ಒಟ್ಟು 11537 ಕಡೆಗಳಲ್ಲಿ , 136 ದಾಸರು , 5740 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದ ದುರಿತಗಳ ಪರಿಹಾರ ಮಾಡಯ್ಯಾ | ತಂದೆ ಶ್ರೀ ಗುರು ಮಹೀಪತಿರಾಯಾ ಪ ಕಾಲತುಂಬಿದ್ದರೆ ಆಲಸ್ಯವೇಕಯ್ಯಾ | ಕಾಲ ಕರ್ಮಗಳಿಂದ ಶ್ರಮಿಸುತಿಹನು | ಬಾಲಕನ ಕೈಯ ಸೇವೆ ಬೇಕಾದರೆ | ದುರಿತ ಛೇದಿಸು 1 ಮುನ್ನಿನ ಕರ್ಮಗಳ ಬಹಳ ಭೋಗಿಸಿದೆನು | ಇನ್ನು ನಿನ್ನ ಕೃಪೆ ಅವಿಚ್ಛಿನ್ನ ಮಾಡಯ್ಯ | ನಿನ್ನ ಕರದಿಂದಲಿ ಚನ್ನ ಚಕ್ರವಪಿಡಿದು | ಮುನ್ನೆ ದಾಸರ ಶ್ರಮ ಹರಿಗಡದಂತೆ 2 ಪರವಸ್ತು ದತ್ತಾತ್ರೇಯ ಸೂರ್ಯಕೋಟಿ ಪ್ರಕಾಶ | ಗುರು ಮಹೀಪತಿಯಾಗಿ ಜನಿಸಿದೈಯ್ಯ | ತರಳ ದೇವಗಿನ್ನಾರುಗತಿಯು ಇಲ್ಲ | ಪೂರ್ಣಾಯುಷ್ಯವ ಕೊಟ್ಟು ರಕ್ಷಿಸಯ್ಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಂದ ದುರಿತವಾ ಚನ್ನಕೇಶವಾ ನಂದನಂದನಾ ದೂರಮಾಡೆಲೋ ಪ ಆದಿದೇವನೇ ಮರೆಯ ಹೊಕ್ಕೆನೋ ಸಾದುವರ್ಯರ ಮನ್ನಿಸೋ ಹರೇ1 ಭವದಿ ನೊಂದೆನೋ ಬಂಧ ಬಿಡಿಸಲೋ ಅವನಿಪಾಲನೆ ಸಾನುರಾಗದೀ 2 ಸುಜನಪಾಲನೇ ಕುಜನ ಕಾಲನೇ ಭಜನೆ ಮಾಳ್ಪಿನೊ ರಕ್ಷಿಸೋ ಹರೇ 3
--------------
ಕರ್ಕಿ ಕೇಶವದಾಸ
ಬಂದ ನೋಡಮ್ಮ ಗೋಪಿಯ ಕಂದ ಬಂದ ನೋಡಮ್ಮ ||ಮಂದರ ಧರ ಗೋವಿಂದನು ಹರಿ ಉಪೇಂದ್ರನು ಲಕ್ಷ್ಮೀವೃಂದಾವನ ಗೋಕುಲ ಪ್ರೀಯಾ ಪ ಕುಂಡಲ ಮಂಡಿತ ಪುಂಡರೀಕಾಕ್ಷಾ 1 ತೊಟ್ಟಲಲ್ಲೆ ತಾ ಬಟ್ಟನೆ ಚೀಪುತ | ಧಿಟ್ಟಾ ಕೃಷ್ಣನುತಟ್ಟನೆ ಚುಂಬನವ | ಕೊಟ್ಟಾ ವಿಷವನು ಕೊಟ್ಟವಳಸುವನುಧಿಟ್ಟಿಸಿದಾ ಜಗಜಟ್ಟಿಯು ಕೃಷ್ಣಾ 2 ಬಾಲಕರನು ಹೆಗಲೇರಿಸಿ ಮೇಲಿನ | ನೆಲವಿನ ಬೆಣ್ಣೆಯಕಳವನು ಮಾಡಿ | ಶಾಲಾ ಹುಡುಗರ ಪಾಲಾ ಉಣಿಸುತಲಿವಲಕ್ಷ್ಮೀಲೋಲಾ ರಂಗಯ್ಯಾ 3 ಮಣಿ ಫಣಿ ಫಣಿದಲಿ ಮೆಟ್ಟಿ |ಕುಣಿಕುಣಿದಾಡುತಲಿ 4 ಮಾಧವ | ಮಂಗಲ ಕರತರಂಗನ | ಅರಿತತಿ ಭಂಗವ ಬಿಡಿಸುತ |ಕಂಗಳ ಸದೋದಿತ ರುಕ್ಮ 5
--------------
ರುಕ್ಮಾಂಗದರು
ಬಂದದೆ ಎನಗೆ ಬರಿದೆ ದೂರು ಬಂದೊಂದು ಅವಗುಣದವನೆಂಬೊ ಮಾತು ಪ ಕಾಮಕ್ರೋಧಂಗಳು ಹೆಚ್ಚಿಸಿ ಮನದೊಳು ತಾಮಸ ಬುದ್ಧಿ ವಿಶೇಷವಾಗಿ ಕಾಮುಕವಾಗಿ ನಡವಳಿ ನಡಸಿದ ಈ ಮನದ ಅಧಿಕಾರಿ ಶ್ರೀಕೃಷ್ಣನೊ ನಾನೊ 1 ಅನ್ಯಾಯ ಅನ್ಯಾಯ ಅಸಡ್ಡಾಳ ಅಪದ್ಧ ನನ್ನ ನಿನ್ನದು ಎಂಬೊ ಬಡದಾಟವು ತನ್ನ ಸ್ಮರಣಿ ತಪ್ಪಿ ವಿಷಯಕ್ಕೆ ಎರಗಿಸಿ ಮುನ್ನ ಮನದ ದಾತಾ ಶ್ರೀಕೃಷ್ಣನೊ ನಾನೊ 2 ಮನೆ ಮನೆಗಳ ಪೊಕ್ಕು ಮಕ್ಕಳಾಟಿಕೆಯಿಂದ ವನುರುತರ ರೂಪಿಗೆ ಸೋತು ಆತು ಕನಿಕರಿಸಿ ಕ್ರಮಗೆಟ್ಟು ತಿರುಗಿಸುವ ತನವು ಮಾಡಿದಾತಾ ಕೃಷ್ಣನೊ ನಾನೊ 3 ನೀತಿ ನಿರ್ಣಯ ಮರೆದು ಪಾತಕದೊಳು ಬಿದ್ದು ಪ್ರೀತಿಯಲಿ ಅತಿಥಿಗಳ ವಂದಿಸದೆ ಯಾತಕ್ಕೆ ಬಾರದಾ ಚರಿತೆ ನಡೆವಂಥ ಚೇತನ ಕಲ್ಪಿಸಿದ ಕೃಷ್ಣನೊ ನಾನೊ 4 ಆವಾವ ದುಷ್ಕರ್ಮಗಳ ಮಾಡಿ ಉತ್ತಮ ದೇವ ಬ್ರಾಹ್ಮಣರ ಪೂಜಿಸಲಿಲ್ಲವು ಶ್ರೀ ವಿಜಯವಿಠ್ಠಲ ವೆಂಕಟಗಲ್ಲದ ಜೀವ ಪುಟ್ಟಿಸಿದಾತ ಕೃಷ್ಣನೋ ನಾನೊ 5
--------------
ವಿಜಯದಾಸ
ಬಂದದ್ದನುಭವ ಮಾಡ್ವೆ ಕಂದನಾಗಿರುವೆ ತಂದೆ ನಿನ್ನಯ ದಯವೊಂದಿರಲಿ ಹರಿಯೆ ಪ ಮಂದಿ ಮಕ್ಕಳು ಎನ್ನ ಕುಂದಿಟ್ಟು ಜರೆಯಲಿ ಬಂಧು ಬಾಂಧವರೆಲ್ಲ ನಿಂದಿಸಿ ನುಡಿಲಿ ಬಂಧನವು ಬಿಡರಿರಲಿ ಎಂದೆಂದು ಮರೆಯದಂತೆ ಇಂದಿರೇಶ ನಿಮ್ಮ ಧ್ಯಾನವೊಂದೇ ಎನಗಿರಲಿ 1 ಭೂಪತಿಗಳೆನ್ನೊಳ್ಕೋಪಮಂ ತಾಳಲಿ ತಾಪಬಡಿಸಲಿ ಮಹಪಾಪಿವನೆನುತ ತಾಪತ್ರಯ ಬಿಡದಿರಲಿ ಪಾಪಲೋಪನೆ ಜಗ ದ್ಯ್ಯಾಪಕನೆ ನಿನ್ನ ಧ್ಯಾಸಪರೂಪ ಎನಗಿರಲಿ 2 ಕಂಡಕಂಡಂತೆ ಜನರು ಭಂಡನೆಂದೆನ್ನಲಿ ತಂಡತಂಡದಿ ಕಷ್ಟ ಅಂಡಲೆದು ಬರಲಿ ಹೆಂಡರು ಸೇರದೆ ಗಂಡನೆಲ್ಲೆಂದೆನಲಿ ಪಂಢರೀಶ ನಿನ್ನ ಪದೆನ್ನ ಮಂಡೆಮೇಲಿರಲಿ 3 ಎತ್ತ ಪೋದರು ಜನರು ಹತ್ರ ಬಡಿಯಲಿ ಎನಗೆ ವಿತ್ತಕೊಟ್ಟೊಡೆಯರು ನಿತ್ತರಿಸದೊದಿಲಿ ಮುತ್ತಿಕೊಂಡ್ವೈರಿಗಳು ಕುತ್ತಿಗೆ ಕೊಯ್ಯಲಿ ಚಿತ್ತಜಪಿತನಿನ್ನ ಭಕ್ತ್ಯೊಂದೆನಗಿರಲಿ 4 ಪೀಡಿಸಲಿ ಬಡತನವು ಕಾಡಿಸಲಿ ದಾರಿದ್ರ್ಯ ಓಡಿಸಲಿ ಪೊಡವಿಪರು ನಾಡ ಬಿಟ್ಟೆನ್ನ ನೋಡಲಿ ಮುನಿದೆನ್ನ ನಾಡದೈವಗಳೆಲ್ಲ ಬೇಡೆನೆ ಶ್ರೀರಾಮ ನಿನ್ನಡಿ ಬಲೊಂದೆನಗಿರಲಿ5
