ಒಟ್ಟು 7928 ಕಡೆಗಳಲ್ಲಿ , 135 ದಾಸರು , 4955 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನಸಿನ ಮಲಿನವ ಮನಸೀಜನೈಯನೆ ಹನನ ವೈದಿಸದಿರೆ ಬದುಕುವ ದೆಂತೊ ಪ ವನಜ ಸಂಭವ ಜನಕ ತನುಮನ ಪ್ರೇರಕ ಮಾನವ ನಾನು ಶರಣುಹೊಕ್ಕೆನೈಯ ಅ.ಪ ಸ್ನಾನ ಸಂಧ್ಯಾನುಷ್ಠಾನ ವೇನು ಗೈದವನಲ್ಲ ಹೀನ ಸ್ತ್ರೀಯರ ಧ್ಯಾನ ಘಳಿಗೆ ಬಿಟ್ಟವನಲ್ಲ ಧಾನ ಧರ್ಮಗಳೊಂದು ಮಾಡಿಕೊಂಡವನಲ್ಲ ಗಾನದಿಂದಲಿ ಹರಿನಾಮವಾದರು ಪಾಡಲಿಲ್ಲ ದೀನಜನಮಂದಾರ ಕರುಣೋದಾರ ಮಹಿಮನೆ ಮಾನಮತ್ತವಮಾನ ನಿನ್ನಾಧೀನ ವಲ್ಲವೆ ತನುಮನೇಂದ್ರಿಯ ನಾಥ ನಾಯಕ ನೀನೇ ಆಗಿರೆ ಎನ್ನ ದೇನಿದೆಬರಿದೆ ದೂರದೆ ಸಾನುರಾಗದಿ 1 ನೋಡಬಾರದ ನೋಟ ನೋಡಿ ಆಯಿತು ಜೀಯ ಮಾಡಬಾರದ ಬಯಕೆ ಮಾಡಿದ್ದಾಯಿತು ಸ್ವಾಮಿ ಕೂಡಬಾರದ ಕೂಟ ಕೂಡಿದ್ದಾಯಿತು ತಂದೆ ಈಡುಕಾಣೆನು ನನ್ನ ಕೇಡು ಕರ್ಮಕೆ ಇಂದು ಗಾಡಿಕಾರ ನಿಗೂಢ ಹೃದಯಗ ಬೇಡಿ ಕೊಂಬೆನು ಪ್ರೌಡ ಭಕ್ತರಗಾಢ ಪ್ರೇಮದಿ ಕೂಡಿಸುತ ತಿಳಿ ಗೇಡಿಯೆನಿಸದೆ ವೇದ ಸಮ್ಮತ ಗಾನ ಜೋಡಿಸಿ ಹಾಡಿ ಹಾಡಿಸೆ ಭಾಢ ಮಹಿಮೆ ವಿಶೇಷ ನಿನ್ನದು 2 ಮುಂದು ಮಾಡುತ ಹಿಂದೆ ಇಂದು ಕಂದನಲ್ಲವೆ ನಾನು ಎಂದೆಂದು ನಿನಗೆ ಇಂದಿರೇಶನೆ ನಿನ್ನಮೀರಿಕರ್ಮವಮಾಡೆ ಎಂದಿಗಾದರು ಸಾಧ್ಯವಾಹುದೆ ನನಗೆ ತಂದೆ ಜಯಮುನಿವಾಯು ಹೃದಯಗ ನಂದಮಯ ಶ್ರೀ ಕೃಷ್ಣವಿಠಲ ನಿಖಿಳ ವಿಶ್ವಕೆ ಕುಂದುಮಯ ಅಭಿಮಾನ ಮನಸಿಗೆ ತಂದಿಡದೆಯೆಂದೆಂದು ಸಲಹುತ ಕುಂದು ಗೈದವನೆಂದು ನುಡಿಯದೆ ಪಥ 3
--------------
ಕೃಷ್ಣವಿಠಲದಾಸರು
