ಒಟ್ಟು 1898 ಕಡೆಗಳಲ್ಲಿ , 111 ದಾಸರು , 1493 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂದ||ಗುರುವಾಸುದೇವರಂಘ್ರಿಸ್ಮರಣೆಗೆ ಸಂತೋಷ'ೀವ ಒಬ್ಬಟ್ಟಿನ ನುತಿವೆರಸಿದ ಕೀರ್ತನೆ ಪೇಳುವೆಹರುಷದಿ ಲಾಲಿಪುದು ಸುಜನರ್ಬಾಲೋಕ್ತಿಯನೂ1ಬೆಲ್ಲವು ಗೋಧಿಯು ತೊಗರಿಯುಒಳ್ಳೆಣ್ಣೆಯು ತುಪ್ಪವೆಂಬೀಯೈದ ನುತಿಯಲುಎಲ್ಲಾ ಲೋಕವ ನಿರ್'ುಸಿಚಲ್ಲಿದಭೂತಗಳು ತತ್ವಾರ್ಥಕ್ಕಾಸ್ಪದ'ಲ್ಲ 2ಹರುಷದಲಿದರೊಳು ಬೆರೆದಿಹಪರಮನು 'ಂಗಡಿಸಿ ದೂಸಿ ಮತ್ತೊಡಗೂಡಿಸಿಕರಗುತ ಪ್ರಮದರಿದರೊಳುನೆರೆಪೊಂದುವನೀಗ ಜೀವನಿದು ತತ್ವಾರ್ಥವೂ 3
--------------
ತಿಮ್ಮಪ್ಪದಾಸರು
ಕಂದನಿಗೆ ಕಾಲಿಲ್ಲವಮ್ಮ, ಪುಟ್ಟಿ-ಪ ದಂದಿಂದ ಈ ಅಂಬೆಗಾಲು ಬಿಡದಮ್ಮ ಅ.ಪ ಮಳೆ ಹೊಳೆ ಕತ್ತಲೊಳು ತರಳ ಮಗ ಬೆದರಿದನೊಕಳೆಯುಳ್ಳ ಮುಖಕೀಗ ಗ್ರಹ ಸೋಕಿತೋಎಳೆಯ ಬೆಳದಿಂಗಳೋಳೆತ್ತಣ ದೃಷ್ಟಿ ತಾಕಿತೊಲಲನೆ ಮೀಸಲ ಹಾಲು ಮೆರೆದೆರೆದ ಪರಿಯೊ 1 ಬೆಣ್ಣೆಯನು ಮೆಲ್ಲುತ ಬೆದರಿ ಬಾಯಾರಿದನೊಉಣ್ಣೆ ಪೂತನಿ ಮೊಲೆಯ ವಿಷ ಸೋಂಕಿತೋಅಣ್ಣ ಪಾಪಿಯ ಭಯಕೆ ಅಂಜಿ ಕಾಲಿಟ್ಟನೊಹೆಣ್ಣು ದೈತೇಯರ ಕಾಲಲಿ ಬಂದ ಸರಕೊ 2 ಧುರವಿಜಯ ಶ್ರೀಕೃಷ್ಣರಾಯಗೆ ನಿಮ್ಮಹರದೇರಂದವ ತೋರಬಂದ ಪರಿಯೋಧರೆಗಧಿಕ ವಿದ್ಯನಗರವಳಿತೆಂದು ಉದಯಗಿರಿಯಿಂದ ಬಂದ ಮುದ್ದು ಬಾಲಕೃಷ್ಣಗೆ 3
--------------
ವ್ಯಾಸರಾಯರು
ಕಂದನೆಂದೆನಿಸಿದ ಕೌಸಲ್ಯದೇವಿಗೆ ರಾಮ ಎನಬಾರದೆ ಇಂದಿರಾಪತಿ ರಾಮಚಂದ್ರಗೆ ಶ್ರೀರಘುರಾಮ ಎನಬಾರದೆ 1 ಶಿಶುವಾಗಿ ಅವತಾರ ಮಾಡಿದ ದಶರಥನಲಿ ರಾಮ ಎನಬಾರದೆ ಋಷಿಯಜ್ಞ ಸಲಹಿ ರಕ್ಕಸರನೆ ಕೊಂದ ಶ್ರೀರಾಮ ಎನಬಾರದೆ 2 ಸಾತ್ವಿಕ ದೈವವೆ ತಾಟಕಾಂತಕ ಶ್ರೀರಾಮ ಎನಬಾರದೆ 3 ಪಾದನಖವು ಸೋಕಿ ಪಾದನಾಶನವಾಗೆ ರಾಮ ಎನಬಾರದೆ ಶ್ರೀಪತಿ ಕರುಣದಿ ಶಿಲೆಯು ಸ್ತ್ರೀಯಾಗಲು ರಾಮ ಎನಬಾರದೆ 4 ಸಕಲ ಸದ್ಗುಣ ಪೋಗಿ ಮಿಥಿಲಾ ಪಟ್ಟಣದಿ ರಾಮ ಎನಬಾರದೆ ತ್ರಿಪುರ ಸಂಹಾರ ತ್ರಿನೇತ್ರನ ಧನುವೆತ್ತಿ ರಾಮ ಎನಬಾರದೆ 5 ಚೆಲ್ವೆ ಜಾನಕಿ ಮಲ್ಲಿಗೆಯ ವನಮಾಲೆಯು ರಾಮ ಎನಬಾರದೆ ವಲ್ಲಭಗ್ಹಾಕಲು ಫುಲ್ಲಲೋಚನೆ ಸೀತಾರಾಮ ಎನಬಾರದೆ 6 ಮಂಗಳ ಮಹಿಮೆ ಸೀತಾಂಗನೆ ಕೊರಳಿಗೆ ರಾಮ ಎನಬಾರದೆ ಮಾಂಗಲ್ಯ ಬಂಧನ ಮಾಡಿದ ಮಹಾತ್ಮನು ರಾಮ ಎನಬಾರದೆ 7 ಜಗದೇಕ ಸುಂದರಿ ಜಾನಕಿಯನೆ ಗೆದ್ದ ರಾಮ ಎನಬಾರದೆ ಜಗದೀಶ ಜನಕಗೆ ಜಾಮಾತನೆನಿಸಿದೆ ರಾಮ ಎನಬಾರದೆ 8 ಮುದ್ದು ಜಾನಕಿ ಕೂಡಿ ಅಯೋಧ್ಯಕೆ ಬರುತಿರೆ ರಾಮ ಎನಬಾರದೆ ಮಧ್ಯ ಮಾರ್ಗದಿ ಬಂದಿದ್ದನು ಭಾರ್ಗವ ರಾಮ ಎನಬಾರದೆ 9 ತನ್ನ ತಾನೇ ಗೆದ್ದು ಧನ್ಯನೆಂದೆನಿಸಿದಿ ರಾಮ ಎನಬಾರದೆ ಬ್ರಹ್ಮ ಶಂಕರರಿಂದಿನ್ನು ಉತ್ತಮನಾದ ರಾಮ ಎನಬಾರದೆ 10 ಪಟ್ಟಗಟ್ಟಲು ಪರಮೋತ್ಸವ ಕಾಲಕ್ಕೆ ರಾಮ ಎನಬಾರದೆ ದುಷ್ಟ ಕೈಕೆಯ ನಿಷ್ಠೂರ್ವೊಚನವ ಕೇಳಿದ ರಾಮ ಎನಬಾರದೆ 11 ಆ ಲಕ್ಷುಮಿಯ ಮಾತಲಕ್ಷ್ಯವ ಮಾಡದೆ ರಾಮ ಎನಬಾರದೆ ಲಕ್ಷ್ಮಣ ಲಕ್ಷ್ಮಿ ಕೂಡ್ವನವಾಸ ತಿರುಗಿದ ರಾಮ ಎನಬಾರದೆ 12 ಸತಿ ಆದೇನೆಂದಸುರೆಯ ರಾಮ ಎನಬಾರದೆ ನಾಶÀರಹಿತ ಕಿವಿ ನಾಸಿಕನಳಿಸಿದ ಶ್ರೀ ರಾಮ ಎನಬಾರದೆ 13 ದಂಡಕಾರಣ್ಯದಿ ಕಂಡು ಮಾರೀಚನ್ನ ರಾಮ ಎನಬಾರದೆ ಹಿಂದ್ಹೋಗೆ ರಾಘವ ಬಂದ ರಾವಣನಲ್ಲೆ ರಾಮ ಎನಬಾರದೆ 14 ಘಾತಕ ರಾವಣ ಜಗನ್ಮಾತೆನೊಯ್ಯಲು ರಾಮ ಎನಬಾರದೆ ಸೋತು ಜಟಾಯು ಯುದ್ಧವ ಮಾಡಿ ತಾ ಬೀಳಲು ರಾಮ ಎನಬಾರದೆ 15 ಒಲಿದು ಸುಗ್ರೀವಗೆ ವಾಲಿ ವಧೆಯ ಮಾಡಿ ರಾಮ ಎನಬಾರದೆ ವಾನರಗಳ ಕೂಡಿ ವಾರಿಧಿಕಟ್ಟಿದ ಶ್ರೀರಾಮ ಎನಬಾರದೆ16 ಲೋಕ ಮಾತೆಯ ಲಂಕಾನಾಥ ತಾ ಒಯ್ದಾಗ ರಾಮ ಎನಬಾರದೆ ಸೀತಾಕೃತಿಯನಿಟ್ಟಶೋಕ ವನದೊಳು ರಾಮ ಎನಬಾರದೆ 17 ಮಂಡೋದರಿಯ ಗಂಡನ್ನ ದಶಶಿರಗಳ ರಾಮ ಎನಬಾರದೆ ಚೆಂಡನಾಡಿದ ಕೋದಂಡ ಪಾಣಿಯ ಶ್ರೀರಾಮ ಎನಬಾರದೆ 18 ಪ್ರೀತಿಂದ್ವಿಭೀಷಣಗೆ ಪಟ್ಟವಗಟ್ಟಿ ರಾಮ ಎನಬಾರದೆ ಸಿಂಧು ದಾಟಿದ ರಾಮ ಎನಬಾರದೆ 19 ಆದಿ ಲಕ್ಷುಮಿ ಕೂಡಿ ಹೋದನಯೋಧ್ಯಕೆ ರಾಮ ಎನಬಾರದೆ ಶ್ರೀದೇವಿ ಸಹಿತ ಪಟ್ಟಣ ಹೊಕ್ಕ ಪಟ್ಟಾಭಿರಾಮ ಎನಬಾರದೆ20 ಭರತ ಸುಮಿತ್ರ ಕೌಸಲ್ಯಗೆ ಸುಖವಿಟ್ಟ ರಾಮ ಎನಬಾರದೆ ಮುಕ್ತಿದಾಯಕ ಮುಂದೆ ಬಿಡದೆ ಕಾಪಾಡುವ ರಾಮ ಎನಬಾರದೆ21 ಪತ್ನಿ ವಾರ್ತೆಯ ತಂದ ಪವನಸುತಗೆ ಒಲಿದ ರಾಮ ಎನಬಾರದೆ ಸತ್ಯ ಲೋಕದ ಆಧಿಪತ್ಯವ ಕೊಟ್ಟ ಶ್ರೀ ರಾಮ ಎನಬಾರದೆ22 ರಾಮ ರಾಮನು ಎಂದು ಕÀರೆಯೆ ಭಕ್ತಿಯ ನೋಡಿ ರಾಮ ಎನಬಾರದೆ ಪ್ರೇಮದಿ ತನ್ನ ನಿಜಧಾಮವ ಕೊಡುವೋನು ರಾಮ ಎನಬಾರದೆ 23 ಅರಸಾಗಯೋಧ್ಯವನಾಳಿ ಯದುಕುಲದಲಿ ರಾಮ ಎನಬಾರದೆ ಹರುಷದಿ ಭೀಮೇಶ ಕೃಷ್ಣನಾಗ್ಯುದಿಸಿದ ರಾಮ ಎನಬಾರದೆ 24
--------------
ಹರಪನಹಳ್ಳಿಭೀಮವ್ವ
ಕದರಿ ನರಹರಿ ವಿಠಲ | ಮುದದಿ ಪೊರೆ ಇವಳಾ ಪ ಬೆದರಿ ಬೆಂಡಾಗಿ ತವ | ಪದಕೆ ಬಿದ್ದಿಹಳಾ ಅ.ಪ. ಬನ್ನ ಬವಣೆಗಳೇ ?ಇನ್ನು ಪೇಕ್ಷಿಸದೆ ಕಾ | ರುಣ್ಯ ವೀಕ್ಷಣ ತೋರೊಪನ್ನಂಗಶಯ್ಯ ಹರಿ | ಮನುಜ ಮೃಗವೇಷಾ 1 ಸ್ವಾಪದಲಿ ನೀ ತೋರ್ದ | ಆಸನಿಯ ಅಂಕಿತವ ಪ್ರಾಪಿಸಿಹೆ ಇವಳಿಗೆ | ಶ್ರೀಪತಿಯೆ ಕೇಳೋ |ನೀ ಪಾಲಿಸುತ್ತಿವಳ | ತಾಪತ್ರಯಗಳ ಕಳೆಯೆಹೇ ಪಯೋಜ ಭವನುತ | ಪಾಪಾತಿದೂರಾ 2 ಪಾದ | ಪದ್ಮಗಳ ಭಜಿಪಾಮುಗ್ದೆಯನು ಪೊರೆಯೆಂದು | ಮಧ್ವಾಂತರಾತ್ಮಕನೆಬುದ್ಧಿ ಪೂರ್ವಕ ಬೇಡ್ವೆ | ಶ್ರದ್ಧೆ ಪತಿಸುತನೇ 3 ಐಹಿಕಾಮುಷ್ಮಿಕದ | ಬಹು ಪರಿಯ ಸುಖ ಸೌಖ್ಯಶ್ರೀಹರಿಯೆ ಕರುಣಿಸುತ | ಕಾಪಾಡೊ ಇವಳಾಸ್ನೇಹ ಸತ್ಸಂಗದಲಿ | ಪಾಲಿಸುತ ನೀನಾಗಿಮೋಹ ಮಮತೆಯ ಕಳೆದು | ಸಾಧನವ ಗೈಸೋ 4 ತರಳ ಪ್ರಹ್ಲಾದನನ | ಪೊರೆಯಲಿಲ್ಲವೆ ಹರಿಯೆವರ ಧ್ರುವನನ ಪಾಂಚಾಲಿ | ಅಜಮಿಳರ ಪೊರೆದೆಮರುತಾಂತರಾತ್ಮ ಗುರು | ಗೋವಿಂದ ವಿಠ್ಠಲನೆಪೊರೆಯ ಬೇಕಿವಳ ಬಹು | ಕಾರುಣ್ಯದಲಿ ಹರಿಯೇ 5
--------------
ಗುರುಗೋವಿಂದವಿಠಲರು
ಕದವ ತೆಗೆಯೆ ಸುಂದರಿವಯ್ಯಾರಿ ಮುತ್ತಿನ ಪ ಕಡಲ ಶಯನನೆ ಮಡದಿ ಹರುಷದಿ ಸಡಗರದಿ ಮುಂದಡಿ ಇಡುತ ನಿನ್ನ ಒಡೆಯ ಬಂದಿಹನೆಂದು ಹರುಷದಿ ಬೆಡಗು ಮಾಡದೆ ಬಿಡಿಯ ಮುತ್ತಿನ 1 ಯಾರು ನಿನ್ನಯ ಪೆಸರ ಏನೆಂದು ತಿಳಿಯದೆ ಹೇಗೆ ತೆಗೆಯಲಿ ಕದವಾ ಘೋರ ರಾತ್ರಿಯ ವೇಳೆಯಲಿ ಬಂ- ದೀಗ ಬಾಗಿಲ ಬಡಿಯ ನಿಂದಿರೆ ನಾರಿಯರು ಏನೆಂದು ಕೇಳ್ಪರು ದ್ವಾರ ಬಿಡುಬಿಡುತಲಿ ಸಾಗು ಮುಂದಕೆ2 ತೆಗೆಯಲೊಲ್ಲೆನು ಕದವ ಸಮರಾತ್ರಿ ವೇಳದಿ ರುಕ್ಮನ ಅನುಜೆ ಕೇಳೆ ಪೃಥ್ವಿಯೊಳು ಎನ್ನನು ಚಕ್ರಿ ಎನ್ನುತ ಪೇಳ್ವರೆ ಅರ್ಥಿವಚನಗಳನ್ನು ಕೇಳುತ ಸತ್ವರದಿ ನೀ ಬಂದು ಮುಂದಕೆ ಮುತ್ತಿನ ಕದತೆಗೆದು ಬೇಗನೆ ರತ್ನ ಪೀಠದಿ ಕುಳ್ಳಿರಿಸೆ ಹೊಸ ಮುತ್ತಿನರಗಿಣಿ ಸತ್ಯವಾಣಿಯೆ3 ಕೇಳಿ ಹರ್ಷಿತನಾದೆನು ನಿನ್ನಯ ಮಾತ ಕೇಳಿ ನಗುವರು ಜನರು ಹೇಳಿ ಕೇಳುವರಿಲ್ಲ ನಿನ್ನ ಮನಸಾರ ಮಾತುಗಳಾಡಲೇತಕೆ ಕು- ಲಾಲ ಭವನವಿದಲ್ಲ ಸುಮ್ಮನೆ ಹೇಳ ಕೇಳದೆ ಹೊರಡು ಮುಂದಕೆ 4 ಹೀಗೆ ನುಡಿಯುವದೇತಕೆ ಈಗೆನ್ನ ಮಾತಿಗೆ ಬೇಗದಿ ತೆಗೆ ಕದವ ನಾಗವೇಣಿಯೆ ನಗುತ ಪೇಳುವೆ ಬೇಗದಲಿ ಇನ್ನೊಂದು ನಾಮವ ಈಗ ಧರಣಿಧರನು ಬಂದಿಹೆ ಸಾಗರನ ಸುತೆ ಸರ್ಪವೇಣಿಯೆ 5 ಧರಣೀಧರ ನೀನಾದರೆ ಈ ಧರೆಯನೆಲ್ಲವ ಸಿರದ ಮೇಲಿರಿಸುವೆಯ ಸರ್ವ ಜನರಿಗೆ ಭಯವ ಪಡಿಸುವ ಉರಗರಾಜ ನೀನೆಂದು ತಿಳಿದೆನು ಇರುತ ಸರ್ಪಗಳೊಳಗೆ ನೀ ಬಲು ಹರುಷದಿಂದಲಿ ಸಾಗುಮುಂದಕೆ6 ಹರಿಣಾಕ್ಷಿ ಕೇಳೆ ನೀನು ಎನ್ನನು ಜನರು ಹರಿಯೆಂದು ಕರಿಯುವರು ಕರೆ ಕರೆಯ ಮಾಡದಲೆ ಬೇಗನೆ ವರ ಕನಕ ಕದ ತೆಗೆದು ಸುಮ್ಮನೆ ಇರಿಸು ಸುಖ ಸಾಮ್ರಾಜ್ಯ ಪೀಠವ ಹರುಷದಿಂ ಕುಳಿತೆಲ್ಲ ಪೇಳುವೆ 7 ಕೋತಿ ನೀನಹುದಾದರೆ ಮಾತುಗಳ್ಯಾಕೆ ಜಾತಿ ಕಪಿಗಳ ಕೂಡುತ ಪ್ರೀತಿಯಿಂದಲಿ ಮನಕೆ ಬಂದೆಡೆ ನೀತೆರಳುತಲಿ ಪೋಗು ಮುಂದಕೆ ಕೋತಿಗಳ ಗುಂಪಿದಲ್ಲ ತಿಳಿಮಹ- ರೂಪವತಿಯರಿರುವ ಸ್ಥಳವಿದು 8 ಪ್ರೀತಿಸತಿಯೆ ನೀ ಕೇಳೆ ನಿನ್ನೊಳು ಬಹು ಪ್ರೀತಿಯಿಂದಲಿ ಬಂದೆನು ಶ್ರೀಶನ ನುಡಿಕೇಳಿ ರುಕ್ಮಿಣಿ ಆತುರದಿ ಬಾಗಿಲನೆ ತೆಗೆಯುತ ನಾಥ ಕಮಲನಾಭ ವಿಠ್ಠಲನಿಗೆ ತಾನಮಿಸಿ ವಂದಿಸುತ ಭಕುತಿಯಲಿ ಬಾಗಿಲು ತೆಗೆದಳಾಗ ಭಕುತಿಯಲಿ ಶ್ರೀಶಗೆ ಬಾಗಿಲು ತೆಗೆದಳಾಗ9
--------------
ನಿಡಗುರುಕಿ ಜೀವೂಬಾಯಿ
ಕದವನಿಕ್ಕಿದ ಕಾರಣೇನೆ ಮುದದಿ ಕೇಳೆ ಮೋಹನಾಂಗಿ ಸದನಕ್ಕಾಗಿ ಬಂದೆ ನಾನು ಸರಸವ್ಯಾತಕೆ ಸುಂದರಾಗಿ ಪ ಇಂದು ನಾನು ಬಂದೆ ದ್ರೌಪದಿ ಬಂದು ಬಾಗಿಲನ್ಹಾಕುವೋದು ಚೆಂದವೇನೆ ಚಂದ್ರಮುಖಿಯೆ ಬಂದು ಬಾಗಿಲು ತೆಗೆಯೆ ನೀನು 1 ಅಂಧಕಾರ ರಾತ್ರಿಯಲಿ ಬಂದವರ್ಯಾರೆಂದು ಅರಿಯೆ ನಿಂದು ಗುರುತೇನೆಂದು ಪೇಳಲು ಬಂದು ಬಾಗಿಲು ತೆಗೆವೆ ನಾನು 2 ಕಂಡರಿಯೆ ಎನ್ನ ಪರಾಕ್ರಮ ಖಾಂಡವವನವ ದಹಿಸಿದೆನೆ ಗಾಂಡೀವಾರ್ಜುನರಾಯ ನಾನು 3 ಗಾಂಡೀವಾರ್ಜುನರಾಯನಾದರೆ ದುಂಡು ಬಳೆ ಕಂಕಣಗಳಿಟ್ಟು ಗೊಂಡ್ಯ ರಾಗಟೆ ಹೆರಳಲ್ಹಾಕಿ ನೀ ಷÀಂಡರೂಪವ ಧರಿಸ್ಹೋಗೊ 4 ಕ್ಷೀರಸಾಗರದಲ್ಲೆ ತಾ ಮಂ- ದರ ಪೊತ್ತಮೃತವನೆ ತಂದ ಧೀರ ಕೂರ್ಮಗೆ ಮೈದುನಾದಂಥ ಶೂರ ಫಲ್ಗುಣರಾಯ ನಾನೆ 5 ಫಲ್ಗುಣರಾಯನಾದರೇನೊ ಸದ್ಗುಣ ಸಂಪನ್ನ ಬಿರುದು ಭದ್ರದೇವಿಯ ಕದ್ದು ತರುವಾಗ ಬುದ್ಧಿ ದಾರಲ್ಲಿಟ್ಟೆದ್ದಿರ್ಹೇಳೊ 6 ಪರಮೇಶ್ವರನ ಒಲಿಸಿಕೊಂಡು ಪಾಶುಪತಾಸ್ತ್ರ ಪಡೆದೆ ನಾನು ಪರಮ ಆಪ್ತ ವರಾಹನ ಕರುಣಕ್ಕೆ ಪಾತ್ರನಾದಂಥ ಪಾರ್ಥರಾಯನೆ 7 ಪಾಶುಪತಾಸ್ತ್ರ ಪಡೆದರೇನು ದೇಶ- ದೇಶ್ಯಾತ್ರೆತೀರ್ಥ ಚರಿಸಿ ಆಸೆ ಬಿಡದೆ ಸನ್ಯಾಸಿಯಾದಂಥ ಮೋಸಗಾರನೆ ಮನೆಗೆ ಪೋಗು 8 ಕೋಟಿ ದೈತ್ಯರ ಕೊಂದೆ ಎನ್ನಸರಿ- ಸಾಟಿಯಾರೀ ಲೋಕದೊಳಗೆ ಆ- ರ್ಭಟದವತಾರ ನಾರಸಿಂಹನೆ ನೀಟಾದಭಕ್ತ ಕಿರೀಟಿಯಲ್ಲವೆ 9 ಕೋಟಿ ದೈತ್ಯರ ಕೊಂದು ಜೂಜಿ- ನಾಟ ಸೋತ್ವನ ತೋಟ ತಿರುಗಿ ಪಾಟುಬಟ್ಟು ವಿರಾಟನಲ್ಲೆ ನಾ(ನ?)