--------------
ರಾಮದಾಸರು
ಬಂದನು ರಘುವೀರ ರಣಧೀರ ಪ ತಡೆ ಭರತನೆ ಮುಂದಡಿಯಿಡಬೇಡ ದುಡುಕಿ ಬೀಳದಿರು ಬಡಜನ ಮುಖಕೆ 1 ಸೀತಾನಾಥನ ದೂತನಾದೆನ್ನ ಮಾತನು ಕೇಳು ಆತುರಪಡದೆ 2 ಭ್ರಾತನ ನೋಡಲು ಕಾತರನಾಗಿ ವಾತವೇಗದೊಳು ಆತನು ಬರುತಿಹ 3 ಅದೊ ನೋಡದೊ ನೋಡದರ ದೆಶೆಯಲಿ ವಿದುಶತಕಿಲ್ಲದಗದಿರದದ್ಯುತಿಯ 4 ಅದೊ ಪುಷ್ಪಕವು ಅದರ ಪ್ರಭೆ ನೋಡು ಅದರಿರವ ನೋಡು ಒದಗಿ ಬರುತಿದೆ 5 ಧಾಮ ಮಧ್ಯೆ ನಿ ಸ್ಸೀಮ ನಿಮ್ಮಣ್ಣ ರಾಮನ ನೋಡು 6 ವಾಮದಿ ಸೀತಾಭಾಮೆ ಕುಳ್ಳಿಹಳು ಪ್ರೇಮದಿ ಲಕ್ಷ್ಮಣ ಚಾಮರ ಬೀಸುವ 7 ಬಲದಿ ಸುಗ್ರೀವ ನೆಲೆಸಿಹ ನೋಡು ಕೆಲದಿ ವಿಭೀಷಣ ನಲಿಯುತ ನಿಂತಿಹ8 ಅಂಗದ ತನ್ನಯ ಜಂಘೆಲಿ ದೇವನ ಮಂಗಳ ಚರಣವ ಹಿಂಗದೆ ಸೇವಿಪ 9 ವೃದ್ಧ ಜಾಂಬವ ಗದ್ದುಗೆ ಮುಂದಿಹ ಯುದ್ಧ ಪ್ರವೀಣರು ಸಿದ್ಧರಾಗಿಹರು 10 ಉಳಿದ ಕಪಿ ದನುಜ ದಳಗಳು ಹಿಂದೆ ಕಲಕಲ ಮಾಡುತ ಉಲಿಯುತಲಿಹವು 11 ಅರರೆ ವಿಮಾನವು ತಿರುಗಿತು ನೋಡು ಧರಣಿಗೆರಗುತಿದೆ ಭರದೊಳು ನೋಡು 12 ಭಳಿರೇ ರಾಮನು ಇಳಿದನು ನೋಡು ಕಳವಳವೆಲ್ಲವ ಕಳೆಯುತ ನೋಡು 13 ಬಂದನು ಅದಕೊ ಬಂದೇ ಬಂದನು ಇಂದುಮುಖಿಯ ತಾ ಹಿಂದಿಟ್ಟುಕೊಂಡು14 ಮುಂದೆ ಬರುವ ಕಪಿಯನು ಉಳಿದು ಸುಂದರ ಮುಖವು ಕುಂದಿದೆ ನೋಡು 15 ನಡೆದು ಬರುತಿಹ ಮಡದಿಯೊಡಗೂಡಿ ತಡಮಾಡದಿರು ಪೊಡಮಡು ಪೋಗು 16 ಇಂತು ನುಡಿದು ಧೀಮಂತನಾದ ಹನು- ಮಂತ ಚಿಗಿದು ಖಗನಂತೆ ಬಂದಿಳಿದ17 ವಾತಸುತನ ಸವಿಮಾತಲಿ ಭರತನು ಪ್ರೀತಿಲಿ ತಿರುಗಿದನಾತುರದಿಂದ 18 ನೋಡುತ ರಾಮನ ಓಡುತ ಬಂದೀ ಡಾಡಿದ ತನುವ ಬಾಡಿದ ಮುಖದಿ 19 ಅನುಜನ ನೋಡಿ ದನುಜಾರಿಯಾಗ ಮನ ಮರುಗಿದ ಬಲು ಕನಿಕರದಿಂದ 20 ರಂಗೇಶವಿಠಲ ಕಂಗಳ ಜಲದೊಳು ಮಂಗಳಯುತನಾಲಿಂಗನಗೈದ 21
--------------
ರಂಗೇಶವಿಠಲದಾಸರು
