ಒಟ್ಟು 526 ಕಡೆಗಳಲ್ಲಿ , 63 ದಾಸರು , 417 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಕ್ಷಿಸೋ ಜಗನ್ನಾಥದಾಸ ರಕ್ಷಿಸೋ ರಕ್ಷಿಸು ಗುರು ಜಗನ್ನಾಥದಾಸ ಪಕ್ಷಿವಾಹನನ ನಿಜದಾಸ ಮು ಮುಕ್ಷು ಮಾರ್ಗವ ತೋರ್ದಧೀಶ ನೀನೆ ಪ್ರ ತ್ಯಕ್ಷ ಪ್ರಹ್ಲಾದನನುಜ- ||ಅಹಾ|| ಈ ಕ್ಷಿತಿಯೊಳು ಸುರಶ್ರೇಷ್ಠನೆನಿಸಿ ವಿ ಶಿಷ್ಟರ ಮನೋಭೀಷ್ಟವನಿತ್ತ ಹರಿದಾಸ 1 ವೇದವಂದ್ಯನ ನಿಜತತ್ತ್ವ ನಿಜ ನಿತ್ಯ (ಸತ್ಯ) ಪೂರ್ಣ ಬೋಧರ ಗ್ರಂಥ ತತ್ತ್ವ ನೀತಿ ತ ಪ್ಪದೆ ಪೇಳ್ದೆ ಮಹತ್ವ ||ಅಹಾ|| ಮೋದಪಡಿಸಿ ಮೋದತೀರ್ಥರ ಮತ ದು ಗ್ಧಾಬ್ಧಿಸುಧೆಯನಿತ್ತ ಬಾದರಾಯಣನ ದಾಸ 2 ಪ್ರಕೃತಿಬಂಧಕರಾದ ಜನರು ನಿನ್ನ ಪ್ರಾಕೃತಗ್ರಂಥನೊಡಿ ಮೋದಿಪರು ಸತತಾ ಪ್ರಾಕೃತನ ತಾ ವಂದಿಪರು ಜನ್ಮ ಸುಕೃತಕ್ಕೆ ತಾವು ಸಾಧಿಪರು ||ಅಹಾ|| ಸಂಸ್ಕøತ ಭಾಷೆಯ ಪ್ರಕರಣಗಳನೆಲ್ಲ ಪ ರಿಷ್ಕøತ ಪಡಿಸಿ ನೀ ಪ್ರಾಕೃತದೊಳು ತೋರ್ದೆ3 ವಿಪ್ರವರೇಣ್ಯನೆ ನೀನು ಜಗದಿ ಅಪ್ರಮೇಯನ ಪ್ರಮೇಯವನ್ನೂ ಅದಕ್ಕೆ ಸಪ್ರಮಾಣಗಳೆಲ್ಲವನ್ನೂ ತೋರಿ ದಿ ಕ್ ಪ್ರದರ್ಶನ ಮಾಡಿ ಇನ್ನೂ ||ಅಹಾ|| ಸ್ವಪ್ರಯೋಜನ ರಹಿತ ಅಪ್ರಮೇಯನ ಮಹಿಮೆ ಕ್ಷಿಪ್ರ ಭೋಧೆಯಾಗಲ್ ತ್ವತ್ಪ್ರಸಾದವನಿತ್ತೆ4 ನಿನ್ನುಪಕಾರದ ಪರಿಯಾ ನಾನು ಜನ್ಮಜನ್ಮಾಂತರಕೆ ಮರೆಯೆ ನೀನೆ ಘನ್ನ ಶ್ರೀಹರಿದಾಸಾಗ್ರಣಿಯೇ ಇನ್ನು ನಿನ್ನ ಹರಿಕಥಾಮೃತಸಾರಕ್ಕೆಣೆಯೇ ||ಅಹಾ|| ಇನ್ನಿಲ್ಲ ನಿನ್ನಂಥ ಘನ್ನ ಕವಿಗಳ ಕಾಣೆ ಪನ್ನಂಗಶಯನ ಶ್ರೀ ವೆಂಕಟೇಶನ ದಾಸಾ 5
--------------
ಉರಗಾದ್ರಿವಾಸವಿಠಲದಾಸರು
ರಂಗ ರಂಗನಾಥ ಬೇಗ ಬಾರೋ ಪ ತುಂಗಮಹಿಮ ಬಂದು ಭವಭಂಗ ಮಾಡೋ ಅ.ಪ ಇಂದು ಬಂದೆ ಕುಂದುಎಲ್ಲಹಿಂದುದೂಡೋ ಮುಂದುಮಾಡಿ ಛಂದಭಕ್ತಿ ಕಂದನೆಂದು ಕೈಯ ಪಿಡಿಯೋ 1 ಬಂಧುವಲ್ಲೆ ನೀನೇ ಜಗಕೆ ನಂದಶಯಸ ಬಂಧಮೋಚಕಾ ಕಾವೆ ಪೇಳುಗೋವಿಂದಾ 2 ಬಿಂಬನೀನು ಹೌದು ಪ್ರತಿಬಿಂಬ ನಾನು ನನ್ನ ವ್ಯಾಪಾರ ಅಂಬೋದೇಕೋ ದೋಷಿಯೆಂತೆನ್ನಾ 3 ಹಂಬಲವ ಬಿಟ್ಟುಸಕಲ ನಂಬಿದೆನೋ ಸ್ವಾಮಿಯೆಂತೆಂದು ತುಂಬಿಶುಧ್ದ ಜ್ಞಾನ ಭಕುತಿ ಅಂಬುಜಾಕ್ಷಯಿಂಬು ನೀಡೈಯ್ಯಾ4 ಭುಕ್ತಿ ನೀನೇ ಪ್ರಾಣ ನೀನೆಸರ್ವಸ್ವ ಏನು ಇನ್ನು ಮಾಡಲಾಪೆ ನೀನೆವಲಿದು ಕಾಯಬೇಕೈಯ್ಯ5 ವಾಸುದೇವ ಪೂರ್ಣ ಸುದ್ಗುಣಾ ತೋಷಕಾಯ ಶ್ರೀಶನಿನ್ನ ದಾಸನೆಂದು ಒಪ್ಪಿಕೊಳ್ಳಯ್ಯ 6 ಏಕಾನೇಕರೂಪ ಸಕಲ ಲೋಕ ಸೃಜಿಸಿ ಅಳಿವೆ ಅನೀಕಾ ಬೇಕು ಎನಿಪೆ ಭಕ್ತರಲ್ಲಿ ಸಾಕಬೇಕು ಶ್ರೀಗೆ ನಾಯಕ 7 ಮೋದ ಪೂರ್ಣ ಬಾದರಾಯಣಾ ಆದಿಮಧ್ಯ ಅಂತ್ಯದೂರ ಸಾಧುಪ್ರಾಪ್ಯನೇಮ ವರ್ಜಿತಾ 8 ಶರಣು ಶರಣು ಮಧ್ವಸದನ ಶರಣು ಶರಣು ಬೃಹತಿಪ್ರತಿಪಾದ್ಯ ಶರಣು ಶರಣು “ಕೃಷ್ಣವಿಠಲ” ಶರಣು ರಂಗ ಕರುಣಾ ಸಾಗರ9
--------------
ಕೃಷ್ಣವಿಠಲದಾಸರು
ರಾಧಾರಮಣ ವಿಠಲ ನೀನಿವಳಸಾದರದಿ ಕಾಪಾಡೊ ಹರಿಯೇ ಪ ವೇದವೇದ್ಯನೆ ಪೂರ್ಣ ಬೋಧಸನ್ನುತ ನಿನ್ನಪಾದ ಭಜಕಳ ಬಿಡದೆ ಕಾಪಾಡೊ ಹರಿಯೇಅ.ಪ. ದಾಸದೀಕ್ಷೆಯಲಿ ಅಭಿಲಾಷೆ ಪೊಂದಿಹಳಿವಳುಶ್ರೀತ ತವ ಪಾದಾಬ್ಜ ದಾಸ್ಯವನೆ ಇತ್ತೂನೀಸಲಹೊ ಸುಜ್ಞಾನ ಭಕುತಿ ಭಾಗ್ಯವನಿತ್ತುಶೇಷಾದಿ ದಿವಿಜೇಡ್ಯ ವಾಸುದೇವಾಖ್ಯಾ 1 ನಿತ್ಯ ಮಂಗಳ ಮೂರ್ತೇಸತ್ಯಭಾಮಾ ಪತಿಯೆ ಪ್ರತ್ಯಹರ ನಿನ್ನ ಸ್ಮøತಿಇತ್ತು ಪಾಲಿಸು ಎಂದು ಪ್ರಾರ್ಥಿಸುವೆ ನಿನ್ನಾ 2 ಆಪನ್ನ ಪರಿಪಾಲಕಾಪಾಡ ಬೇಕಿವಳ ಗೋಪಾಲ ಬಾಲಾ 3 ಪತಿಯೆ ಪರದೈವವೆಂಬುನ್ನತದ ಮತಿಯಿತ್ತುಹಿತದಿಂದ ಮಧ್ವಮತ ತತ್ವಾಮೃತವನುಣಿಸೀಕೃತ ಕಾರ್ಯಳೆಂದೆನಿಸಿ ಹೃತ್ಸರೋಜದಿ ಚರಣಶತ ಪತ್ರ ತೋರಯ್ಯ ಶ್ರುತಿವಿನುತ ಹರಿಯೆ 4 ಘೋರ ದುರಿತಾಬ್ಧಿಯನು ಪಾರಗೈಸುವ ನಿನ್ನಕಾರುಣ್ಯಕೆಣೆಯುಂಟೆ ನೀರಜಾಕ್ಷಾಚಾರುಗುಣವಂತೆ ಬಾಲೆಯನು ಉದ್ಧರಿಸುಮಾರಾರಿ ಸಖ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ರಾಮ ರಕ್ಷಿಸೋ ಸೀತಾರಾಮ ಪಾಲಿಸೋ ಪ ಕಾಮನ ಪಿತನಿಸ್ಸೀಮ ಸಾಹಸಗುಣಧಾಮ ಮ- ಹಾತ್ಮ ಸುಧಾಮ ರಮಣನೆ ಅ.