ಒಟ್ಟು 397 ಕಡೆಗಳಲ್ಲಿ , 69 ದಾಸರು , 289 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದು ನಮ್ಮ ಮನೆಗೆ ನಿಂದಿಸಿಲ್ಲಿಗೆ ಬಂದೆಚಂದೇನೆ ಇದು ಚಂದೇನೆ ಪ.ಚಾರುಗುಣಶೀಲೆಯರ ದೂರಿ ಇಲ್ಲಿಗೆ ಬಂದೆಚಾರ್ವಾಕಳೆಂದು ಸಾರಿ ಕೈ ಹೊಯ್ದರು 1ಸುಂದರ ಗುಣದೆಯರಿಗೆ ಅಂದ ಮಾತುಗಳೆಲ್ಲಹೊಂದೋವೇನೆ ವ್ಯರ್ಥ ನಿಂದ್ಯಳಾದಿ ನೀನು 2ಶ್ರೀಶನ ಸತಿಯರ ಮೀಸಲ ಗುಣದೆಯರಹಾಸ್ಯ ಮಾಡಿ ಬಂದು ದೂಷಳಾದಿ ನೀನು 3ಭಾಳಗುಣಾಢ್ಯರಿಗೆ ಅವಹೇಳನವಾಡಿದಿತಾಳೆ ಈ ಮಾತಿಗೆ ನಿವಾಳಿಸುವರ ನಿನ್ನ 4ಮುದ್ದು ರಾಮೇಶನ ಅರ್ಧಾಂಗಿಯರಿಗೆಅವದ್ದ ನುಡಿದು ಬಂದು ಬಿದ್ದು ನಗುವಂತೆ 5
--------------
ಗಲಗಲಿಅವ್ವನವರು
ಬಿಟ್ಟು ಹೋಗುವರೇನೊ ಕೃಷ್ಣಕೋಮಲೆಯರವೃಷ್ಟಿವÀರ್ಯ ಸಕಲ ಇಷ್ಟದ ಬಾಲೆಯರ ಪ.ಮಿತ್ರೆಯರ ಕೂಡಿ ರಮಣ ಚಿತ್ತದಿ ಚಿಂತಿಸಿರಾತ್ರಿ ಕೊಳಲು ವಿಚಿತ್ರದಿಂದ ಊದಿದಿ 1ಎಲ್ಲ ವಿಷಯ ಬಿಟ್ಟು ನಿಲ್ಲದೆ ಬಂದರುಒಲ್ಲದೆ ಅಡಗಿದಿ ಕಲ್ಲೆದೆ ಅಂದ ಪಾರ್ಥ 2ಇಟ್ಟು ನಿನ್ನಲೆ ಮನ ಬಿಟ್ಟು ವಿಷಯ ಸುಖಗಟ್ಯಾಗಿ ರಾತ್ರಿಲೆ ಬಂದು ಎಷ್ಟು ನಂಬಿದ್ದಾರಲ್ಲೊ 3ಇಂಥ ವಂಚಕನೆಂದು ಕಾಂತೆಯರು ಅರಿಯರುಭ್ರಾಂತಿಯ ಗೈಸಿದಿ ಎಂತು ಅರ್ಜುನ ನುಡಿದ 4ಹಸಿದವಗೊಂದೆÉ ತುತ್ತು ಅಶನವÀ ಕೊಟ್ಟು ಅನ್ನವ್ಯಸನವ ಹಚ್ಚಿದಂತೆ ಕುಸುಮನಾಭ ಮಾಡಿದ 5ಬೆಂದು ಬಿಸಲೆÉೂಳು ಬಹಳ ಬಂದ ಪುರುಷಗೆಉದಕಒಂದು ಗುಟುಕುಕೊಟ್ಟು ಆನಂದವ ಮಾಡಿದೆ 6ಕಂದಗೆ ಸ್ತನ ಕೊಟ್ಟುಬಿಂದು ಬಾಯೊಳಗೆ ಇಟ್ಟುಹಿಂದಕ್ಕೆ ಸರೆಯದಂತೆ ತಂದೆ ರಾಮೇಶ ಮಾಡಿದ 7
--------------
ಗಲಗಲಿಅವ್ವನವರು
ಬಿಡಲಾರೆ ಬಿಡಲಾರೆ ನಿನ್ನಡಿದಾವರೆಯ ನೀಕೊಡು ಕಂಡ್ಯ ಅಭಯವಿಡಿದೆಮ್ಮ್ಮಯ ತಂದೆ ಪ.ಕೂಗುವೆ ಕೂಗುವೆ ಕೃಪಾಸಾಗರನೆಂದ್ಹೇಳಿ ತಾಕೂಗಿದರೊದಗಿ ಕಾಯಿದೆ ನಾಗನ್ನಕೇಳಿತಂದೆ1ಬಡವ ನಾ ಬಡವನು ಕಾಣೊ ಬಾಡದೊನಮಾಲಿ ಕಡುಬಡವ ಸುದಾಮನ ಕೈಯವಿಡಿದ್ಯೆಂದುಕೇಳಿತಂದೆ2ಡೊಂಕುನಡೆದೆಡೊಂಕುನುಡಿದೆ ಶಂಕಿಲ್ಲದಲೆ ಮೂಡೊಂಕಿಯ ತಿದ್ದಿದ ಬಿರುದಾಂಕನಕೇಳಿತಂದೆ3ಬಲ್ಲೆನೊ ಬಲ್ಲೆನೊ ನೀನಿದ್ದಲ್ಲಿ ವ್ರಜದಲ್ಲಿ ಗೋಗೊಲ್ಲರು ಪುಲ್ಗಲ್ಲಿಗೆ ಕೈವಲ್ಯವುಕೇಳಿತಂದೆ4ಅವರೇವೆ ನಿನ್ನವರು ನಾನೇನವರ ಶಿಶುವಲ್ಲೆ ತನ್ನವರಹೊರೆವಪ್ರಸನ್ವೆÉಂಕಟ ತವರೂರಕೇಳಿತಂದೆ5
--------------
ಪ್ರಸನ್ನವೆಂಕಟದಾಸರು
ಭಕ್ತವತ್ಸಲ ಬಂದು ಬಾಗಿಲಲಿ ನಿಂತುಎತ್ತ ಹೋದನೆಂದು ಧಿಗಿಲು ಎನುತಮತ್ಯಾಕೆ ಬರಲಿಲ್ಲವೊ ಅರ್ಜುನರಾಯ ಪ.ವೀರರಾಯರÀ ಸೇವೆ ಪರಿಪರಿ ಮಾಡಿದ್ದುಮರೆತುಕೊಂಡು ಧರ್ಮ ದೊರೆಯಾಗಿ ಕುಳಿತ 1ಪಾಂಚಾಲಿ ರಮಣನು ಪಂಚ ಪಗಡೆಯನಾಡಿವಂಚನೆ ಮಾಡದೆ ಹಂಚಿಕೆಯಲಿಕುಳಿತ 2ಧಿಟ್ಟ ಭೀಮರಾಯ ಹುಟ್ಟು ಬಚ್ಚಿಟ್ಟುಕೊಂಡುಸಿಟ್ಟಿಲಿಂದ ಮೈ ಮುಟಿಗ್ಯಾಗಿ ಕುಳಿತ 3ಪುಂಡ ಭೀಮರಾಯ ಮಂಡಿ ಕೆದರಿಕೊಂಡುಖಂಡಗನ್ನವ ಉಂಡು ದಿಂಡೆನ್ಹಾಂಗ ಕುಳಿತ 4ಚಲ್ವ ಅರ್ಜುನರಾಯ ಬಿಲ್ಲು ಮೂಲೆಗೆ ಇಟ್ಟುಒಲ್ಲಿಯ ಮುಸುಕು ಹಾಕಿ ಎಲ್ಲೋ ಹೋಗಿ ಕುಳಿತ 5ಹೆÀಚ್ಚಿನ ಗಾಂಡೀವ ಬಚ್ಚಿಟ್ಟು ಕೋಣ್ಯಾಗೆಹುಚ್ಚನ್ಹಾಂಗೆಮಾರಿಮುಚ್ಚಿಕೊಂಡು ಕುಳಿತ6ಚದುರ ನಕುಲರಾಯ ಎದುರಿಗೆ ಬಾರದೆಹೆದರಿಕೊಂಡು ತಾನು ಕುದುರೆ ಮನೆಯ ಹೊಕ್ಕ 7ಧನವೆತ್ತಿಸಹದೇವಘನವಿದ್ಯಾನರಿಯದೆದನಕರುಗಳನ್ನೆಲ್ಲ ಅನುಸರಿಸಿ ಇರುವ 8ಪಾಂಡವರೆ ಶ್ರೇಷ್ಠರು ಧೈರ್ಯವೆ ಇರಲೆಂದುಶೌರಿಕುರುರಾಯಗೆ ತಾ ನುಡಿದನು9ಇಷ್ಟೂರು ಹರಿಗಂಜಿ ಬಿಟ್ಟರು ಕೈಕಾಲುಧಿಟ್ಟ ಬಲರಾಮ ತಾ ‌ಘಟ್ಯಾಗಿ ಕೈ ಹೊಯಿದನು 10ಇಷ್ಟೊಂದು ಗಾಬರಿ ದಿಟ್ಟೆಯರೆ ಆಗದಿರಿಕೊಟ್ಟನುಅಭಯದಿಟ್ಟ ರಾಮೇಶ11
--------------
ಗಲಗಲಿಅವ್ವನವರು
ಭಳಿ ಭಳಿರೆ ಬಲಭೀಮ ಭಳಿರೆ ಸದ್ಗುಣಧಾಮಭಳಿರೆ ದ್ರೌಪದಿನಾಥ ಭಳಿರೆ ಶ್ರೀಹರಿದೂತಭಳಿರೆ ಅಪ್ರತಿಚರಿತ ಭಳಿರೆ ಬಲದೇವಸುತಭಳಿರೆ ಭೂಮಿಪಲಲಾಮ ಭೀಮ ಪ.ಯೋಚಿಸಿ ಖಳರು ನೆರೆದು ಭೂಚಕ್ರವಾಕ್ರಮಿಸೆಶ್ರೀ ಚಕ್ರಿ ದಯದಿ ಅಮೃತ ರೋಚಕುಲಜಾತ ಪಾಂಡು ಚಕ್ರವರ್ತಿ ಕಮಲಲೋಚನೆಯ ಪೃಥೋದರಾಬ್ಧಿ ಚಂದ್ರನಂತೆ ಜನಿಸಿಆ ಚಕ್ಷುವಿಹೀನ ಭವಾಬ್ಧಿಚೋರರೆದೆಶೂಲಗೋಚರಿಸುವಂತಿಳೆಗೆ ಸೂಚಿಸಿ ಮುಖೋದಯವಕೀಚಕ ಹಿಡಿಂಬ ಬಕ ನೀಚಮಾಗಧಮುಖರವಾಚಿಸಗುಡದೆ ಬಡಿದೆ ಭೀಮ 1ಕೊಬ್ಬಿದ ಖಳರು ಧಾತ್ರಿಗುಬ್ಬಸವ ತೋರುತಿರೆಅಬ್ಬರದಿ ಕರದ ಗದೆಗ್ಹಬ್ಬದೌತಣವಿಡುತಒಬ್ಬೊಬ್ಬರೊಮ್ಮೆ ಹನ್ನಿಬ್ಬರನ ಕರೆದುಉಬ್ಬುಬ್ಬಿ ರಣದಿ ಕುಣಿದೆಹಬ್ಬಿ ಬಹ ನಾಗರಥನಿಬ್ಬರದ ಬಿಂಕದವರೆಬ್ಬಿಸಿ ನಭಕೆ ಚಿಮ್ಮಿ ಬೊಬ್ಬಿರಿದು ಕೌರವರನಿಬ್ಬಗೆದು ಡಾಕಿನಿಯ ಉಬ್ಬಿಸಿದೆ ನಿನಗೆಪಡಿಹೆಬ್ಬುಲಿಗಳುಂಟೆ ಜಗದಿ ಭೀಮ 2ನಿರ್ಧರ ಪರಾಕ್ರಮ ಧನುರ್ಧರರ ಬೀಳ್ಗೆಡಹಿಸ್ವರ್ಧಾಮಗರು ತುತಿಸೆ ದುರ್ಧಾರ್ತರಾಷ್ಟ್ಟ್ರರಂದುರ್ಧಾಮಕೆಬ್ಬಟ್ಟಿದುರ್ಧರ್ಷಗುರುರಥವನೂಧ್ರ್ವಕ್ಕೊಗೆದುಲಿದು ಚೀರ್ದೆದುರ್ಧರ ಖಳಾನುಜನ ಮೂರ್ಧ ಕಾಲೊಳು ಮೆಟ್ಟಿಶಾರ್ದೂಲನಂದದಿ ಕೆಡದೊಡಲಿನಅರುಣಜಲಪೀರ್ದಂತೆ ತೋರ್ದೆ ಗೋವರ್ಧನಧರನನುಜÕವಾರ್ಧೀಸ್ಯರ್ಪಿಸಿದೆ ಮಝರೆ ಭೀಮ 3ಕಡಲೊಡೆಯನೆಡೆಗೆ ಬಲುಕೆಡುನುಡಿಯ ನುಡಿದವರಪಿಡಿ ಪಿಡಿದು ಖಡುಗದಿಂ ಕಡಿಕಡಿದು ಕಡೆಗಾಲದಮೃಡಕೋಟಿಯಂದದಲಿ ಕಡುರೋಷದಡಿಗಡಿಗೆಘುಡುಘುಡಿಸಿ ಹುಡುಕಿ ತುಡುಕಿಷಡಕ್ಷೋಹಿಣಿ ಪಡೆಯ ಹುಡಿ ಹುಡಿಗುಟ್ಟಿ ಪೊಡವಿ ದಿಗ್ಗಡಣ ಜಯದಂತಿ ಧಿಮ್ಮಿಡಿಸಿ ಕರ್ಮಡು ಪೊಕ್ಕುಕಡುಗಲಿಯ ತೊಡೆಮುರಿಯೆ ನಡುಮುರಿಯೆ ಗದೆಯಿಂದಹೊಡೆದೆಶಸುಪಡೆದೆ ಜಗದಿ ಭೀಮ 4ಅಪ್ಪಳಿಸಿ ಕುರುಪತಿಯ ಚಿಪ್ಪೊಡೆಯೆ ತಲೆದುಳಿದುಬಪ್ಪುವಾರುಷವೆಂಬ ಸುಪ್ತಸೂತ್ರದಿ ಅಜನಬೊಪ್ಪ ಕೃಷ್ಣನ ಕಟ್ಟುವ ಪರಾಕ್ರಮಿಗೆನುತಸುಪ್ರಾಯಶ್ಚಿತ್ತವೆನುತತಪ್ಪುಗಳನೊಂದೊಂದ ನೆಪ್ಪೆತ್ತಿ ತನ್ಮತಿಗೆಹೆಪ್ಪೆನುವ ವಾಗ್ಬಾಣ ಕುಪ್ಪಳಿಸಿ ಕೊಂದು ಶ್ರೇಯಃಪತಿ ಪ್ರಸನ್ವೆಂಕಟಾರ್ಪಣವ ಮಾಡಿ ವೈಷ್ಣವ ಪ್ರತತಿಯನು ಪೊರೆದೆ ಭೀಮ 5
