ಒಟ್ಟು 1372 ಕಡೆಗಳಲ್ಲಿ , 97 ದಾಸರು , 1133 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವಿನರಿಯದೆ ಮರುಳಲೋಕ ಒಂದೊಂದು ಪರಿ ಗುರುಮಾಡಿಕೊಂಡುದರ ಹೊರವುತಿದೆ ಧರೆಯೊಳು ಬರಿದೆ ಭ್ರಮೆಗೊಂಡಿಹ್ಯದು ಪರಗತಿಯ ಜರೆದು ಶ್ರೀ ಗುರುಪಾದವನ್ನರಿಯದೆ 1 ಸತ್ವಧಾತುದ ನೆಲೆಯು ತತ್ವ ಮೋಹಲಾದನು ಮತ್ತೈದು ಮುದ್ರೆಗಳ ವ್ಯಾಪಿಸಿಹ ಪ್ರಾಣವನು ಮುದ್ರಿಸಿದಾತ ಪರಮಗುರುವು 2 ಸತ್ವ ರಜ ತಮವು ಮೊದಲಾದ ಗು- ಣತ್ವಗಳು ಪಂಚಭೂತಾತ್ಮದ ವಸ್ತಿ ವಿವರಣಗಳು ವಿಸ್ತಾರಗತಿಗಳನು ವಿಸ್ತರಿಸಿ ತೋರಿಸಿದಾತ ಸಾಕ್ಷಾತ ಗುರುವು 3 ಸ್ವಪ್ನ ಸುಷುಪ್ತಿ ಜಾಗ್ರತಿ ತ್ರಯವಸ್ಥಿತಿಗಳು ಪ್ರಾಣಪ್ರಣಮ್ಯ ಪ್ರವೃತ್ತಿ ನಿವೃತ್ತಿಗಳು ಶಕ್ತಿ ಉನ್ಮನಿಯ ಉದ್ಬವ ಗತಿಯು ತೋರಿಸಿದಾತ ಸಾಕ್ಷಾತ ಗುರುವು 4 ಹತ್ತು ಮತ್ತೆರಡು ಧ್ವನಿ ವತ್ತಿಗ್ಹೇಳೆನಿಸುವದ ರತ್ನ ಮೂರರ ಪ್ರಭೆಯ ದಾಟಿ ಸಂಜೀವನಿಯ ಸತ್ರಾವಿ ಜೀವನ ಕಳಾ ಮೃತವದೋರಿಸಿದಾತ ಸಾಕ್ಷಾತ ಗುರುವು 5 ಒತ್ತಿ ಆಧಾರ ಬಲದೆತ್ತಿ ಕುಂಡಲಣಿಯ ಕೆತ್ತಿ ಸರ್ಪೆತ್ತಿ ಮುಖ ಮಾಡಿ ಊಧ್ರ್ವ ಗತಿಯು ಮತ್ತೆ ಷಡಚಕ್ರಗಳ ಗತಿಗಳನು ದೋರಿದಾತ ಸಾಕ್ಷಾತ ಗುರುವು6 ಪತಿತ ಮಹಿಪತಿಯ ಪಾವನ್ನಗೈಸುತ್ತಮದಿ ಉತ್ಪತ್ತಿ ಸ್ಥಿತಿ ಲಯವು ತಾರಿಸಿ ಸ- ದ್ಗತಿಯು ನಿತ್ತಿಹ್ಯಾನಂದ ಘನ ಸತ್ಯ ಸದ್ಗುರು ಮೂರ್ತಿ ಸಾಕ್ಷಾತ ಪರಮಗುರುವು | 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುವಿನಾ ಯಾಕೆ ಮರೆಯುವಿರಣ್ಣಾ | ಈ ಲೋಕದೊಳಗ | ಶುಭ ಧರೆಯೊಳು ದೀನರುದ್ಧರಿಸುತ ಮೆರೆವಾ ಪ ಮನಸಿನ ಜಾಡ್ಯ ತನವನು ಬಿಡಿಸಿ | ಶ್ರವಣಾದಿಗಳಿಂದ | ಅನುವಾಗಿ ಬೋಧಾಮೃತವನೆ ಕುಡಿಸಿ | ಭಕ್ತಿಯ ಕಳೆಯಂಬಾ | ಘನವಾದಲಂಕಾರವನೆ ತೊಡಿಸೀ | ಯೋಗದ ಸಿರಿಯಿಂದಾ | ಚಿನುಮಯ ಮಂದಿರವನು ತೋರಿಸುವಾ 1 ನೀರಿನಾ ಬೊಬ್ಬುಳಿಯಂತೀ ತನುವು | ಮಿಂಚಿನಾ ತೆರನಂತೆ | ಮೃಗ | ನೀರಂತೆ ಕಾಣದೆ ಮೋಹಿಪ ಮನವು | ಇದನೆಚ್ಚದೆ ಬ್ಯಾಗ | ಜಾರಿ ಶುಭೇಚ್ಛೆ ವಿಚಾರಕ ತಂದು 2 ವೇದಾಂತದ ನುಡಿಯಾ | ಲೋಹ ಪರಸವ ನೆಶಿದಾ | ಸ್ವಾನುಭವ ಸುಖದಾ | ಗತಿ ಮತಿ ಕೂಡಿಸಿ ಗತಿಯನೆ ಕೊಡುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವೆ ಪರಬ್ರಹ್ಮ ವಾಸುದೇವಾರ್ಯಗುರುವೆ ಪರಬ್ರಹ್ಮ ಪಅರಿವು ಮರವೆಗಳ ಪರಿಯ ನಿರೂಪಿಸಿಅರಿ'ನ ಘನವಾಹ ತೆರಗೈದು ಪಾಲಿಪ ಅ.ಪಸುಖಬುದ್ಧಿುಂಪಾಪಾಸಕ್ತ ಮಾನಸರನುಯುಕುತಿುಂದಲಿ ಹರಿಭಕುತಿಗಳವಡಿಪ 1ಭಾಗವತಾರ್ಥದಿ ರಾಗವ ಪುಟ್ಟಿಸಿಹಾಗೆ ಗೀತಾಮೃತ ಸಾಗರದೆಡೆಗೊಯ್ವ 2ನಾನಾಮತಗಳೊಳು ಮಾನಿಸಹೊಗದಂತೆಶ್ರೀನಿವಾಸನ ಪಾದಧ್ಯಾನವ ಬಲಿಸುವ 3ಕಾಮಾದಿ ಕಲುತ ತಾಮಸ ಜನರನುಪ್ರೇಮದಿಂದಲಿ ಸಪ್ತ ಭೂ'ುಕೆಗೇರಿಪ 4ಒಂದೊಂದರೊಳು ಮತಿನಿಂದು ತಿಳಿದೊಳಿಸೆಂದು ನಡೆದೂ ಪೂರ್ಣಾನಂದರಹುದಮಾಳ್ಪ 5ಹೊರಗೊಳಗುಗಾಣದೆ ಬರಿಯರಿವಳಮಲಪರಮನೆ ನಾನೆಂಬ ಪರಿಗೈದು ಪೊರೆವ 6ಕರುಣದಿಂ ಚಿಕನಾಗಪುರದಿ ಭಜಕರಿಗೆಕರದು ಜ್ಞಾನಾಮೃತವೆರೆವ ವಾಸುದೇವಾರ್ಯ 7
--------------
ವೆಂಕಟದಾಸರು
ಗುರುಸೇವೆ ನಿರತರಿಗೆ ನಮೋ ನಮೋ ಪ ಅರಿವು ನಿಲ್ಲಿಸಿ ಪರಸಾಧನದಿರುತಿಹ್ಯ ಪರಮಪಾವನರಿಗೆ ನಮೋ ನಮೋ ಅ.ಪ ತಾಪಸಾರ್ಯರಿಗೆ ನಮೋ ನಮೋ ಮಹ ಪಾಪ ದೂರರಿಗೆ ನಮೋ ನಮೋ ಕೋಪಲೋಪರಿಗೆ ನಮೋ ನಮೋ ಇಹ ವ್ಯಾಪಾರರಿತವರಿಗೆ ನಮೋ ನಮೋ ತಾಪತ್ರಯವ ನೀಗಿ ಶ್ರೀಪತಿ ಚರಣವ ಗೌಪ್ಯದಿ ನೆನೆವರ್ಗೆ ನಮೋ ನಮೋ 1 ವೇದ ಸಂಪನ್ನರಿಗೆ ನಮೋ ನಮೋ ಭವ ಬಾಧೆ ಗೆಲಿದವರಿಗೆ ನಮೋ ನಮೋ ಸಾಧನ ಚತುಷ್ಟರಿಗೆ ನಮೋ ನಮೋ ಮಹ ಸಾಧುಸಂತರಿಗೆ ನಮೋ ನಮೋ ವಾದಿ ಮೂರ್ಖರೊಳು ವಾದಿಸದಂಥ ಸು ಬೋಧ ಗುರುವರಗೆ ನಮೋ ನಮೋ 2 ಭಾಗವತರಿಗೆ ನಮೋ ನಮೋ ಇಹ ಭೋಗನಿರಾಸ್ಯರಿಗೆ ನಮೋ ನಮೋ ಯೋಗಸಾಧಕರಿಗೆ ನಮೋ ನಮೋ ಮಹ ಯೋಗಿ ಮಹಾತ್ಮರಿಗೆ ನಮೋ ನಮೋ ಆಗಯೀಗೆನ್ನದೆ ಸಾಗರನಿಲಯನನ್ನ ಬಾಗಿಭಜಿಪರಿಗೆ ನಮೋ ನಮೋ 3 ಭಕ್ತಜನರಿಗೆ ನಮೋ ನಮೋ ವಿ ರಕ್ತ ಪುರುಷರಿಗೆ ನಮೋ ನಮೋ ಸತ್ಯಶೀಲರಿಗೆ ನಮೋ ನಮೋ ತಮ್ಮ ಗುರ್ತು ಅರ್ತವರಿಗೆ ನಮೋ ನಮೋ ಭಕ್ತಿಯುಕ್ತಿ ವಹಿಸೆತ್ತಗಲದಂಥ ಚಿತ್ತಶುದ್ಧರಿಗೆ ನಮೋ ನಮೋ 4 ನಿತ್ಯ ನಿರ್ಮಲರಿಗೆ ನಮೋ ನಮೋ ಭವ ಮರ್ತ ನಿರ್ತರಿಗೆ ನಮೋ ನಮೋ ತ ತ್ವರ್ಥಿಕರಿಗೆ ನಮೋ ನಮೋ ಮಹ ಮುಕ್ತಿ ಸಾಧ್ಯರಿಗೆ ನಮೋ ನಮೋ ಮೃತ್ಯುವ ಗೆಲಿದು ಕರ್ತ ಶ್ರೀರಾಮನ ಅರ್ತವರಿಗೆ ಬಹು ನಮೋ ನಮೋ 5
--------------
ರಾಮದಾಸರು
ಗುರುಹಿರಿಯರನುಸರಿಸಿ ಹÀರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿರೊ ಪ. ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದಿರಿರಕ್ಕಸಾರಿಯ ಭಕ್ತರೊಳು ಸೇರಿ ಮುಂದೆ ಸೆರೆ-ಯಿಕ್ಕದಂತವನ ಮರೆಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆ ಸುಖವೆಂಬುದಿಲ್ಲವು ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವ-ನುಂಬ ಸಂಭ್ರಮಕೆ ಸರಿಗಾಣೆನು 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಭಿಕ್ಷುಕರು ಬಂದು ಬೈದ್ಹೋಗುವಾಗಇಕ್ಕಿ ಪೊರೆವುದಕೆ ಬಗೆಯಿಲ್ಲದ ದರಿದ್ರಂಗೆಸೌಖ್ಯವೆತ್ತಣದು ಮನುಜರಿಗೆ 3 ತಾಯ ಮಾರಿ ತೊತ್ತಕೊಂಬ ಪಾಮರನಂತೆಹೇಯಕುಜನರ ಚರಣಕೆರಗಿಶ್ರೀಯರಸನಂಘ್ರಿಗಳ ನೆನೆಯಲೊಲ್ಲದ ಮನುಜರಿಗೆಆಯುಷ್ಯ ಬರಿದೆ ಹೋಯಿತಲ್ಲ 4 ಐವರಿತ್ತೊಡವೆಯನು ಅವರವರು ಒಯ್ವರು ಮ-ತ್ತೈವರೆಂಬುವರು ತೊಲಗುವರುಮೈಯ ಹತ್ತರಕೂಟ ಹರಿದು ಹೋಗುವ ಮುನ್ನಕೈಯ ಪಿಡಿದೆತ್ತುವರ ಕಾಣೆ 5 ಕಾಲು ಜವಗುಂದಿದವು ರೋಗರುಜಿನಗಳಿಂದಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖಘಂಟೆಯೊಳಗಿನನಾಲಿಗೆಗೆ ನಾದವೆಲ್ಲಿಹುದೊ 6 ಈಗಲೆ ಹರಿನಾಮನಾದದಿಂದೆಚ್ಚೆತ್ತುನಾಗಶಯನನ ಪುರದ ಪಥವಆಗಮಜ್ಞರ ಕೈಯ ಕೇಳಿಕೊಳ್ಳಿರೊ ನೀವುಈ ಗಾಳಿದೀಪ ಸ್ಥಿರವಲ್ಲ7 ಜರೆ ಬಂದು ಕಡೆಯಲ್ಲಿ ಗುರುಗುರುಟ್ಟುವಾಗಶರೀರಸಂಬಂಧಿಗಳ ಕಾಟತರುಣಿಯರ ಮೇಲಾಸೆ ತಮ್ಮ ಹಿತವರಿಯದೆಬರಿದೆ ಭವದೊಳಗೆ ಬಳಲದಿರಿ 8 ವೇದಶಾಸ್ತ್ರವನೋದಲಿಲ್ಲ ಜಪತಪಸಾಧು ಸತ್ಕರ್ಮಗಳ ಸರಕಿಲ್ಲಮಾಧವನ ಪೂಜೆಯನು ಮಾಡಿದವನಲ್ಲ ಹರಿಪಾದತೀರ್ಥ ವ್ರತಗಳಿಲ್ಲ 