ಒಟ್ಟು 1125 ಕಡೆಗಳಲ್ಲಿ , 99 ದಾಸರು , 904 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿರುಪತಿ ವೆಂಕಟರಮಣ ನೀನು ಧರಣಿಯೊಳ್ಸರ್ವರಿಗಧಿಕ ತಿರುಪತಿ ವೇಂಕÀಟರಮಣ ಪ ಸ್ವಾಮಿ ಪುಷ್ಕರಿಣಿಯ ತಟದಿ ವಾಸ ಮಾಡಿಕೊಂಡಿರುವೆಯೊ ನೀನು | ಭೂಮಿಯೊಳಗೆಲ್ಲ ಸಾಧು ಸಜ್ಜನರು ನೇಮದಿಂದಲಿ ನಿನ್ನ ಸೇವಿಪರು 1 ಮಂಜುಗುಣಿಯ ಪುರದೊಳಗೆ ಬಂದು ಕಂಜಾಕ್ಷ ವರ ಚಕ್ರ ಶಂಖ ಮತ್ತೆ ಶರಚಾಪಗಳನ್ನೆತ್ತಿ ಮೆರೆದೀ 2 ಜಗಕೆಲ್ಲ ಶೇಷಾದ್ರಿಯಂಥ ಕ್ಷೇತ್ರವಿಲ್ಲೆಂದು ತೋರಿಸುತಿರುವಿ | ಖಗವರನನ್ನೇರಿ ತಿರುಗಿ ಬಂದು ತಿರುಪತಿ ಕ್ಷೇತ್ರದೊಳಿರುವಿ 3 ಪಾದ ಮುಟ್ಟದೆ ಜಾನುಗಳಿಂದ | ಬಂದು ಸಾಲಿಗ್ರಾಮದ ಮಾಲೆಯನ್ನು ಪಾದಕರ್ಪಿಸಿ ಸ್ತುತಿಸಿದರು ನಿನ್ನ 4 ಬಂದು ರಾಜೇಶ ಹಯಮುಖ ನಿನಗೆ | ಮಾಲೆ ಹಾಕುತ ಮುಂದೆ ನಿಂದಳು ಶಂಕೆಯಿಲ್ಲದೆ ನಮಿಸಿದಳು ಮುದದಿ 5
--------------
ವಿಶ್ವೇಂದ್ರತೀರ್ಥ
ತಿಳಿದು ವಿಚಾರಿಸು ವಿಶ್ವದಲ್ಲಿ ಹಲವು ಜೀವಿಗಳೊಂದೆ ಪ್ರಕಾರ ಚರಿಸುವದು ಪ ಇರವು ನೊಣ ಪೋದರೆ ಏನಾದರೂ ಕ್ಲೇಶ ಬರುವುದೇ ಪ್ರತ್ಯಕ್ಷ ನೋಡಿದರು ಭರದಿಂದ ಆಲಿಸು ದೇಹ ಮಾತುರ ಬ್ಯಾರೆ ಇರುವದಲ್ಲದೆ ಒಳಗೆ ಚೇತನಾಡುವದೊಂದೆ 1 ಕೂಡಿಕೊಂಡವು ತಮ್ಮತಮ್ಮೊಳಗೆ ಭೂತಗಳು ಆಡಲೇನದು ಪೂರ್ವದ ನಿರ್ಮಾಣ ನಾಡೊಳಾಗಿದ್ದನಿತೆ ಸಮ್ಮಂಧವಲ್ಲದೆ ಬೀಡು ತೊರದಾಮ್ಯಲೆ ಬಿಂಕವೆತ್ತಣದೊ 2 ಹರಿಮಾಯದಿಂದಲಿ ನಾನು ನನ್ನದು ಎಂಬ ಗರುವಿಕೆ ಪುಟ್ಟುವದು ಮೋಹ ಪೆಚ್ಚಿ ನಿರಯದೊಳಿಳಿಯದೆ ವಿಜಯವಿಠ್ಠಲನ ಸ್ಮರಣೆಯಲಿ ಕುಣಿದಾಡು ಎಲ್ಲ ಸಮನ ನೋಡು3
--------------
ವಿಜಯದಾಸ
ತೀರ್ಥಯಾತ್ರೆ ಎಂಬುದು ಇದೆ ನೋಡಿ ಪಾದ ಕೂಡಿ ಧ್ರುವ ಭ್ರೂಮಧ್ಯವೆಂಬುದಿದೆ ಕಾಶಿ ಬ್ರಹ್ಮಸುಖ ತುಳುಕುತಿದೆ ಸೂಸಿ ನೇಮದಿಂದಲಿ ನೋಡಲು ಧ್ಯಾನಿಸಿ ಕರ್ಮಪಾಶ ಹೋಯಿತು ಛೇದಿಸಿ 1 ತ್ರೀವೇಣಿ ಸಂಗಮ ಸುಕ್ಷೇತ್ರ ಜೀವ ಪ್ರಾಣ ಮಾಡಿತು ಪವಿತ್ರ ದಿವ್ಯ ದೇಹವಾಯಿತು ಸರ್ವಗಾತ್ರ ಭವಹಿಂಗಿ ಹೋಯಿತು ವಿಚಿತ್ರ 2 ಭ್ರಮರ ಗುಂಫ ಎಂಬುದು ಗಯಾ ನೇಮದಿಂದ ಕಂಡವಗ ವಿಜಯ ಪ್ರೇಮಭಾವೆಂಬುದು ಸರ್ವಕ್ರಿಯ ವರ್ಮದೋರಿತು ಗುರು ಪುಣ್ಯೋದಯ 3 ಪೃಥ್ವಿ ಪರ್ಯವಣಿದೆವೆ ನೋಡಿ ತತ್ವದೊಳೇಕತ್ವ ಸಮಗೂಡಿ ಹಿತತ್ವವೆಂಬ ದಯ ಮಾಡಿ ಕಥತ್ವವೆಂಬು ದೀಡಾಡಿ 4 ಕಣ್ಣ ದೋರಿ ಬಂತೆನಗ ತಾರ್ಕಣ್ಯ ಕಣ್ಣು ಕಂಡುಗೆಯಿತು ಧನ್ಯಧನ್ಯ ಚಿಣ್ಣ ಮಹಿಪತಿಗಿದೆ ಸರ್ವಪುಣ್ಯ ಇನ್ನೊಂದು ಪಥವ್ಯಾಕೆ ಅನ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತುಂಗ ಭುಜಂಗನ ಫಣಿಯಲಿ ಕುಣಿದನು ಪ ಮಂಗಳ ಮೂರುತಿ ರಂಗ ಶ್ರೀ ಕೃಷ್ಣನು ಅ.ಪ ಕಿಣಿ ಕಿಣಿ ತಾಳ ಝೇಂಕರಿಸುವ ತಂಬೂರಿ ಕಣ ಕಣವೆಂಬ ಸುನಾದ ಮೃದಂಗವ ಝಣಿ ಝಣಿಸುವ ಕಂಜರಿ ನಾದಗಳನು ಅನುಸರಿಸುತ ಧಿಕ್ಕಿಟತ ಧಿಕ್ಕಿಟ ಎಂದು 1 ತುಂಬಿ ತುಂಬುರು ಗಂಧರ್ವರು ಶಹನ ಅಠಾಣ ಶಂಕರಾಭರಣಗಳಿಂದ ಸೊಗಸಿನಿಂದಲಿ ಗುಣಗಾನವ ಮಾಡಲು ನಗಧರ ಕೃಷ್ಣನು ನಗು ಮೊಗದಿಂದಲಿ 2 ಪನ್ನಗ ಸತಿಯರು ಚಿನ್ನರ ತವಕದಿ ಸನ್ನುತಿಸುತ ಆರತಿಯ ಬೆಳಗುತಿರೆ ಉನ್ನತ ಗಗನದಿ ಸುಮನಸರೆಲ್ಲ ಪ್ರ ಸನ್ನ ಹರಿಗೆ ಸುಮಮಳೆಗರೆಯುತಲಿರೆ3
