ಒಟ್ಟು 6145 ಕಡೆಗಳಲ್ಲಿ , 127 ದಾಸರು , 3945 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮನಿವೇದನೆ ಆವಗತಿ ಎನಗೆ ವೈಕುಂಠಪತಿಯೆ | ಕಾವ ಕರುಣಿಯೆ ಸರ್ವದೇವರ ದೇವ ಪ ಉದಯದಲಿ ಎದ್ದು ನಿನ್ನ ನಾಮವೆನ್ನದೆ | ಉದರಕಿನ್ನೇನು ಮಾಡಲಿ ಎನ್ನುತಾ | ಕÀದಗಳಾ ಸರಸುತ್ತ ಕಂಡಲ್ಲಿ ತಿರುಗಿದೆ | ಮದ ಗರ್ವದಲಿ ಬಾಳ್ವ ಮನುಜ ಶಿರೋಮಣಿಗೆ 1 ಧನವ ಘಳಿಸವ ವಾತ್ಸಲ್ಯವಲ್ಲದೆ ಸಾ | ಧನಕೆ ಒಮ್ಮೆ ಮನಸ್ಸು ಎರಗಲಿಲ್ಲಾ | ಮನುಜರೊಳಗೆ ಖ್ಯಾತಿಯಾಗುವೆನೆಂಬೊ | ವೇ | ದನೆ ಮಿಗಿಲಲ್ಲದೆ ಭಕುತಿ ಮತ್ತಿಲ್ಲ 2 ಒಬ್ಬರಕಿಂತಲಧಿಕನಾಗುವೆನೆಂದು | ಉಬ್ಬಿ ಪರರಾ ಸೇವೆಯನು ಮಾಡುವೆ | ಹಬ್ಬಿದ ಪಾಪದ ಸರವಿಗೆ ಉರುಲು ಬಿದ್ದು | ಸುಬ್ಬ್ಬಿದ ಸುಕೃತವ ಕಳಕೊಂಡೆನಯ್ಯಾ 3 ಪೂರ್ವದಲಿ ಉಂಡ ದು:ಖಗಳೆಲ್ಲ ಮರೆದು | ಸರ್ವದಾ ಗರ್ವದಲಿ ಸಜ್ಜನರ ಕೆಡನುಡಿದು | ಉರ್ವಿಯೊಳು ಬಲು ಬಲವಂತನೆನಸೀ | ಸರ್ವದಾ ಸರ್ವ ನರಕಂಗಳಲಿ ಬಿದ್ದು ಹೊರಳಿದೆನು4 ಇನ್ನಾದರೂ ದುರ್ಬುದ್ಧಿಯನ್ನು ಬಿಡಿಸಿ | ಕರವ ಬಿಡದೆ | ಪತಿ ವಿಜಯವಿಠ್ಠಲರೇಯಾ | ಎನ್ನ ಭಾವವು ನಿನ್ನದಲ್ಲವೇನಯ್ಯಾ5
--------------
ವಿಜಯದಾಸ
ಆತ್ಮನಿವೇದನೆ ಕರುಣದಿಂದಲಿ ಪೊರೆಯೊ ನೀ ಎನ್ನ| ನರಹರಿಯೆ ಮುನ್ನ | ಚರಣಕಮಲವ ಸ್ಮರಿಸುವೆನು ನಿನ್ನ ಪ ಪೊರೆಯಬಾರದೆ ಶರಣು ಶ್ರೀಹರಿಅ.ಪ ಗೋಪಾಲಕೃಷ್ಣ| ಗೋಪಸ್ತ್ರೀಯರ ಹರುಷಗೊಳಿಸಿದೆ|| ವೃಂದದಿ ನಲಿದು ಮೆರೆದೆ| ದ್ರುಪದ ಸುತೆಯಳಿಗಿತ್ತ ಶ್ರೀಹರಿ 1 ಗೋವೃಂದ ಸಲಹಿ| ಗೋವಿಂದಾಭಿಧಾನವನು ಪಡೆದೆ|| ರವನು ಹೀರಿದ ಕರುಣಿ ಶ್ರೀಹರಿ 2 ಇಂದೀವರಾಭನೆ| ಬಂಧುಬಾಂಧವರಾರು ಹಿತರಲ್ಲ|| ಇಂದಿರೇಶನೆ ನಿನ್ನ ಚರಣ| ದ್ವಂದ್ವದೊಳು ಮನವಿತ್ತೆನಾಪ | ದ್ಬಂಧುವಾದರೆ ಪ್ರೇಮವಿರಿಸುತ || ಬಂಧಗಳ ಪರಿಹರಿಸುತೆನ್ನನು 3 ಪತಿತಪಾವನ ಈಶ ಸರ್ವೇಶ| ಮಹಶೇಷಶಯನ | ಹಿತವಿಧಾಯಕ ಸರ್ವಭೂತೇಶ|| ದೊರಕುವ ತೆರದೊಳನುದಿನ 4 ಶ್ರೀಕಾಂತ ಸಲಹೈ| ಲೋಕಭರಿತನೆ ಸುಖವಿಧಾಯಕನೆ|| ಲೋಕವಂದಿತ ಲೋಕನಾಥಾ | ನಾಕಿವಂದಿತ ಭಕ್ತವತ್ಸಲ 5 ನಿನ್ನ ಪಾದವ ನಂಬಿ ನಾನಿಹೆನು| ದೇವಾದಿದೇವಾ| ನಿನ್ನ ನಾಮಾವಲಿಯ ಸ್ಮರಿಸುವೆನು|| ಮುನ್ನ ಮಾಡಿದ ಪಾಪವೆಲ್ಲವ| ನಿನ್ನ ನಾಮ ಸ್ಮರಣದಲಿ ಸಂ| ಪೂರ್ಣ ಪರಿಹರಗೊಳಿಸಿ ನಿನ್ನಯ| ಸನ್ನುತಾಂಘ್ರಿಯ ಸೇವೆಗಿರಿಸುತ 6
--------------
ವೆಂಕಟ್‍ರಾವ್
ಆತ್ಮನಿವೇದನೆ ಮತ್ತು ಲೋಕನೀತಿ ಎನಗ್ಯಾಕೆ ಕವಿಯೆಂಬ ಶ್ರೇಷ್ಠನಾಮಾ ಜನರೊಳಗೆ ನಾನೋರ್ವ ಮನಜಾಧಮ ಪ ಸ್ನಾನ ಜಪ ತಪ ಮೌನ ಧ್ಯಾನ ವರಮಂತ್ರಗಳ ಖೂನವಿಲ್ಲದೆ ಜ್ಞಾನ ಹೀನನಾಗಿ ಏನು ಹೇಳಲಿ ದುಷ್ಟ ಮಾನಿನಿಗೆ ಮನಸೋತು ಶ್ವಾನನಂದದಿ ದಿನವ ನಾ ನೂಕಿದವನಯ್ಯ 1 ಹತ್ತೆರಡು ಮತೈದು ಗಾತ್ರದೊಳು ಧರಿಸದಲೆ ಚಿತ್ತ ಚಂಚಲನಾಗಿ ಲೆತ್ತ ಪಗಡಿಗಳಾಡಿ ಕತ್ತೆಯಿಂದದಿ ವ್ಯರ್ಥ ಹೊತ್ತು ಕಳೆದವ ನಾನು 2 ನೇಮಪೂರ್ವಕ ಒಂದು ಯಾಮವಾದರು ಮನದಿ ಶಾಮಸುಂದರ ಧ್ಯಾನ ಮಾಡದೆ ಕಾಮಾರಿ ಷಡ್ವೈರಿ ಸ್ತೋಮಕ್ಕೆ ಭೂಮಿಯೊಳು ಜಡವಾದ ನಾಮದಲಿ ಚರಿಸುವೆನು3
--------------
ಶಾಮಸುಂದರ ವಿಠಲ
ಆತ್ಮನಿವೇದನೆಯ ಕೀರ್ತನೆಗಳು ಆತನೆಯನ್ನ ತಾತನು ಮೆರೆದಾತನೆಯನ್ನ ತಾತನು ಪ ತಂದಿನ ಅಗಲಿದ ಕಂದ ಕಾನನದೊಳು ಬಂದು ಅಂಗುಟ ಊರಿನಿಂದುತ್ವರಾ ಇಂದಿರೇಶ ಭವಬಂಧ ಮೋಚಕ ಪೊರೆಯಂದೆನೆ ಧೃವನಿಗೆ ಚಿರಪದವಿ ಕೊಟ್ಟಾತನೆಯನ್ನ ತಾತನು 1 ದುರುಳತನಪರಿಹರಿಸ ಬೇಕೆನೆ ಮಾನವ ಪರಮಕರುಣಿ ಮುರಹರನೆ ತಡಿಯದಲೆ ಪೊರೆಯನೆ ತರುಣಿಯ ಮೊರೆ ಕೇಳಿದಂಥಾತನೆ 2 ಶಿರಿಗೋವಿಂದ ವಿಠಲ ವೇದ ವಂದಿತ ಪತಿ ಹರಿಪರನೆನ್ನುತ ಪರಮ ಭಕುತಿಯಿಂದ ಸ್ಮರಿಸುವವರ ಕರಪಿಡಿಯಲೋಸುಗ ತನ್ನ ಕರಚಾಚಿಕೊಂಡು ನಿಂತಾತನೆ 3
--------------
ಅಸ್ಕಿಹಾಳ ಗೋವಿಂದ
ಆತ್ಮವೃತ್ತ ವಾಸುದೇವ ವಾಸುದೇವ ಎಂದು ಸತತಮಾನ್ಯದಲ್ಲಿ ಹರಿಯ ನಾಮ ದ್ಯೋತಿಸುವರ ಸ್ಮರಿಸುವೇನು ಪ ಸೀತಾರಾಮಚಾರ್ಯ ಹೇಳಿದ ಮಾತುಗಳನು ಕೇಳಿ ಬಹಳಪ್ರೀತಿಯಿಂದಲವರ ಮಹಿಮ ಪೋತನಾನು ಪಾಡುವೇನು 1 ನರಹರಿಯ ಸಂನಿಧೀಲಿ ತರುಳರಾಮ ಪೇಳಿದಂಥಸರಸ ಪದಗಳನ್ನೆ ಬಹಳ ಹರುಷದಿಂದ ಕೇಳಿಹಾರು 2 ಇಂದಿರೇಶ ಕೃಷ್ಣನಿಲ್ಲೆ ಬಂದು ಪದಕ್ಕೆ ಯದುರೆ ನಾಥಮುಂದೆ ವಾರ್ಧಕಾದಿಯಂತೆಂದು ಭಾವ ಪೇಳಿಹಾರು 3 ಇಷ್ಟು ದಿವಸ ರಾಮನಂಘ್ರಿ ನಿಷ್ಠನಾಗುತೀಗ ನೃಹರಿಪುಟ್ಟಪಾದ ನಮಿಪಾ ಮುಂದೆ ಕೃಷ್ಣನಂಘ್ರಿ ಭಜಿಸುವಾನು 4 ಇಂದಿರೇಶ ಕೃಷ್ಣನನ್ನು ಹಿಂದೆಯೆಂದು ಮುದ್ರಿಕಿಲ್ಲಾಇಂದೆ ಬಂದಿಹುದು ಇದು ಅನಾದಿಯೆಂದು ಪೇಳಿಹಾರು 5
--------------
ಇಂದಿರೇಶರು
ಆತ್ಮಶೋಧನೆ ಅನಂತಾನಂತ ಪಾಪ ಮಾಡುವೆ ನಾನು ಪ ಅನಂತದಯಾನಿಧೆ ನೀನೊ ಹಯವದನ ಅ.ಪ ದಾರು ಎನ್ನ ಪಾತಕಕ್ಕೆ ಸರಿಗಾಣಿಸೆನೆಂದರೆ ಪಾಪ ಕ್ಷೋಣಿ ಪರಿಮಾಣುಗಳಿಗೆ 1 ಪೇಳು ಪಾಪವೆಂದಲೆನಲು ಪೇಳಲಿಕ್ಕೆ ಬಲುಲಜ್ಜೆ ಗಳು ಅಂಡಲಿವುತಿದೆ ತಿಳಿದಾತ ನೀನಲ್ಲವೆ 2 ಎನಗೊಂದು ಉಪಾಯವ ಅನಾಯಾಸ ಮಾಡುವಂಥ ನಿನ್ನ ನಾಮಸುಧೆಯನ್ನು ಎನಗೀಯೊ ಮುದದಿಂದ3 ಕಾಲ ಸ್ವಾಮಿ ನೀನು ದಾಸನು ಆಸು ಕಾಲದವನು ವಾಸುದೇವವಿಠಲನೆ ನೀ ಸಡಲ ಬಿಡುವರೇನೊ4
--------------
ವ್ಯಾಸತತ್ವಜ್ಞದಾಸರು
ಆದರೇನಾಯಿತು ಹರಿ ಎನ್ನ ಪೊರೆಯಾ ಈ ಧರೆಯೊಳಾರು ಮಾಡದ ದೋಷ ನಾ ಮಾಡಲಿಲ್ಲಾ ಪ ತಾರಾಪತಿಯಂತೆ ಗುರುದ್ರೋಹ ಮಾಡಿದವನಲ್ಲ ವಾರಿಜೋದ್ಬವನಂತೆ ತಪ್ಪಲಿಲ್ಲಾ ಮಾರ ಮಹಿಮನಂತೆ ನಾ ಮಹಿಮನೆಂದು ಹೇಳಲಿಲ್ಲ ಬಾರಿಬಾರಿಗು ನಿನ್ನ ಭಜಿಸುವದೊಂದೆ 1 ತಂದೆ ಮಾತನು ಕೇಳಿ ತಾಯಿ ದ್ರೋಹ ಮಾಡಲಿಲ್ಲ ಬಂಧು ಬಳಗ ದ್ವೇಷ ಮಾಡಿ ಬಾಧಿಸಲಿಲ್ಲ ಅಂಡಜಾಮಿಳನಂತೆ ಅತಿದ್ರೋಹ ಮಾಡಲಿಲ್ಲ ಚಂದದಿಂದಲಿ ನಿಮ್ಮ ಸ್ಮರಿಸುವದೊಂದೆ 2 ಅತಿ ಘಂಟಾಕರ್ಣನಂತೆ ಕರ್ಣಘಂಟೆ ಶಬ್ಧವಿಲ್ಲ ಹಿತದಿ --------ಬ್ರಹ್ಮತ್ಯನಿಲ್ಲ ಸತತ ನೀನೆ ಎನಗೆ ಗತಿಯೆಂದು ಇರುವುದೊಂದೆವಿತರಣಾ ಕೊಂಡರಿಯೆ ವೀರ 'ಹೊನ್ನವಿಠಲಾ’ 3
--------------
ಹೆನ್ನೆರಂಗದಾಸರು
ಆದಿಕೇಶÀವನ ಪಾಡಿ ಸುಜನರು ಮೋದದಿಂದಲಿ ಕೂಡಿ ಭವ ಬೇಡಿ ಪ ಅಸ್ಥಿರ ಸಂಸಾರ ಮೇಲು ದುಃಖಪಾರವಾರ ಇಲ್ಲಿ ವಸ್ತಿ ತ್ರಿವಾಸರಾ ಸ್ವಸ್ಥ ಚಿತ್ತದಿಂದ ಹರಿಯ ನೆನೆಯದಾಗ ಬ್ಯಾಡಿರಿ ಭೂಭಾರ 1 ಪರಿ ಜಾರಿ ಬೀಳುವುದಕ್ಕೆ ನೀರೊಳು ತೊಳೆದು ಪರಿಮಳತೊಡೆ ಮಲಸೋರದೆ ಪೇಳಿದರೆ 2 ಮಡದಿ ಮಕ್ಕಳು ಬಂದು ನಿನ್ನ ಕಡೆ ಹಾಸೋಕೆ ಬಂದು ನಿಮಗೆ ಕೆಡಬ್ಯಾಡಿರಿ ಹರಿಪರಮ ದಯಾಸಿಂಧು 3 ಸಂಗಡ ಬಂದು ರಕ್ಷಿಪರೇನು ಕಷ್ಟಬಟ್ಟು ನೀವು ಘಳಿಸಿ ಹೂಳಿದರೆ ಹುಟ್ಟಿದ್ದಾಯಿತೇನು 4 ನಗೆಗೇಡು ನಿಮ್ಮ ಬಟ್ಟಿ ಮೂರಾಬಟ್ಟಿ 5 ಅರಮಾಯಾ ಇನ್ನು ಪರಿ ಆದೀತು ನಿಮ್ಮ ಕಾಯಾ 6 ಇದು ಘಟ್ಟಿಯೆ ಸಂಸ್ಕøತಿಯು ಬಿಟ್ಟಿಗಾರರು ನಿಮ್ಮ ಕಟ್ಟುವನಿತರೊಳು ಮುಟ್ಟಿ ಭಜಿಸೆ ಹರಿಯಾ 7 ಮೇಲು ಸರಿಪರಿವಾರಗಳಾ ನರಸಿಂಹವಿಠಲಗರ್ಪಿಸಿ ಸುಖಿಸುವ ನರವರ ಜನ್ನವೇ ಸಫಲಾ 8
--------------
ನರಸಿಂಹವಿಠಲರು
ಆದಿಕೇಶವಗರ್ಥಿಯಲಿ ನಾನಾರ್ತಿ ಮಾಡುವೆನು ಆರ್ತಿ ಮಾಡುವೆ ನಾ ಮಂಗಲಾರ್ತಿ ಮಾಡುವೆನು ಪ ಶೀಳಿ ದೈತ್ಯನ ಲೀಲೆಯಲಿ ಮಂಗಳೋಲೆ ತಂದವಗೆ ವ್ಯಾಲತಪ್ಪಿದ ಶೈಲವನು ಬೆನಮ್ಯಾಲೆ ಪಿಡಿದವಗೆ ಖೂಳಗೆ ತೋರಿದ ... ಪದಗೋಲ ತಂದವಗೆ ಬಾಲಗೆ ಪಿತ ಗೋಳು ಮಾಡಿದ ಕೇಳಿ ಆ ದೈತ್ಯನ ಶೀಳ್ದವಗೆ 1 ಭೂಮಿಯ ಬೇಡಿ ನಿಸ್ಸೀಮ ಬಲಿನೃಪನಾ ಹಮ್ಮು ಕರಗಿಸಿ ಪಾತಾಳಕಟ್ಟಿದವಗೆ ನೇಮದಲಿ ಕ್ಷಾತ್ರಸ್ತೋಮವ ನಿರ್‍ನಾಮ ಮಾಡ್ದವಗೆ ದಶಶಿರ ನಾಮವಳಿದ ಶ್ರೀರಾಮ ಚಂದಿರಗೆ ಸೋಮಕುಲದ ಸುನಾಮಿ ವರ್ಗಕೆ ಪ್ರೇಮರಸ ಸತ್ಯಭಾಮಾವರಗೆ 2 ಹರನ ಬಲಪಿಡಿದರೀ ತ್ರಿಪುರಸಂಹರೀಸಿದ ಶಿರಿವರಗೆ ಹರಿಯನೇರಿ ದನುಜಾರನ್ನೆಲ್ಲ ಸವರೀದ ಭೂವರಗೆ ಶರಣಜನರೊಳು ಕರುಣವಿರಿಸಿ ನಿರುತ ಪೊರೆದವಗೆ ಶ್ರೀ ನರಸಿಂಹವಿಠಲನಿಗೆ 3
--------------
ನರಸಿಂಹವಿಠಲರು
ಆದಿಯುಗದಿ ಮಹ ಆದಿದೈತೇಯನೊಬ್ಬ ಮೇದಿನಿಯೊಳ್ ಸ್ವರ್ಣಕಶ್ಯಪು ನಾಮದಿ ಸಾಧಿಸಿ ಬಂದವಗೊಬ್ಬ ಸೋದರ ಸ್ವರ್ಣಾಂಬಕನೆನಿಸಿ ಮೇದಿನಿ ಚೋರನಾಗಿ ಹತನಾದನು ಆದಿಶೇಷನೆ ವಿಷ್ಟಕ್ಸೇನ ತಾ- ನಾದ ಪ್ರಹ್ಲಾದ ಪ್ರಾಣಾವೇಶದಿಂದ ಸೋದರ ಜೀವಾಂಶಾಪಾನಾವಿಷ್ಟ ಸ- ಲ್ಹಾದನಾಮಕ ಮಿತ್ರನಾದ ಕ ಹ್ಲಾದ ವ್ಯಾನಾವೇಶದಿಂದ ಮೋದದಿ ಸೋಮಾಂಶೋದಾನಾಯುತ ನು- ಹ್ಲಾದ ನಾಮಕ ಸಂಭೂತನಾದ ಆದರೈವರಾದೈತ್ಯಗೆ ಪುತ್ರರು ಮೇದಿನಿ ಸುರರುದ್ಧಾರಗೋಸುಗ ಆದಿದೈವ ನಾರೇಯಣ ತಾ ನಾದಿಕಾರಣ ವಿಶ್ವಕರ್ತಾ ಮೋದಾನಂದ ಮೂರುತಿ ಸುಗುಣ ಭೋಧಪೊರ್ಣ ಸರ್ವಜ್ಞ ಸ್ವಾತಂತ್ರ ವೇದಪುರುಷಾದಿ ಜಡಾದಿ ಜಗಕೆ ಆಧಾರ ಹರಿ ಎಂಬ ಜ್ಞಾನವ ಭೋದಿಸಿ ಬೊಮ್ಮಮುಖರು ಹರಿ ಪಾದಸೇವಕರೆನುತ ನಿತ್ಯ ವಾದದಿ ವಾದಿಗಳ ಜಯಸಿದರವರ ಪಾದಸೇವಿಸಿ ಕರುಣಾಪಡೆದು ಆದಿ ಗುರು ಜಗನ್ನಾಥವಿಠಲನ್ನ ಆದರದಲಿ ಭಜಿಪೆ ಪರಮ ಸುಖ ರಾಗ :ಕಲ್ಯಾಣಿ ಅಸುರರ ಜನ್ಮದಿ ಪುಟ್ಟಿದ ಇವರಿಗೆ ಶ್ವಸನನ ಆವೇಶ ಸುರರಾವೇಶ ಬಲದಿ ಅಸಮಙÁ್ಞನ ಭಕುತಿ ವಿರಾಗವು ವಸುಧಿಯ ತಳದಿ ದಿನದಿನದಲ್ಲಿ ಪಸರಿಪ ಸೂರ್ಯನ ಪ್ರಭೆಯಂದದಲಿ ಮಿಸುಪದಕಿದೇ ಕಾರಣ ಉಂಟು ಬಿಸಜಾಂಬಕ ಹರಿಪೇಳಿದ ಇವರಿಗೆ ಅಸುರೇಶ ಹಿರಣ್ಯಕಶಿಪುವಿನಲ್ಲಿ ಶಿಶುಭಾವದಿಂದ ಜನಿಸಲು ಪೋಗಿರಿ ಪುಸಿಯಲ್ಲ ಮಚ್ಛಾಪÀ ಅಸುರಭಾವ ಪ್ರಲ್ಹಾದಾದ್ಯ ರಸಮಮಹಿಮರಾಗೀ ಜನಿಸಿರೆಂದು ಉಸುರಿದ ವಾಕ್ಯವು ಪ್ರಮಾಣ ಸಿದ್ಧವೆನ್ನಿ ವ್ಯಸನzಲೈವರು ಹರಿಯನೆ ಮತ್ತೆ ಬೆಸಗೊಂಡರೀಪರಿ ಪರಿಯಾ ಅಸುರನ ಪತ್ನಿಯ ಬಸಿರೊಳು ಪುಟ್ಟುವುದು ವಶವಲ್ಲವೋ ಸ್ವಾಮಿ ಕುಸುಮನಾಭನೆ ನಿನ್ನ ಅಸಮಲೋಕದ ಸುಖ ವಸುಧಿತಳಾದಲ್ಲಿ ಎಸಗದು ಎಸಗದು ಎಂದಿನಕಾಲಕ್ಕೂ ಮುಸುಕುವದಙÁ್ಞನ ದುಃಖದ ಭವದಲ್ಲಿ ಕಸವಿಸಿಗೊಳುತಾ ಙÁ್ಞನವನೀಗಿ ಬಿಸನಿಲಯನೆ ನಿನ್ನ ದರುಶನವಿಲ್ಲದೆ ಅಸುನಿಲ್ಲುವ ಬಗೆ ಯಾವುದು ಪೇಳೋ ಶಶಿಧರವಂದ್ಯ ಗುರುಜಗನ್ನಾಥ ವಿಠಲ ನಮ್ಮ ವ್ಯಸನವನು ಕಳೆದು ಸುಖವನು ಸಲಿಸೋ ರಾಗ - ಕಾಂಭೋದಿ ತಾಳ - ತ್ರಿವಿಡಿ ಭಕುತವಾಕ್ಯವ ಲಾಲಿಸಿ ತಾನಾಗ ಪರಿ ನುಡಿದನು ವಿಕಳ ಪೊಂದದೆ ನೀವು ತ್ವರಿತಾದಿ ಧರೆಯೊಳು ಸಕಲರು ಜನಿಸಲು ಮುಸಕದಙÁ್ಞನ ಲಕುಮಿ ಭೂಮಿಯ ಸಹಿತ ಇರುವೆನು ನಿಮ್ಮೊಳು ನಿತ್ಯ ಪರಿಪರಿ ಮಹಿಮವ ಪ್ರಕಟಮಾಡುವೆ ಮುಖ್ಯಪ್ರಾಣನಿಪ್ಪನು ಸತತ ಕಕುಲಾತಿ ಯಾಕಿನ್ನು ನಡಿರೆಂದು ಹರಿಯೆಂದ ಉಕುತ ವಾಕ್ಯದಲಿಂದ ದಿತಿಜನಲ್ಲಿ ಸುಕೃತಿಗಳೈವರು ಉದಯವೈದಿದರಾಗ ಮುಕುತಿದಾಯಕ ಗುರುಜಗನ್ನಾಥ ವಿಠಲನೆಂಬ ಭಕುತಿ ಪೂರ್ವಕ ಙÁ್ಞನವೃದ್ಧಿಯೈದಿದರು ರಾಗ - ಆರಭಿ ತಾಳ - ಅಟ್ಟ ಪಿರಿಯ ಪ್ರಲ್ಹಾದನ್ನ - ಕರದು ತೊಡೆಯ ಮೇಲೆ ಇರಿಸಿ ಪ್ರೇಮದಿ ನಿಮ್ಮ - ಗುರುವೇನು ಪೇಳ್ಯಾನೆ ಮರಿಯಾದೆ ಎನಮುಂದೆ - ಅರಹು ಎನಲು ಬಾಲ ಕಿರಿನಗೆ ಮುಖದಿಂದ - ಹರಿಯೆ ಸರ್ವೋತ್ತಮ ಹರಬೊಮ್ಮ ಮುಖರೆಲ್ಲ - ಪರಿವಾರಭೂತರು ಅರಿದಿಪ್ಪೆ ಎನ್ನಯ್ಯ ಸರಸಿಜಜಾಂಡಕ್ಕೆ ಅರಸು ತಾನಾಗಿದ್ದು ಇರುವಾದಿ ಚೇತನ ತರುವಾದಿ ಜಡಮಯ ಸರ್ವಸ್ಥಳದಲ್ಲಿ ನಿರುತದಿ ವ್ಯಾಪಿಸಿ ಇರುತಿಹ ಹರಿ ಎಂದು ಅರಿತ ಮಾನವÀÀನಿಗೆ ದೊರೆವೋನು ನಿಶ್ಚಯ ಅರಿತು ಪೇಳಿದ ತನ್ನ ತರಳಾನ ನುಡಿಕೇಳಿ ಭರದಿಂದ ಕಂಬವ ಕರದಿಂದ ಬಡಿಯಾಲು ನರಮೃಗಾಕಾರದಿ ಹೊರಗೆ ಬಂದಾದೈತ್ಯನು ದರವ ಬಗೆದು ಕರುಳಮಾಲೆಯತಾ ಕೊರಳೊಳು ಧರಿಸಿದ ಚರಜನ ಪರಿಪಾಲ ಬಿರುದು ಬೀರಿದ ನಮ್ಮ ಗುರುಜಗನ್ನಾಥವಿಠಲ ಶರಣರ ಮರೆಯನೋ ಧರಿತಳದೊಳಗೆ ರಾಗ :ಇಚ್ಛಾ :ತಾಳ - ಆದಿ ಈ ತೆರ ಪ್ರಹ್ಹಾದ ಹರಿಪಾದವ ಭಜಿಸಿ ಪ್ರೀತಿಯ ಪಡೆದು ಭೂಸುರಗಣಕೆ ಭೂತಳದೊಳಗೆ ಯತಿಗಳ ಕುಲಕೆ ನಾಥನು ವ್ಯಾಸಮುನಿ ಎನಿಸಿ ಮರಳಿ ಖ್ಯಾತ ಶ್ರೀ ರಾಘವೇಂದ್ರನೆಂದೆನಿಸಿ ಪ್ರೀತಿಯಿಂದಲಿ ಭಕ್ತರ ಪೊರೆಯಲು ನೀತಿ ಭಾವದಲಿ ಯತಿಯಾಶ್ರಮ ಪೊಂದಿ ಸೀತಾಪತಿರಾಮ ಯದುನಾಯಕ ಕೃಷ್ಣ ಭೀತಿಹರ ನರಸಿಂಹ ವ್ಯಾಸರ ಭಜಿಸಿ ದೂತರ ಮನೋರಥ ಪೂರ್ತಿಸಿ ಪೊರೆವನು ದಾತಗುರುಜಗನ್ನಾಥ ವಿಠಲನ್ನ ನೀತ ವಿಭೂತಿಯ ಪಡೆದು ನಿರ್ಭೀತನಾಗಿಹನು ಜತೆ ದೂತಜನರ ಮಹಾಪಾತಕ ಹರನೆನ್ನಿ ಪ್ರೀತಗುರುಜಗನ್ನಾಥವಿಠಲನೊಲಿವ ರಾಗ :ಶಂಕರಾಭರಣ :ತಾಳ :ಏಕ
--------------
ಗುರುಜಗನ್ನಾಥದಾಸರು
ಆದಿವರಾಹನ ಚೆಲುವಪಾದವ ಕಾಣದೆ ಕಣ್ಣುವೇದನೆಯು ಆಗಿ ಬಲು ಬಾಧಿಸುತ್ತಲಿದೆಯೆನ್ನಈ ಧರೆಯೊಳಗೆ ಶುಕ್ಲನದಿಗೆ ದಕ್ಷಿಣದಲ್ಲಿದ್ದ ಮೇ-ಣ್ ದಾಡೆ ಅತ್ತಿತ್ತಂದ ಪ. ಅಷ್ಟಾ ಸ್ವಯಂ ವ್ಯಕ್ತ ಶ್ರೀಮುಷ್ಣಅಷ್ಟಾಕ್ಷರ ಮಂತ್ರವನ್ನು ಇಷ್ಟುಮಾತ್ರ ತಿಳಿದವರೆಷ್ಟು ಪುಣ್ಯ ಮಾಡಿದಾರೊಸೃಷ್ಟಿಯೊಳಗೆ ಇವರು ಶ್ರೇಷ್ಠರೆಂದು ಅರಿತರೆಕಷ್ಟವು ಬಾರದು ಎಂದೆಂದುಅಷ್ಟದಾರಿದ್ರ್ಯ ಹೋಹುದು ಅಷ್ಟೈಶ್ವರ್ಯವು ಬಾಹುದುಇಷ್ಟು ಮಾತ್ರವಲ್ಲ ಕೇಳೊ ಅಷ್ಟಪುತ್ರರು ಆಹೊರು ದೃಷ್ಟಿಬಾರದಂತೆ ಮನದಿಷ್ಟ್ಟಾರ್ಥವ ಕೊಟ್ಟು ಕಾವಅಷ್ಟದಿಕ್ಕಿನೊಡೆಯನೊಬ್ಬ 1 ವರಾಹ ಅಂಬುಜವಲ್ಲಿ ಚೆಲ್ಲಿತ್ತಾವನದಲ್ಲಿ ಇದ್ದ್ದಾದಿವರಾಹ 3 ಮಂಡೆ ಪೂ ಬಾಡದಿಂದೆನ್ನುಪುಂಡರೀಕಾಕ್ಷ ತಾ ಸವಿದುಂಡು ಮಿಕ್ಕಪ್ರಸಾದವನಾ ಪ್ರ-ಚಂಡ ಹನುಮಂತಗೆ ಕೊಟ್ಟ 4 ಭಾರವ ಮುಗಿಪೋವ್ಯಾಳೆ ಗರುಡನ ಕಂಡು ಈಗಗುರುಮಂತ್ರ ಉಪದೇಶ ಶ್ರೀ-ಹರಿಸ್ಮರಣೆಗಳಿಂದ ನರಕಬಾಧೆÉಗಳ ಇಲ್ಲದಂತೆ ಮಾಡಿ-ದರು ಶ್ರೀಹರಿಯ ವಾಲಗದಿಂದಲಿತಿರುಪತಿ ಸುತ್ತ ಶೇಷಗಿರಿಯ ವಾಸದಲ್ಲಿಪ್ಪವರಾಹ ವೆಂಕಟೇಶನಚರಣಕಮಲವನ್ನು ಹರುಷದಿಂದಲಿ ಕಂಡುಪರಮಸುಖವನಿತ್ತ ಹಯವದನನ ನಂಬಿರೊ 5
--------------
ವಾದಿರಾಜ
ಆನಂದ ಆನಂದವು ಈ ಜಗದಿ ಗೋವಿಂದನ ದಯದಿ ಪ ಆನಂದವು ಗೋವಿಂದನ ನಾಮವು ಆನಂದದಿ ಸ್ಮರಿಸುವ ಸುಜನರಿಗೆಅ.ಪ ಬಂಧು ಬಾಂಧವರೆಲ್ಲರು ಕೂಡುತಲಿ ಒಂದೇ ಮನಸಿನಲಿ ಇಂದಿರೇಶನ ಸ್ಮರಣೆಯ ಮಾಡುತಲಿ ನಂದ ಯಶೋದೆಯ ಕಂದನೆ ಪರನೆಂದು ಚಂದದಿ ಕುಣಿದಾಡುತ ಸ್ತುತಿ ಮಾಡಲು ಭವ ಬಂಧನ ಬಿಡಿಸುವ- ನೆಂದು ಮನದಿ ಆನಂದ ಪಡುವರಿಗೆ 1 ಪಕ್ಷಿವಾಹನ ಪುರುಷೋತ್ತಮ ಹರಿಯು ಆನಂದ ವತ್ಸರದಿ ರಕ್ಷಿಸಿ ಪೊರೆವನು ಭಕುತರ ತ್ವರದಿ ಅಕ್ಷರೇಢ್ಯ ಕಮಲಾಕ್ಷನೆ ಪರನೆಂ- ದೀಕ್ಷಿಪ ಭಕುತರ ರಕ್ಷಿಸಿ ಪೊರೆವ ಪ- ರೀಕ್ಷಿತಗೊಲಿದಂದದಿ ಪರಮಾತ್ಮನು ರಕ್ಷ ಶಿಕ್ಷಕನೆಂದೆನುವ ಸುಜನರಿಗೆ2 ಕಮಲಾಪತಿ ಕಾಮನ ಪಿತ ಶ್ರೀಹರಿಯು ಕಾರುಣ್ಯ ನಿಧಿಯು ಕಮಲಾಕ್ಷನು ಕಾಪಾಡುವ ಸುಜನರನು ಕಮಲಭವೇಂದ್ರಾದ್ಯಮರರು ಪೊಗಳಲು ಕಮಲನಾಭ ವಿಠ್ಠಲ ಜಯ ಜಯ ಎಂದು ಸುಮನಸರೊಡೆಯ ಸುಂದರ ಶ್ರೀಹರಿ ತಾ ಶ್ರಮ ಪರಿಹರಿಸುವನೆನುವ ಸುಜನರಿಗೆ3