ಟರಾಟಕೆ ನಿಂತಿರ್ಯಾಕೊ 10 ಮಾತಿಗೆ ಮಾತಾಡೋರೇನೆ ಅ- ಭೂತಳವ ಬೇಡಿದ್ವಾಮನಗೆ ದೂತ ನಾ ಶ್ವೇತೂವಾಹನನೆ 11 ಶ್ವೇತೂವಾಹನ ನಿಮ್ಮ ಸತಿಗೆ ನಾಥರಿದ್ದೂ ಅನಾಥಳಂತೆ ಅ- ಜ್ಞಾತದಲ್ಲಿ ಸುದೇಷ್ಣೆ ಸೇವೆಗೆ ದೂತಿಯಾದ ಪ್ರಖ್ಯಾತಿ ದಾರದೊ 12 ಹೆತ್ತತಾಯಿ ಶಿರವನಳಿದ ಕ್ಷತ್ರೇ- ರಂತಕ ಭಾರ್ಗವಗೆ ನಿತ್ಯದಲಿ ನಿಜಸೇವಕ ಭೀ- ಭತ್ಸುರಾಯ ನಾನಲ್ಲವೇನೆ 13 ಧೀರ ಭೀಭತ್ಸುರಾಯ ನಿನ್ನ ನಾರಿಯ ಸಭೆಗೆಳೆದು ತಂದು ಸೀರೆ ಸೆಳೆವಾಗ ಶೂರರಾದರೆ ದಾರದಾರಂತೆ ನೋಡಿರ್ಯಾಕೊ 14 ಕಾಮ ಮೋಹಗಳಿಂದ ನಿನ್ನಲ್ಲೆ ಪ್ರೇಮದಿ ನಾ ಬಂದೆನೀಗ ರಾಮರಾಜÉ್ಞಗೆ ನಿಜ ಸೇವಕ- ನಾದ ವಿಜಯರಾಯ ನಾನೆ 15 ವಿಜಯರಾಯ ನೀನ್ಹೌದೊ ತೇಜಿದಿ- ಗ್ವಿಜಯಕೆನುತದರ್ಹಿಂದೆ ಪೋಗಿ ಮಗನ ಕೈಯಿಂದ ವಧೆಯು ನೀತವೆ ಮೊದಲೆ ಪರಾಜಿತನಾದಿರ್ಯಾಕೊ 16 ಶ್ರೇಷ್ಠರೊಳು ಮಹಾಶ್ರೇಷ್ಠ ನಾನೆ ಅಸ್ತ್ರವಿದ್ಯದಲ್ಲಧಿಕನೆಂದು ಕೃಷ್ಣಮೂರುತಿ ಒಲಿಸಿಕೊಂಡಂಥ ಕೃಷ್ಣೆ ನಲ್ಲನೆ ಕೃಷ್ಣೆ ಕೇಳೆ 17 ಸಾರಥಿ ಆದ್ದರಿಂದ ಹಸ್ತಿನಾವತಿ ಪಟ್ಟಣಾಳ್ವುದು ಇಷ್ಟು ದಾರ ದಯದಿಂದ್ಹೇಳೊ 18 ಅಂಗನಾಮಣಿ ನಿನ್ನ ಅಂಗ- ಸಂಗ ಬಯಸಿ ನಾ ಬಂದೆನೀಗ ಅಂಗದ್ವಸ್ತ್ರವಬಿಟ್ಟ ಬೌದ್ಧಗೆ ಸಖನು ನಾ ಸವ್ಯಸಾಚಿ ಅಲ್ಲವೆ 19 ಭುಜ ಪರಾಕ್ರಮಿ ಸವ್ಯಸಾಚಿ ನಿನ್ನೆರಡು ಕೈದಡ್ಡಿನ್ಯಾತಕೇಳೊ ದ್ವಿಜರ ಸುತರ ತಂದುಕೊಡದೆ ಮೊದಲೆ ಮಾಡಿದ ಪ್ರತಿಜ್ಞವೇನೊ 20 ಅಂಜೋನಲ್ಲ ನಾನರಿಗಳಿಗೆ ಕಲಿ- ಭಂಜನ ಕಲ್ಕ್ಯಾವತಾರಗೆ ಕಂಜಚರಣಕ್ಕೆ ವಂದಿಸುವೆ ಧ- ನಂಜಯ ನಾನಲ್ಲವೇನೆ 21 ಸೈಯೊ ನೀ ಧನಂಜಯರೇಯ ಸುರಪತಿಗೆ ಪತ್ರವನೆ ಬರೆದು ಶರದ ಪಂಜರ ಕಟ್ಟಿ ನೀ ಕುಂ- ಜರವನಿಳಿಸಿದ ಕಾರಣೇನೊ 22 ನಿನ್ನ ಸರಿ ಮಾತಾಡುವೋರ ಧನ್ಯರ ನಾ ಕಾಣೆನೆಲ್ಲು ಳನ್ನು ಕೇಳಿದಿನ್ಯಾಕೆ ತಡೆವೆ 23 ದಶ ನಾಮಗಳ ಕೇಳಿ ದ್ರೌಪದಿ <ಈಔಓಖಿ ಜಿಚಿ
--------------
ಹರಪನಹಳ್ಳಿಭೀಮವ್ವ
ಕನ್ನಡಿಯ ಪೋಲುವೊ ಚೆನ್ನ ಕೆನ್ನೆಯ ತೋರು ಪ. ಚನ್ನ ಚೆಲುವೆ ಬಣ್ಣದರಿಶಿಣವ ಪೂಸುವೆನು ರನ್ನದ ಲಲಾಟಕೆ ಚನ್ನ ಕುಂಕುಮ ತಿಲಕ ಚಿನ್ನದಾ ಬೊಂಬೆ ಪದ್ಮಾವತಿ ನಿನಗೆ ತಿದ್ದುವೆನೆ ಚನ್ನಕೇಶವರಾಯ ನಿನ್ನ ಚೆಲುವಿಕೆಗೆ ಮೆಚ್ಚಿ ಬಂದಿಹೆನೆ 1 ಅರವಿಂದದಳನಯನೆ ಅಡವಿಯಲಿ ಯನ ಮೇಲೆ ಅರಸಿ ನೀ ಕಲ್ಲುಗಳ ಬೀಸಿದಾ ಕರಕೆ ಗಂಧ ಸರಸದಲಿ ಹಚ್ಚುವೆನೆ ಸರಸಿಜಾಕ್ಷಿಯೆ ಕೊರಳ ಹರುಷದಲಿ ತೋರೀಗ ನಿನ್ನ ಸರಸಿಜಾಕ್ಷಗೆ ಅರಸಿ ಪದ್ಮಿನಿಯೆ 2 ಸರ್ಪವೇಣಿಯೆ ನಿನಗೆ ಕಂದರ್ಪಪಿತ ಮಲ್ಲಿಕಾ ಪುಷ್ಪ ದಂಡೆಯನು ಮುಡಿಸುವೆನು ಕಮಲನಯನೆ ಸರ್ಪಶಯನನು ನಿನಗೆ ಅರ್ಪಿಸುವೆ ಸುತಾಂಬೂಲ ದರ್ಪವನು ಬಿಟ್ಟು ಕೈಕೊಳ್ಳೆ ವೀಳ್ಯವ ಅರಸಿ ಸರ್ವರಿಗೆ ಅಪ್ಪ ಶ್ರೀ ಶ್ರೀನಿವಾಸಾನೆಂದು ತಿಳಿಯೆ ದೇವಿ 3
--------------
ಸರಸ್ವತಿ ಬಾಯಿ
