ಒಟ್ಟು 4871 ಕಡೆಗಳಲ್ಲಿ , 122 ದಾಸರು , 3096 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಂದಿಸಿದರ ಕಾವೆ ವರವನೀವೆ ಅಹಿಪವೀಂದ್ರಭವಸುರರಗುರುಮಧ್ವಮುನಿರಾಯಪ.ಒಂದೊಂದುಶ್ರುತಿಸ್ಮøತಿಗೆ ಬಹ್ವಾರ್ಥಗಳ ಪೇಳದೆಒಂದೆರಡು ತತ್ವವಿಸ್ತರವ ಪೇಳಿದೆಒಂದು ಮೂರವತಾರದಲ್ಲಿ ಹರಿಯನೆ ಒಲಿಸಿಒಂದು ನಾಲ್ಕರ ಭೇದ ನಿಜರಿಗರುಹಿದೆಯ 1ಒಂದೈದು ರಿಪುವರ್ಗ ನಿಗ್ರ್ರಹವ ಮಾಡಿಸಿದೆಒಂದಾರು ತ್ರಿಗುಣಿಸಿದ ಮತವ ಮುರಿದೆಒಂದೇಳು ಮದವ ಕಾಲಲಿ ಮೆಟ್ಟಿ ಹರಿಪುರಕೆಒಂದೆಂಟು ಭಕುತಿಪಥ ತೋರ್ದೆ ವೈಷ್ಣವರಿಗೆ 2ಒಂದು ಒಂಬತ್ತು ಹರಿಯವತಾರ ಕಥೆ ರಚಿಸಿಒಂದು ಹತ್ತೇಂದ್ರಿಯದ ಗೆಲವ ಕಳಿಸಿಒಂದು ಹನ್ನೊಂದು ಸ್ತೋತ್ರದಿ ಕೃಷ್ಣನ ಮೆಚ್ಚಿಸಿದೆಒಂದು ಹನ್ನೆರಡು ತತ್ವದಾಗ 3ಒಂದು ಹದಿಮೂರು ಭುವನಗಳಲ್ಲಿ ನೀ ವ್ಯಾಪ್ತಒಂದು ಹದಿನಾಲ್ಕು ದ್ವಿಗುಣಿಸಿದ ಮ್ಯಾಲೇಳೊಂದಿದ ಸದ್ಗ್ರಂಥಗಳ ನಿರ್ಮಿಸಿ ಬುಧರಿಗಿತ್ತೆಒಂದು ಹದಿನೈದು ಗುಣದ ಲಕ್ಷಣಾಂಗ 4ಒಂದು ಹದಿನಾರೆಂಟು ತತ್ವ ಸಿದ್ಧಾಂತದಲಿಒಂದು ಹದಿನೇಳು ಪರ್ವಮೋಹಕ ಬಿಡಿಸಿದೆಒಂದು ಮನದಿಂದ ಶಿರಿ ಪ್ರಸನ್ನವೆಂಕಟ ಕೃಷ್ಣನಒಂದೊಂದು ಗುಣಕೆ ಅನಂತ ವ್ಯಾಖ್ಯಾನ 5
--------------
ಪ್ರಸನ್ನವೆಂಕಟದಾಸರು
ವಂದಿಸಿದರೆ ವಂದ್ಯರು ಪೂಜಿತರು ಮುಕುಂದಗೋವಿಂದ ಶ್ರೀಹರಿಯನ್ನುಎಂದೆಂದು ಕುಂದದಾನಂದವೈದಿಸುವಇಂದಿರೆಯರಸ ಭವಬಂಧಮೋಚಕನ ಪ.ಹತ್ತಶ್ವಮೇಧಾವಭೃಥಸ್ನಾನ ಮಾಡಲುಮತ್ರ್ಯರ್ಗೆ ಪುನರ್ಜನ್ಮಗಳಿಲ್ಲವೊಸತ್ಯಭಾಮಾಧವನಿಗೆ ನಿಷ್ಕಾಮದಿ ನಮಿಸಿಮತ್ತೊಮ್ಮೆ ನಮಿಸೆ ಮುಕ್ತಿಗೆ ಸಾಧನ 1ಕೋಟಿಸಹಸ್ರ ತೀರ್ಥಗಳಲಿ ಮಿಂದುಕೋಟಿಸಹಸ್ರ ವ್ರತಗಳಾಚರಿಸೆಕೋಟಿ ಭಾಂತಕಗೆ ನಮಿಸಿದ ಫಲಕೆ ಸರಿ ಪಾಸಟಿಷೋಡಶಕಳೆಯೊಳೊಂದಲ್ಲ2ಹೇಳೆನೆ ಇಂದಾದರು ನಮಿಸಿ ಶ್ರೀಲೋಲಶಾಙ್ರ್ಗಪಾಣಿಯನಸಾಲು ಜನ್ಮದಘವ ಹಾಳುಮಾಡಿ ಮುಕ್ತಿಓಲಗಕೆ ಕರೆವ ವೈಷ್ಣವ ಜನರ 3ಉರಶಿರದೃಷ್ಟಿಲಿ ಮನವಾಚದಲಿಚರಣಕರಗಳಲಿ ಜಾನುಗಳಲಿಧರೆಯಲಿ ಅಷ್ಟಾಂಗಪ್ರಣಾಮ ಮಾಳ್ಪರ್ಗೆಹರಿದು ಹೋಗೆ ಪಾಪವರ ಮುಕ್ತಿಈವ4ಸರುವಾಂಗವ ಧರೆಗೊಂದಿಸಿ ಭಕುತಿಲಿಹೊರಳಾಡಿ ಭೂಮಿಲಿ ಪರವಶದಿಹರಿಗೆ ನಮಿಸಲು ಮೈಗೊರೆದ ಧೂಳಿಯ ಕಣಾಪರಿಮಿತ ಸಹಸ್ರಾಬ್ದ ಪರಮಾಣ ಪದವಕ್ಕು 5ಸಿರಿಅಜಭವೇಂದ್ರಸುರರುಮಹಾಮುನಿನಿಕರನೃಪಮನುಜೋತ್ತಮರೆಲ್ಲಪರಮಭಕುತಿಲಿ ನಮಿಸೆ ಹರಿವಶನಾಗುವಹರಿಜನಕೆ ಮುಕ್ತಿಪಥಕಿದೆ ಪಾಥೇಯ 6ಅರ್ಚಿತ ಕೃಷ್ಣನ ನೋಡುತಾನಂದಾಶ್ರುಹುಚ್ಚನಂತೆ ನಮಿಸಿ ನಗುತ ಸುರಿಸಿಅಚ್ಯುತಾನಂತ ಸದ್ಗುಣನಿಧಿ ಭಕ್ತಪ್ರಿಯನಿಚ್ಚಪ್ರಸನ್ವೆಂಕಟನೆಂದುಚ್ಚರಿಸಿ7
--------------
ಪ್ರಸನ್ನವೆಂಕಟದಾಸರು
ವರಕವಿಗಳಿದ್ದಲ್ಲಿ ನರಕವಿಗಳ ಕೊಂಡಾಡಬಾರದು - ಇಂಥಾಧರಣಿಯ ಕಲ್ಲಿಗೆ ಸ್ಥೀರವೆಂದು ಪೂಜೆಯಮಾಡಬಾರದು ಪ.ಆಡಿಗೋದ ಮಡಕಿಗೆ ಜೋಡಿಸಿ ಒಲೆಗುಂಡ ಹೂಡಬಾರದುಬಡತನ ಬಂದರೆ ನಂಟರ ಬಾಗಿಲ ಸೇರಬಾರದು 1ಮಡದಿಯ ನುಡಿಕೇಳಿ ಬಡವರ ಜಗಳಕೆಹೋಗಬಾರದು - ಬಹಳಬಡತನ ಬಂದವಳ ಕೈಯಿಂದ ಅಡಿಗೆಯ ಉಣ್ಣಬಾರದು 2ಪಾಪಿಗಳಿದ್ದಲ್ಲಿ ರೂಪದ ಒಡವೆಯ ತೋರಬಾರದು - ಕಡುಕೋಪಿಗಳಿದ್ದಲ್ಲಿ ಅನುಕೂಲಗೋಷ್ಠಿಮಾಡಬಾರದು3ಪರರ ನಿಂದಿಸಿ ಪರಬ್ರಹ್ಮ ರೂಪೇಂದ್ರನ ಜರೆಯಬಾರದುವರದ ಶ್ರೀ ಪುರಂದರವಿಠಲನ ಸ್ಮರಣೆಯ ಮರೆಯಬಾರದು 4
--------------
ಪುರಂದರದಾಸರು
ವಾಯುದೇವರು152ಎಣೆಗಾಣೆ ಭುವನದಿ ಶ್ರೀರಾಮಚಂದ್ರನ ಪ್ರಿಯವೀರಹನುಮ ಘನಧೀರ ಪ.ಬ್ರಹ್ಮ ಪಿತೃ ಪಾದಕ್ಕೆರಗಿ ಉಮ್ಮಯದಿ ಕೊಂಡಾಜೆÕಸಮನೆಶರಧಿಗೋಷ್ಪದ ಮಾಡಿ ಹೋಗ್ಯಮ್ಮ ಜಾನಕಿಗೆ ಪರಬೊಮ್ಮನುಂಗುರವಿತ್ತುಹಮ್ಮಿನ ನಿಶಾಚರನಿಗುಮ್ಮಳಿಕೆನಿತ್ತೆ 1ಕ್ರೀಡೆಯಿಂ ದಶಶಿರನನೊಡೆವನಾಯದೆ ಶಿಥಿಲಮಾಡುವನಾಗಿನಾ ಮಾತನಾಡಿ ರಮೆಯಚೂಡಾಮಣಿಯ ತಂದು ನೀಡಿ ರಾಘವಗೆ ಸುಖಮಾಡಿಸಿದೆ ಅಪ್ರತಿಮಾರುತಿ ಅತಿಧೀರ 2ಗರುವಿನ ಖಳನ ವನದತರುವಿಟಪಮೂಲಸಹಮುರಿದು ಕರಚರಣದಿ ತಂದಾನೆರದ ರಿಪುರಕ್ಕಸರ ತರಿ ತರಿದು ಮರಲುಂದಿ ರಭಸದಿಂದಸುರಪುರವನುರುಹಿದೆ 3ಕದನಕರ್ಕಶರಿಪುಗಳೆದೆಯೊದೆದು ಕೋಟಿ ಸಿಂಹದ ರಭಸದಿನಲ್ಲಿ ಬಿಸುಟಿ ಉದಧಿಯಲ್ಲಿಸುದುರ್ಲಭಾದ ನಾಕೌಷಧವ ತಂದು ರಣದಿ ಮಲಗಿದ ವೀರರಸುಗಾಯಿದೆ ಅದ್ಭುತ ಮಹಿಮ 4ಸೀತಾಪತಿಯ ಪ್ರೀತಿಯತ್ಯಾದರದಿ ಪಡೆದು ವಿಷಯಾತೀತನಾಗಿ ವಿಧಾತನಾದೆವಾತಜಾತನೆ ನಿಮ್ಮ ಖ್ಯಾತಿಯ ಹೊಗಳಲಳವೆನಾಥ ಪ್ರಸನ್ನವೆಂಕಟ ದಾತನಿಗೆ ದೂತ 5
--------------
ಪ್ರಸನ್ನವೆಂಕಟದಾಸರು
ವಾರಿಜನಾಭನ ಕರುಣವೆ ಸ್ಥಿರ ಸಂಸಾರ್ಯೆರವು ಕೇಳಾತ್ಮಜಾರುತದಾಯು ದೂರದ ಮುಕುತಿಯದಾರಿಯ ಪಾಥೇಯ್ಯೆಲ್ಲಾತ್ಮ ಪ.ಧರ್ಮದ ಸರಕಿಲ್ಲದವನೆಂದು ಬೇಗ್ಯಮಧರ್ಮ ಭಟರು ಬಂದರಲ್ಲೊಚರ್ಮದ ಮನೆ ಬಿಡಿಸಿದರು ಮುಟ್ಟಲು ನೋವಕರ್ಮಯಾತನೆ ಕೊಟ್ಟರಲ್ಲೊಹಮ್ರ್ಯನಿಕೇತನ ವೃತ್ತಿಕ್ಷೇತ್ರವನು ಅಧರ್ಮಿಗಳಗಲಿಪರಲ್ಲೊಮರ್ಮವರಿತು ತ್ರಾಟಿಸುವಾಗ ಶ್ರೀವಿಶ್ವಕರ್ಮನ ಪೂಜೆ ಹೋಯಿತೆಲ್ಲೊ 1ಹೆಡಗೈಯಕಟ್ಟಿಪರಿಘದೊಳು ಬಡಿವಾಗಮಡದಿ ಮಕ್ಕಳ ಸಹಾಯವೆಲ್ಲೊಒಡೆಯ ದಮ್ಮಯ್ಯ ನಮ್ಮಯ್ಯನೆಂದರೆಕಾಲಹಿಡಿದರೆ ಕೊಡಹಿದರಲ್ಲೊಸುಡುವ ಮಳಲು ಹುಡಿ ಕಲ್ಮುಳ್ಳೊಳೆಳೆವಾಗಹಿಡದೇಜಿ ಕೊಂಬುಕಾಳೆಲ್ಲೊಪೊಡವಿಲಿ ಬಂದಾಗ ಹರಿಸೇವೆ ಮಾಡದೆಕಡುಹುಂಟಾದರೆ ತೋರದೆಲ್ಲೊ 2ಕೀವು ರುಧಿರವಿಟ್ಟ ಕುಂಡದಿ ಮುಣುಗುವಾಗ್ಹ್ಯಾವಿನ ಮಾತೇನಾಯಿತಣ್ಣಸಾವುತೀನವ್ವಪ್ಪಾ ಮೊರೆಯ ಕೇಳೆಂದರೆಆವಾಗಬಾಧೆ ಕಾಣಣ್ಣಆವೈವಸ್ವತದಂಡ ಕೊಟ್ಟು ಬೊಗಳೆಂಬಾಗಚಾರ್ವಾಕತನವೆಲ್ಲಣ್ಣಆ ವಾಸುದೇವನ ಭಟಸಂಗ ನಿನಗೀಗ ವೈರ ಆಗೆಲ್ಲಿದಣ್ಣ 3ನಾಲಿಗೊಣಗಿ ನೀರು ಕೂಳೆಂದು ಅಳುವಾಗಹಾಲ ಶಾಲ್ಯೋದನವೆಲ್ಲೊಮ್ಯಾಲೆ ಮ್ಯಾಲ್ವೈತರಣಿ ಸ್ನಾನವ ಮಾಡುವಕಾಲಕೆ ಅಭ್ಯಂಗನವೆಲ್ಲೊಕಾಲನ ದೂತರ್ಗೆ ಕೊಟ್ಟುಳಿವೆನೆಂದರೆಹೂಳಿದ ಧನ ದೂರಾಯಿತಲ್ಲೊಕಾಲಕಾಲಕೆ ದ್ವಿಜಪಂಕ್ತಿಭೋಜನಸುಖವ್ಯಾಳೆ ತಪ್ಪಿತನ್ನವೆಲ್ಲೊ 4ಕಷ್ಟಿಸಿ ಬಳಲುವೆ ಹಾಹಾಯೆಂದಳಲುವೆಇಷ್ಟನೆಂಟರು ಹೋದರೆತ್ತಮುಷ್ಟಿಕುಠಾರಪ್ರಹಾರನೋಡುನಿನ್ನವರಿಷ್ಟತನವು ನಿಂತಿತೆತ್ತಶಿಷ್ಟರ ನೋಡದೆ ಸತ್ಕಾರ ಮಾಡದೆನಿಷ್ಠುರ ನುಡಿದೆ ಪ್ರಮತ್ತಕೃಷ್ಣ ನಮೊ ಎಂದು ಕಡೆಗಾಣಲರಿಯೆ ಎಳ್ಳಷ್ಟು ಪುಣ್ಯವ ಕಾಣೆನೆತ್ತ 5ಕಂಗೆಟ್ಟು ತಕ್ರನ್ನೆ ಕಾಸಿ ಸೀಸ್ಯೆರೆವಾಗಅಂಗಣದ ಪಶು ಬಹುದೂರಕೆಂಗೆಂಡಗಂಭವಪ್ಪಿಸುವರು ನಿನ್ನ ಪರಾಂಗನೆಭೋಗಿಚದುರಅಂಗ ಶೃಂಗಾರದ ಕೊನಬುಗಾರ ನಿನಗ್ಹಿಂಗುವದೆ ಯಮದ್ವಾರಮಂಗಳ ಮಹಿಮ ಮುಕುಂದ ಮುರಾರಿ ಶ್ರೀರಂಗನ ಭಕುತಿವಿದೂರ 6ಸುಟ್ಟರೆ ಹಿಡಿಬೂದಿ ಕೆಟ್ಟರೆ ಕ್ರಿಮಿಕಾಯಇಟ್ಟರಿರದು ವಾಯುವಿರದೆಹುಟ್ಟಿ ಸುಜನ್ಮದಿ ಜಾಣರಾಗದೆಬುಧರಟ್ಟುವರೆ ದಿವಸ ಬರಿದೆಇಟ್ಟಣಿಸಿದ ಭವಗತ ಸುಖದು:ಖವುಂಡುಟ್ಟು ರಾಮನ ಮನವಿರದೆಕಟ್ಟಕಡೆಲಿ ನರಕವನುಂಬೋದುಚಿತಲ್ಲದಿಟ್ಟನಾಗು ಮಾಯೆಯಜರಿದು7ನಿತ್ಯನೈಮಿತ್ಯಕಾಮ್ಯಾದಿ ಸತ್ಕರ್ಮವಮತ್ತೆ ತಿಳಿದು ನಡೆ ಆತ್ಮಹತ್ಯವಸತ್ಯ ಅನ್ಯವಧೂಜನಸಖ್ಯಪರವಿತ್ತದಂಜಿಕೆ ಇರಲ್ಯಾತ್ಮಕರ್ತಮೂರವತಾರಿ ಪೂರ್ಣ ಬೋಧಾಚಾರ್ಯರಭೃತ್ಯನಾಗಿ ಬಾಳೊ ಆತ್ಮಎತ್ತೆತ್ತ ನೋಡಲು ಬೆನ್ನಬಿಡದೆಕಾವಪ್ರತ್ಯಕ್ಷನಾಗಿ ಪರಮಾತ್ಮ 8ಮಂಗಳಾತ್ಮರಿಗೆಅಹರ್ನಿಶಿಶ್ರೀವರಅಂಗಜಜನಕನೆಚ್ಚರಿಕೆಸಂಗಡಿಸಿದ ವಿಷಯಂಗಳಿದ್ದರೇನುತಂಗಳ ಅನ್ನದೋಕರಿಕೆಹಿಂಗದೆ ವರಸಂಗ ಮಾಡಿದರೊಯಿವರುಮಂಗಳಾತ್ಮಕನಿದ್ದ ಪುರಕೆಬಂಗಾರ ಮನೆಯ ಪ್ರಸನ್ವೆಂಕಟೇಶನಡಿಂಗರರಿಗೆ ನರ್ಕಸರ್ಕೆ 9
--------------
ಪ್ರಸನ್ನವೆಂಕಟದಾಸರು
ವಾರಿಜರಮಣ ನಮ್ಮ ಸಾಕೊ ಪ.ಉಬ್ಬಸಕೇಳುವರೊಬ್ಬರ ಕಾಣೆಗರ್ಭವಾಸದ ಬಲೆನಿಬ್ಬರಕಾಣೊ1ಕಳೇವರಪ್ರಿಯರು ಕಳಿಸಿ ಉಳಿವರುಬಳಲುವಾಗ್ಯಮನಲ್ಲಿ ಸುಳಿಯರವರು 2ಉಮ್ಮಯ ತೀವಿದ ನಿಮ್ಮನಾಗರದಿಒಮ್ಮ್ಯಾದರೆನ್ನಿಡು ಧರ್ಮದಯಾಬ್ಧಿ 3ಕಂಗಳಿಲ್ಲವು ಸುಜÕ ಕಂಗಳ ಕೊಡು ನೀಪಂಗುಗುಲ್ಲಾಸ ಪಾದಂಗಳ ಕೊಡು ನೀ 4ಕಡೆಯ ಮಾತಿಗೆ ಕೈಯವಿಡಿಯೆನ್ನ ತಂದೆದೃಢ ಪ್ರಸನ್ವೆಂಕಟ ಒಡೆಯ ಪೊರೆಯೆಂದೆ 5
--------------
ಪ್ರಸನ್ನವೆಂಕಟದಾಸರು
ವಾವಿಯೀ ಪರಮಾತ್ಮಗೊಂದೂ ಇಲ್ಲ |ಶ್ರೀ ವರನೆ ಇದು ಅಲ್ಲವೆಂಬರಿಲ್ಲ ಪಮೊಮ್ಮಕ್ಕಳನ್ನು ವಂಚಿಸಿ ತಾನೆ ಕೊಲ್ಲಿಸಿದ |ಮೊಮ್ಮಗಗೆ ತನ್ನ ತಂಗಿಯನು ಕೊಟ್ಟ ||ಮೊಮ್ಮಗನ ನಾದಿನಿಯರಲ್ಲಿ ಮಕ್ಕಳ ಪಡೆದ |ಮೊಮ್ಮಗನ ವಹಿಸಿ ಪುತ್ರನ್ನ ಅಳಿದ 1ಒಬ್ಬ ಮಾವನ ನೋಡ ನೋಡ ಪ್ರಾಣವಕೊಂಡ|ಒಬ್ಬ ಮಾವನ ಕೂಡ ಕಡಿದಾಡಿದ ||ಒಬ್ಬ ಮಾವನ ಮೇಲೆ ಬಾಣವನ್ನೇರಿಸಿದ |ಒಬ್ಬ ಮಾವನ ಮಗನಮಾನಕಳೆದ2ಒಬ್ಬ ಅತ್ತೆಗೆ ತಾನೆ ತಂದೆಯನ್ನಿಸಿಕೊಂಬ |ಒಬ್ಬ ಅತ್ತೆಗೆ ಗಂಡನಾದನಿವನು |ಒಬ್ಬ ಅತ್ತೆಗೆ ಮಾವನಾದನೀ ಕೇಶವನು |ಒಬ್ಬ ಅತ್ತೆಯ ಬಹಳ ಶ್ರಮ ಬಡಿಸಿದ 3ಒಬ್ಬ ಮಗಳನು ತನ್ನ ಹಿರಿಯ ಮಗನಿಗೆ ಕೊಟ್ಟ |ಒಬ್ಬ ಮಗಳನು ತಾನೇ ಮದುವೆಯಾದ ||ಒಬ್ಬ ಮಗಳಿಗೆ ಒಂದು ರೀತಿಯಲಿ ಮಗನಾದ |ಒಬ್ಬ ಮಗಳನು ಹಲವರಲ್ಲಿರಿಸುವ 4ಇವನ ನಿಜ ಭಕ್ತನೆಂಬವನು ತನ್ನ ಸತಿಯನು |ಸವಿಯಾಗಿ ನಾಲ್ವರಿಗೆಹಂಚಿಕೊಟ್ಟ ||ಭುವನದೊಳಗೆ ಪ್ರಾಣೇಶ ವಿಠಲನ ಮನೆ ನಡತೆಯಿದು |ಕವಿಗಳೆಲ್ಲರು ತಿಳಿದು ಪೂಜಿಸುತಿಹರು ಮುದದೀ 5
--------------
ಪ್ರಾಣೇಶದಾಸರು
ವಾಸವನೆ ಮಾಡಿರೋ ಕಾಶಿಯಲಿ ಪವಾಸವನೆ ಮಾಡಿ ಕಾಶಿಯಲಿ ವಸುಧೆಯ ಜನರು |ಏಸುಜನ್ಮದ ಪಾಪವನೆ ಕಳೆದು ಯಮಪುರಿಯ ||ಹೇಸಿಕೆಯ ರಾಶಿಗಳ ಒದೆದು ಹೆಚ್ಚಳವಾದ |ಮೀಸಲಳಿಯದಪದವಿಸಾರಿರಯ್ಯಅಪಶ್ರೀ ವಿಷ್ಣು ಸಿರಿಸಹಿತ ಗರುಡ ವಾಹನನಾಗಿ |ಜೀವಿಗಳ ಸ್ಥಿತಿಯ ನೋಡುತ ಬರಲು ಮರುಗಿ ಆ |ದೇವಿ ಬಿನ್ನಹ ಮಾಡಲಾಗ ಕರುಣಾಕರನು |ಭಾವಿಸಿದನೀ ಕೃತಿಯನು |ದೇವತ್ರಿಧಾಮನವ ದಿವ್ಯ ವೈಕುಂಠದೊಳು |ಪಾವನಸ್ಥಳವಿದೆಂದೊರೆದ ಧರೆಯೊಳು ಕಾಶಿ |ಶ್ರೀ ವಾರಣಾಸಿ ಪಂಚಕ್ರೋಶಮಿತಿಯಲ್ಲಿಆ ವಿಪುಳ ಮಣಿಕರಣಿಕೆ 1ಬಲಿಯ ಬಳಿ ಮೂರಡಿಯ ಭೂದಾನವನೆ ಬೇಡಿ |ನೆಲನಳೆಯ ಈರಡಿಗೆ ಸಾಲದಿರೆ ಬ್ರಹ್ಮಾಂಡ |ಬಲಪದದ ನಖದಿ ಸೀಳಲ್ಕೆ ಬಹಿರಾವರಣ |ಜಲಸುರಿಯೆ ಅಂಗುಟದಲಿ ||ಸಲೆ ತೀರ್ಥವೆಂದಜ ಕಮಂಡಲದೊಳಗೆ ಧರಿಸಿ |ತೊಳೆದನಾ ಚರಣಗಳ ಬಲು ಗಂಗೆ ಬರಲು ಜಡೆ - |ತಲೆಯೊಳಿಟ್ಟಾ ಶಿವ ಭಗೀರಥನ ಯತ್ನದಿಂ |ದಿಳಿದಿಹಳು ಕಾಶಿಯಲ್ಲಿ 2ಪರಮನಿರ್ಮಲ ಶುಭ್ರತರದ ಭಾಗೀರಥಿಯನಿರಜೆ ನೀಲಾಭೆ ಯಮುನೆಯ ಮಧ್ಯದಲಿ ಕಾರ್ತ |ಸ್ವರವರ್ಣದಿಂದಲ್ಲಿ ಗುಪ್ತಗಾಮಿನಿಯಾದ |ಸರಸತಿಯ ಸಂಗಮದಲಿ ||ಮೆರೆಯುವ ತ್ರಿವೇಣಿಯೆನಿಸುವ ತೀರದಲ್ಲಿ ವಟ - |ತರುಛಾಯೆಯಲ್ಲಿಹುದು ದೇವ ಋಷಿ - ಮೌನೀಗಣ 3
--------------
ಪುರಂದರದಾಸರು