ಪ ದಶರಥ ಪ್ರಥಮ ಪುತ್ರ ತ್ರ್ರಿದಶ ಸ್ತುತಿಗೆ ಪಾತ್ರ ಕುಶÀಲವರು ನಿನ್ನ ಹಸು ಮಕ್ಕಳು ಪೂರ್ಣ ಶಶಿಮುಖಿ ಸೀತೆ ನಿನ್ನ ವಶವಾದವಳು 1 ಕೋಸಲಾಧಿಪನೊ ಹೇ ದೇವ ನೀ ಕೌಸಲ್ಯ ಜಠರಜನೊ ಶೇಷನ ಪೂರ್ವಜ ನಾಶರಹಿತ ಅಶೇಷ ಮುನಿಗಣಕೆ ತೋಷಪೂರಿತನಾದಿ 2 ದುಷ್ಟರ ಸಂಹಾರ ಮಾಡಿದಿ ನೀ ಶಿಷ್ಟರ ಉದ್ಧಾರ ಸೃಷ್ಟಿಯೊಳಗೆ ಲೇಶ ಕಷ್ಟವಿಲ್ಲದೆ ನೀನು ಸುಷ್ಟು ಮಾಡಿ ಅಖಿಳೇಷ್ಟ ಪ್ರದನಾದಿ 3 ದೀನರಕ್ಷಕ ನೀನು ಮಹಾತ್ರಾಣಿ ಇಂದ್ರನ ಸೂನು ವಾನರಾಧಿಪಹನು ಮನಮಾತನು ಮಾನಿಸಿದಿಯೊ ನೀನು 4 ದೇವಶ್ರೇಷ್ಠ ನೀನು ಉದ್ಧರಿಸಿದಿ ಮಾವ ಜನಕನನ್ನು ಕಾವಲಾಗಿರು ಯನಗಾವಾಗ್ಯನು ಶ್ರೀವತ್ಸಾಂಕಿತ ವೆಂಕಟಪತಿಯೆ 5
--------------
ಸಿರಿವತ್ಸಾಂಕಿತರು
ರಾಮನ ನೋಡಿರೋ ನಮ್ಮ ಸೀತಾರಾಮನ ನೋಡಿರೋ ಪ ರಾಮನನೋಡುತ ಪ್ರೇಮವ ಸುರಿಸುತ ನಾಮವ ನುಡಿಯುತ ನೇಮದಿ ಬೇಡುತ ಅ.ಪ ಅಜಭವಾದಿಗಳರಸನೀತಾ ಮತ್ತೆ ನಿಜಭಕುತರಿಗೆ ಮುಕ್ತಿಪ್ರದಾತ ತ್ಯಜಿಸಿ ದುಷ್ಟರಸಂಗ ಭಜಿಸಿ ಶಿಷ್ಯರ ಸಂಗ ಭುಜಗಭವವೆಂದರಿತು ನಿಜಸುಖಮೆಲ್ಲಲು 1 ಪಾದ್ಯ ಮತ್ತೆ ನಿತ್ಯಾನಿತ್ಯ ಜಗಸೃಜಿಪ ದೇವದೇವೇಶ ಮುಕ್ತಾಮುಕ್ತಾಶ್ರಯ ಸತ್ಯ ಪ್ರಾಣನ ಹೃಸ್ಥ ಉತ್ತಮೋತ್ತಮನೆಂದು ಎತ್ತಿಕೈಗಳ ಮುಗಿದು 2 ಭಕ್ತಿಯಿಂದಲಿ ನೋಡೆ ಸರ್ವಾಘಹರವೋ ಮತ್ತೆಪಾಡಲು ಕಾಮಿತ ಕರಗತವೊ ಹಸ್ತಿವರದನ ನೋಡೆ ಮತ್ತರಿಗೆ ಸಾಧ್ಯವೆ ವತ್ತುತ ಗೃಹಕೃತ್ಯ ಬೇಗ ಉತ್ತಮರಲ್ಲಿ 3 ಸುಲಭವಲ್ಲವೊ ಇಂಥಾ ಸಮಯ ಘಳಿಸಿ ನೋಡೀದವನೆ ಕೃತಾರ್ಥ ನಿತ್ಯ ಸಲಹುತ್ತಿರುವಂಥ ಅಲವ ಮಹಿಮಾರ್ಣವ ಲಲನೆ ಲಕ್ಷ್ಮಿಯ ನಾಳ್ವ 4 ಸರ್ವನಾಮಕ ನಿವನೂ ಮತ್ತೆ ಸರ್ವಪ್ರೇರಕ ಬಲಖ್ಯಾತ ನಿಹನೂ ಸರ್ವ ಸರ್ವಾಧಾರ ಸರ್ವೇಶ ಶಾಶ್ವತ ಸರ್ವಗುಣಗಣ ಪೂರ್ಣ ಸರ್ವವ್ಯಾಪ್ತನಾದ 5 ಆರಿಲ್ಲ ಸಮವಧಿಕ ಇವಗೇ ಮತ್ತೆ ಆರು ಕಾಣರು ನೆಲೆಯ ಸಾಕಲ್ಯ ಸತ್ಯ ಸಾರವಿಲ್ಲದ ಜಗದಿ ಸಾರನೊಬ್ಬನೆ ಇವನು ತೊರು ಪಾದಗಳೆಂದು ಸಾರಿಬೀಳುತ ಅಡ್ಡ 6 ಶರಣೆಂದ ವಿಭೀಷಣಗೆ ಪಟ್ಟ ಕಟ್ಟಿದನೂ ಕರುಣದಿಂದಲಿ ಶಬರಿಯ ಪೊರೆದವನು ದುರುಳ ಪಾಪಿಯ ದೊಡ್ಡ ಕವಿಯ ಮಾಡಿದ ಮಹಿಮ ಕರುಣ ಬೇಕಾದವರು 7
--------------
ಕೃಷ್ಣವಿಠಲದಾಸರು
ರುಕ್ಮಿಣೀಶ ವಿಠಲ | ಕಾಪಾಡೊ ಇವನಾ ಪ ವಿಖನ ಸಾಂಡದ ದೊರೆಯೆ | ಅಖಳಂಕ ಮಹಿಮಾ ಅ.ಪ. ಸುಪಥದಲಿ ನಡೆವಂತ | ನಿಪುಣತರ ನಿವನೀಗೆಉಪದೇಶವಿತ್ತಿಹೆನೊ | ಅಪವರ್ಗದಾತಾ |ಕೃಪಣ ವತ್ಸಲ ನಿನ್ನ | ಕೃಪೆ ದೃಷ್ಟಿಯಲಿ ನೋಡಿಅಪೇಕ್ಷಿತವನಿತ್ತು | ನೀ ಪೋಷಿಸಿವನಾ 1 ಜ್ಞಾನವಿಜ್ಞಾನದಲಿ | ನೀನಿರುವ ತತ್ವವನುನೀನಾಗಿ ತಿಳಿಸುತ್ತ | ಕಾಪಾಡೊ ಹರಿಯೇ |ಶ್ರೀನಿವಾಸನೆ ದಯಾ | ಪೂರ್ಣ ನೀನಾಗುತ್ತಜ್ಞಾನಭಕ್ತಿಯನಿತ್ತು | ಕಾಪಾಡೊ ಹರಿಯೆ 2 ಎಲ್ಲೆಲ್ಲು ನೀನಿರುವೆ | ಸೊಲ್ಲನ್ನು ಅನುಭವಕೆಉಲ್ಲಾಸದಲಿ ಇತ್ತು | ಬಿಲ್ಲಾಳು ಎನಿಸೋಬಲ್ಲಿದರ ಕೂಟದಲಿ | ಬಿಲ್ಲಿ ನಂತರಿಸುತ್ತಮಲ್ಲಮರ್ದನಕೃಷ್ಣ | ಕಾಪಾಡೊ ಇವನ 3 ಸತಿಸುತರು ಹಿತರಲ್ಲಿ | ವ್ಯಾಪ್ತ ನೀನೆಂದೆಂಬಮತಿಯನೇ ಕರುಣಿಸುತ | ಅತಿಶಯವ ತೋರೀಮತಿಮತಾಂವರರಂಘ್ರಿ | ರತಿಯನ್ನೆ ಕರುಣಿಸುತಮತಿವಂತ ನೆನಸಿವನ | ಮಾರುತನ ಮತದೀ 4 ದೇವತವ ಮಹಿಮೆಗಳು | ಭಾವದಲಿ ಪೊಳೆಯಲ್ಕೆಕೋವಿದರ ಸಂಗವನು | ನೀ ವೊಲಿದು ಈಯೋ |ನೀ ವೊಲಿಯದಿನ್ನಿಲ್ಲ | ಗೋವುಗಳ ಪರಿಪಾಲದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ರುದ್ರದೇವರ ಸ್ತುತಿ ಪರಾಕು ಸಜ್ಜನಪ್ರೇಮಿಪ. ಕರುಣಾಕರ ಕೋಟಿದಿವಾಕರ ಪೂರ್ಣ ಸುಧಾ- ಕರ ಮಕುಟಲಲಾಮಅ.ಪ. ಭೋಗೀಂದ್ರ ಫಣಾಮಣಿಮಂಡನ ಸ- ದ್ಯೋಗೀಂದ್ರ ಮನೋವಿಶ್ರಾಮಿ ಭಾಗೀರಥಿ ಸುತರಂಗೊತ್ತುಂಗ ಮಹಾ ಸಾಗರ ತೇ ನೌಮಿ1 ಕೇವಲ ಪಾಪಿ ಸದಾವ್ರತಹೀನನ ಕಾವುದು ಗೋಪತಿಗಾಮಿ ನೀನೊಲಿದರೆ ಮತ್ತಾವುದು ಭಯ ಮಹಾ- ದೇವ ವಶೀಕೃತಕಾಮಿ2 ಲಕ್ಷ್ಮೀನಾರಾಯಣದಾಸಾರ್ಯ ಮ- ಹೋಕ್ಷಧ್ವಜ ಸುರಸುಕ್ಷೇಮಿ ದಕ್ಷಾಧ್ವರಹರ ವರಪರಮೇಶ ಮು- ಮುಕ್ಷುಜನಾಂತರ್ಯಾಮಿ3
--------------
ತುಪಾಕಿ ವೆಂಕಟರಮಣಾಚಾರ್ಯ
