ಒಟ್ಟು 14849 ಕಡೆಗಳಲ್ಲಿ , 135 ದಾಸರು , 6533 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದ ನನ್ನದಯ್ಯಾ ಚನ್ನಕೇಶವ ಪ ಲಕ್ಷ್ಮೀಕಾಂತ ಜಾಜಿಪುರೀಶ ನೀನೆ ಕಾಯಬೇಕಯ್ಯಾ ಅ.ಪ ಮನೆಯಾಸೆ ಬಲು ಬಾಧಿಸುತಿದೆ ತನು ಮಡದಿಮಕ್ಕಳ ಮೋಹವೆಂದಿದೆ ಮನದ ಚಪಲತೆ ಸಾಧಿಸು ತಂದೆ ಇನಿತಾಸೆ ಬಿಡಿಸು ಬುದ್ಧನಂತೆ 1 ನಿನ್ನನೆ ನೆನೆವಂತೆ ಮಾಡು ಕೇಶವನೆ ಜನ್ಮವಿದು ಸಾಕು ಕರೆಯೋ ಮಾಧವನೆ ನಿನ್ನ ಪಾದದಲಿಟ್ಟು ಪಾಲಿಸು ಮಧುಸೂದ ನನೆ ಜಾಜಿಪುರಿಯ ಕೇಶವ ಶೆಲ್ವಪಿಳ್ಳೆ 2
--------------
ನಾರಾಯಣಶರ್ಮರು
ಪಾದ ನಾ ನಂಬಿದ ಭಕುತರ ಇಂಬಾಗಿ ಪೊರೆದೆನೆಂತೆಂಬ ವಾರುತಿ ಕೇಳಿ ಪ ದೂರವಾದರೆ ತಾನು ನಾರಿಯ ಮೊರೆ ಕೇಳಿ ಚೀರಿ ಕರೆದಳೆಂದು ಶೀರಿಗಳನೆ ಇತ್ತು ಬೀರಿದನರಿಯಾ ಬಿಂಕವ ಬಿಟ್ಟು ಸೇರಿಕೊ ಹರಿಯ ದಾರಿ ಕಾಣದೆ ವನ ಸೇರಿದ ಕುವರನ್ನ ಸಾರೆಗರೆದು ಸೌಖ್ಯ ಪೂರೈಸಿದನೆಂದು 1 ಕಾಡಾನೆ ವ್ರಜದೊಳು ಕೂಡಿದ್ದ ಗಜರಾಜ ಗಾಡಾಹ ತಾಪದಿಂದ ಬಾಡಿ ನೀರಡಿಸಲು ಗೂಢ ಸರೋವರ ನೋಡಿ ನೀರನೆ ಪೊಕ್ಕು ಆಡಾಲು ಮದದಿ ನಕ್ರನು ಬಂದು ಪೀಡಿಸೆ ಭರದಿ ಮೂಢ ನಾನೆಲೊ ಕೃಷ್ಣ ಮಾಡೊ ರಕ್ಷಣೆಯನ್ನು ಪರಿ ನೋಡಿ 2 ಕಾಸು ಬಾಳದ ಸ್ತ್ರೀಯಳಿಗೆ ಆತನೆ ವಶವಾಗಿ ಹೇಸಿಕಿಲ್ಲದೆ ಅಲ್ಲಿ ತಾ ಸೂನುಗಳ ಪಡಿಯೆ ಸಹ ವಾಸರ ಕಳಿಯೆ ಕಾಲನು ಘೋರ ಪಾಶದಿ ಶಳಿಯೆ ಆ ಸಮಯದಿ ಕೊನೆ ಕೂಸನ್ನೆ ಕೂಗಲುವಾಸುದೇವವಿಠಲ ತಾ ಸಲಹಿದನೆಂದು 3
--------------
ವ್ಯಾಸತತ್ವಜ್ಞದಾಸರು
ಪಾದ ನಾ ನಿಮ್ಮ ಧ್ರುವ ಮಹಾಮಹಿಮೆ ನೀ ದಾನತಹುದೋ ಶ್ರೀ ಅವಧೂತ ಗುಹ್ಯಗುಪಿತ ಶ್ರೀನಾಥ ಸುಹೃದಯದಲಿ ಸಾಕ್ಷಾತ 1 ಅನಾಥರ ಸಹಕಾರ ಮುನಿಜನರ ಮಂದಾರ ಘನಗುರು ಜ್ಞಾನಾಸಾಗರ ದೀನಜನರ ಉದ್ಧಾರ 2 ಮಹಾಗುರು ನಿಜನಿಧಾನ ಬಾಹ್ಯಾಂತ್ರದಲಿ ಪರಿಪೂರ್ಣ ಮಹಿಪತಿ ಜೀವನಪ್ರಾಣ ಇಹ್ಯಪರ ನೀ ಭೂಷಣ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾದ ಪದ್ಮದಲಿಮಾಯೆ ದಾಟಿತು ಮಹಿಮಳೇ ದೇವಿ ಪಕಾಯ ಕರ್ಮಗಳೆಂಬ ಕಾತ್ಯ ಸಮುದಾಯವನುದಾಯದಿಂದಳವಡಿಸಿದೆ ದೇವಿ ಅ.