9 ಊಧ್ರ್ವಪುಂಢ್ರsÀಗಳೆಲ್ಲಿ ಹರಿಯ ಲಾಂಛನವೆಲ್ಲಿಪದ್ಮಾಕ್ಷಿ ಶ್ರೀತುಲಸಿ ಸರಗಳೆಲ್ಲಿಸದ್ಧರ್ಮಪಥವೆಲ್ಲಿ ವಿಷಯಾಂಧಕೂಪದೊಳುಬಿದ್ದು ಹೋರಳುವ ಮನುಜರೆಲ್ಲಿ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ 11 ಉಕ್ಕಿ ಹರಿಯನೆ ಪೊಗಳಿ ಅವನಂಗಣದಿ ಹೊರಳಿಶುಷ್ಕ ತರ್ಕಗಳ ಮೇಲೆ ಉಗುಳಿಭಕ್ತಿಜ್ಞಾನಗಳಿರಲಿ ಮಿಕ್ಕ ಪಥದಿಂ ಮರಳಿಮುಕ್ತಿಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆಗಡರದ ಮುನ್ನಕಳ್ಳರೈವರ ಕಾಟದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭದಲಿ ಬಚ್ಚಿಡಿರೊ 13 ಮಲಮೂತ್ರರಕ್ತಮಾಂಸದ ರಾಸಿಗಳು ಕೂಡಿಎಲುವಿನ ಬಿಲದಲ್ಲಿ ಗೂಡಮಾಡಿಬೆಳೆಸಿದೀ ತನುವೆಂಬ ನರಕದಾಸೆಯ ಬಿಟ್ಟುಜಲಜನಾಭನ ಸೇರಿಕೊಳ್ಳಿರೊ14 ಒಂಬತ್ತು ಛಿದ್ರವುಳ್ಳ ದೇಹವೆಂಬ ಮಡಕೆಯಲ್ಲಿತುಂಬಿದ ವಾಯು ಸ್ಥಿರವೆಂದುನಂಬಿಕೊಂಡಿರಬೇಡಿ ಹಯವದನ ಹರಿಯ ಪಾ-ದಾಂಬುಜವ ಸೇರಿ ಬದುಕಿರೊ 15
--------------
ವಾದಿರಾಜ
ಗೋಪಾಲ ದಾಸರಾಯ ನಿನ್ನಯ ಪಾದ ನಾ ಪೊಂದಿದೆನೊ ನಿಶ್ಚಯ ಪ ಈ ಪೀಡಿಸುವ ತ್ರಯತಾಪಗಳೋಡಿಸಿ ಕೈ ಪಿಡಿದೆÀನ್ನ ಕಾಪಾಡಿದ ಗುರುರಾಯ ಅ.ಪ. ಘೋರ ವ್ಯಾಧಿಯನೆ ನೋಡಿ | ವಿಜಯರಾಯ ಭೂರಿ ಕರುಣವ ಮಾಡಿ ತೋರಿದರಿವರೆ ಉದ್ಧಾರಕರೆಂದಂದಿ ಪಾದ ಸಾರಿದೆ ಸಲಹೆಂದು || ಸೂರಿಜನ ಸಂಪ್ರೀಯ ಸುಗುಣೋದಾರ ದುರುಳನ ದೋಷ ನಿಚಯವ ದೂರಗೈಸಿ ದಯಾಂಬುನಿಧೆ ನಿ ವಾರಿಸದೆ ಕರಪಿಡಿದು ಕರುಣದಿ ಅಪ ಮೃತ್ಯುಯವನು ತಂದೆ ಎನ್ನೊಳಗಿದ್ದ 1 ಅಪರಾಧಗಳ ಮರೆದೆ ಚಪಲ ಚಿತ್ತನಿಗೊಲಿದು ವಿಪುಲ ಮತಿಯನಿತ್ತು ನಿಪುಣನೆಂದೆನಿಸಿದೆ ತಪಸಿಗಳಿಂದಲಿ ಕೃಪಣ ವತ್ಸಲ ನಿನ್ನ ಕರುಣೆಗೆ ಉಪಮೆಗಾಣೆನೊ ಸಂತತವು ಕಾ ಶ್ಯಪಿಯೊಳಗೆ ಬುಧರಿಂದ ಜಗದಾ ಧಿಪನ ಕಿಂಕರನೆನಿಸಿ ಮೆರೆಯುವ 2 ಎನ್ನ ಪಾಲಿಸಿದಂದದಿ ಸಕಲ ಪ್ರ ಪನ್ನರ ಸಲಹೊ ಮೋದಿ ಅನ್ಯರಿಗೀಪರಿ ಬಿನ್ನಪ ಗೈಯೆ ಜ ಗನ್ನಾಥ ವಿಠಲನ ಸನ್ನುತಿಸುವ ಧೀರ || ನಿನ್ನ ನಂಬಿದ ಜನರಿಗೆಲ್ಲಿಯ ಬನ್ನವೋ ಭಕ್ತಾನು ಕಂಪಿಶ ರಣ್ಯ ಬಂದೆನೊ ಈ ಸಮಯದಿಅ ಹರ್ನಿಶಿ ಧ್ಯಾನಿಸುವೆ ನಿನ್ನನು 3
--------------
ಜಗನ್ನಾಥದಾಸರು
ಗೋಪೀಮಾನ ರಂಜನ ಶ್ರೀಪತಿ ಕರುಣಾಳು ವ್ಯಾಪಿಸಿಕೊಂಡಿಹ ಮಾಮಕ ತಾಪವ ವೋಡಿಸು ಸುಲಭದಿ ಪ. ಸೌಂದರ್ಯಾಮೃತ ಸಾರಾನಂದಾತ್ಮಕ ದೇಹ ವೃಂದಾರಕ ಗಣ ನಯನಾ ನಂದನ ನಿಖಿಳಾತ್ಮಾತ್ರಯ ನಿತ್ಯಾವ್ಯಯ ಸತ್ಯಾವರ ಭಕ್ತಾಸ್ಪದ ಸುಮುಖ 1 ಸುಭಗಾಂಬುದನಿಭ ಗೋವರ ಋಭುಗಣನುತ ಚರಣಾ ಇಭರಾಟ್ಕøತ ಕರುಣಾಖಿಳ ವಿಭವಾಶ್ರಯ ತರುಣಿಗಣ ಶುಭ ಸಂಚಯ ಕರುಣಾ ನಿಜಭರಣಾದೃತ ಕರಣಾ 2 ಶೃಂಗಾರ ವಿಲಾಸಿನಿಜಾಪಾಂಗಾಹೃತ ಗೋಪಕತ ಸ್ವಂಗೀಕೃತ ಪ್ರೇಮಭವಾಲಿಂಗಿತ ಶುಭಮೂರ್ತಿ ಅಂಗಜಜನಕಾದ್ಭುತ ಸಾರಂಗ ಮಮತ ಶೇಷಗಿರಿ ಶೃಂಗಾಧಿಷ್ಟಿತ ಕರುಣಾಪಾಂಗವ ದಯಮಾಡೆನುತಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಗೌರೀಶ ಮೃತ್ಯುಂಜಯನುತ ಪಾಲಯ ಗೌರೀಶ ಮೃತ್ಯುಂಜಯ ಪ ಸುಮಶರನಾಶ ಸುಮನರಪೋಷ ಶಮೆಶಾಂತಿದಯಭೂತೇಶ 1 ಶಂಕರ ಶಶಿಧರ ಕಿಂಕರ ಪ್ರಿಯಕರ ಶಂಕರಿಮನೋಹರ 2 ಉಮೆ ಪ್ರಿಯನಾಥ ಅಮಿತವರದಾತ ಅಮರಾದಿಸುರಾರ್ಚಿತ 3 ವರಮಹಲಿಂಗ ಪರಿಭವಭಂಗ ಪರತರ ಪಾವನಾಂಗ 4 ಗಜಚರ್ಮಾಂಬರ ಭುಜಗಾಲಂಕಾರ ಸುಜನಾತ್ಮ ಸುಖಂಕರ 5 ಪುರತ್ರಯ ಸಂಹರ ಪರಿಪಕ್ವರಾಧಾರ ನಿರಂಜನ ನಿರಾಕಾರ 6 ಕೆಂಡನಯನ ರುಂಡಮಾಲನೆ ಹರಣ 7 ಬೇಡುವೆನಭವ ಕಾಡದೆ ಪರಶಿವ ನೀಡು ಎನ್ನಗೆ ವರವ 8 ಭೂಮಿತ್ರಯಕೆ ಘನಸ್ವಾಮಿ ಶ್ರೀರಾಮನ ನಾಮ ಪಾಲಿಸು ಪಾವನ 9
--------------
ರಾಮದಾಸರು
ಚಂದಲಾ ಪರಮೇಶ್ವರಿ ವಂದಿಸುವೆನು ಚಂದಲಾ ಪರಮೇಶ್ವರಿ ಪ ಚೆಂದಾಗಿ ಮನಸಿಗಾನಂದ ನೀಡುವ ನಿನ್ನಮುಂದೆಯೆ ಕಂದ ತಾ ಬಂದು ನಿಂದಿಹೆನವ್ವ ಅ.ಪ. ಘನದಯಾವಂತೆ ಕಾಯೆ ಇದು ನಿನ್ನಅನುಗ್ರಹವೆಂಬೆ ತಾಯೆಕನಸಿನೊಳಿರಲಿಲ್ಲ ಮನಸಿನೊಳಿರಲಿಲ್ಲಜನನಿ ನೀನೆ ಕರೆಸಿ ದರುಶನವಿತ್ತವ್ವ 1 ಸನಿತೆಯೊಳ್ಬಂದು ನಿಂತು ದಯಾಮೃತವಹನಿಸುವಿ ಜನರಿಂಗಿತುಜನರ ಪಾವನ ಮಾಡಿ ಘನ ಸಂತಸ ನೀಡಿಅನುದಿನ ಜನ ಪಾಡಿ ಕುಣಿಯುವಂತೆ ಕೃಪೆ ಮಾಡೆ 2 ಸದಯಾಮೂರ್ತಿಯು ನೀ ಸತ್ಯ ನಿನ್ನಯ ಪಾದಪದುಮಕೆ ಮಣಿಯುವೆ ನಿತ್ಯಗದುಗಿನ ವೀರನಾರಾಯಣನೆನ್ನಯಹೃದಯದಿ ಸತತ ನಿಲುವಂತೆ ಕರುಣಿಸೌ 3
