ಒಟ್ಟು 296 ಕಡೆಗಳಲ್ಲಿ , 71 ದಾಸರು , 273 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಹರಿಯೆ ಕಡೆಗಾಣೆನೈ ಜನುಮವಭವಕಡಲ ತಡಿಯ ಸೇರಿಸುಮಾಧವಪ.ವಿಷಯಾಸೆ ತೆರೆಗಳಲ್ಲಿ ಗೃಹವೆ ಗ್ರಹವಿಷಮ ಸತಿಸುತ ಗುಲ್ಮವು ವಡವಾಗ್ನಿಹಸಿವುತೃಷೆದಹಿಸಿತೆನ್ನ ಇದರೊಳಾಲಸಿಕೆಸುಳಿಭ್ರಮಣ ಘನ್ನ1ಷಟ್ಚರ್ಯ ಹಡಗದವರು ಬಿಡದೆ ಬೆನ್ನಟ್ಟಿ ಬಡಿದಂಜಿಸುವರು ಮನವಾಯುವಿನಟ್ಟುಳಿಗೆ ನಿಲವಿಲ್ಲವು ಇಂದ್ರಿಯಜಂತುಕಟ್ಟಿಲ್ಲದೆಳೆದೊಯ್ವವು 2ಸಂಸಾರಸಾರಫೇನ ಭುಂಜಿಸಲುಸಂಶಯದ ರೋಗ ನವೀನ ದುರಿತಾಂಬುಹಿಂಸೆ ಮಾಡದೆ ಉಳುಹಿತು ಅಜÕವ್ಯಾಳದಂಶ ಕ್ಷಣಲವಕಾಯಿತು 3ಸುಖವೆ ಬೊಬ್ಬುಳಿ ರಾಶಿಯು ಬಂಧು ಬಳಗಸಖಸ್ನೇಹ ಪಾಶಲತೆಯು ಅಹಿತಾಗಮ ಕಠೋರ ದುಶ್ಯಬ್ದಕೆಸ್ಮøತಿಹೋಗಿಚಕಿತನಹೆ ದೀನಬಂಧು 4ಇಂತು ಬಳಲುವುದ ನೋಡಿ ಸಿರಿಲಕುಮಿಕಾಂತ ನಿರ್ದಯನಾದೆ ನೀ ಪ್ರಸನ್ನವೆಂಕಟಕಾಂತ ಸಂತರ ಕೂಡಿಸೊ ಶ್ರೀ ಮೂರುತಿಅಂತ್ಯಯಾತ್ರೆಗೆ ಉದಯಿಸೊ 5
--------------
ಪ್ರಸನ್ನವೆಂಕಟದಾಸರು
ಹೆಣಗಿದರಾಗದು ಒಣತರ್ಕದಲಿದಣಿದರೆ ಕೂಡದು ಭಕುತಿವನಜಾಕ್ಷನ ಕೃಪೆ ಮನಸ್ಸಾಕ್ಷ್ಯಾದರೆತನ ತಾನಾಹದು ಮುಕುತಿ ಪ.ಸೂಕ್ಷ್ಷ್ಮತತ್ವದಿ ದಕ್ಷನೆನಿಸದೆದೀಕ್ಷಿತ ನಾಮಿದ್ದೇನುಅಕ್ಷರಬಲದಲಿ ಲಕ್ಷವು ವೃಥಾಗುರುಶಿಕ್ಷಿಲ್ಲದ ಜನುಮೇನುಭಿಕ್ಷುಕ ಧಾನ್ಯದ ಲಕ್ಷ್ಷ್ಯದಲಿ ಪದ್ಮಾಕ್ಷನ ಪೊಗಳಿದರೇನುಕುಕ್ಷಿಯ ಲಾಭವುಅಕ್ಷಯತೋಷದಮೋಕ್ಷೋಪಾಯವದೇನು 