ಒಟ್ಟು 864 ಕಡೆಗಳಲ್ಲಿ , 97 ದಾಸರು , 715 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನರರು ಏನು ಬಲ್ಲರಯ್ಯ ನರಹರಿಯ ಚರ್ಯಾ ಪ ಆರು ಮೂರರ ಹಾದಿ ಅರಿಯದಲೆ ತಾಮಸಾದಿ ಆರು ಯರಡನು ಸರಿಸಿ ಆರರಿಂದ ಮೀರಿನಡೆವ 1 ನಾಲ್ಕು ನಾಲ್ಕೆರಡನ್ನು ನಾಲ್ಕೆರಡು ನಡಿಯನ್ನು ನಾಲ್ಕು ವಂದರಿಯದಲೇ ನಾಲ್ಕೈದೊಂದರನು ಕೂಡಿದ 2 ಎರಡು ಒಂದು ಯುಕ್ತನ `ಹೆನ್ನೆಪುರನಿವಾಸನ ' ಯಂಬ ಪಾಮರ 3
--------------
ಹೆನ್ನೆರಂಗದಾಸರು
ನರಹರಿಯ ಗುಣ ಕೊಂಡಾಡುವುದೇ ಲೇಸು ಮುರಲೀಧರನೊಲಿಸಿ ಪರಗತಿ ಸುಖವ ಬಯಸು ಪ ಸುಳ್ಳುಮಾತಾಡಿ ಧನಗಳಿಸುವುದಕಿಂತಲಿ ಒಳ್ಳೆಯವನೆನಿಸುವ ಬಡತನವೇ ಲೇಸು ಕಳ್ಳತನದಿಂದಲಿ ಕದ್ದು ತಿಂಬುವುದಕಿಂತ ಕೇಳಿ ಸಿಕ್ಕಷ್ಟುಂಡು ಇರುವುದೇ ಲೇಸು 1 ಸಾಲದಿಂದರಮನೆಯ ಕಲ್ಪಿಸಿರುವುದಕಿಂತಾ ಸಾಲಿಲ್ಲದ ಮನೆಯಲ್ಲಿಹುದೇ ಲೇಸು ಕಾಲನ ದೂತರಿಂದೆಳೆಸಿಕೊಳ್ಳದೇ ಲಕ್ಷ್ಮೀ ಲೋಲನಾ ಪಾದದಲ್ಲಿರುವುದೇ ಲೇಸು 2 ಅನ್ಯ ಸ್ತ್ರೀಯರ ಸುಖವ ಬಯಸಿ ಕೆಡುವುದಕಿಂತ ತನ್ನವಳ ಕೂಡ ಬಡಿದಾಡುವುದೇ ಲೇಸು ಹೊನ್ನು ಹೆಣ್ಣು ಮಣ್ಣಿಗಾಸೆ ಮಾಡದೇ ಮನಸನ್ನ ಸಿರಿಪತಿಗೆ ಒಪ್ಪಿಸುವುದೇ ಲೇಸು 3 ತಾನು ಮಾಡಿದೆನೆಂಬುದಕಿಂತ ಹರಿಯ ಆಧೀನವೆಂದರಿಯುವುದು ಪರಮ ಲೇಸು ಶ್ವಾನಗೆ ಮಾಂಸವನು ತಿನಿಸಿ ಸಲಹುವುದಕಿಂತ ಜ್ಞಾನಿಯಾದವನ ಸಲಹುವುದೇ ಲೇಸು 4 ದುಷ್ಟ ಮನುಜನು ಮಾಡುವ ಕೃಪೆಗಿಂತಲೂ ಶ್ರೇಷ್ಠ ನರರಿಂದ ಬೈಸಿಕೊಳ್ಳವುದೇ ಲೇಸು ಕೆಟ್ಟ ಸಂಸಾರ ಸುಖ ಬೇಡುವುದಕಿಂತ ಹನುಮೇಶ ವಿಠಲನ ಧ್ಯಾನದ ಸುಖವೇ ಲೇಸು 5
--------------
ಹನುಮೇಶವಿಠಲ
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಾ ಕೆಟ್ಟ ಕೇಡ ಹೇಳುವೆನು ಎಲ್ಲ ಲೋಕದಂತೆನ್ನಬದುಕು ಆಗಲಿಲ್ಲ ಪ ಹೆಂಡರಿಚ್ಛೆಯಿಲ್ಲ ಹೀನವೆಂಬುದಿಲ್ಲಪಂಡಿತತ್ವದ ಪರಮಾರ್ಥಕಿಲ್ಲಉಂಡೆ ಉಟ್ಟೆನೆಂಬ ಊಹೆ ಮೊದಲಿಗಿಲ್ಲಕಂಡ ಕಂಡಂತೆ ಚರಿಸುವಂತಾಯಿತೆ 1 ಅರಿವು ಮರೆವು ಇಲ್ಲ ಆಸೆಗಳೇನಿಲ್ಲಇರುಳು ಹಗಲು ಎಂಬುದೆರಡಿಲ್ಲವೋಶರೀರ ಸ್ಮರಣೆಯಿಲ್ಲ ಶ್ರೇಷ್ಠ ಭಾವಗಳಿಲ್ಲಮರುಳು ಮರುಳು ಆಗಿ ತಿರುಗುವಂತಾಯಿತು 2 ಚಿದಾನಂದ ಗುರುವಿನ ಚಿತ್ತದಿ ಪಿಡಿದರೆಒದವಿದ ಬ್ರಹ್ಮಾನಂದವ ಸವಿದುವಿಧವಿಧವಾದ ಬೆಳಕಿನೊಳಾನಡಗಿರೆಇದರಿಂದಲಿ ಇಂತಾದುದಿದೆಲ್ಲವು3
--------------
ಚಿದಾನಂದ ಅವಧೂತರು
ನಾದಾನಂದದಿ ಮುಳುಗಾಡೋ ಪ ಇಲ್ಲವೆಂಬುದು ಸಲ್ಲ ಗುರುಎಲ್ಲಾ ಪೂರಿತನಹುದಲ್ಲ ಇದ ಬಲ್ಲವರು ಬಲ್ಲರೆಲ್ಲತಾನೆಲ್ಲ ತಿಳಿಯೆ ನೀ ಸಾಕ್ಷಿಕನಹುದಲ್ಲ 1 ಮತಿಯಿಂದ ತಿಳುಕೋ ವಿಚಾರ ಈಗತಿಯಲ್ಲಿ ಆತ್ಮನು ಪೂರಗತಿಗೆ ಕೇಡಿಲ್ಲ ಇದು ಸ್ಥಿರ ಮಹದತಿ ಸೌಖ್ಯ ಪದಕೆ ರಾಜ ನೀನೆ ಉದಾರ 2 ಭೇದ ಭೇದವು ನಿನಗೇತಕೆ ನೀವಾದ ದೂರನು ಪರಕೆ ಈವಾದ ಸಂವಾದಗಳ್ಯಾತಕೆ ಮಹದಾದಿ ಪುರುಷನು ನೀನಹುದು ಬಿಡು ಜೋಕೆ 3 ಸತ್ಯ ಸಂವಿದ್ರೂಪ ಆತ್ಮ ನೋಡೆಪ್ರತ್ಯಾಗಾತ್ಮ ಪರಕತೀತ ಆರಿಂದಲಾದುದುಖ್ಯಾತ ಸುನಾದವರಿದನೇ ನಿರ್ಭೀತ ಮಹಾನಾದ ಚಿದಾನಂದನ ಕೂಡಿದನಾತ4
--------------
ಚಿದಾನಂದ ಅವಧೂತರು
ನಾನೆ ಭ್ರಮಿಸಿದೆನೊ ವಿಷಯದಿ ಮಮತೆ ನೀನೆ ಸೃಜಿಸಿದೆಯೊ ಪ. ಅನಾದಿ ನಿಧಾನ ನೀನೆ ತಿಳಿದು ನೋಡೊ ಅ.ಪ. ಬನ್ನ ಬಡಿಸುತಿದೆಕೈವಲ್ಯದರಸನೆ ನೀ ವಿಚಾರಿಸಿ ಕಾಯೊ 1 ಸ್ವತಂತ್ರ ನೀನು ಅಸ್ವತಂತ್ರ ನಾನು ದೂತನ್ನ ಈ ತೆರಕಾತುರಗೊಳಿಪುದು ಏತರಘನವೊ ಇದರಿಂದಖ್ಯಾತೇನುಫಲವೊ ಎನ್ನೊಳು ನಿನಗೇತಕೀ ಛಲವೊ ಭವದಿ ಕೈ-ಸೋತು ಬಿನ್ನೈಸುವೆ ಮಾತುಮನ್ನಿಸಿ ಕಾಯೊ2 ಕಕ್ಕಸ ಭವದೊಳು ಠಕ್ಕಿಸಿ ಸಿಗಹಾಕಿ ಸಿಕ್ಕುಬಿಡಿಸದೆ ನೀ-ನಕ್ಕು ಸುಮ್ಮನಿರಲು ದಿಕ್ಕ್ಯಾರೊ ಎನಗೆ ದಣಿದು ಮೊರೆ-ಯಿಕ್ಕುವೆ ನಿನಗೆ ಬಂದು ಬೇಗ ನೀ ತಕ್ಕೊನೀ ಕೈಗೆ ಎನ್ನವಗುಣ ಲೆಕ್ಕಿಸದಲೆ ಕಾಯ್ಯಬೇಕಯ್ಯ ಕೊನೆಗೆ 3 ಪ್ರಿಯ ನೀನೆನಗೆಂದು ಅಯ್ಯ ನಿನ್ನ ನಂಬಲು ಮಯ್ಯ ಮರೆಸಿ ವಿ-ಷಯದುಯ್ಯಾಲೆಗೊಪ್ಪಿಸಿದೆ ಸಯ್ಯಲೊ ದೊರೆಯೆ ಇಂಥವನೆಂದುಅಯ್ಯೊ ಮುನ್ನರಿಯೆ ಕರುಣಿ ಎಂಬೊ ಹಿಯ್ಯಳಿ ಸರಿಯೆ ಇನ್ನಾದರುಕಯ್ಯ ಪಿಡಿಯಲು ಕೀರ್ತಿ ನಿನಗೆಲೊ ಹರಿಯೆ4 ಮೊದಲೆಮ್ಮಾರ್ಯರು ನಿನ್ನ ಪದನಂಬಲವರಘ ಸದೆದು ಸಮ್ಮುದದಿಸಂ-ಪದವ ನೀಡಿದೆಯಂತೆ ಅದನು ಮರೆದೆಯೊ ಶಕುತಿಯು ಸಾಲದಲೆ ಜ-ರಿದೆಯೊ ಜನರು ಪೇಳಿದ ಮಾತು ಪುಸಿಯೊ ನಿಜ ತೋರಲು ಬುಧನುತ ಗೋಪಾಲವಿಠಲ ಕೀರುತಿಯೊ 5
--------------
ಗೋಪಾಲದಾಸರು
ನಾರದ ಇಲ್ಲೆ ಬಂದಿಹ ಮುನಿ ಇಲ್ಲೇ ಬಂದಿಹಾಎಲ್ಲ ಲೋಕ ತಿರುಗಿ ಇಲ್ಲೆ ಬಂದಿಹಾ ಪ ಫುಲ್ಲನಾಭನ ಭಕ್ತರಲ್ಲಿ ಮಾಣಿಕ್ಯವೇಅ.ಪ. ಕರದಿ ವೀಣೆಯನ್ನು ಧರಿಸಿ ಶಿಷ್ಯರಿಂದಸುರಮುನಿಯು ಕೇಳಿ ಭರದಿ ಜಾಗರಕ್ಕೆ 1 ಹರಿಯ ದಿನದಿ ನಿನ್ನ ಚರಿತಾಮೃತವ ಪಾಡೆಹರಿಯ ನಿಲಯದಿ ಗಾನ ಭರದಿ ಮಾಡುತಲೆ 2 ನಂದ ಬಾಲಕನ ತಂದುತೋರುವನೇಇಂದು ನಿನ್ನ ತುತಿಪೆ ಇಂದಿರೇಶ ದಾಸಾ 3
--------------
ಇಂದಿರೇಶರು
ನಾರಾಯಣ ಎನ್ನಿರೋ ನಾರಾಯಣ ಎನ್ನಿ ನಾರದÀಪ್ರಿಯನಿಗೆ ನಂದನ ಸುತ ಮುಕುಂದ ಮುರಾರಿಗೆ ಪ ಕೆಟ್ಟ ಅಜಮಿಳನ ಬಂದು ಕ(ಟ್ಟಲ್ಯ)ಮ ಪಾಶದಿ ತಾ ಕಂ- ಗೆಟ್ಟು ಹರಿನಾಮವ ಕರೆಯೆ ಕೊಟ್ಟ ತನ್ನ ಪಟ್ಟಣ ಪದವಿ 1 ಕಾಲಕಾಲಕೆ ಗೋಪಾಲನ ನೆನೆಯದೆ ಬಿಟ್ಟು ಕಾಲಕಳೆಯಲು ಯಮಭಟರು ಕರೆದÀು ಬಾಧಿಸದೆ ಬಿಡರು 2 ಸ್ನಾನ ಜಪ ತಪವ್ಯಾಕೆ ಮೌನ ಮಂತ್ರವ ಬಿಟ್ಟು ದಾನವಾಂತಕ ಕೃಷ್ಣನ್ನ ಧ್ಯಾನದೊಳಿಟ್ಟರಗಳಿಗೆ 3 ಲೆಕ್ಕವಿಲ್ಲದ ದೇಶ ತುಕ್ಕಿ ತಿರುಗಿದರಿಂದೆ ದುಃಖವಲ್ಲದೆ ಜ್ಞಾನ ಮುಕ್ತಿ ದೊರಕುವುದೇನು 4 ಬಿಟ್ಟು ವಿಷಯವ ಭೀಮೇಶಕೃಷ್ಣನಲ್ಲಿಟ್ಟು ಧ್ಯಾನ ಹತ್ತು ಹರಿಪುರ ಸೋಪಾನ ರಕ್ಷಿಸುವ ಖಗವಾಹನ 5
--------------
ಹರಪನಹಳ್ಳಿಭೀಮವ್ವ
ನಾರಾಯಣ ಕೃಷ್ಣ ಬೆಳಗಾಯಿತೇಳಯ್ಯ ಮೂರು ಲೋಕಂಗಳಿಗೆ ಮಂಗಳವ ಬೀರಯ್ಯ ಪ ಹರಿಹರಿ ಶ್ರೀನಿಲಯ ಪರವಾಸುದೇವ ಅ.ಪ ಬಂದಿರುವರೈ ಬ್ರಹ್ಮ ರುದ್ರೇಂದ್ರರು ತಂದೆ ತಂದಿರುವರೈ ಮಹನಿಧಿ ಕನಡಿ ಧೇನುಗಳ ನಿಂದು ಗಾನವಮಾಡುತಿರುವರಾನಂದದಿ ಗಂಧರ್ವರಪ್ಸರೆಯರಿಂದು ಕುಣಿದಾಡಿ ಕೂಡಿ 1 ದಾಸರೊಡೆ ತುಂಬುರರು ನಾರದರು ಜಯಜಯ ಶ್ರೀಶನೇ ಕೇಶವ ಗಜವರದ ಎಂದು ಆಶ್ರಯಿಸಿ ಚರಣಕ್ಕೆ ಶರಣೆಂದು ಮಣಿಯವರು ದೋಷನಾಶನ ಲೋಕಕಲ್ಯಾಣ ತ್ರಾಣ 2 ಪತಿವ್ರತಾ ಸ್ತ್ರೀಯರುಗಳತಿಶಯ ಮಡಿಯುಟ್ಟು ಹಿತವಾದ ಹುಗ್ಗಿ ಸಜ್ಜಿಗೆಯ ಗೈದು ಪತಿತಪಾವನ ನಿನಗೆ ದಧ್ಯನ್ನ ನೀಡುವರೊ ಕ್ಷಿತಿನಾಥ ನೀನವನು ತೋಷದಿಂ ಭುಜಿಸೊ 3 ರೋಗರುಜಿನಗಳಳಿದು ಆಯುವೃದ್ಧಿಯದಾಗಿ ಭಾಗವತ ಸಕುಟುಂಬ ಸಂತೋಷಗೂಡಿ ಭಾಗವತ ಭಾರತ ರಾಮಾಯಣಗಳ ಹಾಡಿ ಆಗಲೈ ಆಗಮಾರ್ಚನೆ ಆಲಯಗಳೊಳಗೆ 4 ಕಮಲಲೋಚನ ಕೆಟ್ಟ ಸ್ವಪ್ನ ಫಲವಳಿಸಿ ಯಮಕಂಟವಂ ಕಳೆದು ಭ್ರಮೆಗಳನು ನೀಗಿ ಸುಮನಸರ ಕೂಡಿ ಶ್ರೀಹರಿಯ ಗುಣಗಾನ ಮಾಡಿ ಅಮಿತ ಅಮೃತವುಣಿಸೈ 5 ಕ್ಷುಧ್ರಪಾಕೀ-ಚೀನ ಕೊಬ್ಬಿ ಛದ್ರಿಸುತು ಭದ್ರತೆಯನಾಡೊಳಗಸ್ಥಿರತೆಗೈಯುತ್ತ ಆದ್ರಿಅಂಬುಧಿ ಮಧ್ಯೆ ಭಾರತಿಯ ನಲಿಸುತ್ತ ಮುದ್ರೆಯುಂ ಧ್ವಜವನುಂ ನಿನ್ನವಾಗಿರಿಸೈ 6 ಕಾಲಕಾಲಗಳಲ್ಲಿ ಮಳೆಬಿಡದೆ ಸುರಿದು ಶಾಲಿಸಂತರ ಧಾನ್ಯ ಎಲ್ಲೆಲ್ಲು ಬೆಳೆದು ಮಹಿಷಿ ಶ್ರೀಲೋಲ ಕರುಣಿಸೈ ಕನಕವೃಷ್ಟಿಯನು 7 ಎದುರು ನೋಡುತ ನದಿಯು ಹರಿವುದು ಸಾಗರಕೆ ಮುದದಿಂದ ತಾವರೆಯು ಸೂರ್ಯನನ್ನು ವಿಧಿವಶದಿ ಪಾಪಿಗಳು ಯಮಲೋಕವನ್ನು ಸುಧೆಸವಿಯೆ ಭಕ್ತರು ಪರಮಪದವನ್ನು 8 ಮಕ್ಕಳಿಲ್ಲದ ಜನರು ಮಕ್ಕಳನು ಹಡೆದು ಲಕ್ಷ್ಮಿಯೊಲವನು ಹಾಡಿ ಜನರೆಲ್ಲ ದುಡಿದು ಭಕ್ತರಾಗುತ ಸರ್ವ ವಣಿಗೆಗಳು ನಡೆದು ಮುಕ್ತರಪ್ಪಂತೆಲ್ಲರ ಮಾಡು ಜಾಜೀಶ 9
--------------
ಶಾಮಶರ್ಮರು
ನಾರಾಯಣನ ನೆನೆ ವರ್ಣಿಸು ಮನ್ನಿಸುಆರಾಧನೆಗಳ ಮಾಡುತ ಪಾಡುತನೀರಾಜನದಿಂದಲರ್ಚಿಸಿ ಮೆಚ್ಚಿಸಿ ವೇದಪಾರಾಯಣಪ್ರಿಯನÀ ಪ. ಅವನ ಶ್ರವಣ ಮನನ ನಿಧಿಧ್ಯಾಸನಶ್ರೀವಿಷ್ಣುವಿನ ಭಕ್ತಿಮಹಾಪ್ರಸಾದಂಗಳುಕೈವಲ್ಯ ಪದಕಿಕ್ಕಿದ ನಿಚ್ಚಣಿಕೆ ಎಂದು ಭಾವಜ್ಞರು ಪೇಳ್ವರೊಜೀವನ ಜವನಬಾಧೆಯ ತಪ್ಪಿಸಿಪಾವನ ವೈಕುಂಠಪುರದೊಳಗೆಂದೆಂದುಆವಾಸವನು ಮಾಡಿ ಸುಖಿಸಬೇಕಾದರೆ ಸೇವಿಸು ವೈಷ್ಣವರ 1 ಲೋಕದಿ ವರಂ ವರಯ ಭದ್ರಂತೆಋತೆ ಕೈವಲ್ಯಮಾತ್ಮನಃಏಕಮೇವೇಶ್ವÀರಸ್ತ ಸಾದ್ಭಗವಾನ್ ವಿಷ್ಣುರವ್ಯಯ ಎಂಬಾಈ ಕಲಿಯುಗದಲಿ ಬೇಕಾದ ಪುರಾಣಾದಿವಾಕುವಿವೇಕವ ಮನದಿ ವಿಚಾರಿಸಿಸ್ವೀಕರಿಸು ವೈಷ್ಣವ ಮತವ ಜೀವ ನಿರಾಕರಿಸನ್ಯಮತವ 2 ದ್ವಾರಾವತಿಯ ಗೋಪಿಚಂದನದಿಂದಶ್ರೀರÀಮಣನ ವರ ನಾಮವ ನೆನೆ-ದೆರಡಾರೂಧ್ರ್ವ ಪುಂಡ್ರಗಳ ಧರಿಸೆಂದೆಂದು ವೀರವೈಷ್ಣವಗುರುವಸೇರಿ ಸಂತಪ್ತ ಸುದರುಶನ ಶಂಖಧಾರಣವನು ಭುಜಯುಗದಲಿ ಮಾಡಿಮುರಾರಿಯ ಮಂತ್ರಗಳವರಿಂದ ಕೇಳುತ ಓರಂತೆ ಜಪಿಸುತ್ತಿರು 3 ಹರಿ ನಿರ್ಮಾಲ್ಯವ ಶಿರದಿ ಧರಿಸುತಿರುಹರಿ ನೈವೇದ್ಯವನೆ ಭುಂಜಿಸುತಿರುಇರುಳು ಹಗಲು ಹರಿಸ್ಮರಣೆಯ ಬಿಡದಿರು ದುರುಳರ ಕೂಡದಿರೊಹರಿಪದ ತೀರ್ಥದ ನೇಮವಬಿಡದಿರುಹರಿಪರದೇವತೆ ಎಂದರುಪುತಲಿರುಗುರುಮುಖದಿಂದ ಸಚ್ಛಾಸ್ತ್ರ ಪುರಾಣವ ನಿರುತದಿ ಕೇಳು 4 ತುಷ್ಟನಹನು ಎಳ್ಳಷ್ಟು ಮುಂದಿಟ್ಟರೆಅಷ್ಟಿಷ್ಟೆನ್ನದೆ ಸಕಲೇಷ್ಟಂಗಳಕೊಟ್ಟುಕಾಯ್ವನು ಶಕ್ರನಿಗೆ ತ್ರಿವಿಷ್ಟಪಪಟ್ಟವ ಕಟ್ಟಿದವದುಷ್ಟರನೊಲ್ಲ ವಿಶಿಷ್ಟರಿಗೊಲಿವ ಅ-ನಿಷ್ಟವ ತರಿದೊಟ್ಟುವ ಜಗಜಟ್ಟಿ ಅರಿಷ್ಟಮುಷ್ಟಿಕಾದ್ಯರÀ ಹುಡಿಗುಟ್ಟಿದ ವಿಠಲ ಬಹು ದಿಟ್ಟ 5 ಕಂದ ಬಾಯೆಂದರೆ ನಂದನಿಗೊಲಿದಿಹಕುಂದುಕೊರತೆ ಬಂದರೆ ನೊಂದುಕೊಳನುಇಂದಿರೆಯರಸ ಮುಕುಂದ ಮುಕುತಿಯ ನಂದನವನೀವ ದೇವಸಂದೇಹವಿಲ್ಲದೆ ಒಂದೆಮನದಿ ಸ-ನಂದನಾದಿಗಳು ಭಜಿಸಲು ಒಲಿವ ಉ-ಪೇಂದ್ರನ ಶುಭಗುಣಸಾಂದ್ರನ ಯದುಕುಲಚಂದ್ರನ ವಂದಿಸಿರೊ 6 ಓಡುವ ಅಡಗುವ ದೇವರೆ ಬಲ್ಲರುಬಾಡುವ ಬೇಡುವ ಮುನಿಗಳೆ ಬಲ್ಲರುನೋಡುವ ಕೂಡುವ ಮುಕುತರೆ ಬಲ್ಲರೊಡನಾಡುವ ರಮೆ ಬಲ್ಲಳುಊಡುವ ಪಾಡುವ ಯಶೋದೆ ಬಲ್ಲಳುಕಾಡುವ ಖಳರ ಮರ್ದಿಸಿ ಹುಡಿಗುಟ್ಟಿದನಾಡೊಳು ಕೇಡುಗಳೆವ [ಕೃಷ್ಣನಿಗೀಡೆಂದಾಡದಿರು] 7 ಆವನ ಪಕ್ಷವದಕೆದುರಿಲ್ಲಆವನ ಕುಕ್ಷಿಯೊಳಕ್ಕು ಜಗತ್ರಯಆವನು ಶಿಕ್ಷಿಪ ರಕ್ಷಿಪನು ಮತ್ತಾವನು ಪಾವನನುಆವನ ಶಿಕ್ಷೆಯ ಮಿಕ್ಕವರಿಲ್ಲ ಕೇ-ಳಾವನುಪೇಕ್ಷೆ ಕುಲಕ್ಷಯವೆನಿಪುದುಆವನುರುಕ್ರಮ ವಿಕ್ರಮನೆನಿಸಿದ ದೇವನಿಗಾವನೆಣೆ 8 ಪತಿ ಆವನ ಚರಣಸೇವಕನಾದಸುರರೊಳಗೀ ಹಯವದನಗಿನ್ನಾರನು ಸರಿಯೆಂದುಸುರುವೆನೊ 9
--------------
ವಾದಿರಾಜ
ನಾರಾಯಣನೆಂಬ ನಾಮವೇ ಮೂಲಮಂತ್ರಓರಂತೆ ಜಪಿಸುವೆನು ಶ್ರೀಹರಿ ಹರಿ ಪ. ಆರ ಬಿಡುವೆನು ಮತ್ತಾರ ಕೂಡುವೆನುಆರಾರಿಗೊಡಲನೀವೆಆರಂಘ್ರಿಗೆರಗುವೆ ಆರಾರ ಮನ್ನಿಸುವೆಆರಿಂದ ಉದರ ಪೂರ್ತಿ 1 ಆರಿದ್ದರೇನುಫಲ ಆರು ಬಗೆಯನರಿತುಆರುಸಾವಿರವನೋದಿನೂರ ನೀರೊಳಗಿಟ್ಟು ಆರೆಂಟ ನೆನೆದು ಹದಿ-ನಾರನಾದರು ಕೊಟ್ಟನೆ 2 ಇಬ್ಬರೊಳಗೆ ಎನಗೊಬ್ಬನೆ ಸಾಕು ಕಣ್ಗೆಹಬ್ಬವಾವನ ಕಂಡರೆಒಬ್ಬನಿಗೋಸುಗ ಮತ್ತೊಬ್ಬನ ಭಜಿಸುವೆಅಬ್ಜಾಕ್ಷ ಹಯವದನ3
--------------
ವಾದಿರಾಜ
ನಾರಾಯಣಾ ಕರುಣಾ ಘನಚರಣಕ್ಕೆರಗುವೇ ಸ್ಮರಣೆಯೊಳಗೆ ಮನ ಒಲಿಯಿಸಿ ಪ್ರೇರಣೆ ಮಾಡುವಾ ಪ ನನ್ನ ನಿಜವನರಿಯದೆ ನಾ ಅನ್ಯ ಯೋನಿಯೊಳಗೆ ತಿರುಗಿ ಬನ್ನ ಬಡುವುದನ್ನು ತಿಳಿದು ನಿನ್ನ ಬಿಡೆನೆನ್ನೆ 1 ಭಾವಭಕ್ತಿಯಿಂದ ಪಿಡಿದು ನೋಯದಂತರದೊಳಗಿಳಿದು ಸಾವಧಾನದಿ ಸೇವೆಮಾಳ್ಪೆ ಭಾವ ಬಲಿದು ನಾ 2 ಎಲ್ಲಿಯೂ ಪರಿಪೂರ್ಣ ನೀನೆ ಸೊಲ್ಪಗೊಡಲಶಕ್ಯ ನಾನೈ ಬಲ್ಲಿದವರಿಂದೆಲ್ಲಾ ಅರಿಶ ಘುಲ್ಲನಾಭನೇ 3 ನಾದದ ಮೊದಲಿನ ಮೂಲದಿ ಭೇದಭಾವವೆಲ್ಲ ಅಳಿದು ಆದಿಶಾಂತಿ ಸುಖವನೀವ ನಾದಿ ಶ್ರೀಗುರು 4
--------------
ಶಾಂತಿಬಾಯಿ
ನಿತ್ಯ ತೃಪ್ತಾ ಅನ್ಯರಿಂದಲಿ ಎನಗೆ ಏನು ಪ್ರಯೋಜನವೊ ಪ ದರುಶನಕೆ ಬಂದವ ನಾನಲ್ಲವೆಂದು ನಾನಂದು ಹರಿ ನಿನಗೆ ನುಡಿದದ್ದು ಮನಸ್ಸಿನೊಳಗೆ ಇರುತಿಪ್ಪದೇನಯ್ಯಾ ಬಿನ್ನಪವೆ ಲಾಲಿಸು ಶರಣ ಜನರ ಅಭಿಪ್ರಾಯವೊಂದು ಬಗೆ ಇಪ್ಪದೊ1 ನಿರುತ ವ್ಯಾಪ್ತತ್ವ ಕರುಣತ್ವ ಅಣುಮಹತ್ತು ಸರುವ ಚೇತನ ಜಡ ಮತ್ತೆ ಮತ್ತೆ ಪರಿ ಪರಿಯಿಂದಲಿ ನಿನ್ನಲಿ ಉಂಟು ನಿನ್ನ ವರ ಮೂರ್ತಿಗಳ ಪೇಳದೆ ಇದಷ್ಟು ವಿನಯದಲಿ 2 ಧ್ಯಾನಕ್ಕೆ ನೀನು ಪ್ರಧಾನನೆಂದು ನುಡಿದೆ ಅಪ್ರಮೇಯ ಕ್ಷೋಣಿಜನಕಿಂತ ದ್ವಾರದವರು ವೆಗ್ಗಳವಾಗೆ ಏನೆಂಬೆ ತಿರುವೇಂಗಳೇಶ ನಿನ್ನಾಟಕ್ಕೆ 3 ಮಿಕ್ಕ ಮಂದಜನಕೆ ನಿನ್ನ ಭಕುತರ ಮೇಲೆ ಭಕುತಿ ಪುಟ್ಟುವುದಕ್ಕೆ ನಾ ಪೇಳಿದದ್ದು ಅಕಟಕಟ ನಿನ್ನ ದೊರೆತನಕೆ ಏನೆಂಬೆ ತಕ್ಕ ಮಾತುಗಳೇನೊ ಆಲೋಚಿಸಿ ನೋಡೆ 4 ಹೊನ್ನು ಹಣ ತೂಗಬೇಕಾದರೆ ಮೊದಲಿಗೆ ಚಿನ್ನ ಹಾಕುವರೇನೊ ಚಿನ್ಮಯರೂಪ ಮುನ್ನೆ ನಿನ್ನವರ ದರುಶನವಾದ ಮೇಲೆ ಪಾ ವನ್ನ ಶಾರೀರನೆ ನಿನ್ನ ಕಾಂಬುವದುಚಿತ 5 ಜರೆಮರಣರಹಿತ ಸುಜನರ ಪರಿಪಾಲಾ ನಿ ನಿತ್ಯ ವಜ್ರಪಂಜರಾ ಜರಗೆ ವರವಿತ್ತ ದನುಜರ ವಂಶನಾಶಾ ನಿ ರ್ಜರ ನದಿ ಜನಕಾಂಬುಜ ರವಿ ನಯನ ದೇವಾ 6 ಸ್ಥೂಲಮತಿಯಿಂದ ಪೇಳಿದೆನೆಂದು ಚನ್ನಾಗಿ ಲಾಲಿಸು ಲಲಿತಾಂಗಿ ಲಕುಮಿ ರಮಣಾ ನೀಲಗಿರಿ ನಿವಾಸ ವಿಜಯವಿಠ್ಠಲ ವೆಂಕಟವಾಲಗವ ಕೈಗೊಳ್ಳು ಎನ್ನ ಯೋಗ್ಗಿತವರಿತು7
--------------
ವಿಜಯದಾಸ
ನಿತ್ಯ ಶುಭಮಂಗಳಮಂ ಪ ಧರೆಯೊಳು ನಿನ್ನಂಥಾ ತರುಣಿ ಮಣಿಯಳಾ ಕಾಣೆಹರಿಯ ವಕ್ಷಸ್ಥಳದಿ ಇರುವೆ ನೀನುಕರವೆತ್ತಿ ಮುಗಿಯುವೆನು ಸಿರಿಯೆ ತವ ಸೌಭಾಗ್ಯಎರಡು ಕಣ್ಣಿಗೆ ತೋರೆ ವರಮಹಾಲಕ್ಷ್ಮಿ1 ಜರದ ಪೀತಾಂಬರವು ಚರಣದೊಳಗಲಿಯುತಲಿಸಿರಿವಂತೆ ಮೂರು ಹೆಜ್ಜೆ ಬರುವಳಾಗಿಸೆರಗೊಡ್ಡಿ ಬೇಡುವೇನು ಹೆರಳಿನಲಿ ಮುಡಿದಿರುವಮರುಗು ಮಲ್ಲಿಗೆ ಚಂಪಕ ಸರಗಳನ್ನು ನೀಡೆ 2 ಇಂದುಮುಖಿ ನಿನ್ನಗಾರ್ತಿಯ ತಂದು ನಿಂದಿಹೆ ನಿಜಸುಂದರಾ ಮೃದು ಕೀರ್ತಿ ಪಾಡುತಿಹೆನೆಚಂದ್ರಶೇಖರ ಸುರರಿಂದ ವಂದಿತ ಚರಣಇಂದಿರೇಶನ ಸಹ ಬಂದಿಲ್ಲೆ ತೋರಿಸುಮುಖ3
--------------
ಇಂದಿರೇಶರು
ನಿತ್ಯ ನಿಗಮನಿಕರ ನಿಶ್ಚಿತ ನಿರ್ಮಲ ನಿನ್ನವನ್ನಸತ್ಯಸಂಧ ಹಯವದನ್ನ ಸಲಹಬೇಕೆನ್ನ ಪ. ಸುಜನ ಸುಖಕÀರಮಧುರವಚನ ಮಾನ್ಯರಚನ ಮೃತ್ಯುಮೋಚನಕದನಕರ್ಕಶ ಕಲಿಮಲ‌ಘ್ನ ಕಮಲಲೋಚನ 1 ಮಂಗಳಾಂಗ ಮಧ್ಯರಹಿತ ಮದನಮೋಹನಕಣ್ಗೆ ಎನಗೆ ಕಾಣಿಸು ನಿನ್ನ ಕಾಯಕಾಂತಿಯಭಂಗರಹಿತ ಭವ್ಯಚರಿತ ಭಯಕೆ ಭಯಹರರಂಗರಾಯ ರಸಿಕರರಸ ರಕ್ಷಿಸಬೇಕೆನ್ನ 2 ಮಧುಕೈಟಭರ ಮರ್ದಿಸಿ ಮತಿಯ ಮಗಗಿತ್ತನಅದರಿಂದ ಅಮರರೆಲ್ಲ ಅರಿತುಕೊಂಡರುಇದಿರುಗೊಂಡು ಇವನ ನೋಡಿ ಇರವ ಮರೆತರುಹೃದಯಸದನ ಹಯವದನ್ನ ಹೊರೆಯಬೇಕೆನ್ನ 3
--------------
ವಾದಿರಾಜ