ಒಟ್ಟು 9952 ಕಡೆಗಳಲ್ಲಿ , 132 ದಾಸರು , 5277 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ಯಾಡೋ ಒಬ್ಬರ ಮನೆಗೆ ನೀ ಪೋಗ ಬ್ಯಾಡೋ ಒಬ್ಬರ ಮನೆಗೆ ಪ ಗಾಡಿಕಾರನೆ ಕೃಷ್ಣ ಚಾಡಿ ಮಾತನು ಕೇಳಿ ಗಾಡನೆ ಕಿವಿಮುಚ್ಚಿ ಓಡಿಸಿದೆ ಗೋಪಿಯರ ಅ.ಪ ಕಟ್ಟಿದ್ದ ತುರುಕರುಗಳ ಬಿಚ್ಚಿ ಪೋಗುವದಿದು ನಿಶ್ಚಯವೆಂದು ಪೇಳ್ವರೊ ಸ್ವಚ್ಛ ಕರುಗಳ ಕಣ್ಣುಮುಚ್ಚಿ ಪಾಲೆಲ್ಲ ಕುಡಿದ ಅಚ್ಯುತನಿಗೆ ಬುದ್ಧಿ ಮತ್ತೆ ನೀ ಪೇಳೆಂಬರು 1 ಮಕ್ಕಳೆಲ್ಲರು ಕಯ್ಯೊಳು ಬಟ್ಲಲಿ ಅವ- ಲಕ್ಕಿಯ ತಿನ್ನುತಿರಲು ಘಕ್ಕನೆ ಬಡಿಯೆ ದಿಕ್ಕು ದಿಕ್ಕಿಗೆ ಚಲ್ಲೆ ಬಿಕ್ಕಿ ಬಿಕ್ಕಿ ಅಳುತಾರೆ ಗೋಪಕ್ಕ ನೀನೋಡೆಂಬರು 2 ವಾಸುದೇವಗೆ ಹರಕೆಯ ಮಾಡಿ ನವ- ನೀತ ಮೀಸಲು ಮಾಡಿರೆ ಮೀಸಲಳಿದು ಕೋತಿ ಮಾರ್ಜಾಲಗಳಿಗುಣಿಸಿ ನೀತಿ ಪೇಳುವ ಶ್ರೀನಾಥ ನೋಡೆಂಬರು 3 ಗೊಲ್ಲ ಬಾಲಕಿಯರೆಲ್ಲ ಪಾಲ್ಮೊಸರು ಮಾರೆ ಮೆಲ್ಲನೆ ಪೋಗುತಿರಲು ಗುಲ್ಲು ಮಾಡದೆ ಕವಣೆ ಕಲ್ಲಿಂದ ಕುಂಭ ಒಡೆಯೆ ಚಲ್ಲಿ ಪಾಲ್ಮೊಸರು ಸೂರೆ ನಲ್ಲೆ ನೀ ನೋಡೆಂಬರು4 ಮತ್ತೆ ಕೇಳಮ್ಮ ಯಶೋದೆ ನಾವೆಲ್ಲ ಆಣಿ ಮುತ್ತು ಪೋಣಿಸುತಿರಲು ಸುತ್ತ ಮುತ್ತಲು ನೋಡಿ ಮುತ್ತು ಸೂರೆ ಮಾಡಿದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ನೋಡೆಂಬರು5
--------------
ನಿಡಗುರುಕಿ ಜೀವೂಬಾಯಿ
ಬ್ರಹ್ಮ ಲಿಖಿತವ ಮೀರಿ ಬಾಳ್ವರುಂಟುನಿರ್ಮಳದಿ ವೈಷ್ಣವರ ಮನಮುಟ್ಟಿ ಭಜಿಸಿ ಪ ಪಾಪಕೆ ಹೇಸದ ಶಬರ ಬಟ್ಟೆಯನು ಕಾದಿರಲುಆ ಪಥದಿ ಸಲೆ ವೈಷ್ಣವನು ಬಂದುಪಾಪವನು ತಪ್ಪಿಸಿ ರಾಮನಾಮವ ಕೊಡಲುಕಾಪಥಕ ವಾಲ್ಮೀಕಿ ಮುನಿಯಾಗಲಿಲ್ಲವೆ ? 1 ಪಂಚಮಹಾಪಾತಕವ ಮಾಡಿದ ಅಜಾಮಿಳನವಂಚಿಸಿ ಯಮದೂತರೆಳೆದೊಯ್ಯುತಿರಲುಕಿಂಚಿತ್ತು ಹರಿನಾಮವನಾಕಸ್ಮಿಕದಿ ನೆನೆಯೆಅಂಚಿಗೆಳೆದೊಯ್ದವರು ವಿಷ್ಣುದೂತರಲ್ಲವೆ ?2 ಬಾಲಕ ತನ್ನ ತಾಯ್ತಂದೆಯೊಳ್ ಮುನಿದು ಹಲವುಕಾಲ ವನದೊಳು ತಪವ ಮಾಡಲುನೀಲಮೇಘಶ್ಯಾಮ ಮೆಚ್ಚಿ ಬಾಲಕನಿಗೆಮೇಲಾದ ಪದವಿಯನು ಕೊಡಲಿಲ್ಲವೆ ? 