ಒಟ್ಟು 1751 ಕಡೆಗಳಲ್ಲಿ , 108 ದಾಸರು , 1419 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾವವನೆ ಕರ್ಮಜಯ ಬಳಿಕಂ ಸಾವವನೆ ಉಣ್ಣುವರು ಜನರು ಭಾವವನೆ ಅರಿದಿರಿಸು ಜೀವರ ನಿನ್ನಂಘ್ರಿಯಲಿ ಪ ದಾಸವೃಂದವು ತೋಷದಿಂದಲೆ ಪೂಶರಯ್ಯನ ವಿಡಿದು ಘನ ಸಂ- ಸುಕೃತ ಫಲವಿಹುದೋ ಶ್ರೀಶನಲಿ ನಿಜದಾಸ ಭಕುತಿಯ ಮೀಸಲಿರಿಸೀ ಮನವ ಮೋಹದೆ ಆಶೆ ಗಳಿಸದೆ ಶ್ರೀಹರಿಯ ನಿಜವಾಸ ಕೈಯ್ಯುವರು 1 ಮೃಗಜಲಕೆ ನೀರೆಂದು ಭಾವಿಸಿ ಪೊಗಲೆಳಿಸುವೆರಳೆಗಳ ಪರಿಯಲಿ ಮೃಗನಯನೇರತಿ ಚೆಲ್ವಿಕೆಗೆ ಜಗವೆಳಸಿ ಬಳಲುವದು ಮಿಗಿಲಾಗಿದ ವಿಷಯಲನಲದಿ ಧಗಧಗಿಸಿ ಜನಗಳು ಪೋಪರಲ್ಲದೆ ಖಗಪತೀ ವಾಹನನ ನೆನೆಯರು ಜಗವ ಪಾವನನು 2 ನೀರಜಾಸನ ಪಿತನೆ ಅಕ್ಷಯ ಶ್ರೀ ರಮಾವಲ್ಲಭನೆ ತವ ಪರಿ ವಾರವಲ್ಲದೆ ಸತಿಸುತರು ಮೇಣ್ ದೇಹ ಬಾಂಧವರು ಸಾರಸುಮತಿಯನಿತ್ತೆಮಗೆ ಹರೆ ಸೇರಿಸೆಮ್ಮನು ನಿನ್ನ ಅಡಿಯಲಿ ಧೀರ ಶ್ರೀ ನರಸಿಂಹವಿಠ್ಠಲ ಪಾರಗಾಣಿಪುದು 3
--------------
ನರಸಿಂಹವಿಠಲರು
ಕಾವೇರಿ ಕಲುಪಾಪಹಾರಿ ಪಾವನ ಶರೀರೆ ಶುಭತೋಷಕಾರಿ ಪ ವಾಸುದೇವ ರಂಗೇಶನಾಲಯಕೆ ನೀ ನಾವರಣಳಾಗಿಪ್ಪೆ ವಿರಜೆಯಂತೇ ದೇವ ಋಷಿ ಗಂಧರ್ವ ಪಿತೃಪ ನರವರರಿಂದ ಸೇವನೀಯಳಾಗಿ ಸರ್ವಾರ್ಥ ಪೂರೈಪೆ 1 ಜಲಚರಾನ್ವೇಷಣ ಲುಬ್ಧ ಸಾಲಿಗ್ರಾಮ ತುಲಸಿ ವೃಕ್ಷವನೆ ಕೊಡಿಸಿದ ಮಾತ್ರದೀ ಕಲುಷರಾಶಿಗಳೆಲ್ಲ ಕಳೆದು ಮುಕ್ತಿಯನಿತ್ತೆ ಸಲಿಲಮಂದಿರೆ ನಿನ್ನ ಕರುಣಕೇನೆಂಬೆ 2 ರವಿ ತುಲಾರಾಶಿಗೈದಿದ ಸಮಯದೊಳಗೊಂದು ಮಜ್ಜನ ಗೈವ ಮಾನವರಿಗೆ ಪವನಾಂತರಾತ್ಮಕನ ಪಾದಕಮಲವ ತೋರಿ ಭವಜ ರೋಗವ ಕಳೆದು ಭಾಗ್ಯವಂತರ ಮಾಳ್ಪೆ 3 ಶ್ರೀ ಪವನ ಶಿವರಿಂದ ತಾ ಪೂಜೆಗೊಳುತ ಬಹು ಪರ ಮನು ವ್ಯಾಪಿಸಿಹ ನಿನ್ನೊಳದ್ಯಾಪಿ ಸ್ವರ್ಗಸ್ಥ ಜನ ರೀ ಪೊಡವಿಯೊಳು ತವ ಸಮೀಪದಲಿ ಜನಿಸುವರು 4 ಮೂಢಮತಿ ನಾನು ಕೊಂಡಾಡ ಬಲ್ಲೆನೆ ನಿನ್ನ ಬೇಡಿಕೊಂಡೆನು ಹೃದಯ ನೀಡದೊಳಗೇ ಗೂಡ ಪದ ಶಯನ ಜಗನ್ನಾಥ ವಿಠ್ಠಲನಂಘ್ರಿ ನೋಡುವ ಸೌಭಾಗ್ಯ ದಯ ಮಾಡು ಪ್ರತಿದಿನದಲ್ಲಿ ಬ 5
--------------
ಜಗನ್ನಾಥದಾಸರು
ಕಾವೇರಿ ತ್ರಿಭುವನಕಾಯೆ | ಸುರಮುನಿಗೇಯೆ | ಕಾವೇರಿ | ಆವಾವ ಜನುಮಕೆ ಬಿಡದೆ ಎನ್ನನು ಕಾಯೆ ಪ ಅಜನನಂದನೆ ಚಂದ್ರವದಗೆ | ಚತುರಮಯೆ | ಸುಜನರಿಗಾನಂದ ಸದಗೆ | ಧವಳಕಾಯೆ | ಭಜಿಸಿ ಬೇಡುವೆ ನಿನಗಿದನೆ | ಸೃಜಿಸಿ ಕೊಡುವುದು | ತ್ರಿಜಗದೊಳಗೆ ಹರಿ | ನಿಜ ಭಕ್ತರಪಾದ | ರಜವಾಗಿ ಯಿಪ್ಪ ಸ | ಹಜ ಮತಿಯನುದಿನ | ಕುಜನ ನಿವಾರೆ 1 ಕಲಿನಾಶ ಕಾರುಣ್ಯ ನಿಧಿಯೆ | ನಿರ್ಮಳಶೀಲೆ | ಕಲಕಾಲಾ ಸುಜ್ಞಾನಾಂಬುಧಿಯೆ | ತಲೆವಾಗಿ ನಮಿಸುವೆ | ಹಲವು ಜನ್ಮಂಗಳ | ಒಳಗೊಳಗೆ ಬಿದ್ದು | ಹಲಬುತಿಪ್ಪ ವ್ಯಾ | ಕುಲವನು ಕಳೆದು ನಿ | ಶ್ಚಲ ಮತದೊಳಗಿಡು 2 ನಿತ್ಯ ಉತ್ತಮ ಗುಣಸಮುದ್ರೇ | ಸಿಂಹಜೆ ಮಾರುದೃತೆ ಎನಿಪ ಲೋಪಾಮುದ್ರೆ | ಕವೇರಕನ್ಯೆ ......