟದೊಳು ಹಲುಬಿ ಹಕ್ಕಲನಾದೆ ಬಲೆಯೊಳಗಿದ್ದ ಎರಳೆಯಂತೆ ಮಿಡುಕುತ ಮಲಮೂತ್ರದೊಳು ಬಳಲಿದೆ ಕೇಳೊ 2 ಎಳ್ಳನಿತು ಸತ್ಕರ್ಮವುಳ್ಳದ್ದು ಚರಿಸಿದೆ ಬಲಿಷ್ಠ ನಾನೆಂದು ಬಲು ದುರ್ಮತಿಯಿಂದ ಎಲ್ಲರ ಜರಿದೆ ಧರ್ಮವ ಮರೆದೆ 3 ಚಾರುವಾಕರಗೂಡಿ ಮೂರೆ ವಿಕಾರದಲ್ಲಿ ನೀರೇರ ಒಡಗೂಡಿ ನೀತಿ ನಿರ್ಣಯ ತೊರೆದು ಬಟ್ಟೆ 4 ಎಲ್ಲಿರಲು ನಿನ್ನವನೋ ಅಲ್ಲವೆಂದೆನಿಸದೆ ಬಲ್ಲಿದರೊಡಿಯ ವಿಜಯವಿಠ್ಠಲ ನಿ ನ್ನಲ್ಲಿ ಸೇರಿಸಿ ಎನ್ನ ಪೊರೆಯೋ ಪ್ರಸನ್ನಾ 5
--------------
ವಿಜಯದಾಸ
ದಾತ ನೀನಿರಲಾತರ ಬಡತನವೊ ದಾತ ನೀನಿರಲಾತರ ಬಡತನವೊ ಪ ಸೋತು ಮನವನು ವಿಷಯಗಳಲಿ ಬಲು ವಾತ ಕುಮಾರರ ನೀತಿಗಳರಿಯುತ ಧಾತಪಿತನ ಗುಣ ಜಾತಗಳಲಿ ಅತಿ ಪ್ರೀತಿ ಪಡೆಯುವರ ಅ.ಪ ತಾನು ತನ್ನವರೆನ್ನುವ ಮೋಹದಲಿ ಅನುದಿನದಲಿ ಮುಳುಗಿಹ ಮಾನವರಿಗೆ ಧನಾರ್ಜನೆಯು ಕ್ಲೇಶ ಜಾನಕೀಶನೆ ನೀನಲ್ಲದೆ ಎನ ಗೇನು ರುಚಿಸದು ಎಂದರಿಯುತ ನಿನ್ನ ಜ್ಞಾನ ಪಡೆಯಲು ಸತತ ಶ್ರವಣ ಮನನಾದಿಗಳ ಸುಖವರಿತ ಸುಜನರಿಗೆ 1 ಪಾಡುಪಡುತಲಿ ಧನವ ಬಹಳ ಗಳಿಸಿ ನೋಡುತಲದ ಹಿಗ್ಗುತ ಗೂಢತನದಲಿ ದಿನದಿನ ನೇವರಿಸಿ ಕಾಡುವಾ ನರನಂತೆ ಜೀವನ ಮಾಡುವುದು ಕಡು ಬಡತನವಲ್ಲವೆ ತೋಡಿ ಗಿರಿಯನು ಇಲಿಮರಿಗಳ ಹಿಡಿ ದಾಡುವಂತಹ ಮೂಢ ನಾನಲ್ಲವೊ 2 ನಿನ್ನ ಗಾನವೆ ವಿವಿಧ ಸುರಸ ಪಾನ ಅವಿಚಾಲಿತ ಮನದಲಿ ನಿನ್ನ ಧ್ಯಾನವೆ ನವಮಣಿ ಸೋಪಾನ ನಿನ್ನ ಪೂಜೆಯ ಮಂದಿರವೆ ಎನ ಗುನ್ನತದ ಉಪ್ಪರಿಗೆಯ ವಾಸವು ನಿನ್ನ ಸೇವೆಯ ಸುಖತಮ ಭೋಗಗ ಳೆನ್ನುವರಿಗೆ ಪ್ರಸನ್ನನಾಗುವ 3