3 ದಶಕಂಠನನುಜನು ಜಾನಕಿಯ ಬಿಡ ಹೇಳೆಅಸುರ ಕೋಪವ ತಾಳಿ ಹೊರಗಟ್ಟಿದಾಗಪೆಸರಗೊಳುತ ಬಂದು ಮೊರೆಹೊಕ್ಕ ವಿಭೀಷಣಗೆಶಶಿರವಿ ಪರ್ಯಂತ ಪಟ್ಟಗಟ್ಟಲಿಲ್ಲವೆ ? 4 ಕಲಿಗೆ ಬೆದರುವರಲ್ಲ ಕಾಲನ ಬಾಧೆಗಳಿಲ್ಲಛಲದಿ ನರಳಿ ಪುಟ್ಟುವ ಗಸಣೆಯಿಲ್ಲಒಲಿದು ಕಾಗಿನೆಲೆಯಾದಿಕೇಶವರಾಯನಸಲೆ ನಂಬಿದವರಿಗೆ ಮುಕುತಿಯಿತ್ತುದಿಲ್ಲವೆ ? 5
--------------
ಕನಕದಾಸ
ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ಬ್ರಹ್ಮಜ್ಞಾನಿಗಳ ನೋಡಿರೊ ಇಹ್ಹಿಹ್ಹಿಬ್ರಹ್ಮಜ್ಞಾನಿಗಳ ನೋಡಿರೋ ಪ ಜ್ಞಾನಿಗಳು ತಾವು ಅಂತೆ ತಾವೇ ಪರಬ್ರಹ್ಮರಂತೆಏನೋನೋ ಹುಚ್ಚುಮಾತು ಕೇಳಿರಯ್ಯ ಅಹ್ಹಹ್ಹ 1 ಜೊಂಡು ಹುಲ್ಲಿನಂತೆ ಮಂಡೆಗಳ ಬೆಳೆಸಿಕೊಂಡುಕಂಡ ಕಂಡಂತೆ ತಿರುಗುವವರ ನೋಡಿರಯ್ಯ ಅಹ್ಹಹ್ಹ 2 ಸಂಧ್ಯವಿಲ್ಲ ಸ್ನಾನವಿಲ್ಲ ಮುಂದೆ ಹೋಮ ತರ್ಪಣವಿಲ್ಲಅಂದು ತಾವೇ ಬ್ರಹ್ಮವಂತೆ ಕಂಡಿರೇನೋ ಅಹ್ಹಹ್ಹ3 ಕಾವಿ ಕೌಪವುಟ್ಟುಕೊಂಡು ಕಮಂಡಲು ಹಿಡಿದುಕೊಂಡುದೈವ ತಾನೇ ಎಂಬ ದೈವಗಳ ನೋಡಿರೋ ಅಹ್ಹಹ್ಹ4 ಇಂತು ಚಿದಾನಂದ ಗುರು ಭಕ್ತರಗಳ ನಿಂದ್ಯಮಾಡಿಅಂತು ಕಾಲನ ಅರಮನೆಯ ಕುರಿಗಳಾದರಹ್ಹಹ್ಹ 5
--------------
ಚಿದಾನಂದ ಅವಧೂತರು
ಬ್ರಹ್ಮತಾನೆ ನಿತ್ಯಾ ಬ್ರಹ್ಮತಾನೆಬ್ರಹ್ಮ ಪರಾತ್ಪರ ಬ್ರಹ್ಮ ತಾನೇ ಪ ಕಾಲು ಕಣ್ಣು ಕೈ ಬಾಯಿ ಕಿವಿ ಮೂಗು ತಾಳಿಕೊಂಡುಕಾಲವನಿಲ್ಲಿಯೆ ಕಳೆಯಲು ಬಂದ ಗುರುಮೂರ್ತಿಮೂಲಾಧಾರನೆಂದು ತಿಳಿದುಕೊಳ್ಳಿರಾ ಬ್ರಹ್ಮ ತಾನು 1 ಪುತ್ರ ಮಿತ್ರರರು ಕಳತ್ರರಾಗಿ ಬಂಧುವಾಗಿನಿತ್ಯದಾಟವ ಇಲ್ಲಿ ಕಳೆಯಲು ಬಂದ ಬ್ರಹ್ಮ ತಾನೇ2 ಆಪವಿರಲು ಚಂದ್ರನು ಬಂದ ತೆರನಂತೆಉಪಾಧಿಯಿಂದ ಚಿದಾನಂದ ಬಂದ ಬ್ರಹ್ಮತಾನೇಉಪಾಧಿಯಿಂದ ಚಿದಾನಂದ ಬಂದ ಗುರುಮೂರ್ತಿಉಪಾಧಿ ಹರನೆಂದು ತಿಳಿದುಕೊಳ್ಳಿ ಬ್ರಹ್ಮತಾನೆ3
--------------
ಚಿದಾನಂದ ಅವಧೂತರು
ಬ್ರಹ್ಮವು ನೀನೇಬ್ರಹ್ಮವು ನೀನೆಂದು ನಂಬಲೋ ದೊರೆಯೇ ಪ ವ್ಯಾಪಾರ ಮೂಗಿನಲ್ಲಲ್ಲ ಮೂಗಿನವ್ಯಾಪಾರ ಕಣ್ಣಿನಲ್ಲಿಲ್ಲನಿನ್ನ ವ್ಯಾಪಾರ ಸಕಲವು ಎಲ್ಲನಿನ್ನ ಹೊರತು ಬೇರೆ ಏನಿಲ್ಲ1 ಜಾಗೃತ ವ್ಯಾಪಾರ ಸ್ವಪ್ನದಲಿಲ್ಲಸ್ವಪ್ನದ ವ್ಯಾಪಾರ ಜಾಗೃತದಲ್ಲಿಲ್ಲಜಾಗೃತ ಸ್ವಪ್ನವೆರಡು ಸುಷುಪ್ತಿಯಲ್ಲಿಲ್ಲಸುಷುಪ್ತಿ ತುರೀಯವು ಜಾಗೃತದಲ್ಲಿಲ್ಲ 2 ನಾದದ ವ್ಯಾಪಾರ ಬಿಂದುವಿನಲ್ಲಿಲ್ಲಬಿಂದು ವ್ಯಾಪಾರ ನಾದದಲ್ಲಿಲ್ಲನಾದ ಬಿಂದು ಕಳೆ ಮೂರಕೆ ಇಲ್ಲಬೋಧ ಚಿದಾನಂದ ಹೊರತಿಹನಲ್ಲ 3
--------------
ಚಿದಾನಂದ ಅವಧೂತರು
ಬ್ರಹ್ಮವೆತ್ತಲು ಪರಬ್ರಹ್ಮವೆತ್ತಲುಬ್ರಹ್ಮ ತಾವೆಯೆಂದು ವಾಚಾಬ್ರಹ್ಮವನೆ ಬಗಳುತಿಹರಿಗೆ ಪ ಆಸೆಯೆಂಬದು ಅಳಿಯಲಿಲ್ಲ ಆಕಾಂಕ್ಷೆತಾ ಕಳೆಯಲಿಲ್ಲಪಾಶವೆಂಬುದು ಬಿಗಿದು ಉರುಲು ಬಿದ್ದಿಹುದುದೋಷವೆಂಬುದು ಅಡಗಲಿಲ್ಲ ದುಷ್ಕøತವೆಂಬುದು ಒಣಗಲಿಲ್ಲಕ್ಲೇಶ ಪಂಚಕದ ವಿಷಯದಿ ಕೆಡೆದಿಹ ಮನುಜರಿಗೆ 1 ಕಾಮವೆಂಬುದು ಕಡಿಯಲಿಲ್ಲ ಕ್ರೋಧವೆಂಬುದು ಅಳಿಯಲಿಲ್ಲತಾಮಸವೆಂಬುದು ಶರೀರ ತುಂಬಿಕೊಂಡಿಹುದುಕಾಮಿತವೆಂಬುದು ಹೋಗಲಿಲ್ಲ ಕಷ್ಟವೆಂಬುದು ನೀಗಲಿಲ್ಲಪಾಮರರಾಗಿ ದಾಹಕೆ ಸಿಕ್ಕುಬಿದ್ದಿಹ ಮನುಜರಿಗೆ2 ಮೋಹವೆಂಬುದು ಹರಿಯಲಿಲ್ಲ ಮೂರ್ಖತೆಯೆಂಬುದು ಕರಗಲಿಲ್ಲಊಹೆ ಎಂಬ ಕುಬುದ್ಧಿಯು ಉಡುಗಲಿಲ್ಲದೇಹ ಶೋಧನೆ ತಿಳಿಯಲಿಲ್ಲ ದೇಹಿ ಚಿದಾನಂದ ಅರಿಯಲಿಲ್ಲಕಾಹುರ ಮದದಲಿ ಮರೆತಿಹ ಮಂಕುವನು ಮನುಜರಿಗೆ 3
--------------
ಚಿದಾನಂದ ಅವಧೂತರು
ಬ್ರಹ್ಮಾದಿವಂದ್ಯ ಪರಬ್ರಹ್ಮಾನೆ ಕಾಯೊ ಅಹಂಬ್ರಹ್ಮಭಾವವ ಬಿಡಿಸೋ ಪ ಬ್ರಹ್ಮಾನ ಜನಕನೆ ಬ್ರಹ್ಮಾಂಡದೊಡೆಯ ಬ್ರಹ್ಮಾಂಡಾಂತರ್ಯಾಮಿ ಸಲಹೋ ಅ.ಪ ಸತ್ಯವ್ರತನೆ ನೀ ಸತ್ಯಪರನು ಜಗ ಸತ್ಯ ಸೃಜಿಸಿ ಪೊರೆವೇ ನಿತ್ಯ ನಿರ್ಲಿಪ್ತನಹುದೋ 1 ಏಕರೂಪನೆ ಅನೇಕ ರೂಪದಿ ಎಲ್ಲಾ ಲೋಕಗಳೆಲ್ಲಾ ಪಾಲಿಪೆ ಲೋಕಗಳನೆಲ್ಲ ಮಾಳ್ವೆ 2 ನಿನ್ನಾಶ್ರೈಸಿದ ಭಿನ್ನಪ್ರಕೃತಿ ತ್ರಿಭಿನ್ನಗೈಸಿ ಅಂದು ಜಗದಾ ಬನ್ನ ಪಣ್ಣನ್ನ ನಿರ್ಮಿಸಿದೆಯೋ 3 ಪಣ್ಣಿಗೆ ನಾಲ್ಕು ರಸವೋ ಘನ್ನಷಡೂರ್ಮಿಗಳನ್ನೆ ನಿರ್ಮಿಸಿ ಪೊರೆವೇ 4 ಕೊಟ್ಟೆ ಸಪ್ತಧಾತು ಅಷ್ಟವಿಟಪಿಗಳನಿಟ್ಟೆ ನವಾಕ್ಷಪೊಟರೆ ದಟ್ಟದಶಚ್ಛದ ಕೊಟ್ಟು ಜಗವೃಕ್ಷ ಸೃಷ್ಟಿಯ ಮಾಡಿ ಮೆರೆದೇ 5 ಅಟ್ಟಹಾಸದಿ ಫಲಮುಟ್ಟದೆ ಇಹ ಖಗಶ್ರೇಷ್ಟನೆ ನೀ ತುಷ್ಟನೋ ಕೊಟ್ಟ ಫಲವನುಂಡಷ್ಟೂ ಸುಖಿಪ ಜೀವರೆಷ್ಟೋ ಜಗವರಿಯೇ 6 ವ್ಯಷ್ಟೀಸಮಷ್ಟಿಯ ಸೃಷ್ಟೀಯೊಳು ನೀನೆ ಶ್ರೇಷ್ಠನೇ ವ್ಯಾಪಿಸಿರುವೇ ದೃಷ್ಟಿಗೋಚರವಲ್ಲ ಅಷ್ಟಕರ್ತೃ ಪರಮೇಷ್ಟೀಜನಕ ಸಲಹೋ 7 ಅಪ್ರಾಪ್ಯಮನೋವಚ ತ್ವತ್ ಪ್ರಾಪ್ತಿಎಂತಯ್ಯ ತ್ವತ್ಪ್ರಸಾದವಿಲ್ಲದೇ ಎನ್ನ ಬಂಧಪ್ರಕೃತಿಯನೆ ಹರಿಸೋ 8 ಸೃಷ್ಟಿಯೊಳಗೆ ಸ್ವನಿಷ್ಠೆಯಿಂದಲೀ ಜಗದೃಷ್ಟೀಗೋಚರನಾಗುವೆ 9 ಮುಮುಕ್ಷುಗಳಿಗೆ ಸಾಕ್ಷಿ ಮನದಕ್ಷಿಯೊಳು ಪೊಳೆವೇ 10 ಭಕ್ತಿವಿರಹಿತ ದುರ್ಯುಕ್ತಕಾರ್ಯದಿ ಮನ ಸಕ್ತವಾಗಿಹುದು ತ್ವಧ್ಭಕ್ತಿಯ ಕೊಡು ನಿತ್ಯ11 ಹತ್ತಿಬಹುದೂ ಬೆನ್ಹತ್ತಿಕರ್ಮವು ಮತ್ತೆ ಸುತ್ತೀಸುತ್ತುತ ಜನ್ಮವಾ ಎನಗೆ ಉತ್ತಮಗತಿ ತೋರದೇ12 ಘೋರದುರಿತ ಪರಿಹಾರ ಮಾಡಿ ಪೊರೆ ಮಾರಾರಿಪಿತವಂದ್ಯ ಚಾರು ಚರಣಸ್ಮರಣಾರಾಧನೆ (ಅದು) ಸಾಕೋ 13 ಸಾರಿದೆನೋ ಶ್ರೀ ವೇಂಕಟೇಶಾಭಿನ್ನ ಉರಗಾದ್ರಿವಾಸ ವಿಠಲಾ ಪಾರುಗಾಣಿಸಿ ಪೊರೆಯೋ 14
--------------
ಉರಗಾದ್ರಿವಾಸವಿಠಲದಾಸರು
ಬ್ರಹ್ಮಾನಂದದ ಸಭಾ ಮಧ್ಯದಲಿಸುಮ್ಮನೆ ಇರುತಿಹುದೇನಮ್ಮಬ್ರಹ್ಮಾದಿಗಳಿಗೆ ದೂರಾಗಿಹನಿರ್ಮಲ ನಿರುಪಮ ತಾನಮ್ಮ ಪ ಹೇಳಲು ಬಾರದ ಸುಖರೂಪದಲಿಹೊಳೆಯುತ ಅಹುದು ಏನಮ್ಮಮೇಳದ ಲೋಕಕೆ ಕರ್ತೃ ತಾನಾಗಿಹಲೋಲ ಪರಾತ್ಪರ ತಾನಮ್ಮ 1 ಬೋಧದ ರೂಪದಿ ಹಾ.... ಎಂಬಂದದಿಬೆಳಗುತಲಿಹುದದು ಏನಮ್ಮಆದಿ ಅನಾಧಿಯು ಅವ್ಯಕ್ತವೆನಿಪಅಚಲಾನಂದವೆ ತಾನಮ್ಮ 2 ತೃಪ್ತಾನಂದದಿ ತೂಷ್ಣೀ ಭಾವದಿದೀಪ್ತವಾಗಿಹುದದು ಏನಮ್ಮಸಪ್ತಾವರಣದ ಮೀರಿ ಮಿಂಚುವಗುಪ್ತಜ್ಞಪ್ತಿಯು ತಾನಮ್ಮ 3 ಕದಲದೆ ಚೆದುರದೆ ಕೈ ಕಾಲಿಲ್ಲದೆಉಕ್ಕುತಲಿಹುದದು ಏನಮ್ಮಸದಮಲ ಸರ್ವಾತ್ಮತ್ವವೆಯಾಗಿಹಸಾಕ್ಷೀಭೂತವು ತಾನಮ್ಮ4 ತೋರುತಲಡಗದ ಸಹಜಭಾವದಿಥಳಥಳಿಸುತಿಹುದದು ಏನಮ್ಮಕಾರಣ ಕಾರ್ಯವ ಕಳೆದ ಚಿದಾನಂದಕಾಲಾತೀತನು ತಾನಮ್ಮ 5
--------------
ಚಿದಾನಂದ ಅವಧೂತರು
