ಒಟ್ಟು 19311 ಕಡೆಗಳಲ್ಲಿ , 135 ದಾಸರು , 7892 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂಬಿದೆನೊ ನಿನ್ನ ಪಾದಾರವಿಂದಾ ಇಂಬು ಈವದು ಎನಗೆ ವೈಕುಂಠಪುರದೊಳಗೆ ಪ ಮಲಭಾಂಡದಲ್ಲಿ ಪೊಕ್ಕು ನೆಲೆಗಾಣದಲೆ ಸಿಕ್ಕು ಸಲೆ ಸೊರಗಿ ತಿರುಗಿದೆನೊ ಬಳಲಿ ಮರುಗಿ ಉಳಿವದಕುಪಾಯವನು ಒಂದರೆ ಕಾಣೆನೊ ಎಲೊ ಬಲುದೈವ ನೀನೆ ದಯಾಳು ಎಂದೂ 1 ಕೈವಲ್ಯ ಕೊಡುವಲ್ಲಿ ಮಂಡಲದೊಳು ಎಣಿಯಾರು ನಿನಗೆ ಭಂಡಕಾಯವ ತೆತ್ತು ಬರಲಾರೆ ನಿನ್ನ ತೊತ್ತು ನಿತ್ಯ ಎಳೆನೋಟದಲಿ ನೋಡು 2 ಯದುಕುಲಲಲಾಮ ಸುರಸಾರ್ವಭೌಮ ಮಹಿಮ ಮದನಪಿತ ಕಾಳಿಂಗಭಂಗ ರಂಗಾ ಮಧುಸೂದನ ವಿಜಯವಿಠ್ಠಲ ಲಕುಮಿನಲ್ಲಾ ಹೃದಯದೊಳು ಪೊಳೆವ ಬಲು ವಿಚಿತ್ರ ಚಲುವಾ 3
--------------
ವಿಜಯದಾಸ
ನಂಬಿದೆನೊ ನೀರೇರು ಹಾಕ್ಷ ನಿನ್ನ ನಂಬಿದೆನೊ ನಿನ್ನ ನಂಬಿದೆ ಯನ್ನ ಸಲಹುವದಿನ್ನು ಮನ್ನಿಸೊ ಹೆನ್ನೆ ವಿಠ್ಠಲ ಪ ಸಿಂಧು ಗಂಭೀರ ಶ್ರೀ ವೇಣುನಾದ ಮಂದರಾದ್ರಿಧರ ನಂದನಂದನ ಕುಂದರದನ ಗೋವಿಂದ ಪರಮಾ- ನಂದ ವಿಗ್ರಹ 1 ಜಾನಕೀರಮಣ ಸರ್ವೇಶ ಈಶವಿನುತ ಚರಣ ದೀನಬಾಂಧವ ದೇವರದೇವ ಪುರಾಣಪುರುಷ ಮಹಾನುಭಾವ ಹರಿ 2 ಬಾಲಗೋಪಾಲ ಭಾಸುರ ಗುಣಶೀಲ ಶ್ರೀಲೋಲ ನೀಲವರ್ಣ ಹೆನ್ನೆಪುರೀಶ ಕುಚೇಲವರದ ಮಾಧವ 3
--------------
ಹೆನ್ನೆರಂಗದಾಸರು
ನಂಬಿದೆನೊ ರಂಗ ಗೋವಿಂದ ರಂಗ ಪ. ಇಳೆಸೃಷ್ಟಿಗಾಧಾರನೆಂಬ ಬಿರುದುಳ್ಳಡೆ ಜಗನ್ಮಯನೆ ಚಿನ್ಮಯರೂಪ ರಂಗ ನೀನಾದ್ಯಯ್ಯ ರಂಗ 1 ಸುಜನಮಂದಾರ ಸರಸಿಜಭವಪಿತ ನಿನ್ನ ಪ್ರಜೆಗಳು ಪೊಗಳುತ್ತಿಹರೆ ರಂಗ ಮುರಹರನೆ ರಂಗ 2 ಸುಜನರೊಳಗೆನ್ನ ಕುಹಕವ ಮಾಡದೆ ನಿನ್ನ ಭಜಕನೆಂದಿರಲಾಗಿ ರಂಗ ಭುಜಗೇಂದ್ರಶಯನ ಶ್ರೀರಂಗ 3 ಧಾತ್ರಿಗಾಧಾರ ಅನಾಥರಕ್ಷಕನೆ ದಯವ್ಯಾತಕೆನ್ನೊಳಿಲ್ಲ ರಂಗ ಕಡೆಹಾಯಿಸೊ ರಂಗ 4 ನೋಡೆ ಶ್ರೀ ಹರಿಯೆ ನೀನಲ್ಲದನ್ಯತ್ರ ದಾತ್ರರಿಲ್ಲವೊ ರಂಗ ಮಹಿಮ ಶ್ರೀರಂಗ 5 ಕೋಪವನು ಬಿಡು ಎನ್ನ ಕುಂದನೆಣಿಸದಿರಯ್ಯ ಆಪತ್ಬಂಧು ಶ್ರೀರಂಗ ಸಲಹಯ್ಯ ರಂಗ 6
--------------
ಹೆಳವನಕಟ್ಟೆ ಗಿರಿಯಮ್ಮ
ನಂಬಿದೇ ಗುರುವರಾ ನಂಬಿದೇಪ ನಂಬಿದೆ ಗುರುಸಾರ್ವಭೌಮಾ ತುಂಟುಮನದೊಳು ಹರಿಭಕ್ತಿ ನಿಸ್ಸೀಮಆಹಾ ಅಂಬುಜೋದ್ಭವಪಿತನ ಕಂಭದಿ ತೋರಿದ ಶಂಬರ ಕುಲದೀಪ ಪ್ರಹ್ಲಾದ ವ್ಯಾಸಮುನಿಯೇ ಅ.ಪ. ದಾಸನೆಂದಡಿಗೆ ಬಿದ್ದೆನೋ ಈಗ ದೋಷ ನಾಶಮಾಡೋ ಎನಗೆ ಬೇಗ ಆಹಾ ವಾಸುಕಿಶಯನನ ಬ್ಯಾಸರದೆ ಸ್ತುತಿಸಿ ಈಶನ ಸರ್ವತ್ರವ್ಯಾಪ್ತಿಯನರುಹಿದ ಭೂಪ 1 ಪಾತಕರೊಳಗೆ ಅಗ್ರೇಸರನಾನು ಪೂತಮಾಡುವರೊಳಗೆ ನಿಸ್ಸೀಮ ನೀನು ಆಹಾ ತಾತನಪ್ಪಣೆಯಂತೆ ವ್ಯಾಸರಾಜಾಎನಿಸಿ ಖ್ಯಾತಿಯಿಂದಲಿ ತರ್ಕತಾಂಡವರಚಿಸಿ ಮೆರೆದೇ 2 ತಾಪಸಶ್ರೇಷ್ಠ ಬ್ರಹ್ಮಣ್ಯಕುವರನಾದೆ ಗೋಪಾಲಕೃಷ್ಣನ್ನ ಕುಣಿಕುಣಿದಾಡಿಸಿ ಭೂಪನ ಕುಹಯೋಗ ಕಳೆದ ಯತಿಕುಲತಿಲಕ 3 ಮಧ್ವಶಾಸ್ತ್ರಗಳ ಮಂದರರಿಯದಿರಲು ಮುದದಿಂದ ಪದಸುಳಾದಿಗಳ ರಚಿಸಿದೆ ನೀನು ಆಹಾ ಆದರದಿಂದಲಿ ಪುರಂದರಕನಕರಿಗೆ ಸದುಪದೇಶವ ಕೊಟ್ಟು ಜಗದುದ್ಧಾರಮಾಡಿದ ಪ್ರಭುವೇ 4 ಮತ್ತೆ ಪುಟ್ಟಿದೆ ವೆಂಕಣ್ಣಭಟ್ಟ ನೆಂದೆನಿಸೀ ಮತ್ತ ಕೇಸರಿಯಂತೆ ಮಧ್ವಶಾಸ್ತ್ರದಿ ಮೆರೆದೇ ಆಹಾ ಕತ್ತಲೆ ಅದ್ವೈತವಾದಗಳಿಗೆಲ್ಲಾ ಕತ್ತಿಎನಿಸಿದ ಪರಿಮಳಾಚಾರ್ಯ ಗುರುವೇ 5 ವಿಪ್ರನು ದಿಟ್ಟತನದಿ ನಿನ್ನ ಗಂಧವ ತೇದುಕೊಡುಎನೆ ಕ್ಷಿಪ್ರದಿ ತೋರಿದೆ ನಿನ್ನ ಮಹಿಮೆಯಜಗಕೇ ಆಹಾ ಅಪ್ಪ ಶ್ರೀರಾಮರ ಪೂಜಿಸಬೇಕೆಂದು ಒಪ್ಪಿಸನ್ಯಾಸವ ರಾಘವೇಂದ್ರನಾದ 6 ಮುದದಿ ದೇಶ ದೇಶವ ಚರಿಸಿದೇ ಸಮಯದಿ ಸುಜನರಕ್ಲೇಶಗಳಳಿದೇ ಆಹಾ ಮೋದಮುನಿಯ ಗ್ರಂಥಗಳಿಗೆಲ್ಲ ಟಿಪ್ಪಣಿ ಮಾಡುತ ಬುಧರಿಗೆ ತತ್ವ ಕನ್ನಡಿ ತೋರ್ದ ಗುಣಗಣನಿಧಿಯೇ7 ಪರಿಪರಿ ಮಹಿಮೆಯ ತೋರುವ ಗುರುವೇ ಸುರತರು ಅಂದದಿ ಹರಕೆ ಗಳೀವೆ ಪ್ರಭುವೇ ಆಹಾ ಮೂರೆರಡು ಒಂದುನೂರು ವರುಷ ಪರಿಯಂತ ಸಾರಿಸಾರಿದವರ ಪೊರೆದು ಮೆರೆಯುವ ದಿವಿಜವಂದಿತ ಗುರು8 ದಯದಿಂದ ನೋಡೆನ್ನ ದೀನೋದ್ಧಾರ ಭವ ಬಿಡಿಸು ಕರುಣಾಸಾರ ಆಹಾ ಜಯತೀರ್ಥವಾಯ್ವಂತರ್ಗತ ಶ್ರೀಕೃಷ್ಣ ವಿಠಲನ ಹೃ- ದಯಮಂದಿರದಿ ತೋರೆನಗೆ ಗುರುಸಾರ್ವಭೌಮ 9
--------------
ಕೃಷ್ಣವಿಠಲದಾಸರು
ನಂಬಿದೇ ನರಹರಿಯೆ ನಾ ಪ ನಂಬಿದೆನೊ ಬ್ರಹ್ಮಾದಿ ವಂದಿತ ಪೂರ್ಣ ಸುಗುಣ ಕಂದಂಬ ನಿರುಪಮ ನಿತ್ಯಮುಕ್ತಾಮುಕ್ತ ಜೀವದ ವಿಶ್ವ ಭಾಸಕ ಮುಕ್ತಿದನೇಕನೆಂಬುದಾ ಅ.ಪ ನೊಂದು ನೊಂದೆನೊ ಭವದಿ ಹಿಂದುಮುಂದನು ಕಾಣೆ ಬಂಧ ನೀಡುವ ನೀನೆ ಬಂಧಾ ಬಿಡಿಸಲುಬೇಕೊ ಸ್ವಾಮಿ ಸಂಶಯವೆಂದು ಪೊಗಳುವೆ ಪೂರ್ಣ ಪೂರ್ಣಾನಂದ ಸಜ್ಜನನಂದ ಕಾಮದ ಸಾಮ ಪೂರ್ಣಚಂದ್ರ ಸುತೇಜಭವಹರ 1 ಕರ್ಮ ಅಡ್ಡಿಯಾಗಿದೆ ಸುಖಕೆ ವಡ್ಡುವೆ ಸರ್ವಸ್ವನಿನಗೆ ದೊಡ್ಡವನು ನೀವಲಿಯೆ ಎನ್ನಯ ದಡ್ಡತನ ನಿನ್ನೇನುಮಾಳ್ಪದು ಸಡ್ಡೆಮಾಡದೆ ದೋಷರಾಶಿಯ ಮಮತೆ ತೊಲಗಿಸಿ ಗುಡ್ಡಹೊತ್ತ ಮಹಾಂತರೊಡೆಯನೇ 2 ಸಿರಿ “ಕೃಷ್ಣವಿಠಲ”ನೆ ನಿನ್ನಾಕರುಣವೆ ತಾರಕ ಇನ್ನುಮುನ್ನು ನಿನ್ನ ನಂಬಿಹೆ ಜ್ಞಾನಮಾನವ ನೀಡ್ವದಾತನೆ ಸಣ್ಣವನ ಪಿಡಿದಿನ್ನು ನೀ ಪ್ರಸನ್ನನಾಗೆಲೊ ದೇವದೇವನೆ ನಿನ್ನದಾಸರ ಭಾಗ್ಯವೊಂದೇ ಸಾಕು ಸಾಕೈಯೆಂದು ಬೇಡುವೆ ಅನ್ಯರೊಳ್‍ರತಿ ಇಲ್ಲದಿರಲೈ ಮಾನ್ಯ ಮಧ್ವರ ಮತದಿ ನಿಲಿಸು 3
--------------
ಕೃಷ್ಣವಿಠಲದಾಸರು
ನಂಬಿದ್ಯಾ ಮನವೇ ನಂಬಿದ್ಯಾ ಪ ನಂಬಿದ್ಯ ಮನವೆ ಕೊಂಡಾಡಿದ್ಯ ಆನಂದ ತೀರ್ಥರ ಮತವೆಸತ್ಯವೆಂದು ಅ.ಪ ಇಂದಿರೆ ರಮಣನೆ ಪರದೈವವೆಂದು ಬಂಧನಾದಿ ಅಷ್ಟಕರ್ತೃತ್ವ ಆತನದೆಂದು ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1 ನಾರಾಯಣನೆ ಸರ್ವೋತ್ತುಮನು ಎಂದು ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2 ಸಾಕಾರಸರ್ವೇಶ ನಿರ್ವಿಕಾರ ನೆಂದು ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು ಅಜ ಅಪ್ರಮೇಯನೆಂದೂ3 ವೇದಗೋಚರ ತಾವೇದಾತೀತನೆಂದು ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು ಮಧುಸೂಧನನು ಚಿನ್ಮಯ ವಪುಷನೆಂದು ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4 ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5 ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು ಅಪವರ್ಗ ಗತಿದಾಯಕನೆಂದೂ ಪಾದ ಭಜನೆಯೆ ಸಾರವೆಂದೂ 6 ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ ಕಾರ್ಯಗಳನು ಮಾಡಿ ಮಾಡಿಸುವನೆಂದು ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7 ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8 ಹಂಸಾದಿ ಹದಿನೆಂಟು ರೂಪಗಳ ಧರಿಸಿ ಹೊರಗೆ ವ್ಯಾಪಿಸಿ ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9 ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10 ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು ಚತುರಾನನಾದಿಗಳಿಗೆಲ್ಲಾ ಎಂದು11 ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ ಅಪರೋಕ್ಷ ಪ್ರಭುವು ಅಣು ಮಹದ್ಘನ ರೂಪ ಚರಿತ ಭಾರತೀಶ ವಾಣೀ ಪತಿಯ ಪದಾರ್ಹ ವಾತದೇವನು ಎಂದು 12 ಹನುಮ ಭೀಮ ಮಧ್ವ ಮೂರಾವತಾರದ ದೇವ ಅನುಪಮ ಬಲನಿಸ್ಸೀಮ ಪುರುಷತೇಜ ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ ಹರಿಯಾಜ್ಞೆಯಂತೀವನೆಂದೂ 13 ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು ಆತನೇಲೋಕಕ್ಕೆಲ್ಲ ಗುರವು ಎಂದು ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14 ಹರಿಯ ಮತವೆ ಹನುಮನ ಮತವು ಎಂದು ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ ತಾರತಮ್ಯ ಪಂಚ ಭೇದವು ಸತ್ಯವೆಂದು 15 ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು ಮುರಾರಿಯ ಒಲುಮೆಗೆ ಜ್ಞಾನಯುತಭಕ್ತಿಯೆ ಸಾಧನವೆಂದು ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16 ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು ಗುರುವಿನ ಕರುಣವೆ ಜ್ಞಾನಕ್ಕೆ ಕಾರಣವೆಂದು ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17 ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು ಪರಿ ಪಂಚ ಭೇದವೆಂದು ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18 ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು ಅರವಿಂದನಾಭಗೆ ಸರ್ವರು ಸದಾದಾಸರೆಂದು 19 ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20 ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21
--------------
ಕೃಷ್ಣವಿಠಲದಾಸರು
ನಂಬು ದಯಾನಿಧಿ ರಾಮನಾ ಪ ಶಬರಿಯ ಭಾವಕೆ ಮೆಚ್ಚಿ ಉಂಡನು ಬದರಿ ಫಲಾ| ವಿಭು ನೀಡಿದನು ಪದಾಚಲಾ 1 ತೃಣ ಪಶು ಪಿಪ್ಪೀಲಿಕಾ ನಗಾದಿಗಳಾ| ಸುಗತಿಗೆ ವೈದನು ಘನ ನೀಲಾ 2 ಗುರು ಮಹಿಪತಿ ಪ್ರಭು ನೀರೊಳು ತಾರಿಸಿದ ಶಿಲಾ| ಚರಿತವ ದೋರಿದ ಸಿರಿಲೋಲಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬು ನಂಬು ಶ್ರೀನರಹರಿ ಪಾದವÀ ನರನೇ ಪಾಮರನೆ ಪಾತಕ ಕೃಷ್ಣಾ ಮೂರ್ತಿಯನ್ನೇ ಪ ಸಾಧು ಸಜ್ಜನ ಸಂತರ ಸಲಹುವ ಸಕಲ ಲೋಕ ಕರ್ತನಾ ಮೇದಿನಿ ಭಕ್ತರ ಮನದಲಿ ಚರಿಸುವ ಮಂಗಳ ಮಹಿಮನ ಆದಿಮೂರುತಿ ಆನೇಕ ಚರಿತಾ ಅನಂತ ಅವತಾರನಾ ಅನುದಿನ ಮರೆಯದೆ ನೀ ಯಿನ್ನಾ 1 ಶ್ರೀನಿವಾಸ ಆಶ್ರಿತ ಜನಪೋಷಕ ಶಾಶ್ವತನಾಗಿಹನಾ ಗಾನಲೋಲ ಶ್ರೀವೇಣುನಾದನ ಕರಿರಾಜ ವರದನ ದಾನವಾಂತಕನ ದಶರಥತನಯನ ದೇವಾದಿದೇವನ್ನ ಮಾನವ ಮದನ ಜನಕನಾದನಾ 2 ಭೂಸುರ ನಾಯಕನ ಮಾಧವ ಗೋವಿಂದನ ಮುಕ್ಕುಂದನಾದ ಅವನಾ 'ಹೆನ್ನೆವಿಠ್ಠಲನಾ’ 3
--------------
ಹೆನ್ನೆರಂಗದಾಸರು
ನಂಬು ನಂಬೆಲೆ ಮನ ಗಿರಿಧರನ ನಿನ ಗಿಂಬುಗೊಡುವ ಭಕ್ತ ಸಂಜೀವನ ಪ ಕತ್ತೆಯಂತೆ ಕೂಗಿ ಕೆಡಬೇಡ ಪರ ಮಾರ್ಥತತ್ತ್ವದ ಹಾದಿ ತಿಳಿ ಮೂಢ ಸತ್ಯರ ಪಾದದಿ ಮನನೀಡೋ ನಿತ್ಯ ಉತ್ತಮರೊಳಗಾಡಿ ನಿಜ ನೋಡೋ 1 ಕೋತಿಯಂತೆ ಕುಣಿಯಲುಬೇಡೋ ಮಹ ನೀತಿವಚನ ಮೀರಿ ನಡಿಬೇಡೋ ಮಾತುಮಾತಿನ ಸಂಶಯಬೇಡೋ ಮುಂದೆ ಪಾತಕದೊಳು ಬಿದ್ದು ಕೆಡಬೇಡೋ 2 ಸಾರಸಂಸಾರ ಮಿಥ್ಯವೆಂದು ತಿಳಕೋ ನೀನು ಧೀರ ಶ್ರೀರಾಮನ ಅಡಿಗ್ಹೊಂದಿಕೋ ಗಂ ಭೀರ ಮೋಕ್ಷಪದವನೆ ಪಡಕೋ 3
--------------
ರಾಮದಾಸರು
ನಂಬು ನಮ್ಮ ಹರಿಯ ನಂಬಿದ- ರಿಂಬುದೋರುವ ದೊರೆಯಾ ವಿಶ್ವ ಕು- ಟುಂಬಿ ವಾಯು ಪೂಜ್ಯಾಂಬುಜ ಪಾವನ ಪ. ಕಾಮಧೇನು ಕಲ್ಪತರು ಚಿಂತಾಮಣಿಯಿಂದಪ್ಪ ಕಾಮಿತಾರ್ಥವೆಲ್ಲ ನಿರವಧಿ ಪ್ರೇಮಿಸಿ ಕೊಡಬಲ್ಲ ನಿತ್ಯ ಕಥಾಮೃತ ಸೇವಿಸಲು ಪಾಮರ ಜನಕೆ ಸ್ವಧಾಮವನೀವನ 1 ದುರಿತರಾಶಿಗಳನು ನಿಮಿಷದಿ ತರಿವನು ಮಾಧವನು ಸ್ಮರಿಸುವ ದಾಸರನು ಮರೆಯದೆ ಕರುಣಿಸಿ ಸಲಹುವನು ಚರಣಾಂಬುಜ ಕಿಂಕರಾಗಿರುವರು ಕರೆದಲ್ಲಿಗೆ ಬಂದಿರುವ ಮಹಾತ್ಮನ 2 ಶ್ರೀ ಭೂಮಿಸಹಿತ ಕೈವಶನಾಗುವ ಗುಣಭರಿತಾ ಯೋಗಿ ಮನೋನುಗತ ಶ್ರೀಮದ್ಭಾಗವತಾಂತಗತಾ ನೀಗಿ ನಿಖಿಳಭವ ರೋಗವ ಶರಣ ಮ- ನೋಗತ ಸಲಿಸುವ ಭೋಗ ಗಿರೀಶನ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಂಬು ನಾರಾಯಣನ ನಂಬೋ ನರಹರಿಯನಂಬಿದಾ ಭಕ್ತರ ಕುಟುಂಬ ಸಾರಥಿಯ ಪ ಬಲಿ ನಂಬಿ ಪಾತಾಳಲೋಕಕರಸಾದನದೆಕುಲದ ಪ್ರಹ್ಲಾದನು ನಿಜವ ಕಂಡಕಲಿ ವಿಭೀಷಣ ನಂಬಿ ಲಂಕೆಯಲಿ ಸ್ಥಿರವಾದಛಲದ ಪಾರ್ಥನು ನಂಬಿ ವಿಶ್ವರೂಪವ ಕಂಡ1 ಅಂಬರೀಷನು ನಂಬಿ ವೈಕುಂಠವೇರಿದನುಹಂಬಲಿಸಿ ಶಶಿಧರನು ಉರಿಯ ಗೆದ್ದಕುಂಭಿನೀದೇವಿ ತಾ ಬಂಧನವ ಕಳೆದಳುಅಂಬುಜಾಕ್ಷಿ ದ್ರೌಪದಿಯು ಮಾನ ಉಳುಹಿಕೊಂಡಳು 2 ಅತಿ ಭಕುತರಿಗೆ ಮೆಚ್ಚಿ ಗತಿಮೋಕ್ಷವನಿತ್ತನುಮತಿಭ್ರಷ್ಟ ಅಜಮಿಳನ ಉದ್ಧರಿಸಿದನುಕ್ಷಿತಿಯೊಳಗೆ ಕಾಗಿನೆಲೆಯಾದಿಕೇಶವರಾಯಪತಿತ ಪಾವನ ಪರಮಪುರುಷೋತ್ತಮನನು 3
--------------
ಕನಕದಾಸ
ನಂಬು ಮನವೆ ರಾಮಚಂದ್ರನಾ ದ | ಯಾಂಬು ನಿಧಿ ಸದ್ಗುಣ ಸಾಂದ್ರನಾ|| ನಂಬಿದ ಭಕ್ತ ಕುಟುಂಬಿಯೆನಿಸುವ| ಅಂಬುಜನಾಭನ ಹಂಬಲವಿಡಿದು ಪ ದಶರಥ ಕೌಸಲ್ಯ ಬಸುರಿಲಿ ಬಂದು| ಋಷಿಮಖ ರಕ್ಷಿಸಿ ಶರದಿ|| ಅಸುರೆಯ ಭಂಗಿರಿಸಿ ನಡೆಯಲಿ|ಮುನಿ| ಅಸಿಯಳುದ್ದರಿಸಿ ಉಂಗುಟದಲಿ| ಅಸಮ ಧನುವೆತ್ತಿ ವಸುಧಿಯ ಮಗಳ ವ ರಿಸಿಕೊಂಡು ಬಂದನು ಕುಶಲವಿಕ್ರಮನಾ1 ಜನಕನ ವಚನಕ ಮನ್ನಿಸಿ|ಸತಿ| ಅನುಜನೊಡನೆ ವಿಹರಿಸಿ| ವನಚರ ಭೂಚರ ನೆರಹಿಸಿ|ದಾಟಿ| ವನಧಿಯೊಳಗ ಗಿರಿಬಂಧಿಸಿ|| ಮುನಿದು ಮರ್ದಿಸಿ ದಶಾನನ ಮುಖ್ಯ| ದನುಜರಾ ವನಸಿರಿ ಪದವಿ ವಿಭೀಷಣಗ ನೀಡಿದಾ2 ಸುರರಿಗೆ ನೀಡಿದಾನಂದನು|ಸೀತೆ| ವರಿಸಿ ಅಯೋಧ್ಯಕ ಬಂದನು| ಧರಿಸಿ ಸಾಮ್ರಾಜ್ಯದಿ ಹೊರೆದನು|ಗುರು| ವರ ಮಹಿಪತಿ ನಂದನೊಡೆಯನು|| ಅರಿತು ಸದ್ಬಾವತಿ ಸರಿಸಲಿ ಸದ್ಗತಿ| ಶೆರೆವಿಡಿದೆಳೆತಹದರಿಯಲೋ ನಾಮಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬುಗೆ ಪಡಿಯಿರೋ ದೇವರ ದೇವನಾ ಪ ಧಾಮ ಸಾರ್ವಭೌಮ ತಾಮರಸ ಸಖ ಆ ಮಹಾಕುಲೋದ್ದಾಮ ಆಹವ ಭೀಮ| ಸ್ವಾಮಿ ಸಕಲರ ಕಾಮಿತಾರ್ಥವ ನೇನಿ ಮುನಿಜನ ಪ್ರೇಮಿ| ಚರಿತ ನಿಸ್ಸೀಮಿಯಾ1 ಧಾಟಿಯಲಿ ನರನಾಟಕ ವಿಡಿದ ಆಟವಾಡಲು ನೀಟಾ| ಕೋಟಿ ಕೋಟಿ ನಿಶಾಟ ದರ್ಪೋಚ್ಚಾಟ ಮಾಡಿದ ಸ್ಪೋಟಾ| ನೀಟ ಶರಣ ಮುಕುಟಿಗಿತ್ತನು ಪೀಠಾ| ಧೀಟ ಶ್ರೀ ಜಟೆ ಜೂಟ ವಂದಿತ ಪಾಟರಹಿತ ಸ್ಪರಾಟನಾ 2 ಅಂದು ಇಂದೇ-ನೆಂದಿಗಾದರ ವಂದೇ ದಯದಿಂದ| ಛಂದ ಛಂದದ-ಲಿಂದ ಭೋಕ್ತರ ಬಂಧು ಭಕ್ತರ ವೃಂದ| ಸುಂದರಾನನ ಕುಂದರದನ ಸುಮಂದ ಹಾಸಾನಂದ| ಇಂದಿರೈರಸ ತಂದೆ ಮಹಿಪತಿ ಕಂದ ಪ್ರೀಯ ಮುಕುಂದನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬುವುದು ತಾನು ಎಂತು ಸತಿಯು ಸುತರು ಮಗಳನುನಂಬಿ ಕಡೆ ಹಾಯ್ದುದುಂಟೆ ಹಾದಿಕಾರರನು ಪ ದಾರಿಕಾರರಿಗೆ ವಸತಿ ಮಳಿಗೆ ಭೇಟಿಯಲ್ಲೇದಾರಿ ಹಿಡಿದ ಬಳಿಕ ತಿರುಗಿ ಭೇಟಿಯಾಗೋದೆಲ್ಲಿದಾರ ಸುತರ ಭೇಟಿಯಿದೇ ದೇಹದೊಳಗೆ ಎಂದರಿಯೋಶರೀರವು ಬಿದ್ದ ಬಳಿಕ ಭೇಟಿ ಮುಂದೆ ಮರೆಯೋ1 ಕನಸಿನವರ ತಾನು ಈಗ ನೆನಸಲಿಕ್ಕೆ ಬಹರೆಕನಸಿನಂತೆ ತೋರುವರು ನೀನು ನಚ್ಚುವರೆಮನೆಯ ಬದುಕುಭಾಗ್ಯವೆಲ್ಲ ಮನದಿ ಜರೆದು ಬಿಡುನಿನಗೆ ಗತಿಯು ಏನು ಎಂದು ನೀನು ತಿಳಿದು ನೋಡು 2 ಹೆಗ್ಗಣವು ಜಾಗಿನೊಳಗೆ ಬಿದ್ದು ಮಿಡುಕಿದಂತೆವೆಗ್ಗಳಾಗಿ ಸಂಸಾರಕೆ ಮಾಡಿವೆಯೋ ಚಿಂತೆನುಗ್ಗು ಆದೆ ಬಯಲಭ್ರಾಂತಿ ನಿನಗೆ ವ್ಯಾಪಕಾಗಿಮುಗ್ಗುವೆ ನೀನೊಣನ ತೆರದಿ ನರಕದಲ್ಲಿ ಹೋಗಿ3 ನನ್ನ ಸಂಸಾರವೆನ್ನಬೇಡ ನೀನು ಇದನು ಈಗನನ್ನ ನನ್ನದೆಂದೆ ಹೋದ ನಿಮ್ಮಪ್ಪ ಮುಕ್ತನುಇನ್ನು ನಾಶವಿದು ಒಬ್ಬರಿಲ್ಲ ಸತ್ಯನಿನ್ನದಾರೆಂದು ಮರೆಯದಡೆ ನಿತ್ಯಾ4 ಇಂದ್ರಜಾಲ ನೋಡಲಿಕ್ಕೆ ಖರೆಯದಾಗಿ ಇಹುದುಅಂದದಾ ಪರಿಯು ಸಂಸಾರವೆ ನಿತ್ಯವಿಹುದುಬಂಧನವು ನಿನಗೆ ಇಹುದು ಗುರುವಿನ ಪಾದವಹೊಂದು ಮುಂದೆ ಚಿದಾನಂದನಹೆ ನೀನೀಗ ಎಂದು 5
--------------
ಚಿದಾನಂದ ಅವಧೂತರು
ನಮಃ ಓನ್ನಮಃ ಮಮದೇಶಿಕ ತಿರುವಡಿಗಳೆ ಶರಣಂ ಪ ಶ್ರೀ ಪರಾತ್ಪರನೆ ಭಾಪದನಿಸರಿ ಕೋಪವ್ಯಾತಕೆ ಸಲಹೊ ಮುನಿಕುಲ ದೀಪ ನೀನಹುದಯ್ಯ ಅಡಿಯೇನ್ನಮಃ 1 ಸಾನಿಧಾಪ ಮದಾಪದದಿ ಸರಿ ಶ್ರೀನಿವಾಸ ದಯಾಳೊ ಅಡಿಯೇನ್ ನಮಃ 2 ವಾಸವಾರ್ಚಿತ ಶ್ರೀಗುರು ಹರಿ ದೋಷಗಳೆದೀಗೆನ್ನ ಆ ನಿಜ ಶೇಷಭೂತನ ಮಾಡೊ ಅಡಿಯೇನ್ ನಮಃ 3
--------------
ಚನ್ನಪಟ್ಟಣದ ಅಹೋಬಲದಾಸರು