ಮನಸಿನನುತಾಪವನು _ ಪರಿಹರಿಸು _ ಹರಿಯೇ ಪ ವನಜ ನಾಭನು ನೀನೇ ಮನದ ಪ್ರೇರಕನಲ್ಲವೇ ಅ.ಪ. ಅನುದಿನದಿ ಧನವನಿತೆ _ ಎಂತೆಂಬ ಕಾನನದಿ ಮನಸು ಮಾಡೀ ಬಹಳ _ ಶ್ವಾನನಂದದಿ ತಿರಿದೇ ಕನಸಿಲಾದರು ನಿನ್ನ _ ಧ್ಯಾನವನು ಮಾಡದೆಲೆ ಮನುಜ ಪಶುವೆನಿಸಿದೆನು _ ದೀನವತ್ಸಲ ಸ್ವಾಮಿ 1 ಸಂಸಾರ ವೆಂಬುವುದು _ ಹಿಂಸೆರೂಪವೆಸಿದ್ಧ ಹಂಸರೂಪಿಯ ಮರೆತ _ ಸಂಶಯಾತತಜನಕೆ ಧ್ವಂಸ ಗೈಸಿ ವಿಷಯ _ ವಾಸನೆಯ ತರಣಿಯನು ಶೌರಿ _ ದಾಸನೆನ್ನನು ಮಾಡಿ2 ಜ್ಞಾನ ತಿರುಳನು ತಿಳುಹಿ _ ಧ್ಯಾನಬಗೆಯನು ಅರುಹಿ ಮಾನಾಭಿಮಾನವನು _ ನಿನಗೆ ಸಮರ್ಪಿಸಿ ಸು ಜ್ಞಾನಿಗಳ ಸಹ ಶ್ರೀ ಕೃಷ್ಣವಿಠಲನ ನಿತ್ಯ ಗಾನದಲಿ ಮೆಚ್ಚಿಸುವ ಭಾಗ್ಯ ಶೀಲನ ಮಾಡೀ 3
--------------
ಕೃಷ್ಣವಿಠಲದಾಸರು
ಮನುಜದನುಜ ರಿವರೆವೆ ನೋಡಿ | ದನುಜನು ದೈತ್ಯರೊಳೆನ ಬ್ಯಾಡಿ ಪ ಹರಿ ನೆನೆಯುತ ಹರಿಕಥೆಗಳ ಕೇಳುತ | ಹರಿ ಭಕುತಿಗೆ ಬೆರೆದವ ಮನುಜಾ | ನಿರುತ ಆಹಾರ ನಿದ್ರೆ ಚರಟ ಮಾತುಗಳಾಡಿ | ಬರಿದೆವೆ ದಿನಗಳೆವವ ದನುಜಾ 1 ಪರರ ಸದ್ಗುಣ ವಾಲಿಸಿಕೊಳುತಲಿ | ಸಕ | ಲರಿಗೆ ಮನ್ನಿಸುವವನೇ ಮನುಜಾ | ಗರುವ ಹಿಡಿದು ತನ್ನ ಹೊಗಳುತ ಅನ್ಯರ | ಬರಿದೆ ನಿಂದಿಸುವವನೆ ದನುಜಾ 2 ಪಥ | ಸರ್ಕನೆ ತಿಳಿದವ-ನೆವೆ ಮನುಜಾ | ಮೂರ್ಖತನ ಹಿಡಿದು ಸಾಧು ಸಂತರಲಿಕು | ತರ್ಕವ ಮಾಡುವವನೆ ದನುಜಾ 3 ಹುಟ್ಟಿದರಲಿ ಸಂತುಷ್ಟದಿ ಕವಳವ | ನಿಷ್ಠೆಗೆ ತಾರದವನೆ ಮನುಜಾ | ನೃಪರ ನಂಬಿ ಲಾಭಾ ಲಾಭ ಕೊಡುವ | ಸೃಷ್ಟೀಶನನು ಮರೆತವ ದನುಜಾ 4 ತಂದೆ ಮಹಿಪತಿ ಭೋಧವ ಮನದಲಿ | ತಂದು ಹರುಷವ ಪಡುವವ ಮನುಜಾ | ದಂದುಗ ಚಿತ್ತದಿ ಹೇಳಿದ ಮಾತಿಗೆ | ಸಂದೇಹ ಬಟ್ಟವನವ ದನುಜಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನುವಂಶ ಜಲಧಿಜಾತೆ ಸೀತೆ ಪೊರೆಯೆ ಜಾನಕಿ ಘನ ಪುಣ್ಯವಿನಯೆ ದಿವ್ಯರೂಪೆ ಜನನಿ ಭಾಮಿನಿ ಪ ರಾಮಚಂದ್ರ ಭಾಸಮಾನ ಹೃದಯ ಕುವಲಯೆ ಕಾಮದಗ್ಧ ದನುಜನಯನ ಕಾಲರೂಪಿಣಿ 1 ಲಕ್ಷ್ಮಣಾದಿ ಭಕ್ತಪಾಲೆ ನಿತ್ಯರೂಪಿಣಿ ಚಿತ್ತದಲ್ಲಿ ನೆಲಸು ದೇವಿ ತತ್ವಭೂಷಿಣೆ 2 ಆದಿಶಕ್ತಿ ಭೇದರಹಿತೆ ಮೋದದಾಯಕಿ ಮಾಧವಾಂಘ್ರಿ ಯುಗಳ ಸೇವೆಯನ್ನು ಕರುಣಿಸು 3 ಭೂಮಿತನಯೆ ಭೂಮ ಮಹಿಮೆ ಕಾಮಿನೀ ರಮೆ ಸಾಮಜಾಕರೋರು ಯುಗಳೆ ರಾಮ ಸುಂದರಿ4 ಪಂಕಜಾದಿ ಕುಸುಮಲೋಲೆ ಶಂಕರೀಪ್ರಿಯೆ ಅಂಕದಲ್ಲಿ ಪೊರೆಯೆ ಮಾತೆ ಪಂಕಜಾನನೆÀ 5
--------------
ಬೇಟೆರಾಯ ದೀಕ್ಷಿತರು
ಮನೆಗೆ ಬಾರೋ ಕೃಷ್ಣ ಬೇಗನೆ ಪ ವನಿತೆಯರಕೋ ಓಡಿ ಬರುತಿಹರು ಅ.ಪ. ಕೊಳಲಿನ ಧನಿ ಕೇಳಿ ಹೆಂ_ಗಳು ನಲಿದು ಮೋಹತಾಳಿಸುಳಿದು ನಿನ್ನೆತ್ತಿಕೊಳುತಲೊಯ್ವರುಗಲ್ಲವ ಚುಂಬಿಸಿ ನುಗ್ಗು ಮಾಡುವರೊ 1 ಘಾಸಿ ಮಾಡಿ 2 ಚೆನ್ನಿಗ ಹೇಳುವೆನು ಎಂದುಗುನಿನ್ನನು ಬಿಟ್ಟರೇನುಉನ್ನತ ಗದುಗಿನ ವೀರನಾರಾಯಣಚೆನ್ನಾಗಿ ದಢದಢ ಹೆಜ್ಜೆಯನಿಕ್ಕುತಾ 3
--------------
ವೀರನಾರಾಯಣ
ಮನೆಗೆ ಬಾರೋ ರಂಗ ಮನಸಿಜಯ್ಯನೆ ನೆನವು ಬಿಡದು ಎನ್ನ ಕಣ್ಣಿನೊಳಗೂ ನಿನ್ನ ಪ ಮನಗೆ ಬಾರೋ ರಂಗ ಮನೆಗೆ ಬಾರೋ ಕೃಷ್ಣ ಮನಗೆ ಬಾರೋ ರಾಮ ಅ.ಪ ಮನಗೆ ಬಂದರೆ ನಿನ್ನ ಮಹಿಮೆಯ ಪಾಡುತ ಮನ ದಣಿವಂದದಿ ಕುಣಿದೇನೊ ರಂಗಯ್ಯ 1 ಮನೆಯು ನಿನ್ನದು ಎನ್ನ ತನುವು ನಿನ್ನದು ಮುನ್ನ ಧನವು ನಿನ್ನದು ಎನ್ನ ಘನವು ನಿನ್ನದು ರನ್ನ 2 ದರಹತಿತಾನನ ಸರಸಿಜನಯನ ವರದವಿಠಲ ಪುಲಿಗಿರಿ ವರಸದನ 3
--------------
ವೆಂಕಟವರದಾರ್ಯರು
ಮನೆಗೆ ಬಾರೋ ರಂಗ-ಮನಸಿಜನಯ್ಯನೆ ಕಣ್ಣಿನೊಳಗೂ ನಿನ್ನನೆನಹು ಬಿಡದುಯನ್ನ ಪ ಮನೆಗೆ ಬಾರೋ ರಂಗ-ಮನೆಗೆ ಬಾರೋ ಕೃಷ್ಣ ಮನೆಗೆ ಬಾರೋ ರಾಮ ಅ.ಪ ಮನೆಗೆ ಬಂದರೆನಿನ್ನ ಮಹಿಮೆಯ ಪಾಡುತ ಮನದಣಿವಂದದಿ ಕುಣಿದೇನೊ ರಂಗಯ್ಯ 1 ಮನೆಯು ನಿನ್ನದು ಯನ್ನ ತನುವು ನಿನ್ನುದು ಮುನ್ನ ಧನವು ನಿನ್ನದುಯನ್ನ ಘನವು ನಿನ್ನದು ರನ್ನ 2 ದರಹಸಿತಾನನ-ಸರಸಿಜನಯನ ವರದವಿಠಲ ಪುಲಿಗಿರಿವರಸದನ 3
--------------
ಸರಗೂರು ವೆಂಕಟವರದಾರ್ಯರು
ಮನ್ನಿಸಯ್ಯ ಮದನಜನಯ್ಯ ಘನ ಮುನ್ನೀರಶಯ್ಯ ಸ್ವಾಮಿ ಹಯವದನರಾಯಾ ಪ ಬಾರಿಬಾರಿಗೂ ಈತನ ಮಂದಿರದಲಿ ನಿನ್ನ ಚೆನ್ನಿಗ ರೂಪವ ತೋರೋ ನಿನ್ನ ಕರುಣದಿ ಅ.ಪ. ಈಶಾ ಭವಪಾಶಾ ಎಂಬೋ ಬೀಸಿದ ಬಲೆಯೊಳು ಗಾಸಿಗೆರೆದೆನೂ ರಂಗಾ ಕೃಪಾರಿಣ ವಾಸಿ ಪಂಥಗಳು ವಾಸುದೇವನೆ ಲೇಸ ಮಾರ್ಗವ ಕಾಣೆ ನಿನ್ನಾಣೆ ದಾಶರಥಿಯೇ ನಿನ್ನ ದಾಸರ ಕೂಡಿ ಸಂತೋಷಪಡುವ ಸಿರಿಯೆನಗಿತ್ತು ಸಲೆ ಮೀಸಲವ ಮಾಡೋ ದೇವರ ದಯಾಳೊ1 ಪಂಚಭೂತಗಳಲಿ ಪಂಚಾಗ್ನಿಗಳಲಿ ಪಂಚದ್ವಿಗುಣ ಪಂಚರಲಿ ಮತ್ತೆ ಪಂಚಪ್ರಾಣದಲಿ ಪಂಚವಿಂಶತಿ ಮಾರ್ಗ ತೋರೋ ಶ್ರೀಕಾಂತಾ ಪಂಚ ಹಿಡಿಸಿ ಪಂಚೊಂದೋಡಿಸಿ ಪಂಚನಾಲಕು ಭಕ್ತಿ ಕೊಂಚವಾಗದ ಹಾಗೆ ಸಂಚಿತಾಗಮಾ ಮುಂಚೆ ಓಡಿಸೋ ಶ್ರೀವತ್ಸಲಾಂಛನನೇ2 ಶ್ರೀನಿವಾಸನೇ ನಿನ್ನ ಧ್ಯಾನಮಾತ್ರದಿ ಬರುವೋ ಬಿಗನು ಅಘನಾಶÀನವೆಂದೊ ನಾನಿಂದೂ ಬೆಂಬಿದ್ದ ಅಬಲನ ಮನ್ನಿಸೋದಲ್ಲದೆ ಹೀಗೆ ಮುನಿಸೋರೇನೋ ಶ್ರೀಹರೆ ನಿನ್ನ ಸನ್ನಿಧಿಗೊಪ್ಪಿಸಿದೆನೊ ಮನ ಬಂದುದು ಮಾಡೊ ಘನತೆ ನಿನ್ನದು ದೇವಾ ದೀನ ದಯಾನಿಧೆ ಉರಗಾದ್ರಿವಾಸಾ 3
--------------
ಮಹಾನಿಥಿವಿಠಲ
ಮನ್ನಿಸಿ ಸಲಹಯ್ಯ ಎನ್ನ ತಪ್ಪು ಒಪ್ಪಿಕೊ ಮಹರಾಯ ಪ ಮನ್ನಿಸಿ ಸಲಹಯ್ಯ ಪನ್ನಂಗಶಯನನೆ ನಿನ್ನ ಧ್ಯಾನಾಮೃತವನ್ನು ಕರುಣದಿತ್ತು ಅ.ಪ ನಾನಾಜನುಮ ಸುತ್ತಿ ಮತ್ತೆ ಹೀನ ಜನುಮವೆತ್ತಿ ಜ್ಞಾನವಿನಿತಿಲ್ಲದೆ ನಾನಾಪಾಪಗೈದೆ ದೀನಜನರ ಬಂಧು ನೀನೆ ಕ್ಷಮಿಸು ತಂದೆ 1 ಮರವೆ ದೇಹವೊದ್ದು ಸಂಸಾರ ಮರವೆಯೊಳಗೆ ಬಿದ್ದು ಶರಣ ಸತ್ಪುರುಷರ ನೆರವಿನಿತರಿಯದೆ ಮರುಳನಾದೆ ಹರಿ ಮುರಹರ ಕ್ಷಮಿಸಯ್ಯ 2 ಬರಬಾರದು ಬಂದೆ ಬಲು ವಿಧ ದುರಿತದೊಳು ಬೆಂದೆ ಕರುಣದಿ ಕ್ಷಮೆಮಾಡಿ ಪೊರೆಯೊ ಶ್ರೀರಾಮನೆ 3
--------------
ರಾಮದಾಸರು
ಮನ್ನಿಸು ಮಾರಾರಿ ಮುದದಿಂದಲಿ ಎನ್ನ | ಯಿನ್ನು ದುರಿತಗಳನ್ನ ಹಾರಿಸಿ | ಎನ್ನನನುದಿನ ಪ ಅಮಿಶ್ರ ತತ್ವದಲಿ ಕಲಿ ವಿರಹಿತ ರುದ್ರ | ಹಮ್ಮಿನಿಂದಿತ್ತ ಸರ್ವವ ನೋಳ್ಪನೆ | ಬೊಮ್ಮನಾ ತತ್ವದಲಿ ಹೋಗಿಬರುವ ಪ್ರಬಲ್ಯ | ಉಮ್ಮೆಯರಸಾ ತಾಮಸ ಕಾರ್ಯದಧಿಪತಿ | ಒಮ್ಮೆ ಬಿಡದಲೆ ನರಹರಿಯ ನಾ | ಮಾಮ್ಮರತ ಮನದಲಿ ನೆನಸುವ ಸುಖದಿಂದಲಿ | ಅಮ್ಮಹಾ ವೈರಾಗ್ಯ ಭಾಗ್ಯವ | ಕಮ್ಮರದಿ ಕೊಡು ಕರುಣದಿಂದಲಿ 1 ನಂದಿವಾಹನ ನಾಗತಲ್ಪ ಕಲ್ಪಾಂತರ | ಚಂದಿರಮವ್ಯಾಳಿ ಚರ್ಚಕನಾಯಕ | ಕುಂದುಗೊರಳ ನೀಲಕಂಠಾಗಮನೈಯ್ಯ | ವಂದೀರೈದು ಸ್ಥಾನ ವಾಸವಾದ್ಯ || ಇಂದು ನಿನ್ನ ಪಾದದ್ವಂದ್ವ ನಂಬಿದೆ | ನಿಂದಕರ ಸಂಗತಿ ಸಂಗತಿಯಲಿಡದಲೇ | ಪೊಂದಿಸೋಮ ಜನರೊಳಗೆ ಎರ | ಡೊಂದುಪುರ ವಿನಾಶಾ ಈಶಾ 2 ನಿಖಿಳ ಶಾಂತ | ನಿಟಿಲನೇತ್ರ | ಮಂಗಳಾಂಗ ಶ್ರೀ ವಿಜಯವಿಠ್ಠಲನ | ಹಿಂಗದೆ ಮನದಲ್ಲಿ ನೆನೆಸುವರ | ಸಂಗಸುಖ ಸರ್ವದಾ ಸುಜನಪಾಲಕ | ಪೊಂಗರ್ಭಸುತ ಪತಿತ ಪಾವನ 3
--------------
ವಿಜಯದಾಸ
ಮನ್ನಿಸೆನ್ನ ಮಧುಸೂದನ ಪ. ಮದನನಯ್ಯ ಮೋಹನಕಾಯಉನ್ನತಗುಣನಿಲಯ ಉಡುಪಿನ ಕೃಷ್ಣರಾಯ ಅ.ಪ. ಶ್ರುತಿಗಳ ತಂದೆ ಮುನ್ನ ಸುರಮುನಿಗಳ ಮನ-ಕತಿ ಹರುಷವ ಕೊಟ್ಟೆ ಅಗಣಿತಗುಣರನ್ನಯತಿಗಳ ಪಾಲಿಸಿದೆ ಮುಂದುವರಿವದಿತಿಜರ ಸೋಲಿಸಿದೆ ಈ ಮಹಿಯೊಳುಮತಿವಂತರ ಪೊರೆದೆ ಮಹಿಮೆಯಿಂದ ಮೆರೆದೆ1 ಅಚ್ಚಹಾರಶೋಭಿತ ಕಂಠ ಆಶ್ರಿತರಿಗೆ ನೀ ನಂಟಮೆಚ್ಚಿದ ಪಾರ್ಥನ ಮಿತ್ರನೆನಿಸಿದೆ ಸುಚರಿತ್ರಮೆಚ್ಚಿದ ನಿನ್ನಯ[ಭಕ್ತÀ್ತ]ವೈಕುಂಠದಮುಚ್ಚಳ ತೆಗೆಸಲು ಶಕ್ತ ಅಚ್ಚುತ ನಿನ್ನಅರ್ಚಿಸಿದವ ಕೃತಾರ್ಥ ಅವನೆ ಸರ್ವಸಮರ್ಥ2 ಎಂದೆಂದು ನಿನ್ನವರೊಳು ಎನ್ನ ಕೂಡಿಸೊ ಕೃಪಾಳುವಂದ್ಯ ಗರುಡನ ಸ್ಕಂಧವೇರಿ ಬಹ ಗೋವಿಂದತಂದೆ ನೀನೆ ತಾಯಿ ನೀನೆ ಹಯವದನಬಂಧು ನೀನೆ ಬಳಗ ನೀನೆ ಮತ್ತದರಿಂದಕುಂದುಮಾಡುವುದು ಬಿಡೋ ಕಂಡು ಕರುಣವ ಮಾಡೋ 3
--------------
ವಾದಿರಾಜ