--------------
ವಿದ್ಯಾಪ್ರಸನ್ನತೀರ್ಥರು
ದಾನಧರ್ಮವ ಮಾಡಿ ಸುಖಯಾಗು ಮನವೆ ಪ ಹೀನ ವೃತ್ತಿಯಲಿ ನೀ ಕೆಡಬೇಡ ಮನವೆ ಅ ಎಕ್ಕನಾತಿ ಯಲ್ಲಮ್ಮ ಮಾರಿ ದುರ್ಗಿ ಚೌಡಿಯಅಕ್ಕರಿಂದಲಿ ಪೂಜೆ ಮಾಡಲೇಕೆಗಕ್ಕನೆಯೆ ಯಮನ ದೂತರೆಳೆದೊಯ್ಯುವಾಗಶಕ್ತೇರು ಬಿಡಿಸಿಕೊಂಡಾರೇನೊ ಮರುಳೆ 1 ಸಂಭ್ರಮದಲಿ ಒಂದ್ಹೊತ್ತು ನೇಮದೊಳಗಿದ್ದುತಂಬಿಟ್ಟಿನಾ ದೀಪ ಹೊರಲೇತಕೆಕೊಂಬು ಹೋತು ಕುರಿ ಕೋಣಗಳನ್ನು ಬಲಿಗೊಂಬದೊಂಬಿ ದೈವಗಳ ಭಜಿಸದಿರು ಮನವೆ2 ಚಿಗುರೆಲೆ ಬೇವಿನ ಸೊಪ್ಪುಗಳ ನಾರಸೀರೆಬಗೆಬಗೆಯಿಂದ ಶೃಂಗಾರ ಮಾಡಿನೆಗೆನೆಗೆದಾಡುತ ಕುಣಿಯುತಿರೆ ನಿನಗಿನ್ನುಮಿಗಿಲಾದ ಮುಕ್ತಿಯುಂಟೇ ಹುಚ್ಚು ಮನವೆ 3 ದಾನಧರ್ಮ ಪರೋಪಕಾರವ ಮಾಡುದೀನನಾಗಿ ನೀ ಕೆಡಬೇಡವೊಜ್ಞಾನವಿಲ್ಲದೆ ಹೀನ ದೈವವ ಭಜಿಸಿದರೆಏನುಂಟು ನಿನಗಿನ್ನು ಎಲೆ ಹುಚ್ಚು ಮನವೆ 4 ನರಲೋಕದಲಿ ಯಮನ ಬಾಧೆಯನು ಕಳೆಯಲುವರ ಪುಣ್ಯ ಕಥೆಗಳನು ಕೇಳುತಲಿಸಿರಿ ಕಾಗಿನೆಲೆಯಾದಿ ಕೇಶವನ ನೆರೆ ನಂಬಿಸ್ಥಿರ ಪದವಿಯನು ಪಡೆ ಹುಚ್ಚು ಮನವೆ5
--------------
ಕನಕದಾಸ
ದಾನವಿಲ್ಲ ಧರ್ಮವಿಲ್ಲ ಜ್ಞಾನವಿಲ್ಲಏನು ಹೇಳಿದರೇನು ವಿಷಯಮೆಚ್ಚಿದವಗೆ ಪ. ಕಂಡಕಂಡವರ ಅನ್ನಕೆ ಸಿಲುಕಿ ಅನುಗಾಲಭಂಡತನದಲಿ ಕಾಲವ ಕಳೆಯುತತಂಡ ತಂಡದಿ ಬಾಹ ಔತಣಕೆ ಮೈಯ್ಯುಬ್ಬಿಉಂಡು ಎನಗಿಂದಧಿಕ ಯೋಗ್ಯನಿಲ್ಲವೆಂದು 1 ಪರ್ವಕಾಲ ಪಿತೃದಿವ್ಸ ಗುರುಗÀಳ ಪುಣ್ಯದಿನಸರ್ವಕರ್ಮವ ತ್ಯಜಿಸಿ ಅತಿಥಿಗೀಯದೆಪರರ ಅನ್ನವ ಬಿಡದೆ ಉತ್ಸಾಹದಲಿ ಪೋಗಿನಲಿನಲಿದುಂಡು ಸ್ತೋತ್ರವ ಮಾಡಿ ದಿನಕಳೆವೆ 2 ಅನ್ಯರೊಡವೆಯು ತನಗೆ ಬಂದರೆ ಸಂತೋಷತನ್ನೊಡವೆ ಒಬ್ಬರಿಗೆ ಕೊಡಲು ಕ್ಲೇಶಉನ್ಮತ್ತನಾಗಿ ಉದರವ ಪೊರೆವ ಈ ದೋಷಮನ್ನಿಸಿ ದಯಮಾಡಿ ಸಲಹೋ ಹಯವದನ3
--------------
ವಾದಿರಾಜ
ದಾನಿಗಳೊಳು ಪ್ರತಿಗಾಣೆನೊ ನಿನಗೆಸ ನ್ಮೌವಿ ಶ್ರೀ ಸುಶೀಲೇಂದ್ರ | ನೀನೇವೆ ಗತಿ ಎಂದ ದೀನರ ಮನೋಭೀಷ್ಟ ಸಾನುರಾಗದಿ ಕೊಡುವಿ | ಕೈಪಿಡಿಯುವಿ ಪ ಶ್ರೀಸುವೃತೀಂದ್ರ ಸುಯಮೀಂದ್ರಗಳಿಂದಲಿ ಸ | ನ್ಯಾಸತ್ವ ಸ್ವೀಕರಿಸಿ ಪತಿ ಮೂಲ | ದಾಶರಥಿಯ ಪಾದ ಲೇಸಾಗಿ ಒಲಿಸಿದೆ ನೀ | ಸುಜ್ಞಾನಿ 1 ಕರಿವರದನ ಪೂರ್ವ ಕರುಣ ಪಡೆದು ದಿವಾ ಕರನಂತೆ ರಾಜಿಸುತ | ಗುರುರಾಘವೇಣದ್ರಾಖ್ಯ | ಸುರಧೇನುವಿಗೆ ಪುಟ್ಟ ಕರುವೆನಿಸುತ ಮೆರದಿ ಭೂವಲಯದಿ 2 ಮೋದತೀರ್ಥಾಗಮ ಸಾಧು ಸಜ್ಜನರಿಂದ ಶೋಧಿಸಿ ಬಹುವಿಧಧಿ ಪಂಚಭೇದ | ಶಿಷ್ಯರಿಗೆಲ್ಲ ಬೋಧಿಸುತಲಿ ಪೊರೆದಿ ದಯಾಂಬುಧಿ 3 ಸಿಂಧುತೀರದಿ ನೆಲಸಿ ಮಂದ ಜನರಿಗೆ | ಕ ರ್ಮಂದಿ ಪವರಗಳನು | ನೀಡುವಿ ನೀನು 4 ಶ್ರೀ ಶಾಮಸುಂದರ ವಿಠಲ ವಾಸಿಸುವ | ಕಾ ಪ್ಯಾಸನ ವರಕ್ಷೇತ್ರದಿ | ದೇಶ ದೇಶದಿ ಬಂದ | ಭೂಸುರರಿಗೆ ಧನ ರಾಶಿ ಸೂರೆ ಮಾಡಿದಿ | ಸನ್ಮೋಹದದಿ 5
--------------
ಶಾಮಸುಂದರ ವಿಠಲ
