ಒಟ್ಟು 1890 ಕಡೆಗಳಲ್ಲಿ , 106 ದಾಸರು , 1489 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಮಹರ ಒಬ್ಬ ತಾನೆ ಬಲ್ಲಾ | ರಾಮ ರಾಮ ಸೀತಾರಾಮ ರಾಮನಲ್ಲದಿಲ್ಲವೆಂದು ಪ ಕೈಯಲಿ ಕಿನ್ನರಿ ಧರಿಸಿ ಸಿರಿಮೊಗದಿಂದ | ಕೈಲಾಸಗಿರಿಯಲ್ಲಿ ಪಾರ್ವತಿ ಕೂಡ ಜಗ ದಯ್ಯನಯ್ಯ ಜಗದೊಡಿಯ ರಾಮನಲ್ಲದಿಲ್ಲೆಂದು 1 ಫಣಿಯಾಭರಣವು ಪೆಡೆಯೆತ್ತಿ ಇರಲು | ಮಣಿ ರುಂಡಮಾಲೆ ತೂಗಾಡಲು | ಕುಣಿದು ಕಣಕಾಲಿಂದ ಥಕ್ ಥಕ್ ಥೈ ರು ಪತಿ ಸರ್ವೋತ್ತಮ ರಾಮನಲ್ಲದಿಲ್ಲವೆಂದು 2 ಕಾಳಕೂಟದ ವಿಷಬಿಂದು ಮಾತುರನುಂಗೆ | ತಾಳಲಾರದೆ ತಳಮಳವಗೊಂಡು | ಕಾಳಿಮರ್ದನ ಕಮಲಾಯತಾಕ್ಷ ಎನ್ನ | ಪಾಲಿಸಿದ ಪರಮಾತ್ಮ ರಾಮನಲ್ಲದಿಲ್ಲವೆಂದು3 ಗಜಮುಖ ತಾಳವ ಪಿಡಿದು ತಥೈ ಎನ್ನಿ | ಅಜಸುತ ರಿಪು ಮದ್ದಳಿಯೆ ಮುಟ್ಟಿ | ಗಜ ಚರ್ಮಾಂಬರ ಗಾಯನವ ಮಾಡುತ-ತ್ರಿ | ಜಗಾಧಿಪತಿ | ವಿಷ್ಣು ರಾಮನಲ್ಲದಿಲ್ಲವೆಂದು 4 ಆರು ಮುಖದವ ಶಂಖವನ್ನು ಊದೆ | ಭೈರವ ನಾಗಸ್ವರವ ನುಡಿಸೆ | ಚಾರು ಪ್ರಥಮ ಭೂತ ತಲೆ ಚಪ್ಪಳಿಡೇ| ಧಾರಣಿಧರ ಸೀತಾರಾಮನಲ್ಲದಿಲ್ಲವೆಂದು 5 ಗೋರಾಜ ಸರಿಗಮಪದನಿಸ ಎಂದು ನಲಿಯೇ | ಉರಗಾದಿ ಮೂಷಕಾದಿ ಚಿಗಿದಾಡಲು | ವಾರಣದ ಗಂಗೆ ಸಿರದಲಿ ತುಳುಕಲು | ನಾರಾಯಣ ಪರದೈವ ರಾಮನಲ್ಲದಿಲ್ಲವೆಂದು 6 ತುಂಬುರನಾರಂದ ತಂದನ್ನಾತಾ ಎನ್ನೆ | ಅಂಬರದಿಂದ ಪೂಮಳೆಗೆರೆಯೆ | ಅಂಬುಜಪತಿ ಶಿರಿ ವಿಜಯವಿಠ್ಠಲ ವಿ ಶ್ವಂಭರಜಾಂಡಕರ್ತು ರಾಮನಲ್ಲದಿಲ್ಲವೆಂದು 7
--------------
ವಿಜಯದಾಸ
ಕಾಮಾರಿನÀುತನಾಮ ಶ್ಯಾಮಸುಗುಣಾರಾಮ ಕಾಮಿತ ಸುರದ್ರುಮ ಸತ್ಯಕಾಮ ಅಜನೃಪಾತ್ಮಜ ಬಾಲ ರಜನೀಚರಕಾಲ ವಾರಿಜಾಪ್ತಜ ಮಿತ್ರ ನುತÀಚರಿತ್ರ ಪರಮಕರುಣಾಪೂರ ಸತ್ವಸಾರ ಧರಣಿಜಾ ಮನೋಹರ ಸಮರಶೂರ ಶರಣಜನರಕ್ಷ ಶ್ರೀವತ್ಸವಕ್ಷ ವರಶೇಷಗಿರಿವಾಸ ಪಾಹಿಶ್ರೀತ
--------------
ನಂಜನಗೂಡು ತಿರುಮಲಾಂಬಾ
ಕಾಮಿತವನು ಪಡಿಯೋ ಪ ಈ ಮಹಿಯೊಳು ರಘುವೀರ ತೀರ್ಥರ ಕರ- ತಾಮರಸೋದ್ಭವರೆನಿಸಿ ಮೆರೆದ ಗುರು ಅ.ಪ ಧರೆಸುತ ಮಂಡಿತ ಸುರಪುರದಲಿ ದ್ವಿಜ ವರ ಕುಲದಲಿ ಜನಿಸಿಯಳಿಮೇ- ಲಾರ್ಯರ ಬಳಿಯಲಿ ಶಬ್ದಾವಳಿ ಶಾಸ್ತ್ರವ ಪಠಿಸಿ ಇಳಿಸುರನುತ ಕರ ಜಲಜೋದ್ಭವ ರೆನಿಸಿ ಕಲಿತು ಗುರುಮುಖದಿ ಮರುತ ಶಾಸ್ತ್ರವನು ತಿಳಿಸುತ ಬುಧಜನ ರೊಲಿಸಿದಂಥ ಗುರು 1 ಹೇಮಮಂಟಪದಿ ಭೂಮಿ ಸುತಾನ್ವಿತ ರಾಮನ ಪೂಜಿಸು ತಾ ಶ್ರೀಮನ್ಮಧ್ವಕ ರಾಬ್ಜಾದಾಗತ ಸೌಮಿತ್ರಿಯ ಸಹಿತ ಸಾಮವ ಪಠಿಸುವ ಭೂಮಿಸುರಜನ ಸ್ತೋಮದಿ ಶೋಭಿಸುತ ಧೀಮಜನರಿಗೆ ಪ್ರೇಮದಿಂದ ಮೃಷ್ಟಾನ್ನದಾನ ಸನ್ಮಾನ ಮಾಡುತಿಹ 2 ಭೂತಳದಲಿ ಸುಕ್ಷೇತ್ರ ಬಹು ಆರ್ಥ ಯಾತ್ರಿಗಳಾ ಚರಿಸಿ ಭೂತಬಾಧೆ ರೋಗಾತುರ ಜನಗಳ ಭೀತಿಯ ಪರಿಹರಿಸಿ ಶಾಸ್ತ್ರಸುಧಾರಸ ಸತ್ಯಮೋದ ಯತಿ- ನಾಥರಿಂದ ಗ್ರಹಿಸಿ ಖ್ಯಾತ ಕಾರ್ಪರ ಕ್ಷೇತ್ರದಿ ನರಮೃಗನಾಥನ ಪ್ರೀತಿಗೆಪಾತ್ರರೆನಿಸಿರುವ 3
--------------
ಕಾರ್ಪರ ನರಹರಿದಾಸರು
ಕಾಯ || ಕಾಯ ಪ ಅಣುರೂಪದಿಂದಿದ್ದು ಕ್ಷಣದೊಳಗದ್ಭುತ ರೂಪವ ಧರಿಸಿ ಬಲಿಯ ಬಂಧಿಸಿದೆ | ರಣ ಶಬ್ದವಿಲ್ಲದೆ ಸರ್ವ ಸಾಮ್ರಾಜ್ಯವ ನಗ್ರಜಗಿತ್ತಿಹ ಕಾರ್ಯವಾಶ್ಚರ್ಯ 1 ವಾದಿರಾಜರಿಗೆ ನೀ ಒಲಿದು ಶ್ರೀ ಸೋದೆಯೊಳ್ ನಿಂತಿದ್ದ ತೆರವತಿ ಚೋದ್ಯವಾಗಿಹುದು | ಕದನವಾಗಿಲ್ಲ ಭೂಭುಜರಲ್ಲಿ ಒಲಿದುದು ಹರಿಭಕ್ತರ್ಗತಿ ತೋರ್ಪ ಕಾರ್ಯ 2 ರಾಜ್ಯದೊಳಗತಿ ಮಾನ್ಯ ವಾದಿರಾಜರ ಭಾಗ್ಯ ದೇವಾಧಿದೇವ ಶ್ರೀ ತ್ರಿವಿಕ್ರಮರಾಯ 3
--------------
ವಿಶ್ವೇಂದ್ರತೀರ್ಥ
ಕಾಯಿ ಕಾಯಯ್ಯಾ | ಅನಾಥ ಬಂಧೋ ಪ ಶರಣರ ದುರಿತಪಹರಣ ಸುಪಾವನ | ಚರಣನೆ ಕೌಸ್ತುಭಾಭರಣ ಹೇಮಾಂಬರಾ | ತರಣಿ ಶತ | ಕಿರಣ ವಿರಾಜಿತ ಕರುಣಾ ಸಿಂಧೋ 1 ವಾರಣಭಯ ನಿವಾರಣ ಸುರಜನ | ತಾರಣ ದೈತ್ಯ ವಿದಾರಣ ಸೃಷ್ಟಿಯೆ | ಕಾರಣ ಚಿತ್ಸುಖ ಪೂರಣ ಮುನಿಜನ | ಪ್ರೇರಣ ಫಣಿಮದ ಹಾರಣ ಧೀರಾ2 ಚಕೋರ ಸು | ಚಂದಿರ ಸ್ಮರಚಿತ ಸುಂದರ ಸದ್ಗುಣ | ಮಂದಿರ ವಿಧಿಹರ ವಂದ್ಯ ಮುಕಂದನೇ | ತಂದೆ ಮಹಿಪತಿ ನಂದನ ಪ್ರಾಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೊ ಸುಗುಣ ಮಣಿಯೆ ಪ ಪ್ರೀಯ ಮುರಾರಿ ವಿನಾಯಕ ಸೋದರ ||ಅ|| ಅಘ ಪಾವನಮೂರ್ತಿ ಶರಣರ ರಕ್ಷಕ 1 ಕುಂದ ಕುಂದಕುಟ್ಮಲಪದನಾನಂದಿಧ್ವಜ ಸುತ ಸುಂದರ ಮೂರುತಿ | ಇಂದುವದನ ಮುನಿವೃಂದ ವಂದಿತ ಗುಹ 2 ಮಯೂರ ಧ್ವಜಾ | ಕ್ಲೇಶದಿ ನರಳುವ ದಾಸರ ರಕ್ಷ ಸ-ರ್ವೇಶಕರಜ ನಿರ್ದೋಷಿ ಸುಬ್ರಹ್ಮಣ್ಯ 3
--------------
ಬೆಳ್ಳೆ ದಾಸಪ್ಪಯ್ಯ
ಕಾರಣಾತ್ಮಕ ಭಕ್ತವತ್ಸಲ | ಪೊರೆವುದೆನ್ನನು || ಕರುಣಾರ್ಣವನೆ ಪ ಭವ | ಕಷ್ಟ ಕಳೆದು ಸಂ | ತುಷ್ಟಿ ಗೈಸೆನ್ನ 1 ಪಕ್ಷಿವಾಹನ | ಅಕ್ಷರೇಡ್ಯ ಸು | ಪಕ್ಷಪಾತಿಯ | ಲಕ್ಷ್ಮೀವಕ್ಷನೆ ||ಇಕ್ಷುಶರ ಪಿತ | ಲಕ್ಷಣಾಗ್ರಜ | ರಾಕ್ಷಸರ ಬಹು ಶಿಕ್ಷಕ | ಜಗ ರಕ್ಷಕ 2 ಭವ | ನೋವ ಕಳೆವುದು | ಶ್ರೀ ವರನೆ ಗುರು | ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಕಾರ್ತಿಕೇಯನ ಮಾಡೋ ನೀ ಧ್ಯಾನ ಪ ನೀರಜ ನಯನನ ತಾರಕ ಮಂತ್ರನ ಮಾಡೋ ನೀ ಧ್ಯಾನ 1 ನಿಗಮಗಳಿಗೆಟಕದ | ಜಗದೇಕ ದೇವನ ಅಗಣಿತಮಹಿಮನ | ಮಾಡೋ ನೀ ಧ್ಯಾನ 2 ನಿತ್ಯಾನಂದನ | ಭೃತ್ಯರ ಪೊರೆವನ ಸತ್ಯ ಸ್ವರೂಪನ | ಮಾಡೋ ನೀ ಧ್ಯಾನ 3 ದುಷ್ಟ ಖಳರ ಎದೆ | ಮೆಟ್ಟಿ ಶಿಕ್ಷಿಸುವನ ಕುಷ್ಠ ವಿನಾಶನ | ಮಾಡೋ ನೀ ಧ್ಯಾನ 4 ದಾಸರ ಕಾವ ಪಾವಂ | ಜೇಶನ ಸ್ಕಂದನ ಭೂಸುರ ಪ್ರೀಯನ | ಮಾಡೋ ನೀ ಧ್ಯಾನ 5
--------------
ಬೆಳ್ಳೆ ದಾಸಪ್ಪಯ್ಯ
ಕಾಲ ಬಂತು ಪ್ರಜೆಗೆ ಎಷ್ಟು ಪೇಳ್ವರೇನು ಕೆಲಸ ದಿಟ್ಟ ಅರಿಗಳನು ಕುಟ್ಟಿ ತೆಗೆಯದಿದ್ದಮೇಲೆ ಪ ದಂಡು ಬಂತು ಎಂದು ಜನರು ಗಂಡು ಹೆಣ್ಣು ಮಕ್ಕಳೆಲ್ಲ ಕಂದುಗಳನು ಕಟ್ಟಿ ಗೋವಿನ ಹಿಂಡ ನೆಲ್ಲ ದಾರಿಗೊಳಿಸಿ ಕಂಡ ಕಡೆಗೆ ಹೋಗಿ ಸೇರಿಕೊಂಡುಯಿರಲು ಸೋವಿನಿಂದ ದಂಡಿನವರು ದಾರಿಗಟ್ಟಿಕೊಂಡು ಸುಲಿದು ಕಡಿದ ಮೇಲೆ 1 ಅಲ್ಲಿ ಬಂತು ಇಲ್ಲಿ ಬಂತು ಎಂದು ಬೆದರಿಕೊಂಡು ಕುಣಿಗಳಲ್ಲಿ ಭತ್ತಭಾಂಡವಿಕ್ಕಿ ನಿಲ್ಲದೆಲ್ಲ ಊರಬಿಟ್ಟು ಕಲ್ಲು ಮುಳ್ಳು ಗುಡ್ಡಕಾನಿನಲ್ಲಿ ಸೇರಿಕೊಂಡು ಬಚ್ಚಿಯಿಟ್ಟ ವಸ್ತು ವಡವೆ ಅಲ್ಲಿ ನಷ್ಟವಾದ ಮೇಲೆ 2 ಮತ್ತೆ ಕುದುರೆಯಿಲ್ಲ ಮಂದಿಹೊತ್ತು ಪ್ರಜೆಗಳನ್ನು ಮಾರ್ಗ ದೊತ್ತಿನಲ್ಲಿ ತರುಬಿ ನಿಂದು ಕತ್ತಿಯನ್ನು ಕಿತ್ತು ಗೋಣ ಬರಿಸಿ ಯಾವತ್ತು ವಡವೆ ವಸ್ತುಗಳನು ಮತ್ತು ಮತ್ತು ಸುಲಿದಮೇಲೆ 3 ಮುಟ್ಟು ಪಟ್ಲೆ ಸಹಿತವರಡಿಯೆತ್ತ ಕೊಟ್ಟು ಬೀಳ ಭೂಮಿ ನಷ್ಟ ತೆತ್ತು ಹಳೆಯ ಅರಿವೆ ಬಟ್ಟೆಗಟ್ಟಿ ಬೀದಿ ಬದಿಗೆ ಹಿಂಡು ಗುರಿಯ ಕೆಟ್ಟ ಗೌಡಿ ದ್ವಿಗುಣಿಸಂಕ ತೆತ್ತು ಕೊಟ್ಟು ಪ್ರಜೆಗೆ ಘಟ್ಟ ಬೆಟ್ಟ ವಾಸ ವಾದಮೇಲೆ 4 ಇಕ್ಕಿ ಕದವ ರಾಜ್ಯವನ್ನು ಹೊಕ್ಕು ಅರಿಗಳೆಲ್ಲ ಸುಲಿದು ಸೊಕ್ಕಿನಿಂದ ಪಾಳ್ಯವನ್ನು ಹೊಕ್ಕರಯ್ಯ ನಮ್ಮ ಕಡೆಗೆ ದಿಕ್ಕಕಾಣೆ ಪ್ರಜೆಗಳನ್ನು ರಕ್ಷಿಸುವರು ಬೇರೆಉಂಟು ನಂಬಿ ಜನರು 5
--------------
ಕವಿ ಪರಮದೇವದಾಸರು
ಕಾಲ ವ್ಯರ್ಥ ಹರಿಯನೇಕ ಗುಣಗಳ ಪೊಗಳಿ ಪುರುಷಾರ್ಥ ಪ ಸತಿಸುತರ ನೆಚ್ಚಿ ಕೆಡಬ್ಯಾಡಾ ನಿನ್ನ ಸಂ- ಗತಿಲೇ ಬಾಹರು ಇದನು ತಿಳಿಯೋ ಕ್ಷಿತಿಪತಿಯ ನೆನೆಯದಿರಬ್ಯಾಡಾ ಲಕ್ಷ್ಮೀ ಪತಿಯೊಬ್ಬನೇ ಗತಿ ಎಂದು ತಿಳಿ ಗಾಢಾ 1 ಇಂದೆ ಇದ್ದವ ನಾಳೆಗಿಲ್ಲಾ ಅದ ರಿಂದ ಜಗದೀಶನನು ಹಿಂದೆ ಕಳೆದ ಆಯು ಬರೋದಿಲ್ಲಾ ಇನ್ನು ಮುಂದೆ ನರಜನ್ಮ ಬರುವುದು ಭರವಸಲ್ಲಾ 2 ಸತ್ತ ನಂತರ ಬಳಗ ನಿನ್ನ ತೀವ್ರ ಹೊತ್ತು ಹೊರಗ್ಹಾಕಿರೆನ್ನುವರೋ ತಿಳಿಯನ್ನಾ ಮಿಥ್ಯ ಸುಖಕೊಳಗಾಗದಿನ್ನಾ ಏಕ ಚಿತ್ತದಿಂ ಭಜಿಸೋ ಹನುಮೇಶ ವಿಠಲನಾ 3
--------------
ಹನುಮೇಶವಿಠಲ
ಕಾಲ ಶಾಪದಿಂದಡಗಿತೈ ಧರ್ಮ ಪರಿವಾರ ಪ ತಾಪಪಡಿಸುವ ಪರಿಯ ಶ್ರೀಪತಿಯೆ ಬಲ್ಲ ಅ.ಪ ಇಷ್ಟ ಸುಖ ಪಡೆಯುವರ ಪುಣ್ಯ ಫಲವು || ಇಷ್ಟಿದರನರಿಯದವ ನರನೊ ಪಾಮರನೊ 1 ಸ್ಥಿರಚರ ಪ್ರಾಣಿಯೊಳು ಪರಿಕಿಸಲು ಮೇಲಾದ | ನರಜನ್ಮದೊಳು ಬಂದು ಸುಖದುಃಖದ || ಚಾರದಿಂ ನಡೆಯುವವನವ ನರೋತ್ತಮನು 2 ಪುಣ್ಯಫಲದೊಳು ಸದಾನಂದ ಸುಖ ಪಡೆವ 3
--------------
ಸದಾನಂದರು
ಕಾಲು ತೊಳೆದವನೊಬ್ಬ ತೊಳೆಸಿಕೊಂಡವನೊಬ್ಬ ಮೌಳಿ ಮೇಲಾಜಲವ ಸತತ ಧರಿಸಿದನೊಬ್ಬ ಪಾಲಿಸುವ ಪ್ರಭುವೊಬ್ಬ ಕೊಲುವ ತಳವಾರನೊಬ್ಬ ಮೂರ್ಲೋಕವರಿಯೆ ಪುಟ್ಟಿಸಿದ ಪಿತನೊಬ್ಬ ಆಲೋಚನೆಯ ಬಲ್ಲವಗೆ ಸಂಶಯ ಸಲ್ಲ ಮಾಲೆಯನು ಮಹಲಕ್ಷುಮಿ ಹಯವದನಗಿತ್ತಳಾಗಿ 1 ರಾವಣನ ಕೊಂದ ಪಾಪವ ಕಳೆಯಬೇಕೆಂದು ದೇವ ರಘುಪತಿ ಸದಾಶಿವನ ಪೂಜಿಸಿದ ಗಡಾ ಆ ವಿಧಿಯ ಒಂದು ತಲೆಯನು ಕಡಿದ ಮಾತ್ರದಿಂದ ಆವಾಗ ಕರದಲ್ಲಿ ಇಹ ಕಪಾಲವ ಕಾಣನೆ ದಾವಘದೊಳು ಪೊರಳುವನ ದಾವಾತ ಭಜಿಸುವನು ಜೀವರಿಗೆ ಉಳ್ಳಷ್ಟು ವಿವೇಕ ಹಯವದನಗಿಲ್ಲವೆ 2 ರಾಮಾಯಣದ ಕತೆಯು ಮಹಾಪುಣ್ಯ ಕಥೆಯು ಗಡಾ ರಾಮ ರಾವಣನ ಕೊಂದದ್ದು ಮಹಾಪಾಪ ಗಡಾ ಆ ಮನುಮುನಿಗಳೆಲ್ಲ ಪಾಪಕಂಗೀಕರಿಸಿದರೆ ಸ್ವಾಮಿಯು ಲಯದಿ ಬೊಮ್ಮನ ಮೊದಲು ಕೊಲಿಸದೆ ಧೀಮಂತ ಹಯವದನ ಕೊಂದ ಹಿರಣ್ಯಕ ಮುಖ್ಯ ತಾಮಸ ದಿತಿಜರು ಕಶ್ಯಪ ಋಷಿ ಸುತರಲ್ಲವೆ3 ಶ್ರುತಿಯಿವ ಕರ್ಮಣಾನೋಕನೀಯ ಎಂದು ತುತಿಸುತಿರೆ ನಿಮ್ಮ ನಿರ್ಗುಣ ಬೊಮ್ಮಗೆ ಕರ್ಮವುಂಟೆ ಕ್ಷಿತಿಯೊಳಗೆ ರಾವಣನ ವಧೆಯ ಮಾಡಿದ ಸೇತುಪತಿಯ ಪಾವನನೆನಲು ಅವನ ಕೊಂದವನ ಪತಿತಪಾವನನೆಂಬುದೆ ಕುಚಿತ್ತಯುಕುತಿಯು ಸತತ ಹಯವದನನೊಬ್ಬನೆ ಶುದ್ಧ ಕಾಣಿರೊ 4 ಒಂದು ಕಡೆಯಲಿ ವಿಭೀಷಣನ ಪ್ರತಿಷ್ಠಿಸಿದನು ಮ- ತ್ತೊಂದು ಕಡೆಯಲಿ ಸದಾಶಿವನ ಪೂಜಿಸಿದ ಇಂ- ತೆಂದು ಪುರಾಣಗಳು ಕೂಗುತಿವೆ ತ್ರಾಸಿನೊಳು ಹೊಂದಿಸಿ ಸಮನೆಂದು ತೂಗಿ ತೋರು ಮದದಲಿ ಸಂದೇಹ ಸಲ್ಲ ಹಯವದನ ರಘುಪತಿಗಿಬ್ಬರು ಸಂದ ಭಕುತರೆಂಬುದು ಸಲೆ ಸುಪ್ರಸಿದ್ಧ 5 ಸೇತುವೆಯ ಕಂಡ ನರರಿಗೆ ಬ್ರಹ್ಮಹತ್ಯಾದಿ ಪಾತಕವು ಬಿಡುವುದೆಂಬ ಶ್ರುತಿಯ ಮನ್ನಿಸಲು ಖ್ಯಾತ ಬೊಮ್ಮನ ತಲೆಯ ಕಡಿಯೆ ಕರದಲಿಕೊಟ್ಟ ತಾ- ಸುಕೃತ ಸೇತುಮುಖದಿಂದ ಸೀತೆಯರಸನು ಶಿವನ ನಿಲ್ಲಿಸಿ ಪ್ರತಿಷ್ಠಾಪಿಸಿದ ಜಗನ್ನಾಥ ಹಯವದನ ಭಕ್ತರಬಂಧು ಕಾಣಿರೊ 6 ರಾಮ ಶ್ರೀರಾಮರಾಮೇತಿ ರಮೆಯೆಂಬ ಆ ಮಹಾದೇವ ಭಗವದ್ಭಕ್ತನಲ್ಲವೆ ಸ್ವಾಮಿ ತನ್ನ ಭಕ್ತರÀನು ಪ್ರತಿಷ್ಠಿಸಿದ ನಿ- ಸ್ಸೀಮ ಕರುಣಾಂಬುಧಿ ಮಹಾಮಹಿಮನೆಂಬರು ಭ್ರಾಮಕದ ನುಡಿಗೆ ಮರುಳಾಗದಿರು ಹಯವದನ ರಾಮಚಂದ್ರನೆ ಕಾಶಿಯ ತಾರಕಬೊಮ್ಮ ಕಾಣಿರೊ 7 ಕಾಶಿಯಲಿ ರಾಮಮಂತ್ರೋಪದೇಶವ ಮಾಳ್ಪ ಈಶ ಜಾಣರ ಮತದಿ ಜಗಕೆ ಗುರುವೆಂತೆಂಬ ಆ ಶಿವನ ಮಂತ್ರದೇವತೆ ತಾರಕಬೊಮ್ಮಯೆನಿಪ ವಾಸುದೇವನೆ ಜಗಕೆ ಪರದೈವ ಕಾಣಿರೊ ಈ ಸುತತ್ವÀವ ಪೇಳ್ವ ಹರಗೆ ನಮ್ಮ ಹಯವದನ ಏಸುಮನ್ನಣೆ ಮಾಡಿದರುಚಿತ ಕಾಣಿರೊ 8 ಕರವ ಶಿರದ ಮೇಲೆ ಇರಿಸಬಂದ ಖಳಗಂಜಿ ಹರ ಸಕಲ ಸುರೇಶ್ವರರ ಅರಮನೆಗಳಿಗೆ ಪೋಗಿ ಪರಿಹರವ ಕಾಣದೆ ನಮ್ಮ ಸಿರಿವರನ ಮರೆಹೊಗಲು ಪÀರಿಣಾಮವನು ಪೊರೆದ ಗಡಾ ಶರಣರಕ್ಷಕನೆಂಬ ಬಿರುದುಳ್ಳ ಹಯವದನ ಹರಿಯಲ್ಲದೆ ಪಿರಿದೊಂದು ಪರದೈವವಿಲ್ಲವಯ್ಯ 9 ರೋಮಕೋಟಿಲಿಂಗನೆನಿಸಿದ ಹನುಮನೊಂದು ರೋಮಕೆ ಕೋಟಿ ಶಿವರ ಮಾಡುವ ಶಕ್ತ ಕಾಣಿರೊ ಆ ಮಹಾತ್ಮನ ತನ್ನ ಆಳುಮಾಡಿ ನಡೆಸಿಕೊಂಡ ರಾಮಚಂದ್ರನೆ ಜಗಕ್ಕೆ ಪರದೈವ ಕಾಣಿರೊ ಸ್ವಾಮಿ ಹಯವದನ ವೇದವ ತಂದು ಕಮಲಜನ ಕಾಮಿತವನಿತ್ತನಾಗಿ ಅವನೆ ಜಗದೊಡೆಯ 10 ನೂರು ರುದ್ರರು ಪೇಳೆ ಕಾರ್ಯವಾದರೇನವರು ಈರೇಳು ಜಗವ ಸಂಹರಿಸಲರಿಯರು ಗಡಾ ಕಾರ್ಯವಿಲ್ಲದ ಶಿವರ ಪೇಳಲದ್ವೈತಮತ ಹಾರಿಹೋಗದೆ ಬರಿದೆ ಹಲವು ಹಂಬಲಿಸದೆ ಶ್ರೀರಮಣ ಹಯವದನನೊಡಂಬಟ್ಟನಿ ಬರನು ದೂರ ಕಳಚಿದನೆಂದು ಪೂರ್ವದವರನೆ ನಂಬು 11 ಯಾತ್ರೆಯ ಮಾಡಿಸಿಕೊಂಡು ಹರ ಹಿರಿಯ ತಾನಾಗಿ ಯುಕ್ತಿ ಬಾಧಕವಾಯಿತ್ತು ಹರಿಹರರೊಳೈಕ್ಯ ಚಿತ್ರ ನಿನ್ನ ಮತಕೆ ನೀನೆ ಶತ್ರುವಾದೆ ಪ್ರತ್ಯುತ್ತರವ ಪೇಳೆ ಪರಾಜಯ ಬಾರದಿಹುದೆ ಮತ್ತೆ ನೆನೆಯೊ ಶ್ರೀಹಯವದನಗಿದು ಲೀಲೆಯಾದರೆ ಸತ್ವ ಹೆಚ್ಚಿತು ಸರ್ವೋತ್ತಮನೆಂಬ ಶ್ರುತಿಗೆ 12 ವಂದ್ಯಮಾನಂ ಪಿತಾನಾಂ ಪ್ರತಿ ಪ್ರಮಾಣಂ ಎಂದು ರುದ್ರನ ಕೂಡೆ ಶ್ರುತಿ ಪೇಳಿತಾಗಿ ತಂದೆ ಮಕ್ಕಳ ಮನೆಗೆ ಪೋದಂತೆ ಪೋಗಿ ಮು- ಕುಂದ ಮೊಮ್ಮಗನಿಗೆ ಹಿರಿತನವ ಕೊಡಲೆಂದು ಮುಂದೆ ಜನಿಸುವ ಕಿರಿಯ ಕುವರರೊಳು ತನ್ನ ಕಂದನ ಸೃಜಿಸಿದ ಹಯವದನ ಚತುರನಲ್ಲವೆ 13 ಸುರರು ದ್ವಾರಕಾಪುರ ಯಾತ್ರೆಯಲಿ ಪಾಲಸಾಗರಯಾತ್ರೆ ಗರ್ಭಯಾತ್ರೆ ಕಳೆಯೆ ಶೂಲಧರ ಖಳಗಂಜಿ ಭುವನವೆಲ್ಲವ ಸುತ್ತಿ ಶ್ರೀ- ಲೋಲನಿಹ ವೈಕುಂಠಯಾತ್ರೆಯಿಂದ ಬದುಕನೆ ಭೂಲೋಕದಲಿ ಪುಟ್ಟಿ ಹಯವದನ ಕೃಷ್ಣ ಮಾಡಿದ ಕೈಲಾಸಯಾತ್ರೆ ಕೈವಲ್ಯಪತಿಗೆ ಲೀಲೆ 14 ಹರನಾರು ಪುರಾಣಗಳು ವಿರಿಂಚನಾರು ಪುರಾಣಗಳು ಹರ ವಿರಿಂಚರವಲ್ಲವೆಂದು ಹಿರಿಯರೆ ಮನ್ನಿಸಲಾಗಿ ಪರಮ ಸಿದ್ಧಾಂತಕೋವಿದರೆನಿಪ ಬುಧರಿಗೆ ಪುರಾಣಗಳ ಮ್ಯಾಲೆ ಮಾಡುವ ಪರಮಾದÀರ ಸಲ್ಲದಯ್ಯ ದುರಾಗ್ರಹವ ಮಾಡಬ್ಯಾಡ ಗುರುಮತವ ಬಿಡಬ್ಯಾಡ ಸಿರಿ ಹಯವದನನಾರುಪುರಾಣಗಳ ನೋಡಿರೊ 15 ಒಂದು ಬೊಮ್ಮಚಿತ್ತು ಒಂದು ಜೀವಚಿತ್ತು ಇಂ- ತೆಂದು ಶ್ರುತಿಸ್ಕಂಧÀ ಚೇತವೆಲ್ಲ ಗ್ರಂಥ[ಆ]ಸ್ಯ ದಿಂದ [ಒರೆಯೆ] ಹರಿಜಡನೋ ಹರಜಡನೋ ಮಂದಹಾಸದಿಂದ ಜಡರು ಮನುಮುನಿಗಳೆಲ್ಲ ಇಂಥ ಶಿವನ ವಹಿಸಿಕೊಂಡು ವಾದಿಸುವರು ಹಿಂದು ಮುಂದರಿಯರೆಂದು ಹಯವದನ ನಗನೆ 16 ಯಂ ಬ್ರಹ್ಮವೇದಾಹಂ ಬ್ರಹ್ಮ ವೇದಶ್ರುತಿಶಬ್ದ ಬ್ರಹ್ಮ- ವೆಂಬ ವೇದ ಬೋಧಿಸಿತಾಗಿ ಇಂಥ ಮನುಜರಿಗೆಲ್ಲ ಭಾವಾಭಾವ ಪೇಳ್ವ ಹೊಂದಿಬದುಕು ಹಯವದನನ ಚರಣವ ಹೊಂದಿಬದುಕೊ ಜೀವ ಹರಿಯೆ ನಾನೆನ್ನಬ್ಯಾಡ 17
--------------
ವಾದಿರಾಜ
ಕಾವವನೆ ಕರ್ಮಜಯ ಬಳಿಕಂ ಸಾವವನೆ ಉಣ್ಣುವರು ಜನರು ಭಾವವನೆ ಅರಿದಿರಿಸು ಜೀವರ ನಿನ್ನಂಘ್ರಿಯಲಿ ಪ ದಾಸವೃಂದವು ತೋಷದಿಂದಲೆ ಪೂಶರಯ್ಯನ ವಿಡಿದು ಘನ ಸಂ- ಸುಕೃತ ಫಲವಿಹುದೋ ಶ್ರೀಶನಲಿ ನಿಜದಾಸ ಭಕುತಿಯ ಮೀಸಲಿರಿಸೀ ಮನವ ಮೋಹದೆ ಆಶೆ ಗಳಿಸದೆ ಶ್ರೀಹರಿಯ ನಿಜವಾಸ ಕೈಯ್ಯುವರು 1 ಮೃಗಜಲಕೆ ನೀರೆಂದು ಭಾವಿಸಿ ಪೊಗಲೆಳಿಸುವೆರಳೆಗಳ ಪರಿಯಲಿ ಮೃಗನಯನೇರತಿ ಚೆಲ್ವಿಕೆಗೆ ಜಗವೆಳಸಿ ಬಳಲುವದು ಮಿಗಿಲಾಗಿದ ವಿಷಯಲನಲದಿ ಧಗಧಗಿಸಿ ಜನಗಳು ಪೋಪರಲ್ಲದೆ ಖಗಪತೀ ವಾಹನನ ನೆನೆಯರು ಜಗವ ಪಾವನನು 2 ನೀರಜಾಸನ ಪಿತನೆ ಅಕ್ಷಯ ಶ್ರೀ ರಮಾವಲ್ಲಭನೆ ತವ ಪರಿ ವಾರವಲ್ಲದೆ ಸತಿಸುತರು ಮೇಣ್ ದೇಹ ಬಾಂಧವರು ಸಾರಸುಮತಿಯನಿತ್ತೆಮಗೆ ಹರೆ ಸೇರಿಸೆಮ್ಮನು ನಿನ್ನ ಅಡಿಯಲಿ ಧೀರ ಶ್ರೀ ನರಸಿಂಹವಿಠ್ಠಲ ಪಾರಗಾಣಿಪುದು 3
--------------
ನರಸಿಂಹವಿಠಲರು
