ಒಟ್ಟು 881 ಕಡೆಗಳಲ್ಲಿ , 89 ದಾಸರು , 645 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪದ್ಮನಾಭ ವಾಕು ತಾನೂ ಮೊದಲುನಾದರೂಪದಿ ತೋರಿ ನಾಲ್ಕು ವಿಧದಿಪಾದವೆರಡು ಪರಾ ಪಶ್ಯಂತಿಯೆಂದುಭೇದದಿ ಮಧ್ಯಮ ವೈಖರಿಯೆರಡಿಂ ಪಾದೀ ಸರಿಗಮಪದನಿ ಯದೆನಿಪ 1ಶ್ರುತಿಗಳ ಸಂಜ್ಞೆುಂದ ಸಾರಾವಾದಾ ಸ್ವರದತತಿಯಾಗಿ ಸೋಪಾನವ ತಾನು ಸೇರುತಗತಿುಂದಲೇರುತಿಳಿದು ಗುಣಗಳಿಂದಲೆಸತತವು ಷಡ್ಜಗಳೇಳನು ಸೂಚಿಸಿ ಮತದಲಿ ನಿನ್ನಯ ಮಹಿಮೆಯ ಪೇಳ್ವ 2 Éೂೀಕವೀರೇಳರಲ್ಲಿ ಲೀಲೆುಂದ ನೀನುಸೋಕಿ ಸೋಕದ ಹಾಗೆ ಸಂಚರಿಪುದವಾಕೊಂದೆ ಬಹಳ ಶಬ್ದವೆನಿಸಿಕೊಳುತಏಕನು ತಿರುಪತಿಯೊಡೆಯನನೇಕದಿ ಸಾಕುವ ವೆಂಕಟಸ್ವಾಮಿಯುಯೆನುವಾ 3ಓಂ ಉತ್ತಾಳೋತ್ತಾಳ ಭೇತ್ತ್ರೆ ನಮಃ
--------------
ತಿಮ್ಮಪ್ಪದಾಸರು
ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ
ಪರಮ ಪುರುಷ ಹರಿ ಗೋವಿಂದ - ಸಿರಿವರ ನಾರಾಯಣ ಗೋವಿಂದ ಪ ನಿಶೆವೆಸರಸುರನ ಉಸಿರ ತೊಲಗಿಸಿದೆಕುಸುಮ ಶರನ ಪಿತ ಗೋವಿಂದವಸು ಪೂರಿತ ಶ್ರುತಿ ಮಸುಳಿಸದೆ ತಂದೆಬಿಸಜ ಸಂಭವನಯ್ಯ ಗೋವಿಂದ 1 ಮಂದರ ಸಿರಿ ಗತವಾಗದ ಮುನ್ನಕ್ಷಿತಿ ಪೆತ್ತನಯ್ಯ ಗೋವಿಂದ 2 ಭೂತಳವೆರಸಿ ರಸಾತಳಕಿಳಿದಿಹಪಾತಕನ ಕಂಡೆ ಗೋವಿಂದಆತನೊಡನೆ ಕಾದಾತನ ಗೆಲಿದು ಮ-ಹೀತಳವನು ತಂದೆ ಗೋವಿಂದ 3 ದುರುಳಾಸುರನ ನಡುಗರುಳ ಮಾಲೆ ಮುಂ-ಗೊರಳೊಳು ಧರಿಸಿದೆ ಗೋವಿಂದಗರಳ ಕೊರಳನು ಬೆರಳೆತ್ತಿ ಪೊಗಳಲುತರಳಗೊಲಿದೆ ನೀ ಗೋವಿಂದ4 ವಾಮನನಾಗಿ ನಿಸ್ಸೀಮ ಬಲಿಯ ಕೈಯಭೂಮಿಯನಳೆಕೊಂಡೆ ಗೋವಿಂದತಾಮರಸ ಪದದಿ ಕನಕ ಗರ್ಭಯೋಗವ್ಯೋಮ ಗಂಗೆಯ ತಂದೆ ಗೋವಿಂದ 5 ಸುರ ಪಶುವಿಗೆ ಋಷಿಯನು ಕೊಂದನ ಬಹುಕರ ಬಲ ಮುರಿದೆಯೊ ಗೋವಿಂದತರ ಹರಿಸದೆ ವಸುಧೆಯ ಒಡೆತನ ಭೂಸುರರಿಗೆ ನೀಡಿದೆ ಗೋವಿಂದ 6 ತ್ರಿಣಯನ ತಾತ್ಪರ್ಯ ರಾವಣನ ಶಿರರಣದೊಳುರುಳಿಸಿದೆ ಗೋವಿಂದಕ್ಷಣಮೆಣಿಸದೆ ಸದ್ಗುಣವಂತ ವಿಭೀ-ಷಣಗಭಯವಿತ್ತೆ ಗೋವಿಂದ 7 ಕ್ರತು ಸಿರಿ ಭೂಭಾರೋತ್ತಾರಣ ಬಲಯುತ ಗೋವಿಂದ 8 ಕಥೆಯನು ನಿರ್ಮಿಸಿ ಪತಿವ್ರತೆಯರ ಘನವ್ರತಗಳ ಕೆಡಿಸಿದೆ ಗೋವಿಂದಜತೆಯಗಲದ ಪುರ ತ್ರಿತಯ ಗೆಲಿದು ದೇ-ವತೆಗಳ ಸಲಹಿದೆ ಗೋವಿಂದ 9 ಜಾಜಿಯ ಮರಕತ ತೇಜಿಯನೇರಿ ವಿ-ರಾಜಿಪ ರಾವುತ ಗೋವಿಂದಸೂಜಿಯ ಬೆನ್ನೊಳು ರಾಜಿಪ ತೆರದಿ ಸ-ಹಜರೊಳಡಗಿರ್ಪ ಗೋವಿಂದ 10 ಮೇದಿನಿಗೋಸುಗ ಕಾದಿ ಕಲಹದಿ ವಿ-ರೋಧಿಗಳ ಕೊಂದೆ ಗೋವಿಂದಸಾಧುಗಳಿಗೆ ಸುಖವೀಯುವ ಬಾಡದಶ್ರೀಧರ ಕೇಶವ ಗೋವಿಂದ 11
--------------
ಕನಕದಾಸ
ಪರಮಪಾವನ್ನನಾಮ ಭಳಿರೆ ಸಂಗರ ಭೀಮ ಸರಸಗುಣಾಭಿರಾಮ ತರಣಿವಂಶ ಲಲಾಮ ತಾರಾನಂದನ ಪ್ರೇಮ ಪರಿಪೂರ್ಣಧಾಮ ಪಟ್ಟಾಭಿರಾಮ ಪ. ಚಿಕ್ಕಪ್ರಾಯದಲಿ ಬಲುರಕ್ಕಸಿಯನು ಸೀಳಿ ತಾಕಲದೆ ಕಾಲ್ಪೆಣ್ಗೈದು ರಾಜಮೌಳಿಯ ಬಿಲ್ಲ ಗಕ್ಕನೆ ಖಂಡ್ರಿಸಿ ಕೈವಿಡಿದು ಸೊಬಗನುಕ್ಕುವ ಜಾನಕಿಯ ಧಿಕ್ಕರಿಸುತ ಪೋಗಿ ದಿತಿಯ ಕೈಕೆಯ ಮಾತು ದಕ್ಕಲೆನುತ ಪೋಗಿ ದಂಡಕಾರಣ್ಯವ ಭೂರಿ ದಾನವಹಿಂಡ ಚಕ್ಕಂದದಲಿ ಕೊಂದ ಜಾಣ ನೀನಹುದೊ 1 ಭುವನೇಶ ಶಬರಿಯ ಪೂಜೆಯ ಕೈಕೊಂಡು ಪವನಾತ್ಮಜನ ಕಂಡು ಬರಹೇಳಿ ರವಿಯ ಸೂನನ ಕಾಣಿಸಿಕೊಂಡು ತವಕದಿಂ ವಾಲಿಯ ಹವಣರಿಯದಸುವ ಕೊಂದು ಪ್ಲವಗ ಬಲವನು ಕೂಡಿ ಬಲು ಸಮುದ್ರವ ಬಂಧ- ನವ ಮಾಡಿ ಕುಂಭಕರ್ಣ ರಾವಣನ ಸಂಹಾರ ಮಾಡಿ ಲಂಕಾರಾ ಜ್ಯ ವಿಭೀಷಣಗಿತ್ತು ಅವನಿಜೆಸಹ ಪುಷ್ಪಕವನೇರಿ ನಡೆದೆ 2 ಸುರರೆಲ್ಲ ಪೂಮಳೆಗರೆಯೆ ಸುಗ್ರೀವಾದಿ ವರರಾವಣರ ಸೇನೆ ಬೈಲಾಗಿ ನೀ ನಡೆಯೆ ಶೃಂ- ಗಾರವಾದ ಸಾಕೇತಪುರಕೆ ಭರದಿ ಬಂದು ನಿರುತ ಸೌಖ್ಯದಲಿ ನಿಂದು ಸಿರನೆಲೆವಿನಯದಿ ಚಿನ್ಮಯನಾ ಗಿರಿಯ ಶುಭಕರ್ಣವೊ(?) ಸೀತಾಲಕ್ಷ್ಮಣ ಭರತಶತ್ರುಘ್ನಯಿರೆ ಹನುಮನ ಸೇವೆ ದಿವ್ಯಸಿಂಹಾಸನವೇರಿ ಧರೆ ಆಳಿದ ಪರಿಣಾಮದಿ ಹಯವದನ ರಾಮ3
--------------
ವಾದಿರಾಜ
ಪರಶುರಾಮ ದೇವರು ಬೆಳಗಿರಾರುತಿಯನು ಜಲಜ ನೇತ್ರರೆ ನೀವುಛಲವ ಸಾಧಿಸಿದಂಥ ಚೆಲುವರಾಯನಿಗೆ ಪ ರೇಣುಕಾಸುತ ಕ್ಷೋಣಿಪಾಲಕರ ಕೊಂದುಕಾಮಧೇನುವಿನ ಆಶ್ರಮ ಸ್ಥಾನದಿ ತಂದಾ 1 ಹತ್ತೇಳು ಒಂದು ಅಕ್ಷೋಹಿಣೀ ಸೈನ್ಯಹತ್ಯೆ ಮಾಡುತ್ತ ರಕ್ತದ ನದಿಯನು ಸುತ್ತಹರಿಸಿದವಗೆ 2 ವಂದ್ಯ ಮಹಿಮನೆ ಇಪ್ಪತ್ತೊಂದು ಬಾರಿಲೆ ಕ್ಷಾತ್ರವೃಂದವನಳುಹಿದ ಇಂದಿರೇಶನಿಗೆ 3
--------------
ಇಂದಿರೇಶರು
ಪರಾಕು ಹೇಳುವನ ನಿರಾಕರಿಸುವದು ಹೊಕ್ಕ ನಿನ್ನ ಸೇವೆಯೊಳಗೆ ಬಹು 1 ಮಲಾದು(?0 ಇರುವಂ-------ಳಗೆ ಇರುವ ಅಲಾದಿ ಅಂಗಗಳು ಅವತರಿಸಿದ ದೇವಾ 2 ನೆಲಾನ ಘೂರಿಸಿದ ಭಲಾಶೆ ಮಾಡಿ ದುರುಳಾದ ಕರುಳ ತೆಗೆದು ಕೊರಾಳಲ್ಲಿಟ್ಟ ಸ್ವಾಮಿ 3 ಧರಾನÉ ದಾನ ಬೇಡಿ ಸರಾನ ಕೋಪದಿಂದ ಶರ---------ಸಿದ ಶ್ರೀಹರಿ ಎಂದು ಬಹು 4 ಬಲಾನೆ ಕುಟ್ಟಿ ಖಳನ ಬಲಾನೆಲ್ಲವ ಮುರಿದು ಲಲಾನೆಯನು ತಂದು ರಘುರಾಮನೆಂದು ಬಹು 5 ದುಷ್ಟ ಕಂಸಾನ ಕೊಂದಾ ಸೃಷ್ಟಿಕರ್ತಾನು ನೀನು ಕೃಷ್ಣಾ ಕರುಣಿಸೂ ಎಂದು ಪ್ರಾಯದಲಿ ಮೊರೆಯಿಟ್ಟು 6 ಅಂಬಾರವನು ಬಿಟ್ಟು ಸಂಚಾರದಲಿ ನೀ---- ---ಂ ಬೇರಿದಂಥ ಶ್ರೀ ಮಹಾನುಭಾವನೆನುತಾ 7 ಶರಾಣು ಎಂದು ಬಂದವರಾನ ಪೊರೆದ ಶ್ರೀಧರಾನೆ ರಕ್ಷಿಸೆಂದು ಕರಾವು ಮುಗಿದಿಂದೂ8 ನಿರಾಮಯಾನಾದ ಶ್ರೀ ರಾಮದೇವರೆನ್ನ ಪತಿ `ಹೊನ್ನ ವಿಠ್ಠಲಾ’ 9
--------------
ಹೆನ್ನೆರಂಗದಾಸರು
ಪವಮಾನ-ಪಾವನಾ ಜಗಜ್ಜೀವನ ಪ ಶಿವ ಖಗಪತಿ ಅಹಿಸುರ ವಂದಿತಪದ ಅ.