ದಾಮ ಶೋಭಿತ ವಿಠಲ | ಸಾಮ ಸನ್ನುತನೇ ಪ ಪ್ರೇಮದಿಂದಿವಳ ಮನ | ಕಾಮ ಪೊರೈಸೋ ಅ.ಪ. ಯೇಸೊ ಜನ್ಮದ ಪುಣ್ಯ | ರಾಶಿ ಫಲ ಒದಗುತಲಿದಾಸತ್ವ ದೀಕ್ಷೆಯನು | ಆಶಿಸುತ್ತಿಹಳೋ |ದಾಸವರ್ಯರು ವಿಜಯ | ದಾಸರುತ್ಸವದಿ ಸಂ-ತೋಷದಲಿ ಬಿನ್ನಹವ | ಲೇಸು ಗೈದಿಹಳೋ 1 ಸಾರ ಚಾರು ಮೂರುತಿಯೇ 2 ಆನಂದ ಮುನಿ ಮತದಿ | ಸ್ವಾನುಭವ ದೀಕೆಯನುಜ್ಞಾನ ಭಕ್ತ್ಯಾದಿ ಸಂ | ಧಾನ ತಿಳಿಸುತಲೀ |ಮಾನನಿಧಿ ಕೈ ಪಿಡಿದು | ದೀನಳನು ಪೊರೆಯೆಂದುಪ್ರಾಣ ಪ್ರಾಣನೆ ಬೇಡ್ವೆ | ದೀನ ವತ್ಸಲನೇ 3 ಸಾಧನದಿ ಸತ್ವತೆಯ | ಹಾದಿಯಲ್ಲಿಹಳೀಕೆಸಾಧುಗಳ ಕಂಡು ಹೃದ | ಯಾದ್ರ್ರ ಭಾವದಲೀ |ಮೋದ ಬಡಿಸುತ ಸೇವೆ | ಶ್ರೀಧರನಿಗರ್ಪಿಪಳುಹೇ ದಯಾಂಬುಧೆ ಸಲಹೊ | ಸಾಧು ಜನ ವಂದ್ಯಾ 4 ಸರ್ವಕಾಲವು ದೇಶ | ಸರ್ವಗುಣದ್ರವ್ಯದಲಿದುರ್ವಿಭಾವ್ಯನ ವ್ಯಾಪ್ತಿ | ಸ್ಛುರಣೆಯನು ಕೊಡುತಾ |ಸರ್ವಾಂತರಾತ್ಮಗುರು | ಗೋವಿಂದ ವಿಠ್ಠಲನೆದರ್ವಿ ಜೀವಿಯ ಹೃದಯ | ಗಹ್ವರದಿ ತೋರೋ 5
--------------
ಗುರುಗೋವಿಂದವಿಠಲರು
ದಾರ ಕಂದನಮ್ಮ ಕೇರಿಗೆ ಬಂದು ಗಾರುಮಾಡುವ ನೋಡಲಾರೆ ಗೋಪ್ಯಮ್ಮ ಈರೇಳು ಲೋಕದೊಡೆಯನೊ ದಾರಮ್ಮ ಪ ಪಿಡಿದಿದ್ದ ಕೊಳಲೂದುವ ಬಾಯಲಿ ಬೆಣ್ಣೆ ಕಡಗೋಲ ಪಿಡಿದಿದ್ದ ಬೆಡಗು ನೋಡಮ್ಮ ಬಿಡಿಮುತ್ತಿನ ಉಡಿದಾರವು ಉಡಿಗಂಟೆ ಮುಡಿದ ಮಲ್ಲಿಗೆ ಕುಸುಮಗಳು ನೋಡಮ್ಮ ಕುಡಿಹುಬ್ಬು ಕಡೆಗಣ್ಣನೋಟದ ಚೆಲುವ ತಾ ಹುಡುಗರಂತಾಡುವ ತುಡುಗ ತಾನಮ್ಮ 1 ಕಮಲ ನಕ್ಷತ್ರದ ಪತಿಯಂತೆ ಇಪ್ಪೊ ವಜ್ರದ ಪದಕಗಳ ನೋಡಮ್ಮ ಅರ್ಕನಂತಿರಲತಿ ಕೋಮಲಪಾದಕೆ ಶುಕ್ಲಗೆ ಮಿಗಿಲಾದ ಗುರು ಕೇಳಮ್ಮ ಕತ್ತಲೊಳಗೆ ಕಳ್ಳತನದಿಂದೋಡಾಡುತ ಕಟ್ಟಿದ ಪಂಜಿನಂತ್ಹೊಳೆವೊ ಕೇಳಮ್ಮ 2 ಕಟ್ಟಿದ ನೆಲವಿನೊಳ್ ಮಕ್ಕಳ ಮಲಗಿಸಿ ಎಷ್ಟು ಘಾತಕÀ ತಾ ಕೈಬಿಟ್ಟ ನೋಡಮ್ಮ ತೊಟ್ಟಿಲೊಳಗೆ ಕೆನೆಮೊಸರಿನ ಚಟ್ಟಿಗೆ ಇಟ್ಟು ತೂಗುತ ಮೆಲ್ಲುವನು ಕೇಳಮ್ಮ ಕಟ್ಟಿದ್ದಾಕಳ ಕಣ್ಣಿ ಬಿಚ್ಚಿ ಮೊಲೆಗೆ ಬಾಯ್ಹಚ್ಚಿ ಕ್ಷೀರವ ಸುರಿದುಂಬುವನಮ್ಮ 3 ತೋಳ ಬಾಪುರಿ ವಂಕಿ ತೋಡ್ಯ ಬಿಂದಲಿ ಚಕ್ರ- ಪಾಣಿಯಲ್ಲೊ ್ಹಳೆವೊ ಮುದ್ರಿಕೆಯ ನೋಡಮ್ಮ ಆಣಿ ಮುತ್ತಿನ ಸರ ಅರಳೆಲೆ ಪದಕವು ಕಾಲ ಕಿಂಕಿಣಿ ನಾದಗಳ ಕೇಳಮ್ಮ ತೋರ ಮುತ್ತುಗಳೋಣಿಯಲುದುರುತ ಒ- ಯ್ಯಾರದೊಲಪಿನ ಚೆದುರ್ಯಾರು ಪೇಳಮ್ಮ4 ಮನ್ಮಥನಿಗೆ ಮಿಗಿಲಾದ ಸ್ವರೂಪಲಾವಣ್ಯನೆ ನೀಲದ ವರ್ಣ ಕೇಳಮ್ಮ ಹುಣ್ಣಿಮೆ ಚಂದ್ರಮನ್ನ ಸೋಲಿಸೋಮುಖ ಇನ್ನು ಇವನÀ ಸೌಂದರ್ಯ ನೋಡಮ್ಮ ಹೆಣ್ಣು ಮಕ್ಕಳ ಸೆರಗನ್ನು ಕೈಯ್ಯಲಿ ಸುತ್ತಿ ಬೆನ್ನು ಬೆನ್ಹತ್ತಿ ತಾ ತಿರುಗುವನಮ್ಮ 5 ಚೀನಿ ಅಂಗಿಯ ಮ್ಯಾಲೆ ಚಿತ್ರದ ನಡುಕಟ್ಟಿ ಜಾರ ಜರದ ಛಾದರವ ನೋಡಮ್ಮ ಸೋಗೆ ನವಿಲು ಗಿಳಿ ಕೋಗಿಲೆ ಸ್ವರದಂತೆ ವೇಣು ಕೊಳಲ ಗಾಯನವ ಕೇಳಮ್ಮ ಮೇಘಮಂಡಲ ತಲೆತಾಕುವ ಹರಿಯದೆ ತಾ ಜಿಗಿದಾಡೋನಂಗಳದಿ ಕೇಳಮ್ಮ 6 ಎಷ್ಟು ಹೇಳಿದರೀ ಮಾತು ಮನಕೆ ನಿಜ ಹುಟ್ಟವಲ್ಲದೇನೀಗ ಬಾರೆ ಗೋಪಮ್ಮ ಬಿಟ್ಟು ಕೆಲಸ ಭೀಮೇಶಕೃಷ್ಣಗೆ ಬುದ್ಧಿ ಎಷ್ಟು ಹೇಳುವಿ ಮುಂದ್ಹೇಳಲೇಕಮ್ಮ ಸಿಟ್ಟು ಮಾಡುವರೇನೆ ಸಿರಿಪತಿ ಆಟ ನಿನ್ನ ದೃಷ್ಟಿಂದ ನೋಡೆ ನಿಜಹುಟ್ಟುವುದಮ್ಮ7
--------------
ಹರಪನಹಳ್ಳಿಭೀಮವ್ವ
