ಒಟ್ಟು 24320 ಕಡೆಗಳಲ್ಲಿ , 137 ದಾಸರು , 9123 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿಳಿಸು ದಾಸನ ನಿರುತ ನಿಲಯ ಕರುಣಾರ್ಣವ ತಿಳಿಯದಾಡಿದ ವಚನ ಹೊಲೆಗಲಿಸದಿಳೆಯೊಳು ಪ ಗುಪಿತದಿಂ ತವಪಾದ ಜಪಿಸಿ ಆನಂದಿಸದೆ ಅಪರಾಧಿಯಾಗಿರುವೆ ಕೃಪೆಯಿಂದ ಕ್ಷಮಾಮಾಡಿ 1 ಬಿನುಗುಮತಿಗೈದಂಥ ಘನತಪ್ಪುಗಣಿಸದೆ ಚಿನುವiಯಾತ್ಮನೆ ಬೇಗ ಕನಿಕರದಿ ಮೊರೆ ಕೇಳಿ 2 ಸುಲಭಭಜಕರಿಗತಿ ಚೆಲುವ ಶ್ರೀರಾಮಯ್ಯ 3
--------------
ರಾಮದಾಸರು
ತಿಳಿಸುವ ಮಾತಲ್ಲಾ | ತಿಳಿಸದೆ ತಿಳಿಯುವ ಮಾತಲ್ಲಾ | ತಿಳಿಸದೆ ತಿಳಿಯದು | ತಿಳಿಯದು ನಿನಗದು | ತಿಳಿಸದೆ ತಿಳಿಯದು | ತಿಳಿಯದೆ ಹೊಳೆಯದು ಪ ಎಚ್ಚರ ನೀ ಮರೆತಿ ಮದ ಮತ್ಸರದಲೀ ಬೆರತೀ | ಅಚ್ಚ ಹೇಸಿಕೀ ದೇಹ ಮುಚ್ಚಿದ ಚರ್ಮಕ್ಕೆ | ನಿಶ್ಚಯವೆಂದರಿವೆ ಛೇಕರವೇ 1 ಭೇದವಳಿಯಲು ಬೇಕೊ ಮನದ ವಿವಾದ ಕಳೆಯಲು ಬೇಕೊ | ಸಾಧುಸಂತರ ಸಂಗ ಸೇವಿಸಿ ತತ್ತ್ವದ್ಹಾದಿ ಹಿಡಿಯ ಬೇಕೊ |ನೀನೆ ಹೀಗ್ಯಾಕೊ 2 ಬೋಧ ಮುಕ್ತಿ |ಆದಿಮೂರ್ತಿ ಭವತಾರಕ ದೇವ ಪಾದವಪೂಜಿಸಿ ನೀವ್ | ತಿಳಿದೆ ಭಜಿಸದಲೇ 3
--------------
ಭಾವತರಕರು
ತಿಳೀ ತಿಳೀ ಅನುಭವದಾಳಾ ಪೇಳ್ವೆ ಸ್ವಾನಂದವ ನೀ ಕೇಳಾ ಪ ತನುಮನಕರಣಕೆ ಮೀರಿರುವಾ ಸನಾತನಾ ಸಂಪೂರ್ಣಘನಾ ನೀನೆ ಆನಂದಾತ್ಮನದೆಂದು 1 ದೇಹಾದಿಗಳೇ ನಾನೆಂಬ ಮಹಾದೃಢದ ಈ ಮತಿಯಂತೆ ನೀನೆ ಆತ್ಮಸ್ವರೂಪನು ಎಂದು 2 ಗಟ್ಟಿಗೊಳಿಸು ಈ ವಿಷಯಾ ಮನದೋಳ್ ಎಟ್ಟಿ ಮನಸಿನಾ ನಷ್ಟವ ಮಾಡಿ ಕೆಟ್ಟಾ ಬಾಳಿದು ಪುಸಿ ಎಂಬುದನು 3 ಜೀವನ್ಮುಕುತಿ ಆನಂದ ದೇವನೆ ತಾನೆನ್ನುವದೇ ಚೆಂದ ಭವಹಾರಿ ಶಂಕರನ ಜ್ಞಾನಾ 4
--------------
ಶಂಕರಭಟ್ಟ ಅಗ್ನಿಹೋತ್ರಿ
ತಿಳೀಮನವೇ ತಿಳೀಮನವೇ ತಿಳೀಮನವೇ ತಿಳಿ ಸಂಪೂರ್ಣ ಸುಖತಾಣಾ ತಿಳಿ ಸಂಪೂರ್ಣ ಸುಖತಾಣಾ ಸಾವಿನ ಬಾಧೆಯ ನೀಗುವಿ ನಿಜವಾಗೀ ಸಾವಿನ ಬಾಧಾ ಭಾವಾತೀತನ ನೀ ತಿಳೀಮನವೇ ಪ ನೋಡು ನೀನೇ ಆತ್ಮಸ್ವರೂಪಾ ಪೇಳಿದ ಗುರುಭೂಪಾ ಪೇಳ್ದೆ ಗುರುಭೂಪಾ ದೂಡು ದೇಹಾದಿಗಳ ತಾಪಾ ನೋಡುನಿಜರೂಪಾ ನೀ ನುಡಿಮನಗಳಿಗೂ ಕಡೆಯಾಗಿರುವ ಅಡಗಿದ ಗೂಢವಿದು ತಿಳೀಮನವೇ 1 ಕರ್ಮ ಪಾಶಕೆ ಕಠಾರಿಯಿದು ಜ್ಞಾನಾ ಮರ್ಮವಿದು ಘನಶಾಂತಿಯಾ ಸ್ಥಾನಾ ಧರ್ಮಾಧರ್ಮವ ಮೀರಿಹ ತಾಣ ದುರ್ಮತಿಯಾ ಬಿಡು ಜಾಣಾ ಘೋರತರದ ಸಂಸಾರದ ನಾಶಾ ಪೂರಣಗೊಂಬುದು ಆಶಾ ಪರಾಶಾಂತಿಗಿನ್ನೊಂದನು ಕಾಣೆ ಗುರುಶಂಕರನಾಣೇ ಗುರುಶಂಕರನಾಣೇ ತಿಳೀಮನವೇ 2
--------------
ಶಂಕರಭಟ್ಟ ಅಗ್ನಿಹೋತ್ರಿ
ತಿಳೀವಲ್ಲದಿದು ಎನಗೆ ತಿಳಿಸಯ್ಯ ಹರಿಯೆ ಬಲುಪಾಪಿಜೀವಿಯ ತಪ್ಪಾರಿಗಿಹ್ಯದೋ ಪ ಹುಟ್ಟಿಸಿದವನಿಗೋ ಹುಟ್ಟಿ ಬಂದವನಿಗೋ ಸೃಷ್ಟಿಗೊಳಿಸಿದಂಥ ಸೃಷ್ಟಿ ಕರ್ತನಿಗೋ ಗಟ್ಟ್ಯಾಗಿ ನನಗಿದರ ಗುಟ್ಟು ತಿಳಿಸೈ ತಂದೆ ಮುಟ್ಟಿಭಜಿಸುವೆ ನಿನ್ನ ಶ್ರೀಕೃಷ್ಣರಾಯ 1 ಗೋಡೆಯ ಡೊಂಕಿರಲು ಗೋಡೆಯ ತಪ್ಪಥವ ಗೋಡೆಯನು ಕಟ್ಟಿದ ಗೌಂಡಿಯ ತಪ್ಪೋ ಕೂಡಿಟ್ಟು ಹಣ ವೆಚ್ಚಮಾಡಿ ಕಟ್ಟಿಸಿದಂಥ ಗೋಡೆಯೊಡೆಯನ ತಪ್ಪೋ ತಿಳಿಹೇಳೆನಗೆ 2 ಬಂಡಿ ತಗ್ಗಿಗೆ ಬೀಳೆ ಬಂಡಿದೇ ತಪ್ಪಥವ ಬಂದಡರಿ ಕೂತುಕೊಂಡವರದೆ ತಪ್ಪೋ ಬಂಡಿಹೊಡೆಯುವಂಥ ದಿಂಡೆಗಾರನ ತಪ್ಪೋ ಕಂಡು ಇದ್ದಂತ್ಹೇಳೋ ಪಂಢರಿರಾಯ 3 ಜೀವಾಳ ಅಪಸ್ವರ ನುಡಿಯಲದರದೇ ತಪ್ಪೋ ಜೀವಾಳ ಬಾರಿಸುವಗೋ ಜೀವಾಳ ಕರ್ತನಿಗೋ ಆವಂಗೆ ತಪ್ಪು ಜಗಜೀವ ಜೀವೇಶನೆ ನ್ಯಾ ಯಾವಾಗ್ಹೇಳಯ್ಯ ಭಾವಜಪಿತನೆ 4 ಪ್ರಾಣೇಶ ಶ್ರೀರಾಮ ನೀನೆ ಬರೆದಿಹ್ಯ ಬರೆಹ ನೀನೆ ವ್ಯಾಪಕ ಸರ್ವ ನೀನೆ ರಕ್ಷಕನೋ ನೀನೆ ಸ್ವಾತಂತ್ರ್ಯಾಖಿಲ ಏನಿಲ್ಲ ಮನುಜನಾ ಧೀನ ತಪ್ಪ್ಯಾಕಿವಗೆ ನೀನೆ ಪೇಳಯ್ಯ 5
--------------
ರಾಮದಾಸರು
ತೀರ್ಥ ಪಿಡಿದವರೆಲ್ಲ ತಿರುನಾಮಧಾರಿಗಳೆ - ಜನ್ಮ ಪ ಸಾರ್ಥಕವಿಲ್ಲದವರೆಲ್ಲ ಭಾಗವತರೆ ಅ ಮೂಗ್ಹಿಡಿದು ನೀರೊಳಗೆ ಮುಳುಗಿ ಜಪತಪ ಮಾಡಿನಿಗಮಾಗಮ ಪುರಾಣಗಳನೋದಿ ತಿಳಿದುಬಾಗಿ ಪರಸ್ತ್ರೀಯರನು ಬಯಸಿ ಕಣ್ಣಿಡುವಂಥಯೋಗ ಭ್ರಷ್ಟರೆಲ್ಲ ದೇವ ಬ್ರಾಹ್ಮಣರೆ ? 1 ಪಟ್ಟೆ ನಾಮವ ಬಳಿದು ಪಾತ್ರೆ ಕೈಯಲಿ ಹಿಡಿದು ಗುಟ್ಟಿನಲಿ ಜಪಿಸುವ ಗುರುತರಿಯದೆಕೆಟ್ಟ ಕೂಗನು ಕೂಗಿ ಹೊಟ್ಟೆಯನು ಹೊರೆವಂಥಪೊಟ್ಟೆಗುಡುಮಗಳೆಲ್ಲ ಪರಮ ವೈಷ್ಣವರೆ ? 2 ಲಿಂಗಾಂಗದೊಳಗಿರುವ ಚಿನ್ಮಯವ ತಿಳಿಯದೆಅಂಗಲಿಂಗದ ನೆಲೆಯ ಗುರುತರಿಯದೆಜಂಗಮ ಸ್ಥಾವರದ ಹೊಲಬನರಿಯದ ಇಂಥಭಂಗಿಮುಕ್ಕಗಳೆಲ್ಲ ನಿಜ ಲಿಂಗವಂತರೆ ? 3 ಅಲ್ಲಾ ಖುದಾ ಎಂಬ ಅರ್ಥವನು ತಿಳಿಯದೆಮುಲ್ಲ ಶಾಸ್ತ್ರದ ನೆಲೆಯ ಮುನ್ನರಿಯದೆಪೊಳ್ಳು ಕೂಗನು ಕೂಗಿ ಬಗುಳಿ ಬಾಯಾರುವಂಥಕಳ್ಳ ಸುಳ್ಳರಿಗೆಲ್ಲ ವೀರ ಸ್ವರ್ಗವುಂಟೆ ?4 ವೇಷ ಭಾಷೆಯ ಕಲಿತು ಗೋಸಾಯಿ ಉಡೆದೊಟ್ಟುಆಸೆಯನು ತೊರೆಯದೆಯೆ ತಪಕೆ ಕುಳಿತುವಾಸನೆಯ ಗುರುತಿನಾ ಹೊಲಬನರಿಯದ ಇಂಥವೇಷಧಾರಿಗಳೆಲ್ಲ ಸಂನ್ಯಾಸಿಗಳೆ ? 5 ಆರು ಚಕ್ರದ ನೆಲೆಯ ಅಷ್ಟಾಂಗ ಯೋಗದಲಿಮೂರು ಮೂರ್ತಿಯ ಮೂರು ಕಡೆಯೊಳಿರಿಸಿಮಾರ ಪಿತನಹ ಕಾಗಿನೆಲೆಯಾದಿ ಕೇಶವನಸಾರಿ ಭಜಿಸಿದವರಿಗೆ ಕೊರೆವ ಕೊರತೆಯುಂಟೆ ? 6
--------------
ಕನಕದಾಸ
ತೀರ್ಥಯಾತ್ರೆ ಎಂಬುದು ಇದೆ ನೋಡಿ ಪಾದ ಕೂಡಿ ಧ್ರುವ ಭ್ರೂಮಧ್ಯವೆಂಬುದಿದೆ ಕಾಶಿ ಬ್ರಹ್ಮಸುಖ ತುಳುಕುತಿದೆ ಸೂಸಿ ನೇಮದಿಂದಲಿ ನೋಡಲು ಧ್ಯಾನಿಸಿ ಕರ್ಮಪಾಶ ಹೋಯಿತು ಛೇದಿಸಿ 1 ತ್ರೀವೇಣಿ ಸಂಗಮ ಸುಕ್ಷೇತ್ರ ಜೀವ ಪ್ರಾಣ ಮಾಡಿತು ಪವಿತ್ರ ದಿವ್ಯ ದೇಹವಾಯಿತು ಸರ್ವಗಾತ್ರ ಭವಹಿಂಗಿ ಹೋಯಿತು ವಿಚಿತ್ರ 2 ಭ್ರಮರ ಗುಂಫ ಎಂಬುದು ಗಯಾ ನೇಮದಿಂದ ಕಂಡವಗ ವಿಜಯ ಪ್ರೇಮಭಾವೆಂಬುದು ಸರ್ವಕ್ರಿಯ ವರ್ಮದೋರಿತು ಗುರು ಪುಣ್ಯೋದಯ 3 ಪೃಥ್ವಿ ಪರ್ಯವಣಿದೆವೆ ನೋಡಿ ತತ್ವದೊಳೇಕತ್ವ ಸಮಗೂಡಿ ಹಿತತ್ವವೆಂಬ ದಯ ಮಾಡಿ ಕಥತ್ವವೆಂಬು ದೀಡಾಡಿ 4 ಕಣ್ಣ ದೋರಿ ಬಂತೆನಗ ತಾರ್ಕಣ್ಯ ಕಣ್ಣು ಕಂಡುಗೆಯಿತು ಧನ್ಯಧನ್ಯ ಚಿಣ್ಣ ಮಹಿಪತಿಗಿದೆ ಸರ್ವಪುಣ್ಯ ಇನ್ನೊಂದು ಪಥವ್ಯಾಕೆ ಅನ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತೀರ್ಥವ ಜನರು ಕೊಂಬರೆ ಬನ್ನಿ ತೀರ್ಥವ ಜನರು ಪಪಾರ್ಥಸಾರಥಿ ಭಕ್ತಪಾಲಕನಾಗಿರೆ ಸ್ವಾರ್ಥವೆ ಬರುವುದು ಸಾರಿ ಸಮೀಪವ ಅ.ಪಪಾದೋದಕವ ನಿಂತು ಪಡೆದು ಪ್ರಸಾದವನಾದರಿಸಲು ನಿತ್ಯರಾಗುವಿರೀಗಲೆ 1ಸ್ವಾಮಿಯಾರೋಗಿಸಿದ ಶೇಷ ಸ್ವೀಕಾರದಿಂಕಾಮಿತಾರ್ಥಗಳೆಲ್ಲ ಕೈವಶವಹವು 2ಚರಪುಗಳನು ಕೈಯ ಜೋಡಿಸಿ ಗ್ರಹಿಸಲುನಿರುಪಮ ತಿರುಪತಿನಾಥ ರಕ್ಷಿಪನಾಗಿ 3ಓಂ ಸುಭದ್ರಾ ಪೂರ್ವಜಾಯ ನಮಃ