ಪಆಜಸುರಾದಿಗಳಿಂಗೆ ಅಮರಿಸಿಹೆ ಭಾಗ್ಯವನುಭಜಿಸುತಿಹರನವರತವೂ ದೇವಿನಿಜದಿರವನೂ ಕೊಟ್ಟು ನಿಲಿಸಿರಲು ನೀನವರತ್ರಿಜಗ ವಂದಿತರಾದರು ದೇವಿಸುಜನ ವಂದಿತನಾದ ಶ್ರೀಹರಿಯೆ ನೀನಾಗಿರುಜುಕರದಲಾಳುತಿರುವೆ ದೇವಿಕುಜನನಾದರು ನಾನು ಕರವಿಡಿದು ನೀ ಕಾಯ್ದುದ್ವಿಜಜನ್ಮದೆಣಿಕೆದೋರ್ದೆ ದೇವಿ 1ಅಣುಮಾತ್ರವಿರಲಿಲ್ಲ ವಿಷಯ ಭೋಗಕೆ ಬೀಜದಣಿಸಿದುದು ದಾರಿದ್ರವು ದೇವಿಕಣುಗಾಣದಿದ್ದವಗೆ ಕೊಟ್ಟಿಯನ್ನವ ನೀನೆಮಣಿವದನು ಮಾಡ್ದೆ ನೀನೆ ದೇವಿಪ್ರಣತ ರಕ್ಷಾಮಣಿಯೆ ಪರತತ್ವವನ್ನಿತ್ತೆಎಣಿಪುದೆಂತೀ ಮಹಿಮೆಯಾ ದೇವಿಕ್ಷಣಮಾತ್ರ ಪೂಜೆಯನು ಕ್ರಮದಿ ಮಾಡ್ದವನಲ್ಲಭಣಿತೆುದ ಬಗೆವರಾರು ದೇವಿ 2ಪರಿತೃಪ್ತಳಾಗಿರುವೆ ಪರಮಭಾಗ್ಯವನೀವೆನೆರೆ ನೀನೆ ನಿರ್ಮಿಸಿರಲು ದೇವಿಇರಿಸಿದಂತಿರುವರಿಂದೇನಹುದು ಕೊಡುವದಕೆಅರಿಯಲಖಿಳವು ನಿನ್ನದೇ ದೇವಿಮರುಗಿ ನೀನೇ ಕಾಯ್ವೆ ಮಾತೃ ರೂಪಹುದಾಗಿಸುರತರುವಿನುಪಮಾನಳೇ ದೇವಿವರದ ತಿರುಪತಿ ವಾಸ ವೆಂಕಟೇಶನ ರೂಪಧರಿಸಿಹಳೆ ದಿವ್ಯ ಲಕ್ಷ್ಮೀದೇವಿ 3ಕಂ||ಸ್ಥಿರವಾರವಿಂದು ಕೇಶವಸ್ಥಿರವಹುದಿತ್ತಭಯವೆನಗೆ ಭಯವನು ಬಿಡಿಸೈಸ್ಥಿರವಲ್ಲದ ಸಂಸಾರವಸ್ಥಿರವೆಂದೇ ನೊಂದೆನೈಯ ವೆಂಕಟರಮಣಾಓಂ ನಾರಾಯಣಾಯ ನಮಃ
--------------
ತಿಮ್ಮಪ್ಪದಾಸರು
ಪಾದ ಬಿಡಲಾರೆ ಎನ್ನೊಡೆಯ ರಂಗ ಭಾರ ನಿನ್ನಗೆ ಕೂಡಿತು ಪ ನೀನೆ ಚಿಂತಾಮಣಿ ನೀನೆ ಪರುಷದ ಖಣಿ ನೀನೆ ಎನ್ನಗೆ ಧಣಿ ವೇಣುಗೋಪಾಲ 1 ಪಕ್ಷಿವಾಹನ ಲೋಕರಕ್ಷಿಪನು ನೀನೆಲೊ ಅಕ್ಷಯದಿ ದ್ರೌಪದಿಯ ರಕ್ಷಿಸಿದವ ನೀನೆ 2 ಪಾರ ಮಹಿಮನೆ ಸರ್ವಭಾರ ನಿನ್ನದಯ್ಯ ಸೇರಿದೆನು ನಿಮ್ಮ ಪದಕೆ ಮಾರಪಿತ ಶ್ರೀರಾಮ 3
