ಒಟ್ಟು 7653 ಕಡೆಗಳಲ್ಲಿ , 132 ದಾಸರು , 4671 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಚ್ಚ್ಯಾಕೆ ಮರೆಯಾಕ್ಹೆಚ್ಚೀತನೆ ಅಚ್ಯುತ ಸಕಲಕ್ಕೆ ಅಧಿಕಿಹ್ಯನೆ ಪ ಬಚ್ಚಿಟ್ಟುಕೊಂಡು ವೇದ ಕುಚ್ಛಿತ ದೈತ್ಯರೊಯ್ಯೆ ಇಚ್ಛೆಗಾರ ಪಿತ ತಂದು ನಿಶ್ಚಯಗೈದ ಸೃಷ್ಟಿ ಅ.ಪ ಸವೆಯದ ವರವನ್ನು ಹಿರಣ್ಯಕಶ್ಯಪನಿಗೆ ಶಿವ ತಾನುಕೊಟ್ಟ ವೈಕುಂಠನ ಉದರ ಸೀಳಿ ಜವದಿ ತ್ರಿಭುವನವ ದಯದಿ ಸಲಹಿದ ಸಿರಿ ಧವ ನರಸಿಂಗನೆನಿಸಿ 1 ಕೇಳಿದ ವರವನ್ನು ದುರುಳರಾವಣನಿಗೆ ಪಾಲಿಸಿ ವರ ಶಂಭು ಹರಿಯನ್ನು ಅರ್ಚಿಸೆ ಕೀಳುದೈತ್ಯನ ಕುಲಮೂಲ ತರಿದು ಸುರರ ಪಾಲಿಸಿದನು ದಿವ್ಯ ಮೇಲುರೂಪವ ತಾಳಿ 2 ದುರುಳಗೊಲಿದು ಶಿವ ಉರಿಹಸ್ತ ಕರುಣಿಸಿ ಮರುಗುತ ಹರಿಯೆಂದು ಕರವೆತ್ತಿಕೂಗಲು ಭರದಿ ಒದಗಿಬಂದು ಮೆರೆವೀ ಅಸುರನನ್ನು ಉರಿಹಸ್ತ ಹರನಿಗೆ ವರವಿತ್ತ ಶ್ರೀರಾಮ 3
--------------
ರಾಮದಾಸರು
ಮುಟ್ಟದಿರೊ ಎನ್ನನು - ರಂಗಯ್ಯಮುಟ್ಟದಿರೊ ಎನ್ನನು ಪ ಮುಟ್ಟದಿರೊ ಎನ್ನ ಮುಂಗೈಯ ಸೆಳವಿಗೆಮುತ್ತೆಲ್ಲ ಸಡಲ್ಯಾವೊ ಹೇ ಮುದ್ದುರಂಗ ಅ ಬಂಟ ಬಿಡು ಎನ್ನ ಗಂಟ 1 ಹಡೆದವರ ತಲೆಗೆ ಮರಳು ಚೆಲ್ಲಿದಂತೆಮಡದೇರ ಕೂಡ್ಯಾಡಿ - ಕಲಿತ್ಯೆಲ್ಲೊ ಮಿರುಗ ದಿಮ್ಮದಿರುಗ ಸೊಕ್ಕಿಮುರುಗ ಬಿಡು ಎನ್ನ ಸೆರಗ 2 ಅಂಗೈಯ ನೊರೆಹಾಲು ಮುಂಗೈಯ ಮೇಲುಗಡೆಸಿಂಗಾರವಾದುದ - ಕಂಡೆ ಕಲೆಯ ಕಾಗಿನೆಲೆಯ ಬಟ್ಟಮೊಲೆಯ ಕನಕಯ್ಯನಿಗೊಲೆಯ 3
--------------
ಕನಕದಾಸ
ಮುಟ್ಟಬೇಡ ಮುಟ್ಟಬೇಡ ಮುರಹರನ ದಾಸರನು ಪ ಕಟ್ಟು ಮಾಡಿದ ಯಮನು ತನ್ನ ದೂತರಿಗೆಅ ತಿರುಮಣಿ ತಿರುಚೂರ್ಣ ಶೃಂಗಾರ ಧರಿಸುವರಸಿರಿತುಳಸಿ ವನಮಾಲೆಯಿಂದೊಪ್ಪುವವರತಿರುಮಂತ್ರ ತೀರ್ಥಪ್ರಸಾದಕೊಳಗಾದವರತಿರುಪತಿ ಯಾತ್ರೆಯನು ಮಾಡುವ ಮಹಾತ್ಮರ 1 ಬಡವರಾಗಲಿ ಭಾಗ್ಯವಂತರಾಗಲಿ ಅವರುಕಡು ಕರ್ಮಿ ಘೋರಪಾತಕರಾಗಲಿನಡೆನುಡಿಗೆ ಮಾಧವನ ಬಿಡದೆ ಕೊಂಡಾಡುವರಗೊಡವೆ ಬೇಡೆಂದು ಯಮಧರ್ಮ ಸಾರಿದನು 2 ವಾಸುದೇವನ ವಾಸರವನಾಚರಿಸುವವರಬೇಸರಿಸದೆ ಹರಿಪ್ರಸಂಗ ಮಾಳ್ಪವರಶೇಷಶಯನ ಕಾಗಿನೆಲೆಯಾದಿಕೇಶವನದಾಸಾನುದಾಸರಿಗೆ ದಾಸರಾದವರ3
--------------
ಕನಕದಾಸ
ಮುಟ್ಟಲು ಮಾಯೆ ಹೋಯಿತು, ಗುರುರಾಯ ಪ ಜ್ಞಾನದ ಪ್ರಭೆಯು ತೋರಿತು ಅ-ಜ್ಞಾನ ನನ್ನದು ಹಾರಿತು 1 ಹರುಷಕೆ ಹರುಷವಾಯ್ತುನಿರಾಶೆಯು ಕಡೆಗಾಯಿತು 2 ಜ್ಞಾನಬೋಧನ ಪ್ರಭು ಯೋಗಿತಾನು ತಾನೆ ದಯವಾಗಿ3
--------------
ಜ್ಞಾನಬೋದಕರು
ಮುದದಿ ನಕ್ರನ ಕೊಂದು ಸಲಹಿದ ಸದುಭಕುತರ ಬಂಧು 1 ನಾರಿಯು ತನ್ನ ಕರೆದಾ ಮಾತ್ರದಿ ಸೀರೆಯ ಮಳೆಗರೆದಾ ಕ್ರೂರ ಖಳರ ಮುರಿದಾ ಪಾಂಡವ- ರಾರಣ್ಯದಿ ಪೊರೆದಾ ನಾರಗೆ ಅಜಮಿಳ ನಾರಾಯಣನೆನೆ ಪಾರುಗಾಣಿಸಿದಪಾರಗುಣನಿಧಿಯಾ 2 ಒಂದು ಬಾರಿಗೆ ಶ್ರೀಶನ ನೆನೆದರೆ ದುರಿತ ನಾಶಾ ಬೆಂದದ್ದು ಬಹುಪಾಶಾ ಅವಗಿ- ನ್ನೆಂದಿಗಿಲ್ಲವೊ ಕ್ಲೇಶಾ ತಂದೆ ಕದರಂಡಲಗಿ ಹನುಮಯ್ಯನೊಡೆಯ ಗೋ- ವಿಂದನ ನೆನೆದವರೆಂದಿಗು ಧನ್ಯರು 3
--------------
ಕದರುಂಡಲಗಿ ಹನುಮಯ್ಯ