ಮನ್ನಿಸೈ ಹರಿ ಪನ್ನಗೇಂದ್ರಶಯನ ಪ ಘನ್ನವಾದ ಪಾಪವನ್ನು ಮಾಡಿ ಜಗದಿ ನಿನ್ನ ನಾಮ ಮರದೆ ಸನ್ನುತಾಂಗ ಸಲಹೊಅ.ಪ ಜ್ಞಾನ ಶೂನ್ಯವಾಗಿ ನಾನಾ ವಿಷಯಗಳಲಿ ನಾನು ನನ್ನದೆಂಬ ಹೀನ ಮಮತೆಯಿಂದ ದಾನವಾರಿ ನಿನ್ನ ಧ್ಯಾನಿಸದಲೆ ಕಾಲ ಸಾನುರಾಗದಿಂದ ಶ್ವಾನನಂತೆ ಕಳೆದೆ 1 ರೋಗಹರನೆ ಭವದ ರೋಗವೈದ್ಯನೆಂದು ಬಾಗಿ ನಿನ್ನನುತಿಪೆ ನಾಗಾರಿವಾಹನ ಯೋಗಿವಂದ್ಯನೆ ಚನ್ನಾಗಿ ನಿನ್ನ ಸ್ತುತಿಪ ಭಾಗವತರ ಸಂಗ ದೇವ ಪಾಲಿಸಯ್ಯ 2 ರಕ್ಷಿಸೆಮ್ಮ ಬಿಡದೆ ಲಕ್ಷ್ಮಿರಮಣದೇವ ಕುಕ್ಷಿಯೊಳಗೆ ಜಗವ ರಕ್ಷಿಸುತ್ತ ಪೊರೆವ ಸೂಕ್ಷ್ಮ ಸ್ಥೂಲದೊಳು ಪ್ರತ್ಯಕ್ಷನಾದ ಹರಿ ಉ- ಪೇಕ್ಷಿಸದಲೆ ಕಾಯೋ ಪಕ್ಷಿವಾಹನ ದೇವ 3 ಕಡಲೊಡೆಯನೆ ದೇವ ಮೃಡನ ಸಖವೆ ಕಾಯೊ ಅಡಿಗಡಿಗೆ ಸ್ತುತಿಸಿ ಬಿಡದೆ ಮುಗಿವೆ ಕಯ್ಯ ಎಡಬಲದಲಿ ಶ್ರೀ ಭೂಮಡದೇರಿಂದ ಮೆರೆವ ಉಡುಪ ಮುಖನೆ ಕಾಯೋ ಕಡಲೊಡೆಯನೆ ರಂಗ 4 ಕಮಲಪತ್ರದಳಾಕ್ಷ ಕಮಲಜೋದ್ಭವೆ ಪ್ರಿಯ ಕಮಲಸಂಭವ ಜನಕ ಕಮನೀಯ ಸ್ವರೂಪ ಕಮಲನೇತ್ರೆರ ರಸಕಮಲಪುಷ್ಪಮಾಲಾ ಹೃ- ತ್ಕಮಲದೋಳು ಶೋಭಿಪ ಕಮಲನಾಭ ವಿಠ್ಠಲ 5
--------------
ನಿಡಗುರುಕಿ ಜೀವೂಬಾಯಿ
ಮನ್ನಿಸೊ ನೀ ಎನ್ನ ಮಧ್ವಮುನಿರನ್ನಚೆನ್ನಿಗ ಶ್ರೀಹರಿಪಾದ ಸೇವಕನೆ ಪ. ಅಂಜನೆಯ ಗರ್ಭ ಪರಿಪೂರ್ಣಚಂದ್ರಮನೆಕಂಜಪ್ರಿಯಸುತನಿಗೆ ಕಲ್ಪತರು ನೀನೆರÀಂಜಿಸುವೆ ಶ್ರೀರಾಮಚಂದ್ರನ್ನ ಸೇವಕನೆಸಂಜೀವಗಿರಿಯನು ತಂದ ಮಹಾತ್ಮನೆ 1 ಅರ್ಜುನನಿಗೆ ಅಣ್ಣನಾಗಿ ಅಖಿಲ ದಿಕ್ಕೆಲ್ಲವನುಲಜ್ಜೆಯನು ಕೆಡಿಸಿ ಷಡ್ರಥಿüಕರನು ಜರಿದೆಮೂಜಗವು ಮೆಚ್ಚಲು ಮಾಗಧನ ಸೀಳಿದೆಸಜ್ಜನಪ್ರಿಯ ಭೀಮಸೇನ ಉದಾರ2 ಕೂರ್ಮ ಸೇವಕನಾದಧೀರ ಮಧ್ವಾಚಾರ್ಯ ದೇಶದೊಳು ಮೆರೆದೆ 3
