ಒಟ್ಟು 1106 ಕಡೆಗಳಲ್ಲಿ , 101 ದಾಸರು , 863 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಯಮಾಡೋ ರಂಗ ಹೇ ಕೃಪಾಂಗ ಪ ದಯಮಾಡಿ ನೀಯೆನ್ನ ಭಯವ ಪರಿಹರಿಸು ಚಿ- ನ್ಮಯ ಮೂರುತಿ ಸುಖಮಯ ಮಂದರಧರ ಅ.ಪ. ಪತಿತ ಪಾವನ ನೀನು ಪತಿತಾಗ್ರೇಸರ ನಾನು ಜತನದಿ ಭಕುತಿಯ ಪಥವ ತೋರಿ ನೀನು 1 ಮುಕ್ತಿ ಫಲಪ್ರದ ಶಕ್ತಿಯು ನಿನ್ನ ವ್ಯತಿರಿಕ್ತವಲ್ಲವೆಂದು ಭಕ್ತಿಯುವರವಳು...[?] 2 ಕಾಮಧೇನು ನೀನು ಕಾಮನಯ್ಯನು ನೀನು ಕಾಮಿತಫಲದಾತ ಮಾಮನೋಹಕ ತ್ರಾತ 3 ಸೃಷ್ಟಿಪಾಲಕ ನಿನ್ನ ಯಷ್ಟೆಂತವರ್ಣಿಪೆ ಅಷ್ಟು ಕರ್ತೃತ್ವಕ್ಕೆ ಶಿಷ್ಟಮೂರುತಿ ನೀನೆ 4 ಭಾರಿಭಾರಿಗೆ ನಿನ್ನ ಆರಾಧಿಸುವರ ಚಾರುಚರಣವನು ತೋರೊ ಮಾರಜನಕ 5 ಸಕಲಕ್ಕು ನೀ ಮುಖ್ಯ ಶಕಟಭಂಜನ ಕೇಳು ಪ್ರಕಟನಾಗಿಯೆನಗೆ ಶಕ್ತಿಯ ನೀಡೋ6 ಭೂವಲಯದೊಳು ನಾ ಆವಲ್ಯಪೋಗಲು ಕಾವಲು ನೀನೇ ಶ್ರೀವತ್ಸಾಂಕಿತನೇ 7
--------------
ಸಿರಿವತ್ಸಾಂಕಿತರು
ದಯವಿರಲಿ ದಯವಿರಲಿ ದಾಮೋದರ ಪ. ಸಯವಾಗಿ ಬಿಡದೆನ್ನ ಸಾಕುವ ಶ್ರೀಕೃಷ್ಣಅ.ಪ. ಹೋಗಿ ಬರುವೆನಯ್ಯ ಹೋದಹಾಂಗೆಲ್ಲಸಾಗುವವನಲ್ಲ ನಾ ನಿನ್ನ ಬಿಟ್ಟುತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲ್ಲುವುದುಹ್ಯಾಗೆ ನೀ ನಡೆದಂತೆ ಹಾಗೆ ನಾ ನಡಕೊಂಬೆ 1 ಇದ್ದಲ್ಲೆ ಎನ್ನನುದ್ಧರಿಪ ಶಕ್ತಿ ಅ-ಸಾಧ್ಯ ನಿನಗೆಂದು ನಾ ಬಂದವನಲ್ಲನದ್ಯಾದಿ ಕ್ಷೇತ್ರಮೂರ್ತಿಗಳಲ್ಲಿ ನಿಜ ಜ್ಞಾನ-ವೃದ್ಧಜನರ ಹುಡುಕಿ ನಿನ್ನ ತಿಳಿಯಲು ಬಂದೆ 2 ಸತತ ಇದ್ದಲ್ಲೆ ಎನ್ನ ಸಲಹೊ ಅದರೊಳಗಾಗಿಅತಿಶಯವು ಉಂಟು ವಿಭೂತಿಯಲ್ಲಿಗತಿಯು ಸಾಧನಕೆ ಅಭಿವ್ಯಕ್ತ ಸಂದರ್ಶನದಿಸ್ಮøತಿಗೆ ವಿಶೇಷ ಮಾರುತಿರಮಣ ನಿನ್ನ 3 ನೋಡಿದೆನೆ ನಾ ನಿನ್ನ ನೋಡದೆ ಎಂದೆಂದುಪಾಡಿದೆನೆ ಆರಾರು ಪಾಡದೊಂದುಮಾಡಿದೆನೆ ಅರ್ಚನೆಯ ಮೀಸಲಾದುದು ಒಂದುಮೂಢಮತಿಯಲಿ ಮುಂದೆ ನಿಂದೆ ಕೈಮುಗಿದು 4 ಬಂದೆನೊ ನಾನಿಲ್ಲಿ ಬಹುಜನ್ಮದ ಸುಕೃತ-ದಿಂದ ನಿನ್ನ ಬಳಿಗೆ ಇಂದಿರೇಶಒಂದು ಮಾತ್ರವು ಇಟ್ಟು ಸಕಲವು ಅರ್ಪಿಸಿದೆಬಂಧನ ಕಡಿವ ಭಕುತಿಯು ಜ್ಞಾನ ನೀಡುವುದು 5 ಬಿನ್ನಪವ ಕೇಳು ಸ್ವಾಮಿ ಎನ್ನನ್ನೊಬ್ಬನ್ನೆ ಅಲ್ಲಎನ್ನ ಹೊಂದಿ ನಡೆವ ವೈಷ್ಣವರನಇನ್ನವರಿಗೆ ಬಾಹೊ ದುಷ್ಕರ್ಮಗಳ ಕೆಡಿಸಿಘನಗತಿಗೈದಿಸುವ ಭಕುತಿ ಕೊಡು ಕರುಣದಿ 6 ರಾಜರಾಜೇಶ್ವರ ರಾಜೀವದಳನಯನಮೂಜಗದೊಡೆಯ ಮುಕುಂದಾನಂದಈ ಜೀವಕೀದೇಹ ಬಂದದ್ದಕ್ಕು ಎನಗತಿ ನಿ-ವ್ರ್ಯಾಜದಿ ಸುರಗಂಗೆ ಸ್ನಾನವನು ಮಾಡಿಸೊ 7 ಎನಗೆ ಆವುದು ಒಲ್ಲೆ ಎಲ್ಲೆಲ್ಲಿ ಪೋದರುಕ್ಷಣ ಬಿಡದೆ ನಿನ್ನ ನೋಳ್ಪ ಜ್ಞಾನವ ಕೊಡೊಚಿನುಮಯಮೂರುತಿ ಗೋಪಾಲವಿಠಲಘನಕರುಣಿ ಮಧ್ವಮುನಿಮನಮಂದಿರನಿವಾಸ8
--------------
ಗೋಪಾಲದಾಸರು
ದಾರಿತೋರೋ ಮಾಯಾಕಾರ ಕರುಣಾಸಾಗರ ಪ ಪಾರುಗಾಣಲಾರೆನಯ್ಯ ದೂರಮಾಡದಿರಯ್ಯ ಅ.ಪ ಕರವ ನೀಡಿದೆ ಹರಿಯೇ ನಿನ್ನ ಭಜನೆಯೆಂಬುದ ಮರೆತು ಮೆರೆದೆನಯ್ಯ 1 ಸ್ನಾನ ನೇಮ ಜಪ ತಪಂಗಳ ಜ್ಞಾನವಿಲ್ಲವೈ ಧ್ಯಾನ ಹೋಮ ಭಜನೆ ಪೂಜೆ ಏನನರಿಯೆನಯ್ಯ 2 ನಿನ್ನ ದಾಸರದಾಸನೆಂದು ಎನ್ನ ಪಾಲಿಸೈ ಸನ್ನುತಾಂಗ ಮಾಂಗಿರೀಶ ನಿನ್ನ ನಂಬಿದೆ [ನಯ್ಯ] 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಾವಲ್ಲಿ ಕೂತಿದ್ದೀಯೊ ರೋಗಿಷ್ಠ ಕಾಯ ಎನ್ನನು ಕಾಯ್ಕೊಂಡು ಪ ಜೀವಕಂಟಕನಾಗಿ ಹೇಯದಿಂದೊಡಗೂಡಿ ಆವಕಾಲದಿ ರೋಗದ್ಹೊರಳುತ ಎಲೆ ಖೋಡಿ ಅ.