ಗಿತ್ತ ಪೊಳೆವ ಸೂಭದ್ರೆ | ಸತ್ಯ ಸಂಕಲ್ಪ ಶ್ರೀ ವಿಜಯವಿಠ್ಠಲನ್ನ ಭೃತ್ಯನೆನೆಸಿಕೊಂಡು ಸ್ರೌತ್ಯದಿಂದಲಿ ಬಲು | ನೃತ್ಯಮಾಡುವ ಸಂ |ಪತ್ತನೆ ಕರುಣಿಸು 3
--------------
ವಿಜಯದಾಸ
ಕಾಶಿಯಿಂದ ಬಂದ ಬಾಗೀರಥಿಯು ತನ್ನ ವಾಸಕ್ಕೆ ತೆರಳಿದಳು ಲÉೀಸಾಗಿ ತನ್ಹ ಮನದ ಸಂಕಲ್ಪವು ವಾಸಿಯಾಗಲು ತನ್ಹಾಶೆ ಪೊರೈಸಿಸಿ ಪ ಮದದಾನೆ ತನ್ನ ಕಾಲುಗಳ ಸಂಕೋಲೆಯ ನೊದೆದು ಕಳೆವ ತೆರದಿ ಪದುಳದಿ ಶ್ರೀಗುರು ಮುದದಿ ಬಿಡಿಸಿ ತನ್ನ ಸದಮಲಾನಂದವ ಸತತ ಪಡೆವೆನೆಂದು 1 ಮುತ್ತೈದೆತನದಿ ತೆರಳಿಹೋಗಬೇಕೆಂಬ ಚಿತ್ತದಿವಿಸ್ಮರಣೆಗೈದು ಪ್ರತ್ಯುಗಾತುಮ ಆತ್ಮಾರಾಮನ ಸಂಗಡ ಚಿತ್ತೈಸಿದಳು ತನ್ನ ಉತ್ತಮ ಕಾಶಿಗೆ 2 ಪತಿಯ ವಚನದ ಸಂಗತಿಗಳ ಕೇಳುತ ಅತಿ ಹಿತ ತನಗಾಗಲು ಮತಿಗೆ ಮಂಗಲವಾದ ಮುಕುತಿಯ ಸಾಧಿಸಿ ನುತ ವಿಮಲಾನಂದ ಸತತ ಪಡುವೆನೆಂದು 3
--------------
ಭಟಕಳ ಅಪ್ಪಯ್ಯ
ಕುತ್ಸ್ಸಿತರೊಲ್ಲದ ಮತ್ಸರವಿಲ್ಲದ ಸತ್ಸಭೆ ಕೇಳಲೀ ಕೃತಿಯ ಪ. ಈ ಯುಗದವರಿಗೆ ಕಲಹ ಮಂಡಿಸಿದಗೆ ಆ ಯುಗದವರುಕ್ತಿ ಬೇಕು ನ್ಯಾಯದವರ ಕೇಳು ಪೂರ್ವಶಾಸನ ಸಾಕ್ಷಿ ಹೇಯವೆಂದಾರು ಪೇಳುವರು1 ನಿಮ್ಮವರಾಗಮ ನಮ್ಮವರಿಗೆ ಸಲ್ಲ ನಮ್ಮೋಕ್ತಿ ನಿಮಗೆ ಮೆಚ್ಚಲ್ಲ ಇಮ್ಮನದವರಿಗೆ ಇನ್ನೊಬ್ಬ ಹಿರಿಯರ ಸಮ್ಮತಿ ಬೇಕು ನಿರ್ಣಯಕೆ2 ಯುಕ್ತಿ ಮಾತ್ರವ ನಂಬಿ ನಡೆವುದುಚಿತವಲ್ಲ ಯುಕ್ತಿ ಸರ್ವತ್ರ ಬಂದಿಹುದು ಕುತ್ಸಿತ ದೇಹಬಂಧವ ಬಿಡಿಸುವ ನರ- ರುತ್ತಮರೆಂದರೇನೆಂಬೆ 3 ಹಿಂಸೆ ಸಲ್ಲದು ಗಡ ಕರದ ಚಿಮುಟಿಯಿಂದ ಏಸು ಕೂದಲ ಕೀಳುತಿರಲು ಏಸೋ ಜೀವಗೆ ನೋವು ಅದು ಹಿಂಸೆ ದೋಷದ ಒಂದಂಶಕ್ಕೆ ಸರಿ ಬಂದಿಹುದೆ 4 ಕೇಶ ಆಚ್ಛಾದನ ಸಂಕಟದಿಂದೆಂದ ಕ್ಲೇಶ ಸೂಸುವ ನಯನಾಂಬುಧಾರೆ ಆ ಸಮಯದಿ ಪರಮಸುಖವೆಂಬ ಮಾತು ಸತ್ಯವ್ರತಕೆ ಎಂತೊಪ್ಪಿಹುದೊ 5 ವೇದಶಾಸ್ತ್ರವ ಬಲ್ಲ ಹಾರವನಲ್ಲ ಹು- ಟ್ಟಿದ ದಿವಸ ಮೊದಲಾಗಿ ಪಾತಕಿ ತಮ್ಮೊ - ಳಾದನೆಂಬುದು ಬಲು ಚೋದ್ಯ6 ಪಾಪ ಸಲ್ಲದು ಗಡ ಪರನಿಂದೆಯಿಂದಾದ ಪಾಪವೆ ತಾವು ಶುದ್ಧರೆಂಬ ಪರಿ ಆತ್ಮಸ್ತುತಿಯಿಂದೊಂದಾ ಪಾಪ ಲೇಪಿಸದಿಹುದೆ ತಮ್ಮವರ 7 ಸ್ಥಾವರಜೀವರ ಸಾವಿರ ಕೋಟಿಯ ಆವಾಗ ಕೊಂದು ತತ್ತನುವ ಜೀವಿಪೆನೆಂದು ಬೇಯಿಸಿ ತಿಂಬ ಪಾಪವ ಆವ ನಿಮಗೆ ಅಹುದೆಂದ 8 ಇಂದ್ರಿಯಹತ್ತಿಲ್ಲದವರ ಕೊಲ್ಲುವುದಕ್ಕೂ ಹಾ- ಗೆಂದ ಗುರುವ ನಾನೇನೆಂಬೆ ಅಂದಚೆಂದಗಳ ಮೂಕರ ಪಕ್ಷ್ಷಿಯಂಡದ ನಿಂದ್ಯ ಹಿಂಸೆಯ ಸಲಿಸುವರೆ 9 ಸಂಗೀತಶ್ರವಣದಿ ಧೂಪಾಘ್ರಾಣದಿ ಮೂಲ ಹಿಂಗೂಡಿದುದಕ ಸ್ವಾದನಾದಿ ಅಂಗನೆ ಈಕ್ಷಣ ಸ್ಪರ್ಶನದಿಂ ಸ್ಥಾವ- ರಂಗಳು ಜಂಗಮದಂತೆ 10 ತಮ್ಮ ಕರ್ಮದಿ ತಾವೆ ಸಾವರೆಂಬ ಮತದಿ ಕಮ್ಮಿಯಾದ ವ್ರಣಕ್ಕೆ ಮದ್ದನಿಕ್ಕಲು ನಿರ್ಮಾಯನದೊಳಗೇಸೊ ಹಿಂಸೆ 11 ಅಕ್ಕಿಯ ಕುಟ್ಟಲು ಬಕ್ಕು ಜೀವರ ಹಿಂಸೆ ಮಕ್ಕಳುಂಬುದು ಮಾಂಸ ಪ್ರಿಯಳ ಚೆಂದುಟಿ ಮಾಂಸ ಇಕ್ಕು ಬಾಯೊಳು ದಂತದೆಲುವೆ 12 ಕರದ ತುಂಬವಿದೇನು ಕೊರಳ ಹಾರವಿದೇನು ಚರಣದ ನಖಪಂಕ್ತಿಯಿದೇನು ಖರ ಭೂತಪಂಚಕ ಅನ್ನ ಮಾಂಸಗಳೊಳು ಬರಿದೆ ನಿಂದಿಸಲೇಕೆ ಪರರ 13 ಉಪ್ಪಿನೊಳಗೆ ತೋರ್ಪ ಚಿಪ್ಪ ನೋಡದೆ ಪರ- ರಲ್ಪ ದೋಷಗಳರಸುವರೆ ಒಪ್ಪುವುದೆಂತೊ ಶತ್ರುಗಳ ನಿಂದನೆ ಕೊಲು- ತಿಪ್ಪ ನೃಪಗೆ ಜಿನಮಾರ್ಗ 14 ಬಸ್ತಿಯ ಕಟ್ಟಲು ಭೂಸ್ಥ ಜೀವರ ಹಿಂಸೆ ಸುತ್ತ ಯಾತ್ರೆಯ ಮಾಡಲೇಸೊ ತತ್ತಜ್ಜೀವರ ಹಿಂಸೆ ತೈಲಸ್ನಾನದಿ ಹಿಂಸೆ ವಸ್ತ್ರ ಒಗೆಯಲೇಸೋ ಹಿಂಸೆ 15 ಸಲ್ಲದ ಹಿಂಸೆಯ ಸಲಿಸಿದರೆಂಬರ ಬಲ್ಲವಿಕೆಯ ನಾನೇನೆಂಬೆ ಬಲ್ಲಿದ ಹಿಂಸೆಗೆ ಒಳಗಾದರು ಎಲ್ಲ ತಾ- ಕೈವಲ್ಯ ಸಾಧಕರು 16 **** ತೊಳೆಯದ ಬಲುಹಿರಿಯರ ನಾತಕ್ಕೆ ಸೋತು ಬೆಂಬಿಡದೆ ಆತುರದಿಂ ಬಪ್ಪನೊಣಗಳ ಗೀತವ- ನೋತು ಕೇಳುವ ಶಿಷ್ಯ ಧನ್ಯ 17 ಮೂತ್ರ ದ್ವಾರದ ಮಲ ಶ್ರೋತ್ರನೇತ್ರದ ಮಲ ಗಾತ್ರ ನಾಸಿಕದ ಮಲ ಯಾತ್ರೆಯ ಮಾಡುವರಕ್ಷಿಗೆ ಕೌತುಕ ಪಾತ್ರವಾಯಿತು ಬಲು ಚಿತ್ರ 18 ******************* 19 ಏಕ ಭಾಗದೊಳು ಸ್ತ್ರೀ ವಾಸ ಏಕಾಂತದಿಪ್ಪುದು ಲೋಕಸಲ್ಲದೆಂಬರ ಈ ಕಾಮನೆಂತು ಬಿಟ್ಟಿಹನು 20 ಬಸ್ತಿಯ ಪ್ರತಿಮೆಯಲಿಪ್ಪ ದೇವನದಾರು ಮುಕ್ತರಿಗೀಭೋಗ ಸಲ್ಲ ಮುಕ್ತರÀಲ್ಲದ ಜೀವ ದೇವರೆಂತಹರೆಂದು ವ್ಯರ್ಥವಾಯಿತು ನಿನ್ನುತ್ಸಾಹ 21 ನೋಡುವ ನಯನಕ್ಕೆ ಮಾಡುವ ಪೂಜೆಗೆ ಕೂಡಿದ ಬಹುವಿತ್ತ ವ್ಯಯಕ್ಕೆ ಈಡಾಯಿತಂಶ ಕೇವಲ ಬೊಂಬೆ ಶಿವಶಿವ ಆಡುವ ಶಿಶುಗಳ್ಪೇಳಿದರೆ 22 ಹೆಂಡಿರೆ ಸಂಸಾರವಾದರೆ ಹಸಿತೃಷೆ ಉಂಡು ಮಲಗುವುದು ಮುಕ್ತರಿಗೆ ಮಂಡೆಯ ಬೋಳಿಸಿ ದೇಹದಂಡನೆ ಮಾಡಿ ಕೈ- ಕೊಂಡ ಮಾತ್ರದಿ ಮುಕ್ತರಹರೆ 23 ಮತ್ರ್ಯ ದೇಹವಿರಲು ಮುಕ್ತರೊಬ್ಬರು ಅಲ್ಲ ಸತ್ತಮೇಲೇನಾದರೆಂತೊ ಅತ್ತು ಕಾಡುವ ಶಿಷ್ಯರೆಂತರು ಕಾಂಬರು ಸರ್ವ- ಕರ್ತೃ ಶ್ರೀಹರಿ ತಾನೆ ಬಲ್ಲ 24 