--------------
ರಾಮದಾಸರು
ಪಾದ ಭಜಿಸಿದವಗನವರತವಿಜಯವಾಗುವದಕ್ಕೆ ಸಂದೇಹವ್ಯಾಕೆ ಪ ಗಜರಾಜ ವರದನಿಗೆ ನಿಜದಾಸರೆಂದೆನಿಸಿದ್ವಿಜಕುಲದಲ್ಲಿ ಮೆರೆವರಾ ಯಿವರ ಅ.ಪ. ಭವ ಬಂಧು ಮುನಿವೃಂದಹೃದಯ ಸಂಶಯ ಹೊಂದಲು (ಹೊಂದಿಸಲು)ವಿಧಿ ವಿಷ್ಣು ಶಿವರೊಳಗೆ ಉತ್ತಮರ ತೋರದಲೆಮದಡ ಭಾವವ ವೊಹಿಸಲು ||ಒದಗಿ ಭೃಗುಮುನಿಗಳೇ ಸರ್ವೇಶ ವೈಕುಂಠಸದನನೆಂದರುಹಿದವರೊ ಯಿವರೊ 1 ಪುರಂದರ ದಾಸರಾಗಿ | ಈ |ಮೇದನೀ ತಳಕೆ ಬರಲೂಸಾಧು ಸಮ್ಮತವಾದ ಪದಪಂಚಲಕ್ಷಕೆ (ತ್ರಿ)ಪಾದವೇ ನ್ಯೂನವಿರಲು | ಆ |ಪಾದವನು ಪೂರ್ತಿಪರು ಮತ್ಪುತ್ರರಿವರೆಂದುಆದಿಯಲಿ ಸೂಚಿಸಿರಲೂ ||ಭೂದೇವ ಜನ್ಮದಿಂದಾ ದಾಸರಭಿಲಾಷೆಸಾಧಿಸಿದ ಸದಯರಿವರೊ ಯಿವರೊ 2 ವೀ ಯೆನಲು ವಿಮಲತೆಯು ಜ ಯೆಂದವಗ ಜಯವುಯ ಯೆನಲು ಯಾಗಫಲವುರಾ ಯೆನಲು ರಾಜ್ಯವು ಯ ಯೆನಲು ಯಮಭಟರುನೋಯಿಸರು ಯಿವನ ಕುಲವೂ ||ಈ ಯಾವದಕ್ಷರವ ಓಂಕಾರ ಸಹ ಪಠಿಸೆಕಾಯಭವ ಪಿತನ ಬಲವೊ ||ಜಾಯಾ ಸಮೇತ ಮೋಹನ್ನ ವಿಠಲನ ಪಾದತೋಯಜ ಭ್ರಮರರಿವರೊ ಯಿವರೊ 3
--------------
ಮೋಹನದಾಸರು
ಪಾದ ವನಜ | ಸೂಸಿ ಭಜಿಸಿರೋ |ವ್ಯಾಸ ತೀರ್ಥ ಶಿಷ್ಯರೆಂದು | ಭಾಸಿಸಿದ್ದರೋ ಪ ಪುರಂದರ ಗಡದಿ | ವಾಸರಿದ್ದರಾಪರಮ ಲೋಭಿ ನವ ಕೋಟಿ | ದ್ರವ್ಯವಿದ್ದರಾ 1 ಬಂದ ಕಾರ್ಯ ಮರೆತನೆಂದು | ಹರಿಯು ಚಿಂತಿಸೀಇಂದಿರೇಶ ದ್ವಿಜನಾಗಿ | ಹುಡುಗನಾವೆರಸೀ ||ಬಂದು ಮಗನ ಮುಂಜಿಗಾಗಿ | ಧನವನು ಬಯಸೀ ||ನಂದ ಕಂದ ತಿರುಗುತ್ತಿದ್ದ | ಅಂಗಲಾಚಿಸೀ 2 ಭಿಕ್ಷುಕನ್ನ ಬಿಡದಂತೆ | ಅಂಗಡಿಯಲ್ಲಿಶಿಕ್ಷಿಸೀದ ಆಳುಗಳ | ಲೋಭಿ ತಾನಲ್ಲಿ ||ತ್ರ್ಯಕ್ಷಸೇವ್ಯ ತಿಂಗಳಾರು | ತಿರುಗಿದನಲ್ಲೀಲಕ್ಷಿಸಾದೆ ಮೆರೆಯುತಿದ್ದ | ಕಾಣದಂತಲ್ಲಿ3 ಕಟ್ಟಕಡೆಗೆ ಸವೆದ ನಾಣ್ಯ | ಚೀಲ ವೆಸೆಯುತ್ತಕಟ್ಟು ಮಾಡ್ದ ದುಡ್ಡೊಂದನ್ನು | ಕೊಳ್ಳೆಂದೆನುತ್ತ ||ಅಟ್ಟುಗಳಿಗೆ ಬೇಸರಿಸಿ | ಮುಂದೆ ಹೋಗುತ್ತ |ಥಟ್ಟನ್ಹೋದ ಹಿತ್ತಲಿನ | ಕದವ ಸಾರುತ್ತ 4 ಅಲ್ಲಿನಿಂತ ಲೋಭಿ ಸತಿಯ | ಬಳಿಗೆ ಪೋಗುತ್ತಬಲ್ಲ ಹರಿಯ ಧನವ ಬೇಡ್ದ | ಮುಂಜಿಗೆನ್ನುತ್ತ ||ನಲ್ಲ ಬೈವನೆಂದು ಬೆದರಿ | ಇಲ್ಲವೆನ್ನುತ್ತಚೆಲ್ವ ಸತಿಯು ಪೇಳೆ ಅವಳ | ಮೂಗ್ತಿ ನೋಡುತ್ತ 5 ತವರು ಮನೆಯ ದ್ರವ್ಯದಾನ | ಮಾಡು ನೀನೆಂದಅವಳು ತನ್ನ ಮೂಗುತಿಯ | ಕೊಟ್ಟುದೆ ಛಂದ ||ಇವನು ಅದನ ಸಾಹುಕಾರ್ನ | ಮುಂದಾಕಿ ಅಂದಜವದಿ ನಾನೂರ್ಪಾಕಿ ಹಣ | ತನಗೆ ಬೇಕೆಂದ 6 ನಾಯಕನು ಕೈಲಿ ತೆಗೆದು ನೋಡುತ್ತಲಿರೇಶ್ರೀಯರಸ ಪೋದತಾನು | ಕಣ್ಣಿಗೆ ಮರೇ ||ಕಾಯುತ್ತಿದ್ದ ಆಳು ಹಿಡುಕಿ | ಸಿಗದೆತಾಬರೇನಾಯಕನದ ಭದ್ರಮಾಡಿ | ಸತಿಬಳಿಗೆ ಬರೇ 7 ಬರಿಯ ನಾಸಿಕವ ನೋಡಿ | ಮೂಗ್ತಿ ಎಲ್ಲೆನಲುಸರಿಯ ಪಡಿಸಲಿಕ್ಕೆ ಕೊಟ್ಟು | ಇರುವೆ ನೆನ್ನಲುತ್ವರದಿ ತೋರದಿರೆ ನಿನ್ನ | ಅರೆವೆ ನೆನ್ನಲು |ಬರುವೆ ಬೇಗ ಎಂದು ಪೋಗಿ | ಗರದ ಬಟ್ಟಲು 8 ಕರದಿ ಪಿಡಿದು ತುಳಸಿ ಮುಂದೆ | ಮೊರೆಯ ನಿಡುತಿರೇಗರದ ಬಟ್ಟಲೊಳು ಬಿದ್ದ | ಶಬ್ದವು ಬರೇ ||ಹರುಷದಿ ದಿಗ್ಗನೆ ಎದ್ದು | ಪತಿಗೆ ತಾತೋರೇಗರ ಹೊಡೆದಂತವನಾಗಿ | ಮೋರೆಯ ತೋರೇ 9 ಹೆಂಡತಿಯ ಕೇಳಿ ತಿಳಿದ | ಆದ ಪರಿಯಾಮಂಡೆ ಬಾಗಿ ತಾನು ಆದ | ಹೊಸ ಪರಿಯಾ ||ಕೊಂಡಾಡಿದ ಪತ್ನಿ ಚರ್ಯ | ಹರಿಯ ಭಕ್ತಿಯಬಂಡುಣಿ ಹರಿಪಾದಾಬ್ಜದಿ | ತೊರೆದ ಮನೆಯ 10 ಪಾದ ನಮಿಸೀಬಾರಿ ಬಾರಿ ಹರಿಯ ತತ್ವ | ಕೇಳಿ ಸುಖಿಸೀ 11 ಪುರಂದರ ಸಾರ ಭಾಷೆ | ಪ್ರಾಕೃತ ವೆನಿಸೀ 12 ಮೂರ್ತಿ ಸುಂದರತೊಂಡನಾದ ಮೇಲೆ ತನ್ನ | ಹೃದಯ ಮಂದಿರ ||ಪಿಂಡ ಅಂಡದೊಳಗೆ ಕಂಡು | ಹಿಗ್ಗಿದ ವಿವರ |ಕಂಡವನೆ ಪೇಳ ಬಲ್ಲ | ಅದರ ವಿಸ್ತಾರ 13 ಪೊಂದಿ ಅಪರೋಕ್ಷವನ್ನು | ಸುಜನರುದ್ಧಾರಛಂದದಿಂದ ಮಾಡಿದಂಥ | ದಾಸವರ್ಯರ ||ಅಂದ ಚರಿತೆ ಕೇಳಿ ತೋಷ | ಪೊಂದಿದವರನಂದ ಕಂದ ಪಾಲಿಸುವ | ಬಿಡದೆ ಅವರಾ 14 ಗೋವ ಕಾವ ಗೊಲ್ಲರೊಡೆಯ | ಗೋಪಿಯ ಬಾಲತಾವಕ ಭಕ್ತರ ಪೊರೆವ | ಪಾಂಡವ ಪಾಲಆವ ದಾಸರ ಪೊರೆದಂತೆ ಮೈದುನ ಪಾಲದೇವ ದೇವ ಪೊರೆವ ಗುರು | ಗೋವಿಂದ ವಿಠಲ 15
--------------
ಗುರುಗೋವಿಂದವಿಠಲರು
ಪಾದ ಸಲಹವೆ ಬಿಡಲಾರೆ ಕಲಿತ ಕಲ್ಮಶವನ್ನು ಸುಲಭಾದಿ ಓಡಿಸು ಪ ಅಂದು ಆ ಕರಿರಾಜ ಸರಸಿಲಿವಂದಿಸಿದಾ ಪಾದ ಪಾದ 1 ನಾರಿಯು ನಿನ್ನ ನೆನದಾ ಮಾತ್ರದಿ ಶೀರಿಯ ಮಾಳೇಗರದಾ ಪಾದ 2 ಕಮಲನಾಭ ನೀನು ದೇವರ ದೇವ ಸುಮನಸರೊಡೆಯನು ಅಮಿತ ಮಹಿಮೆ ತೋರಿ ಭ್ರಮೆಯ ಹರಿಸು 3 ಆರು ವೈರಿಗಳು ಮಿತಿಮೀರಿರುವರು ಕೇಳು ನೀರಜಾಕ್ಷಯನ್ನನಾರು ಕಾಯುವರೊ ಧೀರ ನೀನೇ ಪೇಳು 4 ಪೊರೆಯದೆ ಬಿಡದಿರು ಶಿರಿನುತಚರಣವನ್ನು ತೋರು ನರಸಖ ನಿನ್ನಯ ಕರುಣವ ಬೀರು 5
--------------
ಸಿರಿವತ್ಸಾಂಕಿತರು
ಪಾದ ಸೇವೆಯಿಂದಲಿ ಸುಖಿಸೋಳೊ ಲಕ್ಷ್ಮೀಲೋಲ ಪಾಡಿ ತೂಗುವಳೊ ಮೋಹದಲಿ ಯಶೋದ ಯೋಗಿ ಜನರು ಕೊಂಡಾಡಲ್ವಿನೋದ 1 ಜಲಧಿ ಭೂದೇವಿ ಪ್ರಜ್ವಲಿಸುವ ಆಲದೆಲೆಯು ತಾನಾಗಿ ನಿದ್ರೆಹಸಿವು ಬಿಟ್ಟು ನಿರುತದಿ ಆತನ- ಲ್ಲಿದ್ದಳಂಭ್ರಣಿ ಸ್ತೋತ್ರದಲಿ ಭೂದೇವಿ 2 ವಟದ ಎಲೆಯ ಮೇಲೆ ವಟುವಾಗಿ ಮಲಗಿ ಉಂ- ಗುಟವ ಬಾಯೊಳಗಿಟ್ಟು ಮುದದಿ ಚಪ್ಪರಿಸೆ ಕಟುತರದಲಿ ನಾಲ್ಕು ವೇದವ ತೋರುತ ಪಟುತರದಲಿ ಯೋಗನಿದ್ರೆ ಮಾಡಿದನು 3 ಹದಿನಾಲ್ಕು ಲೋಕ ತನ್ನುದರದಲ್ಲಿಡುವ ಪದುಮಾಕ್ಷ ಶ್ರೀಕೃಷ್ಣ ಪರಮಾತ್ಮ ಲಾಲಿ ಅಜಭವಸುರರೆಲ್ಲ ಭಜನೆಯ ಗೈವರು ಮುದದಿ ಶಯನವ ಮಾಡೊ ಮಧು ಮುರಾಂತಕನೆ 4 ಕಡಲಶಯನ ಹರಿ(ಯ) ತೊಟ್ಟಿಲೊಳಿಟ್ಟು ಬಿಡದೆ ನಾರಿಯರೆಲ್ಲ ಪಾಡಿ ತೂಗುವರು ಪೊಡವಿಗೊಡೆಯ ನಿನ್ನ ನಾಮ ಕೊಂಡಾಡಲು ಬಿಡದೆ ಭಕ್ತರ ಕಾಯೊ ಭೀಮೇಶಕೃಷ್ಣ 5
--------------