ಬದರೀ ಪ್ರಸನ್ನವಿಠಲ | ಮುದದಿ ಪೊರೆ ಇವನಾ ಪ ವಿಧಿ ಭವಾದೀ ವಂದ್ಯ | ಸಕಲ ಜಗತ್ರಾಣಅ.ಪ. ಬುದ್ಧಿಯಲಿ ನೀ ಸ | ದ್ಭುದ್ಧಿ ಪ್ರೇರಕನಾಗಿಮಧ್ವಮತ ದೀಕ್ಷೆಯಲಿ | ಬದ್ಧವೆನಿಸಿವನಾಹೆದ್ದಾರಿ ಮೀರದಲೆ | ಶುದ್ಧ ಸಾಧನಗೈಸಿಉದ್ಧಾರ ಮಾಡೋಹರಿ | ಬದರೀ ನಿವಾಸ 1 ಗುರುಹಿರಿಯನುಸರಿಪ | ವರಮತಿಯ ಕರುಣಿಸುತತರಳನನು ಕೈಪಿಡಿದು | ತೋರೋ ಸನ್ಮಾರ್ಗಅರಹುಲೇನಿಹುದಿನ್ನು | ಸರ್ವಜ್ಞ ನೀನನ್ನುದರ್ವಿ ಜೀವನ ಕಾವ | ಹವಣೆ ನಿನದಲ್ಲೇ 2 ಸತ್ಸಂಗ ಇವಗಿತ್ತು | ಕುತ್ಸಿತವ ಹೊರದೂಡಿವತ್ಸಾರಿ ಶ್ರೀಹರಿಯೆ | ವತ್ಸನ್ನ ಪೊರೆಯೇ |ಮತ್ಸಕೇತನ ಜನಕ | ಉತ್ಸವದಿ ಮೆರೆವಂಥಸತ್ಸ್ವಭಾವನೆ ದೇವ | ಭಿನ್ನವಿಪೆ ನಿನಗೆ 3 ಜ್ಞಾನ ಭಕ್ತಾದಿಗಳ | ನೀನಾಗಿ ಕೊಟ್ಟವಗೆಮಾನನಿಧಿ ಪೊರೆಇವನ | ಧೀನಜನಬಂದೊಕಾಣೆ ಮೂರ್ಲೋಕದೊಳು | ನಿನ್ನಂಥ ಕರುಣಿಗಳಶ್ರೀನಿವಾಸನೆ ತೋರೋ | ಹೃದ್ಗುಹದಿ ಇವಗೇ 4 ಸುಪ್ತೀಶ ನೀನಾಗಿ | ಗೊತ್ತು ಮಾಡ್ಡಂಕಿತವಇತ್ತಿಹೆನೊ ತರಳನಿಗೆ | ವ್ಯಾಪ್ತ ಮೂರುತಿಯೇಇತ್ತು ಮನದಿಪ್ಟವನಾ | ಎತ್ತು ಭವದಿಂದೆಂದುಗೋಪ್ತ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಬದರೀನಾಥ ವಿಠಲ | ಪೊರೆಯ ಬೇಕಿವನಾ ಪ ಸದಯ ಹೃದಯನೆ ಇವಗೆ | ಮುದವನ್ನೆ ಬೀರತಲಿಹದುಳದಲಿ ಕೈಪಿಡಿದು | ಕಾಪಾಡೊ ಹರಿಯೇ ಅ.ಪ. ಮೇಶ ಮಧ್ವೇಶ ಮಹಿ | ದಾಸ ನಿನ್ನಡಿ ದಾಸ್ಯಆಸಿಸುವ ಬಾಲಕನ | ಆಶೆಯನು ಸಲಿಸೀ |ಕ್ಲೇಶಗಳ ಪರಿಹರಿಸಿ | ನೀ ಸಲಹೆ ಭಿನ್ನವಿಪೆಹೇಸದಾಗತಿ ವಂದ್ಯ | ವಾಸವಾನುಜನೇ 1 ಲೌಕಿಕದ ಸಂಪತ್ತು | ಬೇಕಾದ ವರವಿತ್ತುಕಾಕು ಸಂಗವ ಕೊಡದೆ | ನೀಕಾಯ ಬೇಕೋ ||ತೋಕನಿಗೆ ನಿನ್ನಲ್ಲಿ | ಭಕುತಿ ಜ್ಞಾನಗಳಿತ್ತುಲೌಕಿಕವನೆಲ್ಲ ವೈ | ದೀಕ ವೆಂದೆನಿಸೋ 2 ಮೋದ ಕೊಡು ಸತತಾ 3 ಸ್ವಾಪದಲಿ ಮತ್ಸ್ಯಾದಿ | ರೂಪಗಳ ಸ್ತೋತ್ರವೆನೆವ್ಯಾಪಾರ ಮಾಡಿಸುತ | ಕೃಪೆ ತೋರ್ದೆ ಹರಿಯೇವೈಪರೀತ್ಸದ ಮನದ ಚಾಪಲ್ಯ ಕಳೆಯಲ್ಕೆಸ್ವಾಪದಲಿ ಸೂಚಿಸುತ | ನೀಪೇಳ್ದೆ ಧೃಡವಾ 4 ಪತಿ ವಿನುತ | ನಾರಾಯಣಾಖ್ಯ ಹರಿಘೋರಭವ ಕೂಪಾರ | ಪಾರಗಾಣಿಸುವಾಭಾರ ನಿನ್ನದು ಎಂದು | ಪೋರನ್ನ ಒಪ್ಪಿಸಿಹೆಧೀರ ಗುರು ಗೋವಿಂದ | ವಿಠಲ ಪೊರೆ ಇವನಾ 5