ಲಕುಮಿ ಸಾಮ್ರಾಜ್ಯ ಶರಧಿಗಮೃತಾಂಶು ನೇತ್ರ ಪ ಸೂತ್ರ ಅ.ಪ. ನಿತ್ಯ ಕಲ್ಯಾಣ ಸಾಗರನೆ ಶಶ್ವದೇಕ ಸಿಂಧು ಕೊಡು ಭಕ್ತಿಪಾಕ ಭಕ್ತವತ್ಸಲನೆ ಕೃಪಾಪೂರ್ಣಾವಲೋಕ ದುರಿತ ತಿಮಿರಾರ್ಕ 1 ನಿರುತ ಪರಿಪೂರ್ಣ ಸೌಲಭ್ಯ ಸುಗುಣವನಧಿ ನಿತ್ಯ ಸ್ವಾನಂದ ಪೂರ್ಣ ಮೋದಿ ಕರೆವ ಭಕ್ತರಾತುರಕೆ ಬರುವನವಸರದಿ ಗರೆವ ಸರ್ವಾರ್ಥ ಸಲಹಿ ಶರಣರನು ಛಲದಿ 2 ವಿಮಲ ಲಾವಣ್ಯ ಶೃಂಗಾರ ಸಿಂಧುಕಾಯ ಅಮಿತ ಉತ್ತಮ ಜಯೇಶವಿಠಲರಾಯ ಕಮಲಭವ ವಾಯು ರುದ್ರಾದಿ ದೇವ ಧÉ್ಯೀಯ ಅಮೃತ ಸೌಭಾಗ್ಯ ಸ್ವೀಯ 3
--------------
ಜಯೇಶವಿಠಲ
ಲಕ್ಷ್ಮೀವಲ್ಲಭ ವಿಠಲ | ಪೊರೆಯ ಬೇಕಿವಳಾ ಪ ಅಕ್ಷಯ್ಯ ಫಲದ ಕೃ | ಪೇಕ್ಷಣದಿ ನೋಡಿಅ.ಪ. ಸಂಸಾರ ವಿರಸತರ | ಅಂಶವನೆ ತಿಳಿಸೊ ಹರಿಕಂಸಾರಿ ನಿನ್ನ ಪದ | ಪಾಂಸು ಭಜಿಸುತ್ತಾ ಸಂಶಯ ರಹಿತ ಹರಿ | ಹಂಸನಾಮಕ ಸೇವೆಶಂಸಾರ್ಯ ಸರ್ವಧಿಕ | ಸವೋತ್ತಮೆನುತಾ 1 ಹರಿನಾಮ ಕವಚವನು | ಸರ್ವದಾ ಧರಿಸುತ್ತಾದುರಿತನಾಳುಟ್ಟಳಿಯ | ಪರಿಹಾರ ಮಾರ್ಗಅರಿವಿನಿಂದಲಿ ಹರಿಯ | ವರನಾಮ ಸ್ಮರಿಸುತ್ತಕರಗತವು ಆಗಲಿಯೊ | ವರಮುಕ್ತಿಪಥವು 2 ಎರಡು ಮಾರ್ಭೇದಗಳು | ಅರಿವಾಗಲೀಕೆಗೇತರತಮಂಗಳು ಮನಕೆ | ಬರುತಿರಲಿ ಸರ್ವದಾಸಿರಿವಾಯು ಮತ ದೀಕ್ಷೆ | ಗೆರಗಲೀಕೆಯ ಮನಸುಹರಿಯ ಮಮ ಕುಲದೈವ | ಉದ್ದರಿಸೊ ಇವಳಾ 3 ಸಾಧನಕೆ ಸತ್ಸಂಗ | ನೀದಯದಿ ಕೊಟ್ಟಿವಳಮೋದ ಬಡಿಪದು ದೇವ | ಆದಿ ಮೂರುತಿಯೇ |ಮಾಧವನೆ ಬಿನೈಸೆ | ಆದರಿಸುತಿವಳೀಗೆಕಾದುಕೊ ಬಿಡದಲೆ | ಹೇ ದಯಾ ಪೂರ್ಣ 4 ದೇವದೇವೊತ್ತಮನೆ | ಕಾವದೇವನೆ ಹರಿಯಭಾವದಲಿ ಮೈದೋರಿ | ಪೊರೆಯೊ ಇವಳಾಕಾವ ಕರುಣೆಯ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಿಲ್ಲ | ಈ ವಾಣಿ ಬಲುಸತ್ಯ 5
--------------
ಗುರುಗೋವಿಂದವಿಠಲರು