1ದ್ರವ್ಯಾದಿವ್ರಯ ಹವ್ಯಾದಿಕ್ರಯಅವ್ಯಯಜೀವ ಸ್ವಭಾವಾಖ್ಯಕಾವ್ಯರಚನೆ ಶಬ್ದ ವ್ಯಾಕರಣದಹವ್ಯಾಸವು ಇಹ ಸೌಖ್ಯಅವ್ಯಾಕೃತ ನಾಮಾವ್ಯವಹಾರಿಲ್ಲದನವ್ಯ ಕಥಾಜನಸಖ್ಯದಿವ್ಯಮೂರುತಿ ವೇದವ್ಯಾಸಜಭವಸೇವ್ಯನ ನಿಷ್ಠೆಯೆ ಮುಖ್ಯ 2ಕಡು ಆದರದೊಳು ಕಡಲಳಿಯನ ಪದವಿಡಿಯದವನ ಶ್ರುತಿಶಾಸ್ತ್ರನಡುಹೊಳೆ ದಾಟುತ ತಡಿಯಲಿ ನಾವೆಯುಬುಡಮೇಲಾಯಿತು ವ್ಯರ್ಥದೃಢ ಪ್ರಸನ್ವೆಂಕಟ ಒಡೆಯನಾಚ್ಛಿನ್ನ ದಯಪಡೆದನುಗುರುಸುಖತೀರ್ಥನುಡಿಗಳ ಮಾಲೆಯ ತುಡುಗರ ತಮಸಕೆಬಡಿದಟ್ಟುವನು ಸಮರ್ಥ 3
--------------
ಪ್ರಸನ್ನವೆಂಕಟದಾಸರು
ಹೇ ದಯಾಬ್ಧೇ ಪಾಲಿಸೆನ್ನನು | ಶ್ರೀದ ಹನುಮಂತ ಪಭೂಧವಜ ನದಿಯಲ್ಲಿ ನಿಂತಾ ಕಾಳೀಕಾಂತ ವೀತಚಿಂತಾ ಅ.ಪ.ರಾವಣಾನುಜನಂತೆ ಮತ್ತಾ ಶೈಲಸುತನಂತೆ |ದೇವತೆಗಳೀಶನಂತೆ ದೇವತೆಗಳಂತೆ ||ಆವವಿಕ್ರಮಪಾರ್ಥನಂತೆ ಕಾದಿ ಬಿದ್ದಾ ಕಪಿಕುಲದಂತೆ |ತಾವರೆಯಸಖಸೂರ್ಯನಂತೆ ತತ್ಸುತ ಸುಗ್ರೀವನಂತೆ 1ಭೂವರಾಧಿಪ ಧರ್ಮನಂತೆ ದ್ರೌಪದಿಯಂತೆ |ಭೂವಿ ಬುಧಸುತನಂತೆ ರಾಕ್ಷಸಿಯಂತೆ ಫಣಿಯಂತೆ ||ಆ ವಿರಾಟರಾಯನಂತೆ ಪಾರ್ವತಿಯ ನಾಥನಂತೆ |ನೀ ವಿಜಯನಾಗಲು ಸಹಿಸದಲೆ ಕೋಪಿಸಿದ ಧೃತರಾಷ್ಟ್ರನಂತೆ ||ಮೋದದಿಂದ ನಿನ್ನ ಪಡೆದಾ ಮಧ್ಯಗೃಹನಂತೆ |ಆದರದಿ ಹರಿಪೂಜೆ ಮಾಳ್ಪಾಸೂರಿಜನರಂತೆ ||ಆ ದಿನ ಕಡಲಲ್ಲಿ ಮುಳುಗಿ ಪೋಗುತ್ತಿದ್ದಾ ನಾವೆಯಂತೆ |ಪಾದಹಿಡಿದಾ ಕಾಳೀಸರ್ಪನ ಕಾಯ್ದ ಪ್ರಾಣೇಶ ವಿಠ್ಠಲನಂತೆ 3
--------------
ಪ್ರಾಣೇಶದಾಸರು