--------------
ಗುರುಗೋವಿಂದವಿಠಲರು
ಬಂದರು ನಾರದರ್ಹರುಷದಲಿ ನಿಂದು ಯಜ್ಞ ನೋಡುತ ಮುದದಿ ಇಂದು ಯಾರಿಗರ್ಪಣೆ ಮಾಡುವಿರೆನೆ ಬಂದಿತು ಸಂಶಯ ಋಷಿಗಳಿಗೆ ಮಂಗಳಂ ಜಯ ಮಂಗಳಂ ಪ ತ್ವರದಿಭೃಗು ಮುನಿಗಳು ಹೊರಡುತಲಿ ಹರಬ್ರಹ್ಮರು ಸರಿಯಲ್ಲೆನುತ ಹರಿವೈಕುಂಠದಿ ಮಲಗಿರೆ ನೋಡುತ ಭರದಿಂದೊದೆಯೆ ವಕ್ಷಸ್ಥಳಕೆ ಮಂಗಳಂ ಜಯ ಮಂಗಳಂ 1 ನೊಂದಿತು ಪಾದವೆಂದುಪಚರಿಸೆ ಇಂದಿರಾದೇವಿ ಕೋಪಿಸಿ ತೆರಳೆ ಬಂದು ಋಷಿಗಳಿಗರುಹಿದರು ಶ್ರೀಗೋ- ವಿಂದಗೆ ಸಮರಿಲ್ಲೆಂದೆನುತಾ ಮಂಗಳಂ ಜಯ ಮಂಗಳಂ 2 ಮಡದಿ ಇಲ್ಲದೆ ಬೇಸರ ಪಡುತಾ ಪೊಡವಿಗಿಳಿದು ಹುತ್ತದೊಳಗಿರಲು ಕೊಡಲಿಯ ಗಾಯಕೌಷಧ ಹುಡುಕುತ ಹರಿ ಅಡವಿಗಳಲಿ ಸಂಚರಿಸಿದಗೆ ಮಂಗಳಂ ಜಯ ಮಂಗಳಂ3 ಭೂಮಿಗೊಡೆಯ ವರಹನನು ನೋಡಿ ಕಾಮಿನಿ ಬಕುಳೆ ಸೇವೆಗೆ ಮಾಡಿ ಕಾಮಜನಕ ಬೇಟೆಗೆ ಹೊರಟನು ಬಹು ಪ್ರೇಮದಿಂದಲಂಕರಿಸಿದ ಹರಿಗೆ ಮಂಗಳಂ ಜಯ ಮಂಗಳಂ4 ವನವನ ಚರಿಸಿ ಸ್ತ್ರೀಯರ ನೋಡಿ ವನಜಾಕ್ಷೇರು ನಡುಗುತ ಭಯದಿ ಘನಮಹಿಮಗೆ ಕಲ್ಲು ಕಲ್ಲೆಸೆಯೆ ಹಯ ವನದಿ ಮೃತಿಸೆ ಗಿರಿ ಏರಿದಗೆÉ ಮಂಗಳಂ ಜಯ ಮಂಗಳಂ 5 ಕಾಮಿನಿ ಬಕುಳೆಗೆಲ್ಲವ ಪೇಳಿ ಕೋಮಲೆ ಕೊರವಿ ರೂಪವ ತಾಳಿ ವ್ಯೋಮರಾಜನ ಪುರದಲಿ ಧರಣಿಗೆ ಸಾಮುದ್ರಿಕೆ ಪೇಳಿದ ಹರಿಗೆ ಮಂಗಳಂ ಜಯ ಮಂಗಳಂ 6 ವಶಿಷ್ಟ ಕಶ್ಯಪರು ಶುಕರುಗಳು ವಿಶಿಷ್ಟ ಬಂಧುಗಳ ಕರೆಸುತಲಿ ಪಟ್ಟದರಸಿ ಲಕುಮಿಯು ಬರೆಹರುಷದಲಿ ಕಟ್ಟಿ ಮಾಂಗಲ್ಯ ಹರಿ ಪದ್ಮಿನಿಗೆ ಮಂಗಳಂ ಜಯ ಮಂಗಳಂ 7 ಜಯ ಜಯ ವೆಂಕಟ ಪದ್ಮಿನಿಗೆ ಜಯ ಜಯ ಪದ್ಮಾವತಿಪ್ರಿಯಗೆ ಜಯ ಜಯ ಕಮಲನಾಭ ವಿಠ್ಠಲಗೆ ಜಯ ಜಯ ಶ್ರೀ ಶ್ರೀನಿವಾಸನಿಗೆಮಂಗಳಂ ಜಯ ಮಂಗಳಂ 8
--------------
ನಿಡಗುರುಕಿ ಜೀವೂಬಾಯಿ