--------------
ವಿದ್ಯಾಪ್ರಸನ್ನತೀರ್ಥರು
ತುಂಗಭದ್ರೆ ಸುತರಂಗಿಣಿ ತೀರಗನ್ಯಾರೇ ಪೇಳಮ್ಮಯ್ಯ ಪ ಮಂಗಳ ಮಹಿಮ ಶುಭಾಂಗ ಮೂರುತಿ | ಶ್ರೀ ಹರಿಹರ ಇವ ಕಾಣಮ್ಮ ಅ.ಪ. ಬಹು ಕಂಟಕಿ ಆ ಗುಹನ ತಪಸಿಗೆ | ಮೆಚ್ಚಿದ ಹರ ನೋಡಮ್ಮಮ್ಮ |ಅಹಿ ಭೂಷಣ ತಾ ವರವನು ಕೊಟ್ಟನು | ಬಹು ಬೇಗನೆ ನೋಡಮ್ಮಮ್ಮ|ವಿಹಗವಾಹ ಹರಿ ಮತ್ತೆ ರುದ್ರನಿಂ | ಇವನ ಜೇಯ ನೋಡಮ್ಮಮ್ಮ |ಮಹಿಯೊಳು ಸುರರಾಹವ ಕೆಡಸುತ | ಬಹು ಹಿಂಸಕ ನೋಡಮ್ಮಮ್ಮ 1 ಸುರಲೋಕಕು ಈ ಅಸುರನ ಬಾಧೆಯು | ತಟ್ಟಿತು ನೋಡಮ್ಮಮ್ಮ |ಸುರ ಭೂಸುರರೆಲ್ಲರು ಮೊರೆಯಿಟ್ಟರು | ಹರಿಯಲಿ ನೋಡಮ್ಮಮ್ಮ |ಸಿರಿಯರಸನು ತಾನಭಯವನಿತ್ತವರನು | ಕಳುಹಿದ ನೋಡಮ್ಮಮ್ಮ | ಕರುಣಾಕರ ತಾ ಹರಿಹರ ರೂಪದಿ | ದುರುಳನ ತರೆದ ನೋಡಮ್ಮಮ್ಮ 2 ಕೃತ್ತಿವಾಸ ತಾ ನಿತ್ತ ವರವ ಹರಿ | ಪಾಲಿಸಿದನು ನೋಡಮ್ಮಮ್ಮ | ದಿತಿಸುತನಾಯುವು ದಶಶತಕಳೆಯಲು | ವತ್ತಿದ ಕೆಳಗವನಮ್ಮಮ್ಮ |ಹಿತದಿಂದಲಿ ತಾ ಭಕುತರ ಪೊರೆಯುವ | ಹರಿಹರನ ನೋಡಮ್ಮಮ್ಮ | ದೈತ್ಯನ ಪೆಸರಿಲಿ ಪಾವನವಾಯಿತು | ಈ ಕ್ಷೇತ್ರವು ಕಾಣಮ್ಮಮ್ಮ 3 ದಕ್ಷಿಣ ಪಾಶ್ರ್ವದಿ ಅಭಯ ಹಸ್ತ | ತ್ರಿಶೂಲ ಧರನ ನೋಡಮ್ಮಮ್ಮ | ಅಕ್ಷಿಯ ಮಾನಿಯು ದಕ್ಷಿಣ ಶಿರದಲಿ | ಮೆರೆಯುವನು ನೋಡಮ್ಮಮ್ಮ | ದಕ್ಷಸುತೆಯು ತಾ ವಿರೂಪಾಕ್ಷನ | ಸೇವಿಪಳೂ ನೋಡಮ್ಮಮ್ಮ |ಪಕ್ಷಿವಾಹಗೆ ತಾನರ ಮೈಯ್ಯಾದನು | ತ್ರ್ಯಕ್ಷನು ಕಾಣಮ್ಮಮ್ಮ 4 ಕಂಬು | ಧರನಾ ನೋಡಮ್ಮಮ್ಮ ಲಕ್ಷ್ಮೀವನಿತೆಯು ಕಾಮನ ಜನಕನ | ಸೇವಿಪಳೂ ನೋಡಮ್ಮಮ್ಮ ಶುಮಲಾಂಗ ವನಮಾಲೆಗಳನು | ಧರಿಸಿಹ ನೋಡಮ್ಮಮ್ಮ |ಸಾಮಸನ್ಮುತ ಗುಣಧಾಮನ ಲೀಲೆ | ಇದೆಲ್ಲವು ಕಾಣಮ್ಮಮ್ಮ 5 ಕ್ರೋಶ ಪಂಚ ನಾಲ್ಕಾರದಿ ಮೀಸಲು | ಸುಕ್ಷೇತ್ರವ ನೋಡಮ್ಮಮ್ಮ | ಭಾಸಿಸುವವು ಇಲ್ಲೆಕಾದಶ ವರ | ತೀರ್ಥಂಗಳು ನೋಡಮ್ಮಮ್ಮ | ಈ ಸುಕ್ಷೇತ್ರವು ಆ ಮಹಕಾಶಿಗೆ | ಸಮವೆನಿಸಿದೆ ನೋಡಮ್ಮಮ್ಮ |ಅಸಮ ಮಹಿಮ ಹರಿ ಅಸುರಗೆ ಕೊಟ್ಟನು | ಈ ಪರಿವರ ಕಾಣಮ್ಮಮ |6| ಕೃತಿ ವಿಧಿ ಜನಕನಿಗೂ | ಭೇದವೆ ಸರಿ ಕೇಳಮ್ಮಮ್ಮ ಮೋದಮಯ ಗುರು ಗೋವಿಂದ ವಿಠಲನ | ಲೀಲೆಗಳಿವು ಕಾಣಮ್ಮಮ್ಮ 7
--------------
ಗುರುಗೋವಿಂದವಿಠಲರು
ತುತಿಸಲೆನ್ನೊಶವೆ ನಿನ್ನ ಶ್ರೀ ಗುರುರನ್ನ ಪ ತುತಿಸಲೆನ್ನೊಶವೆ ನಿ -ನ್ನತುಳ ಮಹಿಮ ಮಹಾ ಮತಿವಂತ ಜನರು ಸು - ಮತಿಗೆ ಸಿಲ್ಕದ ನಿನ್ನ ಅ.