ಪ ಏನು ಕರ್ಮವ ಮಾಡಿದ್ದೋ ಪಾಪಾತ್ಮ ನೀ ಹೀನಸ್ಥಿತಿಯ ಪೊಂದಿದಿ ನಾನಾವಿಧದಿ ಮಹಬೇನೆಯಿಂ ನರಳುತ ನೀನೆನ್ನ ಜತೆಗೂಡಿ ಬನ್ನಬಡಿಸುವಿ ಪಾಪಿ1 ಹೊಲಸಿನ ದ್ವಾರದಿಂದ ಇಹ್ಯಕೆ ಬಂದಿ ಮಲಮೂತ್ರ ತುಂಬಿಕೊಂಡು ತೊಳೆಯದಿರಲು ನಿಮಿಷ ಹೊಲಸಿಕ್ಕಿನಾರುವಿ ತಿಳಿದುನೋಡಲು ನಿನ್ನ ಸಲಿಗೆಯಿಂ ನಾ ಕೆಡುವೆ 2 ಎನ್ನ ಜೊತೆಯ ಪೊಂದಿರ್ದ ಕಾರಣದಿಂ ನಾ ನಿನ್ನ ಕ್ಷೇಮವ ಬಯಸುವೆ ಎನ್ನಯ್ಯ ಶ್ರೀರಾಮನುನ್ನತಡಿಗಳ ನಂಬಿ ಸನ್ನುತಿಯಿಂ ಕ್ಷಮೆಬೇಡಿ ಧನ್ಯನಾಗೆಲೋದೇಹ್ಯ3
--------------
ರಾಮದಾಸರು
ದಾಸ ದಾಸರ ಮನೆಯ ದಾಸಿಯರ ಮಗ ನಾನುಸಾಸಿರ ನಾಮದೊಡೆಯ ರಂಗಯ್ಯನ ಮನೆಯ ಪ ಶಂಕು ದಾಸರ ಮನೆಯ ಮಂಕುದಾಸನು ನಾನುಮಂಕುದಾಸನು ನಾನು ಮರುಳುದಾಸಸಂಕೀರ್ತನೆಯ ಮಾಡಿ ನೆನೆವ ಭಕ್ತರ ಮನೆಯ ಬಿಂಕದಿ ಬಾಗಿಲ ಕಾಯ್ವ ಬಡ ದಾಸ ನಾನಯ್ಯ 1 ಕಾಳಿದಾಸರ ಮನೆಯ ಕೀಳುದಾಸನು ನಾನುಆಳುದಾಸನು ನಾನು ಮೂಳದಾಸಫಾಲಾಕ್ಷ ಸಖ ನಿನ್ನ ಭಜಿಪ ಭಕ್ತರ ಮನೆಯಆಳಿನಾಳಿನ ದಾಸ ಅಡಿದಾಸ ನಾನಯ್ಯ 2 ಹಲವು ದಾಸರ ಮನೆಯ ಹೊಲೆಯ ದಾಸನು ನಾನುಕುಲವಿಲ್ಲದ ದಾಸ ಕುರುಬ ದಾಸಛಲದಿ ನಿನ್ನ ಭಜಿಪರ ಮನೆಯ ಮಾದಿಗ ದಾಸಸಲೆ ಮುಕ್ತಿ ಪಾಲಿಸೆನ್ನೊಡೆಯ ಕೇಶವನೆ 3
--------------
ಕನಕದಾಸ
ದಾಸಜನರ ಪ್ರಾಣೇಶ ಬಾರೋ ಪ ಉರಗಶಯನ ಬಾರೋ ಗರುಡಗಮನ ಬಾರೋ ಶರಧಿಸುತೆಯ ಪ್ರಾಣದರಸ ಬಾರೋ 1 ಕಲುಷಹರಣ ಬಾರೋ ವಿಲಸಿತಮಹಿಮ ಬಾರೋ ತುಲಸೀಮಾಲನೇ ಸಿರಿಲೋಲ ಬಾರೋ 2 ತರಳನುದ್ಧರ ಬಾರೋ ಕರಿಯಪಾಲನೆ ಬಾರೋ ಮಾನವ ಕಾಯ್ದ ಕರುಣಿ ಬಾರೋ 3 ಭಾವಜನಯ್ಯ ಬಾರೋ ಸೇವಕಜನ ಜೀವದಾಪ್ತ ಬಾರೋ 4 ಭಕ್ತವತ್ಸಲ ಬಾರೋ ಮುಕ್ತಿದಾಯಕ ಬಾರೋ ಭಕ್ತಾಂತರಂಗ ಶ್ರೀರಾಮ ಬಾರೋ 5
--------------
ರಾಮದಾಸರು
ದಾಸನಾದೆನಯ್ಯ ನಿಮ್ಮ ಏಸು ಜನ್ನಕೆ ವಾಸನೆ ಪರಿದ್ಯೋ ಶ್ರೀ ಹರಿ ಎನ್ನ ಜೀವಕೆ ಧ್ರುವ ಒಂದು ಮೊದಲಿಗಲ್ಲದೆ ಅನೇಕ ಜನ್ಮ ಜನಿಸಿ ಬಂದು ನೊಂದು ಬೆಂದು ಕಂದಿ ಕಳದೆನಯ್ಯ ಭಕ್ತ ವತ್ಸಲ 1 ವರ್ಮ ತಿಳಿಯಗೊಡದೆ ಎನ್ನ ಕವರ್iಪಾಶ ಕಟ್ಟಿ ಕೊರಳ ನಿರ್ಮಿಸಿ ನಿರ್ಮಿಸಿ ತಂದ್ಯೊ ನಿರ್ಮಳಾನಂತಾತ್ಮನೆ 2 ತಪ್ಪಿಲ್ಲದೆ ತಪ್ಪು ಹೊರಸಿ ಕೊಂಡಾಡಿದಯ್ಯ ಒಪ್ಪು ನಿಮಗಿದು ಕಪಟನಾಟಕ ಶ್ರೀ ಕೃಷ್ಣನೆ 3 ಎನ್ನ ಹೃದಯದೊಳಗಿದ್ದು ಭಿನ್ನಭೇದ ಮಾಡಿದೈಯ್ಯ ಇನ್ನಾರ ಮುಂದುಸುರಲಾಗದೊ ಶ್ರೀ ಕಾಂತನೆ 4 ಹೆಜ್ಜೆವಿಡಿದು ಬಂದ ನಿಜ ದಾಸ ಮಹಿಪತಿಗಿನ್ನು ಸಜ್ಜನರಿಗೀವ ಪದವ ಕೊಟ್ಟು ಕಾಯೊ ಕರುಣನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾಸರ ದಾಸರ ದಾಸನೆಂದೆನಿಸುವ ಲೇಸು ಭಾಗ್ಯವ ಕೊಡೊ ಶಾಶ್ವತವಾಗಿಪ ಆಶಾಪಾಶವ ನಾಶನಗೈಸಿ ದೇಶಿಗರೆಲ್ಲರ ಕೂಸೆಂದೆನಿಸಿ ಅ.ಪ. ಉಪಟಳ ಬಹಳ ನೇಮ ನಿಷ್ಠೆಯ ಸುಳಿವೆನಗಿಲ್ಲ ತಾಮಸನಾಗಿ ಬಳಲಿದೆನಯ್ಯ ಪ್ರೇಮದಿ ಪಿಡಿದು ಸಲಹೊ ದಮ್ಮಯ್ಯ 1 ವದನದಿ ನಿನ್ನ ನಾಮವ ನುಡಿಸೊ ಪದದಲಿ ನಿನ್ನ ಯಾತ್ರೆಯ ನಡೆಸೊ ಹೃದಯದಿ ನಿನ್ನ ರೂಪವÀ ತೋರಿ ಅನುದಿನ ಶೌರಿ 2 ಭಕ್ತವತ್ಸಲ ಭಾಗ್ಯಸಂಪನ್ನ ಭಕ್ತರ ಸಂಗತಿ ಪಾಲಿಸೊ ಘನ್ನ ಉಕ್ತಿಯ ಲಾಲಿಸೊ ನಾನು ಅನಾಥ ಮತ್ತೇನು ಬೇಡೆನೊ ಶಕ್ತ ಶ್ರೀಕಾಂತ 3
--------------