ವಾಸುಕಿಶಯನನೆ ವೆಂಕಟಗಿರಿ |ವಾಸನೆಯಜ್ಞಾದ್ಯವತಾರನೆ |ಮೇಶಾ ನರಸಿಂಹಾ ಹಸಿಗೇಳೂ ಪಬೊಮ್ಮಾ ಶಂಕರ ಮುಖ ವಂದಿತ |ಸಮ್ಮೀರವಾಹನಗರುಡಧ್ವಜ |ಅಮ್ಮರೇಶಾನುಜ ಶ್ರೀ ಉಪೇಂದ್ರಾ || ಉಪೇಂದ್ರದಾಮೋದರಹರಿ| ತಮ್ಮನಾ ತಮ್ಮ ಹಸಿಗೇಳೂ 1ವಾಮನ ನಾರಾಯಣಅಚ್ಯುತ|ತಾಮಸಗುಣಜನ ಸಂಹಾರಕ |ಶ್ಯಾಮಾಂಗ ಕೋಟಿ ರವಿತೇಜಾ ||ರವಿತೇಜಾ ತ್ರೈಲೋಕದಗುರುಹೇಮಾಂಗದ ವರದಾ ಹಸಿಗೇಳೂ 2ಜಲಜಾಕ್ಷನೆಕೌಸ್ತುಭಶೋಭಿತ |ಜಲನಿಧಿ ಶಯನನೆ ನರಕಾಂತಕಾ |ಬಲಿಬಂಧಿಸೀದನೆ ಪರತತ್ವಾ ||ಪರತತ್ವರವಿದರ ಗದಧರಫಲುಗುಣನಾ ಸಖನೇ ಹಸಿಗೇಳೂ 3ಕನಕಾಂಬರ ಕಶ್ಯಪರಿಪುಹರಿ|ಧನಪತಿ ಮಿತ್ರನ ಭಯ ಬಿಡಿಸಿದ |ಇನಪುತ್ರಗೊಲಿದಾ ರಘುಪತೀ ||ರಘುಪತಿ ಭಕ್ತಸುರತರುಮನಸಿಜಾ ಪಿತನೆ ಹಸಿಗೇಳೂ 4ಶತಯಾಗನ ಗರ್ವ ವಿಭಂಜನ |ಕ್ಷಿತಿವಂದಡಿ ಮಾಡಿದವನೇ |ಸುತನಲ್ಲಿ ಪಾಲು ಕುಡಿದಾನೆ ||ಕುಡಿದಾನೆ ರುಗ್ಮಿಣಿವಲ್ಲಭಪತಿತಾ ಪಾವನ್ನಾ ಹಸಿಗೇಳೂ5ಝಗ ಝಗಿಸುವ ಪೀತಾಂಬರದುಡಿ |ಗಿಗಳಿಂದಲಿ ಹೊನ್ನುಡದಾರದಿ |ಮಿಗಿಲಾದ ವೈಜಯಂತೀ ವನಮಾಲೀ ||ವನಮಾಲಿ ಕೊರಳೊಳಗೊಪ್ಪುವಜಗದೀಶ ಕೃಷ್ಣಾ ಹಸಿಗೇಳೂ 6ಗಂಗೆಯ ಚರಣದಿ ಪಡದಿಹ ಬಹು |ಮಂಗಳ ಮೂರುತಿ ಶ್ರೀ ವಾಮನಾ |ಜಂಗುಳಿ ಹೆಣ್ಣುಗಳಾ ಒಲಿಸೂತಾ ||ಒಲಿಸುತಾ ಚಿಂತಿಗಳೆಲ್ಲನುಹಿಂಗಿಸುವಾ ದೇವಾ ಹಸಿಗೇಳೂ 7ಧ್ರುವ ದ್ರೌಪದಿಯ ಸುರಜ ಪೋಷಕ |ಅವಿವೇಕ ದಶಮುಖ ವಿನಾಶಕಾ |ಲವಣಾಸುರ ಕಂಸಾ ಮುರಾ ಧ್ವಂಸೀ ||ಮುರಧ್ವಂಸೀ ಐದೊಂದಬಲೆರಾಧವವಾಸುದೇವಾ ಹಸಿಗೇಳೂ 8ಕೇಶವ ಸತ್ರಾಯಣ ಸುತ ಪ್ರಾ- |ಣೇಶ ವಿಠ್ಠಲ ದಕ್ಷಿಣವಲ್ಲಭ|ದೋಷ ರಹಿತನೆ ಅನಿರುದ್ಧಾ ||ಅನಿರುದ್ಧಾ ಭಾಗವತರಘನಾಶಾ ಪರಮಾತ್ಮಾ ಹಸಿಗೇಳೂ 9
--------------
ಪ್ರಾಣೇಶದಾಸರು
ವಾಸುದೇವಜಯಜಯವಾಸುದೇವಪವಾಸುದೇವಜಲಜಾಸನ ವಂದಿತಕೇಶವ ನತಜನ ಪೋಷ ಜನಾರ್ದನಅ.ಪಶ್ರೀನಿವಾಸ ಜಯಜಯ ಶ್ರೀನಿವಾಸಶ್ರೀನಿವಾಸ ಒಲಿ ಸಾನುರಾಗದಲಿಮಾನವೇಂದ್ರ ಅನುಮಾನಿಸದೆನ್ನಲಿ1ವೆಂಕಟೇಶ ಜಯಜಯ ವೆಂಕಟೇಶಾವೆಂಕಟೇಶ ಭವಬಿಂಕ ವಿನಾಶಶಂಕರಸಖಶಶಾಂಕ ಪ್ರಕಾಶನೆ2ಪದ್ಮನಾಭಾ ಜಯಜಯ ಪದ್ಮನಾಭಾಪದ್ಮನಾಭಪೊರೆಪದ್ಮನಯನ ಹರೇಪದ್ಮೋದ್ಭವನುತ ಪದ್ಮ ಮಾಲಾಧರ3ಇಂದಿರೇಶಾ ಜಯಜಯ ಇಂದಿರೇಶಾಇಂದಿರೇಶ ಗುಣವೃಂದ ಜಗನ್ಮಯಸಿಂಧುಶಂiÀುನಗೋವಿಂದದಾಸ ಪ್ರಿಯ4<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ವಾಸುದೇವವಾಸುದೇವವಾಸವಹರ ವಿಧಿಪತಿವಾಸುದೇವಪ.