--------------
ಪ್ರಸನ್ನವೆಂಕಟದಾಸರು
ಭೇದ ಮುಕ್ತಾವಲಿ (ಕೋಲು ಹಾಡು)ಕೋಲು ಮುಕ್ತಿಮಾರ್ಗದ ಕೋಲು ದುಷ್ಟಶಾಸನಕೋಲು ಸುಖತೀರ್ಥಯತಿರಾಯನ ಕರದಂಡುಕೋಲು ಕೋಲೆನ್ನ ಕೋಲೆ ಪ.ಶ್ರೀದೇವಹೂತಿಜಾಜನಂಘ್ರಿಗೆ ನಮಿಸುವೆಶ್ರೀದೇವಿ ಪದಕೆ ಎರಗುವೆ ಕೋಲೆಶ್ರೀದೇವಿ ಪದಕೆ ಎರಗುವೆ ಮುಖ್ಯಗುರುವಾದಜವಾಯುರೊಂದಿಪೆ ಕೋಲೆ 1ವಾಣಿ ಭಾರತಿದೇವಿ ಗರುಡ ಮಹೇಶಾನಂತಜ್ಞಾನದಾತರಿಗೆ ನಮೋ ಎಂಬೆ ಕೋಲೆಜ್ಞಾನದಾತರಿಗೆ ನಮೋ ಎಂಬೆ ಶ್ರೀವಿಷ್ಣುಮಾನುನೆರಾರ್ವರ ಶರಣೆಂಬೆ ಕೋಲೆ 2ಗರುಡನ ರಂಭೆವಾರುಣಿಗಿರಿಜೇರಿಗೊಮ್ಮೆಕರಗಳ ಮುಗಿದು ಸ್ಮರಿಸುವೆ ಕೋಲೆಕರಗಳ ಮುಗಿದು ಸ್ಮರಿಸುವೆ ಇಂದ್ರ ಕಾಮವರಪ್ರಾಣಾನಿರುದ್ಧರ ಬಲಗೊಂಬೆÉ ಕೋಲೆ3ಇಂದ್ರಾಣಿರತಿಮುಖ್ಯರಾದ ತಾರತಮ್ಯದವೃಂದಾರಕಋಷಿನೃಪರನು ಕೋಲೆವೃಂದಾರಕಋಷಿನೃಪರಮನುಷ್ಯೋತ್ತಮರಂ ಧ್ಯಾನಿಸುವೆ ಮನದಲಿ ಕೋಲೆ 4ಏನೂ ಇಲ್ಲೆಂಬನ ಹಾನಿಗೆ ಕಡೆಯಿಲ್ಲತಾನೀಶನೆಂದು ನುಡಿದವ ಕೋಲೆತಾನೀಶನೆಂದು ನುಡಿದವ ತಮಸನುತಾನುಂಬ ತನ್ನ ಬಳಗದಿ ಕೋಲೆ 5ಹರಿಯ ಗುಣಕೆ ಎಣಿಕೆನಿಟ್ಟವ ಕೆಟ್ಟವಹರಿನಿರ್ಗುಣೆಂಬ ಡಂಬರ ಕೋಲೆಹರಿನಿರ್ಗುಣೆಂಬ ಡಂಬರ ಸಂಗದಿಧರೆಯ ಸಜ್ಜನರು ಮತಿಗೆಡಲಿ ಕೋಲೆ 6ಕ್ಷೀರಾಂಬುಧಿಮನೆಯ ವಾಸುದೇವನ ಆಜ್ಞಾಧಾರಿಯೆನಿಪ ವಾಯುದೇವನು ಕೋಲೆ ಆಜ್ಞಾಧಾರಿಯೆನಿಪ ವಾಯುದೇವನು ಮೊದಲಿಗೆವೀರ ಹನುಮ ಭೀಮನಾದನು ಕೋಲೆ 7ಮೂರನೆ ಅವತಾರಿ ಮಧ್ವರಾಯನು ಮುಕ್ತಿದಾರಿಯ ತನ್ನವರಿಗೆಲ್ಲ ಕೋಲೆ ಮುಕ್ತಿದಾರಿಯ ತನ್ನವರಿಗೆಲ್ಲ ತೋರಿದುದಾರಿಯ ಪದವ ಹೊಂದಿದೆ ಕೋಲೆ 8ಗುರುಮಧ್ವ ಎನ್ನ ಮಾತೆ ಗುರುಮಧ್ವನೆನ್ನತಾತಗುರುಮಧ್ವನಾಥ ಸಖಭ್ರಾತ ಕೋಲೆಗುರುಮಧ್ವನಾಥ ಸಖಭ್ರಾತನೆಂದವರಿಗೊಲಿವನು ಗತಿಯ ಕೊಡುವನು ಕೋಲೆ 9ಸುಖತೀರ್ಥರಾಯನ ಹಿತವಾಕ್ಯಕೆಣೆಯಿಲ್ಲಶುಕತಾತ ಸಮನ ದೈವಿಲ್ಲ ಕೋಲೆಶುಕತಾತ ಸಮನ ದೈವಿಲ್ಲವೆಂದವರಭಕುತಿಯ ಬೇಡಿ ಬಯಸಿದೆ ಕೋಲೆ 10ಭಕುತ್ಯೆಂಬ ಮುಯ್ಯವ ಹರಿಪಾದಕರ್ಪಿಸಿದಅಕಳಂಕ ಮಧ್ವ ಮುನಿರಾಯ ಕೋಲೆಅಕಳಂಕ ಮಧ್ವಮುನಿರಾಯನಂಘ್ರಿಗೆಸಕಳ ಭಾರವ ಒಪ್ಪಿಸಿದೆನು ಕೋಲೆ 11ವಿಶಿಷ್ಠ ಸ್ವರೂಪಾನಂದರ್ಭಾವ ಮೋಕ್ಷ ಸುವಾಸಿನೇರೆಲ್ಲರೊಂದಾಗಿ ಕೋಲೆ ಸುವಾಸಿನೇರೆಲ್ಲರೊಂದಾಗಿ ಹೋಗುವಹೇಸಿ ನಾರೇರ ಗೆಲ್ಲುವ ಕೋಲೆ 12ನಮ್ಮ ಮುತ್ತಯ್ಯನಾದ ಮರುತರಾಯನ ಕೀರ್ತಿನಿರ್ಮಲ ಬುಧರಿಗಮೃತವು ಕೋಲೆನಿರ್ಮಲ ಬುಧರಿಗಮೃತವು ಧರೆಯೊಳುಹಮ್ಮಿನ ಖಳರಿಗೆದೆಗಿಚ್ಚು ಕೋಲೆ 13ಮುತ್ತಯ್ನಂಶದ ಒಳಗೊಬ್ಬ ಜನಿಸಿದಹೆತ್ತಯ್ನಮ್ಮ ಜಯರಾಯ ಕೋಲೆಹೆತ್ತಯ್ನಮ್ಮ ಜಯರಾಯ ತನ್ನ ಬಂಧುಮೊತ್ತದಿ ರಾಜ್ಯವಾಳಿದ ಕೋಲೆ 14ಜಯರಾಯ ಸಂತತಿಯ ಮಕ್ಕಳು ನಾವೀಗಜಯನವಭೇರಿ ಹೊಯಿಸುತ ಕೋಲೆಜಯನವಭೇರಿ ಹೊಯಿಸುತ ರವದ ಜಾಗಟೆಯ ಬಿರುದಲಿ ಬರುತೇವೆ ಕೋಲೆ 15ಬಯಲು ಮಾತಿನವ ಕಡೆಗಾಗಿ ತತ್ವವಿನಯ ವಾಕ್ಯ ನಿಮಗೆ ಸೊಗಸಲ್ಲ ಕೋಲೆ ವಿನಯವಾಕ್ಯ ನಿಮಗೆ ಸೊಗಸಲ್ಲ ಕೇಳಿದರೆಭಯಬಿಟ್ಟುಕೇಳಿಕವಿಯರು ಕೋಲೆ16ಲೌಕಿಕ ಮಾತಿನಂತಲ್ಲ ಮುಯ್ಯದ ಹಾಡುವೈಕುಂಠಪತಿಯ ಅರಮನೆಯ ಕೋಲೆವೈಕುಂಠಪತಿಯ ಅರಮನೆಯಾಸ್ಥಾನದಏಕಾಂತ ನಾರೇರೊಪ್ಪಿದ್ದು ಕೋಲೆ 17ಹಾದಿ ಬೀದಿಯ ಜನರ ಮೆಚ್ಚಿನ ಮುಯ್ಯಲ್ಲಮಾಧವನ ಶ್ವೇತದ್ವೀಪದ ಕೋಲೆಮಾಧವನ ಶ್ವೇತದ್ವೀಪದ ಮಂದಿರದಿಶ್ರೀದೇವಿಯಮ್ಮ ಕೇಳ್ವಳು ಕೋಲೆ 18ಭ್ರಾಂತಜನರಿಗೆ ವಿಶ್ರಾಂತಿದೋರದು ಮುಯ್ಯಾನಂತಾಸನದ ಅನಂತನ ಕೋಲೆ ಅನಂತಾಸನದ ಅನಂತನ ಮಡದಿ ಶ್ರೀಕಾಂತೆ ನಮ್ಮವ್ವ ಕೇಳ್ವಳು ಕೋಲೆ 19ಹಾಡುತ ಬರುತೇವೆ ಹರಸುತ ಬರುತೇವೆರೂಢಿಯ ಸಾಧುಜನರನು ಕೋಲೆರೂಢಿಯ ಸಾಧುಜನರ ಗುಣಂಗಳ ಕೊಂಡಾಡುತ ನಾವು ಬರುತೇವೆ ಕೋಲೆ 20ದರ್ಶನರಾಯರು ಮೂವತ್ತೇಳು ಮಂದಿಅರಸರು ನಮ್ಮ ಹಿರಿಯರು ಕೋಲೆಅರಸರು ನಮ್ಮ ಹಿರಿಯರ ಮಹಿಮೆ ಉಚ್ಚರಿಸುತ ನಾವು ಬರುತೇವೆ ಕೋಲೆ 21ನಮ್ಮ ತವರಿಗೆ ಕೀರ್ತಿತಂದ ಕನ್ಯೇರು ನಾವುನಮ್ಮ ನೆಳಲಿಗಂಜಿ ನಡೆದೇವು ಕೋಲೆನಮ್ಮ ನೆಳಲಿಗಂಜಿ ನಡೆದೇವು ದುರುಳೇರಉನ್ಮತ್ತನಮಗೆ ಎಣಿಕಿಲ್ಲ ಕೋಲೆ22ಜ್ಞಾನದೀವಟಿಗೆ ಬೆಳಗಲೆ ಬರುತೇವೆಜ್ಞಾನ ಕತ್ತಲೆಯ ಬೆದರಿಸಿ ಕೋಲೆ ಅಜ್ಞಾನ ಕತ್ತಲೆಯ ಬೆದರಿಸಿ ಬರುವಾಗಹೀನ ಬುಧ್ಯರು ಮೋರೆ ತೆಗೆದಾರು ಕೋಲೆ 23ನಮ್ಮಯ್ಯನಾಸ್ಥಾನ ಬಣ್ಣಿಸಲಳವಲ್ಲನಿರ್ಮಳಾತ್ಮಕರು ಸಚಿವರು ಕೋಲೆನಿರ್ಮಳಾತ್ಮಕರು ಸಚಿವರು ಪರಿವಾರಧರ್ಮಶೀಲರು ವಿರತರು ಕೋಲೆ 24ಎತ್ತ ನೋಡಲಿ ನವಭಕ್ತಿರತ್ನದ ಬೆಳಗುಚಿತ್ರ ಮಂಟಪಕೆ ಎಣಿಕಿಲ್ಲ ಕೋಲೆಚಿತ್ರ ಮಂಟಪಕೆ ಎಣಿಕಿಲ್ಲ ಶಂಖಚಕ್ರಒತ್ತಿಡಿದವು ಭಿತ್ತಿಲಿ ಕೋಲೆ 25ಬ್ರಹ್ಮಸೂತ್ರದ ವಜ್ರಕಂಬದಿ ಕುಳಿತಿಹಬ್ರಹ್ಮಜÕಪರಮ ಹಂಸವು ಕೋಲೆಬ್ರಹ್ಮಜÕ ಪರಮಹಂಸವು ಪುಣ್ಯಶ್ಲೋಕಧರ್ಮಜÕರಾಯ ಗಿಳಿವಿಂಡು ಕೋಲೆ 26ಮ್ಯಾಗೆ ಮ್ಯಾಗೊಪ್ಪುವ ಸದ್ಗ್ರಂಥದುಪ್ಪರಿಗೇಲಿಕೂಗುವ ಸಾಮಕೋಗಿಲೆ ಕೋಲೆಕೂಗುವ ಸಾಮಕೋಗಿಲೆ ನವಿಲ್ಗಳುನಾಗಪಾಲಕಗೆ ಅತಿಪ್ರೀತಿ ಕೋಲೆ 27ಕಡುಭಕ್ತಿಪತಾಕೆ ಹರಿನಿಷ್ಠೆ ಕಳಸವುಕೊಡುವಅಭಯಛತ್ರ ಸಾಲ್ಗಳು ಕೋಲೆಕೊಡುವಅಭಯಛತ್ರ ಸಾಲ್ಗಳು ಶ್ರೀ ತುಲಸಿನಡುವೆ ಪ್ರಣತ ತೋರಣಗಳು ಕೋಲೆ 28ತಪವೆಂಬ ತಪಿತದರ ಮೈಸಿರಿಯನೃಪಜಯರಾಯನೆಸೆದನು ಕೋಲೆನೃಪಜಯರಾಯನೆಸೆದಾ ಸಿಂಹಾಸನದಿಶಶಿತೇಜದಂತೆ ಹೊಳೆದನು ಕೋಲೆ29ಆನೆಗಳೆಣಿಕಿಲ್ಲ ಕುದುರೆಯ ಗಣನ್ಯಿಲ್ಲಕಾಲಾಳು ರಥಕೆ ಮಿತಿಯಿಲ್ಲ ಕೋಲೆಕಾಲಾಳು ರಥಕೆ ಮಿತಿಯಿಲ್ಲ ಅನ್ಯೋಕ್ತಿಜಾಣೆ ದಾಸೇರಿಗೆ ಕಡೆಯಿಲ್ಲ ಕೋಲೆ 30ಕುವಿದ್ಯಾರಣ್ಯವ ಸವರಿ ಬೇಟ್ಯಾಡಿದಕೋವಿದನಮ್ಮ ಹಡೆದಪ್ಪ ಕೋಲೆಕೋವಿದನಮ್ಮ ಹಡೆದಪ್ಪ ರಚಿಸಿದದೇವವನಗಳ ವರ್ಣಿಪೆ ಕೋಲೆ 31ತತ್ವಪ್ರಕಾಶದ್ದಾಳಿಂಬೆ ಸುಧಾರಸಬಿತ್ತಿದ ಕಬ್ಬಮೋಘ ಮಾವು ಕೋಲೆಬಿತ್ತಿದ ಕಬ್ಬಮೋಘ ಮಾವು ಪದ್ಯಮಾಲೆಉತ್ತತ್ತಿ ತೆಂಗು ಹಲಸನ್ನು ಕೋಲೆ 32ಹತ್ತು ಪ್ರಕರಣ ದಾಟಿತೆಂಬೊ ದ್ರಾಕ್ಷದಸುತ್ತಿದ ಬಳ್ಳಿಮಂಟಪ ಕೋಲೆಸುತ್ತಿದ ಬಳ್ಳಿಮಂಟಪದಿ ಶುದ್ಧಮತ್ಯೌನ ಕೂಡಪ್ಪ ನಲಿದನು ಕೋಲೆ 33ದೇಶ ದೇಶದೊಳಿದ್ದದುರ್ವಾದಿಪೋಕರಘಾಸಿಸಿ ಜಯಪತ್ರ ದ್ರವ್ಯವ ಕೋಲೆಘಾಸಿಸಿ ಜಯಪತ್ರ ದ್ರವ್ಯವ ತಂದು ಮಧ್ವೇಶಗರ್ಪಿಸಿದ ಮುದದಿಂದ ಕೋಲೆ 34ಬಂಧು ಸುದರ್ಶನರಾಯರ ಒಡಗೂಡಿಮಂದಿರದೊಳಗಾನಂದಿಪ ಕೋಲೆಮಂದಿರದೊಳಗಾನಂದಿಪ ಶ್ರುತವೇಷತಂದೆಯನೇನ ಹೊಗಳುವೆ ಕೋಲೆ 35ಇಪ್ಪತ್ತೈದು ತತ್ವ ನಾಣ್ಯದಿ ರಾಮನಾಮಸುಪ್ಪಾಣಿಮುದ್ರೆ ನಡೆಸುವ ಕೋಲೆಸುಪ್ಪಾಣಿಮುದ್ರೆ ನಡೆಸುವ ತನ್ನವರಿಗೆತಪ್ತ ಮುದ್ರೆ ಕುರುಹಿಟ್ಟನು ಕೋಲೆ 36ಭೇದಿಸಿ ನೋಡಿರೊ ಭೇದವ ತಿಳಿಯಿರೊಮಾಧವಜೀವ ಜಡರೊಳು ಕೋಲೆಮಾಧವಜೀವ ಜಡರೊಳು ಎನುತಲಿಬೋಧಿಸಿದನು ಹಿತಮಾರ್ಗ ಕೋಲೆ 37ತನ್ನ ಹೊಂದಿದರಿಗೆ ಪ್ರೌಢವೃತ್ತಿಯನು ಶ್ರೀಮನ್ನಾಮಾಮೃತವನುಣಿಸುವ ಕೋಲೆ ಶ್ರೀಮನ್ನಾಮಾಮೃತವನುಣಿಸುವ ಹೊರೆವನುಉನ್ನತ ಮಹಿಮ ಜಯರಾಯ ಕೋಲೆ 38ಆವಾಗಸೂತ್ರಾರ್ಥ ನಿಸ್ಸಾಳ ವ್ಯಾಖ್ಯಾನತೀವಿದ ಶ್ರುತಿಯ ಕಹಳೆಯು ಕೋಲೆತೀವಿದ ಶ್ರುತಿಯ ಕಹಳೆ ಧ್ವನಿಯುಂಟುಶ್ರೀವ್ಯಾಸ ರಾಮಾರ್ಚನೆಯುಂಟು ಕೋಲೆ 39ಅಚ್ಚ ಸಾತ್ವಿಕನಾದ ರಾಜಾಧಿರಾಜನಹೆಚ್ಚಿನಸತಿಶುದ್ಧಮತಿಯಮ್ಮ ಕೋಲೆಹೆಚ್ಚಿನಸತಿಶುದ್ಧ ಮತಿಯಮ್ಮ ನಮ್ಮಮ್ಮನಿಚ್ಚನಮ್ಮನು ಹೊರೆವಳು40ತಾಯಿ ತಂದೇರ ಹಾಡಿ ದಣಿಯದು ನಮ್ಮ ಮನಭಯವು ಅದರಲ್ಲಿರುವುದು ಕೋಲೆಭಯವು ಅದರಲ್ಲಿರುವುದು ಶುಭಗುಣಬಾಯಿ ಮಾತಿಗೆ ತೀರವು ಕೋಲೆ 41ಬಂದೆವು ಬೀಗರ ಮನೆಗಿಂದೆ ಮುಯ್ಯವತಂದೇವು ಬಾಲೇರೊಡಗೂಡಿ ಕೋಲೆತಂದೇವು ಬಾಲೇರೊಡಗೂಡಿ ಬೀಗರಅಂದವ ಹೇಳಲಳವಲ್ಲ ಕೋಲೆ 42ಬಹುಕಾಲದ್ಹಿರಿಯರು ಬಾಳಿದ ಮನೆಯಿದುವಿವರಿಸಿ ನೋಡಲರಿಯದೆ ಕೋಲೆವಿವರಿಸಿ ನೋಡಲರಿಯದೆ ಕೆಡಿಸಿದರುಧವಳಾರವೆಲ್ಲ ಮಲಿನವು ಕೋಲೆ 43ಬೀಗರಿದ್ದ ಮನೆಯನೆತ್ತೆತ್ತ ನೋಡಲುಬಾಗಿಲು ಬಯಲು ಬರೆಹುಯಿಲು ಕೋಲೆಬಾಗಿಲು ಬಯಲು ಬರೆಹುಯಿಲು ನಮ್ಮವರುಹ್ಯಾಗೆಂತು ಹೆಣ್ಣು ಕೇಳುವರು ಕೋಲೆ 44ಸಂಖ್ಯಾವಿದನೆಂಬಾತ ಮಾವನಾತನ ರಾಣಿಬಿಂಕದ ಬೌದ್ಧದೇವ್ಯತ್ತಿ ಕೋಲೆಬಿಂಕದ ಬೌದ್ಧದೇವ್ಯತ್ತಿ ಭಾಟ್ಟ ನಿ:ಶಂಕ ಚಾರ್ವಾಕಭಾವಮೈದುನರು ಕೋಲೆ45ಮಿಥ್ಯನಮ್ಮತ್ತಿಗೆಮಾಯೆನಮ್ಮ ನಾದಿನಿಸುತ್ತಿನ ಬಳಗಕೆಣಿಕಿಲ್ಲ ಕೋಲೆಸುತ್ತಿನ ಬಳಗಕೆಣಿಕಿಲ್ಲ ಕೆಣಕಿದರೆಮತ್ತೇನಾದರು ಹುರುಳಿಲ್ಲ ಕೋಲೆ 46ಇಪ್ಪತ್ತೊಂದು ಮಂದಿ ಹೆಸರಾದವರ ಕೂಡಬಹುಕಾಲ ಕಜ್ಜವು ನಮಗುಂಟು ಕೋಲೆಬಹುಕಾಲ ಕಜ್ಜವು ನಮಗುಂಟು ಹಾಲಿಗೆಹೆಪ್ಪನೆರೆದಂತೆ ಹಿತಮಾತು ಕೋಲೆ 47ಅಂಗಳದೊಳು ಬಂದು ತಿಳಿದೇವು ಅತ್ತಿಗೇರಶೃಂಗಾರಗರತಿ ಸಿರಿಯನು ಕೋಲೆಶೃಂಗಾರಗರತಿ ಸಿರಿಯನು ಕಾಣುತಹಿಂಗದೆ ನಿಂತು ನುಡಿಬೇಕು ಕೋಲೆ 48ತಂಗಳೆಂಜಲು ಎಂಬೊ ಅಂಜಿಕೆ ತಮಗಿಲ್ಲಮಂಗಳಧಾತು ಕಾಣೆವು ಕೋಲೆಮಂಗಳಧಾತು ಕಾಣೆವು ಅತ್ತಿಗೇರುತಿಂಗಳಸ್ನಾನ ಅರಿಯರು ಕೋಲೆ 49ದಾವಮೂಲೆಲಿ ಬೂದಿ ಮನೆಗಸ ನೋಡಿರೆಭಾವಿ ಅತ್ತೆಯಕೆಲಸವ ಕೋಲೆಭಾವಿ ಅತ್ತೆಯ ಕೆಲಸಕೆ ಮೆಚ್ಚಿದೆವುನಾವೇನುಡುಗೊರೆಯ ಕೊಡಬೇಕು ಕೋಲೆ 50ಮಿಥ್ಯಾವಾದದಲಿ ನಮ್ಮತ್ತಿಗೆ ಬಲುಜಾಣೆಹೆತ್ತವ್ರನೆಲ್ಲ ಹುಸಿಯೆಂದು ಕೋಲೆಹೆತ್ತವ್ರನೆಲ್ಲ ಹುಸಿಯೆಂದು ಶಿವನೊಬ್ಬಸತ್ಯ ತಾನೆಂದು ನುಡಿವಳು ಕೋಲೆ 51ಕಚ್ಚೆ ಹಾಕಿದವರಿಗೆ ವಿಪ್ರರೆಂದ್ಹೆಸರಿಟ್ಟುನಿಚ್ಚಗೆಳತೇರ ಒಡಗೂಡಿ ಕೋಲೆನಿಚ್ಚಗೆಳತೇರ ಒಡಗೂಡಿ ಗೆಳೆತನಹೆಚ್ಚಾಗಿ ನಡೆಸುತಿಹಳು ಕೋಲೆ 52ದೊಡ್ಡಾಕಿ ನಾನೆಂದು ಅಡ್ಡಡ್ಡ ನಡೆವಳುದೊಡ್ಡವರ ಕಂಡರೋಡೋಳು ಕೋಲೆದೊಡ್ಡವರ ಕಂಡರೋಡೋಳು ನಡುಮನೆದೊಡ್ಡಿಗೆ ತಾನು ಹಿರಿಯಳೆ ಕೋಲೆ 53ಮಾಯಿನ ದನಿನೋಡಿ ಮಾವನ ಕಿರಿಮಗಳುಬಾಯಿ ಬಡಕಿಯು ಬಹುಭಾಷಿ ಕೋಲೆಬಾಯಿ ಬಡಕಿಯು ಬಹುಭಾಷಿ ವೆಡ್ಡಗೊಂಡನಾಯಿಯ ತೆರದಿ ಬಲುಕೋಪಿ ಕೋಲೆ 54ತಾಯಿ ತಂದೆಯರಿಗೆ ಗುಣವಂತೆ ಮಗಳೀಕೆನೋಯಿಯ ನುಡಿವಳುಂಡುಟ್ಟು ಕೋಲೆನೋಯಿಯ ನುಡಿವಳುಂಡುಟ್ಟು ಆ ಕ್ಷಣಬಾಯಾರುವಲ್ಲಿ ಬಲ್ಲಿದಳು ಕೋಲೆ 55ಮಹಾತ್ತುಮರ ಮಟಾಮಾಯ ಮಾಡುವ ಶಕ್ತಿಮಹಾಢಾಳಿಕಿಯ ಬಲ್ಲಳು ಕೋಲೆಮಹಾಢಾಳಿಕಿಯ ಬಲ್ಲಳು ಆ ಬುಧರಮಾಯಿ ಅಭದ್ರೆಘನಕ್ಷುದ್ರೆ ಕೋಲೆ56ತನ್ನ ಬದಿಯ ತನ್ನೆರೆಹೊರೆಯವರನುತನ್ನಂತೆ ಮಾಡಿಕೊಂಡಳು ಕೋಲೆತನ್ನಂತೆ ಮಾಡಿಕೊಂಡಳು ಮನದಲಿಉನ್ಮತ್ತವೃತ್ತಿಕಲಿಸೋಳು ಕೋಲೆ57ಪ್ರಸ್ತವ ಮಾಡುವ ಮನೆಯೊಳು ಹೋಗುವಳುಅಸ್ತವ್ಯಸ್ತದಲಿ ಬಲುಬೇಗ ಕೋಲೆಅಸ್ತವ್ಯಸ್ತದಲಿ ಬಲುಬೇಗ ಷಡ್ರಸನ್ನಹಸ್ತಲಾಘವದಿ ಕೆಡಿಸುವಳು ಕೋಲೆ 58ಒಳ್ಳೆ ಶಾಲ್ಯೋದನ ಭಕ್ಷ್ಷ್ಯಭೋಜನದೊಳುಕೊಳ್ಳಿಯಿಕ್ಕಿ ಕೆಡಿಸುವಳು ಕೋಲೆಕೊಳ್ಳಿಯಿಕ್ಕಿ ಕೆಡಿಸುವಳು ಪದಾರ್ಥವನೆಲ್ಲ ಏಕಾಕಾರ ಮಾಡುವಳು ಕೋಲೆ 59ಅತ್ತಿಗೆನಾದಿನೇರ ಗೋಡೆಯ ಮೇಲಿನಚಿತ್ತಾರದ ಗೊಂಬಿ ನೋಡಿರೆ ಕೋಲೆಚಿತ್ತಾರದ ಗೊಂಬಿ ನೋಡಿರೆ ಅಖಂಡಮತ್ತೆ ಭೇದಗಳು ತಿಳಿಯವು ಕೋಲೆ 60ಕಂಬ ಬೋದುಗಳೊಂದೆ ಕೆಳಮೇಲು ಕಟ್ಟು ಒಂದೆಅಂಬುಜಮದ್ದುಗುಣಿಕೊಂದೆ ಕೋಲೆಅಂಬುಜಮದ್ದುಗುಣಿಕೊಂದೆ ತುಲಸಿ ಕದಂಬವು ಎಕ್ಕೆ ಗಿಡವೊಂದೆ ಕೋಲೆ 61ಕಾಗೆ ಕೋಗಿಲೆ ಒಂದೆ ಗೂಗೆ ನವಿಲು ಒಂದೆನಾಗನೀರೊಳ್ಳಿಯ ಹಾವು ಒಂದೆ ಕೋಲೆನಾಗನೀರೊಳ್ಳಿಯ ಹಾವು ಒಂದೆ ಚಿತ್ತರದಾ ಗಿಳಿಹಿಂಡು ತಿಳಿಯವು ಕೋಲೆ 62ಕುದುರೆ ಕತ್ತೆಯ ಬಣ್ಣ ಆನೆ ಹಂದಿಯ ಬಣ್ಣಮದಹುಲಿಗೆ ನಾಯಿ ಬಣ್ಣವು ಕೋಲೆಮದಹುಲಿಗೆ ನಾಯಿ ಬಣ್ಣ ಒರ್ಸಿಟ್ಟಿಹಚದುರೆಯ ಕೈಗೆ ಕಡಗವು ಕೋಲೆ 63ಅತ್ತಿಗೆನಾದಿನೇರ ಚಿತ್ತಾರ ಬಲುಘನಮತ್ತೆ ತೀರದ ಗುಣಗಳು ಕೋಲೆಮತ್ತೆ ತೀರದ ಗುಣಗಳುಭಾವಮೈದುನರೆತ್ತೋಡಿದರು ಸುಳುಹಿಲ್ಲ ಕೋಲೆ 64ಗುರುಗಳ ಭಯವಿಲ್ಲ ಹಿರಿಯರ ಸ್ಮರಣಿಲ್ಲಹರಿಯೆ ತಾವೆಂದು ಬೆರೆತರು ಕೋಲೆಹರಿಯೆ ತಾವೆಂದು ಬೆರೆತರು