ಹರಪನಹಳ್ಳಿಭೀಮವ್ವ
ಪಾದ ಕಂಡೆ ಕಂಡೆನು ಕೇಶವಾ ಪ ಪದ್ಮದಳಾಕೃತಿಯಲ್ಲಿರುತಿರುವಂಥ ನಿತ್ಯ ನಿಲಿದಾಡುವಂಥ ಪದ್ಮಾಕ್ಷಿ ಶ್ರೀದೇವಿ ಸೇವಿಸುತಿರುವಂಥ ಮೋದದಿ ಹೃದಯದಿ ನೆಲೆಸಿರುವಂಥ 1 ದುಷ್ಟರ ತಲೆಯನ್ನು ಪಿಡಿದೊತ್ತಿ ತರಿದಂಥ ಭ್ರಷ್ಟರ ಯೆದೆ ಮೇಲಿಟ್ಟುರುವಂಥ ನಿತ್ಯ ಪೂಜಿಸುತಿರುವಂಥ ಶಿಷ್ಟರ ಕಷ್ಟವ ಸಿಗಿದೊಗೆವಂಥ 2 ಅಂಧಕಾರವ ಬೇಗ ಹರಿದು ಪಾಲಿಸುವಂಥ ಸೂನು ಇಚ್ಛಿಸಿದಂಥ ಚಂದದಿ ಬಲಿಯ ಪಾತಾಳಕ್ಕೆ ತುಳಿದಂಥ ಅಂದದಿ ನರನ ಸಾರಥಿಗೊಪ್ಪುವಂಥ 3 ಸುರರು ಕಿಂನರರು ಕಿಂಪುರುಷರೇ ಮೊದಲಾದ ಸುರಗಣ ಸೇವಿಪ ಭಜಿಪ ಪಾದವನು ಸರಸದಿ ಭಕ್ತರ ಸಲಹೆ ರಕ್ಕಸರನ್ನು ತರಿದ ಶ್ರೀ ಚನ್ನಕೇಶವನ ಪಾದವನು 4
--------------
ಕರ್ಕಿ ಕೇಶವದಾಸ
ಪಾದ ಕ್ಕೆರಗಿ ಯಾಚಿಸುತಲೆ ಮುಗಿವೆನು ಕೈಯ್ಯಾನೆರೆ ನಂಬಿದವರನು ಎರವು ಮಾಡಲು ನಿನಗೊಳತೇನಯ್ಯಾ ಪಿಡಿ ಬೇಗನೆ ಕೈಯ್ಯ ಕರದಶಿಗಳರಸನೆ ಕಾಮಿತ ಫಲದನೆ ಕರಿರಾಜನ ಭೀಕರ ಹರ ವೆಂಕಟ ಪ ಆಪಾರ ಮಹಿಮಾ ಆಪದ್ಬಂಧೋ ಆಪನ್ನರ ಪಾಲಿಪ ವ್ಯಾಪಾ ನಿನಗಲ್ಲದೆ ಮತ್ತೊಂದು ಕಾಣೆನೊ ಜಗದೀ ಭೂಪಾನೆ ಭೂಮ್ನ ಗುಣಗಣಸಿಂಧೋ ಸ್ವಾಮಿಯೆ ಎನಗಿಂದು ಪರಿಪಾಲಿಸು ಶ್ರೀಪತಿ ಅಂಜನ ಗಿರಿರಾಜ 1 ಕಲಿಯುಗದೊಳಗೀ ಪರ್ವತಕೆಲ್ಲಿ ಸರಿಗಾಣೆನು ಯೆಂದು ನೆಲಸಿದೀ ನೀನೆ ಈ ಸ್ಥಳದಲ್ಲಿ ವೈಕುಂಠಕಿಂತ ನೆಲೆಯು ವೆಗ್ಗಳವೆಂದು ನೀ ಬಲ್ಲೀ ಅದಕಾರಣ ಇಲ್ಲೀ ತಲೆಯಾಗುವರಯ್ಯಾ ಭಳಿರೆ ಕಾಂಚನ 2 ತರುಜಾತಿ ಮೃಗಪಕ್ಷಿಗಳಾಕಾರ ಮೊದಲಾದ ರೂಪದಿ | ನೂರಾರು ಕಿನ್ನರು ತಮ್ಮ ಪರಿವಾರ ಒಡಗೂಡಿ ನಿನ್ನ ಚರಣಾರಾಧನೆ ಮಾಡಿದ ವಿಸ್ತಾರ ಈ ಬಗೆ ಶೃಂಗಾರ ಸರಿಗಾಣೆನೊ ಹೇ ತಿರುಪತಿ ವೆಂಕಟ ಗಿರಿರಾಜ3 ಹದಿನಾಲ್ಕು ಲೋಕದ ಭಾಗ್ಯಗಳಲ್ಲಿ ಅಮರತತಿಗೆ ಕೊಟ್ಟ ವಿಧವೆಲ್ಲಾ ಪ್ರತ್ಯಕ್ಷವು ಪುಸಿಯಲ್ಲ ನಾನವರ ನೋಡೆ ಅಧಮಾಧಮನು ನೀನೆ ಬಲ್ಲೆಲ್ಲಾ ಎನ್ನ ಯೋಗ್ಯತಯ ಫಣಿ 4 ಸುವರ್ಣ ಮುಖರಿತೀರ ನಿವಾಸ ನವರಾತ್ರಿಯಲ್ಲೀ ಆವ ಬ್ರಹ್ಮೋತ್ಸವ ನೋಡಲು ಶ್ರೀಶ ಸಂಪದವನಿತ್ತು ಪೊ ರವಾನು ಕಲುಷದ ಭಯ ಬರಲೀಸ ಶ್ರೀನಿವಾಸ ಭೂದೇವರ ವರದ5
--------------
ವಿಜಯದಾಸ
ಪಾದ ಚಿಂತನವು ಕ್ಷಣದಲಿ ಶೋಧಿಪುದು ಮತಿಯ ತಾರಕ ಪ ಮೋದತೀರ್ಥರ ಭೇದಮತ ಅನು ವಾದ ಮಾಡಿದ ಶ್ರೀಜಯತೀರ್ಥರ ಅ.ಪ ಈ ಜಗದೊಳಗಿನ ರಾಜಕೀಯದ ಸೋಜಿಗ ಜೀವನವನೆ ತೊರೆದು ರಾಜೀವೋದ್ಭವನಯ್ಯನ ಚರಣಾಂ ಬೋಜ ನಿರತ ಯತಿರಾಜರ ತಾರಕ 1 ಕಾಕುಮತಗಳನೇಕಗಳನು ನಿ ರಾಕರಿಪ ಗ್ರಂಥಗಳನು ರಚಿಸಿ ಲೋಕೋತ್ತರನಿಗೆ ನ್ಯಾಯಸುಧೆಯಭಿ ಷೇಕವ ಮಾಡಿದ ಟೀಕಾಚಾರ್ಯರ 2 ವಿಧಿ ಫಾ ಲಾಕ್ಷನುತ ಶ್ರೀಕೃಷ್ಣನ ಪೂಜಕ ದುಷ್ಟ ಪಕ್ಷ ನಿರಾಸದಲಿ ಅತಿ ದಕ್ಷ ದೀಕ್ಷ ಅಕ್ಷೋಭ್ಯರ ಕುವರರ 3
--------------
ವಿದ್ಯಾಪ್ರಸನ್ನತೀರ್ಥರು
ಪಾದ ನಿತ್ಯ 1 ವಾಸುದೇವ ನಿನಗೆ ಒಲಿವ ತಾ ಭಾಸುರ ಕೀರ್ತಿ ತರುವ ಬೇಸರಿಸದೆ ಭಾಸಿ ಪಂಥದಿ ವಾಸುದೇವದಾಸರ ಸೇವಿಸು 2 ಕರುಣ ತೋರಿ ಸಲಹುವಂಥ ಗರುಡಗಮನನಿರಲು ನೀನು ಅರಿಯದಂತೆ ಇರಲು ನಿನ್ನ ಮರುಳು ಮನವೆ ಕಾರಣಿದಕೆ 3 ಕೂಡು ಸಜ್ಜನ ಸಂಗ ತವಕದಿ ಜಾಡುಕೋರ್ವ ಹರಿಭಕ್ತರ ನೋಡು ನಿನ್ನಕ್ಷಿ ತೆರೆದು ಮನುಜ 4 ಜಗಜನ್ಮಾದಿ ಕಾರಣ ಅಘಟನಘಟನಾದ ಹರಿಯ ಮಿಗೆ ಧ್ಯಾನವಿಟ್ಟು ಮನವೆ 5 ಸಲ್ಲ ದುರ್ಜನರಾಸಂಗವು ಸಜ್ಜನರಿಗೆ ಅಲ್ಲ ತಿಂದ ತಿಮ್ಮನಂದದಿ ಬೆಲ್ಲ ಬೇವಿನಂತೀ ಸಂಸಾರದಲ್ಲಿ ಸಿಲುಕಬೇಡ ಮನವೆ 6 ಹರುಷದಿಂದ ಜಡದೇಹದೊಳಗಿಹ ಶ್ರೀ ಹರಿ ಎಂದರಿದು ಪರರ ವಾರ್ತೆ ಆಡದೆ ಪರಮಪುರುಷ ಹರಿಯ ನೆನೆ ಮನುಜ 7 ಹದಿನಾಲ್ಕು ಲೋಕದೊಡೆಯ ಒದಗಿರಲು ನಿನ್ನ ಸಾಕೆ ಬರಿದೆ ಚಿಂತೆ ಮಾಡಬೇಡ ಸ್ಮರಿಸು ಹರಿಯ ಚರಣವನ್ನು8 ಸ್ವಕಾರ್ಯ ಸ್ವಾಮಿಕಾರ್ಯ ನಿನ್ನ ಅಖಿಲ ಕಾರ್ಯಾಂಗತನು ಹರಿಯು ಸಖನಂತೆ ಸಲಹುತಿರಲು ಸುಖಿಸು ಅವನ ದಾಸನೆಂದು 9 ಪಾದ ನಿತ್ಯ ಸಂಗ 10 ಸಕಲರಲ್ಲು ಅವನೇ ನಿಂತು ಸಲಹುವನೆಂದರಿತು ನೀ 11 ನಿತ್ಯ ಅಜ್ಞಾನವನ್ನು ಪರಿಹರಿಸುತ ನಿತ್ಯ ವಂದಿಸು ಮನದಿ 12 ಪಾದ ಧ್ಯಾಸದಿಂದ ಅರಿತೆನಲದೆ ಎಂದರಿತು 13 ಪ್ರಾಣನಾಥನೊ ಹರಿ ಶ್ರೀ ರಾಮಚಂದ್ರನೆಂದು ಅರುಹಿಕೊಟ್ಟು ಸಲಹುವರ 14 ತ್ರಿವಿಧ ಜೀವರಿಗೆ ಹರಿಪರದೈವನೆಂದರುಹಿದ ಪರಮಗುರು ಮತವ ಬಿಟ್ಟು 15
--------------
ಸರಸ್ವತಿ ಬಾಯಿ
ಪಾದ ನೆನೆವ ದಾಸರ ಕಾಮಧೇನು ನೀನಹುದೊ ಪ ಎಂದು ಕಾಂಬೆನು ನಿನ್ನ ಸುಂದರ ಮೂರುತಿಯ ನೆಂದು ಬಯಸುತಲಿರ್ದೆ ಸಂಧಿಸಿತಿಂದಿಗೆ 1 ಕಮಲನಾಭನೆ ನಿನ್ನಯ ಅಮರ ಮಹಿಮೆ ಕಾಣ್ವ ಭ್ರಮೆಯಪಡುತಲಿರ್ದೆ ಕ್ರಮದಿ ಸಾಧಿಸಿತಿಂದು 2 ಚಿನುಮಯ ಶ್ರೀರಾಮ ಘನ ಮಂದಮತಿ ನಾನು ನೆನವು ಮರೆದೆ ಕ್ಷಮಿಸಿ ಕನಿಕರದಿ ಕಾಯೊ 3
--------------
ರಾಮದಾಸರು
ಪಾದತೋರೋ ಪದ್ಮಾಕ್ಷ ಬಾರೋ ಪ. ಪಾದಪದ್ಮವ ತೋರೋ ಪದ್ಮಾಕ್ಷ ಬಾರೋ ಆದಿಮಧ್ಯಾಂತ ಸ್ವರೂಪ ಮೈದೋರೋ ಅ.ಪ. ಬಲಿಯನ್ನು ತುಳಿದಂಥ, ಭೂಮಿಯನಳೆದಂಥ ಶಿಲೆಯಾಗಿದ್ದವಳ ಕಲುಷವ ಕಳೆದಂಥ 1 ಶಿಶುರೂಪದಿಂದಲೆ ಶಕಟನ ಒದ್ದಂಥ ಶಶಿಮುಖಿಯಶೋದೆಗೆ ಶಿಶುವೆನಿಸಿ ಮೆರೆದಂಥ 2 ಗೊಲ್ಲರ ಮನೆಮನೆಗೆ ಕಳ್ಳನಂದದಿಪೊಕ್ಕು ನಲ್ಲೆಯರ ಕೈಪಿಡಿಗೆ ನಿಲ್ಲದೋಡುವ ಮುದ್ದು 3 ಕಾಳಿಂಗನ ಫಣೆಯೊಳ್ ಕೋಲಾಹಲದಿ ಕುಣಿದ ಕಾಳಿಂಗನರಸಿಯರಿಗೆ ತಾಲೀ ಭಾಗ್ಯವನಿತ್ತ4 ಕರುತುರುಗಳ ಮರೆಸಿ ದೊರೆ ನಿನ್ನರಸಿದ ಪರಮೇಷ್ಠಿಯೆ ತನ್ನ ಕರದಿಂ ಪೂಜಿಸಿದಂಥ 5 ಮಾವ ಕಂಸನ ಕೊಂದು ತಾಯಿ ದೇವಕಿ ವಸುದೇವಸುತ ವಾಸುದೇವನೆಂದೆನಿಸಿದ 6 ಸಿರಿದೇವಿಯೇ ನಿಜಕರಗಳಿಂದೊತ್ತುವ ಪರಮಪಾವನ ಪದಸರಸೀರುಹ 7 ವರಶೇಷಗಿರಿದೊರೆ ಶರಣರ ಮರೆವರೆ ಶಿರಬಾಗಿ ಬೇಡುವೆ ಭರಿಸೆನ್ನನೆನುವೆ 8
--------------
ನಂಜನಗೂಡು ತಿರುಮಲಾಂಬಾ