--------------
ವಾದಿರಾಜ
ಮನ್ನಿಸೊ ಶ್ರೀ ವೆಂಕಟೇಶ ಮಂಜುಗುಣಿಪುರ ವಾಸ ಪ. ಸನ್ನುತ ಸದ್ಗುಣಪೂರ್ಣ ಸುಪ್ರಸನ್ನ ಹಯವದನ ಅ.ಪ. ದೇಶದೇಶದಿಂದ ಬಂದ ಜನರಿಗೆ ಮುದದಿಂದ ಲೇಸಿನ ವರನನೀವೆ ನಿರುತ ಕಾವೆ ಭಾಸುರ ಮೋಹನವೇಷ ಭಾನುಕೋಟಿಸುಪ್ರಕಾಶ ಶ್ರೀಸತಿಯ ಪ್ರಾಣೇಶ ಶ್ರೀ ಶ್ರೀನಿವಾಸ 1 ವಾರಿಧಿಯೊಳಗಾಡಿದೆ ಗಿರಿಯ ಬೆ[ನ್ನ] ಲೆತ್ತಿದೆ ಭಾರವಹ ಧರೆಯ ತಂದೆ ದೈತ್ಯನ ಕೊಂದೆ ದುರುಳ ಬಲಿಯನು ಮೆಟ್ಟಿ ದೈತ್ಯನೃಪರನೆ ಕುಟ್ಟಿ ತರುಣಿಗಭಯವನಿತ್ತೆ ತರುವ ಕಿತ್ತೆ 2 ಪುರದ ನಾರಿಯರನು ಪಂಥದಿ ಗೆಲಿದೆ ನೀನು ವರ ಕಲ್ಕಿಯಾಗಿ ತುರಗವನೇರಿ ಮೆರೆದೆ ವರದ ಪ್ರಸನ್ನ ಹಯವದನ ವೆಂಕಟರಾಯ ಪೊರೆಯೊ ಎಂದೆಂದೂ ಎನ್ನ ಪುರುಷರನ್ನ 3
--------------
ವಾದಿರಾಜ
ಮನ್ನಿಸ್ಯಾದವಾ ಮಮತೆಯಿಂದಾಲೆನ್ನ ಮಾಧವಾ ಪ. ನೀರಜಾಕ್ಷನೆ ಪಾಲಿಸು ಜಗದ್ಭರಿತವಾಸನೆ ಮೂರುದಿನದ ಬಾಳ ನೆಚ್ಚಿ ಘಾಸಿಯಾದೆನು ನಾರಾಯಣ ನಿಮ್ಮ ನೆನೆವೆನನುದಿನಾ 1 ಬಿಸಜನೈಯ್ಯನೆ ಶ್ರೀತುಲಸಿಮಾಲಾ ಭೂಷÀನೆ ಹಸಿವು ತೃಷೆಯು ನಿದ್ರೆಯಿಂದಾ ಹೊತ್ತುಗಾಣೆನೈಯ್ಯಾ ದೆಸೆಗೆದೆಸೆಗೆ ಇಂದ್ರಿಯಗಳು ಎಳೆದು ಕಾಡುತಾರೈಯ್ಯಾ ವಸುಧಿಗೊಡೆಯ ನಿಮ್ಮ ನೆನೆಯದೆ ಮುಗ್ಧಳಾದೆನು 2 ದುರಿತನಾಶನೆ ಪಾಲಿಸು ಜಗದ್ಭರಿತವಾಸನೆ ನಿರುತ ವ್ಯಾಧಿಯಿಂದ ಮಂದಳಾದೆನು ಸರ್ವೇಶನೆ ಮರುತನಂತೆ ಮನಸ್ಥಿರವ ಮಾಡಿಸೋ ಲಕ್ಷ್ಮೀಶ ಕರ್ತೃ ಹೆಳವನಕಟ್ಟೆ ವೆಂಕಟೇಶನೆ 3
--------------
ಹೆಳವನಕಟ್ಟೆ ಗಿರಿಯಮ್ಮ