ಬಂದರ್ನೋಡೀ ಸುಂದರ್ತುಲಶೀರಾಮದಾಸರ್ಬಂದರು ಪ ಅಂದದೆಮ್ಮಾಕಂದರ್ಪಾಲಿಸೆಂದರ್ ತಾವೇ ಚಂದಾದಿಂದಾ ಇಂದ್ರರ್ಪದವಿಗಾಗಿ ಬೇಗಾ 1 ಭಕ್ತಿ ಮುಕ್ತಿ ಯೆರಡಕ್ಕೊಂದೆಯುಕ್ತಿ ತೋರಿ ಮತ್ತೆ ತಾನ್ ಭಕ್ತಿಜ್ಞಾನ ಯೇತನ್ಮಧ್ಯೆ ಹೊಕ್ಕಿ ಶಕ್ತರಾಗಿ ಬೇಗಾ 2 ಆಟಾಪಟಾವೆಂಬಳ ಕಳ್ಳ ಬೂಟಕಂಗಳನ್ನು ಬಿಡಿಸಿ ಸಾಟಿಯಾಗದ ತ್ರಿಕೂಟಮೆಂಬಟರಾರ್ಭಟಾ ತೋರಲ್ ಬೇಗಾ3 ಪಕ್ಷೇಂದ್ರನೇರಿ ಬಂದ ಯಕ್ಷರಕ್ಷನಾಗಿ ನಿಂದಾ ಸಾಕ್ಷಿ ಕೇಳುವಂತಾ ಅಡಿಯರ್ಗಾಕ್ಷಣವೆ ಮೋಕ್ಷ ತೋರಲ್ 4 ಆಶಪಾಶವೆಂಬೊದನ್ನು ನಾಶಮಾಡೊ ಈಶನಾಮಾ ದಾಸನಾದವರ್ಗೆ ಸಾಶಿರಾಂಗಾವಾಗಿ ಬೇಗಾ 5
--------------
ಚನ್ನಪಟ್ಟಣದ ಅಹೋಬಲದಾಸರು
ಬಂದವನಾರಯ್ಯ ನೀನು ಒಂದಿನ ರಾತ್ರಿಲಿ ನಂದನಂದನು|ಹೊರಗಿಂದಲಿ ಬರಲು|ಚೆಂದದಿ ರುಕ್ಷಿಣಿ ಮನದೊಳರಿತು ನುಡಿ|ಎಂದಳು ಸರಸದಲಿ ಈಗ|ನೀನು- ಪ ಇರುಳುಮಧ್ಯದಲಿ ಧೀರತನದಲಿ| ಸಾರಿಸಾರಿಕದನೋತ್ತುತಲಿ| ಧ್ವನಿಯ ದೋರದೆ ಗುರುತವ ಮರೆಯಿಸಿ| ದ್ವಾರದಿಸುಳಿವವನು|ನೀನು 1 ಅಡಿಯಿಡದೆವೆ ಮೈ ಅಡಗಿಸಿಕೊಂಡು| ದೃಢದಲಿ ಅಬಲೆಯಕಂಡು| ಎಡಬಲನೊಡದೆ ಬಾಯ್ದೆರೆದು ಬೇಡುವ| ಪೊಡವಿಹಾರುವನೇನೋ|ನೀನು.....2 ಕೊರಳಗೊಯ್ಕನೋ ವನಚಾರಕನೋ| ತುರುಗಳ ಕಾಯ್ವವನೋ| ಮರುಳು ಮಾಡಿ ನಾರಿಯರ ಠಕ್ಕಿಸಿ| ದುರುಳವಾಜಿಯನೇರಿಪನೋ|ನೀನು....3 ಎಂದಮಾನಿನಿ ನುಡಿ ಬೆಡುಗವ ಕೇಳಿ| ನಿಂದಹರುಷ ತಾಳಿ| ಬಂದೆನಾ ಗುರುಮಹಿಪತಿ ಪ್ರಭು ಎನಲೋಡಿ| ಬಂದೆರಗಿದಳೀಗ|ನೀನು...... 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಂದಳು ನೋಡೆ ಇಂದಿರ ದೇವಿ ಪ. ಬಂದಳು ನೋಡೆ ಗೋವಿಂದನ ಸತಿಯು ಸುಂದರ ಪಾದದಿಂದ ಒಂದೊಂದು ಹೆಜ್ಜೆಯನಿಡುತಾ ಅ.ಪ. ಉಲ್ಲಾಸದಿಂದಲೀ ಚೆಲ್ವೆ ಬಂದಳೀಗ 1 ವಜ್ರದಂತೆ ಕಾಂತಿ ಪ್ರಜ್ವಲಿಸುತ್ತಲೀ ಗೆಜ್ಜೆಪಾದದಿಂದ್ಹೆಜ್ಜೆಯನಿಡುತಲೀಗ2 ಮಾರನಮಾತೆಯು ಮುಂಗುರುಳನೇ ತಿದ್ದಿ ಮುಡಿಯ ಮೇಲಿನ ಮಲ್ಲಿಗೆ ಉದುರುತ್ತ 3 ಕಡಗ ಕಂಕಣವು ಬೆಡಗಿನಿಂದಾಲಿಟ್ಟು ನಡಮುಡಿಮೇಲೆ ಅಡಿಯನಿಡುತಲೀಗ 