ಒಟ್ಟು 394 ಕಡೆಗಳಲ್ಲಿ , 75 ದಾಸರು , 351 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸತ್ಯವರ ಮುನಿಪ ದಿಕ್ಷತಿಗಳಂತೆ ನಿತ್ಯದಲಿ ತೋರ್ಪ ನೋಳ್ಪರಿಗೆ ಸಂಭ್ರಮದಿ ಪ ಸಿಂಧೂರವೇರಿ ದೇವೇಂದ್ರನಂತೊಪ್ಪುವನು ವಂದಿಪ ಜನರಘಾಳಿವನ ಕೃಶಾನು ಮಂದ ಜನರಿಗೆ ದಂಡ ಧರನಂತೆ ತೋರ್ಪಕ ರ್ಮಂದಿಪನು ನರವಾಹನವೇರಿ ನಿಋಋತಿಯೆನಿಪ 1 ಜ್ಞಾನಾದಿ ಗುಣದಿ ರತ್ನಾಕರನೆನಿಪ ಶೈವ ಜೈನಾದಿಮತ ಘನಾಳಿಗೆ ಮಾರುತಾ ದೀನ ಜನರಿಗೆ ಧನದನಾಗಿ ಸಂತೈಪ ವ್ಯಾ ಖ್ಯಾನ ಕಾಲದಿ ಜಗತ್ತೀಶನೆಂದೊರೆವಾ 2 ಶ್ರೀಮದ್ರಮಾಪತಿ ಜಗನ್ನಾಥ ವಿಠಲ ಸ್ವಾಮಿ ಪಾದಾಬ್ಜ ಭಜನಾಸಕ್ತನಿವ ಧೀಮಂತ ಗುರು ಸಾರ್ವಭೌಮ ಭೂ ಸುರನುತ ಮಹಾ ಮಹಿಮ ಪೊಗಳಲೆನ್ನೊಶವೇ ಕರುಣಾ ಸಿಂಧು3
--------------
ಜಗನ್ನಾಥದಾಸರು
ಸಂಪ್ರದಾಯದ ಹಾಡುಗಳು ಕೋಲು ಹಾಡು ಆಕಾಶಕಭಿಮಾನಿ ಶ್ರೀಕಂಠ ವರಪುತ್ರಏಕದಂತನೆ ವಿಘ್ನೇಶ ಕೋಲೆಏಕದಂತನೆ ವಿಘ್ನೇಶ ನಿನ್ನ ಪದಏಕ ಚಿತ್ತದಲಿ ಬಲಗೊಂಬೆ ಕೋಲೆ 1 ನೆನೆಯಕ್ಕಿ ನೆನೆಗಡಲೆ ಗೊನೆಯ ಬಾಳೆಯ ಹಣ್ಣುಘನವಾದ ಚಿಗುಳಿ ತಂಬಿಟ್ಟು ಕೋಲೆಘನವಾದ ಚಿಗುಳಿ ತಂಬಿಟ್ಟು ತಂದೀವೆಗಣಪತಿ ಮತಿಯ ಕರುಣಿಸು ಕೋಲೆ 2 ಜಾಹ್ನವಿ ಜಾಹ್ನವಿ ಜನಕ ನಾರಾಯಣನಗಧರನ ಮುನ್ನ ಬಲಗೊಂಬೆ ಕೋಲೆ 3 ಮಚ್ಛ ಕೂರುಮ ವರಹ ನರಸಿಂಹ ವಾಮನಸ್ವಚ್ಛ ಭೃಗುರಾಮ ರಘುರಾಮ ಕೋಲೆಸ್ವಚ್ಛ ಭೃಗುರಾಮ ರಘುರಾಮ ಕೃಷ್ಣ ಬೌದ್ಧಅಚ್ಛ ಕಲ್ಕಿಯ ಬಲಗೊಂಬೆ ಕೋಲೆ 4 ಈಶ ಬ್ರಹ್ಮರಿಗೆ ನಿಯಾಮಕನಾಗಿದ್ದುಪೋಷಿಸುತಿಪ್ಪ ಪರಮಾತ್ಮ ಕೋಲೆಪೋಷಿಸುತಿಪ್ಪ ಪರಮಾತ್ಮನಾದ ಶ್ರೀಕೇಶವನ ಮೊದಲೆ ಬಲಗೊಂಬೆ ಕೋಲೆ 5 ನೀರಿಗಾಶ್ರಯನಾಗಿ ನೀರೊಳು ಮಲಗಿಪ್ಪನೀರಜ ನೇತ್ರ ನಿಗಮಾತ್ಮ ಕೋಲೆನೀರಜ ನೇತ್ರ ನಿಗಮಾತ್ಮನಾದ ಶ್ರೀನಾರಾಯಣನ್ನ ಬಲಗೊಂಬೆ ಕೋಲೆ 6 ಯಾದವ ಕುಲಜನೆ ಸಾಧುಗಳರಸನೆಮಾದೇವಿಗಾಶ್ರಯನಾಗಿಪ್ಪ ಕೋಲೆಮಾದೇವಿಗಾಶ್ರಯನಾಗಿ ಪಾಲಿಸುವಮಾಧವನ್ನ ಮೊದಲೆ ಬಲಗೊಂಬೆ ಕೋಲೆ 7 ಚಂದದಿಂದ ವೇದ ವೃಂದ ಪ್ರತಿಪಾದ್ಯನೆಇಂದಿರಾದೇವಿ ರಮಣನೆ ಕೋಲೆಇಂದಿರಾದೇವಿ ರಮಣನಾದ ಗೋ-ವಿಂದನ್ನ ಮೊದಲೆ ಬಲಗೊಂಬೆ ಕೋಲೆ 8 ಸೃಷ್ಟಿಯೊಳಗೆಲ್ಲ ವ್ಯಾಪ್ತನಾಗಿರುತಿಪ್ಪವೈಷ್ಣವಕುಲಕೆ ತಿಲಕನೆ ಕೋಲೆವೈಷ್ಣವ ಕುಲಕೆ ತಿಲಕನಾದ ಶ್ರೀವಿಷ್ಣುವಿನ ಮೊದಲೆ ಬಲಗೊಂಬೆ ಕೋಲೆ 9 ಅಧಮನಾಗಿದ್ದಂಥ ಅಸುರನ ಸಂಹರಿಸಿಮುದವ ಬೀರಿದನೆ ಸುರರಿಗೆ ಕೋಲೆಮುದವ ಬೀರುತ ಸುರರ ಪಾಲಿಸುವಂಥಮಧುಸೂದನನ್ನ ಬಲಗೊಂಬೆ ಕೋಲೆ 10 ಚಿಕ್ಕ ಬ್ರಾಹ್ಮಣನಾಗಿ ಬಲಿಯ ದಾನವ ಬೇಡಿಆಕ್ರಮಿಸಿದನೆ ತ್ರಿಲೋಕವ ಕೋಲೆಆಕ್ರಮಿಸಿ ತ್ರಿಲೋಕವನಳೆದ ತ್ರಿ-ವಿಕ್ರಮನ್ನ ಮೊದಲೆ ಬಲಗೊಂಬೆ ಕೋಲೆ 11 ಭೂಮಿಯೊಳಗೆ ಅತಿ ಸಂಭ್ರಮನಾಗಿದ್ದಕಾಮಿತಾರ್ಥಂಗಳ ಕರೆವನೆ ಕೋಲೆಕಾಮಿತಾರ್ಥಂಗಳ ಕರೆದು ಭಕ್ತರ ಪೊರೆವವಾಮನನ್ನ ಮೊದಲೆ ಬಲಗೊಂಬೆ ಕೋಲೆ 12 ವೇದಾಭಿಮಾನಿಗೆ ಸಾದರವಾಗಿಪ್ಪಬೌದ್ಧ ಮೂರುತಿಯೇ ಭವದೂರ ಕೋಲೆಬೌದ್ಧ ಮೂರುತಿಯೇ ಭವದೂರನಾದ ಶ್ರೀಶ್ರೀಧರನ್ನ ಮೊದಲೆ ಬಲಗೊಂಬೆ ಕೋಲೆ 13 ಸಾಕಾರ ಮೂರುತಿ ಸರ್ವೇಂದ್ರಿ ನಿಯಾಮಕನಾಕೇಶ ವಂದ್ಯ ನಳಿನಾಕ್ಷ ಕೋಲೆನಾಕೇಶ ವಂದ್ಯ ನಳಿನಾಕ್ಷನಾದ ಹೃಷಿ-ಕೇಶ ಹರಿಯ ಬಲಗೊಂಬೆ ಕೋಲೆ 14 ಪದುಮ ಸಂಭವ ಪಿತ ಪದುಮಿನಿ ವಲ್ಲಭಪದುಮ ಪೊಕ್ಕುಳಲಿ ಪಡೆದನೆ ಕೋಲೆಪದುಮ ಪೊಕ್ಕುಳಲ್ಲಿ ಪಡೆದು ಪಾಲಿಸುವಂಥಪದುಮನಾಭನ ಮುನ್ನ ಬಲಗೊಂಬೆ ಕೋಲೆ 15 ಕಾಮಿನಿ ಯಶೋದೆ ಒರಳಿಗೆ ಕಟ್ಟಲುಶ್ರೀ ಮನೋಹರ ಶೆಳೆದೊಯ್ದ ಕೋಲೆಶ್ರೀ ಮನೋಹರ ಶೆಳೆದು ಪಾಪವ ಕಳೆದದಾಮೋದರನ್ನ ಬಲಗೊಂಬೆ ಕೋಲೆ 16 ಕಿಂಕರರ ಚಿತ್ತ ದುರ್ವಿಷಯಕ್ಕೆರಗಲುಪಂಕಜನಾಭ ಶಳೆದನೆ ಕೋಲೆಪಂಕಜನಾಭ ಶಳೆದು ತನ್ನಲ್ಲಿಡುವಸಂಕರುಷಣನ್ನ ಬಲಗೊಂಬೆ ಕೋಲೆ 17 ಏಸು ಬ್ರಹ್ಮಾಂಡದೊಳು ವಾಸವಾಗಿರುತಿಪ್ಪದಾಸವರ್ಗವನೆ ಪೊರೆವನೆ ಕೋಲೆದಾಸ ವರ್ಗವನೆ ಪೊರೆವನೆ ನಮ್ಮ ಶ್ರೀವಾಸುದೇವನ್ನ ಬಲಗೊಂಬೆ ಕೋಲೆ 18 ಅದ್ವೈತ ಮಹಿಮನೆಸದ್ವೈಷ್ಣವರ ಪೊರೆವನೆ ಕೋಲೆಸದ್ವೈಷ್ಣವರ ಪೊರೆವನೆ ಅಜನಯ್ಯಪ್ರದ್ಯುಮ್ನ ಹರಿಯ ಬಲಗೊಂಬೆ ಕೋಲೆ 19 ಅನಿಮಿಷ ದೈತ್ಯರ ಮನಕೆ ಸಿಲುಕದಿಪ್ಪಸನಕಾದಿ ವಂದ್ಯ ಸಕಲೇಶ ಕೋಲೆಸನಕಾದಿ ವಂದ್ಯ ಸಕಲೇಶನಾಗಿಪ್ಪಅನಿರುದ್ಧ ಹರಿಯ ಬಲಗೊಂಬೆ ಕೋಲೆ 20 ಕ್ಷರಾಕ್ಷರದೊಳು ಪರಮೋತ್ತಮನಾದಕರಿರಾಜ ವರದ ಕವಿಗೇಯ ಕೋಲೆಕರಿರಾಜ ವರದ ಕವಿಗೇಯನಾದ ಶ್ರೀಪುರುಷೋತ್ತಮನ್ನ ಬಲಗೊಂಬೆ ಕೋಲೆ 21 ಅಕ್ಷಯ ಮೂರುತಿ ಮೋಕ್ಷದಾಯಕ ಸ್ವಾಮಿಕುಕ್ಷಿಯೋಳ್ ಜಗವ ರಕ್ಷಿಪ ಕೋಲೆಕುಕ್ಷಿಯೋಳ್ ಜಗವ ಪಾಲಿಪ ನಮ್ಮ ಅ-ದೋಕ್ಷಜ ಹರಿಯ ಬಲಗೊಂಬೆ ಕೋಲೆ 22 ಕ್ರೂರ ಖಳನುದರ ಸೀಳಿ ಪ್ರಹ್ಲಾದನಕಾರುಣ್ಯದಿಂದ ಕಾಯ್ದನ ಕೋಲೆಕಾರುಣ್ಯದಿಂದ ಕಾಯ್ದನ ನಮ್ಮ ಶ್ರೀನಾರಸಿಂಹನ್ನ ಬಲಗೊಂಬೆ ಕೋಲೆ 23 ಸಚ್ಚಿದಾನಂದನೆ ಸಕಲಗುಣ ಪರಿಪೂರ್ಣಮುಚುಕುಂದ ವರದ ಮುನಿನುತ ಕೋಲೆಮುಚುಕುಂದ ವರದ ಮುನಿನುತನಾದ ಶ್ರೀಅಚ್ಯುತನ ಮೊದಲೆ ಬಲಗೊಂಬೆ ಕೋಲೆ 24 ದುರ್ಧರ್ಷರಾಗಿದ್ದ ಖಳರ ಸಮುದಾಯವಮರ್ದನ ಮಾಡಿದ ಮಹಮಹಿಮ ಕೋಲೆಮರ್ದನ ಮಾಡಿದ ಮಹಮಹಿಮನಾದ ಜ-ನಾರ್ದನ್ನ ಮೊದಲೆ ಬಲಗೊಂಬೆ ಕೋಲೆ 25 ಇಂದ್ರಾನುಜನಾಗಿ ಸ್ವರ್ಗದೊಳಿರುತಿದ್ದುಸಾಂದ್ರ ಸುಖವೀವೆ ಸುರರಿಗೆ ಕೋಲೆಸಾಂದ್ರ ಸುಖವಿತ್ತು ಸುರರ ಪಾಲಿಸುವ ಉ-ಪೇಂದ್ರನ ಮೊದಲೆ ಬಲಗೊಂಬೆ ಕೋಲೆ 26 ಪರಮ ಭಕ್ತರ ಪಾಪ ಪರಿಹಾರವನೆ ಮಾಡಿಪರಮ ಪದವಿಯ ಪಾಲಿಪ ಕೋಲೆಪರಮ ಪದವಿಯ ಪಾಲಿಪ ನಮ್ಮ ಶ್ರೀ-ಹರಿಯ ಮೊದಲೆ ಬಲಗೊಂಬೆ ಕೋಲೆ 27 ಶಿಷ್ಟ ಪಾಲಕ ಉತ್ಕøಷ್ಟ ಜ್ಞಾನಾನಂದಕೃಷ್ಣೆಯ ಕಷ್ಟ ಬಿಡಿಸಿದ ಕೋಲೆಕೃಷ್ಣೆಯ ಕಷ್ಟ ಬಿಡಿಸಿದ ನಮ್ಮ ಶ್ರೀ-ಕೃಷ್ಣನ್ನ ಮೊದಲೆ ಬಲಗೊಂಬೆ ಕೋಲೆ 28 ಅನಿರುದ್ಧಾದಿ ರೂಪ ವಿಶ್ವಾದಿ ಅಜಿತಾದಿಸನತ್ಕುಮಾರಾದಿ ಅಜಾದಿ ಕೋಲೆಸನತ್ಕುಮಾರಾದಿ ಅಜಾದಿ ರೂಪನಾದಘನ ಮಹಿಮನ್ನ ಬಲಗೊಂಬೆ ಕೋಲೆ 29 ಹಯಗ್ರೀವ ದತ್ತ ಋಷಭ ಸಂಕರ್ಷಣಭಯರಹಿತ ಬಾದರಾಯಣ ಕೋಲೆಭಯರಹಿತ ಬಾದರಾಯಣ ಮಹಿದಾಸವಯಿಕುಂಠ ಹರಿಯ ಬಲಗೊಂಬೆ ಕೋಲೆ 30 ಆತ್ಮಾದಿ ವಾಸುದೇವಾದಿ ಮೂರುತಿಶ್ರೀ ತರುಣೇಶ ವಿಶ್ವೇಶ ಕೋಲೆಶ್ರೀ ತರುಣೇಶ ವಿಶ್ವೇಶ ರೂಪನಾದಜ್ಯೋತಿರ್ಮಯನ ಬಲಗೊಂಬೆ ಕೋಲೆ 31 ಮುನಿ ವೇದವ್ಯಾಸ ಸನತ್ಕುಮಾರ ಮೂರ್ತಿಮಿನಗುವ ದತ್ತಾತ್ರೇಯನೆ ಕೋಲೆಮಿನಗುವ ದತ್ತಾತ್ರೇಯ ಹಯಗ್ರೀವದನುಜಾಂತಕನ್ನ ಬಲಗೊಂಬೆ ಕೋಲೆ 32 ಕಂಗಳಾಪಾಂಗದಿಂ ಕಮಲಾಸನಾದಿಗಳಸಂಗಾತ ಸೃಷ್ಟಿಪ ಮಹಲಕ್ಷ್ಮೀ ಕೋಲೆಸಂಗಾತ ಸೃಷ್ಟಿಪ ಮಹಲಕ್ಷ್ಮೀ ನಿನ್ನ ಪಾ-ದಂಗಳಿಗೆರಗಿ ಬಲಗೊಂಬೆ ಕೋಲೆ 33 ಮಾಯಾ ಜಯಾಕೃತಿ ಶಾಂತಿ ಇಂದಿರಾದೇವಿಕಾಮನ ಜನನಿ ಜಯಂತಿ ಕೋಲೆಕಾಮನ ಜನನಿ ಜಯಂತಿ ಜಾನಕಿ ಸತ್ಯ-ಭಾಮಾ ರುಕ್ಮಿಣಿಯ ಬಲಗೊಂಬೆ ಕೋಲೆ 34 ಪರಮೇಷ್ಠಿ ಪರಮೇಷ್ಠಿ ನಿನ್ನ ಪದಪದುಮವ ಮುನ್ನ ಬಲಗೊಂಬೆ ಕೋಲೆ 35 ಹನುಮ ಭೀಮ ಮಧ್ವ ಮುನಿರಾಯ ಮಾರುತಿದನುಜಾರಿ ಭಕ್ತ ವಿರಕ್ತ ಕೋಲೆದನುಜಾರಿ ಭಕ್ತ ವಿರಕ್ತ ನಿನ್ನ ಪಾದವನಜವ ಮುನ್ನ ಬಲಗೊಂಬೆ ಕೋಲೆ 36 ವಾಣಿ ಅಜನ ಮುದ್ದು ರಾಣಿ ಪಲ್ಲವ ಪಾಣಿಜಾಣೆ ಕೊಡೆಮಗೆ ಮತಿಗಳ ಕೋಲೆಜಾಣೆ ಕೊಡೆಮಗೆ ಮತಿಗಳ ನಿನ್ನ ಪಾದರೇಣುವಿನ ಮುನ್ನ ಬಲಗೊಂಬೆ ಕೋಲೆ 37 ಭಾರತಿದೇವಿ ನಿನ್ನ ವಾರಿಜ ಚರಣವಬಾರಿ ಬಾರಿಗೆ ಭಜಿಸುವೆ ಕೋಲೆಬಾರಿ ಬಾರಿಗೆ ಭಜಿಸುವೆ ಎಮಗೆ ಶ್ರೀನಾರಾಯಣನಲ್ಲಿ ರತಿ ಕೊಡು ಕೋಲೆ 38 ಇಂದ್ರನ ಗೆದ್ದು ಸುಧೆ ತಂದು ಮಾತೆಯಬಂಧನ ಕಡಿದ ಬಲುಧೀರ ಕೋಲೆಬಂಧನ ಕಡಿದ ಬಲುಧೀರನಾದ ಖ-ಗೇಂದ್ರನ್ನ ಮುನ್ನ ಬಲಗೊಂಬೆ ಕೋಲೆ 39 ಸಾಸಿರ ಮುಖದಿಂದ ಶ್ರೀಶನ್ನ ತುತಿಸಿ ಶ್ರೀವಾಸುದೇವಂಗೆ ಹಾಸಿಕೆ ಕೋಲೆವಾಸುದೇವಂಗೆ ಹಾಸಿಕೆಯಾದ ಮಹ-ಶೇಷನ್ನ ಮುನ್ನ ಬಲಗೊಂಬೆ ಕೋಲೆ 40 ಅಪರಿಮಿತ ಕಾರ್ಯ ತ್ರಿಪುರ ದಹನನೆಚಪಲ ಮೂರುತಿ ಚಂದ್ರಚೂಡ ಕೋಲೆಚಪಲ ಮೂರುತಿ ಚಂದ್ರಚೂಡ ಭಜಕರಅಪಮೃತ್ಯು ಹರನ ಬಲಗೊಂಬೆ ಕೋಲೆ 41 ಖಗ ಶೇಷಶಂಭು ರಾಣಿಯರ ಬಲಗೊಂಬೆ ಕೋಲೆ 42 ಶಕ್ರ ಕಾಮಾದಿ ದೇವರ್ಕಳ ಚರಣಕ್ಕೆಅಕ್ಕರದಿಂದ ಅಭಿನಮಿಪೆ ಕೋಲೆಅಕ್ಕರದಿಂದ ಅಭಿನಮಿಸಿ ಪೇಳ್ವೆ ದೇ-ವಕ್ಕಿ ನಂದನನ ಚರಿತೆಯ ಕೋಲೆ 43 ಪದ್ಮನಾಭ ನರಹರಿತೀರ್ಥಶ್ರೀ ಮಾಧವಾರ್ಯ ಅಕ್ಷೋಭ್ಯ ಕೋಲೆಶ್ರೀ ಮಾಧವಾರ್ಯ ಅಕ್ಷೋಭ್ಯ ಜಯತೀರ್ಥಸ್ವಾಮಿಗಳ ಮೊದಲೆ ಬಲಗೊಂಬೆ ಕೋಲೆ 44 ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆನ್ಯಾಯ ಗ್ರಂಥಗಳ ರಚಿಸಿದ ಕೋಲೆನ್ಯಾಯ ಗ್ರಂಥಗಳ ರಚಿಸಿದ ನಮ್ಮ ವ್ಯಾಸ-ರಾಯರ ಮುನ್ನ ಬಲಗೊಂಬೆ ಕೋಲೆ 45 ಜನನಿ ಗರ್ಭದಿಂದವನಿ ಸ್ಪರ್ಶಿಸದೆಜನಿಸಿ ಬ್ರಹ್ಮಣ್ಯ ಮುನಿಗಳ ಕೋಲೆಜನಿಸಿ ಬ್ರಹ್ಮಣ್ಯ ಮುನಿಗಳ ಮೃದು ಹಸ್ತವನಜ ಸಂಭವನ ಬಲಗೊಂಬೆ ಕೋಲೆ 46 ಶ್ರೀಪಾದರಾಯರಲಿ ಸಕಲ ವಿದ್ಯವನೋದಿಶ್ರೀಪತಿ ಪ್ರೀತಿ ಪಡಿಸಿದ ಕೋಲೆಶ್ರೀಪತಿ ಪ್ರೀತಿ ಪಡಿಸಿದ ವ್ಯಾಸಮುನಿಭೂಪನ ಮೊದಲೆ ಬಲಗೊಂಬೆ ಕೋಲೆ 47 ದೇಶಾಧಿಪತಿಗೆ ಬಂದ ಕುಯೋಗವನೆ ನೂಕಿತಾ ಸಿಂಹಾಸನವೇರಿ ಮೆರೆದನೆ ಕೋಲೆತಾ ಸಿಂಹಾಸನವೇರಿ ಮೆರೆದನೆ ವ್ಯಾಸ ಮು-ನೀಶನ್ನ ಮೊದಲೆ ಬಲಗೊಂಬೆ ಕೋಲೆ 48 ದಂಡ ಕಮಂಡಲು ಧರ ಪಂಡಿತಾರಾಧಾರಕುಂಡಲಿಶಯನನ ಭಜಕರ ಕೋಲೆಕುಂಡಲಿ ಶಯನನ ಭಜಕ ರಾಘವೇಂದ್ರರಕೊಂಡಾಡಿ ಪದನ ಗುಣಿಸುವೆ ಕೋಲೆ 49 ತಂತ್ರ ಸಾರಗಳಿಗೆ ಅರ್ಥವನ್ನು ಸ್ವ-ತಂತ್ರದಿಂದಲಿ ರಚಿಸಿದ ಕೋಲೆ ಸ್ವ-ತಂತ್ರದಿಂದಲಿ ರಚಿಸಿದ ರಾಘವೇಂದ್ರರಪಂಥವಿದ್ದಲ್ಲಿ ಬಲಗೊಂಬೆ ಕೋಲೆ 50 ವೇದಶಾಸ್ತ್ರಾಮೃತ ಸಾರಬಲ್ಲ ರಾಮವೇದವ್ಯಾಸರ ಭಜಕರ ಕೋಲೆವೇದವ್ಯಾಸ ಭಜಕ ರಾಘವೇಂದ್ರರಪಾದವಿದ್ದಲ್ಲಿ ಬಲಗೊಂಬೆ ಕೋಲೆ 51 ತುಂಗಭದ್ರಾ ತೀರ ಮಂತ್ರಾಲಯದಲ್ಲಿಮಂಗಳ ಮಹಿಮರೆನಿಪರೆ ಕೋಲೆಮಂಗಳ ಮಹಿಮರೆನಿಪ ರಾಘವೇಂದ್ರ-ರಂಘ್ರಿ ಕಮಲವ ಬಲಗೊಂಬೆ ಕೋಲೆ 52 ಗುರು ರಾಘವೇಂದ್ರರ ಚರಣ ಪಂಕಜವನ್ನುಸ್ಥಿರ ಬುದ್ಧಿಯಿಂದ ಸ್ಮರಿಸುವೆ ಕೋಲೆಸ್ಥಿರ ಬುದ್ಧಿಯಿಂದ ಸ್ಮರಿಸಿ ನಾ ಪೇಳ್ವೆನುಸರಸಿಜಾಕ್ಷನ್ನ ಚರಿತೆಯ ಕೋಲೆ 53 ರಾಜರಾಜೇಶ್ವರ ಸತ್ಯಾಭಿನವ ತೀರ್ಥರಾಜಕರಾಬ್ಜ ಸಂಭೂತ ಕೋಲೆರಾಜಕರಾಬ್ಜ ಸಂಭೂತ ಸತ್ಯಾಧಿ-ರಾಜರ ಮೊದಲೆ ಬಲಗೊಂಬೆ ಕೋಲೆ 54 ಕ್ಷೀರನದಿಯ ತೀರ ವೇಲೂರ ಪುರವಾಸಸಾರ ಸಜ್ಜನರ ಪೊರೆವನೆ ಕೋಲೆಸಾರ ಸಜ್ಜನರ ಪೊರೆವ ಸತ್ಯಾಧಿರಾಜಧೀರ ಯತಿಗಳ ಬಲಗೊಂಬೆ ಕೋಲೆ 55 ಸತ್ಯಬೋಧರೆಂಬ ಸದ್ಗುರು ಚರಣವಚಿತ್ತದೊಳಿಟ್ಟು ಚರಿಸುವೆ ಕೋಲೆಚಿತ್ತದೊಳಿಟ್ಟು ಸ್ಮರಿಸಿ ನಾ ಪೇಳ್ವೆನುಚಿತ್ತದೊಲ್ಲಭನ ಚರಿತೆಯ ಕೋಲೆ 56 ಪುರಂದರ ರಾಯರಪರಮ ಕೃಪಾಪಾತ್ರ ವಿಜಯರಾಯ ಕೋಲೆಪರಮ ಕೃಪಾಪಾತ್ರ ವಿಜಯರಾಯರ ಪಾದಪರಮ ಭಕ್ತಿಯಲಿ ಸ್ಮರಿಸುವೆ ಕೋಲೆ 57 ದೇವ ನಾರಾಯಣ ಭೂದೇವಿ ಮೊರೆ ಕೇಳಿದೇವಕಿಯಲ್ಲಿ ಜನಿಸಿದ ಕೋಲೆದೇವಕಿಯಲ್ಲಿ ಜನಿಸಿ ಧಾರುಣಿದೇವಿ ಭಾರವನೆಲ್ಲನಿಳುಹಿದ ಕೋಲೆ 58 ಶಕಟ ಪೂತನಿ ವತ್ಸ ಬಕಧೇನುಕ ಕಂಸಮುಖಾದ್ಯರನ್ನು ಮಡುಹಿದ ಕೋಲೆಮುಖಾದ್ಯರನ್ನು ಮಡುಹಿ ವಸುದೇವ ದೇ-ವಕಿಯರ ಬಂಧನ ಬಿಡಿಸಿದ ಕೋಲೆ 59 ಹೆತ್ತ ತಾಯಿಯ ಮೊಲೆಯರ್ತಿಲಿ ನಲಿದುಂಡುಮತ್ತೆ ಬಾಲಲೀಲೆ ತೋರಿದ ಕೋಲೆಮತ್ತೆ ಬಾಲಲೀಲೆ ತೋರಿ ತೋಷವ ಪಡಿಸಿಮುತ್ಯಾಗೆ ಪಟ್ಟವ ಕಟ್ಟಿದ ಕೋಲೆ 60 ಜರೆಯ ಸುತನು ತಾನು ಜಗಳಕ್ಕೆ ಬಹನೆಂದುಕರೆಸಿದ ವಿಶ್ವಕರ್ಮನ್ನ ಕೋಲೆಕರೆಸಿದ ವಿಶ್ವಕರ್ಮನ್ನ ದ್ವಾರಕಪುರವ ನಿರ್ಮಿಸೆಂದಾಕ್ಷಣ ಕೋಲೆ 61 ದ್ವಾರಕಪುರದ ಶೃಂಗಾರ ವರ್ಣಿಸಲುಮೂರು ಕಣ್ಣವಗೆ ವಶವಲ್ಲ ಕೋಲೆಮೂರು ಕಣ್ಣವಗೆ ವಶವಲ್ಲ ನಾಲ್ಕಾರುಮೋರೆಯವರಿಗೆ ವಶವಲ್ಲ ಕೋಲೆ 62 ತಳಿರು ತೋರಣಗಳುಮೇರುವಿಗೆ ಪೊನ್ನ ಕಲಶವು ಕೋಲೆಮೇರುವಿಗೆ ಕಲಶ ಕನ್ನಡಿ ಮನೋ-ಹಾರವಾಗಿರುವುದು ಸಟೆಯಲ್ಲಿ ಕೋಲೆ 63 ಹದಿನಾರು ಸಾವಿರ ಚದುರೇರ ಮಂದಿರವುಮದನನಯ್ಯನ ಮನೆ ಮಧ್ಯ ಕೋಲೆಮದನನಯ್ಯನ ಮನೆ ಮಧ್ಯ ಪ್ರದೇಶಅದುಭುತವಾಗಿ ಬೆಳಗೋದು ಕೋಲೆ 64 ನಾರಿ ರುಕ್ಮಿಣಿ ಸತ್ಯಭಾಮೆದೇವಿ ಮತ್ತೆವಾರಿಜಮುಖಿಯರ್ ನಾಲ್ಕೆರಡು ಕೋಲೆವಾರಿಜಮುಖಿಯರ್ ನಾಲ್ಕೆರಡು ಸಹಿತಾಗಿವಾರಿಜನಾಭ ಕುಳಿತಿದ್ದ ಕೋಲೆ 65 ಶ್ರೀ ಭೂರಮಣನಾದ ಶ್ರೀಕೃಷ್ಣನರಮನೆಗೆಸುಭದ್ರೆ ಮುಯ್ಯ ತರುತಾಳೆ ಕೋಲೆಸುಭದ್ರೆ ಮುಯ್ಯ ತರುತಾಳೆ ಗಜಪುರಭೂ ಭುಜರೆಲ್ಲ ಬರುತಾರೆ ಕೋಲೆ 66 ಧರ್ಮ ಭೀಮಾರ್ಜುನ ನಕುಲ ಸಹದೇವರುಪೆರ್ಮೆಯಿಂದಲಿ ಪೊರವಂಟು ಕೋಲೆಪೆರ್ಮೆಯಿಂದಲಿ ಪೊರವಂಟು ದಿಕ್ಪಾಲರುಕೂರ್ಮೆಯಿಂದಲಿ ಬರತಾರೆ ಕೋಲೆ 67 ವಜ್ರ ಧರಿಸಿ ಉ-ಪೇಂದ್ರನರಮನೆಗೆ ಬರುತಾರೆ ಕೋಲೆ 68 ಸತಿ ಸ್ವಾಹಾದೇವಿಯ ಕೂಡಿಅತಿಶಯದಿಂ ಮೇಷವೇರುತ್ತ ಕೋಲೆಅತಿಶಯದಿಂ ಮೇಷವೇರಿ ಶಕ್ತಿಯ ಪಿಡಿದುಕ್ರ್ರತುಪತಿ ಮನೆಗೆ ಬರುತಾನೆ ಕೋಲೆ 69 ಯಮನು ಮಹಿಷವೇರಿ ಗಮನದಿಂದಲಿ ಸತಿಶಾಮಲಾದೇವಿ ಸಹಿತಲಿ ಕೋಲೆಶಾಮಲೆ ಸಹಿತ ದಂಡಾಯುಧ ಧರಿಸಿರಾಮನ ಮನೆಗೆ ಬರುತಾನೆ ಕೋಲೆ 70 ನಿರರುತಿ ತಾನೊಂದು ನರನ ಪೆಗಲನೇರಿಪರಮಾಪ್ತ ಸ್ತ್ರೀಯನೊಡಗೂಡಿ ಕೋಲೆಪರಮಾಪ್ತ ಸ್ತ್ರೀಯನೊಡನೆ ಕುಂತವ ಧರಿಸಿಧರಾಧರನ ಮನೆಗೆ ಬರುತಾನೆ ಕೋಲೆ 71 ವರುಣ ತಾನೊಂದು ಮಕರಿಯನೇರಿಕೊಂಡುಸಿರಿ ಭಾಗೀರಥಿಯನೊಡಗೊಂಡು ಕೋಲೆಸಿರಿ ಭಾಗೀರಥಿಯನೊಡನೆ ಪಾಶಧರಿಸಿಸಿರಿವತ್ಸನರಮನೆಗೆ ಬರುತಾನೆ ಕೋಲೆ 72 ಮರುತದೇವನೊಂದು ಎರಳೆಯನೇರಿತರುಣಿ ಪ್ರಾವಹಿಯೊಡಗೂಡಿ ಕೋಲೆ ತರುಣಿ ಪ್ರಾವಹಿಗೂಡಿ ಧ್ವಜ ಧರಿಸಿ ಶ್ರೀ-ಧರನ ಮನೆಗೇ ಬರುತಾನೆ ಕೋಲೆ 73 ವಿತ್ತಪತಿಯೊಂದು ಉತ್ತಮ ಹಯವೇರಿಚಿತ್ತದೊಲ್ಲಭೆಯ ಒಡಗೂಡಿ ಕೋಲೆಚಿತ್ತದೊಲ್ಲಭೆಯ ಒಡನೆ ಖಡ್ಗ ಧರಿಸಿಕರ್ತನ್ನ ಮನೆಗೆ ಬರುತಾನೆ ಕೋಲೆ 74 ಈಶಾನ ತಾನೊಂದು ವೃಷಭವೇರಿಕೊಂಡುಶ್ರೀ ಸತಿದೇವಿಯೊಡಗೂಡಿ ಕೋಲೆಶ್ರೀ ಸತಿದೇವಿಯೊಡಗೂಡಿ ಶೂಲ ಧರಿಸಿ ನಾ-ರಸಿಂಹನ ಮನೆಗೆ ಬರುತಾನೆ ಕೋಲೆ 75 ಹರಿಯೇ ಸರ್ವೋತ್ತಮ ಹರಿಯೇ ಪರದೇವತೆಹರಿದಾಸರೆಂಬೋ ಬಿರುದಿನ ಕೋಲೆಹರಿದಾಸರೆಂಬೋ ಬಿರುದಿನ ಹೆಗ್ಗಾಳೆಹಿರಿ ಬಾಗಿಲೊಳು ಹಿಡಿಸಿಹರು ಕೋಲೆ 76 ಒಬ್ಬನೆ ವಿಷ್ಣುವಿನ್ನೊಬ್ಬ ದೈವಗಳಿಲ್ಲೆಂ-ದಬ್ಬರದಿಂದ ನಾಗಸ್ವರ ಕೋಲೆಅಬ್ಬರದಿಂದ ನಾಗಸ್ವರಂಗಳಹೆಬ್ಬಾಗಿಲೊಳಗೆ ನುಡಿಸೋರು ಕೋಲೆ 77 ಖಳನ ಬೆನ್ನ ಚರ್ಮ ಸುಲಿದು ಭೇರಿಗೆ ಹಾಕಿಅಲವ ಬೋಧರೆ ಜಗದ್ಗುರು ಕೋಲೆಅಲವ ಬೋಧರೆ ಜಗದ್ಗುರುಗಳೆಂತೆಂದುಛಲದಿಂದ ಭೇರಿಯ ಹೊಡಿಸೋರು ಕೋಲೆ 78 ವಿಷ್ಣು ಸರ್ವೋತ್ತಮ ವಿಷ್ಣು ಪರದೇವತೆವಿಷ್ಣುದಾಸರೆಂಬ ಬಿರುದಿನ ಕೋಲೆವಿಷ್ಣುದಾಸರೆಂಬ ಬಿರುದಿನ ಠೆಕ್ಕೆಯಘಟ್ಯಾಗಿ ಎತ್ತಿ ನಿಲಿಸೋರು ಕೋಲೆ 79 ಮತದೊಳು ಮಧ್ವಮತ ವ್ರತದೊಳು ಹರಿದಿನಕಥೆಯೊಳು ಭಾಗವತವೆನ್ನಿ ಕೋಲೆಕಥೆಯೊಳ್ ಭಾಗವತವೆನ್ನಿ ಇದರಂತೆಪ್ರತಿಮೆಯೊಳ್ ವಿಷ್ಣು ಪ್ರತಿಮೆನ್ನಿ ಕೋಲೆ 80 ಈಚಲ ಬನದೊಳು ಗೋ ಕ್ಷೀರ ಕುಡಿದಂತೆನೀಚರ ಸಂಗ ಸುಜನರು ಕೋಲೆನೀಚರ ಸಂಗ ಸುಜನರು ಮಾಡಲುಈಚೆ ನೋಡುವರಿಗೆ ಅನುಮಾನ ಕೋಲೆ 81 ಸೂರಿ ಜನರ ಸಂಗ ಸುಧೆಯ ಪ್ರಾಶನೆಯಂತೆಹೋರಣೆ ಗುಣವುಳ್ಳ ಅಧಮರ ಕೋಲೆಹೋರಣೆ ಗುಣವುಳ್ಳ ಅಧಮರ ಸಹವಾಸನೀರುಳ್ಳಿ ತಿಂದ ತೆರನಂತೆ ಕೋಲೆ 82 ಒಳ್ಳೆ ಮನುಜರ ಸಂಗ ಮಲ್ಲಿಗೆ ಮುಡಿದಂತೆಖುಲ್ಲ ಕುಮತಿಯ ಸಹವಾಸ ಕೋಲೆಖುಲ್ಲ ಕುಮತಿಯ ಸಹವಾಸ ಮಾಡಲುಮುಲ್ಲಂಗಿ ತಿಂದು ತೇಗಿದಂತೆ ಕೋಲೆ 83 ಭಾವಜ್ಞರ ಸಂಗ ಶ್ಯಾವಿಗಿ ಉಂಡಂತೆಭಾವವನರಿಯದ ಬಲುಹೀನ ಕೋಲೆಭಾವವನರಿಯದ ಬಲುಹೀನರ ಸಂಗಬೇವಿನಹಾಲ ಕುಡಿದಂತೆ ಕೋಲೆ 84 ಬಾಳುವರ ಸಂಗ ಹಾಲೋಗರುಂಡಂತೆಬಾಳುವೆಗೆಟ್ಟ ಅಧಮರ ಕೋಲೆಬಾಳುವೆಗೆಟ್ಟ ಅಧಮರ ಸಹವಾಸಹೇಳಬಾರದ್ದು ತಿಂದಂತೆ ಕೋಲೆ 85 ಹರಿಗುರು ದ್ರೋಹಿ ಮರಳಿ ಮಾತೃ ದ್ರೋಹಿವರ ವೈಷ್ಣವ ದ್ರೋಹಿ ಪಿತೃ ದ್ರೋಹಿ ಕೋಲೆವರ ವೈಷ್ಣವ ದ್ರೋಹಿ ಸ್ವಾಮಿ ದ್ರೋಹಿನೆರಳು ಬಿದ್ದವರ ನೆರೆಹೊಲ್ಲ ಕೋಲೆ 86 ಕತ್ತೆ ಕುದುರೆ ಒಂದೆ ಅತ್ತೆ ಸೊಸೆಯು ಒಂದೆಹೆತ್ತಮ್ಮ ಒಂದೆ ಹೆಂಡ್ತೊಂದೆ ಕೋಲೆಹೆತ್ತಮ್ಮ ಒಂದೆ ಹೆಂಡ್ತೊಂದಾದ ಮೇಲೆವ್ಯರ್ಥದ ಮದುವೆ ನಿನಗ್ಯಾಕೆ ಕೋಲೆ 87 ಅಕ್ಕ ತಂಗಿಯು ಒಂದೆ ಮಕ್ಕಳು ಸೊಸೆ ಒಂದೆಚಿಕ್ಕಮ್ಮ ಒಂದೆ ಹೆಂಡ್ತೊಂದೆ ಕೋಲೆಚಿಕ್ಕಮ್ಮ ಒಂದೆ ಹೆಂಡ್ತೊಂದಾದ ಮೇಲೆರೊಕ್ಕ ವೆಚ್ಚ ಮಾಡಿ ಮದುವ್ಯಾಕೆ ಕೋಲೆ 88 ಹಿಟ್ಟು ಬೂದಿ ಒಂದೆ ರೊಟ್ಟಿ ಮುಚ್ಚಳ ಒಂದೆಕಟ್ಟಿಗೆ ಒಂದೆ ಕಬ್ಬೊಂದೆ ಕೋಲೆಕಟ್ಟಿಗೆಯೊಂದೆ ಕಬ್ಬೊಂದಾದ ಮೇಲೆಕಟ್ಟಿಗೆ ಯಾಕೆ ಮೆಲುವೊಲ್ಲೆ ಕೋಲೆ 89 ಹಾಲು ಮಜ್ಜಿಗೆಯೊಂದೆ ಕೋಳಿ ಕೋಗಿಲೆಯೊಂದೆಮಾಳಿಗೆ ಒಂದೆ ಬಯಲೊಂದೆ ಕೋಲೆಮಾಳಿಗೆಯೊಂದೆ ಬಯಲು ಒಂದಾದರೆಹೇಳಬಾರದ್ದು ತಿನವಲ್ಯ ಕೋಲೆ 90 ಗಂಗೆಯ ತಡಿಯಲ್ಲಿ ಲಿಂಗವನರ್ಚಿಸಿಅಂಗೈಯಲಿಟ್ಟು ಪೂಜಿಸುವೆ ಕೋಲೆಅಂಗೈಯಲಿಟ್ಟು ಪೂಜಿಸುವೆ ಎಲೆ ಪಾಪಿಲಿಂಗನು ನೀನು ವಂದ್ಹ್ಯಾಗೆ ಕೋಲೆ 91 ಶಿವನು ನೀನಾದರೆ ಶಿವೆಯು ನಿನಗೇನುಅವಿವೇಕಿ ಮನುಜ ಈ ಮಾತು ಕೋಲೆಅವಿವೇಕಿ ಮನುಜ ಈ ಮಾತು ಕೇಳಿದರೆಕವಿಗಳು ನಗರೆ ಕೈ ಹೊಯ್ದು ಕೋಲೆ 92 ವೇದ ಪ್ರಾಮಾಣ್ಯಂದು ಸುಜನರಿಗೆಲ್ಲಬೋಧಿಸುತಿಪ್ಪ ಬೌದ್ಧನ ಕೋಲೆಬೋಧಿಸುತಿಪ್ಪ ಬೌದ್ಧನ ಎಳೆದೊಯ್ದುಕಾದೆಣ್ಣೆಯೊಳು ಕೆಡುಹೋರು ಕೋಲೆ 93 ಇಲ್ಲಿ ಮಾತ್ರ ಭೇದ ಅಲ್ಲಿಯೊಂದೆ ಎಂಬಕ್ಷುಲ್ಲಕರ ಹಿಡಿದು ಹಲ್ಮುರಿದು ಕೋಲೆಕ್ಷುಲ್ಲಕರ ಹಿಡಿದು ಹಲ್ಮುರಿದು ಯಮರಾಯಕಲ್ಲುಗಾಣಕ್ಕೆ ಹಾಕಿಸುವ ಕೋಲೆ 94 ಅಪ್ಪ ನಾರಾಯಣನಿಪ್ಪಂಥ ಅರಮನೆಅಪ್ರಾಕೃತದ ವೈಕುಂಠ ಕೋಲೆಅಪ್ರಾಕೃತದ ವೈಕುಂಠವೆಂಬೋದುಸ್ವ ಪ್ರಕಾಶದ ಪರಮಾತ್ಮ ಕೋಲೆ 95 ಸುತ್ತ ವಿರಜಾನದಿ ಮತ್ತೆ ಆನಂದ್ವನಚಿತ್ತಜನೈಯ್ಯನರಮನೆಗೆ ಕೋಲೆಚಿತ್ತಜನೈಯ್ಯನರಮನೆ ಎಂಬುದುಉತ್ತಮೋತ್ತಮ ವೈಕುಂಠ ಕೋಲೆ 96 ನೀಲ ವೈಢೂರ್ಯ ನಿಚ್ಚಳ ವಜ್ರಅಚ್ಚ ಮಾಣಿಕ್ಯದ ಅಳವಟ್ಟು ಕೋಲೆಅಚ್ಚ ಮಾಣಿಕ್ಯದ ಅಳವಟ್ಟು ಹರಿಪುರಅಚ್ಯುತನಿಪ್ಪ ಅರವನೆ ಕೋಲೆ 97 ಸಿರಿಯು ತಾ ಮುರಹರನ ಪಟ್ಟಣದಲ್ಲಿವಿರಜೆಯೆಂತೆಂದು ಕರೆಸೋಳು ಕೋಲೆವಿರಜೆಯೆಂತೆಂದು ಕರೆಸಿ ವೈಕುಂಠಕ್ಕೆಪರಿಖಾ ರೂಪದಲ್ಲಿ ಮೆರೆವಳು ಕೋಲೆ 98 ಉತ್ತರದಿ ನಾಲ್ಕು ತತ್ಥಳಿಸುವ ದ್ವಾರಮುತ್ತು ಮಾಣಿಕ್ಯ ನವರತ್ನ ಕೋಲೆಮುತ್ತು ಮಾಣಿಕ್ಯ ನವರತ್ನ ಝಲ್ಲಿಯಎತ್ತಿ ಮೇಲ್ಕಟ್ಟು ಬಿಗಿದಿದೆ ಕೋಲೆ 99 ಜಯ ವಿಜಯಾದ್ಯೆಂಟು ದ್ವಾರಪಾಲಕರುಜಯದೇವಿ ರಮಣನರಮನೆಗೆ ಕೋಲೆಜಯದೇವಿ ರಮಣನರಮನೆ ಬಾಗಿಲೊಳ್‍ಜಯ ಜಯವೆನುತ ನಿಂದಾರೆ ಕೋಲೆ 100 ಕಸವೆಲ್ಲ ಪರಿಮಳ ಕೆಸರೆಲ್ಲ ಶ್ರೀಗಂಧಬಿಸರುಹ ನೇತ್ರನ ಅರಮನೆ ಕೋಲೆಬಿಸರುಹ ನೇತ್ರನ ಅರಮನೆಯೊಳಗೆಲ್ಲಕುಸುಮದ ಮಳೆಯು ಗರೆವುದು ಕೋಲೆ 101 ಕಾಜಿನ ನೆಲೆಗಟ್ಟು ರಾಜ ಮಾಣಿಕ ಗೋಡೆಈ ಜಡ ದ್ರವ್ಯವಲ್ಲಿಲ್ಲ ಕೋಲೆಈ ಜಡ ದ್ರವ್ಯವಲ್ಲಿಲ್ಲ ಪುಸಿಯಲ್ಲಶ್ರೀ ಜನಾರ್ದನನರಮನೆಯೊಳ್ ಕೋಲೆ 102
--------------
ಮೋಹನದಾಸರು
ಸರ್ವ ವಿಪತ್ ಪರಿಹಾರ ಸ್ತುತಿ ಕರ್ಮ ಫಲದಾತನು ಶೂನ್ಯ ಪ ವಾಹನ ಪತನ ಉಕ್ಕಿ ಪ್ರವಹಿಸುವ ನದಿ ಮೊದಲಾದ್ದರಿಂದ ಏಕ ಕಾಲದಿ ಸಂಗ ಮರಣ ಸಂಭವಿಸುವುದು ಏಕೆಂದು ಶಂಕಿಸುತಿ ಕೇಳು ಶ್ರದ್ಧಾಳು 1 ಏಕ ಕಾಲದಿ ನಾನಾ ಜನರು ಸಂಗದಿ ಕೂಡಿ ಮಂದ ಮಾರುತ ಪುಷ್ಪವನದಿ ಶ್ರೀಕರ ಕಥಾ ಶ್ರವಣ ನಾಟಕ ಕೇಳಿಕೆಯು ಹೀಗೆ ಜನ ಸಂಘದಲಿ ನಾನಾ ಸಂಭವವು 2 ಒಂದೊಂದು ಮನುಜನಿಗು ಇಂಥಾ ಕಾಲದಿ ಇಂಥಾ ರೀತಿಯಲಿ ಇಂಥಾ ಸ್ಥಳದಲ್ಲಿ ಇಂಥಾ ಹಿತಕರವೊ ಅಹಿತವೊ ಕರ್ಮಗತಿ ಸಂಭವವು ಶ್ರೀದ ನಿಯಮಿಸುವ ವೈಷಮ್ಯವಿಲ್ಲದಲೆ 3 ಮಳೆ ಬಿಸಿಲುಭೂಕಂಪ ಚಂಡಮಾರುತ ಸುಳಿಸುಳಿದು ಪ್ರವಹಿಸುವ ನದಿ ಹರಡುವ ದಾವಾಗ್ನಿ ಎಲ್ಲ ಇಂಥಾ ಅಹಿತ ಸಂಭವದಿ ಸಿಲುಕುವರು ಅಲ್ಲಲ್ಲಿ ಬಹುಜನರು ಕರ್ಮಗತಿಯಲ್ಲಿ 4 ಘೋರ ಭೂಕಂಪದ ಪೀಡೆಗೆ ಯೋಗ್ಯರು ಯಾರು ಯಾರೊ ಒಳ್ಳೆವರೋ ಕೆಟ್ಟವರೊ ಹರಿಯು ಆ ಜನರನ್ನು ಕಂಪನಕೆ ಒಳಮಾಡಿ ಮರಣಾಂಗ ಹೀನತೆಯು ರಕ್ಷಣೆಯು ಈವ 5 ಭಿನ್ನ ಜೀವರು ಭಿನ್ನ ಕರ್ಮಗತಿ ಉಳ್ಳವರು ಭಿನ್ನ ಫಲಯೋಗ್ಯರು ಆದ ಕಾರಣದಿ ಕ್ಷೋಣಿ ಕಂಪನದಲ್ಲಿ ಮರಣ ಕೆಲವರಿಗೆ ಅಂಗ ಹೀನತೆ ಕೆಲವರಿಗೆ ರಕ್ಷಣೆ ಕೆಲವರಿಗೆ 6 ಘೃಣಿ ಹರಿಯು ಭೂಕಂಪ ಆಗುವ ಪೂರ್ವದಲೆ ಜನರು ಕೆಲವರನ್ನು ಬೇರೆ ಊರಿಗೆ ಕಳುಹಿ ಹಾನಿಗೊಳಿಸುವ ಕಂಪನಕೆ ಸಿಲುಕದಂತೆ ಇನ್ನು ಕೆಲವರನ್ನು ಅಲ್ಲಿ ಬಾರದೇ ಮಾಳ್ಪ 7 ಸಿಂಧು ವಿಜ್ಞಾನಂದ ಹರಿಯೇ ಕರ್ಮಾಧ್ಯಕ್ಷನು ಕರ್ಮಫಲದಾತ ಕರ್ಮ ಕೊಡದು ಫಲ ಕರ್ಮಾಧ್ಯಕ್ಷ ಶ್ರೀಹರಿಯೇ ಫಲದಾತ 8 ಸಂಘ ದುಃಖ ಪ್ರಾಪ್ತಿಯು ಹಾಗೆ ಭವಿಸುವುದು ಐಹಿಕ ವಿಷಯಜವು ಉದಾನಿಸಿ ಅಘದೂರ ಗುರುಗ ಶ್ರೀ ಹರಿಯ ಸ್ಮರಿಸು 9 ನರಜನ್ಮ ಹೊಂದಿದವ ಹರಿನಾಮ ಸರ್ವದಾ ಸ್ಮರಿಸುವುದು ಕರ್ತವ್ಯ ದೊರಕಿದ ಸ್ಥಳದಿ ಹರಿನಾಮ ಭಕ್ತಿ ಪೂರ್ವಕದಿ ನುಡಿಯಲೇ ಬೇಕು ನರಪಶÀು ಜಡಮತಿ ಮೂಢನು ನುಡಿಯ 10 ಹರಿಯೇ ಸರ್ವೋತ್ತಮನು ಮುಖ್ಯಕಾರಣ ವಿಷ್ಣು ಶ್ರೀರಮಾಪತಿಯೇ ಸ್ವತಂತ್ರ ಜಗನ್ನಾಥ ಸರಸಿಜೋದ್ಭವ ಶಿವ ಶಕ್ರಾದಿ ಸರ್ವರಿಗೂ ಪ್ರೇರಕನು ಸ್ವಾಮಿಯು ಚಿತ್ ಅಚಿತ್ ನಿಯಂತ 11 ವಿಹಿತ ಸಾಧನಕ್ಕೊದಗೆ ನ್ಯಗ್ರೋಧೋದುಂಬರ ಹರಿ ದೇಹ ಬೆಳಸುವ ಪೋಷಿಸುವ ರಕ್ಷಿಸುವನು ಅಹರ್ನಿಶಿ ಪಾಲಿಸುವ ಭಕ್ತವಾತ್ಯಲ್ಯದಿ ಮಹಾರ್ಹರ ರಕ್ಷಿಸಿದ ಪ್ರಹ್ಲಾದ ಗಜಪತಿಯ 12 ಹರಿಯ ಪಾದಕೆ ಅಭಿಷೇಕ ಮಾಡಿದ ಬ್ರಹ್ಮ ಹರನು ಕೈಲಾಸ ವಾಸನು ಆ ತೀರ್ಥ ಸಹಸ್ರನಾಮ ಬೃಹತೀ ಸಹಸ್ರ ಸಹ ಪಠಿಸುತ್ತಾ ಸತಿ ಪಾರ್ವತಿಗೆ ಎರೆದ 13 ಹರಿನಾಮ ಸಂಸ್ಮರಣೆ ಪೂರ್ವಕದಿ ಈ ನುಡಿಯ ಬರೆಯುವ ಪಠಿಸುವ ಕೇಳುವ ಭಕ್ತರನ್ನು ಶ್ರೀರಮಾಯುತ ಹರಿ ಸುರವೃಂದ ಸಹ ಬಂದು ಸಂರಕ್ಷಿಸುವ ಸರ್ವವಿಪತ್ ದೂರ ಮಾಡಿ 14 ವರಾಹ ನರಸಿಂಹ ಭೂತಿದ ದಯಾಬ್ಧಿ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಸದಾ ಶರಣು ಮಾಂಪಾಹಿ ಸಜ್ಜನರ 15
--------------
ಪ್ರಸನ್ನ ಶ್ರೀನಿವಾಸದಾಸರು
ಸಾರಥಿ ವಿಶ್ವಾಧೀಶ್ವರ ವಿಜಯ ಪಾಲಿಸು ಸತತಂ ವಿಜಯಧ್ವಜ ವೆಂಕಟಗಿರಿ ನಾಯಕಿ ಅಜಿತ ಸಕಲಸುರವೈರಿ ವಿದಾರಣ ಪ. ವೀರಾಗ್ರಣಿ ರಘುವೀರ ವಿದಾರಿತ ಘೋರದಿತಿಜ ಪರಿವಾರ ಶೌರಿ ಕಾರಣ ಧಾರಣ ವದನ ಖರಾರಿ ಕೃಪಾಕರ್ರ(?) 1 ಲಕ್ಷ್ಮಣ ಪೂರ್ವಜ ಋಕ್ಷವಿನುತ ಕಮ ಲಾಕ್ಷ ಶೂರ್ಪನಖ ಶಿಕ್ಷಾ ದಕ್ಷಿಣ ದುರಿತಾರಣ್ಯ ರಮಾಸ್ಪದವಕ್ಷಸ್ಥಳ ವಿಭವೈಕನಿಭೆ ಜಯ ದ್ವಿದಶಾಕ್ಷ ವಿಘಾತನ 2 ರಾಮಾಭಿದ ರಮಣೀಯ ಗುಣಾರ್ಣವ ಕಾಮಿತ ಫಲದಾವನಭೂಮಾ ಭವಾಮಯಹರ ಭಜಕಾಶ್ರಯಧಾಮಾ ಮಾರುತಿಕೃತ ಕಾಮಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಾರಸ ನಯನ ಶ್ರೀರಾಮಚಂದ್ರನ ಚರಿತೆ ಸಾರ ಹೃದಯ ಶ್ರೀ ಪ ಭವ ಮುಖರರ ಮೊರೆಯ ಕೇಳಿ ಧಾರುಣಿಯೊಳಗವತಾರ ಮಾಡಿದನಮ್ಮಾ ಅ.ಪ. ದಶರಥ ಸುತನೆನಿಸಿ ವಸುಧೆಯೊಳವತರಿಸಿ ಕುಶಿಕಸುತನ ಯಜ್ಞವ ನೆರೆಪಾಲಿಸಿ ಅಶಮವಾಗಿದ್ದ ಅಹಲ್ಯೆಯ ಶಾಪ ಪರಿಹರಿಸಿ ವಸುಧೀಶ ಜನಕನಾಸ್ಥಾನ ಪ್ರವೇಶಿಸಿ ಪಶುಪತಿಯ ಕೋದಂಡ ಖಂಡಿಸಿ ಶಶಿವದನೆ ಜಾನಕಿಯನೊಲಿಸಿ ಅಸಮ ಭಾರ್ಗವನೊಡನೆ ಸರಸವ ನೆಸಗಿ ಜಗದೊಳು ಲೀಲೆ ತೋರಿದ 1 ಜನಕನಾಜ್ಞೆಯ ತಾಳಿ ಜನಕ ಸುತೆಯ ಸಹಿತ ಅನುಜನೊಡನೆ ಹೊರಟು ವನವಾಸಕೆ ಘನಭಕ್ತಿ ಭರಿತ ಶ್ರೀ ಭರತಗೆ ಪಾದುಕೆ ನೀನು ಕರುಣಿಸಿ ಮುಂದೆ ವನದಂಡಕವ ಪೊಕ್ಕು ದುರುಳ ವಿರಾಧಮುಖರನು ಹನನಗೈದಾ ಬಳಿಕ ಶರಭಂಗ ಮುನಿಗೆ ಸದ್ಗತಿಯಿತ್ತಗಸ್ತ್ಯನ ವಿನುತ ಅಸ್ತ್ರಗಳನು ಪಡೆದನಾ 2 ಪಂಚವಟಿಯೊಳಗೆ ಸಂಚುಗೈಯುತ ಬಂದ ಕಾಂಚನಮೃಗವನು ಪಂಚಕಗೊಳಿಸಿ ಕುಂಚಿತ ಮತಿಯ ದ್ವಿಪಂಚಶಿರನು ಬರಲು ವಂಚನೆಯಿಂದಪರಿಹರಿಸಲು ಸೀತೆಯ ಸಂಚುಕಾಣದೆ ವನವನದೊಳು ಸಂಚರಿಸುತಲಿ ಶೋಕ ತೋರುತ ಪಂಚಶರಹತನಂತೆ ಬಳಲುತ ಪಂಚಶರ ಪಿತ ಬಂದ ಪಂಪೆಗೆ 3 ಮಾರುತಸುತನ ವಿನಯಭರಿತ ವಾಕ್ಯಕೆ ಮೆಚ್ಚಿ ತರಣಿಸುತನ ಕೂಡೆ ಸಖ್ಯವ ಬೆಳೆಸಿ ದುರಿತವಗೈದ ವಾಲಿಯ ನಿಗ್ರಹಿಸಿ ಕಪಿ ವರ ಸುಗ್ರೀವಗೆ ರಾಜ್ಯಕರುಣಿಸಿದಾ ಬಳಿಕ ಪರಮ ವಜ್ರಶರೀರಿ ಪವನಜ ಶರಧಿಯ ಲಂಘಿಸಿ ಧರಣಿತನಯಳಿ ಗರುಹಿ ಕುಶಲವ ಮುದ್ರಿಕೆಯನಿತ್ತು ಉರುಹಿ ಲಂಕೆಯ ಬರಲು ಒಲಿದನು 4 ಭಕ್ತ ವಿಭೀಷಣನಿಗೆ ಇತ್ತು ಅಭಯವನು ಶರಧಿ ಬಂಧಿಸಿ ದಾಟಿ ಹತ್ತು ತಲೆಯವನ ಪುರವ ಪ್ರವೇಶಿಸಿ ದೈತ್ಯಶೂರರನ್ನೆಲ್ಲ ಮೃತ್ಯು ವಶವ ಮಾಡಿ ಮತ್ತೆ ಕುಂಭಕರ್ಣೇಂದ್ರಜಿತ್ ಮುಖ ದೈತ್ಯರನು ಸಂಹರಿಸಿ ರಣದೊಳು ಶತ್ರು ಭಯಂಕರನಾಗಿ ಮೆರೆದನು ಸ್ತುತ್ಯ ಮಹಿಮ ಶ್ರೀ ಕರಿಗಿರೀಶನು 5
--------------
ವರಾವಾಣಿರಾಮರಾಯದಾಸರು