ಪ ಸ್ಮರಿಪ ಜನರ ಸುರ ತರು ಪಾಪಕಾಂತಾರ ನರ ಸಮ ಸಜ್ಜನ | ಶರಜನಿಚಯ ದಿನ ಪಾದ | ಸರಸಿಜ ಭಜಿಸುವ ಪರಮ ಭಕ್ತರ ಕುಮುದ | ವರ ನಿಚಯಕೆ ಸುಧಾ - ಪರಮ ಕರುಣಿಯು ಎಂದು ನಿನ್ನಯ ಪಾದ ಮೊರೆಯ ಪೊಕ್ಕೇನೊ ನಾನಿಂದು ನೀನೆ ಎನ್ನ ಮೊರೆಯ ಲಾಲಿಸು ಎಂದು ಬಿನ್ನೈಸಿದೆ ಪರಮಕೃಪಾಕರ ಪೊರೆಯೊ ಅನಾಥ ಬಂಧೂ 1 ದಯಕರ ನಿಜ - ಭಕ್ತಾ | ಮಯ ಹರ ಸುಖಸಾರಾ ಶ್ರಯವಾಗಿ ಸಂತತ | ನಯದಿಂದ ನಿಜಜನ ಭಯಕರ ಭವಹರ | ಜಯ ಜಯ ಜಯದಾತ ಜಯ ವಿಜಯಾತ್ಮಜ | ಜಯಕುಲ ದಿಗ್ವಿಜಯ ಜಯ ಕಾಲದಲಿ ನಿಜ | ಹಯಗ್ರೀವಮೂರ್ತಿಯ ದಯದಿಳೆಯೊಳು ಜನಿಸೀ | ಜನ್ಮದಿ ಮೂರ್ತಿ ತ್ರಯ ಪಾದವನೆ ಭಜಿಸಿ - ಧರಿಯೊಳು ಕ್ಷ - ತ್ರಿಯ ಕುಲದೊಳು ಜನಿಸಿ ಯುಧಿ ಭೀಮ - ಶಯನನಿಂದ ಹತನಾಗ್ಯಭüಯ ಸ್ಥಾನವನೆ ಬಯಸಿ 2 ಭೂಸುರ ವರನಾಗಿ | ಕಾಶ್ಯಪಿ ಸ್ಥಳದಲ್ಲಿ ವಾಸಮಾಡಿ ಶಿರಿ ವ್ಯಾಸ ಕೃಷ್ಣ ಪಾದೋ - ಪಾಸನ ಮಾಡುತ | ವ್ಯಾಸಮುನಿ ಆಗಿ ಭಾರ | ತೀಶ ಪ್ರತೀಕವ ವಾಸವಾಸರ ಸ್ಥಾ - ಪಿಸಿ ಯಂತ್ರೋದ್ಧಾರಾ ಶ್ರೀಶ ಮಧ್ವಮುನಿಯಾ - ಸ್ಥಾಪಿಸಿ ಅಲ್ಲಿ ವಾಸವ ಮಾಡಿ ತಾನೂ - ಪುರಂದರ ದಾಸರಾಯರಿಗೆ ಇನ್ನು - ಸುಮಂತ್ರೋಪ - ಅನುದಿನ ವಾಸಮಾಡಿದಿ ನೀನು 3 ಕ್ಷೋಣಿತಳದಿ ಕುಂಭ | ಕೋಣನಗರದಲ್ಲಿ ಕ್ಷೋಣಿದೆವೋತ್ತುಮ | ವೀಣವೆಂಕಟನಾಮಾ - ಕ್ಷೀಣಬಲ ಙÁ್ಞನ ತಾಣ | ಗೊಡದೆ ನಿನ್ನ ಜಾಣತನದಿ ನರ | ಮಾಣವಕನಂತೆ ಪಾಣಿ ಭಿಕ್ಷಾನ್ನವಾ | ಟಾಣಿ ಮಾಡುತ ನೀನು ಕ್ಷೋಣಿಪ ಮನಿಗೆ ಬಾರೇ - ನಿನ್ನ ವೀ - ಶುಭ ಲ - ಕ್ಷಣ ಬ್ಯಾರೆ ಬ್ಯಾರೇ ಇರಲು ನಿನ್ನ ಕ್ಷಣ ಬಿಡದಲೆ ಜನ ಮಣಿದು ನಮಿಸುತಿರೆ 4 ಜನಪ ನಿನ್ನಯ ಮಹ | ಘನ ಚರ್ಯವನೆ ನೋಡಿ ದಿನದಿನದಲಿ ಬಹು | ವಿನಯಪೂರ್ವಕ ಪಾದ ವನಜ ಸೇವಕÀನಾಗಿ |ತನು ಮನ ಧನ ಧಾನ್ಯ ಘನ ನಿನಗರ್ಪಿಸಿ | ನಿನ ಸಂಗವಾಗಲೂ ಜನುಮ ಇಲ್ಲೆಂಬುವ | ಘನ ಙÁ್ಞನ ಭಕುತಿಯ ಮನದಲ್ಲಿ ಯೈದುತಲೆ - ತಾನು ನಿತ್ಯ ಅನುಮಾನ ಮಾಡದಲೆ - ಇರಲು ಅವನ ಘನಸುಖ ರೂಪದಲ್ಲೆ - ಇರುವಂತೆ ಮನಪೂರ್ತಿ ಕರುಣಸಿದ್ಯನುಪಮ ಚರಿತಲ್ಲೆ 5 ಸತ್ಯನಾಮಕ ಸುತ | ಮೃತ್ಯುನಿಂದಲಿ ತಾನು ಸತ್ತುಪೋದ ವಾರ್ತೆ | ಬಿತ್ತರಿಸೆ ಲೋಕದಿ ಉತ್ತುಮ ನೀನಾಗ | ಸತ್ಯ ಸಂಕಲ್ಪವ ಗೊತ್ತು ತಿಳಿದು ಅವನ | ಮತ್ತೆ ಈ ಲೋಕಕ್ಕೆ ತತ್ಕಾಲದಲಿ ತಂದು | ಉತ್ತುಮ ಭಾರ್ಯಳ ಜತ್ತು ಮಾಡಿದ ವಾರ್ತೆಯಾ - ಕೇಳೀ ಶೈವ - ರುತ್ತುಮನಾತ್ಮಜನಾ - ಇವಾನಂತೆ ಸತ್ಯವೆಂದು ಪೇಳಿ ಮತ್ತೆ ಪೊರೆದ್ಯೊ ಜೀಯಾ 6 ಇನತೆ ಮೊದಲಾದ | ಫನತರ ನಿನ ಮಹಿಮೆ ನಿತ್ಯ | ಅನಿಮಿಷ ಮುನಿಜನ ಮನಕೆ ಸಿಲ್ಕದೆ ವೃಂದಾ - |ವನದಲಿ ನೀ ನಿಂತು ವನುತೆ ಸುತ ಧನ | ಧಾನ್ಯ ಮೊದಲಾದ ಅನುದಿನ ಸಲಿಸುತ್ತ ಜನರ ಪಾಲಿಸೊಗೋಸುಗಾ - ಹರಿಯು ನಿನಗೆ ಜನುಮಾವನಿತ್ತನೀಗ - ಅದಕೆ ನಿನ್ನ ಅನುದಿನ ತವಪಾದ ವನಜ ನಂಬಿದೆ ವೇಗ 7 ರಕ್ಷಿಸೋ ನೀ ಎನ್ನ | ಲಕ್ಷ್ಮೀರಮಣ ದೂತ ಮೋಕ್ಷಾದಿ ಪುರುಷಾರ್ಥ - | ಪೇಕ್ಷ ಪ್ರದಾಯಕ ಲಕ್ಷ ಜನರೊಳೆನ್ನ | ವೀಕ್ಷಿಸಿ ಪರಜನಾ - ಪೇಕ್ಷಾ ಮಾಡದಂತೆ | ಲಕ್ಷ್ಮೀಶ ನಾತ್ಮಜ ಭಿಕ್ಷಾನ್ನ ಬೇಡೋದು | ಲಕ್ಷಣವೇನಿದು - ಪೇಕ್ಷಾ ಮಾಡದೆ ನೀ ಎನ್ನಾ - ಕಾಯಲಿಬೇಕು ವಿಕ್ಷೀಸಿ ಙÁ್ಞನವನ್ನಾ - ಭಕುತಿ ಇತ್ತು - ರಕ್ಷಿಸು ಎಂದೆ ನಿನ್ನಾ ಇದೆ ಒಂದಾ ಪÉೀಕ್ಷೆ ಪೂರ್ತಿಸೊ ಕಲ್ಪವೃಕ್ಷ ನೀ ಎನಗೆ ಇನ್ನ 8 ಕಿಟಿಜ ಸರಿದ್ವರ | ತಟ ಕೃತ ಮಂದಿರ ಚಟುಲ ಮಧ್ವಮುನಿ | ಪಟು ಶಾಸ್ತ್ರದಿಂದಲಿ ಕುಟಿಲ ದುರ್ವಾದಿಗ | ಳ್ಥಟನೆ ಮುರಿದು ನಿಜ ಘಟನೆ ಮಾಡಿ ಪ್ರತಿ | ಭಟರಿಲ್ಲದಲೆ ನೀನು ಧಿಟನಾಗಿ ತ್ರಿಜಗದಿ - ಮೆರೆಯುತ ಶಠÀಜನರನು ತ್ವರದಿ - ಮರಿದು ಙÁ್ಞನಿ ಕಟಕ ಸುಪಾಲನದಿ ಪಟೋ ಎನಿಸಿ ಧಿಟಗುರು ಜಗನ್ನಾಥ ವಿಠಲನ್ನ ಭಜಿಸಿದೆ 9