ಲಾಲಿ ನಿತ್ಯಾನಂದ ಲಾವಣ್ಯ ಕಂದ ಲಾಲಿ ಭೃತ್ಯಾರ್ತಿ ವಾರಣನೆ ಗೋವಿಂದ ಲಾಲಿ ಜೀಯಾ ಪ್ರತ್ಯಗಾತ್ಮ ಮುಕುಂದ ಲಾಲಿ ರಮಾಧೃತ ಚರಣಾರವಿಂದ ಲಾಲಿ ಪ. ಆದಿ ಮಧ್ಯಾಂತ ವಿದೂರನಾಗಿಹನ ವೇದಾಂತ ವೇದ್ಯ ವೈಭವ ಪಕ್ಷಿಗಮನ ತಾಪ ಕಳಿವವನ ಮೋದದಿ ಪಾಡಿ ತೂಗುವೆನು ಮಾಧವನ 1 ಈರಾರು ದಿಗ್ಗಜವೆಂಟು ಕಾಲುಗಳು ಪಾರಾವಾರಗಳೆಂಬ ಪೊಳೆವ ಪೊಟ್ಟಿಗಳು ಧಾರಾರೂಪ ಭಾಗೀರಥಿ ಸರಪಣಿ ಸೇರಿಸಿ ಡೋಲ ಶೃಂಗಾರ ಗೈಯುವೆನು 2 ನಿರ್ಮಲವಾದೇಳು ಹಲಿಗೆಗಳಿರುವ ಭರ್ಮಗಿರಿಯೆ ಸಿಂಹಾಸನವನಿಟ್ಟಿರುವ ಧರ್ಮಾರ್ಥ ಕಾಮ ಮೋಕ್ಷಗಳೆಂಬ ಫಲವ ಮರ್ಮವನರಿತು ಕಟ್ಟುವೆ ಒಳ್ಳೆಯ ರಥವ 3 ಸೂರ್ಯ ಚಂದ್ರಮರೆಂಬ ಧಾರಾದೀಪಗಳು ತಾರಕಿಗಳು ಸುತ್ತಲಿರುವ ಚಿನ್ಹೆಗಳು ಭವ ಜಯ ಜಯವೆಂಬ ಭರವು ನೀರಜಾಲಯೆ ಕೂಡಿ ಪಾಡುವ ಸ್ವರವು 4 ಕೋಟಿ ಭಾಸ್ಕರ ರಾಭ ಕೋಟೀರ ಕುಂಡಲ ಪಾಟಲಾಧರ ಮುಕುರರಾಭ ಕಪೋಲ ನಳಿನ ಪತ್ರ ನೇತ್ರ ಜ- ಚಾಪ ಧಾಟಿ ಭ್ರೂಯುಗಳ 5 ಪೂರ್ಣ ಮಾಲಾನಂತ ಪೌರ್ಣಮಿಯ ವಿಧು ವರ್ಣ ಮುಖಾಬ್ಜಸುಪರ್ಣವರೋಹ ಕರ್ಣ ಹೀನ ಕಶಿಪೂ ಪರಿಶಯನ ದು- ಗ್ಧಾರ್ಣವ ಮಂದಿರ ಸ್ವರ್ಣ ನಿಭಾಂಗ 6 ಕಂಬು ಸುಗ್ರೀವ ವಿಲಂಬಿತ ವನಮಾಲ ಅಂಬುಜ ಚಕ್ರ ಗದಾಕರ ಹಸ್ತ ಕೌಸ್ತುಭ ಜಗ- ನಾಭ 7 ವಿತತ ರೇಖಾತ್ರಯಯುತಮೃದುದರ ಮಧ್ಯ ಗತ ಕಿಂಕಿಣೀ ಜಾಲ ಕಾಂಚಿ ಕಲಾಪ ಪೀವರೋರು ಸಂ- ಮೂರ್ತಿ 8 ಸಿಂಜನ ಜೀರ ರಂಜಿತ ಚರಣ ಕಂಜಾಂಕುಶಕೇತು ರೇಖಾಲಂಕರಣ ಮಂಜುಳ ಮೃದು ಪಾದತಳ ಮುಕ್ತಾಭರಣ ಸಂಜೀವನ ರಾಜ ಸಂಪ್ರೀತಿ ಕರಣ 9 ಔತ್ತಾನಪಾದಿಯನಾಧಾರಗೊಂಡು ನಿತ್ಯ ತೂಗಾಡುವ ತೊಟ್ಟಿಲ ಕಂಡು ಹಿಂಡು ಬಹು ತೋಷಗೊಂಡು ಸತ್ಯಭಾಮೆಯ ಕಾಂತನಾಡುವ ಚೆಂಡು 10 ಪತಿತ ಪಾವನ ಪರಮಾನಂದ ರೂಪ ಸತತ ತಾನೆ ಪರಿಹರಿಸುವ ತಾಪ ವಿತತ ಮಹಿಮ ವೆಂಕಟಾಚಲ ಭೂ ಗತಿಯಾಗಿ ತೋರುವ ತನ್ನ ಪ್ರತಾಪ 11
--------------
ತುಪಾಕಿ ವೆಂಕಟರಮಣಾಚಾರ್ಯ
ವರ ಮಂತ್ರಾಲಯದೊಳು ಘನವಾಗಿ ನೆಲಸಿರ್ಪ ಪರಮ ಸದ್ಗುರುವರ್ಯ ಶ್ರೀ ರಾಘವೇಂದ್ರ ಪ ತವಕದಿಂ ದಿನದಿನವು ತೇಜವನು ಬೆಳಗುವೆ 1 ನರನಂತೆ ಮೆರೆಯುವ ಜಯಮುನಿಕೃತಶಾಸ್ತ್ರ ಪರಿಮಳವನು ನೀನು ಪಸರಿಸಿದೆಯಲ್ಲವೆ 2 ಮಧ್ವಮತವೆಂಬ ದುಗ್ಧಸಾಗರದೊಳು | ಉದ್ಭವಿಸಿದ ಪೂರ್ಣ ಹಿಮಕರ ತೇಜ 3 ಅಸುರನಂದನನಾಗಿ ನರಹರಿಯನೆ ಕಂಡ ಸಿರಿ ಗುರುರಾಘವೇಂದ್ರ 4 ರಾಜೇಶ ಹಯಮುಖ ಭಜಕರೊಳಗೆ ನೀನು ರಾಜಿಪ ಸುರತರುವಂತಿರ್ಪೆ ಗುರುವೆ 5