ಕಾವೇರಿ ಕಲುಪಾಪಹಾರಿ ಪಾವನ ಶರೀರೆ ಶುಭತೋಷಕಾರಿ ಪ ವಾಸುದೇವ ರಂಗೇಶನಾಲಯಕೆ ನೀ ನಾವರಣಳಾಗಿಪ್ಪೆ ವಿರಜೆಯಂತೇ ದೇವ ಋಷಿ ಗಂಧರ್ವ ಪಿತೃಪ ನರವರರಿಂದ ಸೇವನೀಯಳಾಗಿ ಸರ್ವಾರ್ಥ ಪೂರೈಪೆ 1 ಜಲಚರಾನ್ವೇಷಣ ಲುಬ್ಧ ಸಾಲಿಗ್ರಾಮ ತುಲಸಿ ವೃಕ್ಷವನೆ ಕೊಡಿಸಿದ ಮಾತ್ರದೀ ಕಲುಷರಾಶಿಗಳೆಲ್ಲ ಕಳೆದು ಮುಕ್ತಿಯನಿತ್ತೆ ಸಲಿಲಮಂದಿರೆ ನಿನ್ನ ಕರುಣಕೇನೆಂಬೆ 2 ರವಿ ತುಲಾರಾಶಿಗೈದಿದ ಸಮಯದೊಳಗೊಂದು ಮಜ್ಜನ ಗೈವ ಮಾನವರಿಗೆ ಪವನಾಂತರಾತ್ಮಕನ ಪಾದಕಮಲವ ತೋರಿ ಭವಜ ರೋಗವ ಕಳೆದು ಭಾಗ್ಯವಂತರ ಮಾಳ್ಪೆ 3 ಶ್ರೀ ಪವನ ಶಿವರಿಂದ ತಾ ಪೂಜೆಗೊಳುತ ಬಹು ಪರ ಮನು ವ್ಯಾಪಿಸಿಹ ನಿನ್ನೊಳದ್ಯಾಪಿ ಸ್ವರ್ಗಸ್ಥ ಜನ ರೀ ಪೊಡವಿಯೊಳು ತವ ಸಮೀಪದಲಿ ಜನಿಸುವರು 4 ಮೂಢಮತಿ ನಾನು ಕೊಂಡಾಡ ಬಲ್ಲೆನೆ ನಿನ್ನ ಬೇಡಿಕೊಂಡೆನು ಹೃದಯ ನೀಡದೊಳಗೇ ಗೂಡ ಪದ ಶಯನ ಜಗನ್ನಾಥ ವಿಠ್ಠಲನಂಘ್ರಿ ನೋಡುವ ಸೌಭಾಗ್ಯ ದಯ ಮಾಡು ಪ್ರತಿದಿನದಲ್ಲಿ ಬ 5
--------------
ಜಗನ್ನಾಥದಾಸರು
ಕಾವೇರಿ ತ್ರಿಭುವನಕಾಯೆ | ಸುರಮುನಿಗೇಯೆ | ಕಾವೇರಿ | ಆವಾವ ಜನುಮಕೆ ಬಿಡದೆ ಎನ್ನನು ಕಾಯೆ ಪ ಅಜನನಂದನೆ ಚಂದ್ರವದಗೆ | ಚತುರಮಯೆ | ಸುಜನರಿಗಾನಂದ ಸದಗೆ | ಧವಳಕಾಯೆ | ಭಜಿಸಿ ಬೇಡುವೆ ನಿನಗಿದನೆ | ಸೃಜಿಸಿ ಕೊಡುವುದು | ತ್ರಿಜಗದೊಳಗೆ ಹರಿ | ನಿಜ ಭಕ್ತರಪಾದ | ರಜವಾಗಿ ಯಿಪ್ಪ ಸ | ಹಜ ಮತಿಯನುದಿನ | ಕುಜನ ನಿವಾರೆ 1 ಕಲಿನಾಶ ಕಾರುಣ್ಯ ನಿಧಿಯೆ | ನಿರ್ಮಳಶೀಲೆ | ಕಲಕಾಲಾ ಸುಜ್ಞಾನಾಂಬುಧಿಯೆ | ತಲೆವಾಗಿ ನಮಿಸುವೆ | ಹಲವು ಜನ್ಮಂಗಳ | ಒಳಗೊಳಗೆ ಬಿದ್ದು | ಹಲಬುತಿಪ್ಪ ವ್ಯಾ | ಕುಲವನು ಕಳೆದು ನಿ | ಶ್ಚಲ ಮತದೊಳಗಿಡು 2 ನಿತ್ಯ ಉತ್ತಮ ಗುಣಸಮುದ್ರೇ | ಸಿಂಹಜೆ ಮಾರುದೃತೆ ಎನಿಪ ಲೋಪಾಮುದ್ರೆ | ಕವೇರಕನ್ಯೆ ......ಗಿತ್ತ ಪೊಳೆವ ಸೂಭದ್ರೆ | ಸತ್ಯ ಸಂಕಲ್ಪ ಶ್ರೀ ವಿಜಯವಿಠ್ಠಲನ್ನ ಭೃತ್ಯನೆನೆಸಿಕೊಂಡು ಸ್ರೌತ್ಯದಿಂದಲಿ ಬಲು | ನೃತ್ಯಮಾಡುವ ಸಂ |ಪತ್ತನೆ ಕರುಣಿಸು 3
--------------
ವಿಜಯದಾಸ