ದುಃಖವೆ ಸಂಸಾರ ದುಃಖವಿಲ್ಲದ ಸುಖ ಮುಕ್ತಿಯೆಂಬುದು ಬುಧರ್ಗೆ ಮಾತ್ರ ಮಿಕ್ಕದೆ ದುಃಖವಿತ್ತರೆ ಭವವೆನಿಪುದು ದುಃಖವೆ ದೂರ ಮುಕ್ತರಿಗೆ 25 ಪುನರ್ಭವವೆÉನ್ನೆ ಶ್ರುತಿ ಅಮೃತವುಂಡರೆ ಮೋಕ್ಷ ಜನನ ಮರಣವಿಲ್ಲದಖಿಳ ಜನರ ದುಃಖವನವತರಿಸಿ ಕಳೆವ ನಾರಾ- ಯಣನೆ ನಿರ್ದೋಷ ನಿತ್ಯಸುಖಿ 26 ಪಾತಕ ವ್ರತವ ಕೈಗೊಂಡ ಸ್ತ್ರೀ- ಜಾತಿಯ ಮುಟ್ಟಲ್ಲೆಂಬುವನು ಖ್ಯಾತ ಶ್ರೀಹರಿಗೆ ಪಾತಕಮುಟ್ಟದೆಂಬರ ಮಾತನದೇಕೆ ಮನ್ನಿಸನು 27 ಕೆಸರ ತೊಳೆದ ನೀರು ಕೆಸರ ಬಾಧಿಪುದೆ ತಾ- ವೈರಿ ಸೂರ್ಯನೊಳು ತಮವೆ ವಿಷಹರ ಗರುಡಗೆ ವಿಷ ಲೇಪಿಸುವುದೆ ಕ- ಲುಷ ಮುಟ್ಟುವುದೆ ಪಾಪಾಂತಕನ 28 ಸುಡುವಗ್ನಿ ಕಡಿವಸ್ತ್ರ ಕಡುಕೋಪಿ ಸರ್ಪನ ತಡೆಯಬಲ್ಲರೆ ತುಡುಕುವರೆ ಬಿಡು ಮನಭ್ರಾಂತಿಯ ಹಯವದನನೆ ಜಗ- ದೊಡೆಯ ಸರ್ವತ್ರ ನಿರ್ದೊಷ 29
--------------
ವಾದಿರಾಜ
ಕುಶಲವರೆ ಲಾಲಿಸಿರಿ ಕಥೆಯನೆಲ್ಲವ ಪೇಳ್ವೆ ಕುಶಲಮತಿಗಳೇ ನಿಮ್ಮ ಕೌತುಕವು ಸಹಜವಲೆ 1 ಬಿಸರುಹಾಕ್ಷನ ಚರಿತೆ ಚಿತ್ರತರಮಹುದಲ್ತೆ ಉಸುರುವೆನು ಪೂರ್ವ ವೃತ್ತಾಂತವನು ನಾ ಮೊದಲೆ 2 ಅಸುರರುಪಟಳದಿಂದ ವಸುಧೆ ಭಾರವು ಹೆಚ್ಚೆ ಬಿಸಜಭವಮುಖ ಸುರರ ಮೊರೆ ಕೇಳಿ ಮನ ಮೆಚ್ಚೆ 3 ಬಿಸಜನೇತ್ರನು ತಾನು ದಶರಥನ ಸುತನೆನಿಸಿ ವಸುಮತಿಯಲುದಿಸಿ ಸಜ್ಜನರ ಸಂತಸಗೊಳಿಸಿ 4 ಹಸುಳೆತನದಲಿ ಅಸುರೆ ತಾಟಕಿಯ ಸಂಹರಿಸಿ ಕುಶಿಕಸುತನಧ್ವರವ ಕಡು ರಕ್ಷಣೆಯ ಮಾಡಿ 5 ಅಶಮವಾಗಿದ್ದಹಲ್ಯೆಯ ತಾನುದ್ಧರಿಸಿ ಅಸಮಾಕ್ಷಚಾಪವನು ಲೀಲೆಯಲಿ ತುಂಡರಿಸಿ 6 ಕರ ಪದ್ಮವನು ಗ್ರಹಿಸಿ ಎಸೆವೆರಡು ರೂಪದಲಿ ಘನಲೀಲೆ ಪ್ರಕಟಿಸಿ 7 ಕುಶಲದಿಂ ಯುವರಾಜ ಪಟ್ಟಕ್ಕೆ ಸನ್ನಾಹ ವೆಸೆದಿರಲು ವಿಧಿಲೀಲೆಯೇನೆಂಬನಾಹ 8 ದಶರಥನ ಕಿರುಮಡದಿ ಪಡೆದ ವರಕನುವಾಗಿ ಸತಿ ಅನುಜ ಸಹಿತನಾಗಿ 9 ವಸುಮತಿಯೊಳವತರಿಸಿ ಬಂದ ಕಾರ್ಯವ ನೆನೆದು ಅಸಮ ನಾಟಕ ಸೂತ್ರಧಾರಿ ಅಡವಿಗೆ ನಡೆದು 10 ಎಸೆವ ಗಂಗೆಯ ದಾಟಿ ಗುಹನನ ಧನ್ಯನಗೈದು ಋಷಿ ಭರದ್ವಾಜರಿಂ ಸತ್ಕಾರವನು ಪಡೆದು 11 ವಸುಮತೀಧರ ಚಿತ್ರಕೂಟದಲಿ ನಿಂತಿರಲು ಅಸಮ ಭಕ್ತವರೇಣ್ಯ ಭರತ ತಾನೈತರಲು 12 ಬಿಸಜಾಂಘ್ರಿ ಸಂಪೂತ ವರ ಪಾದುಕೆಗಳನಿತ್ತು ಕುಶಲಮತಿ ತಾನವನ ಕಳುಹಿ ಯೋಚಿಸಿ ಮತ್ತು 13 ಪೆಸರಾಂತ ದಂಡಕಾ ವನ ಪ್ರವೇಶವ ಮಾಡಿ ಅಸುರರನೇಕರು ಅಂತಕನ ಬಳಿದೂಡಿ14 ಋಷಿವರ್ಯ ಶರಭಂಗಗೀಕ್ಷಣದಿ ಸುಗತಿಯನು ಹಸನಾಗಿ ಕರುಣಿಸಿದ ಬಳಿಕ ಕುಂಭೋದ್ಭವನು 15 ಒಸಗೆಯಿಂದಿತ್ತ ದಿವ್ಯಾಸ್ತ್ರಂಗಳ ಸಂಗ್ರಹಿಸಿ ಪಸರಿಸಿಹ ವಿಲಸಿತದ ಪಂಚವಟಿಯಲಿ ನೆಲಸಿ 16 ಒಸಗೆಯಿಂದಿರೆ ಬಂದ ಶೂರ್ಪನಖಿಗತಿಭಂಗ ವೆಸಗಿ ಸೋದರನಿಂದ ಶೋಭಿಸೆ ಶುಭಾಂಗ 17 ಮಾಯಾ ಮೃಗಾಕಾರ ದಸುರ ಮಾರೀಚನಂ ಸಂಹರಿಸಿ ರಘುವೀರ 18 ಅಸಮ ಸೋದರ ಸಹಿತ ಆಶ್ರಮಕ್ಕೈತಂದು ದೆಸೆದೆಸೆಯೊಳರಸೆ ತನ್ನರಸಿ ಕಾಣದಿರಲು 19 ಹುಸಿವೇಷದಿಂ ಬಂದ ಖಳ ಕುಲಾಗ್ರಣಿಯಿಂದ ಶಶಿಮುಖಿಯು ಹಗರಣವಾಗಿರಲು ನಿತ್ಯಾನಂದ 20 ದೆಸೆಗೆಟ್ಟವನ ಪರಿಯಲತಿಶಯದಿ ಶೋಕಿಸುತ ದೆಸೆದೆಸೆಯೊಳರಸುತ್ತಾ ಬಸವಳಿದು ತಾ ಬರುತ 21 ಎಸೆವವರ ಋಷ್ಯಮೂಕಮತಂಗಾಶ್ರಮದಿ ಬಿಸಜಾಪ್ತಸುತನ ಕಂಡವನೊಡನೆ ತಾ ಮುದದಿ 22 ಉಸುರಿ ವಾಲಿಯ ವಧೆಗೈವೆನೆಂದಭಯವನು ಎಸೆವ ವಿಲಸಿತ ಮಹಿಮ ಕರಿಗಿರೀಶನು ತಾನು 23
--------------
ವರಾವಾಣಿರಾಮರಾಯದಾಸರು
ಕೃಪಿಗಳೊಳು ನಿನಗುಪಮೆ ಕಾಣೆನೊ ಸದಾ ಕೃಪಣವತ್ಸಲ ರಾಘವೇಂದ್ರಾ ಅಪರಿಮಿತ ಪಾಪೌಘ ಸÀಪದಿ ಪೋಗಾಡಿಸಿ ನೀ ಕೃಪಣ ಕಾಮಿತ ದಾತಾ - ಮನ್ನಾಥಾ ಪ ಮೋದತೀರ್ಥ ಮತೋದಧಿ ಸಂಜಾತಾ - ಮೋದ ಸಂಯುಕ್ತ ಸುಧಾ ಭೋಧಿಸಿ ಚಂದ್ರಿಕ ಭುಧಜನ ವೃಂದಕೆ ಉದಧಿನಂದನನಂತಿರುವೇ - ನಂದಕರ ಗುರುವೆ 1 ಕ್ಷಿತಿ ತಳದೊಳು ವರ ಯತಿಯ ರೂಪವ ಧರಿಸಿ ಪತಿತ ಪಾವನನೆನಿಸೀ ಸತತ ಸುಜನರ ಅತಿಹಿತದಲಿ ಪೊರೆವೊ ಮತಿವಂತ ಮನದಲೀಗ ಭಜಿಪೆ ತ್ವಚ್ಚರಣ2 ಧಿಟ ಗುರು ಜಗನ್ನಾಥ ವಿಠಲಪಾದ ಹೃತ್ಸಂ - ಪುಟದಿ ಭಜಿಸುತಲೀ ಶಿಷ್ಟಜನರ ಮನದಿಷ್ಟಾರ್ಥ ಸಲಿಸುವ ವÀಂ - ದ್ಯೇಷ್ಟದಾನದಿ ದಕ್ಷಾ - ಕಾಮಿತ ಕಲ್ಪವೃಕ್ಷಾ 3
--------------
ಗುರುಜಗನ್ನಾಥದಾಸರು
ಕೃಪೆ ನಿಮ್ಮದಾಗಬೇಕು ಸ್ವಾಮಿ ನಿಮ್ಮರಿಯಲಿಕ್ಕೆ ಅಪಾರ ಮಹಿಮೆ ನಿಮ್ಮ ಸುಂಪಾದ ತಿಳಿಯಲಿಕ್ಕೆ ಧ್ರುವ ಭ್ರಾಂತಗೆಲ್ಲಿಹುದಯ್ಯ ಪೂರ್ಣನಿಂತ ನಿಲಕಡೆಙÁ್ಞನ | ಎಂತುಹೇಳಿದರ ಖೂನ ಶಾಂತಹೊಂದದಯ್ಯಮನ | ಪಂಥ ಪರಮ ಗುಹ್ಯಸ್ಥಾನ ತಂತುವಿಡಿಯಲು ನಿರ್ಗುಣ | ಅಂತು ಇಂತು ಎಂಬುಂದೆ ನಾನಂತ ಗುನ ನಿಧಾನ 1 ಖೂನ ತಿಳಿಯಲಿಕ್ಯಗಾಧಗುರು ನಿಮ್ಮಶ್ರೀಪಾದ | ಬೋಧ ನೀಡಬೇಕು ಸುಪ್ರಸಾದ | ನೀನೆವೆ ನಿತ್ಯವಾದ ವಸ್ತು ಪರಿಪೂರ್ಣ ಸದಾ | ದೀನ ಬಂಧು ದಯದಿಂದ ಖೂನದೋರೊ ಆಶ್ರಯದ 2 ಮಂದ ಮತಿ ನಾನು ಭಕ್ತಿ ಮಾಡಲರಿಯೆನು ಒಡಿಯನಹುದಯ್ಯ ನೀನುಮಹಿಪತಿಯ ಕಾಮಧೇನು ಕೊಡಲಿಕ್ಕೆ ಪೂರ್ಣ ನೀನು ಸ್ವಾಮಿ ಕಾವ ಕರುಣನು ಪಿಡಿದಿಹ್ಯ ನಿಮ್ಮ ನಾನು ದಿವ್ಯ ಪಾದಪದ್ಮವನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಪೆಯಿಟ್ಟು ಸಲಹೆನ್ನ ಹರಿಯೆ ನರಹರಿಯೆ ದ್ವಿಪÀವರವರದನೇ ಬಾರಯ್ಯ ದೊರೆಯೆ ಪ ದುರಿತಹರÀ ವರ ಚರಣಕಮಲನೆ ಧರಣಿಧರವನು ಕರಸರೋಜದಿ ಧರಿಸಿ ಸುಜನರ ಪೊರೆದ ಮುರಳೀ- ಧರನೇ ಮೋದವಪಡಿಸಿದಂತೆ ಅ.