ಮುಂದೆ ಗಾಣದೆ ದಾರಿ ಮುದಿಗೆ ಬಿದ್ದು | ಹಿಂದು ನೋಡದೆಬಂದದ್ದು ಬರಲೆಂದು ತಾಳದೊ ಕಂದಗಳ ಪ್ಯಾಡುತಲಿದಿನ ಸುಖವೆಂದೆಂದಿಗೂ ಬೇಕೆಂದು ಬೆಂದ ಭವದಂದದಿಗೆ ನಾ ಕುಂದದೆ ನೊಂದೆ ನಿನಗೆ ವಂದಿಸದೆ 1 ದೇವ ಕಾಯಯ್ಯ ಆವ ದೈವಕ ಬಾಹದೆ | ದಯಾಭಾವಿಸಲ್ಯಾಕ ಭಾವಜಾನಯ್ಯ | ಕಾಮನ ಕಾಟಿಗೆ ಕಂಗೆಡಿಸುವದುರ್ಭಾವಗಳನು ಪರಿಹರಿಸೈ | ಹಾವಿನ ಹಗಿಹಗಳಲಿವಿಹರಿಸುತಿಹ ಜೀವದ ಜೀವನದೊಡೆಯ 2 ಕರ ವಿಡಿದಿಂದುದ್ಫಸದಿಹದು ಬಾಹಳರದು 3
--------------
ರುಕ್ಮಾಂಗದರು
ಮುಂದೆನಗೆ ಗತಿಯೇನೋ ಇಂದಿರೇಶಾ ತಂದೆ ನೀನೆಂದೆನುತ ತಪ್ಪನೊಪ್ಪಿಸುವೇ ಪ ಶ್ರೀಕಾಂತನೇ ನಿನಗೆ ಅಭಿಷೇಕ ಮಾಡದೆಯೆ ನಾ ಕಂಠಪರಿಯಂತ ಕುಡಿದೆನೊ ಹಾಲ ಬೇಕೆಂದು ಹರಿವಾಸರಂಗಳಾಚರಿಸದೆಯೆ ಸಾಕೆಂಬವೊಲು ಸುಖವ ಸೂರೆಗೊಂಡೇ 1 ಅತಿಶಯದಿ ನಾನಿನ್ನ ಪೂಜೆಯನು ಮಾಡದೆಯೆ ಸತಿಸುತರೆ ಸರ್ವಸ್ವವೆಂದಿರ್ದೆನೋ ಹಿತಮಿತ್ರ ಬಾಂಧವರೊಳತಿ ವಂಚನೆಯಮಾಡಿ ಮತಿವಿಕಳನಾದೆನೋ ಪತಿತಪಾವನನೇ 2 ಕಲ್ಯಾಣ ಸಮಯದಲಿ ಕಲಹಗಳ ಹೂಡುತ್ತ ಉಲ್ಲಪದಿ ನಾಕುಳಿತು ನೋಡುತಿದ್ದೆ ಸಲ್ಲಲಿತ ವಾಕ್ಯಗಳನಾಡದೆಯೆ ಸರ್ವತ್ರ ಖುಲ್ಲುಮಾತುಗಳಾಡಿ ನೋಯಿಸಿದೆ ನರರ 3 ತಾರೆಂಬುದಕೆನಾನು ತೌರುಮನೆಯಾಗಿರುವೆ ಪಾರಮಾರ್ಥಕವಾಗಿ ಕೊಡುವುದರಿಯೆ ವೀರವೈಷ್ಣವರಲ್ಲಿ ವಂದಿಸದೆ ದೂಷಿಸುತ ಘೋರಪಾತಕಿಯಾಗಿ ಇರುವೆಯೀ ಜಗದಿ 4 ನರ್ಮದಾನದಿ ಸ್ನಾನ ನಿರ್ಮಲೋದಕಪಾನ ಧರ್ಮ ಮರ್ಮಗಳರಿತು ಮಾಡುವುದು ದಾನ ಪೆರ್ಮೆಯಂಶ್ರೀಹರಿಯ ಧ್ಯಾನ ನಿದಾನ ನೆಮ್ಮದಿಯ ಮಾರ್ಗದಿಂ ಪೊರೆ ನಾನು ದೀನ 5 ನಿತ್ಯ ಜೀವಿಸುವುದನ್ನು ಕಾಡದೆಯೆ ಕಡೆಯಲ್ಲಿ ಉಸಿರುಬಿಡುವುದನು ನೋಡುತ್ತ ಗುರುತರದ ಶ್ರೀಪತಿಯ ಪದಯುಗಕೆ ಗಾಢದಿಂ ಮುಡಿಯಿಕ್ಕಿ ಪಿಡಿವಂತೆ ಮಾಡು 6 ನೀನು ಒಲಿಯುವ ಪರಿಯದಾವುದನು ಮಾಡಿಲ್ಲ ಏನು ಮಾಡಲು ಎನಗೆ ಮನಸು ಬರದು ದೀನ ಪಾಲಕ ನಮ್ಮ ಹೆಜ್ಜಾಜಿ ಕೇಶವನೆ ಸಾನುರಾಗದಿ ನಿನ್ನ ಧ್ಯಾನಿಪುದ ನೀಡೈ7
--------------
ಶಾಮಶರ್ಮರು
ಮುದ್ದು ಕೃಷ್ಣನ್ನ ನೋಡ ಬನ್ನಿರೆಲ್ಲ ನಮ್ಮ ಸಿರಿ ಭೂಮಿ ನಲ್ಲ ಪ. ಪಂಚ ಪಂಚ ಉಷಃ ಕಾಲದಲಿ ಎದ್ದು ಯತಿವರರು ಪಂಚಬಾಣನ ಪಿತಗೆ ನಿರ್ಮಾಲ್ಯ ತೆಗೆದು ಪಂಚ ಗಂಗೋದಕದಿ ಸ್ನಾನಗೈಸುತ ಹರಿಗೆ ಪಂಚವಿಧ ಪಕ್ವಾನ್ನ ಉಣಿಸಿ ದಣಿಸಿಹರು 1 ಕಾಲ್ಕಡಗ ಗೆಜ್ಜೆ ಪೈಜಣ ಘಲ್ಲು ಘಲ್ಲೆನುತ ಮೇಲೆ ಉಡುದಾರ ಉಡುಗೆಜ್ಜೆ ನಡುವಿನಲಿ ಬಾಲಕೃಷ್ಣಗೆ ಅಸಲಿ ಹುಲಿ ಉಗುರು ಹೊನ್ನು ಸರ ತೋಳ ಬಾಪುರಿಗಡಗ ಉಂಗುರಗಳ್ಹೊಳೆಯೆ 2 ಮುದ್ದು ಮುಖಕೊಂದು ಮೂಗುತಿ ಕರ್ಣಕುಂಡಲವು ಕದ್ದು ಬೆಣ್ಣೆಯನು ಕಡಗೋಲ ಪಿಡಿದಿಹನು ತಿದ್ದಿದ ತಿಲುಕ ಮುಂಗುರುಳೂ ಮುತ್ತಿನ ಸಾಲು ಶುದ್ಧ ಚಿನ್ನದ ರತ್ನ ಮಕುಟ ಶಿರದಲ್ಲಿ 3 ರಮ್ಯವಾಗಿಪ್ಪ ವೈಕುಂಠಪುರಿಯನೆ ಬಿಟ್ಟು ಜನ್ಮಸ್ಥಳವಾದ ಗೋಕುಲವ ತ್ಯಜಿಸಿ ತಮ್ಮವರಿಗಾಗಿ ಕಟ್ಟಿದ ದ್ವಾರಕಿಯ ಕಳೆದು ಬ್ರಹ್ಮಾದಿ ವಂದ್ಯ ತಾನಿಲ್ಲಿ ನೆಲೆಸಿಹನು 4 ಅಪಾರ ಮಹಿಮನು ಆನಂದ ತೀರ್ಥರಿಗೊಲಿದು ಪಾಪಿ ಜನರುಗಳ ಉದ್ಧರಿಸಬೇಕೆಂದು ಶ್ರೀಪತಿಯು ತಾ ಪುಟ್ಟ ರೂಪಧಾರಕನಾಗಿ ಗೋಪಾಲಕೃಷ್ಣವಿಠ್ಠಲನಿಲ್ಲಿ ನಿಂತ 5
--------------
ಅಂಬಾಬಾಯಿ