--------------
ಗುರುಜಗನ್ನಾಥದಾಸರು
ತುಳಸಿ ಮಧ್ಯದಿ ಇರುವ ಕೃಷ್ಣನಬಳಸಿ ನೋಡುವ ಬನ್ನಿರೆ ಪ ಗೊಲ್ಲ ಸತಿಯರ ಗಲ್ಲ ಪಿಡಿದುಎಲ್ಲ ನಟನೆಯ ತೋರುವಫುಲ್ಲ ನಾಭನಮೆಲ್ಲ ಮೆಲ್ಲನೆಎಲ್ಲ ಹೆಂಗಳು ನೋಡಿರೆ 1 ಕಾಮಿ ಜನರಿಗೆ ಕಾಮಿತಾರ್ಥವಪ್ರೇಮದಿಂದಲಿ ಕೊಡುತಿಹಕಾಮನೈಯನ ಚರಣ ಕಮಲವನಂಬಿ ಬದುಕುವ ಬನ್ನಿರೆ2 ಅಂಗರಾಗ ಶ್ರೀರಂಗ ಮಂಗಳಸಿಂಗರದಿ ತಾ ನಿಂತಿಹಮಂಗಳಾಂಗನ ಮಂಗಳಾರತಿಎಲ್ಲ ಹೆಂಗಳು ನೋಡಿರೆ 3 ಒಂದು ಕೈಯಲಿ ಗಂಧಪುಷ್ಪ ಮ-ತ್ತೊಂದು ಕೈಯಲಿ ರಂಗನುಮಂದಹಾಸದಿ ಇಂದುಮುಖಿಯರಿ-ಗ್ಹೊಂದಿಸುವನತಿ ಚಂದದಿ 4 ಶುಕ್ರವಾರದಿ ಪೂಜೆಗೊಂಬುವಚಕ್ರಧರ ಶ್ರೀಕೃಷ್ಣನು ನಕ್ರಹರ ತ್ರಿವಿಕ್ರಮನು ಮನ-ವಾಕ್ರಮಿಸಿ ಸುಖ ಕೊಡುತಿಹ 5
--------------
ವ್ಯಾಸರಾಯರು
ತೆಪ್ಪದುತ್ಸವ ನಿನಗೆ ಏನು ಹಿತವೋ ಅಪ್ಪ ಹನುಮಯ್ಯ ನಿನ್ನಾಟಕೇನೆಂತೆಂಬೆ ಪ. ರಾಮ ಉಂಗುರ ಸತಿಗೆ ಕಂಡಿತ್ತು ಬಾರೆನಲು ನೇಮದಿಂದಲಿ ನೂರು ಯೋಜನುದಧಿ ಪ್ರೇಮದಿಂದಲಿ ಹಾರಿ ಕುರುಹು ತಂದಾ ಮಹಿಮ ಈ ಮಡುವಿನ ಜಲದಿ ಈ ಆಟವಾಡುವುದು 1 ಕುರುಕುಲಾರ್ಣವವೆಂಬ ಘನ ಶತ್ರು ಸೈನ್ಯವನು ಒರಸಿ ಕ್ಷಣದಲಿ ಭುಜಬಲದ ಶೌರ್ಯದಲಿ ಧುರವೆಂಬ ಶರಧಿಯನು ಲೀಲೆಯಲಿ ದಾಟಿದಗೆ ವರ ಸರೋವರದ ಈ ಜಲದಾಟವಾಡುವುದು 2 ಅನ್ಯ ದುರ್ಮತ ಮಹಾರ್ಣವನು ಶೋಷಿಸುತ ಬಹು ಉನ್ನತದ ವೇದ ಶಾಸ್ತ್ರಾರ್ಣವದಲಿ ಚೆನ್ನಾಗಿ ಈಜಿ ಶ್ರೀ ಹರಿಚರಣ ದಡ ಸೇರ್ದ ಘನ್ನ ಮಹಿಮನಿಗೆ ಈ ಚಿನ್ನ ಮಡುವೀಜುವುದು 3 ಮುಕ್ತಿಯೊಗ್ಯರ ಕರ್ಮಶರಧಿಯನು ದಾಟಿಸುತ ಮುಕ್ತರಾಶ್ರನ ಪುರ ಸೇರಿಸುವನೆ ಅತ್ಯಂತ ಅಲ್ಪ ಈ ಜಲದಾಟವಾಡಿದರೆ ಭಕ್ತರಾದಂತ ದಾಸರು ನಗರೆ ಹನುಮ 4 ವರ ಕದರುಂಡಲಿಯಲ್ಲಿ ನೆಲಸಿರುವ ಭಕ್ತರಿಗೆ ಮರುಳುಗೊಳಿಸುತ ಮಹಾ ಮಹಿಮನೆನಿಸಿ ಪರಿಪರಿಯ ಉತ್ಸವಪಡುವೆ ಶ್ರೀ ಕಾಂತೇಶ ಸಿರಿರಮಣ ಗೋಪಾಲಕೃಷ್ಣವಿಠ್ಠಲನ ದಾಸ 5
--------------
ಅಂಬಾಬಾಯಿ
ತೆರಳೆ ನೀ ಮಧುರೆಗೆ ಗೋಕುಲದಲಿ ನಾವುಇರಲಾರೆ ಇರಲಾರೆವೋ ಗೋಪಾಲ ಪ ತರಳತನದಿ ನೀ ಆಡಿದ ಆಟಗಳ ಸ್ಮರಿಸಿಸ್ಮರಿಸಿ ನಾವು ಮರುಗುವುದೆಲೋ ದೇವಅ.