ದಾರಿ ಒಳ್ಳೇದಾಗಿರಬೇಕೂ ಹರಿದಾಸನಾದ ಮೇಲೆ ಪ ಯಾರೇ ಬಂದರೂ ಸರಿ ಯಾವ ಕಾಲದಲ್ಲಿಯು ಪಾರಗಾಣದಂಥಾ ಈ ಸಂಸಾರವಾರ್ಧಿ ದಾಟುವದಿಕ್ಕೆ ಅ.ಪ ಜ್ಞಾನ ಭಕ್ತಿ ದಾನಧರ್ಮ ವೈರಾಗ್ಯದಿ ಸದ್ಗುಣಂಗಳು ತಾನೆ ತಾನಾಗೆಲ್ಲವು ಸ್ವಾಧೀನವಾಗಿರಬೇಕಾದರೆ 1 ಓದಿದರ್ಥ ಮನಕೆ ತಿಳಿದು ನಿರತವು ಸಾಧನವು ಮಾಡುತ ಅ- ನಾದಿ ಸಿದ್ಧವಾದ ತತ್ವದ ಹಾದಿ ಕಾಣಬೇಕಾದರೆ 2 ತಾಮಸಾದಿ ದುರ್ಗುಣ ನಿರ್ನಾಮವಾಗಿ ಪ್ರೇಮದಿಂ ಗುರುರಾಮವಿಠಲನ್ನ ನೆನೆವದಕ್ಕೆ 3
--------------
ಗುರುರಾಮವಿಠಲ
ದಾರಿ ತೋಚದಲ್ಲಾ ನನಗೆ ಏನು ಪ ನೀರಜಾಕ್ಷ ನಿನ್ನ ನೊಲಿಸುವ ಅ.ಪ ವಿಧಿ ಸಾಧಿಸುತ ವೇದವ್ಯಾಸ ನಿನ್ನ ಪ್ರೀತಿ ಸಾಧಿಸಲು ಮೂಢನಾನು 1 ದಂಡಕಾಲ ಕಳೆದುದಯ್ತು ಮಂಡೆಗೀಗ ಹತ್ತದವು ಫಂಡರೀಶ ಕೃಪೆಯಮಾಡೊ 2 ಹಾಡಿಪಾಡಿ ವಲಿಸಾಲು ರಾಗ ಈ ಭಾವ ತಾಳ ಕಾಣೆ ಕಾಡು ಕೋಣನಂತೆ ಇರ್ಪೆ ನೀಡಿ ಸಲಹೊ ಸರ್ವ ಶಕ್ತಿ 3 ದಾನಧರ್ಮತೀರ್ಥಯಾತ್ರೆ ನಾನು ಮಾಡೆ ಹುಟ್ಟು ಬಡವ ಶ್ವಾನನಂತೆ ತಿರಿದು ಉಂಬೆ ಸಾಧ್ಯವೇನು ನೀನೇ ನುಡಿಯೊ4 ನೆಂಟರಿಷ್ಟರೆಲ್ಲ ಎನ್ನ ಕೈಯ ಬಿಟ್ಟು ಹೋದರೈಯ ಒಂಟಿಯಾಗಿ ಅಲೆದು ಅಲವೆ ಭಂಟನೆನಿಸಿ ಕಾಯಬೇಕೊ 5 ದಾಸನಾಗಿ ಬಾಳೋದಕ್ಕೆ ಆಶೆಯಿನ್ನು ತೊಲಗಲಿಲ್ಲ ಮೊಸವೇನೆ ಬರಿಯ ವೇಷ ದೋಷದೂರ ಶ್ರೀಶವಲಿಯೊ 6 ಹಿಂದಿನವರ ಕಾಯ್ದಬಗೆಯು ಇಂದಿನವರಿಗೆ ಬರಿಯ ಕಥೆಯು ಮಂದನೆನ್ನ ಈಗ ಪಿಡಿದು ಮುಂದು ಮಾಡೊ ನಿನ್ನ ಖ್ಯಾತಿ7 ಶರಣ ಜನರ ಬಿಡನು ಎಂಬ ಖರೆಯಬಿರುದು ನಿನ್ನದೆಂದು ಹಿರಿಯರಿಂದ ಅರಿತುಬಂದೆ ಪರಮ ಕರುಣಿ ಕೈಯ ಪಿಡಿಯೊ8 ನಿನಗೆ ಯೆನ್ನ ಪೊರೆಯೆ ಕ್ಷಮಿಸಿ ದೋಷ ಪೊರೆಯೊ ಬೇಗ ನಮಿಪೆ ನಂಬಿ ನಿನ್ನನೀಗ 9