--------------
ವೀರನಾರಾಯಣ
ಚದುರೇ ವೃಂದಾವನದೊಳು ನಿಂತಿಹನ್ಯಾರೇ ಪೇಳಮ್ಮಯ್ಯಾ ಪ ಸತ್ ಸಖಿಯರಿಗುಣಿಸುವ ಜಾರಚೋರ ಶ್ರೀಕೃಷ್ಣ ಕಾಣಮ್ಮಾ ಅ.ಪ. ನೀರೇ ನೋಡೋಣು ಬನ್ನಿರಿ ಎಂದುಈ ಬಾಲೇರು ಗೋಪಾಲನ ಗಾನಕೆ ಬಂದು ಬೆದರುತ ಮನದೊಳು ಮದನಾಟಕೆ ನಿಂದೂಮೋರೆಯ ತಿರುವುತ ಅಂದು ಮಾರನಯ್ಯ ತವ ಚಾರುಧರಾಮೃತ ಸೂರೆಗೈಯ್ಯೋ ಸದ್ಧೀರಿಯರೊ ನಾವು 1 ಬಾಲೆ ನಿನ್ನಾಳುವ ದಾರಿ ಬ್ಯಾರಿಲ್ಲಾ ಕಾಲಬಂದೊದಗದು ಕೇಳೆನ್ನ ಸೊಲ್ಲ ಮತ್ತಾವದೊ ತಂಗಾಳಿ ಬೀಸುವ ವ್ಯಾಳೆ ಬಂತಲ್ಲಾ ಮೋಹಿಸಿ ಬಂದೆವೊ ನಲ್ಲಾ ಫುಲ್ಲಲೋಚನ ಮೃದು ಮಲ್ಲಿಗೆ ಮುಡಿಸಿ ಮೆಲ್ಲಗೆ ಮರ್ದಿಸು ಮೃದು ಚಲ್ವಯರುಹರೆ 2 ಸಿಂಧೂ ರಾಜಕುಮಾರಿಯ ರಮಣ ಶರದಿಂದೂ ಮಂಡಲ ಮುಟ್ಟುತಲಿದೆ ಧ್ವನಿ ಹಸನಾ ಶಂಭೂರ ಶತ್ರಾದಿಗಳುಗರೆವರು ಪೂಮಳಿ ನಾನಾ ಗಣಶಿರಿಸುತ ಮರುಳಾಗಿ ಪೂ ಬಾಣಾನಾಟವನೋಡುತ ನಾರಿಯ ತ್ಯಜಿಸದೆ ಪರನಾರಿಯ ರೂಪದಿಂದ್ರಮಿಪ ಮುರಾರೇ 3 ಸುರನದಿ ಸ್ಮರಸುತ ರಾಣಿ ನಾಟ್ಯವನಾಡುತ ನವನವ ಪಾಡುತ ದಿದ್ಧಿದ್ಧಿಮಿಕಿಟ ತಾಂ ತಾಳದಿ ನಲಿಯುತ 4 ಶಶಿಸೂರ್ಯನೆಳಸನ್ನಿಭ ಪ್ರಖನಕರಾ ಸರಸೀಜಾದಳ ನುತ ಭಾವಿ ಸಮೀರಾ ಷಟ್ ಶತ ಬಂದು ವಿಂಶತಿಹಂ ಸಾಖ್ಯ ಮಂತ್ರ ಸಹಸ್ತಾದಿಂದ ಸೇವಿಪ ಮಧ್ವಮಧೀಶನ ಲೀಲೆಯನೆನಿಪರ ಬಂದು ತೋರುವಾತ ತಂದೆವರದಗೋಪಾಲವಿಠಲನು 5
--------------
ತಂದೆವರದಗೋಪಾಲವಿಠಲರು
ಚಂದ್ರನ ನೋಡಿರೈ ಸುಶೀಲೇಂದ್ರ ಪಾಡಿರೈ ಸುಜನ ಮಂದಾರ | ಮಾಘ ವಿರೋಧಿ ಸುಮ ತಪಯೋಗಿ ಪ ಯತಿ ಕುಲವರ್ಯ ಸುವೃತೀಂದ್ರ ಕರಾಂಬುಜ | ಜಾತ ಜಿತ ಮನೋಜಾತ || ಪೃಥ್ವಿ ಸುರಾರ್ಚಿತ ಪತಿತ ಮತಾರಣ್ಯಜಾತ ವೇದಸನೀತ ನಳಿನ ಷಟ್ಚರಣ ಅತಿಶಯ ವಿಭವದಿ ಜಗದಿ ಮೆರೆದರವಿತೇಜ ಕುಜನ ಸರೋಜ1 ವರದುಕೂಲದಿ ಪರಿಶೋಭಿಪರಿತ್ತಿಗ್ರಾಮ ಕೃತ ನಿಜಧಾಮ ಪೂರ್ಣಸುಪ್ರೇಮ ಪಡೆದಸನ್ಮಹಿಮ || ಪರಿಮಳ ಸುಧಾನ್ಯಾಯಾಮೃತ ತತ್ವದಸಾರವರೀತ ಗಂಭೀರ ಧರಣಿ ಸುರಾಗ್ರಣಿ ಸುವೃತೀಂದ್ರ ಹೃಕುಮದ ಸುಮನ ಶರತದ 2 ಅಕ್ಷಯ ವತ್ಸರಾಷಾಢ ಸುನೀತ ತಿಥಿ ತ್ರಯದಲಿ | ಲಕ್ಷ್ಯವಿಟ್ಟು ಲಯ ಚಿಂತನೆ ಗೈದ್ಹರುಷದಲಿ ಸುಸ್ವಾಂತದಲಿ || ತ್ರ್ಯಕ್ಷವಿನುತ ಶಾಮಸುಂದರನಂಘ್ರಿ ಧ್ಯಾನಿಸುತಕ್ಷೋಣಿತ್ಯಜಿಸುತ ಚಕೋರ 3
--------------
ಶಾಮಸುಂದರ ವಿಠಲ
ಚಪ್ಪರಿಸಲು ಬೇಕಾದವರು ಬನ್ನಿ ಇಷ್ಪೊದು ಮಧ್ವಾಚಾರ್ಯರಲ್ಲಿದು ಪೆಪ್ಪರ್ ಮೆಂಟ್ ಪ. ಚೀಪೂತಲಿದ್ದರು ಸವೆಯುವದಲ್ಲವು ಜಾತಿ ಭೇದವಿಲ್ಲ ಇದಕೆ ಭಕ್ತಿ ಕಾರಣ ನೀತಿ ಶಾಸ್ತ್ರಾಮೂಲಾಧಾರದ ಪೆಪ್ಪರ್ ಮೆಂಟ್ 1 ಸಾಸಿವೆಯಷ್ಟೊತ್ತು ನೆನದರೆ ಸಾಕೆಂಬ ಕÀಲಿಯುಗ ಮಹಿಮೆಯ ಪೆಪ್ಪರ್ ಮೆಂಟ್ 2 ಆಕುಲ ಈಕುಲ ಇಲ್ಲವೆಂಬುದನರಿಸಲು ನಾಲ್ಕು ವೇದವನೊಂದೇ ಬಾರಿಗೆ ನಾಲ್ಕು ಹಸ್ತದಿ ತಂದ ಪೆಪ್ಪರ್ ಮೆಂಟ್ 3 ನಾಕಚಾರವಂದ್ಯನ ಸ್ತುತಿಗೊದಗುವ ಸಾಕುವ ಭಕ್ತರಿಗಮೃತನೆರೆವ ಸಾಕಾರ ರೂಪದ ಪೆಪ್ಪರ್ ಮೆಂಟ್ 4 ಭೂಮಿಯ ತಂದ ಸೂಕರÀ ರೂಪ ಮೊರೆಯ ತೋರಿದ ಪೆಪ್ಪರ್ ಮೆಂಟ್ 5 ಧರುಣಿಯ ಪಾದದಿಂದಾಕಾಶಾಪಾತಾಳಾತ್ವರ ಧರುಣಿ ಪಾಲರ ಉರುಳಿಸಿ ಕೆಡಹಿದ ಕೊಡಲಿ ಮಹಿಮೆಯ ಪೆಪ್ಪರ್ ಮೆಂಟ್ 6 ಮಂಗನ ಜೊತೆಯಲಿ ಸೇರಿ ನಾರಿಯ ಭೂಜಂಗುಳಿ ನಡುಗಲು ಭೋರ್ಗರೆಯಲು ಮಳೆ ಮಂದರ ನೆಗÀಹಿದ ಪೆಪ್ಪರ್ ಮೆಂಟ್ 7 ರುಚಿ ಪೆಪ್ಪರ್ ಮೆಂಟ್ 8 ಕತ್ತಲೆಯನ್ನು ಹರಿಸುವ ದಿವ್ಯಸೂರ್ಯತೇಜ ಅರ್ಥಿಲಿ ಬುಧರು ಚಪ್ಪರಿಪ ದಿವ್ಯ ಪೆಪ್ಪರ್ ಮೆಂಟ್ 9
--------------
ಸರಸ್ವತಿ ಬಾಯಿ
ಚ್ಚಂದಿರವದನೆ ಶಾರದೆ ಪ ಇಂದೀವರಾಕ್ಷಿ ಶತಾನಂದನ ಪ್ರಿಯೆ ದೇವಿ ಕುಂದು ನೋಡದೆ ಶ್ರುತಿವಂದೆ ಜ್ಞಾನವ ನೀಡೆ ಅ.ಪ. ಸಿತಾಬ್ಜಾಸನೆ ಸುಖದಾಯಕಿ ಸುರ ನಾಥಾರಾಧಿತೆ ವಿಶ್ವನಾಯಕೀ ವೀತದುರಿತೆ ಶಿವ ಮಾತೆ ಸದ್ಗುಣಮಣಿ ವಾಗ್ದೇವಿ ಮಾತೆ 1 ಕೋಕಿಲವಾಣಿ ಕವಿಸೇವಿತೆ ಎನ್ನ ವಾಕು ಲಾಲಿಸೆ ಮನಿವಂದಿತೆ ತೋಕನೆಂದು ಸುವಿವೇಕ ಬುದ್ಧಿಯನಿತ್ತು ವಾಕು ಮನ್ನಿಸು ತಾಯೆ 2 ಪಾತಕಿಗಳೊಡನಾಡಿ ನಾ ನಿನ್ನ ಪೋತಾಬ್ಜಪದ ಭಜಿಸದ್ಹೋದೆ ನಾ ಪಾತಕವೆಣಿಸದೆ ಸೀತಾರಮಣ ಜಗ ನ್ನಾಥವಿಠ್ಠಲನಘ್ರಿ ಗೀತಾಮೃತವನುಣಿಸು 3