ದಿಂಡೇರಿಗೊರೆವರು ತಮ್ಮ ಬುದ್ಧಿಯ ಕೋಲೆ 65ಲಗಳಿಯ ಕೋಣಗೆ ಲಘ್ವಾದ ಕೆಲಸೆತ್ತಜಗದೀಶನೆತ್ತ ತಾವೆತ್ತ ಕೋಲೆಜಗದೀಶನೆತ್ತ ತಾವೆತ್ತ ಭಾವರನಗೆಗೇಡು ನೋಡಿ ನಗುತೇವೆ ಕೋಲೆ 66ಹೆಗಲ ಕಾವಡಿಯವಗೆ ಹಗಲು ದೀವಟಿಗೇಕೆಮಿಗಿಲಾದ ಬಿರುದು ತಮಗೇಕೆ ಕೋಲೆಮಿಗಿಲಾದ ಬಿರುದು ತಮಗೇಕೆ ಮೈದುನರಮೊಗ ನೋಡಿದರೆ ಹೊಗೆಗೆಂಡ ಕೋಲೆ 67ಪಂಚದೇವನ ಪೂಜೆ ಮಾಡುವರೊಂದಾಗಿಹಿಂಚು ಮುಂಚುಗಳ ಅರಿಯರು ಕೋಲೆಹಿಂಚು ಮುಂಚುಗಳ ಅರಿಯರು ಬರಿದೆ ಪ್ರಪಂಚವ ಬಿಟ್ಟೆವೆನಿಸುವರು ಕೋಲೆ 68ಹಿಂಡುಬಾಂಧವರು ತಮ್ಮೊಳು ತಾವೆ ಕೊಂಡಾಡಿಮಂಡಿಕೆಸೂತ್ರಹರಕೊಂಡು ಕೋಲೆಮಂಡಿಕೆಸೂತ್ರಹರಕೊಂಡು ಕೊಂಡಾಡಿಮಂಡೆಯ ಬಿಟ್ಟು ತಿರುಗೋರು ಕೋಲೆ 69ಇವರ ಲೆಕ್ಕದೊಳಗೆ ಹರಿಶಿವನೊಬ್ಬನೆರವಿಗಣನಾಥನೊಬ್ಬನೆ ಕೋಲೆರವಿಗಣನಾಥನೊಬ್ಬನೆ ಎಲ್ಲೆಲ್ಲಿದಿವಿ ದೇವರೊಳಗೆ ಬೇರಿಲ್ಲ ಕೋಲೆ 70ವಿಧಿನಿಷಿದ್ಧಗಳಿಲ್ಲಪೋಕಮತದೊಳುಉದರ ತುಂಬಿದರೆ ಸಮದೃಷ್ಟಿ ಕೋಲೆಉದರ ತುಂಬಿದರೆ ಸಮದೃಷ್ಟಿ ಹರಿವ್ರತಮೊದಲಿಗಿಂದಿಗೆ ಸೊಗಸವು ಕೋಲೆ 71ಬದನೆ ನುಗ್ಗೆಯ ಕಾಯಿ ಸಲೆ ತೊಂಡೆ ತುಪ್ಹೀರೆಮೃದು ಮೂಲಂಗಿ ಗಜ್ಜರಿಗಳು ಕೋಲೆಮೃದು ಮೂಲಂಗಿ ಗಜ್ಜರಿಗಳು ಇವರಿಗೆಮುದದೂಟ ಆತ್ಮಾರಾಮನ ತೃಪ್ತಿ ಕೋಲೆ 72ಬಸಳೆ ಸಬ್ಬಸೆ ಸೊಪ್ಪು ಹುಳಿ ಚುಕ್ಕದ ಗೂಡೆಹಸನಾದ ಪುಂಡಿ ಬಲುಪ್ರೀತಿ ಕೋಲೆಹಸನಾದ ಪುಂಡಿ ಬಲುಪ್ರೀತಿಹಸಿವಿಗೆ ದೊರೆಯ ಪರಲೋಕ ಕೋಲೆ 73ಮಡಿ ಮೈಲಿಗೆಯು ಒಂದೆ ಸ್ನಾನಪಾನಗಳೊಂದೆಹುಡುಗ ಹಿರಿಯರ ಬಳಿಕೊಂದೆ ಕೋಲೆಹುಡುಗ ಹಿರಿಯರ ಬಳಿಕೊಂದೆನುಡಿಬೇರೆ ಪೋಕರ ನಡೆಬೇರೆ ಕೋಲೆ 74ನಮ್ಮ ನಗೆಯೊಳಗೆ ಉನ್ನತ ಸುಖವುಂಟುರಮ್ಮೆಯ ರಮಣ ಕರುಣಿಪ ಕೋಲೆರಮ್ಮೆಯ ರಮಣ ಕರುಣಿಪ ಒಡಲ್ಹೊಕ್ಕುನಮ್ಮವರಾಗಿ ಸುಖಿಯಾಗಿ ಕೋಲೆ 75ನಿಮ್ಮ ಹಿರಿಯರೆಲ್ಲ ನಮ್ಮ ಮನೆಯ ಹೊಕ್ಕುಧರ್ಮಾರ್ಥ ಸೂರೆಗೊಂಡರು ಕೋಲೆಧರ್ಮಾರ್ಥ ಸೂರೆಗೊಂಡರು ಜಗವರಿಯೆನಿರ್ಮಳರಾಗಿ ಸುಖಿಯಾಗಿ 76ಮಾವನೊಳಗೆ ನಮ್ಮ ನಗೆಯಿಲ್ಲ ಬೌದ್ಧದೇವೀರ ಕೂಡ ಸರಸಿಲ್ಲ ಕೋಲೆದೇವೀರ ಕೂಡ ಸರಸಿಲ್ಲ ಹಿರಿಯರುತಾವವರ ಗೆದ್ದು ನಗುವರು ಕೋಲೆ 77ನಿಪುಣೆಂದೆನಿಸುವಿರಿ ಚಪಳೆರೆಂದೆನಿಸುವಿರಿಅಪರಾತ್ರೆ ಆಯಿತು ಬಂದೀಗ ಕೋಲೆಅಪರಾತ್ರೆ ಆಯಿತು ಬಂದೀಗ ನಮಗಿನ್ನುಉಪಚಾರವುಂಟೊ ಗತಿಯಿಲ್ಲೊ ಕೋಲೆ 78ಮೋರೆ ತೋರದಿದ್ದರೆ ಮನೆಯೊಳಗಿರಿ ನೀವುಜಾರುತೇವೆ ನಮ್ಮ ಮನೆಗೀಗೆ ಕೋಲೆಜಾರುತೇವೆ ನಮ್ಮ ಮನೆಗೀಗೆ ಬೀದಿಲಿತೂರುತೇವೆ ನಿಮ್ಮ ಕರುಳನು ಕೋಲೆ 79ಈಪರಿನಾರೇರ ಹಿತವಾದ ನಗೆಗಳಕೋಪವ ಬಿಟ್ಟು ಕೇಳುತ ಕೋಲೆಕೋಪವ ಬಿಟ್ಟು ಕೇಳುತ ಬಂದು ಸವಿi್ಞಪಕ ಕೈಯವಿಡಿದರು ಕೋಲೆ 80ರತ್ನಗಂಬಳಿ ಹಾಸಿ ಒಳ್ಳೇರ ಮಕ್ಕಳೆಂದುಉತ್ತಮಗುಣವ ಕೊಂಡಾಡಿ ಕೋಲೆಉತ್ತಮ ಗುಣವ ಕೊಂಡಾಡಿ ಕುಳ್ಳಿರಿಸಿಚಿತ್ತಕೆ ಸುಖವ ಕೊಟ್ಟರು ಕೋಲೆ 81ಶ್ರೀಕಾಂತನರಮನೆಯ ಹೊಂದಿದವರು ನೀವುಏಕಾಂತ ಭಕ್ತಿ ಬಲ್ಲವರು ಕೋಲೆಏಕಾಂತ ಭಕ್ತಿ ಬಲ್ಲವರು ನಮ್ಮ ನೀವೆ ಕೂಡಿಕೊಳ್ಳಿ ದೂರ್ಯಾಕೆ ಕೋಲೆ 82ಸುಖದೂಟಸವಿಯನು ಅರಿಯದೆ ಕೆಟ್ಟೆವುಸುಖತೀರ್ಥಗುರುವು ನಮಗಾಗಿ ಕೋಲೆಸುಖತೀರ್ಥಗುರುವು ನಮಗಾಗಿ ಪರಲೋಕಸುಖ ಸೂರೆಗೊಂಡು ಬದುಕೇವು ಕೋಲೆ 83ಐದು ಭೇದವನರಿತು ನಡೆದೇವು ನಾವಿಪ್ಪತ್ತೈದು ತತ್ವಗಳ ತಿಳಿದೇವು ಕೋಲೆ ಇಪ್ಪತ್ತೈದು ತತ್ವಗಳ ತಿಳಿದೇವು ಮೇಲೆ ಮತ್ತೈದು ಮುಕ್ತಿಯ ಪಡೆದೇವು ಕೋಲೆ 84ಮುದ್ರೆ ಇಲ್ಲದ ನಾಣ್ಯ ಶುದ್ಧಲ್ಲ ಜಗದೊಳುಮುದ್ರಾಂಕರಾಗಿ ಬದುಕೇವು ಕೋಲೆಮುದ್ರಾಂಕರಾಗಿ ಬದುಕೇವು ಮಲೆತವರಗೆದ್ದೇವು ವಾಕ್ಯ ಬಲದಲ್ಲಿ ಕೋಲೆ 85ಇಂತೆಂಬ ನುಡಿಗೇಳಿ ಅಪಾರಾನಂದದಲ್ಲಿಕಾಂತೆಯರೆಲ್ಲ ಒಂದಾಗಿ ಕೋಲೆಕಾಂತೆಯರೆಲ್ಲ ಒಂದಾಗಿ ಮನದಿ ವಿಶ್ರಾಂತರಾದರು ತಮತಮಗೆ ಕೋಲೆ 86ಗುರುಭಕ್ತಿ ಅರಿಷಿಣ ಹರಿಭಕ್ತಿ ಕುಂಕುಮಪರಮಾರ್ಥ ಜ್ಞಾನಾಂಜನವನು ಕೋಲೆಪರಮಾರ್ಥ ಜ್ಞಾನಾಂಜನವನು ಇಟ್ಟರುಹರಿನಿರ್ಮಾಲ್ಯದ ಪುಷ್ಪ ಮುಡಿದರು ಕೋಲೆ 87ಸಸ್ಯ ಸಾರಾವಳಿಯ ಸೀರೆಯ ತೆಗೆದರುಅತ್ತಿಗೆಯವರ ಮನಮೆಚ್ಚು ಕೋಲೆಅತ್ತಿಗೆಯವರ ಮನಮೆಚ್ಚಿನುಡುಗೊರೆಅರ್ಥಿಲಿ ಕೊಟ್ಟು ನಲಿದರು ಕೋಲೆ 88ಮಾಧವಪ್ರತಿಷ್ಠಾನ ಪೇಟೆಯೊಳುದಿಸಿದಮಾದಳದ ಹಣ್ಣು ಬಣ್ಣದ ಕೋಲೆಮಾದಳದ ಹಣ್ಣು ಬಣ್ಣದ ಸೀರೆಯನಾದಿನಿ ಜಾಣೆಗಿತ್ತರು ಕೋಲೆ 89ಅಚ್ಚ ಬಂಗಾರದ ಶಂಖಚಕ್ರಂಗಳಅಚ್ಚನೆತ್ತಿದ ನಯವಾದ ಕೋಲೆಅಚ್ಚನೆತ್ತಿದ ನಯವಾದ ಬೇರೆ ಬೇರೆಹಚ್ಚಡಗಳು ಬಾವರಿಗಿತ್ತು ಕೋಲೆ 90ಭೇದ ಭೇದದ ಬಣ್ಣ ಬಗೆ ಬಗೆ ಚಿತ್ರದನಾದ ಸಮುದ್ರದ ಪೇಟೆಯ ಕೋಲೆನಾದ ಸಮುದ್ರದ ಪೇಟೆಯ ವಲ್ಲಿಗಳುಮೈದುನ ಜಾಣರುಡುಗೊರೆ ಕೋಲೆ 91ಹಿರಿಯ ಕಿರಿಯರ ನೋಡಿ ಮಾನ್ಯಾಮಾನ್ಯನ ನೋಡಿತರತಮ ಭಾವದುಪಚಾರ ಕೋಲೆತರತಮ ಭಾವದುಪಚಾರ ಮಾಡಿದರುಹರಿಗುರು ಮೆಚ್ಚಿ ನಲಿವಂತೆ ಕೋಲೆ 92ಈ ಪರಿಯಲಿವರ ಮನಮುಟ್ಟಿ ಮನ್ನಿಸಿಸುಗಂಧ ಪರಿಮಳ ದ್ರವ್ಯವ ಕೋಲೆಸುಗಂಧ ಪರಿಮಳ ದ್ರವ್ಯವ ಚೆಲ್ಲಾಡಿಶ್ರೀಪತಿಗವರರ್ಪಿಸಿ ಮುದದಿಂದ ಕೋಲೆ 93ಪರಸ ಮುಟ್ಟಿದ ಮೇಲೆ ಲೋಹ ಚಿನ್ನಾಗದೆಸುರನದಿಮುಟ್ಟಿ ಸಗರರ ಕೋಲೆಸುರನದಿಮುಟ್ಟಿ ಸಗರರುದ್ಧಾರಾದಂತೆಕರಗಿತುಅವರಮನಮೈಲಿಗೆ94ಶುಭಭರಿತಾದ ತಾಂಬೂಲ ಕೈಕೊಂಡುಶುಭವಾಕ್ಯ ನುಡಿದು ನಡೆವಾಗ ಕೋಲೆಶುಭವಾಕ್ಯ ನುಡಿದು ನಡೆವಾಗ ಬೀಗರುಅಬಲೇರಿಗೆ ಕೈಯ ಮುಗಿದರು ಕೋಲೆ 95ನಾಳೆ ನಿಮ್ಮಾಜÕ ಬರೆ ಮುಯ್ಯ ತರುವೆಆಳವಾಡದಿರಮ್ಮ ನಮ್ಮನು ಕೋಲೆಆಳವಾಡದಿರಮ್ಮ ನಮ್ಮನು ನೀವೀಗಏಳಿಲ ಮಾಡದಿರಿ ಕಂಡ್ಯಾ ಕೋಲೆ &ಟಿ;, bsಠಿ; 96ಹೀಗೆಂದ ಮಾತಿಗೆ ನುಡಿದರು ಹರಿಹರಿಭಾಗವತರೆಲ್ಲ ಧರೆಯೊಳು ಕೋಲೆಭಾಗವತರೆಲ್ಲ ಧರೆಯೊಳು ನಮ್ಮವರುಶ್ರೀಗಂಧ ಕರ್ಪೂರಕೆ ಮೈತ್ರವು 97ಅಪ್ಪ ಜಯತೀರ್ಥಗೆ ಹೆತ್ತವ್ವ ಶುದ್ಧಮತಿಗೆಒಪ್ಪುವ ಬಂಧು ಬಳಗಕೆ ಕೋಲೆಒಪ್ಪುವ ಬಂಧು ಬಳಗಕೆ ನಿಮ್ಮಗುಣಒಪ್ಪಣೆ ಹೇಳೇವು ಕೋಲೆ ಗನೀವು ಬಂದಾಕ್ಷಣ ಶ್ರೀವ್ಯಾಸರಾಯರನೈವೇದ್ಯ ತೀರ್ಥವು ಲಭ್ಯವು ಕೋಲೆನೈವೇದ್ಯ ತೀರ್ಥವು ಲಭ್ಯವು ನಮ್ಮಪ್ಪನಾವ ಪರಿಯಲಿ ಒಲಿಸೇವು ಕೋಲೆ 9ಮೆಲ್ಲನೆ ಹೊರವಂಟು ಫುಲ್ಲಭವ ಕೀರ್ತಿಸೊಲ್ಲುಸೊಲ್ಲಿಗೆ ಉಗ್ಗಡಿಸುತ ಕೋಲೆಸೊಲ್ಲುಸೊಲ್ಲಿಗೆ ಉಗ್ಗಡಿಸುತ ಹಾರುವಾಗಕ್ಷುಲ್ಲರ ಮನಕೆ ದಣಿವಾಯ್ತು ಕೋಲೆ 100ಮನೆ ಮುಟ್ಟಿ ಬಂದರು ಗುರುಪಾದ ಕಂಡರುಜನನಿಗೆ ಕೈಯ ಮುಗಿದರು ಕೋಲೆಜನನಿಗೆ ಕೈಯ ಮುಗಿದರುಕೈವಲ್ಯಕ್ಕನುಮಾನವಿಲ್ಲದೆ ನಡೆವರು ಕೋಲೆ 101ಧರೆಯ ಸಜ್ಜನರಿಗೆ ಸಕ್ಕರೆ ಸವಿಗಿಂತಉರೆ ಕಾಯ್ದ ಹಾಲ ಕೆನೆಗಿಂತ ಕೋಲೆಉರೆ ಕಾಯ್ದ ಹಾಲ ಕೆನೆಗಿಂತ ಸವಿಯುಂಟುಗುರುಭಕ್ತಿ ಉಂಟು ಪರವುಂಟು ಕೋಲೆ 102ಅಲ್ಪ ಕನ್ನಡದ ನುಡಿಯೆನ್ನಲಾಗದುಫಣಿತಲ್ಪನ ಪ್ರಿಯಗುರುಮಹಿಮೆ ಕೋಲೆಫಣಿತಲ್ಪನ ಪ್ರಿಯಗುರುಮಹಿಮೆ ನೋಡುವುದುತಪ್ಪನಾರಿಸದೆ ಶಿಷ್ಟರು ಕೋಲೆ 103ಜನ್ಮ ಜನ್ಮ ಬ್ರಹ್ಮ ವಾಯೂರೆ ಗುರುಗಳುರಮ್ಮೆಯ ರಮಣ ಮನೆದೈವ ಕೋಲೆರಮ್ಮೆಯ ರಮಣ ಮನೆದೈವವಾಗಲಿಶ್ರೀಮಧ್ವಾಚಾರ್ಯರು ಕೋಲೆ 104ಪ್ರಸನ್ನವೆಂಕಟಪತಿ ನಾಮದುಚ್ಚಾರಣೇಲಿಅಶುಭಕೋಟಿಗಳು ಉಳುಹಿಲ್ಲ ಕೋಲೆಅಶುಭ ಕೋಟಿಗಳು ಉಳುಹಿಲ್ಲ ಶುಭಮಸ್ತುಕುಶಲಾಯುರಾರೋಗ್ಯವಾಹುದು ಕೋಲೆ 105
--------------
ಪ್ರಸನ್ನವೆಂಕಟದಾಸರು
ಮರೆಯದಿರೆಲೆ ಮನವಿಲ್ಲಿ - ಯಮಪುರಿಗೆ ಒಯ್ದು ಬಾಧಿಸುತಿಹರಲ್ಲಿ ಪ.ಪರನಾರಿಯರ ಸಂಗವಿಲ್ಲಿ - ಉಕ್ಕುಎರೆದ ಸತಿಯರ ತಕ್ಕೈಸುವರಿಲ್ಲಿಗುರು - ಹಿರಿಯರ ನಿಂದೆಯಿಲ್ಲಿ - ಬಾಯೊಳೆರದು ಸೀಸವ ಕಾಸಿ ಹೊಯಿಸುವರಿಲ್ಲಿ 1ಉಂಡ ಮನೆಯ ಕೊಂಬುದಿಲ್ಲಿ - ಎದೆಗುಂಡಿಗೆಯನು ಸೀಳಿ ಕೊಲುತಿಹರಲ್ಲಿಗಂಡನ ದಣಿಸುವುದಿಲ್ಲಿ - ಯಮಕುಂಡದೊಳಗೆ ಹಾಕಿ ಕುದಿಸುವರಲ್ಲಿ 2ಚಾಡಿಯ ಹೇಳುಸುದಿಲ್ಲಿ - ನುಡಿದಾಡುವ ನಾಲಿಗೆ ಕೇಳುವರಲ್ಲಿಬೇಡಿದರಿಗೆ ಧರ್ಮವಿಲ್ಲಿ - ಇದನೀಡದಿರಲು ಒದ್ದು ನೂಕುವರಲ್ಲಿ 3ಪುಸಿ - ಠಕ್ಕು - ಠವುಳಿಗಳಲ್ಲಿ -ಕಟ್ಟಿಎಸೆದು ಕೊಲ್ಲುವರೊ ನಿನ್ನವರು ಕೇಳಿಲ್ಲಿಅಶನಪ್ರಭದಿಗಳಲ್ಲಿ - ಮಾಡೆಬಿಸಿಯ ಕೆಂಡವ ತಂದು ತಿನಿಸುವರಲ್ಲಿ 4ಸಿರಿಮದದೊಳಗಿಹುದಿಲ್ಲಿ - ಸೊಕ್ಕಮುರಿದು ಹಲ್ಲುಗಳ ಕಳಚುವರಲ್ಲಿಪುರಂದರವಿಠಲನ ಇಲ್ಲಿ - ನೆನೆಯಸ್ಥಿರವಾದ ಮುಕುತಿ ಪಡಕೊಂಬುವರಲ್ಲಿ 5
--------------
ಪುರಂದರದಾಸರು
ಮುದ್ದು ಪಾಂಡವರನ್ನ ಗೆದ್ದು ಕೈಚಪ್ಪರಿಸಿಗತ್ತಿಲೆಕಾಳಿ ರುಕ್ಮಿಣಿ ಹೊಯಿಸಿದಳು ಪ.ಅಚ್ಯುತಪಾಂಡವರಿಗೆ ಹುಚ್ಚು ಹಿಡಿಸಿದನೆಂದುಉತ್ಸಾಹದಿಂದಭೇರಿಹೊಯ್ಸಿದಳು1ಮಡದಿ ದ್ರೌಪತಿ ಭದ್ರಾ ಅಡಗಿದರು ಅಂಜಿ ನಮಗೆಎಂದು ಬೆಡಗಿನಡಂಕಿರುಕ್ಮಿಣಿ ಹೊಯ್ಸಿದಳು2ಕಾಂತೆ ದ್ರೌಪತಿ ಭದ್ರಾ ಭ್ರಾಂತರಾದರೆಂದುಕಾಂತೆಯರು ಕೈ ಹೊಯ್ದು ನಿಂತಾರೆಲ್ಲ 3ಪುಟ್ಟಸುಭದ್ರೆಯು ಧಿಟ್ಟ ದ್ರೌಪತಾದೇವಿಬಿಟ್ಟಟ್ಟೆರುಆಣಿಎಂದು ಘಟ್ಟನುಡಿದು4ಧಿಟ್ಟೆರಿಬ್ಬರಗರವು ಕುಟ್ಟಿ ಚೂರ್ಣವ ಮಾಡಿಬಿಟ್ಟರು ಆಣಿಯ ಎಂದು ಸ್ಪಷ್ಟ ನುಡಿದರು 5ತಪ್ಪು ಸತ್ಯಭಾಮೆ ತಪ್ಪು ತಪ್ಪುರುಕ್ಮಿಣಿ ದೇವಿತಪ್ಪುತಪ್ಪು ತಪ್ಪು ಎಂದು ಕೈಯ ಒಪ್ಪಾಗಿ ಮುಗಿದರು 6ತಂದೆ ರಾಮೇಶನ ಮುಂದೆ ರುಕ್ಮಿಣಿದೇವಿವಂದಿಸಿ ದೇವಿಯರೆಲ್ಲ ನುಡಿದರು 7
--------------
ಗಲಗಲಿಅವ್ವನವರು
ರಂಗರಾಯರ ಮುಂದೆಇವರಕೊಂಗಬುದ್ಧಿಕೋಲಹೊಯ್ಸಿಹಂಗಿನ ಮುಯ್ಯ ಕಳೆದೆವಇವರ ತಂಗಿಯರಮಾರಿಭಂಗಿಸಿ ನಾವುಪ.ಅಪ್ಪ ಅರಸು ಆಗೊ ಇವರತಪ್ಪಿನ ಮಾತಿಲೆ ಸೋಲಿಸಿನಿಮ್ಮಪ್ಪ ನಿಮ್ಮರಸನೆಂಬೊಚಪ್ಪಾಳೆಯನಿಕ್ಕಿಸಿ ನಾವು 1ಒಡ ಹುಟ್ಟಿದಣ್ಣನ ದ್ರೌಪತಿಒಡಗೂಡುತಲಿ ತಾ ಇಡುವರೆಈ ಆಣೆ ನಮಗೆನುಡಿದ ಆ ನುಡಿಗೆ ನಾಚಿಸಿ ಇವರನು 2ಹುಟ್ಟು ಹೊಂದೊದೆಂಬೋದಿವರಬಿಟ್ಟು ಕಡೆಗೆ ಮಾಡಿಸಿನಾವುಶ್ರೀ ಕೃಷ್ಣನಂಫ್ರಿ ಕಮಲವನ್ನುಎಷ್ಟು ದಯದಿ ತೋರಿಸಿ 3ಅಷ್ಟ ಮದದ ತಮವು ಎಂಬೊಕುಟ್ಟಿ ಹಿಟ್ಟು ಮಾಡಿಸಿ ನಾವುಸಿಟ್ಟು ಕೋಪವೆಂಬೊ ಬಣವಿ ಒಟ್ಟಿಕೆಂಡ ಹೇರಿಸಿ ನಾವು 4ಸತ್ವರಜ ತಮವು ಎಂಬೊಕತ್ತಲೆಯ ಅಡಗಿಸಿ ನಾವುಮತ್ತೆ ಜ್ಞಾನ ಸೂರ್ಯನಪ್ರಶಸ್ತ ಉದಯ ಮಾಡಿಸಿ 5ನೀತಿ ತಪ್ಪಿದ ಬಾಲೆಯರಭೂತ ಹೊರಗೆ ಹೊರಡಿಸಿನಾವುಮಾತ್ರಗಳೆಂಬೊ ಇವರಗಾತ್ರಬಿಟ್ಟು ದೂರ ಇಡಿಸಿ6ಸಂಚಿತಗಾಮಿಯು ಇವರಕಿಂಚಿತುಳಿಯದಲೆ ಹಾರಿಸಿ ನಾವುಪಂಚ ಪಾಂಡವರ ಮಡದಿಪಾಂಚಾಲಿಯ ನಾಚಿಸಿ 7ದಶೇಂದ್ರಿಯಗಳೆಂಬೊ ಕುದುರೆಗಳದಶ ದಿಕ್ಕಿಗೆ ಓಡಿಸಿ ನಾವುಮುಸುಕು ಹಾಕಿದ ಅಂಗವನುಕೊಸರಿ ಕೊಸರಿ ಝೂಡಿಸಿ 8ನಿಂದ್ಯವಾದಪಟಲುವಿದ್ಯೆಚಿಂದಿ ಚಿಂದಿ ಮಾಡಿಸಿ ನಾವುತಂದೆ ರಾಮೇಶನ ಪಾದಕೆತಂದು ಇವರ ಹೊಂದಿಸಿ 9
--------------
ಗಲಗಲಿಅವ್ವನವರು
ವಾರಿಜನಾಭನ ಕರುಣವೆ ಸ್ಥಿರ ಸಂಸಾರ್ಯೆರವು ಕೇಳಾತ್ಮಜಾರುತದಾಯು ದೂರದ ಮುಕುತಿಯದಾರಿಯ ಪಾಥೇಯ್ಯೆಲ್ಲಾತ್ಮ ಪ.ಧರ್ಮದ ಸರಕಿಲ್ಲದವನೆಂದು ಬೇಗ್ಯಮಧರ್ಮ ಭಟರು ಬಂದರಲ್ಲೊಚರ್ಮದ ಮನೆ ಬಿಡಿಸಿದರು ಮುಟ್ಟಲು ನೋವಕರ್ಮಯಾತನೆ ಕೊಟ್ಟರಲ್ಲೊಹಮ್ರ್ಯನಿಕೇತನ ವೃತ್ತಿಕ್ಷೇತ್ರವನು ಅಧರ್ಮಿಗಳಗಲಿಪರಲ್ಲೊಮರ್ಮವರಿತು ತ್ರಾಟಿಸುವಾಗ ಶ್ರೀವಿಶ್ವಕರ್ಮನ ಪೂಜೆ ಹೋಯಿತೆಲ್ಲೊ 1ಹೆಡಗೈಯಕಟ್ಟಿಪರಿಘದೊಳು ಬಡಿವಾಗಮಡದಿ ಮಕ್ಕಳ ಸಹಾಯವೆಲ್ಲೊಒಡೆಯ ದಮ್ಮಯ್ಯ ನಮ್ಮಯ್ಯನೆಂದರೆಕಾಲಹಿಡಿದರೆ ಕೊಡಹಿದರಲ್ಲೊಸುಡುವ ಮಳಲು ಹುಡಿ ಕಲ್ಮುಳ್ಳೊಳೆಳೆವಾಗಹಿಡದೇಜಿ ಕೊಂಬುಕಾಳೆಲ್ಲೊಪೊಡವಿಲಿ ಬಂದಾಗ ಹರಿಸೇವೆ ಮಾಡದೆಕಡುಹುಂಟಾದರೆ ತೋರದೆಲ್ಲೊ 2ಕೀವು ರುಧಿರವಿಟ್ಟ ಕುಂಡದಿ ಮುಣುಗುವಾಗ್ಹ್ಯಾವಿನ ಮಾತೇನಾಯಿತಣ್ಣಸಾವುತೀನವ್ವಪ್ಪಾ ಮೊರೆಯ ಕೇಳೆಂದರೆಆವಾಗಬಾಧೆ ಕಾಣಣ್ಣಆವೈವಸ್ವತದಂಡ ಕೊಟ್ಟು ಬೊಗಳೆಂಬಾಗಚಾರ್ವಾಕತನವೆಲ್ಲಣ್ಣಆ ವಾಸುದೇವನ ಭಟಸಂಗ ನಿನಗೀಗ ವೈರ ಆಗೆಲ್ಲಿದಣ್ಣ 3ನಾಲಿಗೊಣಗಿ ನೀರು ಕೂಳೆಂದು ಅಳುವಾಗಹಾಲ ಶಾಲ್ಯೋದನವೆಲ್ಲೊಮ್ಯಾಲೆ ಮ್ಯಾಲ್ವೈತರಣಿ ಸ್ನಾನವ ಮಾಡುವಕಾಲಕೆ ಅಭ್ಯಂಗನವೆಲ್ಲೊಕಾಲನ ದೂತರ್ಗೆ ಕೊಟ್ಟುಳಿವೆನೆಂದರೆಹೂಳಿದ ಧನ ದೂರಾಯಿತಲ್ಲೊಕಾಲಕಾಲಕೆ ದ್ವಿಜಪಂಕ್ತಿಭೋಜನಸುಖವ್ಯಾಳೆ ತಪ್ಪಿತನ್ನವೆಲ್ಲೊ 4ಕಷ್ಟಿಸಿ ಬಳಲುವೆ ಹಾಹಾಯೆಂದಳಲುವೆಇಷ್ಟನೆಂಟರು ಹೋದರೆತ್ತಮುಷ್ಟಿಕುಠಾರಪ್ರಹಾರನೋಡುನಿನ್ನವರಿಷ್ಟತನವು ನಿಂತಿತೆತ್ತಶಿಷ್ಟರ ನೋಡದೆ ಸತ್ಕಾರ ಮಾಡದೆನಿಷ್ಠುರ ನುಡಿದೆ ಪ್ರಮತ್ತಕೃಷ್ಣ ನಮೊ ಎಂದು ಕಡೆಗಾಣಲರಿಯೆ ಎಳ್ಳಷ್ಟು ಪುಣ್ಯವ ಕಾಣೆನೆತ್ತ 5ಕಂಗೆಟ್ಟು ತಕ್ರನ್ನೆ ಕಾಸಿ ಸೀಸ್ಯೆರೆವಾಗಅಂಗಣದ ಪಶು ಬಹುದೂರಕೆಂಗೆಂಡಗಂಭವಪ್ಪಿಸುವರು ನಿನ್ನ ಪರಾಂಗನೆಭೋಗಿಚದುರಅಂಗ ಶೃಂಗಾರದ ಕೊನಬುಗಾರ ನಿನಗ್ಹಿಂಗುವದೆ ಯಮದ್ವಾರಮಂಗಳ ಮಹಿಮ ಮುಕುಂದ ಮುರಾರಿ ಶ್ರೀರಂಗನ ಭಕುತಿವಿದೂರ 6ಸುಟ್ಟರೆ ಹಿಡಿಬೂದಿ ಕೆಟ್ಟರೆ ಕ್ರಿಮಿಕಾಯಇಟ್ಟರಿರದು ವಾಯುವಿರದೆಹುಟ್ಟಿ ಸುಜನ್ಮದಿ ಜಾಣರಾಗದೆಬುಧರಟ್ಟುವರೆ ದಿವಸ ಬರಿದೆಇಟ್ಟಣಿಸಿದ ಭವಗತ ಸುಖದು:ಖವುಂಡುಟ್ಟು ರಾಮನ ಮನವಿರದೆಕಟ್ಟಕಡೆಲಿ ನರಕವನುಂಬೋದುಚಿತಲ್ಲದಿಟ್ಟನಾಗು ಮಾಯೆಯಜರಿದು7ನಿತ್ಯನೈಮಿತ್ಯಕಾಮ್ಯಾದಿ ಸತ್ಕರ್ಮವಮತ್ತೆ ತಿಳಿದು ನಡೆ ಆತ್ಮಹತ್ಯವಸತ್ಯ ಅನ್ಯವಧೂಜನಸಖ್ಯಪರವಿತ್ತದಂಜಿಕೆ ಇರಲ್ಯಾತ್ಮಕರ್ತಮೂರವತಾರಿ ಪೂರ್ಣ ಬೋಧಾಚಾರ್ಯರಭೃತ್ಯನಾಗಿ ಬಾಳೊ ಆತ್ಮಎತ್ತೆತ್ತ ನೋಡಲು ಬೆನ್ನಬಿಡದೆಕಾವಪ್ರತ್ಯಕ್ಷನಾಗಿ ಪರಮಾತ್ಮ 8ಮಂಗಳಾತ್ಮರಿಗೆಅಹರ್ನಿಶಿಶ್ರೀವರಅಂಗಜಜನಕನೆಚ್ಚರಿಕೆಸಂಗಡಿಸಿದ ವಿಷಯಂಗಳಿದ್ದರೇನುತಂಗಳ ಅನ್ನದೋಕರಿಕೆಹಿಂಗದೆ ವರಸಂಗ ಮಾಡಿದರೊಯಿವರುಮಂಗಳಾತ್ಮಕನಿದ್ದ ಪುರಕೆಬಂಗಾರ ಮನೆಯ ಪ್ರಸನ್ವೆಂಕಟೇಶನಡಿಂಗರರಿಗೆ ನರ್ಕಸರ್ಕೆ 9
--------------
ಪ್ರಸನ್ನವೆಂಕಟದಾಸರು
ಶ್ರೀ ಜಗನ್ನಾಥದಾಸರ ಕೀರ್ತನೆ139ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರು ಗುಣಾರ್ಣವ ಜಗಜ್ಜನ್ಮಾದಿಕರ್ತನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಮೂಲಗುರುಅಗುರು ಶ್ರೀ ಹಂಸನಾಮಕ ಶ್ರೀಶಸಲಿಲಜಾಸನಸನಕದೂರ್ವಾಸಾದಿಗಳಪೀಳಿಗೆಯಲಿ ಬಂದ ಮರುದಂಶ ಮಧ್ವನಕಾಲಿಗೆ ಎರಗಿ ಶರಣಾದೆ ನಾ ಸತತ 1ಮಧ್ವಕರಕಂಜಭವಕಂಜನಾಭನೃಹರಿಮಾಧವಅಕ್ಷೋಭ್ಯ ಜಯತೀರ್ಥರಿಗೆ ನಮಿಪೆವಿದ್ಯಾಧಿರಾಜರಿಗೆ ರಾಜೇಂದ್ರತೀರ್ಥರಿಗೆಜಯಧ್ವಜರಿಗೆ ಮನೋ ಪುರುಷೋತ್ತಮರ್ಗೆ 2ಪುರುಷೋತ್ತಮ ಕುವರ ಬ್ರಹ್ಮಣ್ಯ ತೀರ್ಥರಿಗೆಸರಸೀರುಹನಾಭತೀರ್ಥಜರು ಲಕ್ಷ್ಮೀ -ಧರರ ಪರಂಪರೆ ಜಾತ ಸ್ವರ್ಣ ವರ್ಣರಕರಸರೋಜಭವಶ್ರೀ ಪಾದರಾಜರಿಗೆ ಶರಣು3ಸುಪುಣ್ಯ ಲಕ್ಷ್ಮೀ ನಾರಾಯಣ ತೀರ್ಥರಿಗೆಶ್ರೀಪಾದ ರಾಜತ್ವ ಯೋಗ್ಯತಾಲಿಂಗಶ್ರೀ ಭೂ ಸಮೇತ ಶ್ರೀ ರಂಗವಿಠ್ಠಲ ತಾನೆಈ ಪುಣ್ಯ ಶ್ಲೋಕರಲಿ ಬಂದು ನಿಂತಿಹನು 4ದಿನತೇಜಃ ಪುಂಜ ಬ್ರಹ್ಮಣ್ಯ ತೀರ್ಥರವನಜಕರಜರು ವ್ಯಾಸರಾಜಸ್ವಾಮಿಗಳುಘನಮಹಾ ಹರಿಭಕ್ತ ವಾದಿಗಳ ಸಿಂಹರುಆ ನಮಿಪೆ ಈ ಹರಿದಾಸಯತಿಗಳಿಗೆ 5ಪೂರ್ಣ ಪ್ರಜ್ಞಾನಂದ ತೀರ್ಥ ಮಧ್ವಾಚಾರ್ಯಕ್ಷೋಣಿಯ ಸಜ್ಜನರ ಉದ್ಧಾರಕಾಗಿಘನಮೂಲ ಗ್ರಂಥಗಳ ಸಹ ಪ್ರಾಕೃತದಲ್ಲೂಅನಘಲಕ್ಷ್ಮೀಶನ ಸ್ತೋತ್ರ ರಚಿಸಿಹರು6ಪೂರ್ಣಪ್ರಜÕರ ಜ್ಞಾನ ವಂಶಸ್ಥಯತಿಗಳುಕನ್ನಡದಿ ನುಡಿದಿರುವ ಕೀರ್ತನೆ ಪದ್ಯಗಳುಘನತರವು ಆ ರೀತಿಆದ್ಯಹರಿದಾಸರುಗಳುಕನ್ನಡದಿ ನುಡಿದಿಹರುಹರಿಪ್ರೀತಿಗಾಗಿ7ಸರ್ವದಾ ಶರಣಾದೆ ಎನ್ನ ಕಾಯುವ ತಂದೆದೇವ ಋಷಿ ನಾರದಪುರಂದರದಾಸರಲಿಶ್ರೀ ವ್ಯಾಸರಾಜರಲಿ ಉಪದೇಶ ಕೊಂಡಿಹರುನಿರ್ವಾಜ್ಯ ಭಕ್ತಿಮಾನ್ ಕಾರುಣ್ಯಶರಧಿ8ವಿಷ್ಣು ಸರ್ವೋತ್ತಮ ತದಂತರ ರಮಾದೇವಿವನು ರುಹಾಸನ ವಾಣಿ ತದಧೌ ಎಂದುತಾನೆ ನೇರಲ್ಲರಿತು ಲೋಕಕ್ಕೆ ಪೇಳಿದಘನದಯಾನಿಧಿ ಭೃಗುವೇ ವಿಜಯದಾಸಾರ್ಯ9ವಿಜಯದಾಸಾರ್ಯರರಾಜೀವಪದಯುಗಕೆನಿಜ ಭಕ್ತಿ ಪೂರ್ವಕ ಶರಣಾದೆ ಸತತವಿಜಯರಾಯರಗುರುಪುರಂದರದಾಸಾರ್ಯರುವಿಜಯರಾಯರ ಶಿಷ್ಯ ಗೋಪಾಲದಾಸರು 10ಪರಮಭಾಗವತರುಹರಿಭಕ್ತಾಗ್ರಣಿ ಕರುಣಿಹರಿಶಿರಿ ಒಲಿದಿಹ ದಾಸಮಹಂತವರವಾಯು ಗೋಪಾಲದಾಸರೊಳು ಸರ್ವದಾಸುಪ್ರಚುರನಾಗಿಹನು ಶರಣು ಗುರುವರ್ಯ 11ಕ್ಷಿಪ್ರಪ್ರಸಾದರು ವ್ಯಾಪ್ತೋಪಾಸಕರುಶ್ರೀಪತಿ ವೆಂಕಟ ಕೃಷ್ಣನಲಿರತರುಆಪತ್ತುಗಳ ಕಳೆದು ಕಾಮಿತಾರ್ಥಗಳೀವಕೃಪಾಳು ಇವರಲ್ಲಿ ನಾ ಶರಣು ಶರಣಾದೆ 12ಈ ನಮ್ಮ ಗುರುಗಳು ಗೋಪಾಲದಾಸಾರ್ಯರಲಿಘನವಿದ್ವಾಂಸರು ಬ್ಯಾಗವಟ್ಟ ಮನೆಯವರುಶ್ರೀನಿವಾಸಾಚಾರ್ಯ ಶರಣಾಗಿ ಜಗತ್ತಲ್ಲಿಜಗನ್ನಾಥ ದಾಸರು ಎಂದು ಜ್ವಲಿಸಿಹರು 13ಬ್ಯಾಗವಟ್ಟಿ ಗ್ರಾಮ ಮಾನವಿ ಎಂಬುವನಗರದ ಸಮೀಪವು ನವಾಬನಾಡಳಿತಆಗ್ರಾಮ ಶಾನಭೋಗ ನರಸಿಂಹಾಚಾರ್ಯರುಭಾಗವತಧರ್ಮವ ಆಚರಿಸುವವರು14ಹಣದಿಂದ ಶ್ರೀಮಂತರೋ ಬಡವರೋ ಹೇಗೋಗುಣದಿಂದ ಇವರು ಶ್ರೀಮಂತರು ಖರೆಯುಜ್ಞಾನಿವರ್ಯರು ಇವರು ಸುರವೃಂದದವರುಮನುಜ ಲೋಕದಿ ಜನ್ಮ ಹರಿಯ ನಿಯಮನದಿ 15ಜ್ಞಾನ ಭಕ್ತಿ ವೈರಾಗ್ಯ ಸಂಪನ್ನರುಶಾನುಭೋಗಿ ಉದ್ಯೋಗವ ತ್ಯಜಿಸಿಜ್ಞಾನಿತಿಮ್ಮಣ್ಣದಾಸಾರ್ಯರಲಿ ಉಪದೇಶಅನುಗ್ರಹನಾಮಾಂಕಿತ ಹೊಂದಿದರು ಮುದದಿ 16ನರಸಿಂಹಾಚಾರ್ಯ ಲಕ್ಷ್ಮಕ್ಕ ದಂಪತಿಯಪುತ್ರರತ್ನನು ಬುದ್ಧಿರ್ಮಾ ಶ್ರೀನಿವಾಸಸೂರಿವರವರದೇಂದ್ರ ತೀರ್ಥರ ಮುಖದಿಂದಪರಾಪರ ವಿದ್ಯೆಯ ಕಲಿತನು ತೀವ್ರ 17ವರದೆಂದ್ರರಲಿ ಓದಿ ದೊಡ್ಡ ಪಂಡಿತನಾಗಿನರಸಿಂಹದಾಸರು ತಂದೆ ದಿನ ಚರಿಪಹರಿದಾಸ ಪದ್ಧತಿ ಕೀರ್ತನಾರಾಧನಹರುಷದಲಿ ನೋಡಿ ಮುದಪುಳಕ ನಾಗುವನು 18ಗೃಹಸ್ಥ ಆಶ್ರಮ ಧರ್ಮ ಚೆನ್ನಾಗಿ ಆಚರಿಸುತ್ತಅಹರಹ ಸಚ್ಛಾಸ್ತ್ರ ಪಾಠ ಪೇಳುತ್ತಬಹುಕೀರ್ತಿ ಶ್ರೀನಿವಾಸಾಚಾರ್ಯರು ಹೊಂದಿಮಹಿಯಲ್ಲಿ ಪ್ರಖ್ಯಾತರಾಗಿ ಜ್ವಲಿಸಿಹರು 19ವಾರಿಜಾಸನ ಪಿತನು ಪೂರ್ಣಪ್ರಜÕರ ಹೃಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 20- ಪ್ರಥಮೋಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸುಧಾಮ ಚರಿತ್ರೆಶ್ರೀ ಹರಿಪ್ರಿಯ ಸಖನು ಕುಚೇಲನುವರವಿಪ್ರೋತ್ತಮನವನೂ ಪಘೋರದಾರಿದ್ಯ್ರದ ಬಾಧೆಯೊಳಿರುತಲಿಚಾರುಸಚ್ಚರಿತೆಯ ಆಗರವಾಗಿಹ ಅ.