--------------
ಕೃಷ್ಣವಿಠಲದಾಸರು
ದಾರಿತೋರೋ ಮಾಯಾಕಾರ ಕರುಣಾಸಾಗರ ಪ ಪಾರುಗಾಣಲಾರೆನಯ್ಯ ದೂರಮಾಡದಿರಯ್ಯ ಅ.ಪ ಕರವ ನೀಡಿದೆ ಹರಿಯೇ ನಿನ್ನ ಭಜನೆಯೆಂಬುದ ಮರೆತು ಮೆರೆದೆನಯ್ಯ 1 ಸ್ನಾನ ನೇಮ ಜಪ ತಪಂಗಳ ಜ್ಞಾನವಿಲ್ಲವೈ ಧ್ಯಾನ ಹೋಮ ಭಜನೆ ಪೂಜೆ ಏನನರಿಯೆನಯ್ಯ 2 ನಿನ್ನ ದಾಸರದಾಸನೆಂದು ಎನ್ನ ಪಾಲಿಸೈ ಸನ್ನುತಾಂಗ ಮಾಂಗಿರೀಶ ನಿನ್ನ ನಂಬಿದೆ [ನಯ್ಯ] 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಾರಿಯ ತೋರೊ ಮುರಾರಿ ಮುಂದಣ ದಾರಿಯ ತೋರೊ ಮುರಾರಿಪ. ಕಂಸಾರಿ ಭವಾಂಜನ ಪಾರಾವಾರ ಉತ್ತಾರಣಗೈಯುವಅ.ಪ. ಮಾಯಾಶ್ರಿತನಾಗಿಹೆನಲ್ಲೊ ಮೋಕ್ಷೋ- ಪಾಯಭೇದಂಗಳ ಮರತೆನಲ್ಲೊ ಕಾಯಜಪಿತ ಕಮಲಾಯತಲೋಚನ ಕಾಯದೊಳಗೆ ಸನ್ನಾಯದಿ ನೋಡುವ 1 ದುಃಖವಿಲ್ಲದೆ ಸುಖವಿಲ್ಲ ಇದ ಒಕ್ಕಣಿಪರೆ ತುದಿಬುಡವಿಲ್ಲ ಸೊಕ್ಕಿ ನಡೆದು ಭವಯಿಕ್ಕುಳ ಬಾಯೊಳು ಸಿಕ್ಕಿದೆನಲ್ಲವೊ ರಕ್ಕಸವೈರಿಯೆ2 ಬಲ್ಲೆನೆಂಬರೆ ಬಲವಿಲ್ಲ ಭವ ಬಲ್ಲೆಯೊಳಗೆ ಸಿಲುಕಿದೆನಲ್ಲ ಕಲ್ಲೊಳಗ್ನಿ ಕಲಕಿರುವಂದದಿ ಮನ ದಲ್ಲಿ ನಿನ್ನ ಪದಪಲ್ಲವ ಭಜಿಸುವ3 ಸಾರರಹಿತ ಸಂಸಾರದಿ ಮಾಯಾ ನಾರಿ ಗೈದ ಮಮಕಾರದಿ ಘೋರ ದುರಿತವಪಹಾರಗೈವ ಲಕ್ಷ್ಮೀ ನಾರಾಯಣನು ಸೇರಿ ಸೇವಿಸುವಂಥ 4
--------------
ತುಪಾಕಿ ವೆಂಕಟರಮಣಾಚಾರ್ಯ