ಪ. ವ್ರಜದ ಒಳಗೆ ನೀನು ಇದ್ದದ್ದು ಕೇಳಿಭರದಿ ಪೂತನಿಯ ಕಳುಹಿ ಕೊಟ್ಟರೆತೊಡೆಯ ಒಳಗೆ ಇಟ್ಟು ಸ್ತನಕೊಡುತಿರಲವಳಹುಲಿಯಂತೆ ಹೀರಿ ಹಿಪ್ಪೆಯಮಾಡಿದೆಯೊ ದೇವ ತೃಣದ ಅಸುರನ ಕೊರಳಮಿಸುಗುತ್ತ ಅವನ ಕೆಡಹಿದಿಭರದಿ ಬಂಡಿಯ ಒದ್ದು ಶಕಟನ ಪುಡಿಯಮಾಡಿದ ಪರಮ ಪುರುಷನೆ 1 ಕೊಲ್ಲಕಂಸನು ಭಾಳ ಯೋಚಿಸಿ ಮನದಿಕೊಲ್ಲಬೇಕೆಂದೆನುತ ಸೂಚಿಸೆಬಿಲ್ಲನೆ ಮುರಿದು ಆ ನಲ್ಲೆಯ ಕರಪಿಡಿದುಒಳ್ಳೆ ಪುರಕೆ ಹೋಗಿ ಎಲ್ಲ ಕಾರ್ಯವ ನಡೆಸಿಮೆಲ್ಲನೆ ಏಕಾಂತ ಗೃಹದಲ್ಲಿಸೊಲ್ಲ ಕೇಳುತ ಅವನನು ಕೋಪಿಸೆಅಲ್ಲಿಯನುಜನ ತರಿದು ಅವನಕೊಲ್ಲ ಕಳುಹಿದ ಕಠಿನ ಹೃದಯನೆ2 ಎಲ್ಲ ಹಿಂದಿನ ಸುದ್ದಿ ಬಲ್ಲೆವೊ ನಾವುಇಲ್ಲಿ ಮರೆತೀಯೆಂದು ತಿಳಿದೆವೋಬಲ್ಲ ಅಕ್ರೂರನು ಬಂದು ಇಲ್ಲಿಗೆ ನಮ್ಮಇಲ್ಲದ ಮಾತ ಕೇಳಿ ಮೆಲ್ಲನೆ ಕರೆದೊಯ್ದಅಲ್ಲಿ ರಥವನೆ ಕಾಣುತ ಎದೆಝಲ್ಲೆನಿಸಿ ನಡುಗಿದೆವೊಪುಲ್ಲನಾಭನೆ ಜ್ಞಾನ ಭಕುತಿ ನ-ಮ್ಮೆಲ್ಲರಿಗೆ ನೀನಿತ್ತು ಪೋಗೆಲೊ 3 ಹೆಂಡತಿಯ ಕೂಡಿ ಕದನ ಮಾಡಿಮುಂದೆ ಮೂವರು ತೆರಳಿದಿರಿಬಂದು ಋಷಿಯಾಶ್ರಮದಿ ನಿಂತು ಗ್ರಾಸವ ಬೇಡೆಮಂದಗಮನೆ ನೋಡಿ ಚೆಂದಾಯಿ -ತೆಂದೆ ತಂದು ಕಲಶೋದಕವ ಚೆಲ್ಲಲುಕಂದರುಗಳು ನೀವಾದಿರೊ ತಂದ ಹಲಸಿನ ದೊನ್ನೆ ಪಾಲನುಚೆಂದದಿಂದಲಿ ಕುಡಿದ ದೇವನೆ4 ಮಂದಗಮನೇರಿಂದ ನಿಮಗೆ ಮತ್ತೆಒಂದುಪಕಾರವ ಕಾಣೆವೊಚೆಂದಾಗಿ ಮಾನದಿ ಮಂದಿರದಲಿ ಇರದೆಗಂಡರ ಬಿಟ್ಟು ನಿಮ್ಹಿಂದೆ ತಿರುಗಿದೆವೊಇಂದಿರೆಯು ಕಾರಣಗಳಲ್ಲವೊನಿಂಗೆ ನೀನೆ ಸ್ವರಮಣನಂಮಂಗಳಾಂಗನೆ ಮಾರಜನಕನೆರಂಗವಿಠಲನೆ ರಾಜೀವಾಕ್ಷನೆ5
--------------
ಶ್ರೀಪಾದರಾಜರು
ತೋರೊ ನಿನ್ನಯ ಮೂರ್ತಿಯ ಮೂರ್ತಿ ಬೀರೊ ಹೃದಯವೆಂಬೊ ನೀರಜಹಾದೊಳಗೆ ಸಾರೋ ಸಾರಿ ಸಾರಿಗೆ ಸೇರೊ ಬಾರೊ ಬಾರೊ ಪರಿವಾರದೊಡನೆ ಮನಸೂರೆಗೊಡುವೆ ಕಂ ಸಾರಿ ಮುರಾರಿ ಪ ತುಂಬೆ ವಿಶ್ವಮಾಯಾದ ಬೊಂಬೆ ನಾಮ ಪೀಯೂಷ ಉಂಬೆ ಸೇವೆಯ ಕೈಕೊಂಬೆ ಅನ್ಯರ ನಂಬೆ ಕಾಂಬೆ ನಮಿಸಿ ಪಾಲಿಸೆಂಬೆ ಕಾಲಿಗೆ ಮನ ದುಂಬೆ ದಂತೆ ಎರಗಿ ಅಂಬೆ ಪಿಡಿವಾಕೊಂಬೆ ಅಂಬುಜಾಕ್ಷ ನೀ ನೆಂಬದು ಸುರನಿಕರಂಬ ಹಂಬಲಿಸಲು ದಿಂಬಾಗಿ ಕರ್ಣಾವಲಂಬನವಾಯಿತು ಇಂಬಿಡು ಪ್ರಾಙ್ಞನೆಂದೆಂಬ ಮೂರುತಿಯಾ1 ಸ್ನಾನ ಪ್ರಣಮ ವಾಚಾ ಮಾನದಿಂದಲಿ ಬಲು ಮೌನವಾಗಿದ್ದು ಮಾಳ್ಪ ಧ್ಯಾನವು ಇತ್ತು ಮಾಜ್ಞಾನಾ ನಾನಾ ಪ್ರಕಾರದಿಂದ ದಾನಧರ್ಮಂಗಳ ನಿ ದಾನ ಕೊಂಡಡಲಾಮೇಲೆ ನೆನೆವೆನನುದಿನ ಮಾನವನ ಹೀನವ ನಾಡದೆ ನೀನೆನಿಸದೆ ಸುಮ್ಮನದಿಂದಲಿ ನೋಡೊ ದಾನವನ ವಡಲನು ಬಗದು ಕರುಳನು ವನಮಾಲೆ ಹಾಕಿದ ಶ್ರೀನಿಕೇತನ 2 ಇಂದು ಮಾಡುವದೇನು ಚಂದ ಭಕ್ತರಿಗತಿ ಬಂಧವನೆ ಯಾಕೆಂದಾ ಅಂದ ರಕ್ಕಸನಾಗಿ ಕೊಂದಾವರದ ಮುಕ್ಕುಂದಾ ವಂದಿತ ಮರ ವೃಂದಾ ಕರುಣದಿಂದಾ ಎಂದಿಗೆಂದಿಗೆ ಎನ್ನಿಂದಗಲದೆ ಗೋ ವಿಂದ ಇಂದಿರಾಪತಿ ಸುಂದರ ವಿಗ್ರಹ ಮಂದಿರದೊಳು ಸುಮದಾಸನದಲ್ಲಿ ಬಂದು ವಿಜಯವಿಠ್ಠಲೆಂದು ನೀನಿಂದು3
--------------
ವಿಜಯದಾಸ
ದತ್ತಾತ್ರೇಯನ್ನಮೋ ದತ್ತಾತ್ರೇಯಾ ಅತ್ರಿ ವರದಾಯಕನೇ ದತ್ತಾತ್ರೇಯಾ ಪ ಭಕುತಿ ಮಾಡಲು ಮೆಚ್ಚಿ ಅನಸೂಯಾ ಕರದೊಳಗ ಸುಕುಮಾರ ವೇಷದವತಾರ ತಾಳಿ ಪಥ ದೋರಲಿಕೆ ಅಕಳಂಕ ಯೋಗ ರೂಪವ ಭರಿಸಿದೆ 1 ಉದಯದೊಳು ವಾರ್ಣಾಸಿಸುರನದಿಯಲಿ ಸ್ನಾನ ವದಗಿ ಕೊಲ್ಹಾಪುರಕ ಮಧ್ಯಾಹ್ನದೀ ವಿದಿತ ಭಿಕ್ಷವನುಂಡು ಪೋಗಿ ಸಂಜೆಗೆ ಮಾಹು ನಿತ್ಯ ವಿಧಿಯಲಿ ಚರಿಸುವೇ2 ದತ್ತಹರಿ ಸಾಕ್ಷಾತ ಉನ್ಮದೋನಂದದಾಯಕ ದತ್ತವರ ಮುನಿ ದಿಗಂಬರ ಬಾಲಕಾ ನಿತ್ಯ ಪ್ರಕಾಶಮಯ ಜ್ಞಾನಸಾಗರನೆಂಬರ ದುರಿತ ಭಯವಾರಿಸುವೆ3 ಆವನಾಗಲಿ ಮರೆದು ನಿಮ್ಮ ನಾಮವ ನೆನೆವ ಠಾವಿನಲಿಸುಳಿವ ಪ್ರತ್ಯಕ್ಷದಿಂದಾ ಭಾವದಿಂದಲಿ ಸ್ಮರಿಸಿದವಗ ಇಹಪರ ಸುಖವ ನೀವ ಕರುಣಾಳು ದೀನೋದ್ಧಾರಕಾ 4 ಇಪ್ಪತ್ತು ನಾಲ್ಕು ಗುರುಗಳ ಕ್ರಮವ ದೋರಿಭವ ಮುಪ್ಪು ಬಿಡಿಸಿದೆ ಯದುರಾಯಗಂದು ಒಪ್ಪಿನಿಂದಲಿ ಗುರು ಮಹಿಪತಿ ಪ್ರಭುಯನಿಸಿ ತಪ್ಪ ನೋಡದೆ ನಂದ ನುದ್ಧರಿಸಿದೆಲೆ ದೇವಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಯ ಮಾಡೊ ಪ್ರೀಯಾ ದಾಸರ ಶುಭೋ-ದಯ ವಿಜಯರಾಯ ಸಾ |ಹಯವಾಗಿ ಒದಗುವೋಭಯ ನಿವಾರಣ ಮಾಡಿ ಪ ಪ್ರಬಲವಾಗಿಹ ಮೋಹ ನಿಬಿಡವಾದದರಿಂದಅಭಯದಾಯಕ ನಿನ್ನ ಶುಭವಾದ ಪಾದಕ್ಕೆಅಭಿವಂದಿಸದಲೆ ಅಲ್ಪರ ಸೇರಿಅಬಲನಾಗುತಲೆ ಪಾಪದ ವನಧಿUಭೀರ ನೋಡದಲೆ ಬಾಳಿದೆ ಯನ್ನಅಭಿಮಾನದೊಡೆಯನೆ ಅಗಡು ಮಾಡದಲೆ 1 ದುರಿತ ಪರಿ ವರಗಳ ಗರೆವ ಕಾರಣ ನಿನ್ನಬಿರಿದು ನಾ ಬಲ್ಲೆ ಎನ್ನಯ ಭಾರಸರಿ ನಿನ್ನದಲ್ಲೆ ಲೌಕೀಕದಪರಿ ಮತ್ತೊಂದೊಲ್ಲೆ ಇಹಪರದಲ್ಲೆ ಪರಮ ಸೌಖ್ಯಕೆ ನಿನ್ನ ಸ್ಮರಣೆ ವಂದಲ್ಲೆ 2 ಪಾಮರ ಜನರಿಗೆ ಸುಮಾರ್ಗಗೋಸುಗಶ್ರೀಮನೋಹರ ನಿನ್ನ ಪ್ರೇಮದಿಂದಲಿ ಸೃಜಿಸಿಭೂಮಿಯೊಳಿಡಲೂ ಹರಿಯ ದಿವ್ಯನಾಮ ನಾ ಬಿಡಲು ದುರ್ವಿಷಯವಕಾಮಿಸಿ ಕೆಡಲೂ | ಸುಮ್ಮನಿರದೆಯಾಮ ಯಾಮಕೆ ನಿನಗೆ ನಾ ಮೊರೆಯಿಡಲೂ 3 ಜಗದಂತರ್ಯಾಮಿಯ ಹಗಲು ಇರುಳು ಬಿಡದೆಸುಗುಣ ಮಾರ್ಗದಲಿದ್ದು ಬಿಗಿಯಾದ ಕವನಕ್ಕೆಬಗೆ ತೋರಿದವನೆ ಹರಿಯ ಕ್ಷಣ ಅಗಲದಿದ್ದವನೆ ಕಾಮದ ಬಲಿಗೆಸಿಗದೆ ನಡೆವವನೆ ಅನುನಯದಿ ಕರವಮುಗಿದು ಬೇಡುವರಲ್ಲಿ ಮುದದಿಂದ ನಲಿವನೆ 4 ಎನ್ನೊಬ್ಬಗಲ್ಲ ಈ ಬಿನ್ನಪ ಕರುಣಾಳೆನಿನ್ನ ಪೊಂದಿದವರ ಮನ್ನಿಸಿ ಸಲಹಯ್ಯಾಬೆನ್ನು ಬಿಡದಲೆ ವ್ಯಾಸ ವಿಠ-ಲನ್ನ ಪಾಡುತಲೆ ಕಾಲವ ಕಳೆವ ಸನ್ಮಾರ್ಗವನೆ ತೋರೋ ತಡಮಾಡದಲೆ 5
--------------
ವ್ಯಾಸವಿಠ್ಠಲರು
ದಯದಿ ಎಮ್ಮನು ಸಲಹ ಬೇಕಯ್ಯ | ಮಳಖೇಡ ನಿಲಯ ದಯದಿ ಎಮ್ಮನು ಸಲಹ ಬೇಕಯ್ಯ ಪ ದಯದಿ ಎಮ್ಮನು ಸಲಹ ಬೇಕೈ | ವಿಯದಧಿಪ ಸದ್ದಂಶ ಸಂಭವ ಭಯ ವಿದೂರನ ತೋರು ಎನುತಲಿ | ಜಯ ಮುನೀಂದ್ರನೆ ಬೇಡ್ವೆ ನಿನ್ನನು ಅ.ಪ. `ಇಂದ್ರಸ್ಯನು ವೀರ್ಯಾಣ’ ಎಂದೆನುತ | ಇತ್ಯಾದಿಋಕ್ಕುಗಳಿಂದ ಬಹುತೆರೆ ನೀನು ಪ್ರತಿಪಾದ್ಯ ||ಅಂದು ಮೇಘದ ಜಲವು ಬೀಳದೆ | ಬಂಧಗೈದಹಿನಾಮ ದೈತ್ಯನಕೊಂದು ಉದ್ಧರಿಸಿರುವ ಪರಿಯಲಿ | ಮುಂದೆ ದುರ್ವಾದಿಗಳ ಖಂಡಿಪೆ 1 ವಾಲಿಯಂದದಿ ದೃಷ್ಟಿಮಾತ್ರದಲಿ | ಶತೃಗತಬಲಲೀಲೆಯಿಂದಪಹರಿಪೆ ನಿಮಿಷದಲಿ ||ಕಾಲ ತ್ರೇತೆಯಲಂದು ದುಷ್ಟರ | ವಾಲಿರೂಪದಿ ವಾರಿಸಿದ ಪರಿಕಾಲ ದ್ವಾಪರದಲ್ಲಿ ಪ್ರಾರ್ಥನೆ | ಲೀಲೆ ರೂಪಿಯು ಕೃಷ್ಣಸೇವಕ 2 ದೃಷ್ಟಿ ಮಾತ್ರದಿ ಕರ್ಣಗತ ಬಲವ | ಅಪಹರಿಸಿ ನೀನುಕ್ಲಿಷ್ಟ ಯುದ್ಧದಿ ಗಳಿಸಿ ನೀ ಜಯವ ||ಶ್ರೇಷ್ಠ ಕರ್ಣನ ಅಸುವ ಕೊಳ್ಳುತ | ಸುಷ್ಠು ಅರಿಬಲ ನಾಶಮಾಡುತಭ್ರಷ್ಟ ಕೌರವನೀಗೆ ದುಃಖದ | ಕೃಷ್ಣಗರ್ಪಿಸಿ ಕೈಯ್ಯ ಮುಗಿದೆಯೊ 3 ಕಾಲ ಕಲಿಯುಗದಲ್ಲಿ ಬಲ ಭೀಮ | ಮಧ್ವಾಭಿಧಾನದಿಮೂಲ ಮೂವತ್ತೇಳು ಸೂನಾಮ ||ಭಾಳ ಗ್ರಂಥಗಳನ್ನೆರಚಿಸೀ | ಕಾಲಟಿಜಕೃತಮಾಯಿ ಮತವನುಲೀಲೆಯಿಂದಲಿ ಖಂಡಿಸುತ್ತ | ಪಾಲಿಸುತ್ತಿರೆ ಸುಜನರನ್ನು 4 `ವೃಷಾಯ ಮಾಣೆಂಬ` ಋಕ್ಕಿನಲಿ ದೇವ ಇಂದ್ರಗೆವೃಷಭದಾಕೃತಿ ಪೇಳಿಹುದು ಅಲ್ಲಿ ||ವೃಷಭ ನೀನಾಗಂತೆ ಕಲಿಯಲಿ | ಎಸೆವ ಶ್ರೀ ಮನ್ಮಧ್ವ ಗ್ರಂಥದಹಸಿಬೆ ಚೀಲವ ಹೊತ್ತು ತಿರುಗುತ | ಅಸುಪತಿಯ ಸೇವಿಸಿದ ಮಹಿಮ5 ಅಗಸ್ತ್ಯ ಮುನಿ ಸಕಲ ತೀರ್ಥಗಳ | ಸಂಗ್ರಹಿಸಿ ಕರದಿಸಾಗಿ ಗಿರ್ಯಾನಂತ ಕಮಂಡೂಲ ||ವೇಗ ಕೆಳಗಿಟ್ಟಾಚಮನ ಅಲ್ಪ | ಕಾಗಿ ಸ್ವಲ್ಪವುದೂರ ಪೋಗಲುಕಾಗೆ ರೂಪದಿ ಬಂದು ಇಂದ್ರನು | ವೇಗ ಉರುಳಿಸೆ ಜಲವು ಹರಿಯಿತು 6 ದೆವರಾಜನು ಕಾಣಿಸಿ ಕೊಳಲು | ಮುನಿಯು ಆಕ್ಷಣದೇವ ಕಾರ್ಯದ ಭಾವ ತಿಳಿಯಲು ||ಓವಿ ತತ್ಕಾಗಿಣಿಯ ನಾಮದಿ | ಭೂವಲಯದೊಳ್ಬಾತಿಸಲಿ ಎನೆತೀವರಾಶೀರ್ವಾದ ದಿಂದಲಿ | ಪಾವನವು ತತ್ ಕ್ಷೇತ್ರ ವಾಯಿತು 7 ಪಾಂಡು ಮಧ್ಯಮನಾದ ಅರ್ಜುನನು | ಇಲ್ಯುದಿಸಿ ಪೊತ್ತಧೋಂಡು ರಘುನಾಥ ಪೆಸರನ್ನು || ಗೊಂಡು ನಾಯಕ ತನವ ಅಶ್ವಕೆ | ಅಂಡಲೆದು ಬರುತಿಲ್ಲಿ ಬಿಸಿಲಲಿ ಉಂಡು ಉಂಬುದ ಜಲವ ಪಶುಪರಿ | ಕಂಡು ಮುನಿ ಅಕ್ಷೋಭ್ಯ ಬೆಸಸಿದ 8 ಸ್ವಪ್ನ ಸೂಚಿಸಿದಂತೆ ಮುನಿಶ್ರೇಷ್ಠ | ನೀರ್ಗುಡಿದವ ನರೆ ಬಪ್ಪುವನು ತಮ ಪೀಠಕೆನ್ನುತ್ತ || ಸ್ವಲ್ಪ ಹಾಸ್ಯದಿ ಪಶುವು ಪೂರ್ವದಿ | ಒಪ್ಪುವೆಯಾ ನೀನೆನ್ನ ಸಾದಿಗೆ ನೆಪ್ಪು ಬಂದುದು ವೃಷಭ ಜನ್ಮದಿ | ಕೃಪ್ಪೆಗೈದಿಹ ಮಧ್ವರನುಗ್ರಹ 9 ಸಾದಿ ಭೂಪನು ಕಳುಹಿ ತನ್ನ ಸೈನ್ಯ | ಅಕ್ಷೋಭ್ಯ ಮುನಿಪರ ಪಾದಕೆರಗುತ ಆಶ್ರಮವು ತುರ್ಯ ||ಮೋದದಿಂದ್ಯಾಚಿಸಲು ಮುನಿವರ | ಆದಿಯಿಂದಲಿ ಬಂದ ಪೀಠಕೆಸಾದರದಿ ಪಟ್ಟಾಭಿಷಕ್ತನ ಗೈದು ಆಶೀರ್ವಾದ ಮಾಡಿದ 10 ಸುತನು ತುರ್ಯಾಶ್ರಮವ ಪೊತ್ತುದನ | ಕೇಳುತ್ತ ತಂದೆಅತುಳ ಕೋಪದಿ ನಿಂದಿಸಿದ ಮುನಿವರನ |ಸುತನ ಗೃಹ ಕೆಳತಂದು ಪತ್ನಿಯ | ಜೊತೆಯಲಿಡೆ ಏಕಾಂತ ಗೃಹದಲಿಅತುಳ ಸರ್ಪಾ ಕೃತಿಯ ಕಾಣುತ | ಭೀತಿಯಲಿ ಚೀರಿದಳು ಕನ್ಯೆಯು11 ಸೋಜಿಗದ ತನಯನ್ನ ಕೊಳ್ಳುತ್ತ | ಮುನಿವರರ ಬಳಿಗೆ ಯೋಜಿಸೀದನು ಕ್ಷಮೆಯ ಬೇಡುತ್ತ ||ಆರ್ಜವದ ಮುನಿ ಕ್ಷಮಿಸಿ ತಂದೆಯ | ಮಾಜದಲೆ ತಮ್ಮ ಶಿಷ್ಯಭೂಪಗೆಯೋಜಿಸಿದರನ್ವರ್ಥನಾಮವ | ಶ್ರೀ ಜಯಾಭಿಧ ತೀರ್ಥರೆನ್ನುತ 12 ಪರ ಕರಿ ಹರ್ಯಕ್ಷರಾದಿರಿ 13 ಮಧ್ವಭಾಷ್ಯಕೆ ಟೀಕೆ ರಚಿಸುತ್ತ | ಯರಗೋಳ ಗುಹೆಯಲಿಶುದ್ಧ ಭಾವದಿ ಇರಲು ಮದಮತ್ತ ||ವಿದ್ಯ ಅರಣ್ಯಭಿಧ ನೋಡೀ | ಮಧ್ವಕೃತ ಸನ್ಮಾನ ಲಕ್ಷಣಬುದ್ಧಿಗೇ ನಿಲುಕದಲೆ ಟೀಕೆಯ | ಪದ್ಧತಿಯ ಕಂಢರ್ಷಪಟ್ಟನು 14 ಮಾಧ್ವಭಾಷ್ಯವ ನೇರಿಸಿ ಗಜವ | ತಟ್ಟೀಕೆ ಅಂತೆಯೆಅದ್ಧುರೀಯಲಿ ಗೈದು ಉತ್ಸವವ ||ವಿದ್ಯವನ ಮುನಿಪೋತ್ತುಮನು ಬಹು | ಶುದ್ಧಭಾವದಿ ಗೈದು ಸಂತಸಬುದ್ಧಿಯಲಿ ಪರಿವಾರ ಸಹಿತದಿ | ಸದ್ದುಯಿಲ್ಲದೆ ಪೋದನಂದಿನ 15 ಹತ್ತೆರಡು ಮತ್ತೊಂದು ಕುಭಾಷ್ಯ | ವಿಸ್ತರದಿ ಖಂಡಿಸೆಕೃತ್ಯವೂ ಮಧ್ವಕೃತವನುವ್ಯಾಖ್ಯಾ ||ಮತ್ತಿದಕೆ ಸೂಧಾಖ್ಯ ಟೀಕವ | ವಿಸ್ತøತವು ನಿಮ್ಮಿಂದ ಜಯಮುನಿಮೊತ್ತದಿಂಧ್ಹತ್ತೆಂಟು ಗ್ರಂಥಕೆ | ಕೃತ್ಯವಾಯಿತು ನಿಮ್ಮ ಟೀಕೆಯು16 ಪಾದ ಪಾದ ತೋರ್ವುದು ||