ಸಿರಿ ಚರಣದಲ- ಪಾರ ಭಕುತಿಯನೀಯೋ ತವ ಸೇವಕನೆನಿಸಿ ಕೀರುತಿಯನು ಪಡೆಯೋ ಭವಕ್ಲೇಶ ಕಳೆಯೊ ಪ ಸೂರಿ ಸುಬ್ಬಣಾಚಾರ್ಯಕರಸ- ರೋರು ಹಗಲಲಿ ಪೂಜೆಗೊಳುತಲಿ ಚಾರುತರ ಶ್ರೀ ಜಯಮಂಗಳಿಯ ತೀರದೊಳಿರುವ ವೀರ ಮಾರುತಿ ಅ.ಪ. ಪ್ರತಿ ವರುಷ ಮಾಘಸಿತ | ನವಮಿ ದಿನದೊಳು ನೀ- ನತಿವಿಭವದೊಳು ನಗುತ | ಭಕುತರಿಷ್ಟವ ಸಲಿಸೆ ರಥದೊಳಗೆ ಕುಳ್ಳಿರುತ | ವಿಧ ವಿಧ ವಾದ್ಯಗಳ ತತಿಯನಾಲೈಸುತ | ಅತಿ ಮೋದಬಡುತ ಪರಿ ಸಂ- ಸ್ತುತಿಸೆ ಹಿಗ್ಗುತಲವರ ಸ್ವಮನೋ- ರಥಗಳ ನೀ ಸಲಿಸುವೆನೆನುತಲಿ ಅತುಳ ವಿಕ್ರಮದಭಯ ಹಸ್ತದಿ ಕೃತಿರಮಣ ಸಿರಿವರ ಹರಿಯನನು ಮತವ ಪಡೆಯುತ ರಥವ ನಡೆಸಿ ಚತುರ ದಿಕ್ಕಲಿ ಬಿಜಯ ಮಾಡುತ ಸತತ ಹರುಷವಗರೆವ ದೇವ 1 ರಕ್ಕಸಕುಲ ತಮ ಭಾನು | ತಾಮಸರ ಧ್ಯಾನಕೆ ಸಿಕ್ಕುವನಲ್ಲ ನೀನು | ಸುಜನರ ಹೃದಯದೊಳು ಅರ್ಕನೊಲು ಪೊಳೆವನು | ಹರಿಸಿರಿಗಾಳುಳಿದು ಬಕ್ಕ ದಿವಿಜರಿಗಿನ್ನು | ಗುರುಬಲ್ಲೆ ನಾನು ಚಿಕ್ಕ ರೂಪವಗೊಂಡು ಲಂಕೆಯ ಪೊಕ್ಕು ರಾಮನ ಸತಿಯ ಕಂಡು ತುಕ್ಕಿ ವನವನು ಸೂರೆ ಮಾಡಿ ಉಕ್ಕಿನ ಧ್ವಜಸ್ತಂಭದಿಂದ ಸೊಕ್ಕಿ ಬಂದ ದನುಜವ್ರಾತವ ಕುಕ್ಕಿ ಕೆಡಹಿ ಪುರವನುರಹಿ ಅಕ್ಕರದ ಮಣಿಸಹಿತ ಬಂದು ಪಕ್ಕಿದೇರನಿಗೆರಗಿ ನಿಂದೆ 2 ತುತಿಸ ಬಲ್ಲೆನೆ ನಾನು | ನಿನ್ನಯ ಸುಗುಣಗಳ ತತಿಗಳೆಲ್ಲವನು | ತ್ರಿಪುರ ಸುಂದರಿ ಪಾ- ರ್ವತಿ ಪತಿಯ ಪಡೆದವನು | ರಂಗೇಶವಿಠಲಗೆ ಅತಿಪ್ರೀತಿಸುತ ನೀನು | ನಿಷ್ಕಾಮಯುತನು ಪತಿತರನುದ್ಧರಿಸಲು ನೀ ಸಿರಿ ಪತಿಯ ಮತದೊಳು ಹನುಮ ಭೀಮ ಯತಿಯ ರೂಪವ ತಾಳಿ ಹರುಷದಿ ಕ್ಷಿತಿಯ ಭಾರವ ಹರಸಿ ಸಲಹಿದೆ ಅತುಳ ಮಹಿಮ ನಿನ್ನಪರಿಮಿತ ಶ ಕುತಿಗೆ ನಮೊ ನಮೊ ವಾಯುತನಯನೆ ಸತತ ಮುದದೊಳು ನಿನ್ನ ಸ್ಮರಿಸುವ ಮತಿಯ ಪಾಲಿಸು ಪತಿತ ಪಾವನ 3
--------------
ರಂಗೇಶವಿಠಲದಾಸರು
ಸಿರಿ ಹರಿಯೇ | ಎನ್ನ ದೊರೆಯೇ ಪ ಎದುರಾಳಿ ಜನ ಬಂದು | ಹದನ ಗೆಡಲು ಮನಬದಿಗ ನಾಗಿಹ ನಿನ್ನ | ಹುದುಗಿಸುತಿಹರಯ್ಯ ಅ.ಪ. ಎನ್ನ ಕಂಗಳು ನಿನ್ನಯ | ರೂಪಂಗಳಚೆನ್ನಾಗಿ ನೋಡದೆಲೆ | ವಿಷಯಾನ್ಯವ |ನನ್ನೆಯಿಂದಲಿ ನೋಡಿ | ಧನ್ಯರಾದೆವು ಎಂದುಮನ್ನಿಸುತಿಹವಯ್ಯ | ಘನ್ನ ಗೋಪಾಲನೆ1 ಕರ್ಣಗಳ್ಹದನ ಕೇಳೋ | ಶ್ರೀಹರಿ ನಿನ್ನಗುಣಗಳ ಕೇಳದಲೇ | ಯುವತೀಯರ ||ತನುಗಳೊರ್ಣನೆ ಕೇಳಿ | ಕ್ಷಣ ಕ್ಷಣಕಾನಂದಸೊನೆಯಿಂದ ತೊಯ್ದಂತೆ | ಎಣಿಸುತಿಹವು ಅಯ್ಯ 2 ಪ್ರಾಣ ಛಾದಿಯ ಪೇಳ್ವೆನೊ | ನೀ ಮುಡಿಧೂವಾಘ್ರಾಣಿಸದೆಲೆ ಕನ್ಯೇರು | ಮುಡಿದಿಹ ಪುಷ್ಪ |ಘ್ರಾಣಿಸುತ್ತಲಿ ಬಹು | ಆನಂದ ಪಡುತಲಿನಾನಾ ಜನ್ಮದಿ ದುಷ್ಟ | ಯೋನಿಗೆ ತರುವೋದು 3 ವದನದ ಪರಿಯ ಕೇಳೊ | ನಿನ್ನಯ ಗುಣಮುದದಲಿ ವರ್ಣಿಸದೆ | ಧನಿಕರ ಸ್ತುತೀ ||ವದಗಿ ಪೇಳುತ ಮುಂದೆ | ಉದರ ಕೋಸುಕವಾಗಿವಿಧಿಯ ಮಾರುತ ದುಷ್ಟ | ಸಾಧನವಾಯ್ತಯ್ಯ 4 ಸ್ಪರಿಶೇಂದ್ರಿಯರ ಸಾಧನ | ಕೇಳೆಲೊ ಹರಿಹರಿಭಕ್ತರಾಲಿಂಗನ | ಮಾಡದಲಿದ್ದುಪರಸ್ತ್ರೀಯ ಸ್ಪರಿಶಕ್ಕೆ | ಹರಿಯುವಂತಿಹುದನ್ನಪರಿಹಾರ ಗೈ ಗುರು | ಗೋವಿಂದ ವಿಠಲಯ್ಯ 5
--------------
ಗುರುಗೋವಿಂದವಿಠಲರು
ಸೀತಾರಾಮ ಶ್ರೀರಘುರಾಮ ಕಾ ಕುತ್ಸ್ಥರಾಮ ಕರುಣಾಳು ರಾಮ ಪ ಉತ್ತಮ ಗುರುಗಳಿಗೆ ಭಕ್ತಿಯಿಂದಲೆ ಎರಗಿ ಭಕ್ತವತ್ಸಲನ ಚರಿತ್ರೆ ಪೇಳುವೆನು 1 ಆದಿಮೂರುತಿಮಹಿಮೆ ವೇದಂಗಳರಿಯದು ಎನ್ನ ಭೇದಬುದ್ಧಿಗೆ ಇದು ಬೋಧವಾಗುವುದೆ 2 ಪತಿತಪಾವನ ನಿಮ್ಮ ಸ್ತುತಿಯ ಮಾಡುವುದಕ್ಕೆ ಮತಿಯ ಪಾಲಿಸಿ ಸದ್ಗತಿಯ ಕೊಡೆನೆಗೆ 3 ಆದಿಸೃಷ್ಟಿಯಲಿ ಆದುದು ಈ ಆತ್ಮ ಬಾಧೆಯ ಪಡುತಿಹುದು ಭವರೋಗದಲಿ 4 ಜನನ ಮರಣವೆಂಬ ಜಾಡ್ಯವನು ಬಿಡಿಸಿ ನಿನ್ನ ಚರಣದೊಳಿರಿಸೆನ್ನ ಕರುಣವಾರಿಧಿಯೆ 5 ಹೃಷಿಕೇಶವ ಎನ್ನ ಹೃದಯದೊಳಗೆ ಇದ್ದು ವಿಷಯಕೆ ಎನ್ನನು ವಶವ ಮಾಡುವರೇ 6 ದೆ ಮನ್ನಿಸಿ ರಕ್ಷಿಸೊ ಪನ್ನಗಶಯನ 7 ಪಾರ್ಥಸಾರಥಿ ನಿಮ್ಮ ಪಾದವ ನಂಬಿದೆ [ಅರ್ಥಿಯಿಂ] ಪಾವನ ಮಾಡೆನ್ನ ಪರಮಪುರುಷನೆ 8 ನಿಮ್ಮ ಪಾದದ ಭಕ್ತಿ ನಿಮ್ಮ ಪಾದದ ಸ್ತುತಿ ನಿಮ್ಮ ಪೊಗಳುವ ಮತಿಗತಿಯ ಕೊಡೆನಗೆ 9 ತಂದೆತಾಯಿಯು ನೀನೇ ಬಂಧುಬಳಗವು ನೀನೆ ಆ ನಂದದಿಂದಲಿ ಕಾಯೊ ಇಂದಿರಾರಮಣ 10 ಸುರರೆಲ್ಲ ಪೋಗಿ ಮೊರೆಯಿಡಲಾಗಿ ಅರಿತನು ಭೋಗಿಶಯನ ತಾನಾಗಿ11 ವಸುಧೆಯ ಭಾರವನಿಳುಹುವೆನೆಂದು ದಶರಥನುದರದಿ ಜನಿಸಿ ತಾ ಬಂದು 12 ಪಂಕಜನೇತ್ರ ಪರಮಪವಿತ್ರ [ಸು]ಕೋಮಲಗಾತ್ರ ಕೌಸಲ್ಯಪುತ್ರ 13 ಪುತ್ರರ ನೋಡಿ ಸಂತೋಷಗೂಡಿ ಅರ್ತಿಯಿಂದಲೆ ಚೌಲ ಉಪನಯನ ಮಾಡಿ 14 ನೋಡಿ ಕೌಶಿಕನ ಚಿಂತೆಯ ಮಾಡಿ ಕೂಡಿ ಅನುಜನ ಮುನಿವರನೊಡನೆ ವೋಡಿ 15 ಕರೂಶದೇಶಕೆ ಬಂದು ತಾಟಕಿಯನು ಕೊಂದು ಮ ಹ ಸ್ತ್ರೀಯೆಂದು ಆನಂದದಿ ಗ್ರಹಿಸಿ 16 ಮಾರೀಚನ ಹಾರಿಸಿ ಕ್ರತುವನ್ನು ಪಾಲಿಸಿ ತೋರಿಸಿ ಗಂಗೆಯ ಆನಂದದಿಂ ಸ್ತುತಿಸಿ 17 ಮಾಡಿ ಶಿಲೆಯ ಪಾವನ ಮಿಥಿಲಪುರಕೆ ವೋಡಿ ನೋಡಿ ಧನುವ ಮುರಿದು ಜಾನಕಿ ಕೂಡಿ 18 ಮಾರ್ಗದಲ್ಲಾಗ ಭಾರ್ಗವನ ಆಗ್ರಹವ ಬೇಗ ಮುರಿದು ತಾ ಶೀಘ್ರದಿಂ ಬಂದ 19 ಸತಿ ಸಹಿತನಿಂದು ರಾಜ್ಯ ಗ್ರಹಿಸುವೆನೆಂದ ಮಾತೆಗಾನಂದ 20 ಮಾತೆಗೆ ವಂದಿಸಿ ಸೀತೆಯನೊಡಗೊಂಡು ಸು ಮಿತ್ರೆಜಾತನ ಸಹಿತ ರಘುನಾಥ ತಾ ಪೊರಟ 21 ಪೋಗಿ ಜನಕನಿಗಾಗಿ ವನಕೆ ತಾ ಯೋಗಿ 22 ಬೇಗ ಭರತನಿಗಾಗಿ ಪಾದುಕೆಗಳ ಅನು ರಾಗದಿಂದಿತ್ತು ಯೋಗದಿಂ ಪೋಗಿ 23 ಅತ್ರಿಮಹಾಮುನಿ ಇತ್ತ ಆಭರಣವ ವಸ್ತ್ರವ ಗ್ರಹಿಸಿದ ಪುರುಷೋತ್ತಮನು 24 ವಿರಾಧನ ಕೊಂದು ಹರುಷದಿಂ ಬಂದು ಕರುಣದಿಂದ ನಿಂದು ಋಷಿಗಳಿಗಭಯವ[ನಿತ್ತು] 25 ದನುಜೆನಾಸಿಕವರಿದು ಖರದೂಷಣರ ತರಿದು ತಾನೊಲಿದು ಸತಿಗೆ ಗುಹೆಯಲ್ಲಿ ನಲಿದು26 ಬಂದು ರಾವಣ ಜಾನಕಿಯ ಕದ್ದೊಯ್ಯಲಂದು ಕೊಂದು ಮಾರೀಚನ ಗೃಧ್ರಗೆ ಮೋಕ್ಷಾವ [ನಿತ್ತು] 27 ಕಬಂಧನ ಗೆಲಿದು ಪಂಪಾತೀರದಿ ನಲಿದು ಶಬರಿಯಿತ್ತ ಫಲವನ್ನು ಸವಿದು ಹರಿಗೆ ತಾನೊಲಿದು 28 ಕುಟ್ಟಿ ವಾಲಿಯ[ನು] ರವಿಜಗೆ ಪಟ್ಟವ ಕಟ್ಟಿ ಸೃಷ್ಟಿಜಾತೆಯನರಸಲು ಕಪಿಗಳನಟ್ಟಿ 29 [ಭರದಿವಾನರ] ಕೈಲಿ ಉಂಗುರವಿರಿಸೆ ಆ ಮಾರುತಿ ಕಪಿಗಳುವೆರಸಿ ಜಾನಕಿ[ಯ]ನರಸೆ 30 ಶರಧಿಯನ್ಹಾರಿ ಸೀತೆಯ ನೋಡಿ ಗುರುತನು ತೋರಿ ದುರುಳನೊಡನ್ಹೋರಿ ಮಣಿಯ ತಂದನಾಧಾರಿ 31 ವನವನ್ನು ಮುರಿದು ಅಕ್ಷನ ತರಿದು ಅಸ್ತ್ರಕ್ಕೆ ಅ [ವನೊ]ಲಿದು ರಾವಣನೆದುರಲ್ಲಿ ನಲಿದು 32 ಪುರವೆಲ್ಲ ಸುಟ್ಟು ವಿಭೀಷಣನ ಗುಟ್ಟು ಬಾಲ ಶರಧಿಯೊಳಿಟ್ಟು ಕಪಿಗಳ ಸೇರಿದನಷ್ಟು 33 ಭಂಗಿಸಿ ಮಧುವನವ ಭರದಿಂದ [ರಾಮನೆಡೆಗೆ] ಲಂಘಿಸಿ ಮಾತೆಯ ಕಂಡೆವೆಂದೊಂದಿಸಿ ಮಣಿಯನಿರಿಸೆ 34 [ವರರಾಮ] ತಾ ನೋಡಿ ವ್ಯಸ ಮಾಡಿ ಹರಿಯನ್ನು ಕೂಡಿ ಆಲಿಂಗನೆ ಮಾಡಿ 35 ಹರಿಗನ ಕೂಡಿ ಭರದಿಂದಲೋಡಿ ಶರಧಿಯ ನೋಡಿ ಯೋಚನೆ ಮಾಡಿ 36 ವರುಣನ ವಂದಿಸಿ ವಿಭೀಷಣನ ಮನ್ನಿಸಿ ಶರಧಿಯ ಬಂಧಿಸಿ ಅಂಗದನ ಸಂಧಿಗೆ ಕಳುಹಿಸಿ 37 ಇಂದ್ರಜಿತುವೊಡನೆ ಛಂದದಿಂದಲೆ ಕಾದಿ ಬಂದ ಸರ್ಪಾಸ್ತ್ರವ ಖಗನಿಂದ ಬಿಡಿಸಿ 38 ಹಂಗಿಸಿ ರಾವಣನಕಿರೀಟವ ಮೈಯೆಲ್ಲ ನಡುಗಿಸಿ ಭಂಗಿಸಿ ತಾ ಜಗದೊಡೆಯನೆಂದೆನಿಸಿ 39 ಕುಂಭನಿಕುಂಭ ಕುಂಭಕರ್ಣರ ಕೊಂದು ಕುಂಭಿನಿಯೊಳು ನಿಂದನಂಬುಜನಾಭ 40 ಪತಿತಪಾವನ [ನನುಜನ] ಪಿತಾಮಹಾಸ್ತ್ರದಿ ಕಟ್ಟೆ ಹಿತದಿಂದೌಷಧಿ ತಂದ ಮಾರುತನ ಕುಮಾರ 41 ಮಾಯೆ ಸೀತೆಯನರಿ[ಯದೆ] ಮೋಹಪಡು ತ ಉ ಪಾಯದಿಂದಲೆ ಬಂದ ಮಾಯಾವಿಯೆಡೆಗೆ 42 ತಮ್ಮ ಲಕ್ಷ್ಮಣ ತಾನು ಹೆಮ್ಮೆಯಿಂದಲೆ ಕಾದಿ ಒಮ್ಮೆ [ಲೆ] ಅಸ್ತ್ರಗಳ ಸುಮ್ಮಾನದಿಂ ಬಿಟ್ಟು 43 ಸತ್ಯಮೂರುತಿ ಪವಿತ್ರ ತಾನಾದರೆ ಅಸ್ತ್ರವೆ ಶತ್ರುವ ಜಯಿಸಲೆಂದನಾಗ 44 ಎಂದು ಬಾಣವಬಿಡೆ ಇಂದ್ರಜಿತುವ ಕೊಂದು ಆ ನಂದದಿಂ ಲಕ್ಷ್ಮಣನ ಹೊಂದಿತಾ ಬಾಣ 45 ವಿರೂಪಾಕ್ಷ ಯೂಪಾಕ್ಷ ಶೋಣಿತಾಕ್ಪನ ಕೊಂದು ಮ ಕರಾಕ್ಷನ ಕೊಂದ ಮಹಾನುಭಾವರಾವಣನ 46 ಮೂಲಬಲವನ್ನೆಲ್ಲ ಲೀಲೆಯಿಂದಲೆ ನಿ ರ್ಮೂಲನ ಮಾಡಿ[ದ] ಲೀಲಾವಿನೋದದಿ 47 ಬಂಧುಗಳೆಲ್ಲರು ಮರಣ ಪೋಗಲು ಕಂಡು ಬಂದ ರಾವಣನು ತಾನು ಒಂದೆಮನಸಿನಲಿ 48 ಯಾರು ಇಲ್ಲದಾಗ ಚೋರತನದಲ್ಲಿ ನಾರಿಯ ಕದ್ದೊಯ್ದ ಧೀರ ಬಾರೆಂದ [ರಾಮ] 49 ಅಸ್ತ್ರಕ್ಕೆ ಅಸ್ತ್ರವ ಒತ್ತಿ ಬಿಡಲು ಆಗ ಮತ್ತೆ ಆಕಾಶವ ಮುತ್ತಿತು ಬಾಣ 50 ರಾಮರಾವಣರ್ಯುದ್ಧ ನೋಡಿ ಮಹಾಸುರರೆಲ್ಲ ಪ್ರೇಮದಿಂದಲೆ [ಹರಸಿದರು] ಆನಂದಗೂಡಿ 51 ಕತ್ತರಿಸಿದ [ರಾವಣನ]ಶಿರ ಮತ್ತೆ ಬೆಳೆಯಲು ನೋಡಿ ಚಿತ್ತದಿಂ ನೆನೆದು [ರಾಮ] ಬ್ರಹ್ಮಾಸ್ತ್ರದಿಂ ಕಡಿದ 52 ದಶಕಂಠನೆಂತೆಂಬ ಹಸನಾದ ವೃಕ್ಷವ ದಶರಥಸುತವಾತ ಬಂದು ಮುರಿಯಿತು 53 ರಾವಣನೆಂತೆಂಬ ವಾರಣ[ದ ಕೋಡ] ವೀರ ರಾ ಘವನೆಂಬ ಕೇಸರಿಯು ಮುರಿಯಿತು 54 ಪುಲಸ್ತ್ಯಪುತ್ರನೆಂಬ ರಾಜವೃಷಭವನ್ನು ಇಕ್ಷ್ವಾಕು [ಕುಲದ] ವ್ಯಾಘ್ರವು ಭಕ್ಷಿಸಿತಾಗ 55 [ಆಮಹಾ] ರಾಕ್ಷಸೇಂದ್ರನೆಂಬ ಜ್ವಲಿಸುವ ಅಗ್ನಿಯ [ಶ್ರೀ] ರಾಮಜೀಮೂತವು ಬಂದು ಕೆಡಿಸಿತು 56 ಸುರರೆಲ್ಲ ಜಯವೆಂದು ಪುಷ್ಪಗಳರಳನ್ನು ಕರೆಯಲು ಶಿರದಲ್ಲಿ ಧರಿಸಿದ [ತಾ] ಪರಮಪುರುಷನು 57 ರಾಕ್ಷಸೇಂದ್ರ [ವಿಭೀಷಣ]ಗೆ ಮಾಡಿ ರಾಜ್ಯಾ ಭಿಷೇಕವ ಮೂರ್ಜಗದಲಿ ಕೀರ್ತಿ ಪಡೆದ ರಾಘವ 58 ತಂದೆಗೆರಗಿ ಅಗ್ನಿತಂದ ಸೀತೆಯ ನೋಡಿ ಆ ನಂದದಿಂದಲೆ ಕೂಡಿನಿಂದ ರಾಘವನು 59 ಅಜಭವಸುರರೆಲ್ಲ ಭುಜಗಶಯನನ ನೋಡಿ ನಿಜವಾಗಿ ಸ್ತೋತ್ರ ಮಾಡಿದರು ನಿರ್ಮಲದಿ 60 ವೇದವನಿತ್ತು ಅಜನಿಗೆ ಭಾರವ ಹೊತ್ತು [ಆ] ಧಾರುಣಿಯ ತಂದು ಕಂಬದಿಂ ಬಂದು 61 ದಾನವ ಬೇಡಿ ಕ್ಷತ್ರಿಯಕುಲವನೀಡಾಡಿ ಜಾನಕಿಯ ತಂದು ಪ್ರಲಂಬನ ಕೊಂದು 62 ಕಾಳಿಯ ಒತ್ತಿ ಕುದುರೆಯ ಹತ್ತಿ ಜಗ ವೆಲ್ಲ ಸುತ್ತಿ ನಿಮ್ಮ ದರ್ಶನ ಮುಕ್ತಿ 63 ಜಗದೋದ್ಧಾರ ದುರಿತಕ್ಕೆ ದೂರ ಜಗಕೆ ಆಧಾರ ದುಷ್ಟರಿಗೆ ಕ್ರೂರ 64 ಪೃಥುವಿಯ ಪಾಲ ದಿಟ್ಟಗೋಪಾಲ ಸತ್ಯದಲಿ ಶೀಲ ರುಕ್ಮಿಣೀಲೋಲ 65 ಅರಿ ನಿ ಸ್ಸೀಮ ಭಕ್ತರಾಪ್ರೇಮ 66 ವಿಶಾಲನೇತ್ರ ಪರಿಪೂರ್ಣಗಾತ್ರ [ವ ರ] ಸೀತಾಕಳತ್ರ ಸುಗ್ರೀವಮಿತ್ರ 67 [ರಾಜ] ದಶರಥ ಬಾಲ ಜಾನಕೀಲೋಲ ಮೂರ್ಜಗಪಾಲ ಕೀರ್ತಿವಿಶಾಲ 68 ಸತ್ಯಮೂರುತಿ ಪವಿತ್ರ ನೀನೆ ಜಗಕೆ ಕರ್ತನೂ ಕಾರಣಮೂರ್ತಿಯೂ ನೀನೆ 69 ನಂದನಕಂದ ಮುಕುಂದ ಗೋವಿಂದ ಇಂದಿರಾರಮಣ ನೀನೆಂದು ಪೊಗಳಿದರು 70 ಪುಷ್ಪಕವನು ಏರಿ ಲಕ್ಷ್ಮೀಸಹಿತವಾಗಿ [ರಾಮ]<
--------------
ಯದುಗಿರಿಯಮ್ಮ
ಸುಂದರ ಕಾಂಡ ರಾಮಾಯಣ ಸಿರಿ ಸಿರಿ ಹನುಮನಾ ||ಮೆರೆವ ಸಚ್ಚರಿತೆ ಮಮ | ಗುರುವೆ ನುಡಿಸೀದಷ್ಟುಒರೆವೆ ಕೇಳ್ಪುದು ಸಜ್ಜನಾ ಪ ಗೃಹ ಮೇಧಿ ಇರುವ ಬಗೆ | ಬಹು ಪರೀಯಲಿ ತೋರಿಗುಹ ವನಂಗಳನೆ ಚರಿಸೀ |ಗೃಹಿಣಿಯನು ಕಾಣದಲೆ | ಬಹು ನಟಸಿ ನರರಂತೆಮಹ ಮಹಿಮ ರಾಮ ಬರಲೂ 1 ಪತಿ ದಶರಥನ | ಸುತನ ಕಂಡೆರಗಿ ರವಿಸುತಗೆ ರಾಜ್ಯವನೆ ಕೊಡಿಸೀ 2 ರಾಮನಾಣತಿ ಪೊತ್ತು | ಭೂಮಿಜೆಯ ವಾರ್ತೆಯನುನೇಮದಲಿ ತರುವೆ ನೆನುತಾ ||ಆ ಮಹಾ ಶರಧಿಯನು | ಧೀಮಂತ ಲಂಘಿಸುತಭೂಮಿಜೆಯ ಕಂಡು ಎರಗೀ 3 ಪತಿ | ರಾಮನ್ನ ಕಂಡ ಪರಿಆಮೋದದಲ್ಲಿರುತಿರೇ 4 ಶ್ರೀ ಲೋಲ ರಾಮನಿಗೆ | ಆಳಾಗಿ ಇರಲೊಂದುವಾಲುಳ್ಳ ಕಪಿಯು ಬಂದೂ ||ಕೇಳುವರು ಇಲ್ಲದಲೆ | ಪೋಲಾಗಿ ಹೋಯ್ತೆಂಬಕೀಳು ನುಡಿಗವಕಾಶ ಕೊಡದೇ 5 ವಂದೆರಡು ಹಣ್ಣಾನು | ತಿಂದ್ಹೋಗುವೇನೆಂದುಇಂದೀವರಾಕ್ಷಿಯ ಬೇಡುತಾ ||ನಂದೀಸಿ ಅಶೋಕ | ನಂದನ ವನವ ಮದಸಿಂಧೂರ ನಂತೆಸಗಿದೇ 6 ಕೋಟ್ಯಶೀತಿಯು ನಿ | ಶಾಟ ಯೂಥಪ ಸಹಸಾಷ್ಟ ಕಾಯುತ ಮುಖ್ಯರಾ ||ಖೇಟ ರಾವಣ ಸೇನೆ | ಕೂಟ ಮೂರರಲೊಂದುರೋಟಿಸುತ ನೀ ಮೆರೆದೆಯೋ 7 ಅಕ್ಷೋಹ್ಣಿ ಬಲ ಸಹಿತ | ರಾಕ್ಷಸಾಧಿಪ ಸುತನುಅಕ್ಷಯ್ಯ ಕುವರ ಬರಲೂ ||ಪಕ್ಷೀಂದ್ರ ತೆರ ಪಿಡಿದು | ಈ ಕ್ಷಿತಿಗೆ ಅಪ್ಪಳಿಸೆತಕ್ಷಣದಲಸು ನೀಗಿದಾ 8 ಮಂದಜಾಸನ ವರದಿ | ಇಂದ್ರಜಿತು ಮದವೇರಿಬಂದೆಸೆಯೆ ಬ್ರಹ್ಮಾಸ್ತ್ರವಾ ||ಛಂದದಲ್ಯೋಚಿಸುತ | ಬಂಧನಕೆ ನೀನಾಗಿನಂದದ ಲ್ವೊಳಗಾದೆಯೋ 9 ತೆತ್ತೀಸ ಕೋಟಿ ದೇ | ವತ್ತೀಗಳಿಗೆಲ್ಲಾಉತ್ತೂಮನಾದ ನೀನೂ ||ಸುತ್ತೀಸಿ ಬಾಲವನು | ಹತ್ತೂತಲೆಯವನನೆತ್ತೀಯ ಮೇಲ್ ಕುಳಿತೆಯೋ 10 ನಾರೀಯ ಚೋರ ನಿ | ನ್ನಾರೆಂದು ಕೇಳಾಲುಮಾರುತ್ತರವಿತ್ತು ಜರಿದೇ ||ಮಾರೀಚ ಮೊದಲಾದ | ನೂರಾರು ರಕ್ಕಸರದೂರೋಡಿಸೀದವನ ದೂತಾ 11 ಕೋಟಲೆಗಳ ಕೊಟ್ಟ | ತಾಟಕಾದೀ ದೈತ್ಯಕೂಟಗಳ ಸಂಹರಿಸಿದಾ ||ಕೂಟಸ್ಥ ಲೋಕಗಳ | ನೋಟದಲಿ ದಹಿಪ ವೈರಾಟ ಪ್ರಭುವಿನಾಳೂ 12 ಕೇಳೆಲೋ ರಾವಣನೇ ತಿಳಿಯಯಾ ನೀನು ನಿನ್‍ಹುಳುವೆಂದು ನಿಜ ಬಾಲದೀ |ಸಿಲುಕಿಸಿ ಜಲನಿಧಿ | ನಾಲಕ್ಕು ಮುಳುಗಿದವಾಲಿ ಪೆಸರನು ಮರೆತೆಯಾ 13 ತಾಲಮರಗಳ ಶೀಳಿ | ವಾಲೀಯನೆ ಕೊಂದರ್ಕಬಾಲಗೇ ರಾಜ್ಯ ಕೊಡಿಸೀ ||ಕೋಲಿನಿಂ ನಿಮ್ಮೆಲ್ಲ | ಹೂಳುವ ರಾಮನಆಳು ನಾನೆಂದು ತಿಳಿಯೋ 14 ರಕ್ಕಸ ಪತಿಯಾಜ್ಞೆ | ಇಕ್ಕಿ ತಲೆಯಾ ಮೇಲೆರಕ್ಕಸರೆಲ್ಲ ತವ ಪುಚ್ಛ ||ಕಿಕ್ಕಲೂ ಉರಿ ಲಂಕೆ | ಪೊಕ್ಕು ಪುರವನೆ ದಹಿಸಿಅಕ್ಕರದಿ ವನದಿ ಹಾರೀ 15 ಕಾಯ ಸಹಿತರ ನೋಡಿಪ್ರೀಯ ದ್ವಾರ್ತೆಯ ನರುಹಲೂ ||ಗೇಯ ಹನುಮನ ತುತಿಸಿ || ರಾಯಗೆರಗುವ ವನದಿಕಾಯ ಕುಪ್ಪಳಿಸುತಿರಲೂ 16 ಕಾತುರತೆಯ ಕಪಿ | ಜಾತೆಗಳ ಸಂತೈಸಿಪ್ರೀತಿಯಿಂ ಮಧುವನವನಳಿದ ||ಸೀತೆಯನು ಕಂಡಂಥ | ವಾರ್ತೆಯನು ಪೇಳೆ ರಘುಜಾತ ನಿನ್ನನು | ಅಪ್ಪಿದಾ 17 ಎರಡೇಳು ಭುವನದೊಳು | ಇರುವರೇ ನಿನ್ಹೊರತುಹರಿಗೆ ಪ್ರೀತ್ಯಾಸ್ಪದನು ಎನಿಸೀ ||ಮೆರೆವ ಭಕ್ತಾಗ್ರಣಿಯೆ | ಎರಗುವೆನು ತ್ವತ್ವದಕೆಹರಿಭಕ್ತಿ ಕರುಣಿಸಯ್ಯಾ 18 ಉದಯಕಾಲದಲೆದ್ದು | ಮುದದಿಂದಲೀ ಪದವಸದಯ ಹೃದಯರು ಪಠಿಸಲೂ ||ಬದಿಗ ಗುರು ಗೋವಿಂದ | ವಿಠಲನೋಳ್ ಸದ್ಭಕ್ತಿವದಗಿ ಪಾಲಿಪ ಹನುಮನೂ 19