ಅಖಿಳಜಗದಂತರ್ಬಹಿವಾಸುದೇವಭಕುತ ಹೃದಯ ಮಂದಿರವಾಸುದೇವ1ವೈಕುಂಠಕ್ಷೀರಸಾಗರವಾಸುದೇವಶ್ರೀಕರಾನಂತಾಸನವಾಸುದೇವ2ಸ್ವಾಮಿಪುಷ್ಕರಕೂಲಸ್ಥಿರವಾಸುದೇವಸ್ವಾಮಿ ಪ್ರಸನ್ವೆಂಕಟವಾಸುದೇವ3
--------------
ಪ್ರಸನ್ನವೆಂಕಟದಾಸರು
ವಿಠಲ ಎನ್ನನು ಕಾಯೊ ವಿಠಲ ಪಂಢರಿರಾಯವಿಠಲ ಭಕ್ತವತ್ಸಲ ವಿಠಲಹರಿವಿಠಲಪ.ದಿಟ್ಟ ಪುಂಡಲೀಕ ತನ್ನ ಪುಟ್ಟಿಸಿದವರ ಮನಮುಟ್ಟಿ ಪೂಜಿಸಲು ಚಿತ್ತಗೊಟ್ಟು ಬಂದೆಯೊ ವಿಠಲಬಿಟ್ಟು ಬರದಲೆ ಒಡನಿಟ್ಟಿ ನೀಡಲು ಚೆಲುವಇಟ್ಟಂಗಿ ಮ್ಯಾಲಂಘ್ರಿಪದ್ಮವಿಟ್ಟು ನಿಂತ್ಯಯ್ಯ ವಿಠಲ 1ಕೊಟ್ಟ ಭಾಷೆಗೆ ಭಕ್ತರ ಕಟ್ಟಲಿ ಸಿಲುಕಿದೆಯೊ ಕಂಗೆಟ್ಟೆನೊ ಭವದಿ ನಿನ್ನಗುಟ್ಟುತೋರಯ್ಯ ವಿಠಲಪಟ್ಟಗಟ್ಟ್ಟ್ಯಜಭವರ ಕಟ್ಟಿಲೆ ಇದ್ದ ವೈಕುಂಠಪಟ್ಟಣ ಭೀಮಾತೀರದಿ ನಟ್ಟು ನಿಂತ್ಯಯ್ಯ ವಿಠಲ 2ನೆಟ್ಟನೆ ವೇದವ ತಂದು ಬೆಟ್ಟವೆತ್ತಿ ಇಳೆಯ ಪೊತ್ತಿಸಿಟ್ಟು ತಾಳ್ದೆವಟುಖಳರೊಟ್ಟಿಲೊದ್ಯೈಯ್ಯ ವಿಠಲಕಟ್ಟಿದೆ ಕಡಲ ಜಗಜಟ್ಟಿ ಗೋಪ ಬೌದ್ಧ ಕಲಿಯಮೆಟ್ಟಿ ಆಳ್ದೆ ಪ್ರಸನ್ವೆಂಕಟ ಕೃಷ್ಣಯ್ಯ ವಿಠಲ 3
--------------
ಪ್ರಸನ್ನವೆಂಕಟದಾಸರು
ವಿಧಿನಿಷೇಧವು ನಿನ್ನವರಿಗೆಂತೊ ಹರಿಯೇ ಪವಿಧಿನಿನ್ನ ಸ್ಮರಣೆಯು ನಿಷೇಧ ವಿಸ್ಮøತಿಯೆಂಬವಿಧಿಯನೊಂದನೆ ಬಲ್ಲರಲ್ಲದೇ ಮತ್ತೊಂದು ಅ.ಪಮಿಂದದ್ದೆ ಗಂಗಾದಿ ಪುಣ್ಯತೀರ್ಥಂಗಳುಬಂದದ್ದೆ ಪುಣ್ಯಕಾಲ ಸಾಧುಜನರು ||ನಿಂದದ್ದೆ ಗಯೆ ವಾರಣಾಸಿ ಕುರುಕ್ಷೇತ್ರಸಂದೇಹವೇಕೆ ಮದದಾನೆ ಪೋದುದೆ ಬೀದಿ 1ಕಂಡಕಂಡಲ್ಲಿ ವಿಶ್ವಾದಿ ಮೂರುತಿಯು ಭೂಮಂಡಲದಿ ಶಯನವೆ ನಮಸ್ಕಾರವು ||ತಂಡತಂಡದ ಕ್ರಿಯೆಗಳೆಲ್ಲ ನಿನ್ನಯ ಪೂಜೆಮಂಡೆಬಾಗಿಸಿ ನಮಿಪಭಾಗವತಜನಕೆ 2ನಡೆದ ನಡಿಗೆಯು ಎಲ್ಲ ಲಕ್ಷ ಪ್ರದಕ್ಷಿಣೆಯುನುಡಿವ ನುಡಿಗಳು ಎಲ್ಲ ಗಾಯತ್ರಿ ಮಂತ್ರ ||ಕೊಡುವುದೆಲ್ಲವು ಅಗ್ನಿಮುಖದಲ್ಲಿ ಆಹುತಿದೃಢಭಕ್ತರೇನ ಮಾಡಿದರದೇ ಮರ್ಯಾದೆ 3ನಷ್ಟವಾದುದು ಎಲ್ಲ ಸಂಚಿತದ ಕರ್ಮವುಮುಟ್ಟಲಂಜುವುವೆಲ್ಲ ಆಗಾಮಿಕರ್ಮ ||ಸ್ಪಷ್ಟವಾಗಿರುವ ಪ್ರಾರಬ್ಧ ಕರ್ಮವ ಮೀರಿಸೆಟ್ಟಿಮೆಟ್ಟಿದ್ದೆ ಪಟ್ಟಣವೆಂಬುದೇ ನಿಜವು 4