ಲಕ್ಷ್ಮೀನಾರಯಣರಾಯರು
ದಿನವೇ ಸುದಿನವು ಧ್ಯಾನಮಾಳ್ಪ ಜನವೇ ಸುಜನವು ಪ ಘನತರ ಹರಷದಿ ಮನದಣವಂದದಿ ಮನಸಿಜನಯ್ಯನ ಮಹಿಮೆಯ ಪಾಡುತ ಅ.ಪ ಯುಕ್ತದಿ ಕೂಡಿ ಅಯುಕ್ತ ವಿರಕ್ತಿಯ ಮಾಡಿ ಭುಕ್ತಿಗಾಗಲಿ ಭವಮುಕ್ತಿಗಾಲಿ ಹರಿ ಭಕ್ತರ ನೋಡಗೂಡಿ ರಕ್ತಿಲಿ ಪಾಡುವ 1 ತಾಳ ತಂಬೂರಿಯ ತಪ್ಪದೆ ತಂದು ಮೈಳೈಸಿಶ್ರುತಿಯ ಶ್ರೀಲಾಲಮನ ಕಥೆ ಪೇಳುವ ಕೇಳುವ 2 ಅರ್ಥಾಪೇಕ್ಷೆಯಲಿ ಕಾಲಗಳನು ವ್ಯರ್ಥಮಾಡದಲೆ ಪಾರ್ಥಸಾರಥಿಯನ್ನು ಪ್ರಾರ್ಥನೆ ಮಾಡುವ 3 ಕಾಮಕ್ರೋಧಗಳ ಕಳೆವ ರಘು ರಾಮ ನಾಮಗಳ ಪ್ರೇಮದಿಂ ಪಾಡುತ್ತ ರೋಮಾಂಚದೊಡಗೂಡಿ ಭವ ತಾಮಸ ಕಳೆಯುವ 4 ಹರಿವಾಸರವನು ಸಾಧಿಸಿ ಮುರಹರ ನಾಮಗಳು ಹರಿದಾಸರೊಡಗೂಡಿ ಹರಷದಿಂದೆಚ್ಚತ್ತು ವರದ ವಿಠಲ ನರಹರಿಯೆಂದು ಪಾಡುವ 5
--------------
ವೆಂಕಟವರದಾರ್ಯರು
ದಿಮ್ಮಿ ಸಾಲೆ ರಂಗ ದಿಮ್ಮಿ ಸಾಲೆ ಪ. ದಿಮ್ಮಿ ಸಾಲೆನ್ನಿರೊ ಗೋಮಕ್ಕಳೆಲ್ಲ ನೆರೆದುಗೋಪಾಂಗನೇರÀ ಮೇ¯ ಒಪ್ಪಿ ಭಸ್ಮ ಸೂಸುತಅ.ಪ. ಶಂಖನಾದ ಕೊಳಲ ಭೇರಿ ಪೊಂಕದಿ ಪಂಚಮಹಾವಾದ್ಯದಿಅಂಕವತ್ಸಲನ ನಿರಾತಂಕದಿಂದ ಹಿಡಿವ ಬನ್ನಿ1 ಗಂಧ ಕಸ್ತೂರಿ ಪುನುಗು ಚೆಂದದಿಂದ ಲೇಪಮಾಡಿನಂದಗೋಪಸುತನ ಮೇಲೆ ತಂದು ಸೂಸಿ ಭಸ್ಮವ 2 ಎರಳೆಗಣ್ಣಿನ ಬಾಲೇರು ಹರುಷದಿಂದ ಬಂದು ನಿಂತುವರದ ಕೆÉೀಶವನ ಮೇಲೆ ಪರಿದು ಸೂಸಿ ಭಸ್ಮವ 3 ಮತ್ತೆ ಕುಶಲದ ಬಾಲೆಯರುಗಳಿತ್ತೆರದಲಿ ಬಂದು ನಿಂತುಚಿತ್ತಜನಯ್ಯನ ಮೇಲೆತ್ತಿ ಸೂಸಿ ಭಸ್ಮವ 4 ವಾದಿರಾಜಗೊಲಿದು ಬಂದು ಸೋದೆಪುರದಲ್ಲಿ ನಿಂದಮೋದಿ ಹಯವದನನ ಮೇಲೆ ಪರಿದು ಸೂಸಿ ಭಸ್ಮವ5
--------------
ವಾದಿರಾಜ
ದೀನ ಬಂಧು ಕರುಣಾಸಿಂಧು ನೀನೆ ಬಂದು ರಕ್ಷಿಸೆಂದು ಪ. ನಿತ್ಯ ಮಂಗಳಾತ್ಮ ನಿಜ ಭೃತ್ಯಪೋಷಣ ಪರಾತ್ಮ ನಿತ್ಯ ಕಾರುಣ್ಯ ಚಿತ್ತಜನಯ್ಯನೆ ಈ ಜಗತ್ತಿನೊಳು ನಿನ್ನ ಪೋಲ್ಪ ಉತ್ತಮ ವಸ್ತುವ ಕಾಣೆ ಸತ್ಯಭಾಮಾ ವರ ನಿನ್ನಾಣೆ 1 ಸರಸಿಜಾಸನ ತಾನು ಪರಮ ಭಕುತಿಯಿಂದ ಸಿರಿವರ ನಿನ್ನ ನಾನಾ ಪರಿಯಿಂದಲಿ ಶರದೃತುವಿಲಿ ಬಹುಧರವಾಗಿ ಪೂಜಿಸುವ- ದರಿತು ಪಾಡುವೆನೀಗ ಕರುಣಿಸೆನ್ನ ನೀ ಬೇಗ 2 ಮತ್ಸಕೇತುಪಿತ ಭಕ್ತವತ್ಸಲ ವೆಂಕಟನಾಥ ತತ್ಸದೆಂಬೋ ಮಂತ್ರಾಗಮ್ಯ ಕುತ್ಸಿತಾಗಮ್ಯ ಉತ್ಸವ ಕಾಲದಲಿ ಸಿರಿವತ್ಸ ಬೆನ್ಹಾನಿನ್ನನು ನಿ- ರ್ಮತ್ಸರದಿ ನಂಬಿದೆ ಗೋವತ್ಸವೈದುವಂತೆ ಬಾರೊ 3
--------------
ತುಪಾಕಿ ವೆಂಕಟರಮಣಾಚಾರ್ಯ
ದೇವರ ದೇವನೆ ಕಾಯೊ ದೇವಕಿನಂದನೆ ಕಾಯೊಜೀವರಾಸಿಗಳಿಗೆ ಸಂಜೀವನ ದೇವನೆ ಕಾಯೊ ಪ . ಮಕರಿ ಕೈಗೆಸಿಕ್ಕಿ ಮಾನಭಂಗಗೊಂಡ ದೀನಪ್ರಕೃತಿ ಬಂಧನದಿಂದ ಪಾಡು ಬಡುತ್ತಿದ್ದೆನಯ್ಯ 1 ಕಾಮವೆಂಬ ಕಡುವೈರಿ ಕಂಡಕಂಡಕಡೆಗೆನ್ನಸೀಮೆಯೊಳು ಸುಳಿವಂತೆ ಶ್ರೀಧರ ಮಾಡಿದ ನೋಡು 2 ಶ್ರೀ ಹಯವದನ ನೀನು ಶ್ರಿತಜನ ಕಾಮಧೇನುಮಹಂತನೆಂಬುದ ಕೇಳಿ ಮೆಚ್ಚಿಬಂದೆನಯ್ಯ ನಿನ್ನ 3
--------------
ವಾದಿರಾಜ
ದೇವಿ ನರ್ಮದೆ ಪಾಲಿಸಮ್ಮಾ ಪ ಕಾವನಯ್ಯನ ಚರಣ ತೋರಿಕಾವುದೆಮ್ಮ ಪಾವನಾತ್ಮಕೆ ಅ.ಪ. ಕಲುಷ ಹರಣವಮ್ಮ 1 ವರ ವಿಸ್ತಾರ ಪಾತ್ರವಮ್ಮ | ನರರಾಯಾಸ ಶಾಂತವಮ್ಮಅರುಣ ಉದಯದಿಂದ ನಿನ್ನ | ಸುರನರಾದಿ ಸೇವಿಸುವರು 2 ವರ ಸುಜಪದಮಾಲೆ ಕರದಿ |ದರವು ಪದುಮ ಗ್ರಂಥಪಾಣಿಗುರು ಗೋವಿಂದ ವಿಠಲ ಚರಣ |ನಿರತ ಧ್ಯಾನಾನಂದ ಮಗ್ನೆ3
--------------
ಗುರುಗೋವಿಂದವಿಠಲರು