--------------
ಗುರುಗೋವಿಂದವಿಠಲರು
ಸುಬ್ಬರಾಯ ಸುಜನಪ್ರಿಯ ಕರ್ಬುರಾಂತಕ ನಿರ್ಭಯವನು ಪಾಲಿಸಯ್ಯ ನಿರ್ಗತಮಾಯ ಪ. ಗೌರೀಕುಮಾರ ಪಾರಾವಾರಗಭೀರ ಮಾರನವತಾರ ತಾರಕಾರಿ ಶ್ರೀಕರ1 ಪಂಕಜಾಕ್ಷ ಪಾಹಿಮಾಂ ಶ್ರೀಶಂಕರಾತ್ಮಜ ಕುಂಕುಮಾರುಣವರ್ಣ ಪೂರ್ಣಾಲಂಕೃತ ವಿರಜ2 ಪೃಥ್ವಿಗುತ್ತಮ ಪಾವಂಜಾಖ್ಯ ಕ್ಷೇತ್ರಮಂದಿರ ಕರ್ತ ಲಕ್ಷ್ಮೀನಾರಾಯಣಭೃತ್ಯ ಸುಂದರ3
--------------
ತುಪಾಕಿ ವೆಂಕಟರಮಣಾಚಾರ್ಯ
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಶ್ರೀರಮಣನೆನೆಸಿದ ವಿನೋದಿ ಹರಿ ಸರ್ವೋತ್ತಮಗೆ ಸುವ್ವಿಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ಪರಮೇಷ್ಠಿ ಗುರುಗಳಿಗೆ ಶರಣೆಂಬೆ ಸುವ್ವಿ ಪರಮೇಷ್ಠಿ ಗುರುಗಳಿಗೆ ಹರಿ ಪರನೆಂದು ಪೇಳ್ವ ಶ್ರೀಮದಾನಂದತೀರ್ಥರಿಗೆ ಸಾಸೀರ ಶರಣೆಂಬೆ 1 ವಾಸುದೇವ ಪರ ಸಂಕರ್ಷಣ ಅತಿಕ್ರೂರಸಂಹಾರಕಾರ ಸುವ್ವಿ ಸಂಕರ್ಷಣ ಅತಿಕ್ರೂರಸಂಹಾರಕಾರ ಪ್ರದ್ಯುಮ್ನ ಬೊಮ್ಮ ಕುಮಾರನಂತೆ ಸುವ್ವಿ 2 ಸೂಕರ ನರಹರಿ ಕಾಯ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣ ಸುವ್ವಿ ವಾಮನ ಭಾರ್ಗವ ರಾಮನೆನಿಪ ಭೂಪ ಕೃಷ್ಣನಾದ ಬೌದ್ಧ ಕಲ್ಕಿ ರೂಪ ಪ್ರಸಿದ್ಧವಂತೆ ಸುವ್ವಿ3 ಮುಖ್ಯಪ್ರಾಣ ಆವಲ್ಲಿ ನಾರಾಯಣ ಇವರಿಬ್ಬರ ಗುಣವನರಿಯದವನೆ ಸುವ್ವಿ ಇವರಿಬ್ಬರ ಗುಣವ ಅರಿಯದವನೆ ಗೌಣನೆಂಬರ್ಥದಲಿ ಬ್ರಹ್ಮಸೂತ್ರ [ದಂಬಂತೆ] ಸುವ್ವಿ4 ಆತ್ಮನು ಅತಂತ್ರ ಪರಮಾತ್ಮನು ಸ್ವತಂತ್ರ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ಸುವ್ವಿ ದುಃ- ಖಾತ್ಮನು ಜೀವಾತ್ಮ ಪರಮಾತ್ಮನಲ್ಲ ವಾದಿ ಜ್ಞಾನಾನಂದಕ ಹರಿಗೆ ಸಮರಿಲ್ಲ ಸುವ್ವಿ 5 ಜಡದಲ್ಲಿ ಜೀವಾತ್ಮ ಜಡ ಜೀವರÀಲಿ ಪರಮಾತ್ಮ ಕ್ರೀಡೆಯಿಂದ ಏಕಾತ್ಮ ಬಿಡದಿಹ ಸುವ್ವಿ ಕ್ರೀಡೆಯಿಂದ ಏಕಾತ್ಮ ಬಿಡದಿಹುದು ವಾದಿ ದ್ವಾಸುಪರ್ಣ ವೆಂಬೋ ಶ್ರುತಿ ಲೇಸು ಲೇಸು ಸುವ್ವಿ 6 ಜಡ ಹರಿಗಳ ಭೇದ ಜೀವ ಜೀವಕೆ ಭೇದ ಜೀವೇಶ್ವರಗೆ ಭೇದ ಶರೀರ ಭೇದ ಸುವ್ವಿ ಜಡ ಜೀವರಿಗೆ ಭೇದ ಶರೀರ ಭೇದ [ವೆನ್ನಿ] ಜಡಜೀವ ಭೇದ ಪಂಚಭೇದಗಳು ಸುವ್ವಿ 7 ಪಂಚಭೇದಗಳೆಂಬ ಪ್ರಪಂಚದಲಿ ಸಕಲ ವೈಕುಂಠದೊಳಗಿನ ವಿವರ ಒಂದುಂಟು ಕೇಳು ಸುವ್ವಿ ವೈಕುಂಠÀದೊಳಗಿನ ವಿವರ ಒಂದುಂಟು ಕೇಳು ವಾದಿ ಸಾಕು ಸಾಕು ನಾಲ್ಕುವಿಧ ಮುಕ್ತಿಯುಂಟಲ್ಲಿ ಸುವ್ವಿ 8 ಶ್ರವಣಕೀರ್ತನ ಹರಿಸ್ಮರಣೆ ಸೇವನ ಪೂಜನ ವಂದನ ಹರಿದಾಸ್ಯ ಸಖ್ಯಮಾತ್ಮನಿವೇದನೆ ಸುವ್ವಿ [ಹರಿದಾಸ್ಯ ಸಖ್ಯಮಾತ್ಮ ನಿವೇದನೆಗಳು ತಮ್ಮ] ಅರ್ಥ ಕೂಡೊಂಬತ್ತುಭಕ್ತಿ ಸತ್ಯ ಉಂಟು ಸುವ್ವಿ 9 ಜೀವೇಶ[ನೊಂದು] ಹರಿನಿರ್ಗುಣನೆಂದು ಅಪೂರ್ಣ ಗುಣನೆಂದು ಬ್ರಹ್ಮಾದಿಗಳೊಂದು ಸುವ್ವಿ ಬ್ರಹ್ಮಾದಿಗಳೊಂದು ಸಮರಧಿಕಾರ ಅವತಾರ ಎಲ್ಲ ಒಂದೆ ಎಂಬುವಗೆ ಸುವ್ವಿ 10 ಅವತಾರವೆಲ್ಲ ಅಂಶವತಾರವೆಂದ ಹರಿಭಕ್ತರಲ್ಲಿ ಕೋಪ ಸುವ್ಯಕ್ತವಾಯಿತು ಸುವ್ವಿ ಕೋಪ ಸುವ್ಯಕ್ತವಾಯಿತು ವಾದಿ ಹರಿಭಕ್ತರೊಡನೆ ಕೋಪಂಗಳು ವ್ಯರ್ಥವಾಯಿತು ಸುವ್ವಿ 11 ಪಂಚಮಹಾಭೂತ ದೇಹ ಸಂಚಯರೆಲ್ಲ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಸುವ್ವಿ ಸಂಚಿತಾದಾ ಕರ್ಮಗಳ ಸಂಚಯರೆಲ್ಲ ಮುಕ್ತರ ದೇಹವೆಲ್ಲ ಸುಖದ ಸಂದೋಹವಂತೆ ಸುವ್ವಿ 12 ಶರೀರದಲ್ಲಿ ಎಪ್ಪತ್ತೆರಡು ಸಾವಿರ ನಾಡಿಗಳಲ್ಲಿ ಪಿರಿಯವಾದವು[ನೂರೊಂದು] ಐದು ಸುವ್ವಿ ಪಿರಿಯವಾದವು[ನೂರೊಂದು] ಐದು ಮೂರು ಒಂದು ಈ ಪರಿಯಾಗಿ ಇಪ್ಪುವಂತೆ ಸುವ್ವಿ 13 ಇಳಾನಾಡಿ ಸಾವಿರ ಸೀಳುಮಾಡಿ ಅದರೊಳು ಸೀಳುಮಾಡಿದರೇಳು ವಿರಳನಂತೆ ಸುವ್ವಿ ಸೀಳುಮಾಡಿದರೇಳು ವಿರಳನಂತೆ ನಾಡಿಯಲ್ಲಿ ರಕ್ತವರ್ಣನಾಗಿ ನಾರಾಯಣನಿಹ್ಯ ಸುವ್ವಿ 14 ಒಂದುನಾಡೀ ಪೆಸರು ಸುಷುಮ್ನನಾಡಿಯೆಂಬರು ಅದರಂತರ ಕಡೆಯಲಿ ರಂಧ್ರವಂತೆ ಸುವ್ವಿ ಅದರಂತರ ಕಡೆಯಲಿ ರಂಧ್ರÀ್ರವಂತೆ ನಾಡಿಯಲಿ ಕಮಲ ಮಧ್ಯದಲಿ ತಾ ವಿಮಲನಂತೆ ಸುವ್ವಿ 15 ನಾಡಿ ಮೂಲದೊಳು ನಾಲ್ಕುದಳದ ಕಮಲವುಂಟು [ನೀಲ]ವರ್ಣದಿಂದ ಸಂಪೂರ್ಣನಂತೆ ಸುವ್ವಿ [ನೀಲ]ವರ್ಣದಿಂದ ಸಂಪೂರ್ಣ[ನೀಲವರ್ಣ ಅನಿರುದ್ಧ] ನಲ್ಲಿ ತಾ ವಾಸನಂತೆ ಸುವ್ವಿ 16 ಪೊಕ್ಕುಳಲಿ ಆರುದಳ ಇಕ್ಕ್ಕು ರೀತಿಯಿಂದಲೇಳು [ಬಿಂಕನಾದ] ಸಂಕರ್ಷಣ ಮುಖ್ಯನಂತೆ ಸುವ್ವಿ [ಬಿಂಕನಾದ ಸಂಕರ್ಷಣ] ಮುಖ್ಯನಂತೆ ಜೀವಗೆ ಪಿಂಗಳ ವರ್ಣನಾಗಿ ಹಿಂಗದಿಹ ಸುವ್ವಿ 17 ಇಡಾನಾಡಿ [ಉದೀಚಿ] ಪಿಂಗಳ ದಕ್ಷಿಣದಲಿ ಪ್ರತೀಚಿ [ವಜ್ರಿಕೋ ಪೂರ್ವಾ ಅಂತೆ] ಸುವ್ವಿ ಪ್ರತೀಚಿ ವಜ್ರಿಕೋದೀಚಿ ಬ್ರಹ್ಮನಾಡಿ ಸುತ್ತಾ ಪಂಚನಾಡಿಗಳ ಪಂಚರೂಪಗಳೆ ಸುವ್ವಿ 18 ಎಂಟುದಳ ಕೆಂಪು ಉಂಟು ಹೃದಯ ಕಮಲದಲಿ ವೈಕುಂಠಪತಿ ಚತುರನ ಮಂಟಪವೆ ಸುವ್ವಿ ವೈಕುಂಠಪತಿ ಚತುರನ ಮಂಟಪದ ಮಧ್ಯದಲಿ ವಾಯು ಜೀವರಿಗೆ ಸಹಾಯನಂತೆ ಸುವ್ವಿ 19 ಕೂದಲ ಕೊನೆಯ ಹತ್ತು ಸಾವಿರ ವಿಧವನೆಮಾಡಿ ಜೀವ ಪರಿಮಾಣ ಒಂದೆ ಕಂಡ್ಯ ಸುವ್ವಿ ಜೀವ ಪರಿಮಾಣ ಒಂದೆ ಕಂಡ್ಯ ಚತುರನ ಅಂಗುಷ್ಟದÀಷ್ಟು ಜೀವ [ಅಂಶನಂತೆ] ಸುವ್ವಿ 20 ಸ್ಥೂಲಾಂಗುಷ್ಠ ಪರಿಮಾಣ ಪ್ರಾಜ್ಞನಾದ ನಾರಾಯಣ ಹೃದಯಕಮಲದ ಒಳಗೆ ವಿಮಲನಂತೆ ಸುವ್ವಿ ಹೃದಯಕಮಲದ ಒಳಗೆ ವಿಮಲನಂತೆ [ಜೀವಂಗಾ ರೂಪದಲಿ] ಹರಿ ತಾ ರಕ್ಷಿಪನಂತೆ ಸುವ್ವಿ 21 ಹೃದಯಾಕಾಶದಲಿ ಪ್ರಾದೇಶ ಪರಿಮಾಣ ಆದಿ ಪುರುಷನಿಹ್ಯ ಈ ವಿಧವಾಗಿ ಸುವ್ವಿ ಆದಿ ಪುರುಷನಿಹ್ಯ ಈ ವಿಧವಾಗಿ ಜೀವಗೆ ಗೃಹದೋಪಾದಿಯಲಿ ಹರಿ ರಕ್ಷಕನಂತೆ ಸುವ್ವಿ 22 ಕಂಠದೇಶದಲಿ ಉಂಟು ತೈಜಸಮೂರ್ತಿ ಕರ ಹತ್ತೊಂಬತ್ತು ಶಿರಗಳು ಸುವ್ವಿ ಕರ ಹತ್ತೊಂಬತ್ತು ಶಿರಗಳು ಮಧ್ಯದಲ್ಲಿ ಕರಿಮುಖ ಹಸ್ತಿಯಾಗಿಪ್ಪನಂತೆ ಸುವ್ವಿ 23 ಕಿರುನಾಲಗೆಯಲ್ಲಿ ಎರಡುದಳ ಕಮಲ ಅರವಿಂದ ಪದ್ಮದಲಿ ನಾರಾಯಣನಿಹ್ಯ ಸುವ್ವಿ ಅರವಿಂದ ಪದ್ಮದಲಿ ನಾರಾಯಣನಿಹ್ಯ ಹರಿಯು ರೂಪವೆಲ್ಲವಾಗಿ ಇಪ್ಪನಂತೆ ಸುವ್ವಿ 24 ದÀಕ್ಷಿಣಾಕ್ಷಿಯಲಿ ಲಕ್ಷಣ ವಿಶ್ವಮೂರ್ತಿ ಶಿಕ್ಷಕನಾಗಿ ಜೀವರ ವಂಶರಕ್ಷಕನಂತೆ ಸುವ್ವಿ ಜೀವರ ವಂಶರಕ್ಷಕನನ್ನೆ [ಜಾಗರವ ಕಾಣಿಸೋನಷ್ಟೆ] ವಾಣಿ ನಿಪುಣನಂತೆ ಸುವ್ವಿ 25 ಈ ದೇವರು ಪ್ರಾಜ್ಞನಾದ ಹರಿಯ ಕೂಡಿ ನಿದಾನಿಸಲು ಜೀವಂಗೆ ಸುಖತೇಜಸವು ಸುವ್ವಿ ನಿದಾನಿಸಲು ಜೀವಂಗೆ ಸುಖತೇಜಸವು ಅನೇಕಾಗಿ ತೈಜಸನಲ್ಲಿ ಸ್ವಪ್ನಭಾಗ್ಯ ಸುವ್ವಿ 26 ಹುಬ್ಬುಗಳ ಮಧ್ಯದಲಿ ಶುಭ್ರ ನಾಲ್ಕುದಳ ಕಮಲ ಅನಿರುದ್ಧ ನೀಲಾಭ್ರವರ್ಣ ಸುವ್ವಿ ಅನಿರುದ್ಧ ನೀಲಾಭ್ರವರ್ಣನಾಗಿ ಹರಿ ಅಲ್ಲಿ ಅದೃಶ್ಯವಾಗಿರುವನಂತೆ ಸುವ್ವಿ 27 ಶಿರದಲ್ಲಿ ಶುಭ್ರ ಹನ್ನೆರಡುದಳ ಕಮಲ ಅರುಣವರ್ಣನಾದ ನಾರಾಯಣನಿಹ್ಯ ಸುವ್ವಿ ಅರುಣವರ್ಣನಾದ ನಾರಾಯಣನಿಹ್ಯ ಹರಿಯು ಈ ಪರಿಯಲಿ ತಿಳಿದವರಧಿಕರಂತೆ ಸುವ್ವಿ 28 ಬ್ರಹ್ಮಹತ್ಯ ಶಿರಸ್ಕಂಚ ಸ್ವರ್ಣಸ್ತೇಯ ಭುಜದ್ವಯಂ ಸುರಾಪಾನ ಹೃದಾಯುಕ್ತಂ ಗುರುತಲ್ಪ ಸುವ್ವಿ ಸುರಾಪಾನ ಹೃದಾಯುಕ್ತಂ ಗುರುತಲ್ಪ ಕಟಿದ್ವಯಂ ಪಾದ ಪಾಪರೂಪಗಳೆ ಸುವ್ವಿ29 ಪಾತಕ ಪ್ರತ್ಯಂಗಗಳು ಉಪಪಾತಕ ರೋಮಂಗಳು ಪಾಪಪುರುಷ ರಕ್ತನೇತ್ರ ನೀಲಪುರುಷ ಸುವ್ವಿ ಪಾಪಪುರುಷ ರಕ್ತನೇತ್ರ ನೀಲಪುರುಷನಾಗಿ ವಾಸ ವಾಮಕುಕ್ಷಿಯಲಿ ನ್ಯಾಸವಂತೆ ಸುವ್ವಿ 30 ಪುರುಷ ಷೋಡಶನಾದ ಷಟ್ಕೋಣದಲ್ಲಿ ಪ್ರದ್ಯುಮ್ನನಿಹ್ಯ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ಸುವ್ವಿ ತ್ರಿಕೋಣದಲಿ ಧ್ಯಾನ ಸಂಕರ್ಷಣ ಕೊಡುವ ದೇಹ ಪವಿತ್ರ [ವಾಸುದೇವರಲ್ಲಿ ಸುವ್ವಿ]31 ಹನ್ನೆರಡಂಗುಲಮೇಲೆ ಹನ್ನೆರಡುದಳ ಕಮಲ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ಸುವ್ವಿ [ಪ್ರಪÀನ್ನರಿಗೆ] ಮೋಕ್ಷ ಪ್ರಸನ್ನ ಕೊಡುವ ತುರಿಯ ಸಿತದಳದಲ್ಲಿ ನಿಧಾನಿಸಲು ಸುವ್ವಿ 32 ಮುಖ್ಯಪ್ರಾಣನೆಂಬೊ ಗುರುವು ಹರಿಗೆ ಸಖ್ಯನಾದ ಬಂದ ದುಃಖ ಪರಿಹರಿಸಿ ಸುಖಬಡಿಸುವ ಸುವ್ವಿ ಬಂದ ದುಃಖ ಪರಿಹರಿಸಿ ಸುಖಬಡಿಸುವ ಮಾರುತನು ಹನುಮ ಭೀಮಸೇನ ರೂಪಗಳು ಸುವ್ವಿ 33 ಮೂರನೆ ಅವತಾರ ಆನಂದತೀರ್ಥರು ವೀರವೈಷ್ಣವರಿಗೆ ಆದಿಗುರುಗಳು ಸುವ್ವಿ ಪಾದ ನೆನೆದರೆ ಘೋರ ಸಂಸಾರವನು ನೀಗಿಸುವನು ಸುವ್ವಿ 34 ಘೋರ ಸಂಸಾರವನು ನೀಗಿಸುವ ಹಯವದನ ತನ್ನ ಪಾದದ ಸಮೀಪದಲಿಟ್ಟು ಸಲಹುವ ಸುವ್ವಿ ಪಾದದ ಸಮೀಪದಲಿಟ್ಟು ಸಲಹುವ ಹಯವದನ ಖೇದಗಳ ಬಿಡಿಸಿ ರಕ್ಷಿಸುವ ಸುವ್ವಿ 35
--------------
ವಾದಿರಾಜ
ಸೂರ್ಯಾಂತರ್ಗತ ನಾರಾಯಣ ಪಾಹಿ ಆರ್ಯ ಮಾರುತಿ ಪಂಚಪ್ರಾಣ ಪ ಭಾರ್ಯಳೆಂದೊಡಗೂಡಿ ಸರ್ವಜೀವರೊಳಿದ್ದು ವೀರ್ಯ ಕೊಡುತಲಿರ್ದ ಶರ್ವಾದಿ ವಂದ್ಯಾತಿಅ.ಪ. ದ್ರುಪದನ ಸುತೆ ನಿನ್ನ ಕರೆಯೆ ಅಂದು ಕೃಪಣ ವತ್ಸಲ ಶೀರೆ ಮಳೆಯೇ ಅಪರಿಮಿತವು ನೀರ ಸುರಿಯೆ ಸ್ವಾಮಿ ಕುಪಿತ ದೈತ್ಯರ ಗರ್ವ ಮುರಿಯೇ ಜನಸೋ ಜನರ ವಿಪತ್ತು ಕಳೆದೆ ಈ ಪರಿಯ ದೇವರನೆಲ್ಲಿ ಕಾಣೆನೊ ತಪನಕೋಟ ಪ್ರಕಾಶ ಬಲ ಉಳ್ಳ ಕಪಿಲರೂಪನೆ ಜ್ಞಾನದಾಯಕ 1 ಹೃದಯ ಮಂಟಪದೊಳಗೆಲ್ಲ ಪ್ರಾಣ- ದದುಭುತ ಮಹಿಮೆಯ ಬಲ್ಲ ಸದಮಲನಾಗಿ ತಾವೆಲ್ಲ ಕಾರ್ಯ ಮುದದಿ ಮಾಡಿಸುವ ಶ್ರೀನಲ್ಲ ಹದುಳ ಕೊಡುತಲಿ ಬದಿಲಿ ತಾನಿದ್ದು ಒದಗಿ ನಿನಗೆಲ್ಲ ಮದುವೆ ಮಾಡಿದ ಪದುಮಜಾಂಡೋದರ ಸುದತಿಯ ಮುದದಿ ರಮಿಸೆಂದು ಒದಗಿ ಬೇಡುವೆ 2 ಎನ್ನ ಬಿನ್ನಪವನ್ನು ಕೇಳೊ ಪ್ರಿಯ ಮನ್ನಿಸಿ ನೋಡೊ ದಯಾಳೋ ಹೆಣ್ಣಬಲೆಯ ಮಾತು ಕೇಳೂ ನಾನು ನಿನ್ನವಳಲ್ಲವೇನು ಹೇಳೋ ನಿನ್ನ ಮನದನುಮಾನ ತಿಳಿಯಿತು ಕನ್ಯಾವಸ್ಥೆಯು ಎನ್ನದೆನ್ನದೆ ಚೆನ್ನ ಶ್ರೀನಿಧಿವಿಠಲ ಪ್ರಾಯದ ಕನ್ನೆ ಇವಳನು ದೇವ ಕೂಡಿಕೊ 3
--------------
ಶ್ರೀನಿಧಿವಿಠಲರು
ಸೇತು ಮಾಧವರಾಯನಿಗೆ | ನೀನೆ | ಪ್ರೀತಿಯಾದವಾ | ಭೂತಳದೊಳಗತಿ ಖ್ಯಾತಿ ಮಾರುತಿ ದೇವಾ ಪ ಶ್ವೇತ ಶರೀರ | ಭೂತನಾಥನ ಪ್ರಿಯಾ ಭುಜಗಾಧಿಪಶಯ್ಯಾ | ಮಾತು ಮಾತಿಗೆ ನಗುತ ನೋಡುವ ದೇವ 1 ಭಕುತಿಕೊಡು ಬೇಗ ಎನಗೆ ಶ್ರೀ ಲಕುಮಿಪತಿ ಈಗ | ವಿಕಸಿತ ಮಹಾಕೃತು ಮಹಿಮಾ 2 ಆದಿದೈವನೆ ಸಕಲ ಜೀವಾದಿ ಭೇದವೆ | ಯಾದವ ಕುಲಮಣಿಯಾದ ಅಣೋರಣಿ |ಮಾಧವ ವಿಜಯವಿಠ್ಠಲ ರಘುರಾಮಾ 3
--------------
ವಿಜಯದಾಸ
ಹಣ್ಣು ಕೊಳ್ಳಿರೋ ಪುಣ್ಯವಂತರು ಹಣ್ಣು ಕೊಳ್ಳಿರೋ ಹಣ್ಣು ಕೊಳ್ಳಿರಯ್ಯಾನ್ನಂತ ಗುಣಮಹಿಮೆಯುಳ್ಳ ಧ್ರುವ ಹಣ್ಣು ಬಂದದೆ ನೋಡ್ಯಾನಂದೋ ಬ್ರಹ್ಮಾಪಾಟಿಯಿಂದ ಕಣ್ದೆರದು ಕೊಂಡವರು ಧನ್ಯ ಧನ್ಯರೊ 1 ಹಣ್ಣಿಗೊಂದು ಹೆಸರು ಇಲ್ಲ ಇನ್ನೊಂದು ಕೊಸರು ಇಲ್ಲ ಚೆನ್ನಾಗಿ ಉನ್ಮನವಾಗಿ ಹಣ್ಣ 2 ಅಣ್ಣಗಳ ಬಂದು ಕಣ್ಣುಗೆಟ್ಟು ಹೋಗಬ್ಯಾಡಿ ಸಣ್ಣ ದೊಡ್ಡರೊಳಗಿಹ್ಯ ಹಣ್ಣ 3 ಉತ್ತುಮರುದ್ದೇಶವಾಗಿ ಮತ್ತೆ ಹತ್ತುಭಾರೆ ತುತ್ತಿಗೊಮ್ಮೆ ಬಾಯಿದೆರೆವ ಹಣ್ಣು 4 ಬಿತ್ತಿಬೆಳೆದ ಫಲವಲ್ಲ ಹೊತ್ತುಮಾರುವದಲ್ಲ ಚಿತ್ತದೊಳಗ್ಹತ್ತಿಲಿಹ ಹಣ್ಣು 5 ನಾಲ್ಕು ಮಂದಿ ತಿಳಿಯದೆ ಹೋಕಹೋದರಾರು ಮಂದಿ ಪುಕ್ಕಸಾಟಿ ದಣಿದರ್ಹದಿನೆಂಟು ಮಂದಿ ಕಾಣಿರೋ 6 ಹಣ್ಣು ಕೊಂಡು ಮಹಿಪತಿಯ ಪುಣ್ಯ ಪೂರ್ವಾಜಿತ ತಾನೆಧನ್ಯ ಧನ್ಯವಾದ ಗುರುಕೃಪೆಯಿಂದ ಕಾಣಿರೋ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹನುಮ ಸದ್ಭಕ್ತರ ಪ್ರೇಮ ನೆನೆವರ ಮನದಿಷ್ಟ ಕನಿಕರದಿಂ ಕೊಡುವ ಪ ಕುಂತಿಗರ್ಭಜ ಬಲವಂತನೆನಿಸಿದ್ಯೊ ಭೀಮ ಪಂಥದಿಂ ಕರುಪನ ಸ್ವಂತು ಜೈಸಿದ್ಯೊ ವೀರ 1 ಮಧ್ವಕುಲದಿ ಜನಿಸಿ ಮಧ್ವಮುನಿಯೆನಿಸಿದಿಯೊ ತಿದ್ದಿ ಮಧ್ವಾಂತಗ್ರಂಥ ಸಿದ್ಧಾಂತಪಡಿಸಿದ್ಯೊ 2 ಅಂಜನ್ಯುದರದಿ ಬಂದು ಭಂಜಿಸಿ ಲಂಕೆಯ ಕಂಜಾಕ್ಷಿಯುಳ್ವøತ್ತಾಂತ ಕಂಜನಾಭನಿಗಿತ್ಯೊ 3 ಮಂಗಳಾಂಗನೆ ರಣರಂಗಮಧ್ಯದಿ ನೀ ಪಿಂಗದಸುರರ ಸದೆದು ಭಂಗಪಡಿಸಿದ್ಯೊ ಖಳರ 4 ಸೀತಾದೇವಿಯ ತಂದು ನಾಥ ಶ್ರೀರಾಮನಿಗಿತ್ತ ವಿ ಖ್ಯಾತ ಮಾರುತಿ ಎನ್ನ ಪ್ರೀತಿಲಿ ಸಲಹಯ್ಯ 5
--------------
ರಾಮದಾಸರು