--------------
ಗುರುಗೋವಿಂದವಿಠಲರು
ದಯದಿ ಪಾಲಿಸೋ ವಾದಿರಾಜ ಗುರುವೇ | ನತಜನ ಸುರತರುವೇ ಪ ಹಯಮುಖ ಪದ ಸದ್ವನಜ ಸುಭೃಂಗಾ | ಪಾಲಿಸು ದಯಾಪಾಂಗಾ ಅ.ಪ. ರಜತ ಪೀಠದೊಳು ಕೃಷ್ಣ ಪೂಜೆಗಳನ್ನು | ಪರಿಪರಿ ರಚಿಸಿನ್ನೂ |ಕುಜನರ ಭೇದಿಪ ಭಜನೆ ಪದಗಳನ್ನೂ | ಸುಜನಕಿತ್ತೆ ನೀನೂ ||ಭಜಿಸೆ ಬಂದವರಿಗನ್ನೋದಕಗಳನೂ | ಏರ್ಪಡಿಸಿನ್ನೂ |ನಿಜ ಜನರ ಪೊರೆವ ಸುವ್ಯವಸ್ಥೆಗಳನ್ನೂ | ರಚಿಸಿ ಮೆರೆದೆ ನೀನೂ 1 ಅಂತರಂಗದಿ ಪೂಜಿಪೆ ಹಯವದನನ್ನ | ಭಾವಿ ಮರುತ ಎನ್ನ|ಅಂತರಂಗದೊಳು ನೆಲಿಸುತ ನೀಯೆನ್ನ | ಸಂಚಿತಾದಿಯನ್ನ ||ಅಂತಗಾಣಿಪ ಶ್ರೀ ಅಂತರಾತ್ಮನನ್ನ | ಚಿಂತೆ ಪಾಲಿಸು ಮುನ್ನ |ಯೆಂತು ವರ್ಣಿಸಲಿ ತವ ಮಹಿಮೆಗಳನ್ನ | ನಿಂತು ನಲಿ ವದನದೊಳೆನ್ನ 2| ಭರತ ಖಂಡದಿ ತೀರ್ಥ ಕ್ಷೇತ್ರ ಚರಿಸೀ | ತತ್ಪ್ರಂಬಂಧ ರಚಿಸೀ |ವಿರಚಿಸಿದೆಯೋ ರುಕ್ಮಿಣೀಶ ಕಾವ್ಯಾ | ಯುಕ್ತಿಮಲ್ಲಿಕೇಯಾ ||ಸುರಸ ಪದಗಳಲಿ ತತ್ವ ಪುಂಜವನ್ನ | ರಚಿಸಿ ಮೆರೆದೆರನ್ನ |ನಿರಣಯಾದಿಗಳ ಭಾವಗಳನ್ನ | ಕನ್ನಡದಿ ರಚಿಸದೆ ಘನ್ನ 3 ಸ್ವಾದಿ ಪುರದಿ ಬಲು ಮುದದಲಿ ಮೆರೆದಾ | ಬಿರಿದು ಪೊತ್ತ ಶೈವಾವಾದಿಸೆ ನಿನ್ನೊಳು ಸೋತು ನಿಂತನವ | ಪಾದದಿ ಬಿದ್ದು ಅವ || ಮೇದಿನಿಯೊಳ್ ನಿಮಗೆ ಸಮರು ಆವ | ಎಂದೊಪ್ಪಿಸಿದನು ಅವ |ಮೋದದಿಂದಲಿ ಬಸವ ಚಿನ್ಹಿತನಾದ | ತವ ಚರಿತೆ ಆಗಾಧಾ 4 ಪಂಚ ಸುವೃಂದಾವನಗಳ ರಚಿಸುತ್ತಾ | ತಾವ್ನಡುವಿರ ಬೇಕೆನುತಾ |ಅಂಚೆಗಮನ ಪ್ರಾಣ ಗಂಗಾಧರನಾ | ಗುರು ಗೋವಿಂದ ವಿಠಲನಾ ||ಸಂಚಿಂತಿಸಿ ನಿಲಿಸುತ ನಾಲ್ಕರಲ್ಲೀ | ಚತುರ ದಿಕ್ಕಿನಲ್ಲೀ |ಪಂಚರೂಪಿ ನಿಷ್ಕಿಂಚಿನ ಪ್ರಿಯ ಹರಿಯಾ | ಪುರವ ಸೇರಿದಯ್ಯಾ 5
--------------
ಗುರುಗೋವಿಂದವಿಠಲರು
ದಯದಿಂದಲಿ ನೋಡೊ ಎನ್ನಾ ಹಯವದನ್ನಾ ಶ್ರೀಹರಿ ಪ ವರಗಳ ನೀಡಿ ಅ.ಪ. ಭಕುತದಿ ಕೂಡಿ ಆಡುವೆ ನೀ ನಿತ್ಯ ಸುಜನರಿಗೆ ಕಾಡಿ ಕೆಣಕುವ ಈ ಖೋಡಿ ಅನುದಿನ ಸಾಮಗಾನ ಪ್ರೇಮಾ ಬ್ರಹ್ಮಾದಿಗಳಿಗೆ ಕಾಮಿತಪ್ರದ ರಾಮಾ ಪರಿಪೂರ್ಣ ರಾಮಾ 1 ಶಾಮಸುಂದರ ಶಕಟಾಸುರಮರ್ದನ ಸಾಮಜವರದನೆ ಮಾತುಳಾಂತಕ ಮದನ ಜ£ಕÀನೆ ಕರುಣಿಸಿ ಎನ್ನನು 2 ಏನು ಬಲ್ಲೆನು ನಾನು ನಿನ್ನ ಮಹಿಮೆಯನ್ನು ದೀನ ಸುರಧೇನು ಬಣ್ಣಿಸಲಳವೆ ನಿನ್ನ ಮಹತ್ತನ್ನು ಮುನಿಮೌನಿವರರಿಂದ ಅನಘನೆನಿನ್ನಮಿತ ಗುಣಗಣನ ಕಾಣದೆ ಲಕುಮಿ ಮನದಲ್ಲಿ ಅನುವು ತಪ್ಪೆ ನಿತ್ಯ 3 ಹಾಟಕಾಂಬರಧರ ಶ್ರೀವತ್ಸಲಾಂಛನ ಜಟಾಮಕುಟ ಕುಂqಲ ಕೈಟಭಾಂತಕನೆ ಕಡಲಮಂದಿರ ಕುಟಿಲ ಕಟುಮತಿ ಖಳರನು ಶಿಕ್ಷಿಸಿ ಕೈಯ್ಯ ಬಿಡದೆ ಎನ್ನಾ ಮಾನಿಧಿವಿಠಲ ಕಾಲಿಗೆ ಬೀಳುವೆ 4
--------------
ಮಹಾನಿಥಿವಿಠಲ