ಪ.ಶೀಲ ಸದ್ಗುಣವತಿಯು ಸುಸೀಲೆಯುಸತಿಮಣಿ ಪತಿವ್ರತೆಯುಬಾಲಕ ಸಲಹಲು ಕಡು ಕಷ್ಟ ಬಡುತಲಿ ಶ್ರೀಲೋಲನ ಧ್ಯಾನದಿ ಕಾಲಕಳೆಯುತಲಿಹಳು 1ಮನದಲಿ ಯೋಚಿಸುತ ಅನುನಯದೊಳುಪತಿಗೆ ತಾ ನುಡಿದಳೆಂದೂಅನುಭವಿಸಲಾರೆಘನದಾರಿದ್ರ್ಯವನುಸಂ ಮ್ಮಂಧಿಗಳು ಸ್ನೇಹಿತರಲ್ಲವೇ ನಿಮಗೆ 2ಅಂದ ಮಾತನು ಕೇಳುತ ಕುಚೇಲ ತಾಹಿಂದೆ ಗುರುಕುಲ ವಾಸದಿನಂದ ಬಾಲನ ಕೂಡ ಹೊಂದಿದ ಸ್ನೇಹವತಂದು ಸ್ಮರಣೆಗೆ ಶ್ರೀ ಕೃಷ್ಣ ಸಖನು ಎಂದಾ 3ಕಡುಹರುಷದಿ ಸತಿಯುಒಡನೆ ತಂದು ಪ್ರಥಕು ತಂಡುಲವ ನೀಡೀಕಡಲೊಡೆಯಪಾದದರುಶನ ಕೊಂಡು ನೀವಸಡಗರದಲಿ ಬನ್ನಿರೆಂದು ಕಳುಹಿದಳು 4ಭರತ ಮಾರ್ಗದಿ ಹರಿಯಾಸ್ಮರಿಸುತಲೆ ಮನದೊಳು ಪೂಜಿಸುತಸುರ ವೈಭವದಲಿ ಮೆರೆಯುವ ದ್ವಾರಕಾಪುರವನುನೋಡುತ ಬೆರಗಾಗಿ ನಿಂದನು 5ಚಾರರೊಡನೆ ಪೇಳಿದಾಶ್ರೀ ಕೃಷ್ಣನ ಬಾಲ್ಯದಸಖತಾನೆಂದುದೂರದಿ ಬಂದು ದ್ವಾರದಿ ನಿಂದಿಹುದನುಅರುಹಿರಿ ಹರಿಗೆಂದು ಕಳುಹಿದನವರನು 6ವಾರುತಿಯನು ಕೇಳುತಾಶ್ರೀಕೃಷ್ಣ ತಾ ವಿಪ್ರನೆಡೆಗೆ ಬರುತಾಕರಪಿಡಿದವನ ಕರೆತಂದನರಮನೆಗೆ ತಾವರಸಿಂಹಾಸನದಲ್ಲಿ ಕುಳ್ಳಿರಿಸಿದನಾಗ 7ದೂರದ ದಾರಿಯನು ನಡೆದು ಬಂದಶ್ರಮ ಪರಿಹಾರಕೆಂದುನಾರಿ ರುಕ್ಮಿಣಿ ನೀರ ನೆರೆಯ ಪಾದವ ತೊಳೆದುಭಾರಿ ಉಪಚಾರ ಮಾಡುತಿದ್ದನು ಕೃಷ್ಣಾ 8ಮಡದಿ ಮಕ್ಕಳ ಕ್ಷೇಮವ ವಿಚಾರಿಸಿಕಡು ಸಂಭ್ರಮವ ತೋರುತಷಡುರಸದನ್ನವ ಮಡದಿ ರುಕ್ಮಿಣಿ ಬಡಿಪೆಸಡಗರದಲಿ ಸುಭೋಜನವ ಮಾಡಿಸಿದನು 9ಅಂದಿನಿರುಳು ಕಳೆಯೇತಂದಿಹುದೇನುಕಾಣಿಕೆತಮಗೆನುತಾಚಿಂದೆ ಬಟ್ಟೆಯೊಳಿದ್ದ ಪ್ರಥಕು ತಂಡುಲವ [ಅವಲಕ್ಕಿ]ಬ್ರಹ್ಮಾಂಡದೊಡೆಯ ತಾ ಕೊಂಡೆ ಸಂಭ್ರಮದಿಂದ 10ಪ್ರಥಕು ತಂಡುಲವ ಕೊಂಡುಸುಧಾಮನ ಭಕುತಿ ಭಾವನೆ ಕಂಡುಅತುಲ ಐಶ್ವರ್ಯದ ಸುಖ ಸಂಪದವಿತ್ತುಮುಕುತಿ ನೀಡಿದ ನಮ್ಮ ಭಕುತ ವತ್ಸಲ ಕೃಷ್ಣಾ 11ಮಂಗಲಂ ಮಚ್ಛಕೂರ್ಮವರಹ ನರಸಿಂಹ ಸುಂದರ ವಾಮನಮಂಗಲಂ ಭ್ರಗುರಾಮ ದಶರಥ ತನಯಗೆಮಂಗಲಂಸಿರಿಕೃಷ್ಣ ಬೌದ್ಧ ಸುಕಲ್ಕಿಗೆ 12ಮಂಗಲಂ ಪ್ರದ ಚರಿತ್ರೆಯಾಭಕುತಿಯಿಂ ಪೇಳಿ ಕೇಳಿದ ಜನಕೆಹಿಂಗದೆ ಸಕಲ ಸೌಭಾಗ್ಯ ಸಂಪದ ವೀವಾಅಂಗಜಪಿತ ತಂದೆಸಿರಿವಿಠಲ ಸ್ವಾಮಿ 13ಶ್ರೀಹರಿಪ್ರಿಯ ಸಖನು ಕುಚೇಲನುವರವಿಪ್ರೋತ್ತಮನವನುನೀರಜನಾಭನ ಕರುಣೆಯಿಂದಲಿ ತಾಭೂರಿಸಂಪದಸಿರಿಭೋಗಿಸುತಿದ್ದನು 14ಶ್ರೀ ಸುಧಾಮ ಚರಿತ್ರ ಸಂಪೂರ್ಣಂ
--------------
ಸಿರಿವಿಠಲರು
ಶ್ರೀಆನಂದಮಯಸ್ತೋತ್ರ40ಪೂರ್ಣ ಸುಗುಣಾರ್ಣವನೆಅನಘಪರಮೇಶ್ವರನೆಆ ನಮಿಪೆ ಶ್ರೀರಮಣಆನಂದಮಯವಿಷ್ಣುಪನಿನ್ನಯ ಸುಮಹಿಮೆಗಳ ನಿನ್ನಿಚ್ಛೆಯಿಂದಲೇಚೆನ್ನಾಗಿ ತಿಳಿಸಿ ಅಚ್ಛಿನ್ನ ಭಕ್ತಿಯನೀಯೊ ಅಪಸುಖರೂಪ ಪಾಲನಾಲಯಕರ್ತ ಲಕ್ಷ್ಮೀಶನಿಷ್ಕಳನು ನೀ ಸದಾಕೈವಲ್ಯಸುಖದಆಗಮಸುಶಾಸ್ತ್ರೈಕ ವಿಜÉÕೀಯ ಪರಬ್ರಹ್ಮಅಂಗಾಂಗ್ಯಭಿನ್ನ ಆನಂದ ಸಂಪೂರ್ಣ 1ಬ್ರಹ್ಮಶಬ್ದದಿ ಮುಖ್ಯವಾಚ್ಯ ಬಹು ಆವರ್ತಿಬ್ರಹ್ಮಆನಂದಮಯನೀ ಇತರರಲ್ಲಬ್ರಹ್ಮಪರಿಪೂರ್ಣಹರಿಸರ್ವನಾಮದಿ ನೀನೆಬಹುರೂಪ ಸರ್ವಸ್ಥ ಈಶ್ವರಆನಂದಮಯ2ಚಿತ್ಪ್ರಕೃತಿ ನಾಲ್ಮೊಗನು ಅಷ್ಟಮೂರುತಿ ಎಂಬರುದ್ರನು ದೇವೇಂದ್ರ ಸುರಗುರುವಿಪ್ರಇಂಥ ಯಾರೂ ವಸ್ತು ಯಾವುದೊ ಅಲ್ಲವುಆನಂದಮಯನೀನು ವಿಷ್ಣು ಪರಬ್ರಹ್ಮ3ಪ್ರಕೃತಿ ಪ್ರಜಾಪತಿ ಸದಾನಂದ ದಶಪ್ರಮತಿರುದ್ರಾಷ್ಟಮೂರ್ತ್ಯಾದಿ ಸರ್ವ ಶಬ್ದಂಗಳುಪರನೆ ಬ್ರಹ್ಮನೆ ವಿಷ್ಣು ಮುಖ್ಯ ವಾಚಕ ನಿನಗೆಇರುವ ಈ ಸರ್ವರೊಳು ಸುಖಪೂರ್ಣ ಸ್ವಾಮಿ 4ಅನ್ನಮಯ ಪ್ರಾಣಮಯ ಮನೋಮಯ ವಿಜ್ಞಾನಮಯಆನಂದಮಯಎಂಬ ಐದು ಶಬ್ದಂಗಳು 1ಆನಂದಮಯಶಬ್ದದಿಂದ ಗ್ರಹಿಸಲುಬೇಕುಆನಂದಮಯಬ್ರಹ್ಮ ನೀನೆ ಇತರರು ಅಲ್ಲ5ಶಿರ ಬಾಹುದ್ವಯ ಮಧ್ಯಚರಣಅಂಗಾಂಗಗಳುಪೂರ್ಣಆನಂದಮಯಎಂದೂ ಅಭಿನ್ನಉರು ಸುಗುಣ ಪರಿಪೂರ್ಣ ವಿಷ್ಣು ಆತ್ಮನು ಬ್ರಹ್ಮಶೃತಿಯು ಬಹುಸಾರುತಿದೆ ಸುಖಮಯನು ಎಂದು 6ಅನ್ನಮಯ ಅನಿರುದ್ಧ ಪ್ರಾಣಮಯ ಪ್ರದ್ಯುಮ್ನಮನೋಮಯ ಸಂಕರ್ಷಣನು ವಿಜ್ಞಾನಮಯನುಅನಘಮಾಯಾರಮಣ ಪರವಾಸುದೇವ ನೀಆನಂದಮಯಶ್ರೀಶ ನಾರಾಯಣ ಬ್ರಹ್ಮ7ಪಂಚ ಕೋಶಂಗಳಲಿ ತನ್ನಾಮ ತದ್ಭಿನ್ನಕಿಂಚಿತ್ತು ಲೇಪವಿಲ್ಲದೆ ಇದ್ದು ನಿಯಮಿಸುವೆಪಂಚ ಸುಖರೂಪದಿಂ ಪಂಚವರ್ಣದಿ ಜ್ವಲಿಪೆಸಂಚಿಂತಿಪರ್ಗೆ ಸುಖವೀವೆ ಸುಖಮಯ ಬ್ರಹ್ಮ 8ಅಧಿಕಾರಿ ಆನಂದಪ್ರಚುರಬಹುರೂಪ ನೀಸರ್ವರೂ ನಿನ್ನಿಂದ ಉಪಜೀವ್ಯರೊ ಸ್ವಾಮಿಸರ್ವರಿಗು ಪ್ರೇರಕನು ಸತ್ತಾಪ್ರವೃತ್ತಿದನುಸರ್ವೇಶ ಸುಖಪೂರ್ಣ ಸರ್ವವ್ಯಾಪಿಯೆ ದೇವ 9ಆನಂದಮಯನೀನೆ ಆನಂದೋದ್ರೇಕದಿಂಪ್ರಾಣಿಗಳ ಧರ್ಮಗಳ ಪ್ರವೃತ್ತಿ ಮಾಡುವೆಯೊಆನಂದೋದ್ರೇಕದಿಂ ಸರ್ವತ್ರವ್ಯಾಪ್ತ ನೀಆನಂದಮಯಇತರ ಲೋಕಚೇಷ್ಟಕರಿಲ್ಲ10ಅಂಗಾಂಗಿತ್ವದಿ ಭಗವಂತ ನೀ ಕ್ರೀಡಿಸುವೆರಂಗ ನೀ ಸತ್ಯಂ ಜ್ಞಾನಮನಂತಂ ಬ್ರಹ್ಮನೆಂದುಹೊಗಳುತಿದೆ ಶೃತಿಯು ಸುಖಸಾರಾತ್ಮ ಚಿನ್ಮಾತ್ರಚಾರ್ವಾಂಗ ನಿನ್ನ ತಿಳಿಯದೆ ಬೇರೆ ಗತಿಯಿಲ್ಲ 11ಸತ್ಯ ಸತ್ಸøಷ್ಟಿಕರ್ತ ಜೀವನಪ್ರದನುಸರ್ವ ಪ್ರವರ್ತಕನು ಸಂಹಾರಕರ್ತಅಶೇಷಸಾಮಾನ್ಯ ವಿಶೇಷಜ್ಞಾನವು ಜ್ಞಾನದೇಶಾದಿಪರಿಚ್ಛೇದ ಶೂನ್ಯವು ಆನಂತ 12ಅನ್ನಮಯದಿಂ ಸೃಷ್ಟಿ ಸಂಹಾರಜೀವನವುಪ್ರಾಣಮಯ ಶಬ್ದ ಸಹ ಜೀವನಪ್ರದವುಮನೋಮಯ ಶಬ್ದದಿಂ ಸಾಮಾನ್ಯಜ್ಞಾನವುವಿಜ್ಞಾನಮಯ ಶಬ್ದದಿ ವಿಶೇಷಜ್ಞಾನ 13ಆನಂದಮಯಶಬ್ದದಿಂದಲಿ ಜÉÕೀಯವುಆನಂದಾದ್ಯಖಿಳಗುಣ ಅಪರಿಚ್ಛಿನ್ಮತ್ವಅನ್ನಮಯ ಪ್ರಾಣಮಯ ಸತ್ಯಂ ಬ್ರಹ್ಮಮನೋಮಯ ವಿಜ್ಞಾನಮಯ ಜ್ಞಾನಂ ಬ್ರಹ್ಮ 14ಆನಂದಮಯಆನಂತಂ ಬ್ರಹ್ಮ ಎಂದೀ ರೀತಿಮಂತ್ರವರ್ಣೋಕ್ತ ಶಬ್ದಗಳಿಗೇಕಾರ್ಥಆನಂದಮಯಮೊದಲಾದ ಶಬ್ದಗಳಿಂದಆನಂದಪರಿಪೂರ್ಣ ವಿಷ್ಣು ನೀನೇ ವಾಚ್ಯ 15ಆತ್ಮ ನೀಆನಂದಮಯಇತರರು ಅಲ್ಲಆನಾತ್ಮರು ಸಂಪೂರ್ಣಸ್ವತಂತ್ರರು ಅವರುಚೇತನಾಚೇತನದಸತ್ತಾನಿನ್ನಿಂದಲೇಆನಂತ ನೀ ಸರ್ವಗನು ಆಸಮ ಪ್ರಭು ಐರ 16ಬ್ರಹ್ಮ ವಿದಾಪ್ನೋತಿ ಪರಂ ಎಂದು ಉಪನಿಷದ್ವಾಕ್ಯಬ್ರಹ್ಮಾಪರೋಕ್ಷವೇ ಮೋಕ್ಷಕ್ಕೆ ಕಾರಣಬ್ರಹ್ಮೇತರ ವಿರಿಂಚಾದಿ ಜೀವರ ಜ್ಞಾನಮೋಕ್ಷಕೊಡಲು ಎಂದು ಶೃತಿಯು ಪೇಳುತಿದೆ 17ತಮೇವಂ ವಿದ್ವಾನಮೃತ ಇಹಭವತಿನಾನ್ಯಃ ಪಂಥಾ ಅಯನಾಯ ವಿದ್ಯತಾಎಂಬ ಶೃತ್ಯನುಸಾರ ನಿನ್ನಾಪರೋಕ್ಷ ವಿನಾಮುಕ್ತಿಯು ಲಭಿಸದು ಅನ್ಯಜ್ಞಾನದಿ ಎಂದೂ 18ಆನಂದಪ್ರಚುರ ಪೂರ್ಣಾನಂದಮಯ ನೀನೆಆನಂದ ತರತಮದಿ ಜೀವರಲಿ ಉಂಟುಅತ್ಯಂತ ಭೇದವು ನಿನಗೂ ಜೀವರಿಗೂಅನಂತ ಅಪರಿಮಿತ ಆನಂದಿ ನೀನೆ 19ರುದ್ರನ ಶತಗುಣಿತ ಆನಂದ ನಾಲ್ಮೊಗನಒಂದು ಆನಂದವು ಎಂಬುವುದು ಶೃತಿಯುಆನಂದ ಪರಿಮಿತವು ಜೀವರಿಗೆ ಈ ರೀತಿಆನಂದ ಅಪರಿಮಿತ ನಿನ್ನಯ ಸ್ವರೂಪ 20ಸುಖಮಯ ನಿನ್ನಪರಿಮಿತಾನಂದಾದಿಗಳನುಸಾಕಲ್ಯತಿಳಿದವರು ಇಲ್ಲವೇ ಇಲ್ಲಸಾಕಲ್ಯಶಬ್ದಗಳು ಪೊಗಳಲರಿಯವು ನಿನ್ನಏಕಸುಖಮಯ ನೀನು ಜೀವರಿಗೆ ಭಿನ್ನ 21ತತ್ವಮಸ್ಯ ಹರಿಬ್ರಹ್ಮಾಸ್ಮಿ ಪುರುಷಯೇ ವೇದಂಸರ್ವಂ ಎಂಬಂಥಾ ಇಂಥ ಶೃತಿ ಮಾತುಗಳುಜೀವೇಶ ಐಕ್ಯವನು ಬೋಧಿಸುವವಲ್ಲವುಸರುವಿಚಾರ ನಿರ್ಣಯದಿ ಭೇದಬೋಧಕವೆ 22ಜೀವರಿಗೆ ಜನ್ಮಜೀವನಸತ್ತಾದಾತನುಸರ್ವಾಶ್ರಯ ಸರ್ವನಿಯಾಮಕನು ಆತ್ಮಜೀವರು ಪರಬ್ರಹ್ಮಜ್ಞಾನದಿಂ ಪೊಂದುವಸೋಚಿತಪೂರ್ಣತ್ವ ಕೊಡುವ ನೀ ಬ್ರಹ್ಮ 23ಸರ್ವಕ್ಕೂ ಭಿನ್ನ ನೀ ಸರ್ವತ್ರ ಸರ್ವದಾಸರ್ವದೊಳು ಇರುವಂಥ ಸರ್ವೇಶ್ವರಸರ್ವ ಸತ್ತಾದಿ ಪ್ರದತ್ವ ಸ್ವಾಮಿತ್ವದಿಂಸರ್ವ ನೀನೆಂದೆನಿಸಿಕೊಂಬೆಯೊ ದೇವ 24ಸರ್ವವಂದ್ಯನು ವಿಷ್ಣು ಸರ್ವಾಂತರ್ಯಾಮಿಯುಸ್ವತಂತ್ರ ಈಶನು ಸರ್ವಜೀವರಿಗೆ ಭಿನ್ನಸರ್ವಸ್ವಾಮಿಯು ನೀನು ಎಂದರಿತು ಭಜಿಪರಿಗೆಸರ್ವಶೋಕವ ಬಿಡಿಸಿ ಮೋಕ್ಷಸುಖವೀವೆ 25ಸರ್ವಜಡ ಚೇತನದಿ ಅಂತರ್ನಿಯಾಮಕನುಸರ್ವಜಗದಾಧಾರ ಏಕ ಬಹುರೂಪತ್ವಂ ಅಸೌ ಅಹಮೆಂದು ಸರ್ವನಾಮದಿ ವಾಚ್ಯಸರ್ವಜಡ ಚೇತನಕೆ ವಿಲಕ್ಷಣನು ಸ್ವಾಮಿ 26ಅತೀಂದ್ರಿಯವು ಬ್ರಹ್ಮವಿಷಯಕ ಜ್ಞಾನಶೃತ್ಯನುಸಾರವಿಲ್ಲದ ಅನುಮಾನದುಸ್ತರ್ಕದಿಂದಲಿ ಲಭಿಸದು ಯಾರಿಗೂಮೋದಮಯ ಶ್ರೀ ವಿಷ್ಣು ಜೀವರಿಂ ಭಿನ್ನ 27ಬದ್ಧರೊಳು ಮುಕ್ತರೊಳು ಇದ್ದು ನೀ ನಿಯಮಿಸುವೆಬದ್ಧರಂತೇ ಮುಕ್ತಜೀವರಿಗೂ ಭಿನ್ನಮುಕ್ತರಿಗೆ ಅವರವರ ಆನಂದ ಅನುಭವವುಅಧೀನ ನಿನ್ನಲ್ಲಿಆನಂದಮಯಶ್ರೀಶ28ಸದಮಲ ಬ್ರಹ್ಮ ನಿನ್ನ ಪರೋಕ್ಷಜ್ಞÕನಿಗೆಪದುಮಸಂಭವ ಸಹ ನೀನು ಸಹ ಇದ್ದುಒದಗಿಸುವೆ ಸೋಚಿತ ಮೋಕ್ಷಸುಖ ಅವರಿಗೆಹೇ ದಯಾನಿಧೇ ನಮೋ ಆನಂದಪೂರ್ಣ 29ಅನ್ನ ಪ್ರಾಣ ಮನೋವಿಜ್ಞಾನಆನಂದಮಯಪರಿಣಾಮ ಅಭಿಮಾನರಹಿತ ಅಧಿಕಾರಿಆನಂದ ಪ್ರಚುರನೇ ಲೋಕಚೇಷ್ಟಕ ನೀನೆಮಂತ್ರವರ್ಣೋಕ್ತ ಮಹಾಮಹಿಮ ಸುಖಪೂರ್ಣ 30ವನಜಾಸನಾದಿಗಳು ಆನಂದಮಯರಲ್ಲನಿನ್ನಿಂದ ಉಪಜೀವ್ಯ ಭಿನ್ನರು ಅವರುಆಮ್ನಾಯದಿಂ ವೇದ ದುಸ್ತರ್ಕಕತಿ ದೂರಆನಂದಮಯವಿಷ್ಣು ಮುಕ್ತರಿಗೂ ಆಶ್ರಯನು31ಜ್ಞಾನಸುಖಪೂರ್ಣ ಪ್ರಸನ್ನ ಶ್ರೀನಿವಾಸಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಎನ್ನ ಒಳಹೊರಗಿದ್ದು ನೀನೆ ನುಡಿದೀ ಗ್ರಂಥನಿನಗೆ ಅರ್ಪಣೆ ಸುಹೃದನಿತ್ಯಸಂತೃಪ್ತ32
--------------
ಪ್ರಸನ್ನ ಶ್ರೀನಿವಾಸದಾಸರು
ಸಜ್ಜನರ ಸಂಗ ನಮಗೆಂದಿಗಾಗುವುದೊ |ದುರ್ಜನರ ಸಂಗದಿಂದಲಿ ನೊಂದೆ ಹರಿಯೆ ಪವಾಕು-ವಾಕಿಗೆ ಡೊಂಕನೆಣಿಸುವರು-ಮತ್ತೆ |ಪೋಕರಾಡಿದ ಮಾತು ನಿಜವೆಂಬರು ||ವಾಕ್‍ಶೂಲಗಳಿಂದ ನೆಡುವರು ಪರರ ನೀ |ಪೋಕುಮಾನವರಿಂದ ನೊಂದೆ ಹರಿಯೆ 1ತಾವೆ ತಮ್ಮನ್ನು ಕೊಂಡಾಡಿಕೊಳ್ಳುವರು |ನ್ಯಾಯವಿಲ್ಲದೆ ನುಡಿವರು ಪರರ ||ಭಾವಿಸಲರಿಯರು ಗುರುಹಿರಿಯರನಿಂಥ |ಹೇಯ ಮನುಜರಿಂದ ನೊಂದೆ ಹರಿಯೆ 2ಒಡಜನರನು ಕೊಂದು ಅಡಗಿಸಿಕೊಂಬರು |ಬಿಡಲೊಲ್ಲರು ಹಿಡಿದನ್ಯಾಯವ ||ನುಡಿದು ಕೇಡನು ಒಡನೆ ತಪ್ಪಿಸಿಕೊಂಬಂಥಕಡು ಮೂರ್ಖರಿಂದ ನಾ ನೊಂದೆನು ಹರಿಯೆ 3ತೊತ್ತಿನೊಡನೆ ತನ್ನ ಸ್ನೇಹ ಸರಸ ಮಾತು |ತೆತ್ತಿಗರೊಡನೆ ಪಂಥವ ನುಡಿವರು ||ಸತ್ತಬಳಿಕ ಸೃಷ್ಟಿ ಸಟೆಯೆಂಬರು ಇಂಥ |ಮತ್ತಮನುಜರಿಂದ ನೊಂದೆ ಶ್ರೀಹರಿಯೆ4ಇಷ್ಟುದಿನವು ನಿನ್ನ ನೆನೆಯದ ಕಾರಣ |ಕಷ್ಟಪಡುವ ಕೈಮೇಲಾಗಿ ||ಸೃಷ್ಟಿಗೊಡೆಯ ಶ್ರೀ ಪುರಂದರವಿಠಲನೆ |ಮುಟ್ಟಿ ಭಜಿಸಬೇಕು ಧೃಷ್ಟಮನವು ನಿನ್ನ 5
--------------
ಪುರಂದರದಾಸರು
ಸುಮ್ಮನೆ ಕಾಲವ ಕಳೆವರೆ - ಯಮ - |ಧರ್ಮರಾಯನ ದೂತರೆಳೆಯರೆ ಪ.ನರಿ - ನಾಯಿ ಜನುಮವು ಬಾರದೆ - ಹಾಗೆ - |ನರಜನ್ಮದಲಿ ಬಂದು ಸೇರದೆ ||ಹರಿಯ ಸ್ಮರಣೆ ಮಾಡಲಾರದೆ - ಸುಮ್ಮ |ನಿರಲು ಪಾಪದ ವಿಷವೇರದೆ 1ಬಾಲನಾಗಿದ್ದಾಗ ಬಹುಲೀಲೆ - ಮುಂದೆ |ಲೋಲನಾಗಿ ಬಾಳಿದ ಮೇಲೆ ||ಮೂಳ ವೃದ್ಧಾಪ್ಯ ಬಂತಾಮೇಲೆ - ಇನ್ನು - |ಬಾಳುವುದೆಲ್ಲ ನೂಲಮಾಲೆ 2ಮಡದಿ - ಮಕ್ಕಳ ಕೂಡಣ ಬಾಳು - ತನ್ನ |ಒಡಲಿಗಾಗೆ ತಾನು ಕರವಾಳು ||ಬಿಡದೆ ಸಂಕೀರ್ತನೆ ಮಾಡೇಳು - ಮಿಕ್ಕ - |ನುಡಿದ ನುಡಿಗಳೆಲ್ಲವು ಬೀಳು 3ಮನೆಮನೆ ವಾರ್ತೆಯು ಸ್ಥಿರವಲ್ಲ - ಈ |ಮನುಜರ ಮಾತೇನು ಘನವಲ್ಲ ||ವನಜಸಂಭವಗೂ ನಿಶ್ಚಯವಿಲ್ಲ - ಮುಂದೆ |ಹನುಮಂತ ಪಟ್ಟಕೆ ಬಹನಲ್ಲ 4ಇಂದಿನಹಮ್ಮು ನಾಳೆಗೆ ಇಲ್ಲ -ಭವ |ಬಂಧನದೊಳು ಸಿಕ್ಕಿ ನರಳಿದೆನಲ್ಲ ||ಮುಂದನರಿತು ನಡೆದುದಿಲ್ಲ - ಮೃತ್ಯು |ಬಂದಾಗ ಬಿಡಿಸಿಕೊಳ್ಳುವರಿಲ್ಲ 5ಮರಣವುಆವಾಗ ಬರುವುದೋ - ತನ್ನ |ಶರೀರವುಆವಾಗ ಮುರಿವುದೊ ||ಕರಣಂಗಳೆಲ್ಲವು ಜರಿವುದೊ - ತನ್ನ |ಗರುವದುಬ್ಬಸವೆಲ್ಲ ಮುರಿವುದೊ 6ಮರಣಕಾಲಕೆ ಅಜಮಿಳನಾಗ - ತನ್ನ |ತರಳನನಾರಗನೆಂದು ಕರೆದಾಗ ||ಕರುಣದಿ ವೈಕುಂಠ ಪದವೀಗ -ನಿತ್ಯ - |ಪುರಂದರವಿಠಲನ ನೆನೆ ಬೇಗ 7
--------------
ಪುರಂದರದಾಸರು