--------------
ವಿಶ್ವೇಂದ್ರತೀರ್ಥ
ವರದ ವೆಂಕಟ ಶ್ರೀನಿವಾಸ ಪ ಕರುಣದಿ ಪಿಡಿಯೊ ಎನ್ನ ಶೇಷಗಿರೀಶಾಅ.ಪ. ಘೋರ ಭವದಿ ನೊಂದೆನು ಇಂದು ಭಾರ ನಿನ್ನದು ಎಂದು ಸಾರಿ ಬೇಡಿದೆ ನಿನಗೆ ಭಕ್ತಬಂಧು ದೂರಮಾಡಲು ಬೇಡ ಕರುಣಾ ಸಿಂಧು ವಾರಿಜಾಸನ ವಂದ್ಯ ನೀರಜನಯನನೆ ಶರಣರ ಪೊರೆಯುವ ಸುರ ದ್ರುಮನೆ ಪರಿಪರಿ ಭವಣೆಯ ತರಿಮಹಿದಾಸನೆ ಚರಣ ಸೇವಕರ ಸೇವಕನೆನಿಸೊ ಶ್ರೀಶನೆ ದುರುಳ ಅಸುರನ ಶಿರವ ತರಿದು ತರಳ ಪ್ರಹ್ಲಾದನ ಪೊರೆದೆ ಎಂದು ಸುರರು ಪೊಗಳವುದನ್ನು ತಿಳಿದು ಭರದಿ ಬಂದು ಶಿರವ ನಮಿಸುವೆ ನಿಂದು 1 ಸಿರಿ ಅಜಭವಾದಿ ವಂದಿತ ಚರಣ ಪರಿಮಿತಿಯಿಲ್ಲದ ಗುಣ ಗಣ ಪೂರ್ಣ ನೀರಜ ಭವಾಂಡೋದಯಕೆ ಕಾರಣ ದುರಿತ ಹರಣ ಕ್ರೂರಜನ ಕುಠಾರ ದೇವನೆ ಗರುಡಗಮನ ಭೀಮರೂಪನೆ ಅರಗಳೆಣಿಸದೆ ಪೊರೆಯಂ ಬೇಗನೆ ಕರವ ಮುಗಿದು ಸಾರಿ ಬೇಡುವೆ ಕರಿಯ ತೊಡರನು ತರಿದು ನಕ್ರನ ಶಿರವ ಸೀಳಿದ ಕರುಣಿ ಕೃಷ್ಣನೆ ಸೀರೆ ಪಾಲಿಸಿ ಪೊರೆದ ದಾತನೆ ಮರಳಿ ಬರುವ ಭವವ ಬಿಡಿನೊ ರಂಗನೆ 2 ನಂಬಿದವರ ಕಲ್ಪವೃಕ್ಷ ನಂಬದವರ ಕಲುಷಕೆ ಶಿಕ್ಷಾ ಇಂಬಾಗಿ ಸರ್ವತ್ರ ಸುಜನರ ರಕ್ಷಾ ತುಂಬಿದ ವೈಭವದಿ ಮೆರೆಯೊ ದಕ್ಷಾ ಕಂಬುಕಂಠನೆ ನಿನ್ನ ನಂಬಿದೆ ಅಂಬರದಲಿ ಕಾಣೆಂದು ಬೇಡಿದೆ ಬಿಂಬನ ನಾಮನುಡಿಸೆಂದು ಕೇಳಿದೆ ಶಂಬರವೈರಿ ನಿನ್ನ ಚರಣವ ಸಾರಿದೆ ಶಂಭುವಂದಿತ ತುಂಬುರ ಪ್ರಿಯ ನಂಬಿ ಭಜಿಸುವೆ ತುಂಬು ಮನದೊಳು ಅಂಬುಜಾಕ್ಷನೆ ಜಯತೀರ್ಥ ಮುನೀಂದ್ರ ಬೆಂಬಲವಾಯುಗ ಶ್ರೀ ಕೃಷ್ಣವಿಠಲಾ 3
--------------
ಕೃಷ್ಣವಿಠಲದಾಸರು