ಬ್ರಹ್ಮಾಸ್ತ್ರದ ನಿಜವನು ನಾ ಪೇಳುವೆಬ್ರಹ್ಮಾಸ್ತ್ರವೇ ಬ್ರಹ್ಮವುಬ್ರಹ್ಮಾಸ್ತ್ರ ತಾನೆಂದು ಭಜಿಸುವಾತನುಬ್ರಹ್ಮಾಸ್ತ್ರವೇ ಆತನು ಬ್ರಹ್ಮಾಸ್ತ್ರ ಪ ಪೀತಾಂಬರದುಡಿಗೆ ರಾಶಿಯು ಹಾಕಿದ ಎದೆಕಟ್ಟುಪೀತವಾಗಿಹುದೇ ಬ್ರಹ್ಮಾಸ್ತ್ರಪೀತವರಣ ಪೀತ ಪುಷ್ಟ ಗಂಧಾನುಲೇಪನಪೀತದಿಂದಿಹುದೇ ಬ್ರಹ್ಮಾಸ್ತ್ರ ಪ್ರೀತಸರ್ವವು ಆಗಿಪ್ರೀತ ಪ್ರೀತೆಯೆ ಆಗಿ ಪೀತಾವರಣವೆ ಬ್ರಹ್ಮಾಸ್ತ್ರ 1 ಬಿಗಿದ ಬತ್ತಳಿಕೆಯು ಎಡಹಸ್ತ ಶಾರ್ಙದಿಝಗಿ ಝಗಿಸುವುದೇ ಬ್ರಹ್ಮಾಸ್ತ್ರತೆಗೆದು ಕೆನ್ನೆಗೆ ಶರವನೆಳೆದು ರೌದ್ರದಿನಿಗಿನಿಗಿನಿಗಿಸುವುದೇ ಬ್ರಹ್ಮಾಸ್ತ್ರ 2 ವೀರ ಮಂಡಿಯ ಹಾಕಿ ಖಡ್ಗವ ಸೆಳೆದುತೂರತಲಿಹುದೇ ಬ್ರಹ್ಮಾಸ್ತ್ರಕಾರುವ ಕಿಡಿಗಳ ಕ್ರೂರ ದೃಷ್ಟಿಯಲಿಘೋರವಾಗಿಹುದೇ ಬ್ರಹ್ಮಾಸ್ತ್ರಬಾರಿಬಾರಿಗೆ ಹೂಂಕಾರಗೈಯುತ ಅವಡುಗಚ್ಚಿಮಾರಿಯಾಗಿಹುದೇ ಬ್ರಹ್ಮಾಸ್ತ್ರಸಾರ ಕಿಚ್ಚಿನ ಜ್ವಾಲೆ ಭುಗುಭುಗು ಛಟಛಟಎನುತಲಿಹುದದೇ ಬ್ರಹ್ಮಾಸ್ತ್ರ3 ದಿಸೆಗಳು ಮುಳುಗಿವೆ ಉರಿಯ ಕಾಂತಿಯಲಿರವಿಶತ ಕೋಟೆಯ ರಶ್ಮಿ ಚೆಲ್ಲುವುದೇ ಬ್ರಹ್ಮಾಸ್ತ್ರಪಸರಿಸಿ ಇಹ ಬ್ರಹ್ಮಾಂಡವನಂತವಭಸ್ಮ ಮಾಡುವುದೇ ಬ್ರಹ್ಮಾಸ್ತ್ರನುಸಿಗಳು ಅಸಂಖ್ಯಾದಿ ಬಹ್ಮರುದ್ರಾದ್ಯರಅಸುವ ಕೊಂಬುದೇ ಬ್ರಹ್ಮಾಸ್ತ್ರ 4
--------------
ಚಿದಾನಂದ ಅವಧೂತರು
ಭಕುತ ಜನ ಮುಂದೆ ನೀನವರ ಹಿಂದೆ ಪ ಯುಕುತಿ ಕೈಗೊಳ್ಳದೊ ಗಯ ಗದಾಧರನೆ ಅ ಪ ಕಟ್ಟೆರಡು ಬಿಗಿದು ನದಿ ಸೂಸಿ ಪರಿಯುತ್ತಿರೆ | ಕಟ್ಟಲೆಯಲಿ ಹರಿಗೋಲು ಹಾಕಿ || ನೆಟ್ಟನೆ ಆಚೆಗೀಚೆಗೆ ಪೋಗಿ ಬರುವಾಗ | ಹುಟ್ಟು ಮುಂದಲ್ಲದೆ ಹರಿಗೋಲು ಮುಂದೆ ? 1 ಕಾಳೆ ಹೆಗ್ಗಾಳೆ ದುಂದುಛಿ ಭೇರಿ ತಮಟೆ ನಿ- | ಸ್ಸಾಳ ನಾನಾವಾದ್ಯ ಘೋಷಣಗಳು || ಸಾಲಾಗಿ ಬಳಿವಿಡಿದು ಸಂಭ್ರÀಮದಿ ಬರುವಾಗ | ಆಳು ಮುಂದಲ್ಲದೆ ಅರಸು ತಾ ಮುಂದೆ?2 ಉತ್ಸಾಹ ವಾಹನದಿ ಬೀದಿಯೊಳು ಮೆರೆಯುತಿರೆ | ಸತ್ಸಂಗತಿಗೆ ಹರಿದಾಸರೆಲ್ಲ || ಸಿರಿ ವಿಜಯವಿಠ್ಠಲ ವೆಂಕಟಾಧೀಶ ವತ್ಸ ಮುಂದಲ್ಲದೆ ಧೇನು ತಾ ಮುಂದೆ ? 3
--------------
ವಿಜಯದಾಸ
ಭಕುತರ ಸಂರಕ್ಷಣಾ ನಾರಾಯಣ ಪ ಖಗಪನ ಸ್ಕಂದರೋಹ ಅಘದೂರ ಅಭಯಹಸ್ತ ಸ್ವಗತಭೇದಶೂನ್ಯ ಸರ್ವಾವಸ್ಥೆಯೊಳೆನ್ನ ವಿಗತಕ್ಲೇಶನ ಮಾಡಿ ಸತತಕಾಪಾಡಲಿ ನಿಗಮವಿನುತ ಜಗದಾದಿ ವಂದ್ಯನೆ ದೇವಾ 1 ವರುಣಪಾಶಗಳಿಂ ಜಲಚರಜಂತುಗಳಿಂ ಮತ್ಸ್ಯ ಮೂರುತಿ ತಾ ರಕ್ಷಕನಾಗಿರಲಿ ಧಾರುಣಿ ನೆಲದೊಳು ಶ್ರೀ ವಾಮನ ಕಾಯಲಿ ಸರ್ವಾಕಾಶದೊಳು ತ್ರಿವಿಕ್ರಮ ಕಾಯಲಿ2 ದುರ್ಗರಣಾಗ್ರವನ ಅರಿವರ್ಗಗಳಲಿ ನರಹರಿದೇವ ಸಂರಕ್ಷಕನಾಗಿರಲಿ ಮಾರ್ಗಗಳಲ್ಲಿ ಹಿರಣ್ಯಾಕ್ಷ ವೈರಿಯು ಕಾಯಲಿ ದುರ್ಗಮಶೈಲದೊಳು ಶ್ರೀ ಭಾರ್ಗವ ರಕ್ಷಿಸಲಿ 3 ದಾಶರಥಿ ಪ್ರವಾಸದಲಿ ನಿತ್ಯ ದೇಶಾಂತರಗಳಲ್ಲಿದ್ದರು ಕಾಯಲಿ ಈಶ ಶ್ರೀಮನ್ನಾರಾಯಣ ಎನ್ನ ಕ್ರೂರ ಕರ್ಮಗಳಿಂದ ರಕ್ಷಿಸಲನುದಿನ ನರಾವತಾರ ಎನ್ನ ಗರುವಿನಿಂ ರಕ್ಷಿಸಲಿ 4 ವಿರೋಧಿವರ್ಗದಿ ದತ್ತಾತ್ರೇಯ ಕಾಯಲಿ ಸರ್ವಕರ್ಮಬಂಧಜ್ಞಾನದಿಂದ ಕಪಿಲಾ ಮೂರುತಿ ರಕ್ಷಿಸಲಿ ಅನುದಿನದಲಿ ಎನ್ನ ಸನತ್ಕೂ- ಮಾರನು ಎನ್ನ ಕಾಯಲಿ ಕಾಮದಲ್ಲಿ 5 ದಾನವ ಮಧುಕೈಟಭ ಹರೆ ಹಯವದನ ಘನ್ನಪರಾಧದಿ ರಕ್ಷಕನಾಗಿರಲಿ ಮನ್ನಿಸಿ ದೇವತೆಗಳು ಸಾಧನವೀಯಲಿ ಸನ್ನುತಾಂಗ ಧನ್ವಂತ್ರಿಮೂರುತಿ ಹರಿ ಎನ್ನ ರಕ್ಷಕನಾಗಿರಲಿ ರುಜೆಯೊಳು6 ಜ್ಞಾನರೂಪಿ ವೃಷಭ ಸೀತಾತಪದಿಂದ ಎ- ನ್ನನುದಿನ ಈ ದ್ವಂದ್ವÀದಿ ಕಾಯಲಿ ಯಜ್ಞಮೂರುತಿ ಲೋಕಾಪವಾದದಿ ಕಾಯಲಿ ಸುಜ್ಞಬಲರಾಮನು ದುರ್ಜನರ ಭಯದಿಂ ಅನುದಿನ ರಕ್ಷಿಸಲಿ 7 ಘನ್ನಮಹಿಮ ಶೇಷ ಸರ್ಪಬಾಧೆಗಳಿಂದ ಜ್ಞಾನದಾತೃ ಹರಿಸೇವೆಗೆ ಬರುತಿಹ ನಾನಾ ವಿಘ್ನಗಳಿಂದ ರಕ್ಷಿಸುತಿರಲಿ ಘನ್ನ ಮ- ಹಾ ನರಕ ಬಾಧೆಯಿಂ ತಪ್ಪಿಸಲಿ ಕೂರ್ಮಮೂರುತಿ ಕಾಪಾಡಲಿ ನಿತ್ಯದಿ 8 ವೇದವ್ಯಾಸನು ಶುಧ್ಧಜ್ಞಾನವನೀಯಲಿ ಬುದ್ಧಿಮೋಹದಿಂದ ಬುದ್ಧನುದ್ಧÀ್ದರಿಸಲಿ ಹೃದಯದ ಕಲಿಭಾಧೆ ಕಲ್ಕಿ ತಾ ಹರಿಸಲಿ 9 ಉದಯಕಾಲದಿ ಶ್ರೀ ಕೇಶವ ರಕ್ಷಿಸಲಿ ವೇಣು ಹಸ್ತ ಗೋವಿಂದ ಸಂಗಮದಲ್ಲಿ ಪೂರ್ಣಕರುಣೆ ಯಿಂದ ಎನ್ನ ಕಾಪಾಡಲಿ ಪೂರ್ವಾಹ್ನದಲಿ ನಾರಾಯಣ ರಕ್ಷಿಸಲಿ10 ಮಾಧವ ಅಪ ರಾಹ್ನದಲೆನ್ನ ರಕ್ಷಿಸಲಿ ಬಾಧೆಯಿಂ ಸಾಯಂಕಾಲದಿ ರಕ್ಷಿಸಲಿ 11 ಪ್ರದೋಷದಲಿ ಹೃಷೀಕೇಶ ರಕ್ಷಿಸಲೆನ್ನ ಪದುಮನಾಭ ಅರ್ಧರಾತ್ರಿಯಲಿ ಸಲಹಲಿ ಶ್ರೀಧರನೆನ್ನಪರಾತ್ರಿಯಲಿ ಸಲಹಲಿ12 ಜನಾದರ್Àನನು ಎನ್ನನು ಉಷಃಕಾಲದಲಿ ಸಂಧ್ಯಾಕಾಲದಿ ದಾಮೋದರ ರಕ್ಷಿಸಲಿ ಕಾಲನಾಮಕ ಬೆಳಗಿನಝಾವದಿ ಕಾಯಲಿ 13 ನಕ್ರನ ಹರಿಸಿದ ಚಕ್ರಾಯುಧವು ಎನ್ನ ಶತ್ರುಬಾಧೆಗಳಿಂದ ರಕ್ಷಿಸುತಿರಲಿ ವಿಕ್ರಮಗದೆಯು ಆಶ್ರಿತರುಪದ್ರದು- ಅನುದಿನ 14 ಪ್ರಮಥ ಭೂತ ಪಿಶಾಚ ಪ್ರೇತ ಭಯದಿ ಪಾಂಚಜನ್ಯ ಶಂಖರಾಜ ರಕ್ಷಿಸಲಿ ದುಮ್ಮನ ಶತ್ರು ಬಾಧೆಗಳಿಂದ ಖಡ್ಗವು ಖೇಟವು ಸರ್ವ ಅನಿಷ್ಟದಿಂ ರಕ್ಷಿಸಲಿ 15 ಅವನ ನಾಮರೂಪ ದಿವ್ಯಾಯುಧದ ಸ್ಮರಣೆ ಸರ್ವ ಬಂಧಗಳೆಲ್ಲ ತಕ್ಷಣದಲ್ಲಿ ನಿವಾರಣೆಯಾಗಿ ನಿವೃತ್ತಿಮಾರ್ಗಕ್ಕೆ ಶುಧ್ಧಭಾವ ಭಕುತಿಗೆ ಕಾರಣವು ಸತ್ಯ ಗರುಡ ವಿಷ್ಟಕ್ಸೇನ ಕಷ್ಟದಿಂದ ರಕ್ಷಿಸಲಿ 16 ಹರಿಯ ವಾಹನಾದಿಗಳು ವಿಪತ್ತುಗಳ ಹರಿಸಲಿ ಸರ್ವರಂತರ್ಯಾಮಿ ನಿನ್ನ ನಂಬಿರಲು ಸರ್ವಭಾಧೆಗಳಲ್ಲ ಪರಿಹಾರವಾಗಲಿ 17 ಕಾಲ ಸರ್ವಾವಸ್ಥೆಯೊಳೆನ್ನ ಸರ್ವೋತ್ತಮ ದೇವ ಸರ್ವದಾ ರಕ್ಷಿಸಲಿ ಸರ್ವರೊಡೆಯ ಶ್ರೀಮನ್ನಾರಾಯಣ ನಿನ್ನ ಕರುಣ ಕವಚವು ಎನಗಿರಲನುದಿನ 18 ಬಹಿರಾಂತರದಿ ಮೇಲ್ ಕೆಳಗು ಮಧ್ಯದಲ್ಲಿ ದಿಕ್ಕುವಿದಿಕ್ಕಿನೊಳು ಉರಗಾದ್ರಿವಾಸವಿಠಲ ಸ್ವಾಮಿ 19
--------------
ಉರಗಾದ್ರಿವಾಸವಿಠಲದಾಸರು
ಭಕುತರಿಗಾಶೀರ್ವಾದಗಳು ಕುಶಲಕೆ ಬರೆಯುತಲಿರಿ ಎನಗೆ ಪ ಯುಕುತಿಗಳನು ಬರೆದಿಹೆನಿಲ್ಲ ಅ.ಪ ಬೆರೆಯಬೇಡಿ ಈ ಜಗದ ರಗಳೆಯಲಿ ಮರೆಯಬೇಡಿ ಎನ್ನನು ಕ್ಷಣವು ಬೆರೆಯದೆ ಮರೆಯದೆ ಇರುವ ಧೀರರನು ಪೊರೆಯುವುದೇ ಎನ್ನಯ ಗುರಿಯು 1 ನಾಳೆಗೆ ಅಣಿಮಾಡಲು ಕೈಲಾಗದೆ ಗೋಳೇತಕೆ ನಾನೊದಗಿಸುವೆ ಕಾಲು ಕೈಗಳೊದ್ದಾಡುವತನಕ ಮೇಲೆತ್ತುವುದಳವೇ ಎನಗೆ 2 ಬಿಸಿಲು ಗಾಳಿ ಮಳೆಗಳು ಸಿದ್ಧೌಷಧ ಹಸನ ಮುಖವೆ ನಿಮ್ಮಯ ಪಥ್ಯ ರಸ ಕವಳವು ಬೇಕಾದರೆ ಕೊಳೆಯುವ ರಸವನು ತಿನ್ನಲು ಬಯಸದಿರಿ 3 ಕತ್ತಲಿನಲಿ ಓಡÀುತಲಿರುವಿರಿ ಸತ್ತಿರುವುದೆ ನಿಮ್ಮಯ ಬಲವು ಅತ್ತರೇನು ಫಲ ಎತ್ತಿನೋಡಿ ತಲೆ ಹತ್ತಿರದಿ ನಾನಿಹೆ ಸತತ 4 ಭಯವೇತಕೆ ದಾರಿದ್ರ್ಯದಲಿ ಭಯವೇತಕೆ ಜನರನು ಬಿಡಲು ಭಯವೇತಕೆ ಲೌಕಿಕವಿರದಿರಲು ಅಭಯ ಪ್ರಸನ್ನನಿರೆ ಹೃದಯದಲಿ 5 ಬೊಗಳುವರಿರುವರು ಹೊಗಳುವರಿರುವರು ಹಗರಣವೇತಕೆ ಮಾನಸದಿ ಒಗೆಯಿರಿ ಹಗೆತನ ನಗುತ ನಗುತಲಿರಿ ಜಗವೆ ಹೊಸ ಮೊಗ ತೋರುವುದು6
--------------
ವಿದ್ಯಾಪ್ರಸನ್ನತೀರ್ಥರು
ಭಕುತರ್ಗೆ ಭಯಬಾರದು ಸುಖವೀವ ಕಾವದೇವನಕಾಕುಜನರಿಂದ ಬಂದಾನೇಕ ಶೋಕಂಗಳ ಕಳೆವÀಶ್ರೀರಂಗನ ದೇವೋತ್ತುಂಗನ ಭವಭಂಗನ ಪ. ಹಿರಣ್ಯಕನುದರ ವಿದಾರಣನ ಸ್ವಚರಣಕರಣ ಪ್ರಹ್ಲಾದನ ಭಯನಿವಾರಣನಕರಿವರ ಕರೆಯೆ ಮಕರಿಯ ಸೀಳಿದ ಸಿರಿಯನಾಳಿದಪಿರಿಯ ಶ್ರೀಹರಿಯ ಧೂರ್ತಾರಿಯ ಬಕವೈರಿಯ 1 ಯತಿಕುಲಪತಿಯ ಮಧ್ವಾಚಾರ್ಯರಕೃತಿಯಾಶ್ವರ್ಯ ಚಾತುರ್ಯಕೊಲಿದನಸತಿ ಸಭೆಯಲ್ಲಿ ಸಿರಿಪತಿ ನೀನೆ ಗತಿಯೆನೆಅತಿ ದೂರದಿಂದಕ್ಷಯವೆಂದ ಗೋವಿಂದನ ಮುಕುಂದನ2 ಕುಂಡಲ ಕೌಸ್ತುಭ ನೂಪುರ ಮೊದಲಾದ-ಲಂಕೃತಿಯಿಂದೊಪ್ಪುವ ನೀಲಗಾತ್ರನಪಂಕಜನೇತ್ರನ ಪರಮಪವಿತ್ರನ ಸುಚರಿತ್ರನ ಸುರಮಿತ್ರನ 3 ಗುರುವೆಂದರಿವ ಹರಿಯೆಂದು ಕರೆವ ತ-ಮ್ಮಿರವ ಮರೆವ ಸದ್ಗುಣ ವಿಸ್ತಾರವ-ನ್ನೊರೆವ ನಯನದಿ ಸುರಿವ ಪರಿವ ಸುಖಾಂಬುಧಿಕರೆವ ತೋರುವ ಖಳನಿರವ ಮುಕ್ತಿಗೆ ಕೂರುವ 4 ಹರಿಯನೆ ಪಾಡುವ ಹರಿಯ ಕೊಂಡಾಡುವಹರಿಯ ನೋಡುವ ಹರಿಯನೆ ಬೇಡುವದುರುಳರ ಕಾಡುವ ತಪದಿಂ ಬಾಡುವದುರಿತವ ಬಿಡುವ ಸುಕೃತವನೆ ಕೊಡುವ ಪಾಡಪಾಡುವ ನಲಿದಾಡುವ 5 ಹರಿಯನೆ ಸ್ಮರಿಸುವ ಹರಿಯನನುಸರಿಸುವಹರಿಯನೆ ಪರಿಹರಿಸುವ ಹರಿಯನೆಬೆರಿಸುವಹರಿಯನೆ ತೋರಿಸುವ ಹರಿಯನೆ ಮರೆಸುವಹರಿಪಾದಕೇರಿಸುವ ಸುಖರಸವ ಎರೆಸುವ 6 ಒಂದು ಕೈಯಲಿ ಕಡೆಗೋಲನೆ ಪಿಡಿದು ಮ-ತ್ತೊಂದು ಕೈಯಲಿ ನೇಣನಾಂತ ಶ್ರೀಕಾಂತನಮುಂದೆ ನಿಂದು ಒಲಿವುತ್ತ ನಲಿವುತ್ತತಂದೆ ಹಯವದನನರ್ಚಿಸುವ ಮೆಚ್ಚಿಸುವ ಹೆಚ್ಚಿಸುವ 7
--------------
ವಾದಿರಾಜ
ಭಕುತಿ ಸುಖವೊ ರಂಗ ಮುಕುತಿ ಸುಖವೊ ಪ ಭಕುತಿ ಸುಖವೊ ಮುಕುತಿ ಸುಖವೊ | ಯುಕುತಿವಂತರೆಲ್ಲ ಹೇಳಿ ಅ.ಪ. ಭಕುತಿ ಮಾಡಿದ ಪ್ರಹ್ಲಾದ | ಮುಕುತಿಯನ್ನು ಪಡೆದುಕೊಂಡ | ಮುಕುತಿ ಬೇಡಿದ ಧ್ರುವರಾಯ | ಯುಕುತಿಯಿಂದ ಹರಿಯ ಕಂಡ 1 ಭಕುತಿ ಮಾಡಿದ ಅಜಮಿಳನು | ಅಂತ್ಯದಲಿ ಹರಿಯ ಕಂಡ | ಮುಕುತಿ ಬೇಡಿದ ಕರಿರಾಜ | ದುರಿತಗಳನು ಕಳೆದುಕೊಂಡ 2 ಭಕುತಿ ಮುಕುತಿದಾತ ನಮ್ಮ | ನಿತ್ಯ | ಭಕುತಿಯಿಂದ ಭಜನೆ ಮಾಡಿರೊ 3
--------------
ವಿಜಯದಾಸ