--------------
ನಿಡಗುರುಕಿ ಜೀವೂಬಾಯಿ
ಆನಂದ ಗಂಭೀರ ನೀಲಾಂಗ ರಂಗ ಭಂಜನ ಹರೇ ಹರೇ ಪ ಮುನಿಜನ ವಂದಿತ | ವನರುಹ ಲೋಚನ ಘನ ನೀಲಾಂಬುದಸಮಾ ಹರೇ ಅ.ಪ ವನಜನಯನ ಹರಿಕೇಶವ ಮಾಧವ ಕನಕಾಂಬರಧರ ಗೋಪಾಲ ದನುಜ ಕುಲಾಂತಕ ಧೇನುಕ ಸಂಹಾರ ಅನಂತ ಶ್ರೀಧವ ಶ್ರೀಬಾಲಾ 1 ಭುವನಮನೋಹರ ಮುರಳೀಧೃತಕರ ಭವಸಾಗರದೂರ ನಮೋ ನಮೋ ಪವನಾತ್ಮಜಕರ ಮಾಂಗಿರಿನಾಯಕ ತವಸೇವಿತಪದ ನಮೋ ನಮೋ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಆನಂದ ತೀರ್ಥರೆಂಬೊ ಅರ್ಥಿಯ ಪೆಸರುಳ್ಳಗುರು ಮಧ್ವಮುನಿರಾಯಏನೆಂಬೆ ನಿನ್ನ ಗುಣ ಮಹಾತ್ಮೆಗೆಗುರುಮಧ್ವಮುನಿರಾಯ ಪ. ಮುಖ್ಯಪ್ರಾಣ ರೂಪನಾಗಿ ಮುನಿಯ ಚಾರಿತ್ರ್ಯ ತಾಳಿದಿಗುರುಮಧ್ವಮುನಿರಾಯಸೊಕ್ಕಿದ ದೈತ್ಯರ ಸೊಕ್ಕುಮುರಿದು ಶೋಭಿಸಿದಿಗುರುಮಧ್ವಮುನಿರಾಯ 1 ವಾನರೇಂದ್ರ ರೂಪನಾಗಿ ವಾರಿಧಿಯ ದಾಟಿದಿಗುರುಮಧ್ವಮುನಿರಾಯಜಾನಕಿಗುಂಗುರಕೊಟ್ಟು ಜಗಜಟ್ಟಿಗಳ ಕುಟ್ಟಿದಿಗುರುಮಧ್ವಮುನಿರಾಯ 2 ಕ್ಷಿತಿಯೊಳು ಕುಂತೀಸುತ ಭೀಮನೆಂದೆನಿಸಿದಿಗುರುಮಧ್ವಮುನಿರಾಯಅತಿಹಿತದಿಂದ ಯದುಪತಿಯ ಭಜಿಸಿದಿಗುರುಮಧ್ವಮುನಿರಾಯ3 ಚಿಕ್ಕತನದಲ್ಲಿ ಶ್ರೀಕೃಷ್ಣನ ಪೂಜಿಸಿದಿಗುರುಮಧ್ವಮುನಿರಾಯಏಕವಿಂಶತಿ ಕುಭಾಷ್ಯವ ಜರಿದೆಯೊಗುರುಮಧ್ವಮುನಿರಾಯ4 ಅತಿ ಬಲವಂತ ಶ್ರೀಹಯವದನನ್ನ ಭಜಿಸಿದ್ಯೊಗುರುಮಧ್ವಮುನಿರಾಯಸತತ ಭಕ್ತರಿಗೆ ಕರುಣಾಮೃತ ಕರೆದೆಗುರುಮಧ್ವಮುನಿರಾಯ 5
--------------
ವಾದಿರಾಜ
ಆನಂದ ಲಹರಿ (ಪಾರಮಾರ್ಥ ಮುಯ್ಯದ ಹಾಡು ) ಗಿರಿಜೇಶ ಮನೋಜಾತಾ ಸುರಮುನಿಜನಪ್ರೀತಾ ಕರುಣಾ ಸಾಗರ ಗಣನಾಥಾ ಜಗವದನಾ ಚರಣಕೆ ಶರಣೆಂದು ಬಲಗೊಂಬೆ ಕೋಲೆ 1 ಸಕಲಾ ಮುಖದೊಳು ಯುಕುತಿಯ ನುಡಿಗಳಾ ಪ್ರಕಟದಿ ನುಡಿಸುವೆ ಜನನಿ ಸರಸ್ವತಿ ಭಕುತಿಲಿ ಶರಣೆಂಬೆ ಕಲ್ಯಾಣಿ 2 ಆಚ್ಯುತಾನಂತನೆ ಸಚ್ಚಿದಾನಂದನೆ ನೆಚ್ಚಿದ ಶರಣರ ಸುರಧೇನುವೆ ಅವಧೂತಾ ಎಚ್ಚರ ಕೊಟ್ಟು ಸಲಹಯ್ಯ 3 ಕರಿಯಾ ಮೊರೆಯ ಕೇಳಿ ಭರದಿಂದೊದಗಿ ಬಂದು ಕರದಿಂದಲೆತ್ತಿ ಸಲಹಿದೆ ಶ್ರೀಶಾ ಚರಣವದೋರಿ ಕಾಯಯ್ಯ 4 ಶರೀರ ಒಂದರಲಿದ್ದು ನರನಾರೀರೂಪದಲಿ ಚರಿತವ ದೋರದೆ ಅನುಪಮ ಶಂಕರ ಕರುಣಿಸು ಫಣಿಗಣ ಭೂಷಣಾ 5 ಅಂಜನೀಸುತನಾಗಿ ಕಂಜನಾಭವ ಸೇವೆ ರಂಜಿಸುವಂತೆ ಮಾಡಿದ ದೈತ್ಯರ ಭಂಜನ ಹನುಮಂತ ಕರುಣಿಸು6 ಚಾರು ಚರಿತಗಳ ತೋರಿದೆ ಜಗದೊಳು ಮುನಿರಾಯಾ ಸುಖತೀರ್ಥ ತಾರಕ ಶರಣರ ನಿಜಗುರು7 ಮೇದನಿಯೊಳಗುಳ್ಳ ಸಾಧು ಸಂತರ ನಿಜ ಅನುದಿನ ಜಗದೊಳು ಸಾದರದಿಂದ ನೆನೆಯುತ 8 ಶರಣವ ಹೊಕ್ಕರ ಕರುಣದಿಂದಲಿ ನೋಡಿ ತರುಣೋಪಾಯವ ತೋರುವಾ ಮಹಿಪತಿ ಗುರುರಾಯ ನಿನ್ನ ಬಲಗೊಂಬೆ9 ಕರುಣವಾಗಲು ಅವರ ಪರಮ ಮೂಕನಜ್ಜಿಹ್ವಾ ಸುರಸ ಮಾತುಗಳ ಆಡೋದು ಹುಸಿಯಲ್ಲ ಧರೆಯೊಳು ಅನುಭವವಿದು10 ಅವರಾಮಹಿಮೆಗಳ ವಿವರಿಸಿ ಹೇಳಲು ಹವಣವೆಲ್ಲಿಹುದು ಮನುಜಗ ಭಕುತರು