ದಾರಿಯ ತೋರೋ ಗೋಪಾಲ ಪ. ವಾರಿಜನಾಭ ವೈಕುಂಠÀಲೋಲಅ.ಪ. ಸಿಕ್ಕಿದೆ ಭವಕಾಡಿನೊಳಗೆಲೆಕ್ಕವಿಲ್ಲದ ಜಂತುಗಳಿಗೆದಿಕ್ಕೊಬ್ಬರಿಲ್ಲವೊ ಎನಗೆಕಕ್ಕಸವ ಕಳೆದು ನಿನ್ನಯ ಪಾದಗಳಿಗೆ1 ಗಜರಕ್ಷಕನು ನೀನೆಂದುಅಜರುದ್ರಾದಿಗಳಂದುನಿಜವಾಗಿ ಪೇಳಿದರೆಂದುಸುಜನÀರೊಡೆಯನೆ ಕೇಳಿದೆ ನಾನಿಂದು 2 ವರದ ಶ್ರೀಹಯವದನ ಬಾರೈಕರೆದೆನ್ನ ದಾರಿಯ ತೋರೈಪರಮ ಭಕ್ತರೊಳಿನ್ನಾರೈಪರಮಪುರುಷ ನೀನಲ್ಲದೆ ಗತಿಯಾರೈ 3
--------------
ವಾದಿರಾಜ
ದಾರಿಯ ವಿಡಿರಣ್ಣ | ಸ್ವಹಿತದ ದಾರಿಯ ಹಿಡಿರಣ್ಣಾ ಪ ದಾರಿಯ ವಿಡಿನಿಜ ಸಾರಿಹ ಶೃತಿಗಳ | ಚಾರು ಭಕುತಿಯಾ ಅ.ಪ ಬಲ್ಲವರಿಗೆ ಬೆಸಗೊಳ್ಳುತ ಮನಸಿನ | ಖುಳ್ಳತನದ ಗುಣವೆಲ್ಲವು ಹೋಗಿ | ಬಲ್ಲವರನು ಕಂಡು ಮೆಲ್ಲಡಿಗಳ ವಿಡಿ | ದುಳ್ಳ ಸಿದ್ಧಾಂತದ ಸೊಲ್ಲವ ಕೇಳಿ | ಉಲ್ಹಾಸದಿಂದಲಿ ಮೆಲ್ಲನ ಭ್ಯಾಸವ | ಮೆಲ್ಲನೆ ಮಾಡುತ ಸುಲ್ಲಭ ತೆರದಾ 1 ಕಂಡ ಪಥಕ ಹರಿದಂಡಲೆಯದೆನೆರೆ | ತಂಡಿಸುತಿಹ ಪಾಷಾಂಡ ಹೋಗಿ | ಚಂಡ ಸುಜ್ಞಾನದ ಲುಂಡನು ಭವದೃಢ | ಗಂಡು ಸದ್ಭೋಧದಿ ಪಂಡಿತನಾಗಿ | ಹಿಂಡ ಭಾಗವತರ ಮಂಡಲದೊಳು ಕೂಡಿ | ಪುಂಡರೀಕಾಕ್ಷನ ಕೊಂಡಾಡುತ ನಿಜ 2 ಹಿಂದಿನ ಸುಕೃತಗಳಿಂದ ನೃದೇಹದಿ | ಬಂದೆನು ನಾನಿನ್ನು ಮುಂದಣ ಗತಿಯಾ | ಹೊಂದುವೆ ನಾವದುಯಂದು ವಿಚಾರವಾ | ತಂದು ಸದ್ಭಾವಲಿಂದೇ ನಿಷ್ಠೆಯಲಿ ತಂದೆ ಮಹಿಪತಿ ಪ್ರಭುಪದ ಭವ ಬಂಧನ ಹರಿವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು