ಒಟ್ಟು 6051 ಕಡೆಗಳಲ್ಲಿ , 130 ದಾಸರು , 3175 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚತುರ್ದಶಿಯ ದಿನ(ಹನುಮಂತನನ್ನು ಕುರಿತು)ರಂಭೆ : ಇವನ್ಯಾರೆ ದೂರದಿ ಬರುವವ ಇವನ್ಯಾರೆ ಪ.ಇವನ್ಯಾರೆ ಮಹಾಶಿವನಂದದಿ ಮಾ-ಧವನ ಪೆಗಲೊಳಾಂತು ತವಕದಿ ಬರುವವ 1ದಾಡೆದಂತಮಸಗೀಡಿರುವದು ಮಹಾಕೋಡಗದಂತೆ ಸಗಾಢದಿ ಬರುವವ 2ಕಡಲೊಡೆಯನು ಮೃದುವಡಿಯಡರಿಸಿ ಬಿಡದಡಿಗಡಿಗಾಶ್ರೀತರೊಡಗೂಡಿ ಬರುವವ 3ಊರ್ವಶಿ : ನಾರಿ ಕೇಳೆಲೆಗೆ ವೈಯಾರಿ ನೀ ಮುದದಿನಾರಾಯಣನಿಗೀತ ಬಂಟನಾದಾದರಿದಿವೀರ ರಾಮವತಾರದಿ ಹಿಂದೆ ಹರಿಯಚಾರಕನಾಗಿ ಸೇವೆಯ ಗೈದ ಪರಿಯಕ್ರೂರ ದಶಾಸ್ಯನ ಗಾರುಗೆಡಿಸಿನೃಪವೀರನ ಪೆಗಲಿನೊಳೇರಿಸಿ ದೈತ್ಯರಭೂರಿವಧೆಗೆ ತಾ ಸಾರಥಿಯಾದವಕಾರುಣೀಕ ಮಹಾವೀರ್ಹನುಮಂತ 1ಆಮೇಲೆ ವೀರಾವೇಶದಿ ವಾರಿಧಿಯನುರಾಮನಪ್ಪಣೆಯಿಂದ ದಾಟಿದನಿವನುಭೂಮಿಜೆಗುಂಗುರ ಕೊಟ್ಟ ನಂತರದಿಕಾಮುಕರನು ಸದೆಬಡಿದನಾ ಕ್ಷಣದಿಹೇಮಖಚಿತ ಲಂಕಾಮಹಾನಗರವಹೋಮವ ಗೈದು ಸುತ್ರಾಮಾರಿಗಳ ನಿ-ರ್ನಾಮಿಸಿ ಸೀತೆಗೆ ತಾ ಮಣಿಯುತ ಚೂ-ಡಾಮಣಿ ತಂದ ಮಹಾಮಹಿಮನು ಇವ 2ವಾರಿಮುಖಿ ನೀ ಕೇಳಿದರಿಂದ ಬಂದವೀರ ಹನುಮಂತನನೇರಿ ಗೋವಿಂದಸ್ವಾರಿಗೆ ಪೊರಟ ಚಾತುರ್ದಶಿ ದಿವಸಆರತಿಯನು ಕೈಕೊಳ್ಳುವ ಶ್ರೀನಿವಾಸಭೇರಿಮೃದಂಗ ಮಹಾರವದಿಂದ ಸ-ರೋರುಹನಾಭ ಮುರಾರಿ ಶರಣರುದ್ಧಾರಣಗೈಯುವ ಕಾರಣದಿಂದ ಪಾ-ದಾರವಿಂದಗಳ ತೋರಿಸಿ ಕೊಡುವ 3ಬಳಿಕ ಪಲ್ಲಂಕಿ ಏರಿದ ಕಾಣೆ ನಾರಿನಲವಿಂದ ವೇದಘೋಷವ ಕೇಳ್ವಶೌರಿಜಲಜಭವಾದಿ ನಿರ್ಜರರಿಗಸಾಧ್ಯಸುಲಭನಾದನು ಭಕ್ತಜನಕಿದುಚೋದ್ಯಸುಲಲಿತ ಮಂಟಪದೊಳೊ ನೆಲಸುತ ನಿ-ಶ್ಚಲಿತಾನಂದ ಮಂಗಲದ ಮಹೋತ್ಸವಗಳನೆಲ್ಲವ ಕೈಕೊಳುತಲಿ ಭಕ್ತರಸಲಹುವ ನಿರುತದಿ ಮಲಯಜಗಂಧಿನಿ 4ಶ್ರೀಕಾಂತ ಬಳಿಕ ಭಕ್ತರ ಒಡಗೂಡಿಏಕಾಂತ ಸೇವೆಯಗೊಂಡ ಕೃಪೆಮಾಡಿಸಾಕಾರವಾಗಿ ತೋರುವ ಕಾಣೆ ನಮಗೆಬೇಕಾದ ಇಷ್ಟವ ಕೊಡುವ ಭಕ್ತರಿಗೆಶ್ರೀಕರ ನಾರಾಯಣ ಶ್ರೀನಿವಾಸ ಕೃ-ಪಾಕರ ವಿಬುಧಾನೇಕಾರ್ಚಿತ ರ-ತ್ನಾಕರಶಯನ ಸುಖಾಕರ ಕೋಟಿ ವಿ-ಚಾರಕ ಭಾಸತ್ರಿಲೋಕಾಧಿಪನಿವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಚಂದ್ರಚೂಡ ಶಿವಶಂಕರ ಪಾರ್ವತಿ ರಮಣಾನಿನಗೆ ನಮೋ ನಮೋ ಪಸುಂದರ ಮೃಗಧರ ಪಿನಾಕಧರ ಹರ |ಗಂಗಾಧರಗಜಚರ್ಮಾಂಬರಧರಅ.ಪನಂದಿವಾಹನಾನಂದದಿಂದ ಮೂಜಗದಿ ಮೆರೆವನು ನೀನೆ |ಕಂದರ್ಪನ ಕ್ರೋಧದಿಂದ ಕಣ್ದೆರೆದು ಕೊಂದ ಉಗ್ರನು ನೀನೆ ||ಅಂದು ಅಮೃತ ಘಟದಿಂದುದಿಸಿದ ವಿಷತಂದುಭುಂಜಿಸಿದವನು ನೀನೆ |ಬಂದು ಚೆಂದದಿ ಇಂದಿರೇಶ ಶ್ರೀ ರಾಮನ ಪೊಂದಿಪೊಗಳುವವ ನೀನೆ 1ಬಾಲಮೃಕಂಡನ ಕಾಲನು ಎಳೆವಾಗಪಾಲಿಸಿದಾತನು ನೀನೆ |ನೀಲಕಂಠ ಕಾಲಕೂಟ ವಿಷವ ಮೆದ್ದಶೂಲಪಾಣಿಯು ನೀನೆ |ವಾಲಾಯದಿ ಕಪಾಲವ ಪಿಡಿದುಭಿಕ್ಷೆಕೇಳುವ ದಿಗಂಬರ ನೀನೆ |ಜಾಲಮಾಡುವ ಗೋಪಾಲನೆಂಬಪೆಣ್ಣಿಗೆ ಮರುಳಾದವ ನೀನೆ 2ಧರೆಗೆ ದಕ್ಷಿಣ ಕಾವೇರಿ ತೀರ ಕುಂಭಪುರನಿವಾಸನು ನೀನೆ |ಕರದಲಿ ವೀಣೆಯ ನುಡಿಸುವ ನಮ್ಮಉರಗಭೂಷಣನು ನೀನೆ ||ಕೊರಳಲಿ ಭಸ್ಮ ರುದ್ರಾಕ್ಷಿಯ ಧರಿಸಿದಪರಮವೈಷ್ಣವನು ನೀನೆ |ಗರುಡಗಮನಶ್ರೀಪುರಂದರವಿಠಲನ ಪ್ರಾಣ ಪ್ರಿಯನುನೀನೆ3
--------------
ಪುರಂದರದಾಸರು
ಚಿಣ್ಣರೊಡನಾಡನಡೆದ ಮುದ್ದುರಂಗ ಮುದ್ದು ಕೃಷ್ಣ ಪ.ಇಟ್ಟು ಹಣೆಯೊಳು ಉಗುರು ನಾಮವ ಗೋವಗಟ್ಟಿಗೆಯನು ಕರದೊಳು ಪಿಡಿದುಪುಟ್ಟ ಕಂಬಳಿ ಹೊದ್ದು ಪದಕೆ ಪಾದುಕೆಮೆಟ್ಟಿ ಅಣ್ಣ ಬಲರಾಮ ನಡೆಯೆಂದು 1ಆಡಲೊಲ್ಲೆನೆಂಬ ಮಕ್ಕಳ ಮನ್ನಿಸಿಕೂಡಿಕೊಂಡು ಅಣ್ಣ ತಮ್ಮನೆಂದುಹಾಡುತ ಕುಣಿದು ಚಪ್ಪಾಳೆ ಹೊಯಿದಾಡುತಓಡ್ಯಾಡಿ ಅಮ್ಮನ ಮಾತ ಕೇಳದೆ ಕೃಷ್ಣ 2ಚಿಣ್ಣಿ ಪೊಂಬಗರ್ಚೆಂಡು ಗುಮ್ಮ ಗುಸಕು ಹಬ್ಬೆಅಣ್ಣೆಕಲ್ಲು ಹÀಲ್ಲೆ ಗಜಗ ಗೋಲಿಕಣ್ಣುಮುಚ್ಚಾಲೆ ಮರನೇರಾಟ ನೀರಾಟಸಣ್ಣರೊಳಾಡಿ ಸೋಲಿಪೆನೆಂಬ ತವಕದಿ 3ರಾಜಿಪ ರಾಜಬೀದಿಲಿನಿಂದುನೋಡುವರಾಜಮುಖಿಯರೊಳು ಸೆಣಸ್ಯಾಡುತರಾಜಕುಲಾಗ್ರಣಿ ಸರ್ವಭೂಷಣದಿ ವಿರಾಜಿತನಾಗಿ ಗೋಳಿಡುತ ಮುರಾರಿ 4ಜಗವ ಪುಟ್ಟಿಸಿ ನಲಿದಾಡುವಾಟವು ತನಗೆ ಸಾಲದೆಂದು ಆವಹಳ್ಳಿಲಿಬಗೆ ಬಗೆ ಲೀಲೆಯ ತೋರಿ ಗೋಗಾವರ್ಗೆಸುಗತಿನೀವೆನೆಂದು ಪ್ರಸನ್ವೆಂಕಟ ಕೃಷ್ಣ 5
--------------
ಪ್ರಸನ್ನವೆಂಕಟದಾಸರು
ಚಿತ್ತಿಟ್ಟು ನಮಿಸುವೆ ನಿಮ್ಮ ಮೂಲಚೈತ್ಯದಲಿಹ ಚೆನ್ನಿಗ ಬಲ ಹನುಮ ಪ.ಮೊದಲೆ ರಾಮರ ಭಟನಾಗಿ ಅಂದುಪದ್ಮದೇವಿಯ ಚರಣಕೆ ತಲೆಬಾಗಿಮುದದಿ ಮುದ್ರಿಕೆಯ ನೀ ಕೊಟ್ಟೆ ಬಲುಮದ ಸೊಕ್ಕಿದಸುರನ ಪುರವನೆ ಸುಟ್ಟೆಚೂಡಾಮಣಿಯ ತಂದಿಟ್ಟೆ ಬಲು ಹರುಷವ ಕೊಟ್ಟೆ 1ಕೊಬ್ಬಿದ ಕುರುಪತಿ ಬಲದಿ ಪೊಕ್ಕುಬೊಬ್ಬೆಯನಿರಿದು ಶೂರರ ಶಿರ ಹರಿದೆಆರ್ಭಟವನು ತೋರಿದೆ ಬಲುದುರ್ಬುದ್ಧ್ಯ ದುಶ್ಯಾಸನನ್ನೋಡಲ್ಬಗಿದೆ ಖಳರ ಹÀಲ್ಲುಮುರಿದೆಮಪುರಕೆ ಕಳುಹಿದೆ 2ಪರಮಪುರುಷ ಹರಿಯೆಂದು ಮಿಕ್ಕಸುರರುಈತನ ದಾಸಾಂಕಿತರಹುದೆಂದುಅರುಹಿದೆಶ್ರುತಿಇತಿಹಾಸಅಹಿಗಿರಿಯ ಪ್ರಸನ್ವೆಂಕಟೇಶನ ದಾಸ ತುಂಗಾತೀರವಾಸನೆ ಸಲಹೊ ಮುಖ್ಯೇಶ 3
--------------
ಪ್ರಸನ್ನವೆಂಕಟದಾಸರು
ಚೆಂಡನಾಡುತ ಬಂದ ಪುಂಡ ಕೃಷ್ಣನು ತನ್ನ |ಹಿಂಡುಗೋಪಾಲಕರ ಕೊಂಡು ಯಮುನೆಯ ತಡಿಗೆಪಓರೆ ತುರುಬನೆಕಟ್ಟಿಗೀರುನಾಮವನಿಟ್ಟು |ಹಾರ ಕಂಕಣ ತೋಳಬಂದಿ ಘುಂಗುರ ಘನ-|ಸಾರಕುಂಕುಮ ಕೇಸರಿಗಂಧ ಕೂಡಿಸಿ |ಸೇರಿಸುತ ನಡುವಿಗೆ ಕಾಸಿದಟ್ಟಿಯನುಟ್ಟು |ಹಾರಾಡುತಲಿ ಬಂದ-ತೊಡರಗಾಲ |ತೋರ ಚಿನ್ಮಣಿಗಳಿಂದ. ಮುತ್ತಿನ ಚೆಂಡು |ಧಾರಿಣಿಗೆ ಪುಟಿಸಿ ನಿಂದ-ವಜ್ರದಖಣಿ|ತೋರಿ ಗೆಳೆಯರ ಕೂಡ ಬಂದರಾ ಮನೆಯಿಂದ 1ಕೊಂಡಾಲ ತಿಮ್ಮನು ಚೆಂಡನೆ ಹೊಡೆದನು |ಮಿಂಡೆಯರ ಮೊಲೆಗಾಗಿ ಹಾರಿಹರಿದು ಬೀಳೆ |ಹಿಂಡುನಾರಿಯರೆಲ್ಲ ಸುತ್ತಿಕೊಂಡಿರೆಅವರ|ಮುಂಡೆಗೆ ತಗುಲಿಸಿ ಪುರದ ಬಾಗಿಲ ಬಿಟ್ಟು |ಕಿಂಡಿಯಿಂದಲಿ ಬಂದನು-ನಾರಿಯರ |ಮಂಡೆಗೆ ಚೆಂಡಿಟ್ಟನು-ತೋರಿಸುವರ |ಕಂಡು ತಾ ನಗುತಿದ್ದನು-ಕೌತುಕವೆಂದು |ದಿಂಡೆಯರುಮಡುವಿನೊಳಗೆ ಹಾಕಿ ನಡೆದರು2ಗೆಳೆಯರೆಲ್ಲರು ಕೂಡಿ ಚೆಂಡು ತಾ ಎನಲಾಗಿ |ಗುಳುಗುಳಿಸುವ ವಿಷದ ಯಮುನಾ ತಡಿಯಲಿನಿಂದು|ಬಳಿಯ ವೃಕ್ಷದ ಮೇಲೇರಿ ತಾ ಧುಮುಕಲು |ಕಳಕಳಿಸುವ ಗೋಪಾಲರಳುತಿರೆ |ಇಳಿದ ನೀರೊಳಗಾಗಲು-ನಾಗರಫಣಿ|ತುಳಿದು ಕುಣಿಕುಣಿಯುತಿರಲು-ಬ್ರಹ್ಮನು ಬಂದು |ತಿಳಿದು ಮದ್ದಲೆ ಹೊಯ್ಯಲು-ಇಂದ್ರಾದ್ಯರು |ನಲಿದು ತಾಳವನಿಟ್ಟು ಕೊಂಡಾಡುತಿದ್ದರು 3ಮಗನ ಸುದ್ದಿಯಕೇಳಿಹರಿದು ಬಂದಳುಗೋಪಿ|ನಗರದ ಹೊರಗಾಗಿ ಬಾಯ ನಾದದಿಂದ |ವಿಗಡೆಯರು ಬಿಟ್ಟ ಮಂಡೆಯ ಜುಂಜು ಕೆದರುತ |ತೆಗೆದು ಮಣ್ಣನೆ ತೂರಿ ಕುಳಿತಲ್ಲಿಂದಲೆ ನಮ್ಮ-|ನ್ನಗಲಿ ಹೋಗುವರೆ ಹೀಗೆ-ರಂಗ ನಮ್ಮ |ಮೊಗವ ನೋಡುವುದೆಂದಿಗೆ-ನೋಡಿದ ಕಣ್ಣ |ತೆಗೆದು ಕೀಳುವೆನಿಂದಿಗೆ-ಪಡೆದ ಪೊಟ್ಟೆ |ದಗದಗಿಸಲು ಕೊಟ್ಟು ಮುನಿಯದೆ ಬಾ ಬೇಗ 4ಏನನೆಂಬೆನು ಕೃಷ್ಣ ನಿನ್ನ ಕಾಣದೆ ಪುರದ |ಮಾನಿನಿಯರು ಬೆರಗಾಗಿ ಬೀಳುತ ಕರುವ |ಕಾಣದಿರೆತ್ತಿಗೆ ಕರುವನು ಬಿಡುವರು |ಆ ನಾಸಿಕದ ಮೂಗುತಿ ಕಿವಿಗಿಡುವರು |ಧೇನುಮೇವನೆ ತೊರೆದುವು-ಗೋವುಗಳನ್ಯ-|ರಾಮನೆಗೋಡಿದುವು-ವತ್ಯಗಳೆಲ್ಲ |ಮೌನದಿ ಮೊಲೆ ತೊರೆದುವು ಕೃಷ್ಣಯ್ಯನ |ವೇಣುನಾದದ ಧ್ವನಿ ಕೇಳದೆ ಮೆಚ್ಚವು 5ದ್ವಾರಕಿ ಕೃಷ್ಣ ನೀ ಬಾಯೆಂದು ಕರೆವೆನೊ |ತೋರುವ ಸಮಪಾದ ವಿಠಲನೆಂಬೆನೊ |ಶ್ರೀರಮಣ ವೆಂಕಟನೆಂದು ಒದರುವೆನೊ |ಶ್ರೀರಂಗಶಯನನೆಂದೆನಲ್ಲದೆ ನಿನ್ನ |ಚೋರ-ಜಾರನೆಂದೆನೆ-ಹದ್ದಿನ ಮೇಲೆ |ಏರಿ ತಿರುಗುವನೆಂದೆನೆ-ಬೆಣ್ಣೆಯ ಕದ್ದು |ಸೂರೆ ಮಾಡುವನೆಂದೆನೆ-ಕೃಷ್ಣಯ್ಯ ನೀ |ಬಾರಯ್ಯ ಬಾರದಿದ್ದರೆ ಪ್ರಾಣ ನೀಗುವೆ 6ಕಣ್ಣೆತ್ತಿ ನೋಡಿದನೆಂದೆನೆ ಕಡೆಗೋಲ |ಬೆನ್ನಲಿ ಪಿಡಿದನೆಂದೆನೆ ಹಲ್ಲಳನೂರಿ |ಮಣ್ಣ ಕಚ್ಚಲು ಬಾಯ ತೆರೆಯುವನೆಂದೆನೆ |ಮಣ್ಣ ಬೇಡಲು ನಾ ಕೊಡಲಾರೆನೆಂದೆನೆ |ಎನ್ನ ಕುತ್ತಿಗೆ ಕೊಯ್ವರೆ-ಮಾತೆಯ ಮಾತು |ಮನ್ನಿಸಿ ವನಕೆ ಪೋಪರೆ-ಬಲಭದ್ರ |ಅಣ್ಣನಿಗೆ ಮುಖವ ತೋರೆ-ಕೃಷ್ಣಯ್ಯ ನೀ |ಸಣ್ಣವನೆನ್ನದೆ ಹರಿಯ ಕೊಂಡಾಡಿದೆ 7ಎಂದ ಮಾತನು ಕೇಳುವಾ ಸಮಯ ನಾಗಿಣಿ-|ವೃಂದವೆಲ್ಲವು ತಮ್ಮ ಕಂಠಭೂಷಣರಾಗಿ |ಅಂದದ ಮೇಲುದ ಸುತ್ತಿಕೊಂಡಿರೆ ಅರ-|ವಿಂದನಾಭಾಚ್ಯತ ಕೇಶವಮುರಹರ|ಮಂದರಧರಹರಿಯೆ-ನಿನಗೆ ನಾವು |ಮಂದಾಕಿನಿಯ ಸರಿಯೆ-ಮಾಂಗಲ್ಯದ |ಚೆಂದ ಕಾಯೈ ದೊರೆಯೆ-ಹರಿಯ ಕೃಪೆ-|ಯಿಂದ ಕರೆದು ನಮ್ಮ ಕಾಯಬೇಕೆಂದರು 8ಇಂತಿಂತು ಸ್ತವನವ ಮಾಡೆ ಕಾಳಿಂಗನ |ಕಾಂತೆಯರ ಸ್ತೋತ್ರಕ್ಕೆ ಮೆಚ್ಚಿ ನಾಗನ ಬಿಟ್ಟು |ಕಂತುಕ ಸಹಿತ ಪಂಕಜನಾಳವನೆ ಕೊಂಡು |ಸಂತಸದಲಿ ಇಕ್ಕುತ-ಶೋಕದಿ ನೀವು |ಭ್ರಾಂತಿ ಬಿಡಿರಿ ಎನ್ನುತ-ಬರಿದೆ ಎಲ್ಲ |ಸಂತೆ ಕೂಡಿದೆ ಎನ್ನುತ-ನಾ ಹಸಿದೆನು |ಪಂತಿಭೋಜನ ಕೊಂಡು ನಡೆಯಿರಿ ಮನೆಗೆಂದ 9ಸುರರಿಗೆಸುಧೆಮುಂಚೆ ಉಣಿಸಿದ ಪರಬ್ರಹ್ಮ |ಪರಿಪರಿ ಭೋಜನ ಮಾಳ್ಪ ಕಂಡುವರಾರು? |ಸುರದುಂದುಭಿ ಪೊಡೆದು ಪಾರಿಜಾತದ ಮಳೆ |ಸುರಿಸಿದರಾಕ್ಷಣಕೆ-ಬ್ರಹ್ಮನು ತಾನು |ತೆರಳಿದನಾಶ್ರಮಕೆ-ಪುರಂದರವಿಠಲ |ತಿರುಗಿದ ನಿಜಧಾಮಕೆ-ಕೃಷ್ಣನ ಲೀಲೆ |ಗುರುದಯೆಯಲಿ ನಮ್ಮ ಹರಿಯ ಕೊಂಡಾಡಿದೆ 10
--------------
ಪುರಂದರದಾಸರು
ಜನನಿರುದ್ರಾಣಿ ರಕ್ಷಿಸು ಎನ್ನಜಗದೀಶನ ರಾಣಿ ಪ.ವನಜಭವಸುರಮುನಿಕುಲಾರ್ಚಿತೆಕನಕವರ್ಣಶರೀರೆ ಕಮಲಾ-ನನೆ ಕರುಣಾಸಾಗರೆ ನಮಜ್ಜನ-ಮನಮುದಾಕರೆ ಮಾನಿತೋದ್ಧರೆ ಅ.ಪ.ಆದಿಕೃತಾಯುಗದಿ ಪ್ರತಿಷ್ಠಿತ-ಳಾದೆ ಧರಾತಳದಿಆದಿತೇಯರ ಬಾಧಿಸುವ ದಿತಿ-ಜಾಧಮರ ಭೇದಿಸಿದೆ ಸಜ್ಜನ-ರಾದವರ ಮನ್ನಿಸಿದೆ ತ್ರೈಜಗ-ದಾದಿಮಾಯೆ ವಿನೋದರೂಪಿಣಿ 1ಖಂಡ ಪರಶುಪ್ರೀತೆ ನಿಖಿಲಬ್ರ-ಹ್ಮಾಂಡೋದರಭರಿತೆಚಂಡಮುಂಡವೇತಂಡದಳನೋ-ದ್ದಂಡಸಿಂಹೆ ಅಖಂಡಲಾರ್ಚಿತೆಪಾಂಡುತನುಜಕೋದಂಡವಿತರಣೆಚಂಡಿಕೇ ಕರದಂಡಲೋಚನಿ 2ಸಿಂಧೂರಸಮಯಾನೆ ಸರಸ ಗುಣ-ವೃಂದೆ ಕೋಕಿಲಗಾನೆಸುಂದರಾಂಗಿ ಮೃಗೇಂದ್ರವಾಹಿನಿಚಂದ್ರಚೂಡಮನೋಜೆÕ ಸತತಾ-ನಂದಪೂರ್ಣೆ ಮುನೀಂದ್ರನುತೆ ಸುಮ-ಗಂಧಿ ಗೌರಿ ಶಿವೇ ಭವಾನಿ 3ಲಂಬೋದರಮಾತೆ ಲಲಿತ ಜಗ-ದಂಬಿಕೆ ಗಿರಿಜಾತೆಕಂಬುಕಂಠಿ ಕಾದಂಬನೀಕು-ರುಂಬಜಿತಧಮ್ಮಿಲ್ಲೆ ತವ ಪಾ-ದಾಂಬುಜವ ನಾ ನಂಬಿದೆನು ಎನ-ಗಿಂಬು ಪಾಲಿಸೆ ಶುಂಭಮರ್ದಿನಿ 4ಘನವೇಣುಪುರವಾಸೆ ಸರ್ವಾರ್ಥದಾ-ಯಿನಿ ತ್ರೈಜಗದೀಶೆಸನಕನುತೆ ಶ್ರೀಲಕ್ಷುಮಿನಾರಾ-ಯಣಭಗಿನಿ ಶ್ರೀಮಹಿಷಮರ್ದಿನಿಮನಮಥಾಮಿತರೂಪೆ ಕಾತ್ಯಾ-ಯಿನಿ ನಿರಾಮಯೆ ಮಂಜುಭಾಷಿಣಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯ ಜಯ ಶ್ರೀ ಮಹಾಲಿಂಗ ಗೋಪತುರಂಗಜಯ ಜಯ ಶ್ರೀ ಮಹಾಲಿಂಗ ಪ.ಜಯರಹಿತಾಚ್ಯುತಪ್ರಿಯ ಬುಧಾರ್ಚಿತದಯಾಸಾಗರ ಭಸಿತಾಂಗನಯನತ್ರಯ ನಮಿತಾಮರಸಂಘಾ-ಮಯಹರ ಗಂಗೋತ್ತುಮಾಂಗ 1ಭೂತೇಶಭೂರಿಭೂತಹೃದಿಸ್ಥಿತಭೂಷಣೀಕೃತಭುಜಂಗಪೂತಾತ್ಮ ಪರಮಜ್ಞಾನತರಂಗಪಾತಕತಿಮಿರಪತಂಗ 2ಲಂಬೋದರಗುಹಪ್ರಮುಖಪ್ರಮಥನಿಕು-ರುಂಬಾಶ್ರಿತ ಜಿತಸಂಗಗಂಭೀರಗುಮಕದಂಬೋತ್ತುಂಗ-ಸಂಭೃತ ಹಸ್ತಕುರಂಗ 3ಸೋಮಶೇಖರ ಮಹಾಮಹಿಮ ವಿಜಿತ-ಕಾಮ ಕಲಿಕಲುಷಭಂಗರಾಮನಾಮ ಸ್ಮರಣಾಂತರಂಗವಾಮಾಂಕಾಸ್ಥಿತ ಪಿಂಗ 4ದೇವ ಲಕ್ಷ್ಮೀನಾರಾಯಣ ಪದರಾ-ಜೀವನಿರತ ವನಭೃಂಗಪಾವಂಜಾಖ್ಯ ಗಿರೀಶ ಶುಭಾಂಗಕೇವಲ ಸದಯಾಪಾಂಗ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯ ಜಯ ಶ್ರೀಹರಿಪ್ರಿಯೆ ಮಹಾ-ಭಯಹರೆ ಜಗದಾಶ್ರಯೆಲಯವರ್ಜಿತ ನಿತ್ಯಾತ್ಮೆ ಚಿನ್ಮಯೆಜಯಶೀಲೆ ನಿರಾಮಯೆ 1ನಿತ್ಯಮುಕ್ತಿ ನಿರ್ವಿಕಾರೆ ನಿಜ-ಭೃತ್ಯನಿಚಯ ಮಂದಾರೆಪ್ರತ್ಯಗಾತ್ಮ ಹರಿಭಕ್ತಿರಸಪೂರೆಸತ್ವಾದಿಗುಣವಿದೂರೆ 2ಲಕ್ಷ್ಮೀನಾರಾಯಣಿ ಹರಿ-ವಕ್ಷಸ್ಥಲವಾಸಿನಿಅಕ್ಷರರೂಪಿಣಿ ಬ್ರಹ್ಮಾಂಡಜನನಿಸುಕ್ಷೇಮಪ್ರದಾಯಿನಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯ ಜಯತು ಹನುಮಂತ ಪವಿತ ಸಿಖ ಸಹಜಾತಜಯತು ಕಪಿರಾಜ ಯುವರಾಜ ಯತಿರಾಜ ಜಯತು ಪ.ಸುರರಿಗುತ್ತಮ ಜಗದಾಭರಣ ಶಿರೋಮಣಿ ಜಯತುಪರಮಅದ್ಭುತಚರಿತ ಸುವಟು ಜಯತುಧರಜೆಶೋಧಕ ನಿಶಾಚರಪುರದಹಕ ಜಯತುಜಯತು ವೈರಾಗಿ ಮಹಭೋಗಿ ಶುಭಯೋಗಿ ಜಯತು 1ಸುರರಿಪುಮಥÀನ ರಾಮಕಾರ್ಯಧುರಂಧರ ಜಯತುಚಿರಪ್ಲವಗ ಭವರೋಗಭೇಷಜ ಜಯತುಕರಿರಕರ್ಣ ದಶಮುಖಾಂಗ ಗಿರಿವರಕುಲಿಶ ಜಯತುಜಯತು ಅಕ್ಷಹರ್ತಾ ಕ್ರತುಕರ್ತಸುಖತೀರ್ಥಜಯತು2ತ್ರಿಕೋಟಿ ಪವನಾಖ್ಯರೂಪ ಪ್ರಕಟಾಪ್ರಕಟ ಜಯತುಅಕಳಂಕಾಮಿತರೂಪ ಮುಖ್ಯೇಶ ಜಯತುಶ್ರೀಕರ ಪ್ರಸನ್ವೆಂಕಟ ರಘುವೀರಾನುಮತ ಮತ ಜಯತುಜಯತು ಪರಸಿದ್ಧ ಬಕಮರ್ದ ಗುರುಮಧ್ವ ಜಯತು 3
--------------
ಪ್ರಸನ್ನವೆಂಕಟದಾಸರು
ಜಯ ಪಾಂಡುರಂಗ ಹೋ ಜಲದ ನಿಭಾಂಗ ಹೋ|ಜಗದಂತರಂಗ ಹೋ ಜಯ ಪಾಂಡುರಂಗ ಹೋ ಪನೀಲಭೂಧರವಾಸಕೌಸ್ತುಭಭೂಷ ರಮೆಯಾಧೀಶಸುಮನಸ|ಪಾಲ ಗುಣಗಂಭೀರ ನವನೀತಚೋರ ಕುಜನಕುಠಾರ| ನರಹರಿ ||ಫಾಲಲೋಚನಬಂಧು ದೈತ್ಯನ ಕೊಂದು ವೇದವ ತಂದು ದ್ರುಹಿಣಗೆ |ಮೇಲು ಶರುಣುದಲಿತ್ತೆ,ಮಂದರಪೊತ್ತೆ ಸುಂದರ ಮೂರ್ತಿ 1ನಿಗಮವಂದಿತ ರಾಮಹರಿಪೂರ್ಣ ಕಾಮ ಸದ್ಗುಣಧಾಮ, ವಾಮನ |ಮಗನ ಮೂಗಿಲಿ ಪುಟ್ಟಿ, ಹೇಮನ ಕುಟ್ಟಿ,ಅವನಿತಂದಿಟ್ಟಿ, ಈರೇಳು ||ಜಗದಿ ಪೂಜಿತನಾದಿ ಕೈಟಭ ಭೇದಿ ಇಭಪನ ಕಾಯ್ದಿ, ಪ್ರಣತರ |ಅಘವನೋಡಿಸುತಿಪ್ಪ ಹಲಾಯುಧತಲ್ಪಮನ್ಮಥನಪ್ಪ 2ವೇದ ವಿಸ್ತರ ಮಾಡ್ಡೀ, ದಾನವ ಬೇಡ್ಡೀ, ದನುಜನಿಗ್ಯೋಡ್ಡೀ, ಕುರುಕುಲ |ಸೂದನ, ಕಿರೀಟ ಸೂತ, ಪವಮಾನ ತಾತ, ದುರ್ಬಲನಾಥ ಎನ್ನನು ||ಆದರದಿ ಕೈಪಿಡಿಯೋ, ದುರಿತವ ತಡೆಯೊ, ದುರ್ಮತಿ ಕಡಿಯೊ,ಅಗಣಿತ|ಮೋದಪ್ರಾಣೇಶ ವಿಠಲ, ನರಮೃಗ, ನಿಟಿಲನೇತ್ರ, ಅಕುಟಲ3
--------------
ಪ್ರಾಣೇಶದಾಸರು
ಜಯ ಶ್ರೀಧರಾರಮಣ ಜಯ ಕೌಸ್ತುಭಾಭರಣ ಪಜಯ ದುರಿತನಿಧಿತರಣಜಯ ಪದ್ಮಚರಣಾ ಜಯಜಯಾ ಅ.ಪಜಯಪುಂಡರೀಕಾಕ್ಷಜಯ ತ್ರಿಭುವನಾಧ್ಯಕ್ಷಜಯ ಪಾಂಡುಸುತ ಪಕ್ಷ ಜಯ ಜಗದ್ರಕ್ಷಾ ಜಯಜಯಾ 1ಜಯ ಲೋಕಭಯನಾಶ ಜಯ ದಳಿತಭವಪಾಶಜಯ ವೇಂಕಟಾದ್ರೀಶ ಜಯಸುಪ್ರಕಾಶ ಜಯಜಯಾ 2ಜಯ ತುಲಸೀದಳದಾಮಜಯ ಶೇಷಗಿರಿಧಾಮಜಯದೈತ್ಯರಿಪುಭೀಮ ಜಯಕೃಷ್ಣರಾಮಾ ಜಯಜಯಾ 3ಜಯ ಕೋಟಿರವಿಭಾಸ ಜಯ ಸಾತ್ವಿಕೋಲ್ಲಾಸಜಯ ಜಯ ಭವದ್ದಾಸ ಜಯ ಶ್ರೀನಿವಾಸಾ ಜಯ ಜಯಾ4
--------------
ತುಳಸೀರಾಮದಾಸರು
ಜಯಜಯ ಶ್ರೀ ರಾಮ ನಮೋ |ಜಯ ಜಯ ಶ್ರೀ ಕೃಷ್ಣ ನಮೋ ಪ.ಸಿರಿಯರಸನು ಶೃಂಗಾರವ ಮಾಡಿ |ಸಿರಿಗಂಧವನೆ ಹಣೆಗಿಟ್ಟು ||ತರುಣ ತುಳಸಿ ವನಮಾಲೆಯ ಧರಿಸಿ |ಹರಿತುರುಕಾಯಲು ಹೊರಗೆ ಹೊರಟನು1ಹೊತ್ತು ಹೋಯಿತುತುರು ಬಿಡಿಯೆನ್ನುತ |ಸಾತ್ತ್ವತ ನುಡಿದನು ಗೋಪಿಯೊಡನೆ ||ತುತ್ತುರು ತುತ್ತುರು ತುರುತುರುಯೆನ್ನುತ |ಒತ್ತಿ ಸ್ವರಗಳನು ಪೊಂಗೊಳಲೂದುತ 2ವನಿತೆ ಸಟ್ಟುಗದೊಳು ಅಕ್ಕಿಯ ತೊಳಸಿ |ಒನಕೆಯಿಂದಓಗರ ಹದನೋಡಿ ||ಮಿನುಗುವ ಸೀರೆಯ ತಲೆಗೆ ಸುತ್ತಿಕೊಂಡು |ವನಕೆ ಹೋಗಲೆಂದು ಹೊರಗೆ ಹೊರಟಳು 3ಹರಿಸ್ವರವೆನ್ನುತ ಒಬ್ಬಳುಕೇಳಿನೆರೆಮನೆಗೆ ಹೋಗಿ ಕಡ ಕೇಳಿದಳು ||ಒರಳು ಕೊಡುವಿರಾ ಅರಸಿನ ಅರೆದು |ಮರಳಿ ಬೇಗ ತಂದೀವೆನೆನುತಲಿ 4ಹಸುವಿಗೆ ಇಟ್ಟಲು ಹಾಲುಓಗರ |ಬಿಸಿಮಡ್ಡಿಯ ಗಂಡಗೆ ಚಾಚಿ ||ಸೊಸೆಯನು ಅಟ್ಟಿಸಿ ತೊತ್ತನು ಪಾಲಿಸಿಮೊಸರ ಕಾಸಿ ಹೆಪ್ಪ ಹಾಕಿದೊಳೊಬ್ಬಳು 5ಗಿಳಿಗೆ ಹಾಸಿದಳು ಹಾಸು ಮಂಚವನು |ಅಳಿಯನ ಪಂಜರದೊಳಗಿರಿಸಿ ||ತಳಿಗೆಯಲ್ಲಿ ತಮ್ಮನ ಮಲಗಿಸಿ ತೊಟ್ಟಿ - |ಲೊಳಗೆ ಎಡೆಯನು ಮಾಡಿದಳೊಬ್ಬಳು 6ಅಟ್ಟವೆಂದು ಹತ್ತಿ ಅಗಳಿಯ ಮೇಲೇಇಟ್ಟಳು ಸಾದೆಂದು ಸಗಣಿಯನು ||ಕಟ್ಟಬಾಯಿಗೆ ಕಾಡಿಗೆಹಚ್ಚಿ |ಕೃಷ್ಣನ ಸ್ಮರಿಸುತ ಹೊರಗೆ ಹೊರಟಳು 7ಅಂಗನೆ ಚೌರಿಯು ಕಾಲಿಗೆ ತಗುಲಿಸಿ |ಮುಂಗೈಯಲಿ ತಾಳಿಯ ಬಿಗಿದು ||ಸಿಂಗರ ಸರವನು ನಡುವಿಗೆಕಟ್ಟಿ |ರಂಗನ ಸ್ಮರಿಸುತ ಹೊರಟಳೊಬ್ಬಳು 8ಕಟ್ಟಿ ಮುತ್ತಿನೋಲೆ ಮೊಣಕಾಲ್ಗಳಿಗೆ |ಗಟ್ಟಿ ಕಂಕಣವ ಕಿವಿಗಿಟ್ಟು ||ತೊಟ್ಟಿಲೊಳಗೆ ಶಿಶು ಅಳುವುದ ಕಂಡು |ಕಟ್ಟಿದ ನೆಲುವನು ತೂಗಿದಳೊಬ್ಬಳು 9ತರುಣಿಯೊಬ್ಬ ಸಂನ್ಯಾಸಿಯ ಕಂಡು |ನೆರೆಮನೆ ಕೂಸೆಂದೆತ್ತ ಬರಲು ||ಅರಿದಾವ ಗಾಳಿ ಸೋಕಿತೆನುತಲಿ |ಪುರಂದರವಿಠಲನು ನಗುತಿದ್ದನು ಸಖಿ 10
--------------
ಪುರಂದರದಾಸರು
ಜಯತು ಜಯತು ಜಯತೆಂಬೆನು ವಿಠಲಭಯನಿವಾರಣ ನಿರಾಮಯ ನೀನೆ ವಿಠಲ ಪ.ಮನವೆನ್ನ ಮಾತ ಕೇಳದು ಕಾಣೊ ವಿಠಲಮನಸಿಜನಾಯಸ ಘನವಾಯ್ತು ವಿಠಲನಿನಗಲ್ಲದಪಕೀರ್ತಿಯೆನಗೇನು ವಿಠಲತನುಮನದೊಳಗನುದಿನವಿರು ವಿಠಲ 1ಕದನಮುಖದಿ ಗೆಲುವುದ ಕಾಣೆ ವಿಠಲಮದನಮುಖ್ಯಾದಿ ವೈರಿಗಳೊಳು ವಿಠಲವಿಧವಿಧದಿಂದ ಕಷ್ಟಪಟ್ಟೆನು ವಿಠಲಇದಕೇನುಪಾಯ ತೋರಿಸಿ ಕಾಯೋ ವಿಠಲ 2ಹುಟ್ಟಿದೆ ನಾನಾ ಯೋನಿಗಳೊಳು ವಿಠಲಸುಟ್ಟ ಬೀಜದ ವೋಲ್ ಫಲವಿಲ್ಲ ವಿಠಲಇಷ್ಟಾರ್ಥಗಳನಿತ್ತು ಸಲಹಯ್ಯ ವಿಠಲಇಷ್ಟಕ್ಕೆ ನೀ ಮನ ಮಾಡಯ್ಯ ವಿಠಲ 3ಬಂಗಾರ ಭಂಡಾರ ಬಯಸೆನು ವಿಠಲಮಂಗಲ ಕೊಡು ಯೆನ್ನ ಬುದ್ಧಿಗೆ ವಿಠಲರಂಗ ರಂಗನೆಂಬ ನಾಮದಿ ವಿಠಲಭಂಗವ ಪರಿಹರಿಸಯ್ಯ ನೀ ವಿಠಲ 4ಏನು ಬಂದರೂ ಬರಲೆಂದಿಗು ವಿಠಲಮಾನಾವಮಾನ ನಿನ್ನದು ಕಾಣೊ ವಿಠಲನಾನು ನಿನ್ನವನೆಂದು ಸಲಹಯ್ಯ ವಿಠಲಲಕ್ಷ್ಮೀನಾರಾಯಣ ನೀನೆ ತಂದೆ ಕೇಳ್ ವಿಠಲ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯದೇವ ಜಯದೇವ ಜಯ ವೆಂಕಟೇಶ |ಭಯಕೃದ್ಭಯನಾಶನ ಶೇಷಾಚಲವಾಸ ||ಜಯ||ಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕಲಿಯುಗದಲಿ ಪ್ರತ್ಯಕ್ಷ ಭೂವೈಕುಂಠೆನಿಸಿ |ಸುಲಭವು ತೋರಿದಿ ಭಕ್ತರ ಬಯಕೆ ಪೂರೈಸಿ |ನಳಿನಸಂಭವ ಜನಕ ಸನಕಾದಿ ಪೋಷೀ |ತಿಳಿಯದು ನಿಮ್ಮಯ ಮಹಿಮೆಯು ಸಚ್ಚಿತ್ಸುಖರಾಶೀ1ಹೊಳೆವ ಶಿರದಲಿ ಕಿರೀಟಮಕರಕುಂಡಲವೂ |ಎಳೆ ತುಳಸಿ ವನಮಾಲಿ ಕೊರಳಲಿ ಶೋಭಿತವೂ |ಶ್ರೀವತ್ಸಕೌಸ್ತುಭಮಣಿರತ್ನದ ಜಡವೂ |ಥಳ ಥಳಿಪ ತೇಜಾ ಅಂಜನೀ ತನಯಾ2ಮತ್ಸ್ಯಕೂರ್ಮವರಾಹನರಹರಿ ವಾಮನನೆ |ತುಚ್ಛಮಾಡಿದಿ ಯಮಪುರ ರಾಮ ರಾಘವನೆವತ್ಸಾ ಶಿರಿ ಶಂಕರ ಆತ್ಮಜನೆ || ಜಯ3
--------------
ಜಕ್ಕಪ್ಪಯ್ಯನವರು
ಜಯಮಂಗಳಂನಿತ್ಯಶುಭಮಂಗಳಂಪ.ದುರುಳತಮ ವೇದವನು ಕದ್ದು ವಾತಾಳದಲಿಇರಲವನ ಕೊಂದು ವೇದಾವಳಿಗಳಸರಸಿಜೋದ್ಭವಗಿತ್ತು ಸುರಮುನಿಗಳನ್ನೆಲ್ಲಪೊರೆದ ಶ್ರೀ ವತ್ಸಾವತಾರಿ ಹರಿಗೆ 1ಸುರರು ದೈತ್ಯರಕೂಡಿ ಸಿಂಧುವನು ಮಧಿಸುತಿರೆಗಿರಿಮುಳಗಿ ಪಾತಳಕಿಳಿದು ಪೋಗೆಭರದಿಂದ ತಾ ಬಂದು ಗಿರಿಯ ಬೆನ್ನಳಗಾಂತುಸುರರ ಸಂರಕ್ಷಿಸಿದ ಶ್ರೀಕೂರ್ಮಹರಿಗೆ2ಭೂಮಿಯನು ಹಿರಣ್ಯಕ್ಷನೆಂಬ ದೈತ್ಯನು ಸುತ್ತಿಭೀಮ ವಿಕ್ರಮನು ಪಾತಾಳಕೊಯ್ಯುತಾಮರಸ ಸಂಭವನು ಬಿನ್ನೈಸಲವನಳಿದುಭೂಮಿಯನು ತಂದು ಶ್ರೀ ಭೂ ವರಾಹನಿಗೆ 3ಪರಮಭಾಗವತ ಪ್ರಲ್ಹಾದನ ಹಿರಣ್ಯಕನುಪರಿಪರಿಯ ಭಾದೆಯಿಂದಲಿ ಪೀಡಿಸಿಕರುಣಾಳು ಕೋಪದಲಿ ದೈತ್ಯನುದರವ ಬಗೆದಶರಣ ರಕ್ಷಕನಾದ ಶ್ರೀ ನರಸಿಂಹಗೆ 4ಬಲಿಚಕ್ರವರ್ತಿ ಭೂಮಿಯ ಧಾರೆಯರೆಯಲುಇಳೆಯನಳೆದವನ ಸುತಳಕೆ ಕಳುಹಿಸಿದಸಿಲುಕಿಭಕುತಿಗೆ ಮೆಚ್ಚಿ ಬಾಗಿಲವಕಾಯ್ದ ಶ್ರೀಬಲವಂಥಹರಿವಾಮಾನಾವತಾರನಿಗೆ5ಕಾರ್ತವೀರ್ಯಾರ್ಜುನನ ಸಂಹರಿಸಿ ಮುದದಿಂದಕೀರ್ತಿಯನು ಲೋಕದೊಳು ವಿಸ್ತರಿಸಿದಪ್ರಾರ್ಥಿವಾಂತಕ ಬಾಹುಬಲದಿ ಪರಿಪೂರ್ಣಗೆಆರ್ತಬಾಂಧವಗೆಭಾರ್ಗವರಾಮಗೆ6ದಶರಥನ ಮನೆಯುದ್ಭವಿಸಿ ಆ ರಾವಣನದಶಶಿರವ ನೀಡಾಡಿ ಅವನನುಜಗೆವಸುಧಾಧಿಪತ್ಯವನು ಲಂಕೆಯೊಳಗವಗಿತ್ತಅಸಮವಿಕ್ರಮ ರಾಮಚಂದ್ರ ಹರಿಗೆ 7ಯದುಕುಲದಿ ತಾ ಬಂದು ಕೊಂದು ಕಂಸನನಂದುಮುದದಿಂದ ಪಾಂಡವರನುದ್ಧರಿಸಿದಒದೆಗೆ ಕೌರವ ಬಲವ ಸಂಹರಿಸಿ ಪದವಿತ್ತುಮುದದಿ ಮನ್ನಿಸಿದ ಶ್ರೀ ಕೃಷ್ಣ ಹರಿಗೆ 8ತ್ರಿಪುರದ ಮುರಾರಿಗಳ ಸತಿಯರ ಪತಿವ್ರತವಅಪಹರಿಸಿ ದಿವ್ಯ ಮೋಹಕರೂಪದಿತ್ರಿಪುರಹರಗಂಬಾಗಿ ಶಿವಗೆ ಕೀರ್ತಿಯನಿತ್ತಅಪರಮಿತ ಬುದ್ಧಾವತಾರ ಹರಿಗೆ 9ಕರಿಯುಗದ ಕಡಯಲಿ ಖಲನೃಪರನೆಲ್ಲರನುತುಳಸಿ ಕುದುರೆಯ ಖುರದ ಪುಟಗಳಿಂದಸುಲಭದಿಂ ನಡೆಸುತೀ ಕೃತಯುಗದ ಧರ್ಮವನುಒಲಿದಂಥ ಕಲ್ಕಿಯವತಾರ ಹರಿಗೆ 10ಮಂಗಳ ಪದಂಗಳನು ಭಕ್ತಿಯಲಿ ಮೋಹನತರಾಂಗನೆಯರೆಲ್ಲ ರಾಗದಿ ಪಾಡುತಮಂಗಳಾತ್ಮಕಗೆಸಿರಿ ಪುರಂದರವಿಠಲಗೆಅಂಗನೆಯರೆಲ್ಲ ಆರತಿಯೆತ್ತಿರೆ 11
--------------
ಪುರಂದರದಾಸರು