--------------
ಜಗನ್ನಾಥದಾಸರು
ಛಲಾವ್ಯಾಕೊ ನಿನಗೆ ಎನ್ನಲಿ ಪ ಛಲಾವ್ಯಾಕೊ ಕೋಲಾಚಲವೇಂಕಟ ಫಲಾ ನೀಡಿ ನೀ ಭಲಾನೆನಿಸೊ ದೇವಾ ಅ.ಪ ಧರಾತಳದಿ ಭೂಧರಾಗ್ರಮಂದಿರ ಪರಾವರೇಶನೆ ದರಾರಿಕರಶೂರ 1 ರಮಾವರನೆ ತವ ಸಮಾನರಾಗಿಹ ಸುಮಾನಸಾರ್ಕರ ಕ್ಷಮಾತಳದಿ ಕಾಣೆ 2 ಕುಲಾಲಕೃತ ಮೃತ್ ಕಲಾಪಧರಮಹಾ ಉಲಾಯುಗಾತ್ಮಜ ಬಲಾರಿಸುತಸುಖ 3 ಶತ್ರುಬವರದೊಳು ವೃತ್ರಾರಿತನಯನ ಮಿತ್ರಾನ ತೋರಿ ಪೊರೆದ್ಯೊ ಶತ್ರುಹನನದೇವ 4 ತಕ್ಷಣದಲಿ ಸಾಸಿರಾಕ್ಷ ತನಯನ ಪೊರೆದಿ 5 ಭರ್ಮಾನಸ್ತ್ರದ ನಿಜ ಮರ್ಮವರಿತು ನೀ ಧರ್ಮಾಪೌತ್ರನ ಕಾಯ್ದಿ ಸುಧರ್ಮನಾಮಕ ನಿನಗೆ 6 ದಶಾಸ್ಯ ಮುಖಮಹನಿಶಾಚರೇಶರ ದಶಾಕಳದ ಮಹಾ ದಶಾವತಾರನೆ 7 ವಟಾದ ಎಲೆಸಂಪುಟಾದಲೊರಗುಂ - ಗುಟಾವ ನುಂಬುವ ದಿಟಾ ವಿಶ್ವೋದರ 8 ದಾತಾ ಗುರುಜಗನ್ನಾಥ ವಿಠಲ ನಿಜ ದೂತಾಪಾಲಕನೆಂದು ಖ್ಯಾತಾನಾಗಿಹ ನಿನಗೆ 9
--------------
ಗುರುಜಗನ್ನಾಥದಾಸರು
ಛೀ ಛೀ ಮನವೆ ನಾಚದ ತನುವೆನೀಚವೃತ್ತಿಯ ಬಿಟ್ಟುನೆನೆ ಕಂಡ್ಯ ಹರಿಯ ಪ. ಕಿವಿಗೊಟ್ಟು ಗಂಟೆಯ ನಾದಕ್ಕೆ ಹುಲ್ಲೆಯನಿವಹ ಬಲೆಗೆ ಸಿಕ್ಕಿ ಬಿದ್ದುದನರಿಯನವ ಯೌವನೆಯರ ಕೋಕಿಲಾಲಾಪದಸವಿನುಡಿಗೇಳದಚ್ಯುತನ ಕಥೆ ಕೇಳೊ 1 ಪಣ್ಣೆಂದು ಭ್ರಮಿಸಿ ಪತಂಗ ದೀಪದಿ ಬಿದ್ದುಉಣ್ಣದುರಿವುದ ನೀ ಕಂಡು ಕಂಡರಿಯಬಣ್ಣದಬಲೆಯರ ರೂಪಿಗೆ ಮರುಳಾಗಿಮಣ್ಣ ತಿನ್ನದೆ ಮಾಧವನ್ನ ನೀ ಸ್ಮರಿಸೋ 2 ಗಾಣದ ತುದಿಯ ಮಾಂಸವ ಮೆಲ್ಲುವ ಮತ್ಸ್ಯಪ್ರಾಣವ ಬಿಡುವುದಂಗನೆಯರಧರವಮಾಣದೆ ಬಯಸಿ ಕೆಡದೆ ಶ್ರೀಮನ್ನಾರಾ-ಯಣ ನಾಮಾಮೃತಸವಿ ಎಲೆ ಮನವೆ 3 ಕರಿ ಕರಿಣಿಯ ಸ್ಪರುಶಕೆ ಪೋಗಿಕುಳಿಯ ಬಿದ್ದುದ ನೀ ಕಂಡು ಕಂಡರಿಯಲಲನೆಯರಾಲಿಂಗನಕೆÀಳೆಸದೆ ಸಿರಿ-ಲಲನೇಶನಂಘ್ರಿಯ ಅಪ್ಪಿಕೋ ಮನವೆ 4 ಅಳಿ ಪರಿಮಳಕ್ಕಾಗಿ ನಳಿನದೊಳಗೆ ಸಿಕ್ಕಿಅಳಿವಂತಂಗನೆಯ ಮೈಗಂಧವ ಬಯಸಿಬಳಲದೆ ವರದ ಶ್ರೀಕೃಷ್ಣನಂಘ್ರಿಯೊಳಿಪ್ಪತುಳಸಿಯನಾಘ್ರಾಣಿಸು ಕಂಡ್ಯಮನವೆ 5
--------------
ವ್ಯಾಸರಾಯರು