ದೇವಿ ಲಕ್ಷಣೆ ಎಮ್ಮ ಸಲಹ ಬೇಕಮ್ಮಭಾವದಲಿ ನೀನಿದ್ದು ಭಾವನಯ್ಯನ ತೋರೀ ಪ ಪಿತನು ಬೃಹತ್ಸೇನ ನಿನಗಾಗಿ ಸ್ವಯಂವರವಹಿತದಿಂದಲೆಸಗುತ್ತ ಲಕ್ಷ್ಯವನೆ ಬಿಗಿದೂ |ಅತಿಶಯದ ಧನುವಿಗೆ ಸಜ್ಜಿಸುತ ಬಾಣವನುಚತುರತೆಲಿ ಭೇದಿಪಗೆ ಸುತೆಯ ಪಣವೆಂದ1 ಮತ್ಸ್ಯ ಯಂತ್ರವಿದಲ್ಲಔಪಚಾರಿಕವೆಲ್ಲ ಸರ್ವವಿಧ ಛನ್ನಾ |ವೈಪರೀತ್ಯದಿ ದ್ವಾರ ಉಪರಿ ಇರುವುದು ಕೇಳಿಕಾಪುರುಷಗಿದು ಕಾಂಬ ಮಾರ್ಗವೇ ಇಲ್ಲ 2 ಸೂತನುತ ಮಾಗಧನು ಕೌತುಕದ ಕೌರವರುಪಾರ್ಥನೂ ಅವನಣ್ಣ ಭೀಮಸೇನಾ |ಆತು ಧನುವನು ಲಕ್ಷ್ಯ ಭೇದಿಸಲೆ ಬೇಕೆಂದುಪೃಥಿವಿಪರು ಮತ್ತಿತರು ಬಂದು ಸೇರಿದರು 3 ಸಜ್ಜುಗೈಯಲು 5ನುವ ಆರಿಂದಲಾಗದಿರೆಲಜ್ಯೆಯಿಂದಲಿ ಮರಳಿ 5ೀಗುವರೆ ಬಹಳ |ಅರ್ಜುನನು ತಾನೊಬ್ಬ ಲಕ್ಷ್ಯವೀಕ್ಷಣ ಶಕ್ತಅರ್ಜುನಾಗ್ರಜ ಹರಿಗೆ ಅಪರಾಧವೆನೆ ಸರಿದ 4 ನೆರೆದ ಸಭೆಯಲ್ಲಿ ಪುಷ್ಪಹಾರವನೆ ಪಿಡಿಯುತ್ತಬರುತ ವೈಯ್ಯಾರದಲಿ ಶಿರಿ ಕೃಷ್ಣ ಕಂಠದಲ್ಲಿ |ಇರಿಸಿ ಪರಮಾನಂದ ಭರಿತಳಾಗಲು ಹರಿಯುಕರಪಿಡಿದು ಹೊರವಂಟ ತನ್ನ ದ್ವಾರಕಿಗೇ 5 ಪರಿ ಪರಿ ಪುಷ್ಪ ವೃಷ್ಟಿಗಳ ಗರೆಯೇ |ದುರುಳರೆದುರಾಗಿ ಸಂಗರಕೆ ಬರುತಿರಲುಹರಿ ಭೀಮರೆದುರಿಸದೆ ದುರುಳರೋಡಿದರು 6 ಮೋದ ಬಡುವಂಥ |ಧೀವರರ ಮನೋಭೀಷ್ಟ ಪೂರ್ಣವನೆ ಗೈಯ್ಯುವನುದೇವ ಗುರು ಗೋವಿಂದ ವಿಠಲ ಕೃಪೆಯಿಂದ 7
--------------
ಗುರುಗೋವಿಂದವಿಠಲರು