--------------
ತಿಮ್ಮಪ್ಪದಾಸರು
ತೀರ್ಥವು ಬೇಡಾ ಕ್ಷೇತ್ರವು ಬೇಡಾ ಜಪ ತಪ ಯೋಗವು ಬೇಡಾ ಪ ಪರ ಉಪಕಾರ ಶಾಸ್ತ್ರ ಪುರಾಣಗಳು ಬೇಡಾ | ಸ್ವಾಮಿ ಸದ್ಗುರು ಭವತಾರಕನ ಭಜಕರ ಪಾದವ ನೀ ಬಿಡಬೇಡಾ 1 ಸತ್ಯವು ಸಂಸಾರವು ಜಗವಿದು ಮಾಡೆಂಬರು ನೋಡೀಜನರು | ಮಿಥ್ಯವು ಸರ್ವವು ಜಗದೀಶನನು ತಿಳಿಯೆಂಬುವರಾ ಸಜ್ಜನರು || ಜಾಗ್ರದಿ ಸ್ವಪ್ನದಿ ಬಳಲುತ ನಲಿವುತ ಚರಿಸುವರಾ ಕಾರ್ಮಿಕರು | ತುರ್ಯಾವಸ್ಥೆಯೋಳ್ ಮರೆದು ತಮ್ಮನು ಇರುತಿಹರಾ ಸಾಧುವರು2 ಸಾರ ನಿವೃತ್ತಿಯ ಅರಿವುದೆ ಜೀವನ್ಮುಕ್ತಿ || ಇದರ ಹಂಚಿಕೆ ಮಾಡುತ್ತಿಹುದೇ ಅದುವೆ ಶಾಸ್ತ್ರದ ಯುಕುತೀ | ಸದಮಲ ಬೋಧಾನಂದವೆ ಬಲಿದರೆ ನಿಜವೇ ತಾ ಅವ್ಯಕ್ತಿ 3 ಅನುದಿನ ಮೂರ್ತಿ ಭವತಾರಕ ಭಜಕರ ಕೇಳೋ ನಿನ್ನ ಖೂನಾ 4 ಸಂಸಾರವ ಸದ್ಧರ್ಮದಲಿ ಸಾಧು ಸಂತರಂತೆ ನೀ ಮಾಡೊ | ಸಂಶಯವಳಿದು ಸರ್ವವು ಶಿವನೆಂದರಿದು ಅವರೊಳು ಕೂಡೊ | ಸತ್ತು ಹುಟ್ಟುವ ಕಟ್ಟಳೆಗಳನು ಕಿತ್ತಿ ಈಡ್ಯಾಡೊ | ನಿತ್ಯದಿ ಭವತಾರಕನ ಭಜಕರ ಸಂಗದಲಿ ಲೋಲ್ಯಾಡೊ 5 ಗುರು ವರನಲಿ ಸತ್ಪುರುಷರ ಬಳಿಯಲಿ ಅರಸಬಾರದು ಇಷ್ಟಾ | ಕುಲ ವಯ ಕ್ರಿಯಾ ಕರ್ಮವ ತಾಪತ್ರಯಗಳನೆಣಿಸುವ ಭ್ರಷ್ಟಾ | ಅನುಭವ ಜ್ಞಾನದಿ ಬೋಧದಿ ಲಕ್ಷ್ಯವೀಕ್ಷಿಸುವವನೆ ಶ್ರೇಷ್ಠಾ | ಇನಿತನು ಬಿಟ್ಟು ನಿಂದಿಸುವವನೆ ಭವದಲಿ ಬಡುವನು ಕಷ್ಟಾ 6 ಮೂರ್ತಿ ಭವತಾರಕ ಭಜಕರ ಸೂರ್ಯನ ಬಲ್ಲದೆ ಗೂಗಿ 7 ಭವ ದೋಷವು ಅಳಿವಹುದೇ? | ಗುರು ಭವತಾರಕ ಭಜಕರ ಬೋಧವು ಧರೆಯೊಳು ನರರಿಗೆ ಇಹುದೇ ? 8 ಮಾತು ಸತ್ಯವಾದರೆ ಆತಗೆ ಶಿವನೆನು- ತಿಹರೀ ಜಗ ಜನರೂ | ಭೂತಭವಿಷ್ಯತ್ ಹೇಳಲು ಭಕ್ತಿಯೊಳಾತಗೆ ನಡಕೊಂಬುವರೂ | ಭೂತಳದೊಳು ಭವತಾರಕ ಭಕ್ತರ ನೀತಿ ಮರೆತ ಪಾಮರರೂ | ನೂತನ ಖ್ಯಾತಿಯ ಕೊಂಡಾಡುತ ಬಹು ಪಾತಕಕೆಳಿ ಎಂಬುವರೂ 9 ಕರ ಭವ ಮೂರ್ತಿ ಭವತಾರಕ ಭಜಕರು ಇದ್ದ ಸ್ಥಿತಿಯನರಿಯರು 10 ಆಡುವರಾಟವ ಬಾಲರ ಮನೆಯಲಿ ಮಾಡುತ ಬ್ರಹ್ಮಾಂಡವನೂ |ನೋಡರು ಹಿರಿಯರು ಸಟೆಯೆಂದೇ ದಿಟ ಮಾಡುವರಿಹದಾಟವನೂ | ಪಾಡಲ್ಲೆನುತಲಿ ತಿಳಿದವರೊಳು ಬೇಡುವರಾ ನಾಕವನೂ | ರೂಢಿಯೊಳಗೆ ಭವತಾರಕ ಭಜಕರು ನೋಡರು ಪುಸಿಯೆಂದದನೂ 11 ನಿತ್ಯ ಪೂರ್ಣ ಭವತಾರಕನಂಘ್ರಿಯ ಹೊಂದದೆ ತಿಳಿಯದು ಗುಟ್ಟೂ 12 ಸಂಚಿತ ಪ್ರಾರಬ್ಧ ಕ್ರಿಯಮಾಣಾ ಜನರಿಗೆ ಬರೆದನು ಬ್ರಹ್ಮಾ | ಮುಂಚೆ ಶಿರವನು ನೀಗಿದಾ ಬರದವರಾರೊ ಆತಗೆ ತಮ್ಮಾ | ಮಿಂಚಿನಂತೆ ಜೀವನಕೆ ತಗಲುವಾ ಮಾಡುವ ಕರ್ಮಾ ಧರ್ಮಾ | ಹಂಚಿಕೆ ತಿಳಿಯದೆ ನುಡಿವರು ಮರುಳರು ವಂಚನೆ ಬಿಡು ಇದು ವರ್ಮಾ 13 ದೇವ ನೈವೇದ್ಯವು ಖೊಬ್ಬರಿ ಸಕ್ಕರಿ ಪನಿವಾರವು ನೋಡಿ | ಆವ ಕುಲದವನಾದರೂ ಏನು | ಇಲ್ಲದ ಹಂಚಿಕೆ ಮಾಡೀ ಭಾವಿಸಿ ಮೃಷ್ಟಾನ್ನವನಿಟ್ಟರೂ ಕುಲಧರ್ಮದಲ್ಲಿ ನೋಡೀ | ಕೇವಲ ಭವತಾರಕನ ಭಜಕರ ಮುಂದೆ ರಹಸ್ಯವ ಮಾಡೀ 14
--------------
ಭಾವತರಕರು
ತುಂಗಭದ್ರ ನದಿ ತೀರದಿ ನೆಲಸಿಹನ್ಯಾರೆ ಪೇಳಮ್ಮಯ್ಯ ಪ. ರಂಗ ತಾನು ಇಲ್ಲಿರುತಿಹನಮ್ಮ ಅ.ಪ. ಶಂಖ ಚಕ್ರ ತ್ರಿಶೂಲವ ಧರಿಸಿಹನ್ಯಾರೇ ಪೇಳಮ್ಮಯ್ಯ ಶಂಕಿಸದಂದದಿ ತೋರುವನಮ್ಮ 1 ಈ ಪರಿರೂಪವ ಧರಿಸಲು ಕಾರಣವೇನೇ ಪೇಳಮ್ಮಯ್ಯ ಈ ಪರಿರೂಪವ ಧರಿಸಿಹನಮ್ಮ 2 ಪರಿ ಶುದ್ಧ ಸಾತ್ವಿಕರಿಗೆ ಹ್ಯಾಗೇ ಪೇಳಮ್ಮಯ್ಯ ಶುದ್ಧ ಜ್ಞಾನವನಿತ್ತು ಸಲಹುವನಮ್ಮ 3 ವಿಷ್ಣು ಭಕ್ತರ ಮನಸಿಗೆ ತೋರುವ ಮತಿ ಏನೇ ಪೇಳಮ್ಮಯ್ಯ ಬಿಟ್ಟಿರಲಾರದ ಗುಟ್ಟು ಕಾಣಮ್ಮ 4 ಪರಿ ಲೀಲೆ ಇದೇನೆ ಪೇಳಮ್ಮಯ್ಯ ಹರಿಯು ತಾನು ಒಲಿಯನು ಕಾಣಮ್ಮ 5 ಪರಿ ಹ್ಯಾಗೇ ಪೇಳಮ್ಮಯ್ಯ ಪರಿ ಧರಿಸುವದೊಂದರಿದೇನಮ್ಮ 6 ಹರಿಹರ ಕ್ಷೇತ್ರದಿ ನೆಲಸಿಹ ಸ್ವಾಮಿಯ ಭಜಿಸುವದ್ಹ್ಯಾಗೇ ಪೇಳಮ್ಮಯ್ಯ ಕರಕರೆ ಭವವನು ಕಳೆಯಬೇಕಮ್ಮ 7 ಶ್ರೀಸತಿ ಪಾರ್ವತಿ ಸಹಿತದಿ ನೆಲಸಿಹನ್ಯಾರೇ ಪೇಳಮ್ಮಯ್ಯ ಶೇಷಭೂಷಣ ಸಹ ಶ್ರೀನಿವಾಸ ಕಾಣಮ್ಮ 8
--------------
ಅಂಬಾಬಾಯಿ