4 ಕುಕ್ಷಿಯೊಳೀರೇಳು ಜಗವಪೊತ್ತುವನಾ ವಕ್ಷಸ್ಥಳದ ಲಕ್ಷ್ಮಿ ಬಂದಾಳೀಗ 5 ಹರಿಯ ಮಂದಿರಕ್ಕೆ ಸರಸದಿಂದಲೀಗ ಓರೆನೋಟದಿಂದ ಮುಗುಳು ನಗೆಯ ನಗುತ 6 ಚಂದದಿಂದಲೀಗ ಬಂದು ಕುಳಿತುಕೊಂಡು ಮಂದ ಭಾಗ್ಯಳಿಗಾನಂದವ ಕೊಡುವಳು 7 ಇಂದಿರೆ ದೇವನ್ನ ಬಂಧನವಾ ಬಿಡಿಸಿ ತಂದೆಗೋವಿಂದನ್ನ ಕಂಡು ತೋರೆ ತಾಯಿ 8 ರಮಾವಲ್ಲಭವಿಠಲನ ಸ್ಮರಣೆಯು ನಿರುತ ಮಾಡುವಂಥ ವರವ ಕೊಡು ತಾಯೆ 9
--------------
ಸರಸಾಬಾಯಿ
ಬಂದಾ ಬಂದಾ ಉಡುಪಿಲಿ ನಿಂದ ನಿಂದಾ ಪ. ಬಂದ ಗೋಪೇರ ವೃಂದಗಳ ತಾ ನಂದು ದಣಿಸುತ ಸುಂದರಾಂಗನು ಮಂದರೋದ್ಧರ ಬೃಂದೆಯಿಂದಲಿ ಅ. ಮುದ್ದುಸುರಿಸುತ ಗೋಕುಲದೊಳಿರೆ ಕದ್ದು ಬೆಣ್ಣೆಯ ತಿಂದನೆನುತಲಿ ಸುದ್ದಿ ತಾಯಿಗೆ ಪೇಳಿ ಸತಿಯರು ಗದ್ದಲದಿ ತನ್ನ ಗಾರು ಮಾಡಲು ಮುದ್ದು ಯತಿಗಳು ಎದ್ದು ಪೂಜಿಸಿ ಮುದ್ದಿ ಬೆಣ್ಣೆ ನೇವೇದ್ಯವಿಡುತಿರೆ ಸದ್ದು ಇಲ್ಲದೆ ತಿಂದು ಸುಖದಲಿ ಇದ್ದೇನೆಂಬುವ ಬುದ್ಧಿಯಿಂದಲಿ 1 ಭಾರವಿಳುಹಲು ಕೋರೆ ಭೂಮಿಯು ನಾರದಾದ್ಯರ ನುತನು ತಾ ಬರೆ ನಾರಿಯರು ಮನ ಬಂದ ತೆರದಲಿ ಜಾರ ಚೋರನೆನುತ್ತ ಬೈಯ್ಯಲು ಧೀರ ಯತಿಗಳು ಸೇರಿ ಪರಬೊಮ್ಮ ಶ್ರೀರಮಣನೆನ್ನುತ ಸ್ತುತಿಸುವೋ ವಾರುತಿಗೆ ಮೈದೋರಿ ಭಕುತರ ಪಾರಿಗಾಣಿಪೆನೆಂಬ ನೆವದಲಿ 2 ಹಸಿದುಗೋಪರÀ ಯಜ್ಞವಾಟಕೆ ಅಶನ ಬೇಡಲು ಕಳುಹೆ ಗೊಲ್ಲರ ಪಸುಳರಿಗೆ ನೈವೇದ್ಯವಿಲ್ಲದೇ ವಶವೆ ಕೊಡಲೆಂದೆನ್ನೆ ಋಷಿಗಳು ವಸುಧಿಪತಿ ಸರ್ವೇಶನೆಂದರಿ ದಸಮಯತಿಗಳು ಕ್ಷಣ ಕ್ಷಣಕ್ಕೆ ಷ ಡ್ರಸದ ಆರೋಗಣೆಯ ಮಾಡಿಸೆ ಕುಶಲದಲಿ ಮೃಷ್ಟಾನ್ನ ಭುಜಿಸಲು 3 ಬಾಲ ಕಂದಗೆ ತೊಡಿಗೆ ತೊಡಿಸಲು ಲೀಲೆಯಿಂದಲಿ ಗೋಪಿದೇವಿಯು ಕಾಳ ಮಡುವಿಲಿ ಧುಮಿಕಿ ಎಲ್ಲವ ಕಳೆದು ಬರೆ ಆಟಗಳ ಪರೆವೆಲಿ ಶೀಲಯತಿಗಳು ವಾರ ವಾರಕೆ ಬಾಲ ತೊಡಿಗೆ ಶೃಂಗಾರಗೈಯ್ಯಲು ಆಲಯವ ಬಿಟ್ಟೆಲ್ಲಿ ಪೋಗದೆ ಓಲಗವ ಕೈಕೊಳ್ವೆನೆನ್ನುತ 4 ಗೋಪಜನ ಗೋವ್ಗಳನೆ ಕಾಯಲು ಗೋಪಿಯರು ತನ್ನ ಗುಲ್ಲು ಮಾಡಲು ಪಾಪಿ ಕಂಸ ಅಟ್ಟುಳಿಯ ಪಡಿಸಲು ಭೂಪತಿಯ ಪದವಿಲ್ಲದಿರಲು ಈ ಪರಿಯ ಬವಣೆಗಳ ತಾಳದೆ ಗೋಪ್ಯದಿಂದಿಲ್ಲಡಗಿ ನಿಂತು ಗೋಪಾಲಕೃಷ್ಣವಿಠಲ ಯತಿಗಳ ಗೌಪ್ಯಪೂಜೆಯಗೊಂಬ ವಿಭವಕೆ 5
--------------
ಅಂಬಾಬಾಯಿ
ಬಂದಾ ಸುಂದರವದನ ಮಂದಹಾಸದಿ ರಘು ನಂದನ ಧನು ಬಳಿಗೆ ಪ ವಂದಿಸಿ ಕೌಶಿಕಗೆ ತಂದೆಯ ನೆನೆದು ಆ ನಂದ ಮನದಲಿ ಮುಂದೆ ಮುಂದಕೆ ನಡೆದು ಚಂದದಿ ಬರುತಿಹ ಅಂದನೋಡಿ ಮುನಿ ವೃಂದ ಮನದೊಳಾನಂದವ ಪೊಂದುತ ಇಂದಿರೇಶನಿವನೆಂದು ತಿಳಿದು ಭೂ ನಂದನೆ ಇವನವಳೆವಂದು ಪೇಳುತಿರೆ ಅ.ಪ. ಸಿಂಧುಶಯನ ಭಜಕ ಮಂದಾರ ಮುನಿಜನ ವೃಂದ ಕುಮುದ ಚಂದ್ರ ಮಂದಜಾಸನ ವಂದ್ಯ ಸಿಂಧುಸುತಾಲೋಲ ಸಿಂಧೂರ ಪರಿಪಾಲ ಸಿಂಧೂರ ಗಮನದಿ ಸಿಂಧೂ ಗಂಭೀರ ಬರೆ ಇಂದುವದನೆಯರು ಚಂದವ ನೋಡುತ ಇಂದೀವಗೇ ಜಯವೆಂದು ನುಡಿಯುತಿರೆ ಇಂದುಧರನ ಧನು ಬಂಧನ ಮಾಡಲು ಇಂದಿರೇಶ ಶ್ರೀ ಕರಿಗಿರಿ ಮಂದಿರ 1
--------------
ವರಾವಾಣಿರಾಮರಾಯದಾಸರು
ಬಂದಾನು ಬಂದಾನು ಪ ಬಂದನಾಗ ಗೋವಿಂದ ಯದುಕುಲಾ ನಂದ ಮುಕುಂದನು ಮಂದಹಾಸದಲಿ ಅ.ಪ. ಬೀದಿ ಬೀದಿಯೊಳು ಬಲು ಶೃಂಗಾರ ಬಗೆ ಬಗೆ ತೋರಣದಿಂದಲಂಕಾರ ಕಾದುನಿಂತಿಹ ಜನ ಪರಿವಾರ ಮೋದದಿ ಮಾಡುವ ಜಯ ಜಯಕಾರ ಮೇದಿನಿ ಸುರರಾಮ ಮಂತ್ರದ ಉಚ್ಚಾರ ಸೌಧಗಳಲ್ಲಿಹ ಸ್ತ್ರೀಯರಪಾರ ಸಾಧರದಿಂದೀಕ್ಷಿಸೆ ಜನನಿ ಕರವು ಮೋದವೆ ಬೀರುತ ಯಾದವ ಕುಲಮಣಿ 1 ಸುಂದರಿಯರು ನಲವಿಂದ ನಿಂದಿಹರು ಗಂಧ ಪರಿಮಳದ ಜಲವೆರಚಿಹರು ಅಂದದರಳ ಪುಷÀ್ಪಗಳ ವರ್ಷಿಪರು ಕುಂದಣದಾರತಿಗಳ ಪಿಡಿದಿಹರು ವಂದಿಮಾಗಧರು ಪೊಗಳುತಿಹರು ಚಂದದಿ ಮಣಿಮಯ ಸ್ಯಂದನದಲಿ ಅರ ವಿಂದ ನಯನ ಬಲು ಸುಂದರಾಗನು 2 ಬಂಗಾರದ ರಥವೇರಿ ಬರುತಿಹನು ಕಂಗಳಿಗುತ್ಸವ ತಾ ತರುತಿಹನು ಮಂಗಳಕರ ತಿಲಕವನಿಟ್ಟಿಹನು ಬಂಗಾರದ ಮಕುಟ ಧರಿಸಿಹನು ಶೃಂಗಾರದ ಶಿಸ್ತಲಿ ಶೋಭಿಪನು ಅಂಗಜಕೋಟಿ ನಿಭಾಂಗನಾಗಿಹನು ಮಂಗಳಾಂಗ ಶ್ರೀರಂಗ ಕರಿಗಿರಿ ನೃಸಿಂಗನು ಕರುಣಾಪಾಂಗವ ಬೀರುತ 3
--------------
ವರಾವಾಣಿರಾಮರಾಯದಾಸರು