ಪ ಸೇವಾ ಕೃಷ್ಣ ಸಾಧನಾ ಕಾವಕರುಣಿ ಕಿಂಪುರುಷ ಖಂಡಾಧಿಪ ಕಾವಳದೊಳು ನಿನ್ನವರನು ಕಾಯ್ದೆ ಭೂವಳಯದೊಳವಿದ್ಯೆಯನಳಿಸಿದ ಸದ್ವರ್ತನು ನೀನೆನ್ನನುದ್ಧರಿಸಯ್ಯ 1 ಶರಧಿ ಹಾರಿದೆ | ಕೌರವ ಕಲಿಯಾ ನೀ ಗದೆಯಿಂ ಛೇದಿಸಿದೆ ಧಾರುಣಿಯೊಳು ಯತಿಪುಂಗವನೆಂದೆನಿಸಿದೆ ನಿರುತದಿ ರಾಮರ ಕಾರ್ಯವ ಸಾಧಿಸಿ ವಿರಥರ ಮಾಡಿದೆ ಅತಿರಥರುಗಳ ಹರಿಸರ್ವೋತ್ತಮ ತರತÀಮ ಸತ್ತತ್ವಗ ಳರುಹಿದ ಸದ್ವರ್ತನು ನೀನೆ 2 ರಾಮಪದಕುಮುದಸೋಮ ಭೀಮಾ ರಿಪುಕುಲ ಧೂಮ ನಿಸ್ಸೀಮ ಶ್ರೀಮದಾನಂದಮುನಿ ಸಾರ್ವಭೌಮ ಭೂಮಿಜೆ ಕುರುಹ ಶ್ರೀರಾಮರಿಗರ್ಪಿಸಿ ಅ ಮಹ ಬಕ ಕೀಚಕರ ಸಂಹರಿಸಿ ತಾಮಸ ಗ್ರಂಥವನಳಿಸಿ ಜನಕೆ ಸದ್ಬೋಧೆ ಇತ್ತ ಗುರು ಪೂರ್ಣಬೋಧನೆ 3 ದ್ರೋಣಾಚಲವ ತಂದ ಪ್ರಾಣ ಎಣೆಯುಂಟೆ ಬಲದೊಳು ನೀನೆ ನಿಸ್ಸೀಮ ಕಾಣೆನೊ ಜಗದಿ ಪರಮಹಂಸರ ಪ್ರಾಣ ಪ್ರಾಣಿಗಳೊಳಗೆ ಮುಖ್ಯಪ್ರಾಣನೆಂದೆನಿಸಿದೆ ಕ್ಷೋಣಿಯೊಳು ಕುರುಸೇನೆ ಸಂಹರಿಸಿ ಕ್ಷೀಣವಾಗುತಲಿಹ ಸುಜನರ ಮನಸ ತ್ರಾಣ ಮಾಡಿ ಸತ್ಪ್ರಮಾಣಗಳಿತ್ತೆ4 ಋಜುಪುಂಗವ ದೇವಾ ಹನುಮಾ ಗಜಪುರಾಗ್ರಣಿ ಕೌರವನಿಗೆ ನೀ ಕಾಲಯಮ ಕುಲಿಶ ನಿಸ್ಸೀಮ ಅಜಪದ ಪಡೆದಿ ಶ್ರೀ ಆಂಜನೇಯನೆ ವಿಜಯಸಾರಥಿನೊಲಿಸಿ ಪೂಜಿಸಿ ಸೃಜಿಸಿ ಮರೆದೆ ಸಚ್ಛಾಸ್ತ್ರದಿಂದ ಈ ಚತುರ್ದಶಭುವನಾಚಾರ್ಯನೆನಿಸಿದೆ 5 ಖೂಳ ಅಕ್ಷಕುವರನ ಹರಿಸೆ ಖಳರ ಕಾಳೋರಗ ಬಾಧೆ ಲೆಕ್ಕಿಸದೆ ಖಳ ಭೂದೈತ್ಯರ ಬಾಧೆ ಹರಿಸಿದೆ ಬಾಲತನದಲಿ ಭಾನುಮಂಡಲ ಹಾರಿದೆ ಲೋಲತನದಿ ಸತಿಗೆ ಪೂವಿತ್ತೆ ಶೀಲಮೂರುತಿ ಮಾಯ ಜಾಲ ಹರಿಸಿ ಜಗಖ್ಯಾತನಾದೆ ಯತಿದಶಪ್ರಮತಿಯೆ 6 ಮಾರುತಿ ಧೀಮಂತಮೂರುತಿ ಭಾರತದಿ ಭೂಭಾರನಿಳುಹಿದ ಖ್ಯಾತಿ ಸಾರ ಶ್ರೀ ಬಾದರಾಯಣಗೆ ಅತಿಪ್ರೀತಿ ಅರಿಪುರ ವೈಶ್ವಾನರನಿಗರ್ಪಿಸಿ ವಾರಣಪುರದೊಳು ಅತಿರಥನೆನಿಸಿ ದುರ್ವಾದಿಮತ್ತಗಜಸಿಂಹನಾಗಿ ನೀ ನಿವ್ರ್ಯಾಜÀದ ಭಕ್ತಿಯ ಹರಿಗರ್ಪಿಸಿದೆಯೊ 7 ಹನುಮಾ ಭೀಮಾ ಆನಂದ ಮುನಿಪಾ ಆ ವಾನರಾಧಿಪಾ ಗಜಪುರಾಧಿಪ ಯತಿಪಾ ಧ್ಯಾನನಿರತ ರಾಮಪದದಿ ಮಾನಸದಲ್ಲಿ ಯದುಪತಿಯ ಪೂಜಿಸಿ ದೀನಜನರುದ್ಧಾರಮಾಡಿ ಸದ್ಬೋಧೆ ಯನಿತ್ತ ಮಧ್ವಮುನಿಯೆ 8 ರಾಮಾಲಿಂಗನ ಮಾಡಿದಾ ರೋಮ ರೋಮಕೆ ಕೋಟಿಲಿಂಗವ ಸೃಜಿಸಿದಾ ಶ್ರೀಮಧ್ಯಗೇಹಾರ್ಯಸೂನುವೆಂದೆನಿಸಿದಾ ಆ ಮಹಾರ್ಣವ ಲಂಘಿಸಿದಾ ಧೀರಾ ಭೀಮಭಯಂಕರ ದ್ರೌಪದೀಪ್ರಿಯಕರ ಈ ಮಹಿಮೆಯೊಳಾರೆಣೆಯೋ ನಿನಗೆ ನಿ ಸ್ಸೀಮನಹುದೋ ಯತಿಸಾರ್ವಭೌಮನೆ 9 ಸುರಜೇಷ್ಠಾನಸ್ತ್ರ ಮಾನಿಸಿದಾ| ಜರೆಯನ ಸೀಳಿ ನಿರಪರ ಸೆರೆಯ ಬಿಡಿಸಿದಾ ಧರೆಯೊಳ್ ಸುರಶ್ರೇಷ್ಠನೆಂದೆನಿಸಿದಾ ಭರದೊಳು ಭರತೆಗೆ ಕುಶಲವ ತಿಳಿಸಿ ಕರುಳಮತಿಯಿಂ ಸತಿಯ ಸಂತೈಸಿ ದುರುಳ ಭಾಷ್ಯಂಗಳ ತತ್ತ್ವವನಳಿಸಿದಾ ಪರಮದಯಾಂಬುನಿಧಿ ಶ್ರೀಮದಾನಂದ 10 ರಕ್ಷಕ ನೀನೆ ಸಜೀವ ಲಾಕ್ಷ್ಯಾಗಾರದ ಬಾಧೆÉಯಿಂ ರಕ್ಷಿಸಿ ಮೆರೆದಯ್ಯ ಈ ಕ್ಷಿತಿಯೊಳು ದೈತ್ಯ ಶಿಕ್ಷಕನೆನಿಸಿದೆ ತಕ್ಷಣ ಸಿಂಹಿಕೆ ಕುಕ್ಷಿಯ ಸೀಳ್ದೆ ಭಿಕ್ಷೆಯಿಂದ ನಿನ್ನವರನು ಕಾಯ್ದೆ ದಕ್ಷನಹುದೊ ನೀನಚ್ಯುತ ಪ್ರೇಕ್ಷರಿಂ ದೀಕ್ಷೆಯ ವಹಿಸಿ ಸತ್ಸಿಕ್ಷಕನಾದ್ಯೊ 11 ನೀ ರಂಜಿಸಿ ಮೆರೆದೆಯೊ ಗುರು ಮಧ್ವಾರ್ಯ ಧೀರ ಕೇಸರಿಕುವರ ಪುರುಷಾಮೃಗವ ಸಾಧಿಸಿ ತಂದ ಶೂರ ಈ ಧರಾವಲಯದಿ ತೋರಿದೆ ತತ್ವಸಾರ ತೋರಿ ಭಕ್ತಿ ಶ್ರೀರಾಮರ ಪದದಿ ಕಂ ಸಾರಿಯ ಸೇವಿಸಿ ಭಾರವನಿಳುಹಿದೆ ಸಾರಿದೆ ಹರಿಸರ್ವೋತ್ತಮ ತರತಮಭೇದವನರುಹಿದ ಪರಮದಯಾಳೊ12 ಅಂಜನೆ ಕುವರಾ ಧೀರಾ ಕುಂಜರಪುರದ ಅರಿಗಳಂಜಿಸಿದ ಶೂರ ಧರಣಿ ದುರ್ಮದಾಂಧರ ದುರ್ವಾದ ಪಂಕಜೋದ್ಭವನ ಪದವ ಪಡೆವೆ ನೀ ಅಂಜದೆ ಗದೆಯಿಂ ಕೊಂದೆ ಕುರುಪನ ಮಂಜುಳವಾಣಿಯ ಜಗಕೆ ಇತ್ತು ನೀ ರಂಜಿಸಿ ಮರೆದೆಯೊ ಗುರುಮಧ್ವಾರ್ಯ 13 ರೋಚಕ ನಾಮಕನೆನಿಸಿ ಪು ರೋಚನನ ಕಾರ್ಯವನೆಲ್ಲಾ ಕೆಡಿಸಿ ಪಾಜಕ ಕ್ಷೇತ್ರ ಪವಿತ್ರ ಮಾಡಿದೀ ಖೇಚರಮಾರ್ಗದಿ ನೆಗಹಿ ನಿ ಶಾಚರರೆÉಲ್ಲರ ಸದೆದೆ ಗದೆಯಿಂ ಸೂಚಿತ ಗ್ರಂಥ ವಿರಚಿಸಿ ಜಗಕೆ ನೀ ಗೋಚರಿಸಿದೆಯೊ ತ್ರಿಜಗಾಚಾರ್ಯ 14 ರಣದೊಳು ಘುಣಿವಿರೂಪಾನೆತ್ತಿದೆ ಬಾಣಸಿಗನೆನಿಸಿ ಮತ್ಸ್ಯದೇಶವ ಸೇರ್ದೆ ಕ್ಷೋಣಿಯೊಳು ಗುಣವಾರಿಧಿ ಎನಿಸಿದೆ ಗಣನೆ ಇಲ್ಲದೆ ಗಿರಿಯನೆಗಹಿದೆ ಹಣಿದೆ ಹಿಡಿಂಬಾಸುರನ ಸೀಳಿದೆ ಮಣಿಮಂತಾದಿ ದುರಾತ್ಮರಿಗೆ ನೀನಂತಕನೆನಿಸಿದೆ ಶಾಂತಮೂರುತಿಯೆ15 ವಿಜಯರಥಕೆ ನೀ ಕೇತುನಾಥ ವಿಜಯಸಾರಥಿಯಾ ದೂತ ವಿಜಯದಶಮಿಯೊಳ್ ಜನಿತ ಸೋಜಿಗ ತೋರಿ ಸಂಜೀವನ ತಂದೆ ಆ ಜಗಜಟ್ಟಿಗಳೆಲ್ಲರ ಸದೆದೆ ಈ ಜಗದೊಳು ಸರಿಗಾಣೆ ಜಗದೊ ಳು ಜಗದ್ಗುರುವಹುದೋ ನೀ ಗುರುಪೀಳಿಗೆಗೆ16 ಮಂಗಳಮೂರುತಿ ಮಾರುತಿ ಸೌಗಂಧಿಕ ನೆವದಿ ಮರುತನೊಳ್ ನೀ ಸೆಣೆಸಿದಿ ಶೃಂಗಾರ ಗೋಪಿನಂದನನ ಸ್ಥಾಪಿಸಿದೆ ಭಂಗಿಸಿ ವನವನು ಉಂಗುರವನು ತಂದೆ ಸಂಗರ ಹನುಮನೊಳ್ ನೀಡಿ ಮೋಹ ತೋರ್ದೆ ಅಂಗಜಪಿತನ ಇಂಗಿತವರಿತು ಭಂಗಿಸಿದೆಯೊ ದುಶ್ಯಾಸ್ತ್ರಂಗಳನು 17 ಕೇಸರಿ ಕ್ಷೇತ್ರ ಜನಿತಾಭೂಸು ರ ಸುತನ ಭೀತಿಯ ನೀ ಬಿಡಿಸಿದೆ ವಸುಮತಿಯೊಳು ಸುರಶ್ರೇಷ್ಠನೆಂದೆನಿಸಿದೆ ಕೋಸಲನಗರಾಧೀಶನ ಪ್ರೀಯ ವಾಸುದೇವಗರ್ಪಿಸಿದೆ ಅಧ್ವರ್ಯ ಶ್ರೀಶನಾಜ್ಞೆಯ ತಾ ಶಿರದಿ ಧರಿಸಿ ಪ್ರ ಕಾಶ ಮಾಡ್ದೆ ಸರ್ವಮೂಲಗ್ರಂಥವ 18 ಶ್ವಾಸನಿಯಾಮಕನೆನಿಸಿದೆ ಪ್ರ ಯಾಸವಿಲ್ಲದೆ ವನವಾಸಂಚರಿಸಿದೆ ಶ್ರೀ ವ್ಯಾಸರಿಗೆ ಅತಿಮೋದವ ಪಡಿಸಿದೆ ಶ್ರೀಶನಾಜ್ಞೆಯಲ್ಲಿ ಕೀಶನಾಗಿ ನಿಂದು ನಿಶಾಚರರೆÉಲ್ಲರ ಸದೆದೆ ಗದೆಯಿಂದ ಶ್ರೀಶನೆ ಸರ್ವೋತ್ತಮನೆಂಬ ಸತ್ಸಿದ್ಧಾಂತವ ತೋರಿದ ಸದ್ಗುಣಪೂರ್ಣ 19 ಸರ್ವಜೀವರ ತ್ರಾಣ ಪ್ರಾಣ ಗರ್ವಿಸಿದವರೊಳು ನೀ ಗರ್ವ ಹರಣ ಸರ್ವಜ್ಞಾಚಾರ್ಯ ಗುರುವರೇಣ್ಯ ಪೂರ್ವದೇವರ ಗರ್ವವನಿಳುಹಿ ಸರ್ವ ಕೌರವರ ಪಡೆಯನು ಸವರಿದೆ ಉರ್ವಿಯೊಳು ಜನಿಸಿದ ದುರ್ಮದಾಂಧರ ಗರ್ವಹರಣಮಾಡಿ ಕರುಣವ ತೋರಿದೆ 20 ಶ್ರೀರಾಮನೇಕಾಂತ ಭಕ್ತ ಶೌರಿಯ ಆಜ್ಞೆಯಿಂ ಸರ್ವಕಾರ್ಯಸಕ್ತ ಧಾರುಣಿಯೊಳು ಸಚ್ಛಾಸ್ತ್ರಕರ್ತ ಹಾರಿದೆ ಶರಧಿಯ ಅಣುಮಹದ್ರೂಪದಿ ತೋರಿದೆ ಶಕ್ತಿಯ ಗಿರಿ ತರುತೃಣವತ್ ಸಾರಿದೆ ಧರಣಿಯ ಸುರಜನುಮದಿ ನೀ ಬೀರಿದೆ ಸುಜನಕೆ ತತ್ವಾಮೃತವ 21 ಕಾಶಿ ಕಂಚುಕವ ಧರಿಸಿದೆ ಕಾಶ್ಯಪಿಯೊಳು ಕಾವಿಶಾಟಿಯ ಧರಿಸಿದೆ ಕೀಶತನದಿ ಹರಿಕಾರ್ಯವ ಸಾಧಿಸಿ ಜಗ ದೀಶಕುಲದೊಳು