ತುಂಗಭದ್ರೆ ಸುತರಂಗಿಣಿ ತೀರಗನ್ಯಾರೇ ಪೇಳಮ್ಮಯ್ಯ ಪ ಮಂಗಳ ಮಹಿಮ ಶುಭಾಂಗ ಮೂರುತಿ | ಶ್ರೀ ಹರಿಹರ ಇವ ಕಾಣಮ್ಮ ಅ.ಪ. ಬಹು ಕಂಟಕಿ ಆ ಗುಹನ ತಪಸಿಗೆ | ಮೆಚ್ಚಿದ ಹರ ನೋಡಮ್ಮಮ್ಮ |ಅಹಿ ಭೂಷಣ ತಾ ವರವನು ಕೊಟ್ಟನು | ಬಹು ಬೇಗನೆ ನೋಡಮ್ಮಮ್ಮ|ವಿಹಗವಾಹ ಹರಿ ಮತ್ತೆ ರುದ್ರನಿಂ | ಇವನ ಜೇಯ ನೋಡಮ್ಮಮ್ಮ |ಮಹಿಯೊಳು ಸುರರಾಹವ ಕೆಡಸುತ | ಬಹು ಹಿಂಸಕ ನೋಡಮ್ಮಮ್ಮ 1 ಸುರಲೋಕಕು ಈ ಅಸುರನ ಬಾಧೆಯು | ತಟ್ಟಿತು ನೋಡಮ್ಮಮ್ಮ |ಸುರ ಭೂಸುರರೆಲ್ಲರು ಮೊರೆಯಿಟ್ಟರು | ಹರಿಯಲಿ ನೋಡಮ್ಮಮ್ಮ |ಸಿರಿಯರಸನು ತಾನಭಯವನಿತ್ತವರನು | ಕಳುಹಿದ ನೋಡಮ್ಮಮ್ಮ | ಕರುಣಾಕರ ತಾ ಹರಿಹರ ರೂಪದಿ | ದುರುಳನ ತರೆದ ನೋಡಮ್ಮಮ್ಮ 2 ಕೃತ್ತಿವಾಸ ತಾ ನಿತ್ತ ವರವ ಹರಿ | ಪಾಲಿಸಿದನು ನೋಡಮ್ಮಮ್ಮ | ದಿತಿಸುತನಾಯುವು ದಶಶತಕಳೆಯಲು | ವತ್ತಿದ ಕೆಳಗವನಮ್ಮಮ್ಮ |ಹಿತದಿಂದಲಿ ತಾ ಭಕುತರ ಪೊರೆಯುವ | ಹರಿಹರನ ನೋಡಮ್ಮಮ್ಮ | ದೈತ್ಯನ ಪೆಸರಿಲಿ ಪಾವನವಾಯಿತು | ಈ ಕ್ಷೇತ್ರವು ಕಾಣಮ್ಮಮ್ಮ 3 ದಕ್ಷಿಣ ಪಾಶ್ರ್ವದಿ ಅಭಯ ಹಸ್ತ | ತ್ರಿಶೂಲ ಧರನ ನೋಡಮ್ಮಮ್ಮ | ಅಕ್ಷಿಯ ಮಾನಿಯು ದಕ್ಷಿಣ ಶಿರದಲಿ | ಮೆರೆಯುವನು ನೋಡಮ್ಮಮ್ಮ | ದಕ್ಷಸುತೆಯು ತಾ ವಿರೂಪಾಕ್ಷನ | ಸೇವಿಪಳೂ ನೋಡಮ್ಮಮ್ಮ |ಪಕ್ಷಿವಾಹಗೆ ತಾನರ ಮೈಯ್ಯಾದನು | ತ್ರ್ಯಕ್ಷನು ಕಾಣಮ್ಮಮ್ಮ 4 ಕಂಬು | ಧರನಾ ನೋಡಮ್ಮಮ್ಮ ಲಕ್ಷ್ಮೀವನಿತೆಯು ಕಾಮನ ಜನಕನ | ಸೇವಿಪಳೂ ನೋಡಮ್ಮಮ್ಮ ಶುಮಲಾಂಗ ವನಮಾಲೆಗಳನು | ಧರಿಸಿಹ ನೋಡಮ್ಮಮ್ಮ |ಸಾಮಸನ್ಮುತ ಗುಣಧಾಮನ ಲೀಲೆ | ಇದೆಲ್ಲವು ಕಾಣಮ್ಮಮ್ಮ 5 ಕ್ರೋಶ ಪಂಚ ನಾಲ್ಕಾರದಿ ಮೀಸಲು | ಸುಕ್ಷೇತ್ರವ ನೋಡಮ್ಮಮ್ಮ | ಭಾಸಿಸುವವು ಇಲ್ಲೆಕಾದಶ ವರ | ತೀರ್ಥಂಗಳು ನೋಡಮ್ಮಮ್ಮ | ಈ ಸುಕ್ಷೇತ್ರವು ಆ ಮಹಕಾಶಿಗೆ | ಸಮವೆನಿಸಿದೆ ನೋಡಮ್ಮಮ್ಮ |ಅಸಮ ಮಹಿಮ ಹರಿ ಅಸುರಗೆ ಕೊಟ್ಟನು | ಈ ಪರಿವರ ಕಾಣಮ್ಮಮ |6| ಕೃತಿ ವಿಧಿ ಜನಕನಿಗೂ | ಭೇದವೆ ಸರಿ ಕೇಳಮ್ಮಮ್ಮ ಮೋದಮಯ ಗುರು ಗೋವಿಂದ ವಿಠಲನ | ಲೀಲೆಗಳಿವು ಕಾಣಮ್ಮಮ್ಮ 7
--------------
ಗುರುಗೋವಿಂದವಿಠಲರು
ತುಂಗಾತೀರ ಪ್ರಭಾಕರ ಶೃಂಗಾರ ಶ್ರೀ ರಾಘವೇಂದ್ರ ಪ್ರಭು [ಮಾ ಮಂದಾರ] ಪ ತುಂಗ ಕೃಪಾಕರ ಕಾಮಿತದಾತ [ಸಂಗ]ವೆಂಕಟೇಶ ನಿರಂತರ ಮೋದಿತ ಅ.ಪ ಯೋಗದಂಡಧರ [ವರ] ಸಂಭಾವಿತ ತ್ಯಾಗಾದಿ ಸುಗುಣ ನಿರುಪಮ ಶಾಂತ ಮಾರ್ಗ ದ್ವೈತ ನಿರೂಪಣ ಮಹಾನಂದ [ಶ್ರೀ]ಗುಣೋಲ್ಲಾಸಿತ ವಿರಾಜಿತ 1 ಆಗಮಾದಿ ವಿಧಿಸೂತ್ರ ವಿಚಾರಿತ ರಾಗ ರಾಗಾಂಗರಾಗಭೂಷಿತ ಯಾಗ ಯಜ್ಞ ಭೇದ ನಿರೂಪಿತ ಮಾಂಗಿರೀಶ ಹರಿಪದ ಪ್ರಪೂಜಿತ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತುಂಗಾತೀರದಿ ಕಂಗೊಳಿಸುವ ಮುನಿ ಪುಂಗವರಾಯರ ನಯನದಿ ನೋಡೆ | ಮನದಿ ಕೊಂಡಾಡೆ ವರಗಳ ಬೇಡೆ ಪ ಆದಿ ಯುಗದಿ ಪ್ರಹ್ಲಾಲದನೆನಿಸಿ ಕ ಯಾದವಿನುದರದಿ ಜನಿಸುತಲಿ | ಸಖಿಜನಿಸುತಲಿ ಮಾಧವ ಪರನೆಂದುಮೋದದಿ ಸ್ತಂಭದಿ ತೋರಿದ ಧೀರನೆ 1 ಅದ್ವೈತಾಟವಿ ದಗ್ಧಕೃತಾನಲ ಮಧ್ವಮತಾಬ್ಧಿಗೆ ಭೇಶನೆಂದೆನಿಸಿ ಸದ್ವೈಷ್ಣ ವರುದ್ಧಾರಕನಾದ ಪ್ರ ಸಿದ್ಧನಾದ ವ್ಯಾಸಕರ್ಮಂದ ಕುಲೇಂದ್ರನೆ 2 ಧರಣಿ ತಳದಿ ರಾಘವೇಂದ್ರ ಸುನಾಮದಿ ಮರಳಿ ಜನಿಸಿ ದಿವ್ಯ ಪರಿಮಳ ರಚಿಸಿ | ಪರಿಮಳ ರಚಿಸಿ ಕರುಣದಿ ದ್ವಿಜರಿಗೆ ಎರದು ಪೊರೆವಗುರು ಮರುತಾವೇಶದ ದೇವಸ್ವಭಾವನೆ 3 ಸ್ವಾಂತÀದಿ ಭಜಿಪರ ಚಿಂತೆಯ ಕಳೆಯಲು ಚಿಂತಾಮಣಿಯಂತೆ ಸತತ ಸಖಿಯೇ | ಸಂತತ ಸಳಿಯೇ ಮಂತ್ರನಿಕೇತನ ಕ್ಷೇತ್ರದಿ ಸ್ಥಿರವಾಗಿ ನಿಂತ ಪರಮ ಸುಶಾಂತ ಮೂರುತಿಯೆ 4 ವಂದಿಸಿ ಸ್ತವಿಸುವ ವಂದ್ಯಾಂಧಕರಿಗೆ ಕಂದ ರಕ್ಷಿಗಳ ಕರುಣಿಸಿಹರೇ | ಕರುಣಿಸಿಹರೇ ಇಂದು ಧರಾಮರ ವಂದಿತ ಶಾಮ ಸುಂದರ ವಿಠಲನ ದಾಸೋತ್ತಮನೆ 5
--------------
ಶಾಮಸುಂದರ ವಿಠಲ
ತುಂಗೆ ಬಂದಳು ದೇವೋತ್ತುಂಗ ವರಹನಾ ಮುಂಗೋರಿಯಲ್ಲಿ ಪುಟ್ಟಿ ಭಕ್ತ ನಿಕರನಾ ಹಿಂಗದೆ ಪೊರೆದು ಸುಖಂಗಳನೀವು ತಾ ಮಂಗಳಾಂಗೆ ಮಾತಂಗೆ ಸುಗಮನೆ ಪ ಕಾಳ ಪನ್ನಗವೇಣಿ ಕೋಕಿಲವಾಣಿ ಫಾಲ ಕಸ್ತುರಿ ಜಾಣೆ ಪಲ್ಲವಪಾಣಿ ವಾಲೆ ಮೂಗುತಿ ಅಣಿ ಮುತ್ತು ಕಠಾಣಿ ತೋಳು ಮಂದಾರಮಣಿ ಅರಿಗುಣಶ್ರೇಣಿ ಮೌಳಿಯಾ ಮೇಲಿನ ಜಾಳಿಗೆ ಸೂಸುಕಾ ವಾಲಲು ಕದಿಪಿನ ನೀಲಗೂದಲು ಭ್ರಮ ರಾಳಿಗಳಂತಿರೆ ಬಾಲ ಸುಧಾಕರ ಪೋಲುವ ವದನೇ1 ಕುಡುತೆಗಂಗಳ ನೀರೆ ಕಂಬುಕಂಧರೆ ಕಡಗ ಕಂಕಣದ್ವಾರೆ ಕೈಯ ಶೃಂಗಾರೇ ಜಡಿವ ಪದಕಹಾರೆ ಕಂಚಕಸೀರೆ ಮುಡಿದ ಪುಷ್ಪಂಗಳು ಮರೆ ಕುಚಗಳು ಅದರೆ ಬಡನಡುವಿನ ಕಡು ಉಡುವಿನ ಕಿಂಕಣಿ ಒಡನುಡಿಸುವ ಗೆಜ್ಜೆ ಕಾಲಂದಿಗೆ ಪೆಂಡೇ ಅ ಡಿಗಡಿಗೊಪ್ಪಲು ಕಡಲನ ಮಡದಿ 2 ತೀಡಿದ ಪರಿಮಳ ಗಂಧದ ಭೋಗಿ ಕೂಡಲಿಪುರದಲಿ ಭದ್ರಿವಂದಾಗಿ ಕೂಡಿ ಸೂಸಿದಳಂದು ಮುಂದಕ್ಕೆ ಸಾಗಿ ಆಡುತ ಪಾಡುತ ಬಲು ಲೇಸಾಗಿ ಬೇಡಿದ ಜನರಿಗೆ ಈಡಿಲ್ಲದ ವರವ ನೀಡುತ ನಿರುತರ ಮಾಡುತ ದಯವನು ನೋಡುತ ತಡವಿಲ್ಲದಲೆ 3 ಶೃಂಗಾರ ಮಾರ್ತಾಂಡೆ ಹರಿಹರ ಮಾತಾ ಅಂಗಾಧಿ ಪರ್ವತ ಪಂಚ ಪ್ರಖ್ಯಾತ ಹಿಂಗದೆ ಬಲಗೊಂಡು ಕೊಡ್ಲೀಗೆ ಬರುತ ಸಂಗೀತ ಗಾಯನದಿಂದ ವಾಲಗಗೊಳುತ ಸಂಗಮೆಯಾಗಿ ತಂಗಿಯ ಬೆರತೀಗ ಮಂಗಳ ಕ್ರೀಡೆಯಲ್ಲಿ ಪ್ರವೇಶಿಸಿ ಗಂಗೆ ಎನಿಸಿಳ್ಯಮನನಾದೇಳಗೆ 4 ಲೋಕದೊಳಗೆ ಪ್ರತಿರಹಿತ ಪೆಸರಾದ ಚೀಕನ ಬರವಿಯ ಅಶ್ವಥಮರದ ನೃಕಂಠೀರವನ ಪಾದದಿ ವ್ಯಾಧಿಷ್ಟರಾದ ಸೋಕಿ ಮೈಮರೆದಂಥ ನಮಿತರು ಕರದಾ ಪಾಕ ಪದಾರ್ಥಕೆ ಒಲಿದೊಲಿದಾಡುತ ಶ್ರೀಕರ ವಿಜಯವಿಠ್ಠಲಗೆರಗುತ ನಾಕಕನ್ನಿಕೆಯಂತೆ ಹೊಳೆದಳುಯಿಂದು5
--------------
ವಿಜಯದಾಸ
ತುಂಗೆ ಮಂಗಳ ತರಂಗೆ | ಕರುಣಾಂತರಂಗೆ ರಂಗನಾಥನ ಪದಭೃಂಗೆ ಪ. ಅಂಗಜಪಿತನ ಅಂಗದಿ ಉದ್ಭವೆ ಭವ ಭಂಗ ಹರಿಸೆ ಅಂಗನೆ ಎನ್ನಂತರಂಗದಿ ಹರಿಪಾ- ದಂಗಳ ತೋರಿಸೆ ಶೃಂಗೆ ಶುಭಾಂಗೆ ಅ.ಪ. ಆದಿ ದೈತ್ಯನು ಖತಿಯಲಿ | ಮೇದಿನಿಯ ಸುತ್ತಿ ಒಯ್ದು ಪಾತಳ ಪುರದಲಿ ಮಾಧವ ಕರುಣದಿ ಆದಿವರಾಹನೆಂದೀ ಧರೆಯೊಳು ಬಂದು ಮೇದಿನಿ ಪೊರೆಯಲು ಶ್ರೀದನ ದಾಡೆಯಿಂ ನೀನುದುಭವಿಸಿದೆ 1 ಸ್ನಾನಪಾನದಿ ನರರನು | ಪಾವನಗೈವ ಮಾನಿನಿ ನಿನ್ನ ಕಂಡೆನು ನಾನಾ ದುಷ್ಕøತಗಳ ನೀನೋಡಿಸಿ ಮತ್ತೆ ನಾನು ಎಂಬುವ ನುಡಿ ನಾಲಗೆಗೀಯದೆ ಮಾನವ ಕಾಯೆ ಶ್ರೀನಾಥನ ಪದಧ್ಯಾನವನೀಯೆ 2 ಹರನ ಪೆಸರಿನ ಪುರದಲಿ | ಹರಿದು ಬಂದು ವರ ಶ್ರೀ ಕೂಡಲಿ ಸ್ಥಳದಲಿ ಭರದಿ ಭದ್ರೆಯ ಕೂಡಿ ಪರಿದಲ್ಲಿಂದಲಿ ಹರಿಹರ ಕ್ಷೇತ್ರವ ಬಳಸಿ ಮಂತ್ರಾಲಯ ಪುರಮಾರ್ಗದಿ ಸಾಗರವನೆ ಸೇರಿ ವರ ಗೋಪಾಲಕೃಷ್ಣವಿಠ್ಠಲನೆ ಧ್ಯಾನಿಪೆ 3
--------------
ಅಂಬಾಬಾಯಿ