ಕಂಬು ಕಂಧರ ಸತತ ಬಿಡದೆ ರಕ್ಷಿ ಸಂಬೋಜೋಧ್ಭವನ ತಾತ ಪ ಜಂಭಾರಿ ವೈರಿಕುಲಾಂಬುಧಿ ಕುಂಭಜ ಕುಂಭಿಣಿಸುರ ನಿಕÀರುಂಬ ಪೋಷಕದೇವ ಅ.ಪ ನಳಿನಾಕ್ಷ ನರಕೇಸರಿ ನಂಬಿದೆ ನಿನ್ನ | ಶೌರಿ || ಸಿರಿ | ನಿಲಯ ನಿತ್ಯಾನಂದ ಎಲರುಣಿ ವರಶಾಯಿ ಕಲುಷಸಂಹಾರಕ ಜಲದರಿಪುವಿನ ತನಯಾನನುಜನ ಕಲಹದೊಳು ಜೈನಿದನ ತಾತನ ಕುಲವಿರೋಧಿಯ ಧ್ವಜನ ಜನಕಗೆ ಒಲಿದು ಬೆಂಬಲನಾದ ಕೇಶವ 1 ನಿಗಮ ರಕ್ಷಕ ಕೂರ್ಮಕೀಟ ಮಾನವ ಮೃಗವಟು ಪರಶುರಾಮ ಅಗಜೇಶ ಶರಕಾಲ | ನಗಪತಿ ವರದನೆ ಅ(ಗ)ಗಜರಾಜನ ಮಗಳಿಗೋಸುಗ ನಗುತ ಮಡದಿಯನಗಲಿ ಬಂದು ಜಗದಿ ಪೊತ್ತನ ನಗದಿ ನೆಲಸಿದ ತ್ರಿಗುಣ ವರ್ಜಿತ ಖಗವರೂಧನೆ 2 ಮಂದರೋದ್ಧರ ವಿಶಾಲಮಹಿಮನಾದ ಸಿಂಧೂರ ಪರಿಪಾಲ | ಕಂದರ್ಪಪಿತ ಶಾಮಸುಂರವಿಠಲನೆ ವಂದಿಸುವೆನು ಎನ್ನ | ಬಂಧನ ಬಿಡಿಸಯ್ಯ ಫಣಿ ಪತಿ ಪತಿ ವಿರೋಧಿ | ಪು ರಂದರಾರ್ಯರ ವೃಂದ ವಂದಿತ ನಂದ ಸುತ ಗೋವಿಂದ ಗೋಪತಿ 3
--------------
ಶಾಮಸುಂದರ ವಿಠಲ
ಕಮಲೆ ನಿನ್ನನು ಭಜಿಪೆ ಕಮನೀಯಗಾತ್ರೆ ಸುಮನಸರ ಜನನಿ ನಿನ್ನಮಲಪದ ತೋರೆ ಪ. ಲೋಕಸುಂದರಿ ಎನ್ನ ಶೋಕಗಳ ತರಿದು ಅವ ಏಕಮನಸು ನೀಡೆ ಶ್ರೀ ಕಳತ್ರನ ಪದದಿ ನೀ ಕರುಣಿಸಿದನೆ ನನಗನೇಕ ಜನ್ಮದಲಿ 1 ಪತಿ ಎಂದೆಂದಿಗೆ ತೊಲಗದಂದದಲಿ ನೀಡೆ ಒಂದನರಿಯೆನೆ ಈಗ ಬಂದೆನೇ ನಿನ್ನ ಬಳಿಗೆ ನಂದಕಂದನ ತೋರಿ ಕುಂದು ಪರಿಹರಿಸೆ 2 ಗೋಪಾಲಕೃಷ್ಣವಿಠ್ಠಲನ ಹೃದಯದಿ ತೋರಿ ಕಾಪಾಡೆ ಸತತದಲಿ ಕಾರುಣ್ಯಶಾಲಿ ನೀ ಪಯೋಬ್ಧಿಯೊಳ್ ಕೈಪಿಡಿದೆ ಶ್ರೀ ಹರಿಯ ರೂಪ ರೂಪಾಂತರದ ವ್ಯಾಪಾರ ತಿಳಿಸೆ 3
--------------
ಅಂಬಾಬಾಯಿ
ಕಮಲೋದ್ಭವನ ತಾಯೇ | ನಮಿಸುವೆನ್ನನು ಕಾಯೇ ಕಮಲಾಕ್ಷ ಹರಿ ಪ್ರೀಯೆ | ಚಿತ್ಪ್ರಕೃತೇ ಪ ಓಂಕಾರ ವಾಚ್ಯನ | ಶಂಕೆ ಇಲ್ಲದೆ ಭಜಿಸೇಸಂಖ್ಯೆ ರಹಿತ ರೂಪಳೇ |ಯಂಕಾಮಯೇ ತಂತಮು | ಗ್ರಂ ಕೃಣೋಮೆಂದು ಬಿಂಕದಿ ಶ್ರುತಿ ಪೇಳ್ವುದೇ 1 ಆಪಾಂಗ ವೀಕ್ಷಣ ಸೃಷ್ಠಿ | ವ್ಯಾಪಾರಂಗಳ ಹರಿಕೃಪೆಯಿಂದ - ಗೈಯ್ಯುವಳೇ |ಅಪವಿತ್ರರಿಗೆ ಯೋಗ್ಯ | ವಿಪರೀತ ಮತಿಯಿತ್ತು ಕುಪಥಾಂಧಂತದು ಪ್ರಾಪಕೇ 2 ಕಂಬು ಚಕ್ರಾಂಕಿತನ | ಅಂಬುಜಾಕ್ಷನ ಹೃದಯಾಂಬರದಲಿ - ತೋರಿಸೇ |ಇಂಬಿಟ್ಟು ಮನ ಬಯಕೆ | ತುಂಬಿಸುವುದು ಅನ್ಯಹಂಬಲ ನೀ ಕೊಡದೇ3 ಸನ್ನುತ | ಮೋಕ್ಷದಾಯಕ ಪರಮಾಕ್ಷರ ಶ್ರೀ ಹರಿಯ |ಈಕ್ಷಿಪ ಸುಖ ಕೊಡು | ಪೇಕ್ಷಿಸದಲೆ ತಾಯೆಲಕ್ಷಣವಂತೇ - ಗುಣವಂತೇ 4 ಕರವೀರ ಪುರದರಿಸಿ | ಶರದಿ ಸಂಭವೆ ಎನಿಸಿವರವ ನೀಡುತ ಪೊರೆವೇಗುರು ಗೋವಿಂದ ವಿಠ್ಠಲ | ಚರಣ ನೀರೇರುಹಕರುಣಿಸಿ ಸಲಹೇ - ಮಾತೇ 5
--------------
ಗುರುಗೋವಿಂದವಿಠಲರು
ಕರದೊಳಿನ ಮಣಿಗೆ ಕನ್ನಡಿಯೇತಕೆ ಪ ಸಿರಿ ರಮಣನಲತಿ ಸಂಶಯವೇತಕೆ ಅ.ಪ ಶರಧಿಯ ಜಲವನ್ನು ಪರಿಪರಿ ದೇಶಕೆ ಬಿರುಗಾಳಿಗಳಿಂದ ದೊರಕಿಸುವನು ಯಾರು ಧರೆಯೊಳು ನವನಾಗರಿಕರೆಂದರಿಯುವ ಪರಿ ತರವೆ ಯೋಚಿಸೆಲೊ 1 ಎಲ್ಲಾ ದೇಶಗಳ ವಿಚಾರ ನೋಟಗಳನ್ನು ಇಲ್ಲೇ ತೋರಿಸುವಂಥ ನಲ್ಲರು ಇರುವರು ಎಲ್ಲಿಂದ ಬಂದೆ ಎಲ್ಲಿಗೆ ಹೋಗುವೆ ಎಂದು ಬಲ್ಲರೇ ಇವರು ತಲ್ಲಣಿಸುತಿಹರು 2 ಘಾಸಿಯ ಮಾಡದೆ ಪೋಷಿಸುವನು ಯಾರು ಈಶನ ಕರುಣವು ಲೇಶ ತಪ್ಪಿದರೆ ಆ ಶಿಶುವಿನ ಜೀವದಾಶೆ ಎಂತಿಹುದೊ 3 ಎಲ್ಲಾ ನಾರಿಯರು ಗರ್ಭ ಧರಿಸುವರೆ ಎಲ್ಲಾ ಬೀಜಗಳಿಂದ ತರುಗಳು ಬರುವುದೆ ಬಲ್ಲವರುಂಟೆ ಇದಕೆ ಕಾರಣ ಲಕ್ಷ್ಮೀ ಪರಿ 4 ಭಿನ್ನದೇಶಗಳಲ್ಲಿ ಭಿನ್ನ ರೂಪಗಳುಳ್ಳ ಭಿನ್ನ ಗುಣಗಳುಳ್ಳ ಭಿನ್ನ ಜಂತುಗಳಿಗೆ ಭಿನ್ನ ಕಾಲಗಳಲ್ಲಿ ಅನ್ನವನೀಯಲು ಅನ್ಯರಿಗಳವೆ ಪ್ರಸನ್ನನಿಗಲ್ಲದೆ 5
--------------
ವಿದ್ಯಾಪ್ರಸನ್ನತೀರ್ಥರು