ಪ ನಂದನಂದನ ನಿನ್ನ ಚರಣ ಒಂದೇ ಶರಣ ಎನಗೆಂದು ನಂಬಿರುವುದೇ ಒಳ್ಳೇ ಆಭರಣ ಇಂದಿರೇಶನೆ ಮಾಡೋ ಕರುಣ ಸಿಂಧುಶಯನ ಸುಂದರೀಮಣಿ ಸಹಿತದಲಿ ನೀ ಬಂದು ಎನ್ನಯ ಮಂದಿರದಲಿ ನಿಂದು ಎನ್ನವನೆಂದು ಭಾವಿಸಿ ನಂದಪಡಿಸೈ ನಂದಬಾಲನೆ 1 ದೀನಪಾಲನೆ ಭೂಮಿಭಾರ ಹಾನಿಕಾರ ಪಂಚ ಸೂನಶರನಪಿತ ವಿಗತವಿಕಾರ ಶ್ರೀನಾಥ ಸುಜನಮಂದಾರ ಮೀನಾಕಾರ ನಾನು ನಿನ್ನವನಯ್ಯ ಎನ್ನಯ ಮಾನ ಮತ್ತಪಮಾನ ನಿನ್ನದು ಹೀನಮತಿ ಇವನೆಂದು ತಿಳಿದುದಾ- ಸೀನಮಾಡದೆ ಸಾನುರಾಗದಿ 2 ಸೋಮ ಕುಲಾಂಬುಧಿಸೋಮರಾರಾಮ ಬಲರಾಮ ಸಹಜನೇ ಸುರರಿಪು ಭೀಮ ವಾಮಲೋಚನೇರಿಗೆ ಕಾಮ ಪ್ರೇಮಧಾಮ ಕಾಮಜನಕನೆ ಸಾಮಗಪ್ರಿಯ ನಾಮಗಿರಿ ಶ್ರೀ ರಾಮ ನರಹರೆ ಕಾಮಿತಾರ್ಥವನೀವ ಸುರತರುಕಾಮಧೇನು ಚಿಂತಾಮಣಿಯೆ ನೀ 3
--------------
ವಿದ್ಯಾರತ್ನಾಕರತೀರ್ಥರು
ಕೃಷ್ಣ ನಿನ್ನ ಸ್ಮರಣೆ ಎನಗೆ ಮರೆಸಬೇಡವೋ ಎನಗೆ ಮರೆಸಬೇಡವೊ ಯನಗೆ ಮರಿರೆಸಬೇಡವೊ ಪ. ಮಂದ ಮತಿಯಳ ಬಂದು ಕಾಯೋ ನೀ ಬಂದು ಕಾಯೋ ನೀ ಮಂದರೋದ್ಧರ ಸಿಂಧುಶಯನ ಇಂದಿರೆ ರಮಣ 1 ಹಗಲು ಇರಳು ನಿನ್ನ ಸ್ಮರಣೆ ಎನೆಗೆ ಮರೆಸ ಬೇಡವೋ ಹಗರಣ ಮಾಡಿಸಿ ಎನಗೆ ನಿನ್ನ ಸ್ಮರಣೆ ಮಾಡಿಸೋ 2 ರಮಾ ವಲ್ಲಭ ವಿಠಲ ನಿನ್ನ ನಾಮ ನಿರಂತರ ನುಡಿಸೋ ಯನೆಗೆ ಸ್ವಾಮಿ ನಿರಂತರ ನುಡಿಸೋ 3
--------------
ಸರಸಾಬಾಯಿ
ಕೃಷ್ಣನು ನೆಲಸಿರಲು ನಾಕದ ಸಿರಿಯ ನಿರಾಕರಿಸುವ ಸಿರಿತಾಹರ್ಷದೊಳು1 ಮೋಹಿಸಿ ಮನದಿ ಪತಿ ಭಾವದಿ ನೋಡುತ ಭರದಿ 2 ಕಾಮಿಸಿ ಕಾಡಲು ಕಾಕುತ್ಸ್ಥನು ಬಲರಾಮ ಸಹಜನವತಾರದಲಿ ಕಾಮಿತವಹದೆನೆ ಕಾಮಿನಿ ರಾಧಾ ನಾಮದಿ ಜನಿಸಿರೆ ಗೋಕುಲದಿ 3 ಒಂದಾನೊಂದಿನ ನಂದಾದಿಗಳಾ ನಂದಾನ್ವಿತಮತಿ ವೃತ್ತಿಯಲಿ ಒಂದಾಗಿ ಧರಾ ವೃಂದಾರಕರನುವಿಂದಾರಾಧಿಪ ಭಕ್ತಿಯಲಿ 4 ಬಂದರು ವರಕಾಳಿಂದಿಯ ತೀರದಿ ನಂದನದಂತಿಹ ವನದೆಡೆಗೆ ಮುಕುಂದನ ಧ್ಯಾನಿಸುತಡಿಗಡಿಗೆ 5 ಗೋಧನ ದಾನದಲ್ಲಿ ಬಲ್ಲಿದ ಭೋಜನದಲ್ಲಿ ದಣಿಸಿ ಸುಖದಲ್ಲಿರುತಿರಲಾಸಮಯದಲಿ 6 ಸುಜನ ಸ್ತುತದಿನಕರ ನೈದಿರಲು ನಿಸ್ತುಲತಮದಿ ಸಮಸ್ತರದೃಷ್ಟಿಗಳಸ್ತಗೊಳಿಸೆ ಜನಭಯಗೊಳಲು 7 ರಾಧೆಯತಾನೋಡಿ ಕಂದನ ನೀನೇ ಮಂದಿರಕೈದಿಸು ಎಂದರೆ ಬಂದಳು ನಗೆಗೂಡಿ 8 ಬಾ ಕಮಲಾಸನನ ತೊರುವೆ ಶಶಿವದನಾ 9 ನೀನೊಲಿದುದನು ಬೇಡನಿನ್ನನೆ ಕೂಡಿಹೆನು 10 ತನ್ನಯಮನದೊಳಗೆ ಚರಿತ್ರನು ಕಾಮಿನಿಗೆ11 ಬಲು ಸಡಗರದಿ ವೃತ್ತಕುಚಗಳಿಂದೊತ್ತಿಮನೊಭವನರ್ಥಿಗೆ ಸೊಕ್ಕುವ ಕಾತರದಿ 12 ಕರುಣನಾದೊಡೀಗಲೇ ಬೆರೆದು ಬರುತಿರ್ದಳು ನಲಿದು 13
--------------
ಸರಗೂರು ವೆಂಕಟವರದಾರ್ಯರು
ಕೆಟ್ಟ ಕೇಡನೇನ ಹೇಳಲಿ ಎನ್ನ-ದೃಷ್ಟದಿ ಪಡೆದಿದ್ದ ಫಲವಷ್ಟೇ ಅಮ್ಮ ಪ ಸತಿಯ ಸಂಗ ಕೆಟ್ಟೆ ಸಕಲ ವರ್ತನೆಗೆಟ್ಟೆಸುತರು ಬೇಕೆಂಬ ಸಂತಸಗೆಟ್ಟೆಮತಿಯ ವಿಚಾರಗೆಟ್ಟೆ ಮನದ ವಾಸನೆಗೆಟ್ಟೆಖತಿಯು ಎಂಬುದ ಕೆಟ್ಟೆ ಕಾಮಗೆ ಮೊದಲು ಕೆಟ್ಟೆ 1 ಮನೆವಾರ ನೇಮಗೆಟ್ಟೆ ಮನೆ ತಾಪತ್ರಯ ಕೆಟ್ಟೆಘನಭೋಗ್ಯ ಭಾಗ್ಯ ಕೆಟ್ಟೆ ಸರ್ವವ ಕೆಟ್ಟೆತನು ತಾನೆಂಬುದು ಕೆಟ್ಟೆ ತಳ್ಳಿ ತಗಾದೆ ಕೆಟ್ಟೆಜನರ ಕೂಡಿ ಕೆಟ್ಟೆ ಜಡ ಜೀವ ಕೆಟ್ಟೆ2 ವಿಧಿ ನಿಷೇಧ ಕೆಟ್ಟೆಫಲದ ತೋರಿಕೆಗೆಟ್ಟೆ ಪರರ ನಿಂದ್ಯ ಕೆಟ್ಟೆ3 ಭಂಗ ಕೆಟ್ಟೆಅಹಿತತ್ವವನು ಕೆಟ್ಟೆ ಅಂಗಡಿಯನು ಕೆಟ್ಟೆಮಹಿಮೆ ಎಂಬುದ ಕೆಟ್ಟೆ ಮಹಾ ಸುಖ ದುಃಖ ಕೆಟ್ಟೆ 4 ನಿತ್ಯ ಪ್ರಧಾನ ಕೆಟ್ಟೆಜೀಯ ಚಿದಾನಂದನಾಗಿ ಜನ್ಮಗೆಟ್ಟೆ 5
--------------
ಚಿದಾನಂದ ಅವಧೂತರು
ಕೆಡಬೇಡವೋ ಎಲೆ ಕರ್ಮಿ ಮನುಜ ನೀಕೆಡದಿಹ ಪಥವ ಕೇಳಿನ್ನು ಪ ಹಿಂಡು ಹಿಂಡು ಸಂದಳಿಯ ಬಿಡು ಇನ್ನು 1 ಬಹುಗೃಹ ಕಟ್ಟಿದೆ ದಿಕ್ಕಿಲ್ಲವೆಂಬೆ ಬಹು ಗೃಹವನು ಸುಡಲೆನ್ನುಇಹುದಿದು ದ್ರವ್ಯವು ಇದಕೇನೆಂಬೆಯ ಇಹುದನು ಧರ್ಮವ ಮಾಡಿನ್ನುದಾಹದಿ ಗಳಿಸಿದೆ ಆಸ್ತಿಯನೆಂಬೆಯ ಸಜ್ಜನರಿಗೆ ಕೊಳ್ಳೆನ್ನುಇಹೆ ನಾಲಕು ದಿನ ಎಂಬ ಭ್ರಮೆಯನು ಇಡು ಪಾದರಕ್ಷೆಯೊಳಿನ್ನು 2 ಮತಿವಂತರು ಆರಿಲ್ಲವೆಂಬೆಯ ಮತಿಗೆ ಶಿವ ತಾನಿಹೆನೆನ್ನುಗತಿಯೇನಿನ್ನು ಈ ಕುಟುಂಬಕೆಂಬೆಯ ಗತಿಯಿದ್ದಾಗುವುದೆನ್ನುಅತಿ ಋಣ ಭಾರವು ಆಗಿಹುದೆಂಬೆಯ ಆರಿಗೆ ಋಣ ಎಂದೆನ್ನುಸುತರಿಲ್ಲ ತನಗೆ ಗತಿಯಿಲ್ಲವೆಂಬೆಯ ಸುತರಿಂದ ಗತಿಯು ಸಾಕಿನ್ನು 3 ಪರ ಬ್ರಹ್ಮವ ನೋಡುತ ಸುಖದಲಿ ಆನಂದದಿ ಮಲಗಿನ್ನು4 ನಿರಂಜನ ನಿರವಯ ನಿತ್ಯನು ಬೇರಿಲ್ಲೆನ್ನುಪ್ರತ್ಯಗಾತ್ಮ ಪರಾತ್ಪರ ಪರತರ ಪ್ರತ್ಯಗೆ ತಾನಹುದೆನ್ನುಚಿತ್ತಿನ ಪ್ರಭೆಯದು ಢಾಳಿಸುತಿರುತಿರೆ ಚಿತ್ತವಲಯ ಮಾಡಿನ್ನುಪ್ರತ್ಯಗಾತ್ಮ ಚಿದಾನಂದನ ನೆನೆಯುತ ಪ್ರಾಣವ ಕಳೆಯಿನ್ನು 5
--------------
ಚಿದಾನಂದ ಅವಧೂತರು
ಕೆರೆಯನು ದಾಟಲು ಅರಿಯದ ಜನ ಭವ ಶರಧಿಯ ದಾಟುವರೇ ಶ್ರೀ ನರಹರೆ ಪ ಕರವ ಪಿಡಿಯದಿರೆ ತೊರೆಯ ಸೇರಲಳವೆ ಈ ಧರೆಯೊಳು ಅ.ಪ ಹಲವು ಜನ್ಮಗಳಲಿ ಗಳಿಸಿದ ಅಘಗಳ ಅಲೆಗಳೊಳಗೆ ಸಿಲುಕಿ ಸಂತತ ಮುಳುಗಿ ಮುಳುಗುತ ಕಟುಜಲಗಳ ಕುಡಿಯುತ ನಳಿನನಾಭ ನಿನ್ನೊಲಮೆಯಿಂದಲ್ಲದೆ1 ಕಾಮ ಕ್ರೋಧ ಮದ ಲೋಭ ಮೋಹ ಮತ್ಸರಗಳೆಂಬ ವಿವಿಧ ಜಲಚರ ನಕ್ರ ತಿಮಿಂಗಿಲವಿರಲಾಗಿ ಕಾಮಜನಕ ನಿನ್ನ ಪ್ರೇಮವÀ ಪೊಂದದೆ 2 ಚೂರ್ಣಗಳಾದುವು ವಿವಿಧ ನಾವೆಗಳೀ ಅರ್ಣವದಲಿ ಸಿಲುಕಿ ಸುಲಭದಿ ಪೂರ್ಣ ಪ್ರಮತಿಗಳ ಮತವನರಿತು ಇನ್ನ ಪೂರ್ಣ ಪ್ರಸನ್ನತೆ ನಾವೆಯಿಂದಲ್ಲವೆ 3