ಮುದ್ದು ಕೃಷ್ಣಯ್ಯನ ನೋಡಾನ ಬನ್ನಿ ಪ ಕೃಷ್ಣಗೆ ಪೂಜೆಯ ಮಾಡಾನ ಬನ್ನಿ ಅ.ಪ ಚಿನ್ನದ ತೊಟ್ಟಿಲಲ್ಲಿ ಚೆನ್ನಾಗಿ ಕುಂತವ್ನೆ ಚೆನ್ನ ಚೆಲುವನಕ್ಕೋ ನಗುತವ್ನೇ ಕನ್ನೆ ರಾಧಮ್ಮಗೆ ಸನ್ನೆಯ ಮಾಡುತವ್ನೆ ಬನ್ನಿ ಬನ್ನಿ ಎಂದು ಕರಿತವ್ನೆ 1 ಹುಬ್ಬಹಾರಿಸ್ತವ್ನೆ ಮಬ್ಬ ತೋರಿಸ್ತವ್ನೆ ಅಬ್ಬಬ್ಬ ಇವನಾಟ ಬಲ್ ತಮಾಸೆ ಒಬ್ಬಿಟ್ಟು ಬೇಕಂತ ಕೈಲೇ ತೋರಿಸ್ತಾನೆ ಅಬ್ಬ ಇವ ಏಳೋದು ಒಂಥರ ಬಾಸೆ 2 ಎಂಥ ಮುದ್ದಿನ ಮೊಗ ಚೆಂದುಳ್ಳಿ ಚೆಲುವ ಇಂಥವ್ನ ನೀವೆಲ್ಲೂ ಕಂಡಿಲ್ಲ ಬನ್ರೋ ನಿಂತು ನೋಡಬೇಕಿವಗೆ ಆಲು ಮೊಸರು ಬೆಣ್ಣೆ ಹಣ್ ತುಂಬಿದ ಗಂಗಾಳ ತನ್ರೋ 3 ಕಿನ್ನರ ಗೆಜ್ಜೆ ಕೈಗೆ ಔಜುಬಂದಿ ತೊಟ್ಟವ್ನೆ ಕಣ್ಗೆ ಕಪ್ಪಾ ಹಚ್ಚಿ ನವಿಲ್ಗರಿ ತಲ್ಗಿಟ್ಟಿ ಹಣೆ ಉದ್ದಾದ ತಿಲಕ ಇಟ್ಟವ್ನೇ 4 ರಾಮ್ನೂ ನಾನೆಂತಾನೇ ಭೀಮ್ನೂ ನಾನೆಂತಾನೇ ಕಾಮ್ನಪ್ಪನೂ ನಾನೆ ನೋಡಂತಾನೆ ನಿಮ್ಮೂರ ದೇವ್ರಾಣೆ ನಾನೆ ಮಾಂಗಿರಿರಂಗ ನಿಮ್ನ ಕಾಯೋಕ್ಬಂದೆ ಅಂತಾನೆ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮುದ್ದು ತಾರೋ ರಂಗಾ ಮುದ್ದು ತಾರೋ ಕೃಷ್ಣಾ ಸಿದ್ಧ ವೇದಾ ಗಮಾ ಭೇದ್ಯ ಮೋಹನ್ನಾ ಪ ಕಾಣಲಿಕ್ಕೆ ಹಸಿವೆ ತೃಷೆಗಳೇ ಮರೆವದು ಏಣಾಂಕ ಬಿಂಬ ಮೊದಾ ಬಾಯಿಂದಾ 1 ಕರ್ಪುರವಾ ಕರಡಿಗಿಯಂತೆ ಹೊಳೆವುತಾ ವಪ್ಪುತಿಹ ಚಲ್ವ ಪುಟ್ಟ ಬಾಯಿಂದಾ2 ಅಮ್ಮ ತಾರಮ್ಮ ನಾನುಂಡೆನೆಂದು ಕೈಯ ಬೀಸಿ ಝಮ್ಮನೇ ತೊಡಲು ನುಡಿ ಬಾಯಿಂದಾ 3 ತಪ್ಪ ಹೆಜ್ಜೆಯನಿಟ್ಟು ಘಲಘಲನೆ ನಡೆವುತ ಧಪ್ಪನೆ ಬೀಳುತ್ತಾ ಬಿರಿವ ಬಾಯಿಂದಾ4 ಹಣೆಯ ಅರಳೆಲೆ ಮಾಗಾಯಿಗಳಲ್ಲಾ ಆಡಿಸುತಾ ಕುಣಿದು ಬೆಣ್ಣೆಯ ಬೇಡುವ ಬಾಯಿಂದಾ5 ಕೋರಳಿಗೆ ಅಂಟಹಾಕಿ ಕೈಗಳಿಂದಾ ಬಿಗಿದಪ್ಪಿ ಗುರು ಮಹಿಪತಿ ನಂದನ ಜೀವನ್ನಾ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮುದ್ದು ಮೋಹನ ದಾಸ | ತಿದ್ದಿಯನ್ನಯ ದೋಷಉದ್ಧರಿಸೊ ಬುಧತೋಷ | ನಮಿಪೆ ನಿನ್ನನಿಶಾ ಪ ದಾಸ ದೀಕ್ಷೆಯ ವಹಿಸಿ | ಕ್ಲೇಶಗಳ ಬಹುದಹಿಸಿದೇಶ ದೇಶವ ಚರಿಸಿ | ಹರಿ ಪ್ರತಿಮೆಗಳ ಭಜಿಸಿ | ಮೀಸಲೆನಿಸಿದ ಮತವ | ವ್ಯಾಸರಿಗೆ ಸಮ್ಮತವದಾಸರಾಯರ ಮಾತ | ಬೀರಿರುವ ಖ್ಯಾತಾ1 ಕರಿಗಿರಿಯ ದುರ್ಗದಲಿ | ವರ ರಥೋತ್ಸವ ಸಮಯನರಸಿಪುರ ಶೇಷಪ್ಪ | ವರ ಕುವರ ನಾಗಾಖ್ಯಗೆಕರುಣಿಸುತ ಲಂಕಿತವ | ಪರಿಸರನ ಮತರಸವಒರೆದು ಸಲಹಿದೆ ಗುರುವೆ | ನೀ ಪರಮ ಗುರುವೇ 2 ಸುಜನ | ಆರ್ತರುದ್ಧರಣಾ 3 ತಂಬ್ರೂಹಿ ಎನುವಂಥ | ತಂಬೂರಿ ನೀ ಕೊಡುತತುಂಬಿ ದ್ವ್ಯೊಭವದಿಂದ | ಪೊರೆದೆ ಮುದದಿಂದಾ |ಉಂಬುಡುವುದೂ ಹರಿಗೆ | ಕೊಂಬ ಸರ್ವವ ಹರಿಗೆಎಂಬ ಜ್ಞಾನವನಿತ್ತು | ಸಂಭ್ರಮವ ಬಿತ್ತೂ 4 ಅಮಿತ ಗುಣ ಪೂರ್ಣಾ |ಸಿರಿಪತಿ ಶ್ರೀಗುರೂ | ಗೋವಿಂದ ವಿಠ್ಠಲನಉರುತರದಿ ಭಜಿಪಂಥ | ಕರುಣಿಸೆಲೊ ಪಂಥ 5
--------------
ಗುರುಗೋವಿಂದವಿಠಲರು
ಮುದ್ದು ಮೋಹನ ರಾಯಾ | ಸುಜನರಉದ್ಧರಿಸಿದ್ಯೊ ಜೀಯಾ | ಪ ಶ್ರದ್ಧಾಳುತನದಲಿ | ಬದ್ಧ ದೀಕ್ಷಿತನೆಮಧ್ವಮತವು ಎನೆ | ದುಗ್ಧಾಬ್ದಿ ಚಂದಿರ ಅ.ಪ. ಚಿಪ್ಪಗಿರಿ ಸುಕ್ಷೇತ್ರಾ | ದೊಳಗೆಅಪ್ಪ ಶ್ರೀ ವರರಿಂದಾ |ಗೊಪ್ಪ ಸದುಪ ದೇಶ | ಅಪ್ಪುತದಾಸನೆನೆಪ್ಪು ಕೊಡುತ ತಿ | ಮ್ಮಪ್ಪನೊಳಗೆಮನ 1 ತೀರ್ಥಕ್ಷೇತ್ರ ಚರಿಸೆ | ದೇಹವುಸಾರ್ಥಕಾಯಿತು ಎನಿಸೀ |ಯಾತ್ರೆ ಮಾಡಿದೆ ಸ | ತ್ಪಾತ್ರರ ಸೇರುತಗಾತ್ರ ಗೈಸಿದೆ ಪಾವಿ | ತ್ರ್ಯ ಬಾಹ್ಯಾಂತರ 2 ಗುರುಗೋವಿಂದ ವಿಠಲನೇ | ಪರತತ್ವಸರ್ವೋತ್ತಮನವನೇ |ಒರೆಯುತ ಸುಜನರ | ಪರಿಪಾಲಿಸಿದಿಯೊವರಬಳ್ಳಾಪುರದಲಿ | ವಿಠಲನ ಸನಿಯ 3
--------------
ಗುರುಗೋವಿಂದವಿಠಲರು
ಮುದ್ದುಕೃಷ್ಣ ವಿಠಲ | ಕಾಪಾಡೋ ಇವನ ಪ ಅಧ್ವರೇಡ್ಯನೆ ದೇವ | ಬುದ್ಧಿ ಪ್ರದನಾಗೀ ಅ.ಪ. ತರಳನಿವ ಭಕ್ತಿಯುತ | ಕರಪಿಡಿದು ಸಲಹಯ್ಯಮರುತಮತ ಪರಿಕರಪು | ತರತಮಸುತತ್ವಾಅ |ವರಪಂಚ ಭೇದಗಳ | ಅರಿಪಾಗುವಂತೆಸಗಿಪೊರೆಯೊ ಕರುಣಾಮಯನೆ | ಕರಿವರದ ದೇವಾ 1 ಪಾದ | ಭಕುತಿಭಾಗ್ಯಗಳಾ |ತೋಕನಿಗೆ ಒದಗಿಸುತ | ಬೇಕಾದ ವರವಿತ್ತುಮೊಕಳತ್ರನೆ ಸಲಹೊ | ಸಾಕಾರ ಮೂರ್ತೇ 2 ಹರಿಸೇವೆ ಗುರುಸೇವೆ | ಹಿರೆಜನಂಗಳ ಸೇವೆಸಾರುತಾ ಭಕುತಿಯಲಿಂದ | ಚರಿಪಮನವಿತ್ತೂವಸಸು ಸಾಧನಗೈಸಿ | ಪೊರೆಯ ಬೇಕೆಂದೆನುತಮರುತಾಂತರಾತ್ಮಕನೆ | ಕರಮುಗಿದು ಬೇಡ್ದೆ 3 ಕಾಮಾದಿಷಡ್ರಿಪು | ಸ್ತೋಮಗಳ ಕಾಟವನುನೇಮದಾ ಕಡೆಗೊತ್ತಿ | ಪಾಮರನು ಇವನಾಭೂಮಗುಣಿ ನೀನಾಗಿ | ಪ್ರೇಮದಿಂ ಸಲಹಲ್ಕೆನಾಮಾಳ್ಪೆ ಭಿನ್ನಪವ | ಶ್ಯಾಮಸುಂದರನೇ 4 ಗಾವಲ್ಗಣಿವರದ | ತಾವಕಗೆ ತವನಾಮಸೇವೆಯನೆ ಕರುಣಿಸುತ | ಕಾಪಾಡೊ ಹರಿಯೇ |ಗೋವುಗಳ ಪಾಲಗುರು | ಗೋವಿಂದ ವಿಠ್ಠಲನೆನೀವೊಲಿಯದಿನ್ನಿಲ್ಲ | ದೇವದೇವೇಶಾ 5
--------------
ಗುರುಗೋವಿಂದವಿಠಲರು