--------------
ಪುರಂದರದಾಸರು
ವಿವೇಕವ ಪಡೆಯಿರೋ ವಿಭುಗಳ ಕೃಪೆಯಿಂದವಿವೇಕವ ಪಡೆದರೆ ಈಶ್ವರಗಿಂ ಮಿಗಿಲಯ್ಯಪಮನವು ನಿಲ್ಲದು ಎಂದು ಮರುಗುವಿರೇಕಯ್ಯಮನವು ನಿಲ್ಲಲಿಕೆ ನಿಮ್ಮಧೀನವೆಮನವು ಆದಾತನಾನೇ ಮಹತ್ತು ಆದಾತನಾನೇಮನಕೆ ವಿರಹಿತುಮಾಪತಿಯು ತಾನೆಂದು1ಪಾಪವ ಮಾಡಿದೆನೆಂದು ಹಿರಿದು ಮರುಗಲದೇಕೆಪಾಪ ಪುಣ್ಯವು ಪ್ರಕೃತಿಯಲಾದವುಪಾಪವೆಲ್ಲಿಹವೆಲೆ ಪುಣ್ಯವೆಲ್ಲಿಹವೆಂದುಪರಪುರುಷ ತಾನಾಗದೆಂದೂ2ಆತ್ಮನರಿಪೆನೆಂದು ಅತಿ ಕಷ್ಟಬಡಲೇಕೆಆತ್ಮನ ವಿವರಿಸೆ ಅವನಲ್ಲವೆಆತ್ಮನೇ ತಾಕಂಡ್ಯಾಅಗಣಿತಮಹಿಮನುಆತ್ಮ ಅನಂತನಾಮನೆ ತಾನೆಂದು3ಅರಿವುಮರೆವೆ ಎಂಬ ಅಜ್ಞಾನವೇತಕೆಅರಿವುಮರೆವುಅಂಗದಧರ್ಮವುಅರಿವುಮರೆವೆಯುಂಟೆ ಆತ್ಮತಾನಾದವನಿಗೆಅರಿವುಮರೆವುಅಂಬುಧಿತೆರೆಯುಂಟು4ಇಂತು ವಿವೇಕವನ್ನು ವಿಭುಗಳಿಂದಲರಿದುಚಿಂತೆ ಹರಿದು ಚಿದಾನಂದ ಗುರುವಾಮುಂತೆ ದೃಷ್ಟಿಸಿಕೊಂಡು ಮರೆತು ತನುವನು ನಿ-ಶ್ಚಿಂತ ರಾಗಿಯೆ ನಿಜವಿದೆಯಂತೆಂದು5
--------------
ಚಿದಾನಂದ ಅವಧೂತರು
ವಿವೇಕವೆಂಬ ಘೌಜದು ಮುತ್ತಲುಉಳಿವು ಅಸುರರಿಗಿಲ್ಲಾಯ್ತುಸವರಿಯೆ ಹೋದರು ದುಷ್ಟರು ನುಣ್ಣಗೆಸಂತೋಷವು ನಗರಕ್ಕಾಯ್ತುಪಭೂತ ದಯನು ಶಾಂತಾತ್ಮ ವಿಚಾರನುಬ್ರಹ್ಮನಿಷ್ಠವಿರತೆನಿಸುವನುಖ್ಯಾತಿಗೆ ಬಂದಿಹ ಹಿರಿಯ ವಜೀರರುಕವಿದರು ತನುಪುರದುರ್ಗವನು1ಧಮಧಮ ನಾದದ ನಗಾರಿ ಬಾರಿಸೆದಿಂಡೆಯರಸುಗಳು ನೆಲಕೊರಗೆಅಮಮ ಅಡರಿಯೆ ದುರ್ಗವ ಕೊಂಡರುಅರೆದರು ದುಷ್ಟರು ಊರೊಳಗೆ2ಕಡಿದರು ಕಾಮನ ಹೊಡೆದರು ಡಂಭನಕೆಡಹಿಯೆ ಕೊಯ್ದರು ಚಂಚಲನಹುಡಿಮಾಡಿದರು ಅಹಂಕಾರ ಕ್ರೋಧರಹುರಿದರು ಖಳರು ಬೀಜವನು3ಆದನು ಪುರಕೆ ವಿವೇಕ ಮಂತ್ರಿಯುಆದನು ವಿರತಿಯು ದಳವಾಯಿಆದನು ಶಾಂತನು ಸಮಸ್ತ ವೃತ್ತಿಗೆಆಯಿತು ನಗರಕೆ ಅದು ಹಾಯಿ4ಜೀವ ರಾಜನು ಹಿಡಿದೆ ಬೋಧಿಸಿಜಡನಾದಸುರ ಪ್ರಕೃತಿ ಎಂದುಜೀವ ಚಿದಾನಂದ ಸ್ವಾಮಿಯೆನೀನೆಂದು ದರಬಾರನೆ ಕಾಯ್ದರಂದು5
--------------
ಚಿದಾನಂದ ಅವಧೂತರು