ವರ್ಣಿಸಲು ಸಾಧ್ಯವೆ ಧರೆಯೊಳಿನ್ನು ಗುರುವರ್ಯಸುಶೀಲೇಂದ್ರ ತೀರ್ಥರ ಮಹಿಮೆಯನ್ನು ಪ ಭಾನುನಂದನನಂತೆ ದೀನ ಮಾನವರಿಗೆ ಸಾನುರಾಗದಿ ಕೊಡುವ ದಾನ ನೋಡಿ || ಏನು ಹೇಳಲಿ ದಿವಿಜಧೇನು ಭೂರುಹಮಣಿ ಕ್ಷೋಣಿಯೊಳು ಜಡಪಶು ರೂಪ ತಾಳಿದವು 1 ಪರಮಠಾಧೀಶರು ಪರಿಪರಿಯಲಿಂದವರ ಪರಮ ಔದಾರ್ಯಗುಣ ಪರೀಕ್ಷಿಸುತಲಿ ಬೆರಳು ಕಚ್ಚುತಲಿ ಬೆರಗಾಗಿ ಜಗದೊಳಗೆ ಸರಿ ಇವರಿಗಿಲ್ಲೆಂದು ಶಿರದೂಗಿ ಹೊಗಳಿದರು 2 ಧೀಮಂತ ಜನರೊಡೆಯ ಶ್ರೀಮಂತಮಂದಿರದ ಸ್ವಾಮಿಗಳ ಪೂರ್ಣ ಪ್ರೇಮ ಪಡೆದು | ತಾಮರಸ ಭಾವ ಪೂಜ್ಯ ಶಾಮಸುಂದರ ಮೂಲ ರಾಮ ಮೂರ್ತಿಯನು ಭೂಮಿಯೊಳು ಮೆರೆಸಿದರು 3
--------------
ಶಾಮಸುಂದರ ವಿಠಲ
ವರ್ಣಿಸಲು ಸಾಧ್ಯವೇ ಧರೆಯೊಳಿನ್ನ ವರದೇಂದ್ರಗುರು ನಿನ್ನವರ ಮಹಿಮೆಯ ಪ ದಶಪ್ರಮತಿ ಸುಮತಾಖ್ಯ | ಬಿಸಜನಿಧಿಗೆ ಉಡುನಾಥ ವಸುಧಿ ಸುಮನಸವ್ರಾತ | ನಮಿತ ಖಾತ | ವಸುಧೀಂದ್ರ ಕರಜಾತ | ಸುಶರಣರ ಸುಖದಾತ | ವಸುಧೀಶ ಪಸರಿಸಿದ | ಅಸಮ ತವ ಚರಿತೆಯನು 1 ಸಾರ ಕನ್ನಡದಲಿ ನೀರಚಿಸುತಲಿ ತಂತ್ರ | ಸಾರ ಮಂತ್ರವ ಪರಮ ಕಾರುಣ್ಯದಿ || ಶ್ರೀರಂಗನೋಲಿಸಿದ ಧಾರುಣಿಪ ದಾಸರಿಗೆ ಸಾರಿ ಪೇಳಿದ ಪರಮೋಧಾರ ಜಿತಮಾರ 2 ಗುಣನಿಧಿ ಪ್ರಾಣೇಶದಾಸಾರ್ಯರ ಮನೆಯ ಹಿತ್ತಲದೊಳಗೆ ಬಣವಿ ಬುಡದಲಿ ಬಂದು ಘನ ತುಲಸಿ ರೂಪದಲಿ ಜನಕೆ ತೋರಿಸಿ ಚಿತ್ರ 3 ವಾದದಲಿ ರಾಮಾಖ್ಯ ವಾದಿಯಪ ಜಯ ಪೊಂದಿ ಗಜ ಭೂಷಣಾದಿಗಳನು || ಮೋದ ಬಡಿಸಿ ನಿನ್ನ ಔದಾರ್ಯ ಗುಣವ 4 ಶಾಮಸುಂದರ ಮೂಲ ರಾಮಚಂದ್ರನ ಚರಣ ತಾಮರಸ ಷಡ್ಜಪರಮ ಸುಗಣ ಧೀಮಂತ ಶ್ರೀಮಂತ್ರಧಾಮ ನಿಲಯರ ಪೂರ್ಣ ಪ್ರೆಮ ಸತ್ವಾತ್ರ ಮಮ ಸ್ವಾಮಿ ಸುಚರಿತ್ರ 5
--------------
ಶಾಮಸುಂದರ ವಿಠಲ
ವಾಗ್ದೇವಿ - ನಿಮ್ಮಚರಣ ಕಮಲಂಗಳ ದಯಮಾಡು ದೇವಿ ಪ ಶಶಿ ಮುಖದ ನಸುನಗೆಯ ಬಾಲೆಎಸೆವ ಕರ್ಣದ ಮುತ್ತಿನೋಲೆನಸುನಗುವ ಸುಪಲ್ಲ ಗುಣಶೀಲೆ - ದೇವಿಬಿಸಜಾಕ್ಷಿ ಎನ್ನ ಹೃದಯದೊಳು ನಿಂದವಳೆ 1 ಇಂಪು ಸೊಂಪಿನ ಚಂದ್ರ ಬಿಂಬೆಕೆಂಪು ತುಟಿಗಳ ನಾಸಿಕದ ರಂಭೆಜೊಂಪು ಮದನನ ಪೂರ್ಣ ಶಕ್ತಿ ಬೊಂಬೆ - ಒಳ್ಳೆಸಂಪಗೆ ಮುಡಿಗಿಟ್ಟು ರಾಜಿಪ ಶಾರದಾಂಬೆ2 ಸನ್ನುತ ರಾಣಿವಾಸೆ 3
--------------
ಕನಕದಾಸ