ದೇವೇಂದ್ರನ ಸೊಸೆ ದೇವಕ್ಕಿ ತನಯಳು ಏನೇನು ಬಯಸಿದಳು ಪ ಒಂದು ತಿಂಗಳು ತುಂಬಲು ಸುಭದ್ರ ಅಂಜೂರಿ ದ್ರಾಕ್ಷಿ ಕಿತ್ತಳೆ ಜಂಬುನೇರಳು ಬಯಸಿದಳು ಅಂಬುಜಾಕ್ಷನ ತಂಗಿ ಪೈಜಣ ರುಳಿ ಗೆಜ್ಜೆ ಕಾ- ಲುಂಗುರ ಕಿರುಪಿಲ್ಯ ಇಟ್ಟೇನೆಂಬುವಳು 1 ಎರಡು ತಿಂಗಳು ತುಂಬಲು ಸುಭದ್ರ ಪರಡಿ ಮಾಲತಿ ಸಣ್ಣ ಶ್ಯಾವಿಗೆ ಬಯಸಿದಳು ಪರಿವೇಶನ ತಂಗಿ ಹರಡಿ ಕಂಕಣ ಹಸ್ತ ಕಡಗ ಹಿಂಬಳೆ ದ್ವಾರ್ಯ ಇಟ್ಟೇನೆಂಬುವಳು 2 ಮೂರುತಿಂಗಳು ತುಂಬಲು ಸುಭದ್ರ ವಾಲ್ಯ ಪಚ್ಚದ ಚಂದ್ರ ಬಾಳ್ಯವ ಬಯಸಿದಳು ಮಾರನಯ್ಯನ ತಂಗಿ ತೋಳಿಗ್ವಜ್ರದ ವಂಕಿ ಮಾಣಿಕ್ಯದ್ವೊಡ್ಯಾಣ ಇಟ್ಟೇನೆಂಬುವಳು 3 ನಾಲ್ಕು ತಿಂಗಳು ತುಂಬಲು ಸುಭದ್ರ ಆಕಳ ತುಪ್ಪ ಅನಾರಸ ಬಯಸಿದಳು ಶ್ರೀಕಾಂತನ ತಂಗಿ ತೂಕದ ಸರಿಗೆಯಿಟ್ಟು ಏಕಾವಳಿಯ ಸರ ಹಾಕೇನೆಂಬುವಳು 4 ಐದು ತಿಂಗಳು ತುಂಬಲು ಸುಭದ್ರ ಕೆನೆಮೊಸರ್ಹಾಕಿದ ಬುತ್ತಿ ಚಿತ್ರಾನ್ನವ ಬಯಸಿದಳು ಅಸುರಾಂತಕನ ತಂಗಿ ಹಸುರುಪತ್ತಲನುಟ್ಟು ಕುಸುಮ ಮಲ್ಲಿಗೆಮೊಗ್ಗು ಮುಡಿದೇನೆಂಬುವಳು 5 ಆರು ತಿಂಗಳು ತುಂಬಲು ಸುಭದ್ರ ಚೌರಿ ರಾಗಟೆ ಜಡೆಬಂಗಾರ ಬಯಸಿದಳು ಮಾರನಯ್ಯನ ತಂಗಿ ನಾಗಮುರಿಗೆನಿಟ್ಟು ಜಾಜಿ ಮಲ್ಲಿಗೆಮೊಗ್ಗು ಮುಡಿದೇನೆಂಬುವಳು 6 ಏಳು ತಿಂಗಳು ತುಂಬಲು ಸುಭದ್ರ ಕ್ಷೀರ ಮಂಡಿಗೆ ಬುಂದ್ಯ ಫೇಣಿಯ ಬಯಸಿದಳು ಕಮಲ ಕ್ಯಾದಿಗೆ ಮುಡಿಯ ನಿಂಬಾವಳಿ ಪತ್ತಲ ನಿರಿದುಟ್ಟೇನೆಂಬುವಳು7 ಎಂಟು ತಿಂಗಳು ತುಂಬಲು ಸುಭದ್ರ ಚಿಂತಾಕು ಪದಕ ಕಟ್ಟಾಣಿಯ ಬಯಸಿದಳು ವೈಕುಂಠಪತಿಯ ತಂಗಿ ಇಂಟರ್ ಪಪ್ಪುಳಿನುಟ್ಟು ಸೀಮಂತದುತ್ಸವ ಮಾಡೆ ಸುಖದಿಂದಿರುವಳು 8 ಒಂಬತ್ತು ತಿಂಗಳು ತುಂಬಲು ಸುಭದ್ರೆಗೆ ಬಂಗಾರದ್ಹೊರಸಿನಲ್ಲಿರಿಸಿ ಆರತಿ ಮಾಡಲು ಮಂಗಳಮಹಿಮ ಭೀಮೇಶಕೃಷ್ಣನ ತಂಗಿ ಕಂದ ಅಭಿಮನ್ಯು ಎಂಬುವನ ಪಡೆದಳು 9
--------------
ಹರಪನಹಳ್ಳಿಭೀಮವ್ವ