ಮುಮುಕ್ಷುಗಳನು ಉಪಚರಿಸುವವ ನೀನೆ ಹರಿಯೆ ಪ ಅಪ್ಪಾ ಮಾಂಗಿರಿ ರಂಗ ಅಪರಾಜಿತ ನೀನೆಂಬುದ ತಿಳಿದೂ [ಉಪಾಧಿಗೊಳಗಾದೆ ನಿನ್ನ ಮರೆತು] ಅ.ಪ ಇನ್ನೆವರ ಒಮ್ಮನದಿ ಯೋಚಿಸಿದ ಫಲವಾಗಿ ನಿನ್ನ ಮಹಿಮೆಯನರಿತೆ ಸಂಪೂರ್ಣವಾಗಿ 1 ರನ್ನಹಾರಗಳನ್ನು ಕಟ್ಟಿರುವೆ ಸಾಲಾಗಿ ನಿನ್ನ ಮೈಬಣ್ಣವನ್ನು ಮುಚ್ಚುವುದಕಾಗಿ 2 ಸಕಲಾಂಗಗಳು ಹೊಳೆವ ಮುತ್ತು ಮಾಣಿಕ್ಯಗಳು ಉಡಿಗೆಯಾಗಿರಲೇನು ಕಾಂಬುವಂಗಗಳು 3 ಅದರಿಂದ ನಿನ್ನ ಮೈ ಮುಖವು ಕೈಕಾಲ್ಗಳು ಕಪ್ಪು ಕಾಣಿಸದಿರದು ಹೇಳುವೆನು ಕೇಳಾ 4 ನೂರಾರು ಯೋಜನದ ದೇಹ ನಿನ್ನದು ತಾಯೆ ನಿನ್ನ ಕೆಲಸಗಳೆಲ್ಲಾ ಅತಿ ವಿಚಿತ್ರದ ಮಾಯೆ 5 ಬೆಳಕ ಬಾಯೊಳಗಿಟ್ಟು ಮತ್ತು ಉಗುಳುವೆ ತಾಯೆ ನಿನ್ನ ವಿಸ್ತೀರ್ಣವನು ನಾನಳೆಯಲರಿಯೆ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮುರಲೀಯನೂದುವ ಮುರಹರನ್ಯಾರೇ ಪೇಳಮ್ಮಯ್ಯಾ ಪ ಮಾರನ ಕುಶಲವ ಮೋದದಿ ಬೀರುತ ಮನಮೋಹಗೊಳಿಪ ಮಾರನಯ್ಯ ಕಾಣೆ ಅ.ಪ. ಸುಂದರೀ ಸಖಿ ಸುಕುಮಾರಿ ಇಂದೀನ ವೈಭವ ಭಾರಿನಂದಾವೃಜನದೊಳಗಿಹ ನಾರೀ ವೃಂದಗಳೆಲ್ಲಾ ಪರಿಪರಿ ಸೇರಿ ನಂದನ ಸುತನಾ ಕಂದನ ಬಾಧೆಯ ತಾಳದೆ ತನ್ನೊಳು ಪೊಗಳುವ ಘನಶೌರಿ1 ಮದನಾ ಜನಕನು ಮೌನದಿ ನಿಂತಾಮಾನಿನಿಯರು ಮಾಡುವ ಚಿಂತಾ ಮನವಾತುರಗೊಳಿಪುದು ಶ್ರೀಕಾಂತಾ ಮಾವನರಿಪು ಸುಧೆನುಣಿಸು ಬಾ ಪ್ರಾಣಕಾಂತಾಮಾನರಹಿತಳಾಗಿ ಗಾನ ಮಾಡುವೆ ಘನ ಪ್ರಾಣಮಳಹೋ ಶ್ರೀಕೃಷ್ಣನೆಂದು 2 ಅಂಗದೊಸನವ ತೂರುತ ಮಂದಾಮಾರುತ ಪಡಿಸುವ ಮುಕುಂದಾ ಭಂಗಬಡಲಾರೆವು ಶ್ರೀಗೋವಿಂದಾ ಮದಮುರಿ ಮದಕುಲ ನಂದಾ ತುಂಗಮಹಿಮ ತಾ ಬಂದು ಪೊರೆದ ತಂದೆವರದಗೋಪಾಲವಿಠಲನ ಸಖ 3
--------------
ತಂದೆವರದಗೋಪಾಲವಿಠಲರು