ಕರವ ಮುಗಿವೆ ಚರಣಕ್ಕೆರಗುವೆ ಭರದಿ ರಕ್ಷಿಸು ಬಿಡದೇ ಶ್ರೀ ಪ ಮಾನವ ಕಾಯ್ದೆಯೊ ಹೀನರ ಮದಗರ್ವವನೆಲ್ಲ ಅಳಿದೆಯೊ ಧ್ಯಾನ ಮಾಡುವ ಸ್ವಾನುಭವಿಗಳ ಸ್ಥಾನ ಹೃದಯವಾಸ ಶ್ರೀ 1 ಧ್ಯಾನಿಸಿವಂಥಾ ಗಜರಾಜನ ಕಾಯ್ದೆ ಮಾನಿನಿ ಅಹಲ್ಯೆಯ ಪಾದದೊಳುದ್ಧರಿಸಿದೆ ದೀನರಕ್ಷಕ ಬಿರುದ ಪೊತ್ತ ವಿ ಜ್ಞಾನದೊಳಗಿರಿಸೆನ್ನಾ 2 ಶಬರಿಯ ಭಕ್ತಿಗೆ ಮೆಚ್ಚನೀ ಬಂದೆಯೊ ಬದರಿಯ ಹಣ್ಣನೆ ಸವಿಸವಿ ದುಂಡೆಯೊ ವಿಭು ಪರಮಾನಂದಾ ಪ್ರಭೆಯೊಳಗಿರಿಸಿದೆ 3 ಸ್ವರ್ಣಕಶ್ಯಪನ ಸೊಕ್ಕಗಿಸಿದೆ ದೇವಾ ಮನ್ನಿಸಿ ಪಾಂಡವರೈವರ ಸಲಹುವಾ ಚನ್ನ ಗೋಪಿಯರ ಕೂಡಿ ಮನ್ನಣೆಕ್ರೀಡೆಯ ನಾಡಿ 4
--------------
ಶಾಂತಿಬಾಯಿ
ಕರಿಮುಖದ ಗಣಪತಿಯ ಚರಣಕ್ಕೆಯೆರಗಿ ಶಾರದೆಗೆ ಸೆರಗೊಡ್ಡಿ ವರವನು ವರವ ಬೇಡಿಕೊಂಡೆ ಸ್ಥಿರವಾದ ಭಕುತಿ ಕೊಡುಯೆಂದು 1 ವಾಯು ಬ್ರಹ್ಮ ಭಾರತಿಗೆ ಬಾಳ ಬೇಡಿಕೊಂಡ್ವೇ- ದವ್ಯಾಸರಿಗೆ ನಮೋಯೆಂಬೆ ನ- ಮೋಯೆಂದು ನಾರದರ ಪಾದಪದ್ಮಗಳಿಗೆರಗುವೆ 2 ಅತ್ರಿ ಅಂಗೀರಸ ವಸಿಷ್ಠಗೌತಮ ವಿಶ್ವಾ- ಮಿತ್ರ ಮಾರ್ಕಾಂಡೇಯ ಚ್ಯವನರು ಚ್ಯವನ ಭಾರದ್ವಾಜ ಬಕದಾಲ್ಭ್ಯರಿಗೆ ನಮಿಸುವೆ 3 ಪಂಡಿತ್ವಾಲ್ಮೀಕಿ ಕೌಂಡಿಣ್ಯ ಕೌಂಡಿಣ್ಯ ಅಗಸ್ತ್ಯಮುನಿ ಮರೀಚರಿಗೆ ನಾನು ನಮೋಯೆಂಬೆ4 ಶೇಷಗಿರಿವಾಸನ ಆಕಾಶನಳಿಯನೆ ವೆಂಕ- ಟೇಶ ನೀ ನಮ್ಮನೆ ದೈವ ಮನೆದೈ- ವ ಸಲಹೆನ್ನ ಪದ್ಮಾವತೀಶ ಪರಮಾತ್ಮ 5 ಮಂಗಳಾಂಗನೆ ನೀನು ಮಂಗಳಮಹಿಮನೆ ಮಂಗಳದೇವಿ ರಮಣನೆ ನೀನೆಮಗೆ ಜಯ ಮಂಗಳವ ಕೊಟ್ಟು ಸಲಹೆನ್ನ 6 ವಾಸುದೇವನೆ ನೀನು ವಾಸುಕಿಶಯನನೆ ವಾಸವಿಯ ರಥವ ನಡೆಸಿದೆ ನಡೆಸಿದಂಥ ಶ್ರೀನಿ- ವಾಸ ನೀನೆಮಗೆ ದಯಮಾಡು 7 ಎನ್ನಲ್ಲೆ ನೀನಿದ್ದು ನಿನ್ನಗುಣ ಬಹುರೂಪ- ವನ್ನು ತಿಳಿಸದಲೆ ಇರುವೋರೆ ಇರುವೋರೆ ನೀನು ಪ್ರ- ಸನ್ನನಾಗೆನಗೆ ದಯಮಾಡು 8 ಕಾಲ ಕಾಲಕೆ ನಿನ್ನ ನಾಮವನು ನಾಲಿಗೆ ಮ್ಯಾಲಿಟ್ಟು ನಿನ್ನ ನೆನೆವಂತೆ ನೆನೆವಂತೆ ಅನಿರುದ್ಧ 9 ಕಾಮಕ್ರೋಧವು ಮದ ಮಾತ್ಸರ್ಯ ಲೋಭಗಳು ಮೋಹ ಮಡುವಿನಲಿ ಮುಣುಗಿದೆ ಮುಣುಗಿದೆನೊ ಎನ್ನ ಕೈ ನೀನೆ ಪಿಡಿದೆತ್ತಿ ಕರೆದೊಯ್ಯೊ 10 ಐದು ಮಂದ್ಯೆನ್ನಲ್ಲಿ ಐದಾರೆ ಮಾರಾಯ ಬೈದರು ಬಿಡರೋ ಎನ್ನೀಗ ಎನ್ನೀಗ ಕಟ್ಟಿ ಕೊಂಡೊಯ್ದು ಹಾಕುವರೊ ಯಮನಲ್ಲಿ 11 ಆರು ಮಂದ್ಯರಿಗಳು ಕ್ರೂರ ಶತ್ರುಗಳುಂಟು ಘೋರಬಡಿಸುವರೊ ಅನುಗಾಲ ಅನುಗಾಲ ದುರ್ವಿಷಯ ತಾವೆನಗೆ ಕಲಿಸಿ ದಣಿಸೋರು 12 ಹತ್ತು ಮಂದಿ ಯೆನ್ನ ಸುತ್ತ ಮುತ್ತಿರುವರೊ ಕೂಪ ಭವದೊಳು ಭವದೊಳಗೆ ಬಳಲುವೆನು ಚಿತ್ತಕ್ಕೆ ತಂದು ದಯಮಾಡು 13 ಸಂಚಿತಾಗಾಮಿಗಳ ಮುಂಚೆ ದಹಿಸಿ ಈ ಪ್ರ- ಪಂಚವನು ಬಿಡಿಸೊ ಪರಮಾತ್ಮ ಪರಮಾತ್ಮ ನೀಯೆನ್ನ ವಂಚನಿಲ್ಲದಲೆ ಸಲಹೈಯ್ಯ 14 ಜ್ಞಾನ ಭಕ್ತಿ ಗಾನ ವೈರಾಗ್ಯ ಭಾಗ್ಯಗಳು ಜಾನಕಿರಮಣ ಜಗದೀಶ ಜಗದೀಶ ಜನಕನ ಜಾಮಾತ ನೀನೆ ತಿಳಿಸಯ್ಯ 15 ದ್ವಾಸುಪರುಣನಂತೆ ಈ ಶರೀರದೊಳಿದ್ದು ಏಸೇಸು ಜನ್ಮಕ್ಕಗಲದೆ ಅಗಲದಂತಿದ್ದು ಉ- ದಾಸೀನವ ಮಾಡೋದೊಳಿತಲ್ಲ 16 ಇಂದುಕುಲಜಾತ ನಿನ್ನೊ ್ಹಂದಿಕೊಂಡಿದ್ದು ಎಂದೆಂದಿಗು ಬಿಡದೆ ಗೆಳೆತನ ಗೆಳೆತನವಿದ್ದಲ್ಲಿ ಸಂದೇಹವ್ಯಾಕೊ ಸಲಹಲು 17 ಮುಕ್ತಿದಾಯಕ ನಿನ್ನ ಭಕ್ತರೇಸುಮಂದಿ ಹೆತ್ತಾಯಿಸುತರೇನವರೆಲ್ಲ ನಾ ಹುಟ್ಟಿದೆನೆ ಮತ್ತೆ ಮಲತಾಯಿ ಉದರದಿ 18 ಶ್ರೀಶನೆ ಕೇಳ್ ನಿನ್ನ ದಾಸರಂಗಳದಲ್ಲಿ ಬೀಸಿ ಬಿಸಾಕೊ ಎನ್ನನು ಎನ್ನ ಹರಿದಾಸರ ದಾಸತ್ವಯೆನಗೆ ಕೊಡಿಸಯ್ಯ 19 ಅಂಬರೀಷ್ವರದ ನಿನ್ನ ್ಹಂಬಲೆನಗಿರಲಯ್ಯ ಬಿಂಬ ಮೂರುತಿಯೆ ಬಿಡದೆನ್ನ ನಿನ್ನೂರಲ್ಲಿ ಇಂಬುಕೊಟ್ಟೆನ್ನ (ಅ)ಲ್ಲಿರಿಸಯ್ಯ 20 ಕಡಿದು ಹೊಡೆದು ಬಯ್ದು ಬಂದು ಕಾಲಿಂದೊದ್ದ- ರ್ಹಿಡಿಯದೆ ಅವರ ಅಪರಾಧ ಅಪರಾಧವೆಣಿಸದಿರೆ ನಡೆದರೊ ನಿನ್ನ ಪುರಕಾಗ 21 ಪುಟ್ಟ ಪ್ರಹ್ಲಾದ ಧ್ರುವ ಕೊಟ್ಟರೆಷ್ಟು ಭಾಗ್ಯ ಕಷ್ಟಕ್ಕೆ ಬಂದು ಒದಗಿದೆ ಒದಗಿ ಬಂದವರ ಆಪತ್ತು ಬಂಧನ ಬಿಡಿಸಿದೆ 22 ತನ್ನ ಮಗನ ಕರೆಯೆ ಎನ್ನ ಕರೆದನೆಂದು ನಿನ್ನ ದೂತರನು ಕಳಿಸಿದೆ ಕಳಿಸಿದ್ಯಜಮಿಳಗೆ ಮನ್ನಿಸಿ ಕೊಟ್ಟ್ಯೊ ನಿನಲೋಕ 23 ತಿರುಕ ತಂದವಲಕ್ಕಿ ಕರಕÀರನೆ ನೀಮುಕ್ಕಿ ದೊರೆತನವ ಕೊಟ್ಟು ದಾರಿದ್ರ್ಯ ದಾರಿದ್ರ್ಯ ಕಳೆದದ್ದು ಅರಿಕಿಲ್ಲವೇನೊ ಜನಕೆಲ್ಲ 24 ನಿಲ್ಲಬೇಕೆಂದಿಟ್ಟಿಕಲ್ಲು ಕೊಟ್ಟವಗೆ ಕೈ- ವಲ್ಯವನು ಕೊಟ್ಟ್ಯೋ ಕರುಣಾಳು ಕರುಣಾಳು ಬುಕ್ಕಿ ್ಹಟ್ಟು ಮಲ್ಲಿಗೆಯ ಮಾಲೆಗೊಲಿತೀಯೊ 25 ಕರೆದು ಕಂಸಗೆ ಕೊಟ್ಟು ಕೊಲಿಸಬಂದ- ಕ್ರೂರ(ಗೆ) ನದಿಯಲ್ಲೆ ನಿನ್ನ ನಿಜರೂಪ ನಿಜರೂಪ ತೋರಿದ್ದು ಇದುಯೇನು ನಿನ್ನ ಮಹಿಮೆಯು 26 ಗಂಧಕ್ಕೆ ಒಲಿದು ಕುಬ್ಜೆಯ ಡೊಂಕನೆ ತಿದ್ದಿ ಸುಂದರಿಯ ಮಾಡಿ ಸುಗುಣನೆ ಸುಗುಣನೆ ನೀನಾಕೆ- ಯಂಗಸಂಗ್ಯಾಕೆ ಬಯಸಿದಿ 27 ಕಲ್ಲಾದಹಲ್ಯೆಯನು ಕಡು ಚೆಲ್ವೆಯನು ಮಾಡಿ ಎಲ್ಲಿ ಮಲಗಿದ್ದ ಮುಚುಕುಂದ ಮುಚುಕಂದನ ಗುಹೆ- ಕೈವಲ್ಯ ಕೊಡಹೋದ್ಯೊ 28 ಮಗ್ಗವನೆ ಹಾಕಿ ಮಾರುಬಟ್ಟೆ ನೇದಿಲ್ಲ ರೊಕ್ಕವನೆ ಕೊಟ್ಟು ತರಲಿಲ್ಲ ತರಲಿಲ್ಲ ದ್ರೌಪದಿಗೆ
--------------
ಹರಪನಹಳ್ಳಿಭೀಮವ್ವ
ಕರಿಮುಖದ ಗಣಪತಿಯ ಚರಣಕ್ವಂದನೆ ಮಾಡಿ ಶಾರದೆಗೆ ಶಿರಬಾಗಿ ಬೇಡಿಕೊಂಬುವೆ ನಾನು ಒಲಿದೆನಗೆ ವರವ ಕೊಡುಯೆಂದು 1 ಭವ ನಾರಂದ ಸುಜನರ್ವಂದಿತ ವಾಯು ಮುದದಿಂದ ಮುದ್ದು ಮಾಲಕ್ಷ್ಮಿ ನಾರಾಯಣರ ಅಂಬುಜ ಪಾದಕ್ಕೆರಗಿ ನಮೋಯೆಂಬೆ 2 ಪದುಮನಾಭ ಹರಿಗೆ ನಿಜ ಭಕ್ತರಾದಂಥ ಬುಧ ಬೃಹಸ್ಪತಿಗಳ ಕಥೆಯ ಪೇಳುವೆ ನಾನು ಮುದದಿಂದ ಕೇಳಿ ಜನರೆಲ್ಲ3 ಇರುತಿದ್ದ ಬಡವ ಬ್ರಾಹ್ಮಣ ಒಂದು ಪಟ್ಟಣದಿ ಮಡದಿ ಮಕ್ಕಳು ನಾಲ್ಕು ಮಂದಿ ಸುತರು ಸೊಸೆಯರೊಡಗೂಡಿಕೊಂಡು ಸುಖದಿಂದ 4 ಒಬ್ಬೊಬ್ಬ ಸುತಗಿಬ್ಬಿಬ್ಬರು ಗಂಡಸು ಮಕ್ಕಳು ವಿಧ್ಯುಕ್ತದಿಂದ ಜಾವಳ ಜುಟ್ಟು ಉಪನಯನ ಶುದ್ಧಾತ್ಮರಾಗಿ ಇರುತಿಹರು 5 ಪ್ರಾತಃಕಾಲದೊಳೆದ್ದು ನಾಲ್ಕು ಮಂದಿ ಸುತರು ಗೋಪಾಳ ಜೋಳ ನಾಲ್ಕು ಸೇರು ಕಾಳು ತಂದ್ಹಾಕೋರು ಅರ್ಧಗ್ರಾಸವನು 6 ಮೂರು ಪಾವು ಹಿಟ್ಟು ಮುಂಜಾನೆಗೆ ಇಟ್ಟು ಗ್ರಾಸ ಮುದ್ದೆ ಅಂಬಲಿ ಕಾಲ ಕಳೆವೋರು 7 ಒಂದಾನೊಂದಿನದಲ್ಲಿ ಬಂದರಿಬ್ಬರು ದ್ವಿಜರು ಮಂದಿರದ ದ್ವಾರದಲಿ ನಿಂತು ಕೂಗುತಿರೆ ಬಂದಳೊಬ್ಬಿ ್ಹರಿಯ ಸೊಸೆ ತಾನು 8 ದಾರು ಬಂದವರು ನಿಮ್ಮ ನಾಮವೇನೆಂದೆನುತ ಬಾಗಿ ಶಿರಗಳನೆ ಚರಣಕ್ವಂದನೆ ಮಾಡಿ ಭಾಳ ಭಕ್ತಿಂದ ಕರೆದಳು 9 ದಾರಾದರೇನಮ್ಮ ಬಾಯಾರಿ ಬಳಲುತಲಿ ಮೂರು ನಿರಾಹಾರ ಮಾಡಿ ಬಂದೆವು ನಾವು ಆಹಾರ ನೀಡಿ ಕಳಿಸೆಂದ್ರು 10 ಭಿಕ್ಷಕೆ ಹೋದವರು ಈ ಕ್ಷಣದಿ ಬರುವೋರು ಅರೆಕ್ಷಣ ನೀವು ತಡೆದರೆ ಜೋಳದ ಭಕ್ಷ್ಯವನೆ ಮಾಡಿ ಬಡಿಸುವೆನು 11 ಹೊತ್ತು ಭಾಳಾಯಿತು ಹಸ್ತವು ನಮ್ಮೊ ್ಹಟ್ಟೆ ತುತ್ತನ್ನ ಹಾಕಿದರೆ ಈಗ ನಾವದನುಂಡು ತೃಪ್ತರಾಗ್ಹರಸಿ ನಡೆದೇವು 12 ಮಡಿವುಟ್ಟು ಮಾಡಿದೆನು ಮುಂಜಿಮನೆಗಳಿಗಡಿಗೆ ತಡೆಯದೆ ಸ್ನಾನಮಾಡಿ ಬನ್ನಿರೆಂದು ನುಡಿದಳು ಬ್ಯಾಗ ಪತಿವ್ರತೆ 13 ನಾಲ್ಕು ಭಕ್ಕರಿಯೊಳಗೆ ಎಂಟರ್ಧವನು ಮಾಡಿ ಎಂಟುಮಕ್ಕಳಿಗೆ ಬಡಿಸೋ ಗ್ರಾಸವನು ಸಂತೋಷದಿಂದ ಬಡಿಸುವೆನು 14 ಸ್ನಾನ ಸಂಧ್ಯಾನವ ಮಾಡಿ ಬಂದೇವೆನಲು ತಾನು ಎಡೆಮಾಡಿ ಎರಡೆರಡು ಭಕ್ಕರಿಯ ನೀಡಿದಳು ಭಾಳ ಭಕ್ತಿಂದೆ 15 ಬೆಣ್ಣೆ ಬೆಲ್ಲ ತುಪ್ಪ ಕರಣೆ ಕರಣೆ ಕೆನೆಮೊಸರು ನುಣ್ಣನೆ ತವ್ವೆ ಅರೆದಕೊಬ್ಬರಿ ಖಾರ ಉಣ್ಣಿರೆಂದ್ಹಾಕುತಿರಲಾಗ 16 ಸಡಗರದಲದನುಂಡು ಕುಡಿದು ಮ್ಯಾಲ್ ಮಜ್ಜಿಗೆಯ ಒಡೆದಡಿಕೆಯೆಲೆ ಕೊಟ್ಟು ಕೇಳುತ ನಿಮ್ಮ ನಡೆವೊ ನಾಮೇನು ಹೇಳೆಂದ್ಲು 17 ಇಂದುಸುತ ಸುರರ ಗುರುವೆಂದು ಪೇಳುವರ್ ನಮಗೆ ಬಂದೆವು ನಾವು ಬುಧ ಬೃಹಸ್ಪತಿಗಳು ಆ- ನಂದವಾಯಿತು ನಮಗೆಂದ್ರು 18 ಅನ್ನ ಬೇಕಾದರೆ ಅಡಿಗೆ ಒಲೆಗೋಡೆಯಲಿ ನ- ಮ್ಮನ್ನ ಬರೆದು ಪೂಜೆ ಮಾಡಿದರೀಗ ಅನ್ನವನು ನಾವು ಕೊಡುವೆವು 19 ಭಾಗ್ಯ ಬೇಕಾದರೆ ಬರೆದು ಪೆಟ್ಟಿಗೆಮ್ಯಾಲೆ ಭಾಳ ಭಕ್ತಿಂದ ಪೂಜೆ ಮಾಡಿದರೆ ಭಾಗ್ಯ ಕೊಡುವೆವೆಂದ್ಹೇಳಿ ನಡೆದರು 20 ಸುಣ್ಣಸಾರಣೆಮಾಡಿ ಬಣ್ಣ ಚಿತ್ರವ ಬರೆದು ಚೆನ್ನಾಗಿ ಬರೆದು ಬುಧ ಬೃಹಸ್ಪತಿಗಳನೆ ಮನ್ನಿಸಿ ಪೂಜಿಸಿದಳಾಗ 21 ಹಚ್ಚಿಟ್ಟು ಗಂಧಾಕ್ಷತೆ ಪುಷ್ಪಗಳ ಉತ್ರಾಣಿ ಅಕ್ಕಿ ಮಂತ್ರಾಕ್ಷತೆ ಮಾಡಿ ಭಕ್ತಿಂದೆ ಪೂಜಿಸಿದಳಾಗ 22 ಗೋಪಾಳಕ್ಕ್ಹೋದಲ್ಲಿ ಗೋಧಿ ಅಕ್ಕಿ ಬ್ಯಾಳೆ ಹಾಕುವರು ನಾಲ್ಕು ಬೀದಿಯಲಿ ಅದು ಗಂಟು ತಾವ್‍ಕಟ್ಟಿ ಹೊತ್ತರ್ಹೆಗಲಲ್ಲಿ 23 ಹಿಡಿಜೋಳ ಬೇಡಿದರೆ ಪಡಿಜೋಳ ಹಾಕುವರು ಬಡವರು ನೀವು ಬನ್ನಿರೆಂದು ಕರೆದು ಹಿಡಿಹಿಡಿ ರೊಕ್ಕ ಕೊಡುವೋರು 24 ಭರದಿಂದ ಬಂದಾಗ ಸುರುವಿದರು ಧಾನ್ಯವನು ಬರೆದಂಥ ಗೊಂಬೆ ನೋಡಿ ಕೇಳುತ ಅದರ ವಿವರವನು ಹೇಳಬೇಕೆನುತ 25 ಇವರು ಬುಧ ಬೃಹಸ್ಪತಿಗಳೆಂಬೊ ದೇವತೆಗಳು ಇವರು ಬಂದೆನ್ನ ಮನೆಯಲ್ಲೂಟವನುಂಡು ಒಲಿದ್ವರವ ಕೊಟ್ಟು ನಡೆದರು26 ಇಂಥÀವರ ಪುಣ್ಯದಿಂದೀ ಧಾನ್ಯ ದೊರಕಿದವು ನಿ ರಂತರದಿ ನಮ್ಮ ಮನೆಯಲ್ಲಿಟ್ಟವರನು ಸಂತೋಷದಲಿ ಪೂಜಿಸುವಣೆಂದ್ರು 27 ಭಾಳ ಅನ್ನವ ಮಾಡು ಜೋಳ ಭಕ್ಕರಿ ಮಾಡು ಬ್ಯಾಳೆಯ ತವ್ವೆ ಬೆಲ್ಲ ಪಲ್ಯವು ಬೆಣ್ಣೆ ಮಾಡಿ ನೈವೇದ್ಯಕ್ಕಿಡುಯೆಂದ್ರು&ಟಿbs
--------------
ಹರಪನಹಳ್ಳಿಭೀಮವ್ವ
ಕರಿಸು ಬೇಗಿಲ್ಲಿಗೆ ಹರಿಯೆ ನಿನ್ನವರ ಅರಸಿಕ ದೇಶದಿ ಬಳಲಿಕೊಂಡಿಹನ ಪ. ಸರ್ವಜ್ಞ ನಿನಗರಿಪುವದೇಸು ವಿವರ ಸರ್ವ ಪ್ರಕಾರದಿ ಕಾವೆ ನಿನ್ನವರ ಪೂರ್ವದಂದದಿ ಪರಿಚಾರಕ ಜನರ ಇರ್ವಲ್ಲಿ ತಂದು ಕೂಡಿಸು ದೇವ ಪ್ರವರ 1 ವೇಳೆ ವೇಳೆ ನಿನ್ನ ಪೂಜಾದಿಗಳನು ತಾಳ ಮೃದಂಗಾದಿ ಸನ್ನಹಗಳನು ಮೇಳೈಸಿ ಕೀರ್ತನೆಗೈವ ದಾಸನನು ನಾಳೆ ನಾಡದು ಎಂದು ತಾತ್ಸಾರ ಮಾಡದೆ 2 ಶಕ್ತಿಹೀನ ನಾನೆಂಬುದ ಬಲ್ಲೆ ನೀನು ಭಕ್ತವತ್ಸಲ ನೀನೆಂದರಿತು ನಂಬಿಹೆನು ನಿತ್ಯ ಚಿಂತನೆಯನು ತಪ್ಪಿಸು ಸುರಧೇನು ಶಕ್ತ ವೆಂಕಟರಾಜ ಸಂಶಯವಿನ್ನೇನು 3
--------------
ತುಪಾಕಿ ವೆಂಕಟರಮಣಾಚಾರ್ಯ