--------------
ವಿದ್ಯಾಪ್ರಸನ್ನತೀರ್ಥರು
ಕೇಳಮ್ಮ ತಂಗಿ ಕೇಳಮ್ಮ ಪ ಕೇಳಿ ಪುರಾಣದಿ ಪೇಳಿದ ಕೃಷ್ಣನ ಲೀಲೆಯ ಪಾಡುತ ``ಬಾಳಮ್ಮ'' ಅ.ಪ ನಿಷ್ಟೆಯಿಂದಲಿ ಬಲು ಶಿಷ್ಟಳಾಗುತ ದುಷ್ಟರಿಂದ ದೂ``ರಾಗಮ್ಮ'' 1 ಹರಿದಾಸರಪದ ಹರುಷದಿ ಹಾಡುತ ಗುರು ಹಿರಿಯರ ಮನ ``ಕೊಪ್ಪಮ್ಮ'' 2 ಕಾಲ ಕಳೆಯದೆ ಶೀಲಮತಿ ನೀ “ನಾಗಮ್ಮ'' 3 ವಿದ್ಯೆಯ ಕಲಿತು ಬದ್ಧಿವಂತ | ಳಾ | ಗಿದ್ದರೆ ಸುಖ ಶತ “ಸಿದ್ಧಮ್ಮ'' 4 ವಂದಿಸಿ ತುಲಸಿ ವೃಂದಾವನ ಪೂಜಿಸು ಮುಂದೆ ನಿನಗೆ ``ಆನಂದಮ್ಮ'' 5 ಹೀನರ ಬೆರೆಯದೆ ಮೌನವ್ರತದಲಿ | ಜ್ಞಾನಿ ಜನರ ನೀ ``ನರಸಮ್ಮ'' 6 ಮೂಢ ಜನರ ಒಡನಾಡದೆ ಭಕ್ತಿಲಿ ಮಾಡುವ ಸಜ್ಜನರ ``ಸಂಗಮ್ಮ'' 7 ಧರ್ಮದಿಂದ ಸತ್ಕರ್ಮ ಮಾಡುತ ನಿರ್ಮಲಗೊಳಿಸಿ ಸಂತ ``ರಂಗಮ್ಮ'' 8 ಪವನ ಪಿತನ ಕಥಾಶ್ರವಣವೆ ಪುಣ್ಯವು ಭವ ವಿದು ಕತ್ತಲು ``ಕಾಳಮ್ಮಾ'' 9 ಸದನಕೆ ಬಂದಿಹ ಬುಧರಾವರಿಸಲು ಮಂದಬಲು ನಿನಗದ ``ರಿಂದಮ್ಮ'' 10 ಎಂದೆಂದಿಗು ಪರನಿಂದೆಯ ಮಾಡದೆ ಮಂದಿರದಿರುವದೆ ``ಚಂದಮ್ಮ'' 11 ಸಾರಿದ ಜನರಘದೂರಗೈದು ಹರಿ ತೋರುವ ನುಜಗುರು ``ಈರಮ್ಮ'' 12 ಅತ್ತಿಯ ಮನಿಗೆ ಹೆತ್ತವರಿಗೆ ಉತ್ತಮ ಕೀರ್ತಿ ``ತಾರಮ್ಮ'' 13 ಗೋವಿಪ್ರಾಳಿ ಸೇವಿಸುತಿರುವದೆ ಕೋವಿದರಿಗೆ ಬಲು ``ಜೀವಮ್ಮ'' 14 ಭಾವದೊಳಗೆ ಪರದೇವನೆ ಪತಿಯೆಂದು ಪಡಿ ``ಭೋಗಮ್ಮ'' 15 ಭೇದಜ್ಞಾನ ಸಂಪಾದಿಸು ಕ್ಷಮಿಸುವ ಶ್ರೀಧರ ನಿನ್ನಾಪ ``ರಾಧಮ್ಮ'' 16 ಕೋಪದಿ ಪರರಿಗೆ ತಾಪವ ಬಡಿಸಲು ಲೇಪವಾಗುವದು ``ಪಾಪಮ್ಮ'' 17 ಇಂಗಡಲಾತ್ಮಜನಂಘ್ರಿ ಸರೋಜಕೆ ಸತಿ ``ತುಂಗಮ್ಮ'' 18 ದಾಸಜನರ ಸಹವಾಸದೊಳಿರುವದೆ ಕಾಶಿಗಿಂತ ವಿ``ಶೇಷಮ್ಮ'' 19 ಕಲಿಯುಗದಲಿ ಸಿರಿನಿಲಯನ ನೆನೆದರೆ ಸುಲಭ ಮುಕ್ತಿ ತಿಳಿ ``ಕಂದಮ್ಮ'' 20 ಪತಿಯು ಸದ್ಗತಿಗೆ ಗತಿ ಎಂದರಿತಹ ಮತಿಯುತ ಸತಿಯೆ ``ಯವನಮ್ಮ'' 21 ಮಧ್ವಸಿದ್ಧಾಂತದ ಪದ್ಧತಿ ತಪ್ಪದೆ ಇದ್ದರೆ ಹರಿಗತಿ ``ಮುದ್ದಮ್ಮ'' 22 ಸೋಗಿಗೆ ನೀ ಮರುಳಾಗಿ ನಡೆದರೆ ಯೋಗಿ ಜನರ ಮನ ``ಕಲ್ಲಮ್ಮ'' 23 ಶೀಲೆ ಗುಣದಿ ಪಾಂಚಾಲೆಯು ಎಲ್ಲ ಬಾಲೆಯರೊಳು ``ಮೇಲಮ್ಮ'' 24 ನೇಮದಿ ನಡೆದರೆ ಪ್ರೇಮದಿ ಸಲಹುವ ಶಾಮಸುಂದರನು ``ಸತ್ಯಮ್ಮ'' 25
--------------
ಶಾಮಸುಂದರ ವಿಠಲ