ಅವನಿಲಿಬಲ್ಲರು ನಿಜಸುಖ 11 ಏನೆದು ಅರಿಯದಾ ಹೀನ ಅಜ್ಞಾನಿಯು ನ್ಯೂನಾರಿಸದೇ ಸಲಹಯ್ಯಾ ಮಹಿಪತಿ ದೀನೋದ್ಧಾರಕಾ ಕರುಣಿಸು 12 ಪದುಮನಾಭನ ಭಕ್ತಿ ಚದುರಾ ಮುತ್ತೈದೇರು ಒದಗಿನ್ನು ಬನ್ನಿ ಹರುಷದಿ ಮುಪ್ಪದಾ ಉದಿತಾ ನುಡಿಗಳ ಕೇಳಲು 13 ವಿವೇಕಬೋಧಿಯಂತ ನಾವಕ್ಕತಂಗೇರು ದೇವಗುರುರಾಯನ ಮಕ್ಕಳು ನಿಜಶಕ್ತಿ ಭುವನದಿ ನಮ್ಮಾ ಹಡೆದಳು 14 ಸುಜ್ಞಾನ ವೈರಾಗ್ಯ ಸಂಜ್ಞದಿ ಮೆರೆವರು ಪ್ರಾಜ್ಞರು ನಮ್ಮಣ್ಣಾ ತಮ್ಮರು ಹರಿಭಕ್ತಿ ಮಜ್ಞರು ಅವರಿಗೆ ಸರಿ ಇಲ್ಲಾ 15 ಭಕ್ತಿಯ ತೌರಮನಿ ಶಕ್ತಿಯ ಬಲದಿಂದ ಯುಕ್ತೀಲಿ ನಾವು ಬರುತೇವು ಹರಿಭಕ್ತಿ ಭೋಕ್ತರು ನೀವು ಬರಬೇಕು 16 ದಿವ್ಯಾಂಬರವನುಟ್ಟು ಸುವಿದ್ಯಾ ಇಡಗಿಯು ತೀವಿದರ ಅರಹು ಅಂಜನಾ ವನೆ ಇಟ್ಟು ಸುವಾಸನೆಯ ಪುಷ್ಪ ಮುಡಿದಿನ್ನು 17 ಈರೆರಡು ಭೇರಿಯ ಸಾರಿಸಿ ಎಡಬಲಕ ಆರು ವಂದಣಾ ನಡಸೂತ ಕಹಳೆಗಳು ಮೂರಾರು ಊದಿಸುತೆ ಬರುತೇವು 18 ಸಾಧನ ನಾಲ್ಕರ ಕುದುರೆಯ ಕುಣಿಸುತ ಒದಗಿದ ಪ್ರೇಮದ ಮದ್ದಾನಿ ಯೊಡಗೂಡಿ ಚದುರೇರು ಮುಯ್ಯ ತರುತೇವು 19 ಭಾವದ ಬಯಲಾಟ ಆವಾಗ ಆಡುತ ಸಾವಧ ಮುಯ್ಯಾ ತರುತೇವು ನುಡಿಗಳ ನೀವಾತ ಕೇಳಿ ಜನವೆಲ್ಲಾ 20 ಮೆರೆವಾಭಿಮಾನಿಯು ಇರುವ ಸೋದರ ಮಾವ ಅರಸಿ ವಿಷಯಯೆಂಬತ್ತೆರಯರ ಮನಿಗೀಗ ಭರದಿಂದ ಮುಯ್ಯ ತರುತೇವು 21 ರಾಯ ಅಭಿಮಾನಿ ಸಿರಿಯದ ಸಡಗರ ನಾ ಏನ ಹೇಳಲಿ ಜಗದೊಳು ಪಸರಿಸಿ ತಾ ಎಡ ಬಲವನು ನೋಡನು 22 ಏಳು ಸುತ್ತಿನ ಗೋಡಿ ಮೇಲಾದ ಮನಿಗಿನ್ನು ಸಾಲಾದ ಒಂಭತ್ತು ಬಾಗಿಲು ಚಲುವಾದ ಮ್ಯಾಲಿಹ ಒಂದೊಂದು ಗಿಳಿಗಳು 23 ಅಂಗಳ ಹೋಗಲಿಕ್ಕೆ ಕಂಗಳ ಲೇಸಕಂಡೆ ಮಂಗಳವಾದ ಉಪ್ಪರಿಗೆ ಥರಥರ ರಂಗ ಮಂಟಪ ನಡುವಂದು24 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಚಾವಡಿರಾಯನ ಸೌಖ್ಯಕ ಪೊಡವಿಲಿ ಸರಿಯಾ ಕಾಣೆನು 25 ಎಂಟು ದಿಕ್ಕಿಗೆ ನೋಡೀ ಘಂಡೆಯ ಕಟ್ಟಿದ ಎಂಟು ಆನೆಯಾ ಘಡಘಾಡಿ ತಲಿಯಲಿ ಉಂಟಾದ ಗುರುತರದ ಅಂಕೂಶಾ 26 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಆನೆಯಾ ಘಡಘೂಢೀ ಥಳೀಐಳೀ ಊಂಠಾಧ ಘೂಋಊಥೃಧ ಆಂಖೂಶಾ 26 ಐದೈದು ಸಾಲಕ ಐದೈದು ಕುದುರೆಯು ಐದೈದು ಭಂಟರು ಅದಕಿನ್ನು ಅನುದಿನ ಮೈದಡುವುತಾ ಏರುವರು27 ಹತ್ತು ಮಂದಿಯಾ ಆಪ್ತರು ಮನರಾಯಾ ಒತ್ತಿ ಆಳುವ ಪ್ರಧಾನಿ 28 ಅನುವಾದ ಗುಣತ್ರಯಾ ಅನುಜರು ಈತಗೆ ಅನುಭವಿ ಒಬ್ಬ ಇದರೊಳು ಹರಿನಾಮಾ ನೆನೆವನು ಅನ್ಯ ಹಂಬಲವಿಲ್ಲಾ 29 ನಾಕಾವಸ್ಥೆಗಳೆಂಬಾ ನಾಕು ಒಳ ಮನೆಗಳು ಇಕ್ಕಿಹದೊಂದು ಅದರೊಳು ಭಂಡಾರ ಬೇಕಾದವರೆ ತೆರೆವರು 30 ಈರಾಯ ನೈಶ್ವರ್ಯ ಆರು ಬಣ್ಣಿಸುವರು ಆರೊಂದು ಮಂದಿ ಮಕ್ಕಳು ಹೆಸರಾದ ಪರಿಯಾಯ ಕೇಳಿ ಹೇಳುವೆ 31 ಮೊದಲು ಕಾಮ ಕ್ರೋಧವೊದಗಿ ಲೋಭಮೋಹ ಮದಮತ್ಸರೆಂಬ ಬಾಂಧವರು ನಿಜ ತಂಗಿ ವಿದಿತ ಅಜ್ಞಾನಿ ಶಕ್ತಿಯು 32 ಬಂದು ಹೊರಗನಿಂತು ಒಂದು ಜಾವಾಯಿತು ಮುಂದಕ ನಮ್ಮ ಕರಿಯಾರು ನಾವರಸಿ ಕಂದಿದ ಮಾರೀ ತೋರಳು 33 ಪಶ್ಚಾತಾಪವೆಂಬ ಬಿಚ್ಚಿ ಹಾಸಿಗೆ ಹಾಸಿ ತುಚ್ಚರ ದೂರ ಝಾಡಿಸೀ ಬರುತೇವು ಎಚ್ಚರ ಲೋಡಾ ತಂದಿರಿಸಿ 34 ಈ ಕಲ್ಲ ಮ್ಯಾಲದ್ದು ಈ ಕಲ್ಲಿಗ್ಹಾರುವಾ ತಾ ಕೋಡಗನಾ ಗುಣದಂತೆ ಭಾವಯ್ಯ ಆ ಕಾಮಣ್ಣನ ಕರಿಯಾರೆ35 ಎಷ್ಟು ಉಂಡರ ದಣಿಯಾ ಎಷ್ಟು ಇಟ್ಟರ ದಣಿಯಾ ಎಷ್ಟು ಉಟ್ಟರ ದಣಿಯಾನು ಕಾಮಣ್ಣ ಎಷ್ಟು ಕೊಟ್ಟರ ದಣಿಯಾ 36 ಒಳ್ಳೆವರರಿಯನು ಹೊಲ್ಲವರರಿಯನು ಕೊಳ್ಳಿಕಾರನಾ ಮತಿಯಂತೆ ಭಾವಯ್ಯ ನಿಲ್ಲರು ಈತನ ಇದರೀಗೆ 37 ಈತನ ತಮ್ಮನು ಮಾತು ಮಾತಿಗೆ ಬಹಳಾ ಖ್ಯಾತಿಯ ತಾನು ಪಡೆದಾನು ಕೋಪಣ್ಣ ಆತನ ಮುಂದಕ ಕರಿಯಾರೆ 38 ನೆಂಟರ ಅರಿಯನು ಇಷ್ಟರ ಅರಿಯನು ಬಂಟರಾ ಮೊದಲೇ ಅರಿಯನು ತಪಸಿಗೆ ಕಂಟರನಾದಾ ಈತನೇ 39 ಥರ ಥರ ಕುಣಿವುತ ಘರ ಘರ ಹಲ್ಲು ತಿಂದು ನೆರೆಮೋರೆ ಕೆಂಪು ಮಾಡುವಾ ಕೋಪಣ್ಣಾ ಸ್ಮರಣೆಯಾ ತನ್ನ ಮರೆವನು 40 ಕಂಡವರಿಗೆ ತಾನು ಕೆಂಡದ ನುಡಿಯಾಡಿ ಖಂಡಿಸಿ ಬಿಡುವಾ ಗೆಳತನಾ ಕೋಪಣ್ಣ ಹಿಂಡುವ ಹಿಡಿದು ಪ್ರಾಣವ41 ತಾನಾರೆ ಉಣ್ಣನು ಜನರಿಗೆ ಇಕ್ಕನು ಜೇನಿನನೊಣದಾ ಗುಣದಂತೆ ಲೋಭೇಶಾ ದೀನನ ಮುಂದಕ ಕರಿಯಾರೆ42 ಬಿಚ್ಚಾರುವಿಯನು ವೆಚ್ಚಮಾಡೆಂದಿಗೆ ಬಚ್ಚಿಟ್ಟು ಹೂಳಿನೆಲದೊಳು ಲೋಭೇಶಾ ಹುಚ್ಚಾಗಿ ಕಾಯ್ದಾ ಫಣಿಯಂತೆ43 ಕಾಸು ಹೋದಾವೆಂದು ಅಸುವ ಹೋಗುವವರಿ ಕಾಸಾವೀಸಿಯಾ ಬಡವನು ಲೋಭೇಶಾ ಹೇಸನು ಎಂದು ಮತಿಗೇಡಿ 44 ಇಳೆಯೊಳೀ ಪರಿಯಲೀ ಗಳಿಸಿದ ಧನವನು ಕಳೆದುಕೊಂಬರು ಅರಸರು ಕಡಿಯಲಿ ಶೆಳೆದು ಕೊಂಡನು ಪುಗಸಾಟೆ 45 ಇವರಿಂದ ಕಿರಿಯನಾ ಹವಣವ ನೋಡೀರೆ ಅವಗುಣದ ರಾಶಿ ಜಗದೊಳು ಮೋಹಾಂಗಾ ಅವನಾ ಮುಂದಕ ಕರಿಯಾರೇ 46 ತಾಯಿ ತಂದೆಗಳ ನ್ಯಾಯನೀತಿಗಳಿಂದ ಸಾಯಾಸದಿಂದ ಭಕ್ತಿಯ ಮಾಡದೆ ಮಾಯದಾ ಬಲಿಗೊಳಗಾದಾ 47 ಏನು ಬೇಡಿದುದೆಲ್ಲಾ ಪ್ರಾಣವವೆಚ್ಚಿಸಿ ಮಾನಿನೀಯರಿಗೆ ಕುಡುವನು ಮೋಹಾಂಗಾ ಮನವಿಡ ಒಳ್ಳೆವರ ಸೇವೆಗೆ 48 ಲೆಕ್ಕ ವ್ಯವಹಾರವಾ ಲೆಕ್ಕದಿ ಮಾಡದೇ ಮಕ್ಕಳಾಟಕಿಯ ಮಾಡುವಾ ಕ್ರೀಡೆಯಾ ನಕ್ಕಾರೆಂಬ ಸ್ಮರಣಿಲ್ಲಾ 49 ಕಮಲದ ವಾಸನೆಗೆ ಭ್ರಮರವು ಸಿಕ್ಕಿದ ಕ್ರಮದಿಂದ ನೋಡಿ ಸೆರೆಯಾದಾ ಶ್ರೀವಧು ರಮಣನ ನಾಮಾ ನೆನಿಯನು 50 ತರುವಾಯದವನೀತಾ ದುರುಳನ ನೋಡಿರೆ ಮರಳು ಬುದ್ಧಿಯಾ ಮದರಾಯಾ ಆತನಾ ಸರಕು ಮಾಡುವಾ ಕರಿಯಾರೆ 51 ಹೊರಸು ತೊಯ್ಯದಂತೆ ಭರ್ರನೆ ಬಿಗಿವನು ಶರಣರ ಕಂಡು ಬಾಗನು ತಲೆಯನು ಅರಿತವರಿಗೇನಾ ಹೇಳಲಿ 52 ಬಗೆಯಾದೆ ಹಿತವನು ಪಗಡಿಪಂಚಿಗಳಾಡಿ ಹಗಲಿನಾ ಹೊತ್ತುಗಳೆವನು ರಾತ್ರೀಲಿ ಮುಗುಧೇಯರೊಡನೆ ಒಡನಾಟಾ 53 ಕಣ್ಣಿಲ್ಲದಾನೆಯು ಚನ್ನಾಗಿ ತಿರುಗುತ ಮುನ್ನ ಬತ್ತಿದಾ ಬಾವಿಯ ಬೀಳ್ವಂತೆ ಕಣ್ಣೆದ್ದು ಕುರುಡನಾದನು&
--------------
ಕಾಖಂಡಕಿ ಶ್ರೀ ಕೃಷ್ಣದಾಸರು