ಜನಿಸಿ ಮೆರೆದೆ ವೇದ ವ್ಯಾಸ ಪದಕಮಲ ಮಧುಪ ಜಗಖ್ಯಾತನಾ ದ ಶ್ರೀ ಮಧ್ವಸೂರ್ಯನೆ 22 ಸುಗ್ರೀವಗಭಯ ಕೊಡಿಸಿದಾ ಮ ಹೋಗ್ರರಾದ ದ್ವೇಷಿಗಳ ಸವರಿದಾ ಸ ಮಗ್ರ ಸಿದ್ಧಾಂತ ರಚಿಸಿದಾ ವಿಗ್ರಹದೊಳು ಧಾತಾಸ್ತ್ರವ ಮಾನಿಸಿ ಅಗ್ರಹರಿಪುಕುಲ ಕಾಲನೆಂದೆನಿಸಿ ಉಗ್ರವಾದಿಗಳ ದುರಾಗ್ರಹ ವಿಗ್ರಹ ಶೀಘ್ರದಿ ಮಾಡಿ ಅನುಗ್ರಹವಿತ್ತೇ23 ಸೋಮಕುಲದೊಳು ನೀನೆ ಅತಿ ಬಲವಂತ ಈ ಮಹಿಯೊಳು ರೌಪ್ಯಪೀಠದಿ ಜನಿತ ರಾಮಾಂಗನೆಯ ಪ್ರೇಮದ ದೂತ ಸೋಮಶೇಖರನ ಕೇದಾರಕಟ್ಟಿದ ಸ್ವಾಮಿಗೆ ಪ್ರಕೃತಿಯ ಮಾಯವ ಪೇಳ್ವ ಕೇಸರಿ ಎನಿಸಿದೆ 24 ಮಾರ್ಜಾಲರೂಪವ ಧರಿಸಿದೆ ನೀ ನರ್ಜುನಾಗ್ರಜಾದಿಗಳ ಪೊರೆದೇ ನೀ ಸರ್ಜಿಸಿ ತೋರ್ದೆ ಸತ್ಸತ್ವಗಳೆಲ್ಲ ಘರ್ಜಿಸಿ ಅರ್ಜುನನ ರಥದಲಿ ನೆಲೆಸಿದೆ ಮೂರ್ಜಗಜಟ್ಟಿಗಳೆಲ್ಲರ ಸದೆದೆ ವರ್ಜಿಸಿ ಅರಿಷಡ್ವರ್ಗಗಳೆಲ್ಲವ ದುರ್ಜಯವಾದಕೆ ಘರ್ಜನೆ ಮಾಡಿದೆ 25 ವಾಯುಕುವರ ಅಸುವರ ಕಾಯಜನಯ್ಯನ ಅತಿಪ್ರೀಯಾ ಶೂರಾ ಜೀಯಾ ನೀನಿತ್ತೆ ಸದ್ಗ್ರಂಥವಿಸ್ತಾರಾ ಕಾಯಕಭಕುತಿ ಶ್ರೀರಾಮರಿಗರ್ಪಿಸಿ ಮಾನಸದಲಿ ಯದುಪತಿಯ ಪೂಜಿಸಿ ಮಾಯಮತವ ನಿರಾಕರಿಸಿ ವಾಚದಿ ಶ್ರೀಯರಸನ ಮೆಚ್ಚಿಸಿದೆ ಯತೀಂದ್ರ 26 ವಾತಜಾತ ಹನುಮಂತ ಖ್ಯಾತ ದ್ವಾಪರದಿ ದ್ರೌಪದೀಕಾಂತ ಭೂತಳದೊಳು ಯತಿನಾಥ ಅತಿಶಾಂತ ಧತಾಜನಕ ಶ್ರೀ ವೇಂಕಟೇಶನ ಪ್ರೀತಿಪಾತ್ರ ಶ್ರೀಕೃಷ್ಣನಂಘ್ರಿಗೆ ಖ್ಯಾತನಾದೆ ಸೂತ್ರಾರ್ಥಪೇಳಿ ಕೃಪಾಪಾತ್ರನಾದೆ ಶ್ರೀ ಬಾದರಾಯಣಗೆ27
--------------
ಉರಗಾದ್ರಿವಾಸವಿಠಲದಾಸರು
ಪಾದ ಪ ಪಾದ ಪಾದ ಪಾದ 1 ಸರಸಿಜೋದ್ಭವ ವಂದ್ಯ ಪಾದಪುರಹರ ನಮಿತ ಪರಿಪೂರ್ಣ ಪಾದನರಗೆ ಸಾರಥಿಯಾದ ಪಾದಕೌರವ ಮೂಲ ಮುರಿದಿಟ್ಟ ಪಾದ2 ದಿವಿಜರಾಜನಿಗೊಲಿದ ಪಾದಅವಿವೇಕಿ ದಾನವರ ಕೊಂದ ಪಾದಬುವಿ ಗಯಾಪುರ ಶ್ರೇಷ್ಠ ಪಾದಭವ ಹಿಂಗಿಪಾದಿಕೇಶವ ಪಾದ3
--------------
ಕನಕದಾಸ
ಪಾದತೋರೋ ಪದ್ಮಾಕ್ಷ ಬಾರೋ ಪ. ಪಾದಪದ್ಮವ ತೋರೋ ಪದ್ಮಾಕ್ಷ ಬಾರೋ ಆದಿಮಧ್ಯಾಂತ ಸ್ವರೂಪ ಮೈದೋರೋ ಅ.ಪ. ಬಲಿಯನ್ನು ತುಳಿದಂಥ, ಭೂಮಿಯನಳೆದಂಥ ಶಿಲೆಯಾಗಿದ್ದವಳ ಕಲುಷವ ಕಳೆದಂಥ 1 ಶಿಶುರೂಪದಿಂದಲೆ ಶಕಟನ ಒದ್ದಂಥ ಶಶಿಮುಖಿಯಶೋದೆಗೆ ಶಿಶುವೆನಿಸಿ ಮೆರೆದಂಥ 2 ಗೊಲ್ಲರ ಮನೆಮನೆಗೆ ಕಳ್ಳನಂದದಿಪೊಕ್ಕು ನಲ್ಲೆಯರ ಕೈಪಿಡಿಗೆ ನಿಲ್ಲದೋಡುವ ಮುದ್ದು 3 ಕಾಳಿಂಗನ ಫಣೆಯೊಳ್ ಕೋಲಾಹಲದಿ ಕುಣಿದ ಕಾಳಿಂಗನರಸಿಯರಿಗೆ ತಾಲೀ ಭಾಗ್ಯವನಿತ್ತ4 ಕರುತುರುಗಳ ಮರೆಸಿ ದೊರೆ ನಿನ್ನರಸಿದ ಪರಮೇಷ್ಠಿಯೆ ತನ್ನ ಕರದಿಂ ಪೂಜಿಸಿದಂಥ 5 ಮಾವ ಕಂಸನ ಕೊಂದು ತಾಯಿ ದೇವಕಿ ವಸುದೇವಸುತ ವಾಸುದೇವನೆಂದೆನಿಸಿದ 6 ಸಿರಿದೇವಿಯೇ ನಿಜಕರಗಳಿಂದೊತ್ತುವ ಪರಮಪಾವನ ಪದಸರಸೀರುಹ 7 ವರಶೇಷಗಿರಿದೊರೆ ಶರಣರ ಮರೆವರೆ ಶಿರಬಾಗಿ ಬೇಡುವೆ ಭರಿಸೆನ್ನನೆನುವೆ 8
--------------
ನಂಜನಗೂಡು ತಿರುಮಲಾಂಬಾ
ಪಾಪಾತ್ಮ ನಾನಲ್ಲ ಪಾಪವೆನದಿನಿತಿಲ್ಲ ಪ ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ ಅ ವರದನು ಕರದಲಿ ಉಷ್ಣಜಲ ಮೃತ್ತಿಕೆಯತರಲು ಕೈ ಸುಟ್ಟಾಗ ಪಣೆಯ ಠೊಣೆದು ಬೈದೆಮರಳಿ ನಾಚಿಕೆ ಇರದೆ ಚರಣಕೆ ಪಾವುಗೆ ತಂ-ದಿರಿಸಿದಪರಾಧ ಎನ್ನದೊ ನಿನ್ನದೊ ದೇವ 1 ಬಂದ ಭೃಗು ಮುನಿ ಎದೆಯನೊದೆಯೆ ಆತಗೆ ಪಾಪಅಂದು ಮೂದಲಿಸಿ ಬೈದವರಿಗೆ ದೋಷನಿಂದುದೇ ಹಣೆಯೊಳಗೆಸೆಯೆ ಭೀಷ್ಮಂಗಘವುಹೊಂದಿದಾ ಪಾಂಡವರಿಗೆ ಕುಂದು ಬಂದಿತೆ ದೇವ2 ಕುರುಡನಿಗೆ ದಾರಿಯನು ತೋರದೆ ಆತಗೆ ಮುನಿದುದರಿಗೆ ನೂಕಿದಡೆ ಅವನು ಏನು ಮಾಡುವನುಶಿರಕೆ ತಪ್ಪಾಗಿ ಗುರಿಯಿಡಲದು ಸರಳ ತಪ್ಪೆಅರಸನಾಳ ಕೊಂದಡೆ ಆರೇನು ಮಾಡುವರು 3 ಕುಣಿಸಿದರೆ ಆಡುವುದು ಬೊಂಬೆ ಸೂತ್ರಮುಖದಿಇನಿತುಂಟೆ ಕಪಟನಾಟಕ ಸೂತ್ರಧಾರಿಇನಿತಾಡಿಸಿದರಾಡುವೆ ಪಾಪ ಪುಣ್ಯಂಗಳಿಂದಎಣಿಕೆಗಾನಲ್ಲ ನೀನಲ್ಲದಿಲ್ಲ 4 ತಂದೆತಾಯಿಗಳು ತಮ್ಮ ಕಂದಗೆ ಸರ್ಪಮುಖದಿಂದ ಕಚ್ಚಿಸಲು ಆ ತಪ್ಪು ಕಂದನದೆಮುಂದರಿಯದಜ್ಞಾನಿಯೆಂದು ಕ್ಷಮಿಸೆಲ್ಲವನು ತಂದೆ ವೇಲಾಪುರದ ಆದಿಕೇಶವನೆ5
--------------
ಕನಕದಾಸ
ಪಾಪಾತ್ಮನಾನಲ್ಲ ಪಾಪವೆನಗಿನಿತಿಲ್ಲ ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ ಪ ಅಂದು ಭೃಗುಮುನಿಯೆದೆಯಲೊದೆಯಲವನಿಗೆ ಪಾಪ ಬಂದುದೇ ಮೂದಲಿಸಿ ಬೈದವನಿಗಾ ದೋಷವು ನಿಂದುದೇ ಹಣೆಯೊಡೆಯಲೆಸೆದ ಭೀಷ್ಮಂಗಘವು ಹೊಂದೀತೆ ಪಾಂಡವರ್ಗೆ ಕುಂದು ಬಂದೀತೆ ದೇವಾ 1 ವರದನಾಕಾರದೊಳಗುಷ್ಣಜಲ ಮೃತ್ತಿಕೆಯ ತರಲು ಕೈಸುಡಲು ಹಣೆಯನು ಟೊಣದು ಬೈದೇ ಮರಳಿ ನಾಚಿಕೆಯಿಲ್ಲದೆ ಚರಣಕ್ಕೆ ಪಾವುಗೆಯ ನಿರಿಸಿದಪರಾಧ ನಿನ್ನದೋ ಯೆನ್ನದೋ ದೇವಾ 2 ಕುರುಡನಿಗೆ ದಾರಿಯನು ತೋರುವಾಪ್ತನು ಮುಳಿದು ಜರಿದು ನೂಕಿದೊಡಾತನೇನ ಮಾಡುವನೂ ಗುರಿಯನಿಡುವವನು ತಪ್ಪೆಸೆಯೆ ಸರಳಿನದೇನು ಅರಸಾಳಕೊಂದಡವನೇನು ಮಾಡುವನೂ 3 ಕುಣಿಸಿದಂತಾಡುವುದು ಬೊಂಬೆಯು ಸ್ವತಂತ್ರವದ ಕಿನಿತುಂಟೆ ಕಪಟನಾಟಕ ಸೂತ್ರಧಾರೀ ಎನಿತಾಡಿಸಿದೊಡಾಡುವೆನು ಪಾಪಪುಣ್ಯವೆಂ ಬೆಣಿಕೆಗಾನಲ್ಲ ನೀನಲ್ಲದೆಲೆ ದೇವಾ4 ತಂದೆ ತಾಯ್ಗಳು ತಮ್ಮ ಕಂದನನು ಸರ್ಪಮುಖ ದಿಂದ ಕಚ್ಚಿಸಲು ತರಳನಲಿ ತಪ್ಪೇನೂ ಮುಂದರಿಯದಜ್ಞಾನಿಯೆಂದು ನೀಕ್ಷಮಿಸಿಕೋ ತಂದೆ ವೈಕುಂಠ ವೇಲಾಪುರಾಧೀಶಾ 5
--------------
ಬೇಲೂರು ವೈಕುಂಠದಾಸರು
ಪಾಲಿಸು ಮರೆಯದೆನ್ನ ಪಾಲ ತ್ರಿಜಗಮೋಹ ಮಾಲಕೌಸ್ತುಭ ಸತ್ಯಭಾಮಾ ಲೋಲ ಭಕ್ತಜನರ ಪ್ರೇಮ ಕಾಲಕಾಲದಿ ನಿಮ್ಮ ಭಜನಲೋಲಜನರೊಳಿರಿಸಿ ಎನ್ನ ಬಾಲನೆಂದು ಕರುಣದಾಳು ಕಾಳರಕ್ಕಸಕುಲಸಂಹಾರ ಪ ವಾರಿಧಿಯೊಳು ಮುಳುಗಿದ ವೇದಗಳ ತಂದು ವಾರಿಜಾಸನಗೊಪ್ಪಿಸಿದಿ ಸಾಧುಗಳ ಬಂಧು ವಾರಿಧಿಯೊಳು ವಾರಿಧಿಯ ಕಡೆದಿ ವಾರಿಧಿಯೊಳು ವಾಸನಾದಿ ವಾರಿಧಿಸುತೆಪತಿ ನೀನಾದಿ ವಾರಿಧಿಯನು ಬಂಧಿಸಿ ಮತ್ತೆ ವಾರಿಧಿಯ ಮಧ್ಯದ ಪುರವ ಸೂರೆಗೈದಾಪಾರಮಹಿಮ ಘೋರತಾಪದಿ ಬಿಡದೆ ದೇವ1 ಮಾಯಾಜಗವ ತುಂಬಿದಿ ಮಹರಮಣ ಹರಿಯೆ ಮಾಯದ ಮರುಣುಣಿಸಿದಿ ವೈಕುಂಠಪತಿಯೆ ಮಾಯೆಗೆ ಮಾಯೆಯೆನಿಸಿದಿ ಮಾಯೆಹರನಾದಿ ಮಾಯದಿಂ ಬಲಿಯನ್ನು ತುಳಿದಿ ಕಶ್ಯಪನ ಅಳಿದಿ ಮಾಯದ್ಹಿರಣ್ಯಕನ ಸೀಳಿದಿ ಮಾಯದಿಂ ಮಾಯೆಮೂಗು ಕುಯ್ಸಿದಿ ಮಾಯಮೃಗವನು ಮಾಯದಿಂ ಕೊಂದಿ ಮಾಯದೆನ್ನ ನೂಕದೆ ದೇವ 2 ಕಪಟಕೋಟಿಗಳನ್ನಳಿದಿ ಚಪಲಸುರಪನ ಕಪಟಗರುವವ ಮುರಿದಿ ಲಕುಮಿರಮಣ ಕಪಟನಾಟಕ ನೆನಿಸಿದಿ ಕಪಟಹರನಾದಿ ಕಪಟ ಅಸುವ ಸೆಳೆದಿ ಕಪಟ ಕಂಸನ ಶಿರವಮೆಟ್ಟಿದಿ ಕಪಟಿಗಳ ಮಹ ಕಪಟದಿಂ ಕೊಂದಿ ಶ್ರೀರಾಮ3
--------------
ರಾಮದಾಸರು
ಪಾಲಿಸೆನ್ನನು ಶ್ರೀ ಲೋಲ ಸದ್ಗುಣ ವಿಶಾಲ ನೀಲ ಪ. ಶ್ರೀರಮಣನೆ ನಿನ್ನ ಚರಣ ಸದ್ಗುಣಗಣ ವಾರಿಧಿಗಣನೆ ನೀನೆಂದು ಸಿರಿದೇವಿಯಂದು ಪಾರವಿಲ್ಲದ ತವ ಚರಿತ್ರೆಯ ಸಾರಗಳನೀಕ್ಷಿಸಲು ನಯನಾಂ- ಪಾದ ಹತಮಾಂಸಾರಕೇಶವ 1 ಶ್ರುತಿ ತತಿಗಳನೈದಸುರನ ಕೊಂದ ದಿತಿಜಗೋಸುಗ ನಗಧರನ ಕೃಪಹಾರ ಹಣನ ದಿತಿಜಹರ ಸುರತತಿಗೆ ರಾಜ್ಯವನತಿ ವಿಲಾಸದೊಳಿತ್ತ ಭಾರ್ಗವ ಬಾಧ್ಯನೆ ಅತುಳಹಯನೆ 2 ಸುರರು ನಿನ್ನಯ ಪಾದ ನಿರ್ಮಲ ರಜೋದ್ಧಾರಕರ ಬಿನ್ನಪವ ಕೇಳ್ ಗಜ ಚರ್ಮ ವಸ್ತ್ರ ಸಮಧ್ವಜಾಸನ ನಿನ್ನ ದಾಸರ ದಾಸರೊ- ಷಣ್ಮುಖಾತ್ಮಜ ಜಯನ ಗಿರಿಗನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಿಸೊ ಪತಿತಪಾವನ್ನಾ ನಿನ್ನ ಪಾಲಿಗೆ ಬಂದೆ ಮೋಹನ್ನಾ -ಆಹಾ ಪಾಲಾಬ್ಧಿಶಾಯಿ ಗೋಪಾಲರೊಡೆಯಾ ಲೋಕ ಪಾಲಕ ವಿನುತಾ ಗೋಪಾಲ ಫಾಲಾಕ್ಷನೆ ಪ ಬಂದೆನೊ ನಿನ್ನ ಹಂಬಲಿಸಿ ನಾನು ನೊಂದು ಸಂಸ್ಕøತಿಯಲ್ಲಿ ಸೂಸಿ ಈಸಿ ಮುಂದಣ ನೆಲೆಗಾಣೆ ಗುಣಿಸಿ ಏನೇ ನೆಂದು ಪೇಳಲೊ ವಿಸ್ತರಿಸಿ -ಆಹಾ ಮಂದರಧರ ನಿನ್ನ ಮಂದಿರದ ದಾಸಿ ಕಂದನು ನಾನೆಲೊ ಕಣ್ತೆರೆದು ನೋಡೊ 1 ಪೊಂದಿದೆ ಭಾರವವೊಹಿಸು ಪ್ರತಿ ಬಂಧಕವ ಪರಿಹರಿಸು ನಿನ ಗೊಂದಿಸುವೆ ಕೊಡು ಲೇಸು ಅತ್ಯಾ ನಂದದಲ್ಲಿ ಚಿತ್ತವಿಡಿಸು -ಆಹಾ ಇಂದಿರಾ ಮಂದಿರಾ ಸುಂದರ ಯೋಜನ ಗಂಧಿಯ ಬಸುರಿಲಿ ಬಂದ ಭವದೂರಾ 2 ನಿಂದ್ಯ ಕರ್ಮವು ಮಾಡಿದವನ ದೂತ ರಿಂದ ತರಿಸಿದೆ ತ್ರಿಭುವನಾ ಜಯ ವೆಂದು ಕೊಂಡಾಡಲು ಜವನಾ ಭೀತಿ ಯಿಂದ ಮಾಡಿದ ನಿನ್ನ ಸ್ತವನಾ -ಆಹ ಒಂದಾನಂತವಾಗಿ ದ್ವಂದ್ವಪಾಪಗಳಿಗೆ ನಿಂದಿರಬಲ್ಲವೆ ಸಂದರುಶನವಾಗೆ 3 ಕಂದುಕ ಪುಟಿ ಸೂತ ಬಳುಕಿ ದೈತ್ಯ ವೃಂದ ಮೋಹಕವಾಗಿ ಸಿಲುಕಿ ಸುರ ಸಂದೋಹಕೆ ನೀನೆ ಘಳಿಕಿ ನಿಜ ವೆಂದು ಮಾನವರಿಗೆ ಬಳಿಕಿ -ಆಹಾ ಎಂದೆಂದಿಗೆ ಸಿದ್ಧ್ದಾಗಂಧಮಾತುರ ಕಳೆ ಗುಂದದೆ ಮತಿ ಕೊಡು ನಂದಕಾನಂದ ಹಸ್ತನೆ 4 ಹಂದಿ ನಾಯಿ ನರಿ ರಾಸಾ ಜನ್ಮ ಬಂದರೆ ಎನಗದು ಹರುಷಾ ಬಹು ಮುಂದುಂಟು ರಹಸ್ಯಾ ಮನಸಾಪೇಕ್ಷಾ ಸಂದೇಹ ಮಾಡಿಸೊ ಶ್ರೀಶಾ -ಆಹಾ ಯೋನಿ ಸಂದೀದ ಕಾಲಕ್ಕು ಒಂದು ವಿಂಶತಿ ಮತ ಹೊಂದಿಸದಿರು ಹರಿ5 ಅಂಧಃಕಾರದೊಳೆನ್ನ ತಂದೆ ಇದ ರಿಂದ ನಿನಗೇನೊ ಮುಂದೆ ಲಾಭ ಬಂದಾದರೂ ಇಲ್ಲಾ ಇಂದೆ ಸುಖ ಸಾಂದ್ರ ಕಡಿಮೆನೊ ಮುಂದೆ -ಆಹಾ 6 ಇಂದಿರಾವರ ರಾಮ ಶಾಮಾ ರಾಮ ಚಂದ್ರ ಚತುರ ಸಾರ್ವಭೌಮಾ ದಿವ್ಯ ಸಿರಿ ಉರಪ್ರೇಮಾ ಮುಚ ಕುಂದ ಪಾಲಕ ನಿಸ್ಸೀಮಾ -ಆಹಾ ಇಂದ್ರಿಯಂಗಳು ತನು ಸಂಬಂಧದೆಡೆಗೆ ಪೋಪಾ ತೊಂದರೆ ಬಿಡಿಸೊ ಗೋವಿಂದ ಗೋವಳರಾಯಾ 7 ದುಂದುಭಿ ಭೇರಿಯ ರಭಸಾ ಮಹಾ ಬಂಧುರಾ ನೆರೆದ ವಿಶೇಷಾ ಮಂತ್ರಿ ಮಂದಿ ಪರಿವಾರ ಭೂಷಾ -ಆಹಾ ಬಿಂದು ಮಾತುರ ಇವು ಮುಂದಿನೈಶ್ವರ್ಯ ಸಿದ್ಧಾ ಕುಂದಗೊಡದೆ ಬೊಮ್ಮನಂದದಿ ಪಥತೋರಿ8 ಹಿಂದಣ ಬಲವನ್ನು ಕಾಣೆ ನಾನು ಅಂದು ನುಡಿದದ್ದು ಮಾಣೆ ಅನು ಬಂಧಗಳಿಗೆ ಕಾಮಧೇನೆ ಸತ್ಯ ಪತಿ ನೀನೆ -ಆಹಾ ನಂದನ ಮನೋಹಂಸಾ 9 ಸಂದಣೆ ತೊಲಗದೆಂಬಿಯಾ ಆಹಾ ಬಂದರೆ ಬರಲಿ ಎಂಬಿಯಾ ಇದೇ ಸಂದಲಿ ಅನುಗಾಲ ನ್ಯಾಯಾ ಅನು ಸಂಧಾನ ನಿನ್ನಲಿ ಪ್ರೀಯಾ -ಆಹಾ ಇಂಧನದೊಳು ವಾಯು ವ್ಯಾಪಿಸಿದದ ರಂದದಿ ಸರ್ವಾಂಗಾ ನಿಂದಿಹ ನಿರ್ದೋಷಾ 10 ಕಂದರ್ಪ ಕೋಟಿ ಲಾವಣ್ಯ ಅರ ವಿಂದ ನಯನ ಗುಣ ಗಣ್ಯ ದೀನ ಮಂದಾರ ಸತತ ತಾರುಣ್ಯ ಸರಿ ಬಂದಂತೆ ಮಾಡೊ ಕಾರುಣ್ಯ -ಆಹಾ ವಂದೆದೈವವು ನಾನೆಂದ ಮುರಾರಿಯ ಕೊಂದು ಬಿಸುಟಾಧೀರ ನಂದಕುಮಾರಕ11 ಇಂದ್ರಿಯಂಗಳ ಗಾತ್ರಾ ಪ್ರಾಣಾ ಸರ್ವ ಕುಂದಣ ಪುಟದಂತೆ ವರಣಾ ಕಂಬು ಕಂಧರ ಪೊಳಿಯಲಿ ವಚನಾ -ಆಹಾ ಸಂದರ್ಭವಾಗಿ ಏನೆಂದದೆ ಸಚ್ಛಾಸ್ತ್ರ ವೊಂದಿಬರಲಿ ಮುಕುಂದಾ ಮುದ್ದುರಂಗಾ12 ಅಂದಿಗೆ ಪೊಂಗೆಜ್ಜೆ ಮೆರೆಯೆ ತಂದೆ ಯೆಂದು ಕುಣಿಯೊ ಎನ್ನ ಧೊರಿಯೆ ವಾದ್ಯಾ ಧಿಂ ಧಿಂ ಧಿಮಿಕೆಂದು ಮೊರೆಯೆ ಮೇಲೆ ವೃಂದಾರಕ ಪುಷ್ಪಗರಿಯೆ -ಆಹಾ ಇಂದಿನ ಉತ್ಸಾಹ ಇಂದ್ರಾದ್ಯರು ಪೂತು ರೆಂದು ಪೊಗಳೆ ನಗೆಯಿಂದ ನೋಡುವದೆ 13 ಮಧ್ವರಮಣ ಪಾಪಿ ಭಕ್ತಿ ಜ್ಞಾನ ಸದ್ಧರ್ಮ ವೈರಾಗ್ಯಯುಕ್ತಿ ಕೊಡು ಭುಕ್ತಿ ಇತ್ತು ಮುದ್ರಧಾರನಾ ಮಾಡಿ ಮುಕ್ತಿ -ಆಹಾ ನಿರ್ಧಾರಮಾರ್ಗವ ಬದ್ಧದಿ ತೋರಯ್ಯಾ ಪತಿ 14 ಬಂಧೂರ ಕೀರ್ತಿ ಸಂಪನ್ನಾ ಕರಿ ಬಂಧ ವಿಮೋಚನ್ನ ನಾ ರಂದ ವರದ ಸುಪ್ರಸನ್ನಾ ಶತಾ ನಂದ ಕಾನನವಾಸಾ ಘನ್ನಾ -ಆಹಾ ಸಿಂಧುಜನಕನೆ ಪರಂಧಾಮತ್ರಯ ಸತ್ಯ ಸಂಧ ವಿಜಯವಿಠ್ಠಲೆಂದು ವದನ ಎನ್ನಾ15
--------------
ವಿಜಯದಾಸ
ಪಾಲಿಸೋ ಗೋಪಾಲಾ | ಪಾಲಿಸೋ ವೇಣುಗೋಪಾಲ | ಕರುಣಾಲೋಲ ಸದ್ಗುಣಶೀಲ ಪ ಸೆರಗ್ಹಿಡಿದು ಸತ್ವರಶೆಳಿಯ | ನಿನಾಗದಿರೆ ಕಾಯ್ವರಾರೋ ಒಡೆಯ | ಹಾ ಅನ್ನಲು ಹರುಷದಲ್ಯಕ್ಷಯಾಂಬರ ವಿತ್ತು | ಕರುಣೆಸೆಲೊ ಜಗದ್ಭರಿತ ನಿತ್ಯಾನಂದ 1 ಬಾಧಿಸಲ್ ಬಂದೇ ಸಂದೇಹವಿಲ್ಲದೆ ಕೊಂದೆ | (ಹಾ) ಯೋಗಾನಂದ ನರಸಿಂಹ ಗೋವಿಂದ ಮಹಾನುಭಾವ ಪಾದ ನೀ ಪಂಢರ ಪುರದಲಿನಿಂದು | 2 ವೇತಾಂಡರಕ್ಷಕ ಕೃಪಾಶಿಂಧು | (ಹಾ) ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ಪುಂಡರೀಕಾಕ್ಷ ಹೆನ್ನೆ ಪುರವಾಸ ಸರ್ವೇಶ 3
--------------
ಹೆನ್ನೆರಂಗದಾಸರು